ಒಟ್ಟು 16359 ಕಡೆಗಳಲ್ಲಿ , 135 ದಾಸರು , 7416 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಲೆ ದೇವಿ ಇಂತು ಚಿಂತೆಯು ಯಾಕ| ಸುಲಭದಿ ತಂದು ತೋರುವೆ ನಿನ್ನರಸನಾ ಪ ನಳಿನಗಳಲಿ ಅಪರಾಧವಾಯಿತೆಂದು| ಮುಳಿದು ಬಿಂಕದಿ ಅಳಿಮೊರೆದು ತಾನೆದ್ದು| ಕಲಸಾರುವೇನೇ ನಿನ್ನಯ ತನುಗುಪವ| ತೊಲಗಿಬಿಟ್ಟು ನಿಲ್ಲುವನೇನೇ ರಂಗಾ1 ಹಣ್ಣಾಗಿ ರಂಜಿಸತಿಹಾ ಚೂತದ ಫಲವನ್ನು| ತ್ಯಜಿಸಿ ಬಂದ ತಪ್ಪಾಯಿತೆಂದು| ಉಣಲೋಲ್ಲದೇ ಶುಕಬಿಟ್ಟು ಪೋಪದೇನೇ| ಪೊಂಬಣ್ಣಾಧರಸವಿಯಾ ಬಿಟ್ಟು ನಿಲ್ಲುವನೇ2 ಘನ್ನ ಚಿಂತೆಯಬಿಟ್ಟು ಹರುಷದಲಿರು ತಾಯೆ| ಇನ್ನು ನಾ ಪೋಗಿ ನಾನಾ ಪರಿಯಿಂದಾ| ನಿನ್ನ ಬಳಿಗೆ ಒಪ್ಪಂತೆ ಮಾಡುವೆನೆ ಸಂ| ಪನ್ನ ಕೀರುತಿ ಮಹಿಪತಿ ಸುತ ಪ್ರೀಯನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲೆ ಮನವೆ ಸಲೆ ನಿನ್ನ ಮರೆವದು ಗುಣವೇ ಪ ಹರಿಯೋ ಮರವಿನ ಮುಸುಕಿದೆ ಮರೆಯೋ | ಸಿರಿ ಸೌಖ್ಯ ಮೃಗಜಳ ಪರಿಯೋ | ಚರವೆಂಬ ಹಂಬಲ ಮರಿಯೋ | ಪರಿ ವಾಸನೆಯ ಜರಿಯೋ | ಪ್ರಾರಬ್ಧ ನಿಜ ವೆಂದರಿಯೋ | ತಾಪ ಮೊನೆ ಮುರಿಯೋ | ಅರವಿನ ನಯನವದೆರಿಯೋ | ಪಾದ ಪದ್ಮಕ ಬೆರೆಯೋ 1 ತಿಳಿಯೋ ಇಳಿಯೊಳು ಸತ್ಪಥ ನೆಲಿಯೋ | ಕಳೇವರ ಸ್ಥಿರ ಬೊಬ್ಬುಳಿಯೋ | ನಲವಾರು ಅರಿಗಳ ನಳಿಯೋ | ಬಲಿತಿಹ ಹಮ್ಮಲ ಕಳಿಯೋ | ಬಳಲಿಪಾಗುಣ ಮಲ ತೊಳಿಯೋ | ಬಲು ಶಾಂತಿ ಹೃದಯದಲಿ ತಳೆಯೋ | ಒಲುವಂತೆ ಗುರುನಡಿ ಕಲಿಯೋ | ಸಲಹುವಾಗರದು ದಯ ಮಳಿಯೋ 2 ಜಡಿಯೋದೃಢ ಭಾವನೆಯನು ಹಿಡಿಯೋ | ಕೆಡುವ ಭಾವ ಮೂಲವ ಕಡಿಯೋ | ತಡಿಯದೆ ಮಹಿಪತಿ ದಯ ಪಡಿಯೋ | ಅಡಿಗಳಾಶ್ರಯವನು ಹಿಡಿಯೋ | ಒಡೆಯನಾಜ್ಞೆಯಂದದಿ ನಡೆಯೋ | ಕಡು ಪ್ರೀತಿಲಿ ಸ್ತುತಿ ನುಡಿಯೋ | ಮಡಿದ್ಹುಟ್ಟುವ ಜನ್ಮದ ಮುಡಿಯೋ | ಒಡನ ಹಾದಿದರಿಂದ ಕಡಿಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲೆ ಮನಸೆ ನಾಂ ಪೇಳ್ವ ಬುದ್ಧಿ ಮಾತುಗಳ ಕಲಿತು ಜಾಣನಾಗಿ ನಿಜಸುಖದಿ ಬಾಳು ಪ ಪರನಿಂದೆ ಬೆರೆಸದಿರು ನಿರುತರನು ಜರಿಯದಿರು ದುರಿತದೊಳಗುರುಳದಿರು ಪರಚಿಂತೆ ಮಾಡು ಗುರುಹಿರಿಯ್ಹರಳಿಯದಿರು ದುರುಳರೊಳಗಾಡದಿರು ಹರಿಯಶರಣರ ಸೇವೆ ಸ್ಥಿರವಾಗಿ ಮಾಡು 1 ಮರವೆ ಪರದೆಯ ಹರಿ ಅರಿವಿನಮೃತ ಸುರಿ ಸ್ಥಿರಜಾನ್ಞದೊಳು ಸೇರಿ ಹರಿಚರಿತ ಬರಿ ಹರಿದಾಟವನು ಮರಿ ಜರೆಮರಣದು:ಖ ತರಿ ಪರಮಹರುಷದಿ ಮರೆ ದುವ್ರ್ಯಸನ ತೂರಿ 2 ಕ್ರೋಧವನು ಕಡೆಮಾಡು ವಾದಬುದ್ಧಿಯ ದೂಡು ಸಾಧುಜನರೊಳಗಾಡು ಶೋಧನ ಮಾಡು ಖೇದವನು ಈಡ್ಯಾಡು ವೇದದರ್ಥವ ಮಾಡು ಪಾದಸೇವೆಯ ಮಾಡು ಮಾಧವನ ಕೂಡು 3 ಕಾಮಲೋಭವ ಕಡಿ ಭೂಮಿಮೋಹವ ತೊಡಿ ಭಾಮೆಯರ ಪ್ರೇಮ ಬಿಡಿ ಕ್ಷೇಮಪಥ ಪಿಡಿ ತಾಮಸದೂರಮಾಡಿ ಸಾವಧಾನದ್ಹಿಡಿ ಪಡಿ ನೇಮದ್ಹುಡುಕಾಡಿ 4 ಮೋಸಪಾಶವ ಗೆಲಿ ಕ್ಲೇಶಗುಣಗಳ ತುಳಿ ದಾಸಜನರೊಳು ನಲಿ ಶಾಶ್ವತವ ತಿಳಿ ಹೇಸಿಕ್ವಾಸನೆಯಳಿ ದೋಷರಾಸಿಯಿಂದುಳಿ ಶ್ರೀಶ ಶ್ರೀರಾಮನಲಿ ದಾಸನಾಗಿ ಸೆಳಿ 5
--------------
ರಾಮದಾಸರು
ಎಲೆ ಮನಾ ವ್ಯರ್ಥಗಳೆವರೇ ಜನುಮವನು | ನೆಲಿಯ ನಿನ್ನರುವದಾ ಹೊಲಬು ಮರೆದು ಪ ಇಳಿಯೊಳಗ ನರದೇಹದಲಿ ಜನಿಸಿ ಕೊಡುವದು | ಸುಲಭವಲ್ಲವೊ ಹೋದ ಬಳಿಕ ನಿನಗದು ಮುಂದ ಅ.ಪ ಮೇದಿನಿಯೊಳಗ ಮಿಗಿಲಾದ ಜನ್ಮದಿ ಬಂದು| ಐದಿದಾವರ್ಣ ಕರ್ಮಾಧರಿಸಿ ಮಾಡುತಲಿ | ಗೈದು ನಿತ್ಯಾನಿತ್ಯ ವೈದಿಕ ವಿಚಾರವನು | ಆದಿ ಪುರುಷನ ಕಾಂಬ ಹಾದಿ ಕೂಡಿ | ಖೇದವನು ಕುಡುವ ವಿವಾದ ಗುಣವನೆ ನೀಗಿ | ಮೋದದಲಿ ಶರಣ್ಹೊಕ್ಕು ಸಾಧು ಜನರನು ಸರಿಸಿ | ವೇದಾಂತ ಬ್ರಹ್ಮ ಸೂತ್ರಾದಿ ವಾಕ್ಯಾರ್ಥವನು 1 ಬೋಧೆಯಲಿ ಪಡೆದು ಜ್ಞಾನೋದಯ ಕಾಣದೆ ಭವ ಶರಧಿಯನು ಗೆಲಲಾಗಿ | ಶರಣ ಜನರಿಗೆ ತೆಪ್ಪ ಪರಿಯಂದಾತಾಗಿಹ | ಹರಿನಾಮವ ನೆನೆದು ಹರಿಧ್ಯಾನಗೈವುತಲಿ | ಹರುಷದಲಿ ಪದಿನಾರು ತೆರ ಪೂಜಿಸಿ | ಪರಮ ಸದ್ಭಾವದಲಿ ಗುರುಡಿಂಗರ ಮೇಳದಲಿ | ಭರದಿ ತಾಳದಂಡಿಗೆಯ ಕರದೊಳಗ ತಾ ಪಿಡಿದು | ಶರೀರ ಭಾವನೆ ಮರೆದು ಭರಿತ ಪ್ರೇಮಿತನಾಗಿ | ಇರಳು ಹಗಲು ಪಾಡುತಲಿ ಹರಿಭಕ್ತನಾಗದೇ 2 ವನಧಿಯೊಳು ಥೆರೆಸಂಗ ಧನುಮತದಿದೋರ್ವ | ಗುಳ್ಳಿಯ ಪರಿಸೇವೆಯೀತನು ವೆಂದು-ದರಿಯು | ಆನದೊಳಗ ಉತ್ಕ್ರಷ್ಟ ತನದಿ ಮೆರೆಸ್ಯಾಡುತಿಹ | ಕನಕದಧಿದೇವಿ ಕಿವಿಯನು ಬೀಸುವಾಗ | ಅಣುಗ ಕರಿಯಂತೆ ಅರಕ್ಷಣದವಳು ಯಂದು ಅತಿ | ಹೆಣಗುತಿಹ ಸಾಯಾಸವನೆ ತ್ಯಜಿಸಿ ತಾ ದೊರಕಿ | ಧನಿತದರಿಂತುಷ್ಟವನು ಕರಿಸಿ ದೃಢದಿಂದ | ಘನ ನಂಬು ಗುರು ಮಹಿಪತಿ ಚರಣ ಬಿಡದಂತೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲೆ ಸಖಿಯೆ ಪೋಗು ವಿಠಲನ ಬಳಿಗೆಬೇಗವನ ತಾರೆ ಎನ್ನ ಮನೆಗೆಪ. ಚಂದ್ರ ಉದಿಸುತಲಿ ಬಂದ ರಂಜಿಸುತರ-ವಿಂದಬಾಣ ನಡೆತಂದಮಂದಮಾರುತ ಮುಂದೆ ನಿಂದ ಅವ ಕುಸುಮ-ಗಂಧದಿಂದಲೆನ್ನ ಕೊಂದ1 ಕೀರ ನುಡಿಯುತಿದೆ ಧೀರ ಕೋಕಿಲಿಯಸ್ವರ ಕರ್ಣಕಠೋರಮಾರ ಬೇಗ ಹರಿಬಾರದಿರೆ ಕೆಳದಿಕ್ರೂರ ಎನ್ನ ಕೊಲ್ಲದಿರ 2 ಜೀಯ ಸುಜನರ ಸಹಾಯ ನಿಗಮಕುಲಗೇಯ ನಿರ್ಧೂತ ಹೇಯಪ್ರಿಯ ಹಯವದನರಾಯ ಸಖಿ ಎನ್ನಕಾಯಲಿನ್ನೇನು ಉಪಾಯ 3
--------------
ವಾದಿರಾಜ
ಎಲ್ಲ ದೇವರ ಗಂಡ | ಕೃಷ್ಣ ಚಿಲ್ಲರೆ ದೈವರ ಮಿಂಡ ಪ ಪಾದದಿ ನದಿಯನು ಪೆತ್ತ | ಅದನು ರುದ್ರನು ಶಿರದಲಿ ಪೊತ್ತ ಮಾಧವನ್ಹೊಕ್ಕಳ ಜಾತ | ಶತ ಮೋದನು ಲೋಕ ಪ್ರಖ್ಯಾತ 1 ಸೃಷ್ಟಿ ಸಂಹಾರಗೈದ | ಪರ ಮೇಷ್ಟಿ ರುದ್ರರನಾಳ್ದ ಯೆಟ್ಟ ದೈತ್ಯರ ಶಿರ ಮುರಿದ | ದುರಿತ- ದೃಷ್ಟಿಸಿ ನಾಶಗೈದ 2 ಬಂಟರ ಪಾಲಕನೀತ | ವೈ- ಕುಂಠದ ಒಡೆಯನು ದಾತ ತುಂಟರ ಮಡಹುವ ಸತತ | ನಮಗೆ ನಂಟನು ಗೋಕುಲನಾಥ 3 ಮನಸಿಗೆ ಬಂದುದು ಸಿದ್ಧ | ಪ್ರತಿ ಯೆಣಿಸುವ ಜೀವನೆ ಬದ್ಧ ನೆನೆಸುವರಲಿ ತಾನಿದ್ದ | ದಯ ವನಧಿಯು ಬೆಣ್ಣೆಯ | ಕದ್ದ 4 ಭಂಗ | ತಾ ನಿರುತ ಮಾಡುವ ರಂಗ ಜಯೇಶವಿಠಲ ತುಂಗ | ಮಹಿ ಮಾ ರಕ್ಷಿಸು ದಯಾಪಾಂಗ
--------------
ಜಯೇಶವಿಠಲ
ಎಲ್ಲ ಭಯ ಎಲ್ಲ ಭಯ ಕ್ಷುಲ್ಲಕ ಜನಗಳಿಗೆಲ್ಲ ಭಯ ಪ ತಲ್ಲಣಿಸದೆ ಸಿರಿವಲ್ಲಭನಲಿ ಮನ ನಿಲ್ಲಿಸುವರಿಗೆಲ್ಲ ಜಯ ಅ.ಪ ಇರಲು ಭಯ ಧನವಿರಲು ಭಯ ಇಲ್ಲದಿದ್ದರೆ ತಿರಿದುಂಬೊ ಭಯ ನೆರೆ ಹೊರೆ ಜನಗಳ ಸಿರಿಯನು ನೋಡಲು ಉರಿಯುವ ಜನಗಳಿಗೆಲ್ಲಿ ಜಯ 1 ಎಲ್ಲ ಜಯ ಎಲ್ಲ ಜಯ ಬಲ್ಲ ಸುಜನಗಳಿಗೆಲ್ಲ ಜಯ ಪೊಳ್ಳು ಜೀವನದ ಜಳ್ಳು ಸೌಖ್ಯಗಳ ಒಲ್ಲೆನೆಂಬುವರಿಗೆಲ್ಲ ಜಯ 2 ಸರಳ ಜನರ ನೋಡುವುದೆ ಭಯ ದುರುಳ ಜನಕೆ ತಮ್ಮ ನೆರಳನು ಕಂಡರೆ ಅಧಿಕ ಭಯ 3 ಜ್ಞಾನ ಜಯ ದಿವ್ಯ ಜ್ಞಾನ ಜಯ ಜ್ಞಾನದಿಂದ ಹರಿಸ್ಥಾನ ಜಯ ಹಾನಿಯ ನೀಡುವ ನಾನಾ ಭೋಗವ ಮೌನದಿ ತ್ಯಜಿಪರಿಗೇನು ಭಯ 4 ಒಂದು ಜಯ ನೂರು ಭಯ ದ್ವಂದ್ವಗಳನು ಸಹಿಸದ ನರಗೆ ತಂದೆ ಪ್ರಸನ್ನ ಶ್ರೀಕೃಷ್ಣನ ಚರಣ ದ್ವಂದ್ವ ಸೇವಕರಿಗೆಂದೂ ಜಯ 5
--------------
ವಿದ್ಯಾಪ್ರಸನ್ನತೀರ್ಥರು
ಎಲ್ಲ ಲೀಲೆ ಇದೆಲ್ಲ ಲೀಲೆಎಲ್ಲ ಲೀಲೆ ರಂಗಗೆಲ್ಲ ಲೀಲೆ ಪ. ಪುಟ್ಟಿಸುವುದು ಮನವಿಟ್ಟು ಕಾವುದುದುಷ್ಟರ ಶಿಕ್ಷೆ ಅಲ್ಲಿ ವಿಶಿಷ್ಟರ ರಕ್ಷೆ1 ನೀರೊಳುಲ್ಲಾಸ ಮತ್ತಾರಣ್ಯವಾಸಹಾರುವರಾಟ ತನ್ನ ನಾರಿಯ ಬೇಟ 2 ಗೊಲ್ಲರಾಕೃತಿ ಬತ್ತಲೆಯ ಸ್ಥಿತಿಬಲ್ಲಿದ ದೈವ ಕಲಿಯ ಗೆಲ್ಲುವ ಭಾಗ 3 ವರನಿಪ್ಪುದು ಕರೆದರೆ ಬಪ್ಪುದುಧರೆಯಜಮ ಪರಿಪರಿಯ ಕರ್ಮ4 ಹೆಂಗಳಕೂಟ ಅಪಾಂಗದ ನೋಟ ಹಾಸ್ಯದಂಗದಿಂದೂಟ ರಣರಂಗದಿಂದೋಟ 5 ಅಂಬಿನ ವೇಧ ನಿನ ತುಂಬಿದ ಕ್ರೋಧ ತ್ರಿ-ಯಂಬಕ ಪೂಜೆ ತ್ರಿವಿಡಂಬನವೋಜೆ6 ಕರ್ತುಮಾಕರ್ತು ಮತ್ತನ್ಯಥಾಕರ್ತು ಎಂಬಶಕ್ತಿದೇವಗೆ ಬಲುಯುಕ್ತಿ ಇವಗೆ7 ನಾವೆಕರ್ತವ್ಯಂ ಸುಪ್ರವೆ ವಕ್ತವ್ಯಂಏಸು ಮಹಿಮೆಗೆ ಕೃತಕೃತ್ಯ ನಮಗೆ 8 ಪ್ರಿಯಮೋದನ ದೈತ್ಯೇಯಭೇದನಹಯವದನ ನಿನ್ನರ್ಥಿ ಕಾಯಿದನ9
--------------
ವಾದಿರಾಜ
ಎಲ್ಲ ವಾರ್ತೆಯ ಹೇಳ ಮನ್ನಿಸಿನಮ್ಮ ಫುಲ್ಲನಾಭನ ಗುಣ ವರ್ಣಿಸಿ ದೂತೆ ಪ. ಗೆಜ್ಜೆ ಘಿಲ ಘಿಲಕೆಂದು ಬಂದಳು ದೂತೆಗುಜ್ಜಿ ದ್ರೌಪತಿಗೆರಗಿ ನಿಂತಳುನಮ್ಮ ಅರ್ಜುನಗೆ ಅತಿ ದಯವೆಂದಳು ನಿರ್ಜರೇಶನ ಕಂಡೆನೆಂದಳು1 ಕಳಕಳಿಯ ಸೂಸುತ ತನ್ನ ಥಳ ಥಳ ಮುಖಕಮಲ ಹೊಳೆವುತದೂತೆನಳಿನ ತೋಳಿನ ವಸ್ತ ಝಳ ಝಳಿಸುತಬಂದು ಕುಳಿತಳೆ ಮಾತಿನ ಚಪಲೆ 2 ನಡೆದು ಅಚ್ಯುತನಲ್ಲೆ ಹೋದೆಯಾ ಕೃಷ್ಣನ ಅಡಿಗೆರಗಿ ಮುಖ ನೋಡಿದೆಯನಯ ನುಡಿಯ ಮಾತುಗಳನೆ ಆಡಿದೆಯ ನಿಮ್ಮ ಒಡೆಯರ ಭಕುತಿ ಕೊಂಡಾಡಿದೆಯ ದೂತೆ 3 ಶಾಂತ ಮೂರುತಿ ನಿನ್ನ ನೋಡಿದನೇನಐವರಿಗೆ ಅಂತಃಕರುಣ ಭಾಳ ಮಾಡಿದನೇನಎನ್ನ ಅಂತರಂಗದ ಮಾತು ನುಡಿದೆಯೇನಲಕ್ಷ್ಮಿಕಾಂತನ ಗುಣ ಕೊಂಡಾಡಿದೆಯ ದೂತೆ4 ಎನ್ನ ದ್ರೌಪತಿ ಕಳುಹ್ಯಾಳೆಂದೇನೆ ಸ್ವಾಮಿನಿನ್ನ ಮಾತುಗಳ ಮನಕೆ ತಂದಾನೇನ ಕೃಷ್ಣ ಎನ್ನ ಪ್ರಾಣವು ಐವರದೆಂದನೇನಇನ್ನುದಯದ ಸುಗ್ಗಿ ಸುದ್ದಿ ತಂದೇನ ದೂತೆ 5 ಭಾವೆ ರುಕ್ಮಿಣಿಪಾದ ನೋಡಿದೆಯ ನೀನುಭಾವ ಭಕುತಿಯಲಿ ವಂದನೆ ಮಾಡಿದೆಯ ನಿಮ್ಮ ಮೋಹ ದ್ರೌಪತಿಗಿರಲಂದೆಯ ಮುಯ್ಯಾ ತಾಹೊ ವಿಸ್ತಾರವ ಕೊಂಡಾಡಿದೆಯ 6 ಪಾದ ಕಂಡೆಯಘೃತ ಹಾಲು ಸಕ್ಕರೆ ಸವಿದುಂಡೆಯ ವಸ್ತ್ರ ವೀಳ್ಯ ರಾಮೇಶನಿಂದ ಕೊಂಡೆಯನಿನ್ನ ಕಣ್ಣು ಹಬ್ಬವ ಮಾಡಿಕೊಂಡೇನ ದೂತೆ 7
--------------
ಗಲಗಲಿಅವ್ವನವರು
ಎಲ್ಲನು ನಿನಗೆ ಕೂಡಿತಯ್ಯ ಹರಿ ಪುಲ್ಲನಾಭ ದಯ ಮಾಡಯ್ಯ ಪ ಖುಲ್ಲನು ನಾಬಲು ಎಲ್ಲಿಯುಸಲ್ಲದೆ ತಲ್ಲಣಿಸುತ ನಿನ್ನ ಬಲವಂದೆ ದೇವ ದೇವ ಅ.ಪ ಧೃಢಗುಣ ಎನ್ನೊಳಿಲ್ಲಯ್ಯ ಬಲು ನುಡಿ ಹೀನ ನಾಕಡು ಪಾಪ್ಯಯ್ಯ ನಡೆ ನುಡಿ ಇಲ್ಲದೆ ಕಡುನೊಂದೀಗ ನಿಮ್ಮ ನ್ಹುಡುಕುತ ತಿರುಗುವೆ ಜಡಜಾಕ್ಷನೆ ಪೊರೆ 1 ಪರರದ್ರವ್ಯವಪಹರಿಸಿದೆನೊ ನಾ ಪರಮನೀಚನಾಗಿ ಚರಿಸಿದೆನೊ ಅಗಣಿತ ದುರಿತವನುನಾ ಜರೆಯದೆ ಪರಿಪರಿ ಮಾಡಿದೆನೊ ಮರೆವೆಲಿ ಮಾಡಿದ ಪರಮ ಎನ್ನತಪ್ಪು ಕರುಣಾಕರನೆ ನೀಕರುಣದಿ ಕ್ಷಮಿಸಯ್ಯ 2 ಶರಣಾಗತ ವತ್ಸಲನೆಂದು ನಿನ್ನ ಮರೆಯಹೊಕ್ಕೆನೆಯ್ಯ ದಯಾಸಿಂಧು ಮೊರೆಕೇಳು ಭಕ್ತರ ಪ್ರಿಯಬಂಧು ಎನ್ನ ದುರಿತದಿ ಕಡೆ ಹಾಯ್ಸಯ್ ಇಂದು ಶಿರಬಾಗಿ ನಿಮಗೆ ಸೆರೆಗೊಡ್ಡಿ ಬೇಡುವೆ ಕರಪಿಡಿ ಬಿಡಬೇಡ ಸಿರಿವರ ಶ್ರೀರಾಮ 3
--------------
ರಾಮದಾಸರು
ಎಲ್ಲಮ್ಮಾದೇವಿ ನಮ್ಮ ದೇವರು ಬಂದರು ಕಾಣ ಪ. ಸೋಮಾಸುರನೆಂಬ ದೈತ್ಯನು ಸಾಮಕ ವೇದವನೊಯ್ಯಲು ಮಾ ಸೋಮಾಸುರನೆಂಬವನ ಕೊಂದು ಸಾಮಕವೇದವ ತಂದನು ಮಾ 1 ಗುಡ್ಡವು ಮುಳುಗಿ ಪೋಗಲು ನಮ್ಮದೇವ ಗುಡ್ಡವ ಬೆನ್ನಲ್ಲಿಟ್ಟನು ಮಾ ಗುಡ್ಡದಂಥÀ ದೈತ್ಯರನೆಲ್ಲ ಅಡ್ಡÀಕೆಡಹಿ ಬಿಸುಟನು ಮಾ 2 ಚಿನ್ನಗಣ್ಣಿನವನು ಬಂದು ಕನ್ನೆ ಪೆಣ್ಣನೊಯ್ಯಲು ಮಾ ವರ್ಣರೂಪವ ತಾಳಿ ಅವನ ಭಿನ್ನ ಭಿನ್ನವ ಮಾಡಿದನು ಮಾ 3 ಕಂಭದಿಂದಲೆ ಉದಿಸಿ ನಮ್ಮ ದೇವ ಜಂಭದಸುರನ ಬಡಿದನು ಮಾ ನಂಬಿದ ಪ್ರಹ್ಲಾದನ್ನ ಕಾಯಿದ ಅಂಬುಜನಾಭ ನರಸಿಂಗನು ಮಾ 4 ಬಲು ಮುರುಡನಾಗಿ ಭೂಮಿಯ ಬಲಿಯ ದಾನವ ಬೇಡಿದ ಮಾ ಇಳೆಯ ಈರಡಿಯ ಮಾಡಿ ಬಲಿಯ ಪಾತಾಳಕೊತ್ತಿದ ಮಾ 5 ಕೊಡಲಿಯನ್ನು ಪಿಡಿದು ನಮ್ಮದೇವ ಕಡಿದ ಕ್ಷತ್ರಿಯ ರಾಯರ ಮಾ ಹಡೆದ ತಾಯ ಶಿರವ ತರಿದು ಪಡೆದನಾಕೆÉಯ ಪ್ರಾಣವ ಮಾ 6 ಎಂಟೆರಡು ತಲೆಯ ಅಸುರನ ಕಂಠವ ಛೇದಿಸಿ ಬಿಟ್ಟನು ಮಾ ಒಂಟಿರೂಪವ ತಾಳಿ ಲಂಕೆಯ ಬಂಟ ವಿಭೀಷಣಗಿತ್ತನು ಮಾ 7 ಸೋಳಸಾಸಿರ ಗೋಪಿಯರೊಡನೆ ಕೇಳೀಮೇಳದಲಿಪ್ಪನು ಮಾ ಬಾಲಕನಾಗಿ ಪೆಣ್ಣರೂಪದಲಿ ಶ್ರೀ- ಲೋಲ ಲಕ್ಷ್ಮಿಯ ಅರಸನು ಮಾ 8 ಒಪ್ಪದಿಂದಲಿ ಬಂದು ನಮ್ಮ ದೇವ ಇಪ್ಪೆವನದೊಳಗಿಪ್ಪನು ಮಾ ಸರ್ಪಶರನಾಗಿ ಪೋಗಿ ತ್ರಿಪುರಸಂಹರ ಮಾಡಿದ ಮಾ 9 ಎಲ್ಲಮ್ಮಾ ಎಲ್ಲಮ್ಮಾ ನಮ್ಮದೇವ ಬಲ್ಲಿದ ಕಲ್ಕ್ಯವತಾರನು ಮಾ ಇಳೆಯ ಸ್ವರ್ಗ ಪಾತಾಳಕೊಡೆಯ ಚೆಲುವ ಹಯವದನನು ಮಾ 10
--------------
ವಾದಿರಾಜ
ಎಲ್ಲರ ಮನೆ ದೋಸೆ ತೂತು ಪ ಚಿಲ್ಲರೆಯಲ್ಲವಿದೀ ಮಾತು ಅ.ಪ ಗಾಜಿನ ಮನೆಯಲಿ ವಾಸಿಸುವ ಪರ ಗೇಹಕೆ ಕಲ್ಲುಗಳೆಸೆಯುಬಹುದೇ ಮೂರ್ಜಗನಿಂದಕ ತನ್ನಯ ನಾಶಕೆ ಬೀಜ ಬಿತ್ತಿ ಫಲ ಭೋಜನ ಮಾಡುವ 1 ನೀರ ಕ್ಷೀರ ನ್ಯಾಯವ ಕೇಳದ ಜನ ರ್ಯಾರಿರುವರು ಈ ಧರೆಯೊಳಗೆ ಬಾರಿಬಾರಿಗದ ಮನಕೆ ತಾರದೆಲೆ ದೂರಿನ ನುಡಿಯಲಿ ರುಚಿಯು ಉಚಿತವೆ 2 ಗೂಳಿಯು ಹಳ್ಳಕೆ ಬಿದ್ದ ಕಾಲದಲಿ ಆಳಗೊಂದು ಕಲ್ಲೆಸೆಯುವರು ಬಾಳಿಬಾಳಿಸುವ ನರನ ಪ್ರಸನ್ನನು ಕಾಲಕಾಲದಲಿ ಸಲಹದೇ ಇರುವನೆ 3
--------------
ವಿದ್ಯಾಪ್ರಸನ್ನತೀರ್ಥರು
ಎಲ್ಲರ ಮಾತು ನಿಜ | ಇದು ಅಲ್ಲ ಎಂಬುದು ಸಜ ಪ ಬಲ್ಲವರು ಮನದಲಿ ಯೋಚಿಪುದು ಸು- ಸೂರಿ ಜನಗಳಿಗೆ ಅ.ಪ ಅಂತರ್ಯಾಮಿಯ ವೀಕ್ಷಾ | ಇದು ಅ ದ್ವೈತ ಮತದ ದೀಕ್ಷಾ ಸ್ವಾಂತದಿ ನೋಡೆ ಪ್ರಪಂಚಕಾಯ ಭಗ ವಂತನೆಂಬುದು ವಿಶಿಷ್ಟಾದ್ವೈತವು 1 ಅಣುರೇಣು ತೃಣಕಾಷ್ಠದಲಿ | ನೋಡೆ ಅ- ವನೇ ವ್ಯಾಪಿಸಿಹನಲ್ಲಿ ರೇಣು ಬೇರೆ ಅವನೇ ಬೇರೆ ಅನಿಲಾಂತರ್ಗತನಾಗಿ ಸಮಸ್ತದಿ 2 ಮೂರು ವಿಧದ ಜೀವಗಳು ಕರ್ಮ ಮೂರಾಗಿ ತೋರುವ ಗುರುರಾಮ ವಿಠಲನು 3
--------------
ಗುರುರಾಮವಿಠಲ
ಎಲ್ಲಾ ಶಾಸ್ತ್ರದ ಸಾರದ ತಿಳಲ್ಮನ ದಲ್ಲಿ ಹರಿಯನು ಕಾಂಬುದಕೆ ಪ. ಮನದಲಿ ಹರಿಯನು ಕಾಂಬುವ ಸೊಬಗು ಬಲ್ಲಿದ ವೈಕುಂಠಕೋಡ್ವದಕೆ ಅ. ವಿಧಿನೀಷೇಧಗಳಾಚರಿಸುವುದು ವಿಧ ವಿಧ ಜೀವರ ಸಾಧನಕೆ ವಿಧ ವಿಧ ಸಾಧನ ನಂತರ ತಿಳಿವುದು ವಿಧಿ ಜನಕನ ಪದಪಿಡಿವುದಕೆ 1 ಸ್ನಾನಜಪಾಹ್ನೀಕಗಳೆಲ್ಲವು ತನ್ನ ಧ್ಯಾನಕೆ ಶ್ರೀಹರಿ ನಿಲ್ವುದಕೆ ಧ್ಯಾನಕೆ ಶ್ರೀಹರಿ ನಿಂತ ಮೇಲೆ ಸು ಜ್ಞಾನದಿಂದ ತನ್ನರಿವುದಕೆ 2 ನೆಲೆ ಇಲ್ಲದ ಕರ್ಮಾಳಿಗಳ್ ದೇಹದ ಮಲಿನ ತೊಳೆದು ಶುದ್ಧಿಗೈವುದಕೆ ಮಲಿನ ತೊಳೆದು ಮನಶುದ್ಧದಿ ಹೃದಯದಿ ಇಳೆಯರಸನ ನೆಲೆ ಅರಿವುದಕೆ 3 ಅಗ್ನಿ ಹೋತ್ರಯಜ್ಞಾದಿ ಕಾರ್ಯಗಳ್ ಶೀಘ್ರದಿ ಹರಿಯನು ಕಾಂಬುದಕೆ ಶೀಘ್ರದಿ ಹರಿಯನು ಕಂಡ ಮ್ಯಾಲೆ ಇವು ಅಗ್ರಜವಲ್ಲೆಂದರಿವುದಕೆ 4 ರಂಗನ ಮೂರ್ತಿಯನಿಟ್ಟು ಪೂಜಿಸುವುದು ಅಂಗÀದಲ್ಲಿ ತಾನು ಕಾಂಬುದಕೆ ಅಂಗದಲ್ಲಿ ತಾನು ಕಂಡ ಮೇಲೆ ಇವು ಅಂಗಡಿ ಎಂತೆಂದರಿವುದಕೆ 5 ನಿತ್ಯ ನೈಮಿತ್ತಿಕ ಕರ್ಮಗಳೆಲ್ಲವು ಚಿತ್ತದಿ ಹರಿಯನು ತೋರ್ಪುದಕೆ ಚಿತ್ತದಿ ಹರಿಯನು ಕಂಡ ಮೇಲೆ ಇವು ಮತ್ರ್ಯರಿಗೆಸಗಿ ಮೌನಾಗ್ವುದಕೆ 6 ಚಾಂದ್ರಾಯಣ ವ್ರತ ಉಪವಾಸಗಳು ಇಂದ್ರಿಯ ನಿಗ್ರಹ ಮಾಡ್ವದಕೆ ಇಂದ್ರಿಯ ಚಲಿಸದೆ ಮನ ಧೃಡವಾಗಲು ಹಿಂದಿನ ಹಂಬಲ ತ್ಯಜಿಪುದಕೆ 7 ಮಧ್ವಶಾಸ್ತ್ರದ ಸಾರತತ್ವ ಮನ ಶುದ್ಧಿಯಗೈಸುತ ಸುಖಿಪುದಕೆ ಶುದ್ಧರಾದ ಶ್ರೀ ಗುರು ಕರುಣವು ಅನಿ- ರುದ್ಧನ ಹೃದಯದಿ ತೋರ್ವದಕೆ 8 ನೇಮದಿ ದ್ವಾದಶ ನಾಮಧಾರಣೆ ಹರಿ ನಾಮದ ದೇಹ ಬೆಳಗ್ವದಕೆ ಕಾಮಕ್ರೋಧವ ಬಿಡುವುದು ವಳಗಿನ ಶ್ರೀ ಮನೋಹರನನು ಕಾಂಬುದಕೆ 9 ಹೊರಗಿನ ವಸ್ತು ದೃಷ್ಟಿಸುವುದು ಶ್ರೀ ಹರಿ ವರ ವಿಶ್ವರೂಪವ ತಿಳಿವುದಕೆ ವರ ವಿಶ್ವರೂಪಧ್ಯಾನದಿಂದ ತನ್ನ ವರ ಬಿಂಬನ ಕಂಡು ನಲಿವುದಕೆ 10 ಅರಗಣ್ಣ ಮುಚ್ಚುವ ಅಭ್ಯಾಸಗಳೆಲ್ಲ ಸ್ಥಿರಮನವಾಗುವ ಕಾರಣಕೆ ಸ್ಥಿರಮನ ಶ್ರೀ ಹರಿ ದಯ ಮಾಡಲು ನೇತ್ರ ತೆರೆಯದೆ ಬಿಂಬನ ಕಾಂಬುದಕೆ 11 ಶಾಸ್ತ್ರದಿ ಪೇಳುವ ಧ್ಯಾನ ಪ್ರಕರಣವು ಶ್ರೋತ್ರದಿ ಕೇಳುತ ತಿಳಿವುದಕೆ ಗಾತ್ರದಿ ಶ್ರೀ ಗುರು ಕೃಪೆ ಮಾಡಲು ವಳ ನೇತ್ರದಿ ಸರ್ವವು ಕಾಂಬುದಕೆ 12 ಪಕ್ಷಮಾಸ ವ್ರತ ಪಾರಾಯಣ ಅಪ- ರೋಕ್ಷ ಪುಟ್ಟಲು ದಾರಿ ತೋರ್ವದಕೆ ಶಿಕ್ಷ ರಕ್ಷಕರಾದ ಗುರುಕರುಣವು ಅಪ- ರೋಕ್ಷ ಪುಟ್ಟಿಸಿ ನಿಜವರಿವುದಕೆ13 ಪರಿ ಜನರನು ಸೇವಿಸುವುದು ತನ್ನ ಪರಮಾರ್ಥತೆ ದೂರಾಗ್ವದಕೆ ಗುರುಚರಣವ ಸೇವಿಸುವುದು ಶ್ರೀ ಹರಿ ಅರಘಳಿಗಗಲದೆ ಪೊರೆವುದಕೆ 14 ಡಾಂಭಿಕ ಸಾಧನವೆಲ್ಲವು ಶ್ರೀ ಹರಿ ಡಿಂಬದೊಳಗೆ ಮರೆಯಾಗ್ವದಕೆ ನಂಬಿ ಶ್ರೀ ಹರಿ ಗುರು ಚರಣವ ಪೊಗಳ್ಪದು ಡಿಂಬದೊಳಗೆ ಹರಿ ಕಾಂಬುದಕೆ15 ಕರ್ಮ ವೈರಾಗ್ಯಗಳೆಲ್ಲವು ಪುಟ್ಟಿಸಲೂ ಭಕ್ತಿ ಜ್ಞಾನಕ್ಕೆ ಪುಟ್ಟಲು ಭಕ್ತಿ ಜ್ಞಾನ ಪಾಂಡುರಂಗ ವಿಠ್ಠಲನೊಬ್ಬನ ಪಿಡಿವುದಕೆ 16 ಯಾತ್ರೆ ತೀರ್ಥ ಚರಿಪುದು ಶ್ರೀ ಹರಿ ತನ್ನ ಗಾತ್ರದಲ್ಲಿರುವನೆಂದರಿವುದಕೆ ಗಾತ್ರವೆ ಕ್ಷೇತ್ರವೆಂದರಿತ ಮೇಲೆ ಸ ರ್ವತ್ರದಿ ವಿಠಲನ ಕಾಂಬುದಕೆ17 ಎಂತೆಂತೋ ಮಾರ್ಗಗಳರಸುವುದು ಚಿಂತನೆಗೆ ಹರಿ ನಿಲ್ವುದಕೆ ಚಿಂತನೆಗೆ ಹರಿ ನಿಂತ ಮೇಲೆ ತಾನು ಶಾಂತನಾಗಿ ಜಡನಾಗ್ವದಕೆ 18 ಹೊರಗಿನ ಸಂಸ್ಕಾರಗಳೆಲ್ಲವು ತನ್ನ ವಳಗಿನ ಸಂಸ್ಕಾರ ತೆರೆವುದಕೆ ವಳಗಿನ ಸಂಸ್ಕಾರ ತೆರೆದಮ್ಯಾಲೆ ತನ್ನ ಇರವರಿತು ಸುಖ ಸುರಿವುದಕೆ19 ಸಾಸಿರ ಜನ್ಮದ ಸಾಧನಗಳು ಹರಿ ದಾಸನಾಗಿ ತಾನು ಮೆರೆವುದಕೆ ದಾಸನಾದ ಮೇಲೆ ಕ್ಲೇಶಕೆ ಸಿಲುಕದೆ ಶ್ರೀಶನ ಹೃದಯದಿ ಕಾಂಬುದಕೆ 20 ಸಾರತತ್ವವನು ಅರಿವುದು ಗುರು ಮಧ್ವ- ಚಾರ್ಯರ ಮಾರ್ಗವ ಪಿಡಿವುದಕೆ ಪ್ರೇರಕ ಗೋಪಾಲಕೃಷ್ಣವಿಠಲ ಮನ ಸೇರಲು ಕಂಡು ತಾ ನಲಿವುದಕೆ 21
--------------
ಅಂಬಾಬಾಯಿ
ಎಲ್ಲಾಪರಾಧವೈಯ್ಯಾ ಹರಿಪ್ರೀತಿ ಯಿಲ್ಲದಿಹ ಕರ್ಮಗಳು ಝಲ್ಲರಿಯ ಛಾಯಾ ಪ. ಸಾಧುಲಿಂಗವ ಧರಿಸಿ ವೇದ ವೇದಾಂತ ಸ- ದ್ಬೋಧೆಯನು ಕೇಳಿದರು ಪೇಳಿದರು ಸುಪವಿತ್ರ ಮೇದಿನಿಯ ಸರ್ವತೀರ್ಥಸ್ನಾನ ಮಾಡಿದರು ಓದಿದರು ಸರ್ವಶಾಸ್ತ್ರ ಸಾಧಿಸುತ ಕಾಮ ಕ್ರೋಧಾದಿಗಳ ಜೈಸಿ ವನ ಕೈದಿ ತಪಗೈದರು ಮಹಾದಾನಿಯಾದರು ವಿ- ರಾಧವಧ ಪಂಡಿತನ ಪಾದಕರ್ಪಣ ವಿನಹ ಬಾಧಿಸದೆ ಬಿಡದು ಜನ್ಮ 1 ಹರಿಯೆ ಸರ್ವೋತ್ತಮ ಚರಚರಾತ್ಮಕ ಜಗ- ದ್ಗುರುತಮ ಮಹಾಮಹಿಮ ಕರುಣಾರ್ಣವನ ನಾಮ ಸ್ಮರಣೆಯಿಲ್ಲದೆ ಮಾಳ್ಪ ಪರಿಪರಿಯ ಕರ್ಮಗಳು ನರಕ ಸ್ವರ್ಗದ ಭ್ರಮಣವು ಸ್ಥಿರವೆಂದು ನಂಬಿ ದುಸ್ತರ ಭವಾರ್ಣವದಿ ಮುಳುಗಿ ತಿರುತಿರುಗಿ ಜನ್ಮಮಂ ಧರಿಸಿ ಬಹುದುಃಖ ಸಾ ಗರದಿ ತೇಲಾಡುವುದನರಿಯದತಿ ದುರ್ಮೋಹ ಸೆರೆಯೊಳಗೆ ಬಿದ್ದ ಮೇಲೆ 2 ಸರ್ವತಂತ್ರಸ್ವತಂತ್ರ ಸರ್ವತ್ರ ವ್ಯಾಪ್ತ ಸುರ ಸಾರ್ವಭೌಮಸುನಾಮ ಸಾಮಗಾನಪ್ರೇಮ ದೂರ್ವಾದಳಶ್ಯಾಮ ದುರ್ಗಾರಮಣ ಜಗವ ಗರ್ವದಿಂ ತಾ ಕರ್ತುವೆಂದಹಂಕರಿಸಿ ಜಗ ಕೊರ್ವನೆ ಹೃಷೀಕೇಶ ಕೇಶವ ದೈತ್ಯ ಪೂರ್ವಕವೆ ನಿರಪರಾಧ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ