ಒಟ್ಟು 2080 ಕಡೆಗಳಲ್ಲಿ , 113 ದಾಸರು , 1655 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಧವ ಗೀತೆ ಶರಣು ಹರಿಗೆ ಶರಣು ಸಿರಿಗೆ ಶರಣು ಬ್ರಹ್ಮವಾಣಿಯರಿಗೆ ಶರುಣು ಭವಗೆ ಶರಣು ಶಿವೆಗೆ ಶರಣು ಬೆನಕಗೆ ಶರಣು ತತ್ವಮಾನಿಗಳಿಗೆ ಶರಣು ಮುನಿ ಸಮೂಹಗಳಿಗೆ ಮಾಧವ 1 ಪರಮಭಕ್ತರಾಗಿ ಮೆರೆದ ಗುರು ಪುರಂದರಾದಿ ಸಾಧು ವರರ ವಚನ ಮಣಿಗಳನ್ನು ಮನದೊಳಾರಿಸಿ ಸರವ ಮಾಡಿ ಶರಣ ಜನರ ಕರುಣದೆಳೆಯೊಳಿದನು ಬಿಗಿಸಿ ಮಾಧವ 2 ಶ್ರೀಯೆ ಸತಿಯು ನಿನಗೆ ಬ್ರಹ್ಮರಾಯ ಹಿರಿಯ ಮಗನು ವೈನ- ತೇಯ ರಥವು ಖಾದ್ರವೇಯೆ ಶಯ್ಯೆ ಛತ್ರವು ಮನೆಯ ದಾಸಿ ಸುರನಿ ಮಾಧವ 3 ಪರ್ವತೇಶನಣುಗಿ ತಂಗಿ ಶರ್ವದೇವ ನರ್ಮ ಸಖಳು ಸರ್ವದುರಿತವಳಿವ ಗಂಗೆ ನಿನ್ನ ಪುತ್ರಿಯು ಸರ್ವಕರ್ತ ಸರ್ವಶಕ್ತ ಸರ್ವಕಾಲ ದೇಶ ವ್ಯಾಪ್ತ ಭೋಕ್ತ ಮಾಧವ 4 ನೀನೆ ತಾಯಿ ನೀನೆ ತಂದೆ ನೀನೆ ಬಂಧು ನೀನೆ ಬಳಗ ನೀನೆ ಸಖಳು ನೀನೆ ಗುರುವು ನೀನೆ ದ್ರವ್ಯವು ನೀನೆ ಧೃತಿಯು ನೀನೆ ಸ್ಮøತಿಯು ನೀನೆ ಮತಿಯು ಮಾಧವ 5 ನಿನ್ನ ನಾಮ ಪುಣ್ಯನಾಮ ನಿನ್ನ ರೂಪ ಮಾನ್ಯರೂಪ ಅನ್ಯ ದೈವರನ್ನು ಕಾಣೆ ಘನ್ನ ಭಕ್ತವರ್ಯರಾಣೆ ಮಾಧವ 6 ದೀನ ನಾನು ದಾನಿ ನೀನು ಹೀನ ನಾನು ಮಾನಿ ನೀನು ಏನ ಬಲ್ಲೆನೈಯ ನಾನು ಜ್ಞಾನಪೂರ್ಣನೈಯ ನೀನು ಮಾಧವ 7 ಹೃದಯದಲ್ಲಿ ನಿನ್ನ ರೂಪ ವದನದಲ್ಲಿ ನಿನ್ನ ನಾಮ ಉದರದಲ್ಲಿ ಅರ್ಪಿತಾನ್ನವಿತ್ತು ಅನುದಿನ ಒದಗಿ ಬಂದು ಬದಿಯಲಿದ್ದು ಮದಡ ಬುದ್ಧಿಯನ್ನು ಬಿಡಿಸಿ ಮಾಧವ 8 ಸ್ನಾನ ಮೌನ ಧ್ಯಾನ ತಪಗಳೇನು ಮಾಡಲೇನು ದೇವ ನೀನೆ ಕೃಪೆಯಿನೊಲಿಯದಿರಲು ಜ್ಞಾನ ಬಾರದು ಏನು ಹೀನ ಹಾನಿ ಬರಲು ನೀನು ಮಾತ್ರ ಬಿಡದಿರೆನ್ನ ಮಾಧವ 9 ನಿತ್ಯವಲ್ಲ ದೇಹವಿನ್ನು ವ್ಯರ್ಥವಾಗಿ ಪೋಪುದಾಯು ಮತ್ತೆ ಬರುವುದೇನು ನಿಜವು ಮತ್ರ್ಯಕಾಯವು ನಿತ್ಯ ನಿನ್ನ ಭಜಿಸುತಿಪ್ಪ ಮಾಧವ 10 ಅಂಬುಗುಳ್ಳೆಯಂತೆ ಇರುವ ಡಿಂಬವನ್ನು ನಂಬಿ ಕೆಟ್ಟು ಹಂಬಲಿಸುತ ವಿಷಯಗಳಿಗೆ ಡೊಂಬನಾದೆನು ಕಂಬಳಿಯೊಳು ಕಟ್ಟಿದನ್ನ ತಿಂಬುವನಿಗೆ ದೊರೆವ ಸುಖವು ಮಾಧವ 11 ಹೊಟ್ಟು ತಂದು ಕುಟ್ಟಿ ಕೇರಿ ಕಷ್ಟಪಟ್ಟು ತುಕ್ಕಿ ಬೀಸಿ ಅಟ್ಟಹಾಸದಿಂದ ರೊಟ್ಟಿ ಸುಟ್ಟು ತಿನ್ನಲು ಎಷ್ಟು ಸುಖವೊ ಅಷ್ಟೆಯಿನ್ನು ಭ್ರಷ್ಟ ಭವದಿ ಮಮತೆಯಿಡಲ ಮಾಧವ 12 ಹೊಟ್ಟೆಕಿಚ್ಚು ಪಡುವೆ ದೈವಕೆಷ್ಟು ಪೂಜೆ ಮಾಡೆ ಕರುಣ ಪುಟ್ಟಲೊಲ್ಲದದಕೆ ಬೆಟ್ಟದಷ್ಟು ಕೊಟ್ಟರು ಬೆಟ್ಟು ನೀರೊಳದ್ದಿ ಬಾಯೊಳಿಟ್ಟು ಚಪ್ಪರಿಸಲು ರುಚಿಯ ಮಾಧವ 13 ತಪ್ಪು ಸಾಸಿರಂಗಳನ್ನು ಒಪ್ಪಿಕೊಂಡು ಕಾವದೇವ ಮುಪ್ಪುರಂಗಳನ್ನು ಗೆಲಿಸಿದಪ್ರಮೇಯನೆ ಕಪ್ಪು ಮೇಘಕಾಂತಿಯಿಂದಲೊಪ್ಪುತಿಪ್ಪ ತಿರುಮಲೇಶ ಮಾಧವ 14 ಒರಳ ನೆಕ್ಕಿ ವ್ರತವ ಕೆಟ್ಟ ಮರುಳನಂದವಾಯ್ತು ದೇಹ ಧರಿಸಿದುದಕೆ ನಿನ್ನ ಬಿಟ್ಟು ನರರ ಸ್ತುತಿಸಲು ಹರಕು ಚಿಂದಿ ಬಿಡಿಸಲಿಲ್ಲ ಕರಕು ಅನ್ನ ಹೋಗಲಿಲ್ಲ ಮಾಧವ 15 ಮೊರಡು ತುರುವ ಹಿಡಿದು ಕಟ್ಟಿ ಕರೆದು ಕಷ್ಟ ಪಟ್ಟು ಪಾಲ ನುರಗಗಳಿಗೆ ಎರೆದ ತೆರದಲಾಯ್ತು ನಿನ್ನನು ತರಣಿ ಮುಣಗ ದುಡಿದು ಬಡಿದು ಮಾಧವ 16 ಕೆರವ ತಿಂಬ ನಾಯಿಗಿನ್ನು ಸುರುಚಿಯನ್ನ ಸೊಗಯಿಸುವುದೆ ನರಕ ಭಾಗಿ ಪಾಮರಂಗೆ ನಿನ್ನ ನಾಮವು ಗರಳದಂತೆ ತೋರ್ಪುದೈಯ ಗುರುಗಳಿಲ್ಲ ಹಿರಿಯರಿಲ್ಲ ಮಾಧವ 17 ಕ್ರೂರ ಮಾನವರೊಳುದಾರ ಧೀರ ಶೂರರೆಂದು ಸಾರಿ ಬಾರಿ ಬಾರಿಗಿನ್ನು ಪೊಗಳಿ ಬೊಬ್ಬೆಯಿಟ್ಟರು ಬಾರದವರಿಗೆಂದು ಕರುಣ ಘೋರತನದ ದನುಜರವರು ಶೌರಿ ಮಾಧವ 18 ಹಾಳು ಹೊಲಕೆ ನೀರನೆತ್ತಿ ತೋಳು ಬೀಳು ಹೋದವೋಲು ಖೂಳ ಜನಕೆ ಪೇಳಿಕೊಳ್ಳುತಿಹನು ಬಾಳ್ವೆಯು ದಾಳಿ ಮಾಳ್ಪ ವಿಷಯಗಳನು ಹೂಳಿ ಜ್ಞಾನ ಭಕ್ತಿಯನ್ನು ಮಾಧವ 19 ಎಷ್ಟು ನೀಲಿಯನ್ನು ತೊಳೆಯೆ ಬಿಟ್ಟು ಹೋಗದವರ ಬಣ್ಣ ದುಷ್ಟ ಮಾನವರಿಗೆ ಕರುಣ ಪುಟ್ಟದೆಂದಿಗು ಕಷ್ಟಪಟ್ಟು ಸೇವಿಸುವರ ಹೊಟ್ಟೆಯನ್ನು ಹೊಡೆದು ತಮ್ಮ ಮಾಧವ 20 ನಿರುತ ನಿನ್ನ ಕಥೆಯ ಬಿಟ್ಟು ನರರ ಕಥೆಗಳನ್ನು ಕೇಳಿ ಗುರುಗಳನ್ನು ಹಿರಿಯರನ್ನು ಜರೆಯುತಿಪ್ಪರು ಪೊರೆದ ತಂದೆ ತಾಯ ಮಾತ ಪರಿಕಿಸದಲೆ ತೊರೆದು ತಮ್ಮ ಮಾಧವ 21 ಪಟ್ಟದರಸಿಯನ್ನು ತೊರೆದು ಬಿಟ್ಟು ಪರರ ಸತಿಯ ಕೂಡಿ ಕೊಟ್ಟ ಸಾಲವನ್ನು ಕೊಡದೆ ನುಂಗುತಿಪ್ಪರು ಕರವ ಭಾಷೆಯನ್ನು ಕೊಟ್ಟು ಮೋಸ ಮಾಡುತಿಹರು ಮಾಧವ 22 ಉಂಡ ಮನೆಗೆ ಬಗೆವರೆರಡನವರು ಭಂಡರು ಕಂಡು ನುತಿಸಿ ಬೇಡಿಕೊಂಡರು ದಂಡಿಸುವರ ಕಂಡು ನಡುಗಿ ಮಾಧವ 23 ಕೊಳ್ಳರೊಳಗೆ ಸ್ನೇಹ ಬಹಳ ಸುಳ್ಳರೊಳಗೆ ಸೋಲುತಿಹರು ಒಳ್ಳೆಯವರ ಕಂಡವರ ಟೊಳ್ಳು ಮಾಳ್ಪರು ಬಳ್ಳೆಸುರಿದು ಬಲ್ಲಿದವರಿಗಳ್ಳೆ ಬಿರಿಯಲುಣಿಸಿ ದಣಿಸಿ ಮಾಧವ 24 ಮಾಡಿದಂಥ ಕೃತಿಯು ಮರೆತು ಕೇಡು ಬಗೆದು ಕಾಡುತಿಹನು ನೋಡರೊಮ್ಮೆಗಾದರವರು ಬಡವರೆಂಬುದ ಜಾಡೆಯರಿತು ನಿನ್ನ ನಾಮ ಪಾಡಿ ಪೊಗಳುತಿಹರಿಗೆಂದು ಮಾಧವ 25 ಶಾಕವ್ರತದೊಳೆಲ್ಲ ಶಾಕಂಗಳನ್ನು ಬಿಡುವ ತೆರದಿ ಬೇಕು ಬೇಕು ಎಂಬ ಬಯಕೆ ಬಿಡಲು ಬಾರದು ಸಾಕೆನಿಸದೆ ರತಿಯ ಸುಖದೊಳೇಕ ಚಿತ್ತನಾಗುವಂತೆ ಮಾಧವ 26 ನೇಮ ನಿಷ್ಠೆಯೆಂದು ಪರರ ಧಾಮದನ್ನ ಬಿಡುವವೋಲು ಕಾಮಲೋಭ ಮೋಹಗಳನು ಬಿಡಲು ಬಾರದು ನಿತ್ಯ ಪರರ ಮಾಧವ 27 ಹೇಸಿಗೆಯನು ಕಂಡು ಕರದಿ ನಾಸಿಕವನು ಹಿಡಿಯುವಂತೆ ಹೇಸಿ ವಿಷಯ ವಾಸನೆಯನು ಬಿಡಲು ಸಲ್ಲದು ಘಾಸಿಬಟ್ಟು ಪರರ ಸೇವೆಯಾಸೆಬಟ್ಟು ಮಾಡುವಂತೆ ಮಾಧವ 28 ವಿತ್ತ ಪದವಿ ಕಂಡು ಹರುಷ ಕ್ಲೇಶಗಳಿಗೆ ಸಿಲುಕು- ತಿರುಳು ಹಗಲು ಬಿಡದೆ ಕುದಿದು ತೊಳಲುತಿರುವೆನು ದುರುಳ ವಿಷಯಗಳಿಗೆ ಮನವ ಮಾಧವ 29 ಹೇಸಿ ವಿಷಯ ಸುಖವ ನಾನು ಲೇಸೆನುತ್ತೆ ತಿಳಿದು ಮಮತೆ ಯಾಸೆಯಲ್ಲಿ ಕಟ್ಟುಬಿದ್ದು ಕ್ಲೇಶಪಡುತಿಹೆ ಪಾಶಬಿಡಿಸಿ ದಾಸ ದಾಸ ದಾಸನಾಗಿಸೆನ್ನ ದೋಷ ಮಾಧವ 30 ಆಗದೆನಗೆ ಅಬುಜನಾಭ ಭಾಗವತವ ಕೇಳೆ ಮನಸು ಬೈಗು ಬೆಳಗು ಪೋಗುತಿಹುದು ಸಾಗಿ ಬಾರದು ಭೋಗ ಭಾಗ್ಯಗಳನು ಬಯಸಿ ರಾಗ ಲೋಭಗಳಲಿ ನೆಲಸಿ ಮಾಧವ 31 ಬಂದ ಕಾರ್ಯವಾಗಲಿಲ್ಲ ಎಂದು ಬ್ರಹ್ಮ ದೇಹ ಧರಿಸಿ ಮುಂದ ನೊಂದನರಿಯೆ ಮಾಧವ 32 ದಾಸ ವೇಷವನ್ನು ಹಾಕಿ ದೇಶ ದೇಶವನ್ನು ತುಕ್ಕಿ ಮೋಸಮಾಡಿ ಸುಜನರನ್ನು ಘಾಸಿಗೊಳಿಸಿದೆ
--------------
ಲಕ್ಷ್ಮೀನಾರಯಣರಾಯರು
ಮಾಧವ ನಮ್ಮ ಶ್ರೀಧವ ಬಾಧೆಪಡಿಸದೆ ತನ್ನ ಪಾದದಾಸರ ಕಾಯ್ವ ಪ ನಿರುತ ನೀರೊಳು ನಿಂದ ಈತ ಚಾರು ನಿಗಮಗಳ ತಂದ ಬಲು ಭಾರ ಪೊತ್ತನು ಬೆನ್ನಲಿಂದ ಆಹ ಕೋರೆದಾಡೆಯಲಿಂದ ಘೋರದೈತ್ಯನ ಸಂ ಹಾರವ ಮಾಡಿ ಭೂಭಾರವನಿಳುಹಿದ 1 ಅರಮನೆಕಂಬದಲಿಂದ ಕಡು ಘೋರ ರೂಪವ ತಾಳಿ ಬಂದ ಮಹ ದುರುಳನುದರ ಬಗಿದುಕೊಂದ ಆಹ ಧರೆಯನೀರಡಿ ಮಾಡಿವ ದನುಜನ ತುಳಿದು ಚರಣದಾಸರ ಮನದೊರವಿತ್ತು ಸಲಹಿದ 2 ವೀರತನದಿ ಕೊಡಲಿಪಿಡಿದ ಧರೆಯ ಸಾರಕ್ಷತ್ರಿಯಮೂಲವಳಿದ ದೇವ ಧಾರುಣಿಯೊಳು ನರನಾದ ಅಹ ತೋರಿ ವಿಪಿನವಾಸ ಮೀರಿದಸುರನ ಕೊಂದು ಮೂರುಲೋಕದ ಕಷ್ಟ ದೂರಮಾಡಿದ ಶೂರ 3 ಗೊಲ್ಲಕುಲದಿ ಜನಿಸಿದ ಪುಂಡ ಬಿಲ್ಲಿನಾಟವ ರಚಿಸಿದ ವೀರ ಖುಲ್ಲ ಕಂಸನ ಮದ ಮುರಿದ ಆಹ ನಲ್ಲೇರ್ಹದಿನಾರು ಸಹಸ್ರಬಲ್ಲಿದತನದಾಳಿ ಎಲ್ಲ ಭಕ್ತರ ಇಷ್ಟಸಲ್ಲಿಸಿ ಪೊರೆದನು 4 ಸಾರಿಬತ್ತಲೆ ಕದಲಿದ ಪರಮ ನಾರಿಯರ ವ್ರತ ಭಂಗಿಸಿ ಮೆರೆದ ಮೂರುಪುರದ ಗರ್ವಮುರಿದ ಆಹ ಪಾರುಮಾಡಿದ ಸುರರ ಘೋರಕಂಟಕದಿಂದ ಏರಿದ ಹಯ ನಮ್ಮ ಧೀರ ಶ್ರೀ ಗುರು ರಾಮ 5
--------------
ರಾಮದಾಸರು
ಮಾಧವ ಮಧುಸೂದನ ಕೇಶವÀ ಹರೆ ಯಾದವ ಕೃಷ್ಣ ಶ್ರೀಹರಿ ಶೌರೆಪ ವೇದವೇದ್ಯ ಸನÀ್ಮುನಿಗುಣ ಸೇವಿತ ಸಾಧುವಂದಿತ ಚರಣಕೆ ನಮಿಪÉ ಅ.ಪ ಮಂದರಧರ ಗೋವಿಂದ ಮುಕುಂದನೆ ಇಂದಿರೆಯರಸ ಹೃನ್ಮಂದಿರದಿ ಮಂದಗಮನೆ ಮಹಾಲಕ್ಷ್ಮಿಯೊಡನೆ ಆ- ನಂದದಿ ನಲಿನಲಿದಾಡು ಹರಿ 1 ಸರಸಿಜನಾಭನೆ ಮುರಳಿಧರನೆ ಹರಿ ಪರಮಪುರುಷ ಪಾವನರೂಪ ಸುರಗಂಧರ್ವರು ಸ್ತುತಿಸುತ ಪಾಡ್ವರು ವಾಹನ ಹರಿಯೇ2 ಆದಿಪುರುಷ ಪುರುಷೋತ್ತಮ ಹರಿ ಈ ವತ್ಸರ ಶುಭದಿನಗಳಲಿ ಆದರದಲಿ ಗುರುಹಿರಿಯರ ಸೇವಿಸಿ ಶ್ರೀಧರನನ್ನು ಭಕ್ತಿಲಿ ಭಜಿಸಿ 3 ಗೋಕುಲಪತಿ ಗೋವಿಂದ ಮುಕುಂದನೆ ಮಾತುಳಾಂತಕ ಮಧುಸೂದನನೆ ಗೋಪತಿ ಕೃಷ್ಣನೆ ಸಲಹುವ ಸುಜನರ ಮೂಕಾಂಬಿಕೆ ನಾಮವ ಧರಿಸಿ 4 ಕಡುಹರುಷದಿ ನಿನ್ನಡಿಗಳಿಗೆರಗುವೆ ಬಿಡದೆ ರಕ್ಷಿಸೆಂದೆನ್ನುತಲಿ ಕರುಣದಿ ಕಾಪಾಡುತ ಸಲಹುವದು ಕಮಲನಾಭ ವಿಠ್ಠಲ ದೇವ 5
--------------
ನಿಡಗುರುಕಿ ಜೀವೂಬಾಯಿ
ಮಾಧವ ಸಾಧುಜನ ಕಾದಿರುವರೊ ಪ ಆದರದಿಂದ ನಿನ್ನ ನೋಡುವುದಕೆ ಅ.ಪ ಶಾಸ್ತ್ರಗಳಿಂದಲು ಅರಿಯದ ನಿನ್ನ ಪ ವಿತ್ರ ರೂಪವನು ನೋಡಲೋಸುಗ 1 ಘೋರತಪಗಳಿಂದ ಸೇರದೆÀ ನಿನ್ನನು ಚಾರಿಯೊಳ್ ಪೊಂದಲು ಕೋರುತಿಹರೊ 2 ದಾನ ಧರ್ಮಗಳಿಗೂ ಸುಲಭದಿ ದೊರೆಯದ ನೀನೆ ಬಂದಿರಲು ವಿನೋದಿಸುವರೊ 3 ತೀರ್ಥಯಾತ್ರೆಯು ಮನ ಮಾತ್ರ ಶೋಧಿಪುದೆಂದು ಮೂರ್ತಿ ನೋಡಲು ನಿನ್ನ ಪ್ರಾರ್ಥಿಸುವರೊ4 ಅನ್ನದಾನವ ಮಾಡೆ ಹೊನ್ನು ಇವರಿಗಿಲ್ಲ ಮನ್ನಣೆ ಮಾಡಿ ಪ್ರಸನ್ನನಾಗೆಲೊ 5
--------------
ವಿದ್ಯಾಪ್ರಸನ್ನತೀರ್ಥರು
ಮಾನವ ಗುರುವಿಷ್ಣು ತೀರ್ಥರ ಪ ಕರುಣದಿ ಜನಿಸಿ ತರಿದ ಭೀಷ್ಠೆಯ ಗರಿವರಂಘ್ರಿಯ ಅ.ಪ ತರುಣಿ ಗರ್ಭದಿ ಜನಿಸಿ ವಟು ವ್ರತವ ಧರಿಸಿ ವೇದವೇದಾಂತ ಶಾಸ್ತ್ರವ ಹರಣ ಮಂತ್ರವ ಜಪಿಸಿದವರನು 1 ಗುರುತುರಗವನುಸರಿಸಿ ಬರುತಿರಲು ಬಿಸಿಲೊಳು ಗುರುಪ್ರೀತಿಯನು ಬಯಸಿ ಗುರುವಿತ್ತ ಪಾದುಕವೆರಡು ಶಿರದಲಿ ಧರಿಸಿ ಮಹಿಮೆಯನು ತಿಳಿಸಿ ಧರಿಸಿ ದ್ವಿತಿಯಾ ಶ್ರಮದಿ ನೋಡಲು ಪರಮ ಸತ್ಕುಲ ಜಾದಿ ಗುಣಯುತ ತನದೋಳ್ಮೆರೆವರಂಘ್ರಿಯ2 ತಿರೆ ಮೃಗಲಾಂಚನ ಮುಖಸಹಿತದಿ ಹರಿದಾಸ ಪಾಡಿದ ಮಾಡಿರಿ ಧರ್ಮವೆಂಬುವ ಸುಖವನು ತ್ಯಜಿಸಿಪೊರಟರ 3 ಚರಿಸುತ ಗಮನ ಸ್ವಪ್ನದಿ ಸೂಚಿತ ಪ್ರವಚನ ವಿಜಯ ಮುನಿ ಮುನಿಯವಲ್ಲಿ ಯೊಳಿರುವ ಗುರುಗಳ 4 ಕುಮಾರಕರೆಂದೆನಿಸಿ ಸುಕ್ಷೇತ್ರ ಧ್ಯಾನಿಸಿ ಸೇರಿದವರ ಘ ಚಾರು 'ಕಾರ್ಪರ ನಾರಶಿಂಹ' ವಲಿಮೆ ಪಡೆದ ಚಾರು ಚರಣವ5
--------------
ಕಾರ್ಪರ ನರಹರಿದಾಸರು
ಮಾನವ ತ್ವರಿತ || ವೃಂದಾರಕ ಸದ್ವಂಶಜರಿವರೆನುತ ಮನದೊಳು ಭಾವಿಸುತ ಪ ಗುರುಸುವೃತೀಂದ್ರರ ಕರಕಮಲದಿ ತಾನು ತುರಿಯಾಶ್ರಮವನು | ಧರಿಸುತ ಹರುಷದಿ ರಘುಕುಲಜನ ಚರಣ ಆರಾಧಿಸಿ ಘನ್ನ || ಮರುತಾತಮ ಮರ್ಮಜ್ಞನು ತಾನಾಗಿ ಮೆರೆದನು ಚೆನ್ನಾಗಿ1 ವಾಸರ ಒಲಿಮೆಯಲಿ ಧರೆಯಲಿ ಚರಿಸುತಲಿ ಪರವಾದಿಯ ಮತ- ನರನೆಂದಿವರನು ನಿಂದಿಸುವನೆ ದೈತ್ಯ ನಾ ಪೇಳುವೆ ಸತ್ಯ 2 ಶ್ರೀಮನೋವಲ್ಲಭ ಶಾಮಸುಂದರ ನೇಮದಿ ಪಠಿಸುತ ಪ್ರೀಮದಿ ಶಿಷ್ಯರನ ಸಲಹಿದ ಸಂಪನ್ನ | ಧೀಮಜ್ಜನ ಸಂಸೇವಿತ ಸುವೃತೀಂದ್ರ ಹೃತ್ಕುಮುದಕೆ ಚಂದ್ರ 3
--------------
ಶಾಮಸುಂದರ ವಿಠಲ
ಮಾನವ ಪ ಗರುವವೇತಕೆ ನಿನಗೆ ಎಲೆ ಮಂಕು ಜೀವಅ ರೂಪದಲಿ ಮನ್ಮಥನೆ ಶಾಪದಲಿ ಗೌತಮನೆಕೋಪದಲಿ ದೂರ್ವಾಸ ಮುನಿಯೆ ನೀನುತಪದಲ್ಲಿ ವ್ಯಾಸನೆ ಕೃಪೆಯಲ್ಲಿ ಬಲೀಂದ್ರನೆನಿಪುಣತ್ವದಲಿ ನಾರದ ಮುನಿಯೆ ನೀನು 1 ಯತಿಯಲ್ಲಿ ಅಗಸ್ತ್ಯನೆ ಕ್ಷಿತಿಪರಲಿ ಜನಮೇಜಯನೆಗೀತದಲಿ ಗಂಧರ್ವನೇ ನೀನುವ್ರತದಲ್ಲಿ ಲಕ್ಷ್ಮಣನೆ ಮತಿಯಲ್ಲಿ ಕಶ್ಯಪನೆವಿತರಣ ಗುಣದಲಿ ಯಮಧರ್ಮನೆ ನೀನು 2 ಮಾನವ 3 ಕೊಡುವುದಕೆ ಕರ್ಣನೆ ನಡತೆಯಲಿ ಧರ್ಮಜನೆದೃಢ ಮನಸಿನಲಿ ರುಕ್ಮಾಂಗದನೆ ನೀನುಪಡೆಯಲ್ಲಿ ಕೌರವನೆ ನುಡಿಯಲ್ಲಿ ಗಾಂಗೇಯನೆಮಡದಿಯರ ಭೋಗಕ್ಕೆ ಸುರಪತಿಯೆ ನೀನು4 ಬಾಣದಲಿ ರಾಮನೇ ತ್ರಾಣದಲಿ ಭೀಮನೇಕೇಣದಲಿ ಶಿಶಪಾಲನೇನೊಗುಣದಲಿ ಸುಧರ್ಮನೇ ರಣದಲಿ ಶಲ್ಯನೆ ಆನುಗುಣ್ಯವಾದದಲಿ ನರಪತಿಯೆ ನೀನು5 ಛಲದಲ್ಲಿ ರಾವಣನೆ ಬಲದಲ್ಲಿ ವಾಲಿಯೇನಿಲುಗಡೆಯ ಮನದಲ್ಲಿ ದ್ರೋಣನೆ ನೀನುಕುಲದಲಿ ವಸಿಷ್ಠನೇ ಗೆಲುವಿನಲಿ ಪಾರ್ಥನೇಬಿಲುವಿದ್ಯೆಯಲಿ ಪರಶುರಾಮನೆ ನೀನು 6 ಶಕ್ತಿಯಲಿ ಹನುಮನೇ ಭಕ್ತಿಯಲಿ ವಿಭೀಷಣನೆಕೀರ್ತಿಯಲಿ ಹರಿಶ್ಚಂದ್ರರಾಯನೆ ನೀನುಅರ್ತಿಯಲಿ ಶುಕಮುನಿಯೆ ಸ್ಫೂರ್ತಿಯಲಿ ಸೂರ್ಯನೇಮುಕ್ತಿ ಸಾಧನಕೆ ಪ್ರಹ್ಲಾದನೆ ನೀನು7 ಗೋತ್ರದಲಿ ಬ್ರಹ್ಮನೇ ಸೂತ್ರದಲಿ ಕೌಶಿಕನೆಪಾತ್ರದಲಿ ವಾಲ್ಮೀಕಿ ಋಷಿಯೆ ನೀನುಮಾತಿನಲಿ ಗುರುಸುತನೆ ಜ್ಯೋತಿಯಲಿ ಬೃಹಸ್ಪತಿಯೆನೀತಿಮಾರ್ಗದಲಿ ಸಹದೇವನೇ ನೀನು 8 ಅಂಗದಲಿ ಅಜಮಿಳನೆ ಶೃಂಗದಲಿ ಮಾರುತನೆಕಂಗೊಳಿಪ ತನದಲ್ಲಿ ಕಾಮಸುತನೆಗಂಗೆಯನು ಪಡೆದಂಥ ನೆಲೆಯಾದಿಕೇಶವನಹಿಂಗದೆ ಭಜಿಸಿ ಪಾವನನಾಗು ಮನುಜ 9
--------------
ಕನಕದಾಸ
ಮಾನವ ಮೂಢಾ | ಕೇಳದೆ ನೀ ಕೆಡಬ್ಯಾಡಾ | ಶೀಲವರಿತುಕೋ ದೃಢಾ | ಹೇಳುವೆ ನಿಜ ಹಿತ ನೋಡಾ ಪ ಹಾದ್ಯರಿಯದೆ ಪ್ರಚಂಡಾ ಓದಿಕೆ ಯಾಕ ಉದಂಡಾ | ಸಾಧಿಸೋ ಸಾಧನ ಕಾಂಡದ ಬೋಧಿಪ ಮಾರ್ತಾಂಡ | ವಾದ ವಿತ್ತಂಡ ಬಿಡು ಪಾಷಂಡಾ 1 ಹರಿಗುಣ ಕೊಂಡಾಡು ನೀ ಅಖಂಡಾ ಕೇಳು ಕೇಳು ಪ್ರಾಣಿ | ಕರಣ ತ್ರಯಂಗಳ ಬೆರಿಸಿ ಮೊರೆಹೋಗಾಭಾವನೆ ಬಲಿಸಿ | ಗುರುವಿಗೆ ಭಾರೊಪ್ಪಿಸಿ ಇರು ಸಂಶಯವಾ ತ್ಯಜಿಸಿ | ನೆರೆ ಜೌಭಾಗಿಸಿ ತನ ಬಿಡು ಹೇಸಿ ಕುಜನ ದುರಾಶೀ ನದಿಯೊಳು ಸೋಸಿ 2 ಗರುವ ಮುರಿದು ನಿದ್ರ್ವಂದಾ ಚರಿಸಿ ಹಿರಿಯರ ವೃಂದಾ | ಪರಿಯಲಿ ನಡಿನೀ ನೆಂದಾ ಗುರುವರ ಮಹಿಪತಿ ಕಂದಾ | ಪಡದರ ಬಂದಾ | ಜನ್ಮಕ ಛಂದಾ ನೋಡಿದರಿಂದಾ ಕೇಳು ಪ್ರಾಣಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾನವ ಶಿಂಗಾರ್ಯರ ಸುತನಮೋ ನಮೋ ಪ ಮಂಗಳಕರ ಕುಲಿಶಾಂಗ ಮತಾಂಬುಧಿ ತಿಂಗಳಸುಗುಣಿತ ನಮೊ ನಮೊ ಅ.ಪ ತುಂಗಮಹಿಮ ದ್ವಿಜ ಪುಂಗವ ವಿಜಿತಾ ನಂಗ ಶರ ದಯಾಪಾಂಗ ನಮೋ || ಡಿಂಗರೀಕ ಜನಪಾಲ ನಮೊ ಭವ ಭಂಗ ವಿದಾರಣ ನಮೊ ನಮೊ 1 ಜಾತರೂಪ ಶಯ್ಯಾತ್ಮಜ್ಯಾತೆ ಹರಿ | ದೂತ ಪ್ರಹ್ಲಾದರನುಜ ನಮೊ || ಪೂತುರೆ ಘನ ಸತ್ವಾತಿಶಯದ ಪ್ರ ಖ್ಯಾತ ದಿನಪ ಪ್ರಸೂತ ನಮೊ 2 ಪಾತಕಾದ್ರಿಜೀಮೂತ ಭ್ರಾತ ಪಣಿ ಪುರಂದರ ಪೋತನಮೊ ಪೂತಗಾತ್ರ ಶುಭದಾತ್ರ ಭರಿಕ್ಷ ಣ್ಮಾತಿರಿಷ್ಯಶ್ವ ಸುಪ್ರೀತ ನಮೊ 3 ಮೌನಿವರ್ಯ ವರದೇಂದ್ರ ಪಾದಾಂಬುಜ ರೇಣು ವಿಭೂಷಿತ ಪಾಲಯಮಾಂ ಧೇನು ನಿಧೆ ದೇವಾಂಶಜ ಪರಮತ ಪಾವಕ ಪಾಲಯಮಾಂ 4 ಮಾನವಿ ಕ್ಷೇತ್ರನಿಕೇತನ ಸನ್ನುತ ಮಾನಿತ ಗುರುವರ ಪಾಲಯ ಮಾಂ ಧೇನುಪಲ ವಿಜಯರಾರ್ಯ ಕೃಪಾನ್ವಿತ ಧೀನೋದ್ಧರಣ ಫಾಲಯಮಾಂ ಮಾನದಿ ಕ್ಷೇತನಿಕೇತನ ಸನ್ನುತ ಮಾನಿತ ಗುರುವರ ಪಾಲಯಮಾಂ ಜ್ಞಾನನಿಧೆ ದೇವಾಂಶಜ ಪರಮತ ಪಾವಕ ಪಾಲಯ ಮಾಂ 5 ಶೌರಿಕಥಾಮೃತ ಸಾರಗ್ರಂಥ ಕೃತ ಸೂರಿ ಕುಲೋತ್ತುಮ ಜಯ ಜಯಭೋ ಧಾರುಣಿ ಸುರಪರಿವಾರ ನಮಿತ ಪದ ಚಾರುಸ್ತಂಭಾಲಯ ಜಯ ಜಯ ಭೀ 6 ಮಂದವೃಂದ ಮಂದಾರ ಭೂಜನತ ಬಂಧೋ ಭಯಾಪಹ ಜಯ ಜಯ ಭೋ ನಂದಜ ಶಾಮಸುಂದರಾಂಘ್ರಿ ಅರ ವಿಂದ ಮರಂದುಣಿ ಜಯ ಜಯ ಭೋ 7
--------------
ಶಾಮಸುಂದರ ವಿಠಲ
ಮಾನವರೊಳು ಮಾನ ಹೀನನಾದೆನಗೆ ಸುಜ್ಞಾನವ ಕರುಣಿಸಿ ಸಲಹೋ ದಯಾಳೋ ಪ ಶರಧಿ ಗಂಭೀರ ಉ - ಧಾರ ವೈಯ್ಯಾರ ನೀಧೀರ 1 ಮೂಷಕ ವಾಹನನೆ ಕರದಿ ಪಾಶಾಂಕುಶ ವಿಡಿದಿಹನೆ ದೇಶಿಕರನು ನೆರೆ ಪೋಷಿಸಿ ದುರಿತ ರಾಶಿಯ ನಾಶಿಸುವ ಗುಣ ನಿಧಿಯೇ 2 ಕಿನ್ನರ ಸೇವಿತ ನಾಗ ವೈರಿಯ ಸುತ ನಾಗಶಯನ ನುತ ನೀನೆ ರಕ್ಷಿಸುಎನ್ನ 3 ಇಕ್ಷು ಪಣ್ ಫಲಗಳನು ನಾನಾ ಭಕ್ಷ್ಯ ಭೋಜ್ಯಂಗಳನು ಭಕ್ಷಿಸಿ ಕುಜನರ ಶಿಕ್ಷಿಸಿ ಸುಜನರ ರಕ್ಷಿಪೆ ನಿರುತ ನೀ ದಕ್ಷ ಮುಖಾರಿ ಸುತನೆ 4 ಹಿಂಡು ದಿವಿಜರೊಡನೆ ಪೂಜಿಸಿ ಕೊಂಡು ಹಿಗ್ಗುತಲಿಹನೆ ದ್ದಂಡ ವಿಘ್ನವ ಪರಿಖಂಡನೆಗೈದು 5
--------------
ಕವಿ ಪರಮದೇವದಾಸರು
ಮಾನವಾತ್ಮರೆ ನಿಮ್ಮ ಮಾನಸ ಪೂಜೆಯಿಂಮಾನವನಿಗೆ ಮೋಕ್ಷ ಸಾಧಿಸೀರಿ ಪ ರತ್ನ ನಿರ್ಮಿತ ಸುಚರಿತ್ರ ಮಂಟಪವನ್ನುಸತ್ಯಭಾಮೆಯ ಪತಿಗಿತ್ತು ಪೂಜಿಸುವೆ1 ಆಸನ ನೀಡುವೆ ಶೇಷಶಯನನೆ ಇಲ್ಲಿವಾಸ ಮಾಡಿ ಎನ್ನ ಸೇವೆ ಸ್ವೀಕರಿಸು2 ಧ್ಯಾನ ಮಾಡುವೆ ನಿನ್ನ ಗಾನ ಮಾಡುವೆ ನಿನ್ನಜ್ಞಾನ ಭೂಷಣ ಶೋಭಿತಾನನಾಂಬುಜ 3 ಧೃತ ವೇಣುಗೋಪಾಲ ಬಾರೋ ಮನಸಿಗೆ ತೋರೊಮೂರುತಿ ನಿನ್ನಯ ಸಮೀರ ಸಂಸ್ತುತನೆ 4 ಅಘ್ರ್ಯ ನೀಡುವೆ ನಾನು ಅನಘ್ರ್ಯ ವಸ್ತುಗಳಿಂದಸ್ವಘ್ರ್ಯಗ್ರಹಣ ಮಾಡೋ ಭರ್ಗ ಸೇವಿತನೆ 5 ಪಾದ್ಯ ನೀಡುವೆ ವೇದ ವೇದ್ಯ ಮಹಿಮನೇ ಮುನ್ನಾವದ್ಯ ಕಳೆದು ಭವದಿಂದ ಉದ್ಧರಿಸೆನ್ನ 6 ಆಚಮನವ ನೀಡುವೆ ಹೇ ಚತುರಾನನೇಶವಾಚಾಮಗೋಚರ ಮೋಚಕ ಹೇತು 7 ಸುದತಿ ಮೋಹನ ತವಮಧುಪರ್ಕವನೀವೆ ಮುದದಿ ಸ್ವೀಕರಿಸು 8 ಮತ್ತೆ ಆಚಮನವನಿತ್ತು ಪೂಜಿಪೆ ಕರವೆತ್ತಿ ಮುಗಿವೆ ಸರ್ವಭಕ್ತ ಪೋಷಕನೆ 9 ಗಂಗೆ ಯಮುನೆ ಗೋದಾ ತುಂಗೆ ಜಲವ ತಂದಿಹೆ ಅ-ನಂಗ ಜನಕ ಮಾಡೋ ಅಭ್ಯಂಗ ಸ್ನಾನ 10 ನಿರಿಗೆಗಳನೆ ಹಾಕಿ ಜರದ ಪೀತಾಂಬರ ಗ-ರುಡವಾಹನ ನೀನು ಧರಿಸು ಮಧ್ಯದಲಿ 11 ಹಾರ ಕಿರೀಟ ಕಾಂಚಿ ನೀರ ನೂಪುರ ಸು-ಕೇಯೂರ ನೂಪುರನೀವೆ ಧಾರುಣಿಪತಿಗೆ 12 ಸ್ವರ್ಣ ರಚಿಸಿದ ಸೂತ್ರವನು ಕೊಡುವೆ ಲಕ್ಷ್ಮೀರನ್ನ ಸೌರಭ ಗಂಧವನು ಸ್ವೀಕರಿಸು 13 ವಾಸುದೇವನೆ ದಿವ್ಯ ನಾಸಿಕೇಂದ್ರಿಯದಿಂದಈಸು ಧೂಪದ ಗಂಧ ವಾಸನೆ ಗ್ರಹಿಸೋ 14 ಮರುಗು ಮಲ್ಲಿಗೆ ಜಾಜಿ ಸುರಗಿ ಸೇವಂತಿಗೆಸುಮಗಳ ಪರಿಮಳ ಧರಿಸೋ ಮಧ್ಯದಲಿ 15 ಹತ್ತು ಅಂಗಗಳಿಂದ ಉತ್ತಮ ಸುಧೂಪವಎತ್ತುವೆ ನಿನಗೆ ಸರ್ವೋತ್ತಮ ಹರಿಗೆ16 ಆಕಳ ಘೃತದ ಅನೇಕ ದೀಪಗಳ್ಹಚ್ಚಿಶ್ರೀಕರ ತವ ಮುಖಾವಲೋಕಿಸುತ್ತಿಹೆನು 17 ಏಕಾರತಿ ಗೋಪಿಪ್ರೀತನೆ ಬೆಳಗುವೆನಾಕ ನಾಯಕ ಸುರಲೋಕ ಸೇವಿತನೆ 18 ಆರು ವಿಧದ ಅನ್ನ ಸಾರು ಪಾಯಸ ಭಕ್ಷ್ಯಭೂರಿ ಶಾಕಗಳೀವೆ ನೀರಜಾಂಬಕನೆ 19 ಮಾರಜನಕನೆ ಮುತ್ತಿನಾರತಿ ಬೆಳಗುವೆಶ್ರೀರಾಮನೆ ನಿನ್ನ ಮೋರೆಯ ತೋರೊ20 ಛತ್ರ ಚಾಮರ ವ್ಯಜನ ದರ್ಪಣ ಪರ್ಯಂಕಕರ್ಪುರ ತಾಂಬೂಲವಿತ್ತು ಪೂಜಿಸುವೆ 21 ಹತ್ತಾರು ಉಪಚಾರ ಚಿತ್ರ ಚರಿತನೆ ನಿನಗೆಅರ್ಥಿಯಲಿ ಕೊಡುವೆನು ಮುಕ್ತಿ ನೀಡೆನಗೆ 22 ಇಂದಿರೇಶನೆ ನಿನ್ನ ಮುಂದೆ ತುತಿಪನೆ ನಿಂತುನಂದಬಾಲನೆ ಕೃಪೆಯಿಂದ ನೋಡೆನ್ನ 23
--------------
ಇಂದಿರೇಶರು
ಮಾನವಿ ದಾಸರ | ನಿ ಸೇರೋಹೀನ ಮನುಜ ನಿನ್ನಘವನೆ ನೀಗುವ ಪ ಕೃತ ಯುಗದಲಿ ಹಿರಣ್ಯಜನೆನಿಸೀವಿತತ ಮಹಿಮ ಹರಿಯನೆ ಭಜಿಸೀ ||ಸತತದಿ ಸುಜನರ ಸಂತವಿಸಿ ಸಿರಿಪತಿಯ ಸೇವಿಸೆ ಸಹ್ಲಾದ ನೆನಿಸಿದಾ 1 ಎರಡೊಂದ್ಯು ಯುಗದಲಿ ಶಲ್ಯನಾಗಿ ಜನಿಸೀಕುರುಪಗೆ ಋಣರೂಪ ಸೇವೆ ಸಲಿಸಿ ||ಉರುತರ ಭಕುತಿಲಿ ಶೌರಿಯ ನೆನೆಯುತಹರಿಪದ ಸೇರಿದ ನೃಪಕುಲ ಮೌಳೀ 2 ವರಕಲಿಯಲಿ ದ್ವಿಜನಾಗವತರಿಸೀನರಮೃಗಾಖ್ಯಸುತ ಶ್ರೀನಿವಾಸನೆನಿಸೀ ||ವರದೇಂದ್ರ ಯತಿಯಲಿ ತರ್ಕವ ಕಲಿತುದುರುಳರ ಮುರಿದತಿ ಗರ್ವದಿ ಮೆರೆದಾ 3 ಭೃಗ್ವಂಶಜ ವಿಜಯಾಖ್ಯ ದಾಸ ಬಂಧೂಋಗ್ವಿನುತನ ಪ್ರಾಕೃತದೊಳು ಪಾಡೆ ||ದಿಗ್ಗಜ ಗರ್ವದಿ ಗೆಜ್ಜೆಯ ಕಟ್ಟಿದಅಗ್ಗದ ನಟನಿವನೆನುತಲಿ ಜರೆದಾ 4 ದಾಸರ ನಿಂದ್ಯದಿ ಬಂದುದು ಅಪಮೃತ್ಯುದೋಷನೀಗೆ ಗೋಪಾಲರ ಭಜಿಸೆನ್ನ ||ಔಷಧ ಪೇಳಲು ದಾಸರ ನಾಲ್ದಶವರ್ಷಾಯುಷ್ಯವ ಪೊಂದಿದವರನಾ5 ಇಂದು ಭಾಗದಲಾನಂದದಿ ಮೀಯೇಬಂದೊದಗಿತು ಜಗನ್ನಾಥ ನಾಮಾ ||ಪೊಂದುತ ಅಂಕಿತ ಕುಣಿಯುತ ಪಾಡುತಇಂದಿರೆಯರಸನ ಛಂದದಿ ತುತಿಸಿದ 6 ಪಾವನತರ ಹರಿಕಥೆ ಸುಧೆ ರಚಿಸೀಪವನ ಮತದವರನ್ನುತ್ತರಿಸೀ ||ಪವನನ ಹೃತ್ಕಂಜದಿ ನೆಲೆಸಿಹ ಗುರುಗೋವಿಂದ ವಿಠಲ ಪದಾಬ್ಜವ ಸೇರಿದ 7
--------------
ಗುರುಗೋವಿಂದವಿಠಲರು
ಮಾನಿನಿ ಕಾಂತೆ ಪ. ಕಾಂತ ಕೃಷ್ಣರಾಯ ನಮಗೆ ಚಿಂತಾಮಣಿಯಂತೆ ಕೊಡುವ ಚಿಂತಾಮಣಿಯಂತೆ ಅನಂತ ಸುಖವಿತ್ತುಭಕ್ತರ ಸಂತೈಸುವನಂತೆ1 ಅಕ್ಷಯ ಸುಖವಿತ್ತು ಭಕ್ತರ ಸಂತೈಸುವನಂತೆ2 ಮುಂದು ಸಂಚಿತಗಾಮಿಯುಹಿಂದಾದುವಂತೆನಮಗೆ ಹಿಂದಾದುವಂತೆ ತಂದೆ ರಾಮೇಶನ ಪಾದಕ್ಕೆ ಹೊಂದಿವೆÉಯಂತೆ3
--------------
ಗಲಗಲಿಅವ್ವನವರು
ಮಾನಿನಿ ಕಾಂತೆ ಶ್ರೀನಿವಾಸ ನಡೆದ ಕಾಮಧೇನುವಿನಂತೆ ಪ. ಲಕ್ಷುಮಿ ರಮಣ ನಮಗೆ ಕಲ್ಪವೃಕ್ಷತಾನಂತೆಅಕ್ಷಯ ಸುಖವಿತ್ತು ಭಕ್ತರ ರಕ್ಷಿಪೋನಂತೆ1 ಕಾಂತೆ ಕೃಷ್ಣರಾಯ ನಮಗೆ ಚಿಂತಾಮಣಿಯಂತೆಅನಂತ ಸುಖವ ವಿತ್ತು ಭಕ್ತರ ಸಂತೈಸುವನಂತೆ2 ಇಂದು ಸಂಚಿತಾಗಾಮಿಯು ಹಿಂದಾದುವಂತೆ ತಂದೆ ರಾಮೇಶನ ಪಾದಕೆ ಹೊಂದಿವೆಯಂತೆ 3
--------------
ಗಲಗಲಿಅವ್ವನವರು
ಮಾನಿನೀ ವ್ರತಹರಣ ದೀನರಕ್ಷಣ ನಿಪುಣ ದಾನವ ಕುಲಾಹನನ ವಸನಹೀನ ತ್ರಿಪುರಾರಿ ವಂದಿತ ತಪ್ತಹೇಮಸುಗಾತ್ರ ಸುಪವಿತ್ರ ಸುಚರಿತ ಭೇದರಹಿತ ನಿತ್ಯ ನಿಷ್ಕಲ್ಮಷ ಸತ್ವಮಯ ಸ್ವರೂಪ ಬುದ್ಧರೂಪ ಆನಂದಪರಿಪೂರ್ಣ ಅಬ್ಜಪತ್ರೇಕ್ಷಣ ಆದ್ಯಂತಕಾರಣ ಅಪಾರಮಹಿಮ ಭೂತದಯಾಪರ ಧರ್ಮಸಾರ ಪೂತ ಸದ್ಗುಣಲಸಿತ ದುರಿತದೂರ ಧಾತ ಸುಕವಿಜನ ಚೈತನ್ಯದಾತ ಖ್ಯಾತ ಶೇಷಾದ್ರಿವರ ಪಾಹಿಸುಕÀರ
--------------
ನಂಜನಗೂಡು ತಿರುಮಲಾಂಬಾ