ಒಟ್ಟು 6114 ಕಡೆಗಳಲ್ಲಿ , 127 ದಾಸರು , 3568 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುಣವಂತರ ಗುಣವ ಗುಣವಂತನರಿವನುಗುಣಹೀನ ಗುಣವಂತನ ಗುಣವೇನ ಬಲ್ಲನೋ ಪ ಕಮಲಗಳ ಹೃದಯ ಭ್ರಮರಕ್ಕೆ ತಿಳಿಯುವುದುಕಮಲಗಳ ಗುಣ ಕಪ್ಪೆಗೇನು ತಿಳಿವುದೋವಿಮಲರಾ ಹೃದಯ ವ್ಯುತ್ಪನ್ನರಿಗೆ ಹೊಳೆಯುವುದುಕುಮತಿಗಳಿಗೆ ಕೋಮಲರ ಘನತೆಯೆಂತರಿವುದೋ 1 ಕೆಚ್ಚಲೊಳಿರುತಿಹುದು ಕರುವಿಗೆ ದೊರಕುವುದುಕೆಚ್ಚಲ ಕಚ್ಚಿರುವ ಉಣ್ಣೆಗದು ದೊರೆವುದೋಸಚ್ಚರಿತ್ರರ ಬೋಧೆ ಸತ್ಪುರುಷಗಂಟುವುದುಹುಚ್ಚ ತಾ ಬದಿಯಿದ್ದರೆ ಪರಿಣಾಮವೇನಹುದೋ 2 ಸಾಧುಗಳ ಮಹಿಮೆಯ ಸಾಧುಗಳ ಹೃದಯವುಸಾಧುಗಳ ಬೋಧೆಯ ಸಾಧು ಸಹವಾಸಬೋಧ ಚಿದಾನಂದ ಬಗಳೆಯಾದವರಿಗರಿವುವಾದಿಯಾಗಿಹ ಮೂರ್ಖರಿಗೆ ಗುಣವೇನು ತಿಳಿಯುವುದೋ 3
--------------
ಚಿದಾನಂದ ಅವಧೂತರು
ಗುಣಿಸುವೆ ಗಣನಾಥಾ ಪ ಗುಣಗಣ ಚರಿತನೆ ಗುಣದೊಳು ಮೊದಲಿಗನೆಂದು ಸಾರಿ ಸಾರಿ ನಿನ್ನ ಅ.ಪ. ಎಂದಿಗು ನಿನ್ನ ಪದದ್ವಂದ್ವ ನಂಬಿದ ಕಂದನ ಮಾತ ಲಾಲಿಸೊಇಂದುವರಿಯ ಎನ್ನ ಮಂದಿರದೊಳು ಬಂದು ತಂದೆ ಕರುಣದಿ ಪಾಲಿಸೊ 1 ಮಾರ ತಾಪಕೆ ಶಿಲುಕಿ ಮಾರಿ ಮೋರೆಯ ನೋಡಿ ಮರುಳಾದೆನೊಮಾರನನುಜನೆ ಎನ್ನ ಗಾರುಮಾಡದೆ ಪೊರೆಯೊ ನಿನ್ನ ಪಾದಕೆರಗಿದೆನಯ್ಯ 2 ಉಜ್ಜಿ ಕೂಪವ ನೋಡಿ ಮೆಚ್ಚಿ ಬಲುಪರಿ ಹುಚ್ಚನಾದೆನೊ ದೇವಾ ಇಚ್ಛೆ ಪೂರೈಸೊ ನಮ್ಮಸ್ವಚ್ಛ ತಂದೆವರದಗೋಪಾಲವಿಠಲನರ್ಚಕ 3
--------------
ತಂದೆವರದಗೋಪಾಲವಿಠಲರು
ಗುಬ್ಬಿಯಾಳೊ ಗೋವಿಂದ ಗೋವಿಂದಾ ಗೋವಿಂದ ಗೋವಿಂದಾನೆಂದು ನೆನಯಿರೊ ಗುಬ್ಬಿಯಾಳೊ ಪ. ಕ್ಲೇಶ ಪರಿಹಾರವು ಗುಬ್ಬಿಯಾಳೊ ನಾರಾಯಣನ ಧ್ಯಾನದಿಂದ ನರಕಭಯವಿಲ್ಲವೊ ಗುಬ್ಬಿಯಾಳೊ 1 ಮಾಧವನ ನೆನೆದರೆ ಮನೋಭೀಷ್ಟ ಕೊಡುವೊನು ಗುಬ್ಬಿಯಾಳೊ ನಾಶನವು ಗುಬ್ಬಿಯಾಳೊ 2 ವಿಷ್ಣುಭಜನೆಯಿಲ್ಲದವಗೆ ವೈಷ್ಣವರ ಜನ್ಮವುಂಟೆ ಗುಬ್ಬಿಯಾಳೊ ಇಹುದೊ ಗುಬ್ಬಿಯಾಳೊ 3 ತ್ರಿವಿಕ್ರಮನ ನೆನೆದರೆ ಸಾವಿತ್ರಿಯಾಗಿಹರೊ ಗುಬ್ಬಿಯಾಳೊ ವಾಮನದೇವರು ನಮಗೆ ವರಗಳ ಕೊಡುವೋರು ಗುಬ್ಬಿಯಾಳೊ 4 ಸಿರಿ ನಮಗೆ ಒಲಿವಳೊ ಗುಬ್ಬಿಯಾಳೊ ಹೃಷೀಕೇಶನ ಧ್ಯಾನದಿಂದ ಹೃದಯ ಪರಿಶುದ್ಧವೊ ಗುಬ್ಬಿಯಾಳೊ 5 ಪದ್ಮನಾಭ ನಮ್ಮೆಲ್ಲರ ಪಾಲಿಸಿ ರಕ್ಷಿಪನೊ ಗುಬ್ಬಿಯಾಳೊ ದಾಮೋದರನ ನೆನೆದರೆ ಪಾಮರತ್ವ ಬಿಡಿಸುವನೊ ಗುಬ್ಬಿಯಾಳೊ 6 ಸಂಕರ್ಷಣನ ಧ್ಯಾನದಿಂದ ಸಂತಾನ ಅಭಿವೃದ್ಧಿಯು ಗುಬ್ಬಿಯಾಳೊ ವಾಸುದೇವನ ದಯದಿಂದ ವಂಶಉದ್ಧಾರವೊ ಗುಬ್ಬಿಯಾಳೊ 7 ಪ್ರದ್ಯುಮ್ನನ ನೆನೆದರೆ ಭೂಪ್ರದಕ್ಷಿಣೆ ಫಲವು ಗುಬ್ಬಿಯಾಳೊ ಅನಿರುದ್ಧನ [ಸೇವಿಸೆ ಪುನೀತರಹೆವೊ] ಗುಬ್ಬಿಯಾಳೊ 8 ತಿಳಿಯಿರೊ ಗುಬ್ಬಿಯಾಳೊ ಅಧೋಕ್ಷಜ ನಮ್ಮೆಲ್ಲರಿಗಾಧಾರವಾಗಿಹನೊ ಗುಬ್ಬಿಯಾಳೊ 9 ನಾರಸಿಂಹದೇವರು ನಮ್ಮ ಕುಲದೈವವೊ ಗುಬ್ಬಿಯಾಳೊ ಅಚ್ಯುತ ಲಕ್ಷ್ಮಿಯ ಕೂಡಿ ಸಚ್ಚಿದಾನಂದನೊ ಗುಬ್ಬಿಯಾಳೊ 10 ಜನಾರ್ದನದೇವರು ಜಗಕೆಲ್ಲ ಶ್ರೇಷ್ಠರೊ ಗುಬ್ಬಿಯಾಳೊ ಕ್ಷಮಿಸುವನೊ ಗುಬ್ಬಿಯಾಳೊ 11 ಹರಿನಾಮಾಮೃತಕೆ ಸರಿಧರೆಯೊಳಗೆ ಇಲ್ಲವೊ ಗುಬ್ಬಿಯಾಳೊ ಶ್ರೀಕೃಷ್ಣ ರಂಗೇಶಯೆಂಬೊ ಸಿದ್ಧಕ್ರಿಯ ಬಲ್ಲರೆ ಗುಬ್ಬಿಯಾಳೊ12 ಈ ಗುಬ್ಬಿ ಪಾಡುವರಿಗೆ ಇಹಪರವು ಸಂತತವು ಗುಬ್ಬಿಯಾಳೊ ಧರಣಿಯೊಳು ಆಚಂದ್ರಾರ್ಕ ತಾರಕವಾಗಿಹರು ಗುಬ್ಬಿಯಾಳೊ 13 ನಿತ್ಯ ಮರೆಯದೆ ನೀ ನೆನೆಮನವೆ ನಿತ್ಯ ಮನವೆ ಗುಬ್ಬಿಯಾಳೊ 13
--------------
ವಾದಿರಾಜ
ಗುಮ್ಮವ ನೋಡಿರೋ ಮೂಲಮಾಯೆ ಗುಮ್ಮವ ನೋಡಿರೋಗುಮ್ಮವು ಹೀಗೆಂದು ಶತಕೋಟಿ ಬ್ರಹ್ಮರು ಆಗಿವೆಗುಮ್ಮವ ಹೀಗೆಂದು ಗುರುತರಿವರಿಲ್ಲಯ್ಯ ಪ ಇಲ್ಲದೆ ತಾನೀಗ ತೋರುವ ಗುಮ್ಮಎಲ್ಲ ಲೋಕತಾನೆ ಆಗಿಹ ಗುಮ್ಮಗೆಲ್ಲುವೆನಗೆ ಗೆಲುವಾಗದ ಗುಮ್ಮಒಳ್ಳೆ ಒಳ್ಳೆಯವರನು ಅಂಜಿಪ ಗುಮ್ಮ1 ಮಾನಿನಿ ಸುತ ಸಂಪತ್ತಾದ ಗುಮ್ಮನಾನಾ ಭವವು ಆಗಿ ತೊಳಲಿದ ಗುಮ್ಮ2 ತಿಳಿವೆ ನೆಂದರೆ ತಿಳಿಗೊಡದು ಗುಮ್ಮತಿಳಿದರೆ ತನ್ನೊಳಗಡವುದು ಗುಮ್ಮಬಲು ಚಿದಾನಂದ ಗುರುವಿನಲಿ ಗುಮ್ಮಹೊಳೆ ಹೊಳೆದು ತೋರಿಪುದು ಗುಮ್ಮ 3
--------------
ಚಿದಾನಂದ ಅವಧೂತರು
ಗುರು ಅಂತರ್ಯಾಮಿ ಶ್ರೀನಿವಾಸ ಸಿರಿರಮಣ ಶ್ರೀ ಕೃಷ್ಣ ಶ್ರೀನಿಧಿಯೆ ಶ್ರೀಶ ಪ. ಸೃಷ್ಟಿಕರ್ತನೆ ನಿನ್ನ ಲಕ್ಷಿದೇವಿಯು ಸತತ ಶ್ರೇಷ್ಠತನದಲ್ಲಿ ಪೂಜೆ ಮಾಡುತಿಹಳೊ ಅಷ್ಟು ದೇವತೆಗಳು ಆಗಮವನನುಸರಿಸಿ ಶಿಷ್ಟೇಷ್ಟನೆಂತೆಂದು ಪೂಜೆ ಮಾಡುವರೋ 1 ಅಣು ನಾನು ನಿನ್ನ ಅರ್ಚಿಸ ಬಲ್ಲೆನೇ ದೇವ ಘನಮಹಿಮ ಸ್ವೀಕರಿಸೊ ಅಲ್ಪ ಸೇವೆ ಮನ ಮಂದಿರದಿ ನಿಂತು ಅನುಗಾಲ ನಿನ್ನ ದಿವ್ಯ ಘನ ಮೂರ್ತಿಯನೆ ತೋರೋ ಪೂಜೆ ಮಾಡುವೆನೊ 2 ಸರಸಿಜಾಕ್ಷನೆ ನಿನಗೆ ಸರಸದಿಂದ ಗುಲಾಬಿ ಸರದ ಪೂಮಾಲೆಯನು ಕೊರಳಿಗ್ಹಾಕುವೆನೊ ಸುರರ ಪಾಲಿಪ ಹರಿಯೆ ಸುರಹೊನ್ನೆ ಹಾರವನು ಕರ ಚಕ್ರಯುತ ನಿನ್ನ ಕಂಧರದಿ ಧರಿಸೋ 3 ಶ್ಯಾಮವರ್ಣನೆ ರತ್ನಹಾರಗಳು ಹೊಳೆಯುತಿರೆ ಶ್ರೀ ಮನೋಹರ ಮುತ್ತಿನ್ಹಾರ ಪದಕಗಳು ಈ ಮಧ್ಯೆ ದಿವ್ಯ ಶ್ಯಾವಂತಿಗೆ ಸುಮನದಿಂ ಕಾಮಜನಕನೆ ಮಾಲೆಕಟ್ಟಿ ಹಾಕುವೆನೊ 4 ಈ ಜಗವ ಉದರದಲಿ ಧರಿಸಿ ಮೆರೆಯುವ ದೇವ ಜಾಜಿ ಪೂಮಾಲೆಯನು ಕಂಧರದಿ ಧರಿಸೊ ಭೋಜಕುಲ ತಿಲಕನೆ ಕೆಂಡ ಸಂಪಿಗೆ ಸರವ ಮಾಜದೇ ಎನ್ನಿಂದ ಸ್ವೀಕರಿಸೊ ದೇವ 5 ಪಾತಕರಹಿತ ಹರಿ ಪಾವನರೂಪನೆ ಪ್ರೀತಿಯಿಂ ಸ್ವೀಕರಿಸೊ ಕೇತಿಕೆಯ ಸರವ ಶ್ರೀತರುಣಿ ಸತ್ಯಭಾಮೆಯರು ಕದನವಗೈದ ಪ್ರೀತಿ ಪಾರಿಜಾತ ಧರಿಸಯ್ಯ 6 ಮರುಗ ದವನಗಳಿಂದ ಸುರಹೊನ್ನೆಯನೆ ಕಟ್ಟಿ ಇರುವಂತಿಗೆಯ ಹಾರ ಹರಿಯೆ ಅರ್ಪಿಸುವೆ ಪರಿಮಳವ ಬೀರುತಿಹ ಪರಿಪರಿಯ ಮಲ್ಲಿಗೆಯ ಸರಗಳನೆ ಧರಿಸಿನ್ನು ಸಾಕಾರರೂಪ 7 ದುಂಡುಮಲ್ಲಿಗೆಯ ಮೊಗ್ಗು ಪಾಂಡವರ ಪಾಲಕಗೆ ದಂಡೆಯನೆ ಕಟ್ಟಿ ನಾ ಕೊರಳಿಗ್ಹಾಕುವೆನೊ ಚಂಡವಿಕ್ರಮ ಶಂಖ ಚಕ್ರಧಾರಿಯೆ ಪಾದ ಮಂಡೆ ಪರಿಯಂತರದಿ ನೊಡಿ ದಣಿಯುವೆನೊ8 ಸತಿ ನಿನಗಾಗಿ ಕಾಷ್ಟದಳ ಮೃತ್ತಿಕೆಯ ಸೇವಿಸುವ ಜನಕೆ ಇಷ್ಟ ಫಲವನೆ ಇತ್ತು ಕೃಷ್ಣನ್ನ ತೋರಿಸುವ ಶ್ರೇಷ್ಠ ತುಳಸಿಮಾಲೆ ಕಟ್ಟಿ ಹಾಕುವೆನೊ 9 ಕಮಲನಾಭನೆ ಕೃಷ್ಣ ಕಮಲಾಪತಿಯೆ ಸ್ವಾಮಿ ಕಮಲಪಾಣಿಯೆ ದೇವ ಕಮಲಾಕ್ಷನೆ ಕಮಲಮುಖ ನಿನ್ನ ಪದಕಮಲದಲಿ ನಲಿವಂತೆ ಕಮಲದ್ಹಾರವ ಕಟ್ಟಿ ಕೊರಳೀಗ್ಹಾಕುವೆನೋ10 ಈ ಪರಿಯ ಮಾಲೆಗಳ ನೀ ಪ್ರೀತಿಯಿಂ ಧರಿಸಿ ಪಾಪಗಳ ತರಿದೆನ್ನ ಪಾವನವಗೈಯ್ಯೊ ಆಪತ್ತು ಕಳೆವ ಶ್ರೀ ಗುರು ಕಟಾಕ್ಷದಿ ನುಡಿದೆ ಗೋಪಾಲಕೃಷ್ಣವಿಠ್ಠಲನೆ ಕೃಪೆಮಾಡೊ 11
--------------
ಅಂಬಾಬಾಯಿ
ಗುರು ಚರಣವನು ಸಂಸ್ಮರಿಸಿರೋ ಪಗುರು ಲಕ್ಷ್ಮಿ ವರಜಾತ | ಗುರು ಲಕ್ಷ್ಮಿಪ್ರಿಯ ತೀರ್ಥ ಚರಣ ಸರಸಿಜ ಭಜಿಸೆ | ಕರಣದಂತರ ಬಾಹ್ಯ ಪರಿಶುದ್ಧಿಯನೆ ಗೈದು | ಜ್ಞಾನ ಭಕ್ತಿಯನಿತ್ತು ಹರಿ ಪೊರೆವ ಸಂತತದಲಿ ಅ.ಪ. ಪೂರ್ವಾಶ್ರಮಾ ನಾಮ | ಭೂವಿಬುಧ ಕೃಷ್ಣಾಖ್ಯ ದೇವರಾಯನ ದುರ್ಗ | ದಾವ ನರಸೀಪುರದಿಆವಾಸಿಸುತ್ತಿರಲು | ಓರ್ವ ಸಖನಿವರ ಜ್ಞಾನಾನುಸಂಧಾನದಾ |ಭಾವ ತಿಳಿಯುತ ಮನದ | ಯಾವ ದೊಂದಭಿಲಾಷೆನೀವು ಸಲಿಸುವುದೆನ್ನೆ | ಆವುದೆನುತಲಿ ಕೇಳೆಯಾವ ಪನಸದ ಫಲವ | ಆಸ್ವಾದು ಮಧು ಒಡನೆಓವಿ ಕರಡಿಯು ಕಲಸಿದ 1 ಅದರ ಪ್ರಾಪುತಿಗಾಗಿ | ಬದಿವನನೊಂದಿನವುಬೆದರದಲೆ ಪೊಗುತಿರಲು | ಎದುರೊಂದು ಶಿಲೆ ಮೇಲೆವದಗಿ ಕಲಸಿದ ಕಂಡು | ಅದರೊಡನೆ ಮರನೇರೆ ಬಂದಿತದು ಮರಿಗಳೊಡನೆ |ಅದಕು ಇವರಿಂಗಾಯ್ತು | ಕದನವೂ ಕೆಲಕಾಲ ಒದಗೆ ಜಯ ವಿಬುಧರಿಗೆ | ಹದುಳದಲಿ ಗೃಹಸೇರಿಮುದದಿಂದ ಶ್ರೀಹರಿಯ | ಪದ ಸ್ಮರಣೆಯಲ್ಲವರು ದಿನಗಳನೆ ಕಳೆಯುತಿಹರು 2 ಯತಿ ಲಕ್ಷ್ಮಿ ವರರಿಂದ | ಯತಿಗಳಾಶ್ರಮ ಪೊಂದಿಹಿತದಿಂದಲಾ ಬೂದಿ | ನೆತ್ಯಾಖ್ಯ ಗ್ರಾಮದಲಿಸ್ಥಿತರಾಗಿ ಶಿಷ್ಯರಿಗೆ | ಹಿತದ ಉಪದೇಶವ ಪ್ರೀತಿಯಲಿ ಮಾಡುತಿರಲು |ಯತಿಗಳಾಶ್ರಮದಲ್ಲಿ | ಮತಿ ವಂತ ವಿಪ್ರೋರ್ವಕ್ಷಿತಿಯೊಳಾ ನಾಕನಿಭ | ಮಂತ್ರ ಮಂದಿರ ಸೇವೆ ಅತಿಹಿತದಲೆಸಗುತಿರೆ | ಯತಿಗಳಾಶೀರ್ವದಿಸೆ ಪಥವಾಯ್ತು ಪ್ರಿಯರಲ್ಲಿಗೇ 3 ಪತಿ ಸೇವೆ | ಯುಕುತನಾಗಿರಲ್ವೊರೆದು ನಾಲ್ವತ್ತು ದಿನ ಮಿತಿಯಲಿ |ಕಕುಲಾತಿ ತೊರೆದು ನಿಜ | ಭಕುತಿಯಿಂ ಗೈವುತಿರೆಲಕುಮಿ ಪ್ರಿಯರಾಚಾರ | ಉಕುತಿಯಲಿ ದುರ್ಭಾವಪ್ರಕಟವಾಗಲು ಮನದಿ | ಬಂಕಪುರ ಮಾರ್ಗವನೆ ತೆರಳಲನುವಾದನೂ 4 ಮತ್ತೆ ನರಹರಿ ತಾನು | ವ್ಯಕ್ತಯಿಂತೈಜಸನುಒತ್ತಿಪೇಳಲು ಬುಧನು | ಮತ್ತೆ ಗುರುಪದಕೆರಗಿಬಿತ್ತರಿಸೆ ತನ್ನಸ್ವಪ್ನ | ವಾರ್ತೆಗಳ ವಿಶ್ವಮಿತ್ರನ ಭಾವವನೆ ತೋರುತ |ಇತ್ತಲಿಂದೆರಡೊರ್ಷ | ಕಿತ್ತಪೆವು ಆಶ್ರಮವಆರ್ಥಿಯಿಂದಿರುತಿರ್ದು | ಹಸ್ತಿವರದನ ಸೇವೆಉತ್ಸಹದಲೆಸಗುವುದೆ | ನುತ್ತಲಾಶೀರ್ವದಿಸಿ ಚಿಂತಿಸುತ್ತಿರೆ ಹರಿಯನು 5 ಗ್ರಾಮದೊಳಗುಳ್ಳ ಖಲ | ಸ್ತೋಮ ಬಂದಡರುತ್ತಭೂಮಿ ಗೋಸುಗ ಕಲಹ | ಸೀಮೆ ಮೀರುತ ಗೈಯ್ಯೆಅ ಮಹಾಯತಿವರ್ಯ | ಭೂಮಿ ಕೃಷ್ಣಾಂಕಿತವುಕಾಮನೆಯ ಬಿಡಿರೆನುತಲಿ | ನೇಮದಲಿ ಘರ್ಜಿಸಲು |ಆ ಮಹಾ ದುಷ್ಟಜನ ಈ ಮರದ ಸಂಪದವ ಕಾಮಿಸುತ ಮನದಲ್ಲಿನೇಮದಿಂ ಪತ್ರೋರ್ವ | ಪಾಮರನ ಒಡನವರು ಯಾಮ ಸಂಜೆಲಿ ಕಳುಹಲು 6 ಪರಿವಾರ ಜನಕೆಲ್ಲ | ಇರುವ ನೆಲೆ ಬಿತ್ತರಿಸಿಸರಿಯುತಲಿ ಸುಕ್ಷೇಮ | ನೆರೆಯ ಸಾರುವುದೆನುತಒರೆಯಲೂ ಕೆಲವರು | ಮರೆಮಾಡಿ ತೃಣ ಬಣವಿ ನೆರೆ ಬಿಡದೆ ಸಾರುತಿರಲು |ವರನಿಶೀ ಸಮಯದಲಿ | ದುರುಳರೆಲ್ಲರು ಮಠಕೆಬರಬರುತ ಕವಣೆಕಲ್ | ನೆರೆಬೀರ್ವ ಜನಗಳೂಉರಿವ ತೃಣ ಬಣವಿಯಂ | ದುರೆ ಜ್ವಾಲೆ ಪರಿಕ್ರಮಣ ಭಯ ಭ್ರಾಂತಿಯಿಂದಿರುತಿರೆ 7 ಸಿರಿ ಹರಿಯ ನಮಿಸುತಿರಲು 8 ಪರಿ | ಚರರಿಘರಸುತ್ತ ಬಲುಪರಿಯ ಹರಿ ಮಹಿಮೆಗಳ | ಒರೆಯುತಾನಂದಾಶ್ರೂ ಸುರಿಸುತವ ಶೇಷನಿಶಿ | ಹರಿಕರುಣ ಸ್ಮರಣೆಯಲಿ ಸರಿಸಿದರು ಶಿಷ್ಯರೊಡನೇ 9 ಗರ ಮಿಶ್ರ | ಯತಿಗೆ ಬಡಿಸೇ ಜೀರ್ಣಿಸುತ ಪಾಪಿ ವಿಪ್ರರ್ಗೆ | ಗತಿಸಿದವು ಅಕ್ಷಿಗಳು ಮೃತ್ಯಂತಲಂದರಾಗಿ 10 ಗರ ಮಿಶ್ರ | ಸತ್ಯವಾದುದ ಕಂಡು ಪ್ರೋಕ್ಷಿಸಲು ಶಂಖದುದಕ |ವ್ಯಕ್ತವಾಯಿತು ಇವರ | ಉತ್ತುಂಗ ಮಹಿಮೆಗಳುಹಸ್ತಿವರದನು ಭೋಜ್ಯ | ವಸ್ತುಗಳ ಸ್ವೀಕರಿಸಿದತ್ತ ಮಾಡಲು ಪುನಃ | ಮತ್ತೆ ಜೀರ್ಣಿಸಿಕೊಂಡು ಹರಿಯನ್ನೆ ಚಿಂತಿಸುತಲಿ 11 ನೆಲೆಸಿರಲ್ಲಬ್ಬುರೊಳು | ಗಳ ಗ್ರಾಹಕರು ಮತ್ತೆಮಿಳಿತರಾಗುತ ರಾತ್ರಿ | ಛಲವ ಸಾಧಿಸೆ ನಿಶಿತಅಲಗು ಕತ್ತಿಯ ಪಿಡಿದು | ನೆಲಕೆ ಯತಿ ಶಿರವನ್ನು ಇಳಹುವ ಮತಿ ಮಾಡಲೂ |ಒಲವಿನಿಂ ಯತಿಯಕುಲ | ತಿಲಕ ವೃಂದಾವನವ ಬಳಸಿ ನಮಿಸಲು ಸಂಜೆ | ಯಲಿ ಪೇಳ್ದ ಬ್ರಹ್ಮಣ್ಯಒಳ ಪೊಗುತಲಾರಾಮ | ನೆಲೆಸೇರಿ ಮಠಸಾರಿ ಎಂದೆನುತ ಎಚ್ಚರಿಸಿದರ್12 ಮತ್ಸರಿಗಳಿನ್ನೊಮ್ಮೆ | ಕುತ್ಸಿತದ ಬುದ್ಧಿ ಮಹಉತ್ಸವದ ಸಮಯದಲಿ | ಹೆಚ್ಚು ಜನ ಸಂಧಿಸಿರೆನೆಚ್ಚಿದ್ದ ಪಾಚಕರು | ಉಚ್ಚಳಿಸಿ ಕೆಲಸಾರೆ ಕೆಚ್ಚಿದೆಯನೇ ತೋರುತ |ಮುಚ್ಚಿಮಠದ್ವಾರಗಳ | ಹೆಚ್ಚುತಲಿ ಪಲ್ಯಗಳ ಮತ್ಸಕೇತನ ಪಿತನು | ಮೆಚ್ಚುವಂದದಿ ಪಾಕಪೆಚ್ಚಿಸುತಲಿ ಹರಿಯ | ಅರ್ಚನೆಯ ಕೈಕೊಂಡು ಮೆಚ್ಚಸಿದರು ಸುಜನರ 13 ಜ್ವರತಾಪದಿಂದೊಮ್ಮೆ | ನೆರೆ ಬಳಲು ವಂತಿರ್ಪಗುರುವರರ ಕಂಡೋರ್ವ | ವರ ಶಿಷ್ಯ ಪ್ರಶ್ನಿಸಲುನೆರೆ ಬದುಕ ಬೇಕೆಂಬ | ಶರಿರವನೆ ತೊರೆವೆ ನೆಂಬೆರಡುಕ್ತಿ ಸಲ್ಲದಿದಕೊ |ನರರಾಡಿ ಕೊಳದಂತೆ | ವರ ಭಿಷಜ ತಾಕೊಟ್ಟವರಗುಳಿಗೆ ನುಂಗುವೆವು | ಹರಿ ಪೂಜೆ ವಿರುದ್ಧಜ್ವರ ಕುಂಟಿ ಧನ್ವಣತ್ರಿ | ವರಮಂತ್ರ ಕೈ ಸೇರಿ ಪರಿಪರಿ ಮೆರೆಯುತಿರಲು 14 ಯತಿವರರ ಮಹಿಮೆಗಳ | ತುತಿಸಲೆನ್ನಳವಲ್ಲಯುಕ್ತಿಯಲಿ ಅಪವಾದ | ಹೊತ್ತು ಕೊಳದಲೆ ಅವರು ಜಿತ ಇಂದ್ರಿಯತ್ವವನು | ಮತಿಮತಾಂ ಸುಜನಕ್ಕೆ ಪ್ರತಿರಹಿತದಿಂ ತೋರುತ |ಹಿತದಿಂದ ಲಾರಾಮ | ಸೇತು ಯಾತ್ರೆಯ ಗೈದುಕ್ಷಿತಿ ಚರಿಸಿ ಬರಬರುತ | ಹಿತಶಿಷ್ಯ ವ್ಯಾಜದಿಂಸತ್ಯ ಧೀರ್ರನು ಚರರ | ಕೃತ ಬಹಿಷ್ಕರ ಗೆಲ್ದು ಶಾಂತತೆಯನೇ ತೋರ್ದರು 15 ವರಲಕ್ಷ್ಮಿ ಪ್ರಿಯ ತೀರ್ಥ | ಕರಗಳಿಂದರ್ಚಿತವುಪರಿಸರಾರ್ಚಿತ ಯೋಗ | ನರಹರಿಯು ವ್ಯಾಸಮುನಿವರದ ಗೋಪತಿ ಕೃಷ್ಣ | ಸಿರಿವ್ಯಾಸಯತಿ ರಚಿತ ಎರಡೇಳು ರಜತ ಪ್ರತಿಮೆ |ಗುರುವರ ಬ್ರಹ್ಮಣ್ಯ | ವರದ ವಿಠ್ಠಲದೇವಸರ್ವಜ್ಞರರ್ಚಿಸಿದ | ವರ ಶರಣ್ಯ ವಿಠಲನುನಿರುತ ಪೂಜಿತವಾಗಿ | ಶರಿರ ಭೌತಿಕ ಬಿಡುವ ವರ ಸಮಯ ತಾನುಸುರಿರೆ16 ಸಂತೈಸಿ ಇತ್ತರಾಶಿಷವ 17 ನೀಲ ಕಾಲ | ವರುಷವನು ಪೈಂಗಳವು | ಎರಡೊಂದನೇ ಮಾಸವರಶುಕ್ಲ ಹರಿದಿನದಿ | ಸರಿತು ವರ ಕಣ್ವತಟಪರಮ ಸುಕ್ಷೇತ್ರದಲಿ | ವರಯೋಗ ಮಾರ್ಗದಲಿ ದೇಹ ಹರಿಗರ್ಪಿಸಿದರು 18 ಜಯ ಜಯತು ಶುಭಕಾಯ | ಜಯಜಯತು ತಪಶೀಲಜಯ ಶಮೋದಮವಂತ | ಜಯ ಶಾಪನುಗ್ರಹನೆಜಯಲಕ್ಷ್ಮಿ ವರಜಾತ ಜಯಲಕ್ಷ್ಮಿ ಪ್ರಿಯ ತೀರ್ಥ ಜಯ ಜಯತು ವಿಶ್ವಮಿತ್ರ |ಪ್ರಿಯ ಗುರುಗಳಾಂತರ್ಯ | ಜಯ ದೇವ ನೋಳ್ಪರಮಪ್ರಿಯನಾದ ತಂದೆ ಮುದ್ದು | ಮೋಹನ್ನ ವಿಠಲಾತ್ಮಜಯ ಗುರೂ ಗೋವಿಂದ | ವಿಠ್ಠಲನ ಭಜಿಸಿದರೆ ನಯಸುವನು ಪರಮಗತಿಗೆ 19
--------------
ಗುರುಗೋವಿಂದವಿಠಲರು
ಗುರು ನಿಮ್ಮ ದಯವೆನಗಾನಂದೋದಯ ಸರಿಸೌಖ್ಯಕರನೀವÀ ಮಹದಾಶ್ರಯ ಧ್ರುವ ಗುರುನಿಮ್ಮ ಕೃಪೆನೋಟ ಎನಗನುಭವದೂಟ ಸುರಸಯೋಗದ ಆಟ ಪರಮನೀಟ ಗುರು ಸುಬೋಧದ ಕೂಡಿ ಎನಗೆ ನಿಜ ಘನ ಪ್ರಗಟ ಕರಕಮಲ ಭಯದಮಾಟ ವರಮುಗುಟ 1 ಗುರುನಿಮ್ಮ ದಯಕರುಣ ಎನಗೆ ಸಕಲಾಭರಣ ವರ ಪ್ರತಾಪದೆ ವಿಜಯಾನಂದಘನ ಗುರು ನಿಮ್ಮ ಶ್ರೀ ಚರಣ ಎನಗೆ ಬಳಗವು ಪೂರ್ಣ ಹರುಷಗತಿ ಸಾಧನ ಪರಮಘನ 2 ಗುರು ನಿಮ್ಮ ಬಲವೆ ಬಲ ಎನಗನುದಿನ ದೆಲ್ಯಚಲ ಹೊರುಹುತಿಹ ನಾಮನಿಜ ಸರ್ವಕಾಲ ತರಳ ಮಹಿಪತಿಗೆ ನೀಮಾಡುತಿಹ್ಯ ಪ್ರತಿಪಾಲ ಗುರು ಭಾನುಕೋಟಿತೇಜನೆ ಕೃಪಾಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರು ರಾಘವೇಂದ್ರ ತವ ಚರಣ ದರುಶನಕೆ ಬರಲಿಲ್ಲವೆಂದು ಕೋಪವ ಮಾಡ್ವದ್ಯಾಕೊ ಪ ಧನವಿಲ್ಲ ಕೈಯೊಳಗೆ ತನುವಿನಲಿ ಬಲವಿಲ್ಲಾ ಅನುಕೂಲವಿಲ್ಲವೊ ಎನ್ನ ಮನೆಯೊಳಗೆ ಘನ ಸುಪ್ರಯಾಸ ನಿನ ದಾಸಗೊದಗಿದ ಮೇಲೆ ಎನ ಮೇಲೆ ದೋಷವೇನಿರುವದಿದರೊಳಗೆ 1 ಗೆಲುವಿಲ್ಲ ಮನದೊಳಗೆ ಫಲವಿಲ್ಲ ಸಂಸಾರ ಬಲೆಯೊಳಗೆ ಸಿಲುಕಿ ನಾ ಬೇಸತ್ತೆನೋ ಹಲುಬುವೆನೊ ದಾರಿದ್ರ್ಯ ಬವಣೆಯನು ತಪ್ಪಿಸಿ ಸುಲಭ ಸಾಧನೆ ಪೇಳಿ ಸಲಹೊ ಗುರುವರನೇ2 ಒಂದು ಬಗೆಯನು ತೋರೋ ಇಂದೇ ನಾ ಹೊರಡುವೆನೂ ಛಂದದಿಂದಲಿ ಪರಿವಾರ ಸಹಿತಾ ತಂದೆ ಹನುಮೇಶ ವಿಠಲನ ಕಂದನೆ ನಿನ್ನ ಬಂದು ನೋಡುವೆ ಮಾಡ್ವೆ ಸೇವೆ ತವ ದೂತಾ 3
--------------
ಹನುಮೇಶವಿಠಲ
ಗುರು ರಾಜ ಹರಿ ವಿಠಲ | ಪೊರೆಯ ಬೇಕಿವಳಾ ಪ ಗರುಡ ಗಮನನೆ ದೇವ | ಸರ್ವಾಂತರಾತ್ಮ ಅ.ಪ. ಪತಿಯೆ ಪರದೈವ ವೆಂ | ಬತಿಶಯದ ಮತಿಯಿತ್ತುರತಳೆನಿಸು ಗುರು ಹಿರಿಯ | ಹಿತಸೇವೆಯಲ್ಲೀಕೃತ ಕೃತ್ಯಳೆಂದೆನಿಸೊ | ಗೃಹ ಮೇಧಿ ಎಂಬಲ್ಲಿಕೃತಿ ರಮಣ ಪ್ರದ್ಯುಮ್ನ | ವಿತತ ಮಂಗಳನೇ 1 ಮಧ್ವಮತದನುಯಾಯಿ | ಶುದ್ಧ ಭಕುತಿ ಜ್ಞಾನ ಉದ್ಧರಿಸಿ ಇವಳಲ್ಲಿ | ಸಾಧನವ ಗೈಸೋಅಢ್ಯರೇಡ್ಯನೆ ಹರಿಯೆ | ಶ್ರದ್ಧಾಳು ತನದಲ್ಲಿಬುದ್ಧಿ ಓಡಲಿ ದೇವ | ಮಧ್ವಾಂತರಾತ್ಮಾ 2 ಸಾರ | ತರಳೆ ಬುದ್ಧಿಗೆ ನಿಲುಕಿಪರಮ ಸತ್ಸಾಧನವ | ಚರಿಸುವಂತೆಸಗೋಮೊರೆಯಿಡುವೆ ನಿನ್ನಲ್ಲಿ | ಕರುಣಿಸೀ ಬಿನ್ನಪವಗುರುವಂತರಾತ್ಮ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಗುರು ವಾದಿರಾಜ ರವಿಕೋಟಿ ತೇಜಾ ಶರಣೆಂಬೆನಯ್ಯಾ ಸತತಗೇಯಾ ಪ ನಂಬಿದೆನು ನಿನ್ನ ದಯ ಸಂಪನ್ನ ಸಂಭ್ರಮದಲ್ಲೆನ್ನ ಪೊರೆಯೊ ಪ್ರಸನ್ನ 1 ವೇದಶಾಸ್ತ್ರ ಬಲ್ಲ ಭಳಿರೆ ಮಲ್ಲ ಭೇದ ಜ್ಞಾನವೆ ಎಂಬೊ ನಿಜವೆಂಬ ಫಲ 2 ಮಾಯಿಗಳ ವದ್ದ ಮಮತಾ ಗೆದ್ದ ಗಾಯನ ಪ್ರಸಿದ್ಧ ಗುಣದಲಿ ಇದ್ದ 3 ನಾನಾ ಚಾರಿತ್ರ ತೋರಿದ ಮಿತ್ರ ಸಿರಿ ಹರಿಯ ಗಾತ್ರದೊಳಿಟ್ಟ ಪಾತ್ರ4 ಸಂತತ ವಿರಕ್ತ ಜೀವನ ಮುಕ್ತಾ ಸಂತಾರಿ ಸುಶಕ್ತಾ ಹರಿನಾಮ ಭೋಕ್ತಾ 5 ಸ್ವಾದಿಪುರವಾಸ ಸಾಧುಗುಣ ಭಾಸಾ ಸದ್ಭಕುತ ಪೋಪ ಮಧ್ವಮುನಿಯ ದಾಸಾ 6 ವಿಜಯವಿಠ್ಠಲನ್ನ ನೆನೆಸುವ ಘನ್ನ ಹರಿ ತ್ರಿಜಗ ಹಯವದನನ್ನ ಪರನೆಂಬೊ ಪೂರ್ಣಿ7
--------------
ವಿಜಯದಾಸ
ಗುರು ವಿಜಯರಾಯರ ಪದಸರಸಿಜ ಸೇವಿಪ ನರನೇ ಜಗನ್ಮಾನ್ಯ ಧನ್ಯಾ ಪ ದುರಿತ ತರಿಯಲವತರಿಸಿ ನರಹರಿಯ ಪರಿಚರಿಸುವ ನಿಜ ಅ.ಪ ಭೂಕಾಂತನ ಬಹು ಬಾಧಿಗೆ ತಾಳದೆಈ ಕರುಣಿಕನ ತನವಾಬೇಕಿಲ್ಲೆಂದರು ತಾಕಿಕದ ಸ್ಥಿತಿಸಾಕುವ ಶ್ರೀ ದೇವಾಶ್ರೀ ಕಳತ್ರನ ಕೃಪಾ ಕಟಾಕ್ಷದಿಂ-ದೇಕ ಮನೋಭಾವಾಸ್ವೀಕರಿಸುತ ಪರಲೋಕ ಸಾಧನವನೀ ಕರಿಸಿದರಾನೇಕ ದುರ್ವಿಷಯವ 1 ಇಂತುಪಯ ನಿಶ್ಚಿಂತನಾಗಿ ಗುರು-ವಂತರಾತ್ಮ ಹರಿಯಾಸ್ವಾಂತತಿ ಭಜಿಸುತ ಚಿಂತವರೇವಲಿ ಹನು-ಮಂತನ ಪರಮದಯಾಎಂತು ಪೇಳಲಿ ಬಲು ಶಾಂತರಾಗಿ ಶ್ರೀ-ಕಾಂತನ ಪರಿಪರಿಯಾಅಂತರಂಗದೊಳನುಭವಿಸುತ ಗುಣ-ವಂತರಿವರಿಗೆ ದಿಗವಂತದಿ ಸರಿಯಾ 2 ಲೇಸು ಜ್ಞಾನವ ಬಯಸುವ ಜನರೋಲ್‍ಆ ಸೋಮಪುರದಲಿವಾಸವಾದ ರಾಮದಾಸರಿಂದುಪ-ದೇಶವ ಕೊಳ್ಳುತಲೀಹೇಸಿ ವಿಷಯದಿಂದೋಷಿಯಾದ ಶ್ರೀನಿ-ವಾಸರಾಯರಲ್ಲೀ ಯೇಸು ಜನ್ಮದ ಸುಕೃತವು ಇವರನು ನಿ-ರ್ದೊಷಿಗಳನು ಗೈದಿಸಿದರು ತ್ವರಿತದಲಿ 3 ವೇದ ವೇದ್ಯನ ಗುಣಂಗಳ ಪದ ಸು-ಳಾದಿ ಪ್ರಮೇಯವನೂ ಸಾದರದಿಂದಲಿ ಭೂದೇವರಿಗೆ ಬೋಧಿಸಿ ತತ್ವವನೂಸಾಧಿಸಿ ಭೇದವ ಜೀವೇಶ್ವರ ಮತಭೇದಿಸಿ ವಾದಿಯನೂಆದಿ ವ್ಯಾಧಿ ಅನಾದಿ ಭೂತಗಣ ಭೇದಿಸಿ ಮಾಡಿ ಪರೋದರ ಗತವನೂ 4 ಪತಿ ಅಚಲ ವ-ಸತಿಯನೆ ಮಾಡೀದಾಕೃತಿ ರಮಣನ ಒಲಿಸುತನಶನ ವ್ರತ ಪಥದಿಂದಾಗಾಧಾನುತಿಸುತ ಕಮಲಾಪತಿ ನರಸಾರಥಿ ಪ್ರತಿಮೆಯಪ್ರತಿಷ್ಠಿಯ ಹಿತದಿಂದಗೈದಾ 5
--------------
ಕಮಲಪತಿವಿಠ್ಠಲರು
ಗುರು ಸದ್ಗುರು ಆರೆಂದು ನೋಡೊ ಗುರುತಿಟ್ಟು ಮನವೆ ಸೇವೆ ಮಾಡೊ ಧ್ರುವ ಗುರುಗಳುಂಟು ಮನೆಮನೆ ಬಹಳ ಬ್ಯಾರೆ ಬ್ಯಾರೆ ಮಾಡುತ ತಮ್ಮ ಮ್ಯಾಳ ದೋರುತಿಹರು ಮೋಹಿಸುವ ವಾಗ್ಜಾಲ ಸರಿ ತಮಗಾರಿಲ್ಲೆಂದೆನ್ನು ತಲಾ ತೋಳ 1 ಎಲ್ಲ ಬಲ್ಲತನದಭಿಮಾನ ಅಲ್ಲೆ ಕೊಂಬುದೇನುಪದೇಶ ಜ್ಞಾನ ಸೊಲ್ಲಿಲ್ಹೇಳಿ ಕೇಳಿದರಾಹುದೇನ ಸಲ್ಲದರಲಿಹುದೆನೊಡೆತನ 2 ಸರ್ವಸಮ್ಮ ತಾಗುವ ಸುಜ್ಞಾನ ಗರ್ವಾಭಿಮಾನಗೆಲ್ಲಿಹುದು ಖೂನ ಪೂರ್ವಾಪರ ಸದ್ಗುರು ನಿಜಧ್ಯಾನ ದೋರ್ವದು ತಾಂ ಪಡೆದವಗ ಪೂರ್ಣ3 ವಿರಳಾಗತ ಎಲ್ಲಿಗೊಬ್ಬ ಮಹಿಮ ಶರಣ ಹೊಕ್ಕವಗೆ ಪೂಜ್ಯಪರಮ ಕರತಳಾಮಲಕವಾಗುವ ನಿಜವರ್ಮ ಗುರುಮಾರ್ಗದಾಗೆನಬೇಕು ನೇಮ 4 ಗುರುವರ ಶಿರೋಮಣಿ ಭಾನುಕೋಟಿ ಗುರುತಾದ್ಯೆನ್ನ ಮನದೊಳು ನಾಟಿ ಪರಬ್ರಹ್ಮನಹುದೊ ಜಗಜೇಟಿ ತರಳ ಮಹಿಪತಿ ಮನವಸೋಘಟಿ(?) 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರು ಸಾರ್ವ _ ಭೌಮಾ ದೊರಕಿಸುತ ಹರಿಕರುಣ ಪೊರೆ ರಾಘವೇಂದ್ರಾ ಪ ಅಂದು ಹರಿ ತವಶರದಿ ಕರ ಪೊರೆದಂತೆ ನಂದಿ ಸುತ ದುರಿತೌಘ ಇಂದೆನಗೆ _ ಮೈದೊರು ಗುರುವೇ ಕುಂದು ಮಯ ಕಲಿಯೊಳಗೆ ಕಂದುತಿಹ ಕಂದರನು ತಂದೆ ಗುರು ಕಾಯದಿರೆ ಮುಂದು ಬರೆ ಆಗುವದೆ ಸ್ವಾಮೀ 1 ಕತ್ತಲೆಯು ಸುತ್ತಿಹುದು ಮುತ್ತಿಹವು ಕುತ್ತುಗಳು ಬತ್ತಿಹವು ಶಕ್ತಿಗಳು ಹತ್ತವೈ ಚಿತ್ತದೊಳು ಏನೂ ಎತ್ತುಗಳ ತೆರದಂತೆ ಸುತ್ತುತಲಿ ಭವದಲ್ಲಿ ಭಕ್ತಿಯನು ಕಾಣದಲೆ ಮೃತ್ಯುವಿಗೆ ತುತ್ತಾಹೆ ನಲ್ಲೋ 2 ಪರಿಪರಿಯ ಹರಕೆಗಳ ಪೂರೈಸಿ ಭಕುತರಿಗೆ ನಿರುತದಲಿ ಪೊರೆವವಗೆ ಭಾರವೇ ನಾ ನೊಬ್ಬ ಧೊರೆಯೇ ಗುರು ಸೇವೆ ಮಾಡರಿಯೆ ಬರಿ ಮೂಢ ಕಡು ಪಾಪಿ ಶಿರವಿಡುವೆ ಚರಣದಲಿ ಕರುಣಾಳು ಭರವಸೆಯೆ ನನಗೇ 3 ಪ್ರಹ್ಲಾದ ಬಲಿತಾತ ಬಾಹ್ಲೀಕ ಕುರುಪೋಷ ಶ್ರೀ ಹರಿಯು ಗುರುಭಕ್ತಿ ವಾಹಿನಿಯ ಹರಿಸೈಯ ಸತ್ಯಸಂಧಾ ದೇಹದಲಿ ಬಲವಿಲ್ಲ ಈಹಗಳು ಬಿಡದಲ್ಲ ಬಾಹಿರನು ನಿನಗಲ್ಲ ತ್ರಾಹಿ ಗುರು ನೀ ಬಲ್ಲೆ ಎಲ್ಲಾ4 ಶ್ರೀ ಮಧ್ವ ಗುರು ಚೇಲ ತಾಮಸರ ನಿರ್ಮೂಲ ಶ್ರೀಮಂತ ಗುಣಮಾಲ ಶ್ರೀ ಮನೋಹರ ಕೃಷ್ಣವಿಠಲ ಯಜಕಾ ಕಾಮಿತಾ ಫಲದಾತ ನೇಮದಲಿ ಹರಿನಾಮ ನುಡಿಸೆಂಬೆ ಸತತಾ 5
--------------
ಕೃಷ್ಣವಿಠಲದಾಸರು
ಗುರು ಹಿರಿಯರ ಸೇವಿಸಿಹರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿಕೊಳ್ಳಿರೊ ಪ ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದೆರಕ್ಕಸಾರಿಯ ಭಕ್ತರೊಳು ಸೇರಿ ನೀವು ಸೆರೆಯಿಕ್ಕದಂಥವನ ಮೊರೆ ಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆಲ್ಲತುಂಬಿರುವ ಸುಖವೆಲ್ಲ ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವನುಂಬ ಭ್ರಮರಕೆ ಸರಿಗಾಣೆನೊ 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಬಿಕ್ಕುಗಳು ಬಂದು ಬೈವಾಗಇಕ್ಕಿ ಪೊರೆವುದಕೆ ಗತಿಯಿಲ್ಲದಾ ದರಿದ್ರರಿಗೆಸೌಖ್ಯವೆತ್ತಣದೊ ಮನುಜರಿಗೆ 3 ತಾಯ ಮಾರಿ ತೊತ್ತನು ಕೊಂಬ ಪಾಮರರಂತೆಹೇಯ ಕುಜನರಾ ಚರಣಕೆರಗಿಮಾಯಾಪತಿಯಂಘ್ರಿಗಳ ನೆನೆಯಲೊಲ್ಲದ ನರನಆಯುಷ್ಯ ಬರಿದೆ ಹೋಯಿತಲ್ಲ 4 ಅಯಿವರಿತ್ತೊಡವೆಯ ಅವರವರೊಯ್ಯುವರು ಮ-ತ್ತಯಿವರೆಂಬುವರು ತೊಲಗುವರುಮೈಯ ನೆತ್ತರು ಕೂಡ ಹರಿದು ಹೋಹುದು ನಿಮ್ಮಕೈಯ ಪಿಡಿದೆತ್ತುವರ ನಾನು ಕಾಣೆ 5 ಬಲಗುಂದಿ ನೆಲ ಹಿಡಿಯೆ ರೋಗರುಜಿನಗಳೆಂಬಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖ ಗಂಟಲೊಳಗಣನಾಲಗೆಯ ನಾದ ಎಲ್ಲಿಹುದೊ 6 ಆಗಲೇ ಹರಿನಾಮ ನಾದದಿಂದೆಚ್ಚತ್ತುನಾಗಶಯನನ ಪುರದ ಪಥವಆಗಮಜ್ಞರ ಕೇಳಿ ತಿಳಿದುಕೊಳ್ಳಿರೊ ನಿಮಗೆಈ ಗಾಳಿ ದೀಪ ಸ್ಥಿರವಲ್ಲ 7 ಜರೆಯೆಂದು ಕಡೆಯಲ್ಲಿ ಗೊರಗೊರನೆ ಉಸಿರಾಡೆಶರೀರದ ಸಂಬಂಧಗಳಕಟಾತರುಣಿಯರ ಮ್ಯಾಲಾಸೆ ತಮ್ಮ ಹಿತವನರಿಯದೆಬರಿದೆ ಭವದಲ್ಲಿ ಬಳಲುವಿರಿ 8 ಸರಕು ಇಲ್ಲಮಾಧವನ ಪೂಜೆ ಒಮ್ಮೆಯೂ ಮಾಡಿಲ್ಲ ಹರಿಪಾದ ತೀರ್ಥದಾ ವ್ರತಗಳಿಲ್ಲ 9 ಊಧ್ರ್ವಪುಂಡ್ರಗಳಿಲ್ಲ ಹರಿಯ ಲಾಂಛನವಿಲ್ಲಪದ್ಮ ತುಳಸಿಯಾ ಸರಗಳಿಲ್ಲಸದ್ಧರ್ಮ ಪಥವೆತ್ತ ವಿಷಯಾಂಧ ಕೂಪದೊಳುಬಿದ್ದು ಪೊರಳುವ ಮರುಳಿದೆತ್ತ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕ ವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ11 ಸಕ್ತಿಯಿಂ ಹರಿಯ ಪೊಗಳಿ ಅಡಿಯಲುರುಳಿ ಶುಷ್ಕಭುಕ್ತಿಗಳ ಮೇಲುಗುಳಿ ದೂರ ನಿಲ್ಲಿಭಕ್ತಿ ಜ್ಞಾನಗಳಿರಲಿ ಮತ್ರ್ಯ ಪಥದಿಂ ಮರಳಿಮುಕ್ತಿ ಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆ ಕೆಡಹುವ ಮುನ್ನಕಳ್ಳರೈವರ ಕಾರಣದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭನ ಅಡಿಗೆ ಮೊರೆ ಹೋಗಿರೊ13 ಪಾದ ಸೇರಿರೋ 14 ಒಂಬತ್ತು ರಂಧ್ರಗಳ ತನುವೆಂಬ ಮನೆಯಲ್ಲಿತುಂಬಿರುವ ವಾಯು ಸ್ಥಿರವಲ್ಲನಂಬಿದರ ಪೊರೆವ ನೆಲೆಯಾದಿಕೇಶವನ ಪಾದಾಂಬುಜವನು ಸೇರಿ ಬದುಕಿರೊ 15
--------------
ಕನಕದಾಸ
ಗುರುಕೂರ್ಮಚಾರ್ಯರ ಚರಣಕಮಲಯುಗ್ಮ ಮಾನವ ಪ ಧರಣಿಯೊಳಗೆ ಸುಕ್ಷೇತ್ರಗಾಲವ ಪುರದಿ ಶ್ರಿ ನರಶಿಂಹಾ ಚಾರ್ಯರ ತರುಣಿಯಳ ಗರ್ಭಾಬ್ಧಿಯಲಿಹಿಮ ಕರನ ತೆರದಲಿ ಜನಿಸಿಮೆರೆದ ಅ.ಪ ವರಕೊಲ್ಹಾಪುರದಿ ಪೋಗಿರಲು ಸುಂದರವಾದ ಸಿರಿಯರೂಪವ ಕಾಣುತ್ತ ಅರಿತು ಪ್ರಾರ್ಥಿಸಲು ಶ್ರೀ ನರಶಿಂಹಾರ್ಯರಿಗೊಲಿದು ಕರುಣದಿಂದಲಿ ಕೊಟ್ಟಂಥ ಚರಣಕವಚ ಸ್ವರಣ ಸಂಪುಟದಲ್ಲಿ ನಿರುತ ಪೂಜೆಯ ಮಾಡುತ್ತ ಪ್ರವಚನಾಸಕ್ತ ಧರೆಯೊಳಗೆ ಬಹು ಶರಣು ಜನ ರಘ ತರಿದು ಸೌಖ್ಯವ ಗರಿವುದಕೆ ಸಂ ಚರಿಸುತಲಿ ಸಚ್ಛಾಸ್ತ್ರ ಮರ್ಮವ ನರುಹಿಜನರನುದ್ಧರಿಸಿದಂಥ 1 ಪೊಳೆವ ಫಾಲದಿ ಪುಂಡ್ರ ತಿಲಕ ಮುದ್ರಾಕ್ಷತಿ ವಿಲಸಿತ ಶುಭಗಾತ್ರದಿ ಅಲವ ಬೋಧರ ಮತದೊಳು ತತ್ವಬೋಧಕ ಸುಲಲಿತೋಪನ್ಯಾಸದಿ ಬಲು ವಿಧಾರ್ಥವ ಪೇಳಿಕುಳಿತಪಂಡಿತರನ್ನು ಒಲಿಸುತಿರೆ ಪೂರ್ವದಿ ಪಂಢರಪುರದಿ ಭವ ಮುದ್ಗಲಾಚಾರ್ಯರಿ ಗೊಲಿದು ಬಂದಿಹ ಚಲುವ ವಿಠ್ಠಲ ಮೂರುತಿಯ ಪದ ಜಲಜ ಮಧುಕರರೆನಿಸಿದಂಥ 2 ಜಡಜಾಪ್ತನುದಯದಿ ನಡೆದು ದ್ವಿಜಗೃಹದೇವ ರಡಿ ಗೊಂದನೆಯ ಮಾಡುತ್ತ ಎಡೆಬಿಡದಲೆ ತಮ್ಮ ಅಡಿಗೊಂದಿಸುವ ಭಕ್ತ ಗಡಣವ ಮನ್ನಿಸುತ ಬಿಡದೆ ಶತತ್ರಯ ಕೊಡ ಜಲದಲಿ ಸ್ನಾನ ದೃಢಮನದಲಿ ಮಾಡುತ್ತ ತಂತ್ರ ಸಾರೋಕ್ತ ಎಡಬಲದಿ ಶೇವೆಯನು ಮಾಡುವ ಪೊಡವಿಸುರಕೃತ ವೇದ ಘೋಷದಿ ಜಡಜನಾಭನ ಪೂಜಿಸುವ ಬಹು ಸಡಗರವ ನಾನೆಂತು ಬಣ್ಣಿಪೆ 3 ಭೂತಲದಲಿ ಶ್ರೇಷ್ಠವಾತ ಮಾತಾಂಬುಧಿ ಶೀತ ಕಿರಣನೆನಿಸಿ ಪ್ರಾತರಾರಭ್ಯ ಶ್ರೀನಾಥನೆ ಪರನೆಂಬೊ ಶಾಸ್ತ್ರದಿ ಮನವಿರಿಸಿ ಖ್ಯಾತ ಸತ್ಯಧ್ಯಾನ ತೀರ್ಥರೆಂಬುವ ಗುರು ಪ್ರೀತಿಯ ಸಂಪಾದಿಸಿ ಪುತ್ರರಿಗೆ ಬೋಧಿಸಿ ಪ್ರೀತಿಯಲಿ ಶಿಷ್ಯರಿಗೆ ಭಗವ ದ್ಗೀತೆಯನು ಪ್ರತಿದಿನದಿ ಪೇಳುತ ಪಾತಕವ ಪರಿಹರಿಸಿ ಪರಮ ಪು- ನೀತ ಗಾತ್ರರ ಮಾಡಿ ಸಲಹಿದ 4 ಧರೆಯೊಳಧಿಕಮಾದ ಗಿರಿ ವೇಂಕಟೇಶನ ದರುಶನವನೆ ಕೊಳ್ಳುತ ಗುರುವಾಜ್ಞೆಯಲಿ ಬಂದು ವರ ಸಭೆಯೊಳು ತಮ್ಮ ಪರಿವಾರದಿಂದಿರುತ ವರಷ ಶಾರ್ವರಿಯೊಳು ವರ ಮಾಘ ಪ್ರತಿಪದ ಬರಲು ಧ್ಯಾನವ ಮಾಡುವ ಹರಿಪದಾಸಕ್ತ ಪರಮ ಭಕುತಿಯಲಿಂದ ಶೇವಿಪ ಶರಣು ಜನ ಮಂದಾರ ನೆನಿಸುತ ಮೆರೆವ ಕಾರ್ಪರ ನಿಲಯ ಶಿರಿನರ ಹರಿಯ ಪುರವನು ತ್ವರದಿ ಶೇರಿದ 5
--------------
ಕಾರ್ಪರ ನರಹರಿದಾಸರು