ಒಟ್ಟು 301 ಕಡೆಗಳಲ್ಲಿ , 71 ದಾಸರು , 247 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಯದಿ ಎಮ್ಮನು ಸಲಹ ಬೇಕಯ್ಯ | ಮಳಖೇಡ ನಿಲಯ ದಯದಿ ಎಮ್ಮನು ಸಲಹ ಬೇಕಯ್ಯ ಪ ದಯದಿ ಎಮ್ಮನು ಸಲಹ ಬೇಕೈ | ವಿಯದಧಿಪ ಸದ್ದಂಶ ಸಂಭವ ಭಯ ವಿದೂರನ ತೋರು ಎನುತಲಿ | ಜಯ ಮುನೀಂದ್ರನೆ ಬೇಡ್ವೆ ನಿನ್ನನು ಅ.ಪ. `ಇಂದ್ರಸ್ಯನು ವೀರ್ಯಾಣ’ ಎಂದೆನುತ | ಇತ್ಯಾದಿಋಕ್ಕುಗಳಿಂದ ಬಹುತೆರೆ ನೀನು ಪ್ರತಿಪಾದ್ಯ ||ಅಂದು ಮೇಘದ ಜಲವು ಬೀಳದೆ | ಬಂಧಗೈದಹಿನಾಮ ದೈತ್ಯನಕೊಂದು ಉದ್ಧರಿಸಿರುವ ಪರಿಯಲಿ | ಮುಂದೆ ದುರ್ವಾದಿಗಳ ಖಂಡಿಪೆ 1 ವಾಲಿಯಂದದಿ ದೃಷ್ಟಿಮಾತ್ರದಲಿ | ಶತೃಗತಬಲಲೀಲೆಯಿಂದಪಹರಿಪೆ ನಿಮಿಷದಲಿ ||ಕಾಲ ತ್ರೇತೆಯಲಂದು ದುಷ್ಟರ | ವಾಲಿರೂಪದಿ ವಾರಿಸಿದ ಪರಿಕಾಲ ದ್ವಾಪರದಲ್ಲಿ ಪ್ರಾರ್ಥನೆ | ಲೀಲೆ ರೂಪಿಯು ಕೃಷ್ಣಸೇವಕ 2 ದೃಷ್ಟಿ ಮಾತ್ರದಿ ಕರ್ಣಗತ ಬಲವ | ಅಪಹರಿಸಿ ನೀನುಕ್ಲಿಷ್ಟ ಯುದ್ಧದಿ ಗಳಿಸಿ ನೀ ಜಯವ ||ಶ್ರೇಷ್ಠ ಕರ್ಣನ ಅಸುವ ಕೊಳ್ಳುತ | ಸುಷ್ಠು ಅರಿಬಲ ನಾಶಮಾಡುತಭ್ರಷ್ಟ ಕೌರವನೀಗೆ ದುಃಖದ | ಕೃಷ್ಣಗರ್ಪಿಸಿ ಕೈಯ್ಯ ಮುಗಿದೆಯೊ 3 ಕಾಲ ಕಲಿಯುಗದಲ್ಲಿ ಬಲ ಭೀಮ | ಮಧ್ವಾಭಿಧಾನದಿಮೂಲ ಮೂವತ್ತೇಳು ಸೂನಾಮ ||ಭಾಳ ಗ್ರಂಥಗಳನ್ನೆರಚಿಸೀ | ಕಾಲಟಿಜಕೃತಮಾಯಿ ಮತವನುಲೀಲೆಯಿಂದಲಿ ಖಂಡಿಸುತ್ತ | ಪಾಲಿಸುತ್ತಿರೆ ಸುಜನರನ್ನು 4 `ವೃಷಾಯ ಮಾಣೆಂಬ` ಋಕ್ಕಿನಲಿ ದೇವ ಇಂದ್ರಗೆವೃಷಭದಾಕೃತಿ ಪೇಳಿಹುದು ಅಲ್ಲಿ ||ವೃಷಭ ನೀನಾಗಂತೆ ಕಲಿಯಲಿ | ಎಸೆವ ಶ್ರೀ ಮನ್ಮಧ್ವ ಗ್ರಂಥದಹಸಿಬೆ ಚೀಲವ ಹೊತ್ತು ತಿರುಗುತ | ಅಸುಪತಿಯ ಸೇವಿಸಿದ ಮಹಿಮ5 ಅಗಸ್ತ್ಯ ಮುನಿ ಸಕಲ ತೀರ್ಥಗಳ | ಸಂಗ್ರಹಿಸಿ ಕರದಿಸಾಗಿ ಗಿರ್ಯಾನಂತ ಕಮಂಡೂಲ ||ವೇಗ ಕೆಳಗಿಟ್ಟಾಚಮನ ಅಲ್ಪ | ಕಾಗಿ ಸ್ವಲ್ಪವುದೂರ ಪೋಗಲುಕಾಗೆ ರೂಪದಿ ಬಂದು ಇಂದ್ರನು | ವೇಗ ಉರುಳಿಸೆ ಜಲವು ಹರಿಯಿತು 6 ದೆವರಾಜನು ಕಾಣಿಸಿ ಕೊಳಲು | ಮುನಿಯು ಆಕ್ಷಣದೇವ ಕಾರ್ಯದ ಭಾವ ತಿಳಿಯಲು ||ಓವಿ ತತ್ಕಾಗಿಣಿಯ ನಾಮದಿ | ಭೂವಲಯದೊಳ್ಬಾತಿಸಲಿ ಎನೆತೀವರಾಶೀರ್ವಾದ ದಿಂದಲಿ | ಪಾವನವು ತತ್ ಕ್ಷೇತ್ರ ವಾಯಿತು 7 ಪಾಂಡು ಮಧ್ಯಮನಾದ ಅರ್ಜುನನು | ಇಲ್ಯುದಿಸಿ ಪೊತ್ತಧೋಂಡು ರಘುನಾಥ ಪೆಸರನ್ನು || ಗೊಂಡು ನಾಯಕ ತನವ ಅಶ್ವಕೆ | ಅಂಡಲೆದು ಬರುತಿಲ್ಲಿ ಬಿಸಿಲಲಿ ಉಂಡು ಉಂಬುದ ಜಲವ ಪಶುಪರಿ | ಕಂಡು ಮುನಿ ಅಕ್ಷೋಭ್ಯ ಬೆಸಸಿದ 8 ಸ್ವಪ್ನ ಸೂಚಿಸಿದಂತೆ ಮುನಿಶ್ರೇಷ್ಠ | ನೀರ್ಗುಡಿದವ ನರೆ ಬಪ್ಪುವನು ತಮ ಪೀಠಕೆನ್ನುತ್ತ || ಸ್ವಲ್ಪ ಹಾಸ್ಯದಿ ಪಶುವು ಪೂರ್ವದಿ | ಒಪ್ಪುವೆಯಾ ನೀನೆನ್ನ ಸಾದಿಗೆ ನೆಪ್ಪು ಬಂದುದು ವೃಷಭ ಜನ್ಮದಿ | ಕೃಪ್ಪೆಗೈದಿಹ ಮಧ್ವರನುಗ್ರಹ 9 ಸಾದಿ ಭೂಪನು ಕಳುಹಿ ತನ್ನ ಸೈನ್ಯ | ಅಕ್ಷೋಭ್ಯ ಮುನಿಪರ ಪಾದಕೆರಗುತ ಆಶ್ರಮವು ತುರ್ಯ ||ಮೋದದಿಂದ್ಯಾಚಿಸಲು ಮುನಿವರ | ಆದಿಯಿಂದಲಿ ಬಂದ ಪೀಠಕೆಸಾದರದಿ ಪಟ್ಟಾಭಿಷಕ್ತನ ಗೈದು ಆಶೀರ್ವಾದ ಮಾಡಿದ 10 ಸುತನು ತುರ್ಯಾಶ್ರಮವ ಪೊತ್ತುದನ | ಕೇಳುತ್ತ ತಂದೆಅತುಳ ಕೋಪದಿ ನಿಂದಿಸಿದ ಮುನಿವರನ |ಸುತನ ಗೃಹ ಕೆಳತಂದು ಪತ್ನಿಯ | ಜೊತೆಯಲಿಡೆ ಏಕಾಂತ ಗೃಹದಲಿಅತುಳ ಸರ್ಪಾ ಕೃತಿಯ ಕಾಣುತ | ಭೀತಿಯಲಿ ಚೀರಿದಳು ಕನ್ಯೆಯು11 ಸೋಜಿಗದ ತನಯನ್ನ ಕೊಳ್ಳುತ್ತ | ಮುನಿವರರ ಬಳಿಗೆ ಯೋಜಿಸೀದನು ಕ್ಷಮೆಯ ಬೇಡುತ್ತ ||ಆರ್ಜವದ ಮುನಿ ಕ್ಷಮಿಸಿ ತಂದೆಯ | ಮಾಜದಲೆ ತಮ್ಮ ಶಿಷ್ಯಭೂಪಗೆಯೋಜಿಸಿದರನ್ವರ್ಥನಾಮವ | ಶ್ರೀ ಜಯಾಭಿಧ ತೀರ್ಥರೆನ್ನುತ 12 ಪರ ಕರಿ ಹರ್ಯಕ್ಷರಾದಿರಿ 13 ಮಧ್ವಭಾಷ್ಯಕೆ ಟೀಕೆ ರಚಿಸುತ್ತ | ಯರಗೋಳ ಗುಹೆಯಲಿಶುದ್ಧ ಭಾವದಿ ಇರಲು ಮದಮತ್ತ ||ವಿದ್ಯ ಅರಣ್ಯಭಿಧ ನೋಡೀ | ಮಧ್ವಕೃತ ಸನ್ಮಾನ ಲಕ್ಷಣಬುದ್ಧಿಗೇ ನಿಲುಕದಲೆ ಟೀಕೆಯ | ಪದ್ಧತಿಯ ಕಂಢರ್ಷಪಟ್ಟನು 14 ಮಾಧ್ವಭಾಷ್ಯವ ನೇರಿಸಿ ಗಜವ | ತಟ್ಟೀಕೆ ಅಂತೆಯೆಅದ್ಧುರೀಯಲಿ ಗೈದು ಉತ್ಸವವ ||ವಿದ್ಯವನ ಮುನಿಪೋತ್ತುಮನು ಬಹು | ಶುದ್ಧಭಾವದಿ ಗೈದು ಸಂತಸಬುದ್ಧಿಯಲಿ ಪರಿವಾರ ಸಹಿತದಿ | ಸದ್ದುಯಿಲ್ಲದೆ ಪೋದನಂದಿನ 15 ಹತ್ತೆರಡು ಮತ್ತೊಂದು ಕುಭಾಷ್ಯ | ವಿಸ್ತರದಿ ಖಂಡಿಸೆಕೃತ್ಯವೂ ಮಧ್ವಕೃತವನುವ್ಯಾಖ್ಯಾ ||ಮತ್ತಿದಕೆ ಸೂಧಾಖ್ಯ ಟೀಕವ | ವಿಸ್ತøತವು ನಿಮ್ಮಿಂದ ಜಯಮುನಿಮೊತ್ತದಿಂಧ್ಹತ್ತೆಂಟು ಗ್ರಂಥಕೆ | ಕೃತ್ಯವಾಯಿತು ನಿಮ್ಮ ಟೀಕೆಯು16 ಪಾದ ಪಾದ ತೋರ್ವುದು ||
--------------
ಗುರುಗೋವಿಂದವಿಠಲರು
ದಾಸರ ಮೊರೆ ಲಾಲಿಸೋ ವೆಂಕಟಾಚಲ ವಾಸ ಬಿನ್ನಪ ಲಾಲಿಸೊ ಪ ಲೇಸು ಭಕುತಿಯು ಮಾಡದಲೆ ಬಲು ಘಾಸಿಯಾಗುತ ಮನದಿ ನೊಂದು ದಾಸನಾಗದೆ ಕ್ಲೇಶಪಟ್ಟೆನೊ ಈಸುದಿನಗಳ ಕಳೆದೆನೊ ವೃಥಾ1 ತಳಿರು ಪೋಲುವ ನಿನ್ನಯ ಪಾದ- ಕ್ಕೆರಗದೆನ್ನಯ ಸಿರವು ದಣಿಯನೋಡದೆ ನಿನ್ನನು ಮಹಾಪಾಪ ಗಳನೆ ಮಾಡುತ ನೊಂದೆನು 2 ಅನಿಮಿಷೇಶನೆ ನಿನ್ನ ಮಹಿಮೆಯ ಕ್ಷಣಬಿಡದೆ ಧ್ಯಾನವನೆ ಮಾಡುವ ಅನಲಸಖತನಯನಿಗೆ ನಮಿಸುವೆ ಕ್ಷಣ ಬಿಡದೆ ಎನ್ನ ಪೊರೆವ ಕರುಣಿ3 ಕಟಿಯ ಕಾಂಜಿಯ ದಾಮವು ನವರತ್ನದ ಸ್ಫ್ಪಟಿಕ ಮುತ್ತಿನ ಹಾರವು ಲಕುಮಿ ಧರಿಸಿದ ವಕ್ಷ ಕೌಸ್ತುಭಹಾರ ಸ್ಫುಟದಿ ಶೋಭಿಪ ಉರವು 4 ವಟುವಿನಂದದಿ ಪ್ರಕಟನಾಗುತ ಕುಟಿಲ ದಿತಿಜರಿಗಖಿಳ ವಿಧ ಸಂ- ಕಟಗಳನೆ ಸಂಘಟನೆ ಮಾಡುವ ನಟನ ತೆರ ವಟಪತ್ರಶಾಯಿ 5 ನೊಸಲ ಕಸ್ತೂರಿ ತಿಲಕ ರಂಜಿಸುವ ಚಂ- ಪಕವ ಪೋಲುವ ನಾಸಿಕ ಎಸೆದು ಶೋಭಿಪ ಮೌಕ್ತಿಕ ಪೋಲುವ ದಂತ ನಸುನಗುತಿಹ ಹಸನ್ಮುಖ6 ಶಶಿಯ ಧರಿಸಿದ ಅಸಮ ಭಕುತನು ನಿಶಿಹಗಲು ತನ್ನ ಸತಿಗೆ ಬೆಸಸಿದ ಅತಿಶಯದ ಮಹಿಮೆಯನೆ ಕೇಳುವ ಮತಿಯ ಕೊಡು ಮನ್ಮಥನ ಪಿತನೆ 7 ಚಿತ್ತದೊಳಗೆ ನಿನ್ನಯ ಪಾದಾಂಬುಜ ಭಕ್ತಿಯಿಂದಲಿ ಕಾಂಬುವ ಭಕ್ತಜನರ ವೃಂದವ ಕರುಣದಿ ಕಾಯ್ವ ವಿಷ್ಣು ಮೂರುತಿ ಕೇಶವ 8 ಎತ್ತನೋಡಿದರಿಲ್ಲ ನಿನ್ನ ಸಮ ಉತ್ತಮರ ಕಾಣುವುದೆ ಮಿಥ್ಯವೊ ಸತ್ಯವಿದು ಪುರುಷೋತ್ತಮನೆ ಎನ್ನ ಚಿತ್ತದಲಿ ನಲಿನಲಿದು ಶ್ರೀಶ 9 ಕಮಲಸಂಭವ ಪಿತನೆ ಪ್ರಾರ್ಥಿಸುವೆ ಶ್ರೀ- ರಮೆಧರೆಯರಿಂ ಸೇವ್ಯನೆ ಕ್ಷಣಬಿಡದಲೆ ನಿನ್ನನೆ ಚಿಂತನೆ ಮಾಳ್ಪ ಸುಜನರಿಗೊಲಿಯುವನೆ 10 ಶ್ರವಣ ಮನನಕೆ ಒಲಿವ ದೇವನೆ ದಿನದಿನದಿ ನಿನ್ನ ಮಹಿಮೆ ತೋರು ಶ್ರೀ- ಕಮಲನಾಭ ವಿಠ್ಠಲನೆ ಕರುಣದಿ ಶ್ರಮವ ಹರಿಸುಸುಧಾಮ ಸಖನೆ11
--------------
ನಿಡಗುರುಕಿ ಜೀವೂಬಾಯಿ
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ದೊರಕುವುದೇ ಪರಮಾರ್ಥ ಪ ಜರಿದು ಆಶ್ರಮ ಧರ್ಮಾ ವೇಷ ವಿರಕ್ತಿಯಿಂದಾ | ಚರಿಸುತ ಬಳಲುವರೇ ವ್ಯರ್ಥ 1 ಕ್ರಮದ ಹಾದಿಯ ಬಿಟ್ಟು ಅಡವಿ ಬೀಳಲು ಎಲ್ಲ | ಕಮರಿಯಲ್ಲದೇ ಗ್ರಾಮವಾರ್ತಾ 2 ಕಣ್ಣಿನೊಳಂಜನಿಲ್ಲದೇ ಹಲವು ಸಾಧನದಿಂದಾ | ದಣ್ಣನೇ ದಣಿವರೇ ದ್ರವ್ಯಕುರ್ತಾ 3 ಕರಗದೆ ವಾಸನೆ ತಪಹೀನ ಅಂತರ್ಗತ | ಜ್ವರವಿರಲಾರೋಗ್ಯದ ಸ್ನಾನಾರ್ಥ 4 ತಂದೆ ಮಹಿಪತಿ ಸುತ ಪ್ರಭು ಒಲುಮೆಯಾ | ಛಂದದಿ ಪದ ಕೊಂಡವನೇ ಧೂರ್ತಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂದ ತೀರಥರಾಯ ಅಸ್ಮದ್ಗುರೋರ್ಗುರು ಕಾಯ ಪೊರೆಯಯ್ಯ ಜೀಯಾ ಪ ಪಾದ ಕಮಲಕೆ ನಂದ ಮಧುಕರ ನಂದದಲಿ ನಿಜ ಮಂದ ಜನರಿಗೆ ನಂದ ಕೊಡುವಾ ಮೂರ್ತಿ ಆನಂದಕಾರಿಯೆ ಅ.ಪ ಮಧ್ಯಮನಿ ದ್ವಿಜನಲ್ಲಿ ಉದ್ಭವಿಸಿ ನೀನೂ ಮಧ್ವಮುನಿ ಪೆಸರಲ್ಲಿ ದುರ್ವಾದಿಗಳ ಅ - ಶುದ್ಧ ಭಾಷ್ಯಗಳಲ್ಲಿ ಜಯಪಡೆದ ನಿನ್ನಾ ಶುದ್ಧ ಭಾಷ್ಯಗಳಲ್ಲಿ ಭಕ್ತಿಯಿಂದಲ್ಲಿ ಶುದ್ಧ ಶ್ರೀ ಹರಿಮತದ ಶುಭ ಸಿದ್ಧಾಂತ ಸ್ಥಾಪಿಸಿ ಜಗದಿ ಜೀವರ ಸಿದ್ಧಗಣಕಧಿನಾಥನೆಂದೂ ಪ್ರ - ಸಿದ್ಧಗೈಸಿದಿ ಶುದ್ಧ ಮೂರುತಿ 1 ಬದರಿಕಾಶ್ರಮವನ್ನು ಐದಿದ್ಯೊ ಮುದದಿ ಪದುಮನಾಭನನ್ನು ಬಲಗೈಸಿ ನಿನ್ನ ಬದಿಗ ಜನರಿಗಿನ್ನೂ ಸುವಾಕ್ಯ ದಿಂದಲಿ ಪೇಳಿದದು ನಿಜ ಪದುಮನಾಭನೆ ಪರಮದೈವನು ಪದುಮೆ ಮೊದಲು ಬ್ರಹ್ಮಾಂತ ಜೀವರ ಪದದಿ ಗುಣದ ತಾರತಮ್ಯವ ಹೃದಯ ಮಂದಿರದಲ್ಲಿ ಪೇಳಿದ 2 ಘನ್ನಮಹಿಮನೆ ಎನ್ನಮನ ವಚನ ಕಾಯದಿ ಇನ್ನು ಮಾಡುವುದನ್ನು ಸ್ವೀಕರಿಸಿ ಹರಿಗೆ ಮುನ್ನ ನೀಡೆಲೊ ಚೆನ್ನವಾಗಿ ನಿಜಫಲ ನಿನ್ನ ಜನರೀಗಿನ್ನ ನೀಡಯ್ಯ ಮುನ್ನ ನಿನ್ನ ಒಳಗೆ ನಿರುತ ಇರುವ ಘನ್ನ ಗುರುಜಗನ್ನಾಥವಿಠಲನ ಎನ್ನ ಮನದಲಿ ತೋರಿಸೆಂದು ನಿನ್ನ ಪದಯುಗವನ್ನು ಭಜಿಸಿದೆ 3
--------------
ಗುರುಜಗನ್ನಾಥದಾಸರು
ನಂಬಿ ಭಜಿಸು ಹರಿಯಾ| ಅಂಬುಜನಾಭನ ಹಂಬಲದಿಂದಾ ಪ ಶ್ರವಣ ಕೀರ್ತನ ಮೊದಲಾಗಿಹ ನವವಿಧ| ಹವಣದ ಭಕುತಿಯ ಸವಿಸವಿಯಿಂದಾ 1 ಏನೂ ಇಲ್ಲದ ಮೂರು ದಿನದ ಸಂಸಾರಕ| ನಾ ನನ್ನದು ಯಂದೆನುತಲಿ ಶ್ರಮಿಸದೆ 2 ಶರೀರಿಂದ್ರಯಗಳು ಸ್ಥಿರವಿದ್ದ ಕೈಯಲಿ| ಜರೆ ಬಂದೆರಗುತ ಮರೆಸದೆ ಮುನ್ನಾ 3 ಕೇಳೀಕೋ ಗುರುವಿನಾ ತಿಳಿಯದಿದ್ದರೆ ಕೀಲರಿ| ಹೇಳುವ ಸ್ಪಹಿತವ ಜಾಳಿಸಿ ಸಂಶಯ4 ಹೊಂದಿದವರ ಕೈಯ್ಯಾ ಎಂದೆಂದು ಬಿಡನೆಂದು| ತಂದೆ ಮಹಿಪತಿ ಕಂದಗ ಸಾರಿದ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮೋ ನಮೋ ಮಾತೇ ಎನ್ನಯ ಶ್ರಮಾವ ಕÀಳಿ ದ್ಯೋತೆ ಪ ಕ್ಷಮಾತಳದಿ ನಿ ಸುಮಾಹಕಲ್ಪ ದೃಮೋಪಮಾಗಿಹೆ ಸಮಾನ ಸೋತ್ತಮೆ ಅ.ಪ ರಮಾಧವನರಾಣೀ ನೀ ತಮೋರೂಪ ಕಲ್ಯಾಣೀ ನಮಿಪೆ ನಿನ್ನನು ಕ್ಷಮಾದಿಪತ್ಯವ ಮಮೈವ ಪಾಲಿಸು ವಿಮಾನ ನಿಲಯಳೆ 1 ಧರಾತಳದಿ ಬಂದೂ ನೀ ದುರಾಳ ತತಿ ಕೊಂದೂ ಭರಾದಿ ಲೋಕದಿ ಮೆರಾದ ನಿನ್ನನು ಶಿರಾದಿ ನಮಿಸಿದೆ ವರಾವ ಪಾಲಿಸು 2 ಪಿತಾಮಹನ ಮಾತೇ ನೀ ವಿತಾತ ಗುಣ ಖ್ಯಾತೇ ದಾತಾ ಗುರುಜಗ - ನ್ನಾಥಾ ವಿಠಲನ್ನ ಪ್ರೀತಿಯ ಮಾನಿನಿ ದೂತಾನ ಪೊರೆವೋದು 3
--------------
ಗುರುಜಗನ್ನಾಥದಾಸರು
ನಮ್ಮ ನಿಮ್ಮಗೊಂದಾದ ಮಾತು ಬ್ರಹ್ಮಾದಿಗಳು ಹೋದರು ಸೋತು ಒಮ್ಮನಾದರೆ ತಿಳಿವದಂತು 1 ಬಿಟ್ಟು ಕೊಡೊ ನಿನ್ನ ಬಾಜಿ ಗಂಟುಹಾಕಿಹೆ ಬಲು ಗಜಿಬಿಜಿ ಮುಟ್ಟಲಾರದು ಮೊನೆ ಸಣ್ಣ ಸೂಜಿ ಗುಟ್ಟು ಹೇಳೊ ಸದ್ಗುರು ದೇವಾಜಿ 2 ನಮ್ಮ ನಿಮ್ಮಳಗ್ಯಾಕೆ ತೊಡಕು ಇಮ್ಮನಾದರೆ ಹುಟ್ಟಿತು ಒಡಕು ಹಮ್ಮು ಎನ್ನೊಳಗಿಲ್ಲ ನೀ ಹುಡುಕು ಸುಮ್ಮನ್ಯಾಕಿದು ಶ್ರಮೆಯ ತಿಡುಕು 3 ಗುರು ಹೇಳಿದ ಮಾತಿಗೆ ಮುಟ್ಟಿ ತೋರಿ ಕೊಡಬೇಕು ನೀನೆ ಗಟ್ಟಿ ಅರಿತ ಮ್ಯಾಲೆ ಮಿಸುಕನು ತುಟ್ಟಿ ಖರೆ ಮಾಡಿಕೊ ಜಗಜಟ್ಟಿ 4 ಒಂದು ಮಾತು ಎಂಬುದು ಬಲ್ಲಿ ಸಂದ ಸಂದೇಹ್ಯಾರಿಸೊ ನೀ ಇಲ್ಲಿ ಕಂದ ಮಹಿಪತಿ ಮನದಲ್ಲಿ ಚಂದವಾಗಿರೊ ನೀನೆವೆ ಅಲ್ಲಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾ ನೋಡಿ ಬಂದೆ ಕೇಳಮ್ಮ ಗೆಳತಿ ಪ ನಾನಿಲ್ಲ ನೀನಿಲ್ಲ ಏನಂದರೇನಿಲ್ಲ ಕಾಣುವ ಮಾತಲ್ಲ ಜಾಣೆ ಸುಳ್ಳಲ್ಲ ಅ.ಪ ಹಸುರಿಲ್ಲ ಕೆಂಪಿಲ್ಲ ಪಶುವಿಲ್ಲ ಪಕ್ಷಿಲ್ಲ ವಸುಧಿಲ್ಲ ಉದಧಿಲ್ಲ ವ್ಯಸನಿಲ್ಲ ಬಂಧವಿಲ್ಲ ಹಸಿವಿಲ್ಲ ತೃಷೆಯಿಲ್ಲ ದೆಸೆಯಿಲ್ಲ ದಿಕ್ಕಿಲ್ಲ ನಿಶೆಯಿಲ್ಲ ದಿವಯಿಲ್ಲ ಕುಸುಮಾಕ್ಷಿ ಸುಳ್ಳಲ್ಲ 1 ಜಲವಿಲ್ಲ ಗಗನಿಲ್ಲ ನೆಲವಿಲ್ಲ ಗಿರಿಯಿಲ್ಲ ಕುಲವಿಲ್ಲ ಚಲವಿಲ್ಲ ಮಲಿನಿಲ್ಲ ಶೀಲಿಲ್ಲ ಜಳಕಿಲ್ಲ ಊಟಿಲ್ಲ ಬೆಳಕಿಲ್ಲ ಕಾಳಿಲ್ಲ ತಳಿಯಿಲ್ಲ ತಮಯಿಲ್ಲ ಲಲನೆ ಸುಳ್ಳಲ್ಲ 2 ಕೃಪೆಯಿಲ್ಲ ಕಪಟಿಲ್ಲ ಜಪವಿಲ್ಲ ತಪವಿಲ್ಲ ಗುಪಿತಿಲ್ಲ ಬೈಲಿಲ್ಲ ನೆಪ್ಪಿಲ್ಲ ಮರೆವಿಲ್ಲ ವಿಪಿನಿಲ್ಲ ಸದನಿಲ್ಲ ರಿಪುವಿಲ್ಲ ಸ್ನೇಹವಿಲ್ಲ ಅಪ್ಪಯಿಲ್ಲ ಅವ್ವಯಿಲ್ಲ ನಿಪುಣೆ ಸುಳ್ಳಲ್ಲ 3 ರಾಗಿಲ್ಲ ರಚನಿಲ್ಲ ಯಾಗಿಲ್ಲ ಯಜ್ಞಿಲ್ಲ ತ್ಯಾಗಿಲ್ಲ ತ್ಯಜನಿಲ್ಲ ಭೋಗಿಲ್ಲ ಭಾಗ್ಗ್ಯಿಲ್ಲ ರೋಗಿಲ್ಲ ಶ್ರಮವಿಲ್ಲ ಬೈಗಿಲ್ಲ ಬೆಳಗಿಲ್ಲ ಯಾಗಿಲ್ಲ ಪಾಪವಿಲ್ಲ ಭಗಿನಿ ಸುಳ್ಳಲ್ಲ 4 ಹೋಮವಿಲ್ಲ ವಿಪ್ರಿಲ್ಲ ಧೂಮವಿಲ್ಲ ಧೂಳಿಲ್ಲ ಭೂಮಿಲ್ಲ ಜನನಿಲ್ಲ ಕಾಮಿಲ್ಲ ಮರಣಿಲ್ಲ ನೇಮಿಲ್ಲ ಕ್ರಿಯವಿಲ್ಲ ನಾಮಿಲ್ಲ ರೂಪಿಲ್ಲ ಸ್ವಾಮಿ ಶ್ರೀರಾಮ ಬಲ್ಲ ಭಾಮೆ ಸುಳ್ಳಲ್ಲ 5
--------------
ರಾಮದಾಸರು
ನಾರಾಯಣ ಉದಿಸುವನೆಂದು ಆ ಪೂರ್ವಾಂತರ್ಯಾಮಿ ಅವರ ಸಲಹಲು ಸರ್ವದಾ ಅಪೂರ್ವ ತೇಜೋವಂತನಾಗಿ ಅವರ ಹೃದಯದಿ ಸೂರ್ಯತೇಜದಿ ಮೆರೆಯುತಿರುವ ಸರ್ವದಾ ಎಂದು ಅಪೂರ್ವ ಜ್ಞಾನದಿ ನೆನಯುತಿರಿ ಹರಿಭಕ್ತರು 1 ಎದ್ದು ಮುಖ ತೊಳೆದು ನಿಮ್ಮಲ್ಲಿದ್ದ ಕಲ್ಮಷ ತೊಳೆದು ನಿಮ್ಮ ಶುದ್ಧ ಮನದಲಿ ನೆನೆದು ನಿಲಿಸಿ ಹರಿ ಧ್ಯಾನದಿ ಸ್ನಾನಾನ್ಹೀಕಬದ್ಧಕಂಕಣರಾಗಿ ಬ್ರಾಹ್ಮೀಮುಹೂರ್ತದಲಿ ಗೈಯೆ ನಿಮ್ಮಲ್ಲಿದ್ದ ಕಲ್ಮಶವೆಲ್ಲ ಕಳೆದತಿ ಹರ್ಷವೀವ ನಿಮ್ಮ ಶುದ್ಧಾಚರಣೆಗೆ ಮೆಚ್ಚಿ ನಿಮ್ಮ ಭಕ್ತಿಗೆ ನಿತ್ಯ ಬದ್ಧ ಕಂಕಣರಾಗಿ ಸ್ತುತಿಸೆ ನಿತ್ಯ ಹರಿ ಭಕ್ತರು 2 ಮಾಧ್ಯಾನ್ಹಿಕಾದಿಗಳಾಚರಿಸುತ ಹರಿಯ ಮಧ್ಯವರ್ತಿಯನೆನಿಸಿ ಆ ಸೂರ್ಯನಂತರ್ಯಾಮಿ ನಾರಾಯಣನಿ- - ಗಘ್ರ್ಯಪಾದ್ಯವನಿತ್ತು ಸುಭೋಜನವ ಮಾಡಿ ನಿಮ್ಮ ಪೂರ್ವಜರನುಗ್ರಹದಿ ಮಜ್ಜನ್ಮಸಾರ್ಥಕವೆಂದಾವನರಿವನೋ ಅವನ ಹೃದಯ ಮಧ್ಯವರ್ತಿಯಾಗಿದ್ದು ಕಾವ ಸದ್ಗುಣೋಪೇತ ಭಕ್ತರ ಕೈ ಬಿಡ ಮಧ್ವಾಂತರ್ಗತ ಶ್ರೀ ಶ್ರೀನಿವಾಸ ಅವನ ಮನದಿ ನೆನೆಯಿರಿ ಹರಿ ಭಕ್ತರು 3 ಜವÀನ ಬಾಧೆಯು ಇಲ್ಲ ಹರಿ ಭಕ್ತರಿಗೆ ಯವನ ರೂಪದ ಕಲ್ಕಿ ಹರಿಯ ನೆನೆವರಿಗೆ ಜವದಿ ಯಮನಾಳ್ಗಳು ಮುಟ್ಟಲಂಜುವರು ಹರಿಭಕ್ತರನು ಕವಿ ನಾರಾಯಣನ ಧ್ಯಾನಿಪರಿಗೆ ಅವನಿಯೊಳು ಭಯವಿಲ್ಲ ಅವರಿಗೆ ಸಮನಿಲ್ಲ ಅವರಲ್ಲಿ ಹರಿಯಿದ್ದ ಕಾರಣದಿ ಜವದಿ ಹರಿ ದಾಸರೆಲ್ಲ ಶ್ರೀ ಶ್ರೀನಿವಾಸನ ಭಕ್ತರ ಸಂಗದೊಳಿರಿ ಹರಿಭಕ್ತರು 4 ಯಾರ ಭಯವಿಲ್ಲ ಹರಿ ನಾಮಕೆ ದಾರಿ ಹೋಕರು ಬಾರರಿದಕೆ ಭಾರವಿಲ್ಲವು ಮನಕೆ ಸಂಸಾರಭಯವಿಲ್ಲವರಿಗೆ ಹರಿ ಎಂಬುದನೆ ಸಕಲ ಕಾರ್ಯವ ನಿರ್ವಹಿಸುವನೆಂದರಿತವರಿಗೆ ಯುಕುತಿ ಬುದ್ಧಿಯು ಯಾತಕೆ ಯಾರ ಭಯವೇಕೆ ಹರಿಸಖರಾಗಿರಲವರಿಗೆ ಅಂಜಿಕೆಯಾಕೆ ಯಾರನಾಶ್ರಯಿಸುವ ಶ್ರಮವಿಲ್ಲ ಇದನರಿತು ಹರಿಭಕ್ತರು ಶಕುನ ಅಪಶಕುನವೆನ್ನರು ಮನದಿ ಯುಕುತಿಯ ಮಾಡರು ಪರರ ಬೇಡೆ ಶ್ರೀ ಶ್ರೀನಿವಾಸ ಭಕ್ತರು ಅವರ ಮತ ಹಿಡಿದು ಬದುಕಿ ಹರಿಭಕ್ತರು 5 ಜತೆ ಕರುಣಾಕರ ಹರಿಭಕ್ತರಭಿಮಾನಿ ವರದಭಯ ಹಸ್ತವ ಕೊಡುವ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ನಾರಾಯಣ ಎನ್ನಿರೊ ಸಜ್ಜನರೆಲ್ಲಪ. ಸಾರರಹಿತ ಸಂಸಾರದಲಿ ಪರಸಾರ ಇದು ಎಂದು ಸಂಸಾರಿ ನೀವೆಲ್ಲ ಅ.ಪ. ಇಹಪರ ಸುಖವುಂಟೋ ಇದರ ಫಲಬಹಳ ಕಟ್ಟಿದ ಗಂಟೋ ಘನಮಹಿಮಗೆ ಇದುಮಹಮಹಿಮೆ ಇದಲ್ಲದೆ ಮಹಿಮೆಯೊಳಗಿದುಮಹಾರಸವಾದಂಥ ಮಂತ್ರ ಮಹಭಕುತಿಪೂರ್ವಕವಾಗಿ ಒಮ್ಮೆ 1 ಹಸಿವೆಯ ಶ್ರಮವಿರಲಿ ಹಸಿವಿರದೆ ಹ-ರುಷವು ತಾನಿರಲಿ ರಸಿಕಶ್ರಮ ಕೆರಳಿ ಮಾ-ನಸ ವಶವು ಆಗಲಿ ಆಗದಿರಲಿದೋಷವಾಗಲಿ ಶುದ್ಧವಾಗಲಿ ಶ್ರೀಶನ ಮರೆಯದೆ ಹಾಂಗೆ 2 ಚೋರನೆಂದೆನದೆ ಚಿತ್ತದಲಿಜಾರನೆಂದೆಣಿಸದೆ ಸ್ಮರಣೆ ಮಾತ್ರದಿ ಬಹಳಪಾರರಹಿತ ಅನರ್ಥಸಂಚಿತಹರಣ ಮಾಡುವ ಪವನ ಪ್ರಿಯ ಸರ್ವರಂತÀರ ಹಯವದನ 3
--------------
ವಾದಿರಾಜ
ನಿತ್ಯ ಪ ಭಾರತಿ ಭಾಸ್ವರಕಾಂತೆ ನಿನ್ನ ಸಾರುವೆ ಸತತ ನಿಶ್ಚಿಂತೆ ಆಹಾ ವಾರಿಜಸಮಪಾದ ತೋರಿಸು ಮಮ ಸುಹೃ - ನಿತ್ಯ ಗಾರುಮಾಡದೆ ಜನನಿ ಅ.ಪ ಹರಿಯ ಪಟ್ಟದ ನಿಜರಾಣಿ ಎನಗೆ ಹರಿಯ ತೋರಿಸೆ ಹೇ ಕಲ್ಯಾಣಿ ನಿನಗೆ ಕರುಣಿಯೆ ಕೋಕಿಲವಾಣಿ ಆಹಾ ಹರಿಹರಾದ್ಯನಿಮಿಷ ಕರಕಮಲಪೂಜಿತೆ ವರಭಾಗವತರಗ್ರೇಸಳೆಂದು ನಮಿಸುವೆ 1 ಮೂರೇಳು ತತ್ತ್ವಾಭಿಮಾನಿ ಎನಿಸಿ ಮೂರಾರು ಭಕುತಿಯಿಂದಲಿ ನೀ ಸತತ ಮೂರು ಜೀವರೊಳು ಪ್ರೇರಣಿಯಾಗಿ ಮೂರೊಂದು ಮೊಗನ ಕಲ್ಯಾಣಿ ಆಹಾ ಮೂರು ಬಗೆಯ ಜನಕೆ ಮೂರು ವಿಧದಿ ಗತಿ ಮೂರು ಕಾಲಕೆ ಇತ್ತು ಮೂರುಮಾಡುವಿ ದೇವಿ 2 ಮಾತರಿಶ್ವನ ಪಾದಕಮಲ ಯುಗಕೆ ನೀತಷಟ್ಟದಳೆ ನಿರ್ಮಲ ಮನಸು ಆತುರದಲಿ ಮಾಡು ವಿಮಲೆ ನಮಿಪೆ ಕಾತರಭವಶ್ರಮಶಮಲಾ ಆಹಾ ಜಾತರೂಪೋದರತಾತ ಶ್ರೀ ಗುರುಜಗ - ನ್ನಾಥವಿಠಲಗೆ ನೀ ದೂತನೆನಿಸು ಎನ್ನ 3
--------------
ಗುರುಜಗನ್ನಾಥದಾಸರು
ನಿತ್ಯ ಚರಣ ಕಮಲವನ್ನು ಭವ ಹರಣ ನಾರಾಯಣ ಪ ಕನಸಿನ ಸಂಸಾರ ನೆನಸದಂತೆ ಎನ್ನಾ ಮನಸ್ಸು ಶ್ರೀಹರಿನಿಜ ಬರಿವಿನೊಳ್ ನಿಲಿಸಯ್ಯಾ 1 ಮಂದ ಬುದ್ಧಿಲಿ ನಿಜಾನಂದವನರಿಯದೇ ಬಂಧನೆಗೊಳಗಾದೆ ತಂದೆ ನೀ ರಕ್ಷಿಸೊ2 ದುರಿತಗಳೆಲ್ಲವ ಹರಣಗೊಳಿಸಿ ನಿಜ ಸ್ಮರಣೆಯೊಳಿರುವಂತೆ ಕರುಣದಿ ನೋಡೆನ್ನಾ 3 ಶಬರಿಯ ಕಾಯ್ದೆಯಾ ಬದರಿಯ ಫಲವುಂಡು ವಿಭು ಪರಮಾನಂದಾ ಪ್ರಭೆಯೊಳಗಿರಿಸೆನ್ನಾ 4 ನೆನೆವರ ಮನದಾ ಕೊನೆಯಲಿ ಮಿನುಗುವ ಸನಕಸನಂದನ ವಂದಿತನೀದೇವಾ 5 ವಾಸುದೇವನೇ ನಿನ್ನ ದಾಸಿ ಶಾಂತಿಘನ ವಾಸ ಸ್ವಸುಖವೀವ ಕೇಶವಾಶ್ರಮಗುರು 6
--------------
ಶಾಂತಿಬಾಯಿ
ನಿತ್ಯದಿತಿಜರು ಕಲಿಗೆ ದೂರುತಿಹರೋ ಸತ್ಯಧ್ಯಾನರ ಕಾಟ ತಾಳಲಾರೆವೊಯೆಂದು ಪ ನೀ ಕಲಿಸಿದಾಟವನು ತಾ ಕಳೆದು ಜನರ ಅಘನೂಕಿ ಜಗಸತ್ಯ ಶ್ರೀ ಹರಿಯು ಪರನು ಶ್ರೀಕಮಲಭವರೆಲ್ಲ ದಾಸರೆಂದರುಪಲು ತಾ ಕಲ್ಪಿಸಿದ ಪಾಠಶಾಲೆ ಸಭೆಗಳನೆಂದು 1 ಭೂಸುರರಿಗನ್ನ ಧನ ಭೂಷಣಗಳಿತ್ತು ಅಭ್ಯಾಸಗೈಸಿದ ಸಕಲ ವೇದಶಾಸ್ತ್ರ ಏಸು ವಿಧ ಯತ್ನಗಳು ನಾ ಮಾಡಿದರು ಜಯ ಲೇಸು ಕಾಣದೆ ನಿನ್ನ ಬಳಿಗೆ ಬಂದೆವು ಎಂದು 2 ಇಂತು ತಾ ಮಾಡಿದನು ಪಿಂತಿನಾಶ್ರಮದಿ ಈ ಗಂತು ನಮ್ಮವರಾದ ವದು ಮತ್ಸರಾ ಕಂತು ಕೋಪಾದಿಗಳಿಗಂತಕನು ಯನಿಸಿ ಮುನಿ ಸಂತತಿಪನಾಗಿರುವದೆಂತು ನೋಳ್ಪೆವು ಎಂದು 3 ತಾಪಸೋತ್ತಮ ಸತ್ಯದ್ಯಾನದಿಂ ಭೂತಳದಿ ಪಾಪ ಸರಿದಿತು ಪುಣ್ಯವೆಗ್ಗಳಿಸಿತು ಲೇಪಿಸದು ಖತಿಜನಕ ಇವರ ದಯದಿಂದೆಮ್ಮ ವ್ಯಾಪಾರ ಧರೆಯೊಳಗೆ ಭೂಪ ಇನ್ಯಾಕೆಂದು 4 ನಿರುತ ಸಿರಿಗೋವಿಂದ ವಿಠಲನ್ನ ಸೇವಿಸುತಾ ಪರಹಿಂಸೆ ಧನಯುವತಿ ದ್ಯೂತತೊರದಾ ವರಯತಿಯ ಮೋಹಿಸುವ ಶಕ್ತಿ ತನಗಿಲ್ಲೆಂದು ಅರುಹಿದನು ಭೃತ್ಯರಿಗೆ ಕಲಿ ಮನನೊಂದು 5
--------------
ಅಸ್ಕಿಹಾಳ ಗೋವಿಂದ
ನಿನಗೆ ಅಚ್ಚರವಲ್ಲ ಅನುಮಾನಸಲ್ಲಾ ಇನಿತು ಶ್ರಮ ಕಳೆಯದಿರೆ ಘನತಿಲ್ಲ ನಿಮದಲ್ಲ ಪ ಹಿಂದೆ ನಿನ್ನ ಅಜ್ಞಾ ನಾ ಒಂದು ಮೀರಿದಕೆ ನೀ ಇಂದು ಭವಭವಣೆ ಬಹುಪರಿಯಿಂದಲೀ ತಂದು ನೋಯಿಸಿ ಮನಸುನಿಂದದಲೆ ಪರರಿಗೆ ಇಂದು ಮೊರೆಯನು ಹೋಗಿಸುವುದು ಥರವೇ ಹರಿಯೇ 1 ಒಂದು ತಿಳಿಯದಲೆ ನಾನು ಅಂದ ಮಾತಿಗೆ ಮನಸು ನೊಂದು ಈ ತೆರದಿ ಮಾಡುವುದು ರೀತೇ ಕಂದನಪರಾಧಗಳ ಒಂದು ನೋಡದ ಜನನಿ ಯಂದದಲಿ ನೀ ಪಾಲಿಸುವುದು ಸ್ವಾಮೀ ಪ್ರೇಮೀ 2 ಜಾತಮಗನನು ನಿಜತಾತ ಪರರಿಗೆ ತಾನು ಆತುರಾದಿಂದಲಿ ಮಾರಿದಂತೆ ದೂತರನು ಜಗದೇಕÀನಾಥ ನೀ ಪರಿಪರಿ ಫಾತಿಸಲು ಇನ್ನಾರು ಪೊರೆªರೈಯ್ಯಾ ಜೀಯಾ 3 ನಂಬಿದವರನ್ನು ನೀ ಅಂಬಿನಲಿ ಹೊಡೆವರೆ ಅರಿ ಪದುಮ ಗದಧರಪಾಣಿಯೆ ತುಂಬಿದ್ಹರಿಗೋಲಲ್ಲಿ ಇಂಬುಗೊಂಡಿರುವಾಗ ಅಂಬುಧಿಮುಣುಗಿಸುವದು ಥರವೇನೋ 4 ಯಾತಕೀಸೊ ಮಾತು ಸೋತೆ ನಾ ನಿನಗೀಗ ವಾತದೇವನ ತಾತ ಸೀತಾನಾಥಾ ನೀತ ಶ್ರೀಗುರುಜಗನ್ನಾಥ ವಿಠ್ಠಲರೇಯ ಮಾತು ಲಾಲಿಸಿ ಪಾಲಿಸುವದು ಇನ್ನಾ ಚೆನ್ನಾ 5
--------------
ಗುರುಜಗನ್ನಾಥದಾಸರು