ಒಟ್ಟು 1707 ಕಡೆಗಳಲ್ಲಿ , 105 ದಾಸರು , 1247 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಜಗನ್ನಾಥದಾಸರಾಯರಸ್ತೋತ್ರ ದಾಸಾರ್ಯರ ಚರಣ ಕಮಲಕಾನಮಿಪೆ ಶಿರಬಾಗಿ ಬಿನ್ನೈಪೆ ಏಸು ಜನ್ಮದ ದುಷ್ಕøತ ಪರಿಹರಿಪೆ ಕರುಣವನು ಪಡೆದು ಭೂಸುರಜನ್ಮವ ಸಾರ್ಥಕಗೊಳಿಪೆ ಕೃತಕೃತ್ಯನೆಂದೆನಿಪೆ ದೋಷರಾಶಿಗಳ ನಾಶಗೈಸಿ ವಿ ಶೇಷ ಮಹಿಮದಿಂಭೂಷಿತ ಜಗನ್ನಾಥ ಪ ಗಾಂಗೇಯ ವಸನಸಂಜಾತ ಪ್ರಲ್ಹಾದನಭ್ರಾತ ಮತಿಮಾನಸಹ್ಲಾದ ಸುನಾಮಕನೀತ ನರಹರಿಸಂಪ್ರೀತ ದ್ವಿತಿಯ ಶಲ್ಯಾಖ್ಯನೃಪತಿ ವಿಖ್ಯಾತ ಪುರಂದರ ಸುತನೆನಿಸಿದ ದಸ ದ್ಯತಿ ವಾದೇಶ್ವರನ್ಹಿತದಲಿ ವಲಿಸಿದ 1 ನರಸಂಬಂಧಿತ ಪ್ರಾಂತದ ಕ್ಷೇತ್ರದಲಿ ಬÁ್ಯಗವಟದ ಕರಣಿಕ ಜನಿಸಿದ ಬಾಲಾರ್ಕನು ವರದೇಂದ್ರ ಗುರುವರ್ಯರ ಕರುಣದಲಿ ಶಾಸ್ತ್ರಾಖ್ಯಾಗಸದಿ ವರವಸಂತ ಋತತÀರುಣಿ ಕಿರಣದೊಲ್ ಪರಮತಗಳ ಧಿ:ಕರಿಸಿ ಮೆರೆಯುತಿಹ 2 ಮೂರು ಭಾಷಾತ್ಮಕ ವಿದ್ಯಾಧ್ಯಾತ್ಮ ಸಂಪಾದಿಸಲೋಸುಗ ಮಾರಾರಿನಾಮಕದಾಮಹಾತ್ಮರಡಿಯುಗಳನು ಸೇವಿಸಿ ಮೂರು ರೂಪಾತ್ಮಕನ ವಿಙÁ್ಞನಾತ್ಮ ಅಂಶಗಳನು ತೋರಿಪ ಮೂರು ಮೂರು ಮೂರು ಮೂರು ಮೂರು ವಂದುಸಾರವ ಗೃಹಿಸಿದ ಸೂರಿವರಾಗ್ರÀಣಿ 3 ವರದೇಶ ಶಾಸ್ತ್ರಾತ್ಮಕಪಯದಿಂದ ಸಂಪೂರಿತವಾದ ಮರುತಮತ ತತ್ವತರಂಗಗಳಿಂದ ಸಂಶೋಭಿಸುತಿಹ ಶ್ರೀ ಭೂಸುರರನು ಪಾಲಿಪ ಹರಿಯಭಕುತಿಸುರಮಣಿ ತರುವನೀವಪಯ ಶರಧಿಯನಿಪ ಹರಿ 4 ಸೂರ್ಯ ಸದ್ಭುಕುತರೆನಿಸುವ ಶರಣಜನ ಹೃತ್ಸಂತಾಪಹಭಾರ್ಯ ಕಾಮಕ್ರೋಧಾದಿ ಅರಿಷಡ್ವರ್ಗವ ಭರ್ಜಿಪಹರಿ ಶೌರ್ಯ ಸತ್ಕವಿಕುಲವರ್ಯ ವರದೇಶ ವಿಠಲನ ಚರಣಸೇವಕರ ಸುರತರುವಿನ ತೆರಪೊರೆಯುಂತ ಮೆರೆಯುವ 5
--------------
ವರದೇಶವಿಠಲ
ಶ್ರೀದ ನರಹರಿ ವಿಠಲ | ಕಾದುಕೊ ಇವಳಾ ಪ ಸಾಧು ವಂದಿಯ ಹರಿಯೆ | ವೇದಗೋಚರನೆಅ.ಪ. ವಾಹನ ಹರಿಯ | ನಿರ್ಧಾರವನು ಸರಿಸಿಬದ್ದೆಳೆನಿಸಿಹೆ ದಾಸ | ಪದ್ದತಿಯ ಅವಳಾ 1 ಕರ್ಮನಿಷ್ಕಾಮನದಿ | ಪೇರ್ಮೆಯಲಿ ಗೈಯುತ್ತಭರ್ಮಗರ್ಭನ ಪಿತನ | ನಾಮ ಸುಧೆಯುಣುತಾಕರ್ಮಕ್ಷಯವನು ಪೊಂದಿ | ನಿರ್ಮಲಾತ್ಮಕಳಾಗಿಧರ್ಮಾಖ್ಯ ತವಪಾದ | ಪದ್ಮರತಳೇನಿಸೋ 2 ಪತಿ ಸೇವೆ ಹಿಂದೇಈತರದ ಸುಜ್ಞಾನ | ಮತಿಯಿತ್ತು ಪಾಲಿಸುತಕೃತಕಾರ್ಯಳೆಂದೆನಿಸೊ | ನತಜನ ಸುಪಾಲ 3 ವಜ್ರ ಕವಚವನೆಕರುಣಾದಿಂ ತೊಡಿಸೊ ಹರಿ | ಮರುತಂತರಾತ್ಮ 4 ಮೃಡ ವಂದ್ಯ ಹರಿಯೇಕಡು ಕರುಣಿಮನ್ಮಾತ | ಬಿಡದೆ ನೀ ಸಲಹಯ್ಯಬಡವಿಪ್ರಗೊಲಿದ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀಧರಾಕರ ಕಂಜ ಸೇವಿತ ಪಾದ ಪದ್ಮಜ ಪದದ ಪುರು ಕರು- ಣೋದಧಿಯೆ ಲಾಲಿಪುದು ಪಾಮರನೆಂಬ ಬಿನ್ನಪವ ಸೋದರ ಸ್ಥಿತ ಸಕಲ ಬ್ರಹ್ಮಾಂ- ಪತಿ ನೀನರಿವಿಯಾದರು ಮಾಧವನೆ ಮನದಿರವ ಪೇಳ್ವೆನು ಮನುಜಭಾವದಲಿ 1 ಸುಕೃತ ಫಲವೋ ದೋಷದೂರನೆ ನಿನ್ನ ಪದವನು ಮೀಸಲಳಿಯದೆ ಸೇವೆ ಮಾಳ್ವದು ಲೇಸುಲೇಸೆಂದು ದಾಸಕೂಟದಿ ಸೇರಿ ಮನೆಯಲಿ ವಾಸವಾಗಿರಲಿದರ ಮಧ್ಯಮ ರಾಶೆ ಬಲೆಯಲಿ ಸಿಲುಕಿದೆನು ಕರುಣಾ ಸಮುದ್ರಹರಿ 2 ತನ್ನಿಕೃಷ್ಟ ಮನೋವಿಕಾರಗ- ಳಿನ್ನು ಬಿಡದಲೆ ಪೀಡಿಸುವ ಪರಿ ಯನ್ನು ಪರಮ ಕೃಪಾಳು ನೀನೆಂದೊರವೆನಖಿಳೇಶ ಮಾನ್ನವರ ಮಧ್ಯದಲಿ ಮಾನದಿ ಎನ್ನ ಕಾಪಾಡುವದು ಭಾರವೆ ತನ್ನ ಫಲಗಳ ತಾನೆ ಕೆಡಹುವದುಚಿತವೇ ತೆಗೆ 3 ಯುಕ್ತಿಯಲಿ ನಿನ್ನಂಥ ದೇವರ ರೆತ್ತಿ ವೈದಮೃತವನು ಸುಲಭದೊಳಿತ್ತೆ ದಿವಿಜರಿಗೆ ಔತ್ತರೇಯನ ಕಾಯ್ದ ದ್ರೌಣಿಯ ನೆತ್ತಿಯೊಳಗಿನ ರತ್ನ ಭೀಮನಿ ಗಿತ್ತ ಪರಿಯನು ಪಠಿಸಿ ತಿಳಿದೆನು ಪಾವನಾತ್ಮಕನೆ 4 ಬ್ರಹ್ಮತೇಜೋ ವೃದ್ಧಿ ಬಲಿಯೊಳು ಬ್ಯಾಡ ಸಂಗರ ನಮಗೆನುತ ನಿ- ಮ್ಮಮ್ಮನೊಳ್ ನುಡಿದಂದು ಕಶ್ಯಪನಿಂದಲವತರಿಸಿ ಬ್ರಹ್ಮಚಾರಿಯ ರೂಪದಿಂದೀ ಕ್ಷಮ್ಮೆಯನು ಸೆಳೆದಿಂದ್ರಗಿತ್ತಮ- ಹಾನ್ಮಹಿಮ ನಿನಗಾವದಘಟಿತ ನೀರಜಾರಮಣ5 ನಾರದರ ನುಡಿ ನಿಜವೆನುತ ಮೂ- ರಾರು ಭಕ್ತಿಯ ತಾಳ್ದ ಮನುವಿನೊ- ಳಾರುಭಟಿಸುತ ಕಾಶ್ಯಪನು ಮದವೇರಿ ನಿಂದಿರಲು ಯಾರು ತಿಳಿಯದ ತೆರದಿ ಕಂಭದಿ ಮೃಗ ರೂಪವನು ಹೆ- ಮ್ಮಾರಿ ದೈತ್ಯನ ತರಿದು ತ್ವತ್ಪದವಿತ್ತೆ ದಾಸನಿಗೆ 6 ಏನು ಶ್ರಮವಿಲ್ಲದಲೆ ಪಿಡಿದು ದ- ಶಾನನನ ತೊಟ್ಟಿಲಿಗೆ ಕಟ್ಟಿ ಪ್ರ- ವೀಣತೆಯ ತೋರಿಸಿದ ವಾಲಿಯ ಪಕ್ಷವನು ತ್ಯಜಿಸಿ ದೀನ ಬಾಂಧವನೆಂಬ ಬಿರುದನು ದಿಟವೆ ನಿಶಿತದ್ರಾಜ್ಯ ಪದವಿಯ ಭಾನುಜನಿಗೊಲಿದಿತ್ತ ಭಕ್ತಜನಾರ್ತಿ ಭಂಜನನೆ 7 ಶಬ್ದಗೋಚರವಾದ ಕಥೆಗಳು ಬದ್ಧವೆಂಬುದು ಪೂರ್ವದನುಭವ ಸಿದ್ಧವಾಗಿಹುದೆನಗೆ ಸಜ್ಜನಲಬ್ಧಪದ ಪದ್ಮ ಬುದ್ಧಿಹೀನತೆಯಿಂದ ನುಡಿದರು ಮಧ್ವವಲ್ಲಭ ನಿನ್ನ ದಾಸನ- ನುದ್ಧರಿಸು ನೀನಲ್ಲದೆನಗಿನ್ನಾರು ಗತಿ ಹರಿಯೆ8 ಒಡೆಯರೆಂಬರನೆಲ್ಯುಕಾಣದೆ ಉಡುವದುಂಬುದಕೇನು ದೊರೆಯದೆ ಗಿಡವ ನಿಲುಕದ ಬಳ್ಳಿಯಂದದಿ ಬಡುವ ಕಷ್ಟವನು ತಡೆಯಲಾರದೆ ತಳಮಳಿಸುತಿರೆ ಪಿಡಿದು ಕರವನು ಕಾಯ್ದೆಯೆನ್ನನು ನುಡಿವದೇನಖಿಳಾಂಡ ನಾಯಕ ನಿನ್ನ ಮಹಿಮೆಯನು 9 ಮಾರಿಯಂದದಿ ಮಧ್ಯದೊಳಗೊ- ಬ್ಯಾರುವೇನೆಂಬಧಮ ಹೂಣನು ತೀರಿಸುವೆನೆಂದೆನ್ನೊಳಿಲ್ಲದ ದೂರ ಸಂಗ್ರಹಿಸಿ ಗಾರಗೊಳಿಸುವದರಿತು ಕಕ್ಷವ ಹಾರಿಸುತ ಸುರವಂದ್ಯ ಮೂರ್ತಿಯ ತೋರಿ ತಂದಿಲ್ಲಿರಿಸಿ ಪೊರೆದವನ್ಯಾರು ಪೇಳ್ದೊರೆಯೆ 10 ಶ್ರೀಶ ನಿನ್ನ ಪದಾಬ್ಜ ಪೊಗಳುವ ದಾಸ ಕೂಟದಿ ಸೇರಿ ಸೇವೆಯ ಬ್ಯಾಸರದೆ ನಡೆಸುತಿರೆ ಮತ್ತೊಬ್ಬಾಸುರನ ತೆರದಿ ದ್ವೇಷದಿಂದಿರೆ ದೂರ ಓಡಿಸಿ ದುರಿತ ಭಯಗಳ ಪರಿಹರಿಸಿದ ಮ- ದೀಶ ನೀನೆಂದನವರತ ನಂಬಿರುವೆ ಶ್ರೀಪತಿಯ 11 ಇಷ್ಟು ಪರಿಯಿಂದೆನ್ನ ರಕ್ಷಿಸು- ತಿಷ್ಟ ಫಲಗಳನೀವ ವೆಂಕಟ ಬೆಟ್ಟದೊಡೆಯನೆ ಬೇಡಿಕೊಂಬುವೆ ಒಂದು ಕೃತ್ಯವನು ಮಾನವ ನುಡಿಯಕಾಡನು ಸುಟ್ಟು ಸೂರೆಯಗೈದು ನಾ ಮನ ಸಿಟ್ಟ ತೆರದಲಿ ತೋರು ಚಿತ್ತವ ಸೃಷ್ಟಿಕರ ಶ್ರೀಶ 12
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಧವ ಮಾಮವ ಪ್ರಣತ ಜಾನರ್ತಿ ಹರಭೋ ಭೂಧರಜಾವರನುತಪದ ಪ ಸಾದರದಲಿ ನಿನ್ನಾ ಪಾದವ ಭಜಿಸುವೆ ನಾ ಮೋದವ ಕೊಡು ಕರುಣಾಂಬೋಧಿಯೆ ಮಧು ಮಥನಾ ಸದಾಮಲಾಚರಿತನೆ ಒದಗಿಸುತವ ಪದದಲಿ ಮನ 1 ನತಜನ ಕೃತ ಕರುಣಾ ಶ್ರೀತಜನರಘಹರಣ ಶೃತಿಗಣನುತ ಶರಣಾಗತ ಜನವತ್ಸಲನ ನತಿಸುವೆ ಸತತದಿ ರತಿಪತಿ ಪಿತಕರ ಪಿಡಿವದು 2 ಧರಿ ಸುರ ಜನ ಪ್ರಿಯಾ ಕರುಣದಿ ಭವಮಾಯಾ ಪರಿಹರಿಸೆಲೊ ಜೀಯಾ ವರಕಾರ್ಪರ ನಿಲಯಾ ನರಹರಿ ವಿಠಲನೆ ವರಪಿಪ್ಪಲತರು ಸಂಸ್ಥಿತ 3
--------------
ಕಾರ್ಪರ ನರಹರಿದಾಸರು
ಶ್ರೀನಾಥ ಸಲಹೊ ಸತತ ನಿನ್ನ ಪದ ಧ್ಯಾನಾನಂದವಿತ್ತು ಪ ತಂದೆ ನಿನ್ನನುಗ್ರಹದಿ | ಜಗದೊಳಗೆ ಬಂದೆ ಭೂಸುರ ಜನ್ಮದಿ ಪೊಂದಿ ತ್ವತ್ವದ ಭಜಿಸದೆ ಭವದೊಳಗೆ ಬೆಂದು ಬೆಂಡಾದೆನು ನಾ1 ಪಗೆಯಾರುಖಳರು ಎನ್ನ | ಪಾಶದಲಿ ಬಿಗಿದು ಬಂಧಿನಿ ಎಳೆಯುತ || ಬಗೆ ಬಗೆಯ ಮಂಗನಂತೆ ಕುಣಿಸ್ಯಾಡಿ ಹಗರಣವ ಮಾಡುತಿಹರೋ 2 ಪರಸ್ವತಿಯರ ರೂಪನೋಡಿ | ಮರಳಾಗಿ ಬೆರೆತವಳ ಕ್ರೀಡಿಸುತಲಿ ಪರಗತಿಯ ಚಿಂತೆ ಬಿಟ್ಟು | ಪರಮಾತ್ಮ ನರಕಕ್ಕೆ ಗುರಿಯಾದೆನೋ 3 ಧನದಾಪೇಕ್ಷೆಯಿಂದ | ಧನಿಕರ ಮನೆಗ್ಹೋಗಿ ಲಜ್ಜೆ ತ್ಯಜಿಸಿ ಘನದಾತರೆಂದವರನು | ಬಲು ತುತಿಸಿ ದಿನಗಳೆದೆ ಶುನಕನಂತೆ 4 ಹರಿನಿನ್ನವಾಸರದಿ | ಉಪವಾಸ ಇರುಳು ಜಾಗರವ ಜರಿದು ಬರಿದೆ ಕಾಲವ ಕಳೆದೆನೋ ರವಿಸುತಗೆ | ಅರುಹಲು ಬಾಯಿಲ್ಲವೋ 5 ಪವಮಾನ ಕೃತಸುಶಾಸ್ತ್ರ | ಪ್ರವಚನವ ಕಿವಿಗೊಟ್ಟು ಕೇಳಲಿಲ್ಲ ಅವನಿ ದ್ವಿಜರ ಪಾದವ ಸೇವಿಸದೆ ಭಾರ ನಾನಾದೆನೊ 6 ಬಾಯೆಂದು ಕೂಗಿ ಕರೆವೆ | ಸರ್ವೇಶ ಓಯೆಂದು ಬೇಗ ಬಾರೋ || ಮಾಯಾ ಮೋಹವನೆ ಬಿಡಿಸೋ | ನಿನ್ನಂಘ್ರಿ ತೋಯಜಧ್ಯಾನವನಿತ್ತು 7 ಶಿಲೆಯಾದ ಸಲಹಿದ ತೆರದಿಲಿ ತುಳಿದು ಸಲಹಿದ ತೆರದಲಿ ಇಳಿಸುರನ ಮಹತ್ಪಾಪ ಕಳೆದವಗೆ ಸಲೆಮುಕ್ತಿ ಸಲಿಸಿದಂತೆ 8 ಇಂದಿನಾರಭ್ಯವಾಗಿ | ಎನ್ನಿಂದ ನಿಂದ್ಯಕರ್ಮವ ನಡೆಸದೆ ಮಂದರೋದ್ಮರನೆ ನಿನ್ನ |ಸದ್ಭಕ್ತ ವೃಂದದೊಳು ಕೂಡಿಸಯ್ಯ 9 ಅಪರಾಧ ಕ್ಷಮಿಸುವಲ್ಲಿ | ನಿನ್ನಂಥ ಕೃಪಣವತ್ಸಲ ಕಾಣೆ ಕೃಪೆಯಿಂದ ಕರಪಿಡಿಯೊ ಕರಿವರದ ಕೌಸ್ತುಭ ಕೃಷ್ಣ 10 ನಿನ್ನ ನಾಮದ ಭೂಸುರ ಕುಲಹೀನ ಕನ್ಯೆಯಳ ಸಂಗ ಮಾಡಿ ನಿನ್ನ ಪರ್ವತ ಮೆಟ್ಟಿಲು ಅವಗೊಲಿದು ನಿನ್ನಾಪ್ತನೆನಿಸಿದಂತೆ 11 ನಿನ್ನೊಲುಮೆ ಪಾತ್ರರಾದ ಗುರು ಜಗನ್ನಾಥಾಖ್ಯ ದಾಸಾರ್ಯರ ಸನ್ನಿಧಾನದಲಿ ಇಪ್ಪ | ಇವನೆಂದು ಮನ್ನಿಸೊ ಮಹಮಹಿನೆ 12 ದುರಿತ ರಾಶಿ | ಪೇಳಲ್ಕೆ ಭೂಮಿಧರಗಳವಲ್ಲವೋ ಪ್ರೇಮದಿಂದಲಿ ಪಾಲಿಸೋಮಮಸ್ವಾಮಿ ಶಾಮಸುಂದರ ದಯಾಳು 13
--------------
ಶಾಮಸುಂದರ ವಿಠಲ
ಶ್ರೀನಿವಾಸ ತವಚರಣಸರೋರುಹಮಾನತೋಸ್ಮಿ ಸತತಂ ಸಾನುರಾಗ ಮನಸಾ ವಚಸಾ ಶಿರ ಸಾನುಕೂಲಫಲದಂ ಶುಭಚರಿತಂ ಪ ಶ್ರೀಶವಾಸ ಹಿರಣ್ಮಯ ವಾಸ ಸಮಸ್ತಾವಾಸ ತರಣಿಶತ ಭಾಸ ಸುಮನೋಲ್ಲಾಸ ವಿಜಿತರೋಷ ಭೂಷಿತಾಂಗ ವಿಶೇಷ ಕರುಣ ಮೃದು ಭಾಷಣ ಸಜ್ಜನ ಪೋಷಣ ನಿರ್ಜಿತ ದೂಷಣ ಭವಜಲ ಶೋಷಣ ಪೂಷಣ 1 ಪುಂಡರೀಕಾಸನ ಖಂಡಪರಶು ಅ ಖಂಡಲ ಮುಖ ಸುರಮಂಡಲ ಸೇವಿತ ಪಂಡಿತ ರಣಶೌಂಡ ಪುಂಡರೀಕನಯ- ನಾಂಡಜವಾಹನ ಖಂಡಿತಕೇಶ ಕೋ ದಂಡ ಕೃತಾರ್ಚನ ಪುಂಡರೀಕಗಿರಿ ಮಂಡನ ಹಿಮಕರ ಮಂಡಲ ಸನ್ನಿಭಕುಂಡಲಾಭರಣ 2 ವಾರಿದನೀಲಶರೀರ ಧರಾರ ಧೀರ ಸುಮಂದರಧಾರಣ ಚತುರ ಕರಾಗ್ರವಿ ದಾರಿತ ಶೂರ ಹಿರಣ್ಯಕವೀರ ನರಮೃಗೇಂದ್ರಾ ಮಾರಜನಕ ಸುರವಾರ ವಂದ್ಯಪದ ಪರಿ ವ್ಯಾಘ್ರಗಿರಿ ವರದವಿಠಲ ಹರಿ 3
--------------
ವೆಂಕಟವರದಾರ್ಯರು
ಶ್ರೀನಿವಾಸ ಶ್ರೀಮನೋಲ್ಲಾಸ ಶ್ರೀನಿವಾಸ ಪ ಶ್ರೀನಿವಾಸ ಶುಭಮಾಮವ ಗಾನಲೋಲಿತ ಸನ್ಮಾನಿತಲೀಲಾ ಅ.ಪ ಭೂದೇವನಿವಹ ಸಂಭಾವಿತ ಭಾವ 1 ರಾಮರಾಮ ರಘುವಂಶ ಲಲಾಮ ರಾಮ ರಾಮ ರಮ್ಯಗುಣಧಾಮ ಮುನಿಜನಪ್ರೇಮ ದನುಜಸಂಗ್ರಾಮಭೀಮ2 ಕಂಜನಾಭ ಕಾಲಾಂಬುಧಾಭಾ ಕಂಜನಾಭ ರಿಪು ವಕ್ತ್ರ 3 ಸುಂದರಾಂಗ ಸುಕೃತಾಂತರಂಗ ಸುರಸುಂದರೀನಿಚಯ ನಂದಗೋಕುಲಾನಂದ ಮುಕುಂದ 4 ಭವ್ಯರೂಪ ಭಕ್ತಾಲಯ ದೀಪ ಭವ್ಯರೂಪ ಧೃತ ದಿವ್ಯಚಾಪ ಸುರಭಾವ್ಯಮಹಿಮ ಮಾಂಡವ್ಯಸುಸೇವ್ಯ 5 ವ್ಯಾಘ್ರಶೈಲಾವಾಸ ಸುಶೀಲಾಶೈಲಶಿಖ- ರಾಗ್ರಲೋಲ ದೇವಾಗ್ರಗಣ್ಯ ಭಕ್ತಾಗ್ರ ಶರಣ್ಯ 6 ದುರಿತದೂರಾ ದುಃಖಾಭ್ರಸಮೀರಾ ದುರಿತದೂರ ಘಣಿಗಿರಿವಿಹಾರ ಶ್ರೀವರದವಿಠಲಾ 7
--------------
ವೆಂಕಟವರದಾರ್ಯರು
ಶ್ರೀನಿವಾಸ ಸುಗುಣೈಕ ನಿಧೆ ಶ್ರೀಮಾನಸಹಂಸ ದಯಾಜಲಧೆ ಪ ತೋಯಸನ್ನಿಭಕಾಯ-ಮನೋಜನಿಕಾಯ ಮಾಪಮಧುರಾಲಾಪ ನಿಧಾಯಹೃದಿಧ್ಯಾಯಾಮಿಹರೆ 1 ವಿಗ್ರಹ ಮಖಿಳಶುಭಗ್ರಹಣಂ ಮದನುಗ್ರ ಹಾರ್ಥಮದಿ ತಿಷ್ಠವಿಭೋ ಸಮರ್ಯಾಂ ಸ್ವೀಕುರುಭೋ 2 ಪಾದ್ಯಾಘ್ರ್ಯಾಚಮನಾದ್ಯಮಖಿಳ ಜಗ- ದಾದ್ಯಕಲ್ಪಿತಂ ಭವದರ್ಥಂ ಸುಖೋಷ್ಣಮಿದಂ 3 ನಿಸ್ತುಲಕಾಂಚನವಸ್ತ್ರಮಲಂಕುರು ಕಸ್ತೂರಿತಿಲಕಂ ಸುಮುಖೋ ಕೌಸ್ತುಭರತ್ನ ಮಜಸ್ತುತಮಂಡನ ಮಸ್ತುತನೌಗುಣ ಭೂಷಣತೇ 4 ಮಂದಾರಕಾ ಮಾಲ್ಯಾಕಲಿತಂ ಮಲಂಕುರುಸನ್ನಿಹಿತಂ 5 ಗಂಧರ್ವಾಮರ ವಂದಿತ ಮಲಯಾ ಗಂಧಲೇಪನ ಮಾಕಲಯಾ ಧೂಪಂ ಜಿಘ್ರಹರೇ 6 ತಾಪತ್ರಯ ಪರಿತಾಪನಿವಾರಣಂ- ತಾಪಸಮಾನಸದೀಪ ಹರೇ ರೂಪಾಲೋಕಯ ಶ್ರೀನೃಹರೇ 7 ಮಂತ್ರತಂತ್ರ ಯಂತೃಣಮೂರ್ತೇ ಸುಮಂತ್ರಪುಷ್ಪಂ ಸ್ವೀಕುರುಹೇ 8 ವಿಚಿತ್ರದಂತ ಚಾಮರಯುಗಳಂ ಶ್ರೋತ್ರಮಿತ್ರ ತೋರ್ಯತ್ರಿಕಮಾಕಲಯಾತ್ರ ಭೋಗಾಮಧಿರಾಜ ಕಳಂ 9 ಪಾಯಸಮತಿಹೃದ್ಯಂ ಮಧುನಾಸ್ವೀಕುರು ನೈವೇದ್ಯಂ 10 ಶಿಶಿರಾಂಬುಪಿಬಾಮಲ ಘನಸಾರಂ ಬಹುಮನ್ವಸ ಕರ್ಪೂರಂ 11 ಪರಿವಾರ ವಿಭೋ ಕರ್ಪೂರಾರ್ತಿಕಮಂಗೀಕುರುಭೋ 12 ಕುಕ್ಷಿಭುವನ ಸಂರಕ್ಷಿತ ಸೇವಕ ಪಕ್ಷಪ್ರದ ಕ್ಷಿಣಮನುವಾರಂ ಪಕ್ಷಿಗಮನನಿಜ ವಕ್ಷೋಧೃತ ಶುಭಲಕ್ಷಕರೋಮ ನಮಸ್ಕಾರಂ13 ಸಾಗರತನಯಾಯಾಗವಿಹಿತ ಭೂಭಾಗದೇಯ ನೀಳಾ ಸಹಿತಂ ಕುರುಲಸಿತಂ14 ಆರಾಧನಮ ಪಜಾಯತಮುಪಚಾರಮಿಷೇಣ ಮಯಾ ಚರಿತಂ ನಾರಾಯಣ ಚರಣಾರಾಧನಮಿತಿ ಕಾರುಣ್ಯೇನ ಕ್ಷಮಸ್ಸೇದಂ 15 ಚರಣಾಗತ ಜನಭರಣಾಲಂಕೃತ ಹರಿಣಾರ್ಯದ್ರಿ ನಿಕೇತನ ತೇ ಚರಣಾರಾಧನ ಕರಣಾಂಚಿತಮಿತಿ ವರದ ವಿಠಲಗೀತಂ ತನುತೇ 16
--------------
ಸರಗೂರು ವೆಂಕಟವರದಾರ್ಯರು
ಶ್ರೀನಿವಾಸ ಸುಜನೋದ್ಧಾರ ಏನು ತಾತ್ಸಾರ ನಾನು ನಿನ್ನ ದಾಸನೆಂದು ಮಾನವರು ನುಡಿದ ಮೇಲೆ ಪ. ಪುಟ್ಟಿದಾಕ್ಷಣಾದಿಯಾಗಿ ದುಷ್ಟಸಂಗಕೊಳಗಾಗಿ ನಷ್ಟಪ್ರಜ್ಞೆಯಿಂದ ಬಹು ಕಷ್ಟಿಯಾದೆನು ಕೃಷ್ಣ ಶಬ್ದ ವಾಚ್ಯಪರಮೇಷ್ಠಿ ಜನಕ ನಿನ್ನ ಮನ ಮುಟ್ಟಿ ಭಜಿಸದೆ ಬಯಲೆಷ್ಟವ ಬಯಸುವೆನಲ್ಲೊ 1 ದಾನಧರ್ಮ ಜಪತಪ ಮೌನ ಮೊದಲಾದ ಸ- ತ್ಸಾಧನ ಹೀನನಾದರು ನಿನ್ನಾನುರಾಗದಿ ಮನಮುಟ್ಟಿ ಕ್ಞಣವಾದರು ಧ್ಯಾನಿಸಲು ಸಕಲವಂದ್ಯ ಮುನಿಗಮ್ಯ ಪದವನೀವಾತನು ನೀನೆಂದೊಂದೆ ತಿಳಿದೆ 2 ಮನವಚನ ಕಾಯಕಾದನುದಿನ ಕೃತವಾದ ಘನ ಪಾಪಂಗಳಿಗೆ ನಾ ಕೊನೆಗಾಣೆನು ದನುಜಾರಿ ರಾಮ ಅನಿಮಿತ್ತಬಂಧು ಎಂಬ ಘನತೆ ತೋರಿಸಿ ನಿನ್ನ ತನಯನೆಂದೆಂನ ಸಲಹೊ 3 ವೀರವೇದೋದ್ಧಾರ ವರಮಂದರಧರ ನರ ಹರಿಕುಬ್ಜಾಕಾರ ಪೃಥ್ವೀಭಾರವಾರಕ ವಾರುಧಿ ಬಂಧಕಯದು ವೀರ ತ್ರಿಪುರ ಸ್ಮರ ಹರನಿಂದ ತರಿಸಿದ ತುರಗವೇರಿದ ಧೀರ 4 ಮಂದಮತಿಯಾದ ಎನ್ನ ಬಂಧುವಾಗಿ ಕೈಯ ಪಿಡಿದು ಮುಂದು ಗಾಣಿಸುವೆನೆಂದು ಹಿಂದೆ ರಕ್ಷಿಸಿ ಇಂದು ಎನ್ನ ಕುಂದನೆಣಿಸಿ ತಂದೆ ನೀನುಪೇಕ್ಷಿಸಲು ಮುಂದೆ ಕಾಯ್ವರಾರೊ ಕರುಣಾಸಿಂಧು ಅನಿಮಿತ್ತ ಬಂಧು 5 ಮಾನಗೇಡಿನಿಂದ ದ್ವೇಷಿ ಮಾನವಾಧಮರ ಮುಂದೆ ಶ್ವಾನಕಿಂತ ಕಡೆಯಾಗಿನ್ನೇನು ಮಾಡಲೊ ನೀನೆ ಗತಿಯೆಂಬ ಮನೋಧ್ಯಾನದಿಂದ ಬಂದೆ ನಿಂದು ಕಾನನದ ಶಿಶುವಿದೆಂದು ಮಾನಿಸಿ ರಕ್ಷಿಸೊ ತಂದೆ 6 ಘಾಸಿಗೊಳಿಸುತೀ ಆಶಾಪಾಶದಿಂದ ಎನ್ನ ಬಿಡಿಸಿ ದಾಸರ ದಾಸ್ಯವನಿತ್ತು ಪೋಷಿಸೆನ್ನುತ ಮೀಸಲಾಗಿಹೆನು ಶ್ರೀನಿವಾಸ ಬೇಗ ಸಲಹೊ ಬಂದು 7
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿವಾಸ-ಶ್ರೀನಿವಾಸ-ದೀನರಕ್ಷಕ ದಾನಿ ನೀನೆಂದು ನಂಬಿದೆ ಪ ಜ್ಞಾನಗಮ್ಯನೆ ವಾಙ್ಮನೋಮಯ ಮಾನಿ ಮಾನಸರಾಜಹಂಸ ಅ.ಪ ಲೋಕಭರಿತ ಶ್ರೀಕಳತ್ರ-ತ್ರಿಕಕುದ್ಧಾಮದಧಿನಾಥ ಶ್ರೀಕಮಲಭವಾದಿವಂದಿತ ಮುಕುತಾಮುಕುತಜನ ಸಂಸೇವಿತ ಅಖಿಳಾಗಮಕೆ ಅತೀತ-ಶ್ರೀಕರಪಲ್ಲವಪೂಜಿತ ಅಖಿಳಾಜಾಂಡದಿ ವ್ಯಾಪ್ತ-ಭಕುತರಗತಿಯಪ್ರದಾತ1 ನಿಗಮವಿತ್ತೆ ನಗವಪೊತ್ತೆ ಬಗೆದು ಬೇರ ನರ- ಮೃಗಾಂಗನೇ ತ್ಯಾಗಿಯೊಳು ಪೋಗಿ ನೃಪರ ನೀಗಿಸಿ ವನವನವಾ ಚರಿಸಿದೆ ಬಗೆಬಗೆ ಆಟದಿ ಬಾಲ್ಯದಿ ಹಗೆಗಳ ಮಡುಹಿದೆ ಕಾರ್ಯದಿ ಆಗಮಕರ್ಥಮೋಹಿಸಿ-ಜಗದೊಳುತುರಗವನೇರ್ದೆ 2 ಅಂತರಾತ್ಮಪರಮಾತ್ಮ ಅನಂತಾನಂತರೂಪಾತ್ಮ ಪ್ರಾಂತಕಾಣದೇ ನಿರಂತರದಿ ನಿಂತು ಸಿರಿ ನಿತ್ಯಮುಕ್ತಳಾದಳೋ ಕಂತುಪಿತ ಎನ್ನಂತರದಿ ನಿಂತಿಹೆ ನಿರಂತರದಿ ಕಾಂತ ಶ್ರೀ ವೆಂಕಟೇಶನೆ-ಅಂತರ್ಬಹಿರದಿ ನಿಂತಿಹ ಪ್ರಭೊ 3 ಅಪ್ರಮೇಯ ಸ್ವಪ್ರಕಾಶ ಅಪ್ರಾಕೃತಗುಣಗಣಾರ್ಣವ ಸ್ವಪ್ರಯೋಜನರಹಿತ ಸತತ ತ್ವತ್ಪ್ರಸಾದದಿಂದ ಜಗವು ಕ್ಷಿಪ್ರದಿ ನೃಪಸಂಸ್ತುತಿಸೆ ವಿಪ್ರನಮನ ಸಂತೈಸಿದೆ ಅಪ್ರತಿಹತಮಹಿಮನು ಸುಪ್ರೀತನು ಜನರ್ಗೆ 4 ಪರಮ ಪುರುಷ ಪೂರ್ಣಾನಂದ ಪರಮಕರುಣಶರಧಿಯೆ ಉರಗಾದ್ರಿವಾಸ ವಿಠ್ಠಲ ಕರಾವಲಂಬನವಿತ್ತು ಸಲಹೆಲೋ ಪರಿಪರಿ ಎನ್ನಪರಾಧ ನೋಳ್ಪರೆ ಭೋ ಜಗದೊಡೆಯ ಕರುಣವು ತೋರದೆ ನೀನಿರೆ ನರಪಶು ನಾನೆಂತು ಬಾಳ್ವೆನೋ5
--------------
ಉರಗಾದ್ರಿವಾಸವಿಠಲದಾಸರು
ಶ್ರೀನಿವಾಸ-ಶ್ರೀನಿವಾಸ-ಶ್ರೀನಿವಾಸ ಪ ಶ್ರೀನಿವಾಸ ನಾನಿಹೆ ನಿನ್ನ ದಾಸ-ನಿನ್ನ ದಾಸ ನಿನ್ನದಾಸ ಅ.ಪ. ಈಶ, ತರಿಯುವೆ ಕ್ಲೇಶಾ ಕೊಡುಲೇಶ, ಕೊಡುಲೇಶ ಜೀಯ, ಸಡಗರ ದೈವ ಬಡವನು ನಾನು ಕೊಡುವುದು ಏನು, ಅಡಿಗಳನೀಡು, ಇಡುವೆನು ಮೌಳಿ, ಇಡುವೆನು ಮೌಳಿ ಘನಸುಖದಾತ, ಚಿನ್ಮಯಗಾತ್ರ, ವನರುಹ ನೇತ್ರ, ಅನಿಲನಸೂತ್ರ ಅನುದಿನ ತನುಮನನಾಥ ತನುಮನನಾಥ ಕುಂದುಗಳಳಿದು, ಕಂದನ ಸಲಹೋ ಕಂದನ ಸಲಹೋ 1 ವೇದವ್ಯಾಸ, ವಾದಾಗಾರ, ಬೋಧಿಸಿವಿದ್ಯೆ ಸಾಧನೆಗೈಸೋ ವೇಧನ ತಂದೆ ವೇಧನತಂದೆ ಸೋದರ ಪ್ರಜೆಗಳು ದೈತ್ಯರ, ಖೇದವನೀಡ್ಡೆ ಖೇದವನೀಡ್ದೆ ಧೀರವರಾಹ, ಯಾಗಶರೀರ, ಬಹುಗಂಭೀರ ಶೃತಿಗಳಸಾರ ಸಾರ ಸಾರಕೆ ಸಾರ ಕಂಭದಿಬಂದೆ ಕಂದನ ಪೊರೆದೆ ಕಂದನ ಪೊರೆದೆ 2 ಬಲಿಯೆಡೆನಿಂದ ಬೇಡುವೆನೆಂದ ಬೇಡುವೆನೆಂದ ಮೂರಡಿಯಿಂದ ಬೆಳೆಯುತ ಬಂದ ಬೆಳೆಯುತ ಬಂದ ಭೂಮಿಯು ಮುಗಿಯೆ ಶಿರವನ್ನೀಯೆ, ಭಕ್ತನಕಾಯೆ, ಬಾಗಿಲಕಾಯ್ದೆ, ಬಾಗಿಲಕಾಯ್ದೆ ವಿಪ್ರರ ಪೊರೆದ, ವರಸಮರಿಲ್ಲ ವರಸಮರಿಲ್ಲ ಭಾರ್ಗವರಾಮ, ಋಷಿಗಣಸ್ತೋಮ, ದೈತ್ಯವಿರಾಮ, ಸತ್‍ಜನಪ್ರೇಮ, ಮಂಗಳ ನಾಮ ಮಂಗಳನಾಮ 3 ತಾರಕನಾಮ, ಕಲಿಗಿವ ಭೀಮ, ದಶರಥರಾಮ, ಸೀತಾರಾಮ ಜಯಜಯರಾಮ ಜಯಜಯರಾಮ ಲಕ್ಷ್ಮಣನಣ್ಣ, ಸಗುಣಸಂಪನ್ನ, ಜಗಕಿವ ಅನ್ನ, ಬಿಡಬಿಡಬೆನ್ನ ಪ್ರಾಣನೆ ಅನ್ನ, ಕೇವಲನಣ್ಣ, ರವಿಶಶಿಕಣ್ಣ, ಸಿದ್ಧವಿದಣ್ಣ ಆಗಿಸಿ ಯಾಗ, ಸಾಗುತ ಬಂದ ಸಾಗುತ ಬಂದ ಕೊಂದನು ಖಳರ, ಮುಂದಕೆ ನಡೆದ 4 ಮುಟ್ಟಿ, ಕಳ್ಳನ ಮೆಟ್ಟಿ ರಾಜ್ಯವಕೊಟ್ಟ ಜಗಜ್ಜಟ್ಟಿಜಗಜ್ಜಟ್ಟಿ ನಿಜಮುನಿಇವನೆ, ನಿಜವಿಧಿ ಇವನೆ, ಸರ್ವೇಶ, ಸರ್ವೇಶ ಬೆಣ್ಣೆಯ ತಿಂದ ಪೋರನು ಎನಿಸಿ, ಚೋರನು ಎನಿಸಿ ಎನಿಸಿ, ಕ್ರೂರನು ಎನಿಸಿ, ನಾರೇರ ವರಿಸಿ, ಭೂರಿದನೆನಿಸಿ, ಲೀಲೆಯ ತೋರ್ದ 5 ಊರಿಗೆ ಬಂದೆ, ಜರೆಸುತ ಬಂದು, ಬಹುಮಡಿನೊಂದು, ಮರಳಿಯು ಬಂದು ಕದನಕೆ ನಿಂದ, ಬಲುಭಂಢ, ಬಲುಭಂಢ ರಾತ್ರಿಯಲೊಂದು ಸಾಗಿಸಿ ಬಂದು, ವೊಕ್ಕೂ, ತಾಮುಕುಂದ ತಾಮುಕುಂದ, ಸೂತ, ಜಗವಿಖ್ಯಾತ ಕೊಲ್ಲಿಸಿದಾತ ಸರ್ವಸಮರ್ಥ, ಸರ್ವಸಮರ್ಥ ಕಾಲದಿ ಭೇದ ಇಲ್ಲವು ಎಂದು ವಿಭುಶರಣೆಂಬೆ, ವಿಭುಶರಣೆಂಬೆ 6 ವೇದಸುವೃಂದ, ತ್ರಿಪುರರಕೊಂದ, ಬಲ್ಲ, ಎಲ್ಲವ ಬಲ್ಲ ನಿತ್ಯವಿದೆಲ್ಲ, ತಿಳಿದವರಿಲ್ಲ, ಸಾರಿಸಾಕಲ್ಯ ಜಗವನೆಲ್ಲ, ಬಿಗಿದಿಹನಲ್ಲ, ನಾಮದಿನಲ್ಲ, ನಾಮದಿನಲ್ಲ, ಆದಿಯು ಇಲ್ಲ, ಮಧ್ಯವು ಇಲ್ಲ, ಕೊನೆತಾನಿಲ್ಲ, ಖೇದವು ಇಲ್ಲ, ಮೋದವೆ ಎಲ್ಲ, ಭಗನಿಹನಲ್ಲ ಅಪಜಯವಿಲ್ಲ, ಶ್ರೀಗಿವನಲ್ಲ, ಅಪ್ರತಿಮಲ್ಲ, ಪ್ರಕೃತಿಯು ಅಲ್ಲ, ಸ್ವಾಮಿಯು ಇಲ್ಲ, ತಾನೇ ಎಲ್ಲ ಪ್ರೇರಿಪನೆಲ್ಲ, ಭಿನ್ನನು ನಲ್ಲ, ಸರ್ವೋತ್ಕøಷ್ಠ 7 ಕುಜನರ ಮುರಿಯೆ, ಎನಿಸಿ, ಧರ್ಮವನುಳುಹಿ, ಭಕ್ತರಿಗೊಲಿದು, ಪೊರೆವುದು ಸತ್ಯ, ಪೊರೆವುದು ಸತ್ಯ, ಸತ್ಯರ ಸತ್ಯ, ಸಂತರ ಮಿತ್ರ, ಪರಮ ಪವಿತ್ರ, ಲೋಕವಿಚಿತ್ರ ಸುಖಚಾರಿತ್ರ, ಮಂಗಳಗಾತ್ರ, ನಿಖಿಳಸುಭರ್ತ, ಭಕ್ತರ ಭೃತ್ಯ ನತ ಜನಪಾಲ, ವೇದಗಳೆಲ್ಲ, ಶಬ್ದಗಳೆಲ್ಲ, ಘೋಷಗಳೆಲ್ಲ ನಾಮಗಳೆಲ್ಲ, ಇವನನೆ ಎಲ್ಲ, ಪೊಗಳುವವಲ್ಲ, ಮುಕ್ತರಿಗೆಲ್ಲ, ಪ್ರಕೃತಿಯ ಸತ್ತಾ, ಸಕಲವ ನೀತ, ನೀಡುವ ದಾತ, ಸರ್ವಸುವ್ಯಾಪ್ತ, ಸರ್ವಸ್ವತಂತ್ರ8 ವೇದವ್ಯಾಸ, ಬದರೀನಿವಾಸ, ವೇದಸ ಪೀಠ, ಸಾಧಿಸುವಂತ್ಯ ಮೋದಕವೀಂದ್ರ, ಮಧ್ವನಪೋಷ, ಆದರವೀಯೊ ಪಾದಗಳಲ್ಲಿ ವೇದಗಳಳಿಯೆ, ವಿಧಿ ಮುಖಸುರರು, ಪಿಡಿದರು ಪಾದ ಮಾಧವ ನೀನು ಮೇದಿನಿಗಿತ್ತೆ ಸೂತ್ರ ಗೈದ ಮಹೇಶ, ವೇದಕುಮಿಗಿಲು, ಭಾರತಕರ್ತ, ಭಾರತ ಕರ್ತ ಛಂದದಸುಕಾಯ ಕುಡಿಸೈ ಜೀಯ ಹರಿಸುತಮಾಯ, ಹರಿಸುತಮಾಯ, ಹರಿಸುತಮಾಯ 9 ಶ್ರೀ ಇಹವಕ್ಷ, ಜ್ಞಾನಸುಪಕ್ಷ, ಸರ್ವಾಧ್ಯಕ್ಷ, ದಿವಿಜರಪಕ್ಷ ಬೃಹತೀಭಕ್ಷ, ತಾನಿರಪೇಕ್ಷ, ಆಶ್ರಿತರಕ್ಷ, ಕರುಣ ಕಟಾಕ್ಷ, ಕರುಣಿಸು ರಕ್ಷ, ನೀಜಗರಕ್ಷ, ಅಜಗರ ಶೈಯ್ಯ, ಮನ್ಮಥನಯ್ಯ ಭವಬಿಡಿಸಯ್ಯ, ಭಯಹರಿಸಯ್ಯ ದಯಮಾಡಯ್ಯ ಶರಣುಪರೇಶ ಇಚ್ಛೆ ಅನೀಶಾ, ಕಳೆಕಳೆ ಆಶಾ, ಕಡಿಕಡಿಪಾಶಾ, ನಾಬಡದಾಸ, ತೈಜಸ ಶರಣು, ಪ್ರಾಜ್ಞನೆ ಶರಣು, ತುರ್ಯನೆ ಶರಣು, ಕಪಿಲನೆ ಶರಣು ಶರಣು ಅನಂತ, ಶರಣು ಅನಂತ 10 ವೆಂಕಟರಮಣ, ಕಿಂಕರನಾನು, ಸಂಕಟಹರಿನೊ ಶಂಕರತಾತ ತಿದ್ದೊ, ಪಂಕಜನಯನ ದಡ್ಡನು ನಾನು ಭಕ್ತಿಗಡ್ಡೆಗೆಸೇರಿಸು ಪ್ರಾಣನ ಆಣೆ ರಾಜರ ಆಣೆ ಜಯಮುನಿ ಆಣೆ, ಗುರುಗಳ ಆಣೆ, ಉರಗಾದ್ರಿವಾಸ, ಪದ್ಮಜಳೀಶ, ಹರಿಸುತ ದೋಷ, ಚರಣದಿವಾಸ, ನಿರುತಲೀಯೊ, ಕರುಣವ ಸುರಿಸಿ, ಮರುತನ ಮತದ ಅರುಹುತಲೆನಗೆ, ಸಂತತ ವೆಂಬೆ, ಸಂತತವೆಂಬೆ, ಸಂತತವೆಂಬೆ ನಂದದಿ ಪಠಿಸೆ ನಂದವು ಶಾಶ್ವತ, ಜಯಮುನಿಹೃಸ್ಥ, ಮಧ್ಯರಮೇಶ ಶ್ರೀಕೃಷ್ಣವಿಠಲ ವಲಿಯುವ ಸಿದ್ಧ, ವಲಿಯುವ ಸಿದ್ಧ 11
--------------
ಕೃಷ್ಣವಿಠಲದಾಸರು
ಶ್ರೀನಿವಾಸ-ಶ್ರೀಮನೋಲ್ಲಾಸ-ಶ್ರೀನಿವಾಸ ಪ ಶ್ರೀನಿವಾಸ ಶುಭಮಾಮವ ಗಾನಲೋಲಿತ ಸನ್ಮಾನಿತಲೀಲಾ ಅ.ಪ. ದೀಪಿತ ಭವದಾವ-ದೇವದೇವ ನಿವಹಸಂಭಾವಿತಭಾವ 1 ರಾಮ ರಾಮರಘುವಂಶಲಲಾಮ ರಾಮ ರಾಮ ದನುಜ ಸಂಗ್ರಾಮ ಭೀಮ 2 ಕಂಜನಾಭಕಲಾಂಬುಧಾಭ ಕಂಜನಾಭ ರಿಪು ವಕ್ತ್ರ 3 ಸುಂದರಾಂಗ ಸುಕೃತಾಂತರಂಗ ಸುರಸುಂದರೀ ನಿಚಯ ನಂದಗೋಕುಲಾನಂದ ಮುಕುಂದ 4 ಭವ್ಯರೂಪ ಭಕ್ತಾಲಯ ದೀಪ ಮಾಂಡವ್ಯ ಸುಸೇವ್ಯ 5 ವ್ಯಾಘ್ರಶೈಲಾವಾಸ ಸುಶೀಲಾ ಶೈಲ ಶಿಖರಾಗ್ರಲೋಲ ದೇವಾಗ್ರಗಣ್ಯ ಭಕ್ತಾಗ್ರ್ಯಶರಣ್ಯ 6 ದುರಿತದೂರಾ-ದುಃಖಾಭ್ರಸಮೀರಾ ದುರಿತದೂರ ಘಣಿಗಿರಿವಿಹಾರ ಶ್ರೀವರದ ವಿಠಲಾ 7
--------------
ಸರಗೂರು ವೆಂಕಟವರದಾರ್ಯರು
ಶ್ರೀನಿವಾಸದೇವರು ಬಾರಯ್ಯ ವೇಂಕಟ ಮನ್ಮನಕೆ ತ್ವರಿತದಿ ನಿಜನಾರೀಸಹಿತದಿ ಈ ಸಮಯಕೆ ಶರಣೆಂಬೆನು ಪದಯುಗಕೆ ಪ ಸಾರಿದ ನಿಜಶÀರಣನ ಈ ಭವಭÀವ ಘೋರಭಯವ ಪರಿಹÀರಿಸುವುದಕ್ಕೆಅ.ಪ ವ್ಯಕ್ತಾವ್ಯಕ್ತ ತ್ರಿಜಗದ್ವ್ಯಾಪ್ತಾ ದೋಷ ನಿರ್ಲಿಪ್ತಾ ಮುಕ್ತಾ ಮುಕ್ತ ಜೀವರ ಗಣದಾಪ್ತಾ ನೀ ಸರ್ವತ್ರದಿ ವ್ಯಾಪ್ತ ಭಕ್ತನ ಹೃದಯದಿ ವ್ಯಕ್ತನಾಗಿ ನಿಜ ಮುಕ್ತಿಪಥವ ತೋರೊ ಭಕ್ತಿಯನಿತ್ತು 1 ಕವಿಜನಗೇಯಾ ಆನಂದದಾಯಕ ನಿರ್ಜಿತಮಾಯಾ ಕಾಯಯ್ಯಾ ಜೀಯಾ ಆನತಜನಸನ್ಮಾನದ ಮನ್ಮನ ವನಜದಿ ನೀ ಸನ್ನಿಹಿತಾಗುವುದಕೆ 2 ಸೋಮಾಸುರನಾಮಕ ದೈತ್ಯನ ಕೊಂದೂ ವೇದವ ತಂದೂ ಕೂರ್ಮ ಕಿಟ ನರಹರಿ ರೂಪದಿ ನಿಂದೂ ವಾಮನನೆಂದೂ ರಾಮ ಭಾರ್ಗವ ಯದುಕುಲಸಾಗರ - ಸೋಮ ಬೌದ್ಧ ಕಲ್ಕಿ ಪ್ರೇಮದಿ ಮನಕೆ 3 ನಿಗಮಗೋಚರ ನಿತ್ಯಾನಂದಾ ಬಗೆಬಗೆ ಜನ್ಮವನೈದಿದೆ ಮುಕುಂದಾ ಮುಗಿವೆನೊ ಕರದಿಂದಾ ಅಗಣಿತ ಗುಣನಿಧಿ ಸುಗಮದಿ ಭವದ ಬಗೆಯನು ತಿಳಿಸೊ ನಗೆ ಮೊಗದಿ ಬಾ 4 ವಿಧಿಶಂಭುವಂದಿತ ಪದಯುಗಕಮಲಾ ನಿತ್ಯ ನಿರ್ಮಲಾ ಆಧಿಭೂತಾಧ್ಯಾತ್ಮಿಕತಾಪದ ಶಮಲಾ ನೀ ಮಾಡೆನ್ನನು ವಿಮಲಾ ಸದಯ ಸುಧಾಕರ ಹೃದಯದಿ ತವಪದ ಪದುಮ ಭಜಿಪೆ ನೀ ಮುದದಲಿ ಮನಕೆ5 ಸಾಸಿರನಾಮ ನತಜನಪ್ರೇಮಾ ಪೊರೆಯೋ ಶ್ರೀ ರಾಮಾ ಆಶೀ ಪೂರ್ತಿಸಿ ಮಾಡೆನ್ನಲಿ ಪ್ರೇಮಾ ಸುರಸಾರ್ವಭೌಮಾ ವಾಸಮಾಡಿ ಅಭಿಲಾಷೆಯ ಪೂರ್ತಿಸೊ ವಾಸುದೇವ ವಾರಾಸಿಜರಮಣಾ 6 ಶರಣಾಗತಜನಪರಿಪಾಲಾ ಕರುಣಾಲವಾಲಾ ಕರುಣಿಸೆನ್ನನು ಹೇ ಶಿರಿಲೋಲಾ ನಮಿತಜನಸುgಸಾಲ ಅಜ ಭವ ಸುರ ನಿಕರಾರ್ಚಿತಪದ ಸರಸಿಜಯುತ ನೀ ಸುರವರದೇವಾ 7 ಪನ್ನಗಗಿರಿ ನಿಜಕೃತವಾಸಾ ಪೊರೆ ಎನ್ನನು ಶ್ರೀಶಾ ಬಿನ್ನಪ ಮಾಳ್ಪೆನು ಹೇ ಶ್ರೀನಿವಾಸಾ ಕೊಡು ಎನಗೆ ಲೇಸಾ ಎನ್ನ ಸಲಹೋದಕೆ ಅನ್ಯರ ಕಾಣೆನೊ ಮನ್ನಿಸು ನೀನಾಪನ್ನಜನಸುಖದಾ 8 ಲಕ್ಷ್ಮೀನಾಯಕ ವರಪಕ್ಷಿಗಮನಾ ಅಕ್ಷಯ ಫಲವನ್ನ ರಕ್ಷಿಸಿ ಕಾಯ್ವದೋ ನೀ ಎನ್ನಾ ಲಕ್ಷ್ಮಣನಣ್ಣಾ ಕ - ಟಾಕ್ಷದಿ ಎನ್ನ ವೀಕ್ಷಿಸು ಕ್ಷಣ ಕ್ಷಣ..... 9 ಧರ್ಮಾರ್ಥಕಾಮಮೋಕ್ಷವ ನಾನೊಲ್ಲೇ ಕರ್ಮದ ಸುಳಿಯಲ್ಲೇ ಮರ್ಮವ ತಿಳಿಯದೆ ಬೀಳುವೆ ನಾನಲ್ಲೇ ನಿರ್ಮಿಸದಿರು ಎನ್ನಲ್ಲೇ ಕರ್ಮಭವದ ಮಹÀ ಮರ್ಮವ ತಿಳಿಸೀ ದುರ್ಮನ ಬಿಡಿಸೆಲೊ ಬೊಮ್ಮನ ತಾತಾ 10 ದಿಟ್ಟ ಗುರು ಜಗನ್ನಾಥವಿಠಲ ನಾನನಾಥಾ ಥಟ್ಟಾನೆ ನೀ ಎನ್ನನು ಕಾಯೋ ಶ್ರೀನಾಥಾ ಇಷ್ಟೇ ಎನಮನದರ್ಥ ಸೃಷ್ಟಿಯೊಳಗೆ ಬಹು ಭ್ರಷ್ಟರಸ್ತುತಿಸಿ ನಿ - ಕೃಷ್ಟನಾದೇನೋ ಶ್ರೇಷ್ಠ ಮೂರುತೀ 11
--------------
ಗುರುಜಗನ್ನಾಥದಾಸರು
ಶ್ರೀನಿವಾಸಾರ್ಯರ ಶೃಂಗಾರ ಗುಣಂಗಳಆನೆಂತು ವರ್ಣಿಸುವೆನು ಪ ದಾನವಾಂತಕ ಹರಿಯ ಮಾನಸಾರ್ಚನೆ ಮಾಳ್ಪಮಾನಿಸಾ ವೇಷಧರರ ಇವರ ಅ.ಪ. ನಿರ್ಜರ ಪತಿಯ ಚಿತ್ತ ಸಂಪಾದಿಸುವರಮತ್ತು ಗಜವೆಂಬ ದುರ್ವಾದಿಗಳನೇ ಮುರಿದು ಹತ್ತು ದಿಕ್ಕಿಲಿ ಮೆರೆವರ ಇವರ 1 ಪಾದ ಅಂಗಾರ ಕರಮುಟ್ಟಿ ಪಾಲಿಸುತ್ತಿಹರ ||ವರ ಮಂತ್ರಾಕ್ಷತೆಯನ್ನಿತ್ತು ಮುದದಿಂದ ಪಾ-ಮರರನ್ನೆ ಪೊರೆವರ ಇವರ2 ಲಕ್ಷ್ಮೀಪತಿ ಶ್ರೀನಿವಾಸಾರ್ಯರೆಮ್ಮನು ಬಿಡದೆ ರಕ್ಷಿಸಲೆಂತೆಂಬೆನೊಅಕ್ಷರ ಪುರುಷ ಅಪ್ರಾಕೃತನ ತೋರಿ ಮದ ಮತ್ಸರವ ಬಿಡಿಸೆಂಬೆನೊ ||ಸೂಕ್ಷ್ಮಾಂಬರಧರ ಮೋಹನ ವಿಠಲನಈ ಕ್ಷಣದಿ ತೋರಿಸೆಂಬೆನೊ ನಾನು 3
--------------
ಮೋಹನದಾಸರು
ಶ್ರೀಪತೀ-ಎನಗೇನು ಗತೀ ನನಗಾಗಲಿ ನಿನ್ನಲಿ ರತೀ ಪ ಚಪಲ ತನದಿ ಬಹು ಕಪಟಭಕುತಿನಟಿಸಿ ಗುಪಿತ ದೋಷಿಯು ಆದೆ ಅ.ಪ. ಬಟ್ಟೆ ನೋಡಲು ಬಹು ಛಂಧ-ಮೇಲೆ ಘಟ್ಟಿ ಬಣ್ಣದ ಕಾವಿ ಶಾಟಿ ಹಾಗೆ ಪಟ್ಟೆಮಡಿಗಳ ಭಾರೀ ಥಳಕೊ-ಬಹಳ ದಟ್ಟ ತುಳಸೀಸರಗಳ ಹೊಳಪೂ ಆಹಾ ಸೃಷ್ಠಿಗೊಡೆಯನೆ ಎನ್ನ ಕೆಟ್ಟ ತನಗಳನ್ನು ಎಷ್ಟೆಂದು ಬಣ್ಣಿಪೆ ನಿಟ್ಟ ನೆನೆಯದೆ ಪರರ ದೃಷ್ಟಿನೋಡುತ ಹಿಗ್ಗಿ ಅಟ್ಟಹಾಸದಿ ಕುಣಿದು ಮಾನವ ನನಗೇ 1 ವೇದ ವಾದಗಳೇನು ಕಾಣೆ-ಶುದ್ಧ ಸಾಧು ಕರ್ಮಗಳೊಂದು ಇಲ್ಲ-ಜನರ ಮೋದಗೋಸುಗವೇನೆ ಎಲ್ಲ_ಕಾಮ ಕ್ರೋಧವ ನಿಬಿಡಿತೇನೇ ಬಿಚ್ಚೆಹೃದಯಾ ಆಹಾ ಮಧ್ವರಾಯರ ಶಾಸ್ತ್ರ ಗ್ರಂಥ ಸಹ ತಿಳಿಯದೆಲೆ ಸಿದ್ಧ ಸಾಧಕನಂತೆ ಸಾಧುಲಿಂಗವ ತೋರಿ ಮುಗ್ಧಗೈಯ್ಯುತ ಮಂದಿ ಮೆದ್ದು ಪಕ್ವಾನ್ನಗಳ ಗೆದ್ದುಕೊಳ್ಳುವೆ ಬಹಳ ದಕ್ಷಿಣೆ ಬಹುಮಾನ 2 ನೇಮನಿಷ್ಠೆಗಳಾಟ ಹೊರಗೆ-ಗೃಹದಿ ಪ್ರೇಮವಿಲಾಸ ಆಟ ಕೂಟಜನ ಸ್ತೋಮರೆಲ್ಲವ ನುಡಿವ ನೀತಿ ಖ್ಯಾತಿ ಕಾಮುಕನಾಗಿ ಚರಿಸಿದೆ ಜಗದೀ ಆಹಾ ಹೇಮದಾಸೆಗೆ ಸೂಳೆ ಪ್ರೇಮವ ತೋರ್ಪಂತೆ ಕಾಮಿತಪ್ರದ ನಿನ್ನ ನಾಮ ಸವಿಯನುಣ್ಣದೆ ತಾಮಸರಿಗೆ ಉಪದೇಶ ನೀಡುತ ಸತ್ಯ- ಭಾಮೆಯರಸ ನಿನಗೆ ದೂರನಾದೆನಲ್ಲಾ 3 ಹಾಡಿಹಾಡುವೆ ಎತ್ತಿ ಸುತ್ತ ಜನರು ನೋಡಿ ಹಿಗ್ಗುತ ಬಾಪು ಬಾಪು ನುಡಿಗೆ ಹಾಡಿನಲ್ಲಿಹ ಸವಿಯುಣ್ಣ ದೇನೆ ಆಡಿ ಆಡಿಪೆ ಶಿರವ ಜ್ಞಾನಿಯಂತೆ ಆಹಾ ಕೇಡು ಚಿಂತಿಸಿ ಪರರ ಸ್ವಾರ್ಥಗೋಸುಗನಿತ್ಯ ಕಾಡಿ ಬೇಡುತ ಜನರ ದೂಡುತಿಹೆ ಸಂಸಾರ ಪ್ರೌಢ ಭಕ್ತರ ಗೋಷ್ಠಿಕೂಡಿ ಭಜಿಸದ ಎನ್ನ ಗಾಢ ಡಂಭಕೆ ಜಗದಿ ಈಡು ಕಾಣಿಸು ಸ್ವಾಮಿ4 ಭಾರಿ ಶಾಲುಗಳನ್ನೆ ಹೊದ್ದು-ನಿತ್ಯ ಕೇರಿಕೇರಿ ಪುರಾಣಗಳನ್ನು ಮೆದ್ದು-ಹಾರಿ ಹಾರುತ ತತ್ವರಾಶಿ ನುಡಿದು-ಊರು ಜ- ನರಮುಂದೆ ಪಾಂಡಿತ್ಯ ತೋರ್ಪೆ ಆಹಾ ತೋರಿ ತೋರುವೆ ಪರಮವೈರಾಗ್ಯ ಭಕ್ತಿಯ ದೂರಿ ದೂಡುವೆ ಪರರ ಹುಳುಕುಗಳನು ಎತ್ತಿ ಪಾರುಗಾಣದ ಕರುಣ ತೋರದಿದ್ದರೆ ಇನ್ನು 5 ಗುಡಿಗೆ ಹೋಗುವೆ ನಾನು-ನಿತ್ಯ ಅಲ್ಲಿ ಬೆಡಗು ಸ್ತ್ರೀಯರ ಹುಡುಕುವುದೇನೆ ಕೃತ್ಯ ದೃಢಭಕುತಿಯನು ಮಾಡಲೊಲ್ಲೆ ಸತ್ಯ-ನ ಮಡದಿ ಮಕ್ಕಳಿಗಿಲ್ಲ ಭೃತ್ಯಾನುಭೃತ್ಯಾ ಆಹಾ ಹುಡುಕೀ ನೋಡಿದಾಗ್ಯೂ ವಿರಕ್ತಿ ಭಕ್ತಿಗಳಿಲ್ಲ ಬಿಡಲು ಪೊರೆಯೆ ಪುರಾಣಶಾಸ್ತ್ರಗಳನ್ನು ನಿತ್ಯ ಎನ್ನ ಅನಾದಿ ನೀ ಕಲಿಸದಿದ್ದರೆ ಈಗ 6 ದೊಡ್ಡ ಪಂಡಿತ ನಾನೆಂಬ ಹೆಮ್ಮೆ-ಶುದ್ಧ ದಡ್ಡನೆಂಬುದ ಬಲ್ಲೆ ಮನದಿ-ಹಾಗೂ ಅಡ್ಡ ಬೀಳೆನು ಭಕ್ತ ಗಣಕೆ ಸುಳ್ಳು ವೊಡ್ಡುತವರನು ಹಳಿದೂ-ಕುದಿದೇ ಮನದೀ ಆಹಾ ದುಡ್ಡುಗೋಸುಗ ಬಹಳ ದೊಡ್ಡ ದಾಸನು ಎನಿಸೀ ಹೆಡ್ಡಮಂದಿಯ ಮುಂದೆ ದೊಡ್ಡ ಭಾಷಣ ಮಾಳ್ವೆ ಗುಡ್ಡದೊಡೆಯನೆ ಭಕ್ತಜಿಡ್ಡುಲೇಶವು ಕಾಣೆ ದೊಡ್ಡ ನಾಮವ ಹಾಕಿ ಸಡ್ಡೆ ಮಾಡದೆ ತಿರಿವ 7 ಕಚ್ಚಿ ಬಿಡದಿಹ ತುಚ್ಛ ಕಲಿಯು-ಬಹಳ ಮೆಚ್ಚಿ ಬಂದಿಹ ನವನು ಬಿಡುವನೇನು ಇಚ್ಛೆ ನನ್ನದು ನಡೆಯದೇ ನೊಂದು ತುಚ್ಛ ವಿಷಯದಿ ಸೆಳೆದು ಸೆಳೆಯುತಿಹನು ಆಹಾ ಇಚ್ಛೆಯಿಂದಲಿ ಜಗವ ಸೃಜಿಸಿ ಪಾಲಿಪಲೀಲೆ ಹಚ್ಚಿಕೊಂಡಿಹ ನಿನಗೆ ನನ್ನ ಪಾಲಿಪುದೇನು ಹೆಚ್ಚು ಕಾರ್ಯವೆ ಜೀಯ ಮುಚ್ಚಿಕೊಂಡಹ ನಿನ್ನ ಸ್ವಚ್ಛ ಬಿಂಬವ ತೊರಿ ಮೆಚ್ಚಿ ಕೊಡದಿರೆ ಜ್ಞಾನ 8 ಶ್ವಾಸಮತದಲಿ ಜನ್ಮ ವಿತ್ತೆ-ವಿಜಯ ದಾಸರ ಪ್ರಿಯ ಮೋಹನ್ನ ಪರಂಪರೆಯ ದಾಸನೆನಿಸಿ ಯೆನ್ನ ಮೆರೆಸಿ ಹೀಗೆ ದೋಷಿಗೈವುದು ಥರವೆ ಶ್ರೀಭಕ್ತಪ್ರಿಯ ಆಹಾ ವಾಸುದೇವನೆ ತುರ್ಯಲೇಸು ದೃಷ್ಟಿಯ ಬೀರೆ ನಾಶವಾಗದೆ ದೋಷ ಭಾಸವಾಗದೆ ಜ್ಞಾನ ಕಾಸುಬೀಡೆನು ಹಿರಿಯ ದಾಸರ ಗುಣ ನೋಡಿ ಲೇಸು ನೀಡೆಂತೆಂಬೆ ಶ್ರೀಕೃಷ್ಣವಿಠಲಾ9
--------------
ಕೃಷ್ಣವಿಠಲದಾಸರು