ಒಟ್ಟು 1118 ಕಡೆಗಳಲ್ಲಿ , 92 ದಾಸರು , 925 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿಕ್ಕಿರೆನ್ನ ಕೈಗೀಗ ಇನ್ತಕ್ಕೊಳ್ಳಿ ಸೀರೆಯ ಬೇಗ | ಎಲೆ ಸಿಕ್ಕಿ ಪಬೀದಿಯೊಳಗೆ ನಿಮ್ಮ ಮೈಗೆ ಸರಿಸಿ ನಾ |ಹೋದರೆ ಮುಟ್ಟಿದನೆಂದು ||ಬೈದು ಯಶೋದೆಗೆ ಪೇಳಿ ಕೊಲ್ಲಿಸಿದ್ದ- |ಕ್ಕಾದುದು ನೋಡಿರಿ ಇಂದು1ಹುಡುಗರೊಡನೆ ನಾನಾಡುತ ಬಂದರೆ |ಬಡಿಯಲಿ ಹವಣಿಸಲಿಲ್ಲೇ ||ಕುಡಿಯಲು ಪಾಲ್ ಬಾಯ್ತೆರೆದು ಬೇಡಿದರೆ |ಕೊಡದಲೆ ನೂಕಿಸಲಿಲ್ಲೆ 2ಬಚ್ಚಲೊಳಗೆ ಮೈದೊಳೆವಲ್ಲಿಗೆ ಬಂದ |ನಚ್ಚುತನೆಂಬುವಿರಲ್ಲೇ ||ಬಚ್ಚದೆ ಬತ್ತಲೆ ಅಡವಿಯೊಳಿರುವದು |ಹೆಚ್ಚಿದು ಅಹ ಅಲ್ಲಲ್ಲೇ 3ಬೆಳ್ಳಕೆ ದಾರೋ ಕಾಣಿಸುತಿಹರು |ಇಲ್ಲಿಗೆ ಬಂದರೆ ಹೇಗೆ ||ಸುಳ್ಳಲ್ಲವೆ ನಿಮ್ಮಂಣರಾಣೆ |ಇನ್ನೆಲ್ಲಿಗೆ ಹೋಗುವಿರೀಗೆ 4ಒಂದೊಂದೇ ನಿಮ್ಮಾಟವು ಮನಸಿಗೆ |ತಂದರೆ ಕೋಪವು ಘನ್ನ ||ಇಂದಿರೇಶ ಪ್ರಾಣೇಶ ವಿಠಲ ಗತಿ- |ಯೆಂದಿರೆ ವಂದಿನಕನ್ನಾ5
--------------
ಪ್ರಾಣೇಶದಾಸರು
ಸುಳ್ಳು ಮಾತಿನ ನಿನ್ನಾಚಾರವು ತಿಳಿವಿಕೆ ಏನೇನಿಲ್ಲಎಲ್ಲ ಡಂಭವು ನಡತೆಯ ವಿವರವು ಗತಿಗೆನೀ ದೂರಾದೆಯಲ್ಲಪಮಂಡೆಯ ಬೋಳಿಸಿ ಕಣ್ಣನೆ ಮುಚ್ಚುವಿಪಿಟಿಪಿಟಿ ಏನದು ಮಂತ್ರದಂಡವೇತಕೆ ಮನಸದು ಚಂಚಲಏತಕೆ ಮಾಡುವಿ ತಂತ್ರ1ಕೈಯಣ ಗಿಂಡಿಯ ಕಂಕುಳ ಪೆಟ್ಟಿಗೆಕಟ್ಟಿಯಿಹುದು ತಲೆಗಟ್ಟುಬೈಗಳೆಂಬುವು ಪರಿಪರಿ ನೋಡಲುಕೋತಿ ಹಾರಿಕೆಯಳವಟ್ಟು2ಜ್ಞಾನವದಿಲ್ಲವು ಪುಸ್ತಕ ಮನೆಯೊಳುಹೋಳಿಗೆ ತುಪ್ಪದ ಗಬಕುಧ್ಯಾನವಿಲ್ಲವು ಮೌನವಿಲ್ಲವು ಯಮನಕೈಯಿಂದ ದುಬುಕು3ನಿರಿವಿಡಿದುಟ್ಟಿಹ ಪಂಚೆಕಚ್ಚೆಯಧೋತ್ರನಾಮ ವಿಭೂತಿಯ ಬೆಳಕುಪರಮಾನ್ನವ ಸಕ್ಕರೆಯನು ಕಲಸಿನುಂಗುವೆ ಗುಳುಕು ಗುಳುಕು4ಮುಂದೆ ಹೇಳುವನ ಮೆಟ್ಟಿಕೊಂಡುಂಬುದುಇಂತಿದು ನಿನ್ನಯ ಬದುಕುಸುಂದರ ಚಿದಾನಂದ ಸ್ವರೂಪವ ತಿಳಿವುದುಎಂದುಎಂದಿಗೆ ಬಲುಧಡಕ5
--------------
ಚಿದಾನಂದ ಅವಧೂತರು
ಸ್ಥಳವಲ್ಲದ ಸ್ಥಳದಲ್ಲಿ ಕಸ್ತೂರಿಯನಿಟ್ಟ ಬ್ರಹ್ಮಬಳಿಕ ಬೈದರೆ ವಿವೇಕವಹುದೇ ಎಲೆ ತಮ್ಮಪಶೀಲಮೃಗ ನಾಭಿಯಲಿ ಕಸ್ತೂರಿಯನಿಡುವುದುಖೂಳರ ಜಿಹ್ವೆಯಲಿ ಅದನಿಡಲು ನೀತಿಯಹುದುನಾಲಗೆಯ ಲೋಕೋಪಕಾರವಹುದುಮೇಲೆ ಕಸ್ತೂರಿಬಹುದು ಜಗಸಮ್ಮತವಹುದು1ಕಸ್ತೂರಿಗೋಸ್ಕರವೆ ಧರ್ಮ ಮೃಗವಾದುದನು ಬಿಡದೆಕೊಲ್ಲುವವನು ವ್ಯಾಧನೀಗಸಂಚಲ ಚಿತ್ತವುಳ್ಳವನು ವಿಧಿವರವರಿಯನುಅಸ್ತವ್ಯಸ್ತದಿ ಪಶುಗೆ ನೀರತಿದ್ದಿದನು2ಧರಿಸಿದನು ದೋಷವನು ತಾನೀಗ ಎರಡನ್ನಹಿರಿಯರನು ನಿಂದಿಪುದು ಮೃಗವ ಕೊಂದವನುಕರುಣೆ ಚಿದಾನಂದ ಸದ್ಗುರುವಿಗೆ ಮೆಚ್ಚಿಸು ಅದುಮರವಾದ ಮುಪ್ಪಿನಲಿ ವಿಧಾತ್ರನು3
--------------
ಚಿದಾನಂದ ಅವಧೂತರು
ಹಂಚಿನ ಇದಿರಲಿ ಹಲ್ಲನು ತೆಗೆಯಲುಮಿಂಚುವ ಕನ್ನಡಿಯಾದೀತೆ ? ಪ.ಮಿಂಚಿನ ಬೆಳಕಲಿ ದಾರಿಯ ನಡೆದರೆಮುಂಚುವ ಊರಿಗೆ ಮುಟ್ಟೀತೆ ? ಅಪಬಾಲರ ಭಾಷೆಯ ನಂಬಿ ನಡೆದರೆಶೀಲದ ಕೆಲಸಗಳಾದೀತೆ ?ಜೋಲುವ ಹೋತಿನ ಮೊಲೆಗಳ ಹಿಂಡಲುಹಾಲಿನ ಹನಿಯದು ಹೊರಟೀತೆ ?ಕಾಲುವೆ ಬಚ್ಚಲಕುಣಿ ನೀರಿಗೆ -ಘನಬಾಳೆಯ ತೋಟವು ಆದೀತೆ ?ಮೇಲುಬಣ್ಣಾದಾ ಆಲದ ಹಣ್ಣುನಾಲಿಗೆಸವಿಯನು ಕೊಟ್ಟೀತೆ ? 1ಭಾಷೆಯ ನುಡಿಗಳಿಗಾಸೆ ಮಾಡೆ ಮನದಾಸೆಯ ಕಾರ್ಯಗಳಾದೀತೆ ?ದೋಸೆಯ ಛಿದ್ರದಿ ಆರಿಸೆ ಕಾಳಿನರಾಶಿಯು ಹಸನವು ಆದೀತೆ ?ಕಾಸಿ ಕಬ್ಬಿಣವ ಗಟ್ಟಿ ಕೂಡಿಟ್ಟರೆಮಾಸದ ಮನೆ ಬದುಕಾದೀತೆ ?ಕಾಸಾರದೆದುರಿಗೆ ಹರಿಕಥೆ ಹೇಳ್ದರೆಸೋಸಿ ಕೇಳ್ದು ತಲೆದೂಗೀತೆ ? 2ಮಿಥ್ಯಾವಚನಿಯ ಮಾತನು ನಂಬಲುಹೊತ್ತಿಗೆ ಅದು ಬಂದೊದಗೀತೆ ?ಸತ್ತವನೆದುರಿಗೆ ಸುತ್ತಲು ಕುಳಿತುಅತ್ತರೆ ಆ ಹೆಣ ಕೇಳೀತೆ ?ನಿತ್ಯನಪುಂಸಕನೈದಲು ತರುಣಿಗೆಚಿತ್ತ ಸುಖವು ಸೂರಾದೀತೆ ?ಕುತ್ತಿಗೆಗೊಯ್ಕನ ಕಾಲು ಹಿಡಿದರೆಹತ್ಯದೊಳ್ಹೇಸಿಕೆಹುಟ್ಟೀತೆ ?3ಬೋರಗಲ್ಲಿನ ಮುಂದೆ ಬಡತನ ಹೇಳಲುಸಾರಸುಖಕ್ಕನುವಾದೀತೆ ?ಚೋರನು ಚಂದ್ರಗೆ ಕೈಮರೆ ಮಾಡಲುಚೌರ್ಯಕೆ ಕತ್ತಲು ಒದಗೀತೆ ?ನೀರಿಲ್ಲದ ಕೆರೆಯೊಳಗೆ ಮತ್ಸ್ಯದಾಹಾರಿಗೆ ಮೀನವು ದೊರಕೀತೆಕಾರಣವಿಲ್ಲದ ಲೌಕಿಕ ಕಥೆಯಿಂಘೋರನರಕ ಭಯ ತಪ್ಪೀತೆ ?4ಬೆಟ್ಟಕೆ ಕಲ್ಲನು ಹೊತ್ತೊಯ್ದೊಗೆಯಲುಹೊಟ್ಟೆಗೆಓದನ ಸಿಕ್ಕಿತೆ ?ಹುಟ್ಟು ಬಂಜೆಗೆ ಹಡೆಯುವ ವ್ಯಥೆ ಹೇಳಲುಹೊಟ್ಟೆಯಲಿ ಕಳವಳ ಹುಟ್ಟೀತೆ ?ಕೆಟ್ಟ ಬಯಸುವರಿಗೆ ಮೃಷ್ಟಾನ್ನವುಣಿಸಲುಕೆಟ್ಟ ಮಾತು ಅದು ಬಿಟ್ಟೀತೆ?ದಿಟ್ಟ ಪುರಂದರವಿಠಲರಾಯನಬಿಟ್ಟರೆ ಸದ್ಗತಿಯಾದೀತೆ? 5
--------------
ಪುರಂದರದಾಸರು
ಹರಿಯ ನಂಬದ ನರನು ಗೂಡರಿತು ಇರದ ವಾನರನು ಶ್ರೀಹರಿಯ ಹೊಗಳದ ಕವಿಯು ಭೂಸುರರುಣ್ಣಿಸದ ಹವಿಯು ಪ.ಕರುಣವಿಲ್ಲದ ಅರಸ ಕಾಳೋರಗನಾಡುವ ಸರಸಮಾನಕಿಲ್ಲದ ಮಂತ್ರಿ ತಾ ಗರಹೊಡಕ ಕುಮಂತ್ರಿ 1ಮೆಚ್ಚು ನುಂಗುವ ದೊರೆಯು ಮೀವ ಬಚ್ಚಲಿನ ದೊಡ್ಡಹರಿಯು ಕೈಮುಚ್ಚಿ ನೀಡದ ದಾನ ಹುಸಿರಚನೆ ನಿಧಾನ 2ಧರುಮಕೆ ಕೂಡದ ಸತಿಯು ಯಮಪುರದಾರಿ ಸಂಗತಿಯು ಬಲುಚರಿಗ ಮತ್ಸರಿತನಯಅವ ಅರಗದ ಅಗ್ಗಣಿಯ3ಮೂರ್ಖನ ಗೆಳೆತನ ಜರ್ಜರಿತ ತಂತುವಿತಾನ ಒಣಕರಕರಿ ಕಲಹದ ನೆರೆಯು ಸಾಸಿರ ತೇಳಗಗಚ್ಚಿದ ಸರಿಯು 4ವಂಚಿತವಾದಿ ಬಂಧು ಪ್ರಾಣ ಮುಂಚಿಸುವ ವಿಷಬಿಂದು ಬಹುಕಾಂಚನದಾಸೆ ಬಳಗ ಪ್ರಪಂಚದಳತೆಕೊಳಗ5ಕೊಡದಿಟ್ಟ ಕೊಡಹಣವು ಸುಡುವ ಅಡವಿಲಿ ಬಿದ್ದ ಹೆಣವು ಬಾಯಿಬಡಕನ ಒಡಂಬಡಿಕೆ ಛಿದ್ರಿಡಿದ ಮಣ್ಣಿನ ಮಡಿಕೆ 6ಬ್ರಾಹ್ಮರಿಗುಣಿಸದಸದನದುರ್ಬೊಮ್ಮ ರಕ್ಕಸನ್ವದನಮದ್ಹಮ್ಮಿನಣ್ಣಗಳ ವಿದ್ಯಾ ಮಾಯಮ್ಮನ ಮಹನೈವೇದ್ಯ 7ಓದಿ ಮಲತ ಗುರುಶಿಷ್ಯ ಸದ್ಭೋಧಾಮೃತಪರಿಹೇಯ ಆಪ್ತಾಧಾರಿಲ್ಲದ ಅರಸೆ ಗ್ರಾಮಾದರಿಸುವ ಆಳರಸೆ 8ವೇತ್ತøವಿವರ್ಜಿತ ಸಭೆಯು ಲೋಕತ್ರಯದಲ್ಲಿ ಅಶುಭವು ಕಂಠತ್ರಾಣಿಲ್ಲದ ಗಾನ ಮುದಿ ಎತ್ತೆಳೆದಾಡುವಗಾಣ9ಹುಸಿನುಡಿವ ದೈವಜÕ ತಾ ಹಡದ ಮಗನಿಂದ ಅವಜÕ ದುರ್ವಸುಕಾಂಕ್ಷೆಯ ಭೇಷಜನು ಮಾನಿಸರ ಉಂಬ ಮಾಯಿ ದನುಜನು10ಶ್ರವಣ ಮನನ ಧ್ಯಾನವನು ಬಿಟ್ಟವನೆ ಜೀವಚ್ಛವನುಮಾಧವಪ್ರಸನ್ವೆಂಕಟಮೂರ್ತಿತನ್ನವರಿಗೆ ಕೊಡುವನುಅರ್ಥಿ11
--------------
ಪ್ರಸನ್ನವೆಂಕಟದಾಸರು
ಹುಚ್ಚು ಮಾಡಿದ ಎನ್ನ ಗುರುವುಈ ಹುಚ್ಚನರಿವೊಡೆ ಸಚ್ಚರಿತರಿಗರಿವುಪಆಶ್ರಮ ಧರ್ಮವು ಹೋಯ್ತುನಿರಾಶ್ರಮವೆಂಬುದು ನಿಜವಾಯ್ತುಕುಶ್ರಮಗಳು ನಾಶವಾಯ್ತುಜೀವಭ್ರಮೆಯೆಂಬುದು ಖಿಲವಾಯ್ತು1ಸ್ನಾನವು ಮನದಿಚ್ಛೆಯಾಯ್ತು ಸಂಧ್ಯಾದಿಜಪವೆಲ್ಲ ಮರತೇಹೋಯ್ತುಮೌನವೆಂಬುದು ಬಹಳವಾಯ್ತು ಗುರುತಾನೆಎಂದೆಂಬ ಧ್ಯಾನವುಪೂರ್ಣವಾಯ್ತು2ಕುಲಗಳೆಂಬುವು ಕಾಣದಾಯ್ತುಕುಲಛಲಗಳು ಮರತೇಹೋಯ್ತುಹೊಲೆ ಶುದ್ಧಗಳು ಬರಡುನುಡಿಯಾಯ್ತುನಿಶ್ಚಲನಿಜಾನಂದವೆಂಬುದೇ ಸತ್ಯವಾಯ್ತು3ಭೇದಾಭೇದವು ಮಾಯವಾಯ್ತುಹಾಳುವಾದಗಳು ಕೇಳದಂತಾಯ್ತುಸಾಧುಸಂಗವ ಬಿಡದಂತಾಯ್ತುಸುವಾದವಮಾಡಿ ಸುಖಿಸುವಂತಾಯ್ತು4ದಯೆ ನಿರ್ದಯೆಗಳ ತೊರೆದಾಯ್ತುಭಯ ನಿರ್ಭಯಗಳು ಅದೃಶ್ಯವಾಯ್ತುಜಯಾಪಜಯಗಳು ಕಾಣದಾಯ್ತು ಸ್ವಕ್ಷೇಮಪರಕ್ಷೇಮಗಳ ವಿಚಾರ ಹೋಯ್ತು5ಕೋಪ ತಾಪವು ಶಮವಾಯ್ತುತಾಪತ್ರಯದಬಿತ್ತು ಮೊಳೆಯದಾಯ್ತುಯೋಗ ವಿದ್ಯೆಯ ಹರಿತವಾಯ್ತುನಿರ್ವಾಣವಾಗಿ ಎಲ್ಲ ಇಂತಾಯ್ತು6ಇಂತಹ ಹುಚ್ಚನು ಎನಗೆ ಕವಿಯಿಸಿನಿರಂತರ ಚಿಂತೆಯ ನೆನ್ನ ಪಾಲಿಗಿರಿಸಿಅಂತರಂಗದಿ ತಾನೆ ನೆಲೆಸಿ ಚಿಂತಾಯಕಚಿದಾನಂದ ತಾ ಬೆರೆಸಿ7
--------------
ಚಿದಾನಂದ ಅವಧೂತರು
ಹುಚ್ಚು ಹತ್ತಿತು ಹುಚ್ಚು ಹುಚ್ಚು ಜ್ಞಾನದ ಹುಚ್ಚುಹುಚ್ಚು ತಿಳಿವುದಲ್ಲ ಹುಚ್ಚನ ಗುರುವೇ ಬಲ್ಲಪನಿರ್ಮಳಾಂಗದ ಹುಚ್ಚುನಿಗಮಶಿರದ ಹುಚ್ಚುಕರ್ಮರಹಿತನ ಹುಚ್ಚುಕಮನೀಯಹುಚ್ಚು1ಸಜ್ಜನ ಸಂಗದ ಹುಚ್ಚು ಸಂತೋಷಪೂರಿತ ಹುಚ್ಚುವೆಚ್ಚವಿಲ್ಲದ ಹುಚ್ಚು ಎಣಿಸಬಾರದು ಹುಚ್ಚು2ಬ್ರಹ್ಮಾನಂದದ ಹುಚ್ಚು ಭೇದರಹಿತದ ಹುಚ್ಚುಹಮ್ಮನಳಿದ ಹುಚ್ಚು ಪರಿಪೂರ್ಣ ಹುಚ್ಚು3ಮತವ ಕಡಿದಾ ಹುಚ್ಚು ಮಹತ್ತೆನಿಪಾ ಹುಚ್ಚುಸತತ ಶಾಂತಹ ಹುಚ್ಚು ಸಹಜಾನಂದದ ಹುಚ್ಚು4ಲೋಕ ಸಾಕ್ಷಿಕ ಹುಚ್ಚು ಲೋಕವುತಾನಾದ ಹುಚ್ಚುಏಕವೆಂಬ ಹುಚ್ಚು ಯಮನ ಗೆಲಿದಾ ಹುಚ್ಚು5ಆರರ ಮೇಲಣ ಹುಚ್ಚು ಅನ್ಯಮನಸ್ಕದ ಹುಚ್ಚುಚಾರುತಾಮಸಹುಚ್ಚು ಚಲನೆಯಿಲ್ಲದ ಹುಚ್ಚು6ಗುರುಭಕ್ತಿಯ ಹುಚ್ಚು ಗುರೂಪದೇಶದ ಹುಚ್ಚುಸ್ಮರಣೆ ಬಲಿದ ಹುಚ್ಚು ಸಮನಿಸಿದ ಹುಚ್ಚು7ಜ್ಯೋತಿರ್ಮಯದ ಹುಚ್ಚು ಜಾತಿ ನಿರ್ಮೂಲದ ಹುಚ್ಚುಖ್ಯಾತಿಯಾಗಿಹ ಹುಚ್ಚು ಭೇದರಹಿತದ ಹುಚ್ಚು8ಚಿನ್ಮಯ ಚಿದ್ರೂಪದ ಹುಚ್ಚು ಚಿದಾನಂದನ ಹುಚ್ಚುತನ್ಮಯವಾಗಿದೆ ಹುಚ್ಚು ತಿಳಿಯಲರಿಯುವುದು ಹುಚ್ಚು9
--------------
ಚಿದಾನಂದ ಅವಧೂತರು
ಹೆಜ್ಜೆಗಳಿವೆ ನೋಡಿರಿ ರಂಗಯ್ಯನಹೆಜ್ಜೆಗಳಿವೆ ನೋಡಿರಿ ಪಹೆಜ್ಜೆಗಳಿವೆ ನೋಡಿರಿ ಮೂರ್ಜಗದÉೂಡೆಯನಅಬ್ಜಭವಾದ್ಯರ ಹೃದ್ಗøಹವಾಸನ ಅ.ಪಮಧುರಾಪುರದಿ ಜನಿಸಿದನ ಬೇಗಮಾವ ಕಂಸನ ಛೇದಿಸಿದನಚದುರೇರಿಗೊಲಿದ ಶ್ರೀಶನ ದಿವ್ಯಮದನಮೋಹನ ಕೃಷ್ಣವಿಧಿಭವಾರಾಧ್ಯನ1ಗೋಕುಲವಾಸನೆಂದೆನಿಪ ದಿವ್ಯನಾಕೇಶವಂದ್ಯ ಸರ್ವೇಶನಭೀಕರ ದೈತ್ಯರ ಸದೆದನ ಸವ್ಯ-ಸಾಚಿಯ ರಥದೊಳು ಏಕಾಂತ ನುಡಿದನ 2ವೇದ ಚೋರನ ಭೇದಿಸಿದನ ಗಿರಿಭಾರಬೆನ್ನಿಲಿ ಪೊತ್ತು ನಿಂತನಆದಿ ದೈತ್ಯನ ಸೀಳಿ ಭೂಮಿಯ ತಂದುಕ್ರೂರ ದೈತ್ಯನ ಕರುಳ್ಹಾರ ಮಾಡಿದ ಹರಿಯ 3ಬಲಿಯ ದಾನವ ಬೇಡಿದನ ಬಲುಛಲದಿ ಕ್ಷತ್ರಿಯರ ಸೋಲಿಸಿದನಲಲನೆಯ ತಂದ ಶ್ರೀವರನಗೊಲ್ಲರ ಕುಲದಲ್ಲಿ ಬೆಳೆದ ಶ್ರೀಚಲುವ ಗೋಪಾಲನ 4ದುಷ್ಟಕಾಳಿಂಗನ ಮದವನಳಿದುಮೆಟ್ಟಿನಾಟ್ಯದಿ ಸಿರದಿ ತುಳಿದನಪುಟ್ಟಪಾದದ ದಿವ್ಯ ಚಲುವನ ಗೋವ್ಗ-ಳಟ್ಟಿ ಹೋಗುವ ನಮ್ಮ ಪುಟ್ಟ ಗೋಪಾಲನ 5ಶಂಖು ಚಕ್ರವು ಗದ ಪದ್ಮವು ಹೊಳೆವÀಕಿಂಕಿಣಿಪೈಜನಿನಾದವುಬಿಂಕದಿ ಊದುವ ಕೊಳಲಗಾನವು ನಿ-ಶ್ಶಂಕೆಯಿಂದಲಿ ಭಕ್ತವೃಂದವ ಪೊರೆದನ 6ಥಳಥಳಿಸುವ ದಿವ್ಯ ತಿಲಕವು ಹೊಳೆಯೆಬರಿಮೈಯ್ಯ ತೋರುತ ನಿಂತನಕುದುರೆಯನೇರುತ್ತ ಬರುವನಸಿರಿಕಮಲನಾಭ ವಿಠ್ಠಲ ಭಕ್ತಪೋಷನ7
--------------
ನಿಡಗುರುಕಿ ಜೀವೂಬಾಯಿ
ಹೇಗೆ ಮಾಡಲಿ ಮಗುವಿಗೇನಾಯಿತೊ - ಇದರ - |ಆಗಮವ ಬಲ್ಲವರು ತಿಳಿದೆಲ್ಲ ಪೇಳಿ ಪ.ತೂಗಿ ಮಲಗಿಸೆ ಕಣ್ಣ ಮುಚ್ಚಲೊಲ್ಲನು, ಬೆನ್ನ - |ಮೇಗೆ ಬುಗುಟಿಯು, ಎದೆಯು ಕಲ್ಲಾಗಿದೆ |ರೋಗವನೆ ಕಾಣೆ ದಾಡೆಯಲಿ ನೀರಿಳಿಯುತಿದೆ |ಕೂಗುವ ಧ್ವನಿಯೊಮ್ಮೆ ಕುಂದಲಿಲ್ಲ 1ಖಂಡಸಕ್ಕರೆ ಹಣ್ಣ ಕೊಟ್ಟರೊಲ್ಲದೆ ಮಣ್ಣ |ಹೆಂಡೆಯನು ಬೇಡಿ ತಾ ಪಿಡಿವ ಕೊಡಲಿ ||ಮಂಡೆ ಜಡೆಗಟ್ಟಿಹುದು ಮಾಡಲಿನ್ನೇನಿದಕೆ |ಹಿಂಡುಸತಿಯರ ದೃಷ್ಟಿ ಘುನವಾಯಿತೇನೊ2ಮೊಲೆಯನುಂಬಾಗ ಮೈಯಂಬರವನೊದೆಯುತಿದೆ |ಕಲಕಿತದಲಿ ಎನ್ನ ಕೊಲುವುದೇಕೋ ||ತಿಳಿದಿದರ ನೆಲೆಯನರಿತವರನೊಬ್ಬರ ಕಾಣೆ |ಚೆಲುವಸಿರಿಪುರಂದರವಿಠಲ ತಾ ಬಲ್ಲ3
--------------
ಪುರಂದರದಾಸರು
ಹ್ಯಾಂಗೆ ಶೋಭಿಸುವ ನೋಡೆ ಯಾದವ ಕೃಷ್ಣಹ್ಯಾಂಗೆ ಶೋಭಿಸುವ ನೋಡೆ ಪಮಂಗಳ ಮಹಿಮ ಶ್ರೀರಂಗ ತನ್ನವರಿಗೆ ಅ.ಪಘಲುಘಲು ಘಲುರೆನ್ನುತ ಕಾಲ್ಗಡಗ ನೂ-ಪುರಗೆಜ್ಜೆ ಸರಪಣಿಯುಸರಿಗೆಳೆಯರ ಕೂಡಿ ಮುರಳಿಯ ಧರಿಸುತಹರುಷದಿಂದಲಿ ಸಪ್ತಸ್ವರಗಳ ನುಡಿಸುತ್ತ 1ಉಟ್ಟ ಪೀತಾಂಬರವು ನಡುವಿಗೆ ಜರದಪಟ್ಟೆಯ ಚಲ್ಲಣವುಗಟ್ಟಿ ಕಂಕಣ ಕೈಗಳಿಟ್ಟು ಕಟಿಯ ಮೇಲೆಭಕ್ತವತ್ಸಲ ಸ್ವಾಮಿ ಸೃಷ್ಟಿಪಾಲಕ ಕೃಷ್ಣ 2ಎಳೆ ತುಳಸಿಯ ಮಾಲೆಯು ಕಂಠದಿ ಮೆರೆವಪದಕಕೌಸ್ತುಭಮಣಿಯುನಳಿನಲೋಚನೆಯ ಉರದಲ್ಲಿ ಧರಿಸಿಕೊಂಡುಚಲುವ ಚನ್ನಿಗನಾಗಿ ಹೊಳೆಯುವ ದೇವನು 3ಕೋಟಿ ಸೂರ್ಯರ ಸೋಲಿಪ ಮುಖಕಾಂತಿಯಸಾಟಿಯಾರುಂಟವಗೆನೀಟಾಗಿ ಕರ್ನಕುಂಡಲ ಕಿರೀಟವು ಹೊಳೆಯೆಲಲಾಟದಿ ಕಸ್ತೂರಿ ತಿಲುಕವು ಹೊಳೆಯುತ್ತ 4ಕಂಗಳ ಕುಡಿನೋಟದಿ ಸಜ್ಜನರ ಪಾ-ಪಂಗಳ ಪರಿಹರಿಸಿಮಂಗಳ ಮಹಿಮ ಶ್ರೀರಂಗ ಮೂರುತಿ ಸಾಧುಸಂಗ ವಂದಿತಸಿರಿಕಮಲನಾಭ ವಿಠ್ಠಲ5
--------------
ನಿಡಗುರುಕಿ ಜೀವೂಬಾಯಿ