ಒಟ್ಟು 283 ಕಡೆಗಳಲ್ಲಿ , 61 ದಾಸರು , 235 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಶಾವತಾರ ಭವ ದೀನಾತ್ಮ ಜನಗಳಿಗೆ ಜ್ಞಾನಾರ್ಥವಾಗಿ ನದಿಯೋಳ್‍ಸ್ನಾನಾರ್ಥ ಮುಣಗಿರುವ ಶೋಣೀತ ಸತ್ಯವೃತ ಪಾಣೀಲಿ ಬಂದು ಭರದೀಮಾನವರಂತೆ ಮೃದು ವಾಣೀಲಿ ತನಗೆ ಭೂಸ್ಥಾನವಾಬೇಡಿ ಬೆಳೆದೂಪಾನೀಯ ಪಾತ್ರಸ್ವ ವಿಷಾಣಾದಿ ಧರಿಸಿ ರವಿ ಸೂನುನ ಮಾಡಿಹನು 1 ವೃಂದಾರಕಾರು ಬಲ ವೃಂದಾವ ಕೂಡಿ ಗಿರಿಯಿಂದಾಲೆ ಕ್ಷೀರಧಿಯನೂವಂದಾಗಿ ಮಥಿಸುತಿರೆ ಸಿಂಧೂವಿನೋಳ್ ಜರಿದು ಪೊಂದೀತು ತತ್ತಳವನೂಮಂದಾತ್ಮರಾದುಭಯ ಮಂದೀಯ ನೋಡಿ ಬೆನ್ನಿಂದಾಲೆಯೆತ್ತಿ ಸುಧೆಯಾತಂದ್ಯೋರು ರೂಪನಮರಿಂದ್ರಾರಿಗಿತ್ತು ದಿತಿಜೇಂದ್ರಾರಮೋಹಿಸಿದನು 2 ಕ್ಷೋಣೀಶ ಕ್ಷೋಣೀಯನೆತ್ತಿ ಪಥಿ ದಾನಾವತಡಿಯುತಿರಲೂನಾಸವಾತ್ಮನವನ್ಹಾನೀಯ ಮಾಡಿ ನಿಜ ಸೂನೂಗೆಒಪ್ಪಿಸಿದನುಣೇಶ ಜಾತ ನಿಜಮಾನಿನೀ ಸಹಿತ ಸಂಸ್ಥಾನಾದಿ ಕೂತುಸುಖದೀತಾನವರಾನ ಪಡಿಸಿದಾನಂದ ಭೋಗಿಸಲು ತಾ ನೋಡಿಮೋದಿಸಿದನು 3 ಶುಭ ಭರಾತೀಯ ತತ್ಸುತಗೆ ಪ್ರೀತೀಲಿಪಾಲಿಸಿದನೂ 4 ದುಷ್ಟಾತ್ಮರಿಂದ ಬಹು ದುಷ್ಟಾತ್ಮರಾಗಿ ಸುರರಿಷ್ಟಾವ ಸ್ವರ್ಗ ಸುಖವಾಬಿಟ್ಟಾವನಲ್ಲ ನಿಜ ಪೊಟ್ಟೀಯಗೋಸುಗದಿ ಕಷ್ಟಾದಿಸಂಚರಿಸಲೂದೃಷ್ಟಿಂದ ಕಂಡದಿತಿ ತುಷ್ಟೀಸುತಿರಲವಳ ಪೊಟ್ಟೀಯೊಳವತರಿಸಲೂಪುಟ್ಟಾತ್ಮ ಬಲಿಗೆ ಸುತಲಿಷ್ಟಾವ ನೀಡಿ ಸುರರಿಷ್ಟಾವಪಾಲಿಸಿದನೂ 5 ಭೂತೇಶನೊಬ್ಬ ತನ ತಾತಾನ ಕೊಂದುನವ ಮಾತೇಯನಪಹರಿಸಲೂಭೀತೀಲಿ ತಾಯಿಯುರ ಘಾತಕ್ಕ ಸದೃಶ ಭುವಿ ಧಾತ್ರೀಶದುಷ್ಕಲವನೂಘಾತೀಶಿ ಪೂರ್ವಜರ ಪ್ರೀತೀಯ ಪಡೆದು ಮುನಿ ಪೋತಾನ ರಕ್ಷಿಸುತಲೇಪಾಥೋದಿ ತಟದಿ ರಘುನಾಥೇಷ್ಟದಾತ ನಿಜ ಶಾಪಾವಭೋಗಿಸುವನೂ6 ತಾಪ ರಘುನಾಥಾನುನೋಡಿ ವಿಥಿಲಾಜಾತಾಸಮೇತ ಸಹಜಾತಾನ ಕೂಡಿ ವನಜಾತಾದಿಸಂಚರಿಸುತಾಘಾತೀಸಿ ರಾಕ್ಷಸರ ಪ್ರಿಯನಿತ್ತು ಮುನಿಪಾತ್ಮರಿಗೆಲ್ಲ ಪುರದೀಸೀತಾಸಮೇತ ಕಪಿ ಪೋತಾನ ಕೂಡಿ ನಿಜ ಭೂತಿಯಭೋಗಿಸಿದನು 7 ಕಾರಾಳಯಾದಿ ನಿಜ ನಾರೀಯ ಕೂಡುತಲೆಶೂರಾತ್ಮಜಾತನಿರಲೂನಾರಾಯಣಾತ್ಮತನು ತೋರೀಸಿ ಬಾಲವಪುಗೋರಾಜನಾಲಯದಲೀಶೀರೀಯ ಕೂಡಿ ಸುರವೈರಿಗಳಳಿದು ನದಿ ತೀರಾದಿಕೊಳಲನೂದಿನಾರೇರಿಗೆಲ್ಲ ನಿಜ ಜಾರಾಟ ಸೌಖ್ಯವನು ತೋರೀಸಿತೋಷಿಸಿದನು 8 ವೃಷ್ಣೀಯ ಮಧುರೆಯಲಿ ಪುಟ್ಟೂತ ಗಾರ್ಗಸುತನಟ್ಟೂಳಿಗಾಗಿಜಲದೀಪಟ್ಟಣ ನಿರ್ಮಿಸುತಲಿಷ್ಟಾಪ್ತ ಜನರುಗಳ ನಿಟ್ಟಲ್ಲೆ ಪಾಲಿಸಿದನುಸೃಷ್ಟೀಶಮಕ್ಕಳನು ಮುಟ್ಟೂತ ಕರದಿ ತದಭಿಷ್ಟಾರ್ಥಗಳನುಸುರಿದೂತೃಷ್ಣೇಶ ಪಾಂಡವರ ಕಷ್ಟಾವ ಕಳಿದು ಗಜಪಟ್ಟಣವಸಾಧಿಸಿದನು 9 ಪಾರ್ಥಾರ ಶಾಲೆಯೊಳು ಪೂತಾತ್ಮರಿಂದ ಹರಿ ಭೂತೀಶುಕೇಳಿ ಮನದೀಪ್ರಾತಃ ಸಮಾರಭಿಸಿ ರಾತ್ರೀಯತನಕ ಹರಿ ಮೂರ್ತೀಯಪೂಜಿಸುತಿಹಾದೈತ್ಯಾರ ನೋಡಿ ಸುರನಾಥರ ಜಯಿಸಿ ಜಿನ ಪೋತಾತ್ಮ ಮಲಗಿ ತೊಡಿಯೋಳ್‍ಶಾಸ್ತ್ರಾವ ಬೋಧಿಶ್ಚವರಾತ್ಮಾವ ಕೆಡಿಸಿ ಸುರವೈತಾವತೋಷಿಸಿದನೂ10 ಶುಭ ಸತಿ ಮಿಷ್ಟಾತ್ಮಹಯವ ಮಾಡಿಅಷ್ಟಾಷ್ಟ ಖಡ್ಗವನು ಮುಷ್ಟೀಲಿ ಪಿಡಿದು ಬಹು ಶಿಟ್ಟೀಲಿಸುತ್ಲೆ ಚರಿಸೀವಿಪ್ಲವಾತ್ಮಕ ಕಲ್ಕಿ ಖಳರ್ಹೊಟ್ಟೀಯವಡೆದು ಶುಭಪಾಲಿಸಿದನು11 ವೆಂಕಟನಾಥ ಭವಪರಿಕವ ಹರಿಸೂತ ಕಿಂಕರನಾಗಿರುವೆನೂಶಂಬಾಸುರೋದರಜ ಶಂಖಾವಪಿಡಿದು ಮುಖ ಪಂಕೇಜದಿಂದೂದುತಾಹುಂಕಾರ ಮಾಡುತಲೆ ಕಿಂಕಿರನೆಂದು ಭುವಿ ಸಂಕರ್ಷಣದಿಸುರರೂಶಂಕೀತರಾಗುತ ಭಯಂಕಾರವೆಂದು ಮಹಾತಂಕಾದಿಸಂಸ್ಮರಿಪರೂ 12 ದಂಷ್ಟ್ರೇಶ ಬ್ರಹ್ಮಾನಾಸಿ ಪುಟ್ಟೂತವಾರಿನಿಧಿ ಮೆಟ್ಟೂತಘರ್ಘವಿಸಲೂದೃಷ್ಟೀಲಿ ನೋಡಿ ಕಿವಿಗೊಟ್ಟಾಲಿಸೂತ ನಿಜಪೊಟ್ಟೀಯರಾಂತರದಲೀಯಷ್ಟೇನೊ ಸನ್ನಾವಿದು ಪುಟ್ಟೂತಲ್ಹಂದಿ ಮರಿಬೆಟ್ಟೇಶದಂತಿರುವದೂಧಿಷ್ಟ್ಯಾದಿ ಕೂತು ಪರಮೇಷ್ಠೀಯ ಮಹಿಮೆಯನು ತುಷ್ಟಿಸಿ ಪಾಡುತಿಹನು 13 ತರೂನ ಮೂಲದಿ ಕೂತು ಬೋರೆಯಾ ಹರಿಯ ಶಾಸ್ತ್ರವ ಪೇಳೆ ಮುನಿಪನ ಸ್ವರವ ಸ್ಮರಿಸಿರಿ ಮನುಜರೇ ಭವದರವು ಪೋಗುವದು 14 ಚಿಕ್ಕ ಹುಡುಗೆಯು ತನ್ನಾಗತ ಚಕ್ರದಲಿ ಬ್ರಹ್ಮಾಂಡ ಕಟಹವ ಟೊಕ್ಕ ವೆನಿಸುತ ಜೀವ ಸಂಸ್ಕಾರ ಮುಕ್ಕು ಮಾಡುವಳು ಮೋಘ ಸೌಖ್ಯ ನೀಡುವಳು 15 ಧ್ವಾನ ಮಾಡಲುಧರ್ಮರಾಜಗೆಮಾನವಾದಿಗಳೆಲ್ಲ ಮುಖಭವ ಶೋಣಿತಾಗುವದು 16 ತತ್ವ ದಿವಿಜರು ನಮ್ಮ ದೇಹದಿ ನಿತ್ಯದಲಿ ಹರಿಸ್ಮರಿಸಿ ತುತಿಸುತಸತ್ವ ದಿವಿಜರಿಗೆತ್ತುವೆನು ಕರವಾ17 ದುರಿತ ಹರಿಸುವನೂ 18 ಯಲ್ಲಿ ಬ್ರಹ್ಮಾಂಡದಲಿ ಶಿರಿ ವರವಲ್ಲಭವ ಸಂಸ್ಮರಿಸಿ ಹಿಗ್ಗುವಫುಲ್ಲನಾಭನ ಭಕ್ತರನು ಮನದಲ್ಲಿ ಸ್ಮರಿಸುವೆನೂ 19 ಶ್ರೀಶಾನು ಭಕ್ತಜನದಾಶೀಯ ಪೂರೈಸಲು ಕೂಸಾಗಿದೇವಕಿಸುತಾಯೇಷಾದಿಗಳ ದಿಶುಭರಾಶೀಲಿ ಪುಟ್ಟುತವನೀಶಾರ ವಂಶಬೆಳೆಸಿ 20 ದೋಷಾತ್ಮಾ ದೈತ್ಯಕುಲ ಘಾಶೀಶಿ ಭೂದೇವಿ ಕ್ಲೇಶಾವನೆಲ್ಲಕಳೆದೂ ದಾಶೀಜ ನಾಗಿ ನಿಜ ಕೋಶಾದಿ ಮೋಕ್ಷಾ ಪದಮೀರೇಶ ತೋರಿಸಿದನು ಇಂದಿರೇಶನ ಸಾಧಿಸಿದನು 21 ನಾರದರ್ಷಿಯ ಕರುಣದಲಿ ಶನಿವಾರ ಮಾಡೀದ ಪರಮತುತಿಯನುಭೂರಿ ಪಠಿಸಲು ಇಂದಿರೇಶನುದಾರ ನೋಡುವನು 22
--------------
ಇಂದಿರೇಶರು
ದಾಸರ ಭಾಗ್ಯವಿದು-ಪುರಂದರ-ದಾಸರ ಭಾಗ್ಯವಿದು ಪ ತುಂಬಿ ಸೂಸುತಲಿದೆ ಅ.ಪ ಭೂಸುರ ಜನುಮದಿ ಬಂದು ಬೆಳೆದು ಉಪ- ದೇಶಗೊಂಡು ಮಧ್ವಮತ ಪೊಂದಿ ಲೇಸಾಗಿ ಭಕ್ತಿ ವಿರಕ್ತಿ ಜ್ಞಾನದ ವಿ- ಶೇಷವಾಗಿ ನಾ ಬಾಳುವದೆಲ್ಲ 1 ಸಜ್ಜನ ಸಂಗತಿ ಮಾಡಿ ದುರುಳಜನ ವರ್ಜನಗೈದು ಸತ್ಕರ್ಮಗಳ ಆರ್ಜಿಸಿ ನಾಮ ಮುದ್ರೆ ಹಗಲು ಇರಳು ನಿ ರ್ಲಜ್ಜನಾಗಿ ನಾ ಬಾಳುವುದೆಲ್ಲ 2 ಶ್ರವಣ ಕೀರ್ತನೆ ವಂದನೆ ಸ್ತೋತ್ರ ಹರಿನಾಮ ತವಕದಿಂದ ನುಡಿಯುವ ಕವನ ನವನವ ವಚನವು ಮಂತ್ರ ಸಂಕಲ್ಪವು ಸವಿದು ಸ್ಮರಿಸಿ ನಾ ಬಾಳುವುದೆಲ್ಲ 3 ಯಾತ್ರೆ ತೀರ್ಥ ದಿವ್ಯ ದಾನಧರ್ಮಂಗಳು ಕ್ಷೇತ್ರ ಮೆಟ್ಟಿ ಬಹ ಸಂಭ್ರಮವು ಮಿತ್ರರ ಕೂಡಾಡಿ ಹರಿಪರನೆಂದು ಸ- ತ್ಪಾತ್ರನಾಗಿ ನಾ ಬಾಳುವುದೆಲ್ಲ 4 ಹರಿದಿನದುಪವಾಸ ಜಾಗರಣೆ ಪಾರಣಿ ಗುರು ಹಿರಿಯರಲಿ ವಿಹಿತಸೇವೆ ಹಿರಿದಾಗಿ ಮಾಡೋಡು ಪರಿಪರಿಯಿಂದಲಿ ಹರುಷದಿಂದಲಿ ನಲಿದಾಡುವುದೆಲ್ಲ 5 ಷಡುರಸಭೋಜನ ದಿವ್ಯವಸನ ನಿತ್ಯ ಉಡುವುದು ಹೊದೆವುದು ಹಸನಾಗಿ ತಡೆಯದೆ ಜನರಿಂದ ಪೂಜೆಗೊಂಡು ಸುಖ- ಬಡಿಸುತಿರುವ ವಿಚಿತ್ರಗಳೆಲ್ಲ 6 ಮನವೆ ಹಿಗ್ಗದಿರು ಹಿಯ್ಯಾಳಿಕೆಯಿಂದ ಗುಣಿಸಿಕೊ ಸುಖವಾವುದು ಲೇಶ ನಿನಗೆ ಸ್ವತಂತ್ರ ಎಂಬುದು ಕಾಣೆನೆಂದಿಗು ಗುಣನಿಧಿ ವಿಜಯವಿಠ್ಠಲನ ಪ್ರೇರಣೆಯೆಲ್ಲ 7
--------------
ವಿಜಯದಾಸ
ದಾಸರಾಗಿರಿ ದಾಸರಾಗಿರಿ ದಾಸರಾಗಿರಿ ಬೇಗನೆ ಪ. ದಾಸರಾಯರ ಪದವ ನಂಬಿ ವಾಸುದೇವಗೆ ಬೇಗನೆ ಅ.ಪ ದುಷ್ಟಮನ ಕಲ್ಮಷವ ಕಳದು ಸೃಷ್ಟಿಕರ್ತನ ಭಜನೆ ಮಾಡುತ ಕಷ್ಟಗಳನೀಡಾಡಿರಿ 1 ತಂದೆ ಮುದ್ದುಮೋಹನರೆಂ- ತೆಂದು ಮೆರೆಯುವ ಗುರುಗಳ ದ್ವಂದ್ವ ಪಾದವ ಭಜಿಸಿ ಈ ಭವ ಬಂಧನವನೀಗಾಡುತ 2 ಜನನ ಮರಣ ನೀಗುವುದಕೆ ಕೊನೆಯ ಮಾರ್ಗವು ದಾಸತ್ವ ಘನಮನದಿ ಸ್ವೀಕಾರ ಮಾಡಿ ವನಜ ನಯನನ ಪಾಡಿರಿ 3 ಅಂಕಿತವ ಸ್ವೀಕಾರ ಮಾಡಿರಿ ಶಂಕಿಸದೆ ಶ್ರೀಗುರುಗಳಿಂ ಶಂಖ ಚಕ್ರಾಂಕಿತನ ಗುಣಮನ ಪಂಕಜದೊಳು ಸ್ಮರಿಸಿರಿ 4 ಆದಿಯಿಂದಲಿ ಇಹುದು ಜೀವಗೆ ಶ್ರೀಧರನ ದಾಸತ್ವವು ಈ ಧರ್ಮ ತಿಳಿಯದಲೆ ಗರ್ವದಿ ಹಾದಿ ತಪ್ಪಲಿ ಬೇಡಿರಿ 5 ಜಗದೊಡೆಯ ಶ್ರೀ ಹರಿಯು ಸರ್ವದ ನಿಗಮಗಳಿಗಾಧಾರನು ಬಗೆಬಗೆಯ ಜೀವರೊಳಗಿರುತಲಿ ಸುಗುಣವಂತರ ಪೊರೆವನು 6 ಈ ಪರಿಯ ದಾಸತ್ವ ಹೊಂದಿ ನಿ ರ್ಲೇಪರಾಗಿರಿ ಕರ್ಮದಿಂ ಗೋಪಾಲಕೃಷ್ಣವಿಠ್ಠಲನು ರೂಪ ತೋರ್ವನು ಹೃದಯದಿ 7
--------------
ಅಂಬಾಬಾಯಿ
ದ್ರೌಪದಿ ಸುಳಾದಿ ಪುರಂದರ ಗುರು ನಾಗೇಶಾವೇಶ ಗುರು ಶ್ರೀಪಾದ ರಾಯ ಗುರು ಯೋಗಿ ಟೀಕಾರ್ಯ ಗುರು ಶ್ರೀಮದಾಚಾರ್ಯ ಗುರು ನಾಗಶÀಯನ ನೀನು ಸಕಲ ಜಗದ್ಗುರು ಈತ ಗುರು ಸಂತತಿಗೆ ವಂದೀಸಿ ತಾತ್ವಿಕರ ಜಾಗು ಮಾಡದೆ ನಮಿಪೆ ಜ್ಞಾನ ಪ್ರದಾತರೆಂದು ಆಗಮ ಪೌರಾಣ ಶೃತಿ ತತಿಗಳೊಳೆಲ್ಲ ಆಗುವಳಭಿಮಾನಿ ಭಾರತೀದೇವಿ ಎಂದು ಈಗ ಈ ಮಹಿಮಳ ಚರಿತೆ ಬುದ್ಧಿಗೆ ದೇವಿ ತಾಗಿಸಿದಂದದಿ ಸಾಗಲಿ ನುಡಿವುದು ನಾಗರಾಜನ ಜನನಿ ಸ್ವಪ್ನದಿ ಸುಳಿದಳು ಕೂಗಿದೆ ಅಯೋನಿಜೆ ದುಃಖರಹಿತಳೆಂದು ಭಾಗವತರ ಕಾಯ್ವ ಭಾಗ್ಯ ಸಂಪನ್ನದೇವಿ ಯೋಗಿ ಜನರಿಗೆಲ್ಲ ಗುರುಪತ್ನಿ ಎಂದೆನಿಪೆ ಆಗಾಗ ಅವತರಿಸಿ ಅನಿಲನ ಕಾರ್ಯಕ್ಕೆ ಆಗುವೆ ಸಹಕಾರಿ ಅಸುರರ ಸಂಹಾರಿ ಶ್ರೀ ಗುರೋರ್ಗುರು ಹರಿ ಗೋಪಾಲಕೃಷ್ಣವಿಠಲ ಭಾಗವತರ ಕಾಯ್ವ ನಿನ್ನದ್ವಾರದಿ ಸ್ಮರಿಸೇ 1 ಕೃತಿಸುತೆ ಕೊಂಡದಿ ಉದಿಸಿ ಸುತೆ ಎನಿಸಿದೆ ದ್ರುಪದನಿಗೆ ಚ್ಯುತರಹಿತ ಯೌವನಯುತೆ ಐವರಿಗರಸಿಯು ಆದೆ ಪ್ರತಿಯಿಲ್ಲದ ಪತಿವ್ರತೆ ಸುರತತಿ ಜನನಿಯು ನೀನೌ ಮಾ- ರುತ ಸುತನಲ್ಲದೆ ನಿನಗಿನ್ನಿತರರ ಸಂಗವು ಉಂಟೆ ಸುತರಂದದಿ ನಾಲ್ವರ ತಿಳಿದತಿಶಯದಲಿ ಅವರವರಾ ಸತಿಯರ ನಿನ್ನೊಳಗಡಿಗಿಸಿ ರತಿ ಕಾಲದಲೊಲಿದಿತ್ತೆ ಮತಿವಂತರಿಗಲ್ಲದೆ ಪ್ರತಿ ಜನರಿಗೆ ಮೋಹಕವು ಕ್ಷಿತಿಯೊಳು ನೀನವತರಿಸೀ ಕ್ಷಿತಿಗೇ ತೋರಿದ ಲೀಲೆ ಅತಿ ಸೌಭಾಗ್ಯದಿ ಮೆರೆದೆ ಕ್ಷಿತಿಪತಿಸೂಯಾಗದಲಿ ಖತಿಗೊಳ್ಳಲು ಖಳ ಜನರು ಸ್ಥಿತ ಸಾಮ್ರಾಜ್ಯವ ಕಂಡು ಕ್ಷಿತಿಭಾರವನಿಳುಹಲು ಶ್ರೀಪತಿ ಪತಿಮನವರಿಯುತ ಕುರು ಪತಿಸಭೆಯಲಿ ಭ್ರಮಿಸುತ ಜಾರುತ ಸರಸಿಯೋಳ್ ಬೀಳುತಿರೆ ಪತಿ ಶ್ರೀಪತಿ ಮೊಗವೀಕ್ಷಿಸಿ ಅತಿ ಹಾಸ್ಯದಿ ನೀ ನಗಲು ಖತಿಗೊಳ್ಳಲು ಕುರುಪತಿ ಕಲಕಿತು ದ್ವೇಷದ ಭಾವಗಳು ಪತಿ ಭಾರದ ಹರಣಕೆ ಮೂಲಾಯಿತು ನಿನ್ನಯ ನಗೆ ಕಿಡಿ ತಾ ಕಾತುರಕ್ಕಸ ತರುಗಳಿಗೆ ಸೋಕಿತು ಕಾಮನ ಬಿಸಿಯು ಮತಿಹೀನರು ನಿನ್ನನು ಬಯಸುತ ಬರೆ ದ್ವೇಷಾಗ್ನಿ ಜ್ವಲಿ ಸುತ ವಾಯು ಸಹಾಯದಲಿ ಹುತಗೈಸಿದೆ ಖಳತತಿಯ ಪತಿಯಂತರ್ಗತ ಕೃಷ್ಣನ ನುತಿಸುತ ಭಕ್ತ್ಯಾಜ್ಯಾಹುತಿ ಕ್ಷಿತಿ ಭಾರವನಿಳುಹಿಸಿದೆ ಹಿತತಂಗಿಯೆ ಗೋಪಾಲಕೃಷ್ಣವಿಠ್ಠಲಗೇ ನೀ ಪ್ರತಿಯುಂಟೆ ನಿನಗೆ ಈ ಕ್ಷಿತಿಯೊಳು ನಾಕಾಣೆ 2 ಮಡಿಯದೆ ದುರ್ಯೊüೀಧನನು ಮುಡಿಯನು ಕಟ್ಟೆನು ಎಂಬ ದೃಢ ಸಂಕಲ್ಪಳೆ ಪುಷ್ಪ ಮುಡಿಯಲಪೇಕ್ಷಿಸಿದೆ ನೀ ಒಡೆಯುವರುಂಟೇ ಇದರ ಒಡಲಿನ ಮರ್ಮವ ದೇವಿ ಒಡೆಯ ವೃಕೋದರ ನಿನ್ನ ನುಡಿ ಕೇಳುತ ವನ ಪೊಕ್ಕು ಮಡುಹುತ ಯಕ್ಷರ ತಂದು ಮುಡಿಸಿದ ಸೌಂಗಂಧಿಕವ ಪೊಡವಿಯೊಳ್ಹರಡಿತು ವಾರ್ತೆ ಒಡಲರಿಯದೆ ಜನತತಿಗೆ ಪಿಡಿಯುತ ಕರದಲಿ ಪುಷ್ಪ ಒಡೆಯನ ಪ್ರೇಮದಿ ನೋಡಿ ಮುಡಿಸಿದೆ ಸಿರಿಹರಿ ಮುಡಿಗೆ ಕಡು ಭಕ್ತಿಯೊಳಂತರದಿ ಬಿಡುಬಿಡು ಬಿಂಕವ ಲೀಲೆ ಕೊಡು ಕೊಡು ಭಕ್ತಿಯ ಬಾಲೆ ಪಡಿಸಾನಂದವ ಶೀಲೆ ನುಡಿಸಡಿಗಡಿಗ್ಹರಿ ಲೀಲೆ ಒಡಗೂಡತ ಪತಿಯೊಡನೆ ನಡೆಸಿದ ಚರಿತೆಗಳೆಲ್ಲ ಕಡು ಮೋಹವು ರಜ ತಮರಿಗೆ ಕೊಡುವುದು ಸುಖ ಸುಜನರಿಗೆ ಪೊಡವಿಪತಿ ಗೋಪಾಲಕೃಷ್ಣವಿಠಲ ನಿನ್ನ ನಡೆನುಡಿ ಮೆಚ್ಚುತ ನಡೆಸಿದ ಭಾರತ ನಾಟಕವÀ 3 ಆನಂದ ಜ್ಞಾನಪೂರ್ಣೆ ಆಗಾಗ ಒದಗಿದ ಹೀನ ದುಃಖದ ಸÉೂೀಂಕು ಉಂಟೆ ನಿನಗೆ ಇನ್ನು ಪ್ರಾಣಪತಿಗಳೈವರೆದುರಲಿ ಖಳ ನಿನ್ನ ಮಾನ ಹಾನಿಯ ಗೈಸೆ ಜಗವೆ ತಲ್ಲಣಿಸಿತು ಮಾನಾಭಿಮಾನ ಬಿಟ್ಟು ಶ್ರೀನಿಧಿ ಗತಿ ಎನ್ನೆ ಅಕ್ಷಯ ವಸನವು ಪ್ರಾಣಪಂಚಕ ಹರಿಯಾಧೀನವೆಂಬುವ ತತ್ವ ಪ್ರಾಣಕ್ಕೆ ಪ್ರಾಣಬಿಂಬ ಸ್ವಾಮಿ ಎಂಬುವ ತತ್ವ ಮಾನಾಭಿಮಾನ ತೊರೆದು ಪ್ರಾಣೇಂದ್ರಿಯವ ಜರಿದು ಮಾನಸದಲಿ ಹರಿಯ ಸ್ಮರಿಸಿದರಕ್ಷಯ ಸ್ಥಾನಪ್ರಾಪ್ತಿಯು ಎಂಬ ತತ್ವರಹಸ್ಯಗ- ಳಾನು ಸೂಚಿಸೆ ನಿನ್ನ ಕೃತಿಯಲ್ಲದಿನ್ನಿಲ್ಲ ದಾನವರೆಲ್ಲ ನಿನ್ನ ಕಾಮಿಸಿ ನೋಡಲವರು ಏನೆಂಬೆ ಮಾಡಿದಂಥ ಅಲ್ಪಸ್ವಲ್ಪದ ಪುಣ್ಯ ಕ್ಷೀಣಗೈಸುತ ಸೆಳೆದು ಹೀನ ಪಾಪದಿ ನೂಕಿ ಹಾನಿಗೈಸಿದೆ ಪವಮಾನಸುತನಿಂದಲಿ ಮಾನುನಿಮಣಿ ಸರ್ವಕ್ಷೇಮ ಪಾಲಿಪ ಭಕ್ತ- ರಾನನದಲಿ ನೋಡೆ ಜ್ಞಾನಾನಂದವನಿತ್ತು ಹೀನ ನರಕದಿ ಬಿದ್ದ ಭ್ರಾತೃಸಹಿತದಿ ಕುರುಪ ಕಾಣದೆ ನಿನ್ನ ಮಹಿಮೆ ಜ್ಞಾನರಹಿತನಾಗಿ ಜಾಣೆ ಶ್ರೀ ಗೋಪಾಲಕೃಷ್ಣವಿಠ್ಠಲನ ನಿಜ ಜ್ಞಾನ ಪಾಲಿಸಿ ಕಾಯೆ ಭೀಮಸೇನನ ಜಾಯೆ 4 ಮುಕ್ತರ ಬಂಧುವೆ ನೀನು ಭಕ್ತಿಯದಾತಳÉ ನೀನು ತತ್ವ ತಿಳಿಸುವೆ ನೀನು ಚಿತ್ತದೆ ನೆಲಸುವೆ ನೀನು ಹತ್ತದು ದುಃಖವು ನಿನಗೆ ಸುತ್ತದು ಶೋಕವು ನಿನಗೆ ಮುಕ್ತಾರ್ಥವ ಕೊಡುವವಳೆ ಮತ್ತೆ ಅಯೋನಿಜಹಳೆ ಮುತ್ತು ಮಾಣಿಕ್ಯವು ನವರತ್ನದ ಆಭರಣಗಳ ಕಂಚುಕ ನೆತ್ತಿಲಿ ಮಕುಟವನಿಟ್ಟು ಚಿತ್ತದೊಲ್ಲಭನಂಕದಲಿ ಹತ್ತಿ ಸಿಂಹಾಸನದಲಿರೆ ಸುತ್ತಲು ಸೌಪಣ್ರ್ಯಾದಿ ಸುರಸ್ತ್ರೀಯರು ಓಲೈಸೆ ಚಿತ್ತದಿ ಸಿರಿಹರಿಯನು ಭಕ್ತಿಲಿ ಭಜಿಸುತ ಮುಕ್ತಾ- ಮುಕ್ತರ ಕೃಪಪಾಂಗದಲಿ ಸುತ್ತಲೀಕ್ಷಿಸಿ ಕಾವೆ ಭಕ್ತಿಲಿ ದ್ರೌಪದಿ ಎಂದು ಎತ್ತಿದ ಸ್ವರದಲಿ ಕೂಗೆ ಚಿತ್ತದೊಲ್ಲಭನೊಡನೆ ಚಿತ್ತೈಸೆನ್ನಯ ಮನಕೆ ಹತ್ತಿಕಾಡುವ ಎನ್ನ ದುಷ್ಕøತ ಕರ್ಮಗಳೆಲ್ಲ ಕತ್ತರಿಸುತ ಕಾಯಮ್ಮ ಸತ್ಯಾಪ್ರಿಯನನು ತೋರೆ ಆರ್ತಜನರ ಪಾಲ ಗೋಪಾಲಕೃಷ್ಣವಿಠ್ಠಲನ್ನ ಅರ್ಥಿಯಿಂದಲಿ ಎನ್ನ ಚಿತ್ತದಿ ತೋರೆಲೆ ಜನನಿ 5 ಜತೆ ತತ್ವದೇವತೆಗಳ ಜನನಿ ತತ್ವಾರ್ಥ ತಿಳಿಸೇ ಆಪ್ತ ಗೋಪಾಲವಿಠ್ಠಲನೆಂದೆನಿಸೇ
--------------
ಅಂಬಾಬಾಯಿ
ಧನ್ಯನಲ್ಲವೇ ಅವನು ಧನ್ಯನಲ್ಲವೆ ಪ ಪನ್ನಗಾರಿ ಧ್ವಜನ ಮಹಿಮೆಯನ್ನು ಪೊಗಳುತಿರುವ ನರನು ಅ.ಪ. ಅರುಣ ಉದಯದಲ್ಲಿ ಎದ್ದು ದುರಿತದೂರವನ್ನು ಸ್ಮರಿಸಿ ಹರುಷದಿಂದ ಶೌಚ ಕರ್ಮ ಅರಿತು ನಿರುತ ಚರಿಸುವರನು 1 ಸತ್ಯಮತದ ಪದ್ಧತಿಯನು ಚಿತ್ತವಿಟ್ಟು ಆಚರಿಸುತ ಭೃತ್ಯನೆಂದು ಪೇಳಿಕೊಳುವ ನಿತ್ಯ ತೃಪ್ತನಾದವರನು2 ಸಿರಿಯುತ ರಂಗೇಶವಿಠಲ ಸರುವ ದೇವರೊಡೆಯನೆಂದು ಸ್ಥಿರದಿ ನಂಬಿ ಅವನ ಪಾದ ಮರೆಯ ಹೊಕ್ಕ ಜಾಣ ನರನು 3
--------------
ರಂಗೇಶವಿಠಲದಾಸರು
ಧನ್ವಂತ್ರಿ ನಿನ್ನ ಸ್ಮರಿಸಿ ಧನ್ಯರಾಗಿಹರ ಪಾದ ಧ್ಯಾನದೊಳಿರೆಸೆನ್ನ ಧನ್ಯನೆಂದೆನಿಸೊ ಪ ನಿನ್ನ ದಾಸರ ಕೀರ್ತಿ ನಿನ್ನ ದಾಸರ ವಾರ್ತೆ ನಿನ್ನ ನಾಮಾಮೃತವು ಎನ್ನ ಕಿವಿ ತುಂಬಿರಲಿ ಅ.ಪ ನಿನ್ನ ಪಾದದ ಸ್ಮರಣೆಯನ್ನು ಮಾಳ್ಪರ ಸಂಗ ಇನ್ನು ಪಾಲಿಸು ದೇವನೆ ಘನ್ನ ಮಹಿಮನೆ ಪರಮ ಪುಣ್ಯಶೀಲರ ಸೇವೆ ಇನ್ನು ಕರುಣಿಸೊ ಕೇಶವಾ ಸನ್ನುತಾಂಗನೆ ಭವಭಯವನ್ನು ಬಿಡಿಸೆಂದು ನಾ ನಿನ್ನ ಮೊರೆಯಿಡುವೆ ಹರಿಯೇ ಚನ್ನ ಶ್ರೀಗೋಪಾಲ ಗೋವಿಂದ ಕೇಶವ ನಿನ್ನ ನಾಮನಿರಂತರವು ಪಾ- ವನ್ನ ಮಾಡಲಿ ಎನ್ನ ಜಿಹ್ವೆಯಾ 1 ಆದರದಿ ನಿನ್ನ ಸ್ಮರಿಪ ಸಾಧುಜನರ ಸಂಗ ಭೇದವಿಲ್ಲದೆ ಕರುಣಿಸೊ ಆದಿ ಮೂರುತಿ ನಿನ್ನ ಆದರದಿ ಸ್ಮರಿಪ ಪರ- ಮಾದರವ ನಿತ್ತು ಸಲಹೊ ಮೋದ ಪಡುವ ಭಾಗ್ಯ ಮಾಧವನೆ ದಯಪಾಲಿಸೋ ಮಾಧವ ಜನಾರ್ದನ ಕ್ರೋಧಿ ಸಂವತ್ಸರವು ಭಕುತರ ಕ್ರೋಧಗಳ ಕಳೆಯುತ್ತ ಸಲಹಲಿ2 ಶರಣೆಂದು ಬೇಡುವೆ ಪರಿಪರಿ ಅಘಗಳ ಪರಿಹರಿಸೆಂದು ನಾ ಸ್ಮರಿಸಿಬೇಡುವೆನು ಸರಸಿ ಜೋದ್ಭವÀಪಿತನೆ ಸರಸಿಜಾಕ್ಷಿಯ ಕೂಡಿ ಹರುಷದಿ ನೆಲಸೆನ್ನ ಹೃದಯದಲಿ ದೇವ ಸರಸಿಜನೇತ್ರನೆ ಬಿಡದೆ ನಿನ್ನನು ಸ್ಮರಿಪ ಕಡುಭಾಗವತರ ಸಂಗವನೆ ನೀಡೈ ಮೃಡನ ಸಖನೆ ನಿನ್ನಂಘ್ರಿ ಸ್ಮರಿಸುವ ಭಾಗ್ಯ ತಡೆಯದಲೆ ಪಾಲಿಸುತ ಪೊರೆ ಶ್ರೀ ಕಮಲನಾಭ ವಿಠ್ಠಲನೆ ದಯದಲಿ 3
--------------
ನಿಡಗುರುಕಿ ಜೀವೂಬಾಯಿ
ಧೀಮಂತರ ದಯಪಡೆದು ಮಾಧವನ ಪದ ವಿಡಿದು | ಪ್ರೇಮದಿ ಭಜಿಸೆನ್ನ ಮನವೇ | ಪ ಕಾರ್ಮುಗಿಲದುಗ್ಧರಾಶಿಯನು ಶೃತಿಗೆ ಬೀಳಲ್ಪ | ಯೋರ್ಮನದಿ ಸಂತೋಷಿಪಂತೇ ನಿರ್ಮಳಾಂಗಣ ಕಥೆಯ ಘೋಷವೇನು ಕೇಳಿ ಅತಿ | ಪೆರ್ಮೆಯಿಂದಲೆ ನಲಿದು ಬಾಳು 1 ನೋಡಲಾಕ್ಷಣ ತನ್ನ ಮಾತೆಯನು ಮುದದಲಿಂ | ಲೋಡಿ ಬಪ್ಪುವ ಶಿಶುವಂತೆ | ರೂಢಿಯೊಳು ಸಜ್ಜನರ ಕಂಡಾಕ್ಷಣಕ ತನುವ | ನೀಡಿ ಸಾಷ್ಟಾಂಗದಿಂದೆರಗು 2 ಮಿಗಿಲಾಸೆಯನು ತ್ಯಜಿಸಿ ದಾಗಸದ-ಲಿಂಬರ್ವ | ನಿಗಳುಂಬ ಚಾತಕನ ತೆರದಿ | ಮುಗಳೆ ದಯದಿಂದ ಸಜ್ಜನ ಮುಖದಿ ಬಪ್ಪಬೋ | ಧೆಗಳ್ಪೊತನು-ವಾನುಗ್ರಹಿಸು ಧರಿಸು 3 ಮಣಿ ದೀಪವಾದಂತೆ ಸ | ಪಾದ ಕಮಲಗಳಾ | ಅತ್ಯಧಿಕ ಹರುಷದಿಂ ಹೃದಯದೊಳ್ ಧರಿಸಲ್ಕೆ | ಮೊತ್ತದ ಜ್ಞಾನ ತೊಳಗುವದು 4 ಗರ ಹೊಡೆದು | ಧರಿಯೊಳಗ ಗರ್ವಿಸಲಿ ಬ್ಯಾಡಾ | ಸಿರಿಯು ತೊಲಗಲು ಕುನ್ನಿಯಂತನ್ನ ದಾಸಿಂಗೆ | ಪರರು ಮನವಡಿದು ಬಳಲದಿರು 5 ಕಮಲಜನ ಪದಕ ಕತ್ತದೀವರ ಅನುಮತದ | ವಿಮಲಮಾರ್ಗ ಹೊಲಬ ನರಿದು | ಅಮಲೂಧ್ರ್ಪ ಪೌಂಡ್ರ ಹರಿ ಲಾಂಛನವು ತುಳಸಿ ಸರ ಕ್ರಮದಿಂದ ಧರಿಸಿ ಸುಖಿಯಾಗು 6 ಹರಿಪರದೈವವೆಂದು ಅರಿತು ಭಾವದಿ ನಿಂದು | ಹರಿ ಕೋಟಿ ನಿಭಕ ಮಿಗಿಲೆನಿಸಿ | ಮೆರೆವ ಮಹಿಪತಿ ನಂದನೋಡಿಯ ನಾಮಂಗಳನು | ಸ್ಮರಿಸಿ ಇರಳ್ಹಗಳ ಕೊಂಡಾಡು 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧ್ಯಾನವನು ಮಾಡು ಬಿಂಬ ಮೂರುತಿಯಪ ಆನಂದದಲಿ ಕುಳಿತು ಅಂತರಂಗದಲಿ ಅ.ಪ ಸದಾಚಾರನಾಗಿ ದ್ವಾದಶಗುರುಗಳಿಗೆರಗಿ ಮುದದಿಂದ ಮೂಲಮಂತ್ರವನು ಜಪಿಸಿ ಸದಮಲ ಭಕುತಿಯಲಿ ದೇಹಸ್ಥಿತಿಯನೆ ತಿಳಿದು ಪದಮಾಸನವ ಹಾಕಿ ಪರಮ ವಿಶ್ವಾಸದಲಿ1 ಅಂಗವನು ಚಲಿಸದೆ ಚೆನ್ನಾಗಿ ದೃಢವಾಗಿ ಕಂಗಳನೆ ಮುಚ್ಚಿ ಇಂದ್ರಿಯಗಳನೆ ತೆರೆದು ಮಂಗಳ ಶೋಭಿತ ಅಖಂಡ ಧ್ಯಾನದಂತ ರಂಗದೊಳಗೆ ನಿಲಿಸಿ ಎಲ್ಲವನು ಕಾಣೊ 2 ಭಗವದ್ರೂಪಗಳೆಲ್ಲ ಒಂದು ಬಾರಿ ಸ್ಮರಿಸಿ ಮಗುಳೆ ಪರಮ ಗುರುವಿನ ಮೂರ್ತಿಗೆ ತೆಗೆದು ಆಹ್ವಾನಮಾಡಿ ಅಲ್ಲಿಂದ ಹರುಷದಿ ಸ್ವಗುರು ಬಿಂಬಮೂರ್ತಿಯಲಿ ಐಕ್ಯವನೆ ಮಾಡು3 ತಿರುಗಿ ಮೆಟ್ಟಿಕೆ ಮೂರು ವೇಗದಿಂದಲಿ ನಿನ್ನ ಲ್ಲಿರುವ ಮೂರ್ತಿಯಲ್ಲಿ ಚಿಂತನೆಯ ಮಾಡೊ ಭರದಿಂದ ಎಲ್ಲವನು ತಂದು ಹೃದಯದಲ್ಲಿ ಸ್ಥಿರವಾಗಿ ಇಪ್ಪ ಮೂರುತಿಯೊಡನೆ ಕಲೆಸು 4 ಆತನೆ ಬಿಂಬ ಮೂರುತಿಯೆಂದು ತಿಳಿದುಕೊ ಆ ತರುವಾಯ ನಾಡಿಗಳ ಗ್ರಹಿಸಿ ಆ ತೈಜಸನ ತಂದು ವಿಶ್ವಮೂರ್ತಿಯಲ್ಲಿ ಪ್ರೀತಿಯುಳ್ಳವನಾಗಿ ಪತಿಕರಿಸು ಮರುಳೆ 5 ಜ್ಞಾನ ಪ್ರಕಾಶದಲಿ ಇದ್ದು ನಿನ್ನ ಹೃದಯ ಕಮಲ ಮಧ್ಯ ಮೂರ್ತಿ ನಿಲ್ಲಿಸಿ ಬಾಹ್ಯದಲಿ ಏನೇನು ಪೂಜೆಯನು ಉಳ್ಳದನು ಮಾಡೊ6 ಗುಣ ನಾಲ್ಕರಿಂದಲಿ ಉಪಾಸನವನೆ ಮಾಡು ಕ್ಷಣ ಕ್ಷಣಕೆ ಹರಿಪಾದವನು ನೋಡುತ ಅಣುರೇಣು ಚೇತನಾಚೇತನಕೆ ನೇಮಕ ಫಣಿಶಯನನಲ್ಲದೆ ಮತ್ತೊಬ್ಬರಿಲ್ಲವೆಂದು 7 ಮಮತೆಯನು ತೊರೆದು ಮೇಲೊಂದಪೇಕ್ಷಿಸದೆ ಸಮ ವಿಷಮ ತಿಳಿದೊಂದೆ ಭಕುತಿಯಲ್ಲಿ ಸ-ಮಾಧಿಗೊಳಗಾಗಿ ದಿವ್ಯ ದೃಷ್ಟಿಲಿ ಸರ್ವ ಕ್ರಮ ಅನುಕ್ರಮದಿಂದ ಭರಿತಭಾವುಕನಾಗೊ 8 ಪರಿ ಧೇನಿಸಲು ದೇವ ಕರುಣನ ಮಾಡೆ ಪಾಪ ಸಂಚಿತವು ಪ್ರಾರಬ್ಧ ನಾಶ ಅಪರೋಕ್ಷಿತನಾಗಿ ತನ್ನ ಯೋಗ್ಯತದಷ್ಟು ಗೋಪಾಲ ವಿಜಯವಿಠ್ಠಲನೊಲಿವನಾಗ9
--------------
ವಿಜಯದಾಸ
ನಂಬಲು ಕೆಟ್ಟವರು ಆರು ಜಗದೊಳು ಪ ಹರಿ ನೀನೆ ಗತಿ ಎಂದು ಅರಿತ ಪ್ರಲ್ಹಾದನ ದುರಿತವ ಭರದಲಿ ತರಿದ ಶ್ರೀಹರಿಯನು 1 ಕುರು ಸಭೆಯೊಳು ನರಹರಿಯನು ಸ್ಮರಿಸಿದ ತರುಣಿಯೊಳು ಕರುಣಿಸಿ ಪೊರೆದ ಶ್ರೀಧರನನ್ನು 2 ಅನುದಿನದಲಿ ನಮ್ಮ ಹನುಮೇಶ ವಿಠಲನ ನೆನೆದ್ವಾಲ್ಮೀಕನ ವಿಮೋಚನೆ ಮಾಡ್ದ ಶ್ರೀರಾಮನ 3
--------------
ಹನುಮೇಶವಿಠಲ
ನಂಬಿಗಿಟ್ಟ ಸಂಸಾರ ಇದು ನಂಬಿ ಹಂಬಲಿಸದಿರು ಪೂರಾ ಪ ಕಾಯವೆಂಬುದು ಸ್ಥಿರವಲ್ಲಾ ಅತಿ ಮಾಯಕೆ ಬಂದು ಸಿಕ್ಕಿದೆಲ್ಲಾ ಬಾಯಿ ರುಚಿಗಳು ಬಿಡು ಎಲ್ಲಾ ರುಚಿ ರುಚಿಸೆಲ್ಲಾ ತಂದೆ ತಾಯಿಗಳು ಇನ್ನು ಹೊಂದಿದ ಅದರಲ್ಲೆ ಬಗೆ ಮಾಯದೊಳು ಇರುವಾಗೆ ಆನಂದ ತೋರುವದು ನಿನ್ನೊಳಗೆ 1 ಧೊರೆತನ ದೌಲತ್ತು ಸ್ಥಿರವೆಂದು ಪರಿ ಪರಿಯಲಿ ವಿಹರಿಸು ಎಂದೂ ಪರಮಾತ್ಮನ ಭಜನಿಲ್ಲದೆಂದೂ ವ್ಯರ್ಥ ಪಾಪಕೆ ಒಳಗಾಗಿ ಕೆಡುವೆಂದೂ 2 ಬದುಕು ಬಾಳುವೆ ನಂಬಿಕೊಂಡು ಮುಂದೆ ತುದಿಗಾಣದೆ ಹೋಗ್ವದು ಕಂಡೂ ----------------------- ---------------------- 3 ಅಷ್ಟೂ ಶ್ರೀಹರಿ ಮಾಯವೆಂದೂ ಸ್ಪಷ್ಟದಿ ಮನದಲಿ ತಿಳಿಯಿಂದೂ ಶಿಷ್ಟ ಹೆನ್ನ ವಿಠ್ಠಲನೆಂದೂ ಉತ್ಕøಷ್ಟದಿ ಹೃದಯದಿ ಸ್ಮರಿಸಿಂದೂ 4
--------------
ಹೆನ್ನೆರಂಗದಾಸರು
ನಮ್ಮ ಗುರುರಾಯನೇ | ಸ್ಮರಿಸಿದಾಗಲಿಹನೇ ಪ ಮನುಜನಾಗಿ ಬಂದನೇ | ಮತ್ರ್ಯದೊಳು ನಿಂದನೇ | ಜನನ ಮರಣ ಸಂದನೇ | ಜರಿಸಿ ಕೊಟ್ಟಾ ನಂದನೇ1 ಚಿತ್ತದ ಮೈಲಿಗೆ ಕಳಿಸಿದನೇ | ಚಿದ್ಘನಾಮೃತ ಗರದನೇ | ಸತ್ಯ ವಾಕ್ಯಾ ಬಿತ್ತಿದನೇ ಸತ್ವದ ಹೊಲ ಬೆಳಸಿದನೇ2 ಮಹಿಪತಿ ನಂದನ ಪ್ರಾಣನೇ | ಮಹಾಪ್ರಜ್ಞಾಪೂರ್ಣನೇ | ಇಹಪರ ಕೊಡುವ ತ್ರಾಣನೇ | ಮಹಿಮೆಗೆ ಎಣೆಗಾಣೆನೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾ ಮಾಡಿದತಿಶಯ ಅಪರಾಧ ಅಹಾ ಸ್ವಾಮಿದ್ರೋಹವೆ ಮಾಡಿದೆ ಪ ನೇಮವಿಲ್ಲದೆ ಪಾಪ ಕಾಮಿಸಿ ಮಾಡಿ ಹರಿ ಪ್ರೇಮಕ್ಕೆ ದೂರಾದೆ ಪಾಮರತನದಿ ಅ.ಪ ಗುರುನಿಂದೆ ಮಾಡಿದೆ ಸ್ಮರಿಸಿದೆನನುದಿನ ಸ್ಮರಿಸಬಾರದ ಸ್ತ್ರೀಯರ ಶರಣಜನರು ಕಂಡು ಶಿರವ ಬಾಗದೆ ಮಹ ಗರುವದಿಂ ಚರಿಸಿದೆ ಪರಿಪರಿ ಜಗದಿ 1 ಲಕ್ಷಿಸದೆ ಪರರರ್ಥ ಭಕ್ಷಿಸಿ ಇಲ್ಲೆನುತ ಪಕ್ಷಿಗಮನನ ಸಾಕ್ಷಿಟ್ಟು ಲಕ್ಷದಶಶತಪಾಪ ಲಕ್ಷ್ಯವಿಲ್ಲದೆ ಗೈದು ಶಿಕ್ಷೆಗೆ ಗುರಿಯಾದೆ ಮೋಕ್ಷವನರಿಯದೆ 2 ಪಿತಮಾತೆಯರ ನೂಕಿ ಇತರರ ಜತೆಯೊಳು ಮತಿಗೆಟ್ಟು ಮಮತಿಟ್ಟಿಹೆ ಮಿತಿಯಿಲ್ಲದನೃತ ಕ್ಷಿತಿಯೊಳು ಸರಿಧರ್ಮ ಹಿತಚಿಂತನಿನಿತಿಲ್ಲದತಿಭ್ರಷ್ಟನಾದೆ 3 ಮಣಿದು ದೈನ್ಯೆಂಬರಿಗೆ ಘನಹಾಸ್ಯಗೈಯುತ ಮನವ ನೋಯ್ಸಿದೆ ಬೆನ್ನ್ಹಚ್ಚಿ ಕನಿಕರೆಂಬುದು ಎನ್ನ ಕನಸಿನೊಳಿನಿತಿಲ್ಲ ಮನಸಿನಂತ್ವರ್ತಿಸಿ ಘನಕರ್ಮಿಯಾದೆ 4 ಇಂತು ಪಾಪಿಗೆ ಸುಖವೆಂತು ತ್ರಿಜಗದೊಳು ಕಂತುಜನಕ ಶ್ರೀರಾಮ ಭಕ್ತವತ್ಸಲ ನೆಂಬ ಬಿರುದು ವಹಿಸಿದಿ ಎನ್ನ ದೆಂಥ ತಪ್ಪಿರೆ ಕ್ಷಮಿಸಿ ಸಂತಸದಿಂ ಪೊರೆ 5
--------------
ರಾಮದಾಸರು
ನಾನೇನಿನಗಂದೆನೋ ಬಿಡದೆ ಪವ ಮಾನ ಪಾಲಿಸೋ ಎನ್ನನು ಪ ದೀನರ ಪಾಲಿಪ ದಾನವಾಂತಕ ಎನ್ನ ಜ್ಞಾನಾನಂದದ ನಾಮ ಧ್ಯಾನವಗೈದೆನೊ ಅ.ಪ ಶರಧಿ ಲಂಘಿಸಿ ರಘು ವರನ ಕುಶಲವಾರ್ತೆಧರೆಜಾತೆಗೆ ಅರುಹಿ ದಶಾಶ್ಯನ ಪುರವ ದಹಿಸಿದಂಥ ಪರಮಸಮರ್ಥನೆಂದರಿತ ಕೊಂಡಾಡಿದೆನಲ್ಲದೆ || ತರು ಚರುವರನೆಂದಿನೆ | ಶಿರದಿ ಕಲ್ಲು ಧರಿಸಿ ತಂದವನೆಂದಿನೆ | ಬ್ರಹ್ಮಾಸ್ತ್ರಕೆ ಭರದಿ ಸಿಲ್ಕಿದಿ ಎಂದೆನೆ ಭಕ್ತೀಲಿ ಭಾವಿ ಸರಸಿಜಾಸ್ರನನೆಂದು ಸ್ಮರಿಸಿದೆನಲ್ಲದೆ 1 ಕೃತಯುಗದಲಿ ಕುಂತಿಸುತನಾಗಿ ಜನಿಸುತ ಪತಿ ಪಿತನಂಘ್ರಿ ಭಜಿಸುತಲಿ ಕ್ಷಿತಿ ಭಾರಕೆ ಖಳ ತತಿಯ ಸಂಹರಿಸಿದಾ ಪ್ರತಿಮಲ್ಲ ನೀನೆಂದು ಸ್ತುತಿಸಿದೆ ನಲ್ಲದೆ ಖತಿವಂತ ನೀನೆಂದಿನೆ ದುನುಜಾತೆಗೆ ಪತಿಯಾದವನೆಂದಿನೆ ಅವಳ ಕೂಡಿ ಸುತನ ಪೆತ್ತವನೆಂದನೆ ಯಾಮಿನಿಯಲಿ ಸತಿಯೆನಿನದವ ನೆಂದೆನೇ ನಿನ್ನನು ಬಿಟ್ಟು ಗತಿನಮಗಿಲ್ಲೆಂದು | ನುತಿಸಿದೆ ನಲ್ಲದೆ 2 ನಡುಮನಿಸುತನಾ ಪೊಡವಿಯೊಳಗೆ ಪುಟ್ಟ ಉಡುಪಿ ಕ್ಷೇತ್ರದಿ ಶಾಮಸಂದರನ ಧೃಡವಾಗಿ ಸ್ಥಾವಿಸಿ | ಜಡ ಕುಮಾಯ್ಗಳಗೆದ್ದ ಸಡಗರ ಮುನಿಸುತನಾಗಿ ಪೊಡೆವಿಯೊಳಗೆ ಪುಟ್ಟ ಉಡುಪಿ ಕ್ಷೇತ್ರದಿ ಶಾಮಸುಂದರನ ಧೃಡವಾಗಿ ಸ್ಥಾಪಿಸಿ | ಜಡ ಕುಮಾಯ್ಗಳಗೆದ್ದ ಸಡಗರ ಮುನಿ ಎಂದು ನುಡಿದೆನಲ್ಲದೆ ಹುರಳಿಮೆದ್ದ ಬಡದ್ವಿಜ ಶಿಶುವೇದಿನೆ | ಎತ್ತಿನ ಬಾಲ ಪಿಡಿದೋಡಿ ದವನೆಂದಿನೆ | ಬೆಸರದಿಂದ ಮಡದಿ ಬಿಟ್ಟವ ನೆಂದಿನೆ ಕಡಿಗೆ ಬೋರಿ ಗಿಡವ ಸೇರಿದಿ ತೋರೆಂದು ಅಡಿಗಳಿಗೆರಗಿದೆ ನಲ್ಲದೆ 3
--------------
ಶಾಮಸುಂದರ ವಿಠಲ
ನಿತ್ಯ ನಿರುಪಮ ಚಿದಾನಂದ ಕರುಣಾಬ್ಧಿ ನೀನೆ ದೊರಕೆ ನಿಲುಕೆ ಅಪಮಂಗಳನೆ ಮಂಗಳವನಿತ್ತೆ ಮನಸಿಗೆ ನೀನು ಅಂಗ ಮಂಗಳವಾುತುಹಿಂಗಿದವು ದುರಿತಗಳು ಸಂಗವಿದ್ದರು ಜಡದ ತೊಂಗವವ ಮನ ಮೀರಿತುನುಂಗುತಿದೆ ದೋಷಗಳ ಬಂದಡೊಡಬನ ತೆರದಿ ಭಂಗವೆಂಬುದು ಹೋುತುಅಂಗ ಲಿಂಗದ ಕಾಂತಿ ಹೊಂಗಿ ಹೊರಹೊಮ್ಮುತಿದೆ ರಂಗ ನಿನ್ನೊಲವಾುತು ುನಿತು 1ಹೊನ್ನಿನೊಳಗಿದ್ದ ಮಲಿನವನಗ್ನಿ ಕಳಚಿದರೆ ಮುನ್ನಿನಂದದಿ ಮಲಿನವೆಹೊನ್ನಾದ ಕಬ್ಬಿನವು ಕಬ್ಬಿನದ ಸಂಗದಲಿುನ್ನು ಕಬ್ಬಿನ ಭಾವವೆಬೆಣ್ಣೆ ಕ್ಷೀರದಿ ಬಂದು ಘೃತವಾದ ಬಳಿಕ ತಾ ಬೆಣ್ಣೆಯಲ್ಲದೆ ಕ್ಷೀರವೆನಿನ್ನ ಕೃಪೆುಂದ ಮಂಗಳನಾಮವನು ಸ್ಮರಿಸೆ ನಿನ್ನವಗೆ ದೋಷ ಬಹವೆ ಇಹವೆ 2ಬಾಳೆಯನು ಬಿತ್ತಿ ಪ್ರತಿ ದಿವಸ ನೋಡಿದಡಲ್ಲಿ ನೀಳವಾಗಿಹುದು ಸುಳಿಯುಕಾಲ ಬಂದರೆ ಗೊನೆಯು ಹಾಯ್ದು ಫಲವಾಗಿರಲು ಮೇಲೊಮ್ಮೆಯುಂಟೆ ಯೆಲೆಯುಕಾಲ ಕರ್ಮಾಧೀನವಾಗಿರುವ ಸಂಸಾರ ಲೋಲ ಮನಸಿನ ವೃತ್ತಿಯುಜಾಲದಿಂದಿರಲಲ್ಲಿ ನಿನ್ನಂಘ್ರಿ ಸ್ಮರಣೆುಂಮೇಲುಂಟೆ ಕರ್ಮಗತಿಯು ಸ್ಥಿತಿಯು 3ವೃತ್ತಿ ಮಾಯಾಕಾರ್ಯ ಮಾಯೆ ನಿನ್ನಾಧೀನ ವೃತ್ತಿ ಮಾಯೆಯು ಕಲ್ಪಿತಸುತ್ತಿ ಸುಳಿಸುಳಿದಾಡಿ ಸತ್ಯದಂದದಿ ತೋರಿ ಮತ್ತೆ ನಿನ್ನೊಳಗರ್ಪಿತಚಿತ್ತು ತಾನೆ ನಾಮರೂಪಾದ ಬಗೆುಂದ ಚಿತ್ತು ಚಿತ್ತಾಹುದುಚಿತಸತ್ಯಸಂಧನು ನೀನು ಚಿತ್ತವನು ಬಿತ್ತರಿಸಿ ವೃತ್ತಿಯಾುತು ಬೆಳೆಯುತಾ ಇರುತಾ 4ಮನದ ಸಂಶಯ ಬಿಡದು ಶ್ರವಣಮನನಾದಿಗಳನನುದಿನವು ಮಾಡುತಿರಲುಮನಕೆ ಸಾಕ್ಷಿಕನಾದ ನೀನು ಘನಮಾಯೆಯನು ಮನಕೆ ಮರೆಮಾಡುತಿರಲುಚಿನುಮಯನೆ ಮಾಯೆಯನು ಕಡೆಗೆ ತೆಗೆಯಲು ಜ್ಞಾನ ಜನಿಸುವುದು ನೀನು ಕೊಡಲುಇನಕೋಟಿಸಂಕಾಶ ಇಭರಾಜದುರಿತಹರ ಎನಲು ನಿಜವಾಗುತಿರಲು ನಿಲಲು 5ತರಣಿಕಿರಣಗಳಿಂದ ಜನಿಸಿದಾ ಮೇಘಗಳು ತರಣಿಯನು ಮುಚ್ಚಲಳವೆತರಣಿ ತಾನೆನದಿವನು ಹರಹಿ ಹಿಂದಕೆ ತೆಗೆಯೆ ನೆರೆ ಹಿಂಗಿ ಹೋಗದಿಹವೆಪರಮಪುರುಷನು ನೀನು ಸ್ಮರಿಸಿ ಮಾಯೆಯ ಬೀಸಿ ತಿರುಗಿಸಲು ಮಾಯೆಗಿರವೆದುರಿತವಾಗಿರೆ ಜನಕೆ ನೆರೆ ಭಕ್ತಿಯನು ನೀನು ಕರುಣಿಸಲು ಮತ್ತೆ ಭವವೆ ಧ್ರುವವೆ 6ಅರಣಿುಂದುದುಭವಿಸಿದನಲ ಮುನ್ನಿನ ತೆರದ ಅರಣಿಯಾಗಿಯೆ ತೋರ್ಪನೆಅರೆದು ತಿಲವನು ತೆಗೆಯೆ ತೈಲವನು ತಿಲ ಬಳಿಕ ಇರುವದೆ ತೈಲದೊಡನೆಬೆರೆದು ಕರ್ಪುರವಗ್ನಿಯೊಡನಾಡಿ ಬೇರ್ಪಟ್ಟು ಮೆರೆವುದೆಂತಗ್ನಿಯೊಡನೆತಿರುಪತಿಯ ವೆಂಕಟನೆ ನಿನ್ನ ಚರಣದೊಳಿಟ್ಟ ಶರಣ ಮುನ್ನಿನ ಮನುಜನೆಯಹನೆ 7ಓಂ ಪುಣ್ಯ ಶ್ಲೋಕಾಯ ನಮಃ
--------------
ತಿಮ್ಮಪ್ಪದಾಸರು
ನಿತ್ಯ ಸ್ಮರಿಸಿ ಕೃತಕೃತ್ಯನು ನೀನಾಗೊ ಪ ಕರ ಕಂ- ಜೋತ್ಥರಾದ ಗುರು ಅ.ಪ ಸುತ್ತಲು ಬಿಡದೆ ಧರಿತ್ರಿಯೊಳಗೆ ಸುಕ್ಷೇತ್ರಗಳಲಿ ಚರಿಸಿ ಹಸ್ತಿ ಗಣಕೆ ಪಂಚ ವಕ್ತ್ರರೆಂದು ಕರಿಸಿ ಛಾತ್ರ ವರ್ಗ ಸಂಯುಕ್ತರಾಗಿ ಸುಖತೀರ್ಥರ ಸುಮತಕೆ ಸಂಸ್ಥಾಪಕ ಗುರು 1 ಏನು ಕರುಣವೊ ಜ್ಞಾನಿಗಳನು ಧನದಾನದಿ ದಣಿಸುತಲಿ ಕ್ಷೋಣಿ ವಿಬುಧರಿಗೆ ನ್ಯಾಯ ಸುಧಾರಸ ಪಾನ ಮಾಡಿಸುತಲಿ ದೀನ ಜನಕೆ ಸುರಧೇನು ಎನಿಸಿದ ಮಹಾನುಭಾವರೆಂದು ಸಾನುರಾಗದಲಿ 2 ಶ್ರೀರಾಮನ ಪದಪದುಮ ನೋಳ್ಪಜನರ ಜನುಮ ಧೀಮಜ್ಜನರಿಗೆ ಕಾಮಿತ ಗರಿಯುವ3 ತರಣಿಯೋಳ್ಪಗಲಿರುಳು ಭವಶರಧಿಯ ದಾಟಿಸಲು ವಸನದಲಿ ಪರಿಶೋಭಿತ ತನು 4 ದುರಿತ ತಮಕೆ ದಿನಕರ ಸಮರೆನಿಸುತಲಿ ಸಿರಿ ಕಾರ್ಪರ ನರಹರಿಯ ಚರಣಯುಗ್ಮ ಸ್ಮರಿಸುತ ಹರುಷದಲಿ ಧರೆಯೊಳು ಪಂಢರ ಪುರ ಸುಕ್ಷೇತ್ರದಿವರತನುವಿರಿಸಿದ ಪರಮ ಮಹಿಮ ಗುರು 5
--------------
ಕಾರ್ಪರ ನರಹರಿದಾಸರು