ಒಟ್ಟು 1400 ಕಡೆಗಳಲ್ಲಿ , 114 ದಾಸರು , 1162 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೇವೆ ಮಾಡಿರೊ ಪ ಬೆಂಬಿಡದಲೆ ಕಾಯುತ್ತಿರುವಾ ದೃಷ್ಟಿಯಿಂದ ನೋಡುತ್ತಲಿರುವಾ 1 ಬಂದ ಬಂದವರನ್ನು ಮುಂದಕ್ಕೆ ಕರೆವಾ ಬಂದಾಪತ್ತುಗಳನೆಲ್ಲ ಕಳೆವಾ ತಂದೆಯಂದದಿ ಕೈ ಪಿಡಿದಿರುವಾ ಇನ್ನೂ ಸಂದೇಹ ವಿಲ್ಲಿದೆ ರಕ್ಷಿಸುವಾ 2 ಶ್ರೀ ರಾಮಚಂದ್ರನ ಪ್ರಿಯ ಭಕ್ತರೂ ಶ್ರೀ ರಾಘವೇಂದ್ರರು ಮಂತ್ರಾಲಯದಿ ನೆಲೆಸಿಹರೂ 3
--------------
ರಾಧಾಬಾಯಿ
ಸೈ ಸೈ ಶರಣಾಗತ ವತ್ಸಲ ನೀ ನೋಯಿಸಬಂದಸುರೆಗೆ ನಿರ್ಮಲ ಸುಖವಿತ್ತಿ ಪ. ಬೆನ್ನಿನ ಮೇಲೆ ಬೆಟ್ಟವ ಪೊರಿಸಿದ ಸುರ- ರನ್ನು ಕಾಪಾಡಿ ಸುಧೆಯನುಣಿಸಿದಿ ನೀ 1 ಹಂಜಿಯಂದದಿ ತಲೆ ನರತಿಹ ಬ್ಯಾಡತಿ ನಿರಂಜನ ಮೂರುತಿ2 ಅಟ್ಟಿ ಬರುತ ನಿನ್ನ ಕಟ್ಟಿದ ಗೋಪೆಗೆ ಪೊಟ್ಟೆಯೊಳಿಹ ಸರ್ವ ಲೋಕವ ತೋರಿದಿ 3 ಅಗ್ರಜ ಭಾರ್ಯಳನುಳುಪಿ ಕೊಲ್ಲಿಸಿದಂಥ ಸುಗ್ರೀವನ ಕೂಡೆ ಸಖ್ಯವ ಬೆಳಸಿದಿ 4 ಪಾತಕಿ ಪತಿಯಾದ- ಜಾಮಿಳನನು ತನ್ನ ನಿಲಯಕೆ ಕರೆಸಿದಿ 5 ವಿಧ ವಿಧದನ್ನವ ಕುರುಪತಿಯಲಿ ಬಿಟ್ಟು ಕುಡುತೆ ಪಾಲುಂಡುವ 6 ಕಂಡವರನು ಕೊಂದಿಹ ಕ್ರೂರನ ಮುನಿ ಮಂಡಲದಲಿ ಪ್ರಚಂಡನೆಂದೆನಿಸಿದಿ 7 ಕುಂತಿಯ ಕುವರನ ಕುದುರೆಯ ನಡೆಸುತ ಅಂತರಂಗ ಸಖ್ಯವ ಬೆಳೆಸಿದಿ ನೀ 8 ಖುಲ್ಲ ಚೇಷ್ಟೆಯ ಮಾಡಿ ಕಲ್ಲಾಗಿ ಬಿದ್ದ ಅ- ಹಲ್ಯೆ ಪತಿವ್ರತೆ ಎಂಬ ಬಿರುದ ಕೊಟ್ಟ್ಟಿ 9 ತಂದೆಯ ಕೊಲ್ಲಬೇಕೆಂದು ಸನ್ನಹಗೈದ ಕಂದನ ಸ್ವಾಂಕದೊಳಂದು ಕುಳ್ಳಿರಿಸಿದಿ 10 ಎಷ್ಟೊ ಪಾಪಗಳಟ್ಟುಳಿ ಬಿಡಿಸಿರೆ ಭ್ರಷ್ಟನೆಂದೆನ್ನೊಳು ನಿಷ್ಠುರವ್ಯಾತಕೆ 11 ಪನ್ನಗ ಗಿರಿವರ 12
--------------
ತುಪಾಕಿ ವೆಂಕಟರಮಣಾಚಾರ್ಯ
ಸೋಜಿಗದಲಿ ಜೀವಿಸುವರು ಸುಜನರು ಪ ಈ ಜಗದಲಿ ದುಷ್ಟ ಗೋಜಿಗೆ ಸಿಲುಕದೆ ಅ.ಪ ಪರರ ವಿಭವಗಳಿಗೆ ಕರಗಲರಿಯರಿವರು ಕೊರೆಯುವ ಬಡತನಕುರಿಯಲರಿಯರು ಹರಿ ಕರುಣದಿ ತಮಗೆ ಸಿರಿಯು ಬಂದೊದಗಲು ಪರಿಪರಿ ವಿಧದಲಿ ಮೆರೆಯದೆ ದೈನ್ಯದಿ 1 ಕೆಡುಕುತನಗಳನು ಅರಿಯರು ಈ ಜನ ಬಡವರ ಸೌಖ್ಯಕೆ ದುಡಿವರು ಮುದದಲಿ ಕಡುದುರುಳರು ನಿಂದೆ ನುಡಿಗಳಾಡುವರೆಂದು ದುಡುಕದೆ ಅವರಲಿ ಕ್ಷಮೆಯ ತೋರುತ ಸದಾ 2 ಪರರಿಗುಪಕೃತಿಯಲರಿಯರು ಮಿತಿಯನು ಪರರಿಗುಪಕೃತಿಗೆ ಜರಿಯರು ಮತಿಯನು ಶರಣ ಪ್ರಸನ್ನನ ಕರುಣವ ಪೊಂದಲು ವರನೀತಿಗಳಲಿ ನಿರತರಾಗುತ ಸದಾ 3
--------------
ವಿದ್ಯಾಪ್ರಸನ್ನತೀರ್ಥರು
ಸೋದಾಪುರದಲ್ಲಿ ವಾಸಿಪ ಯತಿವರನ್ಯಾರೇ ಪೇಳಮ್ಮಯ್ಯಾ ಪ ಹರಸುರಪತಿ ಸ್ಮರವರನುತ ನಮ ಸಮೀರ ಸದ್ವಾದಿರಾಜಕಾಣಮಾ ಅ.ಪ. ವಿನುತ ಬೋಧ ಮುನೀಶ್ವರ ಮತಾಂಭೋನಿಧಿಚಂದ್ರ ಕಾಣಮ್ಮ 1 ಸತ್ವಾದಿತ್ರಯ ಗುಣಜ ಕರ್ಮರಹಿತರಾರೆ ಪೇಳಮ್ಮಯ್ಯಾ ಶುದ್ಧ ಸತಿಸ್ವರೂಪದಿಂದ್ರಮಿಸುವರಾರೆ ಪೇಳಮ್ಮಯ್ಯಸಾರ ಶಾಸ್ತ್ರ ಶೃತಿಸಾರವಿನುತ ಖಳಾರಿಯೆಂದೆನಿಸುವರಾರೆ ಪೇಳಮ್ಮಯ್ಯಾರಾಶಿ ಪೂರ್ಣ ಸಪ್ತನಾಮಹರ ನೇತ್ರ ದ್ವಯಾಂಶ ಸಹಿತರೇ ಪೇಳಮ್ಮಯ್ಯಾ 2 ಪಂಚಭೇದ ಶೂನ್ಯ ಪರ ವಂಚಕರಿಗೆಯಂದೆನಿಸುವರಾರೇ ಪೇಳಮ್ಮಯ್ಯ ಪಂಚ ಪಂಚ ತತ್ವ ಪಂಚರೂಪ ತಂದೆವರದಗೋಪಾಲವಿಠಲನಪೂಜಿಪರೇ 3
--------------
ತಂದೆವರದಗೋಪಾಲವಿಠಲರು
ಸ್ಮರಣೆ ಮಾತ್ರದಿ ಸ್ವತಂತ್ರ ದೊರಕುವುದು ಜಗದೊಳಗೆ ಶ್ರೀಹರಿ ಸ್ಮರಣೆ ಪ ಸ್ಮರಣೆ ಮಾತ್ರ ಸ್ವತಂತ್ರವೆಂದರೆ ಪರಮ ಭಗವದ್ಗೀತೆ ಅಪ್ಪಣೆ ಕರುಣಾಸಾಗರ ದಧಿಯಚೋರನೂ ಶರಣುಪಾರ್ಥಗೆ ಅರುಹು ಮಾಡಿಹ 1 ಸುಲಭದಿಂದಲಿ ಶ್ರವಣಮನನಾಗೀ ಜಗದೊಳಗೆ ನಿನಗೆ ಫಲಿತವಾಗೊ ನಿಧಿ ಧ್ಯಾನಾಗೀ ಕೊಲುಮೆತಿತ್ತಿಯನೂದಲಾಗುವ ಫಲವು ಕಂಡು ಕಾಣದಿರುವೆಯೊ ಕಲೆಯ ತೊಟ್ಟನು ನೀ ಗಲಾ ಪರಸುಳುಹಿನೊಳಗೆ ಹೊಕ್ಕಿ ಮಾಡೊ 2 ಬೆಂಗಳೂರಿಗೆ ಪೋಗಿ ನಿಂದಲ್ಲಿ ವೋ ಮಾಯಜೀವಾ ಮಂಗಳಾಂಗ ಶುಭಾಂಗಣದಲ್ಲಿ ತಂಗಿ ತಾನೆ ನಿಮಿಷ ನಿಮಿಷಕೆ ಸಂಗಮೇಶ್ವರನಾಗಿ ನಿಜದಾ ಬಂಗೆಲೆಯೊಳಗಿರುವ ತುಲಶೀರಾಮತಾ ನಿಜಲೀಗನೇಳಿದ 3
--------------
ಚನ್ನಪಟ್ಟಣದ ಅಹೋಬಲದಾಸರು
ಸ್ಮರಿಸಿ ಬೇಡುವೆನು ನಾ ಹೇ ಗುರು ಸಾರ್ವಭೌಮಾ ಪ ನಿರುತ ನೀ ಪೊರೆ ಎನ್ನ ವಾದಿಗಜಸಿಂಹ ಅ.ಪ. ದಿತಿಸುತಗೆ ಸುತನೆನಿಸಿ | ಅತಿಮುದದಿ ಸುರಮುನಿಯ ಮತ ಹಿಡಿದು ಹರಿಯ ಮಹಿಮೆ ಪಿತಗೆ ಪೇಳಿ ಪತಿಯ ಸ್ತಂಭದಿ ಕರೆದ ಪ್ರಹ್ಲಾದ ರಾಜ 1 ಬಾಲ್ಯದಲಿ ಯತಿಯಾಗಿ ಲೀಲೆಯಿಂದಲಿ | ಭೂಮಿ ಪಾಲಗೊದಗಿರ್ದ ಕುಹು ಯೋಗ ಬಿಡಿಸಿ ಖೂಳ ಮಾಯಳ ಜಯಿಸಿ ಚಂದ್ರಿಕಾ ಗ್ರಂಥವನು ಪೇಳಿ ಹರಿಪೀಠವೇರಿದ ವ್ಯಾಸರಾಜ 2 ಕಾಮರಿಪುನುತ ಮೂಲರಾಮ ಪದಯುಗ ಕುಮುದ ಸೋಮನೆನಿಸುವ ಭಕ್ತಸ್ತೊಮಕ್ಕೆಲ್ಲ ನೇಮದಿಂದಲಿ ವಿವಿಧ ಕಾಮಿತಾರ್ಥ ಸ್ಫುಟತ ಗಾತ್ರ ಪಾವನ ಚರಿತ್ರ 3 ಶಾಂತತೆಯ ಪೊಂದಿ ಮಂತ್ರಾಲಯದಿ ವೃಂದಾವ ನಾಂತರದೊಳಿರುತ ಸಿರಿಕಾಂತ ಹರಿಯಾ ಚಿಂತಿಸುತಲಿಹ ಸರ್ವತಂತ್ರ ಸ್ವತಂತ್ರ ಕರು ಣಾಂತರಂಗನೆ ರಾಘವೇಂದ್ರ ಯತಿವರ್ಯಾ 4 ಮೂಕ ಬಧಿರಾಂಧತ್ವಗಳ ಪೊಂದಿ ಧರಣಿಯೊಳು ವ್ಯಾಕುಲವ ಪಡುವವರನುದ್ಧರಿಸುತ ನಾಕಪತಿವಿನುತ ಜಗನ್ನಾಥವಿಠಲನ ಮಧುಪ ನೀ ಕೊಟ್ಟು ಸಲಹೆನ್ನಭೀಷ್ಟ ಸಮುದಾಯ 5 ಇತರ ಯತಿವರೇಣ್ಯರ ಸ್ತೋತ್ರ
--------------
ಜಗನ್ನಾಥದಾಸರು
ಸ್ಮರಿಸಿದದರಘನನಾಶನ ಸ್ಮರಿಸಿದವರಘನಾಶಸ್ಮರನಯ್ಯನಂಘ್ರಿ ಯುಗ ಸರಸಿಜವ ಪೂಜಿಸುವಗುರು ವಿಜಯರಾಯರ ಚರಣಾಬ್ಜ ಸಾರಿದವದುರಿತಾಬ್ಧಿ ಮೀರಿದವ ಹರಿಪುರವ ಸೇರಿದವನೊ ಪ ಅಘ ಬಂಧ ಪರಿಹರ ಮಾಡುತಾ ಜನರು 1 ಇನಿತು ಜನಸಮುದಾಯದೊಳು ಯಿರುತಿರ್ದ ಇಭವರದ ನನುದಿನವು ಗಾಯನದಿ ಕೊಂಡಾಡಿ ಮನಮುಟ್ಟಿವಿನಯಾತಿಶಯದಲ್ಲಿ ಗುರುವರ್ಯರಾ ಸೇವೆ ಘನವಾಗಿ ಮಾಡಿ ಮುದದಿ ||ತನುವೆತ್ತಿ ವರಸರಿತ ತೀರದಾ ಅಣು ಬದರಿಜನ ಶ್ರೇಷ್ಠರೊಳು ಹರಿಯ ದಾಸ ಪೆಸರಲಿ ಬಂದುಘನ ಯಾದವಾದ್ರಿ ಪಟ್ಟಣದೊಳಗೆ ಯಿದ್ದು ಬಗೆ ಜನನಿ ಅನುಜಾತಿ ಸಹಿತ 2 ಕೆಲವು ದಿನ ಸಂಸಾರ ಗಲಭಿಯೊಳು ಯಿರುತಿರ್ದುಜಲದೊಳಗೆ ಅಂಬುಜವು ಮಿಳಿತವಾಗಿದ್ದ ತೆರಹಳಿದು ದುಷ್ಟಾಸಿಯನು ಕಳೆದು ಕಡು ಮಮತೆಯನು ಪುಳಕೋತ್ಸ ಮನದಿ ತಾಳಿ ||ಜಲದೊಳುತ್ತಮವಾದ ಭಾಗೀರಥೀ ಯಾತ್ರಿಛಲ ಭಕುತಿಯಿಂದಲಿ ಮಾಡಿ ಮೋದದಿ ಹರಿಯಹಲವು ಬಗೆ ಲೀಲೆಯನು ಹರುಷದಿಂದಲಿ ಯಿನ್ನು ತಿಳಿದು ಗುರು ಕರುಣ ಬಲದಿ 3 ಮೂರ್ತಿ ಮನದೊಳು ಕಂಡು ಸುಖವನಧಿಯಲ್ಲಿ ಲೋಲ್ಯಾಡಿಕೊಳುತ ||ಅಲ್ಲಿಂದ ತೆರಳಿ ಗಿರಿಯಲ್ಲಿದ್ದ ವೆಂಕಟನಸಲ್ಲುವಾ ಭಕುತರೊಳು ಸಲೆ ಶ್ರೇಷ್ಠನೆಂದೆನಿಸಿಮಲ್ಲ ಮರ್ದನನಾದ ಮುರಹರನ ಮಹಿಮೆ ಮನ ಬಲ್ಲನಿತು ವಿಸ್ತರಿಸುತ ಜನರು 4 ಈ ತೆರದಿ ಇಭವರದನಾತುಮದೊಳಗೆ ತಂದುಭೂತಳದ ಬಲು ವಿಧದ ತೀರ್ಥಕ್ಷೇತ್ರಗಳಲ್ಲಿಪ್ರೀತಿಯಿಂದಲಿ ಪರಮ ಪುರುಷನ್ನ ಧೇನಿಸುತ ಖ್ಯಾತಿ ಮಹಿಯೊಳಗೆ ಮೆರದು ||ವಾತಜಾತನ ಮತದ ವೊಳಗಿಪ್ಪ ವೈಷ್ಣವರತಾತನೆಂದೆನಿಸಿ ಸುಖವ್ರಾತದೊಳಗಿಡುವಲ್ಲಿಚಾತುರ್ಯದಿಂದ ಬಲುದಾತನೆನಿಸುತಲಿ ಭವತೀತರನ ಮಾಡಿ ಪೊರವ ಜನರು 5 ಆ ಬಗೆಯಲೀ ಕಮಲನಾಭ ಕರುಣಿಸಿ ಯಿವರಈ ಭುವನದೊಳು ಯಿಟ್ಟು ಜನರ ವುದ್ಧರಿಸುವಲೋಭದಿಂದಲಿ ಸಕಲ ಸಜ್ಜನರ ಸನ್ಮಾರ್ಗ ಲಾಭದೊಳು ಸೇರಿಸಿದನೊ ||ತ್ರ್ರಿಭುವನದೊಡೆಯನ್ನ ಕಥೆಯ ತಿಳಿಸುವ ಜನಕೆಶೋಭಿಸುವ ಗಾಯನದ ಸೊಬಗಿನಿಂದಲಿ ಕೇಳಿಶ್ರೀಭೂರಮಣ ವೊಲಿದು ಪಾಲಿಸುವನಾಮೇಲೆ ಶೋಭನ ಗತಿಯ ನೀವನೊ 6 ಕಲುಷ ವಾಕು ವುಪಜೀವರಿಗೆ ಏಕ ಮನದಿಂದಿರುವದೇ ಈ ಕಲಿಯುಗದಲಿಸಾಕಾರ ಗುಣಪೂರ್ಣ ಶ್ರೀನಿವಾಸನು ಬಿಡದೆ ಸಾಕುವನು ಸಮ್ಮೊಗದಲಿ ಜನರು 7 ದೇವಮುನಿ ನಾರದನು ಜೀವಿಗಳನುದ್ಧರಿಪಭಾವದಲಿ ಯಮಪುರಿಯ ದೇವನಲ್ಲಿಗೆ ಪೋಗಿಸಾವಧಾನದಿ ಸಕಲ ಸತ್ಕಾರಕೊಳಗಾಗಿ ನೋವು ಬಡವರನೀಕ್ಷಿಸಿ || ಸಾವಧಾನದಿ ಕೇಳಿ ಕಲಶಾರುಣೀ ಭಕ್ತ- ರಾವಳಿಯ ಸಲಹುವ ದೇವ ದೇವೇಶನನುತಾ ವದರಿ ಕೂಗಲಾ ಜೀವರೆಲ್ಲರು ಕೇಳಿ ಪಾವಿತ್ರವನೆಗೈದರೊ ಜನರು 8 ಭವ ಸಿರಿ ಚರಣಕೆ ಜನರು 9 ಸಿರಿ ತರಣಿ ಶರಧಿ ಶಯನನ ತೋರುವ ಜನರು 10 ದಾನವಾಂತಕ ದನುಜರನ್ನು ಸಂಹರಿಸುವಾಜ್ಞಾನಪೂರ್ಣನು ಗುಪ್ತ ತಾನಾಗಿ ಜಗದೊಳಗೆಹಾನಿ ವೃದ್ಧಿಂಗಳಿಗೆ ಹೊರಗಾಗಿ ಜೀವಿಗಳ ಮಾಣದಲೆ ಪರಿಪಾಲಿಪ ||ಕ್ಷೋಣಿಯೊಳು ಭಕುತರಘ ಹಾನಿಗೈಸುವ ಬಗಿಗೆಈ ನಿರುದ್ಧಕೆ ಯಿವರಧೀನ ಮಾಡಿದ ನಮಗೆವೇಣುಗೋಪಾಲ ವಿಠಲರೇಯ ತಾನೊಲಿದು ಸ್ವಾನಂದವನೆ ವುಣಿಸುವ ಜನರು 11
--------------
ವೇಣುಗೋಪಾಲದಾಸರು
ಸ್ಮರಿಸು ಸ್ಮರಿಸು ಮನವೇ ಗುರುರಾಯರ ಪ ಸ್ಮರಿಸು ಸ್ಮರಿಸು ಬಿಡದೆ ಸ್ಮರಿಸು ನೀ ಗುರು ಸತ್ಯ ಜ್ಞಾನತೀರ್ಥರ ಪದವ ಸಾರುವೆ ಬೇಡಿದ್ದು ಕೊಡುವೆನೆಂಬುವರನು ಅ.ಪ ಸಂಶಯ ಪಡಬ್ಯಾಡವೋ ಇದಕೆ ನಾ ನಿ ಸ್ಸಂಶಯದಿಂದ ಪೇಳುವೆ ಸಂಶಯಾತಕೆ ಋಷಿ ವಂಶೀಕ ರಾವಣನ ಧ್ವಂಸ ಮಾಡಿದ ರಾಮನ ಸಂಸೇವಿಪರÀ ನೀ 1 ಶಾಪಾನುಗ್ರಹ ಶಕ್ತರೂ ಇವರು ಕಾಮಕ್ರೋಧವ ಬಿಟ್ಟವರೂ ತಾಪತ್ರಯಗಳಳಿದು ಪಾಪಗಳೋಡಿಸಿ ಕಾಪಾಡುವೆನೆಂದು ಜಗದಿ ಮೆರೆದವರ 2 ಗುರುಕರುಣಾಬಲದಿ ಶ್ರೀಹರಿನಪರೋಕ್ಷಿಗೈಸಿದ ಧೀರರ ದುರ್ವಾದಿಗಳ ಮುರಿದು ಗುರು ಮಧ್ವರಾಯರ ಪರಮ ಪ್ರೀತಿಯ ಪಡೆದ ನರಹರಿ ಪ್ರಿಯರ 3
--------------
ಪ್ರದ್ಯುಮ್ನತೀರ್ಥರು
ಸ್ಮರಿಸುವ ನರನೇ ಧನ್ಯ ಸನ್ಮಾನ್ಯ ಪ ಸ್ಮರಿಸುವರಿಗೆ ಸುರತರುಕಲ್ಪ ವಿಭರಾಮ ಪುರದಿ ಶ್ರೀಹರಿ ಧ್ಯಾನಪರ ಶ್ರೀ ಕೃಷ್ಣಾಚಾರ್ಯರ ಅ.ಪ ಭರತ ಭೂಮಿಯೊಳವತರಿಸಿ ದೇವಾಂಶದಿ ಪುರುಹೂತನಂತೆ ಗಜಾಂತ ವೈಭವದಿಂದ ಮೆರೆಯುತ ತಮ್ಮಯ ಚರಣಾರಾಧಕರನು- ದ್ದರಿಸಲೋಸುಗದಿ ಸಂಚರಿಸುತ ಮುದದಿ ಸಂದರುಶನದಿಂಧಾಘವ ಕಳೆದು ಬಲು ಕರುಣದಲಿಷ್ಟಾರ್ಥವ ಗರಿದು ಬಹು ಶರಣು ಜ- ನರ ಪೊರೆವ ಭೂಸುರರೊಳು ಮರುತ ಮತಾಬ್ಧಿ ಚಂದಿರನೆನಿಸಿದವರ 1 ವರ್ಣಿಸಲೊಶವಲ್ಲ ಚರಣಯುಗ್ಮಾರಭ್ಯ ಶಿರಪರಿಯಂತರ ಗುರುಗಳಾಕೃತಿಯನ್ನು ನಿರುತ ಧ್ಯಾನಿಪರಿಗೆ ಪರಮ ಮಂಗಳವೀವ ಪರಿಶೋಭಿಸುವ ರತ್ನಾಭರಣದಿಂದೋಪ್ಪುವ ಸ್ವರ್ಣತುಲಸಿ ಮುಕ್ತಹಾರ ಭೂಷಿತ ಕಂಧರ ಸುಂದರವಾದ ಮುಖದೊಳು ಮಂದಸ್ಮಿರ ಕಸ್ತೂರಿಯಂತೆ ಪರಿಮಳಾನ್ವಿತ ಶರೀರ ಮಂತ್ರಾಲಯ ಗುರುರಾಘವೇಂದ್ರರ ಕರುಣಾಸುಪಾತ್ರರ2 ಚಿರಕಾಲ ಶೇವಿಪ ಪರಮ ವಂಧ್ಯರಿಗೆಲ್ಲ ವರಪುತ್ರ ಸೌಖ್ಯವ ಕರುಣಿಸುವರು ಸತ್ಯ ಅಪರಿಮಿತ ಮಹಿಮರೆಂದರಿಯದೆ ಇವರನ್ನು ಜರಿಯಲಾಕ್ಷಣದಲಿ ಅರಿತು ಭೀಕರವಾದ ಉರಗರೂಪವ ತೋರುತ ತ್ಯಜಿಸಿ ಮತ್ತೆ ನಿಜರೂಪದಿಂದಿರುತ ನೋಳ್ಪರಿಗತ್ಯಾಶ್ಚರ್ಯ ಸದ್ಗುಣ ಭರಿತ ಕಾರ್ಪರ ನರಹರಿಯ ಪರೋಕ್ಷದಿ ನಿರುತ ಸುಖಿಪರಂಘ್ರಿ 3
--------------
ಕಾರ್ಪರ ನರಹರಿದಾಸರು
ಸ್ಮರಿಸುವರ ಪಾಲಿಪ ಬಿರುದು ಭಕುತರ ಪೊರೆವ ಕರುಣಿಯೆಪ ಪರಿಪರಿವಿಧದಲಿ ಪರಿತಪಿಸುವರನು ಕರವಿಡಿದುದ್ಧರಿಸುತ ಸಂತೈಸುವ ಉರಗಾದ್ರಿವಾಸ ವಿಠ್ಠಲ ಸಂತೈಸು ಚರಣಕಮಲಗಳಿಗೆರಗಿ ಭಿನ್ನೈಸುವೆ1 ಮಂದಮತಿಯು ನಾನೆಂದು ವಂದಿಪರ ಬಂಧನ ಕಳೆಯುತ ಮುಂದೆ ಗತಿಯು ತೋರಿ ತಂದೆ ವೆಂಕಟೇಶ ವಿಠ್ಠಲ ಭಕುತರ ಸಂದಣಿ ಪೊರೆಯುವರೆಂಬ ಬಿರುದು ದೇವ 2 ಆಶಾಪಾಶಗಳಿಗೊಳಗಾಗಿಹ ಮನ- ದಾಸೆ ಪೂರೈಸುತ ನೀ ಸಲಹೈ ಗುರು ವಾಸುದೇವ ವಿಠ್ಠಲ ಹರಿ ಭಕುತರ ದಾಸ್ಯವ ಕೊಟ್ಟು ಉಲ್ಲಾಸ ಒದಗಿಸುತ 3 ಮೊದಲೆ ನಿನ್ನಯಪಾದ ಹೃದಯದಿ ಭಜಿಸದೆ ಒದಗಿದ ಪಾಪದಿ ಹೆದರÀುತಲಿದೆ ಮನ ಪದುಮಜಾಂಡ ಸೃಜಿಸಿದ ಪರಮಾತ್ಮನಿ- ಗದ್ಭುತವೇ ಪಾಮರರನು ಪೊರೆವುದು 4 ಮಣಿದು ಬಿನ್ನೈಸುವೆ ಪವನಮತವÀ ತೋರಿ ಬಿನಗು ಬುದ್ಧಿಗಳ ಗಮನಕೆ ತಾರದೆ ಕಮಲನಾಭ ವಿಠ್ಠಲ ತವ ಕರುಣದಿ ಮನದ ಕ್ಲೇಶಗಳ ಕಳೆದು ಉದ್ಧರಿಸುತ 5
--------------
ನಿಡಗುರುಕಿ ಜೀವೂಬಾಯಿ
ಸ್ಮರಿಸುವರಘಹರ ರಾಘವೇಂದ್ರ ಗುರುಆರುಮೊರೆ ಇಡುವೆನು ತವಪದದಲ್ಲೀ ಪ ಸುರತರು ನಿನ್ನನು | ನಿರುತದಿ ನುತಿಸುವವರವನೆ ಕರುಣಿಸು | ಗುರು ರಾಘವೇಂದ್ರ ಅ.ಪ. ಕೃತ ಯುಗದೊಳು ತಾ | ಮುನಿ ಕಶ್ಯಪನಸುತನಲಿ ಮೋದದಿ | ಸುತನಾಗಿ ಜನಿಸುತ |ಪಿತನತಿ ಬಾಧೆಗೆ | ಅಳುಕದೆ ಮನ್ಮಥಪಿತನಧಿಕೆಂದು ಬಹು | ಸಾರಿದೆ ಗುರುವರ 1 ಜನಪ ಪ್ರತೀಪನ | ಸುತ ವರನೆನಿಸುತಜನಿಸುತ ಪ್ರೀತಿಲಿ | ದ್ವಾಪರದಲ್ಲೀ |ಘನಬಲ ಬಾಹ್ಲೀಕ | ನೆನಿಸುತ ನೀನೂಅನಿರುದ್ಧ ಮೂರ್ತಿಯ | ಸೇವಿಸಿ ಮೆರೆದೆ 2 ನ್ಯಾಯಾ ಮೃತ ಚಂ | ದ್ರಿಕೆಗಳ ರಚಿಸುತಮಾಯ ಮತವನು | ಪರಿಪರಿ ಜೆರೆಯುತ |ಕಾಯ ಜನಯ್ಯನ | ಕೀರ್ತಿಯ ಬೀರುತತೋಯಜಾಕ್ಷ ಹರಿ | ಅಧಿಕೆಂದು ಸಾರಿದೆ 3 ಸಂಗವ ತೊರೆದು | ಸುಧೀಂದ್ರರ ಕರಜನೆತಂಗಾತೀರದಿ | ಮಂತ್ರಾಲಯದಲಿ |ಮಂಗಳ ಮಹಿಮನ | ಧ್ಯಾನವ ಗೈಯುತತುಂಗ ವಿಕ್ರಮ ಹರಿ | ಪರನೆಂದು ಸಾರಿದೆ 4 ವಾತನ ಮತ ವಿ | ಸ್ತರಿಸಿದ ಧೀರನೆದ್ವೈತ ದುಂದುಭಿಯ | ಮೊಳಗಿಸಿದಾತನೆ |ದೂತರ ಪ್ರಿಯ ಗುರು | ಗೋವಿಂದ ವಿಠಲನಪ್ರೀತಿಲಿ ಭಜಿಸುವ | ದಾಸಾಗ್ರಣಿಯೇ 5
--------------
ಗುರುಗೋವಿಂದವಿಠಲರು
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
ಸ್ಮರಿಸೆನ್ನ ಮನವೇ ಯಾದವ ರಾಯನಾ| ಸರಸಿಜೊವನುತ ಭಕುತರ ಪ್ರೀಯನಾ ಪ ವರನಿಗ ಮೋಯಿದವನಾ ಶೀಳಿ ಎಳಹಿದವನಾ| ಶರಧಿ ಮಥನ ಗೋಸುಗನ ಪೊತ್ತನಾ ಧರಣಿಯಾ ತನ್ನ ಕೋರೆ ದಾಡಿಲಿರಿಸಿದಿಹನಾ| ಶರಣ ಪ್ರಲ್ಹಾದನ ಸುಸ್ಮರಣೆ ಗೊಲಿದನಾ1 ಭೂಸುರೋತ್ತಮನಾಗಿ ದಾನವ ಬೇಡಿದನಾ| ಹೇಸದೇ ಕ್ಷತ್ರಿಯರ ಕುಲ ಕೊಂದನಾ| ವಾಸು-ಕ್ಯಾ ಭರಣನ ಧನುವ ಮುರಿದವನಾ| ವಾಸವಾತ್ಮಜ ಮಿತ್ರ ದೇವಕಿ ಕಂದನಾ2 ಪತಿವೃತೆ ನಾರಿಯರ ವೃತಭಂಗ ಮಾಡಿದನಾ| ಸಿತ ಹಯವೇರಿದ ಶ್ರೀ ಜಗದೀಶನಾ| ಪತಿತ ಪಾವನನಾದಾ ಅನಂತಾವತಾರನ| ನುತ ಗುರು ಮಹಿಪತಿ ನಂದನ ಪ್ರೀನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸ್ಮರಿಸೊ ಮಾನವನೆ ಗುರುಚರಣ ಅಂತ: ಕರಣ ಶುದ್ಧಿಯಲಿ ಮರೆಯದೆ ಪ್ರತಿದಿನ ಪ ದುರಿತ ಘನತತಿ ಮರುತ ಶ್ರೀ ರಘುದಾಂತ ತೀರ್ಥರ ಕರಜ ಶ್ರೀ ರಘುವೀರ ತೀರ್ಥರ ಚರಣಯುಗಲವ ಹರುಷದಿಂದಲಿ ಅ.ಪ ಧರೆಯೋಳ್ ಸುಂದರ ಸುರಪುರದಿ ಜನಿಸಿ ಗುರು ವಿಠ್ಠಲಾರ್ಯರ ಚರಣಾನುಗ್ರಹದಿ ವರ ಶಬ್ದ ಶಾಸ್ತ್ರವ ತ್ವರದಿ ಕಲಿತು ತುರಿಯಾ ಶ್ರಮವನೆ ಸ್ವೀಕರಿಸಿ ಗುರುಮುಖದಿ ಮರುತ ಶಾಸ್ತ್ರವನರಿತು ಧರ್ಮದೊಳಿರುತ ವಿಷಯದಿ ವಿರತಿಯಲಿ ಅನವರತ ಪ್ರವಚನ ನಿರತ ಸದ್ಗುಣ ಭರಿತ ಪಾವನ ಚರಿತರಂಘ್ರಿಯ 1 ಹೇಮಾಲಂಕೃತ ರತ್ನನಿಚಯಯುಕ್ತ ಹೇಮ ಮಂಟಪದಿ ಸುಂದರ ಶುಭಕಾಯಾ ಶ್ರೀ ಮನೋಹರ ಕವಿಗೇಯಾ ಬ್ರಹ್ಮ ವ್ಯೋಮ ಕೇಶಾದಿ ನಿರ್ಜರಗÀಣಶೇವ್ಯಾ ಭೂಮಿ ಸುರಜನ ಸ್ತೋಮಕನುದಿನ ಕಾಮಿತಾರ್ಥವ ಗರಿವ ಸೀತಾರಾಮರಂಘ್ರಿಯ ತಾಮರಸವನು ನೇಮದಿಂದರ್ಚಿಪರ ಶುಭಪದ2 ಪರಿಶೋಭಿಸುವ ಕಾಷಾಯ ವಸ್ತ್ರ ವರನಾಮ ಮುದ್ರಾಲಂಕೃತ ತನುಸಿರಿಯ ಗುರು ಅಕ್ಷೋಭ್ಯರ ಶುಭಚರಿಯ ಗ್ರಂಥ ವಿರಚಿಸಿದರು ನವರತುನ ಮಾಲಿಕೆಯ ಧರಣಿಯೊಳು ಸಂಚರಿಸುತಲಿ ಬಲು ಕರುಣದಿಂದಲಿ ಶರಣು ಜನರಘ ಭವ ಭಯಹರಣ ಗುರುವರ ಚರಣಯುಗಲವ3 ವಿನುತ ಸಮೀರ ಕೃತ ಸಾರಶಾಸ್ತ್ರವನೆ ಬೋಧಿಸುತ ಸಜ್ಜನರ ಘೋರ ಸಂಸೃತಿ ಭಯದೂರ ಮಾಡಿ ತೋರಿ ಸನ್ಮಾರ್ಗ ದೀಪಿಕೆಯ ಸುಸಾರ ಸೇರಿದವರಘ ದೂರ ಪರಮೋದಾರ ಗುಣ ಗಂ- ಸೂರಿಜನ ಪರಿವಾರನುತ ಜಿತ- ಮಾರ ಶ್ರೀ ರಘುವೀರ ತೀರ್ಥರ 4 ಶೇಷಾಚಲದಿ ಶಿಷ್ಯಗಣದಿ ಬಂದ ಶ್ರೀ ಸತ್ಯ ಪ್ರಮೋದ ತೀರ್ಥರ ಸ್ವರ್ಣೋತ್ಸವದಿ ತೋಷಬಡಿಸುತ ನಿರ್ಭಯದಿ ಉಪನ್ಯಾಸ ಮಾಡಿದರು ವೀಶಗಮನ ಸುರೇಶ ಭಕುತರ ಸಿರಿ ನರಕೇಸರಿಗೆ ಪ್ರಿಯದಾಸ ಕೊಡಲಿವಾಸ ಕರ್ಮಂದೀಶರಂಘ್ರಿಯ 5
--------------
ಕಾರ್ಪರ ನರಹರಿದಾಸರು
ಸ್ಮರಿಸೋ ಆದರಿಸೋ ಆನಮಿಸೊ, ಮಾನವನೆ ಗುರುಪದವ ಪೊಂದು ಮುದವ ಹೇ ಮನವೇ ನೀ ಸ್ಮರಿಸೋ ಪ ದುರಿತ ತಿಮಿರಕೆ ತರಣಿ ಸಮರೆಂದೆನಿಸಿ ದ್ವಿಜರೊಳು ಮೆರೆದು ವಿಭವದಿ ಕರೆದು ಛಾತ್ರರ ಪೊರೆದ ಐಕೂರು ನರಶಿಂಹಾರ್ಯರ ಅ.ಪ ವರವೆಂಕಟಾರ್ಯರ ತರುಣಿ ಸೀತಾಗರ್ಭ ಶರಧಿಯಿಂದ ಜನಿಸಿದ ಶಶಿಯ ತೆರದಿ ಧರಿಸಿ ವಿಪ್ರತ್ವವನು ಶೀಘ್ರದಿ ಇರಿಸಿ ದ್ವಿತಿಯಾಶ್ರಮದಿ ಪದವನು ಚರಿಸುತಲೆ ಸಾಧನಸುಮಾರ್ಗದಿ ಕರೆಸಿದರು ವರಭಾಗವತರೆಂದು 1 ಹರಿಪದದಲಿ ಮನವಿರಿಸಿ ದುರ್ವಿಷಯಧಿಃ ಕರೆಸಿ ಧಿ:ಕರಿಸಿ ಪ್ರಿತಾಜ್ಞಾನುಸರಿಸಿ ಧರಣಿಯೊಳು ಗುರುಕರುಣದಿಂದಲಿ ಮರುತ ಶಾಸ್ತ್ರವನರಿತು ಕರುಣದಿ ಸರಸದಲಿ ಸಚ್ಛಾಸ್ತ್ರ ಮರ್ಮವ- ನರುಹಿ ಜನರನುಧ್ಧರಿಸಿದವರನು 2 ಕರ್ಮ ಹರಿಯೆ ಮೂಡಿಸುವನೆಂದರಿದು ಅರಿದು ಧ್ಯಾನಿಸುತ ಮೈಮರೆದು ಹರಿಯ ಗುಣಗಳ ಪೊಗಳಿ ಹಿಗ್ಗುತ ಶರಣು ಜನ ಮಂದಾರ ಕಾರ್ಪರ ಶರಣಶಿರಿ ನರಹರಿಯ ಪುರವನು ತ್ವರದಿ ಸೇರಿದವರ ಸುಚರಿತೆಯ 3
--------------
ಕಾರ್ಪರ ನರಹರಿದಾಸರು