ಒಟ್ಟು 275 ಕಡೆಗಳಲ್ಲಿ , 60 ದಾಸರು , 247 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸರ ಸಂಗವನಾ | ದಾಸರ ಸಂಗವ ಬೇಡುವೆ ನಾ | ಹರಿದಾಸರ ಸಂಗವನಾ ಪ ದಾಸರ ಸಂಗವ ಬೇಡುವೆ ನಾನಿನ್ನಾ | ಅನುದಿನ ಲೇಶನಿಸೀ ವಾಸುದೇವಚ್ಚುತ ಹರಿಯಂದು ನೆನೆಯುತ | ಹೇಸಿ ಜನರ ಮನಿ ಆಶೆಯ ಜರಿದಾ 1 ತಾಳ ಮೃದಂಗ ವೀಣಾದಿಯ ಸುಜನರ | ಮೇಳದಿ ಶ್ರೀಹರಿ ಚರಿತವನು | ಹೇಳುತ ಕೇಳುತ ಆನಂದ ಬಾಷ್ಪದಿ | ಆಳಿಯ ಹರುಷದಿ ತನುವನೆ ಮರೆವಾ 2 ವಂದ್ಯರು ಎಂದರಾನಂದವ ಬಡುತಲಿ | ಇಂದಿರೇಶನ ವಲುಮೆಯಂತಿಹದೋ | ಎಂದು ಮನದೊಳು ಸಂದೇಹ ಬಗಿಯದೆ | ವಂದಿಸಿ ಮುಂದಕ ಬಂದಪ್ಪಿಕೊಳುವಾ 3 ಸರ್ವರೊಳಗ ಹರಿ ಇರ್ವನು ಯನುತಲಿ | ಉರ್ವಿಲಿ ನಿಂದೆಯ ಜರಿದಿಹನು | ಗರ್ವವ ಹಿಡಿಯದೆ ಬಾಗಿದ ಭಕುತಿಯ | ಸುರ್ವಸಾರಾಯದ ಪರ್ವವನುಂಬಾ 4 ನಡಿಲೇಸು ನುಡಿಲೇಸು ಹಿಡಿದ ನೆರೆಲೇಸು | ಭವ ನಿಲ್ಲದು | ಸಾರಥಿ | ದೃಢದಲಿ ಕಂಡು ನನಗಿದೆ ಲೇಸು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾಸವರವರದ ವಿಠಲ | ಸಲಹೊ ಇವಳಾ ಪ ಈಶಾದಿ ದಿವಿಜೇಡ್ಯ | ವಾಸವಾನುಜನೇ ಅ.ಪ. ಕ್ಲೇಶನಾಶನನೆ ಮ | ಧ್ವೇಶ ನಿನ್ನಡಿ ದಾಸ್ಯಆಶಿಸೂವಳ ಬಿಡದೆ | ಶ್ರೀಶ ಕೈಪಿಡಿದೂದೋಷರಾಶಿಯ ಕಳೆದು | ಪೋಷಿಸಲು ಬಿನ್ನವಿಪೆಹೇಸದಾಶಿವ ವಂದ್ಯ | ಮೇಶ ಮಹಿದಾಸಾ 1 ಪತಿಸೇವೆ ಗುರುಸೇವೆ | ಹಿತದಿಂದ ಮಾಳ್ಪಂಥಮತಿಯನೆ ಕರುಣಿಸುತ | ಕ್ಷಿತಿರಮಣ ನಿನ್ನಾಸ್ಮøತಿಯ ಕೊಡು ಸತತ ಸಂ | ಸೃತಿಯನೇ ಕಳೆಯಲ್ಕೆಗತಿಗೋತ್ರ ನೀನಾಗಿ | ಪಥದೋರೊ ಹರಿಯೇ 2 ಏಕಮೇವನೆ ದೇವ | ಪ್ರಾಕ್ಕು ಕರ್ಮವ ಕಳೆದುನೀ ಕೊಡುತ ಸುಜ್ಞಾನ | ಭಕುತಿ ವೈರಾಗ್ಯಕಾಕು ಸಂಗವ ಕೊಡದೆ | ನೀಕೊಟ್ಟು ಸತ್ಸಂಗಮಾಕಳತ್ರನೆ ಸಲಹೊ | ಈಕೆ ಕೈ ಪಿಡಿದೂ 3 ಖೇಚರೋತ್ತಮ ವಾಹ | ಕೀಚಕಾರಿ ಪ್ರಿಯನೆಮೋಚಕೇಚ್ಛೆಲಿ ಸವ್ಯ | ಸಾಚಿಸಖಕೃಷ್ಣಾ |ವಾಚಾಮಗೋಚರನೆ | ನೀಚೋಚ್ಚ ತರತಮವವಾಚಿಸುತ ಇವಳಲ್ಲಿ | ಮೋಕ್ಷಪ್ರದನಾಗೋ 4 ದೇವವರ ಭವ್ಯಾತ್ಮ | ಭಾವಕೊಲಿಯುವ ಹರಿಯೆನೀವೊಲಿಯದಿನ್ನಿಲ್ಲ | ಆವ ಈ ಜಗದೀ |ಕಾವುದಿವಳನು ಎಂದು | ಭಾವದಲಿ ಭಿನ್ನೈಪೆಭಾವುಕರ ಪಾಲ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ದೀಪ ಬೆಳಗುವಾಗಾ ಉಣ್ಣುವರುಣ್ಣಿರೋ ಬೇಗ ಬೇಗಾ ದೀಪ ಲೋಪವಾದಮೇಲೆ ಬರಿದಪ್ಪುದು ಭೋಜನಶಾಲೆ ಪ ಚಿತ್ತಶುದ್ಧಿಎಂಬ ಎಳೆಬಾಳೆಎಲೆ ಎಡೆಮಾಡಿ ನಿತ್ಯನಿರ್ಮಲವೆಂಬ ರಾಜಾನ್ಹವ ನೀಡಿ ಸತ್ಯಸಾಧುಸಂಗವೆಂಬ ಘೃತಸಾರಾನ್ಹವ ನೀಡಿ ಪ್ರತ್ಯುಗಾತಮ ಆತ್ಮನ ನಿರಂತರ ತೃಪ್ತಿಬಡಿಸಿ ನೋಡಿ ದೀಪ 1 ಗುರುಕೃಪೆಯೆಂದೆಂಬ ಪರಡಿಯ ಪಾಯಸದಾಹಾರಾ ನಿರುತಾನ್ಹ ಉದಾನಮಾಡಲು ಷಡುರಸದುಪಚಾರಾ ಹರಿಹರ ಭೇದಗಳಡಗಿದನು ಭವಾಮೃತ ಸಾರಾ ಪೊಸದುಪ್ಪದಭಾರಾ ದೀಪ 2 ಕೆಂದ ಆಕಳÀ ಕರೆದು ಕಾಸಿದ ಕ್ಷೀರವ ಕೈಕೊಂಡು ತಂದೆ ತಾಯ್ಗಳ ಭಕುತಿ ಮಾಡಿದ ಮಸುರೋಗರ ಉಂಡು ವಂದಿಸಿ ಶ್ರೀ ಗುರು ವಿಮಲಾನಂದನ ಸೈಂದವನೊಳಗೊಂಡು ತೇಗುತ ಮೆರದುಂಡು 3
--------------
ಭಟಕಳ ಅಪ್ಪಯ್ಯ
ದುರ್ಜನರ ಸಂಗವನು ತ್ಯಜಿಸು ಮನವೆ, ಸಾಧು ಸಜ್ಜನರ ಸಂಗವನು ಭಜಿಸಿ ಸುಖಿಯಾಗೆಲವೊ ಪ ದುಷ್ಟ ವ್ಯಾಘ್ರನ ಕೈಯ ಮುಟ್ಟಿ ಹಿಡಿ ತರಬಹುದು ಅಟ್ಟಿಬಹ ಮದಕರಿಯ ಕಟ್ಟಬಹುದು ಕೃಷ್ಣಸರ್ಪನ ಹುತ್ತ ಕಲಕಿ ಜೀವಿಸಬಹುದು ದುಷ್ಟಾತ್ಮರಾದವರ ಬಿಟ್ಟು ಕಳೆ ಮನವೆ 1 ಚೇಳಬಾಲದ ಉರಿಯ ಜ್ವಾಲೆ ತಾಳಲುಬಹುದು ಕಾಲಮೇಘದ ಸಿಡಿಲು ಬೀಳಬಹುದು ಶೂಲಪಾಣಿಯ ಫಣೆಯ ಆಲಿ ಕೀಳಲುಬಹುದು ಕಾಳುಮೂಳರ ಸಂಗ ಮರೆದು ಕಳೆ ಮನವೆ 2 ಹರಿವ ಗರಗಸಿನಲ್ಲಿ ಶಿರವನೊಡ್ಡಲುಬಹುದು ಬೆರಸಿಬಹ ಕಾಡ್ಗಿಚ್ಚ ಧರಿಸಬಹುದು ಸರಿಸದಲಿ ನಿಂತು ಕೇಸರಿಯ ಕೆಣಕಲುಬಹುದು ಮರೆಸಿ ಕೊರಳನು ಕೊಯ್ವ ನರರ ಮರೆ ಮನವೆ 3 ಒಂದು ಜಾತಿಗೆ ವಿಷವು ಪುಚ್ಚದೊಳಗಿರುತಿಹುದು ಮ- ತ್ತೊಂದು ಜಾತಿಗೆ ದಂತದೊಳಗೆ ವಿಷವು ಒಂದು ಜಾತಿಗೆ ಮೈಯ ಅಂದವೆಲ್ಲವು ವಿಷವು ಹಿಂದೆಯಾಡುವ ನುಡಿಯು ಘೋರ ವಿಷ ಮನವೆ 4 ತೇರ ಕಂಡರೆ ತೊಲಗು ಮಾರೈದನಾಕ್ಷಣದಿ ವಾರುವಗೆ ಕಡೆ ಸಾರು ಈರೈದು ಮಾರುವನು ದಾರಿಯನು ಬಿಡು ಗಜಕೆ ಮೂರು ಸಾವಿರವನ್ನು ಊರ ಬಿಡು ದುರ್ಜನರ ಸೇರದಿರು ಮನವೆ 5 ಸತ್ಯವಂತರ ಕಂಡರರ್ಥಿಯಿಂದಲೆ ಎರಗು ನಿತ್ಯದೊಳು ಶ್ರೀಹರಿಯ ಕೀರ್ತನೆಯ ಮಾಡು ಉತ್ತಮೋತ್ತಮ ಪದವ ಹತ್ತಿಸುವವರ ಬೇಡು ಧೂರ್ತಮನುಜರ ಸಂಗ ಕಿತ್ತು ಕಳೆ ಮನವೆ 6 ಶುದ್ಧಮನವೆ ಎನ್ನ ಬುದ್ಧಿಯೊಳಗಡಗಿರ್ದು ಉದ್ಧರಿಸು ವರಾಹತಿಮ್ಮಪ್ಪನನು ನೆನೆದು ಮದ್ದನರೆ ಜನ್ಮದೊಳು ಮರಳಿಬಾರದ ಹಾಗೆ ಗದ್ದುಗೆಯ ಹಾಯ್ಕೆನ್ನ ಹೃದಯ ಮಧ್ಯದಲಿ 7
--------------
ವರಹತಿಮ್ಮಪ್ಪ
ದೇವ ದೇವ ದೇವ ದಿವಿಜರೊಡಿಯನೆ ಭಾವ ಪೂರ್ವಕ ವಿಧದಿ ಭಜಿಸುವೆನು ನಾನು ಪ ನಂದಗೋಪಿಯ ಕಂದನಾದ ಸುಂದರಾಂಗನೆ ಸಿಂಧುಶಯನ ಮಂದರಧರ ಇಂದಿರೇಶನೆ ಎಂದು ನಿನ್ನ ಪೊಂದಿದವರನಂದ ಪೊರೆವನೆ 1 ಹೆಂಗಳೆರ ಸಂಗವುಳ್ಳ ಮಂಗಳಾಂಗನೆ ಶೃಂಗಾರಾಂಗ ರಮಾಸಂಗವುಳ್ಳ ರಂಗನೆ ಗಂಗಾಜನಕ ನೀರಜಾಂಬಕ ಗಾನಲೋಲನೆ ಮಂಗಳಕರದಿಂದ ಲಭಯಂಗಳೀವನೆ 2 ರನ್ನೆ ಸೀತೆಯನ್ನು ವೈದವನ್ನ ತರಿದನೆ ನಿನ್ನವರಿವರೆನ್ನುವವರನ್ನು ಕಾಯ್ವನೆ ಪನ್ನಗಶಯನನಾದ ಚೆನ್ನ ನೀವನೆ ಘನ್ನ ' ಶ್ರೀ ಹೆನ್ನೆವಿಠಲ’ ನನ್ನ ಕಾರುಣಿ 3
--------------
ಹೆನ್ನೆರಂಗದಾಸರು
ದ್ರೌಪದಿ ಸುಳಾದಿ ಪುರಂದರ ಗುರು ನಾಗೇಶಾವೇಶ ಗುರು ಶ್ರೀಪಾದ ರಾಯ ಗುರು ಯೋಗಿ ಟೀಕಾರ್ಯ ಗುರು ಶ್ರೀಮದಾಚಾರ್ಯ ಗುರು ನಾಗಶÀಯನ ನೀನು ಸಕಲ ಜಗದ್ಗುರು ಈತ ಗುರು ಸಂತತಿಗೆ ವಂದೀಸಿ ತಾತ್ವಿಕರ ಜಾಗು ಮಾಡದೆ ನಮಿಪೆ ಜ್ಞಾನ ಪ್ರದಾತರೆಂದು ಆಗಮ ಪೌರಾಣ ಶೃತಿ ತತಿಗಳೊಳೆಲ್ಲ ಆಗುವಳಭಿಮಾನಿ ಭಾರತೀದೇವಿ ಎಂದು ಈಗ ಈ ಮಹಿಮಳ ಚರಿತೆ ಬುದ್ಧಿಗೆ ದೇವಿ ತಾಗಿಸಿದಂದದಿ ಸಾಗಲಿ ನುಡಿವುದು ನಾಗರಾಜನ ಜನನಿ ಸ್ವಪ್ನದಿ ಸುಳಿದಳು ಕೂಗಿದೆ ಅಯೋನಿಜೆ ದುಃಖರಹಿತಳೆಂದು ಭಾಗವತರ ಕಾಯ್ವ ಭಾಗ್ಯ ಸಂಪನ್ನದೇವಿ ಯೋಗಿ ಜನರಿಗೆಲ್ಲ ಗುರುಪತ್ನಿ ಎಂದೆನಿಪೆ ಆಗಾಗ ಅವತರಿಸಿ ಅನಿಲನ ಕಾರ್ಯಕ್ಕೆ ಆಗುವೆ ಸಹಕಾರಿ ಅಸುರರ ಸಂಹಾರಿ ಶ್ರೀ ಗುರೋರ್ಗುರು ಹರಿ ಗೋಪಾಲಕೃಷ್ಣವಿಠಲ ಭಾಗವತರ ಕಾಯ್ವ ನಿನ್ನದ್ವಾರದಿ ಸ್ಮರಿಸೇ 1 ಕೃತಿಸುತೆ ಕೊಂಡದಿ ಉದಿಸಿ ಸುತೆ ಎನಿಸಿದೆ ದ್ರುಪದನಿಗೆ ಚ್ಯುತರಹಿತ ಯೌವನಯುತೆ ಐವರಿಗರಸಿಯು ಆದೆ ಪ್ರತಿಯಿಲ್ಲದ ಪತಿವ್ರತೆ ಸುರತತಿ ಜನನಿಯು ನೀನೌ ಮಾ- ರುತ ಸುತನಲ್ಲದೆ ನಿನಗಿನ್ನಿತರರ ಸಂಗವು ಉಂಟೆ ಸುತರಂದದಿ ನಾಲ್ವರ ತಿಳಿದತಿಶಯದಲಿ ಅವರವರಾ ಸತಿಯರ ನಿನ್ನೊಳಗಡಿಗಿಸಿ ರತಿ ಕಾಲದಲೊಲಿದಿತ್ತೆ ಮತಿವಂತರಿಗಲ್ಲದೆ ಪ್ರತಿ ಜನರಿಗೆ ಮೋಹಕವು ಕ್ಷಿತಿಯೊಳು ನೀನವತರಿಸೀ ಕ್ಷಿತಿಗೇ ತೋರಿದ ಲೀಲೆ ಅತಿ ಸೌಭಾಗ್ಯದಿ ಮೆರೆದೆ ಕ್ಷಿತಿಪತಿಸೂಯಾಗದಲಿ ಖತಿಗೊಳ್ಳಲು ಖಳ ಜನರು ಸ್ಥಿತ ಸಾಮ್ರಾಜ್ಯವ ಕಂಡು ಕ್ಷಿತಿಭಾರವನಿಳುಹಲು ಶ್ರೀಪತಿ ಪತಿಮನವರಿಯುತ ಕುರು ಪತಿಸಭೆಯಲಿ ಭ್ರಮಿಸುತ ಜಾರುತ ಸರಸಿಯೋಳ್ ಬೀಳುತಿರೆ ಪತಿ ಶ್ರೀಪತಿ ಮೊಗವೀಕ್ಷಿಸಿ ಅತಿ ಹಾಸ್ಯದಿ ನೀ ನಗಲು ಖತಿಗೊಳ್ಳಲು ಕುರುಪತಿ ಕಲಕಿತು ದ್ವೇಷದ ಭಾವಗಳು ಪತಿ ಭಾರದ ಹರಣಕೆ ಮೂಲಾಯಿತು ನಿನ್ನಯ ನಗೆ ಕಿಡಿ ತಾ ಕಾತುರಕ್ಕಸ ತರುಗಳಿಗೆ ಸೋಕಿತು ಕಾಮನ ಬಿಸಿಯು ಮತಿಹೀನರು ನಿನ್ನನು ಬಯಸುತ ಬರೆ ದ್ವೇಷಾಗ್ನಿ ಜ್ವಲಿ ಸುತ ವಾಯು ಸಹಾಯದಲಿ ಹುತಗೈಸಿದೆ ಖಳತತಿಯ ಪತಿಯಂತರ್ಗತ ಕೃಷ್ಣನ ನುತಿಸುತ ಭಕ್ತ್ಯಾಜ್ಯಾಹುತಿ ಕ್ಷಿತಿ ಭಾರವನಿಳುಹಿಸಿದೆ ಹಿತತಂಗಿಯೆ ಗೋಪಾಲಕೃಷ್ಣವಿಠ್ಠಲಗೇ ನೀ ಪ್ರತಿಯುಂಟೆ ನಿನಗೆ ಈ ಕ್ಷಿತಿಯೊಳು ನಾಕಾಣೆ 2 ಮಡಿಯದೆ ದುರ್ಯೊüೀಧನನು ಮುಡಿಯನು ಕಟ್ಟೆನು ಎಂಬ ದೃಢ ಸಂಕಲ್ಪಳೆ ಪುಷ್ಪ ಮುಡಿಯಲಪೇಕ್ಷಿಸಿದೆ ನೀ ಒಡೆಯುವರುಂಟೇ ಇದರ ಒಡಲಿನ ಮರ್ಮವ ದೇವಿ ಒಡೆಯ ವೃಕೋದರ ನಿನ್ನ ನುಡಿ ಕೇಳುತ ವನ ಪೊಕ್ಕು ಮಡುಹುತ ಯಕ್ಷರ ತಂದು ಮುಡಿಸಿದ ಸೌಂಗಂಧಿಕವ ಪೊಡವಿಯೊಳ್ಹರಡಿತು ವಾರ್ತೆ ಒಡಲರಿಯದೆ ಜನತತಿಗೆ ಪಿಡಿಯುತ ಕರದಲಿ ಪುಷ್ಪ ಒಡೆಯನ ಪ್ರೇಮದಿ ನೋಡಿ ಮುಡಿಸಿದೆ ಸಿರಿಹರಿ ಮುಡಿಗೆ ಕಡು ಭಕ್ತಿಯೊಳಂತರದಿ ಬಿಡುಬಿಡು ಬಿಂಕವ ಲೀಲೆ ಕೊಡು ಕೊಡು ಭಕ್ತಿಯ ಬಾಲೆ ಪಡಿಸಾನಂದವ ಶೀಲೆ ನುಡಿಸಡಿಗಡಿಗ್ಹರಿ ಲೀಲೆ ಒಡಗೂಡತ ಪತಿಯೊಡನೆ ನಡೆಸಿದ ಚರಿತೆಗಳೆಲ್ಲ ಕಡು ಮೋಹವು ರಜ ತಮರಿಗೆ ಕೊಡುವುದು ಸುಖ ಸುಜನರಿಗೆ ಪೊಡವಿಪತಿ ಗೋಪಾಲಕೃಷ್ಣವಿಠಲ ನಿನ್ನ ನಡೆನುಡಿ ಮೆಚ್ಚುತ ನಡೆಸಿದ ಭಾರತ ನಾಟಕವÀ 3 ಆನಂದ ಜ್ಞಾನಪೂರ್ಣೆ ಆಗಾಗ ಒದಗಿದ ಹೀನ ದುಃಖದ ಸÉೂೀಂಕು ಉಂಟೆ ನಿನಗೆ ಇನ್ನು ಪ್ರಾಣಪತಿಗಳೈವರೆದುರಲಿ ಖಳ ನಿನ್ನ ಮಾನ ಹಾನಿಯ ಗೈಸೆ ಜಗವೆ ತಲ್ಲಣಿಸಿತು ಮಾನಾಭಿಮಾನ ಬಿಟ್ಟು ಶ್ರೀನಿಧಿ ಗತಿ ಎನ್ನೆ ಅಕ್ಷಯ ವಸನವು ಪ್ರಾಣಪಂಚಕ ಹರಿಯಾಧೀನವೆಂಬುವ ತತ್ವ ಪ್ರಾಣಕ್ಕೆ ಪ್ರಾಣಬಿಂಬ ಸ್ವಾಮಿ ಎಂಬುವ ತತ್ವ ಮಾನಾಭಿಮಾನ ತೊರೆದು ಪ್ರಾಣೇಂದ್ರಿಯವ ಜರಿದು ಮಾನಸದಲಿ ಹರಿಯ ಸ್ಮರಿಸಿದರಕ್ಷಯ ಸ್ಥಾನಪ್ರಾಪ್ತಿಯು ಎಂಬ ತತ್ವರಹಸ್ಯಗ- ಳಾನು ಸೂಚಿಸೆ ನಿನ್ನ ಕೃತಿಯಲ್ಲದಿನ್ನಿಲ್ಲ ದಾನವರೆಲ್ಲ ನಿನ್ನ ಕಾಮಿಸಿ ನೋಡಲವರು ಏನೆಂಬೆ ಮಾಡಿದಂಥ ಅಲ್ಪಸ್ವಲ್ಪದ ಪುಣ್ಯ ಕ್ಷೀಣಗೈಸುತ ಸೆಳೆದು ಹೀನ ಪಾಪದಿ ನೂಕಿ ಹಾನಿಗೈಸಿದೆ ಪವಮಾನಸುತನಿಂದಲಿ ಮಾನುನಿಮಣಿ ಸರ್ವಕ್ಷೇಮ ಪಾಲಿಪ ಭಕ್ತ- ರಾನನದಲಿ ನೋಡೆ ಜ್ಞಾನಾನಂದವನಿತ್ತು ಹೀನ ನರಕದಿ ಬಿದ್ದ ಭ್ರಾತೃಸಹಿತದಿ ಕುರುಪ ಕಾಣದೆ ನಿನ್ನ ಮಹಿಮೆ ಜ್ಞಾನರಹಿತನಾಗಿ ಜಾಣೆ ಶ್ರೀ ಗೋಪಾಲಕೃಷ್ಣವಿಠ್ಠಲನ ನಿಜ ಜ್ಞಾನ ಪಾಲಿಸಿ ಕಾಯೆ ಭೀಮಸೇನನ ಜಾಯೆ 4 ಮುಕ್ತರ ಬಂಧುವೆ ನೀನು ಭಕ್ತಿಯದಾತಳÉ ನೀನು ತತ್ವ ತಿಳಿಸುವೆ ನೀನು ಚಿತ್ತದೆ ನೆಲಸುವೆ ನೀನು ಹತ್ತದು ದುಃಖವು ನಿನಗೆ ಸುತ್ತದು ಶೋಕವು ನಿನಗೆ ಮುಕ್ತಾರ್ಥವ ಕೊಡುವವಳೆ ಮತ್ತೆ ಅಯೋನಿಜಹಳೆ ಮುತ್ತು ಮಾಣಿಕ್ಯವು ನವರತ್ನದ ಆಭರಣಗಳ ಕಂಚುಕ ನೆತ್ತಿಲಿ ಮಕುಟವನಿಟ್ಟು ಚಿತ್ತದೊಲ್ಲಭನಂಕದಲಿ ಹತ್ತಿ ಸಿಂಹಾಸನದಲಿರೆ ಸುತ್ತಲು ಸೌಪಣ್ರ್ಯಾದಿ ಸುರಸ್ತ್ರೀಯರು ಓಲೈಸೆ ಚಿತ್ತದಿ ಸಿರಿಹರಿಯನು ಭಕ್ತಿಲಿ ಭಜಿಸುತ ಮುಕ್ತಾ- ಮುಕ್ತರ ಕೃಪಪಾಂಗದಲಿ ಸುತ್ತಲೀಕ್ಷಿಸಿ ಕಾವೆ ಭಕ್ತಿಲಿ ದ್ರೌಪದಿ ಎಂದು ಎತ್ತಿದ ಸ್ವರದಲಿ ಕೂಗೆ ಚಿತ್ತದೊಲ್ಲಭನೊಡನೆ ಚಿತ್ತೈಸೆನ್ನಯ ಮನಕೆ ಹತ್ತಿಕಾಡುವ ಎನ್ನ ದುಷ್ಕøತ ಕರ್ಮಗಳೆಲ್ಲ ಕತ್ತರಿಸುತ ಕಾಯಮ್ಮ ಸತ್ಯಾಪ್ರಿಯನನು ತೋರೆ ಆರ್ತಜನರ ಪಾಲ ಗೋಪಾಲಕೃಷ್ಣವಿಠ್ಠಲನ್ನ ಅರ್ಥಿಯಿಂದಲಿ ಎನ್ನ ಚಿತ್ತದಿ ತೋರೆಲೆ ಜನನಿ 5 ಜತೆ ತತ್ವದೇವತೆಗಳ ಜನನಿ ತತ್ವಾರ್ಥ ತಿಳಿಸೇ ಆಪ್ತ ಗೋಪಾಲವಿಠ್ಠಲನೆಂದೆನಿಸೇ
--------------
ಅಂಬಾಬಾಯಿ
ಧನ್ಯ ಸತ್ಸಂಗ ಎನ್ನೊಳು ಹೊಳೆಯಿತು ಘನಲಿಂಗ ಧ್ರುವ ನೋಡಿದವನ ನೋಟ ಮಾಡಿತೆನ್ನೊಳು ಜೀವ ಶಿವಕೂಟ ನೀಡಿದಾಭಯದೂಟ ಗೂಢಗುರುತವಾಯಿತು ನೀಟ 1 ಹೇಳಿದವನ ಮಾತು ಹೊಳೆಯುವ ಸುಪ್ಪಾಣಿಯ ಮುತ್ತು ತಿಳಿಯಿತೆನ್ನೊಳು ವಸ್ತು ಅಳಿಯಿತು ಜನ್ಮ ಮೃತ್ಯು 2 ಸತ್ಸಂಗವ ಕೂಡಿ ಪತಿತಪಾವನವಾದನು ನೋಡಿ ಕ್ಷಿತಿಯೊಳು ನಿಜಗೂಡಿ ಗತಿಪಡೆದನು ಮಹಿಪತಿ ನೋಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಧನ್ವಂತ್ರಿ ನಿನ್ನ ಸ್ಮರಿಸಿ ಧನ್ಯರಾಗಿಹರ ಪಾದ ಧ್ಯಾನದೊಳಿರೆಸೆನ್ನ ಧನ್ಯನೆಂದೆನಿಸೊ ಪ ನಿನ್ನ ದಾಸರ ಕೀರ್ತಿ ನಿನ್ನ ದಾಸರ ವಾರ್ತೆ ನಿನ್ನ ನಾಮಾಮೃತವು ಎನ್ನ ಕಿವಿ ತುಂಬಿರಲಿ ಅ.ಪ ನಿನ್ನ ಪಾದದ ಸ್ಮರಣೆಯನ್ನು ಮಾಳ್ಪರ ಸಂಗ ಇನ್ನು ಪಾಲಿಸು ದೇವನೆ ಘನ್ನ ಮಹಿಮನೆ ಪರಮ ಪುಣ್ಯಶೀಲರ ಸೇವೆ ಇನ್ನು ಕರುಣಿಸೊ ಕೇಶವಾ ಸನ್ನುತಾಂಗನೆ ಭವಭಯವನ್ನು ಬಿಡಿಸೆಂದು ನಾ ನಿನ್ನ ಮೊರೆಯಿಡುವೆ ಹರಿಯೇ ಚನ್ನ ಶ್ರೀಗೋಪಾಲ ಗೋವಿಂದ ಕೇಶವ ನಿನ್ನ ನಾಮನಿರಂತರವು ಪಾ- ವನ್ನ ಮಾಡಲಿ ಎನ್ನ ಜಿಹ್ವೆಯಾ 1 ಆದರದಿ ನಿನ್ನ ಸ್ಮರಿಪ ಸಾಧುಜನರ ಸಂಗ ಭೇದವಿಲ್ಲದೆ ಕರುಣಿಸೊ ಆದಿ ಮೂರುತಿ ನಿನ್ನ ಆದರದಿ ಸ್ಮರಿಪ ಪರ- ಮಾದರವ ನಿತ್ತು ಸಲಹೊ ಮೋದ ಪಡುವ ಭಾಗ್ಯ ಮಾಧವನೆ ದಯಪಾಲಿಸೋ ಮಾಧವ ಜನಾರ್ದನ ಕ್ರೋಧಿ ಸಂವತ್ಸರವು ಭಕುತರ ಕ್ರೋಧಗಳ ಕಳೆಯುತ್ತ ಸಲಹಲಿ2 ಶರಣೆಂದು ಬೇಡುವೆ ಪರಿಪರಿ ಅಘಗಳ ಪರಿಹರಿಸೆಂದು ನಾ ಸ್ಮರಿಸಿಬೇಡುವೆನು ಸರಸಿ ಜೋದ್ಭವÀಪಿತನೆ ಸರಸಿಜಾಕ್ಷಿಯ ಕೂಡಿ ಹರುಷದಿ ನೆಲಸೆನ್ನ ಹೃದಯದಲಿ ದೇವ ಸರಸಿಜನೇತ್ರನೆ ಬಿಡದೆ ನಿನ್ನನು ಸ್ಮರಿಪ ಕಡುಭಾಗವತರ ಸಂಗವನೆ ನೀಡೈ ಮೃಡನ ಸಖನೆ ನಿನ್ನಂಘ್ರಿ ಸ್ಮರಿಸುವ ಭಾಗ್ಯ ತಡೆಯದಲೆ ಪಾಲಿಸುತ ಪೊರೆ ಶ್ರೀ ಕಮಲನಾಭ ವಿಠ್ಠಲನೆ ದಯದಲಿ 3
--------------
ನಿಡಗುರುಕಿ ಜೀವೂಬಾಯಿ
ಧರಣಿಜಾ ಪ್ರಿಯರಾಮಾ ಮರುತಾನಂದನ ಪ್ರೇಮಾ ಸುರಮುನಿಮನಧಾಮಾ ರತನರಾಮಾ ಪ ದುರುಳ ರಕ್ಕಸ ಭೀಮಾ ತರಣಿವಂಶಲಲಾಮಾ ಪರಮ ಸುಂದರ ನಾಮಾ ಲೋಕಾಭಿರಾಮಾ ಅ.ಪ ಎನ್ನಕಾಯುವರಾರು ನೀನಲ್ಲದಿನ್ನಾರು ನಿನ್ನಪಾದವತೋರು ಕರುಣವ ಬೀರು ಎನ್ನ ಪಾತಕಭಂಗ ನಿನ್ನಿಂದ ನೀಲಾಂಗ ನಿನ್ನ ಭಕ್ತರಸಂಗವೀಯೋ ಮಾಂಗಿರಿರಂಗ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಂಬಿ ನೆಚ್ಚದಿರು ನರಲೋಕ ಸುಖವೆಂಬ, ಅಂಬಲಿ ಪರಮಾನ್ನ ಪ ಹಂಬಲಿಸುವುದು ಹರಿಲೋಕಾನಂದವೆಂಬ ಪೀಯೂಷಪಾನ ಅ.ಪ ನೊಣ ಬೆರಸಿದ ಊಟ ಪರಮಭಾಗವತರ ಪದಸಂಗವೆಂಬುದು ಮಸ್ತಕದ ಮಕುಟ ಕೇವಲ ಯಮಕಾಟ ಪರತತ್ವವಾದ ಶ್ರೀಹರಿಯ ತಿಳಿವುದೆ ವೈಕುಂಠಕೆ ಓಟ 1 ಹಾರಿ ಹೋಗುವ ಹೊಟ್ಟು ಇದ್ದಾಗ ದಾನ ಧರ್ಮಂಗಳ ಮಾಡೋಡು ಕೈವಲ್ಯಕೆ ಮೆಟ್ಟು ಹೊದ್ದಿರುವರ ಕಂಡಾಸೆಯಪಟ್ಟರೆ ಹೋಗುವಿ ನೀ ಕೆಟ್ಟು ಬುದ್ಧಿಹೀನರಿಗೆ ಪೇಳದಿರೆಲೊ ತತ್ವಸಾರ ಸುಂದರ ಗುಟ್ಟು 2 ಅಲ್ಪಾವಕಾಶವು ಈ ಶರೀರವು ಗಾಳಿಗೊಡ್ಡಿದ ದೀಪ ನೋಡು ಹಾಲುಸಕ್ಕರೆ ತುಪ್ಪ ಬಲ್ಪಂಥ ಮಾಡದಿರು ಜನ್ಮಜನ್ಮದಲಿ ಬಿಡದೆಲೊ ಸಂತಾಪ ಸ್ವಲ್ಪಕಾಲಾದರೂ ಮಧ್ವಮತವೊಂದು ಭವವೇ ನಿರ್ಲೇಪ3 ಕರ್ಮ ಆವುದಾದರು ಸೂಳೆಗಿಕ್ಕ್ಕಿದ ವಿತ್ತ ಹರಿಗೆ ವಿಶ್ವಾಸದಿ ಅಣುಮಾತ್ರ ಅರ್ಪಿಸೆ ಅವನೆ ನಿರ್ಮಲ ಚಿತ್ತ ನಿರುತಗ್ರಾಸಕೆ ಚಿಂತೆಮಾಡಲು ಒದಗದು ಪುಣ್ಯವು ನಿನಗೆತ್ತ ಅರೆಮನವಿಲ್ಲದೆ ದೃಢಮನದಿಪ್ಪುದೆ ಸಂಪಾದನೆ ಭತ್ಯ4 ಭಾವವಿರಕ್ತಿಯ ವಹಿಸದಿದ್ದರೆ ನಿನಗಾಗುವುದು ಖೇದ ಪರಿಪರಿಯಾಸ್ವಾದ ದೇವಕಿಸುತ ನಮ್ಮ ವಿಜಯವಿಠ್ಠಲನಂಘ್ರಿ ತೀರುಥ ಪ್ರಾಸಾದ ನಿತ್ಯ ನರಕವಾಸ ಎನ್ನತಲಿದೆ ವೇದ 5
--------------
ವಿಜಯದಾಸ
ನಂಬಿದ್ಯಾ ಮನವೇ ನಂಬಿದ್ಯಾ ಪ ನಂಬಿದ್ಯ ಮನವೆ ಕೊಂಡಾಡಿದ್ಯ ಆನಂದ ತೀರ್ಥರ ಮತವೆಸತ್ಯವೆಂದು ಅ.ಪ ಇಂದಿರೆ ರಮಣನೆ ಪರದೈವವೆಂದು ಬಂಧನಾದಿ ಅಷ್ಟಕರ್ತೃತ್ವ ಆತನದೆಂದು ಕುಂದುಕೊರತೆಗಳಿಲ್ಲದ ಸರ್ವೇಶ ಶಾಶ್ವತನೆಂದು ನಂದ ಕಂದನು ಸಾನಂದ ಗುಣ ಪೂರ್ಣ ಸ್ವರತನೆಂದು 1 ನಾರಾಯಣನೆ ಸರ್ವೋತ್ತುಮನು ಎಂದು ಸಿರಿ ಅಜಶಿವರೆಲ್ಲ ಹರಿಯಕಿಂಕರರೆಂದು ಮುರವೈರಿ ಅಂತಃ ಬಹಿರ್ವ್ಯಾಪ್ತನು ಎಂದು ಶಾರಂಗ ಪಾಣಿಯೆ ಸರ್ವಾಂತರ್ಯಾಮಿಯೆಂದು 2 ಸಾಕಾರಸರ್ವೇಶ ನಿರ್ವಿಕಾರ ನೆಂದು ಓಂಕಾರ ವಾಚ್ಯನೆ ಸರ್ವಾಧಾರ ಸರ್ವಗನೆಂದು ಅಕಾರಾದಿ ಸರ್ವವರ್ಣಸ್ವರ ಶಬ್ದ ವಾಚ್ಯನುಎಂದು ಅಜ ಅಪ್ರಮೇಯನೆಂದೂ3 ವೇದಗೋಚರ ತಾವೇದಾತೀತನೆಂದು ವಿಧಿಸಿರಿ ವಂದಿತ ಸಾಕಲ್ಯದಿ ಅವಾಚ್ಯನೆಂದು ಮಧುಸೂಧನನು ಚಿನ್ಮಯ ವಪುಷನೆಂದು ಭೇದವಿಲ್ಲದ ರೂಪ ಗುಣಕ್ರಿಯ ಅವಯವನೆಂದು4 ನಾಶರಹಿತ ಕೇಶವನೊಬ್ಬ ಆರ್ತಿವರ್ಜಿತ ನೆಂದು ಕ್ಲೇಶರಹಿತ ವಾಸುದೇವನು ವಿಧಿನಿಷೇಧ ವರ್ಜಿತನೆಂದು ವಿಶ್ವೇಶ ಸರ್ವತಂತ್ರ ಸ್ವತಂತ್ರನು ಸಾರ್ವಭೌಮನು ಎಂದೂ ವಾಸುಕಿ ಶಯನನು ಲೀಲೆ ಗೋಸುಗ ವಿಹಾರಮಾಳ್ಪಾನೆಂದು5 ಪುರುಷ ಸೂಕ್ತ ಪ್ರತಿಪಾದ್ಯ ಅಪ್ರಾಕೃತನೆಂದು ವರಗಾಯತ್ರ್ಯಾದಿ ಸರ್ವಮಂತ್ರ ಪ್ರತಿಪಾದ್ಯನೆಂದು ಅಪವರ್ಗ ಗತಿದಾಯಕನೆಂದೂ ಪಾದ ಭಜನೆಯೆ ಸಾರವೆಂದೂ 6 ವಿರಂಚಿ ಜನಕನೆ ಸರ್ವತ್ರ ಸರ್ವರಲಿದ್ದು ಸರ್ವಕಾರ್ಯ ಕಾರ್ಯಗಳನು ಮಾಡಿ ಮಾಡಿಸುವನೆಂದು ಸರ್ವಜೀವರಿಗೆ ಕರ್ಮಗಳುಣಿಸಿ ತಾ ನಿರ್ಲೇಪನೆಂದೂ ಖರಾರಿರೂಪಗಳೆಲ್ಲ ಅನಾದಿ ಶುಕ್ಲಶೋಣಿತವರ್ಜಿತವೆಂದು7 ಲಕ್ಷ್ಮಿರಮಣನು ಪಕ್ಷಪಾತ ರಹಿತನೆಂದು ಪಕ್ಷಿವಾಹನನು ಕ್ಷರಾಕ್ಷರ ವಿಲಕ್ಷಣನೆಂದು ಲಕ್ಷ್ಮಣಾಗ್ರಜನು ಕುಕ್ಷಿಯೊಳಗೆ ಬ್ರಹ್ಮಾಂಡ ರಕ್ಷಿಪನೆಂದು ಇಕ್ಷು ಚಾಪನ ಪಿತನಚಿಂತಾದ್ಭುತನೆಂದು 8 ಹಂಸಾದಿ ಹದಿನೆಂಟು ರೂಪಗಳ ಧರಿಸಿ ಹೊರಗೆ ವ್ಯಾಪಿಸಿ ಕಂಸಾರಿಸಕಲವ ನಡಿಸೀನಡಿಸುತ ಸುಖದುಃಖಗಳ ಲೇಶಯೋಗ್ಯತೆ ಮೀರಗೊಡದಲೆ ಉಣಿಸುವನೆಂದು 9 ಪತಿತ ಪಾವನ ಪರಾವರೇಶ ತ್ರಿಗುಣವರ್ಜಿತನೆಂದು ಸತತ ಸ್ವಪ್ನ ಸುಷಪ್ತಿ ಜಾಗ್ರತೆ ಮೋಕ್ಷಾ ವಸ್ಥೆಗಳಲಿ ವಿಶ್ವ ತ್ವೆಜಸ ಪ್ರಾಜ್ಞ ತುರ್ಯರೂಪಾದಿಂದ ಮತಿ ಪ್ರೇರಕನಾಗಿ ಕಾದುಕೊಂಡು ಪೊರೆಯುವ ನೆಂದು10 ಸತ್ಯವತಿ ಸುತನು ಸತ್ಯ ಸಂಕಲ್ಪನೆಂದು ಆತನೆ ನಿತ್ಯಾನಿತ್ಯ ಜಗದೀಶನಂತರ್ಯಾಮೀಯೆಂದು ಮುಕ್ತಾ ಮುಕ್ತರ ನಾಥ ಮುಖ್ಯ ಬಿಂಬನು ಚತುರಾನನಾದಿಗಳಿಗೆಲ್ಲಾ ಎಂದು11 ಅನಿಲ ಜೀವೋತ್ತಮ ಹರಿಯ ಪ್ರಥಮಾಂಗ ಅಪರೋಕ್ಷ ಪ್ರಭುವು ಅಣು ಮಹದ್ಘನ ರೂಪ ಚರಿತ ಭಾರತೀಶ ವಾಣೀ ಪತಿಯ ಪದಾರ್ಹ ವಾತದೇವನು ಎಂದು 12 ಹನುಮ ಭೀಮ ಮಧ್ವ ಮೂರಾವತಾರದ ದೇವ ಅನುಪಮ ಬಲನಿಸ್ಸೀಮ ಪುರುಷತೇಜ ತೃಣ ಮೊದಲಾದ ಸರ್ವಜೀವರಲ್ಲಿದ್ದು ಅವರ ಹರಿಯಾಜ್ಞೆಯಂತೀವನೆಂದೂ 13 ದ್ವಾತ್ರಿಂಶಲ್ಲಕ್ಷಣ ಸಂಪನ್ನ ಗುರು ಮಧ್ವನೆಂದು ಆತನೇಲೋಕಕ್ಕೆಲ್ಲ ಗುರವು ಎಂದು ಈತ ಸಕಲಪೇಳಿದ ಮಾತಿಗೆ ಸರಿಯಿಲ್ಲವು ಎಂದು ಪ್ರೀತಿಯಿಂದಲಿ ಭಜಿಪ ಭಕ್ತಗೇನೆ ಮುಕ್ತಿಯೆಂದು 14 ಹರಿಯ ಮತವೆ ಹನುಮನ ಮತವು ಎಂದು ಸಿರಿ, ವಿರಂಚಿ ಪವನ ವಾಣಿ ಭಾರತೀಯರಲ್ಲಿ ಗರುಡ ಶೇಷ ಶಿವ ಶಕ್ರಾದಿಸರ್ವರೊಳಗೆ ತಾರತಮ್ಯ ಪಂಚ ಭೇದವು ಸತ್ಯವೆಂದು 15 ಭಾರತಿ ಪತಿಯದ್ವಾರವೆ ಹರಿಯು ಸ್ವೀಕರಿಪ ನೆಂದು ಮುರಾರಿಯ ಒಲುಮೆಗೆ ಜ್ಞಾನಯುತಭಕ್ತಿಯೆ ಸಾಧನವೆಂದು ಧರೆಯೊಳಗೆ ಹರಿನಾಮ ಸ್ಮರಣೆಗೆ ಸರಿಯಿಲ್ಲವು ಎಂದು ಮಾರಮಣನ ಅನುಗ್ರಹವೆ ಮೋಕ್ಷದಾಯಕ ವೆಂದು 16 ಅರಿಷಡ್ವರ್ಗಗಳಳಿಯುವುದೆ ವೈರಾಗ್ಯ ಮಾರ್ಗವೆಂದು ಗುರುವಿನ ಕರುಣವೆ ಜ್ಞಾನಕ್ಕೆ ಕಾರಣವೆಂದು ಸಾರಮಾರ್ಗಕ್ಕೆ ಸಾಧುಗಳ ಸಂಗವೆ ಮುಖ್ಯವೆಂದು ನೀರಜಾಕ್ಷಗೆ ಸರಿ ಮಿಗಿಲು ಇಲ್ಲವೆಂದು 17 ಜೀವ ಈಶಗೆ ಭೇದ ಈಶ ಜಡಕೆ ಭೇದ ವೆಂದು ಜೀವ ಜೀವಕೆ ಭೇದ ಜಡ ಜಡಕೆ ಭೇದವೆಂದು ಪರಿ ಪಂಚ ಭೇದವೆಂದು ಸಾವಧಾನದಿ ತಿಳಿದು ಜಗತ್ಸತ್ಯವೆಂದು ಧೃಡದಿ 18 ಸುರರೊಳುನರರೊಳು ಅಸುರರೊಳು ಎಲ್ಲೆಲ್ಲು ತಾರತಮ್ಯವು ಅನಾದಿಯಿಂದಲಿ ಇರುತಿಹುದೆಂದು ಸ್ವರೂಪಾನಂದಾವಿರ್ಭಾವವೆ ಮುಕ್ತಿಯೆಂದು ಅರವಿಂದನಾಭಗೆ ಸರ್ವರು ಸದಾದಾಸರೆಂದು 19 ಧನಕನಕ ವನಿತಾದಿಗಳೆಲ್ಲ ಹರಿಗೆ ಅರ್ಪಿತ ವೆಂದು ಏನೇನು ಮಾಡುವುದೆಲ್ಲ ಶ್ರೀ ಕೃಷ್ಣನ ಸೇವೆಯೆಂದು ದೀನ ಜನ ಮಂದಾರನಾಧೀನ ಸುಖದುಃಖಾಗಳೆಂದು ಏನು ಬೇಡದೆ ಹರಿಯ ಸತತನೆನೆವೋದೆ ಸಾಧನ ವೆಂದು20 ನಾಕೇಶ ಜಯತೀರ್ಥ ವಾಯ್ವೂಂತರ್ಗತನಾದ ಶ್ರೀಕೃಷ್ಣ ವಿಠಲಾನೆ ಮಮಸ್ವಾಮಿ ಸರ್ವಸ್ವವೆಂದು ಸಕಲ ಕರ್ಮಗಳರ್ಪಿಸುತ ತ್ರಿಕರಣ ಶುದ್ಧಿಯಿಂದಲಿ ಮಾಕಳತ್ರನ ಸತತ ಭಜಿಸುತ್ತಿರಬೇಕು ಎಂದು 21
--------------
ಕೃಷ್ಣವಿಠಲದಾಸರು
ನಾನು ಸಜ್ಜನನಾದೊಡೆಹೀನವಿಷಯಂಗಳಿಗೆ ಎರಗುವೆನೇನಯ್ಯ ಪ. ಚಿತ್ತವÀ ಪುರುಷೋತ್ತಮನಲ್ಲಿಡದೆಉತ್ತಮರಾದವರೊಡನಾಡದೆತತ್ವವಿಚಾರವೊಂದರಿಯದೆ ನಾನು-ನ್ಮತ್ತರಸಂಗವ ಮಾಡುವೆನೇನಯ್ಯ1 ನಿರುತವು ಪರನಿಂದೆಗಳ ಮಾಡುತಲಿಗುರುಹಿರಿಯರನು ವಿಚಾರಿಸದೆಗುರುವೆ ದೈವವೆಂದರಿಯದೆ ನಾನುಪರರ ಒಡವೆಯನು ಬಯಸುವೆನೇನಯ್ಯ 2 ಹೇಯಶರೀರವ ಪೋಷಿಸುವೆನೆಂದು-ಪಾಯವನು ಮಾಡಿ ನಾ ಬಳಲುತಿಹೆರಾಯರು ಮಾಡಿದ ಶರಣರ ಹೊರೆವಹಯವದನ ನಿನ್ನ ನಾ ಮರೆತಿಹೆನೇನಯ್ಯ 3
--------------
ವಾದಿರಾಜ
ನಾನೇ ಸಜ್ಜನನಾದಡೆ ಇಂಥ ಹೀನ ವಿಷಯಗಳಿಗೆರಗುವೆನೇನಯ್ಯ ಪ. ನಿರುತದಿ ಪರರ ನಿಂದಿಸುತಿಹೆನೆಗುರುಹಿರಿಯರು ಸಜ್ಜನರೆನ್ನದೆಹರಿ ಪರದೈವವೆಂದರಿತು ಭಜಿಸದೆಪರರ ವಡವೆಗಳ ಬಯಸುವೆನೇನಯ್ಯ 1 ಚಿತ್ತವ ಪುರುಷೋತ್ತಮನ ಮನದಲ್ಲಿಡದೆಉತ್ತಮರಾದವರೊಡನಾಡದೆತತ್ವ ವಿಚಾರವ ಮಾಡದೆ ನಾನು ನ್ಮತ್ತರ ಸಂಗವ ಮಾಡುವೆನೇನಯ್ಯ 2 ಹೇಯ ಶರೀರವ ಪೋಷಿಸಿಕೊಂಡುಪಾಯವ ಚಿಂತಿಸಿ ಬಳಲುವೆನುರಾಯರ ಶರಣರ ಸಲಹುವರಂಗವಿಠಲನ ಬಿಡುವೆನೇನಯ್ಯ 3
--------------
ಶ್ರೀಪಾದರಾಜರು
ನಾರಾಯಣಚ್ಯುತ ವಿಠಲ ಪೊರೆಯ ಬೇಕಿವಳಾ ಪ ಮೂರ್ತಿ | ಪ್ರಾರ್ಥಿಸುವೆ ಹರಿಯೇ ಅ.ಪ. ರೋಗದಿಂ ನರಳಿ ಬಹು | ರಾಘವೇಂದ್ರರ ದಯದೀರೋಗ ವರ್ಜಿತಳಾಗಿ | ರಾಗ ರಹಿತೇ |ಭೋಗಗಳ ತೆರೆದು ವೈರಾಗ್ಯ ಮಾರ್ಗದಿ ತೆರಳೇಭೋಗಿ ಶೈಲೇಶ ಕಥೆ | ಕೇಳಿ ಮುಂಧೋಗೇ 1 ಮಂಗಳಾರತಿ ಕೊಂಡು | ಅಂಗನಾ ಮಣಿತೋರ್ವಮಂಗಳ ಪ್ರದ ಗುರುವ | ಕಂಗಳಲಿ ನೋಡೇಹೆಂಗಳೆಯು ಕಾತುರದಿ | ಭಂಗವಿಲ್ಲದೆ ಸಾಗೆಸಂಗವಾಯ್ತೀರ್ವ ನಿ | ಸ್ಸಂಗಿ ಮಾರ್ಗದರಾ 2 ಭವ | ತೋರಿಗುರುಗಳಲ್ಲಿಅರುಹಿದಳ್ ಮುತ್ತೈದೆ | ವಿಠಲ ಮಂದಿರವಾ 3 ವೃಜಿನ ವ್ಯಾಜ ಕರುಣಾಂಬುಧೆ 4 ಬಾಧೆಗೊಳ ಪಡಿಸದಲೆ | ಕಾದುಕೊ ಇವಳನ್ನಮೋದ ತೀರ್ಥರ ಮತದಿ | ಸಾಧನವ ಗೈಸೀಐದಿಸೆನೆ ಸದ್ಗತಿಯ | ಪ್ರಾರ್ಥನೆಯ ಸಲ್ಲಿಪುದುಮೋದ ಪ್ರಮೋದ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಿತ್ಯ ನಿರುಪಮ ಚಿದಾನಂದ ಕರುಣಾಬ್ಧಿ ನೀನೆ ದೊರಕೆ ನಿಲುಕೆ ಅಪಮಂಗಳನೆ ಮಂಗಳವನಿತ್ತೆ ಮನಸಿಗೆ ನೀನು ಅಂಗ ಮಂಗಳವಾುತುಹಿಂಗಿದವು ದುರಿತಗಳು ಸಂಗವಿದ್ದರು ಜಡದ ತೊಂಗವವ ಮನ ಮೀರಿತುನುಂಗುತಿದೆ ದೋಷಗಳ ಬಂದಡೊಡಬನ ತೆರದಿ ಭಂಗವೆಂಬುದು ಹೋುತುಅಂಗ ಲಿಂಗದ ಕಾಂತಿ ಹೊಂಗಿ ಹೊರಹೊಮ್ಮುತಿದೆ ರಂಗ ನಿನ್ನೊಲವಾುತು ುನಿತು 1ಹೊನ್ನಿನೊಳಗಿದ್ದ ಮಲಿನವನಗ್ನಿ ಕಳಚಿದರೆ ಮುನ್ನಿನಂದದಿ ಮಲಿನವೆಹೊನ್ನಾದ ಕಬ್ಬಿನವು ಕಬ್ಬಿನದ ಸಂಗದಲಿುನ್ನು ಕಬ್ಬಿನ ಭಾವವೆಬೆಣ್ಣೆ ಕ್ಷೀರದಿ ಬಂದು ಘೃತವಾದ ಬಳಿಕ ತಾ ಬೆಣ್ಣೆಯಲ್ಲದೆ ಕ್ಷೀರವೆನಿನ್ನ ಕೃಪೆುಂದ ಮಂಗಳನಾಮವನು ಸ್ಮರಿಸೆ ನಿನ್ನವಗೆ ದೋಷ ಬಹವೆ ಇಹವೆ 2ಬಾಳೆಯನು ಬಿತ್ತಿ ಪ್ರತಿ ದಿವಸ ನೋಡಿದಡಲ್ಲಿ ನೀಳವಾಗಿಹುದು ಸುಳಿಯುಕಾಲ ಬಂದರೆ ಗೊನೆಯು ಹಾಯ್ದು ಫಲವಾಗಿರಲು ಮೇಲೊಮ್ಮೆಯುಂಟೆ ಯೆಲೆಯುಕಾಲ ಕರ್ಮಾಧೀನವಾಗಿರುವ ಸಂಸಾರ ಲೋಲ ಮನಸಿನ ವೃತ್ತಿಯುಜಾಲದಿಂದಿರಲಲ್ಲಿ ನಿನ್ನಂಘ್ರಿ ಸ್ಮರಣೆುಂಮೇಲುಂಟೆ ಕರ್ಮಗತಿಯು ಸ್ಥಿತಿಯು 3ವೃತ್ತಿ ಮಾಯಾಕಾರ್ಯ ಮಾಯೆ ನಿನ್ನಾಧೀನ ವೃತ್ತಿ ಮಾಯೆಯು ಕಲ್ಪಿತಸುತ್ತಿ ಸುಳಿಸುಳಿದಾಡಿ ಸತ್ಯದಂದದಿ ತೋರಿ ಮತ್ತೆ ನಿನ್ನೊಳಗರ್ಪಿತಚಿತ್ತು ತಾನೆ ನಾಮರೂಪಾದ ಬಗೆುಂದ ಚಿತ್ತು ಚಿತ್ತಾಹುದುಚಿತಸತ್ಯಸಂಧನು ನೀನು ಚಿತ್ತವನು ಬಿತ್ತರಿಸಿ ವೃತ್ತಿಯಾುತು ಬೆಳೆಯುತಾ ಇರುತಾ 4ಮನದ ಸಂಶಯ ಬಿಡದು ಶ್ರವಣಮನನಾದಿಗಳನನುದಿನವು ಮಾಡುತಿರಲುಮನಕೆ ಸಾಕ್ಷಿಕನಾದ ನೀನು ಘನಮಾಯೆಯನು ಮನಕೆ ಮರೆಮಾಡುತಿರಲುಚಿನುಮಯನೆ ಮಾಯೆಯನು ಕಡೆಗೆ ತೆಗೆಯಲು ಜ್ಞಾನ ಜನಿಸುವುದು ನೀನು ಕೊಡಲುಇನಕೋಟಿಸಂಕಾಶ ಇಭರಾಜದುರಿತಹರ ಎನಲು ನಿಜವಾಗುತಿರಲು ನಿಲಲು 5ತರಣಿಕಿರಣಗಳಿಂದ ಜನಿಸಿದಾ ಮೇಘಗಳು ತರಣಿಯನು ಮುಚ್ಚಲಳವೆತರಣಿ ತಾನೆನದಿವನು ಹರಹಿ ಹಿಂದಕೆ ತೆಗೆಯೆ ನೆರೆ ಹಿಂಗಿ ಹೋಗದಿಹವೆಪರಮಪುರುಷನು ನೀನು ಸ್ಮರಿಸಿ ಮಾಯೆಯ ಬೀಸಿ ತಿರುಗಿಸಲು ಮಾಯೆಗಿರವೆದುರಿತವಾಗಿರೆ ಜನಕೆ ನೆರೆ ಭಕ್ತಿಯನು ನೀನು ಕರುಣಿಸಲು ಮತ್ತೆ ಭವವೆ ಧ್ರುವವೆ 6ಅರಣಿುಂದುದುಭವಿಸಿದನಲ ಮುನ್ನಿನ ತೆರದ ಅರಣಿಯಾಗಿಯೆ ತೋರ್ಪನೆಅರೆದು ತಿಲವನು ತೆಗೆಯೆ ತೈಲವನು ತಿಲ ಬಳಿಕ ಇರುವದೆ ತೈಲದೊಡನೆಬೆರೆದು ಕರ್ಪುರವಗ್ನಿಯೊಡನಾಡಿ ಬೇರ್ಪಟ್ಟು ಮೆರೆವುದೆಂತಗ್ನಿಯೊಡನೆತಿರುಪತಿಯ ವೆಂಕಟನೆ ನಿನ್ನ ಚರಣದೊಳಿಟ್ಟ ಶರಣ ಮುನ್ನಿನ ಮನುಜನೆಯಹನೆ 7ಓಂ ಪುಣ್ಯ ಶ್ಲೋಕಾಯ ನಮಃ
--------------
ತಿಮ್ಮಪ್ಪದಾಸರು