ಒಟ್ಟು 86 ಕಡೆಗಳಲ್ಲಿ , 44 ದಾಸರು , 82 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರತೀರ್ಥರಾಜ ಪ್ರಯಾಗವೆನಿಸುವ ಕ್ಷೇತ್ರ - |ದೊರೆ ಮಾಧವನ ಭಜಿಸಿರೈ 3ಆ ಮಾಘಮಾಸದತಿಶಯವಾದ ಸ್ನಾನವನು |ಈ ಮಹಾನದಿಯೊಳಗೆ ಮಾಡಲೋಸುಗಬೊಮ್ಮ |ಸೋಮಶೇಖರ ಮುಖ್ಯ ದೇವತೆಗಳೈತಹರು |ಪ್ರೇಮದಿಂದಲಿ ನಿರುತ ||ನೇಮವಿದು ದ್ವಿಜಕುಲೋತ್ತಮರಾದವರುಕೇಳಿ |ಕಾಮ - ಕ್ರೋದವ ಜರಿದ ಪ್ರಾಯಾಗ ಕ್ಷೇತ್ರದಲಿ |ರಾಮಣೀಯಕ ಸ್ನಾನನುಷ್ಠಾನ ತೀರ್ಥವಿಧಿ |ಹೋಮಗಳ ಮಾಡಿರಯ್ಯ 4ಆರ್ಯವರ್ತದ ಬ್ರಹ್ಮವರ್ತ ದೇಶದ ಮಧ್ಯೆ |ಧಾರ್ಯವಾದಲೆ ಪುಣ್ಯವಾರಾಣಾಸೀ ಕ್ಷೇತ್ರ |ಕಾರ್ಯವಿಶ್ವೇಶತಾರಕ ಮಂತ್ರವುಪದೇಶಿ |ಸೂರ್ಯಚಂದ್ರಾಗ್ನಿನಯನ||ತ್ವರ್ಯುಗ್ರನೆನಿಪಭೂತೇಶ ಭೈರವನಲ್ಲಿ |ವೀರ್ಯದಿಂದಘಾಕಾರಿ ಜೀವಿಗಳ ಶಿಕ್ಷಿಸುವ |ಶೌರ್ಯಅಗಣಿತ ಮಹಿಮ ಶ್ರೀ ಬಿಂದು ಮಾಧವಗೆ |ಕಾರ್ಯದೊರೆತನವು ಅಲ್ಲಿ 5ಅರ್ತಿಯಲಿ ಪಂಚಗಂಗೆಯಲಿ ಮಜ್ಜನಮಾಡಿ |ನಿತ್ಯ ನೈಮಿತ್ತ್ಯ ಕರ್ಮಂಗಳನು ಪತಿಕರಿಸಿ |ಸುತ್ತಿ ಅಂತರ್ವೇದಿಯನ್ನು ಪಂಚಕ್ರೋಶ - |ಯಾತ್ರೆಗಳ ಮಾಡಿ ಬಳಿಕ ||ಮತ್ತೆ ಶ್ರೀ ವಿಶ್ವೇಶ್ವರಗೆ ಪ್ರದಕ್ಷಿಣೆ ಮಾಡಿ |ಭಕ್ತಿಪೂರ್ವಕವಾಗಿ ಅಲ್ಲಲ್ಲಿ ಇಹ ವೈಷ್ಣ - |ವೋತ್ತಮರಿಗೆರಗಿ ಸದ್ಧರ್ಮಗಳ ಮಾಡಿ -ಕೃತ ಕೃತ್ಯರೆಂದೆನಿಸಿದರಯ್ಯ 6
--------------
ಪುರಂದರದಾಸರು
ವೀರ ಬಂದ ವೀರ ಬಂದಘೋರಹಮ್ಮುಎಂಬ ದಕ್ಷನತೋರ ಶಿರವರಿಯಲೋಸುಗಪಭಯನಿವಾರಣವೆಂಬ ಕಾಸೆಯನೆ ಹೊಯ್ದಜಯಶೇಖರನೆಂಬ ವೀರ ಕಂಕಣಕಟ್ಟಿನಿಯತ ಸಾಹಸವೆಂಬ ರತ್ನ ಮುಕುಟವಿಟ್ಟುಸ್ವಯಂ ಸೋಹಂ ಎಂಬ ಕುಂಡಲವ ತೂಗುತ1ಆಡಲೇನದ ಶುದ್ಧವೆಂಬ ಭಸಿತವಿಟ್ಟುರೂಢಿಯ ಸತ್ಪವೆಂದೆಂಬ ಹಲಗೆಯಾಂತುಇಡಾಪಿಂಗಳವೆಂಬ ಪಾವುಗೆಗಳ ಮೆಟ್ಟಿಗಾಢ ಧೈರ್ಯವೆಂಬ ಖಡುಗ ಝಳಪಿಸುತ2ಒಂದೊಂದೆ ಹೆಜ್ಜೆಯನಂದು ಪಾಲಿಸುತಾಗಹಿಂದೆಡಬಲ ನೋಡದೆ ಮುಂದು ನಿಟ್ಟಿಸಿಛಂದಛಂದದಲಾಗುವಣಿ ಲಗುವಿನಿಂದಬಂದನು ಬಹು ಶೂರಧೀರ ಮಹಾವೀರ3ದಾರಿ ಊರುಗಳನೆ ಧೂಳಿಗೋಂಟೆಯ ಮಾಡಿಆರಾಧರೇನು ಶಿಕ್ಷಿಸುವೆನೆಂದೆನುತಭೇರಿಕರಡಿ ಸಮ್ಮೇಳಗಳೊಡಗೂಡಿಕಾರಣವಹ ಯಜÕಮಂಟಪದೆಡೆಗಾಗಿ4ಸುಷುಮ್ನವೆಂದೆಂಬ ಬಾಗಿಲ ಮುರಿಯುತ ಆಸಮಯದಿ ಬಂದ ಅಸುರರ ಕೊಲ್ಲುತಭೇಸರಿಸುವ ದೊರೆ ದೊರೆಗಳನಿರಿಯುತದ್ವೇಷರೆನಿಪ ಷಡುರಥಿಕರ ಕಟ್ಟುತ5ಅಷ್ಟಸಿದ್ಧಿಗಳೆಂಬ ದಿಕ್ಪಾಲಕರ ನಟ್ಟಿಭ್ರಷ್ಟ ಮೋಹವದೆಂಬ ಯಮನ ಹಲ್ಮುರಿದೆತ್ತಿನಷ್ಟಮನವೆಂಬ ಬೃಗುವಿನ ಮೀಸೆಯ ಕಿತ್ತುಶಿಷ್ಟಶಿಷ್ಟರನು ಎಲ್ಲರ ಕೆಡೆಮೆಟ್ಟಿ6ಹಮ್ಮುತಾನಾಗಿರುತಹಉನ್ಮತ್ತದಕ್ಷನ ಶಿರವನು ತರಿಯುತಲಾಗಗಮ್ಮನೆ ತ್ರಿಕೂಟ ಯಜÕಕುಂಡದೊಳುಸುಮ್ಮನಾಹುತಿಯಿಟ್ಟು ಸುಲಭದಲಿ ನಲಿಯುತ7ಪಾಪರೂಪನಾದ ಜೀವದಕ್ಷನನುಈ ಪರಿಯಲಿ ಕೊಂದು ನಾಟ್ಯವಾಡಲುಭಾಪುರೇ ಎಂದು ಸಾಧು ಪ್ರಮಥರು ಹೊಗಳಲುತಾಪಹರನಾಗಿ ಶಾಂತಿಯ ಹೊಂದುತ8ನಿರುಪಮನಿತ್ಯನಿರಾಳನೆ ತಾನಾಗಿಪರಮೇಶಪರವಸ್ತುಪರತರವೆಯಾಗಿಭರಿತ ಚೇತನ ಪ್ರತ್ಯಗಾತ್ಮನೆ ತಾನಾಗಿನಿರುತ ನಿತ್ಯಾನಂದ ಚಿದಾನಂದಯೋಗಿ9
--------------
ಚಿದಾನಂದ ಅವಧೂತರು
ಶ್ರೀ ನರಸಿಂಹ ಸ್ತೋತ್ರ11ವಂದಿಸು ನರಹರಿಯ ಮನವೆ ವಂದಿಸು ನರಹರಿಯವಂದ್ಯವಂದ್ಯನು ಬಹು ಸುಂದರ ಸುಖಮಯಇಂದಿರರಸ ಅರವಿಂದ ಸುನಾಭನ ವಂದಿಸು ನರಹರಿಯ ಪಸಿಂಧುಸಂಚರ ಬಹು ಸುಂದರ ಗಿರಿಧರತಂದನು ವಸುಧೆಯ ಕಂದನ ಕಾಯ್ದ ಪುರಂದರವರದ ಮುನೀಂದ್ರ ಕುಮಾರ ಕಪೀಂದ್ರಗÉ ಒಲಿದಮರೇಂದ್ರಗೆ ಬೋಧಿಸಿನಿಂದ ದಿಗಂಬರಕುಂಭಿಣಿಸುರನುತಮಂದರಗಿರಿ ಎತ್ತಿ ಸಿಂಧುವಿಂದಲಿ ಬಂದುಅಂಧ ಮೂಢರ ತನ್ನ ಅಂದ ಮೋಹದಿಕಟ್ಟಿದಾನ್ತ ಸುರರಿಗೆಲ್ಲ ಚಂದ ಸುಧೆಯನಿತ್ತಇಂದಿರಾಕಾಂತನನಂತ ಸುಗುಣಗಳಚಿಂತಿಸಿ ಯೋಗ್ಯದಿ ಕಂದದ ಪ್ರೇಮದಿವಂದಿಸು ನರಹರಿಯ 1ವೇದಾಂತರ್ಗತಬಾದರಾಯಣಹರಿಪಾದಾರಾಧಕಮೋದಸುತೀರ್ಥರಪಾದಾವಲಂಬಕ ಸಾಧು ಸುಮೇಧರಹೃದಯಾಕಾಶದಿ ಪದುಮದ ಮೂಲದಿಸದಮಲಾತ್ಮನಾದಿತ್ಯನುಪೋಲುವಿಧವಿಧಭಾಸದಿ ಪದೆ ಪದೆ ನೋಡುತವಿಧಿಯ ತಾತನ ಬಹುಮೋದಸುಗುಣಗಳಮುದದಲಿ ಚಿಂತಿಪಕೋವಿದಹಿರಿಯರಪಾದಸುಪಾಂಶುವ ನಿಯಮದಿ ಪೊಂದಿ ನೀಪದುಮೇಶನ ನಿನ್ನ ಹೃದಯದಿ ಚಿಂತಿಸಿವಂದಿಸು ನರಹರಿಯ 3ನಿಜಸುಖಮಾರ್ಗದಿ ಭಜಕ ಬಾಲಕ ಪೋಗೆಅರ್ಜಿತ ದ್ವೇಷದಿ ಮೂರ್ಜಗ ಶತ್ರುಗಜಾದಿಗಳಿಂ ಹೆಜ್ಜೆಜ್ಜೆಗೆ ಬಾಧಿಸೆಧೂರ್ಜಟಸೇವ್ಯ ಜನಾರ್ಧನ ನರಹರಿಗರ್ಜಿಪ ವದನನು ಸಜ್ಜನಪಾಲಕಅಜಸುರರೆಲ್ಲರು ತೇಜೋಮಯ ಅತಿಜ್ವಲಿಸುವ ನಖದಿಂ ದುರ್ಜನ ರಾಜನಜೋಜ್ಜೆಯ ಛೇದಿಸಿ ಭಜಕಗೆ ವರವಿತ್ತುಸೃಜ್ಯಾಸೃಜ್ಯರ ಪ್ರಾಜÕನ ಮರೆಯದೆವಂದಿಸು ನರಹರಿಯ 3ಸೃಷ್ಟ್ಯಾಧೀಶನದೃಷ್ಟನಾಗಿರುತಿಹಸೃಷ್ಟಾಸೃಷ್ಟ ಪ್ರವಿಷ್ಟಾಸೃಷ್ಟನುಶಿಷ್ಟರ ಇಷ್ಟ ಸುದೃಷ್ಟಿಯ ಬೀರುತಶಿಷ್ಟರ ಬಹು ವಿಧ ಕಷ್ಟಗಳಳಿದುಅಭೀಷ್ಟಗಳೀವನು ದುಷ್ಟರ ಶಿಕ್ಷಿಪಭ್ರಷ್ಟಜನರಿಗಿವ ಸ್ಪಷ್ಟನಾಗುವನಲ್ಲಶ್ರೇಷ್ಠೋತ್ತಮಪರಮೇಷ್ಠಿಜನಕನಿವಕಾಷ್ಟಾಗ್ನಿಯವೊಲ್ ಅದೃಷ್ಟಾದೃಷ್ಟನುದುಷ್ಟದೂರ ವಾಸಿಷ್ಠ ಶ್ರೀ ಕೃಷ್ಣನುತಿಷ್ಟನು ನಿನ್ನೊಳುತ್ಕøಷ್ಟನೆಂದರಿತುವಂದಿಸು ನರಹರಿಯ 4ಸರಿಪರರಿಲ್ಲದ ಸಿರಿಯರಸನಚಾರುಚರಣಾರಾಧನ ಪರಸುಖವೀವುದುಸಿರಿದೊರೆ ಸುಹೃದನು ಸಿರಿಸಹ ಮೆರೆಯುತಅರಿತ ಸುಜನರನು ಪೊರೆವನು ದಯದಿಮೊರೆಯನು ಲಾಲಿಸಿ ಪೊರೆದನು ಗರ್ಭವಮರೆತು ನಾರಾ ಎಂದ ನರಸುರಗೊಲಿದನುಪೊರೆದನು ದಯದಿ ನರಾಧಮ ಎನ್ನನುಕರಿವರ ದ್ರೌಪದಿವರದ ವಿಖ್ಯಾತನುಸರಸಿಜಭವತಾತ ಪ್ರಸನ್ನ ಶ್ರೀನಿವಾಸಪೊರೆವನು ನೆನೆವರ ಸಿರಿಭೂದೊರೆಯೆಂದುವಂದಿಸು ನರಹರಿಯ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಕೃಷ್ಣಲೀಲಾ ಕೀರ್ತನೆಗಳು38iÀುಶೋದೆ ಮಜ್ಜಿಗೆ ಮಾಡುತಂ ಮುದದಿಂ-ದಶೋಕನಮಲ ಸುಲೀಲೆಯನು ||ವಿಶೇಷ ಭಕ್ತಿಂಧಾಡುವಳಾ ಕಥಾ-ರಸ ಯಥಾಮತಿ ರಚಿಸುವೆನು ಪಹತ್ತವತಾರದಿ ಮತ್ತರ ಶಿಕ್ಷಿಸಿಉತ್ತಮರನು ಸಂತೈಸಿದನು ||ಭೃತ್ಯಭವಾರ್ಣವಬತ್ತಿಸುವಿವನನುಎತ್ತುವೆನತಿ ಧನ್ಯಳು ನಾನು 1ನದಿಜನಕನ ಕೊಡದುದ ಕದೊಳೆರೆವೆನುಮದನಪಿತನ ಸಿಂಗರಿಸುವೆನು ||ವದನತೆರದೆನ್ನ ಬೆದರಿಸಿದನ ಬಲುಹದದಿಂದಿರು ಎಂದಾಡುವೆನು 2ಅಣು ಮಹತ್ತೇ ಕಾಲಕೆ ತಿಳಿಯದೆದಣಿದೆನು ಪಾದಗಳನುಕಟ್ಟಿ||ಜನನಿಗೆ ಸಿಕ್ಕದನೆಂಬರ ತೋರಿಸಿಧನಪಜರ ಪೊರೆದ ಮರಕುಟ್ಟಿ 3ಅಗಣಿತರೂಪಿವನಂಗದಿ ಕಂಡಳುಜಗದಂಬೆಂಬರು ಸಜ್ಜನರು ||ಮಗುವೆಂದನುದಿನ ಮುದ್ದಿಸಿ ಕೊಂಕಳೊ-ಳಗಿಡುವೆ ಯನಗೇನೆಂಬುವರೊ 4ಮೀನಾಂಬರೆ ಈ ಪರಿಯಿಂದಲಿ ಶ್ರೀಪ್ರಾಣೇಶ ವಿಠಲನ ಪಾಡುವಳು ||ಈ ನುಡಿಯಾದರದಿಂ ಕೇಳಲುಭವಕಾಣರು ಪರದಲಿ ಸುಖ ಬಹಳ 5
--------------
ಪ್ರಾಣೇಶದಾಸರು
ಸತ್ಯಭಾಮಾವಿಲಾಸಶ್ಲೋಕಶ್ರೀ ಬ್ರಹ್ಮೇಶ ಸುರೇಂದ್ರ ಪೋಷಕಹರಿದ್ವಾರಾವತೀಲ್ಬಾಳ್ದನುಶ್ರೀ ಭೈಷ್ಮೀವರ ಸತ್ಯಭಾಮೆಯ ಬಹು ಸಾಸ್ರಾಂಗನೇರಾಳ್ದನುಈ ಭೂಭಾರಹರಾವತಾರ ಯದುಪಂ ನರ್ಲೀಲೆಯಂ ತಾಳ್ದನುಸೌಭಾಗ್ಯಾಂಬುಧಿ ಕೃಷ್ಣನಯ್ಯ ಜನಕಾನಂದಾಬ್ಧಿಲಿಟ್ಟಾಳ್ದನು 1ಸೌಪರ್ಣಾಂಸದಲಿಟ್ಟು ದೇವ ತರುವ ಸತ್ಯ ಸಹಾ ಒಪ್ಪುವಆಪನ್ನಾನ್ವಯ ಕಾಮಧೇನೆನಿಸುವ ಅಧ್ಯಾತ್ಮ ಶ್ರೀಮಾಧವಈ ಪದ್ಯಂಗಳ ಪೇಳಿಸಿದನು ದಯಾಬ್ಧಿ ಪಾರಿಜಾತಾಖ್ಯವಗೋಪಾಲೇಶನ ಪಾದಪದ್ಮ ನೆನೆವೆ ಆನಂದವಂ ಬೇಡುವೆ 2ಪದಶ್ರೀಕೃಷ್ಣ ದ್ವಾರಕಾನಗರದಿ ಪ್ರೇಮದಾನೀಕದಿ ರಾಜಿಸಲಾಗನಾಕದಲರು ಒಂದು ನಾರದ ತಂದಿರೆಶ್ರೀಕಾಂತನಿತ್ತ ರುಕ್ಮಿಣಿಗೆ 3ಒಂದು ಹೂವಿನ ಪರಿಮಳವುನಗರತುಂಬಿಇಂದುವದನೆಸತ್ಯಭಾಮೆಇಂದುಗೋವಿಂದ ರುಕ್ಮಿಣಿಗೆ ಕುಸುಮವಿತ್ತನೆಂದು ಕೇಳ್ದಳು ಸುಸ್ವಭಾವೆ 4ಶ್ಲೋಕಅರ್ಧಾಂಗಿಯಲಿ ಸ್ನೇಹವೆಗ್ಗಳಕಣಾ ಮುದ್ದಿಸಿ ಹೂವಿತ್ತನುಇದ್ದೇನಿನ್ನು ವೃಥಾ ಭುವಿಯಲಿ ಸಖಿ ನಿರ್ದೇಹವಂ ಸಾರ್ವೆನುಕದ್ದು ಬೆಣ್ಣೆಯ ಮೆದ್ದು ಪುಂಶ್ಚಲಿಯರೊಳಿದ್ದಾತನ ಬುದ್ಧಿಯತಿದ್ದಿ ನೋಡಿದೆ ಸೋತೆ ಎನ್ನ ನಳಿತೋಳ್ಹೊದಿಸಿ ನಾ ಶೌರಿಯ 5ಸಾಕಿನ್ನಾತನ ಚಿತ್ತಪಲ್ಲಟಸಟೆಆ ಕಾಮಿನಿಪ್ರಿಯನನೂಕದಿನ್ನಿರೆ ಎನ್ನ ಮಂಚಕೆ ಬರಲ್ಪೋಕ ಸ್ಮರನಯ್ಯನಯಾಕಿನ್ನಾಭರಣಾಂಬರೋತ್ತರಿ ಸಖೀ ಏಕಾಗ್ರನೇಕಾಂಗನನೀಕಂಡ್ಹೇಳವಮಾನ ತಾಳಳು ಸಖಿ ಜೋಕಿನ್ನು ನಿನ್ಬಹುಮಾನ6ಪದಕ್ರೋಧ ಕಳವಳಿಕೆ ಮುನಿಸಿನಿಂದಲಿ ಸತ್ಯವಾದಿ ಸತ್ರಾಜಿತ ಕನ್ಯೆಮೇದಿನಿಮೇಲೆ ಮಲಗಿದಳು ಧೊಪ್ಪನೆ ಮಂಚಕೈದದೆ ನಿತ್ಯಸುಖಿ ಧನ್ಯೆ 7ಬಿಸಿ ಬಿಸಿ ನಿಟ್ಟುಸಿರ್ಗರೆದು ಕೋಮಲ ಮುಖಶಶಿಯ ಕಸ್ತೂರಿ ಅಂಗಯ್ಯಲೊರೆಸಿಬಿಸಜಾಕ್ಷಿ ಕಂಬನಿದುಂಬೆ ಒರತೆಯಿಟ್ಟುಎಸೆವಕಜ್ಜಲಜಲ ಸೂಸಿ 8ಶ್ಲೋಕವಕ್ಷೋಜಾತದ ಹೊನ್ನ ಕುಪ್ಪಸವನು ಅಕ್ಷೋದದಿಂ ತೋಯಿಸಲ್ಸಾಕ್ಷಾನ್ಮಂಗಳ ಮುತ್ತಿನ್ಹಾರ ಕಡಿದಳ್ ಲಕ್ಷಾಭರಣ್ಬಿಟ್ಟಳುತಾ ಕ್ಷೋಣಿಯನು ಹೊಂದಿ ಬಿದ್ದು ಬೆಮರ್ದಳ್ಅಕ್ಷಯಸೌಗಂಧಿಯಳ್ಪಕ್ಷಿವಾಹನ ಮಾಡಿದ ಉಪಕಾರ ಲಕ್ಷಿಸಿ ಹಾಯೆಂದಳು 9ಹಾ ಹಾ ಕೈತವ ಮೀನ ಜೃಂಭಕಮಠಹಾ ಹೈಮದೃಘ್ಘಾತಕಹಾ ಹಾ ನಿಷ್ಕರುಣಾಂಗ ಶಿಕ್ಷಕ ಹರೆ ಹಾ ಹಾ ಬಲಿರ್ವಂಚಕಹಾ ಮಾತೃ ಮೃಗಾರ್ದ ಜಾರವ್ರತ ಹಾ ಹಾ ಹಾ ಕಲಿರ್ಮಾರಕಹಾ ಹಾ ಮದ್ಗøಹ ದೂರಕ ಪರಸಖ ಆಶಾಬ್ಧಿ ಸಂಶೋಷಕ10ಪದತಾಳಿನ್ನು ತಾಳೆಂದು ತವಕದಿ ಸವತಿಯಮೇಲೆ ಕೋಪಿಸಿ ಸತ್ಯಭಾಮೆಜಾಲಕ ಮಾಲೆಯ ಹರಿದು ಚಿಮ್ಮಿದಳತ್ತಮೇಲೆಣ್ಣೆಗಂಟ ಹರಹಿದಳು 11ಮೂರ್ಛೆಯೊಳ್ಮೈಮರೆದಂತೆ ತೇಲ್ಗಣ್ಣ ಹಾಕಿದುಶ್ಚಿಹ್ನ ಲೀಲೆಯ ತೋರೆನಿಶ್ಚಲ ಭಾವೆಯನರಿತೆತ್ತಿ ಒಯ್ದರುಒಚ್ಚೇರೆಗಂಗಳೆಯರು ಬೆದರಿ12ಶ್ಲೋಕಧೈರ್ಯಂಗೆಟ್ಟ ಮೃಗೇಂದ್ರ ನಾರಿಯಿವಳೊ ನ್ಯೆರಾಶ್ಯ ಬಳ್ಳ್ಯಿಹಳೊವೈಮಾನಿಕರ ದೇವತ್ಯಾಕೆ ಮುನಿದಳಯ್ಯಯ್ಯೊ ಸೌಜನ್ಯಳೊಮಯೂರಭ್ರಮುಡೇಳ್ ಮಹಾಪತಿವ್ರತೇಳ್ಮತ್ತೇಭ ಗಾಮಿನಿಯಳ್ಕೈವಲ್ಯಜÕರು ಬಲ್ಲರೀಕೆಯ ಬಗೆ ಕಾಯಯ್ಯ ಕೃಷ್ಣಯ್ಯನೆ 13ಎತ್ತೊಯ್ದು ಮೃದುತಲ್ಪಮಂಚಕವಳ ಮತ್ತಾಲವಟ್ಬೀಸಲುಫೂತ್ಕಾರಂ ಕಿವಿಯೊಳ್ಪೂರೈಸಿ ನುಡಿಸಲ್ಸತ್ಯಂಗನೆ ಸುಮ್ಮನೆಪ್ರತ್ಯುತ್ತರಗೊಡದಿರಲು ಬೆದರಿವರ್ಚಿತ್ತಜನೈಗ್ಹೇಳಿದರುಮುಕ್ತಕೇಶಿಯ ವಾರ್ತೆ ಕೇಳಿದು ಬಹು ಚಿತ್ರವಿಚಿತ್ರೆಂದನು 14ಪದದೂತೇರ ನುಡಿಗ್ಯದುನಾಥನು ಮನ್ನಿಸಿಆತುರದಲಿ ನಡೆತಂದುಪ್ರೀತಿಗಗ್ಗಳೆ ಸತ್ರಾಜಿತ ಸಂಜಾತಳೆನೀತವೆ ನೀ ಮುನಿದಿಹುದು 15ಎಂದು ಮಂಚದಲಿ ಕುಳಿತು ಪ್ರಾಣನಾಥೆ ಬಾಇಂದುವದನೆಮಾತನಾಡೆಕಂದ ಕಂದರ್ಪನಾಣೆ ಕಪಟವಿಲ್ಲೆನ್ನಲ್ಲಿಕಣ್ಣೆರೆದಿತ್ತಲೊಮ್ಮೆ ನೋಡೆ 16ಶ್ಲೋಕಕಸ್ತೂರಿ ತಿಲಕಿಲ್ಲ ನಿನ್ನ ಪಣೆಯೊಳ್ಮುತ್ತಿನ ಬೊಟ್ಟಿಲ್ಲವೆಮತ್ತೇನ್ಭೂಷಣವೇಣಿ ನಿನ್ನ ನೊಸಲೊಳ್ಮುತ್ತಿನಮಣಿಇಲ್ಲವೆರತ್ನಾಂಕಾಭರಣಿಲ್ಲ ನಿನ್ನ ಶ್ರುತಿಯೊಳ್ಮತ್ವಜ್ರದೋಲಿಲ್ಲವೆಹತ್ತೆಗಟ್ಟಿದ ನಿಷ್ಕಕಂಠ ಪದಕಿಲ್ಲ ಒತ್ತಾದ ಹಾರಿಲ್ಲವೆ 17ವ್ಯತ್ಯಸ್ತ ಸ್ತನಪಟ್ಟಿಕೆ ರುಚಿರ ಶ್ರೀ ಗಂಧಾನುಲೇಪಿಲ್ಲವೆಸ್ವಸ್ತಂಬ್ರ ಸ್ಮರಣಿಲ್ಲವೆ ಮಮಸಖಿ ಸ್ವಸ್ಥಾಗುಸುರ್ಭಾವೆ ನಂಬು ಸ್ತ್ರೈಣರ್ಬಗೆ ತೋರಿದೆ ಸ್ವಸುಖದಿ ತಾ ಸ್ತ್ರೈಣನಲ್ನಿಶ್ಚಯಹೇ ಸ್ತ್ರೀರತ್ನಶಿಖಾಮಣಿರಮಣಿ ಕೇಳ್ದುಶ್ಚಿತ್ತ ಮಾಣೆಂದನು 18ಪದಈಪರಿಭಾವೆಯ ಚರಣದೆಡೆ ಕುಳಿತುಶ್ರೀಪತಿ ಪ್ರಾರ್ಥನೆ ಮಾಡೆತಾ ಪತಿಯೊಡನೊಂದು ಮಾತನಾಡಳುಸತಿತಾಪದ್ವಿಗುಣಿಸಿತು ಕೇಳಿ 19ಮಾನಭಂಗವ ಮಾಡಿದ ಮೇಲೆಂತು ಬಹುಮಾನವನೊಲ್ಲದಿಹ ಸತಿಯತಾನೆತ್ತಿ ತೊಡೆ ಮೇಲೆ ಮಲಗಿಸಿಕೊಂಡು ದುಮ್ಮಾನವ ಬಿಡಿಸುವ ಹರಿಯು 20ಶ್ಲೋಕಮಾನವಮನ್ನಿಸಿದಾಕೆಯ ಸ್ಥಿತಿಯನು ಶ್ರೀನಾಥ ಕಂಡೆಂದನುಏನೆಮಾನಿನಿನಿನ್ನ ಕೋಪ ಬಿಡದೆ ನಾ ನೋಡಿದೆ ಕಲ್ಲೆದೆಮನುಷ್ಯರೊಳುದಾವಸ್ತ್ರೀಗೆ ಸಲಿಗೆ ತಾನಿತ್ತವಂಗೀ ಬಗೆತಾನೆ ತೋರಿದೆವಿಶ್ವಶಿಕ್ಷಿಕ ಗಡಾ ಏನಾಶ್ಚರ್ಯ ಗಡಾ 21ಎಚ್ಚೆತ್ತೆನ್ನೊಳು ಮಾತನಾಡೆ ಪ್ರವುಢೆ ಹುಚ್ಚಾಗದಿರೆಂದನುಸಚ್ಚಿನ್ಮೂರ್ತಿಯ ಮಾತಕೇಳಿ ಕುಳಿತಳ್ವಚ್ಚೆರೆಗಣ್ಮುರಿಯಲುಉಚ್ಚಾರಂ ಗದಗದ್ಗಿಸಿ ಸ್ಛುರಿತಾಧರೆಗಚ್ಚಗ ತಾನೆಂದನುಉಚ್ಚಾರದೊಳಗೊಂದು ನಿನ್ನ ಮನದ ಮಚ್ಚಾಟ ಬೇರೆಂದಳು 22ಪದನಾರಿ ಪತಿಯ ಬಿಟ್ಟು ದೂರದಿ ಕುಳಿತಳುವಾರೆ ನೋಟದ ಬೆಡಗಿನಲಿಜಾರಿದ ಸೆರಗೆದೆಗೇರಿಸಿ ಹೊದ್ದು ಮುರಾರಿಗೆ ವಾರೆ ಮುಖದಿರುಹಿ 23ಕಪಟನಾಟಕ ನಿನ್ನ ಮಾಯವಗಾಧವುಕಪಟಗಿತ್ತಿಗೆದಿವ್ಯಕುಸುಮಅಪಮಾನ ಸತ್ಯಳಿಗೆಮಾನಬಂಗಾರಿಗೆಚಪಲತೆ ತಿಳಿಯದು ನಿನ್ನ 24ಶ್ಲೋಕಕೇಳ್ನಾರೀಮಣಿ ನಾರದ ಕುಸುಮದ ಅರಳೊಂದು ಪಾದಾಬ್ಜಕೆನಲ್ವಿಂದರ್ಪಿಸಲಾಗ ಯೋಚಿಸಿದೆ ನಾ ಚೆಲ್ವ ಅಮರ್ಭೂರುಹಬಲ್ವಿಂದೀ ನಗರಕ್ಕೆ ನಿನ್ನ ಮನೆಯಂಗಳದೊಳು ಸ್ಥಾಪಿಸುವಉಲ್ಲಾಸಂ ಪಿಡಿದಿರ್ದೆ ನಾಕುಸುಮಜೇಷ್ಠಳ್ಗೀಯೆ ನೀ ಮುನಿವರೆ25ಹೂವೊಂದಾಕೆಗೆ ಕೊಟ್ಟೆ ಸಾಕು ತರುವ ನಿವಾರಿಸಿ ವಜ್ರಿಯಗರ್ವಿಂ ನಿನ್ನಿದಿರಲ್ಲಿ ಕೊಂಡು ಬಹೆ ನಾ ಭವ್ಯಾಂಗಿ ಕೇಳ್ಭಾಮಿನಿದಿವ್ಯಾಮೋದಮಯ ದ್ರುವiಂ ಸುರರಿಗಂ ಸೇವ್ಯಾದುದ ನಿನ್ನಯಭವ್ಯಂಗಳದೊಳಗಿಟ್ಟು ಮೆಚ್ಚಿಸುವೆ ನಾ ನವ್ಯಾದ್ಭುತಂನೋಡುನೀ26ಬಿನ್ನಣೆ ಮಾತಲ್ಲ ನಿನ್ನಾಣೆಭಾವಕಿಇನ್ನು ದುಮ್ಮಾನವೇಕೆನ್ನುತಾಚೆನ್ನಿಗರರಸನು ರಮಣಿಯ ನಳಿತೋಳಚೆನ್ನಾಗಿ ಸೆಳೆದಪ್ಪಿಕೊಳುತ 27ಎನ್ನ ಶಪಥÀವಿದು ನಿನ್ನೆತ್ತಿ ಖಗವೇರಿಕನ್ನೆ ಶಚಿಯ ಮನೋಹರನಮನೆಗೆ ಹೋಗಿ ವಿಜಯರವದಿ ತಂದುರನ್ನದತರುನಿನಗೀವೆ ನಾ 28ಶ್ಲೋಕಹೀಗೆಂದಾಕೆಯಮೆಚ್ಚಿಸಿದನುಆ ವಿಯೋಗಿಯಸಂಯೋಗಿಯಭೋಗಭಾಗಾಶೆಯ ನಿಯತಿ ಸುಖಿಯಾ ತ್ರೈಗೇಹ ಸಂಸ್ಥಾನಿಯಾಯೋಗೇಶೇಶ್ವರ ತನ್ನ ಪಾಶ್ರ್ವದಿ ದಿವಿಪ ನಾಗೇಶೈರ್ವಂದಿಯಾಶ್ರೀಗೋವಿಂದ ಮನುಷ್ಯರ ತೆರದಲಿ ಹೀಂಗಾಡಿದ ಲೀಲೆಯ 29ಬಾ ಸತ್ರಾಜಿತ ಗರ್ಭಸಿಂಧು ಸುಮಣಿ ಬಾ ಸೋಮಬಿಂಬಾನನೆಬಾ ಸೌಂದರ್ಯದವಾರಿಧಿಪರಮೆ ಬಾ ಬಾ ಸತ್ಯಭಾಮೆ ರಮೆಬಾ ಸಂಧ್ಯಾರುಣದಂಬಕಿ ಸುಕಬರೆ ಬಾ ಸ್ವಚ್ಛ ಬಿಂಬಾಧರೆಬಾ ಸದ್ರತ್ನದ ಭೂಷಣೆ ಪ್ರಸನ್ನವಾಗೆ ಸರ್ವತೋಷಾಂಗನೆ 30ಪದನಿನಗಾಗಿ ವೇದ ಕದ್ದವನ ಕೊಂದೆನಿನಗಾಗಿ ನನ್ನುದಧಿಯಲ್ಲಿ ನಿನ್ನ ತಂದೆನಿನ್ನ ಕದ್ದವನ ಕೊಂದೆ ನೀ ಬರಲೆತ್ತಿದೆನಿನ್ನ ಭಾಗ್ಯದ ಸಖಿ ಹಿಡಿದೆ 31ನಿನ್ನ ಭಾರವ ತೆಗೆದೆ ನಿನಗಾಗ್ಯಟವಿಯಲ್ಲಿದ್ದೆನಿನ್ನಮುನಿಸುತಿಳಿಯ ಬಂದೆನಿನ್ನನೆ ಮೆಚ್ಚಿ ಅನ್ಯ ಕನ್ಯೇರ ವ್ರತವನಳಿದೆನಿನ್ನ ಪುಣ್ಯದ ಬೆಳಸ ಬೆಳೆದೆ 32ಶ್ಲೋಕಶ್ರೀಶೌರಿಸರಸೋಕ್ತಿಯಿಂದ ಸತಿಯ ಲೇಸಾಗಿ ಸಂತೈಸುತಆಸ್ಯಾಬ್ಜಾಂಕಿತ ಸ್ವೇದವನ್ನು ಸುಮುಖವನೊತ್ತಿ ಆರೈದನುಕೇಶ ನೇವರಿಸುತ್ತ ತಾ ಚತುಷ್ಕಪರ್ದಾ ಸತ್ಯಭಾಮಿನಿಗೆಶ್ರೀಶ ಮಂಡಿಸಿ ವೇಣಿಯಲ್ಲಿ ಇಡುವ ಭೂಷಣಗಳನಿಟ್ಟನು 33ಕಸ್ತೂರಿ ತಿಲಕಿಟ್ಟ ನೇತ್ರಯುಗಕೆ ಮತ್ತಂಜನವಿಟ್ಟನುವೃತ್ತಾದ ಸುಕಪೋಲದೊಳ್ಮಕರಿಕಾ ಪತ್ರಂಗಳನಿಟ್ಟನುಮುಕ್ತಾಹಾರಪ್ರವಾಳನೀಲಮಣಿಗಳ್ವತ್ತಾದ ಸ್ವರ್ಣಮಾಲಿಕಾರತ್ನಾಂಕಾಭರಣಿಟ್ಟನು ಯದುಪತಿ ಸತ್ಯಂಗನಾಪ್ರಿಯನು 34ಪದಮುಡಿಗೆ ಮಲ್ಲಿಗೆಯ ಮುಡಿಸಿದ ಮದನನಯ್ಯಮಡದಿಯೆದೆಗೆ ಮಲಯಜವಕಡು ನರ್ಮೋಕ್ತಿಗಳಲ್ಲಿ ಪೂಸಿದ ಘನಶ್ಯಾಮಬಿಡು ನಿನ್ನ ಖತಿಯೆಂದ ದೇವ 35ಕೋಟಿ ಚಂದ್ರಾರ್ಕ ಲಾವಣ್ಯನರ್ಧಾಂಗಿಗೆಕೋಟಿ ಕೋಟ್ಯಾಭರಣಿತ್ತನೋಟ ಬೇಟದಿ ಮನೋರಥವ ಪೂರೈಸಿದನಾಟಕಸೂತ್ರನಿರ್ಲಿಪ್ತ 36ಶ್ಲೋಕಇತ್ಯಾದಿ ಬಹುಮನ್ನಿಸಿ ಗರುಡನ ಹತ್ತಿದ ಸ್ವಸ್ತ್ರೀ ಸಹನಿತ್ಯಾನಂದಮಯ ಸ್ವರೂಪ ಅಮರಾವತಿಗೆ ಪೋಪನ್ನಕಪೃಥ್ವೀಜಾತನು ಮತ್ತನಾಗಿ ಅಮರರ್ಮೊತ್ತವ ಬಾಧಿಸಲುಇತ್ತೀ ಕಾರ್ಯವ ಬಿಟ್ಟು ಮುಂಚೆ ನಡೆದ ಜೆÉೂೀತಿಷ್ಮತಿಸ್ಥಾನಕೆ 37ಹೋಗಿ ಆ ನರಕನ್ನ ಸೀಳಿ ಭೌಮಿಜಗಿತ್ತನು ಭಾಗ್ಯವಸೌಗಂಧಿಯರ ಷೋಡಶ ಸಹಸ್ರರ ಯೋಗಾರ್ಹರಂ ತಂದನುಶ್ರೀ ಗೋಪೀಜನ ಮೋಹನಾಘಹರಣ ಹೋಗ್ವಾಗ ಸ್ವರ್ಧಾಮಕೆಆಗಿತ್ತಾಕುಂಡಲಅದಿತಿಗೆ ಮ್ಯಾಗಿಂದ್ರನಿಂ ಸಂಪೂಜ್ಯನು 38ಪದಶಚಿಯರಸನು ಪೂಜಿಸಿದ ಮೇಲೆ ರಾಣಿಯಉಚಿತಕೆಮಂದರತರುವಮುಚುಕುಂದವರದನು ತರುತಿರೆ ಅಮರರನಿಚಯಸಹಿತ ಕಾದಿದಿಂದ್ರ 39ಗರುಡನ ಗರಿಯ ಗಾಳಿಯಲೆಲ್ಲರೋಡಿಸಿಧÀರೆಗೆ ತಂದನು ದ್ವಾರಾವತಿಗೆಅರಸಿಯಂಗಳದೊಳು ನಿಲಿಸಿದ ತರುಮೂಲಸರಿ ಲೆತ್ತವಾಡುವ ಎಂದಳಾಗೆ 40ಶ್ಲೋಕಪಾರಿಜಾತದ ಮೂಲ ಚೈತ್ಯದಲ್ಲಿನ ಶ್ರೀರಂಗ ರತ್ನಾಸನಸಾರಿ ಇಬ್ಬರು ಲೆತ್ತವಾಡುವಹರಿನಾರೇರ ಮುಂದೆನ್ನನುಭೂರಿಮಾನಿಯಮಾಡುಸ್ವಾಮಿ ಎನಲು ಕಾರುಣ್ಯ ವಾರಿನಿಧಿಧಾರಿಣಿಯಲ್ಲಿ ಸ್ತ್ರೈಣನೆಂಬರು ಸಖಿ ಈ ರೀತಿ ಮಾಣೆಂದನು 41ನೀ ಲೆತ್ತವನು ವೃಕ್ಷ ಮೂಲದಲಿ ಎನ್ನೊಳಾಡ ಒಲ್ಲೆಂದರೆಮೇಲೀಅಂಬರಭೂಷಣೇಕೆ ವಿಭುವೆ ಮೇಲೀ ಶರೀರೇತಕೆಶ್ರೀಲೋಲ ಶರಣೇಚ್ಛದ ಎನಿಸುವ ನಿನ್ನ ಬಿರುದೇತಕೆಬಾಲೇರ್ಮುಂದಪಹಾಸ್ಯವಾಯಿತೆನುತ ಲೋಲಾಕ್ಷಿ ತಾ ಮುನಿದಳು42ಪದಹಂಸದುಪ್ಪಳದ ಸುಪ್ಪತ್ತಿಗೆ ಮಂಚದಿ ರಾಜಹಂಸಗಮನೆ ಮುನಿದು ಮಲಗೆಮಾಂಶಳು ಕದವನಿಕ್ಕಿದಳು 43ನೀನೆಂದ ಮಾತ ನಡೆಸುವೆ ಮುನಿಯದಿರುಮಾನಿನಿರನ್ನೆ ಕದತೆರೆಯೆಶ್ರೀನಾಥ ಹೀಗೆ ಮನ್ನಿಸಿ ಕದತೆರೆಸಿದ ದಯಾನಿಧಿ ಪ್ರಸನ್ವೆಂಕಟೇಶ 44ಶ್ಲೋಕಲಕ್ಷ್ಮೀ ಭೂರಮಣ ಭವಾಬ್ದಿಮಥನಪಕ್ಷೀಂದ್ರಸದ್ವಾಹನಮೋಕ್ಷಾಧೀಶವಿರಿಂಚಿವಾಯುಫಣಿಭೂ ತ್ರ್ಯಕ್ಷೇಂದ್ರ ದೇವಾಯನವಕ್ಷೋಜಾವರ ಸುಂದರಾಗ್ರಣಿ ವರಲಕ್ಷ್ಮೀ ಮನೋನಾಯಕರಕ್ಷಿಸಿದನು ಸ್ವಸ್ತ್ರೀಯ ನೆರೆದನು ಸಾಕ್ಷಾತ್ ಪ್ರಸನ್ವೆಂಕಟ45ಅನಂತಾಬ್ಬ ಭವಾಂಡ ಹುಟ್ಟಿ [ಸಿ] ಸ[ಲಹು] ವತಾನೇ ಬಯಲ್ಮಾಡುವತಾ ನಿರ್ಲಿಪ್ತ ಸದಾಗಮೈಕ ಸುವಿಜಯಾನಂದ ಪೂರ್ಣಾತ್ಮನುಈ ನಾಟ್ಯವನು ತೋರಿದ ಸುಜನರಿಗಾನಂದ ವೃದ್ಧಿಕರತಾನಾಡಿದನು ಲೆತ್ತವ ಸತಿಗೂಡಜ್ಞಾನಿಪ್ರಸನ್ವೆಂಕಟ 46ಪದಮಂಗಳಾತ್ಮಕ ವಿಶ್ವನಾಟಕವಾಡಿದ ಸತ್ಯಂಗನೆಯೊಳು ಲೆತ್ತದಾಟಅಂಗನೆಷೋಡಶ ಸಹಸ್ರರ ಸೋಲಿಸುವರಂಗ ಪ್ರಸನ್ನವೆಂಕಟೇಶ 47ಶ್ರೀ ಸುರವೃಕ್ಷತಳದಿ ರತ್ನಾಭರಣಮಯನೀ ಸೋತೆ ಸತ್ಯಭಾಮಿನಿಯೆಂದರೆಹರಿನೀ ಸೋತ್ಯೊ ಪ್ರಸನ್ನವೆಂಕಟೇಶ 48ಲೇಶ ಹಾಸದಿ ಜಗತ್ಪ್ಪ್ರಪಂಚವ ತೋರುತ್ತವಾಸುದೇವಪ್ರಕೃತಿ ಗೂಡಿಈ ಶೋಭಿಸುವ ದ್ವಾರಕಾ ನಗರದಲಿದ್ದಪ್ರಸನ್ವೆಂಕಟೇಶನ ನೋಡಿ 49ಅನಂತದೇಶದಿ ಅನಂತ ಕಾಲದಿಅನಂತ ಸದ್ಗುಣಸಾಂದ್ರದೀನ ದಯಾನಿಧಿ ಪ್ರಸನ್ನÉಂಕಟ ಕೃಷ್ಣಮನುಷ್ಯಲೀಲೆಯ ತೋರಿದ 50ಈ ಸತ್ಯಭಾಮಾವಿಲಾಸದ ಪದ್ಯಪದಲೇಸಾಗಿ ನರನಾರಿಯರುತೋಷಭರಿತರಾಗಿ ಪಾಡಲು ಸುಖವೀವಶ್ರೀಶ ಪ್ರಸನ್ನವೆಂಕಟೇಶ 51
--------------
ಪ್ರಸನ್ನವೆಂಕಟದಾಸರು
ಹನುಮಂತ ದೇವ ನಮೋ ಪವನಧಿಯನು ದಾಟಿ ರಾವಣನ ದಂಡಿಸಿದೆ ಅ.ಪಅಂಜನೆಯ ಆತ್ಮದಿಂದುದಿಸಿ ನೀ ಮೆರೆದೆಯೋಕಂಜಸಖಮಂಡಲಕೆ ಕೈ ದುಡುಕಿದೆ ||ಭುಂಜಿಸೀರೇಳು ಜಗಂಗಳನು ಉಳುಹಿದೆ ಪ್ರ-ಭಂಜನಾತ್ಮಜ ಗುರುವೆ ಸರಿಗಾಣೆ ನಿನಗೆ 1ಹೇಮಕುಂಡಲಹೇಮಯಜೊÕೀಪವೀತಖಿಳಹೇಮಕಟಿಸೂತ್ರಕೌಪೀನಧಾರೀ ||ರೋಮ ಕೋಟಿ ಲಿಂಗ ಸರ್ವಶ್ಯಾಮಲ ವರ್ಣರಾಮಭೃತ್ಯನೆ ನಿನಗೆ ಸರಿಗಾಣೆ ಗುರುವೆ 2ರಾಮ-ಲಕ್ಷನರ ಕಂಡಾಳಾಗಿ ನೀ ಮೆರೆದೆ |ಭೂಮಿಜೆಗೆ ಮುದ್ರೆಯುಂಗುರವನಿತ್ತೆ ||ಆ ಮಹಾ ಲಂಕಾ ನಗರವೆಲ್ಲವನು ಸುಟ್ಟುಧೂಮ ಧಾಮವ ಮಾಡಿ ಆಳಿದೆಯೊ ಮಹಾತ್ಮ 3ಆಕ್ಷಯ ಕುಮಾರಕನ ನಿಟ್ಟೊರಸಿ ಬಿಸುಟು ನೀರಾಕ್ಷಸಾಧಿಪ ರಾವಣನು ರಣದಲಿ ||ವಕ್ಷಸ್ಥಳದಲ್ಲಿ ಶಿಕ್ಷಿಸಲು ಮೂರ್ಛೆಯ ಬಗೆಯರಕ್ಷಿಸಿದೆ, ರಕ್ಷಿಸಿದೆ ರಾಯ ಬಲವಂತ 4ಶ್ರೀಮದಾಚಾರ್ಯ ಕುಲದವನೆಂದೆನಿಸಿದೆಯೈಶ್ರೀ ಮಹಾಲಕುಮಿ ನಾರಾಯಣಾಖ್ಯ ||ಶ್ರೀ ಮನೋಹರಪುರಂದರವಿಠಲ ರಾಯನಸೌಮ್ಯಮನದಾಳು ಹನುಮಂತ ಬಲವಂತ 5
--------------
ಪುರಂದರದಾಸರು
ಹೆಣಗಿದರಾಗದು ಒಣತರ್ಕದಲಿದಣಿದರೆ ಕೂಡದು ಭಕುತಿವನಜಾಕ್ಷನ ಕೃಪೆ ಮನಸ್ಸಾಕ್ಷ್ಯಾದರೆತನ ತಾನಾಹದು ಮುಕುತಿ ಪ.ಸೂಕ್ಷ್ಷ್ಮತತ್ವದಿ ದಕ್ಷನೆನಿಸದೆದೀಕ್ಷಿತ ನಾಮಿದ್ದೇನುಅಕ್ಷರಬಲದಲಿ ಲಕ್ಷವು ವೃಥಾಗುರುಶಿಕ್ಷಿಲ್ಲದ ಜನುಮೇನುಭಿಕ್ಷುಕ ಧಾನ್ಯದ ಲಕ್ಷ್ಷ್ಯದಲಿ ಪದ್ಮಾಕ್ಷನ ಪೊಗಳಿದರೇನುಕುಕ್ಷಿಯ ಲಾಭವುಅಕ್ಷಯತೋಷದಮೋಕ್ಷೋಪಾಯವದೇನು 1ದ್ರವ್ಯಾದಿವ್ರಯ ಹವ್ಯಾದಿಕ್ರಯಅವ್ಯಯಜೀವ ಸ್ವಭಾವಾಖ್ಯಕಾವ್ಯರಚನೆ ಶಬ್ದ ವ್ಯಾಕರಣದಹವ್ಯಾಸವು ಇಹ ಸೌಖ್ಯಅವ್ಯಾಕೃತ ನಾಮಾವ್ಯವಹಾರಿಲ್ಲದನವ್ಯ ಕಥಾಜನಸಖ್ಯದಿವ್ಯಮೂರುತಿ ವೇದವ್ಯಾಸಜಭವಸೇವ್ಯನ ನಿಷ್ಠೆಯೆ ಮುಖ್ಯ 2ಕಡು ಆದರದೊಳು ಕಡಲಳಿಯನ ಪದವಿಡಿಯದವನ ಶ್ರುತಿಶಾಸ್ತ್ರನಡುಹೊಳೆ ದಾಟುತ ತಡಿಯಲಿ ನಾವೆಯುಬುಡಮೇಲಾಯಿತು ವ್ಯರ್ಥದೃಢ ಪ್ರಸನ್ವೆಂಕಟ ಒಡೆಯನಾಚ್ಛಿನ್ನ ದಯಪಡೆದನುಗುರುಸುಖತೀರ್ಥನುಡಿಗಳ ಮಾಲೆಯ ತುಡುಗರ ತಮಸಕೆಬಡಿದಟ್ಟುವನು ಸಮರ್ಥ 3
--------------
ಪ್ರಸನ್ನವೆಂಕಟದಾಸರು