ಒಟ್ಟು 1818 ಕಡೆಗಳಲ್ಲಿ , 104 ದಾಸರು , 1321 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ತುಳಸಿ ಇಂದಿರೆ ವಂದೆ ಆನಂದೀ ತುಳಸೀದೇವಿ ನಂಬಿದೆ ಸುರಸುಂದರಿ ಪ ಎಂದೆಂದಿಗೂ ನಾ ನಿನ್ನಧೀನವೆ ಮಾತೆ ಸಿಂಧುಶಯನ ಪ್ರಿಯೆ ವರದೆ ಆನಂದದೆ ಅ.ಪ ಆದಿಕಾರಣ ವಿಷ್ಣು ಪ್ರಿಯಳೆ ಶ್ಯಾಮಲೆ ಕೋಮಲೆ ವಿಧಿಶರ್ವವಂದಿತೆ ವಿದ್ಯಾಧರಾದಿ ಅರ್ಚಿತೆ ಆದರದಲಿ ನಿನ್ನ ಪಾದಪಂಕಜಗಳ ಪ್ರತಿದಿನ ಸ್ಮರಿಪೆನೆ ವೃಂದಾವನಸ್ಥಿತೆ ತುಳಸಿ ಸುರೇಶ್ವರಿ1 ಈರಾರು ಅಕ್ಷರ ಮಂತ್ರ ಸುಪ್ರತಿಪಾದ್ಯೆ ನಾರದನುತೆ ನಾರಾಯಣ ಮನಃಪ್ರಿಯಳೆ ಪಾತಕ ಬಹು ಪಾಪಹಾರಿಣಿ ನಿನ್ನ ಎನ್ನ ವರದೆ ತುಳಸೀದೇವಿ 2 ನಿನ್ನ ಸ್ಮರಣೆ ಮಾಡೆ ಸರ್ವತ್ರ ವಿಜಯವಹುದೆ ನಿನ್ನ ಸಂದರ್ಶನದಿ ಸರ್ವಪಾಪವು ಪೋಪುವೆ ಪಾತಕ ತಾಪಾದಿ 1 ಗಳಳಿಯೆ ಘನ್ನ ಪ್ರಸನ್ನ ಶ್ರೀನಿವಾಸನ ನಿಜಸತಿ ವಿರಜೆ ತುಳಸೀಮಾತೆ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ದೇವರ ಸ್ತೋತ್ರ ಪಾಹಿ ಪಂಢರಿರಾಯಾ | ಮಾಂ |ಪಾಹಿ ಪಾಂಡವ ಪ್ರೀಯಾ ಪ ಹಿಂದೆ ನಾನು ನಿನ್ನಾ | ದರುಶನ |ಕೆಂದು ಬಂದು ಘನ್ನಾ ||ನಂದದಿ ನಿಂದವನಾ | ರಕ್ಕಿಸಿಮುಂದೆ ನಲಿದೆ ಚೆನ್ನಾ 1 ಅಷ್ಟೆ ಮಾತ್ರ ಸಾಕು | ದುರಿತಗ |ಳಟ್ಟಿ ಕಾಯಬೇಕು ||ಮಟ್ಟು ಮಾಡಬೇಕು | ವಿಷಯಗ |ಳಟ್ಟಿ ಹಾಕಿ- ನೂಕು 2 ಮರುತ ಮತದೊಳಿಟ್ಟು | ನಿನ್ನನು |ಸ್ಮರಿಪ ಭಾಗ್ಯಕೊಟ್ಟು ||ಗುರು ಪ್ರಾಣೇಶ ವಿಠಲ | ನಿನ್ನವನೆಂದುಕರ ಪಿಡಿದು ಕರೆಯೋ 3
--------------
ಗುರುಪ್ರಾಣೇಶವಿಠಲರು
ಶ್ರೀ ಧನ್ವಂತ್ರಿ ಸ್ತೋತ್ರ(ನಾರಾಯಣಾಚ್ಯುತ ವಿಠಲ ದಾಸಿಗಾಗಿ) ಕಾರುಣ್ಯ ನಿಧಿ ತವಾ | ಪಾರ ಮಹಿಮೆಯ ಕೇಳಿಸಾರಿದೆನೊ ಪಾದಾಬ್ಜ ಶರಣೆಂದು | ಶರಣೆಂದೆಶ್ರುನಾಥಪಾರು ಮಾಡಾಕೆಯ ವೃಜಿನವ 1 ಆಂತ್ರಕೆಟ್ಟಿಹುದೆಂದು | ತಾಂತ್ರಿಕರು ಪೇಳುವರುಆಂತ್ರ ಸರಿಮಾಡುವ ಕಾರ್ಯವ | ಕಾರ್ಯನಿರ್ವಹಿಸಿ ಸ್ವಾ-ತಂತ್ರ ಪುರುಷಾ ದಯತೋರೋ 2 ಪಾದ ಭಜಿಸೂವ | ಭಜಿಸೂವ ದಾಸಿಗೆಈ ರೀತಿ ಭವಣ್ಯಾಕೊ ಧನ್ವಂತ್ರಿ 3 ಆರೋಗ್ಯ ಆಯುಷ್ಯ | ಆರಾಧಕರ್ಗೀವೆಈರನುತ ಧನ್ವಂತ್ರಿ ಕರುಣಾಳು | ಕರುಣಾಳು ಸರ್ವಜ್ಞಆರೋಗ್ಯ ದಾಸಿಗೆ ಕೊಡು ಎಂಬೆ4 ಧಂ ಎಂದು ಉಚ್ಛರಿಸೆ | ಧ್ವಂಸ ಮಾಡುವೆ ರೋಗಧನಂತ್ರಿಯೆನ್ನೆ ಭವರೋಗ | ಭವರೋಗ ವಾರಿಸುವಧನ್ವಂತ್ರಿ ರೂಪಿ ನಮೊ ಎಂಬೆ 5 ಕರದಲ್ಲಿ ಸುಧೆ ಕಲಶ | ಧರಿಸಿರುವ ಬಗೆಯೇನೊಶರಣರ್ಗೆ ಸುಧೆಯಾನುಣಿಸುತ್ತ | ಉಣಿಸುತ್ತಲಮರತ್ವಕರುಣಿಸುವಿ ಎಂದೂ ಶ್ರುತಿ ಸಿದ್ಧ 6 ಇಂತಿರಲು ದಾಸಿಸ | ತ್ಪಂಥಗಳನ್ನುದ್ದರಿಸೊಅಂತು ತವ ಚರಣಾಬ್ಜ ಬೇಡುವೆ | ಬೇಡುವೆನೋಪಾದಾಕ್ರಾಂತಳಿಗೆ ಸುಧೆಯಾ ನೂಣೀಸೊ7 ಚಂದ್ರ ನಿವಹದ ಕಾಂತಿ | ಯಿಂದಮೃತ ಕಿರಣದಿಂಹೊಂದ್ಯಮಿತ ಸುಖರೂಪಿ ಉಲ್ಲಾಸವೀವುತ್ತಚಂದುಳ್ಳ ಸುಧೆ ಕಲಶ ಪಿಡಿಯುತ್ತ 8 ಆತು ಜ್ಞಾನಾಂಕವನು | ಆತ್ಮಸ್ಥಶೀತಾಂಶುಧೌತ ಮಂಡಲಗ ಲಕ್ಷ್ಮೀಶ | ಲಕ್ಷ್ಮೀಶ ಹರಿಯನ್ನುಮಾತು ಮಾತಿಗೆ ನಾನು ಸ್ಮರಿಸೂವೆ 9 ಉತ್ತಮಾಂಗದಲಿರುವ | ಹತ್ತೆರಡು ದಳ ಕಮಲಪ್ರಸ್ಥಿತನು ಧನ್ವಂತ್ರಿ ಮಕರಂದ | ಮಕರಂದ ಸ್ರವಿಸುವನಭಕ್ತಿಯಲಿ ಸ್ಮರಿಸೋದು ರೋಗಾರ್ತೆ 10 ಕಮಲ ಹೃದಯಸ್ಥ 11 ಸದನ ಷಟ್ದಳ ಕಮಲಗುದವು ಮೂಲಾಧಾರಾನಾಲ್ದಳವುನಾಲ್ದಳ ಕಮಲಸ್ಥಬದಿಗನು ಧನ್ವಂತ್ರಿ ರೂಪೀಯು 12 ರೂಪೀ ಈ ದೇಹವನು | ವ್ಯಾಪಿಸುತ ತಾನಿದ್ದುಕಾಪಾಡಲೋಸುಕದಿ ಮಕರಂದ | ಮಕರಂದ ಸುರಿಸುವವ್ಯಾಪಾರದಿಂ ಜೀವರುದ್ಧಾರ 13 ಹತ್ತಿರುವ ಅಜ್ಞಾನ | ವತ್ತಿಬಹ ಭಯದುಃಖಮತ್ತೆ ಮಹವಿಷವು ಇದರಿಂದ | ಇದರಿಂದ ಪರಿಹಾರ ಭಕ್ತಿಯಿಂ ಭಜಿಸೇ - ಸುಖ ಸೌಖ್ಯ 14 ಶರಣರ್ಗೆ ತಪ್ಪದೆಲೆ | ಗೆರೆವೆ ಸೌಖ್ಯಂಗಳನುಗುರು ಗೋವಿಂದ ವಿಠಲಾ | ವಿಠ್ಠಲ ಧನ್ವಂತ್ರಿಮರುತಾಂತರಾತ್ಮಾ ಸಲಹಯ್ಯ15
--------------
ಗುರುಗೋವಿಂದವಿಠಲರು
ಶ್ರೀ ನರಸಿಂಹ ಮಂತ್ರ ಜಯ ಜಯ ಜಯ ನರಸಿಂಹ ಜಯ ಜಯ ಮಹಾಲಕ್ಷ್ಮೀರಮಣ ಜಯ ನಿರಾಮಯ ಸರ್ವೋತ್ಕøಷ್ಟ ಆಹ ಜಯ ಕಮಲಜ ಮೃಡಾದ್ಯಮರವಂದ್ಯನೆ ನಮೋ ಭಯಬಂಧಹರ ಭಕ್ತ ಜನರ ರಕ್ಷಕ ಸ್ವಾಮಿ ಪ ಅರದೂರ ಗುಣಪರಿಪೂರ್ಣ ಉಗ್ರವೀರನೆ ಮಹಾವಿಷ್ಣು ಉರುಕಾಂತಿ ಸರ್ವತೋಮುಖನೆ ಆಹ ನರಸಿಂಹ ಭಯಕರಾಶ್ರಿತಜನರ ರಕ್ಷಕ ಶರಣಾದೆ ನಿನಗೆ ನಾ ಮೃತ್ಯುಮಾರಕ ನಮೋ 1 ಸೃಷ್ಟಾ ಪಾತಾ ಅತ್ತ ತ್ರಾತಾ ದುಷ್ಟ ದೈತ್ಯರಿಗತಿ ಕ್ರೂರ ಶ್ರೇಷ್ಠ ಅಸಮಬಲರೂಪ ಆಹ ಇಷ್ಟಭಕ್ತನ ಕಾಯೆ ಕಂಬದಿಂದಲಿ ಬಂದು ತ್ಕøಷ್ಟ ಪ್ರಜ್ವಲಿಪ ನಖದಿ ಸೀಳ್ದೆ ಭ್ರಷ್ಟನ 2 ವಿಶ್ವಸ್ಥ ಬಹಿರಂತವ್ರ್ಯಾಪ್ತ ವಿಶ್ವ ವಿಷ್ಣು ವಷಟ್ಕಾರ ಸರ್ವಜ್ಞ ನಿರ್ದೋಷ ಸುಗುಣಿ ಆಹ ಅಮಿತ ಸಕಾಂತಿಯಿಂ ಜ್ವಲಿಸುವೆ ವಿಶ್ವತೋಮುಖ ಸರ್ವಸಾಕ್ಷಿಸ್ವತಂತ್ರ 3 ನರನಲ್ಲ ನರರೂಪಧಾರಿ ನೀ ಮೃಗವಲ್ಲವು ಸಿಂಹವದ್ರೂವ ನರಮೃಗಗಳಲಿ ನೀ ಸಮನು ಆಹ ಧರೆ ದಿವಿ ಪಾತಾಳ ಜಂತು ಸರ್ವಾಂತಸ್ಥ ಉರು ಜ್ಞಾನ ಬಲರೂಪ ಅನಂತ ನೀ ಏಕ 4 ನ ಎಂದರೆ ಸರ್ವವಂದ್ಯ ರ ಎಂದರೆ ಸುಖ ಜ್ಞಾನ ಸಿಂ ಎಂದರೆ ಗುಣಸಾರ ಆಹ ಇಂದಿರಾಪತಿ ಮಹದೈಶ್ವರ ರೂಪನು ಹ ಎಂದರೆ ನೀನು ಪೂರ್ಣ ನಿರ್ದೋಷ 5 ಭೂತಾದಿ ದುಷ್ಟ ಗ್ರಹಗಳ ಖದ್ರೂಜಾದಿ ಸರ್ವ ವಿಷವ ನೀ ದಯದಿ ಪರಿಹರಿಪೆ ಆಹ ಭಕ್ತ ಜನರಿಗೆ ನೀ ಶುಭವಿತ್ತು ಅಕಾಲ ಮೃತ್ಯುವ ತರಿವ ರಕ್ಷಕ ನಮೋ ಎಂಬೆ 6 ದ್ವಾತ್ರಿಂಶ ಚತುರ್ವಿಂಶಾಕ್ಷರದ ಮಂತ್ರ ಗಾಯತ್ರಿ ಪ್ರತಿಪಾದ್ಯ ವೃತತಿಜಾಸನ ಮಂತ್ರ ಋಷಿಯು ಆಹ ಅಧಿಕಾರಿಗಳು ಇದನು ಶ್ರವಣ ಪಠಣ ಮಾಡೆ ಭೀತಿ ಮೋಹವÀ ಬಿಡಿಸಿ ನಿಖಿಳೇಷ್ಟವೀವೆ 7 ಜಯ ಜಯ ನರಸಿಂಹಸ್ವಾಮಿ ಜಯ ಜಯ ಸರ್ವಜ್ಞ ಭೂಮನ್ ಜಯ ಮಹಾ ತೇಜೋಬಲವೀರ್ಯ ಆಹ ಜಯ ಪುರುಷೋತ್ತಮ ವೇಧಾದಿ ಸುರರಿಂದ ಇಜ್ಯಪೂಜ್ಯನು ದೃಢಭಕ್ತಿಯಿಂ ಮುದದಿ 8 ನಾರ ಉರು ಗುಣಸಿಂಧು ನರಸಿಂಹ ಸುಪ್ರೀತನಾಗೊ ಚಿರಜ್ಞಾನ ಭಕ್ತಿಯ ಸತತ ಆಹ ಪರಮರಿಲ್ಲದ ಬಲಿ ನಿನ್ನಲಿ ಧ್ಯಾನ ತೀವ್ರ ಪ್ರೇರಿಸು ಎನಗೆ ಅನಂತ ಅನುತ್ತಮ 9 ಪ್ರೋದ್ಯಾರ್ಕನಿಭ ದೀಪ್ತವಾದ ವರ್ತುಲ ಉರು ನೇತ್ರತ್ರಯವು ಹಸ್ತದ್ವಯವು ಜಾನುವರೆಗೂ ಆಹ ಸುದರ್ಶನಿ ಶಂಖಿ ಮಹಾಲಕ್ಷಿಯುತ ಕೋಟಿ ಆದಿತ್ಯಾಧಿಕತೇಜ ಉತ್ಕøಷ್ಟ ಶಕ್ತ 10 ಕಮಠ ಕ್ರೋಡ ನೃಹರಿ ಮಾಣವ ಪರಶ್ವಿ ಸುಧನ್ವಿ ಬುದ್ಧ ಕಲ್ಕಿ ಶರಣ ಆಹ ವನರುಹನ ತಾತ ಪ್ರಸನ್ನ ಶ್ರೀನಿವಾಸ ಅನಿಷ್ಟಹ ಇಷ್ಟದ ಎನಗೆ ದಯವಾಗೊ 11
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ನೀಲಕಂಠ ಮಹಾದೇವ ಶ್ರೀನೀಲಕಂಠ ಪ ಶ್ರೀ ನೀಲಕಂಠ ಪಾವನಶೀಲ ಪರಮೇಶ ಫಾಲಾಕ್ಷ ಫಣಿಭೂಷ ಪರಮ ಮಂಗಳಮೂರ್ತೆ ಅ.ಪ ಸರ್ವಜ್ಞ ಸರ್ಬೇಶ ಶರ್ವ ಸದಾನಂದ ಸರ್ವವಂದಿತಪಾದ ಸದಸತ್ಪರಾಧಾರ 1 ವಾಹನ ವಿಷಮ ವರ್ಜಿತ ದೇವ ಝಷಕೇತನಾರ್ದನ ಜಯ ಭಕ್ತವತ್ಸಲ 2 ವಿಶ್ವೇಶ ವಿಶ್ವಾಧಾರಕ ವಿಶ್ವಕಾರಣ ವಿಶ್ವ ವಿಶ್ವಾತ್ಮಕ ವಿಜಿತಪುರತ್ರಯ 3 ವರದೇಶ ವರದವರೇಣ್ಯ ಉಮಾಧವ ಶರಣಾಗತಜನಭರಣ ಸುರದ್ರುಮ 4 ಭವ ತಿರುಪತಿ ಕ್ಷೇತ್ರ ಸ್ಥಿತ ಶ್ರೀ ವೆಂಕಟಮಿತ್ರಾಭವ ಕಕುದ್ಗಿರಿವಾಸ ಶಿವ ಗಂಗಾಧರ ಲಿಂಗ 5
--------------
ತಿಮ್ಮಪ್ಪದಾಸರು
ಶ್ರೀ ಪತಿಯೆ ನಿನ್ನ ದಯವೆಂತಾಹದೋ ಪಾಪಕರ್ಮವ ಮಾಡಿ ಜೀವಿಸುವೆ ನಿರುತ ಪ ಬಾಲತನವನು ಬಾಲಲೀಲೆಯಿಂದಲಿ ಕಳೆದೆ ಕೀಳು ಜನರೊಡನೆ ಸ್ನೇಹವ ಬೆರಸಿದೆ ಹಾಳು ಹರಟೆಗೆ ಹೊತ್ತು ಸಾಲದೋಯಿತು ಯನಗೆ ಶ್ರೀ ಲೋಲ ನಿನ್ನಡಿಗೆ ದೂರಾದೆ ನಾನು 1 ಬುದ್ಧಿ ಪೂರ್ವಕದಿ ಸದ್ವಿದ್ಯೆಯನು ಕಲಿಯದಲೆ ಶುದ್ಧ ತಾಮಸ ವಿದ್ಯದೊಳು ರಮಿಸಿದೆ ಮಧ್ವಶಾಸ್ತ್ರದಸಾರವನ್ನು ತಿಳಿಯದೆ ನಾನು ಕದ್ದಕಳ್ಳನ ತೆರದಿ ಬಾಳಿದೆನು ಬರಿದೆ 2 ಪ್ರಾಯತನವೆ ವಿಷ ಪ್ರಾಯವಾಯಿತು ಎನಗೆ ಕಾಯಜನ ಉಪಟಳದಿ ಮತ್ತನಾದೆ ತೋಯಜಾಕ್ಷಿಯರ ದುರ್ಮಾಯ ಜಾಲಕೆ ಸಿಲುಕಿ ನೋಯಿಸಿದೆ ನಿಜ ಸತಿಯ ಪರಿಪರಿಯಲಿಂದ 3 ಮದನ ಜನಕನೆ ನಿನ್ನ ಮಧುರನಾಮವ ಮರೆದು ಸುದತಿಯರ ಅಧರಾಮೃತಕೆ ಬೆರೆದು ವಿಧಿಕುಲಾಚರಣೆ ಜರೆದ್ಹÀÀಗಲಿರುಳು ನಾರಿಯರ ವದನವನು ನೋಡಿ ಮೋದಿಪನರಾಧಮನೊಳ್ 4 ಉದರ ಗೋಸುಗ ಪರರ ಹೃದಯ ದ್ರವಿಸುವ ತೆರದಿ ವಿಧ - ವಿಧದಿ, ಆತ್ಮ ಸ್ತೊತ್ರವನೆ ಪೊಗಳಿ ಸದ-ಸದ್ವಿ ವೇಕವನು ತೊರೆದನ್ಯರ್ಹಳಿದು ಬಲು ಚದುರ ನಾನೆಂಧೇಳಿ ಮೋಸಗೊಳಿಸುತ ಜನರ 5 ಸಿರಿ ಚರಣಕ್ಕೆ ಶಿರ ಬಾಗ ದ್ಹರಿ ಭಕುತರಿಗೆ ವಿನಯದಿಂದೆರಗದೆ ನಿರುತದಲಿ ನಾಚಿಕಿಲ್ಲದಲೆ ಭೂದನುಜಯ ವಾನರಿಗೆ ಕರಮುಗಿದು ಜೀವಿಪÀಖೂಳ ಮನುಜನೊಳು 6 ಸತ್ಯಧರ್ಮವÀ ತ್ಯಜಿಸಿ ಮತ್ತೆಯುತ್ತಮರಜಾ - ನ್ನತ್ಯವನು ಸಹಿಸದಲೆ ತತ್ತಳಿಸುವೆ ಪೆತ್ತವರ ಸೇವಿಸದೇ ಮಿಥ್ಯವನೆ ಬೊಗಳಿದು - ಷ್ಕøತ್ಯದಿಂಬಾಳ್ವ ಉನ್ಮತ್ತನರ ಪಶುವಿನೊಳು 7 ಹರಿಗೆರಗದಿರುವÀÀ ಶಿರ ಹರಿಯ ಸ್ಮರಿಸದ ಜಿಂಹೆ ಹರಿವಾರ್ತೆಯಾಲಿಸದ ಕರ್ಣಂಗಳು ಕರ ಹರಿಯ ನೋಡದ ಚಕ್ಷು ಸರುವ ಪರಿಯ ಪವಿತ್ರದೇಹಧರಿಸಿದ ನರಗೆ 8 ವಿತ್ತ ಪಹರಿಸಿ ಪರರ ನಿಂದಿಸಿ ಪರರ ಬಲುವಂಚಿಸಿ ಪರಮೇಷ್ಟಿ ಜನಕನೆ ಪರತರ ಪರಂಜ್ಯೋತಿ ಪರದೈವನೆಂದರಿಯದಿರುವ ಪಾಮರನಿಗೆ 9 ನಾಮಾಡದಿಹ ಪಾಪ ವೀಮಹಿಯೊಳೊಂದಿಲ್ಲ ಸೀಮೆಗಾಣಲು ರವಿಜನಿಗೆ ಸಾಧ್ಯವಿಲ್ಲ ಆ ಮಹಾನರಕÀಂಗಳೆನಗೆÀ ತಕ್ಕವು ಅಲ್ಲ ಸ್ವಾಮಿ ನೀಪೊರೆಯದಿರೆ ಯನಗಾರು ಗತಿಯಿಲ್ಲ 10 ಏನಾದರೊಳಿತೆ ವರದೇಶ ವಿಠಲ ನಿನ್ನಾ ಙÁ್ಞನುಸಾರದಿ ಕರ್ಮಗಳ ಮಾಡಿದೆ ಧೀನರಕ್ಷಕನೆಂಬ ಬಿರಿದು ನಿಜ ವಿದ್ದರಾ - ದೀನನಾದವನನುದ್ಧರಿಸಲರಿಯಾ 11
--------------
ವರದೇಶವಿಠಲ
ಶ್ರೀ ಪಾದವಲ್ಲಭಾ ದೇವಾ ಗುರುನಾಥಾ ದತ್ತರಾಜಾ ವರಗಾಣ ಪುರಾಧೀಶಾ ಅವದೂತಾ ದತ್ತರಾಜಾ ತ್ರಿಗುಣಾತ್ಮಕಾ ಘನಮಹಿಮಾ ತ್ರಿಗುಣಾತೀತ ಭೂಮಾ ಅಘನಾಶ ಪೂರ್ಣಕಾಮಾ ಜಗದೀಶ ಸೌಖ್ಯಧಾಮಾ ಬಗೆಹರಿಸೈ ಮೋಹಮಾಯಾ ಭಗವಂತ ನೀ ಗುರುರಾಯಾ ವೈರಾಗ್ಯ ಶಾಂತಿ ಸುಖವಾ ಪರಮಾರ್ಥಜ್ಞಾನದರಿವಾ ಗುರುಪಾದಸೇವೆ ಗೈವಾ ವರಭಾಗ್ಯ ನೀಡು ದೇವಾ ಪರಿಹರಿಸೈ ವಿಷಯಚಿಂತಾ ಪ0ರಮಾತ್ಮ ಸದ್ಗುರುನಾಥಾ ಘನ ನಿರ್ವಿಕಲ್ಪರೂಪಾ ನೀನೆನ್ನ ಸ್ವಾತ್ಮಾರೂಪಾ ಮನವಾಣಿ ಮೀರ್ದ ರೂಪಾ ಆನಂದ ಬ್ರಹ್ಮರೂಪಾ ಕನಸೈ ಈ ಜಗವು ನಿನ್ನೋಳ್ ಗುರುರಾಜ ಶಂಕರಾರೂಪಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಶ್ರೀ ಪುರುಷೋತ್ತಮವಿಲಾಸ 62-2 ಆನಂದ ಜ್ಞಾನಮಯ ಅಖಿಲ ಗುಣ ಪರಿಪೂರ್ಣ || ಅನಘ ಲಕ್ಷ್ಮೀರಮಣ ಶರಣು ಜಗದೀಶ ಪ ವನಜಾಸನಾದಿ ಸುರರಿಂದ ಆರಾಧಿತನೇ | ವನಜಜಾಂಡದಿ ಜಗಜ್ಜನ್ಮಾದಿಪತೇ ಅಪ ಅಮಿತ ಅನಂತ ಗುಣಕ್ರಿಯಾರೂಪ ಅನಂತ ಶೀರ್ಷಾನಂತ ಉರುಸುಗುಣಪೂರ್ಣ|| ಅನಂತಾಕ್ಷ ಸರ್ವಜ್ಞ ಸಾಕ್ಷಿ ಸರ್ವಾಧ್ಯಕ್ಷ || ಅನಂತಪಾದನು ಅನಂತರೂಪಸರ್ವಸ್ಥ 1 ಸಹಸ್ರಪಾತ್ ಸತ್ಯಂ ಸತ್‍ಸೃಷ್ಟಿ ಜೀವನದ ಸಹಸ್ರಾಕ್ಷಜ್ಞಾನಂ ಎರಡು ವಿಧಜ್ಞಾನ || ಸಹಸ್ರಶೀರ್ಷಾನಂತಂ ಆನಂದ ಆನಂದ ಮಹಾಮಹಿಮ ಪೂರ್ಣಗುಣ ಪುರುಷನೀಬ್ರಹ್ಮ 2 ನಾಕಭೂಪಾತಾಳ ಜಗದಂತರ್ಬಹಿವ್ರ್ಯಾಪ್ತ || ಭಕುತರ ಸಮೀಪಸ್ಥ ಇತರರಿಗೆ ದೂರ || ಏಕಾತ್ಮ ಪರಮಾತ್ಮ ಪರಮ ಪುರುಷವಿಷ್ಣೋ ನೀಕಾಲಗುಣ ದೇಶಾಪರಿಶ್ಚಿನ್ನ ಭೂಮನ್ 3 ಪ್ರಕೃತಿಶಚವ್ಯಕ್ತ - ಮಹದಾದಿ ತತ್ವಂಗಳಿಗೇ | ಆಕಾಶ ಮೊದಲಾದ ಭೂತ ಪಂಚಕಕ್ಕೆ || ಸುಖಮಯನೇ ನೀಸರ್ವೆ ಚೇತನಾ ಚೇತನಕೆ | ಏಕ ಆಶ್ರಯ ಅನಂತ ಶೀರ್ಷಾಕ್ಷಪಾದ 4 ಪರಮೇಶ ಅವಿಕಾರ ಸಮರ್ಥ ಉರು ತೈಜಸಚ್ಛಕ್ತಿ ರೂಪವಷಟ್ಕಾರ ಪ್ರಕ್ರತಿ ಸರ್ವದಿ ನೀನು ಸ್ವೇಚ್ಛೆಯಿಂ ತುಂಬಿರುವಿ | ಪ್ರಕೃತಿ ಸರ್ವವು ನಿನ್ನಧೀನವೋ ಸ್ವಾಮಿ 5 ದ್ಯುಭ್ವಾದಿ ಜಗತ್ತಿಗೆ ಆಧಾರಾಧಿಷ್ಠಿತನು ದುಭ್ವಾದಿಗಳವ್ಯಾಪ್ಯ ವ್ಯಾಪಕನು ನೀನು ಸರ್ವಸ್ಥನಾಗಿ ನೀ ಸರ್ವವಶಿಯಾದುದರಿಂ ಸರ್ವನೀನೇಂದೆನಿಸಿಕೊಂಬಿಯೋ ಸ್ವಾಮಿ 6 ಆಧಾರ ಆಧೇಯೆ ಅನಂತಾಲ್ಪಶಕ್ತಿಯು ಅಧಿಷ್ಠಾನಾಷ್ಟಿತ ವ್ಯಾಪ್ಯ ವ್ಯಾಪಕವು ಭೇದ ಈರೀತಿಯಲಿ ಸುಸ್ಪಷ್ಟವಾಗಿದೆಯು ಇದಂಸರ್ವಂ ಉಕ್ತಿ ನಿನ್ ಸ್ವಾಮಿತ್ವ ಬೋಧಕವು 7 ಅಧೀನ ನಿನ್ನಲ್ಲಿ ಸ್ವಾಮಿ ಸರ್ವವಶಿಸರ್ವ | ಓದುನವು ಕರ್ಮಫಲಭುಂಜಿಪ ಸಂಸಾರಿಗಳು ಅದರಂತೆ ಮುಕ್ತರಸ್ವಾಮಿ ಆಶ್ರಯನು 8 ಇವು ಮಾತ್ರವೇ ನಿನ್ನ ಮಹಿಮೆಗಳು ಪರಮಾತ್ಮ || ಸರ್ವ ಈ ಚೇತನಾಚೇತನ ಪ್ರಪಂಚವು ಸರ್ವೇಶ ನಿನ್ನಂಶ ಸಹೃದಯ ಕಿಂಚಿತ್ತು 9 ಒಡೆಯನಿನ್ನಮಿತ ಶಕ್ತಿಯೊದಂಶದಲೆ ಜಡಜಗತ್ ಇರುವಿಕೆ ವಿಕಾರವುಸರ್ವ || ಜಡ ಭಿನ್ನರಲಿ ನಿನ್ನ ಸಾದೃಶ್ಯ ಅತಿ ಸ್ವಲ್ಪ ಪಾದ ವೊಂದಂ ಶೃತ ಸುಪಾದನು 10 ಅಧೀನತ್ವದಿಂಜಗತ್ ಇದಂಸರ್ವಂ ಎಂದಂತೆ - ಪಾದೋಸ್ಯ ವಿಶ್ವದಲಿ ಭಿನ್ನಾಂಶಜೇಯ || ಭಿನ್ನಜೀವರು ನಿನ್ನ ಪಾದರಾಗಿತಿಹರೋ ಚಿತ್ಚೇತ್ಯಯಂತ 11 ಪೂರ್ಣಗುಣನಿಧಿ ಅನಘ ಜನ್ಮಾದಿಕರ್ತಅಜ ಆವಣ್ನಯೋನಿತ ಪ್ರಾಪ್ಯ ಮಧ್ವಸ್ಥ ಶರಣು || ವನಜಭವಪಿತ ಶ್ರೀಶ ಪ್ರಸನ್ನ ಶ್ರೀನಿವಾಸ ನಮೋ ಪರಮ ಪುರಷ 12
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಹ್ಲಾದ ಚರಿತ್ರೆ ಅಧ್ಯಾಯ ಒಂದು ಪದ ಆದಿಯಲಿ ಲಕ್ಷ್ಮೀಸಹಿತ ಪ್ರಹ್ಲಾದವರದನ ಪಾದಕೊಂದಿಸಿ ಬೋಧನಿಧಿ ಮಧ್ವಾದಿ ಗುರುಗಳ ಪಾದಕೊಂದಿಸುತಾ ಕೇಳುವರ ಮನಕಾ ಲ್ಹಾದ ಕೊಡುತಿರುವಂಥ ಶ್ರೀ ಪಹ್ಲಾದ ಚರಿತವನು 1 ಸಹಿತಾಗಿ ಪರಮಾ ನಂದದಿಂದ ವಿಹಾರ ಮಾಡುತ ಚಂದದಿಂದಿರಲು ಬಂದರಾ ಕಾಲದಲಿ ಸನಕ ಸನಂದನಾದಿಗಳಲ್ಲೆ ಬೇಡೆಂ ತೆಂದು ಆ ಜಯವಿಜಯರವನು ಹಿಂದುಕೊತ್ತಿದರು 2 ಮೂರುಜನ್ಮದೊ ಳಸುರರಾಗಿರಿ ನೀವು ಹೀಗೆಂತೆಂದು ಶಾಪಿಸಲು ಅಸುರರಾಘ್ಯುಟ್ಟಿದರು ಶಾಪದಿ ಹುಸಿಯದಾಗದು ದೊಡ್ಡವರು ಕೋಪಿಸುತ ನುಡಿದದ್ದು 3 ದಿತಿಯ ಸುತರಾಗ್ಯವರು ಮುಂದಕೆ ಪ್ರಥಿತರಾದರು ದ್ವಿತೀಯ ಹಿರಣ್ಯಾಕ್ಷಾ ಪೃಥಿವಿಯನು ಮುಣುಗಿಸಿದ ಕಾರಣ ಅತಿರಭಸದಲೆ ಕೊಂದು ಮತ್ತಾ ಪೃಥಿವಿಯನು ತಂದಾ 4 ತನ್ನ ಅನುಜನ ನಾಶವನು ಕೇಳುತಲೆ ಮನದಲಿ ಕ್ಲೇಶವನು ಪಟ್ಟು ಶ್ರೀಸುರೇಶನ ಮೇಲೆ ಬಹಳಾಕ್ರೋಶದಿಂದಲೆ ನಡೆದ ತಪಸಿಗೆ ದೋಷ ರಹಿತಾನಂತಾದ್ರೀ±ನÀ ದ್ವೇಷಿತಾನಾಗಿ5 ವಚನ ಸುರರು ಆ ಸಂಧಾನ ಯುದ್ಧವ ಮಾಡಿ ಕೊಂದುಹಾಕಿದರು ಆ ಇಂದ್ರನಾ ಕಂಡು ಒಂದು ನೋಡದೆ ಪ್ರಾಣ ಒಂದು ಉಳಿದರೆ ಸಾಕು ಯೆಂದು ಓಡಿದರು 1 ಅಡಗಿರಲು ದೇವೇಂದ್ರ ಬಂದು ನಡತೆ ಕಂಡವನ ಬಿಡು ಬೇಗ ಈಕೆಯ ನಿಮಗೆ ಕೆಡಕು ಕೊಡುತೆಲ್ಲರ ಮುಂದೆ ನುಡಿದನಾ ರಾಜನ ಮಡದಿಗೀಪರಿಯು 2 ರಾಗ ಅಂಜಿಕೆಯ ಬಿಡಿಸುವೆನಮ್ಮಾ ಪ ಪುಟ್ಟುವನಮ್ಮಾ ಸಂದರ್ಭವನು ತಿಳಿಸುವೆನಮ್ಮಾ 1 ಸ್ಮರಿಸುವನು ಹರಿಗುಣಗಳಮ್ಮಾ ಗಭಯ ಕಾಣಮ್ಮಾ 2 ಅಭಯದಾನಂತಾದ್ರೀಶನ ಭಕ್ತನಮ್ಮಾ ನಿಶ್ಚಿಂತೆಯಿಂದಲಿ ನೀನಿರಮ್ಮಾ 3 ರಾಗ ಕೇಳಿ ಅರ್ಭಾಟವು ಗರ್ಭಿಣಿಯುದರದಲಿರುವಾ ನಡೆದರು ಅರ್ಭಕನಾ ಸ್ಮರಿಸಿ 1 ಕೊಟ್ಟು ತಂದೆಯ ಪರಿ ಮುಂದಾಕೆಯು ನಾರದನ ಬೇಡಿದಳು ವಂದಿಸಿ ವರಗಳನ್ನು2 ಭೋ ಮಹಾ ಮುನಿಯೇ ಮಾತನು ಕೇಳುತಲೆ ಆ ಮಹಾ ಮುನಿ ನಾರದನು ಪ್ರೇಮದಿ ನುಡಿದನು ಕೊಟ್ಟಕಾಮಿತ ವರಗಳನ್ನು 3 ನಿನಗಿನ್ನು ಪರತತ್ವವÀ ನೀ ಕೇಳಮ್ಮಾ ಹರಿಮಹಿಮೆಯ ಹರುಷವ ಕೊಡುತಿಹುದು 4 ಪರಿ ಗರ್ಭದಲಿ ಇರುವನೆ ವರದಾನಂತಾದ್ರೀಶನ ಸ್ಮರಿಸುತ ಪರಮೇಷ್ಠಿಯ ಸುತನು 5 ವಚನ ತಪವನು ಮಾಡಿ ಮನಸಿನೊಳಗಿಟ್ಟು ಪಾದದುಂಗುಷ್ಠವನು ನೆಟ್ಟನೆ ಮೇಲೆತ್ತಿ ಘಟ್ಯಾಗಿ ನಿಂತಾ 1 ಸುಡತಲೆ ಸಕಲ ಕಣವಿದು ಮುಚ್ಚಿತು ಅವನ ಭಯದಲಿ ತಮ್ಮ ಭವನ ಅವನ ಮುಂದು ಸುರಿದರು ಅವನ ಕಥೆಯಾ ಸಕಲ ಭುವನ ಪಾಲಕರೂ 2 ರಾಗ ಮೊರೆಯ ಕೇಳೋ ನೀನುಪ ಹಿರಣ್ಯ ಕಶಿಪು ಮೂಜಗ ಸಂಹರಿಸುವನಯ್ಯ ಅ.ಪ ದಿಟ್ಟ ಕೇಳವನ ವಿಶಿಷ್ಟ ಕಥೆಯ ಪಾದಾಂಗುಷ್ಟದಿಂದಲಿ ಭೂಮಿ ಮೆಟ್ಟಿನಿಂತಿ- ಮಂದರಾದ್ರಿಯಲ್ಲಿರುವಾ 1 ಉಪವಾಸದಿಂದುಗ್ರ ತಪಸಿ ಲೋಕಗಳನೆಲ್ಲ ಸುಡುವಾ 2 ರೋಷದಿ ಮಾಡುವಾ ದ್ಷೇಷ ನಮ್ಮಲ್ಲೆ ನಿತ್ಯದಲ್ಲೆ ನಿತ್ಯದಲ್ಲೆ ಅನಂತಾದ್ರೀಶನಲ್ಲೆ 3 ವಚನ ಮಾಡುವ ಚರ್ಯಾ ಹತ್ತಿತಾ ಹಂಸವನು ಸತ್ವರದಿ ಕಂಡು ನೆತ್ತಿಯಾ ಮೇಲಗ್ನಿ ಬೆಳದಿಹದಲ್ಲೆ ಸುತ್ತಲೆ ನುಡಿದನು ಬ್ರಹ್ಮದೈತ್ಯ ಗೀಪರಿಯ 1 ರಾಗ ಹಿರಣ್ಯ ಕಶಿಪು ಏಳು ಏಳು ಏಳು ಬೇಗನೇ ಪ ಮಾತು ನಿನ್ನ ಭಾಳ ತಪಸಿಗಾಗಿ ನಾನು ಭಾಳ ಮೆಚ್ಚಿದೆನೋ ಇನ್ನು ಅ.ಪ ಹೋದುವಯ್ಯಾ ಮತ್ತು ತಪಸಿ ನಲ್ಲಿ ನೀನು ಚಿತ್ತಮಾಡಬೇಡ ಬಿಟ್ಟು 1 ಕೊಡುವೆನು ವರಗಳನ್ನು ದಾನವೇಶ ಎನ್ನ ನೋಡು ಮೌನಬಿಟ್ಟು ಮಾತನಾಡು 2 ಬಲ್ಲಿದವನೋ ನೀನು ಬೇಡಿ ದ್ದೆಲ್ಲ ನಾನು ಕೊಡುವೆ ನಿನಗೆ 3 ವಚನ ಮನ್ನಿಸಿದನಾ ದೇಹವನ್ನು ಘನ್ನದಿವ್ಯೋದಕದಿ ಚೆನ್ನಾಗಿ ಘನ್ನ ದೈತ್ಯನು ಎದ್ದು ಮುನ್ನನತಿ ಸ್ತುತಿಮಾಡಿ ಹಿರಣ್ಯ ಕಶಿಪಿಂತು 1 ರಾಗ ಮರಣ ಬೇಡಾ ಧರೆಯೊಳು ನಿನ್ನಿಂದ್ಹುಟ್ಟಿರುವ ಪ್ರಾಣಿಗಳಿಂದ ಮರಣಬೇಡಾ 1 ಮರಣ ಬೇಡ ಇಳೆ ಯೊಳೆನಗಾಕಾಶದೊಳೆನಗೆ ಮತ್ತು ಮರಣ ಬೇಡಾ 2 ಮರಣ ಬೇಡಾ ಮೃಗಗಳೊಗ್ಹೆಚ್ಚಿನ ಮೃಗಗಳಿಂದಾದದರು ಮರಣ ಬೇಡಾ 3 ಮರಣಬೇಡಾ ನರರಿಂದ ವಿಷವುಳ್ಳ ಹರಿವ ಹಾವುಗಳಿಂದ ಮರಣ ಬೇಡಾ 4 ವಿಸ್ತಾರವಾದ ದೇ ವಾಸ್ತ್ರಗಳಿಂದಲಿ ಮರಣಬೇಡಾ 5 ಮರಣಬೇಡಾ ಅಂತಕ ನಾದ ಅನಂತಾದ್ರೀಶನ ಮುಂಚೆ ಸ್ಮರಣೆ ಬೇಡಾ 6 ರಾಗ ಹಾಗೆ ಆಗಲಿ ಎಂದು ಸಾಗಿದತಾನು ಆಗೆದ್ದು ಮದವೇರಿದ ನಾಗೇಂದ್ರನಂತೆ ಬೇಗ ಮನೆಯಲಿ ಬಂದಸಾಗಿ ದೈತ್ಯೇಂದ್ರಾ 1 ತಂದು ಒಪ್ಪಿಸಿದಾತಗೆ ಚಂದಾಗಿ ಮುನಿಯು ಹಿಂದಾದುದೆಲ್ಲಾತನ ಮುಂದೆ ತಿಳಿಸಿದನು ಮುಂದಾ ಸ್ಥಳವನು ಬಿಟ್ಟು ಬಂದಾ ಸ್ವಸ್ಥಳಕೆ
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಬ್ರಹ್ಮದೇವರ ಸ್ತವನ ಬ್ರಹ್ಮಾ ಮಾಂ ಪಾಲಯಸುಬ್ರಹ್ಮಣ್ಯ ಪಿತನ ಪಿತನೇ ಪ ವಾಕು ಲಾಲಿಸೊ ವರಪ್ರದಾ ಶ್ರೀಕರ ಹರಿಯವ ಲೋಕನ ಮಾರ್ಗವನೀ ಕೊಡುತೆನಗೆ ವಿವೇಕವ ತೋರೋ 1 ಸುಳಿ ನಾಭೀ ಪದುಮ ಭೂ | ಕಲಿಮಲಘ್ನ ಸ್ವಯಂಭೂಅಳಿಕುಲ ದೇಣಿ ವಾಣಿ ಸಂಸೇವ್ಯನೆ |ಅಳಿದ ಅವಿದ್ಯಗಳ ಸಲಹೊ ಸುರಜೇಷ್ಟಾ 2 ಭವ ತವ ಶರ್ವಾವ್ಯಕುತಿಗೈದು ಮುಖ ನಾಲ್ಕರಿಂದಸುಖಿಪೆ ಚತುರ ಮುಖ ಪರಮೇಷ್ಠೀ 3 ದಶದಶಾನಂದಾ ಶೃತ ಧೃತೀ | ಯಶ ಪೊಗಳಲಳವೆ ಸಕಲ ಮತೀವಿಷಧರನುತ ಮಮ ಧೀ ಪ್ರಸರಣವಿಷಯ ವಿರಲಿ ತವ ಮನಸಿನೊಳಗೇ 4 ವಿಶ್ವ ಸೃಜನೇ | ಬುದ್ಧ್ಯಾಭಿಮಾನಿ ವಂದಿತನೆಮಧು ವೈರಿಯ ಪದ ಸೇವಕ ವಿಧಿಮಧುಕರ ತವ ಪದ ಪಲ್ಲವ ತೋರೋ 5 ಸಂಚಿತ ದುರಿತ ಗಮನ ಹರಿಮಂಚ ಯೋಗ್ಯನುತ |ಮುಂಚೆ ಮನವ ಹರಿಚಿಂತನೆಲಿರಸೋ 6 ಋಜುನಿಕರಕ್ಯಧಿಕನೇ | ನಿಜ ವೈಭವದಿ ಮೆರೆವನೇಅಜ ಗುರು ಗೋವಿಂದ ವಿಠಲನ ಪದಬಿಸಜ ಕಾಂಬ ಋಜು ಮಾರ್ಗದಲ್ಲಿಡು 7
--------------
ಗುರುಗೋವಿಂದವಿಠಲರು
ಶ್ರೀ ಮದ್ಭಾಗವತ ಚಿಂತಯಾಮಿ | ಶಿರಿಕೃಷ್ಣ | ಸತತ ಸುಗುಣೋ | ಪೇತಂ ಪ ಸಂತತ ಭಕುತರ ಕೃಪಾ | ಪಾಂಗ ವೀಕ್ಷಾ ಹಸಿತಂಅ.ಪ. ಚಿಟ್ಟೆಸ್ವರ - ಸರಿ ಗಸರೀ | ಮಪ ದಪ ಧಾ | ರಿಸ ನಿಧ ನಿಧ | ಪಮ ಗರಿ ಸಧ |ದ್ರುತ :- ಸರಿಮಾ ಗರಿ | ಮಪ ದಾಸಮ || ಪದ ಸಾ ನಿಧ | ನಿಧ ಪಮಪಧ |ಗರಿ ಸಧ | ರಿಸ ಧಾ ಸ | ಧಾ ಗರಿ ನಿಧಮ ಗರಿಸಧ || ದುರುಳ ಬಂಧಂ | ವಸುಮತಿಯೆಂ, ಗಗನಖಾರಿ, ಕಂಸಗರ್ವಹರ, ದುರ್ಗಾಂಬಂ 1 ವಿಗತಾ ಅಸು, ಪಾಲುಣಿಸಿದ, ರಕ್ಕಸಿ, ಪೂಥಣಿಯುಮಿಗೆ ಊರ್ವಶಿ ಸುರೆ ಶಾಪಹರಂ | ಶಕಟಾಖ್ಯಾಸುರವಿಗಡ ಪ್ರಾಣಹರ | ಶೀಲಂ ತೃಣ ವತ್ಸಾಹರ | ಬಕ ಧುನಿ ಚಮುಮಿಗಿಲಾದವರ ಅಸುಹರಣಂ | ಮಣಿಗೊರಳರ ಶಾಪಹರಂ |ಮದ ವಿಭಂಜನ ಕಾಳೀಯನ | ವನ್ಹಿಯ ಪಾನಂ ಚರಿತಂ 2 ಚಿಟ್ಟೆಸ್ವರ - ನಿಸ ಗಾ ಮಪ | ಗಮ ಪಾ ನಿಸ | ರಿ ಸ ರಿ ನಿ ಸಸ | ಧಪ ಗಾರಿಸ |ನೀ ಸಗ ಮಪ ಗಾ ಮಪನಿಸ | ಪಾನಿಸ ಗರಿಸನಿ ಧ ಪನಿಸ |ಗರಿಸಧ, ಆರಿಸ ಧಾ, ಸ || ಧಾ, ಗರಿ ನಿಧಮ ಗರಿಸಧ || ರಾಗ ಮೋಹನ : ಹನನ ಅಸುರ | ವಿಷತರು ರೂಪಿ | ಘನ ಧೇನುಕ ಭಂಜನಹನನ ಪ್ರಲಂಬನು ಬಲ ನಿಂ | ಪುನರಪಿ ವನ್ಹಿಯ ಪಾನಂಮುನಿ ಪತ್ನ್ಯಾನೀತಾನ್ನ | ಸುಭೋಜನ ಶೀಲಂ |ತೃಣಸಮ ಗಿರಿಧರ ಶಂಖನ | ಮಣಿಹರ ಅರಿಷ್ಠಾ ಅಸುರ ಹರ 3 ಗಾ ಅಪ ಗರಿ, ಗರಿ ಸಧ ಸರಿ | ಗಾಪ ಧಸ, ಧಪ ಗರಿ ಸರಿ |ಗಪ ಗಗ ರಿಸ, ರಿಗ ರಿರಿಸ ಧ | ಸರಿಗರಿ ಗಪಗಪ ಧಪ ಧಸ |ಗರಿಸಧ, ಆರಿಸ, ಧಾ ಸ || ಧಾ, ಗರಿ ನಿಧಮ ಗರಿಸಧ || ಕೇಶಿ ಅಸುರನ ಅಂತೆ ವ್ಯೋಮಾಸುರ ಹನನದಕ್ಲೇಶ ವಾರ್ತೆಯ ಕೇಳಿ ಕಂಸನು ದಾನಪತಿಯನುಯಶೋದೆ ಕಂದನ ಕರೆಯೆ ಅಜ್ಞಾಪಿಸಿದ ಬಿಲ್ಲು ಹಬ್ಬಕೆಲೇಸೆನುತ ಬರವಾಯ್ತು ಸಖ ಅಕ್ರೂರ ಗೋಕುಲಕೆ 4 ಚಿಟ್ಟೆಸ್ವರ - ಅರಿ ಗಮ | ಪಾಧಪಸ | ನಿಧಪಮಗರಿಗಮಪ ಮಾಪ, ಗಾಮರೀಗ, ಸಾರಿಗಾ ಮ, ಪದ ಪ, ಸಾನಿ ||ಗರಿ ಸಧಾ, ರಿ ಸಧಾ ಸದಾ ಗರಿ ನಿಧಮ, ಗರಿ ಸಧ || ಪತಿ | ಸ್ನಾನದಲಿ ಹರಿ ವೀಕ್ಷಣಂಮನ ಕಲಕಿ ಹರಿ ಮಹಿಮೆ ಆಶ್ಚರ್ಯದಿ ಮಧುರೆ ಸೇರಿವನದಿ ಪರಿವಾರ ನಿಲೆ ಬಲ ಸಹಿತ ಪುರಖೊರಟ 5 ಪಾ ಮಗರಿ | ಸಾ ನಿಧ ಸರಿ | ಮಾ ಗರಿಸ | ರಿಮ ಪಮನಿಧ |ಸಾ ಸನಿ ಧಪ ಪಾ ಮಗರಿಸ | ನಿಧ ಸರಿ ಮಪನಿಧ ಮಪಧಸ |ಗರಿ ಸಧ ಆರಿ ಸ ಧಾ ಸ || ಧಾ ಗರಿ ನಿಧಮ, ಗರಿಸಧ || ಭಾರ ಕಳೆದ ಗುರು ಗೋವಿಂದ ವಿಠಲ 6 ಚಿಟ್ಟೆಸ್ವರ ರೀ, ಮರಿ ಮಪ | ನೀ ಪಮ ಪನಿ | ಸಾರಿಸನಿ | ಪಪ ಮಮ ರಿಸ |ರೀ ಪಮ ರಿಸ ನಿಸ ರಿಮಪಾ || ರಾಗ :ಪೂರ್ವಿಕಲ್ಯಾಣಿ :ಧಪಸಾ ನಿಧಪಮ | ಪಮಗರಿ ರಾಗ :ಮೋಹನ :ಸರಿಮಾ ಗರಿ ಸರಿಗಾ | ದಪಗರಿ ಸರಿ ಗಪದಸರಾಗ :ಮುಖಾರಿ :ರೀ ಸದಾ ಪ ದಪ ಗಾರಿಸ | ರಾಗ :ನಾಟಿ ಕುರಂಜಿ :ನಿಸ ಮಗ ಮನಿ ಧನಿ ಪದನಿಸ | ರಾಗ :ಸಾವೇರಿ :ಗರಿ ಸಧಾ ರಿಸ ಧಾ ಸ || ಧಾ ಗರಿ ನಿದಮ ಗರಿ ಸಧ
--------------
ಗುರುಗೋವಿಂದವಿಠಲರು
ಶ್ರೀ ಮಧ್ವಾಚಾರ್ಯರು ಮಧ್ವೇಶಾರ್ಪಣಮಸ್ತು ಮಹಾಪ್ರಭು ಮಧ್ವೇಶಾರ್ಪಣಮಸ್ತು ಪ ಎದ್ದು ಕೂತು ಮಲಗೆದ್ದು ಮಾಡುವ ಕರ್ಮಮಧ್ವೇಶಾರ್ಪಣಮಸ್ತು ಅ.ಪ. ಕರ್ಮ ಮಧ್ವೇಶಾರ್ಪಣಮಸ್ತುದುಷ್ಟರಾಡುತಿಹ ಕೆಟ್ಟ ನುಡಿಗಳು ಮಧ್ವೇಶಾರ್ಪಣಮಸ್ತುಮೆಟ್ಟಿ ಹೆಜ್ಜೆ ಇಟ್ಟದಾಡುವುದು ಮಧ್ವೇಶಾರ್ಪಣಮಸ್ತುಶಿಟ್ಟಿಲಿ ಜನರಿಗೆ ನಿಷ್ಠುರಾಡುವುದು ಮಧ್ವೇಶಾರ್ಪಣಮಸ್ತು 1 ಮಾಳ್ಪದು ಓಲಗ ಮಾಳ್ಪದು ಕ್ಲೇಶ ಬಡುವುದು ಮಧ್ವೇಶಾರ್ಪಣಮಸ್ತುಹೇಸಿಕೆ ವಿಷಯಗಳಾಶೆ ಮಾಡುವುದು ಮಧ್ವೇಶಾರ್ಪಣಮಸ್ತು 3 ಬಗೆ ಬಗೆ ವಸ್ತ್ರಗಳಗಲದೆ ಹೊದಿವುದು ಮಧ್ವೇಶಾರ್ಪಣಮಸ್ತುಝಗ ಝಗಿಸುವ ಹೊಸ ನಗಗಳನಿಡುವುದು ಮಧ್ವೇಶಾರ್ಪಣಮಸ್ತುಸೊಗಸಿಂದುತ್ತರಗಳ ಸೇವಿಸುವುದು ಮಧ್ವೇಶಾರ್ಪಣಮಸ್ತುಹಗಲಿರುಳಲಿ ಮಾಳ್ಪಗಣಿತ ಕರ್ಮವು ಮಧ್ವೇಶಾರ್ಪಣಮಸ್ತು 4 ರಮಣಿಯರಿಂದಲಿ ರಮಣ ಮಾಡುವುದು ಮಧ್ವೇಶಾರ್ಪಣಮಸ್ತುಕ್ರಮದಿಂ ದಶೇಂದ್ರಿಯ ಕರ್ಮಗಳೆಲ್ಲವು ಮಧ್ವೇಶಾರ್ಪಣಮಸ್ತುಭ್ರಮಿಸಿ ಗುರುಗಳ ಮನ ಸ್ತೋಷಿಸುವುದು ಮಧ್ವೇಶಾರ್ಪಣಮಸ್ತುರಮಾಪತಿ ವಿಠಲನ ಮನದಿ ಧ್ಯಾನಿಸುವುದುಮಧ್ವೇಶಾರ್ಪಣಮಸ್ತು 5
--------------
ರಮಾಪತಿವಿಠಲರು
ಶ್ರೀ ಮಹಾಲಕ್ಷಮ್ಮ ಬಾರಮ್ಮ ಪ ಸಹಕಾರಿಯಾಗಿದ್ದು ಸಲಹುವೆ ಜಗವ ಅ.ಪ ಜ್ಞಾನ ಭಕ್ತಿ ವೈರಾಗ್ಯಾನಂದಗಳ ಕೊಟ್ಟು ಹೀನ ದುರ್ವಿಷಯ ಚಿಂತನೆ ಬಿಡಿಸಮ್ಮ 1 ಸೀತೆ ಭೀಷ್ಮಕ ನೃಪಜಾತೆ ನಿನ್ನಯ ವಿ ಖ್ಯಾತಿಯ ಪೊಗಳುವಡೆನ್ನಳವಹುದೆ? 2 ಚಿತ್ತ ನಿಯಾಮಕೆ ಶ್ರೀ ಗುರುರಾಮ ವಿಠಲನಪತ್ನಿ ಪಾಲಿಸು ಕ್ಷೀರ ರತ್ನಾಕರನ ಪುತ್ರಿ 3
--------------
ಗುರುರಾಮವಿಠಲ
ಶ್ರೀ ಮಹಾಲಕ್ಷ್ಮೀ ಮಾತೆ ತ್ರಿಭುವನ ಜನನಿಶ್ರೀಮಂತ ವಿಷ್ಣುವಾಮಾಂಕಸದನಿ ಪ. ತಾಮರಸಾಸನ ವ್ಯೋಮಾಳಕ ಸುರ-ಸ್ತೋಮ ವಿನುತೆ ಹೇ ಸೋಮ ಸಹೋದರಿಅ.ಪ. ಕರ್ಮ ಇಂಧನ ಕಾಲವೆ ಮಹಾಅನಳ ಜನರ ಸಾಧನವೆಂಬ ದರ್ವಿಲಿಇನಿತು ಪಾಕವ ಮಾಡಿ ಘನಮಹಿಮನ ಭೋ-ಜನಕನುಕೂಲ ಮಾಡ್ದ ವನರುಹನಯನೆ 1 ಕಳೇವರ ಕೊಳುತಲಿಹಲವು ವಿಧಾರ್ಚನೆಗಳಲಿ ಪತಿಯನುಒಲಿಸಿ ವಲ್ಲಭನ ತೋಳಲಿ ಬಿಗಿದಪ್ಪಿದಬಲುಸುಖಜಲನಿಧೆ ಸಲಹೆ ನಮಿಸುವೆ 2 ಹೇಮಾಂಬರ ಚಾರು ಶ್ರೋಣಿಅಮಿತ ಸುಗುಣೆ ಶೋಭಿತ ಅಬ್ಜಸದನೆತಮಹಾರಿ ಗೋಪಾಲವಿಠಲನರ್ಧಾಂಗಿಯೆಸಮರೂಪ ಸಮಕಾಲ ಸಮದೇಶ ವ್ಯಾಪುತೆರಮೆ ಅನುಪಮೆ ಸಮೆ ನಮಿಸುವೆ ಎನ್ನ ಭವ-ಶಮಲವಳಿದು ಹೃತ್ಕಮಲದಿ ಹರಿತೋರೆ 3
--------------
ಗೋಪಾಲದಾಸರು
ಶ್ರೀ ಯುವನಾಮ ಸಂವತ್ಸರ ಸ್ತೋತ್ರ 152 ಉಗ್ರಂ ವೀರಂ ಮಹಾ ವಿಷ್ಣು ಅನುಪಮ ಮಹಾಜಾಜ್ವಲ್ಯ ಸರ್ವತೋಮುಖ ಭೀಷಣ ಭದ್ರ ಮೃತ್ಯು ನರಸಿಂಹ ದೇವ ದೇವ ದೇವೋತ್ತಮನಲಿ ಶರಣಾದೆ ಯುವನಾಮ ಸಂವತ್ಸರ ಅಸಮ ನಿಯಾಮಕನಲ್ಲಿ ಪ. ಬಾಲಿಶತನ ಕಳಿದು ಪ್ರೌಢಿಮೆಯಲಿ ಬರುವ ಯುವಕ ಯುವತಿಯರು ಸಾರ ಅಸಾರ ವಿವೇಕದಿ ಇಹಪರ ಸಾರ್ಥಕ ಆಗುವ ಜೀವನ ಕ್ರಮದಿ ಚರಿಸಲು ಯೋಗ್ಯವಾಗಿರುವದು ಈ ಯುವನಾಮ ವರ್ಷ 1 ಹರಿರೇವ ಪರೋ ಹರಿರೇವ ಗುರುರ್ ಹರಿರೇವ ಜಗತ್ಪಿತೃ ಮಾತೃಗತಿಃಯೆಂಬ ಪರಮೋತ್ತಮ ಬಲು ಆಪ್ತ ವಾಕ್ಯವ ಪ್ರತಿಕ್ಷಣ ಸಂಸ್ಮರಿಸಿದರೆ ಇಷ್ಟ ಸಿದ್ಧಿ ಅನಿಷ್ಟ ನಿವಾರಣ ದಿನ ದಿನ ವಿಹಿತ ಸಾಧು ಕರ್ಮ ಆಚರಿಪರಿಗೆ 2 ವಿಷ್ಣು ಪುರಾಣದಿ ಪರಾಶರ ಮಹರ್ಷಿ ಉಪದೇಶಿಸಿದಂತೆ ಪಾಷಂಡಿಗಳಲ್ಲಿ ಪಾಷಂಡ ಮತ ಪ್ರವರ್ತಕರಲಿ ಮೋಹ ಕೂಡದು ಸಾತ್ವಿಕ ಪುರಾಣಧಿಕ್ಕರಿಸುವ ಸ್ತ್ರೀ ಪುರುಷರ ಕ್ರೌರ್ಯಕ್ಕೆ ಬಾಗಿ ಸ್ನೇಹಿಸುವ ಜನರು ವಿಪತ್ತಿಗೆ ಗುರಿ ಜನ್ಮ ಜನ್ಮಕ್ಕೂ 3 ಯುವ ವರ್ಷ ರಾಜನು ಸಾಧು ಸಜ್ಜನಪ್ರಿಯ ಶನಿಮಹಾರಾಜನು ಹರಿಭಕ್ತರು ಸಜ್ಜನರುಗಳಿಗೆ ಸಹಾಯಕನು ಗೋಚಾರದಿ ಸ್ವಕ್ಷೇತ್ರಿ ಮೂಲ ತ್ರಿಕೋಣದೆ ಚಾರ ಶ್ರೀಹರಿ ನಿಯಮನದಿ ಮಂತ್ರಿ ಶುಕ್ರಚಾರ್ಯರು ಗೋಜನ ಪ್ರಿಯರು ಲೋಕ ಹಿತಕರರು 4 ಶನೈಶ್ಚರ ಕೃತ ಲಕ್ಷ್ಮಿ ಭೋಮ ನರಸಿಂಹ ಸ್ತೋತ್ರ ಅವಶ್ಯಪಠನೀಯ ಧಶರಥ ಕೃತ ಮತ್ತು ಪ್ರಸನ್ನ ಶ್ರೀನಿವಾಸೀಯ ಶನಿ ಸ್ತೋತ್ರ ಈ ನುಡಿಗಳು ಸಂವತ್ಸರ ಸ್ತೋತ್ರ ಯತಿವರ್ಯರು ಪಂಡಿತರು ಮತ್ತೆಲ್ಲರಿಂಪಠನೀಯ ಭಕ್ತಿ ಪೂರ್ವದಿ ಪಠಿಸಿ ಮನನ ಮಾಳ್ಪರಿಗೆ ವನರುಹಾಸನ ಪಿತ ಪ್ರಸನ್ನ ಶ್ರೀನಿವಾಸ ರಕ್ಷಿಸುವ ಪ್ರತಿಕ್ಷಣದಿ 5
--------------
ಪ್ರಸನ್ನ ಶ್ರೀನಿವಾಸದಾಸರು