ಒಟ್ಟು 2197 ಕಡೆಗಳಲ್ಲಿ , 114 ದಾಸರು , 1773 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಜಿಸಿರೋ ಮನದಣಿಯ ಸುಜನಾಬ್ಜ ದಿನಮಣಿಯ ಭುಜಗಾರಿಗಮನ ತಿಂಥಿಣಿಯ ಸತ್ಕಣಿಯ ಪ ರಜನೀಕರ ಗುಣಶ್ರೇಣಿ ಅಜಭವ ಸುರಾಗ್ರಣಿಯ ತ್ರಿಜಗಮೋಹನ ಮಣಿಯ ಸೊಬಗಿನ ಕಣಿಯ ಅ.ಪ ಪೊಳೆವ ಮಕುಟದ ಫಣಿಯ ತಿಲಕದಲಿ ರಂಜಿಸುವ ಪ್ರಣವ ಗೋಚರ ಸುಧಾಮಯದ ಕದಪಿನಲಿ ತೊಳಪ ಕುಂಡಲದ ನಾಸಿಕದ ಮೂಗುತಿಯೆಸೆಯೆ ಸುಲಿಪಲ್ಲ ನಗೆಮೊಗದ ಸುಲಭಸೌಂದರÀನ 1 ಪದಕ ಮಣಿಮಯ ಮೌಕ್ತಿಕದ ಹಾರ ತ್ರಿಸರ ಕಂ ಧರ ವೈಜಯಂತಿಯೊಲವಿನ ಬಾವುಲಿ ಮುದದ ಕಂಕಣ ಕರದ ಮುದ್ರೆಯೆಸೆವಾ ಬೆರಳ ಕಂಬು ಮದನಶರಧನು 2 ತರಣಿ ಶತಕೋಟಿ ಕಿರಣತತಿ ಕುಮುದ ವರ್ಣದ ತನುರುಚಿಯಾ ಹರಸುರೇಶ್ವರ ವಿರಿಂಚ್ಯಾದಿ ವಂದಿತಚರಣ ಸರಸಿರುಹ ವರದೇವಪುರದ ಸಿರಿವರನ 3
--------------
ಕವಿ ಲಕ್ಷ್ಮೀಶ
ಭಜಿಸುವರು ಭಾಗ್ಯವಂತರು | ಭಾಗವತರು ಪ ನಿಲುಕದೆಂದು ನಿಗಮಗಳು ನೆಲೆಗಾಣದೆ ನಿಲ್ಲಲು |ಮಲಕೀನ ಮಾತುಗಳಿಂದ ಜರಿದು ಕಲಕಾದ ಕರ್ಮನೀರೆರೆದು ನಳಿನಾಕ್ಷ ವಲ್ಲಭ ನೀನೆಂದರಿತು 1 ಅಳಿದುಳಿದೆಲ್ಲ ನೋಡುತಲಿ ತಳೆದು ಭವದ ಮೂಲವನುಕಳೆದು ಕಾಮಕ್ರೋಧಮದಗಳನು | ಬಳೆಸುತ ಮೈತ್ರಿ-ಕರುಣಾಗಳನು | ಬಳೆಸುತ ಏಳು ಧರಣಿಗಳನು 2 ಕಡಲೊಳೊರಗುವ ತೆರೆಯಂತೆ | ಒಡಲೊಳಗೆ ರುಕ್ಮ ಕಡಗದಂತೆ ನೆಮ್ಮದೆ ಚಣಿಸಿ | ಪಡದ ರೂಪವನುಜಡವೆಂದೆನಿಸಿ ಕಡಿಗಾಗದಿರೆಂದು ಜಗವನೆನಿಸಿ 3
--------------
ರುಕ್ಮಾಂಗದರು
ಭಜಿಸೋ ಮೂಢ ಭಜಿಸದರಿಬೇಡಾ ತ್ರಿಜಗ ವಂದಿತನಾದ ಶ್ರೀಹರಿ ಗಾಢಾ ಪ ಛಂದದಿ ಧ್ಯಾನಾದಿಂದ ಉಲ್ಹಾಸಾ 1 ಗೋಪಿಯಕಂದಾ ಗೋಕುಲಾನಂದಾ ಭೂಪ ಗೋವಿಂದ ಯೆಂದೀಪರಿಯಿಂದಾ 2 ಸುಂದರ ಮೂರುತಿ ಸುಗುಣಾ ಪ್ರಖ್ಯಾತಿ ಮಂದರಗಿರಿ ಪೊತ್ತ ಪಾವನ ಕೀರುತಿ 3 ಮಂಗಳದಾಯಕಾ ಮನ್ಮಥ ಜನಕಾ ಗಂಗೆಯ ಪಡೆದಾ ಕರುಣಾನನೇ ಕಾ 4 ನಿಗಮಗೋಚರನಾ ನೀರಜನಾಭನಾ ಅಗಣಿತ ಮಹಿಮಾನಂತ ಅವತಾರನಾ 5 ಭಕುತ ವತ್ಸಲನ ಮುಕುತಿದಾಯಕನಾ ಅನುದಿನ ನಿಜ ಮುಕ್ಕುಂದನಾ 6 ಇಂದು ಬಿಡದೆ 'ಹೊನ್ನವಿಠ್ಠಲ' ಶ್ರೀ ಕೃಷ್ಣನಾ 7
--------------
ಹೆನ್ನೆರಂಗದಾಸರು
ಭದ್ರಾಮೂರುತಿ ನಿರ್ವಾತಾಂಹ್ವ ಪ ಹೃದ್ರೋಗ ಕಳೆದು ಜ್ಞಾನಾದ್ರ್ರ ಸ್ವಾಂತನ ಮಾಡು ಪದ್ರಾ ಸಾಮಗಾಘ ಸಮುದ್ರ ದಾಟಿಸಿ ಬೇಗ ಅ ಏಸೇಸು ಕಲ್ಪಗಳಲ್ಲಿ ನಿನ್ನಾ ದಾಸನೆಂದು ಎನ್ನ ಬಲ್ಲೀ ಈಶ ನೀನೆಂಬುದು ಲೇಶವರಿಯೆ ಕ್ಲೇಶನಾಶನ ಪ್ರಭುವೆ ವಾರಾಶಿಜೆ ವಲ್ಲಭ ವಾಸವಾನುಜ ವನಧಿಶಯನ ಮ ಹೇಶವಂದಿತ ವರದ ಹೇ ಕರು ಣಾ ಸಮುದ್ರ ಕರಾಳವದನನೆ ನೀ ಸಲಹದಿರೆ ಕಾಣೆ ಕಾಯ್ವರ 1 ಹೇಮ ಕಶ್ಯಪು ತನ್ನ ಸುತನಾ ನೋಯಿಸೆ ಶ್ರೀ ಮನೋಹರನೇ ಆನತನಾ ವ್ಯೋಮ ಪರ್ವತಾಂಬುಧಿ ಧಾಮದೊಳುಳುಹಿದ ಭೂಮ ಸನ್ಮುನಿ ಗಣಸ್ತೋಮ ವಂದಿತ ಪಾದ ಸಾಮಜೇಂದ್ರನನರಸಿಯೊಳು ಸು ತ್ರಾಮನಂದನನಾ ರಣದಿ ಕುರು ಭೂಮಿಪತಿ ಸಭೆಯೊಳಗೆ ದ್ರೌಪದಿ ಯಾ ಮಹಾತ್ಮರ ಕಾಯ್ದ ಕರುಣಿ 2 ವೇದಗಮ್ಯನೆ ವೇದ ವ್ಯಾಸ ಕಪಿಲ ಯಾದವೇಶ ಮಹಿದಾಸ ಶ್ರೀದ ಶ್ರೀಶ ಅ ನ್ನಾದಾ ಕಲ್ಕಿ ಧನ್ವಂತ್ರಿ ಮೇಧಾವಿ ಪತಿಯ ಏವ ಷಾದರೋಗಂಗಳನಳಿದು ಮಹ ದಾದಿದೇವ ಜಗನ್ನಾಥ ವಿಠ್ಠಲ ಆದರದಿ ಪ್ರಹ್ಲಾದವರ 3
--------------
ಜಗನ್ನಾಥದಾಸರು
ಭವ ಭಯದಾ ಕೊಳೆ ತೊಳೆÉದಾನಂದವೀವ ಸಾರಂಸಂಸಾರ ಸಾರಂ ಪ. ಸುಳಿದು ಯಮಭಟರೆಳೆಯುವ ಕಾಲದಿ ಪರಿ ಸಾರ ಮನುಜರು ಅ.ಪ. ಅಳಿದವರಾರು ಝಳಝಳ ಮನದಿಂ ಕಳೆಗೊಟ್ಟಿಹ ಪುರುಷನಾರುಂ ಸಲೆ ನಾರದರಲ್ಲದೆ ಯಿದನಂ ಸೆಳೆದುರೆ ಭಕ್ತಿಯೊಳ್ ಹರಿಯಂ ಅಳವಲ್ಲದಾನಂದದಿಂ ಹರಿ ಸುಳಿವ ಪೊಳೆವ ಮನದೊಳಗಿಹನೆನುತಂ ಸಾರಿ ಹರಿದನಂ ಸಾರಂ ಸಂಸಾರಂ 1 ಅರ್ಣವದೊಳು ಭವಾರ್ಣ ನಿರ್ಮಾಣನ ಕರ್ನದೊಳಾಲಿಸಿ ಧ್ವನಿಮಾಡಿ ನಿರ್ಣಯದಲಿ ಸ್ವರ್ಣರೂಪನ ಜೀರ್ಣಿಪ ವೀಣಾನಾದದೀ ಸಾರಂ ಕರ್ಣಾನಂದದಿ ಹಾಡಿದನಾರುಂ ವರ್ಣಾಶ್ರಮ ಧರ್ಮ ಮರ್ಮವರಿತು ಚರ್ಮಸುಖವಳಿದು ಪೂರ್ಣಜ್ಞಾನದ ಪುರಂದರದಾಸರಲ್ಲಿದೆ ಈ ಸಾರಂ ಸಂಸಾರಂ 2 ತರಲಾನಂದದಿಂ ಸರಿಗಮ ಪದನಿಸ ಸನಿದಪ ಮಗರಿಸ ಶೋಡಷಕ್ಷರದಿಂ ತರಲಾ ಸಂಗೀತಕೆ ಸರಳಾಗಿಹ ಹರಿ ನಾಮಾಮೃತವಂ ಧರಿಶಿದ ಪುರಂದರರಂ ಶರಣ ಭರಣ ಕರುಣ ಪಡೆವುದು ನಿರುತ ಹರಿ ಶರಣರೆನುತ ಅರುಹಿದ ಸಂಗೀತವೀ ಸಾರಂ ಸಂಸಾರಂ 3 ಈ ತೆರ ಭಜಿಸಿದಗ್ಯಾತರ ಭಯ ಪಾತಕಹರ ಜಗದೀಶ ಮಾನಸ ದಾತುರದೊಳು ಹರಿ ದಾತನೆಂದರಿತು ನೀತಾಚಾರದಿ ಯಾವಾತ ಸ್ತುತಿಸಲು ಜ್ಯೋತಿ ಪ್ರಕಾಶದಿ ತನುಜಾತನಾಗಿ ಬಹ ಪ್ರೀತಿಗೊಡುತ ಖ್ಯಾತ ಭಕ್ತ ಪಾರಿಜಾತನೆಂದು ತಿಳಿದಾತಗೆ ಇದು ಸಾರಂ ಸಂಸಾರಂ 4 ಭಗವಂತನ ಧ್ಯಾನಿಪನ ಪುಡುಕುತ ಮಿಗೆ ಸಂಚರಿಸುತಲಿಹರೀಗಲು ಭಾಗವತರಿದು ಸತ್ಯಂ ಜಗಕೆ ಜಗದೀಶ ಶ್ರೀ ಶ್ರೀನಿವಾಸನೆಂದು ಮಿಗೆ ಜಗದಾನಂದ ಪುಳಕಿತ ತನುವಿನ ಜೀವರ ಸೊಗವಿಲಿ ನಾಲ್ಮೊಗನೈಯ್ಯನು ಸಿಗುವ ಪರಿಯಗೊಡುತಗಣಿತ ಮಹಿಮರು ಕರುಣಿಸಿದೀ ಸಾರಂ ಸಂಸಾರಂ 5
--------------
ಸರಸ್ವತಿ ಬಾಯಿ
ಭವ ಶಿತಿಕಂಠ ನಿನ್ನಪದ ತಾಮರಸಯುಗ್ಮಗಳಿಗಾನಮಿಸುವೆ ಪ ಕಾಮಹರ ಕೈಲಾಸ ಹೇಮಗಿರಿಯಾವಾಸ ರಾಮನಾಮನ ಭಜಿಪ ಉಮೆಯರಸ ಶಂಭೋ ಅ ಮೃತ್ಯುಂಜಯ ಮೃಗಾಂಕ ಕೃತ್ತಿವಾಸ ಕೃಪಾಳೊ ವಿತ್ತÀ್ತಪತಿ ಸಖ ವಿನಾಯಕರ ಜನಕ ಭೃತ್ಯವರ್ಗಕೆ ಬಾಹಪಮೃತ್ಯು ಕಳೆದು ಸಂ ಪತ್ತು ಪಾಲಿಸುವುದು ನಿವೃತ್ತಿ ಸಂಗಮಪ 1 ಗೋಪತಿ ಧ್ವಜ ಘೋರ ಪಾಪ ಸಂಹರಣ ಹರಿ ತೋಪಲೋಪಮ ಕಂಠ ಚಾಪಪಾಣೀ ಶ್ರೀ ಪತಿಯ ಶ್ರೀನಾಭಿ ಕೂಪಸಂಭವತನಯ ನೀ ಪಾಲಿಸೆಮ್ಮನು ವಿರೂಪಾಕ್ಷ ಗುರುವೆ 2 ಭಸಿತ ಭೂಷಿತಡಮರು ತಿಸುಳಗೈಯನೆ ಶಂಭೋ ಕಿಸಲಯೋಪಮ ನವಿರ ಶಶಿಭೂಷಣ ಅಸುರಾರಿ ಶ್ರೀ ಜಗನ್ನಾಥ ವಿಠಲನ ಪದ ಬಿಸಜ ಧ್ಯಾನವನೀಯೊ ಹಸನಾಗಿ ಕಾಯೊ 3
--------------
ಜಗನ್ನಾಥದಾಸರು
ಭವ ಶರಧಿ ತಾರಕನೇ - ನಾಕರವಾ ಮುಗಿವೆ - ಎನ್ನ ಕರುಣದಲ್ಲಿ ನೋಡೋ ಪ ಎರಡು ಭಾಗದಿ ಶ್ರೀ ಧರಣೇರಿಂದೊಪ್ಪುತತ್ವರಿತದಿ ದಯಮಾಡು ಉರಗಾಗಿರಿ ವೆಂಕಟ ಅ.ಪ. ತೇರಿನೊಳಿಪ್ಪ ಶೃಂಗಾರ ಪುರುಷನೆ ಬಂ-ಗಾರ ಮಾಣಿಕದಲಂಕಾರವ ಧರಿಸಿದಮಾರಮಣನೆ ವನಜಾರಿವದನ ಬಲು-ಶೂರ ಸಮರಧೀರ ನಾರಾಯಣ ಕಂಸಾರೇ ||ನರ ಕಂಠೀರವ ಕಮಲನಾಭನಾರದ ಮುನಿ ಪ್ರಿಯ ಚಾರು-ಚರಿತ ಪನ್ನಗಾರಿಗಮನ ಮದ-ನಾರಿಯ ಸಲಹಿದ ಧೀರ ಮುರಾರಿ 1 ನಿಂದರೆ ಬಪ್ಪುದು ಸಿಂಧುಶಯನ ದಯ-ದಿಂದ ಎನ್ನನು ನೋಡು-ಕಣ್ದೆರೆದೀಕ್ಷಿಸಿ |ಕಂದಗೊಲಿದು ಕಂಬದಿಂದ ಬಂದಸುರನಕೊಂದು ಕರುಳಹಾರ ಕಂಧರದಿ ತಾಳಿದೇ ||ಮಂದಮತಿವನೆಂದಲೇ ಗೋ-ವಿಂದ ಗೋವಳ ವೃಂದದೊಡನೆ ಕಾ-ಳಿಂದಿಯ ಧುಮುಕಿ-ಫಣೀಂದ್ರನ ಶಿರದಲಿಧಿಂ ಧಿಮಿ ಧಿಮಿಕೆಂದು ಕುಣಿದ ಹರಿ 2 ಜಲದೊಳ ಪೊಕ್ಕು ಆ ಇಳೆಯ ತಸ್ಕರನು ದುಂ-ಬಲಗೊಂಡು ಮಡುಹಿ ನಂಬಿದ ಪ್ರಹ್ಲಾದ ಹಂ-ಬಲಿಸೆ ಧರ್ಮದಿ ಕಾಯ್ದೆ ಸಲೆ ಕ್ಷತ್ರಿಯಕುಲವನಳಿದೆ-ನಿನ್ನೊಳು ನೀನೇ ಕಾಯ್ದೆ ||ಮಲೆತ ಮಾವನ ಕೊಂದೆ ಸಲೆಖಳ ತ್ರಿಪುರನ ಗೆದ್ದು ಕಲಿಯ ಸಂಹರಿಸಿದೆಸುಲಭ ಮೂರುತಿ ಮೋಹನವಿಠ್ಠಲಚೆಲುವ ತಿರುವೇಂಗಳ 3
--------------
ಮೋಹನದಾಸರು
ಭವಭಯಹರ ಶ್ರೀ ಮುಕ್ಕುಂದ ಭವರೋಗಕ್ವೈದ್ಯ ಶ್ರೀ ಗೋವಿಂದ ಪ ಧ್ರುವ ದ್ರುಪದತನುಜಾತೆಯೊರೆದ ಹರಿ ಶಿವನುತ ಸಚ್ಚಿತ್ತಾನಂದ ಅ.ಪ ಪಂಕಜಾನಪಿತ ಗೋವಿಂದ ಕಿಂಕರಾಶ್ರಿತ ಗೋವಿಂದ ಶಂಖಧಾರಣ ಸಿರಿಗೋವಿಂದ ಶಂಖಾಸುರನ ಹರ ಗೋವಿಂದ ಮಂಕು ದನುಜಕುಲ ಬಿಂಕ ಮುರಿದ ಅಕ ಳಂಕಮಹಿಮ ಮಹ ಗೋವಿಂದ1 ಸ್ಮರಿಪ ನೆರೆವಾಸ ಗೋವಿಂದ ದುರುಳರ ಕುಲನಾಶ ಗೋವಿಂದ ದುರಿತ ನಿವಾರಣ ಗೋವಿಂದ ಶರಣಜನರಪ್ರಾಣ ಗೋವಿಂದ ತರಳನೋದ್ಧಾರಣ ಕರಿರಾಜವರದನ ತರುಣೆಯ ರಕ್ಷಣ ಗೋವಿಂದ 2 ಜಗದಾಧಾರನೆ ಗೋವಿಂದ ಸುಗಣಗುಣಾಂತರಂಗ ಗೋವಿಂದ ರಘುಕುಲಪಾವನ ಗೋವಿಂದ ಖಗಪತಿವಾಹನ ಗೋವಿಂದ ನಿಗಮಕೆ ಸಿಲುಕದ ಅಗಾಧ ಮಹಿಮ ಜಗತ್ರಯ ಮೋಹನ ಗೋವಿಂದ 3 ನೀಲಮೇಘಶ್ಯಾಮ ಗೋವಿಂದ ಕಾಲಕಾಲಹರ ಗೋವಿಂದ ಪಾಲಸಾಗರಶಾಯಿ ಗೋವಿಂದ ಲೋಲ ವಿಶ್ವರೂಪ ಗೋವಿಂದ ಪಾಲಭಜಕ ಭವ ಜಾಲಹರಣ ಸರ್ವ ಮೂಲಮಂತ್ರ ಹರಿ ಗೋವಿಂದ 4 ಭೂಮಿಜಾತೆಪತಿ ಗೋವಿಂದ ಕಾಮಜನಕ ಶ್ರೀಶ ಗೋವಿಂದ ಕೋಮಲಾಂಗ ರಂಗ ಗೋವಿಂದ ಸ್ವಾಮಿ ಪುಣ್ಯನಾಮ ಗೋವಿಂದ ಶಾಮವರ್ಣನುತ ಪ್ರೇಮಮಂದಿರ ಶ್ರೀ ರಾಮ ದಾಮೋದರ ಗೋವಿಂದ 5
--------------
ರಾಮದಾಸರು
ಭಳಿರೆ ವಾಗೀಶ ತೀರ್ಥಾಖ್ಯ ಮುನಿವರ್ಯ ಇಳೆಯೊಳು ನಿನಗೆಣೆÂ ಕಾಣೆ ನಾ ಯತಿವರ್ಯ ಪ ಜಗದೊಳು ದುರ್ವಾದಿ ಮತವ ಖಂಡಿಸಿದ ನಿಗಮಾರ್ಥವನು ಜಗದಿ ಸಾರಿದಾ ಕುಜನೇಭ ಮೃಗರಾಜ ವಾದಿರಾಜರಿಗೆ ಗುರುವೆನಿಸಿದೆ 1 ಭಾವೀ ಸಮೀರ ಶ್ರೀವಾದಿರಾಜರ ಜನ್ಮೋ- ತ್ಸವ ಕಾಲವರಿತಾಗ ಸುಮಪುರಕೆ ನೀನು ತವಕದಿಂದಲಿ ಪೋಗಿ ಬಾಲಕನ ರಕ್ಷಿಸಿ ಅವನನೆ ಯತಿರಾಜ ಪಟ್ಟದೊಳಿರಿಸಿದಿರಿ 2 ಗುರು ಮಧ್ವರಂತೆ ನೀ ಸರ್ವಶಾಸ್ತ್ರವ ಮಾಡಿ ಧರಣಿಯೊಳು ರಾಜೇಶ ಹಯಮುಖನ ಚರಣ ಸ್ಮರಿಸಿ ನೂರಿಪ್ಪತ್ತು ವತ್ಸರದ ಕಾಲದಲಿ ಇರುವಿರೆನುತಲಿ ಅವರ ಹರಸಿದಿರಿ ದೊರೆಯೆ 3
--------------
ವಿಶ್ವೇಂದ್ರತೀರ್ಥ
ಭಾಗವತ 342 ಆಗಮದಸಾರ ಶಾಸ್ತ್ರವಿಚಾರ ಪೌರಾಣ ಯೋಗತತ್ವಗಳ ಶೃಂಗಾರವೆನಿಸುತಿಹ ಶ್ರೀ ಭಾಗವತಮಂ ಪೇಳ್ವೆಸಂಕ್ಷೇಪದಿಂದ ಹನ್ನೆರಡು ಪದ್ಯಂಗಳಾಗಿ ಗುರುಸುತನ ಬಾಣದುಪಹತಿಗೆ ಮೊರೆಯಿಡುವಉ ತ್ತರೆಯ ಗರ್ಭವ ಶೌರಿರಕ್ಷಿಸಲ್ ಬಳಿಕಧರೆ ರಾಜ್ಯವಾಳುತಿರೆವಿಷ್ಣುರಾತಂ ವರಶಮೀಕಾತ್ಮಜನ ಶಾಪಬರೆತಾಕೇಳಿ ಪರಮವೈರಾಗ್ಯದಿ ಕುಶಾಸ್ತರಣದೊಳಿರಲ್ ಪ್ರಥಮಸ್ಕಂಧದೋಳ್ ತಿಳಿವುದು 1 ಸಾರವಾಗಿಹ ಭಕ್ತಿಯೋಗಮಂ ಪೂರ್ವದೋಳ್ ನಾರದಗೆ ವಿಧಿವೇಳ್ದ ಸೃಷ್ಟಿಯಕ್ರಮಂ ಪ್ರಳಯ ತನ್ನಪುರಮಂ ತೋರಿಸಿ ಚಾರುಭಾಗವತ ತತ್ವೋಪದೇಶದಿ ಸೃಷ್ಟಿ ಗಾರಂಭ ಮಾಡಿಸಿದನೆಂದು ಶುಕಮುನಿವರಂ ತಿಳಿವುದು 2 ವಿದುರ ಮೈತ್ರೇಯ ಸಂವಾದಮಂ ಸೃಷ್ಟಿಯ ಭ್ಯುದಯವಂ ಸ್ವಾಯಂಭುವಿನಜ ನನವಹರೂ ಪದ ಹರಿಯಚರಿತ ಸನಕಾದಿಗಳ್ ಜಯವಿಜಯರಿಗೆ ಕೊಟ್ಟ ಶಾಪತೆರನು ಉದಿಸಿದಂಹರಿಕರ್ದಮಂಗೆ ಕಪಿಲಾಖ್ಯದಿಂ ವಿದಿತವಾಗಲ್ ತಾಯಿಗರುಹಿದಂಸಾಖ್ಯಯೋ ತೃತೀಯಸ್ಕಂಧದೋಳ್ ತಿಳಿವದು 3 ಶಿವನ ವೈರದಿನಕ್ಷಯಾಗವಂ ಮಾಳ್ಪುದಂ ತವಕದಿಂ ಕೆಡಿಸಿ ಶಂಕರನು ಕರುಣಿಸುವದಂ ಧೃವಚರಿತಮಂಗವೇನರಚರಿತ್ರೆಗಳ್ ಪೃಥುಚಕ್ರವರ್ತಿ ಜನನ ಅವನಿಗೋರೂಪಿಯಾಗುತ ಸಕಲವಸ್ತುಸಾ ರವಕೊಡುವದುಂ ಪ್ರಚÉೀತಸರುಪಾಖ್ಯಾನಮಂ ತವೆಪುರಂಜನನುಪಾಖ್ಯಾನಮಂ ಯಿದುಚತುರ್ಥ ಸ್ಕಂಧದೋಳ್ ತಿಳಿವದು 4 ವರಪ್ರಿಯ ವ್ರತಚರಿತೆಯಾಗ್ನೀಧ್ರಚರಿತೆಯುಂ ಹರಿಯ ಋಷಭಾವತಾರದ ಮಹಾಮಹಿಮೆಯಂ ಭೂಗೋಳವಿಸ್ತಾರವು ಎರಡನೆ ಖಗೋಳದೋಳ್ ವಾಯ್ವಾದಿಮಂಡಲವಿ ವರಗಳುಂ ನರಕಾದಿ ವರ್ಣನೆಯ ಸಂಖ್ಯೆಯುಂ ಯಿದುಪಂಚಮಸ್ಕಂಧದೋಳ್ ತಿಳಿವದು 5 ಯರ ಜನನಮಂ ವಿಶ್ವರೂಪಾಖ್ಯಭೂಸುರಂ ವೃತ್ರಾಸುರನ ಕೊಲ್ವುದುಂ ಭರದಿ ಬೆನ್ಹತ್ತಿಬಹ ಬ್ರಹ್ಮಹತ್ಯವ ಸುರಪ ಧರಣಿಜಲ ವೃಕ್ಷಸ್ತ್ರೀಯರಿಗೆ ಭಾಗಿಸಿದುದಂ ತಿಳಿವದೂ 6 ವಿಧಿಯವರದಿ ಹಿರಣ್ಯಕಶ್ಯಪನು ಗರ್ವದಿವಿ ಬುಧರಂ ಜಯಿಸುವದುಂ ತರಳ ಪ್ರಹ್ಲಾದನ ನರಸಿಂಹನಾಗಿ ಹರಿಯು ಮದಮುಖನ ಸೀಳ್ವುದಂಪ್ರಹ್ಲಾದನೃಪನಜಗ ರದಮುಖದಿ ವರ್ಣಾಶ್ರಮದ ಧರ್ಮಕೇಳ್ವುದಂ ತಿಳಿವದು 7 ಮನುಗಳ ಚರಿತ್ರೆಗಳ್ ಗಜರಾಜ ಮೋಕ್ಷವಂ ದನುಜ ದಿವಿಜರು ಶರಧಿಯಂಮಥಿಸೆವಿಷವರು ಹರಿಸುರರಿಗೀಯ್ಯೆ ಅನಿಮಿಷರ ಗೆದ್ದು ಬಲಿ ಶತಕ್ರತುವಮಾಳ್ಪುದಂ ವನಜಾಕ್ಷ ವಟುವೇಷದಿಂ ದವಗೆಲ್ವುದಂ ತಿಳಿವದು 8 ಇನವಂಶ ರಾಜರಚರಿತ್ರೆಯೋಳಂಬರೀ ಷನ ಮಹಿಮೆ ಯಿಕ್ಷಾ ್ವಕುರಾಜನಚರಿತ್ರ ರಾ ಚಂದ್ರವಂಶಾನುಚರಿತಂ ವನಿತೆಯುಂ ಪುರುಷನಾಗಿದ್ದಿಳನ ಚರಿತಶು ಕ್ರನ ಮಗಳ ಶರ್ಮಿಷ್ಠೆಯರಚರಿತೆಯದುವೂರು ನವಮಸ್ಕಂಧದೋಳ್ ತಿಳಿವದು 9 ಹರಿ ದೇವಕೀ ಪುತ್ರನಾಗಿ ಗೋಕುಲದಿ ಪರಿ ಪರಿಲೀಲೆಗಳತೋರಿ ದುಷ್ಟರಂಸದೆದುತಾಂ ಪಿತೃಮಾತೃಗಳಸೆರೆಯಬಿಡಿಸಿ ವರವುಗ್ರಸೇನಂಗೆ ಪಟ್ಟಮಂಗಟ್ಟಿಸಾ ಗರದಿ ಪುರವಂರಚಿಸಿ ಬಲುತರುಣಿಯರ ಕೂಡಿ ತಿಳಿವದು 10 ನೆಸಗಿದಂ ಯದುಕುಲಕೆ ಹರಿಯಸಂಕಲ್ಪದಿಂ ಪರಮಾತ್ಮತತ್ವಬೋಧೆಯನರುಪಿದಂ ಮುಸಲದಿಂ ಯಾದವರಕ್ಷಯವೈದಲನ್ನೆಗಂ ಬಿಸಜನಾಭಂ ರಾಮನೊಡನೆ ತಾತೆರಳಿದಂ ಕರೆದೊಯಿದನೇಕಾದಶಸ್ಕಂಧದೊಳ್ 11 ಪರೀಕ್ಷಿತ ಮಹಿಪಾಲತಾಂ ಕೇಳಿದಂ ಶುಕನಿಂದಸಕಲಮುಂ ಕಲಿಕಾಲ ಸೂತಶೌನಕಾದಿಗಳಿಗಿದನು ಪೇಳಿದಂ ಬಾದರಾಯಣನ ಕೃಪೆಯಿಂದಲಿದ್ವಿ ಜಾಳಿ ಹರುಷದ ಕಡಲೊಳೀಜಾಡಿದುದುರಮಾ ಲೋಲನ ಮಹಾಲೀಲೆಯವತಾರಮದ್ಭುತಂ- -ದ್ವಾದಶಸ್ಕಂಧವಿದುವೆ 12 ಇಂತೀ ಪರಿಭಾಗವತ ಶಾಸ್ತ್ರಮಂ ಸಂತರಡಿಗಳಿಗೆರಗಿ ಪೇಳ್ದೆ ಸಂಕ್ಷೇಪದಿಂ ಕಂತುಪಿತಗÀುರುರಾಮವಿಠಲತಾಂಹೃದಯದೋಳ್- -ನಿಂತುನುಡಿಸಿದತರದೊಳು ಸ್ವಾಂತನಿರ್ಮಲರಾಗಿ ಪಠಿಸುವರಿಗನುದಿನಂ ಚಿಂತಿತಾರ್ಥಂಗಳಿಹಪರಸೌಖ್ಯವಿತ್ತುಶ್ರೀ ಕಾಂತ ಗುರುರಾಮವಿಠಲ ಪೊರೆವಜಯ- -ಜಯಮನಂತಮಹಿಮಂಗೆನಿರತಂ 13
--------------
ಗುರುರಾಮವಿಠಲ
ಭಾಗವತ ದಶಮಸ್ಕಂದ ಕಥೆ ಜಯ ಜಯ ರಾಮಾನುಜ ಪಾಹಿ ಜಯ ಜಯ ಶ್ರೀಕೃಷ್ಣಪಾಹಿ ಜಯ ಪಾಂಡವ ಮಿತ್ರ ಪಾಹಿ ಜಯ ಜಯ ಜಯತು ಪ ಭವ ಪ್ರಮುಖ ಸುರರಿ- ಗಾನಮಿಸುತ ದಶಮಸ್ಕಂದದ ಕಥೆಯ ಪೇಳುವೆ 1 ತಾಮರಸಭವಂಗೆ ಪೋಗಿ ಮೊರೆಯನಿಟ್ಟಳು 2 ಹರಮುಖ ಸುಮನಸರ ಕೂಡಿ ವಿಧಿಯು ಕ್ಷೀರ ಶರಧಿಯೈದಿ ಪರುಷಸೂಕ್ತದಿಂದ ಹರಿಯ ಸ್ತೋತ್ರ ಮಾಡಲು 3 ಸುರರು ಯಾದವರಾಗಿ ನಾನು ಬರುವೆ ದೇವಕಿ ಪುತ್ರನೆನಿಸಿ ತರಿವೆ ನೀಚರನೆಂದಾಕಾಶವಾಣಿಯಾಯಿತು 4 ಕನ್ನಿಕೆಯರು ಭುವಿಯೊಳವತರಿಸುವದೆನ್ನುತ 5 ಮೃಡ ಸಡಗರದಲಿ ತಮ್ಮ ನಿಳಯಗಳನು ಸಾರ್ದರು 6 ಶೂರಸೇನನೆಂಬ ರಾಜ ಪಾರಂಪರ್ಯದಿ ಮಧುರೆಯಲ್ಲಿ ಧಾರುಣಿಯ ಪಾಲಿಸುತೆ ಧರ್ಮದಿಂದಲಿ 7 ದೇವಕನು ದೇವಕಿಯ ವಸುದೇವಗಿತ್ತು ಉತ್ಸವ ಬರೆ ಭಾವ ಮೈದ ಕಂಸ ರಥಕೆ ಸಾರಥಿಯಾದನು8 ನಭವುನುಡಿಯೆ ಜವದಿ ತಂಗಿಯ ಮುಡಿಯ ಪಿಡಿಯೆ ಕಂಸ ಕೋಪದಿ9 ಪುಟ್ಟಿದ ಮಕ್ಕಳನೆಲ್ಲ ನಿನಗೆ ಕೊಟ್ಟುಬಿಡುವೆ ಕೊಲ್ಲದಿರವಳ ಸಿಟ್ಟು ಸೈರಿಸೆನುತ ಪೇಳ್ದ ಶೌರಿಭಾವಗೆ 10 ಕೊಡಲು ಕಂಸ ಹೃದಯದಲಿ ಸತ್ಯಕೆ ಮೆಚ್ಚಿ ಭಾವಗೆಂದನು 11 ಇವನ ಭಯವು ಎನಗೆ ಇಲ್ಲ ಈವುಂದೆಂಟನೆ ಸುತನ ಮಾತ್ರ ತವಕದಿಂದ ಮನೆಗೆ ಪೋಗು ಪುತ್ರ ಸಹಿತದಿ 12 ಸೆರೆಯೊಳಿಡಿಸಿ ಘನವಿಭವದಿ ಭುವಿಯನಾಳುತಿರ್ದ ಕಂಸನು 13 ಸುರ ಋಷಿ ರಹಸ್ಯದಲಿ ಬಂದು ಪೇಳಿದ 14 ಉರಿದ ಕಣ್ಣೊಳು ಕಿಡಿಗಳುದುರೆ ಶೌರಿಯ ಬಂಧನದೊಳಿಟ್ಟು ತರಿದನಾರುಮಂದಿ ಸುತರ ತವಕದಲಿ 15 ಏಳನೆಯ ಗರ್ಭ ಉದರವಿಳಿದೆಂದು ತಿಳಿಯೆ ಜನರು ಶ್ರೀಲತಾಂಗಿಯರಸನಂಶ ಬಳಿಕ ಬೆಳೆದುದು 16 ಅದನು ವಯ್ದು ದುರ್ಗಿ ರೋಹಿಣಿಯುದರದಲ್ಲಿ ಇಟ್ಟೆಶೋದೆ ಯುದರದಲ್ಲಿ ತಾನು ಸೇರಿ ಬೆಳೆಯುತಿರ್ದಳು 17 ಬಳಿಕಯಿಂದಿರೇಶ ತಾನು ಜಲಜಮುಖಿ ದೇವಕಿಯ ಗರ್ಭ ದಲಿ ಪ್ರವಿಷ್ಠನಾಗಿರ್ದ ಮಹಿಮೆಯಿಂದಲಿ 18 ಮುಖದಿ ಕಳೆಯೇರಿರಲ್ಕೆ ಖಳನಿದೇ ಇದೇ ಎನುತ್ತ ಸಕಲ ಭಾಗದಿ ಕಾವಲಿಟ್ಟು ಸಮಯ ನೋಡುತ್ತಿರೆ 19 ಸುರರು ಹರಿಯ ವೇದದಿಂದ ಸ್ತೋತ್ರಮಾಡಿ ಹೋದರು 20 ನಂದನರಸಿಯಲ್ಲಿ ದುರ್ಗಿಯಂದುದಿಸಿರೆ ನಭೋ ಮಾಸದಿ ಅಂದುರಾತ್ರಿಯ ಶಿತಪಕ್ಷಯಷ್ಟಮಿ ದಿನದಲಿ 21 ಸರಸಿಜಾಪ್ತನುದಿಸಿದಂತೆ ಬೆಳಕು ತುಂಬಲು 22 ದರ ಗದಾರಿ ಪದ್ಮ ಪೀತಾಂಬರ ಶ್ರೀವತ್ಸ ಕೌಸ್ತುಭಗಳ ಶೌರಿ ನೋಡಿದ 23 ದಿವ್ಯರೂಪವ ಕಾಣುತ ವಸುದೇವ ಮನದಿ ಹಿಗ್ಗಿ ಮುದದಿ ಗೋವುಗಳನು ಹತ್ತುಸಾವಿರ ಧಾರೆಯೆರೆದನು 24 ತುತಿಸಲಂದು ಸತೀಪತಿಗಳು ಹಿತದಿ ತೇಜವ ಮಾಯಗೈದು ಸುತನು ಮಗುವಿನಂತೆ ತೋರೆ ಸೊಬಗಿನಿಂದಲಿ 25 ಕಾಲಲಿದ್ದ ಸಂಕೋಲೆಗಳು ಕಳಚಿ ಬಿದ್ದುದಾಗ ದೇವಕಿ ಬಾಲನನ್ನು ನೋಡಿ ಮನದಿ ಭಯವ ಪಟ್ಟಳು 26 ಬೀಗಮುದ್ರೆ ಸಹಿತ ಎಲ್ಲ ಬಾಗಿಲು ತನ್ನಿಂತಾನೆ ತೆಗಿಯೆ ಶೌರಿ ನಡೆದನು 27 ಗೋಕುಲವನೈದಿ ಕಮಲನಾಭನಂ ಯಶೋದೆಯ ಬಳಿಯಲಿಟ್ಟನು 28 ಆಕೆ ಪಡೆದ ಹೆಣ್ಣು ಶಿಶುವ ತಾ ಕೈಕೊಂಡು ಮನೆಗೆ ಬಂದು ಜೋಕೆಯಿಂದ ಮೊದಲಿನಂತೆ ತೋರುತಿರ್ದನು 29 ಅಳಲು ಶಿಶವು ಕೇಳಿಯೆಲ್ಲ ಖಳರು ಹೋಗಿ ಕಂಸಗುಸುರೆ ಝಳಪಿಸುತ್ತ ಖಡ್ಗವನ್ನು ಜವದಿ ಬಂದನು 30 ವಂದನಾದರೂ ಬಿಡಬಾರದೆ ಸುಂದರಿ ಇವಳಣ್ಣ ಎನಲು ಮುಂದುಗಾಣದೆ ಯೋಚಿಸುತ್ತ ಮುಗುವನೆತ್ತಿದ 31 ನಭದಿನಿಂತು ಸಾರಿ ಛೀ ದುರಾತ್ಮ ಯಾರ ಕಡಿವೆ ಯೆಂದಳು? 32 ವೈರಿ ಮೀರಿ ಕೊಂದು ಪಾಪಿಯಾದೆ ಛೀ! ಹೋಗೆಂದಳು 33 ಮನದಿ ನೊಂದು ಕಂಸನು ತನ್ನನುಜೆಯನ್ನು ಭಾವನನ್ನು ವಿನಯದಿಂದ ಬೇಡಿಕೊಂಡ ಕ್ಷಮಿಸಿರೆನ್ನುತಾ 34 ನೆರಹಿ ತನ್ನ ಮಂದಿಯಾದ ದುರುಳರಿಗೀ ಸುದ್ದಿಪೇಳೆ ಬರಲಿ ಹರಿಯು ಕೊಲುವೆವವನ ಭಯಬಿಡೆಂದರು 35 ಧರೆಯೊಳು ಪುಟ್ಟಿದ ಶಿಶುಗಳನ್ನು ತರಿವುದೆಂದು ಪೂತನೆಯೆಂಬ ಮರುಳೆಯನ್ನು ಕಳುಹಿ ವಿಸ್ಮಯದಿಂದಲಿರ್ದನು 36 ನಂದಗೋಕುಲದಲ್ಲಿ ಮಹಾನಂದವಾಗಿ ಜನರೆಶೋದೆಯ ಕಂದನನ್ನು ನೋಡಿ ಹಿಗ್ಗಿಯುತ್ಸವಗೈದರು 37 ಪ್ರೀತಿಯಿಂದ ನಂದಗೋಪ ಜಾತಕರ್ಮ ಮಾಡಿಸಲ್ಕೆ ಶ್ರೀ ತರುಣಿಯ ಕಳೆ ದಿನದಿನದಿ ಪೆರ್ಚುತಿಹುದು 38 ಶೌರಿಯ ಮಧುರೆಯಲಿ ನೋಡಿ ಆದರಿಸಿ ಎನ್ನ ಮಗನೆ ಧೀರ ನಿನ್ನ ಮಗನೆನ್ನುತ ಗೋಪ ನುಡಿದನು39 ಏಳನೆಯ ದಿನದಿ ಪೂತನಿ ಬಾಲಕಂಗೆ ಮೊಲೆಯನೊಡೆ ಹಾಲಾಹಲವನೀಂಟಯಸುವನೆಳದು ಕೊಂದನು40 ಬಿಡುಬಿಡೆನ್ನುತಾರ್ಭಟಿಸುತಲೊಡನೆ ಯೋಜನವಾಗಿ ದೇಹ ಪೊಡವಿಗುರುಳೆ ನೋಡಿಗೋಪರು ಭೀತಿಗೊಂಡರು 41 ಜನ್ಮತಾರೆಯುತ್ಸವದಲಿ ಶಕಟನು ಬಂಡಿಯೊಳು ಸೇರಿ ಇರಲು ನನ್ನಿಯಿಂದಲೊದ್ದು ಕೆಡಹಿ ಕೊಂದಿತಾ ಶಿಶು ಪೋರ 42 ಬಾರಿಬಾರಿಗೆ ರಕ್ಷೆಕಟ್ಟಿನಾರಾಯಣ ಕವಚವ ತೊಡಿಸಿ ಪೋರಬಾಲನನ್ನು ಸಲಹೆನುತ ಹರಿಯ ಬೇಡಿದರು43 ಸಾರಿ ನೆಲಕೆ ಕೆಡಹಿ ಮೇಲೆ ಆಡುತಿರ್ದನು 44 ಶೌರಿ ನೇಮದಿಂದ ಗರ್ಗ ಸೇರಿ ಗೋಕುಲವನು ಸಂ ಸ್ಕಾರ ಕ್ಷತ್ರದಿಂದ ಮಾಡಿದ ಶಿಶುಗಳೆರಡಕೆ 45 ರಾಮಕೃಷ್ಣರೆಂದು ಪೆಸರ ಪ್ರೇಮದಿಂದಲಿಡಿಸಿ ನಂದನ ನೇಮಕೊಂಡು ತಾ ತೆರಳಿದ ಗರ್ಗಾಚಾರ್ಯನು46 ಶುಕ್ಲಪಕ್ಷದ ಚಂದ್ರನಂತೆ ಶುಕ್ಲನಾಮಕ ಹರಿಯು ಜನದೊ ಳಕ್ಕರಿಯಲ್ಲಿ ಬಾಲಲೀಲೆ ತೋರುತಿರ್ದನು 47 ಅಂಬೆಗಾಲಿಡುತ್ತ ಕೃಷ್ಣ ಸಂಭ್ರಮದಲಿ ಮನೆಮನೆಗಳೊ ಳಿಂಬಾಗಿ ಪಾಲು ಬೆಣ್ಣೆ ಕದ್ದು ತಿಂಬನು 48 ವಂದು ನೋಡಿ ಕಣ್ಣುಮುಚ್ಚಿ ವಿಸ್ಮಿತಳಾದಳು 49 ಮನೆಮನೆಗಳ ಪೊಕ್ಕೆಶೋದೆತನಯ ಪಾಲುಬೆಣ್ಣೆಸವಿದು ವಿ ನಯದಿಂದ ಅರಿಯದವನಂತಿರುವ ತಾಯಿಗೆ 50 ಗೋಪಿ ವಿಧ ವಿಧ ಗುಣದಿಂದಲೂಖಲಕ್ಕೆ ಕಟ್ಟಿದಳ್ 51 ವರಳ ಸೆಳೆದುಕೊಂಡು ಮತ್ತಿಮರಗಳನ್ನು ಮುರಿಯೆ ಸಿದ್ಧ ಪರುಷರೀರ್ವರಾಬಾಲಗೆ ನಮಿಸಿ ತುತಿಸಿ ಪೋದರು 52 ವನಜನಾಭ ಕೃಷ್ಣನನ್ನು ದೂರುತಿರುವರು 53 ಸೂನು ನಮ್ಮ ಮನೆಗೆ ಬಂದು ಆನಂದದಿ ಯಾರು ಆಡದಾಟ ಆಡುವ 54 ಬಾಯಿಗೊರಸಲತ್ತೆ ಸೊಸೆಯ ಹೊಡೆಯೆ ನಗುತ ಓಡಿ ಬಂದ ತವಸುತ 55 ಲೀಲೆಯಿಂದಲಿವನು ನೆಲುವಿನ ಮೇಲಿಟ್ಟಿರುವ ಭಾಂಡವನ್ನು ಕೋಲಿನಿಂದ ತಿವಿದು ವಡೆದು ಪಾಲ ಸವಿದನು56 ಎತ್ತಿಕೊಳ್ಳೆನುತ್ತ ಮೈಯ್ಯ ಹತ್ತಿ ನೆಲುವಿನ ಭಾಂಡವನ್ನು ಮತ್ತೆ ನಿಲುಕಿಸಿಕೊಂಡು ಪಾಲಕೆನೆಯ ಮೆದ್ದನು 57 ಸತಿಪತಿಗಳ್ ಮಲಗಿರೆ ಮಧ್ಯೆ ಸರ್ಪವನು ಹಾಕಿ ತಾನ- ಗುತ್ತಲಿ ಜುಟ್ಟು ಜಡೆಗೆ ಗಂಟಿಕ್ಕಿ ಓಡಿದ58 ಅಳುತಲಿರುವ ಶಿಶುವಿನ ತಲೆಯ ಕೂದಲು ಕರುವಿನಬಾಲಕೆ ಎಳೆದು ಗಂಟುಹಾಕಿ ಬೀದಿಯಲ್ಲಿ ನೂಕುವ 59 ಬೆಣ್ಣಿಯನ್ನು ಮೆದ್ದು ಮಿಕ್ಕದನ್ನು ಕೋತಿಗಿತ್ತದು ತಿನ್ನತಿರಲು ನಗುತ ನಗುತ ತಿರುಗುತಿರುವನು 60 ಇನಿತು ಎಲ್ಲ ಪೇಳೆ ಗೋಪವನಿತೆ ತಾನು ಮಗನ ಮುದ್ದಿಸಿ ಘನ ಪ್ರಮೋದ ಚಿತ್ತಳಾಗಿ ಕಾಲಕಳೆವಳು 61 ಪ್ರೀತಿಯಿಂದ ಬನ್ನಿ ಎಂದು ಕರೆವ ಬಾಲರ 62 ಮೂರು ವರ್ಷವಾಗೆ ಕೃಷ್ಣ ಮುದದಿ ಕರುಗಳ ಕಾಯುತ್ತ ವಾರಿಗೆಯವರಿಂದ ಕೂಡಿ ಕುಣಿಯುತಿರುವನು 63 ವತ್ಸ ಬಕರ ಮುರಿದು ಕೃಷ್ಣ ಸ್ವೇಚ್ಛೆಯಿಂದಲಣ್ಣನೊಡನೆ ನಿಶ್ಚಲ- ಚಿತ್ತರುಲಿಯಲಾಡುತೆಸೆದ ಮೋದದಿ64 ವೃಂದಾವನಕೆ ಪೋಗಲಲ್ಲಿ ಇಂದಿರೇಶ ವಿಷದ ಮಡುವ ನೊಂದು ದಿನದಿ ಧುಮುಕಿ ಜಲವ ನಿರ್ಮಲಗೈದನು 65 ವನದೊಳಗ್ನಿಯನು ನುಂಗಿ ಜನರ ಸಲಹಿ ರಾತ್ರಿಯಲ್ಲಿ ಮುನಿ ಜನೇಢ್ಯನಾಗಿ ಗೋಕುಲದೊಳೆಸೆದನು 66 ಅಜಗರನಾಗಿದ್ದಸುರನ ನಿಜಶರೀರ ಬೆಳಸಿ ಕೊಂದು ಸ್ವಜನರನ್ನು ಪಾಲಿಸಿದನು ವೃಜಿನದೂರನು 67 ಳನ್ನು ಕಾಯ್ದ ಕೃಷ್ಣ ತಾನು ನನ್ನಿಯಿಂದಲಿ 68 ಕರುಗಳನ್ನು ಹುಡುಗರನ್ನು ಸರಸಿಜಭವ ಬಚ್ಚಿಡಲ್ಕೆ ಹರಿಯುತಾನು ತತ್ವದ್ರೂಪವಾಗಿ ಮೆರೆದನು 69 ನಾನಾಲಂಕಾರದಿ ಗೋವುಗಳ
--------------
ಗುರುರಾಮವಿಠಲ
ಭಾಗವತರ ಭಾಗ್ಯನಿಧಿಯೆ ಭೋಗಿಶಯನ ಭೋ ಶ್ರೀರಾಮ ಪ ವೇದಾಗಮಕೆ ಸಿಲುಕದಂಥ ನಾದಬ್ರಹ್ಮಾಯೋಧ್ಯ ರಾಮ ಸಾಧುಜನಸಂಪ್ರೀತ ಭವರೋಗ್ವೈದ್ಯ ಸಾಧನ ಸಾಧ್ಯ ರಾಮ 1 ಬೋಧ ರಾಮ ಮಹದಾದಿ ರಾಮ 2 ಕಂಟಕ ದೂರ ರಾಮ ಪರಕೆಪರಮ ಪರಮಪುರುಷ ಸರುವ ಜಗದಾಧಾರ ರಾಮ 3 ಹತ್ತು ಅವತಾರೆತ್ತಿ ಭೂಭಾರ್ಹೊತ್ತು ಇಳುಹಿದ ಸತ್ಯ ರಾಮ ಜಗತ್ಕರ್ಮ ರಾಮ 4 ದಾಸಜನರಭಿಲಾಷೆಯನು ಪೂರೈಸಲೋಸುಗ ಈಶ ರಾಮ ಶೇಷಾಚಲನಿವಾಸನಾದ ದಾಸಗಣ ಸಂತೋಷ ರಾಮ 5 ಅಸಮ ಪಾದಕುಸುಮಗಳನಿಟ್ಟೊಸುಧೆ ವೈಕುಂಠೆನಿಸಿ ರಾಮ ಜನರಿಂಗೊಸೆದು ರಾಮ6 ಬ್ರಹ್ಮಾದಿಗಳ ಹಮ್ಮನಳಿದ ಕರ್ಮಚರ ಪರಬ್ರಹ್ಮ ರಾಮ ಸುಖಧಾಮ ರಾಮ 7 ದಾತ ರಾಮ ಗುರುನಾಥ ರಾಮ 8 ತತ್ವದರ್ಥ ಉತ್ತರಿಸೆನ್ನ ಕಟ್ಟುಮಾಡೊ ಶಿಷ್ಟರಾಮ ಮೂರ್ತಿ ರಾಮ 9 ಹುಟ್ಟಿಬರುವ ಕಷ್ಟದ್ಹಾದಿ ಕಟ್ಟುಮಾಡೊ ಶಿಷ್ಟರಾಮ ನಿಷ್ಠೆಯಿಂ ನಿಮ್ಮ ಮುಟ್ಟಿ ಭಜಿಪ ಪಟ್ಟಗಟ್ಟೆಲೊ ದಿಟ್ಟ ರಾಮ 10 ದಾಸಜನರ ವಾಸದಿರಿಸೊ ಕೇಶವ ಜಗದೀಶ ರಾಮ ದೋಷರಾಶಿ ನಾಶಗೈದು ಪೋಷಿಸೆನ್ನನನುಮೇಷ ರಾಮ 11 ವೇದ ವಿದ್ಯದ್ಹಾದಿಸಾಧನ ಭೋಧಿಸೆನಗ್ವಿನೋದ ರಾಮ ಪಾದಭಕ್ತಿ ಮೋದದಿತ್ತು ಭವಬಾಧೆಯಳಿ ಸುಖಸ್ವಾದ ರಾಮ 12 ಕಳಿ ಮಮಜೀವ ರಾಮ ಬಿಡಿಸೆನ್ನಯ ರಾಮ 13 ಮತ್ತೆ ಮತ್ತೆ ಪೃಥ್ವಿ ಮೇಲೆ ಸತ್ತು ಹುಟ್ಟಿ ಬೇಸತ್ತೆ ರಾಮ ಕರ್ತು ನಿನ್ನ ಗುರ್ತು ಅರಿಯದನರ್ಥವಾದೆನಾತ್ಮ ರಾಮ 14 ಆಸೆಯೆಂಬ ಪಾಶದಿಂದ ಘಾಸಿಯಾದೆ ಭವನಾಶ ರಾಮ ದೋಷದೂರೆನ್ನ ಕ್ಲೇಶಗಳನು ನಾಶಿಸೈ ದಯಭೂಷ ರಾಮ 15 ಅರಿದು ಅರಿದು ಉರಿವದೀಪದೆರಗುವ ಹುಳದಿರವು ರಾಮ ಸಿರಿಯ ರಾಮ 16 ಮರೆದು ನಾನು ಧರೆಗೆ ಬಿದ್ದು ದುರಿತದೊಳಗೆ ಬೆರೆದೆ ರಾಮ ಪೊರೆಯೊ ರಾಮ 17 ಕರುಣಿಸುತ ತಂದೆ ರಾಮ ಬಯಲ್ಹರಿಸು ರಾಮ 18 ಮಾನ ಅಭಿಮಾನ ನಿನ್ನದು ಧ್ಯಾನಿಪರ ಸುರಧೇನು ರಾಮ ಜ್ಞಾನವಿತ್ತು ಮಾನದಿಂದ ನೀನೆ ಪೊರೆ ಜಗತ್ರಾಣ ರಾಮ 19 ಭಿನ್ನವಿಲ್ಲದೆ ನಿನ್ನ ನಂಬಿ ಧನ್ಯನಾದೆನಿನ್ನು ರಾಮ ಎನ್ನ ಮನಸಿಗಿನ್ನು ಸಂತಸವನ್ನು ಕೊಡು ಪಾವನ್ನ ರಾಮ 20 ಭೃತ್ಯನ ಮಹ ಚಿತ್ತಭ್ರಮೆ ಮುರಿದೊತ್ತಿ ಕರಪಿಡಿದೆತ್ತು ರಾಮ ಭಕ್ತಿಯುಕ್ತಿ ಮುಕ್ತಿ ಸುಖವನಿತ್ತು ಪೊರೆ ಗುರುದತ್ತ ರಾಮ 21 ನಿಖಿಲವ್ಯಾಪಕ ಅಖಿಲರಕ್ಷಕ ಸಕಲಬಲ ನೀನೇಕ ರಾಮ ಮುಕುತಿಸಂಪದ ಸಿದ್ಧಿ ನೀನೆ ಭಕುತಪ್ರಿಯ ಲೋಕೈಕ ರಾಮ 22 ಭಿನ್ನವಿಲ್ಲದೆ ನಿನ್ನ ನಾಮವನ್ನು ಪೊಗಳುವರಿನ್ನು ರಾಮ ಮಾನ್ಯರಾಗನನ್ಯ ಸುಖಸಂಪನ್ನರೆನಿಪನನ್ಯ ರಾಮ 23 ಉದಯದೆದ್ದು ಪದುಳದೀನಾಮ ಓದಿಕೇಳಲು ಸದಾ ರಾಮ ಸದಯ ರಾಮ 24 ನಿತ್ಯ ಭಕ್ತಿಯಿಂ ಬರೆಯುತ್ತ ಪಠಿಸಲು ಕರ್ತುರಾಮ ಮುಕ್ತಿಯೆಂಬ ಸಂಪತ್ತನಿತ್ತು ಬಿಡದ್ಹತ್ತಿರಿರುವನು ಸತ್ಯ ರಾಮ 25
--------------
ರಾಮದಾಸರು
ಭಾಗೀರಥಿ ಭಾಗೀರಥೀ ದೇವಿ ಭಯ ನಿವಾರಣ ಗಂಗೆ ಸಾಗರ ನಿಜರಾಣಿ ಸಕಲ ಕಲ್ಯಾಣಿ ಪ ಒಮ್ಮೆ ಶ್ರೀವಿಷ್ಣು ಪಾದದಲಿ ಉದ್ಭವಿಸಿದೇ ಕರ ಪಾತ್ರೆಯಲ್ಲಿ ಬಂದೆ ಪಾದ ತೀರ್ಥವಾದಿ ಬ್ರಹ್ಮಾಂಡವೆಲ್ಲ ಪಾದನ್ನವೆಂದಿನಿಸಿದೆ 1 ದೇವಿ ನೀ ವಿಷ್ಣು ಪಾದದಲಿ ಉದ್ಭವಿಸಿದೆ ದೇವತೆಗಳೆಲ್ಲ ನಿಮ್ಮಾಧೀನವೊ ಆವ ಮಹಾದೇವನು ತಲೆಬಾಗಿರಲಾಗಿ ಮಹ ದೇವ ಶಿರಸಿನಲಿ ಉದ್ಭವಿಸಿದೆ ಜಗವರಿಯೆ 2 ದೃಷ್ಟಿಸಿ ನೋಡಲು ನೂರು ಜನ್ಮದ ಕೃತ್ಪಾಪ ಮುಟ್ಟಿದರೆ ಮುನ್ನೂರು ಜನ್ಮದ ಪಾಪವು ಮುಟ್ಟಿಮಾಡಲಿ ಬಂದು ಸ್ನಾನ ಮಾತ್ರದಿಂದ ಸುಟ್ಟುಹೋಗುವುದು ಸಹಸ್ರ ಜನ್ಮದ ಪಾಪ 3 ಜಹ್ನು ಋಷಿಯಿಂದಲಿ ಬಿದ್ದ ಕಾರಣದಿಂದ ಜಾಹ್ನವಿಯಂತೆಂದು ನೀ ಕರೆಸಿಕೊಂಡೇ ವನ್ನು ನೀ ಪಿಂತೆ ಪಾವನ ಮಾಡಬಂದೆ 4 ವಿಸ್ತಾರದಲಿ ಪೊಳಿವ ಮುತ್ತಿನಾ ಸರಗಳು ಮತ್ತೆ ರಂಗಮ್ಮ ಪವಡಿಸಿದ ನೋಡೀ ಮತ್ತೆ ಮಹಾಲಕ್ಷ್ಮಿಯೆ ಉರಸ್ಥಳದಲಿರಲಾಗಿ ಇತ್ತ ಶ್ರೀದವಿಠಲ ನನರಸಿ ಬಂದೆ 5
--------------
ಶ್ರೀದವಿಠಲರು
ಭಾಗೀರಥೀ ಜನಕಗೆ ಭಾಗವತಪ್ರಿಯಗೆ ಆಗ ನೀರೆರೆದರವಿಂದಲೋಚನನಿಗೆ ಗೋಪಿ 1 ಸಾಗರಶಯನನ ತೂಗಿ ತೊಟ್ಟಿಲೊಳಿಟ್ಟು ನಾಗಮುರಿಗೆ ವಂಕಿ ನಂದಗೋಪನ ಸುತಗೆ ಬೆರಳಿಗುಂಗುರ ಕೋಟಿಭಾಸ್ಕರತೇಜಗೆ ಹೊಳೆವೊ ಬಿಂದಲಿ ಗುಂಡು ಭುಜಕೀರ್ತಿ ಭೂಷಣ 2 ಮಲಕು ಮುತ್ತಿನ ಹಾರ ಪದಕ ಪಚ್ಚೆಯ ಕಾಂತಿ ಕೌಸ್ತುಭ ರತ್ನ ಥಳಥಳಿಸುವ ಕರ್ಣದಲ್ಲಿ ಬಾವುಲಿ ಚೌಕುಳಿ ಚಳತುಂಬು ಮುತ್ತಿನಬಟ್ಟು ಮುಂದಲೆಗೆ 3 ಹೊಸ ವಜ್ರದರಳೆಲೆ ಹುಲಿಯುಗುರು ತಾಯಿತ ಕುಸುಮನಾಭಗೆ ಕಿರುಗೆಜ್ಜೆ ಕಾಲಲಂದಿಗೆ ಮಿಸುಣಿ ಮಾಣಿಕ್ಯದುಡಿದಾರದಡ್ಡಿಕೆ ಕಟ್ಟಿ ಗೋಪಿ 4 ಕಂಜನಯ್ಯನ ನೋಡೆ ಕಂಗಳಿನ್ನೆರಡಿಲ್ಲ ಜಿಹ್ವೆ ಒಂದೆ ಸಾಲದೆನಗೆಂದು ಅಂಗಿಟೊಪ್ಪಿಗೆ ಹಾಕ್ಯಾಲಿಂಗನೆ ಮಾಡುತ ಸತಿ ತಾನಂದಾನಂದಭರಿತಳಾಗಿ5 ತನ್ನ ಮಗನ ಮುದ್ದು ತಾ ನೋಡಿ ಸಾಲದೆ ಹೊನ್ನ ಪುತ್ಥಳಿಯಂತೆ ಹೊಳೆವೊ ಕೂಸನು ಎತ್ತಿ ನಿನ್ನ ಮಗನ ಆಟ ನೀ ನೋಡೆಂದೆನುತಲಿ ತನ್ನ ಪತಿಯ ತೊಡೆಯಲ್ಲಿಟ್ಟು ನಲಿಯುತ 6 ಹೊನ್ನ ಪುತ್ಥಳಿಗೊಂಬೆ ಹೊಸ ಚಿನ್ನದರಗಿಳಿಯೆ ಹೊನ್ನು ತಾ ಗುಬ್ಬಿತಾರಮ್ಮಯ್ಯ ಎನುತಲಿ ಬಣ್ಣ ಬಣ್ಣದ ಆಟ ವರ್ಣಿಸುತಲಿ ನೀಲ- ವರ್ಣನ ತನ್ನ ತೋಳಿಂದಪ್ಪಿ ನಲಿಯುತ 7 ಸೃಷ್ಟಿಮಾಡುವರಿಲ್ಲೀ ಶಿವ ಬ್ರಹ್ಮರೊಡೆಯನ ಸೃಷ್ಟಿಕರ್ತನಾದನನ್ಹುಟ್ಟಿಸಿದ ನಾಭಿಯಿಂದಿವನು ಹೊಟ್ಟೆಲೀರೇಳು ಜಗವಿಟ್ಟು ಸಲಹುವ ಎಷ್ಟು ಸರ್ವೋತ್ತಮ ಈಗಿಲ್ಲ್ಯವತರಿಸಿದ 8 ಚತುರವದನಗೆ ವೇದ ತಂದಿಟ್ಟು ಸಾಗರ ಮಥಿಸಿ ಮಂದರವನು ಪೊತ್ತು ಅಮೃತವ ಹೀರಿ ಪೃಥಿವಿಯನು ತಂದ ಕೋರೆಯಲಂದ್ಹಿರಣ್ಯಾಕ್ಷನ ಹತವ ಮಾಡಿದ ತಾ ಭೂಪತಿ ಎಂದೆನಿಸಿದಿವನು 9 ಪರಮಭಕ್ತನು ಕರೆಯೆ ಬಿರುದು ಕಂಬದಿ ಬಂದು ಕರುಳ ಬಗೆದ ಪುಟ್ಟ ತÀರÀಳ ರೂಪವ ನೋಡಿ ಮರುಳಾಗಿ ಬಲಿ ಮೂರು ಚರಣ ದಾನ ನೀಡೆ ಬೆಳೆದು ಬ್ರಹ್ಮಾಂಡಕ್ಕೆ ಭುವನ ವ್ಯಾಪಿಸಿಕೊಂಡ10 ಕ್ಷತ್ರ ಸಂಹಾರಿ ತಾ ಎತ್ತಿ ಧನುವ ಸೀತಾ ಸೌ- ಮಿತ್ರಿಸಹಿತ್ವನದಲ್ಲಿ ಇರುತಿರಲಾಗ ಪತ್ನಿ ಒಯ್ಯಲು ಅಸುರನ್ಹತ್ತು ಶಿರಗಳ ತರಿದ ದುಷ್ಟ- ರಂತಕನೆ ನಿರ್ದುಷ್ಟ ಸಜ್ಜನಪ್ರಿಯ 11 ದೇವಾಧಿದೇವ ದೇವಕ್ಕಿ ಜಠರದಿ ಬಂದು ಮಾಯಾ- ಪೂತಣಿಯನ್ನು ಕೊಂದು ವಿಷಮೊಲೆನುಂಡು ಕಾಲಲಿ ಶಕಟನ ಕೆಡವಿದ ಯದುವೀರ ತಾ- ಗೋಪಾಲಕ ಗೋಪೀಸುತನೆಂದೆನಿಸಿಕೊಂಡ12 ವಿಪರೀತ ಮಾಯದಿ ತ್ರಿಪುರದ ಜನರಿಗೆ ದುರ್ಮತವ ಬೋಧಿಸಿ ಅಸುರಾರಿ ಮೋಹಕ ತೋರಿ ಚಪಲ ಚೆನ್ನಿಗ ಖಡ್ಗಪಿಡಿದು ತೇಜಿಯ- ನೇರಿ ಕಪಟನಾಟಕ ಕಲಿಮರ್ದನ ಕರಿಗ್ವರವಿತ್ತ13 ಜನ್ಮಕರ್ಮವು ಜರಾಮರಣಗಳಿವಗಿಲ್ಲ ಜಗದೋ- ಪರಬ್ರಹ್ಮನ ಪಾದಾಂಘ್ರಿಸ್ಮರಣಿ (ಣೆಯಿ?)ರೆ ಪರಮಾ- ದರದಿ ಕರೆದೊಯ್ವ ತನ್ನ (ಬಳಿಯ)ಲ್ಲೆ 14 ಏಸುಜನ್ಮದ ಫಲವಿನ್ನೆಷ್ಟು ಜನ್ಮದ ಸುಕೃತ ಈ ಸಮಯದಿ ಫಲಿಸಿತೀತ ಇಲ್ಲುದಿಸಿರಲು ದೋಷವರ್ಜಿತನೆ ಸಂತೋಷಭರಿತನಿವ ಭೀ- ಮೇಶಕೃಷ್ಣ ಯಶೋದೆ ಕೂಸೆಂದೆನಿಸಿಕೊಂಡ15
--------------
ಹರಪನಹಳ್ಳಿಭೀಮವ್ವ
ಭಾರ ನಿನ್ನದು ತಂದೆ ಸಿಂಧು ಎಂದೆಂದು | ಗುರುವರ್ಯ ಬಂದು ಕರುಣಿಸುವನು ಮದ್ಬಂಧೊ 1 ಮಂಗಳಾತ್ಮನೆ ಎನ್ನ ಅಂಗದಲಿ ನೀನಿಂದು ಪೊಂಗಳಧರನ ತೋರಯ್ಯ | ಅಜರಾಯ ಭಂಗಬಡಲಾರೆ ಭವದೊಳÀು 2 ನಾರಾಯಣನ ಪುತ್ರ ನಾರಾಯಣಗೆ ಮಿತ್ರ ನಿರವದ್ಯ | ನೀಡಭಯ ಕರುಣಾತ್ಮ ಗುರುವೆ ಒಲಿದಿಂದು 3 ಕಾಮರೂಪನೆ ಹರಿಯನೇಮದಲಿ ಕಪಿಯಾಗಿ ಆ ಮಹಿಮೆಗುಂಗುರ ಅರ್ಪಿಸಿ | ಅಗ್ನಿಯಲಿ ತಾಮಸರ ಹುರಿದೆ ಪುರದಲ್ಲಿ 4 ಮರಳಿ ಶರಧಿಯ ದಾಂಟಿ ಭರದಿ ರಘುಪತಿ ಚರಣ ಸರಸಿಜದಿ ಚೂಡಾಮಣಿಯನ್ನು | ಒಪ್ಪಿಸಿ ಹರಿ ಅಂಗ ಸಂಗ ಪಡೆದಯ್ಯ 5 ಸಿಂಧÀುವನು ಬಂಧಿಸಿ ಬಂದ ವಿಭೀಷಣಗೆ ಕುಂದದೆ ಅಭಯ ಕೊಡಿಸಿದೆ | ದಯಸಿಂಧು ನಿಂದೆನ್ನ ಒಳಗೆ ಮುದವೀಯೊ 6 ದೇವೇಶನಾಜ್ಞೆಯಲಿ ಜೀವೇಶ ಸಂಜೀವ ಪರ್ವತ ತಂದು ಕಪಿಸೈನ್ಯ | ಎಬ್ಬಿಸಿ ಮೊದಲೆಡೆಗೆ ಬಗೆದ ಕುಶಲಾತ್ಮ 7 ದಶಶಿರನ ಕೊಲ್ಲಿಸಿ ವಸುಧಿಪುತ್ರಿಯ ತಂದು ನಸುನಗುತ ರಾಮಚಂದ್ರಾಗೆ | ಒಪ್ಪಿಸಿ ವಿ ಭೀಷಣಗೆ ರಾಷ್ಟ್ರ ಕೊಡಿಸಿದೆ 8 ಪ್ರೇಮದಿ ಭರತನು ಸ್ವಾಮಿ ಬರಲಿಲ್ಲೆಂದು ಕಾಯ ಬಿಡುತೀರೆ | ಉಳುಹಿದೆ ಶ್ರೀ ರಾಮನಾಗಮನ ತಿಳುಹೀಸಿ9 ತುಷ್ಟನಾದೆನು ಹನುಮ ಇಷ್ಟ ನೀ ಬೇಡೆನಲು ಪಾದ ಪಿಡಿಯಲು | ಭಕ್ತಿಯಲಿ ಪಟ್ಟಾಭಿರಾಮ ತನ್ನಿತ್ತ 10 ಆಖಣಾತ್ಮಕಾಯನೆ ಅಕಳಂಕ ಗುಣಧಾಮ ನಿಖಿಲಾತ್ಮ ಹರಿಯ ಪೂಜಿಪ | ದೃಢಮಹಿಮ ಶ್ರೀಕೃಷ್ಣ ಭಕ್ತಾ ಕಲಿಭೀಮ 11 ಶಿಶುಭಾವದಲಿ ನೀನು ಶತಶೃಂಗ ಗಿರಿವಡೆದು ನಸುನಗುತ ಜನನಿಗಭಯವ | ನಿತ್ತಂಥ ಪಶುಪಾಲ ಪರನೆ ಪೊರೆಯೆನ್ನ 12 ದುರ್ಯೋಧನನ ತ್ರಾಣ ತಂತುಗಳ ಹರಿದಾಡಿ ಸರ್ವೇಶ ಹರಿಗೆ ಪ್ರಿಯಮಾಡಿ | ನಲಿದಂಥ ಸರ್ವಜ್ಞ ಭೀಮ ಬಿಡೆ ನಿನ್ನ 13 ದುಶ್ಯಾಸನನ ಮಹಾದುಶ್ಯೀಲ ಸ್ಮರಿಸುತ್ತ ಪಶುವಂತೆ ವಧೆಯ ಮಾಡಿದಿ | ರಣದೊಳು ಸುಸ್ವಾದ ಗುಣಸಾರ ಮಹವೀರ 14 ಮಾನಿನಿಯ ಸಂಕಲ್ಪ ತ್ರಾಣನೀ ಪೂರೈಸಿ ಪ್ರಾಣಸಖನಾಗಿ ಸಲಹಿದೆ | ಜಯಭೀಮ ಪಾಣೆ ಪಿಡಿಯೆನ್ನ ಮಹಘನ್ನ 15 ದುರಾರಾಧಕ ದುಷ್ಟ ಜರಸಂಧನ ಸೀಳಿ ಮುರಾರಿ ಮತ್ಪ್ರೀತಿ ಬಿಡಿಸಿದೆ | ದೀಕ್ಷೆಯಲಿ ತ್ರಿ ಪುರಾರಿ ವಂದ್ಯಾಗತಿ ನೀನೆ 16 ನಾರಾಯಣಾಸ್ತ್ರವನು ವೀರ ಗುರುಸುತ ಬಿಡಲು ಚೀರಿ ನಮೋಯೆನ್ನೆ ನೃಪರೆಲ್ಲ | ಸ್ಮøತಿ ತಪ್ಪೆ ಧೀರ ಎದುರಾಗಿ ನೀ ನಿಂತೆ 17 ಗರಡಿಯಲಿ ಕೀಚಕನ ಮುರಿದು ಮುದ್ದೆಯ ಮಾಡಿ ಮರಿಯದೆ ಅವನ ಅನುಜರ | ಸದೆಬಡಿದು ಮೋದ ನೀನಿತ್ತೆ 18 ಉರಗ ಬಂಧವ ಹರಿದು ಕರಿ ಮುಂದೆ | ನೀನಿಂತೆ ಸರ್ವನಿತ್ಯಾತ್ಮ ಕೃಷ್ಣಾತ್ಮ 19 ಮಧುವೈರಿ ಧ್ಯಾನದಲಿ ಕುದುರೆ ಆಟವನಾಡಿ ಮುದದಿಂದ ಕುರುಪನ್ಹೆಗಲೇರಿ | ಹುದುಗ್ಯವನ ಮುದದಿಂದ ನಲಿದೆ ಕಮಲಾಕ್ಷ 20 ಅರಗಿನ ಮನೆಯಲ್ಲಿ ವೈರಿಜನರ ಕೊಂದು ಪೊರೆದೆ ನೀ ಜನನಿ ಅನುಜರ | ಪಂಜರನೆ ಧರೆಯೊಳಗೆ ಎನ್ನ ಸಲಹಯ್ಯ 21 ಹಿಡಿಂಬನ ಕೊಂದು ವರ ಹಿಡಿಂಬಿಯ ಕೈಪಿಡಿದು ನಡೆದೇಕ ಚಕ್ರಪುರದಲ್ಲಿ | ಬಕನೊರಸಿ ನಡಕ ಬಿಡಿಸೀದಿ ಸುಜನರ 22 ವ್ಯಾಸದೇವನ ಕಂಡು ಸೂಸಿದ ಸದ್ಭಕ್ತಿ ಪಾಶದಲಿ ಕಟ್ಟಿ ಒಳಗಿಟ್ಟು | ಪೂಜಿಸುತ ಲೇಸಾಗಿ ಮುಂದೆ ನಡೆದಯ್ಯ 23 ನೀ ಸ್ವಯಂವರ ಸಭೆಯ ವೇಷಾಂತರದಿ ಪೊಕ್ಕು ವಾಸುದೇವನ ಕಂಡು ಆನಂದ | ತುಳುಕುತ್ತ ಆ ಸತಿಯ ತಂದೆ ವಿಜಯಾತ್ಮ 24 ರಾಜರೆಲ್ಲರ ಹಿಡಿದು ರಾಜಸೂಯಯಾಗವನು ಪೂಜೆಯನು ಮಾಡಿ ಮೆರದಯ್ಯ 25 ಲಕ್ಷ್ಮೀವನಕ್ಹೋದಂತೆ ಪಕ್ಷಿಯರ ಒಡಗೂಡಿ ದಕ್ಷನೆ ನೀನು ವನವಾಸ | ಅಜ್ಞಾತ ಪಕ್ಷವ ಕಳೆದು ಮರಳಿದೆ26 ಸಂಗರವ ನೀ ಹೂಡಿ ಭಂಗಿಸಿ ಕೌರವನ ರಂಗನ ಮುಂದೆ ಅರ್ಪಿಸಿ | ವಂದಿಸಿ ಮಂಗಳಾತ್ಮಕನೆ ಸಲಹೆಮ್ಮ 27 ನಿರ್ಮಲ ರಾಜ್ಯವನು ಧರ್ಮಂಗೆ ನೀನಿತ್ತೆ ನಿರ್ಮೂಲಗೈದು ಅರಿಗಳ | ಕೊಂದ ಪರ ಧರ್ಮಪರರನ್ನು ಪೊರೆದಯ್ಯ 28 ಮಧ್ವಾಖ್ಯ ಮಹವೀರ ಶುದ್ಧ ಸತ್ವ ಶರೀರ ಉದ್ಧರಿಪುದೊಂದೆ ವ್ಯಾಪಾರ | ಕೈಕೊಂಡ ವಿದ್ಯಾಧಿಪತಿಯೆ ಸಲಹೆನ್ನ 29 ಶ್ವಾಸ ನಿಯಾಮಕ ಪ್ರಭುವಾಸವೆ ನಿನ್ನಿಂದ ಉಸರಲೇನಯ್ಯ ನಿನ್ನಲ್ಲಿ | ಜೀವೇಶ ಸೂಸುವ ಭಕ್ತಿ ನೀಡಯ್ಯ 30 ವೇದ ಚೋರನ ಮಡುಹಿ ಸಾದರದಿ ಸುಜನಕ್ಕೆ ಬೋಧ ಮಾಡೆಂದು ಶ್ರೀ ವಿಷ್ಣು | ಕಳುಹಿದ ಮಧ್ವಾಖ್ಯ ಗುರುವೆ ಪರಿಪಾಹಿ 31 ಸುರರು ದುಂದಭಿ ಮೊರೆಯೆ ದುರುಳರ ಎದೆಯು ನಡುಗಲು | ಹರುಷದಲಿ ಮೆರೆದು ನೆರೆದರು ಸುಜನರು 32 ಕೈವಲ್ಯ ನೀನಿತ್ತೆ ಶ್ರೀವಲ್ಲಭನ ಪ್ರಥಮಾಂಗ | ಪ್ರಸನ್ನ ನೀವಲಿದು ಹರಿಯ ತೋರಯ್ಯ 33 ಹುಣಿಸೆ ಬೀಜದಿ ಪಿತನ ಘನೃಣವ ತೀರಿಸಿದಿ ಅಣಿಮಾದಿ ಸಿದ್ಧಿ ತೃಣವಯ್ಯ | ನಿನಗಿನ್ನು ಗುಣಪೂರ್ಣ ಹರಿಯ ಪ್ರತಿಬಿಂಬ 34 ಶಿವಭಟ್ಟನನು ಗೆದ್ದು ಜಯಾಂಕ ರಸ ತೋರೆ ವಿಪ್ರ ಸುರರು ಪೂಜಿಸೆ | ನಲವಿಂದ ಅವನಿಯೊಳು ಪೊಳೆದೆ ರವಿಯಂತೆ 35 ವಿದ್ಯಾಧಿಪತಿ ಗುರುವೆ ವಿದ್ಯೆ ಪೇಳಿದ ದ್ವಿಜಗೆ ಸದ್ಭಕ್ತಿ ದಕ್ಷಿಣೆ ನೀನಿತ್ತೆ | ಕರುಣಾತ್ಮ ಉದ್ಧರಿಸು ಎನ್ನ ದ್ವಿಜರತ್ನ 36 ಜನನಿ ಜನಕರು ತಡಿಯೆ ಅನುವಾದ ಸುತನಿತ್ತು ಘನವಾದ ತುರ್ಯ ಆಶÀ್ರಮ | ಕೈಗೊಂಡು ಸುನವ ಪದ್ಧತಿಯ ತೋರಿದೆ 37 ಅಚ್ಯುತ ಪ್ರೇಕ್ಷಕರಿಗೆ ಹೆಚ್ಚಾದ ದಯದಿ ಹರಿ ನಿನ್ನ | ವೊಯ್ದಿತ್ತ ಅಚ್ಚುಮೆಚ್ಚುವ ನೀ ಹರಿಗೆಂದು 38 ವಾದಿಗಳ ಭಂಗಿಸಲು ಸಾದರದಿ ಯತಿ ಕರಿಯೆ ಛೇದಿಸಿ ಖಳರ ಮದವನ್ನು | ಹರಿಸಿದೆ ಸ್ವಾದ ಗುಣಸಿಂಧು ಮದ್ಬಂಧು 39 ಬಾಳೆಗೊನೆಗಳ ಮೆದ್ದು ಬಾಡಲೇತಕೆ ಉದರ ಪೇಳೆಂದ ಯತಿಗೆ ಜಠರಾಗ್ನಿ | ಬ್ರಹ್ಮಾಂಡ ಕೊಳ್ಳುವದುಯೆಂದು ವರದಯ್ಯ 40 ವಾದಗಳ ಪರಿಹರಿಸಿ ಬೋಧಿಸಲು ಆ ದ್ವಿಜರು ಪಾದಕ್ಕೆ ಎರಗಿ ನಮೋ ಎಂದು ಅಮರರಿಗೆ ಆ ಬೋಧವೊ ಮಹಿಮೆಯೆಂದಾರು 41 ಬದರಿಯಾತ್ರೆಯಲಿ ಸುರನದಿಯು ತಾ ಮಹಿಪಡೆದು ಮುದದಲ್ಲಿ ಬಂದು ನಮಿಸಲು | ಶಿಷ್ಯಜನ ಯೈದಿ ಭಕ್ತಿಯನು ನಮೋ ಎಂದು 42 ಹರಿಯಂತೆ ನರಿಗಳನು ತುರಕ ದೂತರ ಜರಿದು ನರಪನಿಂದರ್ಧ ಮಹಿಮೆಯನ್ನು | ಪಡೆದಂಥ ಯರಡೇಳು ಭುವನ ಅಧಿಪತಿ 43 ಸತ್ಯತೀರ್ಥರ ಬಳಿಗೆ ದೈತ್ಯ ವ್ಯಾಘ್ರನು ಬರಲು ಮೃತ್ಯುವಿನ ಪುರಕೆ ಕಳುಹಿದೆ | ಲೀಲೆಯಲಿ ಭೃತ್ಯತ್ವಯೆನಗೆ ನೀಡಯ್ಯ 44 ಸೂಸುವಾ ಭಕ್ತಿಯಲಿ ವ್ಯಾಸದೇವನ ಕಂಡು ಈಶ ಸಲಹೆಂದು ಎರಗಲು | ಮನವುಬ್ಬಿ ಬಾ ಸುತನೆ ಎಂದು ತಬ್ಬಿದ 45 ಆನಂದ ಮೂರ್ತಿಯ ಆನಂದ ಸಂಗವನು ಆನಂದದಿಂದ ನೀ ಯೈದಿ | ನಂದ ಆನಂದ ತೀರ್ಥ ಕೊಟ್ಟೆಯೊ 46 ನಾರಾಯಣನಲಿ ಕರೆದೊಯ್ಯೆ ಬದರಿಪನ ಚರಣಾಬ್ಜಕೆರಗಿ ಹರಿಲೀಲೆ | ಸ್ಮರಿಸಿದ ಗುರುರತ್ನ ಸಲಹೊ ಧನ್ಯಾತ್ಮ 47 ಅಚ್ಯುತನ ಸಂಗದಲಿ ಚಿತ್ಸುಖವ ಉಂಡುಬ್ಬಿ ಹೆಚ್ಚಿನ ಪದವಿ ಇಲ್ಲೆಂದು | ನಲಿದಂಥ ಅಚ್ಯುತಾತ್ಮಾನೆ ಸಲಹೆನ್ನ 48
--------------
ಜಯೇಶವಿಠಲ