ಒಟ್ಟು 118 ಕಡೆಗಳಲ್ಲಿ , 42 ದಾಸರು , 116 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಂದಿಸಿ ಬದುಕಿ ತಂದೆ ಮುದ್ದು ಮೋಹನ ಗುರುಗಳ ಪ ಇಂದಿರೆ ಅರಸ ಅಂದ ತಲ್ಪರಂಶರೆಂಬರಾ ಅ.ಪ. ತರಳತನಾರಭ್ಯ ಹರಿಯ | ಪರಮ ಅನುರಾಗದಿಂದ ಪರಿಸರಾನಂದ ತೀರ್ಥ | ಪರಮಮತ ವಿಚಾರದಲ್ಲಿ |ಅರೆಕ್ಷಣವು ಬಿಡದೆ ನಿರತರಾ | ಆತ್ಮ ಜ್ಞಾನದರ್ಶನಾನುಷ್ಠಾನ ಚರಿಸುತಾ | ಭಕ್ತಿಯೇ ಸುಪ್ರಚುರ ಪಂಥವನ್ನೆ ಮಾಡುತಾ | ಯುಕ್ತಿಯಿಂದಚರಿಪ ಸರ್ವವೂ ಶ್ರೀಹರಿಯ | ಪರವು ಎಂದ ಕಡಿದ ಬಂಧ 1 ವ್ಯಾಸ ಗ್ರಂಥ ಸದಾಭ್ಯಾಸಿ | ದಾಸಕೂಟವೆಂಬ ವರಜಲಾಶಯಕೆ ಪರಮ ಅರ್ಥ ತಾ | ರೇಶನ್ನುದಿಸಿ ಭೂಸುರ ಮನೋಲ್ಲಾಸ ಮಾಡಿ ಲೇಸಾಗಿ ಬೆಳಗುತ | ಜ್ಞಾನ ಕಿರಣಸೂಸ್ಯನೇಕಾಂಕಿತಾಗಳ | ಇತ್ತು ಕರ್ಮಹ್ರಾಸ ಮಾಳ್ವ ಬಗೆಯ ತಿಳುಹುತ | ಕವನದಿಂದಸಾಸಿರ ಪುಷ್ಪಮಾಲೆ ಹರಿಗಿತ್ತ ದಯವ ಪೊತ್ತ2 ಕ್ಲೇಶ ಸಂಶಯಾ | ಹರಿಸಿ ಪವನ ಮತದಿ ದೀಕ್ಷೆಯಾನಿರತಿಶಯದ ದಾಸದೀಕ್ಷೆಯ | ಇತ್ತು ಹೃದಯದಲ್ಲಿಹರಿಯ ಮೂರ್ತಿಯನ್ನೆ ನೋಡುವ | ಶಾಸ್ತ್ರ ಸಮ್ಮತಿಕೀರ್ತನೆಗಳ ನುಡಿಸಿದಾ | ಗುರು ಗೋವಿಂದ ವಿಠಲ ಪದಸರೋಜ ರಜವ ಶಿರದೊಳ್ ಧೃತರ | ಕೃಪಾಕರರ 3
--------------
ಗುರುಗೋವಿಂದವಿಠಲರು
ವರ್ಣಿಸಲಳವೆ ಕರುಣಾಳು ಗುರುವರ ನಿಮ್ಮ ವರ್ಣವರ್ಣದ ಚರಿತೆ ಗುಣಗಣಗಳ ಪ. ವರ್ಣಪ್ರತಿಪಾದ್ಯ ದೇವತೆಗಳಿಗೆ ಅಳವಲ್ಲ ಇನ್ನಿದನು ಪಾಮರರು ಅರಿಯುವರೆ ಜಗದಿ ಅ.ಪ. ಪ್ರತಿಪ್ರತಿ ಕಲ್ಪದಲಿ ಅತಿಶಯದ ತಪಚರಿಸಿ ಪತಿತಪಾವನ ಹರಿಯ ಮನ ಮೆಚ್ಚಿಸಿ ಕ್ಷಿತಿಯೊಳಗೆ ಅವತರಿಸಿ ದೇವಾಂಶರೆಂದೆನಿಸಿ ಪತಿತರನು ಪಾವನವಗೊಳಿಪ ಘನಮಹಿಮ 1 ಭಕ್ತರು ಕರೆದಲ್ಲಿ ಆಸಕ್ತಿಯಿಂ ಬಂದು ಯುಕ್ತಯುಕ್ತಗಳಿಂದ ತತ್ವಗಳನರುಹಿ ಮುಕ್ತಿಗೊಡೆಯನ ಮಾರ್ಗ ಮುಕ್ತಾರ್ಥ ಜನಕರುಹಿ ಮುಕ್ತಿಪಥ ಸವಿತೋರ್ವ ಶಕ್ತಿ ಮಹಿಮೆಗಳ 2 ಪಾದ ಪದ್ಮಸುತ ತಂದೆ ಮುದ್ದು ಮೋಹನದಾಸರಾಯರೆಂದೆನಿಸಿ ಮಧ್ವಮತಸಾರಗಳ ಹೀರಿ ಮಕರಂದವನು ಸಿದ್ಧಿಗೊಳಿಸಿ ಸುಜನಕೀವ ಶ್ರೀ ಗುರುವೆ3 ಕರಿಗಿರಿ ನರಹರಿಯ ಚರಣಕಮಲ ಧ್ಯಾನ ಅರಘಳಿಗೆ ಬಿಡದೆ ಮನಮಂದಿರದಿ ಸ್ಮರಿಪ ಕರುಣಜಲನಿಧಿಯೆ ನಿಮ್ಮ ಮೊರೆಹೊಕ್ಕವರ ಕಾಯ್ವ ಪರಮಪ್ರಿಯರೆಂತೆಂಬ ಬಿರುದುಳ್ಳ ಗುರುವೇ 4 ಕಮಲಾಂತ ಪ್ರೀತ ಶ್ರೀ ಕಮಲನಾಭನ ಪಾದ ಕಮಲ ಮನದಲಿ ಸ್ಮರಿಪ ಕಮನೀಯ ಗಾತ್ರ ಕಮಲಾಕ್ಷ ಗೋಪಾಲಕೃಷ್ಣವಿಠ್ಠಲನ ಪದ ಕಮಲ ಮನದಲಿ ತೋರಿ ಕೃಪೆಯಗೈಯ್ಯುವುದು 5
--------------
ಅಂಬಾಬಾಯಿ
ವೆಂಕಟಾಚಲ ನಿಲಯ ಪಿಡಿಯೆನ್ನ ಕೈಯ ಪಂಕಜಾಲಯ ಸುಪ್ರೀಯ ಪ ಅಹಿ ಕಂಕಣನುತ ಪದ- ಪಂಕಜ ತೋರೊ ಮೀನಾಂಕನ ಜನಕ ಅ.ಪ. ಪತಿತ ಪಾವನ ಮೋಹನ, ಪಾಲಿಸೊ ಎನ್ನ ಸತತ ಬಿಡದೆ ನೋಡೆನ್ನ ಹಿತರಹಿತರಾದವರನ್ನ ಪೊರೆದಳಿದೆ ಘನ್ನ ನತಜನರಿಗೆ ಪ್ರಸನ್ನ ದಿತಿಸುತ ತತಿಸಂಗತಿಯಲಿ ಮಥಿಸಲು ವನಧಿಯ ಅತಿ ಸಮ್ಮತಿಯಲಿ ಚತುರ ಧರಿಸಿ ಪರ್ವತ ಸುರತತಿಗ- ಮೃತ ವುಣಿಸಿದ ಶಾಶ್ವತಗತಿನಾಥ 1 ಸತಿಯ ಕಾಯಿದ ವಿನೋದ ಸಾಮಜವರದ ಚತುರದಶ ಲೋಕಾಧಿನಾಥ ಗತಿ ನೀನೆ ಮಹಾಪ್ರಸಾದ ಪರಮಮೋದ ಅತಿಶಯದಿ ಪೊಳೆವ ಪಾದ ಶತಪತ್ರವು ಹೃದ್ಗತವಾಗಲಿ ಉ- ನ್ನತ ಮಹಿಮನೆ ಕೀರುತಿವಂತನೆ ಅ- ಪ್ರತಿಭಾರತಮಲ್ಲ ಮೂರವತಾರಗೆ ಅತಿಪ್ರಿಯನೆನಿಪ ಮೂರತಿ ಚತುರದೇವ 2 ಸ್ಥಿತ ಮನ ಮಾಡೋ ಭವಭಂಗ ಸಂಗ ನಿಸ್ಸಂಗ ಚ್ಯುತಿ ದೂರ ಶೌರೀ ಕಾಳಿಂಗ- ದುರಿತ ಮಾತಂಗ-ಮರಿಗೆ ಸಿಂಗ ತುತಿಪೆ ಕರುಣಾಂತರಂಗ ಕ್ಷಿತಿಯೊಳಗಹಿ ಪರ್ವತನಿವಾಸನೆ ಖರೆಗೊಳಿಸುವ ದುರ್ಮತಿಯನು ತೊಲಗಿಸಿ ತ್ವತು ಪಾದದಲಿಡು ಮತಿಯಲ್ಲದೆ ತಿರು - ಪತಿ ವಿಜಯವಿಠ್ಠಲ ಇತರವನರಿಯೆ 3
--------------
ವಿಜಯದಾಸ
ವೆಂಕಟೇಶಾಯ ನಮೊ ವಿಜಯವಿಠ್ಠಲನೆ ನಮೊ | ಪಶುಪತಿ ಗುರು ನಮಿತ ಪಾದಾ | ಪಂಕಜವ ಪೊಗುಳವೆನು ಪರಿಪಾಲಿಸೆನ್ನ | ಕಿಂಕರನ ಕಿಂಕರರಿಗೆ ಕಿಂಕರನೆಂದೆನಿಸೊ ಪ ಕಾರ್ಯವಾಕಾರ್ಯವನು ತಿಳಿಯಲೊಲ್ಲದ ಕಾಮಾ | ತೂರ್ಯದಲಿ ಪಾಪಗಳೆ ರಚಿಸಿ | ಬೆಂಬಿಡದದೆ ಬಲು | ಧೈರ್ಯವಂತನು ನೀನಾಗಿ | ಧೈರ್ಯವಾಗಿದ್ದಾಗ ಜಡಜೀವ ಜಂತುಗಳು | ವೀರ್ಯದಲಿ ಪೊಕ್ಕು ದುಃಖಾತಿಶಯದಲಿ | ದುರ್ಯೋನಿ ಮುಖದಿಂದ ಜನನ ಜನಿತನಾದೆ | ಮರ್ಯಾದೆಗಳು ಇಲ್ಲದೆ ಹರಿಯೇ 1 ಕ್ಷಿತಿಯೊಳಗೆ ಬಂದು ಕಾಮ ಕ್ರೋಧ ಸಂಮೋಹ ಶ್ರುತಿ ವಿಭ್ರಮ ಬುಧ್ಧಿನಾಶ ರಾಗದ್ವೇಷ | ಪಥದಲಿ ವಿಷಯೇಂದ್ರಿಗಳು ಆತ್ಮವಶವಾಗಿ ಹಿತದ ಪ್ರಸಾದದಿಂದ | ಗತಿ ಅದರಿಂದ ಈ ಸಂಖ್ಯೆಯಿಂದಲಿ | ಹತವಾಗಿ ಪೋಗಿ ಮರಳೆ ದೇಹವನು | ತೆತ್ತು ಗತಿ ಪುಣ್ಯವಂತನೈದೆ 2 ಇಂದಿಗಾ ಇವನ ಮನೆ ತಂದೆ ತಾಯಿಯ ದಿವಸ | ಇಂದಿಗಾ ಇವನ ಮನೆ ಹತ್ತ ಹತ್ತನೆ ದಿವಸ | ಹವ್ಯ ಕವ್ಯ ಜಾವಳ | ಇಂದಿಗಾ ಮದುವೆ ಮುಂಜಿ | ಇಂದು ನಿಮ್ಮನೆ ಪ್ರಸ್ತವೆಂದು ಕೇಳುತಾ ಪೋಗಿ | ಬಂದವರನನ್ನುಸರಿಸೆ ಬಾಗಿಲಾ ಮುಂದೆ ಕುಳಿತು | ನೊಂದೆ | ಬಂದೆನೊ ಕೊನೆಯಲಿ 3 ಆರಾದರೂ ಬಂದು ಕಾಸು ಕೊಡದಿದ್ದರೆ | ದೂರುವೆನೊ ನೂರಾರು ಕೇರಿ ಕೇರಿಯ ತಿರಗಿ | ಸಾರೆ ಅವರಲ್ಲಿದ್ದ ಅವಗುಣಂಗಳ ಎತ್ತೆ | ಬೀರುವೆನು ಬೀದಿಯೊಳಗೆ | ವಾರಣದಿಂದಲಿ ಕರೆದು ಆವನಾದರು ಬಂದು | ಶಾರೆ ಭತ್ತವ ಕೊಡಲು ಕೊಂಡಾಡುವೆ ಕುಲ ಉ | ಪೋರ ಬುದ್ಧಿಗಳ ಬಿಡದೆ4 ಪರವಣಿ ಪುಣ್ಯಕಾಲಾ ದಿವಸ ಬಂದರೆ ತಿಳಿದು | ಪರಮಾರ್ಥವೆಂದರಿದು ಉತ್ತಮರ ಬಾ ಎಂದು | ಕರೆದು ತುತ್ತನ್ನ ಮೇಲೊಂದು ದಕ್ಷಿಣೆ ಕಾಸು | ಹರುಷದಿಂದಲಿ ಕೊಡದಲೆ ಪರರ ಹಳಿಯುತ್ತ ಏನೇನು | ಇಟ್ಟುಕೊಂಡು ಮನಿಗೆ ಬಂದು | ಪರರರಿಯದಂತೆ ಮಂಚದ ಕೆಳಗೆ ಹೂಳಿ ಈ | ಪರಿಯಿಂದ ದಿನ ಹಾಕಿದೆ5 ತೊತ್ತು ಓರ್ವೆಯಲ್ಲಿ ಈ ಹೊತ್ತು ಪೋಗಾಡಿಸಿದೆ | ಉತ್ತಮರ ಬಳಿಯಲಿ ಕುಳಿತು ಸತ್ಕಥೆಗೆ ಕಿವಿ ಇತ್ತು ಕೇಳದಲೆ ಕೆಲಸಾರೆ ಬೇಸರಿಕೆಯಲಿ | ಅತ್ತಲಿತ್ತಲು ವ್ಯರ್ಥ ಸುತ್ತಿ ಸುಮ್ಮನೆ ಸುದ್ದಿ ಬರಿಗಂಟುಸಟೆ | ಮಾತು ಎತ್ತುವನೊ ಅನ್ನಿಗರನ ನ | ಎಣಿಕೆ ಮಾಡದಲೆ | ಉನ್ಮತ್ತದಲಿ ಕೆಟ್ಟೆನಯ್ಯಾ6 ಪರಿಯಂತ | ವೇದೆನೆ ಬಟ್ಟೆನೊ ದುಷ್ಟ ಹಾದಿಯಲಿ ಸಿಗಬಿದ್ದು | ಈ ದುರಾಚಾರಗಳ ಗಣನೆ ಮಾಡದೆ ಇನ್ನು | ಕಾದುಕೊ ಕಮಲನಾಭಾ | ಹೋದಪರಾಧಗಳ ನೋಡದಲೆ ದಯದಿಂದ | ಆದರಿಸಿ ನಿನ್ನ ದಾಸರ ಸಂಗತಿಯನಿತ್ತು | ಪಾದವನು ಕಾಣಿಸಯ್ಯಾ7
--------------
ವಿಜಯದಾಸ
ವೇದನಿಧಿ ಹರಿ ವಿಠಲ | ಕಾದುಕೋ ಇವಳಾ ಪ ಮೋದತೀರ್ಥರ ಮತದಿ | ರಾಜಿಸುತ್ತಿಹಳಾ ಅ.ಪ. ವಾದೀಭ ಕೇಸರಿಯು | ವಾದಿರಾಜರು ಮತ್ತೆವೇದವೇದ್ಯರ ಕಂಡು | ಶುಭಸ್ವಪ್ನದೊಳಗೇಭೋದವಗದೆ ಸಾಗಿ | ವೇದನಿಧಿಗಳ ಹಸ್ತಸಾದರದಿ ಅಕ್ಷತೆಯು | ಪುಷ್ವ ಸ್ವೀಕಾರವು 1 ಯತಿವರೇಣ್ಯರ ಕರುಣಾ | ಸತತವಿರಲೀಕೇಗೇಪತಿಸುತರು ಹಿರಿಯಾ | ಹಿತಸೇವೆಯಲ್ಲೀಮತಿಯ ಕರುಣಿಸಿ ನಿನ್ನ | ವ್ಯಾಪ್ತತ್ವ ತಿಳಿಸೀಅತಿಶಯದ ಸೇವೆಯಿಂ | ಉದ್ದಿರಿಸೊ ಇವಳಾ 2 ಸುರರು ನರರೊಳಗೆಲ್ಲ | ತರತಮಾತ್ಮಕರೆಂಬ ವರಸುಜ್ಞಾನವ ಕೊಟ್ಟುಕಾಪಾಡೊ ಹರಿಯೇಗುರು ಭಕ್ತಿ ಹರಿಭಕ್ತಿ | ಪರಮ ಸಾದನವೆಂಬಅರಿವನೇ ನೀಡುವುದು | ಗರುಡ ಧ್ವಜಾತ್ಮ 3 ಧರ್ಮಮಾರ್ಗದಲಿರಿಸಿ | ಪೇರ್ಮೆಯಲಿ ಪೊರೆ ಇವಳಾಭರ್ಮಗರ್ಭನ ಪಿತನೆ | ನಿರ್ಮಾತೃ ಜಗಕೇನಿರ್ಮಮದ ಸಾದನೆಯ | ಮರ್ಮವನೆ ಅರುಹುತ್ತಕರ್ಮನಾಮಕ ಹರಿಯೆ | ಕಾಪಾಡೊ ಇವಳಾ 4 ಭವ ಪತಿ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶುಕಪಿತನ ಪದಕಂಜ ಪದುಪಾ | ಅಖಿಳ ಲೋಕದ ಗುರುವೆ ಸುಖ ತೀರ್ಥ ಮುನಿಪಾ ಪ ನಿತ್ಯ ನೈಮಿತ್ಯಗಳು | ಗತಿ ತಪ್ಪಿ ಪೋಗಿರಲು ಸರ್ವ ದೇವತೆಗಳು || ಪಥವ ಕಾಣದೆ ನೆರೆದು ಯೋಚಿಸಿ ತಮ್ಮೊಳು | ಅತಿಶಯದಿ ವೊದರಿ ಕೇಳು ಭವನದಾ | ಪತಿಯಾದ ಬೊಮ್ಮಗುಸರಿದರಂದು ಮೇಲು1 ತುತಿಸಲಾಕ್ಷಣ ಕೇಳಿ ಅಜನು ಶಿರದೂಗಿದನು | ಕೃತಭುಜರ ಸಹವಾಗಿ ಹರಿಪುರಕೆ ಸಾಗಿದನು | ನತನಾಗಿ ಶಿರಿಪತಿಯ ಪದಯುಗಕೆ ಬಾಗಿದನು | ಗತಿ ನೀನೆ ಎಂದು ಕೂಗಿದನು ಹರಿ ಕೇಳಿ | ಸತತ ನಿನ್ನನ್ನು ಕರೆದು ಪೇಳಿದವೇಗಿದನು 2 ಭೂಸುರನ ಗರ್ಭದಲಿ ಬಂದೆ ನೀನವತರಿಸಿ | ವಾಸುದೇವನೆಂಬ ನಾಮದಿಂದಲಿ ಜನಿಸೀ | ಭಾಸುರ ಕೀರ್ತಿಯಲಿ ಮೆರೆÀದೆ ಬಲು ಪಸರಿಸಿ | ದೋಷ ವರ್ಜಿತದ ಗುಣರಾಸಿ ಎನಿಸುವಾ | ಲೇಸು ಆರೈದೆರಡು ಲಕ್ಷಣ ಸಂನ್ಯಾಸಿ 3 ಪುಟ್ಟಿ ಇಳಿಯೊಳಗೆ ಸಂಕರನೆಂಬ ದುರವಾದಿ | ಜಟ್ಟಿಗನಾಗಿ ಸೋsಹಂ ಯೆಂಬ ಅತಿ ಕ್ರೋಧಿ | ಅಟ್ಟಹಾಸದಲಿ ತಿರುಗಿದನು ಬೀದಿ ಬೀದಿ | ಘಟ್ಟವಚನದಿಂದ ಕಾದಿ ಅವನ ಮುರಿ | ದೊಟ್ಟಿದೇ ವಪ್ಪದಲಿ ಮಾಯಿ ಮತಭೇದಿ 4 ಅಮೃತ | ಗ್ರಂಥ ಉತ್ತಮರಿಗೆರೆದು ಸುಖ ಬಡಿಸಿದೆ ಅತಿಶ್ಯಾಂತ | ಅತ್ಯಂತ ಮಹಿಮ ಬಲವಂತ ನಿಮಗೆ ನಾ | ಎತ್ತಿ ಕರಗಳ ಮುಗಿವೆ ತೋರು ನಿಜ ಪಂಥ 5 ಹರಿಯೆ ಪರನೆಂದು ಬೊಬ್ಬರಿದು ಎಳಹರಿ | ಮರಿಯೆ ಬಿರಿದು ಡಂಗುರವ ಹೊಯಿಸಿ | ಚರಿಸಿದ ಗುರು ದೊರೆಯೇ | ಸರಿಗಾಣೆ ನಿನಗೆಲ್ಲಿ ಮತ್ತೊಬ್ಬರನ ಕರಿಯೇ | ವರ ಬದರಿಲಿಪ್ಪ ವೈರಾಗ್ಯದ ಸಿರಿಯೇ 6 ಮುನಿಗಳೊಳಗೆ ರನ್ನ ಮುನಿದವರಿಗಿರಬೆನ್ನ | ಘನ ವಿದ್ಯಸಂಪನ್ನ ಗುಣದಲ್ಲಿ ಅಚ್ಛಿನ್ನ | ನೆನೆದವರ ಪ್ರಸನ್ನ ತನುವೆ ತಪುತ ಚಿನ್ನ | ಮಿನಗುವಂತೆಯಿಪ್ಪ ಪಾವನ್ನ ಮಧ್ವಮುನಿ | ಚಿನುಮಯ ವಿಜಯವಿಠ್ಠಲನ್ನ ಪ್ರಸನ್ನಾ7
--------------
ವಿಜಯದಾಸ
ಶುಭ ಮಂಜುಳಗಾತ್ರ್ರೆಕುಂಜರದಂತೆ ಗಮನೆ ರಂಜಿತಾಂಗಿ ನಿರಂಜನಾಂಗಿ ಪ ಧರೆಯ ಮ್ಯಾಲೆ ಹಿರಿಯಳು ನಾ-ನಿರಲು ಲಜ್ಜೆ ತೊರೆದು ನೀನುಸರಸವಾಡೋದೆ ಮುರಹರನಕರೆದು ಭಾಮಿನಿ ಸುಗುಣೆ ಕಾಮಿನಿ 1 ಪತಿಯ ಪ್ರೀತಿ ಎನ್ನ ಮ್ಯಾಲೆಅತಿಶಯದಿ ಇರಲು ಜ್ಯೇಷ್ಠಸತಿಯಳೇನೇ ನೀನು ನೋಡುಮತಿಯ ರುಕ್ಮಿಣಿ ಸುಪದ್ಮಗಂಧಿನಿ2 ಒಂದು ಕಾಲದಲ್ಲಿ ದಾಸಿ-ಯಿಂದ ಪತಿಯು ಸರಸವಾಡಲುಬಂದಳೇನೇ ಅರಸಿ ಸಮ-ಳೆಂದು ಭಾಮಿನಿ ಸುಗುಣೆ ಕಾಮಿನಿ 3 ದಾಸಿ ಸಮಳು ನಾನು ಅಲ್ಲ ದೋಷ ಮಾತನಾಡಬೇಡಶ್ರೀಶನ ದಯರಾಶಿ ಇರಲುದಾಸಿಯೆ ರುಗ್ಮಿಣಿ ಸುಪದ್ಮಗಂಧಿನಿ 4 ಸಾರೆ ಕೃತ್ಯವಾರೆ ಹೂಡಿದ್ವಾರಾವತಿಯಿಂದ ಎನ್ನಸಾರೆ ಬಂದ ಪ್ರೀತಿಯು ಅ-ಪಾರೆ ಭಾಮಿನಿ ಸುಗುಣೆ ಕಾಮಿನಿ5 ಕಡಲಶಾಯಿ ತಡೆದರಿನ್ನುದಿಡುಗು ದೇಹ ಬಿಡುವೆನೆಂಬೊನುಡಿಯ ಕೇಳಿ ಪಿಡಿದನೆಬಿಡದೆ ರುಗ್ಮಿಣಿ ಸುಪದ್ಮಗಂಧಿನಿ 6 ಮಂದರಧರನು ಪ್ರೀತಿ-ಯಿಂದ ನಿನ್ನ ಪಡೆದನೇನೆಒಂದು ಮಣಿಯ ಕಾರಣದಿಬಂದೆ ಭಾಮಿನಿ ಸುಗುಣೆ ಕಾಮಿನಿ7 ಸುಮ್ಮನೆ ಬಂದವಳಿಗೆಬ್ರಹ್ಮ-ಲಗ್ನದಿ ಬಂದೆನಗೆಸಾಮ್ಯವೇನೆ ಯಾಕೆ ನಿನಗೆಹೆಮ್ಮೆ ರುಗ್ಮಿಣಿ ಸುಪದ್ಮಗಂಧಿನಿ. 8 ಮಾನಾದಿ ಭಕ್ತಿಯು ಕನ್ಯಾ-ದಾನವು ಲೋಕದೊಳಗುಂಟುಏನು ನಿನ್ನ ತಾತ ಕೊಟ್ಟದೀನ ಭಾಮಿನಿ ಸುಗುಣೆ ಕಾಮಿನಿ 9 ಎನ್ನ ಹಂಗದೆಂದುಪ್ರಸನ್ನ ಕೇಳಿ ಶತಧನ್ವನಬೆನ್ನಟ್ಟಿ ಕೊಂದನೇ ನೀ-ಚೆನ್ನ ರುಗ್ಮಿಣಿ ಸುಪದ್ಮ ಗಂಧಿನಿ 10 ವೀರ ಅರಸರ ಸ್ವಭಾವಚೋರರ ಕೊಲ್ಲಬೇಕೆಂಬೋಸಾರ ಪ್ರೀತಿಯದರಿಂದತೋರಿ ಭಾಮಿನಿ ಸುಗುಣೆ ಕಾಮಿನಿ11 ಇಂದ್ರಾದಿ ದೇವತೆಗಳೊಳುಸಾಂದ್ರಯುದ್ಧವನ್ನೆ ಮಾಡಿವೀಂದ್ರ ಎನಗೆ ಪಾರಿಜಾತತಂದ ರುಗ್ಮಿಣಿ ಸುಪದ್ಮಗಂಧಿನಿ12 ಕ್ಲೇಶ ನೋಡಿ ತಂದತರುವ ಭಾಮಿನಿ ಸುಗುಣೆ ಕಾಮಿನಿ13 ನಿಜಳೆಂದು ರಂಗನು ಎನ್ನವಿಜಯಯಾತ್ರೆಯಲ್ಲಿ ತನ್ನಭುಜಗಳಿಂದಾಲಂಗಿಸಿದಸುಜನೆ ರುಗ್ಮಿಣಿ ಸುಪದ್ಮಗಂಧಿನಿ 14 ಅರಸರ ಸ್ವಭಾವ ತಮ್ಮಅರಸೇರ ಮನೆಯೊಳಗಿಟ್ಟುಸರಸ ದಾಸೇರಿಂದ್ಹೋಗೋದುಸ್ಮರಿಸೆ ಭಾಮಿನಿ ಸುಗುಣೆ ಕಾಮಿನಿ 15 ಸಾರವಚನ ಕೇಳಿ ಭಾಮೆಮೋರೆ ಕೆಳಗೆ ಮಾಡುತಿರಲುನಾರಿ ರುಕ್ಮಿಣಿ ಭಾಮೆಯರನ್ನುವೀರ ಕರೆದನು ತಾ ಸೇರಿ ಮೆರೆದನು16 ಮಂಗಳಾಂಗ ಮಹಿಮ ಕೇಶವಾ-ಲಿಂಗಿಸಿದ ಭೈಷ್ಮಿಯನ್ನುತುಂಗಗುಣ ಗೋಪೀರಮಣರಂಗವಿಠಲನು ಅನಂಗಜನಕನು 17
--------------
ಶ್ರೀಪಾದರಾಜರು
ಶೇಷ ಪರ್ಯಂಕ ಶಯನ ವಿಠಲ ಪೊರೆ ಇವಳ ಪ ವಾಸುದೇವನೆ ನಿನ್ನ | ದಾಸಿ ಎಂದೆನಿಸಿ ಭವಪಾಶವನೆ ಕಳೆಯೊ ಸುವಿ | ಶೇಷ ಹರಿಯೇ ಅ.ಪ. ಪತಿಸುತರು ಹಿತರಲ್ಲಿ | ವಿತತವಾಗಿರುವಂಥಅತಿಶಯದ ತವರೂಪ | ಸತತ ಚಿಂತಸುವಾ |ಮತಿಯನೇ ಕರುಣಿಸುತ | ಕೃತ ಕಾರ್ಯಳೆಂದೆನಿಸೊಕ್ಷಿತಿರಮಣ ಭಿನ್ನವಿಪೆ | ಪತಿಕರಿಸೊ ಇದನಾ 1 ಬುದ್ಧಿಯಲಿ ಸನ್ನಿಹಿತ | ವೃದ್ಧಿಗೈಸಿವಳಲ್ಲಿಮಧ್ವಮತ ಸಿದ್ಧಾಂತ | ಪದ್ಧತಿಗಳಾಅಧ್ವರೇಡ್ಯನೆ ಅನಿ | ರುದ್ಧ ಮೂರುತಿ ಹರಿಯೇಕೃದ್ಧಖಳ ಸಂಹಾರಿ | ಪದ್ಮನಾಭಾ 2 ಕೀಚಕಾರಿ ಪ್ರಿಯನೆ | ಮೋಚಕೇಚ್ಛೆಯ ಮಾಡಿಪ್ರಾಚೀನ ಕರ್ಮದಿಂ | ಮೋಚನವ ಗೈಸೋ |ಯಾಚಿಸುವೆನೋ ಸವ್ಯ | ಸಾಚಿಸಖ ನೀನೆಂದುಈಕ್ಷಿಪುದು ಕರುಣ ಕಟಾಕ್ಷದಲಿ ಹರಿಯೇ 3 ಸಾರ ಸುಖಸಾಂದ್ರಾ 4 ಕಾವ ಕರುಣಿಗಳರಸ | ಭಾಮಕರ ಪರಿಪಾಲಾಓವಿತವ ಸಂಸ್ಮರಣೆ | ಸಾರ್ವಕಾಲಿದಲೀಈವುದಿವಳಿಗೆ ಎಂದು | ಭಾವದಲಿ ಭಿನ್ನವಿಪೆಗೋವಿದಾಂ ಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶೌನಕಾದಿ ಮುನಿಗಳಿಗೆ ಸಾನುರಾಗದಲಿ ಪೇಳಿದರು 1 ಕೈಲಾಸಶಿಖರ ಮೆರೆವುದು ಮೇಲಾದ ರತ್ನಕಾಂತಿಗಳಿಂ2 ಜಂಬುಕೇತಕಿ ಪನಸ ಪುನ್ನಾಗ ಸರ್ವಾತಿಶಯದಲಿ ತೋರುವದು 3 ಸಿದ್ಧಿದಾಯಕ ವೆಂದಿಲ್ಲಿ ಪದಧ್ಯಾನದಿ ಕುಳಿತಿಹರು 4 ದಿವಿಜ ಅವನಿಧರಾಗ್ರಣಿಯಾಗಿ ಭುವನೋದರತ್ವದಿ ಭುವನಜನಾಭ ಶ್ರೀಧವನಂತೆ ಗಿರಿಯು ಮೆರೆಯುವುದು5 ಪಾರ್ವತಿಯೊಡನೆ ಸತಿ ನಮಿಸಿ ನುಡಿದಳು 6 ನುಡಿಯ ಲಾಕ್ಷಣದಿ ನಾಕರುಣಿಸುವೆ ಕೇಳೆಂದ7 ವರಮಹಾಲಕ್ಷ್ಮಿಯ ವೃತವು ದೊರೆವುದು ಸಕಲಸೌಭಾಗ್ಯ 8 ಶ್ರಾವಣ ಪೂರ್ಣ ಮಾಸಿಯ ದಿನದಿ ಪೂಜಿಪದು ವಿಶ್ವಾಸದಿಂದಾರಾಧಿಸುತಲಿ 9 ಪಕ್ವಾನ್ನ ಲೇಹ್ಯಾದಿ ನೈವೇದ್ಯ ತತ್ತನ್ನಿಯಾಮಕರ ಚಿಂತಿಪುದು 10 ಕೃಪಾಪಯೋನಿಧೆಯ ಪೂಜಿಪುದು ಬಿಂಬಾಪರೋಕ್ಷಿಗಳು ಪೂಜಿಪರು 11 ಕಾಮಿತ ಪಡೆದವರ್ಯಾರು ಮಹಾಮಹಿಮೆಯನು ಚನ್ನಾಗಿ12 ಮಡದಿ ತಾನಿರಲು ಕರೆಯುವರೆಲ್ಲಾರು ಪುರದಿ 13 ವನಜನಾಭನ ಶೇವೆಯೆಂದು ಗುಣದಿ ಭೂಷಿತಳು 14 ಬಂದಳು ವರಮಹಾಲಕ್ಷ್ಮಿ ಪರಮ ಸಂಭ್ರಮದಿ 15 ನಿರ್ಮಿಸುವನು ಜಗವೆಲ್ಲ ನೀ ಕರುಣಿಸು ಮಾತೆ 16 ಶ್ರಾವಣ ಹರುಷದಿಂದೆನ್ನಯ ವೃತವ ವರಗಳನಿತ್ತಳು ದಯದಿ 17 ಸಂತೋಷದಲಿ ಪೇಳಲವರು ಚಿಂತಿತ ಫಲವೀವುದೆಂದು 18 ಸಿಂಗರಿಸಿದಳಾದಿನದಿ ವಿಪ್ರಾಂಗನೆಯರನು ಕರೆದಳು 19 ಶಿರಿದೇವಿ ಪೂಜಾಸಾಧನವ ನೆರೆದರಾ ದ್ವಿಜನಮಂದಿರದಿ 20 ಕುಂಭಗಳಿಟ್ಟಘ್ರ್ಯಾದಿಗಳಿಂ ಸುರರ ಸಮ್ಮುಖದಿ 21 ಇಂದಿರ ದೇವಿಗಾರುತಿಯ ಬಂಧÀ£ವÀನÉ ಮಾಡುತಿಹರು 22 ಪೂಜಿಸುತಿರಲಾಗೃಹವು ಸೋಜಿಗವಾಯ್ತು ನೋಳ್ಪರಿಗೆ 23 ಕೊರಳೊಳುನವರತ್ನಹಾರ ಸಿರಿದೇವಿ ಕರುಣವಿದೆಂದು 24 ಇತ್ತರು ಬಾಗಿಣಗಳನು ಪೋದರು ತಮ್ಮ ಮನೆಗೆ 25 ಪುಣ್ಯದಿಂದೆಲ್ಲರು ನಾವೆಂ ಧನಧಾನ್ಯ ಸಂಪದಾಗಮನ 26 ಪಾಲಿಸುವಳು ಸಿರಿಯೆಂದು ಶಿವನು ಹೀಗೆಂದು ||27| ಕಾಯಜ ಜನನಿಯ ಕಾಯುವದೆಂದು ನೀ ತಿಳಿಯೆ 28 ನಿರ್ಮಲ ಭಕ್ತಿಜ್ಞಾನ ವೈರಾಗ್ಯ ಇಳೆಯೊಳು ಕಾರ್ಪರ ನಿಲಯ ಶ್ರೀನರಹರಿ ಒಲಿವನು ನಿರುತ ಪಠಿಸಲು30
--------------
ಕಾರ್ಪರ ನರಹರಿದಾಸರು
ಶ್ರೀನಿವಾಸನನ್ನು ಸೇರಿ | ನೀನು ಮುಕ್ತನಾಗಿರುವರೆ ಅ.ಪ ಮಾತೆೃ ಮಾತಾ ಪಿತೃಗಳುವಿ ತ್ಕರ್ತನನ್ನು ಪೂಜಿಸುವರೆ1 ಅತಿಶಯದೊಳು ಪಾಡಿ ಪರ ಗತಿಯ ಪಡೆದು ಸುಖದೊಳಿರಲು 2 ಚಿಂತಿತಾರ್ಥ ಪಡೆಯಲೀಗ 3 ಹೃದಯದೊಳಗು ಹೊರಗು ನೋಡಿ 4 ಗುರುವೆ ನಿಜದ ಶ್ರೀನಿವಾಸ 5
--------------
ಸದಾನಂದರು
ಶ್ರೀಪಾದರಾಜ ಪಾಲಿಸೊ ಕೈಪಿಡಿದೀ ಭವದ ಕೂಪಾರದಿಂದ ದಾಟಿಸೋ ಪ ಕಾಪಾಡೆಲೊ ಕರುಣಾ ಪಯೋನಿಧೆ ಭೂಪಚಂದ್ರ ಗಿರಿ ಪಾಪಗಳನ್ನು ಕಳದಿರುವೆ ಮದ್ಗುರುವೆ ಕರಮುಗಿವೆ ಭಜಕರ ಸುರತರುವೇ ಅ.ಪ ಮೇದಿನಿ ಪಾಲಪೂಜಿತ ವಿದ್ವಜ್ಜನವಿನುತ ಮೇದಿನಿ ಜಾತ ಪ್ರದಾತ ಮೋದಮುನಿಯ ಸುಮತೋದಧಿಚಂದಿರ ವಾದಿ ಮದಗಜ ಮೃಗಾಧಿಪ ಕವಿಜನಗೇಯ ಶುಭ ಕಾಯ ಧೃವರಾಯ ಆಶ್ವರ್ಯ ಚರ್ಯ1 ವಿಪ್ರಹತ್ಯಾದಿ ದೋಷಗಳನ್ನು ಕಳೆಯುವ ಮಹಿಮೆಯನು ಕ್ಷಿಪ್ರ ಶಂಖೋದಕ ಸಂಪ್ರೋಕ್ಷಿಸಿ ಬಲು ಕಪ್ಪುವಸನವನು ಸುಪ್ರಕಾಶಿಸಿದ ಮಹಿಮಾ ಶುಭನಾಮ ಜಿತಕಾಮಾ ಯತೆ ಸಾರ್ವಭೌಮ 2 ವಿಭುದೇಂದ್ರ ಸಹಿತ ಛಾತ್ರಾ ನಿಮ್ಮನ್ನು ಕೇಳಲು ಸೂ- ಸರ್ವಾತಿಶಯದಿಸ- ಮುಖಗೀತಾನಾಮದಿ ಪ್ರಖ್ಯಾತ 3 ಮೃಷ್ಟಾನ್ನ ಕೊಡುವೊ ಮಹಿಮೆಯ ಕೃಷ್ಣಗರ್ಪಿಸಿದ ಪಷ್ಠಿಶಾಕಯುತ ಮೃಷ್ಟಾನ್ನ ದ್ವಿಜ ತುಷ್ಟಿಗೈಸುವಿರಿ ನಿರುತ ಗುಣಭರಿತ ಪ್ರಖ್ಯಾತ ಪಾವನ ತರ ಚರಿತ 4 ಜಗದೊಳು ಸನ್ಮಾನ್ಯ ಚರಿಸಿ ಸತ್ಕರ್ಮವ ಘಳಿಸುವ ಪುಣ್ಯ ಶರಣುಜನಕೆ ಸುರತರುವೆಂದೆನಿಸುತ ಧರೆಯೊಳು ಮೆರೆಯುವ ಶಿರಿಕಾರ್ಪರ ಶುಭನಿಲಯ ಸುರಗೇಯ ಗುರುರಾಯ ನರಹರಿಗತಿ ಪ್ರೀಯ 5
--------------
ಕಾರ್ಪರ ನರಹರಿದಾಸರು
ಶ್ರೀರಮೆಯನಾಥ ನಿನ್ನಂಘ್ರಿಗಳ ಸೇರಿದನ ದೂರ ಮಾಡಿರುವುದುಚಿತವೆ ಪ ವಾರಿಜಾಂಬಕ ಎನ್ನ ಕ್ರೂರಚಿಂತೆಯ ಹರಿಸಿ ಬೇಡಿದುಪ್ಪವನೀವುದೂ ಅ.ಪ ವ್ರತಶೀಲನಾಗಿ ಭೂಪತಿ ಅಂಬರೀಷನ ಅತಿಶಯದಿ ಪೊಗಳುತಿರಲೂ ಯತಿರಾಜ ದೂರ್ವಾಸನಡೆತಂದು ದ್ವಾದಶಿಯ ತಿಥಿಯೊಳನ್ನವ ಬೇಡಲು ಪೃಥಿವೀಶ ಕೊಟ್ಟನೆನೆ ದ್ವಾದಶಿಯ ಪಾರಣೆಯ ಮಿತಿ ಮೀರಿ ಪೋಗುತಿರಲೂ ಕಥನದಿಂ ಶ್ರೀತುಳಸಿಯನು ಭುಂಜಿಸಲು ಕೋಪಿಸಲಾಗ ನತಜನಾಶ್ರಯ ನೀನು ಪೊರೆದೆ ಅಹುದು 1 ಮುಂದನರಿಯದೆ ಯಮನಂದನಂ ದ್ಯೂತಮಂ ಅಂದು ಕೌರವನೊಳಾಡೆ ಮಂದಮತಿಯಾಗಿ ಸೋಲಲು ನಾರಿಯನು ಆ ಸಭೆಗೆ ತಂದು ಮಾನಭಂಗವನೆ ಮಾಡೆ ಇಂದುಮುಖಿಯುಟ್ಟ ಸೀರೆ ಅಕ್ಷಯ ವೆಂದು ನಂದಕುಮಾರ ಸಲಹೇ 2 ಎನ್ನಳವೆ ನಿನ್ನಯ ಮಹಿಮೆಯನು ಪೊಗಳುವಡೆ ಯ ಪರ್ಣವಾಹನರೊಡನೇ ಮನ್ಮಥನ ಶತಕೋಟಿ ಲಾವಣ್ಯ ಯದುಕುಲಾಮ ರಾರ್ಣವಕೆ ಚಂದ್ರ ನೀನೇ ಸನ್ನುತನಾದೆ ಸುರಪುರದ ಲಕ್ಷ್ಮೀವರನೆ ಮನ್ನಿಪುದು ಶರಣಪ್ರಿಯನೆ ಭಿನ್ನವಿಲ್ಲದೆ ನೀಂ ದಾಸಾನುದಾಸರನು ಪ್ರ ಇಂದು ಬಂದು3
--------------
ಕವಿ ಲಕ್ಷ್ಮೀಶ
ಷಟ್ಪದಿ ಭೃಂಗ ದಿವಿಜ ಲಲಾಮ ಶುಭಗುಣ ಸಾಂದ್ರ ಗುರುವರನೇಸೇರಿಹೆನು ತವಶಿಷ್ಯ ಕೋಟಿಲಿ ಬೀರಿ ಕರುಣಾ ದೃಷ್ಟಿ ಶ್ರುತಿ ಭಂಡಾರ ಸೂರೆಯ ಮಾಡ್ವ ಹಾ ಹಾ ಕಾರದಿಂ ತಪಿಪ 1 ಬಾಲ ನೆನ್ನಯ ಶಿರವ ನಿಮ್ಮಯ ಶೀಲಕರದಿಂ ಭೂಷಿಸುತ ಕವಿತಾ ಲತಾಂಗಿಯ ತಾಂಡವಾಡಿಸಿ ಚಂದ್ರಮೌಳಿನುತಕಾಳಿಮನಕುಮುದೇಂದು ಜಗಸಂ ಚಾಲಕ ಪ್ರಭು ಮುಖ್ಯ ಪ್ರಾಣಗುಪಾಲಿಸುತ ಸತ್ತಾದಿ ಸಕಲವ ಪೊರೆದು ಮೆರವಂಥಾ 2 ಪತಿ ಮಾ ವಂದ್ಯ ನಿರುಪಮ ನಾರಸಿಂಹನುಅಂದು ನಿಮ್ಮನು ಕಾಯ್ದ ತೆರಪೊರೆ ಶ್ರೀ ಸುಧೀಂದ್ರ ಸುತ 3 ಏನಿದೇನಿದು ನಿಮ್ಮ ಮಹಿಮೆಯಮಾನವರಿಯಲು ಸುರರಿಗಾಗದುಮಾನವರ ಪಾಡೇನು ಶಿರತೂ ಗುತಿಹ ಫಣಿರಾಜಮಾನ್ಯ ಸುರ ಋಷಿ ಕರುಣ ಬಲವೋಮೇಣ್ಪರಿಸರನ ಕೃಪೆಯೊ ಕಾಣೆನುದಾನಿ ನರಹರಿ ವರದ ಫಲವೋ ಮೊತ್ತವೇ ಯೆಂಬೆ 4 ಜಂಭಾರಿ ಮೇಣಾಬಾಲ ಸುಬ್ರಹ್ಮಣ್ಯನೋ ಶಂಕಿಪುದು ಸುರನೀಕಾ 5ಸೂಕ್ಷ್ಮಮತಿಗಳೆ ಪೇಳಿ ಸರ್ವಾಧ್ಯಕ್ಷನವತಾರವನು ಯಾವ ಸುಲಕ್ಷಣ ಭಕುತಗೇನೆ ಮಾಡಿಹ ನಮ್ಮಗುರುವ ಬಿಡೆಪಕ್ಷ ವಹಿಸದೆ ಪೇಳಿ ಯಾವನು ಲಕ್ಷ್ಯ ಮಾಡದೆ ಕಷ್ಟ ಮಾತೆಯಕುಷಿಯಂ ಬಂದಿಹನು ಮುಮ್ಮುಡಿ ನಮ್ಮ ನುದ್ಧರಿಸೆ 6 ವ್ಯಾಜ ವಿಲ್ಲದಲೆದೈತ್ಯ ಪಿತತಾನಿತ್ತ ಬಾಧೆಗೆ ನಾಥ ನರಹರಿ ಬಂದುದಚ್ಚರಿಯಂತೆ ಭಾವಿಸೆ ಭಕ್ತವತ್ಸಲ ಬಿರುದು ಪೊಳ್ಳೆಬಿಡೆ 7 ಸತಿ ಸಂಹಾರ ಕಾಟವು ಮತ್ತೆ ಯತಿ ಯಂತಾಗೆ ಹಾಗೆಯೆನಿಂತಿರಲು ವೃಂದಾವನದಿ ಕಾಡುವರು ಶಿಷ್ಯಗಣಾ 8 ಸತಿಯ ಬೇಕೆಂದೊಬ್ಬ ನೀಡೈ ಸುತನ ದಂಪತಿ ವ್ಯಾಜ್ಯ ಹರಿಸಿರಿಜತನ ಮಾಡಿಸಿ ವೇತನವ ಹರಿಸಿನ್ನು ವ್ಯಾಧಿಗಳಪಥನ ವಾಯಿತು ಕೂಳುಕೊಡಿಸೈ ಸತತ ವೀತೆರ ಬಯಕೆ ವ್ರಾತದಿಸುತಪ ನೀನೆಂತಾಗೆ ಕುಪಿತನು ಬಲ್ಲ ಬತ ಹರಿಯೇ 9 ತಿರುಗುತಲಿಹರು ತಮ್ಮಯ ಹೀನ ನಡತೆಗಳಿಂದ ಸ್ತ್ರೀಯರು ವಿಧಿಯ ನಡೆಸುವರು ಚೆನ್ನ ಔಷಧ ವಿಹುದು ನಿನ್ನಲಿ ಹಣ್ಣಿನಾಶಯ ತೋರಿನೀ ಭವ ಹುಣ್ಣುವಳಿಯುವೆ ಎಷ್ಟು ಕರುಣಿಯೊ ಗುರುವೆ ಶರಣೆಂಬೆ 1 ಕಳತ್ರ ವೆಲ್ಲವನೆಂತೆನಲು ಬಲು ಹುಚ್ಚುತನವ ರ್ಣಿಸಲು ಮಿಕ್ಕುದುದಾಉಕ್ತಿ ಭಜಿಸುವಗೇನು ಪೇಳ್ವುದು ಮುಕ್ತಿಕರಗತ ವೇಕೆ ಸಂಶಯ ಶಾಸ್ತ್ರ ಭಾಗ್ಯವೆ ಸಾಕು ಕರುಣಿಸಿ ನಮಿಪೆ ಭೂಯಿಷ್ಠ 11 ಸೂತ್ರ ಖರೆ 12 ಪ್ರೀತಿತಮ ಇವನಂಥ ದಾತನ ಗ್ರಂಧ ನಿಚಯವ ಭೋಜ್ಯ ಕಿಡುತಲಿ ಸುತ್ತಿಗೆದ್ದಲು ಹುಳಕೆ ಮೆಚ್ಚುವ ನೇನು ಪಯ ಸುರಿಯೆಪುತ್ರರಿಗೆ ಮದ್ದಿಕ್ಕಿ ಪಿತನಿಗೆ ಮತ್ತೆ ಭೋಜನ ವಿಕ್ಕೆ ಬಹುಸುಪ್ರೀತಿ ಯಾದಂತಾಯ್ತು ಹರಿಹರೀ ಪಾಹಿಮಾಂ ಪಾಹೀ 13 ಶುಂಠನಾದರು ಪಠಿಸೆ ನಮ್ಮಯ ಕಂಠದಿಂ ಬಂದಂಧ ನುಡಿವೈಕುಂಠ ರಮಣನ ಕಾಂಬ ಪಂಡಿತ ನೆನೆಸಿ ಧರೆಯೊಳಗೆಕಂಟಕವ ನಿರಿದು ಭವದಲಿ ವಿಷ ಕಂಠ ಗಾತಪ್ರಿಯ ತನ್ನಯಭಂಟನನು ಮಾಡಿಕೊಳಲೆಂತೆಂದೆನ್ನ ಹರಿಸಿ ಪೊರೆ 14 ಏಳಿರೇಳಿರಿ ಸಂತ ಮಿತ್ರರೆ ಕೇಳಿ ಕೇಳಿದುದೆಲ್ಲ ನೀಡುವಪಾಲಕನು ಶ್ರೀ ರಾಘವೇಂದ್ರನು ಇಲ್ಲ ಮೆರೆಯುತಿರೆಕೇಳಿ ಭವಸುಖ ಮತ್ತೆ ಭವದಲಿ ಬೀಳುವರೆ ವಿಜ್ಞಾನ ಯಾಚಿಸಿಕೊಲ್ಲಿರೀ ಸಂಸಾರ ಬೀಜವ ಕಲಿಯು ಎಷ್ಠರವ15ನಾಲ್ಕುಶತ ಐವತ್ತು ವರುಷವೆ ವೋಲಗವ ಕೈಕೊಂಬ ಮುಂದಿವಅಲಸವ ಮಾಡಿದೆಡೆ ಸುರತರು ಬಿಟ್ಟತೆರವೇನೆಜಾಲ ಮಾತುಗಳೇಕೆ ಮುಂದಿನ ಶೀಲ ಮಾರ್ಗವ ನೋಡ್ವ ಜಾಣನುಪಾಲಿಸೈಧೋರೆ ಕೆಟ್ಟೆ ಕೆಟ್ಟೆನು ಎನ್ನ ಕೈ ಕೊಡುವ 16 ಏಕೆ ಭಯ ನಮಗಿನ್ನು ನರಕದ ಏಕೆ ಕಳವಳ ಅಶನ ವಸನÀಕೆಏಕೆ ಸಂಶಯ ಜ್ಞಾನ ವಿಶಯದಿ ಪಿಡಿಯೆ ಗುರುವರನೆನೂಕಿ ವಿಷಯದಿ ಬಯಕೆ ಬೇಗನೆ ಬೇಕು ಎನ್ನುತ ಜ್ಞಾನ ನಿಧಿಗಳಹಾಕಿ ದಂಡವ ಪಾಹಿ ಗುರುವರ ಪಾಹಿ ಯೆಂತೆನ್ನ 17 ಭುಕ್ತಿ ಹಾಗೆ ವಿರಕ್ತ ಭಕ್ತಿಯು ಭಕ್ತ ವೃಂದಕೆ ಭ್ರಷ್ಟ ಬಿಟ್ಟವನು 18 ಜಯ ಜಯವು ಗುರುಸಾರ್ವಭೌಮಗೆಜಯ ಜಯವು ಮಂತ್ರಾಲಯಸ್ಥಗೆಜಯ ಜಯವು ವಿಜಯೀಂದ್ರ ಪೌತ್ರಗೆ ವ್ಯಾಸರಾಜನಿಗೆಜಯ ಜಯ ಪರಿಮಳಾ ಪ್ರದಾತಗೆ ಜಯಜಯವು ಖಂಡಾರ್ಥ ನೀಡ್ದಗೆಜಯ ಜಯವು ಸಶರೀರ ಬೃಂದಾ ವನದಿ ಸೇರ್ದವಗೇ 19 ಜಯ ಜಯವು ಬಾಹ್ಲೀಕ ರಾಯಗೆ ಜಯ ಜಯವು ಶ್ರೀ ಸತ್ಯಸಂಧಗೆಜಯ ಜಯವು ಪ್ರಹ್ಲಾದರಾಜಗೆ ಶಿಷ್ಯ ವತ್ಸಲ್ಯಗೆಜಯ ಜಯವು ಶ್ರೀ ರಾಘವೇಂದ್ರಗೆಜಯ ಜಯವು ಮಂಗಳವ ಸುರಿಪಗೆಜಯ ಜಯವು ಜಯ ಮುನಿಯ ಪ್ರೀಯಗೆ ನಮ್ಮ ಗುರುವರಗೆ 20 ಮಾನನಿಧಿ ಜಯತೀರ್ಥ ರಾಯರಘನ್ನ ಹೃದಯಗ ವಾಯು ವಂತರಶ್ರೀ ನಿಲಯ ಶ್ರೀ ಕೃಷ್ಣವಿಠಲ ಪ್ರೀಯ ಗುರುರಾಜನಾನು ಪಾಮರ ಬಾಲ ನುಡಿಗಳ ನೀನೆ ತಿದ್ದುತ ಮನ್ನಿಪುದು ನಾನಿನ್ನ ದಾಸರ ದಾಸನೆಂದು ಸ್ವೀಕರಿಸು ಶರಣು 21
--------------
ಕೃಷ್ಣವಿಠಲದಾಸರು
ಸಕಲಸಾಧನವೆನಗೆ ಕೈಸೇರಿತುಮುಕುತಿಯ ಮಾತಿಗೆ ಬಾರದ ಧನವು ಪ. ಸಂಸಾರದಲಿ ಜ್ಞಾನ ಸತಿಸುತರಲಿ ಭಕ್ತಿಕಂಸಾರಿಪೂಜೆಯಲಿ ವೈರಾಗ್ಯವುಸಂಶಯದ ಜನರಲ್ಲಿ ಸಖತನವ ಮಾಡುವೆನುಹಿಂಸೆಪಡಿಸುವೆನು ಜನಸಂಗ ಹರಿ ರಂಗ 1 ವಿಷಯಂಗಳಲಿ ಧ್ಯಾನ ಲೌಕಿಕದಲಿ ಮನನವಶವಲ್ಲದ ಕತೆಗಳಲ್ಲಿ ಮನವುಹಸನಾಗಿ ಎಣಿಸುವ ಹಣಹೊನ್ನಿನ ಜಪವುಬಿಸಿಲೊಳಗೆ ಚರಿಸುವುದದೆÉ ಮಹಾ ತಪವು 2 ಪೀಠ ಪೂಜೆಂಬುವುದು ಲಾಜಚೂರಣವಯ್ಯಮಾಟದ ಪಯೋಧರವೆ ಕಲಶಪೂಜೆಚೂಟಿಯಲಿ ಉದರದ ಯಾತ್ರೆಯೆ ಮಹಾಯಾತ್ರೆ ಬೂಟಕತನದಲಿ ಅನೃತವನು ಪೇಳ್ವುದೇ ಮಂತ್ರ3 ಹೆಂಡತಿಯ ಕೊಂಡೆಯ ಮಾತುಗಳೆ ಉಪದೇಶಚಂಡಕೋಪವೆಂಬೋದಗ್ನಿಹೋತ್ರಪಂಡಿತನೆನಿಸುವುದೆ ಕುವಿದ್ಯ ಪಠನೆಗಳುಕಂಡವರ ಕೂಡೆ ವಾದಿಸುವುದೆ ತರ್ಕವÀಯ್ಯ4 ಓದಿದೆನು ಎಲ್ಲಣ್ಣ ಕಲ್ಲಣ್ಣ ಎನುತಲಿಸ್ವಾಧ್ಯಾಯವು ಎನಗೆ ಪಗಡೆ ಪಂಜಿಸಾಧಿಸಿ ಈ ಪರಿಯ ಧನವನ್ನು ಕೂಡ್ಹಾಕಿಮೋದಿ ಹಯವದನ ನಾ ನಿನ್ನ ಮರೆತೆ 5
--------------
ವಾದಿರಾಜ
ಸಂಗಸುಖವ ಬಯಸಿ ಬದುಕಿರೋ ರಂಗವಲಿದ ಭಾಗವತರ ಪ ಸಂಗಸುಖವ ಬಯಸಿ ಬದುಕಿ ಭಂಗಪಡಿಪ ಭವವ ನೂಕಿ ಹಿಂಗದೇ ನರಸಿಂಗನನ್ನು ಕಂಗಳಿಂದ ಕಾಣುತಿಹರ ಅ.ಪ. ಪುಟ್ಟಿದಾರಭ್ಯ ಪರಮ ವೈಷ್ಣವಾಧ್ಯಕ್ಷರೆನಿಸಿ ನಿತ್ಯ ಮುದ್ದು ಕೃಷ್ಣ ಕೀರ್ತನೆಯನು ಪಾಡುತ ಕಾವ್ಯಕರ್ಮ ಬಿಟ್ಟು ಭಕ್ತಿಯನೆ ಮಾಡುತ ಮಧ್ವಮತವ ಪುಷ್ಟಿಗೈಸಿ ಖಳರ ಕಾಡುತ ಬಂದ ಲಾಭ ನಷ್ಟ ತುಷ್ಟಿಗಳಿಗೆ ಒಡಂಬಟ್ಟ ಬಗೆಯ ಪೇಳಲೆಷ್ಟು 1 ಭೂತದಯಾಶೀಲರಾದ ನೀತ ಗುರು ಜಗ- ನ್ನಾಥ ವಿಠಲಾಂಕಿತವನು ಪಡೆದು ಸಂಗೀತ ವೃತ್ತ ಪದ ಸುಳಾದಿಯ ಪೇಳಿ ಪ್ರೇ- ಮಾತಿಶಯದಿ ಒಲಿಸಿಕೊಂಡು ಮಧುವಿರೋಧಿಯ ಒಲಿಸಿಕೊಂಡ ಜಾತರಾಗಿ ಜವನಬಾಧೆಯ ಬಯಲು ಮಾಡಿ ಖ್ಯಾತರಾಗಿಹರು ಪುಸಿಯ ಮಾತಿದಲ್ಲ ಮರೆಯಸಲ್ಲ 2 ಮೇದಿನಿಯೊಳಗುಳ್ಳ ಗಂಗಾದಿತೀರ್ಥ ಸತಿಗಳಿವರ ಕಾದುಕೊಂಡಿಹರು ಬಿಡದೆ ಸ್ವಾದಿರಾಜೇಂದ್ರರ ಪ್ರ- ಸಾದದಿಂದ ಹರಿಕಾಥಾಮೃತ ಸಾರತತ್ವ ಸಾಧುಜನರಿಗಾಗಿ ಪ್ರಾಕೃತ ಪದ್ಧತಿಯಲಿ ಸಾದರದಲಿ ಪೇಳಿ ದುಷ್ಕøತ ದೂರಮಾಡಿ ಮೋದಿಸುವರಿಗೆಣೆಗಾಣೆ ಶ್ರೀದವಿಠಲನಾಣೆ 3
--------------
ಶ್ರೀದವಿಠಲರು