ಒಟ್ಟು 3620 ಕಡೆಗಳಲ್ಲಿ , 126 ದಾಸರು , 2543 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಲ್ಲೆಯರು ನಮೋ ಎಂಬೆವು ಸುರರಎಲ್ಲರ ಬಲಗೊಂಬೆವು ಪ. ಚಲ್ವೆ ಕಂಗಳೆಯರಿಗೆ ಹೊಲ್ಲವು ಎನುತಿರೆಹೊಲ್ಲ ತನವೆಲ್ಲ ಹೊರಗ್ಹಾಕಿ ಬಾಹೊಅ.ಪ. ಅಗಣಿತ ಮಹಿಮ ಹೌದೆಂದುಅಗಣಿತ ಮಹಿಮಎನುತಿರೆಮಗನ ಮುಂದಾಗಿ ಬಲಗೊಂಬೆ1 ಸಾಗರಶಯನಗೆ ಆಗುವ ಹಾಸಿಗೆ ಬ್ಯಾಗನೆ ವರವ ಕೊಡುವೋನುಬ್ಯಾಗನೆ ವರವ ಕೊಡುವ ನಾಗೇಂದ್ರನಮೋ ಎಂಬÉ ನಮ್ಮ ಗೆಲಿಸೆಂದು 2 ನಂದಿವಾಹನ ಶಿವನ ಮುಂದಾಗಿ ಬಲಗೊಂಬೆ ಇಂದಿಗೆ ಪಂಥಗೆಲಿಸೆಂದುಇಂದಿಗೆ ಪಂಥಗೆಲಿಸೆಂದು ಬ್ರಹ್ಮನ ಕಂದನ ಮೊದಲೆ ಬಲಗೊಂಬೆ 3 ಸೌಪರ್ಣವಾರುಣಿ ಅಪರ್ಣ ದೇವಿಯರು ಸೌಕರ್ಯದಿಂದ ನಮ್ಮ ಪಂಥಸೌಕರ್ಯದಿಂದ ನಮ್ಮ ಪಂಥಗೆಲಿಸೆಂದುಕರವ ಮುಗಿವೆವು ಕ್ಷಣಕ್ಕೊಮ್ಮೆ 4 ಇಂದು ರಾಮೇಶನನುಗಾಲ ನೆನೆಯುತ ಮುಂದಕ್ಕೆ ಹೆಜ್ಜೆನಿಡುವೋಣ5
--------------
ಗಲಗಲಿಅವ್ವನವರು
ನವನೀತ ಚೋರ ಎಲ್ಲರ ಭುಲ್ಲೈಸಿದಿ ನಂದಕುಮಾರ ಧ್ರುವ ಪರಿಪರಿ ಅಡಿಸಿದಿ ನೀ ಪರನಾರಿಜಾರ ಮರುಳು ಮಾಡಿದಿ ನಮ್ಮ ಗೊಲ್ಲತೇರ ಕರಗೂಡುತಲಿ ತಿಂದ್ಯೋ ನೀ ಪಾಲ್ಮೊಸರ ಆರಿಗೆ ಹೇಳಬೇಕು ನಿನ್ನ ದೂರ 1 ಮಾಡದ ಮಾಡಿದಿ ನೀ ಮನಬಂದ್ಹಾಂಗೆ ಪಡೆದು ಲೋಕದಲುಸುರಗುಡದ್ಹಾಂಗೆ ಹಿಡಿದೇನಂದರ ನೀ ಕೈಗೂಡಿ ಬ್ಯಾಗೆ ತುಡುಗತನ ಮಾಡಿದಿ ನಿನಗಕ್ಕು ಹಾಂಗೆ 2 ಬಿಡಲರಿ ಯೆವು ನಿನ್ನ ತಿಳಿಕೊ ವಿಚಾರ ಮಾಡಲಿಕ್ಕಾಗದು ಇದಕೆ ತಾ ಪರಿಹಾರ ಹಿಡಿದೇವು ನಿನ್ನಾಟ ಕಂಡು ಕಣ್ಣಾರ ಮೂಢ ಮಹಿಪತಿಗಾಯಿತು ತಾ ಮನೋಹರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನವವಿಧ ಭಕ್ತಿ ಶ್ರವಣ ಪಾವನವಾದ ಹರಿಕಥೆ ಪುರಾಣ ಮೊದ ಲಾದುದನು ಕೇಳುತ್ತಿ ಪರಮಾತ್ಮನನ್ನು ಹೃದಯ ಪೀಠದಲಿರಿಸಿ ಪೂಜಿಸುವ ಭಕ್ತನೇ ಶ್ರವಣ ಫಲ ಹೊಂದಿದವ ಶ್ರವಣಭಕ್ತಿಯಿದು 64 ದಾಸಕೂಟದ ಭಕ್ತರಿಂ ರಚಿತವಾದ ಸು ಶ್ರಾವ್ಯ ಹಾಡುಗಳನ್ನು ಪಾಡಿ ಕುಣಿಯುತ್ತ ದೇವರನು ನೆನೆನೆನೆದು ಧ್ಯಾನಿಸುವ ಭಕ್ತರೇ ಕೀರ್ತನದ ಭಕ್ತರೆಂದರಿ ಮನುಜ ನೀನು 65 ವ್ಯಾಸ ದಾಸರ ಕೂಟದಿಂದರಿತ ದೇವರನು ಮಾನಸದ ಮಂಟಪದಲ್ಲಿರಿಸಿ ಪೂಜಿಸುತ ಅದನೆ ಪೌನಃಪುನ್ಯದಿಂದ ಮೆಲುಕಾಡುವದು ಸ್ಮರಣಭಕ್ತಿಯಿದೆಂದು ತಿಳಿ ಮನುಜ ನೀನು 66 ಅವತಾರ ರೂಪಗಳ ಮೂರ್ತಿಗಳ ರಚಿಸುತಲಿ ನಿನ್ನ ಚಿತ್ತದ ದೇವರನ್ನಲ್ಲಿಯಿರಿಸಿ ಅವನ ಗುಣಗಳ ನೆನೆದು ಪಾದಸೇವೆಯ ಮಾಡೆ ಪಾದಸೇವನಭಕ್ತಿಯೆಂದು ತಿಳಿ ಮನುಜ 67 ಹೂ ತುಳಸಿ ಮೊದಲಾದ ವಸ್ತುಗಳ ಶೇಖರಿಸಿ ದೇವ ಮೂರ್ತಿಗಳನ್ನು ಇದಿರಲ್ಲಿಯಿರಿಸಿ ಷೋಡಶದ ಉಪಚಾರ ಪೂಜೆಗಳ ನಿತ್ಯದಲಿ ಮಾಡುವುದೆ ಅರ್ಚನದ ಭಕ್ತಿಯಿದು ತಿಳಿಯೈ 68 ಎದೆ ಶಿರಸು ಕಣ್ಣು ಮನ ಕೈಕಾಲು ಮೊಣಕಾಲು ವಾಗೆಂಬುದೆಂಟಂಗಗಳನು ಪಾದದೆಡೆಯೀಡಾಡಿ ನಮಿಸುವುದೇ ವಂದನವು ಸಾಷ್ಟಾಂಗನಮನವಿದು ತಿಳಿಯೈ 69 ದಾಸೋಹವೆಂಬುದನು ತಿಳಿದು ನೀನನವರತ ಫಲದ ಬಯಕೆಯ ತೊರೆದು ಸೇವೆಯನು ಮಾಡೆ ಸೇವಕನ ನಿನ್ನನ್ನು ತನ್ನ ಬಳಿಗೊಯ್ಯುವನು ಭವಬಂಧ ತೊರೆಯಿಸುತ ಪಾಲಿಸುವನವನು 70 ಸಚ್ಚಿದಾನಂದ ಸ್ವರೂಪದವ ಪರಮಾತ್ಮ ತನ್ನ ಗುಣಗಳನ್ನೆಲ್ಲ ಭಕ್ತರಿಗೆ ಕೊಡುವ ನೀರು ಹಾಲನು ನಂಬಿದಂತೆ ನಂಬುವನನ್ನು ಭಕ್ತರಕ್ಷಕನವನು ಮುಕ್ತಿದಾಯಕನು 71 ಕೃಷ್ಣನು ಪರಬ್ರಹ್ಮ ಕೃಷ್ಣನನು ವಂದಿಸುವೆ ಕೃಷ್ಣನಿಂದಲೆ ಸಕಲ ವಿಶ್ವಗಳ ಸೃಷ್ಟಿ ಸುಕೃತ ದುಷ್ಕøತವೆಲ್ಲ ಕೃಷ್ಣನಡಿಯಲಿ ಮುಡಿಯು ಕೃಷ್ಣನಲಿ ಮನವು 72 ಕಾಮಹತಕನು ರುದ್ರದೇವನಿಲ್ಲಿಯೆ ಇದ್ದು ಅಷ್ಟಯತಿಗಳ ಶುದ್ಧಮಾನಸರ ಮಾಡಿ ಬಾಲಯತಿಗಳ ಮೂಲಕವೆ ಪೂಜೆಯನು ಪಡೆದು ರಾರಾಜಿಸುವೆ ದೇವ ಕೃಷ್ಣರೂಪದಲಿ 73 ಭಾರ್ಗವೀಪತಿಯಾದ ಸಿರಿವರನು ಮಾಧವನು ಭಾರ್ಗವೀರೂಪವನು ಶುಕ್ರವಾರದಲಿ ತಾಳ್ದು ಭಕುತರ ಹೃದಯವನ್ನರಳಿಸುವೆ ನೀನು ಮೋಹಿನೀರೂಪವದು ಮೋಹಕವದಲ್ತೆ 74 ಬಲ್ಲಾಳ ವಂಶಜರು ಉಡುಪ ಕುಲದವರೆಂದು ಭಕುತ ಗುರುವಾದಿರಾಜರ ಹಸ್ತದಿಂದ ಮೂರು ಅವತಾರ ಚಿಹ್ನೆಯ ತಾಳ್ದ ಮಾರುತಿಯ ಆರಾಧ್ಯ ಭೂವರಾಹರ ಕೊಡಿಸಿ ಪೊರೆದೆ 75 ದುಷ್ಟ ಜನಮರ್ದನ ಜನಾರ್ದನನು ನೀನಿರುವೆ ನಿನ್ನ ರೂಪವೆ ಪಕ್ಷನಾಥ ಸೇವಿತವು ಚಕ್ರ ಶಂಖಾಸಿ ಪಾನದ ಪಾತ್ರೆಗಳ ಧರಿಸಿ ದುಷ್ಟ ಶಿಕ್ಷಣಕಾಗಿ ಕಾಳಿ ಸೇವಿಪಳು 76 ಜಮದಗ್ನಿಪುತ್ರನಾಗವತರಿಸಿ ನೀನೊಮ್ಮೆ ಕೊಡಲಿಯಿಂ ಕಡಿಕಡಿದು ದುಷ್ಟರಾಜರನು ನಕ್ಷತ್ರ ಮಂಡಲವ ಭೂ ಮಂಡಲವ ಮಾಡಿ ಪರಶುರಾಮನು ಎಂಬ ಪೆಸರನ್ನು ಪಡೆದೆ 77 ಪರಶುರಾಮನು ರಾಮ ಪರಶುರಾಮನು ಕೃಷ್ಣ ಒಬ್ಬನೇ ಹಲವಾರು ರೂಪಗಳ ತಾಳಿ ಸಾಸಿರದ ನಾಮದಿಂ ಸ್ತುತಿಸಿಕೊಳ್ಳುವೆ ಹರಿಯೆ ನಿನ್ನ ಮಾಯಾರೂಪ ತಿಳಿದವರು ಯಾರು? 78 ಮೇಘದೆಡೆಯಿರುವ ಮಿಂಚಿನ ಹಾಗೆ ನೀನೆಂದು ತಿಳಿಸಲ್ಕೆ ನೀನು ಮೇಘದ ವರ್ಣದವನು ನೀಲತೋಯದ ಮಧ್ಯದಲ್ಲಿರುವ ವಿದ್ಯುತ್ತಿನಂತಿರುವಿ ಯೆಂದು ಶ್ರುತಿ ಹೇಳುವುದು ತಿಳಿಯೈ79 ಪುರುಷೋತ್ತಮನೆ ನಿನ್ನ ಪುರವೆಯೆನ್ನಯ ದೇಹ ಉತ್ತಮನು ನೀನಿರುವೆ ಅಧಮ ನಾನಿರುವೆ ಅಜ್ಞಾನದಾಚ್ಛಾದಿಕೆಯನೆನಗೆ ಹಾಕುತಲಿ ಬಿಂಬರೂಪದಲಿದ್ದು ಬೆಳಗಿಸುವೆ ನನ್ನ 80 ಶ್ರವಣಮನನಾದಿ ಸಾಧನದ ಬಲದಿಂದ ನಾ ನನ್ನ ಮುಸುಕನು ತೆಗೆದರೂ ನೀನು ಎನ್ನ ಬಳಿಯಲ್ಲಿದ್ದು ಕಾಣದಿಹೆ ಪರಮಾತ್ಮ ನಿನ್ನ ಪರಮಾಚ್ಛಾದಿಕೆಯ ತೆಗೆದು ತೋರು 81 ಗೋವರ್ಧನೋದ್ಧಾರಿ ಸಿರಿವರನೆ ನೀನೊಮ್ಮೆ ನಾಭಿರಾಜನ ಪುತ್ರನಾಗಿಯವತರಿಸಿ ಅಜನಾಭವೆಂಬ ಮೋಡವನು ಸೃಷ್ಟಿಸಿ ನೀನು ಲೋಕದ ಕ್ಷಾಮವನು ಹೋಗಲಾಡಿಸಿದೆ 82 ನೀನೊಮ್ಮೆ ದಕ್ಷಿಣದ ಕರ್ಣಾಟಕಕೆ ಬಂದು ಅಜಗರದ ವೃತ್ತಿಯಲಿ ದೇಹವನು ತೊರೆದು ನಿರ್ವಾಣ ಬೌದ್ಧಮತ ಜೈನಾದಿ ಮತಗಳಿಗೆ ಮೂಲಪುರುಷನದಾಗಿ ಮೆರೆದೆ ಪರಮಾತ್ಮ 83 ಸತ್ವ ರಜ ತಮವೆಂಬ ಮೂರು ಗುಣ ಪ್ರಕೃತಿಯದು ಪ್ರಾಕೃತದ ದೇಹವನು ಹೊಂದಿದಾ ಜನರು ಹುಟ್ಟುಗುಣ ಮೂರರಿಂ ಕರ್ಮವನು ಮಾಡುತ್ತ ಸುಖ ದುಃಖವನು ಹೊಂದಿ ಜೀವಿಸುವರವರು 84 ಸತ್ಯಾತ್ಮಕನು ನೀನು ಚ್ಯುತಿಯಿಲ್ಲ ಸತ್ಯಕ್ಕೆ ಅಚ್ಯುತನ ನಾಮದಿಂ ಪಾಪ ಪರಿಹರಿಪೆ ಅಂತವಿಲ್ಲದುದಾತ್ಮ ಆತ್ಮರಕ್ಷಕನಾಗಿ ನಾಮದಲನಂತನೆನಿಸಿರುವೆ ಶ್ರೀಹರಿಯೇ 85 ವೇದರಕ್ಷಕನಾಗಿ ಗೋವುಗಳ ರಕ್ಷಿಸುತ ಗೋವಿಂದನಾಮವನು ಧರಿಸುತಲಿ ನೀನು ನಾಮತ್ರಯಗಳಿವನು ಕರ್ಮಾಂತದಲಿ ಪಠಿಸೆ ಕರ್ಮದೋಷದ ಪಾಪ ಪರಿಹಾರವಹುದು 86 ಸಚ್ಚಿದಾನಂದಸ್ವರೂಪ ಹರಿ ನೀನಿರುವೆ ನಿನ್ನ ರೂಪಗಳೆಲ್ಲ ಪೂರ್ಣವಾಗಿಹವು ಜ್ಞಾನವಾನೆಂದವನು ಹೆರವರ್ಗೆ ತಿಳಿಸುತಿರೆ ನಮ್ಮಲ್ಲಿ ಹೆಚ್ಚುವವು ಅದರಿಂದ ಪೂರ್ಣ 87 ಹರದಾರಿ ಸಾವಿರಾರಿದ್ದರೂ ನಾದವನು ಚಣದೊಳಗೆಯಾಕಾಶವಾಣಿ ಕೇಳಿಸುವದು ಕಾಣದಿಹ ವಿದ್ಯುತ್ತುರೂಪವನು ತಾಳಿದವ ದೇವನಲ್ಲದೆ ಬೇರೆ ಯಾರ ಮಾಯೆಯಿದು 88
--------------
ನಿಡಂಬೂರು ರಾಮದಾಸ
ನಾ ಕರೆವುದಕಿಂತತಾನಾಗಿ ಕರೆವಳ ಕಂಡರೆ ಸೊಗಸುನಾನೆ ನೀನುನೀನೇ ನಾನುಏನನುಮಾನವೋ ಬಾರೆಂದೆನುತಲಿ ಪ ಕಣ್ಣ ಸನ್ನೆಯ ಮಾಡಿ ಕರೆವುತಬಣ್ಣಿಸಿ ಬೇಟವ ತೋರುತ್ತನಿನ್ನನಾ ಬಿಡೆನೆಂದು ನಗುತ ಮಾತಾಡುತ 1 ನೆಂಟರಿಷ್ಟರು ಕಾಣದಂದದಿ ಬಂದುಗಂಟೆರಡನು ಸಡಲಿಸುತಲಿ ನಿಂದುಬಂಟನಾದರೆ ನೀನೆರೆಬಾರೆಂದು 2 ಕುಂಭ ಕುಚಂಗಳ ತೋರುತ್ತತಾಂಬೂಲವ ಹಸಮಾಡುತ್ತನಂಬುಗೆ ರಾಮೇಶ್ವರನಿದಕೆನುತ 3
--------------
ಕೆಳದಿ ವೆಂಕಣ್ಣ ಕವಿ
ನಾ ಧನ್ಯ ನಾ ಧನ್ಯ ನಾ ಧನ್ಯನಿಂದು ಪ ಹೇ ದಯಾನಿಧೇ ನಿನ್ನ ಪಾದಾನುಗ್ರಹದಿಂದ ಅ.ಪ. ಏತರವ ನಾನೆಂದುದಾಸೀನ ಮಾಡದೆಲೆ ಲೇಸು ಮಮತೆಯ ಕೋರಿ ಈ ಸ್ಥಳಕೆ ಬಂದಿ ಆಸುರೀ ಭಾವವನು ನಾಶಗೊಳಿಸಿ ಎನ್ನ ನೀ ಸಲಹಿದೆಯೋ ಜಗದೀಶ ನಿರುಪಮ ಕರುಣಿ 1 ಸತ್ವಗುಣ ಪ್ರಚುರರಲಿ ನೀ ತೋರುವುದಕ್ಕಿಂತ ಅತ್ಯಧಿಕ ವಾತ್ಸಲ್ಯವೆನ್ನೊಳಗೆ ತೋರ್ಪೆ ಕರ್ತೃ ನೀನೆಂಬ ತತ್ವ ಮನಸಿಗೆ ತಂದೆ ಭಕ್ತವಾತ್ಸಲ್ಯಕ್ಕಿದು ಕುರುಹಲ್ಲವೇ ದೇವ 2 ಸುರಲೋಕಕ್ಕಿಂತಧಿಕ ಪದವಿ ಎನಗಿತ್ತೆ ನಿರುತಲೆನ್ನಯ ಬೆನ್ನು ಕಾಯುತಲಿರುವೆ ಕರುಣಿಗೆಣೆಗಾಣೆ ಕರಿಗಿರೀಶನೇ ನಿನ್ನ ಸ್ಮರಣೆಯನನವರತ ಇರುವಂತೆ ಕೃಪೆಮಾಡೋ 3
--------------
ವರಾವಾಣಿರಾಮರಾಯದಾಸರು
ನಾ ಧನ್ಯನಾದೆನಿಂದು | ಸತ್ಯ | ಬೋಧರಾಯರ ದಿವ್ಯ | ಪಾದಕಮಲವ ಕಂಡು ಪ ಹಿಂಗಿದವಖಿಳದೋಷಂಗಳು ಸನ್ಮುನಿಗಳವ ರಂಘ್ರಿ ಸಂದರುಶನದೀ ಗಂಗಾದಿತೀರ್ಥ ಭುಜಂಗಾದಿ ಮೊದಲಾದ ತುಂಗ ತೀರ್ಥಯಾತ್ರೆ ಫಲ ಸಮನಿಸಿತು1 ಆವ ಮುನಿಗಳೋ ಮತ್ತಾವ ದೇವತೆಗಳೋ ಆವಾವಬಲ್ಲ ಮತ್ತಾವಾಗಲೂ ಸೇವಿಸುವರ ಕೃಪಾವಲೋಕನದಿಂದ ಪಾವನ ಮಾಡಲು ಕೋವಿದಾರ್ಯರ ಕಂಡು 2 ಸೀತಾರಮಣ ಜಗನ್ನಾಥ ವಿಠ್ಠಲರೇಯಾ ಭೂತಳದೊಳಗೀ ಮಹಾತ್ಮರನಾ ಪ್ರೀತಿಯಂ ಸೃಜಿಸಿದನಾಥ ಜನರನ ಪು ನೀತರ ಮಾಡಲು ಆತ ತಕ್ಷಣದಿ 3
--------------
ಜಗನ್ನಾಥದಾಸರು
ನಾ ಮಂದನಾದರು ಸರಿ ಗುರುಗಳ ಕೃಪೆಯಿಂದ ನಾ ಎಂಬುದ ಮರೆತು ಅರಿತಷ್ಟು ಪೇಳುವೆನು ಕಾಮನಯ್ಯ ಕೇಶವನ್ನ ಸ್ಮರಿಸು ಲಲಾಟದಲ್ಲಿ ಒಮ್ಮನಸಿನಿಂದ ಮೂಲವನ್ನು ಉದರ ಮಧ್ಯದಲಿ ಸಾನುವಂದಿತಾದ ಮೇಶನನ್ನು ಹೃದಯದಿ ಉ ಪಮೇರಹಿತನಾದ ಗೋವಿಂದನನ್ನು ಕಂಠ ಮಧ್ಯದಿ ಪತಿ ಶ್ರೀ ವಿಷ್ಣುವಿನನ್ನುದಷೋದರದಿ ಶೂನ್ಯ ಮಧುರಿಪುವಿನ ದಕ್ಷಭುಜದಿ ವಾಮ ಪ್ರತಿಕಂಠದಿ ತ್ರಿವಿಕ್ರಮನನ್ನು ವಾಮನ ಉದರದಿ ವಾಮನ ಮೂರ್ತಿಯನ್ನು ವಾಮ ಭುಜಕಂಠದಿ ಶ್ರೀಧರ ಹೃಷಿಕೇಶರನ್ನು ಸ್ವಾಮಿಯಾಗದಿ ಪದ್ಮನಾಭನನ್ನು ಪುಷ್ಟಭಾಗದಿ ನಿಮ್ಮ ಮಹಿಮ ಗುರು ಕಾಳೀಮರ್ಧಕೃಷ್ಣ ಭಿನ್ನ ದಾಮೋದರನನ್ನು ಶಿರೋ ಭಾಗದಿ ನೆನೆಯೊ 1 ಉದರ ಮಧ್ಯದಲಿ ಐದು ಚಕ್ರಂಗಳು ಹೃದಯಾಕಾಶದಲ್ಲಿ ಮೂರು ಚಕ್ರಂಗಳು ಹೃದಯ ಮೇಲಿನ ಕಂಠದಲ್ಲಿ ಒಂದು ಉದರದಕ್ಷ ಕುಕ್ಷಿಯಲ್ಲಿ ಎರಡು ಮಧುಸೂದÀನ ಸ್ಥಳದಿ ಮೇಲೆ ಎರಡು ಅಧರ ಭಾಗದಿ ವಾಮ ಬಾಹುವಿನಲ್ಲಿ ಒಂದು ಅದಲ್ಲದೆ ವಾಮಕಂಠದಿ ತಾ ಒಂದು ಎದೆಯ ಬಲಪಕ್ಷ ಕಪೋಲದಿ ಮೂರು ಒಂದು ಇದೇ ಇದೇ ತಿಳಿದು ಚಕ್ರಂಗಳ ಧರಿಸುವರು ಸದಮಲಗುರು ಕಾಳೀಮರ್ಧನಕೃಷ್ಣನ ಕೊಂಡರು ದಕ್ಷ ಬಾಹು ಕಂಠದಲ್ಲಿ ಕೆಳಗೆ ಒಂದು ಒಂದರಂತೆ ಕುಕ್ಷಿವಾಮದಲ್ಲಿ ಭಂಧದಿಕೊಂದು ಪರಂಗಳ ಪಕ್ಷಿವಾಹನನಾದ ಶ್ರೀಧರಸ್ಥಾನದ ಮೇಲೆ ಎರಡು ಕಪೋಲ ಒಂದು ಮೂರರಂತೆ ಕ್ರಮದಿ ದಕ್ಷನಾಗಿ ಧರಿಸಿ ಗುರು ಕಾಳೀಮರ್ಧನ ಕೃಷ್ಣನನೆಯೆ 3
--------------
ಕಳಸದ ಸುಂದರಮ್ಮ
ನಾದದಿ ಬೆರೆತಿರು ಮುಕ್ತಾ ನಿತ್ಯವಿರಕ್ತಾವಾದದಿ ಬೆರೆತಿರುಮುಕ್ತಾ ನಾದದಿ ತಾನಾಗಿ ನಿನ್ನ ವಿಚಾರಿಸುನಾದಂ ಧಿಂಧಿಂಧಿಮಿಕೆ ಎಂಬ ಪ ಸರ್ವರೂಪಕವಿದೆ ನಾದ ಸಕಲ ವಿನೋದಪರ್ವಿಕೊಂಡಿರುತಿಹ ನಾದ ಬಹುಲೋಕ ಮೋದದುರ್ವಿಕಾರದ ಮನವ ಎಲ್ಲೆಡೆ ಹರಿಯಿಸುವ ವೀಣಾನಾದ 1 ಆನಂದಕಾಶ್ರಯನಾದ ಆಗಿದೆ ಭೇದಸ್ವಾನಂದ ತಾನೆಯದೆ ನಾದ ಹೇಳಲಿಕೆ ಭೇದಜ್ಞಾನ ಶುದ್ಧನು ಸುಭಕ್ತಿ ವಿರಕ್ತಿಯುತಾನಹುದಹುದೆಂದು ಭೇರಿಯ ನುಡಿಸುವ2 ಹರಣ ಯೋಗಿಗಳ ಭರಣಪಾಪ ಪುರುಷನ ಸಂಹರಣ ತಾನಿಹುದು ಸದ್ಗುಣಭಾಪು ಚಿದಾನಂದ ಗುರುವನು ಕೂಡಲುಈ ಪಥವಲ್ಲದೆ ಇನ್ನೊಂದು ತಾನಿಲ್ಲ3
--------------
ಚಿದಾನಂದ ಅವಧೂತರು
ನಾದಾನಂದದಿ ಮುಳುಗಾಡೋ ಪ ಇಲ್ಲವೆಂಬುದು ಸಲ್ಲ ಗುರುಎಲ್ಲಾ ಪೂರಿತನಹುದಲ್ಲ ಇದ ಬಲ್ಲವರು ಬಲ್ಲರೆಲ್ಲತಾನೆಲ್ಲ ತಿಳಿಯೆ ನೀ ಸಾಕ್ಷಿಕನಹುದಲ್ಲ 1 ಮತಿಯಿಂದ ತಿಳುಕೋ ವಿಚಾರ ಈಗತಿಯಲ್ಲಿ ಆತ್ಮನು ಪೂರಗತಿಗೆ ಕೇಡಿಲ್ಲ ಇದು ಸ್ಥಿರ ಮಹದತಿ ಸೌಖ್ಯ ಪದಕೆ ರಾಜ ನೀನೆ ಉದಾರ 2 ಭೇದ ಭೇದವು ನಿನಗೇತಕೆ ನೀವಾದ ದೂರನು ಪರಕೆ ಈವಾದ ಸಂವಾದಗಳ್ಯಾತಕೆ ಮಹದಾದಿ ಪುರುಷನು ನೀನಹುದು ಬಿಡು ಜೋಕೆ 3 ಸತ್ಯ ಸಂವಿದ್ರೂಪ ಆತ್ಮ ನೋಡೆಪ್ರತ್ಯಾಗಾತ್ಮ ಪರಕತೀತ ಆರಿಂದಲಾದುದುಖ್ಯಾತ ಸುನಾದವರಿದನೇ ನಿರ್ಭೀತ ಮಹಾನಾದ ಚಿದಾನಂದನ ಕೂಡಿದನಾತ4
--------------
ಚಿದಾನಂದ ಅವಧೂತರು
ನಾನಾಗಿ ನನಗಾಗಿ ನಮಿಸುವೆನು ಬಾಗಿ ನೀನಾಗಿ ಕೃಪೆಮಾಡೋ ದೀನಾನುರಾಗಿ ಪ ನಾನಿನ್ನ ಕೈಗೊಂಬೆ ನೀನೆಗತಿಯೆಂಬೆ ನೀನನ್ನ ಕರೆತಂದೆ ಶ್ರೀನಾಥ ನಾ ಬಂದೆ ಅ.ಪ ತರಳನ ಕರೆತಂದೆ ತರುಣಿಕೂಗಿ [ದರಿಕೆಬಿಡಿಸಿ ಮಾನಿನಿಯ ರಕ್ಷಿಸಿದೆ] ಹರಿಯೊಂದು ಜಲದಲಿ ನರಳಿದಕರೆಗೆ ಕರುಣದೊಳೋಡಿ ಬಂದು ಪೊರೆದೆ ನೀತಂದೆ 1 ಜ್ಞಾನಿಯು ನಾನಲ್ಲ ಮಾನಿಯುಮಲ್ಲ ಧ್ಯಾನದ ರೀತಿಯ ನಾನರಿತಿಲ್ಲ ನಾನಾ ಶಾಸ್ತ್ರಂಗಳ ಕಲಿತವನಲ್ಲ ನೀನೆ ಶರಣೆಂಬೆ ಮಾಂಗಿರಿಯ ರಂಗಯ್ಯ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾನು ತಿಳಿದವನಲ್ಲ ನೀ ಕಾಯ್ದೆ ಶ್ರೀ ಕೃಷ್ಣ ನಾನರಿಯದಿರ್ದಡಿದ ನೀನರಿಯದವನೇ ಪ ಒಂದು ದಿನ ನಿನ್ನ ಧ್ಯಾನದಿ ನಡೆದು ಬರುತಿರಲು ಕೊಂದು ಚೂತದ ನೆಳಲಸಾರಿ ನಾನು ಒಂದು ನಿಮಿಷಮ ನೀರ ತಡಿಯಲಿ ಸಂಚರಿಸುತಿರ ಲೊಂದು ತಕ್ಷಕ ಬಂದು ವನವ ಹೊಕ್ಕಿರಲು 1 ಮಲ ಮೂತ್ರದುಪಹತಿಯ ಪರಿಹರಿಸಿ ಕೈಗಳನು ಜಲಮೃತ್ತಿಕೆಗಳಿಂದ ತೊಳೆದು ತೊಳೆದು ಎಳೆ ಬಿಸಿಲ ಸೇವಿಸುತ ದಂತಧಾವನ ಗೈದು ಸಲಿಲವನೆ ಮುಕ್ಕುಳಿಸಿ ಕೇಲದೊಳುಗಿದು 2 ನಿಂತು ಕಾಲ್ಮೊಗ ದೊಳೆದು ಆಚಮಿಸಿ ಆದಿತ್ಯ ನಂತಿ ಕಕೆ ಸಲಿಲಮಂತಿದ್ದಿ ಜಪವಾ ಅಂತ ರಂಗದಿ ಜಪಿಸಿ ಮುಗಿಸಿ ವಸ್ತ್ರಗಳಿಟ್ಟು ಗೊಂತಿಗೈತಂದವನು ಮರಳಿಧರಿಸಿ 3 ಹಚ್ಚಡವ ಹೊದ್ದು ಮುಂದಕೆ ನಡೆದು ಬರುತಿರ ಲಾಶ್ಚರ್ಯವೆನಿಸಿ ಬದಿಯೊಳಗುಮ್ಮಲು ಸ್ವಚ್ಚವಲ್ಲವಿದೆಂದು ಕಿಮುಚಿನಾ ನೋಡಿ ಬಲು ಬೆಚ್ಚಿ ಹಚ್ಚಡ ಬಿಸುಡೆ ಬಿಚ್ಚೆ ಪೆಡೆಯಲು ಕಂಡೆ 4 ನೀ ಕೊಲುವ ಕಾಲದೊಳು ಕೊಲುವರಿಲ್ಲ ಲೋಕೈಕನಾಥ ಚಿಪ್ಪಳಿ ವೇಣುಗೋಪಾಲ ನೀ ಕರುಣದಿಂ ಕಾಯ್ದೆ ಎನ್ನಸುವನು 5
--------------
ಕವಿ ಪರಮದೇವದಾಸರು
ನಾನು ನೀನೆಂಬುದಕಾಗುವದಿದೆ ಉದಯಮಾನ ಧ್ರುವ ಅರಹು ನಿನ್ನೊಳರಿಯಾ ಅರುವ್ಹಿನೊಳು ಬೆರಿಯಾ ಅರಹು ಅರಿಯಲಿಕ್ಕೆ ಗುರುಕುರುಹು ನಿಜವರಿಯಾ 1 ಮರೆಸುವದರ ಅರಿಯಾ ಅರಿಸುವದರ ಜರಿಯಾ ಅರಸಿ ಮರಿಸಗುಡದರನುಭವದ ನಿಜಪರಿಯಾ 2 ಅರುವಿಲಹ ಖೂನ ಗುರುಕೃಪ ಜ್ಞಾನ ತರಳ ಮಹಿಪತಿ ಅರಿಯೊ ಪರಮ ಸುನಿಧಾನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾರಸಿಂಹ ನಮಿಪೆ ನಿಮ್ಮ ನತಜನಾಶ್ರಯ ಪ ಘೋರ ದುರಿತದೂರ ಭಕ್ತಕುಮುದಕುಡುರಾಯ ಅ.ಪ ವಿವಿಧಗತಿಯಲಸುರ ಸುತನ ವೇಧೆಪಡಿಸಲು ತವ ಪದಾಂಬುರುಹವ ನೆನೆಯೆ ಒಂದೆ ಕ್ಷಣದೊಳು 1 ಕೋಟಿ ಸಿಡಿಲು ಬಡಿದ ತೆರದಿ ಕೂಗು ಪುಟ್ಟಲು ಚಾಟ ಸ್ತಂಭದೊಳುದಿಸೆ ದನುಜಕೂಟ ಬೆದರಲು 2 ತರಳಗೊಲಿದೆ ಗುರುರಾಮ ವಿಠಲ ನಂಬಿದೆ 3
--------------
ಗುರುರಾಮವಿಠಲ
ನಾರಸಿಂಹ ನಾರಸಿಂಹ ನಾರಸಿಂಹ ಪ ನಿತ್ಯದಲಿ ಬರುವ ಅಪಮೃತ್ಯುವಿನ ಬಾಧೆಯ ಕೃತ್ತಿ ಒತ್ತಿ ಪರಿಹರಿಸಿ ಭೃತ್ಯನಾದ ಜೀವನ್ನ ತೃಪ್ತಿಪಡಿಸುವ ದೇವ ಭಕ್ತವತ್ಸಲ ನಾರಸಿಂಹ 1 ಅಂದು ಸ್ವಪ್ನದಿ ಬಂದೆ ದ್ವಂದ್ವ ಪಾದಕ್ಕೆರಗಿ ನಿಂದು ನಾ ನಿನ್ನ ಬೇಡೆ ಸಂಧಿಸಿ ಕ್ರೂರ ದೃಷ್ಟಿಯಿಂದ ನೋಡಿ ಮಂದೀಗೆ ಕುಂದು ಮಾಡಬ್ಯಾಡೆಂದೆ 2 ಅಂದಿನಾರಭ್ಯ ಬಲು ಬಂಧನಕೆ ಸಿಲ್ಕಿ ನಾ ಪರಿ ಪೇಳಲಾರೆ ಹಿಂದಿನ ಅಘವೆಣಿಸದೆ ಬಂದು ನಾರಿ ಸಹಿತ ತಂದೆ ಈ ಸುತನ ಕಾಯೋ 3 ತಂದೆ ತಾಯಿಯು ನೀನೆ ಬಂಧು ಬಳಗವು ನೀನೆ ಎಂದು ಎನ್ನಗಲದೆ ಬಂದು ನೆಲಸೆನ್ನಲ್ಲಿ ಅಜ್ಞಾನ ಕೊಡದಿರು ವಂದಿಸುವೆನು ನಾರಸಿಂಹ 4 ಮುಂದಾದರು ಹೃನ್ಮಂದಿರದಿ ನೆಲೆಗೊಂಡು ಸಂದರ್ಶನವನೀಯೊ ದೇವ ಕಂದರ್ಪಹರ ವಿಜಯ ರಾಮಚಂದ್ರವಿಠಲರೇಯ ವಂದೆ ಭಕ್ತಿಯ ಪಾಲಿಸು 5
--------------
ವಿಜಯ ರಾಮಚಂದ್ರವಿಠಲ
ನಾರಾಯಣ ಉದಿಸುವನೆಂದು ಆ ಪೂರ್ವಾಂತರ್ಯಾಮಿ ಅವರ ಸಲಹಲು ಸರ್ವದಾ ಅಪೂರ್ವ ತೇಜೋವಂತನಾಗಿ ಅವರ ಹೃದಯದಿ ಸೂರ್ಯತೇಜದಿ ಮೆರೆಯುತಿರುವ ಸರ್ವದಾ ಎಂದು ಅಪೂರ್ವ ಜ್ಞಾನದಿ ನೆನಯುತಿರಿ ಹರಿಭಕ್ತರು 1 ಎದ್ದು ಮುಖ ತೊಳೆದು ನಿಮ್ಮಲ್ಲಿದ್ದ ಕಲ್ಮಷ ತೊಳೆದು ನಿಮ್ಮ ಶುದ್ಧ ಮನದಲಿ ನೆನೆದು ನಿಲಿಸಿ ಹರಿ ಧ್ಯಾನದಿ ಸ್ನಾನಾನ್ಹೀಕಬದ್ಧಕಂಕಣರಾಗಿ ಬ್ರಾಹ್ಮೀಮುಹೂರ್ತದಲಿ ಗೈಯೆ ನಿಮ್ಮಲ್ಲಿದ್ದ ಕಲ್ಮಶವೆಲ್ಲ ಕಳೆದತಿ ಹರ್ಷವೀವ ನಿಮ್ಮ ಶುದ್ಧಾಚರಣೆಗೆ ಮೆಚ್ಚಿ ನಿಮ್ಮ ಭಕ್ತಿಗೆ ನಿತ್ಯ ಬದ್ಧ ಕಂಕಣರಾಗಿ ಸ್ತುತಿಸೆ ನಿತ್ಯ ಹರಿ ಭಕ್ತರು 2 ಮಾಧ್ಯಾನ್ಹಿಕಾದಿಗಳಾಚರಿಸುತ ಹರಿಯ ಮಧ್ಯವರ್ತಿಯನೆನಿಸಿ ಆ ಸೂರ್ಯನಂತರ್ಯಾಮಿ ನಾರಾಯಣನಿ- - ಗಘ್ರ್ಯಪಾದ್ಯವನಿತ್ತು ಸುಭೋಜನವ ಮಾಡಿ ನಿಮ್ಮ ಪೂರ್ವಜರನುಗ್ರಹದಿ ಮಜ್ಜನ್ಮಸಾರ್ಥಕವೆಂದಾವನರಿವನೋ ಅವನ ಹೃದಯ ಮಧ್ಯವರ್ತಿಯಾಗಿದ್ದು ಕಾವ ಸದ್ಗುಣೋಪೇತ ಭಕ್ತರ ಕೈ ಬಿಡ ಮಧ್ವಾಂತರ್ಗತ ಶ್ರೀ ಶ್ರೀನಿವಾಸ ಅವನ ಮನದಿ ನೆನೆಯಿರಿ ಹರಿ ಭಕ್ತರು 3 ಜವÀನ ಬಾಧೆಯು ಇಲ್ಲ ಹರಿ ಭಕ್ತರಿಗೆ ಯವನ ರೂಪದ ಕಲ್ಕಿ ಹರಿಯ ನೆನೆವರಿಗೆ ಜವದಿ ಯಮನಾಳ್ಗಳು ಮುಟ್ಟಲಂಜುವರು ಹರಿಭಕ್ತರನು ಕವಿ ನಾರಾಯಣನ ಧ್ಯಾನಿಪರಿಗೆ ಅವನಿಯೊಳು ಭಯವಿಲ್ಲ ಅವರಿಗೆ ಸಮನಿಲ್ಲ ಅವರಲ್ಲಿ ಹರಿಯಿದ್ದ ಕಾರಣದಿ ಜವದಿ ಹರಿ ದಾಸರೆಲ್ಲ ಶ್ರೀ ಶ್ರೀನಿವಾಸನ ಭಕ್ತರ ಸಂಗದೊಳಿರಿ ಹರಿಭಕ್ತರು 4 ಯಾರ ಭಯವಿಲ್ಲ ಹರಿ ನಾಮಕೆ ದಾರಿ ಹೋಕರು ಬಾರರಿದಕೆ ಭಾರವಿಲ್ಲವು ಮನಕೆ ಸಂಸಾರಭಯವಿಲ್ಲವರಿಗೆ ಹರಿ ಎಂಬುದನೆ ಸಕಲ ಕಾರ್ಯವ ನಿರ್ವಹಿಸುವನೆಂದರಿತವರಿಗೆ ಯುಕುತಿ ಬುದ್ಧಿಯು ಯಾತಕೆ ಯಾರ ಭಯವೇಕೆ ಹರಿಸಖರಾಗಿರಲವರಿಗೆ ಅಂಜಿಕೆಯಾಕೆ ಯಾರನಾಶ್ರಯಿಸುವ ಶ್ರಮವಿಲ್ಲ ಇದನರಿತು ಹರಿಭಕ್ತರು ಶಕುನ ಅಪಶಕುನವೆನ್ನರು ಮನದಿ ಯುಕುತಿಯ ಮಾಡರು ಪರರ ಬೇಡೆ ಶ್ರೀ ಶ್ರೀನಿವಾಸ ಭಕ್ತರು ಅವರ ಮತ ಹಿಡಿದು ಬದುಕಿ ಹರಿಭಕ್ತರು 5 ಜತೆ ಕರುಣಾಕರ ಹರಿಭಕ್ತರಭಿಮಾನಿ ವರದಭಯ ಹಸ್ತವ ಕೊಡುವ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ