ಒಟ್ಟು 177 ಕಡೆಗಳಲ್ಲಿ , 39 ದಾಸರು , 157 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೆಳಿಯೋ ಬೆಳಿ ಮನವೇ ಬೆಳಿಕಂಡ್ಯಾ ಬೆಳಿ ಮನವೇ ಬೆಳಿ ನಿನ್ನ ಹೊಲವನು | ಇಳೆಯೊಳು ಯಣಿಗಾಣದ್ಹಾಂಗೆ 1 ಗುರುವಿನಭಯ ಕೊಂಡು ಸತ್ವದಾ ಹೊಲ ಹಿಡಿದು | ಜರಿದು ಸಂಗಿಗಳನ್ನೆಲ್ಲಾ 2 ವಿವೇಕವೇಯಂಬಾ ನೇಗಿಲ ಎಂಟು | ಭಾವವೆಂಬೆತ್ತುಗಳಿಂದ 3 ದೃಢಪಾಶದಿಂದಲಿ ಕಟ್ಟಿ ಯಚ್ಚರವೆಂಬಾ | ಒಡನೆ ಶಿಕ್ಷದಿ ನಡೆಸುತಾ 4 ಜ್ಞಾನ ಭಕ್ತಿ ವೈರಾಗ್ಯ ತಾಳದ ಬಲದಿ | ಅನನ್ಯ ಭಾವ ಕೂರಿಗೆಯಿಂದಾ 5 ಗುರು ಕರುಣ ಮಳೆ ಗರೆಯೆ ವೇದಾಂತ ಬೀಜ | ಭರದಿ ಬಿತ್ತಿ ನಾದುವಂತೆ 6 ಅನುಮಾನ ಕಸ ತೆಗೆದು ಬೋಧವ ಯಡಿಹಾಯ್ದು| ಧನಗಾಳ ತುಂಬಿಡುವಂತೆ 7 ವರಕ್ಷೋಭ ಯಂಬಾ ನುಡಿ ಹಕ್ಕಿ ಬರಗುಡದೆ | ಪರಮ ಜಾಗೃತಿಯ ಕವಣಿಯಿಂದಾ 8 ಬೇರೆ ಬೇರೆ ದೋರ್ವುದೆಲ್ಲಾ ವಬ್ಬುಳಿ ಮಾಡಿ | ಸಾರಿಹ ಶೃತಿ ವಾಕ್ಯದಿಂದ 9 ದೋರುವಾ ದೃಶ್ಯ ಹೆಕ್ಕಲ ಬಿಟ್ಟು ವಳಗಿರುವ | ತೂರಿ ಅಹಂಭಾವ ಹೊಟ್ಟವನು 10 ದೈನ್ಯವನು ಹಿಂಗಿ ಬಳಕೊಂಡು ಅನ್ಯರಾ ಮರೆ ಹೋಗದಂತೆ 11 ಪರಿಪೂರ್ಣಾದ ಬಳಿಕ ಒಕ್ಕಲು ತನಕ | ಮರುಳೆ ನೀ ಸಿಕ್ಕದಿರು ಕಂಡ್ಯಾ 12 ಸಂಚಿತ ಸರ್ವ ಬಿಡಿಸಿಕೊ ಸುತ ಪ್ರಭು ಗುರು ಮಹಿಪತಿ ವಲುಮೆಯಿಂದಾ 13
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೇಗದಿ ಮುಕುಂದ ಪ. ಮಾಡುವ ಭಾಗ್ಯ ಕರುಣಿಸೊ ಕೃಪೆಯಿಂದ ಅ.ಪ. ನಿರುತ ನಿನ್ನೊಳಗಿಹವು ಸರಸಿಜ ಭವಮುಖರು ನಿನ್ನಪಾಂಗಮಸ್ಮರಣೆಯಿಂದಲಿ ಬಾಳ್ವರು ಪೀತಾಂಬರದಿಸರಿರವ ರೂಪಿಯಾಗಿ ಹೊಂದಿರುವಳು ನಗುತ 1 ನಿತ್ಯ ಸಂತೃಪ್ತರೂಪ ಸಕಲ ಲೋಕ ವ್ಯಾಪ್ತನಾಗಿರುವ ಭೂಪ ಜ್ಞಪ್ತಿ ಮಾತ್ರದಿ ಎನಗೆ ಒಲಿವ ಪರಮಾಪ್ತ ನೀನಿರುತಿರಲು ನೆನೆದು ಮರುಳಾದೆನು ವಿಲಿಪ್ತಿಯ ಸಲಿಸು 2 ತೋರದೊ ವರದ ನಿನ್ನನು ಮರೆದ ಕಾಯುವರ ಕಾಣೆ ನಿನ್ನಾಣೆ ಸಲಹೊ ಪುರಂದರಗೊಲಿದ 3 ಧರ್ಮಮಾರ್ಗವ ತೊರೆದು ಶೃತ್ಯದಿತ ಸತ್ಕರ್ಮಗಳ ಮರೆದು ನಿರ್ಮಲರನು ಜರಿದು ನೀಚರನೆಲ್ಲ ಭರ್ಮಗೋಸುಗ ತರಿದು ಸುಖವ ನೀಗಿ ನಾ ಬಾಗಿ ಕೂರ್ಮನಂತಿರುವೆ 4 ಆಸೆಯೆಂಬುದು ಎನ್ನನು ನಾನಾವಿಧ ಕ್ಷೇಶಬಡಿಸುವುದಿನ್ನು ಘಾಸಿಗೆ ಒಳಗಾದೆನು ಕೈಯಲಿ ಒಂದು ಕಾಸಿಲ್ಲದವನಾದೆನು ಶ್ರೀಶ ನೀ ಕರುಣಿಸಿನ್ನು ಸದ್ಗತಿಯನ್ನು ಸುಜನಪಹಾಸಗೊಳಿಸದೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಭವ ಕೂಪನಿ ಪತಿತಂ ಪ ಘೊರ ದುರಿತಹರ ಚಾರುಚರಣಯುಗಲಂ ಪ್ರಣ ಮಾಮಿ ತ್ರಿಕಾಲಂ ಅ,ಪ ಕಾರ್ಪರ ಋಷಿಕೃತ ಘೋರ ತಪ:ಪ್ರೀತ ಅ- ತ್ರಾವಿರ್ಭೂತ ಕಾರ್ಪರ ಗ್ರಾಮೇತೀರ ಗತಾಶ್ವತ್ಥ ಪೇಣ ಸಮಸ್ತ ಆರಾಧಕ ನಿಜಭಕ್ತ ಜ- ನಾಭಿಷ್ಟ ವರ್ಷಣ ಸರ್ವೇಷ್ಟ ನಾರಾಯಣ ಮುನಿ ಪೂಜಿತ ಸುರವ್ರಾತ ಸಂಸ್ತುತ ಶುಭಚರಿತ 1 ಸಾಕ್ಷಾಚ್ಛ್ರೀರ ಪಿವೀಕ್ಷ್ಯಾದ್ಭುತರೂಪಂ ತವ ಪ್ರಕಟಿತ ಕೋಪಂತ್ರ್ಯಕ್ಷಾದ್ಯಮರೈ:ಪ್ರೇಷಿತಾಪಿ ಸ್ವ¥ತಾ ಶಂಕೆ- ತೇವ ತಸ್ಥಾ ರಕ್ಷಿತÀವಾನಭಿ ವೀಕ್ಷ್ಯ ಪ್ರಹ್ಲಾದಂ ಕೃತ್ವಾಪ್ರ ಸಾದಂ ಲಕ್ಷ್ಮೀಧವಖಲ ಶಿಕ್ಷಣ ತವಚರಿತಂ ಜ್ಞಾಪಯಮೇ ಸತತಂ 2 ಭಕ್ತಿಂದೇಹಿ ಪ್ರಶಸ್ತಾಂತ್ವಯಿ ಕೃಪಯಾ ಚಿಂತಿತ ದುರ್ವಿಷಯಾ ಸಕ್ತಿಂಜಹಿ ಸದ್ಭಕ್ತ ಚಿತ್ತನಿಲಯ ಕಾಯಾಧವ ಪ್ರಿಯ ಶೃತಿಪುಟಸಂಭೃತಯಾ ಮುಕ್ತಾ ಮುಕ್ತ ಸಮಸ್ತ ಜಗತ್ಕಾಯಾ ಸುರಗಣ ಸಂಶೇವ್ಯಾ3 ಸುಜನಾರ್ತಿಹರಣಾ ವೃಕ್ಷಾದವತೀರ್ಣ ಮದೃತ್ತಿಮಿರ ಪ್ರದ್ಯೋತನಕಿರಣ ಸನ್ನಿಭಶುಭ ಚರಣ ಷಡ್ಗುಣಸಂಪನ್ನ 4 ಮಂಗಳ ಕೃಷ್ಣ ತರಂಗಿಣೆ ಕೂಲಸ್ಥ ಅಶ್ವತ್ಥೋದ್ಭೂತ ತುಂಗವದನ ಬಹು ಶಾಲಿಗ್ರಾಮಗತ ಷೋಡಶ ಬಾಹುಯುತ ಮಾತಂಗ ಸಂಗೀತಪ್ರಿಯ ಮಂಗಳತರಚರಿತ ಶತಿತತಿ ವಿಖ್ಯಾತ 5
--------------
ಕಾರ್ಪರ ನರಹರಿದಾಸರು
ಭಾರತೀದೇವಿಯ ಸ್ತೋತ್ರ ಮಾರುತನ್ನ ಜಾಯೆ - ಮೊರೆಯ ಹೊಕ್ಕೆನು ಕಾಯೆ ಪ ಮಾರಾಂತಕ ಶಂಬರಾರಿ ಭಿದುರಧರತಾರೇಶ ಶರವಿನುತೇ ಅಮ್ಮಯ್ಯ ಅ.ಪ. ಭ್ರಮರ ಕುಂತಳೆ ಜಾಣೆ ಅಮರ ವಂದಿತ ಚರಣೆಸುಮನಸೇಶನ ಪದಕಮಲ ಪೂಜಿಪುದಕೆವಿಮಲಮತಿಯನೀಯೇ ಅಮ್ಮಯ್ಯ 1 ಶೃತಿದೇವಿಯಲ್ಲಿ ಸುತೆಯಾಗಿ ಜನಿಸಿದೆಸತತ ಎನ್ನಯ ದುರ್ಮತಿ ಖಂಡಿಸಿ ಸು-ಮತಿವಂತನ ಮಾಡೇ ಅಮ್ಮಯ್ಯ 2 ಎರಡೇಳು ಭುವನ ಜಠರದೊಳಗಿಂಬಿಟ್ಟಪರಿಪೂರ್ಣ ಕಾಮ ಶ್ರೀ ಮೋಹನ ವಿಠ್ಠಲನಚರಣ ಭಕುತಿಯನೀಯೇ ಅಮ್ಮಯ್ಯ 3
--------------
ಮೋಹನದಾಸರು
ಭಾವಯ ಭವಭಾವಿತ ಚರಣಂ ಭವಭಯಾಪರಿಹರಣಂ ಪ ಭಾವದಂ ಹೃದಿ ಅ.ಪ ವ್ಯಾಘ್ರಭೂಮಿಧರಾಗ್ರ ವಿಹರಣ ಮಗ್ರಜನಶರಣ್ಯಂ ಶೀಘ್ರಫಲದಮುದಗ್ರಪೌರುಷ ವಿಗ್ರಹಂ ಸುರಾಗ್ರಗಣ್ಯಂ 1 ಕುಂಡಲೀ ಫಣ ಮಂಡಲಾಶೃತ ಮಂಡಜಾತಗಮನಂ ಹಿಮಕರ ಮಂಡಲ ವದನಂ2 ರಾಮಮಿನಕುಲ ಸೋಮಮಾಶ್ರಿತ ಪ್ರೇಮಮಾಂಜಿಭೀಮಂ ಶ್ಯಾಮಜಲಧರ ಕೋಮಲಂ ಗುಣ ಧಾಮಮೀಸ ಪ್ರೇಮನಾಮಂ 3 ನಂದನಂದನ ಮಿಂದಿರಾ ಹೃದಳಿಂದ ಲೋಲ ಮಿಳಿಂದಂ ಕುಂದರದನ ಮಮಂದ ಕರುಣಾನಂದಿತಾ ಶಿಲಲೋಕವೃಂದಂ 4 ಸಾರನಿಗಮವಿಹಾರ ಕುಶಲಮುದಾರ ವರದ ವಿಠಲಂ ಭೂರಮಾಕುಚಕೊರ ಕಾಂಚಿತ ಚಾರುಮುಕ್ತಹಾರ ಪಟಿಲಂ 5
--------------
ಸರಗೂರು ವೆಂಕಟವರದಾರ್ಯರು
ಭೃಂಗ ಕುಂತಳೆಯರು ಮುಯ್ಯ ತಂದಾರೆಂದು ಪ. ಅಂದದ ವಸ್ತವಧರಿಸಿ ದೂತೆ ಚಂದದ ಸೀರೆ ಶೃಂಗರಿಸಿಇಂದಿರೇಶಗೆ ನಮಸ್ಕರಿಸಿತಾನು ಬಂದಾಳೆ ದ್ರೌಪತಿ ಸ್ಮರಿಸಿ 1 ಬಾಗಿಲಿಗೆ ಬಂದಾಳು ನೋಡಿದ್ವಾರಪಾಲಕಗೆ ಉಚಿತವ ಹೇಳಿಹೊನ್ನುಂಗುರಆತಗೆ ನೀಡಿಒಳಗೆ ಪೋದಳು ಹರಿಯ ಕೊಂಡಾಡಿ2 ವಂದಿಸಿ ಯದುನಾಥನಢಿಗೆಮಂದಹಾಸವ ಬೀರಿದೂತೆಯಡೆಗೆಬಂದಾರೈವರೆಂಬೊ ನುಡಿಗೆಆನಂದ ಬಟ್ಟ ಕೃಷ್ಣ ಬ್ಯಾಗನೆ3 ವೇಗದಿ ರುಕ್ಮಿಣಿಗೆಬಾಗಿ ಸುದ್ದಿ ಹೇಳಿ ಮುಯ್ಯದ ಬಗಿ ಬಗಿನಾಗವೇಣಿಯು ಹರುಷಾಗಿಕರೆಯ ಬರತೇವಂತ್ಹೇಳೆ ಹೋಗಿ4 ಪುತ್ಥಳಿ ಮನಕೆ ತಾರೆಂದು 5 ಗುರ್ತು ಹೇಳುವೆ ಕೇಳೊ ದೊರೆಯೆ ಕೃಷ್ಣಚರ್ಚೆ ಮಾತಿನ ಚಮತ್ಕಾರಿಯೆಶೃತ್ಯರ್ಥದಾ ಮಳೆಗರಿಯೆಪ್ರತಿಯುತ್ತರವಕೊಡೋದು ಮರಿಯೆ 6 ಕೋಕಿಲ ಸ್ವರದಂತೆ ಅಳಕು ಹರುಷಾಗಿರಾಮೇಶಗ್ಹಾಕಿ ಮಲಕುಆಗಮಾ ತರತಾಳೆ ಮಲಕುಎಲ್ಲಾ ನಾರಿಯರು ಅಕೆಗೆ ಅಳಕು 7
--------------
ಗಲಗಲಿಅವ್ವನವರು
ಮಂಗಳಂ ವೆಂಕಟೇಶಗೆ ಅಲಮೇಲ್ ಮಂಗಾ ಮನೋಹರಗೆ ಪ ಭವ ಶುಭ ಅ.ಪ ಆಕಾಶರಾಯನಳಿಯಗೆ | ಪಿ ಲೋಕವಿಶೃತಗೆ ಶ್ರೀ ಭೂರಮಣಗೆ 1 ತೊಂಡಮಾನ ನೃಪ ಪೂಜಿತಗೆ | ಬ್ರ ಕುಂಡಲಿ ಶಯನಗೆ ಗೋಪಾಲಗೆ ಮೃ ದ್ಭಾಂಡವ ರಚಿಸುವಗೆ ಭೀಮಗೊಲಿದವಗೆ 2 ವರ ಚಕ್ರಗಧಾಧರ ಹಸ್ತಗೆ 3
--------------
ಗುರುರಾಮವಿಠಲ
ಮಂಗಳಂ ಶ್ರೀರಂಗಗ ಮಂಗಳಂ ಇಂಗಿತ ಭಕ್ತರ ಅಂಗಸಂಗಾದವಗ ಪ ಸಿರಿತಳಕ ಮಂಗಳ ಕಾಲಿಯ ವರದನಾ ವರನಖಮಂಗಳ ಗಂಗೆ ಪಡಿದನಾ ಚರಣ ಕಮಂಗಳ ಅಹಿಲ್ಯ ಉದ್ಧಾರಗ ನೆರೆಜಂಘಗೆ ಮಂಗಳೆ ಶೊದಾನಂದನಾ 1 ತೊಡೆಗಳಿಗೆ ಮಂಗಳ ಗರುಡ ವಾಹನನಾ ನಡುವಿಗೆ ಮಂಗಳ ಧೃವ ಗೊಲಿದನ ಒಡಲ ಕಮಂಗಳ ಜಗವಳ ಕೊಂಬನಾ ಧೃಡ ನಾಭಿಗೆ ಮಂಗಳ ಬ್ರಹ್ಮ ಪಿತನಾ 2 ಉರ ಸಕ ಮಂಗಳ ಉಪಮನ್ಯು ಪ್ರೀಯನಾ ಸಿರಿವಕ್ಷಕ ಮಂಗಳ ಭೃಗು ರಕ್ಷನಾ ಕರಗಳಿಗೆ ಮಂಗಳ ಕರಿರಾಜ ವರದನಾ ಕೊರಳಿಗೆ ಮಂಗಳ ತುಳಸಿ ಧರನಾ 3 ಇದು ಶೃತಿಗೆ ಮಂಗಳ ಹನುಮನೇ ಕಾಂತನಾ ವದನಕ ಮಂಗಳ ವಿದುರ ಗೊಲಿದನಾ ಅದೇ ಫ್ರಾಣಕೆ ಮಂಗಳ ಪ್ರಲ್ಹಾದ ವತ್ಸಲನಾ ಮದನ ಮೋಹನನಾ 4 ಸಿರಸಕ ಮಂಗಳ ಫಣಿರಾಜಶಯನನಾ ದೊರೆತನಕ ಮಂಗಳ ಶ್ರೀ ಭೂರಮಣನಾ ಗುರುತನಕ ಮಂಗಳ ಉದ್ಬವತಾರಕನಾ ಕರುಣಿಗೆ ಮಂಗಳಾರ್ಜುನ ಬೋಧನಾ 5 ಪ್ರಭುಗೆ ಮಂಗಳ ಬಲಿ ವಿಭೀಷಣರ ಸ್ಥಾಪನಾ ಅಭಯಕ ಮಂಗಳಾಜಮೀಳ ಪಾಲನಾ ಅಭಿಮಾನಿಗೆ ಮಂಗಳಾ ಪಾಂಚಾಲಿಕಾಯಿದನಾ ಪ್ರಭೆಗೆ ಮಂಗಳಾ ರವಿ ಸೋಮಾತ್ಮಕನಾ 6 ಸಿರಿನಾಮಕ ಮಂಗಳ ನಾರದ ಪ್ರೀಯನಾ ಕ ಮಂಗಲ ಶಿವ ವಂದ್ಯನಾ ಗುರುವರ ಮಹಿಪತಿ ನಂದನಸಾರಥಿ ಬಿರದಿಗೆ ಮಂಗಳಾಂಬರೀಷ ನೊಡಿಯನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮದನ ಜನಕ ಹೃದಯ ನಿಲಯಕೆ ಮುರವÀುಥನ ಪ ಆದರದಲಿ ಉಪಚರಿಸುವೆನು ಕಲಿ ಬಾಧೆಯ ಪರಿಹರಿಸೋ ಮಧುಸೂದನ ಅ.ಪ ಪೂರ್ಣಸದಾಗಣಿತೇಡ್ಯಗುಣಾನುಭ ವೈಕಶರೀರ ಕಲುಷದೂರ ಚೀರ್ಣ ಪುಣ್ಯಚಯದಿಂದ ಕರೆಯಲು ತ್ರಾಣವಿಹುದು ಮನ್ಮನದಲಿ ನೆಲಿಸೊ 1 ಶಮದಮಗಳನುಗ್ರಹಿಸುತ ಸಜ್ಜನ ಸಮಿತಿಯ ಸಹವಾಸವ ನೀಡೋ ಅಮಿತಪ್ರಮತಿಗಳ ಶಾಸ್ತ್ರಪ್ರವಚನದಿ ಮಮತೆಯ ಸ್ಥಿರಪಡಿಸೊ ಶೃತಿಪತೇ 2 ಗುರುಕರಣವು ನಿನ್ನನರಿಯಲು ಕಾರಣ ಶರಣಂಭವ ಸಂತತ ಹಿರಿಯರು ಮಾಡಿದ ಸಾಧನಗಳಿಗಿದು ಹಿರಿದಾಗುವುದೇ ಪ್ರಣತ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಮಂದಾಸಲ ರಗಳೆ ರಾಮ ಪದಾಂಬುಜ ಭೃಂಗಗೆ ಜಯ ಜಯ ತಾಮಸ ಕುರುಕುಲ ಧ್ವಂಸಕ ಜಯ ಜಯ ಶ್ರೀ ಮತ್ಪೂರ್ಣ ಪ್ರಜ್ಞಗೆ ಜಯ ಜಯ 1 ವಾಸುದೇವ ಸುನಾಮಕ ಜಯ ಜಯ ದೋಷ ಜ್ಞಾನ ವಿನಾಶಕ ಜಯ ಜಯ ಸೂರ್ಯ ವ್ಯಾಸ ಸುಭೋಧೆಯ ದರ್ಪಣ ಜಯ ಜಯ 2 ಶುಭಗುಣಲಕ್ಷಣ ಶೋಭಿತ ಜಯ ಜಯ ಭವ ಮೋಚಕ ಜಯ ಜಯ ಇಭವರದಾಜ್ಞಾಧಾರಕ ಜಯ ಜಯ ವಿಭುಧ ಸುಖಾಂಬುಧಿ ಸೋಮನೆ ಜಯ ಜಯ3 ನಿತ್ಯ ಸದಾಗಮ ಕೋಶಗೆ ಜಯ ಜಯ ಸತ್ಯವತೀಸುತ ಪ್ರೀಯಗೆ ಜಯ ಜಯ ಸತ್ಯಾಖ್ಯಾತ ಸುಮಿತ್ರಗೆ ಜಯ ಜಯ ಸುರತರು ಜಯ ಜಯ 4 ಅಚ್ಚುತ ಪ್ರೇಕ್ಷರ ಶಿಷ್ಯಗೆ ಜಯ ಜಯ ಸ್ವಚ್ಚಗುಣಾರ್ಣವ ಋಜುಪತಿ ಜಯ ಜಯ ಕೆಚ್ಚೆದೆ ವೀರಾಗ್ರೇಸಗೆ ಜಯ ಜಯ ಪಾವಕ ಜಯ ಜಯ 5 ಶೃತಿತತಿ ವಿಮಲ ಸುಭೋದಕ ಜಯ ಜಯ ರತಿಪತಿ ಪಿತವರ ದೂತಗೆ ಜಯ ಜಯ ಕ್ಷಿತಿಧರ ದ್ವಿಜಶಿವವಂದಿತ ಜಯ ಜಯ 6 “ಶ್ರೀ ಕೃಷ್ಣವಿಠಲ” ಸದಾರತ ಜಯ ಜಯ ಲೋಕ ಹಿತಪ್ರದ ನಿಜಗುಣ ಜಯ ಜಯ ಶ್ರೀಕರ ಶುಭಕರ ಜಯಕರ ಜಯ ಜಯ ಆಕಮಲಾಸುತ ರಯೀಪತಿ ಜಯ ಜಯ 7
--------------
ಕೃಷ್ಣವಿಠಲದಾಸರು
ಮರತರ ತಾ ಮರವಲ್ಲದು ನೋಡಲು | ಅರತರತಾ ಅರವಲ್ಲದು ನಿಜದೊಳು | ಘನದರುವೇ ತಾನಾಗಿ | ಕುರುವಿನೊಳಿರುವಾಗಿಹ ಸ್ವಾನಂದದಿ | ತೆರವಿಲ್ಲದೆ ಸಲೆ ತುಂಬಿತುಳುಕುತಿಹ | ಜಯ ಜಯತು 1 ತೋರುವ ದೃಶ್ಯವ ಕಾಂಬುವ ನಯನಕ | ಸಾರಿಯಮನವನು ನೋಡುವ ಬುದ್ಧಿಗೆ | ನಿತ್ಯ ನಿರಂಜನ ವಿಶ್ವ ಭರಿತನೆಂದು || ಸಾರುವ ಶೃತಿಯಿಂದಾತ್ಮ ಪ್ರಚೀತಿಯ | ಭವ | ವಾರಿಸಿ ಚಿತ್ಸುಖಲಿರಿಸಿದ ಮಹಿಪತಿ | ಸದ್ಗುರು ಜಯ ಜಯತು 2 ಮೊದಲಿಗೆ ಜಯದಾರ್ಜ ಲಕ್ಷಣವನು | ಹೃದಯದಿ ನೆಲೆಗೊಳಿಸಿ | ಇದರದರಿಸಿ ಭವದ್ಹೆದರಿಕೆÉ ಹಾರಿಸಿ | ಸದಮಲ ಬ್ರಹ್ಮನ ಕಳೆಯನು ತೋರಿಸಿ | ಗುರುಮೂರ್ತಿಗೆ ಶರಣು 3 ಆಡುವ ರೇಚಕ ಪೂರ್ವಕ ನಂದಿಯ | ಜೋಡಿಸಿ ಯರಡನೆ ಮೆರೆವಸುಷಮ್ನಿಯ | ನಿಜವiನ ಸಾರಥಿಯಾ | ಕೂಡಿಸಿ ಹರುಷದ ತೇರಿ ನಡಸುತ ಸ | ಫಾಡಿರೆಯಿಂದಲಿ ಮೇಲ್ಗಿರಿಯಾತ್ರೆಯ | ಗುರುಮೂರ್ತಿಗೆ ಶರಣ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮರದೆನೋ ಯನ್ನ ಶ್ರೀಹರಿಯೇ ಭಕ್ತರಿಸಿರಿಯೇ ಸ್ಮರಿಸುವರ ಧೊರಿಯೇ ಭಜಿಸವರನ ಬಿಡದಲೆ ಬಿರುದು ನಿನ್ನದೆಂದು ಪೇಳುತಿರೆ ಶೃತಿ ಪ ತಂದೆ ಕಂದನ ಭಾದಿಸಲು ಶ್ರೀಧರ ಬೇಗ ಬಂದೆನ್ನ ಸಲಹೆನ್ನಲು ಮಂದರಧರ ವಳಿ- ತೆಂದು ಸಂಧಿಸಿ ಕಾಲದ್ವಂದ್ವ ರೂಪವನೇ ಕರುಣಾಸಿಂಧು ಶ್ರೀಹರಿ 1 ಅಂದು ಅಜಾಮಿಳನು ಅಕ್ಷರದ್ವಯದಿಂದ ಮುಕ್ತನಾದನು ಕುಂದರದನ ದ್ರೌಪದಿ ಮಾನಕಾಯಿದಿ ಇಂದಿರೇಶನೆ ಮುದದಿ ಭವ ಬಂಧನದಿ ಬಲುನೊಂದೆನೋ ಇಂದು ವದನ 2 ಘನತರ ಶಿಲೆಯಾಗಿರಲು ಪಾದಸ್ಮರಿಸಲಾಕೆಯು ದುರಿತ ಕರಿವರದ 'ಹೆನ್ನೆಯ ಉರಗಶಯನಾಂಬುರುಹ ನಯನ 3
--------------
ಹೆನ್ನೆರಂಗದಾಸರು
ಮರುಳು ಜೀವ ಏನು ಕಾಣುವೆ ಕೊನೆಗೆ ಪ ಸರ್ವಸಮರ್ಪಣೆ ಮಾಡದೆ ಇದರೊಳು ಅ.ಪ ಯಮನವರೆಳೆಯದೆ ಬಿಡುವರೆ ಛೀ ಹುಚ್ಚಾ 1 ಇಂದ್ರಿಯಂಗಳು ನಿನ್ನಾಧೀನವಲ್ಲ ಬಂದಮಾರ್ಗ ಸುಖ ಮರೆತು ಹೋದೆಯಲ್ಲ ಮುಂದಿನ ಗತಿ ಗೋತ್ರ ಮೊದಲಿಗೆ ಇಲ್ಲ ಮುಪ್ಪುತನವು ಹತ್ತಿರೇ ಬಂದಿತಲ್ಲ 2 ಕರ್ಮವೆಂಬುವುದೊಂದು ಅನಾದಿಯಾಗಿ ಧರ್ಮವ ಗಳಿಸುವವನೆ ಪರಮತ್ಯಾಗಿ ನಿರ್ಮಲ ಮನದಿ ದುರಾಶೆಯ ನೀಗಿ ಮರ್ಮವನರಿತುಕೊಂಡವನೇ ಮಹಾಯೋಗಿ3 ಭೋಗದಾಸೆಯ ಬಿಡು ಮೂರುದಿನದ ಬಾಳು ಕೂಗುತಿಹವು ಶೃತಿ ಸ್ಮøತಿಪುರಾಣಗಳು 4 ಸತಿಸುತರನು ನಾನೆ ಸಾಕುವೆನೆಂದು ಮತಿಗೆಟ್ಟು ಭ್ರಾಂತಿ ಹೊಂದುವೆ ನೀ ಮುಂದು ಮಿತಿಯ ಬರಹ ತಪ್ಪುವುದಿಲ್ಲ ಎಂದು ಪತಿ ಗುಣಸಿಂಧು 5 ಆಹಾರ ನಿದ್ರೆಯಲ್ಲವೆ ನಿನ್ನ ಆಟ ಸಾಹಸ ನೋಡೆ ಮಾಳಿಗೆಯ ಓಡ್ಯಾಟ ಮೋಹದಿಂದಲಿ ಮುಂದೆ ಬರುವುದು ಗೂಟ ಮೂಜಗದೊಳಗೆಲ್ಲಾ ಇದು ಗೊಂಬೆ ಆಟ 6 ಕಾಮಕ್ರೋಧಗಳು ಬಿಡಲಾರೆಯೇನೊ ಪಾಮರ ಜೀವ ಅಸ್ವಾತಂತ್ರಾ ನೀನೊ ಯಾಮಯಾಮಕೆ ಗುರುರಾಮವಿಠಲನಂಘ್ರಿ ನೇಮದಿಂದಲಿ ಭಜಿಸಿ ಸುಖವಾಗುವುದು ಕಾಣೊ7
--------------
ಗುರುರಾಮವಿಠಲ
ಮಾರಕೋಟಿ ಸುಂದರಾಂಗ ಪ ಸರುವಾಂತರಯಾಮಿಯೆಂದು ಶೃತಿಯು ನಿನ್ನ ಪೊಗಳವೆಅ.ಪ ಬಲ್ಲಿದನೀ ಒಳಗೆ ಇದ್ದು ಬರಿದೆ ಬನ್ನಬಡಿಸುವರೆ 1 ಶರಣಾಗತ ಪ್ರಾಣನೆಂಬ ಬಿರುದು ಪೋಗದೆ ನಿನಗೆ 2 ಮ್ಮಪ್ಪಕಾಯೊ ಶ್ರೀ ಗುರುರಾಮ ವಿಠಲರಾಯ ಸ್ವಾಮಿ 3
--------------
ಗುರುರಾಮವಿಠಲ
ಮುಳಬಾಗಲುರಂಗಸ್ವಾ'ುೀ ಯಮ್ಮನುಳುಹಬೇಕು ಭಕ್ತಪ್ರೇ'ುೀ ಪನಳಿತೋಳು ಕಳೆಮುಖ ತಲೆಗೆ ಕಿರೀಟವುನಳಿನಲೋಚನಮೂರ್ತಿ ಕಳೆುಂದ ಬೆಳಗುವೆಅ.ಪಅದ್ವೈತ ಶಾಸ್ತ್ರಾನುಭವರು ನಮ್ಮಅಣ್ಣಯ್ಯಸ್ವಾ'ುಯ ಸುತರೂಸಾಧ್ವೀಗುರ್ರಮಗರ್ಭಾಂಬುಧಿ ಶಶಿಯಾಗಿಸದ್ವಿಲಾಸದೊಳು ಸಂಜನಿಸಿದ ಚಲುವ 1ಕೃತ್ತಿಕಾನಕ್ಷತ್ರ ಪ್ರಥಮಾ ಪಾದತಿಥಿಯು ದ್ವಾದಶಿ 'ಭವನಾಮಾ'ತವಾದ ಧನುರ್ಮಾಸ ಸ್ಥಿರವಾರದುದಯದೊಳ್‍ಪೃಥಿ'ೀಪಥನವಾದ ಪರಮಪುರುಷಮೂರ್ತಿ 2ಸದ್ಗುಣದಾಟಿನೋಟಗಳೂ ಶಾಸ್ತ್ರ'ದ್ಯ ಸಂಯೋಗಪಾಠಗಳೂ ಸದ್‍ವೃದ್ಧಿ ಸ'ಯ ವ್ಯಾಪಾರ ವರ್ಜಿತಮಾಡಿಶುದ್ಧವೈಷ್ಣವ ತುಲಸಿರಾಮರ ಭಜಿಸುವ 3ಹರಸೀ ವಾಗೀಶಕಿರೀಟಾ ಗುರುಪರಂಪರೆ ಕಥೆನುಡಿದಾಟ ಹರುಷದಿ ಮೆಚ್ಚಿಸಿ ಧರಿಸಿ ಕಿರೀಟಾ ನಿರುಪಮ ಪರತತ್ವದೊಳಗೆ 'ಶೇಷಾ 4ಪರಕಾಲಮಠಕಾಗಾ'ುಸಿದೇ ಜನರತರುಣೋಪಾಯಗಳ ಮಾಡಿಸಿದೇತಿರುಮಂತ್ರಸಂಸ್ಕಾರ ಚರಮಾರ್ಥದೊರಕಿಸಿಪರಮಪಾವನರಾಗಿ ಮಾಡುತಲಿರುತಿಹ 5ವರಯತಿಗುರುಗಳ ಭಾಷಾ ಪೂರ್ಣಪರತತ್ವಬೋಧೆ ಗುಣಭೂಷಪರಮಾನುಭವಜ್ಞಾನ ಅರು' ಭಕ್ತರನೆಲ್ಲ ಪರಲೋಕಸಾಧನ ಅರಿವು ತೋರಿಸುವಂಥಾ 6ಚನ್ನಪಟ್ಣಾದಿರಾಮಕೋಟಿ ಅಲ್ಲಿಜನಕೆನೀ ತುಂಬಿದೆ ನಾಟಿಮುನ್ನುಮಾಡಿದ ಪಾಪವೆಲ್ಲವು ಪರಿಹಾರವುನ್ನತಮಾರ್ಗವ ತೋರಿದ ಗುರುದೇವ 7ರಾಮಕೃಷ್ಣೋತ್ಸವಗಳನೂ ಬಹುಪ್ರೇಮದಿನಡೆಸಿದಾದರನೂಆಮಹಾ ಕಾರ್ಯಕಾತುರದುರಂಧರನೂುೀಮ'ಯೊಳು ಪ್ರಖ್ಯಾತನಾಗಿಹನೂ 8ಪುರಪುರಗ್ರಾಮಗಳಲ್ಲಿ ಗುರು ತಿರುನಕ್ಷತ್ರೋತ್ಸವವಲ್ಲಿಪರಮವೈಭವದಿಂದ ಸ್ಥಿರವಾಗಿ ನಡೆಯಲುಹರುಷದಿ ಸೌಲಭ್ಯ ದೊರಿಕಿಸಿ ಇರುವಂಥಾ 9ಪ್ರತಿವರ್ಷ ಧನುರ್ಮಾಸ ಭಜನೇ ಒಳ್ಳೆಶೃತಿಮೃದಂಗವು ತಾಳರಚನೇಸತತವು ಹರಿಕಥೆ ತೀರ್ಥಪ್ರಸಾದವು'ತಕರಗುರುಸೇವಾ ದುರಂಧರಬಿರುದುಳ್ಳ 10ಭರತಪುರೀವಾಸಶ್ರೇಷ್ಟಾ ಗುರುವರತುಲಸಿರಾಮ ಪ್ರತಿಷ್ಠಾಪರಿಪರಿತತ್ಸೇವಾನಿರತ ಸಂತುಷ್ಟಾಗುರುಪಾದಸರಸಿಜ ಭೃಂಗಾವೆ ಸ್ವಷ್ಟಾ 11ಅಪರೋಕ್ಷಜ್ಞಾನ ಸಂಪೂರ್ಣ ಜನ್ಮಸಫಲಮಾರ್ಗದಲ್ಲಿ ಉತ್ತೀರ್ಣಾ ಅಪರಾಧಗಳನು ಮನ್ನಿಸಿ ಶ್ರಿತಜನರನ್ನುಸಫಲಗೊಳಿಸಿ ಜನ್ಮಸಾರ್ಥಕಪಡಿಸುವ 12ಪತಿತಪಾಮರರಿಗೆಯೆಲ್ಲಾಪ್ರತಿಫಲ'ಲ್ಲಾದುಪದೇಶ ಬಲ್ಲಾ'ತಕರವಾಗಿ ತೋರ್ಪುದು ಶಿಷ್ಯಜನಕೆಲ್ಲಾ ಸತತವು ತವಪಾದ ಗತಿಮೋಕ್ಷದಾಯಕ 13ಜ್ಞಾನಭಕ್ತಿಯು ವೈರಾಗ್ಯ ಸುಜ್ಞಾನದಿ ತುಳುಕುವ ಭಾಗ್ಯಮಾನವ ಜನ್ಮದಿ ಅವತರಿಸಿರುತಿಹದೀನರ ಮುಕ್ತಿಗೆ ಕಾರಣವಾಗಿಹ 14ಅಂಗ ದ್ವಾದಶನಾಮಧಾರಾ ಬಹುಶೃಂಗಾರತರ ಮಕುಟಾಂಬರಾರಂಗುಮಂಟಪದಿ ಲಂಘಿಸಿ ರಾಗ ಪಾಡುತ್ತಮಂಗಳಕರ ತುಲಸಿನಳಿನಾಕ್ಷಹಾರುಳ್ಳ 15ಗೃಹಮಣಿ ಸುಬ್ಬಾಂಬನವರೂ ನಿಮ್ಮಮಹದಾಂಶ ಸುಗುಣವಂತೆಯರುಸಹಚರಿಸುತ ಪುರಗ್ರಾಮ ಮಾದರಿಯಾಗಿಸಹಪತ್ನಿಸ'ತ ಭಕ್ತರನು ಪಾಲಿಸತಿರ್ಪಾ 16ದಿನಚರಿಬರುವ ದಾಸರನೂ ಮನದನುವಾರಿತಾನ್ನದಾನವನೂಮನದೊಳು ಭಕ್ತರವೊಡಲ ಪರೀಕ್ಷಿಸಿಘನವಾದ ಮೋಕ್ಷಾರ್ಹವಾದನರ ಕೈಪಿಡಿದ 17ಅಂಕಿತಮಾಡದೆ ುಹೆನೂ ಚಕ್ರಾಂಕಿತ 'ಲ್ಲದ್ಯೋಚಿಪೆನೂ ಕಿಂಕರನಾಗಿ ಬೇಡುವೆ ಪಾದವನೂಅಂಕಿತಕನುವiತಿ ಆಗಹೊಂದುವೆನೂ 18ಸೋಮೆಗೌಡನ ಪುರವಾಸಾ ರಂಗಸ್ವಾ'ುದಾಸರ ದಾಸದಾಸಪ್ರೇಮಭೈರವಗೌಡನೊಳಗೆ ತೋರಿಸಬೇಕು ಸ್ವಾ'ುನಿನ್ನಾಜ್ಞೆಗೇ ಬಾಗಿದಂಕಿತ'ದು19
--------------
ಮಳಿಗೆ ರಂಗಸ್ವಾಮಿದಾಸರು