ಒಟ್ಟು 36191 ಕಡೆಗಳಲ್ಲಿ , 138 ದಾಸರು , 9678 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೃಂದಾವನ ದೇವಿ ನಮೋ ನಮೋಗುಣ|ವೃಂದೆ ಸುಂದರಿ ಲೋಕಮಾತೆ ನಮೋ ನಮೋ ||ಬಂದು ಸೇವಿಸಿ ನಿನಗುದಕವ ನೆರೆಯಲುಇಂದುನಾವು ಮಾಡಿದ ಪಾಪ ಹೋಗುವುದೂಪಚಂದದಿಂದಲಿ ನಮ್ಮ ಕುಲದವರಿಗೆಲ್ಲಸುಂದರ ವೈಕುಂಠ ಪದವೀವಳೇ1ಹನ್ನೆರಡು ಪ್ರದಕ್ಷಿಣೆ ಬಂದು ವಂದನೆ ಮಾಡಿಚೆನ್ನಾಗಿ ಸ್ಮರಿಸೆ ಕಂಡು ಪರಸುವಳೆ |ಘನತರ ಭಕ್ತಿಯೊಳ್ ಬಂದು ಕೈ ಮುಗಿದವರನ್ನುಪನ್ನಂಗಶಯನ ಸ್ವಾಮಿ ಕರೆದೊಯ್ಯುವನೂ2ಭವಭವದಲಿಗೈದ ದೋಷನಿವಾರಿಸಿಭವಭಂಗಬಿಡಿಸೆನಗೊಲಿದು ತಾಯೆ |ದಯದಿ ಗೋವಿಂದನ ದಾಸನೆನಿಸೆಂದೆಂನ್ನ |ಭುವನಮೂರರೊಳ್ ಖ್ಯಾತಿ ಪಡೆದವಳೆ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ವೃಂದಾವನ ಲಕ್ಷ್ಮಿ ಜಯಜಯತೂಸುಂದರಿ ಸುಗುಣೆ ಸುಶೀಲೆ ಜಯತು ಜಯಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕ್ಷೀರಾಬ್ಧಿ ಮಥಿಸಲುಸುಧೆಹುಟ್ಟಿ ಬರಲೂನಾರಾಯಣ ಹರುಷಾಶ್ರು ಸುರಿಸಲೂಧಾರಿಣಿಯೊಳಗದು ಗಿಡವಾಗಿ ಶೋಭಿಸೆನಾರಿ ಲಕ್ಷುಮಿಯಂಗ ತುಳಸಿಯೆಂದೂ1ಆಲಯದಿಪ್ಪತ್ತೆಂಟು ಹೆಜ್ಜೆ ಈಶಾನ್ಯದಿಏಳುದಳಿದ ತುಳಸಿಗಿಡವಮೂಲದಿ ನವರತ್ನವಿಟ್ಟು ಪ್ರತಿಷ್ಠಿಸೆಪಾಲಿಸೆ ವಿಷ್ಣು ತಾನಲ್ಲಿರುವೆನೆಂದು2ಧಾತ್ರಿನೆಲ್ಲಿಯು ವಾಣಿ ಗಿರಿಜೆಯರಂಶದಿಪೃಥಿವಿಯೊಳಿರೆ ಕಂಡು ತುಳಸಿಯಂಕದಲಿಅರ್ತಿಯಿಂದಲಿ ನಟ್ಟು ಪೂಜೆಯನೆಸಗಲುಪ್ರೀತಿಸಿ ಬ್ರಹ್ಮ ವಿಷ್ಣು ರುದ್ರರೆ ವರವೀವರು3ಬೃಂದೆ ಜಲಂಧರನರಸಿ ಪತಿವ್ರತೆ-ಯಂದಿರೆ ವಿಷ್ಣುವೊಲಿಸಿ ದುರುಳರ ಗೆಲಿಸೆಬೃಂದೆ ವರವ ಬೇಡಿ ಸಹಗಮನವಾದ ಸ್ಥಳನಿಂದಾನು ವಿಷ್ಣು ತುಳಸಿಯೊಳ್4ಕಾರ್ತೀಕ ದಾಮೋದರನೆನಿಸಿ ಪ್ರೀತಿಯಿಂದಲಿತುಳಸಿಯಲಿ ತಾ ನೆಲಸಿಘೃತದಿ ಜ್ಯೋತಿಯನಿಟ್ಟು ಪೂಜಿಸಿದವರಿಗೆಅತಿಶಯ ವರವಿತ್ತು ಸ್ವಾಮಿ ಪರಸುವನು5ಕಟ್ಟಿಗೋಮಯದಿ ಬಳಿದೂಹಿಟ್ಟಲಿ ರಂಗೋಲಿ ಬರೆದೂ ನೀರೆರೆದುಶ್ರೇಷ್ಠದಿ ತೀರ್ಥವಗೊಂಡು ನಿರ್ಮಾಲ್ಯ ಧರಿಸಲುಅಕ್ಷಯವರವಿತ್ತು ದೇವಿ ಮನ್ನಿಪಳೂ6ವಿಷ್ಣು ಪಾದದಿ ತುಳಸಿ ದಳದಿಂದರ್ಚಿಸಲುಇಷ್ಟ ಪಡುವ ವಾಸುದೇವನು ತಾನುಇಷ್ಟದಿ ತುಳಸಿ ಚರಿತೆ ನಿತ್ಯದಿ ಪಠಿಸಲುಇಷ್ಟಾರ್ಥ ವರವೀವ ಗೋವಿಂದದಾಸರಿಗೆ7
--------------
ಗೋವಿಂದದಾಸ
ವೃಂದಾವನದಲಿ ನಿಂತ ಸುಯತಿವರನ್ಯಾರೇ ಪೆÉೀಳಮ್ಮಯ್ಯ ಪವಂದಿಪ ಜನರಿಗೆ ನಂದ ಕೊಡುವೊ ರಾಘ -ವೇಂದ್ರ ಮುನಿವರನೀತ ನೋಡಮ್ಮ ಅ.ಪಇಂದಿರೆ ರಮಣನ ಛಂದದಿ ಭಜಿಸ್ಯಾ-ನಂದದಲಿಹನ್ಯಾರೇ ಪೇಳಮ್ಮಯ್ಯಾನಂದತೀರ್ಥಮತ ಸಿಂಧುವರಕೆ ಬಾಲ -ಚಂದಿರನೆನಿಸಿಹನ್ಯಾರೇ ಪೇಳಮ್ಮಯ್ಯಮಂದಜನವಹರಿ ಕಂದುಗೊರಳರವೃಂದದಿ ಶೋಬಿಪನ್ಯಾರೆ ಪೇಳಮ್ಮಯ್ಯಹಿಂದೆ ವ್ಯಾಸಮುನಿ ಎಂದು ಕರೆಸಿದ ರಾಘ -ವೇಂದ್ರ ಗುರುವರ - ನೀತ ನೋಡಮ್ಮ 1ನತಿಸುವ ಜನರಿಗೆ ಸತಿಸುತರನು ಬಲುಹಿತದಲಿ ನೀಡುವನ್ಯಾರೇ ಪೇಳಮ್ಮಯ್ಯಪ್ರತಿದಿನ ತನ್ನನು ಮತಿಪೂರ್ವಕ ಬಲುತುತಿಪರ ಪಾಲಿಪನ್ಯಾರೇ ಪೇಳಮ್ಮಯ್ಯಮತಿಯುತಪಂಡಿತ ತತಿಯಭಿಲಾಷವಸತತ ಪೂರ್ತಿಪನ್ಯಾರೇ ಪೇಳಮ್ಮಯ್ಯಕ್ಷಿತಿಸುರರಿಗೆ ಸದ್ಗತಿದಾಯಕ ಮಹಯತಿಕುಲವರ ಗುರುರಾಯ ಕಾಣಮ್ಮ 2ಮಾತೆಯು ಸುತರಲಿ ಪ್ರೀತಿಗೊಳಿಸುವತಾತನ - ತೆರದಿಹನ್ಯಾರೇ ಪೇಳಮ್ಮಯ್ಯಪ್ರೇತನಾಥ ಮಹ ಭೂತಗಣಗಳಭೀತಿಯ ಬಿಡಿಸುವನ್ಯಾರೆ ಪೇಳಮ್ಮಯ್ಯಭೂತಳ ಜನಕೃತಪಾತಕಕಾನನವೀತಿಹೋತ್ರತೆರನ್ಯಾರೇ ಪೇಳಮ್ಮಯ್ಯದಾತಗುರು ಜಗನ್ನಾಥವಿಠಲ ನಿಜದೂತ ಜನಕ ಮಹದಾತನೀತಮ್ಮ 3
--------------
ಗುರುಜಗನ್ನಾಥದಾಸರು
ವೃಂದಾವನದಲಿನಿಂದುರಾಜಿಪನ್ಯಾರೆ ಪೇಳಮ್ಮಯ್ಯಪಬಂದ ಜನರಘ - ವೃಂದ ತಳೆದು ಅ -ನಂದವಕೊಡುವೊ ರಾಘವೇಂದ್ರ ಕಾಣಮ್ಮ ಅ.ಪಮತಿರಹಿತರಿಗೆಶುಭಮತಿಯನುವಿತತ ಮಹಿಮ ಗುರುವರ್ಯ ಕಾಣಮ್ಮ 1ಸೃಷ್ಟಿ ಜನಗಳಿಗಭೀಷ್ಟವ ನೀತಮ್ಮಾ 2ದಾತಗುರುಜಗನ್ನಾಥವಿಠಲಗತಿಪ್ರೀತಿಕರ ಯತಿನಾಥ ಕಾಣಮ್ಮ 3
--------------
ಗುರುಜಗನ್ನಾಥದಾಸರು
ವೃಂದಾವನದೇವಿ ನಮೋನಮೋ-ಚೆಲ್ವ-|ಮಂದರಧರನ ಮನಃ ಪ್ರಿಯಳೆ ಪನಿನ್ನ ಸೇವಿಸಿ ಉದಕವನು ಎರೆಯಲು |ಮುನ್ನ ಮಾಡಿದ ಪಾಪವಳಿಯುವುದು ||ಎನ್ನ ಇಪ್ಪತ್ತೊಂದು ಕುಲದವರಿಗೆ ಎಲ್ಲ |ಉನ್ನತ ವೈಕುಂಠಪದವೀವಳೆ 1ಒಂದೊಂದು ದಳದಲಿ ಒಂದೊಂದು ಮೂರುತಿ |ಸಂದಣಿನೆವೆ ಬಹು ಗುಪಿತದಲಿ ||ಬಂದು ಕುಂಕುಮ ಶಂಖಚಕ್ರವಿರಿಸಿದರೆ |ತಂದೆ ನಾರಾಯಣ ಕರೆದೊಯ್ಯುವ 2ಹರಿಗೆ ಅರ್ಪಿಸಿದ ತುಳಸಿ ನಿರ್ಮಾಲ್ಯವ |ಕೊರಳೊಳು ಧರಿಸಿ ಕರ್ಣದೊಳಿಟ್ಟರೆ ||ದುರಿತರಾಶಿಗಳೆಲ್ಲ ಅಂಜಿ ಓಡುವುವು ಶ್ರೀ-|ಹರಿಯು ತನ್ನವರೆಂದು ಕೈಪಿಡಿವ 3ಹತ್ತು ಪ್ರದಕ್ಷಿಣಿ ಹತ್ತು ವಂದನೆ ಮಾಡೆ |ಉತ್ತಮ ವೈಕುಂಠ ಪದವೀವಳು ||ಭಕ್ತಿಯಿಂದಲಿ ಬಂದು ಕೈಮುಗಿದವರನು |ಕರ್ತೃನಾರಾಯಣ ಕರೆದೊಯ್ವನು 4ಆವಾವ ಪರಿಯಲಿ ಸೇವೆಯ ಮಾಡಲು |ಪಾವನ ವೈಕುಂಠಪದವೀವಳೆ ||ದೇವ ಶ್ರೀಪುರಂದರವಿಠಲರಾಯನ |ದೇವಿ ನಿನ್ನ ಮುಟ್ಟಿತ್ರಾಹಿಎಂಬೆ5
--------------
ಪುರಂದರದಾಸರು
ವೃಂದಾವನದೊಳಾಡುವನಾರೆ - ಗೋಪ-|ಚಂದಿರವದನೆ ನೋಡುವ ಬಾರೆ ಪಅರುಣಪಲ್ಲವಪಾದಯುಗಳನೆ ದಿವ್ಯ-|ಮರುಕತ ಮಂಜುಳಾಭರಣನೆ ||ಸಿರಿವರ ಯದುಕುಲ ಸೋಮನೆ ಇಂಥ-|ಪರಿಪೂರ್ಣ ಕಾಮ ನಿಸ್ಸೀಮನೆ 1ಹಾರ-ಹೀರ ಗುಣಧಾರನೆ - ದಿವ್ಯ |ಸಾರಶರೀರ ಶೃಂಗಾರನೆ ||ಆರಿಗಾದರು ಮನೋದೂರನೆ ತನ್ನ-|ಸೇರಿದವರ ಮಾತ ವಿೂರನೆ 2ಮಕರಕುಂಡಲಕಾಂತಿ ಭರಿತನೆ - ದಿವ್ಯ |ಆಕಳಂಕರೂಪ ಲಾವಣ್ಯನೆ ||ಸಕಲರೊಳಗೆ ದೇವನೀತನೆ - ನಮ್ಮ |ಮುಕುತೀಶಪುರಂದರವಿಠಲನೆ3
--------------
ಪುರಂದರದಾಸರು
ವೃಂದಾವನವೇ ಮಂದಿರವಾಗಿಹಇಂದಿರೆಶ್ರೀ ತುಳಸಿ ||ನಂದನಂದನ ಮುಕುಂದಗೆ ಪ್ರಿಯಳಾದ |ಚೆಂದದ ಶ್ರೀ ತುಳಸಿ ಪತುಳಸಿಯ ವನದಲಿ ಹರಿಯಿಹನೆಂಬುದ |ಶ್ರುತಿಸಾರುತಲಿದೆಕೇಳಿ|ತುಳಸೀದರ್ಶನದಿಂದ ದುರಿತಗಳೆಲ್ಲವುದೂರವಾಗುವುವುಕೇಳಿ||ತುಳಸೀ ಸ್ಪರ್ಶವ ಮಾಡೆ ದೇಹ ಪಾವನವೆಂದುತಿಳಿದಿಲ್ಲವೇನು ಪೇಳಿ |ತುಳಸೀಸ್ಮರಣೆ ಮಾಡಿ ಸಕಲೇಷ್ಟಗಳ ಪಡೆದುಸುಖದಿಂದ ನೀವು ಬಾಳಿ 1ಮೂಲಮೃತ್ತಿಕೆಯನು ಮುಖದಲಿ ಧರಿಸಲುಮೂಲೋಕ ವಶವಹುದು |ಮಾಲೆ ಕೊರಳಲಿಟ್ಟ ಮನುಜಗೆ ಮುಕ್ತಿಯಮಾರ್ಗವು ತೋರುವುದು ||ಕಾಲಕಾಲಗಳಲಿ ಮಾಡುವ ದುಷ್ಕರ್ಮಕಳೆದು ಬೀಸಾಡುವುದು |ಕಾಲನ ದೂತರ ಕಳಚಿ ಕೈವಲ್ಯದಲೀಲೆಯ ತೋರುವುದು 2ಧರೆಯೊಳು ಸುಜನರ ಮರೆಯದೆ ಸಲಹುವವರಲಕ್ಷ್ಮಿ ಶ್ರೀ ತುಳಸಿ |ಪರಮಭಕ್ತರ ಪಾಪಗಳನೆಲ್ಲ ತರಿದು ಪಾ-ವನಮಾಡುವಳು ತುಳಸಿ ||ಸಿರಿಆಯು ಪುತ್ರಾದಿ ಸಂಪದಗಳನಿತ್ತುಹರುಷವೀವಳು ತುಳಸಿ |ಪುರಂದರವಿಠಲನಚರಣಕಮಲಗಳಸ್ಮರಣೆಯೀವಳು ತುಳಸಿ 3
--------------
ಪುರಂದರದಾಸರು
ವೆಂಕಟರಮಣ ವೇದಾಂತಕೋಟಿವಂದ್ಯಶಂಕರಪ್ರಿಯಪತಿಏಳೆನ್ನುತಪ.ಪಂಕಜಮುಖಿಪದ್ಮಾವತಿ ಸರ್ವಾ-ಲಂಕಾರದ ನಿದ್ದೆ ಸಾಕೆನ್ನುತ ಅ.ಪ.ಮಂಗಲಚರಿತ ಭುಜಂಗಶಯನ ನಿ-ನ್ನಂಗದಾಯಾಸವ ಪರಿಹರಿಸಿಪೊಂಗಲಶದಿ ಉಷ್ಣೋದಕ ಗಂಧ ತೈಲಾ-ಭ್ಯಂಗಮಾಡುವರೇಳು ಶೃಂಗಾರದ ಮೂರ್ತಿ 1ದಧಿಯ ಪೃಥುಕದಲಿ ಹದಗೈದು ಮಧುರದಿಮಧುಸೂದನ ನಿನ್ನ ಪದದ ಮುಂದೆಸದ್ ಹೃದಯರು ತಂದಿಹರು ಸಮರ್ಪಿಸೆಮದಜನಕ ನಿನ್ನ ಓಲೈಸುವರಯ್ಯ 2ಸಣ್ಣಕ್ಕಿಯನು ದಿವ್ಯಾನ್ನ ಪಾಕವ ಮಾಡಿಚೆನ್ನಾದ ಗೋಕ್ಷೀರವನ್ನು ತಂದುಉನ್ನತ ಮಹಿಮನೆ ಉಣ್ಣೆಂದು ಲಲಿತ ಸು-ವರ್ಣಪಾತ್ರೆಯೊಳು ತಂದಿಹರು ಶ್ರೀಹರಿಯೇ 3ವಿಧವಿಧ ಷಡುರಸಭರಿತ ಮನೋಹರಸುಧೆಗೆಯಿಮ್ಮಡಿ ಮಧುರತ್ವದಲಿಮೃದುವಾದ ಉದ್ದಿನ ದೋಸೆಯ ಸವಿಯೆಂದುಪದುಮನಾಭನೆ ನಿನ್ನ ಹಾರೈಸುವರಯ್ಯ 4ಸಕ್ಕರೆಕದಳಿಉತ್ತಮ ಫಲಗಳ ತಂದುರಕ್ಕಸವೈರಿಯೆ ನಿನ್ನ ಮುಂದೆಚೊಕ್ಕಟವಾಗಿಡೆ ಲೆಕ್ಕ ಲೇಖನಗಳಒಕ್ಕಣಿಪರುವಾಸುದೇವನೀನೇಳಯ್ಯ5ಸಾರಹೃದಯ ಗೌಡಸಾರಸ್ವತವಿಪ್ರಭೂರಿವೇದಾದಿ ಮಂತ್ರದ ಘೋಷದಿಶ್ರೀರಮಣನೆ ದಯೆದೋರೆಂದು ಕರ್ಪೂರ-ದಾರತಿಯನು ಪಿಡಿದಿಹರು ಶ್ರೀಹರಿಯೇ 6ಭಾಗವತರು ಬಂದು ಬಾಗಿಲೊಳಗೆನಿಂದುಭೋಗಿಶಯನಶರಣಾದೆನೆಂದುಜಾಗರದಲಿ ಮದ್ದಳ ತಾಳರಭಸದಿರೇಗುಪ್ತಿರಾಗ ಸಂಗೀತ ಪಾಡುವರಯ್ಯ 7ಕರುಣಾಸಾಗರ ನಿನ್ನ ಚರಣದ ಸೇವೆಯಕರುಣಿಸೆಂದೆನುತಾಶ್ರಿತ ಜನರುಕರವಮುಗಿದು ಕಮಲಾಕ್ಷ ನಿನ್ನಯ ಪಾದ-ಸ್ಮರಣೆಗೈಯುತ ನೋಳ್ಪಾತುರದಿಂದ ಹರುಷದಿ 8ನಾನಾ ಜನರು ಬಂದುಕಾಣಿಕೆಕಪ್ಪವಶ್ರೀನಿವಾಸನೆ ನಿನ್ನ ಪದಕೆ ಒಪ್ಪಿದಾನವಾಂತಕ ನಿನ್ನ ದಯವೊಂದೆ ಸಾಕೆಂದುಧ್ಯಾನಮಾಳ್ಪರು ದಯಮಾಡೆಂದು ಹರಿಯೇ 9ನೀನೆ ಗತಿಯೆಂದು ನಿನ್ನ ನಂಬಿಹರು ಲ-ಕ್ಷ್ಮೀನಾರಾಯಣ ಪುರುಷೋತ್ತಮನೆಮಾನದಿ ಭಕ್ತರ ಸಲಹಯ್ಯ ಸಂತತಶ್ರೀನಿವಾಸನೆ ಬೇಗ ಏಳು ಶ್ರೀಹರಿಯೆ 10
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವೆಂಕಟಾಚಲ ವಾಸ ವಂದಿಪೆನೋ ತವ ಪದ |ಪಂಕಜವ ನಿರ್ದೋಷ ವಾರಾಶಿಜಾದ್ರುಹಿಣ|ಶಂಕರ ಪ್ರಮುಖ ಪೋಷ ಶ್ರೀ ಶ್ರೀನಿವಾಸ ಪವೆಂಕಟ ಗದಾ ಸುದರುಶನವಿಜಯ|ಅಂಕಿತನೆಗಾಂಗೇಯಚೈಲತ- |ಳಂಕ ನನುಜ ಪಾಲಿಪುದು ಯನ್ನ ಮೀ |ನಾಂಕ ಜನಕ ಶಶಾಂಕ ಭಾಸ ಅ.ಪ.ಸ್ವಾಮಿ ಹೇ ನಿರಪೇಕ್ಷಝಷಕೂರ್ಮವರಾಹ|ಹೇಮಕಶ್ಯಪು ತೀಕ್ಷವಟುಭೃಗು ಕುಲೋದ್ಭವ ||ರಾಮ ಪಾಂಡವಪಕ್ಷ ತ್ರಿಪುರಾರಿ ಕಲ್ಕಿ |ಭೀಮವಂದಿತ ತ್ರ್ಯಕ್ಷಸಖವ್ರತತಿಜಾಕ್ಷ ||ಕಾಮಿತಪ್ರದ ಕೈರವದಳಶ್ಯಾಮಸುಂದರ ಕೋಟಿಮಾರಸು- |ಧಾಮಪ್ರಿಯ ಭಯವಿಪಿನವಹ್ನಿಸು ||ತ್ರಾಮ ನಂದನ ಪ್ರಾಣರಕ್ಷಕ |ಭೂಮಿಯೊಳು ದುರುಳರಿಪು ಸಾಲಿ ||ಗ್ರಾಮ ಮಂದಿರ ಲಕುಮೀ ಮನೋಹರ |ಸಾಮಜೇಂದ್ರನ ಪೊರೆದ ಸಹಸ್ರನಾಮ ಕಾಳೀಮದಾಹ ದೇವತ್ರ ||ಈಮಾಯಾತೃಣಕಾಷ್ಠಾದಿ ವ್ಯಾಪುತ |ಚಾಮೀಕರಭೂಷಣ ಶೋಭಿತ ||ಹೇಮಾಚಲ ಮಂದಿರ ಮುನಿಗಣಸೋಮಾರ್ಚಿತ ಕರುಣಿಸು ತ್ವರ್ಯಾ 1ನೀರಚರನಗಧರಕಿಟಿನೃಹರಿ ವಾಮನ |ಧರಣಿಪ ಸಂಹರ ಕೋದಂಡಕರ ಸ- ||ತ್ಯಾರಮಣಅಂಬರವರ್ಜಿತ |ತುರಂಗಮವೇರಿಕುಂಭಿಣಿಭಾರವಿಳುಹಿದ ಉದಾರ ||ಪರಾಶರ ಸುತ ಕಪಿಲರೂಪಿ ಸ- |ಮೀರ ವಂದ್ಯ ಅನಸೂಯವರಕುಮಾರ ಪು- ||ಷ್ಕರ ಕೇಶನನುಜ ಮಂದಾರನತ ಜನವಿಶ್ವ|ಧರಣ ಶರೀರವ್ಯೋಮಸಂತ್ಪತಿ ನಘ ತು- ||ಷಾರ ಗಣ ವೈದುವರೊ ನಿನ್ನಯಾ |ಪಾರಮಹಿಮೆಯ ತಿಳಿಯಲಾರರುನೀರಜಾಕ್ಷ|| ಯ ||ಪಿತಾಮಾತಾ ಮಹಿಮಯ ||ಕ್ಕಾರಿಂದೊಶ ಅಗ್ನಿಭಯ ನಿವಾರಣ ||ಸಾರೆಗರೆದು ಪೂರೈಸಭಿಲಾಷೆಯ |ಘೋರಿಸುತಿಹ ತಾಪತ್ರಯ ಬಿಡಿಸೊ ರ- |ಮಾರಮಣನೇ ಪ್ರಣತಾರ್ಥಿ ಪರಿಹರ 2ವೇದೋದ್ಧರಕೂರ್ಮಈ ಕ್ಷಿತಿಯ ಮಾಯದಲೊ- |ಯ್ದದುರ್ಮತಿ ಭರ್ಮ ಲೋಚನರತರಳಪ್ರ- ||ಹ್ಲಾದ ವರದ ಸುಕರ್ಮಸ್ಥಿತ ಮಾತೃಹಿಂಸಕ |ನಾದ ನಿರಶ ಸುಶರ್ಮ ಪ್ರಮುಖರನ ಮರ್ಮ ||ಭೇದಿಸೇಳಿದ ಭೈಷ್ಮೀವಲ್ಲಭ|ಶ್ರೀದಬುದ್ಧಖಳಕುಲಭಂಜನ||ಬಾದರಾಯಣನಿಗಮವೇದ್ಯನೆ |ಮೋದಮಯ ಪ್ರಾಣೇಶ ವಿಠ್ಠಲ ||ಕಾದುಕೋ ನಿನ್ನವರನು ಎಂದಾದಿಮಧ್ಯ |ವಿದೂರ ಯನ್ನ ವಿಷಾದಗುಣಗಳೆಣಿಸದೆ ಕುಬುಜೆಗೆ ||ಮೋದತೋರಿದ ದೀನಬಂಧು |ಶ್ರೀಧರಕೌಸ್ತುಭವಕ್ಷಸ್ಥಳ ||ದ್ವಾದಶವಪು ಸನ್ನಿಭ ನಿನ್ನಯ ಕ್ರೋಧಿಗಳೊಳು ಸ್ನೇಹವ ಪುನರಪಿ |ಮೇದಿನಿಯೊಳು ಜನ್ಮವ ಕೊಡದಿರು 3
--------------
ಪ್ರಾಣೇಶದಾಸರು
ವೆಂಕಟೇಶ ಬೇಡಿಕೊಂಬೆ ಕೃಪೆಯ ಪಾಲಿಸೋ ಬ್ರಹ್ಮ-ಶಂಕರಾದಿವಂದ್ಯ ಎನಗೆ ಮುಕ್ತಿ ತೋರಿಸೋ ಪಹುಟ್ಟು ಮೊದಲಾದಂಢ ಕಷ್ಟ ಬಿಡಿಸೋ-ನಿನ್ನಪಟ್ಟದ ರಾಣಿಗೆ ಹೇಳಿಪದವಿಕೊಡಿಸೋ ||ಇಷ್ಟ ಭಕ್ತಜನರೊಳು ಎನ್ನ ಸೇರಿಸೋ-ಈಸೃಷ್ಟಿಯೊಳು ನಿನ್ನ ದಾಸ-ದಾಸನೆನಿಸೋ 1ಅಟ್ಟು ಉಂಡು ಮಿಕ್ಕಿದ್ದೆಲ್ಲ ಎನಗೆ ಹಾಕಿಸೊ ಪೊಂ-ಬಟ್ಟಲೊಳಗಿನ ಹಾಲು ಎನಗೆ ಹೊಯ್ಯಿಸೊ ||ಗಟ್ಟಿ ಸಕ್ಕರೆ ತುಪ್ಪ ರೊಟ್ಟಿಗಳನು ಉಣ್ಣಿಸೋ-ಮುಂದೆಹುಟ್ಟಿಬಾಹಜನ್ಮಂಗಳ ಎನಗೆ ಬಿಡಿಸೋ2ಕಿಟ್ಟಿಗಟ್ಟಿದ ಕಬ್ಬಿಣಕ್ಕೆ ಪುಟವ ಹಾಕಿಸೋ-ಉತ್ಕøಷ್ಟ ಬಂಗಾರದೊಳು ಎನ್ನ ಕೂಡಿಸೋ ||ಬೊಟ್ಟಿಗೆ ಉಂಗುರವ ಮಾಡಿ ಎನ್ನ ಸೇರಿಸೋ-ಎನಗೆದಿಟ್ಟ ಪುರಂದರವಿಠಲನೆಂಬುದನೆ ಪಾಲಿಸೋ 3
--------------
ಪುರಂದರದಾಸರು
ವೆಂಕಟೇಶ ಶ್ರೀ ವೆಂಕಟೇಶ ಪಾಲಿಸುಕಿಂಕರನ ವೆಂಕಟೇಶ ಪ.ಸುವರ್ಣಮುಖರಿಲಿ ಶಿವನುತಪಾದಾಬ್ಜಸುವರ್ಣಗಿರಿ ವೆಂಕಟೇಶನವ್ಯಚಂದನ ಮೃಗನಾಭಿ ಚರ್ಚಿತಗಾತ್ರಅವ್ಯಾಕೃತನೆ ವೆಂಕಟೇಶ 1ಹಲವಪರಾಧಿ ನಾ ಭೂರಿದಯಾಳು ನೀನೆಲೆಗೆ ನಿಲ್ಲಿಸು ವೆಂಕಟೇಶಬಲು ತಮ ತುಂಬಿದ ಭವದಿ ಕರುಣಶಶಿಬೆಳಗು ಬೆಳಗು ವೆಂಕಟೇಶ 2ತಂದೆ ತಾಯಿ ನೀನೆಸಖಸಹೋದರ ನೀನೆಹಿಂದೆ ಮುಂದೆ ನೀ ವೆಂಕಟೇಶಹೊಂದಿದ ಬಂಟನ ಕಂದಾಯ ನಡೆಸಯ್ಯಕುಂದನಾಡದೆ ವೆಂಕಟೇಶ 3ಸಾಕು ನೀ ಸಾಕದಿದ್ದರೆ ಬಿಡು ನಾ ಬಿಡೆಜೋಕೆ ಬಿರುದು ವೆಂಕಟೇಶನೀ ಕೈಯ ಜರಿದರೆಕಾಕುಮಾಡುವರೆನ್ನಪೋಕವೃತ್ತರು ವೆಂಕಟೇಶ4ನಂಬಿದೆ ನಂಬಿದೆ ನಂಬಿದೆ ನಿನ್ನಪಾದದಿಂಬಿನೊಳಿಡು ವೆಂಕಟೇಶಬಿಂಬ ಮೂರುತಿ ಪ್ರಸನ್ವೆಂಕಟೇಶಪ್ರತಿಬಿಂಬಕ್ಕರುಹು ವೆಂಕಟೇಶ 5
--------------
ಪ್ರಸನ್ನವೆಂಕಟದಾಸರು
ವೆಂಕಟೇಶನ ಮಹಿಮೆಯ ಹೊಗಳುವಕಿಂಕರಧನ್ಯನಯ್ಯಪ.ಇಳೆಯ ಭಕ್ತರ ನೋಡಿದ ವೈಕುಂಠದಿಂದಿಳಿದು ಶ್ರೀಸಹಿತ ಬಂದಸಲೆ ಸುವರ್ಣಮುಖರಿಯ ತೀರವಒಲಿದು ನಿಂತನು ತಿಮ್ಮ್ಮಯ್ಯ 1ಭೂವರಾಹ ಸ್ವಾಮಿಯ ಸನ್ನಿದಶ್ರೀವತ್ಸಲಾಂಛನಿಹಶ್ರೀವಿಮಾನಸಹಿತ ದೇವಾಧಿದೇವ ತಾನಿಲ್ಲಿ ನಿಂತ 2ಸ್ವಾಮಿ ಪುಷ್ಕರಿಣಿಯೆಂಬ ತೀರ್ಥದನಾಮದ ಮಹಿಮೇನೆಂಬೆಆ ಮಹಾ ದುಷ್ಕøತವು ಸ್ನಾನದನೇಮದಲ್ಲೋಡುವುದು 3ರಾಜಾಧಿರಾಜನಿತ್ಯಉಪಚಾರಪೂಜೆ ಲೋಕಾರ್ಥದೊಳು ತಾಮೂಜಗಕಾನಂದವವರಕರುಣಾಜಲಧಿ ಕೊಡುವ 4ನಿತ್ಯಸ್ವಾರಿಗೈದುವಸುರಋಷಿಮೊತ್ತದಿ ಚರಿಪದೇವಮತ್ತೆ ಆ ಲಕ್ಷ್ಮಿಯ ಕೂಡ ಮುನಿವದೊಂದರ್ತಿಯ ಬುಧರು ನೋಡಿ 5ನುಡಿವ ಸಾವಿರ ಪೇರ್ಗಂಟೆ ಉಬ್ಬುಬ್ಬಿಹೊಡೆವರ್ಯೊಡೆ ಜಾಗಟೆಬಡಿವ ಕರಡೆ ಭೇರಿಯು ಮುಂದೆ ಉಗ್ಗಡಿಪ ಸಾಮಗಾನವು 6ಚಿತ್ರವರ್ಣದ ಸತ್ತಿಗೆ ಸಾಲ್ಗಳುಸುತ್ತಲು ಕೈ ದೀವಿಗೆಉತ್ತಮ ವಾಹನವೇರಿ ವಿಶ್ವದಕರ್ತಬಂದನು ಉದಾರಿ7ಉದಯ ತೋಮಾಲೆ ಸೇವೆ ಪುಳುಕಾಪುಮೊದಲಾದ ದಿವ್ಯಸೇವೆಒದಗಿದವಸರಂಗಳು ನೈವೇದ್ಯಮೃದುಭಕ್ಷ್ಯವರಪೊಂಗಲು8ಅತಿರಸ ಮನೋಹರವುದಧ್ಯನ್ನಅತಿರುಚಿ ಅನ್ನವಾಲವುಕ್ಷಿತಿಯ ಮೇಲಿಹ ಭಕ್ತರು ಶ್ರೀಲಕ್ಷ್ಮೀಪತಿಗೆ ಅರ್ಪಿಸುತಿಹರು 9ಹೂವಿನಂಗಿಯ ತೊಡುವಮೃಗಮದಲಾವಣ್ಯ ತಿಲಕಿಡುವಕಾವನಂತರ ತೇಜವ ಗೆಲ್ಲುವಸಾವಿರ ಹೆಸರ ದೇವ 10ತಪ್ಪದೆ ನುಡಿವಂದನು ಮುಡಿಪಿನಕಪ್ಪವೆಣಿಸಿ ಕೊಂಬನುಚಪ್ಪನ್ನ ದೇಶಸ್ತರು ಬಂದು ಸಮರ್ಪಣೆ ಮಾಡುವರು 11ಕೊಟ್ಟ ವಾಕ್ಯಕೆ ತಪ್ಪನು ವರಭಯವಿಟ್ಟು ಸಾಕುತಲಿಪ್ಪನುಇಷ್ಟಾರ್ಥದಾತನಯ್ಯ ವಿಶ್ವದಶಿಷ್ಟರೊಡೆಯ ತಿಮ್ಮಯ್ಯ 12ಕಿರೀಟ ಕುಂಡಲವಿಟ್ಟನು ತಿಮ್ಮಯ್ಯಕರುಣ ನೋಟದ ಚೆಲ್ವನುಅರಿಶಂಖವನು ಧರಿಸಿದ ಹಾರಕೇಯೂರ ಕೌಸ್ತುಭದಲೊಪ್ಪಿದ 13ತೋಳಬಂದಿಯು ಕಂಕಣಮುದ್ರಿಕೆಕೀಲುಕಡಗಒಡ್ಯಾಣನೀಲಮಾಣಿಕ ಪಚ್ಚದ ಮುತ್ತಿನಮಾಲೆಗಳಿಂದೊಪ್ಪಿದ 14ಮಣಿಮಯ ಕವಚ ತೊಟ್ಟ ಗಳದಲಿಮಿನುಗುವಾಭರಣವಿಟ್ಟಕನಕಪೀತಾಂಬರವು ಕಟಿಯಲ್ಲಿಅಣುಗಂಟೆಗಳೆಸೆದವು 15ರನ್ನದಂದುಗೆಯನಿಟ್ಟಿಹ ಪಾದಕೆಪೊನ್ನಹಾವುಗೆಮೆಟ್ಟಿಹಘನ್ನ ದೈತ್ಯರ ಸೋಲಿಪ ಬಿರುದಿನಉನ್ನತ ತೊಡರಿನಪ್ಪ 16ದಿನಕೆ ಸಾವಿರ ಪವಾಡ ತೋರುವಜನಕೆ ಪ್ರತ್ಯಕ್ಷ ನೋಡಘನಶಾಮ ತಿರುವೆಂಗಳ ಮೂರ್ತಿಯಮನದಣಿಯೆ ಹೊಗಳಿರೆಲ್ಲ 17ಭೂವೈಕುಂಠವಿದೆಂದು ಸಾರಿದಭಾವಿಕ ಭಕ್ತ ಬಂಧುಶ್ರೀ ವಾಯುಜಾತ ವಂದ್ಯ ಶ್ರೀನಿವಾಸಗೋವಿಂದ ನಿತ್ಯಾನಂದ 18ಸೇವಕಜನರಪ್ರಿಯಅರುಣರಾಜೀವಲೋಚನ ತಿಮ್ಮಯ್ಯದೇವಶಿಖಾಮಣಿಯು ಬ್ರಹ್ಮಾದಿದೇವರಿಗೆ ದೊರೆಯು 19ಕಶ್ಚಿಜ್ಜೀವನೆನ್ನದೆ ನನ್ನನುನಿಶ್ಚಯದಲಿ ಹೊರೆವನುಆಶ್ಚರ್ಯಚರಿತ ನೋಡಿ ಶರಣರವತ್ಸಲನ ಕೊಂಡಾಡಿ 20ಆರಾಶ್ರಯಿಲ್ಲೆನಗೆ ದ್ರಾವಿಡವೀರನೆ ಗತಿಯೆನಗೆಭೂರಿಪ್ರಸನ್ವೆಂಕಟಪತಿ ಸುಖತೀರಥವರದ ನಮೊ 21
--------------
ಪ್ರಸನ್ನವೆಂಕಟದಾಸರು
ವೇಗದಿ ಪಿಡಿ ಎನ್ನ ಕೈಯ್ಯಾ ಪಆಗಾಮಿಸಂಚಿತಭೊಗಗಳುಳ್ಳಭವ-ಸಾಗರದಲ್ಲಿ ಬಿದ್ದೆ ವೇಗದಿ ನೀ ಬಂದು ಅ.ಪಭಾವದ್ರವ್ಯ ಕ್ರಿಯಾದ್ವೈತ ಇದರನು-ದೇವರೆಂದನುದಿನ ಭಾವಿಸಿದೆನ್ನನು 1ಅಶನವಸನಕಾಗಿ ನಾಪರಅಸಮ ನಿನ್ನಯಪಾದಬಿಸಜಭಜಿಸದೆವಸುಮತಿಯೊಳು ಬಲು ಹಸನಗೆಟ್ಟೆನ್ನನು 2ಸರಿಯನೀಸೀಪರಿ ಧೆರೆಯೊಳು ಪಾಲಿಸು 3
--------------
ಗುರುಜಗನ್ನಾಥದಾಸರು
ವೇಣುಗೋಪಾಲವಿಠಲದಾತಮಹಾಪ್ರಭುವೆಸಾಧು ಜೀವರ ಸೃಜಿಸಿದುದಕೆ ಫಲವೇನಿಲ್ಲ ಬಾಧೆ ತಂದಿತ್ತ ಬಳಿಕಚಿಂತ್ರಣಿಯ ವೃಕ್ಷ ವಿಷಾದಕಾರಣ ಎಲ್ಲಿ ಚಿಂತಿಪರು ಸಂತರುಗಳುಬಿತ್ತಿ ಬೀಜವ ಬೆಳೆಸಿ ಕೊಯ್ಯಕುಳಿತವಗೆ ಮಾರುತ್ತರವು ಭಿರಿಯಲ (?)ಆವ ಜನುಮದಲಿಂದ ಸಾವವೊ ಅರಿಯೆ ನೋವು ಮೊಳಕಿನ್ನು ಬಹಳಪ್ರಾರ್ಥಿಸಿದೆ ನಿನ್ನ ಭಕುತನ ಅರ್ತಿಯನ್ನು ಮನದಲಿ ಸ್ಫೂರ್ತಿ ಆರದರಿಂದಲಿ
--------------
ಗೋಪಾಲದಾಸರು
ವೇಣುನಾದ ಬಾರೊ, ವೆಂಕಟರಮಣನೆ ಬಾರೊ |ಬಾಣನ ಭಂಜಿಸಿದಂಥ ಭಾವಜನಯ್ಯನೆ ಬಾರೊ ಪಪೂತನಿಯ ಮೊಲೆಯುಂಡ ನವ-|ನೀತ ಚೋರನೆ ಬಾರೊ ||ದೈತ್ಯರಾವಣನ ಸಂಹರಿಸಿದ |ಸೀತಾನಾಯಕ ಬಾರೊ 1ಹಲ್ಲು ಮುರಿದು ಮಲ್ಲರ ಗೆದ್ದ |ಘುಲ್ಲನಾಭನೆ ಬಾರೊ ||ಗೊಲ್ಲತಿಯರೊಡನೆ ನಲಿವ |ಚೆಲ್ವ ಮೂರುತಿ ಬಾರೊ 2ಮಂದಾರವನೆತ್ತಿದಂಥ |ಇಂದಿರಾ ರಮಣನೆ ಬಾರೊ ||ಕುಂದದೆ ಗೋವುಗಳ ಕಾಯ್ದ |ನಂದನಂದನನೆ ಬಾರೋ 3ನಾರಿಯರ ಮನೆಗೆ ಪೋಪ |ವಾರಿಜಾಕ್ಷನೆ ಬಾರೋ ||ಈರೇಳು ಭುವನವ ಕಾಯ್ವ |ಮಾರನಯ್ಯನೆ ಬಾರೊ 4ಶೇಷಶಯನ ಮೂರುತಿಯಾದ |ವಾಸುದೇವನ ಬಾರೊ ||ದಾಸರೊಳು ವಾಸವಾದ |ಶ್ರೀಶಪುರಂದರವಿಠಲ ಬಾರೊ5
--------------
ಪುರಂದರದಾಸರು