ಒಟ್ಟು 570 ಕಡೆಗಳಲ್ಲಿ , 78 ದಾಸರು , 477 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂಬ ನಾಮವನು ಉಚ್ಚರಿಸೆ ಸಾರುವರು ಭಕುತರಾದವರು ವೈಕುಂಠವನು ಆರಾದರೇನು ಮರೆಯದೆ ಹರಿಯಧ್ಯಾನಿಸಲು ಸಿರಿಯರಸ ಕಾಯ್ದು ಕೊಂಬ ಪ ಅರಸಕೇಳೈ ಬಳೀಕ ಪಾಂಡ್ಯದೇಶದೊಳೋರ್ವ ಪತಿ ಪೆಸರು ಇಂದ್ರ ದ್ಯುಮ್ನಧರಾತ್ಮ ಹರಿ ಪರಾಯಣನೆನಿಸಿ ನಿರುತಸತ್ಯ ಸುಶೀಲ ಕರಿತುರಗದಾಸೇಯ ತೊರೆದು ವಿರತನಾಗಿಯೆ ಪುರವ ಪೊರಟು ಸುಸ್ಥಿರನಾಗಿ ಬರವಾಯ್ತ ಗಸ್ತ ಶಿಷ್ಯವೆರಸಿ 1 ಸದಮಳಾತ್ಮರನ ಚಿಂತೆಯಿಂದ ಭೂಪೇಳದಿರೆ ಮದಮುಖನ ತಪವ ನೋಡುವೆನೆನುತ ಮುನಿ ಮುನಿದು ತದುಬಿಗರ್ಜಿಸಿ ಶಾಪವೀಯಗಜವಾಗೆನುತ ಸದು ಹೃದಯನೆದ್ದು ಬಳಿಕ ಪಾದಕ್ಕೆ ವಂದಿಸಿ ಶಾಪ ವೆಂದು ಬಿಗುಗಡೆಯೆನಲು ಸಾದರದಿಂ ಮುನಿಪನೆಲ ನೆಗಳು ಪಿಡಿಯೆಗತಿನಿನ ಗೆಂದು ಹೋದ ಮುನಿಪತಿ ಇತ್ತಲು 2 ಇಂತು ಭೂಮೀಶ ಶಾಪವ ತಾಳ್ದು ಬಿಸುಸುಯ್ದು ಕಂತು ಜನಕನೆ ಬಲ್ಲನೆಂತು ಗೆಲಿದಪೆನ್‍ನುತ ದಂತಿ ಮುಖವಾಗಿ ಭೂಕಾಂತೆಯೊಳು ಜನಿಸಿ ಸುರ ಸಂತತಿಗಳಲ್ಲು ಮಾ ಇಂತೆಸೆದನು 3 ತರುನಿಕರ ಚೂತಾಮಲಕ ಸುರಹೊನ್ನೆ ಪುನ್ನಾಗ ಮೆರೆವಬಿಲ್ವಶ್ವತ್ಥಮಾ ಕಿರುಗಿಡುವಿನೊಳಗೆ ಚರಿಸುವ ಕರಡಿ ಸೀಳ್ನಾಯಿ ಭೇರುಂಡ ಮುಂತಿರುತಿರಲು ಗರುಡ ಗಂಧರ್ವ ಚಾರಣರು ಸುರಕಿನ್ನರರು ಇರುತಿಹರು ಕಿಂಪುರುಷರು 4 ತ್ರಿಜಗದೊಳಗೆಣೆ ಗಾಣೆ ಭುಜಗಶಯನನೆ ಬಲ್ಲ ಗಜರಾಜ ಬೆಳೆದು ಕುಜನರ ಮಾರ್ಗವಂ ಪಿಡಿದು ಅಜಸೃಷ್ಟಿ ಬಿರಿಯೆ ಒದರಿ ನಿಜಪುತ್ರ ಮಿತ್ರಸ್ತ್ರೀಜನ ಸಹಿತಲೊಡಗೊಂಡು ಬುಜ್ಜಸತ್ವದಿಂದ ವನವನು ಮುರಿದು ಸಂಹರಿಸಿ ಭೂಜಲವ ನರಸಿ ಬಂದ 5 ಗಂಡು ಹೆಣ್ಣಾನೆಗಳ ತಂಡ ಸಹಿತಲೆ ಬಂದು ಕಂಡು ಜಲವನು ಈಂಟಿಗುಂಡಿ ಮಡುವನುಸಾರಿ ಚಂಡಿಗೊಳಿಸುತ ಧರಣಿಯ ಅಂಡೆಲೆವ ಮದದ ಸ್ತ್ರೀಯರ ಕೂಡಿ ನೆಗಳು ಖತಿಗೊಂಡು ಮಡುವಿನೊಳಗೆಳೆಯಲು 6 ನೆಗಳು ಸುತ್ತಲಿಹ ಕರಿಘಟೆಗಳೇನಿದದ್ಬುತವೆಂದು ಮತ್ತೆ ಸತ್ವದಲೆಳೆಯೆ ತೆತ್ತಿಗನು ಬಾರದಿರೆ ತಮ್ಮಗುತ್ತಿಗುಳಿದಿಹ ಹಸ್ತಿ ಇತ್ತ ಗಜರಾಜ ಕಾದುತಿರಲು ಹಲಕಾಲ ಬತ್ತಿ ಅಸುಗುಂದಿ ಚಿತ್ತದಿ ತಿಳಿದು ಧ್ಯಾನಿಸುತ ಮತ್ತಾರು ಕಾಯ್ವರೆನುತ 7 ಇಕ್ಕರ್ತರಿಂತು ಕಾದುತ್ತಿರಲು ಕರಿವರನ ಸೊಕ್ಕು ಮುರಿದುದು ತಮವುಚೊಕ್ಕಿ ಮುಖವನು ನಭಕೆ ಸೊಕ್ಕಿದುದುನೆಗಳು ಬಳಿಕ ಮುಕ್ಕುರು ದಿವ್ಯಸಾಗರ ವರುಷ ಪರಿಯಂತ ಸಿಕ್ಕಿ ನಗಳೊಳು ಕಾದಿ ಕುಕ್ಕುರಿಸಿ ನೀರಿನೊಳು ದಿಕ್ಕನೊಡುತ್ತ ಕಕ್ಕನೆ ಕರಗಿ ಜ್ಞಾನದಲಿ ಭಕ್ತವತ್ಸಲನ ನೆನೆದ 8 ರಕ್ಷಿಸೆನ್ನನು ಬಿಡದೆ ಪಕ್ಷಿವಾಹನಗಮನ ಸೇವ್ಯ ಕುಕ್ಷಿಯೊಳಗಿಂಬಿಟ್ಟು ರಕ್ಷಿಸುವೆ ಭಜಕರನು ಮೋಕ್ಷದಾಯಕನೆ ಕಾಯೋ ಲಕ್ಷ್ಮೀಶ ಕೇಶವ ಉಪೇಕ್ಷಿಸದೆ ನೀ ಬಂದು ಭಕ್ಷಿಸುವ ನೆಗಳನೀ ಶಿಕ್ಷಿಸಲು ಬೇಕು ಅಕ್ಷಿಯನು ಇಟ್ಟುಬಂದು 9 ಸರಸಿರುಹದಳನಯನ ಮೂರ್ತಿ ಪರಿ ಹರಿಸೋ ಕ್ಷೀರಾಬ್ಧಿ ಶಯನನೆಂದು ಪರಿ ಪರಿಯ ಸ್ತುತಿಸಲಾಕ್ಷಣ ಮಹಿಮ ಧ್ವನಿಗೇಳ್ದು ನಾಗಿಕರದಿ ಚಕ್ರವ ಕೊಂಡು ಭರದಿ ಭಕುತನ ಕಂಡು ಕರಿರಾಜಗಭಯವಿತ್ತ 10 ಸಿರಿ ಮೊಗದ ನಳಿನಾಯತೇಕ್ಷಣದ ತೊಳಪ ಕದಪಿನ ಮಿಸುಪ ನವರತ್ನ ಕುಂಡಲದ ಕೌಸ್ತುಭ ಹಾರದುರಸ್ಥಳದ ಹೊಳೆವ ಮಣಿಮಕುಟ ನೇಳಿವದಂತಪಂಕ್ತಿಯ ಚಾರು ಕೋರವಿಸೆ ಕಂಡ 11 ಮೇಲೆ ಕೈವಾರಿಸುವ ಸುರರ ದುಂದುಭಿ ಮೊಳಗೆ ಹೊಳೆಯ ಎತ್ತಿದ ತೋರ ಸತ್ತಿಗೆಯ ತೋರಣದ ಸಾಲುಗಳ ಸಂದಣಿಯ ಸಂಭ್ರಮದ ಜಾಲವನು ಕಂಡುಗಜವು ಪಾಲಿಸೈ ಗೋವಿಂದನಾಥ ಬಂಧು ತ್ರಾಹಿ ಭವಾಬ್ಧಿಸಾರ ತ್ರಾಹಿ ಪಾಲಿಸೈ ತ್ರಾಹಿ ಎನುತ 12 ಗಡಗಡನೆ ನಡುಗತಿರೆ ಕಡಲಶಯನನು ಕಂಡು ಕಡುಕೃಪೆಯೊಳೈ ತಂದು ಮಡುವ ಧುಮುಕಿಯ ಗಜವ ಪಿಡಿದಾಗ ವಾಮಕರದಿಂದಳೆಯನೆಗಳು ಸಹತಡಿಗೆ ಬರಲಾಗಕಂಡು ಘುಡು ಘುಡಿಸಿ ಕೋಪದಿಂ ತುಡುಕಿ ಚಕ್ರವತೆಗೆದು ಪಿಡಿದು ನೆಗಳನು ಕಡಿಯೆ ಒಡನಾಗ ನಿಜರೂಪ ಬಿಡುಗಡೆಯಾಯಿತೆಂದು ನಡೆದು 13 ಹರಿ ಬಳಿಕ ಕರಿವರಗೆ ವಿಶ್ವರೂಪವತೋರಿ ತರಣಿಕೋಟಿ ಸಹಸ್ರತೇಜದಿಲ ರಂಜಿಸಿಯೆ ಪರಿದುಹರಿವೋಲೆಸೆದನು ಬಳಲಿದೆಯಾ ಎಂದು ಕರುಣಾಕಟಾಕ್ಷದಿಂ ಕರಿವರನ ಸಹಿತ ವಾಸ ದೆಡೆಗೆ 14 ಅವನುದಯ ಕಾಲದೊಳೆದ್ದು ಪೇಳುವನು ಆವರಿದ ಭಕ್ತಿ ಭಾವದಲಿದನು ಕೇಳುವರು ಪಾವನರು ಪುಣ್ಯಾತ್ಮರು ಕೋವಿದರು ಧರಗೆ ಗಜರಾಜೇಂದ್ರ ಮೋಕ್ಷವನು ಸಾವದಾನ ದಲಿದನು ನೇಮದಲಿ ಕೇಳ್ವವರ ನೆನೆದವರ ಕಾಯ್ವನೆಂದು 15
--------------
ಕವಿ ಪರಮದೇವದಾಸರು
ಎಲ್ಲ ದೇವರ ಗಂಡ | ಕೃಷ್ಣ ಚಿಲ್ಲರೆ ದೈವರ ಮಿಂಡ ಪ ಪಾದದಿ ನದಿಯನು ಪೆತ್ತ | ಅದನು ರುದ್ರನು ಶಿರದಲಿ ಪೊತ್ತ ಮಾಧವನ್ಹೊಕ್ಕಳ ಜಾತ | ಶತ ಮೋದನು ಲೋಕ ಪ್ರಖ್ಯಾತ 1 ಸೃಷ್ಟಿ ಸಂಹಾರಗೈದ | ಪರ ಮೇಷ್ಟಿ ರುದ್ರರನಾಳ್ದ ಯೆಟ್ಟ ದೈತ್ಯರ ಶಿರ ಮುರಿದ | ದುರಿತ- ದೃಷ್ಟಿಸಿ ನಾಶಗೈದ 2 ಬಂಟರ ಪಾಲಕನೀತ | ವೈ- ಕುಂಠದ ಒಡೆಯನು ದಾತ ತುಂಟರ ಮಡಹುವ ಸತತ | ನಮಗೆ ನಂಟನು ಗೋಕುಲನಾಥ 3 ಮನಸಿಗೆ ಬಂದುದು ಸಿದ್ಧ | ಪ್ರತಿ ಯೆಣಿಸುವ ಜೀವನೆ ಬದ್ಧ ನೆನೆಸುವರಲಿ ತಾನಿದ್ದ | ದಯ ವನಧಿಯು ಬೆಣ್ಣೆಯ | ಕದ್ದ 4 ಭಂಗ | ತಾ ನಿರುತ ಮಾಡುವ ರಂಗ ಜಯೇಶವಿಠಲ ತುಂಗ | ಮಹಿ ಮಾ ರಕ್ಷಿಸು ದಯಾಪಾಂಗ
--------------
ಜಯೇಶವಿಠಲ
ಎಲ್ಲಿ ನೋಡಿದರಲ್ಲಿ ಚನ್ನಕೇಶವನು ಪುಲ್ಲಲೋಚನನಾದ ಶ್ರೀ ಕೃಷ್ಣನು ಪ ಭೂತಳ ಪಾತಾಳ ಸಕಲ ಲೋಕಗಳಲ್ಲಿ ಭೂತ ಪ್ರೇತಾಳ ಕ್ರಿಮಿ ಜಂತುಗಳಲ್ಲಿ ಮಾತು ಚೇಷ್ಟಗಳಲ್ಲಿ ಕೆರೆ ಭಾವಿ ವನದಲ್ಲಿ ಕೋತಿ ಖಗವೃಂದ ಪಶುವರ್ಗಂಗಳಲ್ಲಿ 1 ವೇದ ಶಾಸ್ತ್ರಗಳಲ್ಲಿ ಸರ್ವ ಧರ್ಮಗಳಲ್ಲಿ ಬೋಧಕ ಮೊದಲಾದ ಗುರು ವರ್ಗದಲ್ಲಿ ಪಾದ ಪಾದಗಳಲ್ಲಿ ಸಾಧು ಸಜ್ಜನರಲ್ಲಿ ವಾದ್ಯ ಮೃದಂಗಾಗಿ ನಾದಂಗಳಲ್ಲಿ 2 ಕಣ್ಣುಗಳಿಗೆಸೆಯುವ ಸಕಲ ವಸ್ತುಗಳಲ್ಲಿ ಮಣ್ಣಿನಲಿ ಸರ್ವತ್ರ ಘನ ಸೃಷ್ಟಿಯಲ್ಲಿ ಬಣ್ಣಿಸಲ್ಕಾಗದ ಹರಿ ಕೀರ್ತನೆಗಳಲ್ಲಿ ಹೆಣ್ಣು ಹೊನ್ನು ಮಣ್ಣು ತ್ರಿವರ್ಗದಲ್ಲಿ 3 ಸಕಲ ಚರ ಪ್ರಾಣಿಯಲಿ ಅಚರ ಜೀವಗಳಲ್ಲಿ ಸಕಲ ಸ್ತ್ರೀ ಪುರುಷರಲಿ ಸುರದನುಜರಲ್ಲಿ ಸಕಲ ಧಾನ್ಯಗಳಲಿ ತಿಂಡಿ ತಿನಸುಗಳಲ್ಲಿ ಸುಖ ದುಃಖ ಬಹಿರಂಗ ಅಂತರಂಗದಲಿ 4 ದಿನದಲ್ಲಿ ನಿಶೆಯಲ್ಲಿ ಅನ್ನಪಾನಗಳಲ್ಲಿ ಅಣುರೇಣು ತೃಣಕಾಷ್ಟ ಸರ್ವ ದಿಕ್ಕಿನಲೀ ಕನಸಿನಲಿ ಮನಸಿನಲಿ ಪಂಚ ಭೂತಗಳಲ್ಲಿ ಜನನ ಮರಣಾತೀತ ಚನ್ನಕೇಶವನು 5
--------------
ಕರ್ಕಿ ಕೇಶವದಾಸ
ಎಷ್ಟು ಕೂಗಲು ದಯ | ಪುಟ್ಟಲಿಲ್ಲವೊ ನಿನಗೆ ಬೆಟ್ಟದೊಡೆಯ ಹರಿಯೆ ಪ. ಸಿಟ್ಟೇಕೆ ಎನ್ನೊಳು ಕೃಷ್ಣಮೂರುತಿ ನಿನಗೆ ಬಿಟ್ಟರೆ ನೀ ಎನ್ನ ಸೃಷ್ಟಿಯೊಳಾರುಂಟೊ ಅ.ಪ. ಪರಮ ಪಾತಕಿಯೆಂದು | ತೊರೆದರೆ ನೀ ಎನ್ನ ಮೊರೆಬೀಳಲಿನ್ನಾರಿಗೆ ಕರುಣಾಮೂರುತಿ ಎಂಬೊ ಬಿರುದು ಪೊತ್ತಿಲ್ಲವೆ ಸರಿಯೆ ನಿನಗಿದು ಕೊರಗಿಸುವುದು ಜರಿದು ಬಳಲುವೆ ಧರೆಯೊಳೀಗ ನಾ ಸುರರ ರಕ್ಷಕ ಪರಮಪಾವನ ಕರವ ಮುಗಿವೆ ದರುಶನವ ನೀಡೊ 1 ನೀನಲ್ಲದೆ ಇನ್ನು | ನಾನಾರ ಭಜಿಸಲೊ ಗಾನವಿಲೋಲ ಹರಿ ಕಾನನದೊಳು ಕಣ್ಣು ಕಾಣದಂತಾಗಿದೆ ಧ್ಯಾನಕೆ ಸಿಲುಕದೆ ನೀನೆನ್ನ ಕಾಡುವೆ ಮಾನ ಪ್ರಾಣ ಶರೀರ ನಿನ್ನದೊ ನಾನು ಅನ್ಯರ ಭಜಿಸಲಾರೆನೊ ಹೀನಬುದ್ಧಿಯ ಬಿಡಿಸಿ ಗುರುಗಳ ಧ್ಯಾನವೆನಗಿತ್ತು ನೀನು ಕಾಯೊ 2 ಅನ್ನಪಾನವ ಬಿಟ್ಟು | ನಿನ್ನನು ಸ್ತುತಿಸಲು ಇನ್ನು ಕರುಣವಿಲ್ಲವೆ ಇನ್ನು ಸೈರಿಸಲಾರೆ ಘನ್ನ ಮಹಿಮನೆ ದುಃಖ ನಿನ್ನ ಮನಸು ಕರಗಲಿನ್ನೇನಗೈಯ್ಯಲೊ ಎನ್ನ ಯತ್ನವು ವ್ಯರ್ಥವಾಯಿತು ಇನ್ನು ನೀ ದಯೆಗೆಯ್ಯಬೇಕೊ ಮುನ್ನ ಮಾಡಿದ ತಪ್ಪನೆಣಿಸದೆ ಎನ್ನ ದೃಷ್ಟಿಗೆ ನಿನ್ನ ತೋರೊ 3 ಸುತನ ಮೊರೆಯನೆ ಕೇಳಿ | ಹಿತದಿ ವೇದವನಿತ್ತೆ ಶರಧಿ ಅಮೃತ ಸುರರಿಗಿತ್ತೆ ಕ್ಷಿತಿಯ ಬಾಧೆಯ ಬಿಡಿಸಿ ಸುತನ ಬಾಧಿಸೊವೊನ ಹತಮಾಡಿ ಇಂದ್ರಗೆ ಗತಿಸಿದ ಪದವಿತ್ತೆ ಕ್ಷಿತಿಯನಾಳ್ವರ ಹತವಗೈಸಿದೆ ಕ್ಷಿತಿಸುತೆಯ ಪ್ರೇಮದಲಿ ತಂದೆ ಹಿತದಿ ಪಾಂಡವ ಸುತರ ಕಾಯ್ದೆ ವ್ರತವ ಕೆಡಿಸಿ ಕಲಿಹತವಗೈದೆ 4 ಕಂತು ಜನಕನೆ ನಿನಗೆ ನ್ನಂತರ ತಿಳಿಯದೇನೋ ಸಂತತ ಗೋಪಾಲಕೃಷ್ಣವಿಠ್ಠಲ ನಿನ್ನ ಶಾಂತರೂಪವ ಎನ್ನ ಅಂತರಂಗದಿ ತೋರೊ ಚಿಂತಿತಾರ್ಥ ಪಂಥಗಾರನೆ ಎಂತು ದಿನಗಳು ಸಂದು ಹೋದುವೊ ಸಂತತಾನಂದನಂತಶಯನ 5
--------------
ಅಂಬಾಬಾಯಿ
ಎಷ್ಟು ದಿವಸ ಹೀಗೆ ಕಳೆಯಲೊ ಗೋಪಾಲಕೃಷ್ಣ ಎಷ್ಟು ದಿವಸ ಹೀಗೆ ಕಳೆಯಲೊ ಪ. ಎಷ್ಟು ದಿವಸ ಹೀಗೆ ಎನ್ನ ಸೃಷ್ಟಿಗೊಡೆಯ ಬಳಲಿಸುವೆಯೊ ಕಷ್ಟಪಡಲಾರೆ ಭವದಿ ದೃಷ್ಟಿಯಿಂದ ನೋಡಿ ಸಲಹೋ ಅ.ಪ. ನಾನಾ ಜನ್ಮದಿ ತೊಳಲಿಸಿ ಎನ್ನನು ನೀನೆ ತಂದೆಯೊ ಮಾನವತ್ವದಿ ನಾನು ಎಂಬುದು ಬಿಡಿಸಿ ಈಗ ನೀನೆ ಕರ್ತನೆನಿಸಿ ಕಾಯೋ1 ದೇಹಸ್ಥನೆಂದೆನಿಸಿ ಎನ್ನ ದೇಹ ಮಧ್ಯದಿ ಕಾಣದಿಹರೆ ದೇಹಗಳನು ಧರಿಸಲಾರೆ ದೇಹ ಮೋಹ ಬಿಡಿಸದಿಪ್ಪರೆ 2 ಭೃತ್ಯವತ್ಸಲನೆಂದು ನಿನ್ನ ಭಕ್ತರೆಲ್ಲರು ಕರೆಯುತಿಹರೊ ಪೊತ್ತ ಬಿರುದು ಬಿಡುವರೇನೊ ಭೃತ್ಯಳೆಂದು ಎನ್ನ ಸಲಹೊ3 ಪೋಗುತಿದÉ ದಿವಸ ನೋಡು ಬೇಗ ಬೇಗನೆ ದಯವ ಮಾಡು ಭೋಗದಲಿ ವೈರಾಗ್ಯ ನೀಡು ಭಾಗವತರ ಸಂಗ ಕೊಡು 4 ಕರ್ಮದಲ್ಲಿ ಶ್ರದ್ಧೆಯಿಲ್ಲ ಧರ್ಮದಲ್ಲಿ ಬುದ್ಧಿಯಿಲ್ಲ ನಿರ್ಮಲದ ಜ್ಞಾನವಿಲ್ಲ ನಿರ್ಮಲಾತ್ಮ ಬಲ್ಲೆಯಲ್ಲ 5 ಅಂಧಕಾರದಿ ಎನ್ನನಿರಿಸಿ ಚಂದವೇನೋ ಹೀಗೆ ಮಾಳ್ಪದು ಕರ್ಮ ಸ್ವೀಕರಿಸಿ ಮುಂದೆ ಕರ್ಮವಿಡದೆ ಸಲಹೋ 6 ಅಪಾರ ಜನುಮದಲ್ಲಿನ ಪಾಪ ಸಮೂಹಗಳ ತರಿದು ಶ್ರೀಪಾದ ಸ್ಮರಣೆ ನೀಡೋ ಗೋಪಾಲಕೃಷ್ಣವಿಠಲ 7
--------------
ಅಂಬಾಬಾಯಿ
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿನ್ನ ವಿ- ಶಿಷ್ಟ ಮಹಿಮೆಗಳನು ಭಕ್ತರಿಗೆ ಬಂದಾ ಕಷ್ಟ ಕಳೆಯುವೆಯೋ ನೀನು ಸುರಕಾಮಧೇನು ವಿಷ್ಣುವೇ ಪರದೈವವೆಂದು ದುಷ್ಟರಾಕ್ಷಸರನ್ನೆ ಕೊಂದು ಸೃಷ್ಟಿಪಾಲಿಪ ಶ್ರೀ ರಮೇಶನೇ ಇಷ್ಟ ಭಕುತರೊಳು ಶ್ರೇಷ್ಠನೆನಿಶಿದಿ ಪ ತಾಯಿಯೂ ಬಂದು ಸೇವೆಗೆ ರಘುಪತಿ ರಾಯನಲೆ ನಿಂದು ಬಯಸಲಿಲ್ಲಾ ಒಂದು ಶ್ರೀಹರಿಗೆ ಬಂದು ಕಾಯಬೇಕು ಸುಗ್ರೀವನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯ ಉ- ಪಾಯದಿಂದಲಿ ಕೊಲಿಸಿ ರವಿಜಗೆ ಸ- ಹಾಯ ಮಾಡಿದಿ ವಾಯುತನಯನೆ 1 ಕಡಲ ಬೇಗನೆ ಹಾರೀ ಶ್ರೀರಾಮನ ಮಡದಿಗುಂಗುರ ತೋರಿ ಅಲ್ಲಿದ್ದ ಅಸುರರ ಜಡಿದೆ ಬಲು ಹೊಂತಕಾರಿ ಮಾಡಿಯೊ ಸೂರಿ ಒಡೆಯಗ್ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರ ಹೊಡೆಸಿದಾಕ್ಷಣ ಲೋಕಮಾತೆಯ ಒಡಗೂಡಿಸಿದೆಯೋ ಶ್ರೀರಾಮಚಂದ್ರಗೆ 2 ಮೂರು ರೂಪವ ತಾಳ್ದಿ ಮಹಯೋಗ್ಯ ಜನರಿಗೆ ಸಾರ ತತ್ವವ ಪೇಳ್ದಿ ಶರಣ್ಹೊಕ್ಕ ಜನರಪಾರ ದುಃಖವ ಶೀಳ್ದಿ ಮೊರೆಯ ಕೇಳ್ದಿ ಧೀರ ಕದರುಂಡಲಗಿ ಹನುಮಯ್ಯ ಸೇರಿದೆನೊ ನಿನ್ನಂಘ್ರಿ ಕಮಲವ ಗಾರು ಮಾಡದೆ ಸಲಹೊ ಕರುಣವಾರಿಧಿ ನೀಯೆನ್ನನೀಗಲೆ 3
--------------
ಕದರುಂಡಲಗಿ ಹನುಮಯ್ಯ
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿಮ್ಮ ವಿ- ಶಿಷ್ಟ ಮಹಿಮೆಗಳನು ಸುಜನರಿಗೆ ಬಂದ ಕಷ್ಟವಳಿಯಲ್ಕೆ ನೀ ಸುರಕಾಮಧೇನು ಪ ವಿಷ್ಣುವೆ ಪರಮದೈವವೆಂದು ದುಷ್ಟ ರಾಕ್ಷಸರ ಕೊಂದೆ ಸೃಷ್ಟಿಸಿ ಪಾಲಿಪ ಶ್ರೀರಾಮರ ಇಷ್ಟ ಭಕ್ತರೊಳು ಶ್ರೇಷ್ಠನೆಂದೆನಿಸಿದೆ ಅ ತಾಯಿಯಪ್ಪಣೆಗೊಂಡು ಸೇವೆಗೆ ರಘುಪತಿ ರಾಯನಲ್ಲಿ ನಿಂದು ತನ್ನಾತ್ಮ ಸುಖ ಬಯಸೆನೆಂದು ಶ್ರೀ ಹರಿಗೆ ನುಡಿದುಕಾಯಬೇಕು ಸುಗ್ರೀವನನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯನು ಪಾಯದಿಂದಲಿ ಕೊಲ್ಲಿಸಿ ರವಿಜಗೆ ಸ- ಹಾಯ ಮಾಡಿದೆ ವಾಯುತನಯ1 ಶೌರಿ ಒಡೆಯಗೆ ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರವ ನೊಡಿಸಿದಾಕ್ಷಣ ಲೋಕಮಾತೆಯ ನೊಡಗೂಡಿಸಿದೆ ಶ್ರೀವಾಸುದೇವರಿಗೆ 2 ಸಾರ ತತ್ತ್ವವ ಪೇಳ್ದೆ ಶರಣು ಹೊಕ್ಕ ಮನುಜರ ಘೋರ ದುರಿತವ ಸೀಳ್ದೆ ಧೀರ ತನು ಧುರದುಂಡಿ ಹನುಮಯ್ಯರಿಂ ಸೇವಿಸಿದ ನಿಮ್ಮಂಘ್ರಿ ಕಮಲವದೂರ ಮಾಡದೆ ಎನ್ನ ಸಲಹಯ್ಯ ಕರುಣಾವಾರಿಧಿ ಕಾಗಿನೆಲೆಯಾದಿಕೇಶವ ಮುತ್ತತ್ತಿ ದೊರೆಯೆ3
--------------
ಕನಕದಾಸ
ಎಷ್ಟು ಮಾತ್ರ ನಿಂದಲ್ಲದ್ದು ಹರಿ ಸೃಷ್ಟಿಯೊಳಗೆ ಎನ್ನ ಹುಟ್ಟಿಸಿದ್ದು ಪ ನಷ್ಟದೇಹ ಕೊಟ್ಟು ದುಷ್ಟ ಬವಣೆಯಿಂದ ಕಷ್ಟದೊಳಗೆ ಎನ್ನ ನೂಕಿದ್ದುಅ.ಪ ಉಳಿದ ಪಾಪಶೇಷ ಕಳೆಯದಲೆ ಎನ್ನ ಇಳೆಯವಾಸಕ್ಯಾಕೆಳೆಸಿದಲೇ ನಳಿನನಾಭ ನಿನ್ನ ಬಳಿ ಇದೆ ನ್ಯಾಯವೆ ಕಳವಳಪಡಲು ನಾನೊಳಿತೇನು ನಿನಗೆ 1 ಎಷ್ಟು ರೀತಿ ಕಷ್ಟ ತಡಿಬೇಕೊ ಇ ನ್ನೆಷ್ಟುದಿನ ಹೀಗೆ ಕಳೀಬೇಕೊ ಕರ್ಮ ಎನ್ನದಿರಲಿಕ್ಕಾಗಿನು ಶಿಷ್ಟಜನುಮ ಮತ್ತು ಕೊಟ್ಟ್ಯಾಕೊ 2 ಭಕ್ತವತ್ಸಲನೆಂಬ ಬಿರುದೇನೋ ನಿನ್ನ ಭಕ್ತರ ಅಭಿಮಾನ ತೊರೆದೇನೊ ಭಕ್ತರಿಗೀತೆರ ಮೃತ್ಯುಬಾಧೆಯೇನು ಮುಕ್ತಿದಾಯಕ ಜಗತ್ಕರ್ತ ಶ್ರೀರಾಮನೆ 3
--------------
ರಾಮದಾಸರು
ಎಷ್ಟು ಸುಸ್ವರ ಊದುತಿಹನಮ್ಮ ಶ್ರೀಕೃಷ್ಣ ಕೊಳಲನ ಪ ಎಷ್ಟು ಸುಸ್ವರ ಊದುತಿಹನೋ ಗೋಷ್ಠಿಯೊಳು ಗೋವುಗಳಕಿವಿಗಳು ನೆಟ್ಟನಿಲ್ಲಿಗೆ ಕೇಳಿ ಮೋದದಿ ಕಟ್ಟಿದೆಲೆ ಕಣ್ಣಿಗಳಹರಿವವೊಅ.ಪ ತರಣಿ ತನುಜನ ತೀರದಲ್ಲಿಹನೆ ಕೊರಳೊಳಗೆ ಕೌಸ್ತುಭಹರಳಿನಿಂದ ಜಗವ ಬೆಳಗುವನೆ ಕುರುಳು ಕುಣಿಸುತಬಾಲಬಿಂಬದಿಕರ್ಣಕುಂಡಲ ಗಂಡ ಸುಪ್ರಭ ಮರುಳು ಮಾಡುತಮೂರು ಲೋಕವಸಿರಿಯ ಮೋಹಿಪ ಪರಮ ಪುರುಷನು1 ನಗ ಮುರಿಗೆ ತೋಡೆ ಸುಹಾರಭೂಷಿತಉರದಿ ಕುಳಿತಿಹ ಸಿರಿಯ ಮೋಹಿಪ 2 ಅರಗೀಮನೆ ಬಾಂಧವರು ಬೇಕೆ ನಿಜ ಪತಿಗಳೆಮ್ಮನುಮೀರಿ ಪೋದರು ಅಂದರೆನಲೇಕೆ ಮಾರನಯ್ಯನ ಮುರಲಿಸುಸ್ವರಸಾರಿ ಮನಸಪಹಾರ ಮಾಡಿತು ನಾರಿ ಮಣಿಯರೆ ಕ್ಷಣವುತಡೆಯದೆವಾರಿಜಾಸನ ವನಕೆ ತೆರಳಿರೆ 3 ಎಷ್ಟು ಜನ್ಮದ ಪುಣ್ಯವಿರುತಿಹದೆ ಈ ಮುರಲಿ ಬಾಲನಪುಟ್ಟತುಟಿಯಲಿ ಸುಧೆಯ ಸುರಿಸುವದೇಸೃಷ್ಟಿರವ ಬಳ್ಳಿಮನದಲಿ ವೃಷ್ಟಿಹಿಡಿಸದೆ ಕುಸುಮಫಲಗಳುವೃಷ್ಟಿಯಿಂದಲೆ ಹೊರಗೆ ಚೆಲ್ಲುತ ಅಭೀಷ್ಠೆ ಸುರಿಸುತಪೇಳುತಿಹವೊ 4 ಅರುಣನಂದಧಿ ಅದರ ಸೌಭಗವೊ ವನ ನಿಲಯ ಮೃಗಗಳುತೊರೆದು ವೈರವ ಸುತ್ತು ನಿಂತಿಹವೋ ಹರುಷದಲೆ ಮನತೊರೆದು ನಿಲ್ಲಲು ಇಂದಿರೇಶನ ತರುಣಿಯರು ಪೋಗೋಣ ನಡೆಯಿರಿ 5
--------------
ಇಂದಿರೇಶರು
ಏಕಮೇವಾ | ಅದ್ವಿತೀಯನೆ ಪಾಹಿ | ಏಕಮೇವ ಪ ಏಕಮೇವ ತ್ರೈಲೋಕ ಜನಕ ಕರುಣಾಕರ ಹರಿಯೇ ಅ.ಪ. ಮಾನ್ಯ ಮಾನದ | ನಾನ್ಯಪ ಹರಿ ಸತ್‍ಶೂನ್ಯಾಭಿಧ ಸರಿ | ವಾಣ್ಯಾದಿಯ ಹರ 1 ಭವ ಸುರ | ಕರಣಶಕ್ತಿ ಹರ 2 ಉದರದೊಳಗೆ ಜಗ | ಹುದುಗಿಸಿ ಸರ್ವವಅದುಭುತ ತಮದಲಿ | ವಿಧಿಸಿದ ಹರಿಯೇ 3 ಪ್ರಲಯೋದಧಿ ಶಯ | ಚೆಲುವ ಬಾಲ ಬಲ್‍ಒಲವಿನಿಂದ ಪದ ಬೆ | ರಳನೆ ಸವಿದಾ 4 ಸೃಷ್ಟಿಗೊಡೆಯ ಲಯ | ಅಷ್ಟ ಭಾಗವಿರೆಚೇಷ್ಟಿಸಿ ದುರ್ಗೆಯ | ಹೃಷ್ಟಳ ಮಾಡಿದೆ 5 ಕರ್ಮ ತವಕೃತ್ಯವನಂತವು | ಭೃತ್ಯರ ಸುದತರು 6 ಕಮಲಾರಮಣನೆ | ಕಮಲಜಾದಿ ನುತನಿಮಿಷೋನ್ಮಿಕರ | ಸುಮನಸಕಪ್ಪುದೆ 7 ದುರ್ಗೆ ತುತಿಸೆ | ಕರ್ಗತ್ಲೆ ಕುಡಿದು ನಿಜಸರ್ಗಕೆಣಿಸಿದೇ | ದುರ್ಗಮ ಮಹಿಮ 8 ಮುಕ್ತರೊಡನೆ ಸೇ | ವ್ರ್ಯಕ್ತಿಗಳಲಿ ಅಭಿವ್ಯಕ್ತನು ಲೀಲಾ | ಸಕ್ತ ಸುಪುರುಷಾ 9 ಗೂಹಿಸಿ ಸರ್ವವ | ವ್ಯೂಹ ಚತುರಕೆಮೋಹಿಸಿ ಪುಮಜನ | ಬಾಹಿರ ತೆಗೆದ 10 ಪತಿ ತಾ ಸರ | ಸ್ವತಿ ಭಾರತಿ ಎಂಬಸುತೆಯರ ಪಡೆದು | ಸುತರೊಡನೈರಸಿದ12 ಪುಮಜಗೆ ಪ್ರಕೃತಿಯಿಂ | ಸುಮನಸ ಶೇಷನುಕ್ರಮದಿ ಸೂತ್ರನಿಂ ಜ | ನುಮವು ಕಾಲಿಗೆ 13 ಎರಡು ಒಂದು ತನು | ಹರನಿಗೆ ಬಂದವುಸರಸಿಜ ಸಂಭವ | ಮರುತೋರಗದಿಂ14 ಪತಿ ಸೇವೆಗೆ 15 ವಿಧ ವಿಧ ಜೀವರು | ಉದುಭವವಾದರುವಿಧಿ ಪಿತ ಮಹಿಮೆಯ | ಅದು ಭುತ ಕೇಳೀ 16 ಮುದದಿ ಇಟ್ಟ ತನ್ | ಉದರದೊಳೆಲ್ಲರಅದುಭುತ ಚರಿತ ಅನಿ | ರುದ್ಧ ಮೂರುತಿ 17 ಗುಣೋಪಾದಾನದಿ | ತನು ಸೂಕ್ಷ್ಮಗಳನುಅನಿರುದ್ಧನು ನಿ | ರ್ಮಾಣವ ಮಾಡಿದ 18 ಪರಿ ಬಹು ಲಿಂ | ಗೋಪ ಚಯಿವಗೈದಾಪರ ಬೊಮ್ಮನು | ಸ್ಥಾಪಿಸಿದನು ಜಗ 19 ಪದುಮ ಕಲ್ಪ ಮುನ್ | ಉದುಭವಿಸಿತು ಮತ್‍ತದನನು ಸಿತವರ | ಹದ ಕಲ್ಪೋದಯ 20 ಸರಸಿಜ ಭವನಿಂ | ವಿರಚಿಸಿದನು ಜಗವೈಡೇಳ್ಭುವನವು | ಭರಿತವು ಜೀವರಿಂ 21 ಈ ವಿಚಿತ್ರ ಸ | ರ್ಗಾವವ ತಿಳಿಯಲುಸೇವಿಸುವುದು ಸತ್ | ಕೋವಿದ ಜನಪದ 22 ಪಾವಮಾನಿ ನಿಜ | ಭಾವಕೆ ಸರಿಯಾಹಸೇವೆಗೊಲಿದ ಗುರು | ಗೋವಿಂದ ವಿಠ್ಠಲ 23
--------------
ಗುರುಗೋವಿಂದವಿಠಲರು
ಏಕಾದಶಿ ಉತ್ಸವಗೀತೆ ಲೋಕನಾಯಕನ ಏಕಾದಶಿಯ ಉತ್ಸವಕೆ ಅ ನೇಕ ವಿಧದಿಂದ ಪಟ್ಟಣವ ಸಿಂಗರಿಸಿ 1 ಸುಣ್ಣ ಕೆಮ್ಮಣ್ಣಿಂದ ಕಾರಣೆಯನು ರಚಿಸಿ ಚೀಣೆ ಚೀಣಾಂಬರದ ಮೇಲುಕಟ್ಟುಗಳು 2 ಕದಳಿಯ ಕಂಬಗಳು ಗೊನೆಸಹಿತ ನಿಲ್ಲಿಸಿ ತೆಂಗು ಕ್ರಮುಕದ ಫಲವ ತಂದು ಸಿಂಗರಿಸಿ 3 ವಿಧ ವಿಧವಾದ ಪುಷ್ಪಗಳನು ತರಿಸಿ ಮದನನಯ್ಯನ ಮಂಟಪವ ಸಿಂಗರಿಸಿ 4 ಶುದ್ಧ ಪಾಡ್ಯದ ದಿವಸ ಮುದ್ದು ಶ್ರೀರಂಗ ಅಧ್ಯಯನೋತ್ಸವಕೆಂದು ಪೊರಟು ತಾ ಬಂದ 5 ಭಟ್ಟರು ವೇದಾಂತಿ ಜಯಿಸಿದರ್ಥವನು [ನಟ್ಟ]ಮಾವಾಸೆರಾತ್ರಿಯಲಿ ಅರೆಯರ್ಪಾಡಿದರು 6 ಸಂಧ್ಯಾರಾಗವ ಪೋಲ್ವ ಅಂಗಿಕುಲಾವಿ ಛಂದ ಛಂದದ ಆಭರಣವನು ಧರಿಸಿ 7 ಸಿಂಹನಡೆಯಿಂದ ಮೂರಡಿಯಲಿ ನಿಂದು ಮಹಾಶ್ರೀವೈಷ್ಣವರಿಗೆ ಶ್ರೀಪಾದವಿತ್ತು 8 ಮಂತ್ರಿ ಎದುರಲಿ ನಿಂತು ಮಾಲೆಗಳನಿತ್ತು ಕಂತುಪಿತ ಬಂದ ನಾಗಿಣಿಯ ಮಂಟಪಕೆ 9 ವಾಸುಕೀಶಯನಮಂಟಪದಲಿ ನಿಂತು ದಾಸಿ ವರವನು ಸಲಿಸಿದ ಕ್ಲೇಶನಾಶಕನ 10 ಸುರರಿಗೊಡೆಯನು ಸುಂದರಾಂಗ ತಾ ಬಂದು [ವರ]ಸುಲ್ತಾನಿ ಎದುರಲಿ ನಲಿನಲಿದು ನಿಂದು 11 ಕುಂದಣದ ಛತ್ರಿ ಚಾಮರಗಳಲುಗಾಡೆ ಇಂದಿರಾರಮಣ ಸತಿಯಿದುರೆ ನಲಿದಾಡೆ 12 ಆದಿಮೂರುತಿ ಮಂಟಪದೊಳು ನಿಂತು ಆದಿ ಆಳ್ವಾರುಗಳಿಗೆಲ್ಲ ಆಸ್ಥಾನವಿತ್ತು 13 ವಿಷ್ಣುಚಿತ್ತರು ಮಾಡಿದರ್ಥಂಗಳನ್ನು [ವಿಶೇಷ]ದಭಿನಯದಿಂದ ಪೇಳಿದರು14 ಅರೆಯರು ಬಂದು ತಾವೆದುರಲ್ಲಿ ಪಾಡೆ ಭೂ ಸುರೋತ್ತಮರೆಲ್ಲ ಹರುಷದಿಂ ನೋಡೆ 15 ಮಂಟಪದಲ್ಲಿ ನೇವೇದ್ಯವನ್ನು ಗ್ರಹಿಸಿ ವೈ ಕುಂಠವಾಸನು ಬಂದ ವೈಯ್ಯಾರದಿಂದ16 ದರ್ಪಣದೆದುರಲ್ಲಿ ನಿಂತು ಶ್ರೀರಂಗ ಕಂ ದರ್ಪನಾಪಿತ ಬಂದ ಆನಂದದಿಂದ 17 ಮದಗಜದಂತೆ ಮೆಲ್ಲಡಿಯಿಟ್ಟು ಬಂದು ಒದಗಿ ಮೂರಡಿಯಲ್ಲಿ ತಿರಿಗುತಾ ನಿಂದು 18 ಅಡಿಗೊಂದು ಉಭಯವನ ಗ್ರಹಿಸಿ ಶ್ರೀರಂಗ ಬೆಡಗಿನಿಂದಲೆ ಬಂದ ಮಂಟಪಕೆ ಭವಭಂಗ 19 ಶ್ರೀಧರನು ಮಂಟಪದಲ್ಲಿ ತಾ ನಿಂತು ಮ ರ್ಯಾದೆಯನಿತ್ತು ಶ್ರೀವೈಷ್ಣವರಿಗೆ 20 ವೈಯ್ಯಾರ ನಡೆಯಿಂದ ಒಲಿದೊಲಿದು ಬಂದು [ನಯ] ಸೋಪಾನದೆದುರಲಿ ನಲಿನಲಿದು ನಿಂದು 21 ಕರ್ಪೂರ ಪುಷ್ಪವನು ಬೆರೆಸಿ ತಾವ್ತಂದು ಅಪ್ರಮೇಯನ ಶಿರದೊಳೆರೆಚಿದರು [ಅ]ಂದು 22 ಇಂದಿರಾರಮಣ ಗುಂಭಾರತಿಯ ಗ್ರಹಿಸಿ ಎಂದಿನಂದದಿ ತನ್ನ ಮಂದಿರಕೆ ನಡೆದ 23 ಬಿದಿಗೆ ತದಿಗೆಯು ಚೌತಿ ಪಂಚಮಿಯಲ್ಲಿ ವಿಧವಿಧದ ಆಭರಣಮನೆ ಧರಿಸಿ 24 ಷಷ್ಠಿ ಸಪ್ತಮಿ ಅಷ್ಟಮಿ ನೌಮಿಯಲ್ಲಿ ಸೃಷ್ಟಿಯೊಳಗುಳ್ಳ ಶೃಂಗಾರವನೆ ಮಾಡಿ 25 ದಶಮಿಯ ದಿವಸದಲಿ ಕುಸುಮನಾಭನಿಗೆ ಶಶಿಮುಖಿಯ ಅಲಂಕಾರವನ್ನು ಮಾಡಿದರು 26 ಸುರರು ಅಸುರರು ಕೂಡಿ ಶರಧಿಯನು ಮಥಿಸೆ ಭರದಿ ಅಮೃತವು ಬರಲು ಅಸುರರಪಹರಿಸೆ 27 ಸುರರೆಲ್ಲರು ಬಂದು ಶ್ರೀಹರಿಗೆ ಇಡಲು ಮೊರೆ ಸಾಧಿಸುವೆನೆಂದೆನುತ ವರಗಳನು ಕೊಡಲು 28 ಎನಗೆ ತನಗೆಂದು ಹೋರಾಡುವ ಸಮಯದಿ ವನಜನಾಭನು ಮೋಹಿನಿಯ ರೂಪಿನಲಿ 29 ವಾರೆಗೊಂಡೆಯವನು ವೈಯ್ಯಾರದಿಂದ ಧರಿಸಿ ತೋರಮುತ್ತಿನ ಕುಚ್ಚುಗಳ ಅಳವಡಿಸಿ 30 ಹೆರಳು ರಾಗಟೆಯು ಬಂಗಾರಗೊಂಡ್ಯಗಳು ಅರಳುಮಲ್ಲಿಗೆ ಹೂವ ದಂಡೆಗಳ ಮುಡಿದು 31 ಪಾನಪಟ್ಟಿಯು ಸೂರ್ಯಚಂದ್ರಮರನಿಟ್ಟು ಫಣೆಯಲ್ಲಿ ತಿದ್ದಿದ ಕಸ್ತೂರಿ ಬಟ್ಟು 32 ಚಾಪವನು ಪೋಲುವಾ ಪುಬ್ಬಿನಾ ಮಾಯ ಆಪ್ತಭಕ್ತರನು ಕರುಣದಿಂ ನೋಡುವ ನೋಟ 33 ತಿಲಕುಸುಮವನು ಪೋಲ್ವ ನಾಸಿಕದ ಚಂದ ಥಳಥಳಿಸೆ ಮುತ್ತಿನ ಮುಕುರದ ಅಂದ 34 ಕುಂದಕುಸುಮವ ಪೋಲ್ವ ದಂತಪಂಕ್ತಿಗಳು ಕೆಂ[ದ]ವಳಲತೆಯಂತಿರುವ ಅಧರಕಾಂತಿಗಳು 35 ಚಳತುಂಬು ಬುಗುಡಿ ಬಾವುಲಿಗಳನಿಟ್ಟು ಥಳಥಳಿಪ ವಜ್ರದ ಓಲೆ ಅಳವಟ್ಟು 36 ಗಲ್ಲದಲಿ ಪೊಳೆಯುವ ದೃಷ್ಟಿಯ ಬೊಟ್ಟು ಮೊಗ ದಲ್ಲಿ ಮಂದಹಾಸದ ಕಾಂತಿ ಇನ್ನಷ್ಟು 37 ಕೊರಳೊಳಗೆ ಹಾರ ಪದಕವನು ತಾನಿಟ್ಟು [ಉರದಿ] ದುಂಡುಮುತ್ತಿನ ದಿವ್ಯಸರಗಳಳವಟ್ಟು 38 ಧರಿಸಿ ನಾನಾವಿಧ ಪುಷ್ಪ ಗಿಣಿಮಾಲೆಯನು ಅರಳುಮಲ್ಲಿಗೆ ಹೂವಸರಗಳಲಂಕರಿಸಿ 39 ಉಂಗುರ ವಂಕಿ ಬಾಜಿಯ ಬಂದುದ್ವಾರ್ಯ(?) ಕೈಕಟ್ಟು ಮುಂಗೈ ಮುರಾರಿಯನ್ನು ಇಟ್ಟು 40 ಬಿಳಿಯ ಪೀತಾಂಬರವ ನಿರಿಹಿಡಿದುಟ್ಟು ಥಳಥಳಿಪ ಕುಂದಣದ ವಡ್ಯಾಣವಿಟ್ಟು 41 ಅಂದುಗೆ ಗೆಜ್ಜೆಗಳ ಚಂದದಿಂದಿಟ್ಟು ಕುಂದಣದ ಪಾಡಗವನ್ನು ಅಳವಟ್ಟು 42 ಈ ರೂಪಿನಿಂದ ಅಸುರರನು ಮೋಹಿಸುತ ಸುರರಿಗೆ ಅಮೃತವನು ಎರೆದು ಪಾಲಿಸುತ 43 ಮೂರುಕಣ್ಣುಳ್ಳವನು ಮೋಹಿಸಿದ ರೂಪ ಈ[ರೇಳು]ಲೋಕದವರಿಗೆ ತೋರಿದನು ಭೂಪ 44 ಗರುಡಮಂಟಪದಲ್ಲಿ ನಿಂತು ಶ್ರೀರಂಗ ಬೆರಗಿನಿಂದೆಲ್ಲರಿಗೆ ಬಿಡದೆ ಸೇವೆಯನಿತ್ತು 45 ಆಳ್ವಾರುಗಳಿಗೆಲ್ಲ ವಸ್ತ್ರಗಂಧವನಿತ್ತು ಅವರವರ ಆಸ್ಥಾನಕ್ಕವರ ಕಳುಹಿಸುತ 46 ಬಂದು ಬಾಗಿಲ ಹಾಕಿ ಇಂದಿರಾರಮಣ ನಿಂದ ವೆಂಕಟರಂಗ ಆನಂದದಿಂದ 47
--------------
ಯದುಗಿರಿಯಮ್ಮ
ಏಕೆ ಬೇಕಾಗಿತ್ತೊ ನಿನಗೆ ಈ ಆಟಲೋಕೇಶ ಸಾಕಯ್ಯ ಇಲಿ ಬೆಕ್ಕಿನಾಟಾ ಪ ಸುಷ್ಟು ಜಲಧಿಶಯನ ಬಿಸುಟಿ ಬಿಸಲ್ಯಾಕೆಸೃಷ್ಟಿಪುದು ಮೊದಲ್ಯಾಕೆ ಸೃಷ್ಟಿಸಲು ಪ್ರಾಣಿಗಳಕಷ್ಟ ಪಡಿಸುವುದ್ಯಾಕೆ ಕಷ್ಟವನು ನೋಡಿತುಷ್ಟಪಡುವುದು ಯಾಕೆ ಇಷ್ಟಕೆ ಬಯಕೆ 1 ಸ್ವರ್ಗ ನರಕಗಳೇಕೆ ಜನ್ಮ ಜನ್ಮಾಂತರಕೆವರ್ಗ ಮಾಡುವುದೇಕೆ ಪಾಪಪುಣ್ಯಗಳೇಕೆದುರ್ಗಮದ ವೈಕುಂಠದಾಸೆ ತೋರುವುದೇಕೆನಿರ್ಗುಣನೆ ಸಲ್ಲದಿ ಉದ್ಯೋಗವ್ಯಾಕೆ 2 ಉದಧಿಶಯನದೊಳಾತ್ಮಾನಂದದಲಿ ಮುಳುಗಿಹೃದಯದೊಳು ನೀನೊಂದು ನೀನೇಯೇ ನೀನಾಗಿಮೋದ ಪಡುವುದು ಬಿಟ್ಟು ವೀರನಾರಾಯಣನೆಗದುಗಿನೊಳು ಬಂದಿಲ್ಲಿ ನಿಂತಿರುವುದೇಕೇ 3
--------------
ವೀರನಾರಾಯಣ
ಏನಾಗುವುದು ತಾನಾಗಿದೆ ಜಗ ನೀನ್ಯಾಕದರೋಳ್ಪಾಲಿಡುವ್ಯೋ ಪ ಕಾಣುಕಾಣುತಲಿ ಶೂನ್ಯವೆನಿಪುದೆಲ್ಲ ಜಾಣನಾಗಿ ಭವಗೆಲಿಯೆಲವೋ ಅ.ಪ ಸತತದಿ ಸತಿಸುತರ್ಹಿತಕಾಗಿ ಬಲು ಮತಿಗೆಟ್ಟತಿಯಾಗ್ವ್ಯಥೆಬಡುವ್ಯೋ ಪೃಥಿವಿ ಮೇಲೆ ನಿನ್ನ ಮತಿಯಲಿಂದ ಮಣ್ಣು ಪ್ರತಿಮೆಮಾಡಿ ಸೃಷ್ಟಿಗೊಳಿಸಿದೆಯೋ 1 ಹಲವುವಿಧದಿ ನಾನೆ ದುಡಿದು ಧಾನ್ಯಧನ ಗಳಿಸಿದೆನೆಂದು ಬಲು ಭ್ರಮಿಸುವೆಯೋ ತಿಳಿದುನೋಡೆಲೆ ಬೀಜದೊಳಗೆ ಮೊಳಕೆ ತಿದ್ದಿ ಬೆಳೆಯ ಬೆಳೆಸಿ ಸ್ಥಿತಿಮಾಡಿದೆಯೋ 2 ಎಷ್ಟುದಿನಿರ್ದರು ಬಿಟ್ಟು ಹೋಗುವುದನು ಗಟ್ಟಿಮಾಡ್ಯಾಕೆ ಭ್ರಷ್ಟನಾಗುವೆಯೋ ಸೃಷ್ಟಿಸ್ಥಿತಿಲಯಕರ್ತ ಶ್ರೀರಾಮನ ನಿಷ್ಠೆಯಿಂ ಪಾಡಿ ಮುಕ್ತಿಸುಖ ಪಡೆಯೋ 3
--------------
ರಾಮದಾಸರು
ಏನು ಹೇಳಲಿ ಕೂಸಿನ ಚರ್ಯಮಾನಿನಿ ಉಳಿದದ್ದ ಆಶ್ಚರ್ಯ ಪ ಪುಟ್ಟಿದೇಳನೆಯ ದಿನವೆ ಬಾಲಗ್ರಹ ಬಂದುಎಷ್ಟು ಕಾಡಿದಳು ನಮ್ಮಪ್ಪನಸೃಷ್ಟಿಪಾಲಕ ಸಿರಿವಿಷ್ಣು ದಯದಿಂದಕಷ್ಟ ಕಳೆದು ನಮ್ಮ ಕೂಸು ಉಳಿದಿತೇ 1 ಒಂದು ಮಾಸದ ಕೂಸು ಅಂದು ಬಂಡಿಯ ಕೆಳಗೆಹೊಂದಿಸಿ ಮಲಗಿಸಿದ್ದೆನೇ ನಾನುಅಂದು ಹಸಿದು ಮುಖದಿಂದ ಬೆರಳನೆ ಚೀಪಿಬಂಧ ಕಳೆದು ಹೀಂಗೆ ಬದುಕಿತೇ 2 ದುಷ್ಟತನವು ಬಹಳ ಎಂದು ಒರಳಿಗೆಕಟ್ಟಿಹಾಕಿದೆ ಇವನ ಒಂದಿನಾಬೆಟ್ಟದಂತೆರಡು ಮರಗಳು ಬೀಳಲು ಮಧ್ಯ ಪುಟ್ಟ ನಮ್ಮಪ್ಪ ಹ್ಯಾಂಗೆ ಬದುಕಿತೆ 3 ಅಂಗಳದೊಳಗೆ ಆಡುತ ಕುಳಿತಿದ್ದ ಕೂಸಿನಾ-ಮಂಗಳಾ ಘಾಳಿ ಬಂದೊಯಿತೆಅಂಗನೇರೆಲ್ಲರೂ ಅಳುತ ಕೂತೇವಲ್ಲೆ ನರ-ಸಿಂಗನಾ ಕರುಣದಿಂದುಳಿದಿತೆ 4 ನೀರು ಕುಡಿದು ಯಮುನೆ ಮೇಲೆ ಆಡಲು ಕೂಸುಘೋರ ಪಕ್ಷಿಯು ಬಂದು ನುಂಗಿತೆಪೋರರೆಲ್ಲರು ನೋಡಿ ಗಾಬರಿಯಾಗಲು ಮತ್ತೆಕಾರಿತವನ ಬಕ ಸೋಜಿಗವೆ 5 ಕತ್ತೆಗಳನು ಕೊಂದು ತಾಳಫಲವು ಗೋಪ-ಪುತ್ರರಿಗೆ ಉಣ್ಣ ಕೊಟ್ಟಿಹನಂತೆಚಿತ್ರಚರಿತನ ನಂದಬಾಲನ ಚರಿತೆ ಏಕಾವೃತದಿಂದಲಿ ಪೇಳಲಳವೇನೆ 6 ಕರುಗಳ ಕಾಯುತಿರಲು ವತ್ಸವೇಷದಿದುರುಳನೊಬ್ಬನು ಬಂದಿಹನಂತೆಅರಿಯದಾ ಕೂಸಿನಾ ಕಾಲ್ಪಿಡಿದುಬೆರಳ ಮರದ ಮೇಲಕ್ಕೆ ತೂರಿದನಂತೆ 7 ಏಳೇ ವರ್ಷದವ ಕೇಳೆ ಗೋವರ್ಧನಏಳು ದಿವಸ ಎತ್ತಿದನಂತೆಬಾಳುವ ಗೋಪಿಯರ ಪಾಲನೆ ಮಾಡಿದನೀಲವರ್ಣನ ಎಷ್ಟು ವರ್ಣಿಸಲೆ 8 ಬಾಲನಾದರು ನಿನ್ನ ಹಾಳು ದೈತ್ಯನ ಕೊಂದು ಬ-ಹಳ ಕುತ್ತುಗಳಿವೆ ಕೇಳಿದೇನೆಬಾಲಕರಿಬ್ಬರು ಲೋಲರಿಬ್ಬರು ನಮ್ಮ ಬಾಲಕರೇನೇ ಸ್ವರ್ಗಪಾಲನು ಇಳೆಯೊಳು ಉದಯಿಸಿದನೇ 9 ಮಂದಗಮನೆ ಎನ್ನ ಕಂದನಾಟಗಳನ್ನುಮಂದಿಯ ದೃಷ್ಟಿಯ ಭಯದಿಂದ ನಾನುಒಂದೂ ಹೇಳದೆ ಹೀಗಾನಂದ ಬಡುವೆನು ನಾನುಚಂದ್ರವದನೆ ರೋಹಿಣಿ ಕೇಳೆ 10 ಗೋಪಿ ಸುಖಿಸುತಿಹಳು 11
--------------
ಇಂದಿರೇಶರು
ಏನೆನ್ನುತ್ಹಳಿಯಲಿ ನಿನ್ನ | ನಾನಾವಿಧದಿ ಬೆಳಗುವ ಮಹಮಹಿಮನ ಪ ಸಾಗರ ನಿಲಯನೆಂದೆನಲೇ ನೀಗದ್ವೊಯ್ಕುಂಠ ಮೇಲು ಮಂದಿರನ ರಾಗದಿಂ ದ್ವಾರಕೆ ಪುರಮನೆಯವನೆನಲೇ ಯೋಗದಿಂದಣುರೇಣುತೃಣದಿ ವ್ಯಾಪಕನ 1 ಪನ್ನಂಗ ಹಾಸಿಗೆ ಮಾಡಿಹ್ಯನೆನಲೇ ಉನ್ನತ್ಹಾಸಿಗೆಯ ಮೇಲೆ ಮಲಗಿಕೊಳ್ವವನ ಭಿನ್ನವಿಲ್ಲದೆ ದರ್ಭೆಶಾಯಿಯೆಂದೆನಲೇನು ಚಿನ್ನಮಂಚದ ಮೇಲೆ ಲೋಲ್ಯಾಡುವವನ 2 ಹೊಟ್ಟಿಗ್ಹುಲ್ಲ ತಿಂದವನೆನಲೇ ಶಿಷ್ಟ ದಿವಿಜರಿಟ್ಟ ಮೃಷ್ಟಾನ್ನುಣ್ವವನ ಕೊಟ್ಟ ಹಣ್ಣಿನ ತೋಟ ಹಸಿದು ತಿಂದವನೆನೆ ಸೃಷ್ಟಿ ಈರೇಳಕ್ಕೆ ಅನ್ನ ಕೊಡುವವನ 3 ಅಸುಬಿಟ್ಟ ದಿಕ್ಕಿಲ್ಲದನೆನಲೇ ಅಸಮಲಬಲವುಳ್ಳಂಥ ಯಾದವಾರ್ಯನ ಕುಸುಮನಾಭಂಗೆ ಸಂಸಾರಿಯೆಂದೆನಲೇನು ಎಸೆವ ಪರವಸ್ತು ನಿರ್ಬಯಲು ನಿರ್ಮಯನ 4 ಅಳವಲ್ಲ ಎನಗೆ ನಿನ್ನ ವೊಲಿರೆ ದಿವ್ಯ ಮಹಿಮೆ ತಿಳಿಯುವ ತ್ರಾಣ ಒಲಿದು ಚರಣದಾಸರಾಳಾಗಾಳುವೆನೆಂದು ಇಳೆಯೊಳು ಸಾರುವೆ ನಳಿನಾಕ್ಷ ಶ್ರೀರಾಮ 5
--------------
ರಾಮದಾಸರು