ಒಟ್ಟು 1349 ಕಡೆಗಳಲ್ಲಿ , 95 ದಾಸರು , 1022 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಲಿದಾಡೆ ಎನ್ನ ನಾಲಿಗೆ ಮೇಲೆ - ಸರಸ್ವತಿ ದೇವಿ ಪಕುಣಿದಾಡೆ ಎನ್ನ ನಾಲಗೆ ಮೇಲೆ ಅ.ಪಸಲಿಲಜೋದ್ಬವನವದನನಿಲಯಳೇಇಳೆಯೊಳಪ್ರತಿಮ ಗುಣಾಂಬುಧಿ ತಾಯೆ ಅ.ಪಘಿಲುಘಿಲು ಘಿಲ್ಲು ಗೆಜ್ಜೆಯ ನಾದ | ಭಳಿ ಭಳಿರೆಂಬಂದುಗೆ |ಹೊಳೆವ ಬೆರಳುಂಗುರ ಕಿಣಿಕಿಣಿನಾದ | ಎಳೆಯ ಮಾವಿನ |ತಳಿರ ಪೋಲುವ ದಿವ್ಯಪಾದ| ಚೆಲ್ವಪೆಂಡೆಯ ಭೇದ ||ನಲಿವಯುಗಳಜಂಘೆ| ಜಲಗುಳ್ಳೆಯಂತೆಜಾನು|ಥಳಥಳಿಸುವ ತೊಡೆ ಹೊಳೆವ ಸುಗುಣಿಯೆ 1ದಿನಕರಕೋಟಿ ತೇಜದಿ ಹೊಳೆವ ಅನುಪಮವಾದ |ಕನಕವಸನದಿಂದಲಿ ಎಸೆವ | ಘನವಾದ ಜಘನಗ-ಗನದಂದದಿ ಕಟಿಯಲ್ಲಿ ಮೆರೆವ | ಮಣಿದಾಮವಿಭವ ||ತನು ಜಠರವುಜಾಹ್ನವಿಸುಳಿನಾಭಿಯು |ಘನಸ್ತನಯುಗಳ ಚಂದನಲೇಪಿತಳೆ 2ದುಂಡಮುತ್ತಿನ ಕೊರಳ ಹಾರ | ಉದ್ದಂಡಮಣಿ ಪ್ರ-|ಚಂಡ ಮಿಣಿಮಿಣಿಸುವ ಹೊನ್ನಿನ ಹಾರ | ಕರಿರಾಜಪೋತನ |ಸೊಂಡಿಲಿನಂತೆ ಭುಜದಭಾರನಡೆವ ಒಯ್ಯಾರ ||ಮಂಡಿತವಾದ ಕಂಕಣ ತೋಳ್ಬಳೆಗಳು |ದುಂಡು ಹವಳ ಕೈಕಟ್ಟುಳ್ಳವಳೆ 3ನಸುನಗು ಮುಖವು ನಾಸಾಭರಣ | ಎಸೆವಕಪೋಲ|ಹೊಸಕುಂಡಲಚಳಿತುಂಬುಳ್ಳ ಶ್ರವಣ | ಬಿಸಜದಳದಂತೆ |ಎಸೆವ ಕರ್ಣಾಂತವಾದ ನಯನ | ತಿಲಕದ ಹಸನ ||ಶಶಿಸೂರ್ಯರ ಆಭರಣ ಸುಶೋಭಿತೆ |ಕುಸುಮಮುಡಿದ ಮೂರ್ಧಜವುಳ್ಳವಳೇ4ಸಿಂಗಾರದ ಜಡೆಬಂಗಾರ | ಹೊಂಗೇದಗೆ ಮುಡಿದ |ಬಂಗಾರದ ಹೆರಳಿನ ರಾಗುಟಿವರ | ಭೃಂಗಾದ ಸ್ವರ |ಹಿಂಗದೆ ಭಕ್ತರ ಸಲಹುವಭಾರ| ಕಂಗಳ ಮನೋಹರ ||ರಂಗಪುರಂದರವಿಟ್ಠಲರಾಯನ |ಮಂಗಳ ಮೂರ್ತಿಯ ತೋರೆ ಶುಭಾಂಗಿ 5
--------------
ಪುರಂದರದಾಸರು
ನಾ ನಿನ್ನ ಧ್ಯಾನದೊಳಿರಲು - ಇಂಥಹೀನ ಮಾನವರಿಂದೇನಾಹೋದು ಹರಿಯೆ ಪ.ಮಚ್ಚರಿಸಿದರೇನ ಮಾಡಲಾಪರೊ ಎನ್ನಅಚ್ಯುತ ನಿನ್ನದೊಂದು ದಯವಿರಲು ||ವಾಚ್ಛಲ್ಯ ಬಿಡದಿರು ನಿನ್ನ ನಂಬಿದ ಮೇಲೆಕಿಚ್ಚಿಗೆ ಗೊರಲೆ ಮುತ್ತುವುದೆ ಕೇಳೆಲೊ ರಂಗ 1ದಾಳಿಯಲಿ ತೇಜಿ ವೈಹಾಳಿಯಲಿ ನಡೆಯಲುಧೂಳು ರವಿಗೆ ತಾನು ಮುಸುಕುವುದೇ ||ತಾಳಿದವರಿಗೆ ವಿರುದ್ಧ ಲೋಕದೊಳುಂಟೆ ?ಗಾಳಿಗೆ ಗಿರಿ ನಡುಗುವುದೆ ಕೇಳೆಲೊ ರಂಗ 2ಕನ್ನಡಿಯೊಳಗಿನ ಗಂಟ ಕಂಡು ಕಳ್ಳಕನ್ನವಿಕ್ಕಲು ವಶವಾಗುವುದೇ ?ನಿನ್ನ ಧ್ಯಾನವ ಮಾಡೆ ಪುರಂದರವಿಠಲನೆಚಿನ್ನಕ್ಕೆ ಪುಟವಿಕ್ಕಿದಂತೆ ಕೇಳೆಲೊ ರಂಗ 3
--------------
ಪುರಂದರದಾಸರು
ನಾಮವನೊದಗಿಸಯ್ಯ -ಶ್ರೀಹರಿ ನಿನ್ನ |ನಾಮವನೊದಗಿಸಯ್ಯ ಪನಾಮವನೊದಗಿಸಯ್ಯ ನಾನೆಂಬ ಕರ್ತೃತ್ವ ಬಿಡಿಸಿ |ಸಾಮಜಪೋಷಕ ನಿನ್ನ ಪಾದಸರಸಿಜಗಳಿಗೆರಗುವೆ ಅ.ಪಮಾತನಾಡುವಾಗ ಮಲಗುವಾಗ ನಡೆಯುವಾಗ |ಭೀತಿಗೊಂಡಾಗ ಎಡಹಿಬೀಳುವಾಗ |ಸೀತಾರಾಮ ಗೋವಿಂದ ಶ್ರೀ ವೈಕುಂಠಾಧೀಶ ಅ-|ನಾಥ ಬಾಂಧವ, ಕೃಷ್ಣಾ, ಕೃಷ್ಣಾ ಎಂದು ಕರೆವ 1ತನು ತಾಳದಂಥಕ್ಷುಧೆದಾಹವಿಕಾರಗ-|ಳನುಭವಿಸುತ ಕಂಗೆಡುವಂಥ ಸಮಯದಲ್ಲಿ ||ವನಜನಾಭಗೋವಿಂದ, ವಾಣೀಪತಿಪಿತ ಕೃಷ್ಣ |ದನುಜಮರ್ದನ ಭಕ್ತ ವತ್ಸಲನೆಂದು ಕರೆವ2ಆಸಹ್ಯವಾದಜರೆರೋಗಂಗಳಾವರಿಸಿ |ಅಸುಗಳು ಕಂಠಗತವಾಗಿ ಧೃತಿತಪ್ಪಿ ||ವಿಷಮದೂತನ ಕೈವಶವಪ್ಪ ಸಮಯದಲ್ಲಿ |ಬಿಸಜಾಕ್ಷ ಪುರಂದರವಿಠಲನೆಂದು ಕರೆವ 3
--------------
ಪುರಂದರದಾಸರು
ನಾರದ ಕೊರವಂಜಿ1ಜಯ ಜಯ ಜಯ ಜಯ ಜಯ ಜಯ ಪ.ಶ್ರೀ ರಮಾರಮಣ ಜಯ ಶ್ರೀಕರ ಗುಣಾಬ್ಧಿ ಜಯಶ್ರೀ ರುಕ್ಮಿಣೀಶ ಜಯ ಶ್ರೀ ಶ್ರೀನಿವಾಸ ಜಯನೀರಚರಕಮಠಕಿಟಿನೃಹರಿವಟುಭೃಗುಜ ರಘುವೀರ ಯದುಪತೆಬುದ್ಧಕಲ್ಕಿ ಸ್ವರೂಪಾ ಜಯ ಜಯ1ಶ್ರೀ ಮತ್ಕಪಿಲ ಋಷಭ ಯಜÕದತ್ತ ಕಂಸ್ತುಘ್ನ ?ಕೌಮಾರ ವ್ಯಾಸ ಹಯಗ್ರೀವ ಶ್ರೀಮದ್ದಜಿತ ಜಯಸ್ವಾಮಿ ಮಹಿದಾಸ ತಾಪಸ ಉರುಕ್ರಮಶೂಲಿವ್ಯಾಮೋಹ ಧನ್ವಂತರೆ ಹಂಸ ಶುಕ್ಲಾ ಜಯ ಜಯ 2ಆನಂದ ಜ್ಞಾನ ಬಲಮಯ ಚಿತ್‍ಸ್ವರೂಪ ಜಯಅನಂತ ಮಹಿಮ ವೈರಾಜ ಪುರುಷೋತ್ತಮ ಜಯಅನಂತ ಬ್ರಹ್ಮ ರುದ್ರೇಂದ್ರಾದಿಸೇವ್ಯಜಯಅನಂತ ಜೀವಗ ಪ್ರಸನ್ವೆಂಕಟ ಕೃಷ್ಣಾ ಜಯ ಜಯ 32ಶರಣು ಮಂಗಳ ದೇವತೇವರಶರಣುಚಿತ್ಸುಖಸಾಗರಶರಣುಅಗಣಿತಗುಣಶುಭಾಕರಶÀರಣು ವೆಂಕಟ ಮಂದಿರ 4ದುರುಳದೈತ್ಯರು ಸೊಕ್ಕಿ ವರದಲಿಧರೆಗೆ ಕಂಬನಿ ತರಿಸಲುತ್ವರದಿ ಸುರರಿಗೆ ಮೊರೆಯನಿಟ್ಟಳುಧರಿಸಲಾರೆನು ಎನುತಲಿ 5ಸರಸಿಜೋದ್ಭವಭವಪುರುಹೂತರರಿದು ಚಿಂತಿಸಿ ಮನದಲಿವರಪಯೋನಿಧಿಗೈದಿ ಸ್ತುತಿಸಲುಕರುಣದಲಿ ಅವತರಿಸಿದೆ 6ಬಂದು ಧರ್ಮದ ವೃಂದ ರಕ್ಷಿಪೆನೆಂದು ದೀಕ್ಷೆಯವಿಡಿದು ನೀಅಂದಗೆಡಿಸುತ ದನುಜನಿಕರವಹೊಂದಿ ದ್ವಾರಕ ನಗರವ 7ಇಂದಿರೆಯು ನಿನ್ನಿಚ್ಛೆಯನುಸರದಿಂದ ಕ್ರೀಡಿಪಳನುದಿನÀಮಂದಜನರಿಗೆ ಮೋಹಿಸುತನರರಂದದಲಿ ತೋರಿದೆ ಹರೆ 8ದೇವಋಷಿ ನಾರದನು ಶ್ರೀಪದಸೇವೆಗÉೂೀಸುಗ ಕೊರವಿಯಭಾವದಲಿ ಜಗದಂಬೆ ರುಕ್ಮಿಣಿದೇವಿಯಳ ಬಳಿಗೈದು ತಾ 9ದೇವ ನಿನ್ನಯ ಬರವ ಬೆಸಸಿದಕೋವಿದತೆಯನು ಪೇಳುವೆಶ್ರೀವರ ಪ್ರಸನ್ವೆಂಕಟ ಕೃಷ್ಣಪಾವನ ಮತಿಯ ಕರುಣಿಸೊ 103ಶ್ರೀ ರಂಭೆ ಭೀಷ್ಮಕನಭೂರಿಪುಣ್ಯದ ಗರ್ಭವಾರಿಧಿಯಲ್ಲಿ ಜನಿಸಿನಾರಿ ರುಕ್ಮಿಣಿಯೆಂಬ ಚಾರುನಾಮದಿಕಳೆಯೇರಿ ಬೆಳೆದಳಂದವ್ವೆ 11ಜನನಿಜನಕರೆಲ್ಲ ತನುಜೆಯ ಹರಿಯಂಘ್ರಿವನಜಕೆ ಕೊಡಬೇಕೆನ್ನೆನೆನೆದು ತಾನೊಂದು ರುಕ್ಮನು ದಮಘೋಷನತನುಜಗೆ ತಂಗಿಯನು 12ಕೈಗೂಡಿಸುವೆನೆಂಬ ವೈಭವದಲ್ಲಿರೆವೈಮನಸದೊಳು ಕನ್ಯೆಯುಸುಯ್ಗರಿಯುತ ಮುರವೈರಿ ಪ್ರಸನ್ವೆಂಕಟಕೃಷ್ಣಯ್ಯನೊಳ್ ಮನವಿಟ್ಟಿರೆ 134ದನುಜಮಥನÀ ಹರಿಸೇವೆ ಇದೆಂದುಅನಿಮಿಷಮುನಿ ಧರೆಗಿಳಿದು ತಾ ಬಂದುವನಿತೆ ಕೊರವಂಜಿಯ ವೇಷವÀ ಧರಿಸಿಜನಪ ಭೀಷ್ಮಕನೋಪವನದಲ್ಲಿ ನೆಲಸಿ 14ಹಲವು ಕೊರವಿಯರ ಕೂಡಿ ಸಿಂಗರದಿಬೆಲೆ ಇಲ್ಲದುಡಿಗೆ ತೊಡಿಗೆ ಇಟ್ಟು ಮುದದಿಇಳೆಯ ಜನರು ಮೋಹಿಸುವಪರಿಇಹಳುಕೆಳದೇರ ಗಡಣದಲಿ ಚೆಲುವೆ ಒಪ್ಪಿದಳು 15ಮಂಜುಗಾವಿಯ ಸೀರೆ ನಿರಿತೆಗೆದುಟ್ಟುಕೆಂಜೆಡೆ ಬಿಟ್ಟೋರೆದುರುಬಿನ ಕಟ್ಟುಪಂಜಿನೋಲೆಯ ಮೂಗುತಿಯ ಬಲಿದಿಟ್ಟು ಗುಲಗಂಜಿ ಹೊಂದಾಳೆ ಸರಗಳಳವಟ್ಟು 16ಕಂಚುಕಪುಟ ಬಿಗುಪೇರಿದ ಕಟ್ಟುಚಂಚಲನೇತ್ರಕಂಜನ ಕಾವಲಿಟ್ಟುಮಿಂಚುವಾಭರಣಿಟ್ಟು ಪ್ರಸನ್ವೆಂಕಟ ಕೃಷ್ಣನಂ ಚಿಂತಿಸಿ ಜಯ ಜಯಯೆಂದಳುಕೊರವಿ175ಅಡಿಗಡಿಗೆ ಝಣ ಝಣರೆಂದು ನಡೆತಂದು ನಡೆತಂದುಮಡದಿ ರಾಜಬೀದಿಯಲಿನಿಂದು18ಮೃಡಗಹಿತನ ಪಟ್ಟದಾನೆ ಮಂದಗಮನೆ ಮಂದಗಮನೆಕಡುಮೌನಿ ಜನರ ಮೋಹಿನೆ 19ಚಪಲ ನೋಟಕೆ ನಾಗರಿಕರು ನೋಟಕರು ನೋಟಕರುಲಿಪಿಯ ಚಿತ್ರದೊಲು ನಿಂತಿಹರು 20ನಿಪುಣೆಕೊರವಿಶ್ರೀಪ್ರಸನ್ವೆಂಕಟ ಕೃಷ್ಣನ್ನ ಕೃಷ್ಣನ್ನಶ್ರೀಪ್ರÀ್ರಸಾದವ ಬೇಡುತಿದ್ದಳಣ್ಣ 216ಬೆಡಗಿನ ಗಮನದಿ ಎಡಬಲಕೊಲಿದುಕಡಗ ಶಂಖದ ಬಳೆ ನುಡಿಸುತ ನಡೆದುಅಡಿಗೊಮ್ಮೆ ತಿರುಮಲ ಒಡೆಯನ ನೆನೆದು ತಕ್ಕಡ ಧಿಗಿಧಿಮಿಕೆಂದುಜಡಿದುತಾಳ್ವಿಡಿದು22ತಿಗುರಿದ ಗಂಧ ಸೆಳ್ಳುಗುರಿನ ನಾಮಮೃಗಮದದ ಬೊಟ್ಟಿನ ನಗೆಮೊಗದ ಪ್ರೇಮಮಗುವನುಡಿಯಲೆತ್ತಿ ಜಗಚ್ಚರಿಯಮ್ಮಹೆಗಲ ರನ್ನದ ಬುಟ್ಟಿ ಮುಳ್ಳುವಿಡಿದಮ್ಮ 23ನಗರದ ಜನದ ಕಣ್ಣಿಗೆ ಕೌತುಕೆನಿಸಿಬಗೆ ಬಗೆ ಒಗಟು ಮಾತುಗಳನುಚ್ಚರಿಸಿನಗರಾಧಿಪತಿಯ ಮನೆಯಕೇಳಿನಡೆದುಮಿಗೆ ಪ್ರಸನ್ವೆಂಕಟ ಕೃಷ್ಣಗೆ ಕೈಮುಗಿದು 247ಬ್ರಾಹ್ಮರ ಕೇರಿಗೆ ಬಂದಳಾಕೊರವಿಪರಬ್ರಹ್ಮನ ಗುರುತ ಕೇಳುತ್ತನಮ್ಮಮ್ಮ ನಮ್ಮವ್ವೆ ನಮ್ಮಜ್ಜಿ ನೀಡೆಂದುಸನ್ಮಾನದಾಲಯವ ಪೊಗುತಾ 25ಇಂತಪ್ಪ ಸೊಬಗುಳ್ಳ ಕೊರವಿಯನು ಕಂಡುನೃಪನಂತಃಪುರದ ಸತಿಯರೈದಿಕಂತುವಿನ ಜನನಿಗೆ ಕರವೆರಡು ಮುಗಿದು ಏಕಾಂತ ಪೇಳಿದರು ಚೆನ್ನಾಗಿ 26ಓರ್ವ ಕಾಲಜ್ಞಾನ ಪೇಳ್ವ ಕೊರವಮ್ಮ ನಮ್ಮೂರ್ವಳಗೆ ತಿರುಗುತಿಹಳಮ್ಮಸರ್ವೇಶ ಪ್ರಸನ್ವೆಂಕಟ ಕೃಷ್ಣನಾಗಮದನಿರ್ವಚನ ಕರೆಸಿ ಕೇಳಮ್ಮ 278ಬಂದಳು ನೃಪನರಮನೆಗೆ ತಾನಿಂದಲ್ಲಿ ನಿಲ್ಲದೆ ಕಿಲಿಕಿಲಿ ನಗುತಾ ಕುಲು ಕುಲು ನಗುತಾ ಪ.ಬಂದ್ಹೇಳಿದ ನುಡಿಗೇಳ್ದು ಪೂರ್ಣೇಂದುವದನೆ ಮುದತಾಳ್ದುಮಂದಿರಕೆ ಕರೆಸಿದಳು ನಲವಿಂದಲಿ ಬಲು ಬೆಡಗಿನ ಕೊರವಂಜಿ 28ತಳಪಿನ ಮುತ್ತಿನ ಕಟ್ಟುಶುಭತಿಲಕದ ಹಚ್ಚೆಯ ಬಟ್ಟುಅಲುಗುವ ಮೂಗುತಿಯಬಲೆ ಸಲೆಬಳುಕುತ ಬಡನಡುವಿನ ಚಪಲೆ 29ಬಟುಗಲ್ಲದ ಮಕರಿಕಾಪತ್ರ ಪವಳದುಟಿ ದಾಡಿಮರದಗೋತ್ರವಿಟಮೃಗಸ್ಮರಶರ ನೇತ್ರ ಕೊರಳ್ದಟಿಸುವಮಣಿಮುತ್ತಿನ್ಹಾರಗಳೊಲಪಲಿ30ಇಟ್ಟೆಡೆ ಮೊಲೆಯ ಪಟ್ಟಿಕೆಯು ಶ್ರೋಣಿಮುಟ್ಟುವ ಮುಡಿಯ ಮಾಲಿಕೆಯುಬಿಟ್ಟ ಮುಂಜೆರಗಮಲಿಕೆಯು ಕಣ್ಣಿಟ್ಟ ಮೃಗಕೆ ಭ್ರೂಸ್ಮರಕಾರ್ಮುಕೆಯು 31ತೆಳ್ವೋದರದ ತ್ರಿವಳಿಯ ಜಗುಳಿಬೀಳ್ವ ಮಣಿಮುಕ್ತಾವಳಿಯಸಲ್ಲಲಿತ ಸಂಪಿಗೆ ಕಳೆಯ ಗೆಲ್ವಚೆಲ್ವೆಕೊರವಿಪುರವೀಥಿಯ ಬಳಿಯ32ಕಿಣಿ ಕಿಣಿ ರವದ ಕಿಂಕಿಣಿಯುಝಣ ಝಣತ್ಕಾರಿಪಂದುಗೆ ಮಣಿಯುಕಣಿ ಕಣಿ ಒಯ್ಯೆಂಬೊಕ್ಕಣಿಯು ಕುಚಕುಣಿ ಕುಣಿಸಿ ನಟಿಪ ನಡೆವಾಂಗನೆಯು 33ಸಿಂಗನ ಉಡಿಯಲ್ಲಿಕಟ್ಟಿಉತ್ಸಂಗದೊಳೊಲಪಿನ ದಿಟ್ಟಿರಂಗ ಶ್ರೀ ಪ್ರಸನ್ವೆಂಕಟ ಕೃಷ್ಣಾಂಗನೆಯನು ಕಾಂಬುವೆನೆಂಬ ತವಕದಿ 349ವಚನಪದುಮನಾಭನ ರಾಣಿ ರಾಣಿವಾಸದಲಿಯದುಕುಲೇಂದ್ರನ ಚರಣೋಚ್ಚಾರಣೆಯಲ್ಲಿರಲುಒದಗಿ ಬಂದಳುಕೊರವಿಕರೆಯುತ್ತ ತಾನುಚದುರ ಪ್ರಸನ್ವೆಂಕಟ ಕೃಷ್ಣನರಸಿಯನು 3510ಎಲ್ಲಿಹಳೆಲ್ಲ್ಲಿಹಳಾ ರಾಯನ ಮಗಳೆಲ್ಲಿಹಳೆ ನೀಡೆಯವ್ವನಲ್ಲೆ ಬಾ ನಲ್ಲೆ ಬಾ ನಲ್ಲೆ ಬಾ ರುಕ್ಮಿಣಿನಲ್ಲೆ ಬಾರೆ ಮುಂದಕವ್ವ 36ಬಲ್ಲೆ ನಾ ಬಲ್ಲೆ ನಿನ್ನಯ ಮನದೆಣಿಕೆಯಸೊಲ್ಲುವೆನೆ ನೀಡೆಯವ್ವನಿಲ್ಲದು ನಿಲ್ಲದಕ್ಕಿಯು ನಿನ್ನದ್ಹಸಿತ ಕೈಒಳ್ಳೆ ಕಜ್ಜಾಯ ನೀಡೆಯವ್ವ 37ಕೆಟ್ಟೋಗರಕೆ ಚಿತ್ತವಿಟ್ಟ ಕೊರವಿಯಲ್ಲಮೃಷ್ಟಾನ್ನವ ನೀಡೆಯವ್ವಶ್ರೇಷ್ಠಾದ ಶಾವಿಗೆ ಬಟ್ಟುವಿ ಪಾಯಸಹೊಟ್ಟೆ ತುಂಬ ನೀಡೆಯವ್ವ 38ಅಟ್ಟಿಟ್ಟ ಪಂಚವಿಧ ಭಕ್ಷ್ಯ ಎನಗಿಂದುಇಷ್ಟ ಕಾಣೆ ನೀಡೆಯವ್ವಇಷ್ಟುಣಲಿಕ್ಕೆನ್ನತುಷ್ಟಿಬಡಿಸಿ ಸತ್ಯಗೋಷ್ಠಿಕೇಳೆ ನೀಡೆಯವ್ವ39ಮನ್ನಣೆ ಇಲ್ಲದ ಮನೆಯ ಹೊಗುವಳಲ್ಲಕನ್ನೆ ಬಾರೆ ಮುಂದಕವ್ವಮುನ್ನ ರಕ್ಕಸನೊಯ್ದ ಮಡದಿಗೆ ಒಳಿತವನೆಲ್ಲ ಹೇಳಿದ್ದೆನವ್ವ 40ನಿನ್ನ ಪ್ರಾಣದ ಪ್ರಿಯನೊಬ್ಬನೆ ಪರದೈವಕನ್ನೆ ಕೇಳಜಕಾಮರವ್ವಕಣ್ಣಾರ ಕಾಂಬೆ ನಿನ್ನಣ್ಣನಪಾಟುಪ್ರಸನ್ನವೆಂಕಟ ಕೃಷ್ಣನಿಂದವ್ವ 4111ಚೂರ್ಣಿಕೆಈ ವಾಕ್ಯವಂಕೇಳಿತೀವಿ ತೋಷವ ತಾಳಿದೇವಿ ರುಕ್ಮಿಣಿಯಕ್ಕ ಪಾವನ ಹಾಸಂಗಿಯಿಕ್ಕಿಆವಲ್ಲಿಂ ಬಂದ್ಯವ್ವ ದೇವಲೋಕದ ಕೊರವೆಈ ಒಳ್ಳೆ ಮೆಚ್ಚು ಮಾತು ಆವಾಗನುಭವೆಂ ಮಾತೆಹೀಗೆಂದಾಸನ ಕೊಟ್ಟು ಬಾಗಿಲೊಳು ಕಾವಲಿಟ್ಟುಬೇಗ ಪ್ರಸನ್ವೆಂಕಟ ಕೃಷ್ಣನಾಗಮವ ಮನದಿ ಕೇಳ್ದಳವ್ವೆ 4212ಕುಳ್ಳಿರೆ ಕುಳ್ಳಿರೆ ಕುಳ್ಳಿರೆ ಕೊರವಂಜಿಫುಲ್ಲಬಾಣನಾನೆ ಕುಳ್ಳಿರೆಸೊಲ್ಲಮ್ಮ ಸೊಲ್ಲಮ್ಮ ಹಲವು ಮಾತಿನ ಜಾಣೆಎಲ್ಲ ಬಯಕೆಯನೆಲ್ಲ ಸೊಲ್ಲಮ್ಮ ಕೊರವಂಜಿ 43ಆದರದಾ ಮಾತ ಕೇಳುತ ಕುಳಿತಳುಯಾದವರರಸ ಮುಕುಂದನಕೋದಂಡಪಾಣಿ ತಿರುವೆಂಗಳ ಮೂರ್ತಿಯಪಾದಕೆ ಮಾಡಿದಳೊಂದನೆ ಕೊರವಂಜಿ 44ಮಣಿಮಯ ಬುಟ್ಟಿಯ ಎಡದಲಿಟ್ಟುಕೊಂಡುವನಿತೆ ಪದ್ಮಾಸನವಿಟ್ಟಳುಮಿನುಗುವ ಎಳೆನಗೆಯಣುಗನ್ನ ಮಲಗಿಸಿವನಿತೆ ರುಕ್ಮಿಣಿಯನ್ನು ಕರೆದಳು ಕೊರವಂಜಿ 45ಜಾಣೆ ಬಾರೆ ಸುಗುಜಾಣೆ ಬಾರೆ ನಾರಿಮಾಣಿಕಳೆಕಟ್ಟಾಣಿಬಾರೆವಾಣಿಪತಿಪಿತ ಪ್ರಸನ್ವೆಂಕಟ ಕೃಷ್ಣನರಾಣಿ ಬಾರೆಸುಪ್ಪಾಣಿಬಾರೆ ಕಲ್ಯಾಣಿ ಬಾರೆ ಫಣಿವೇಣಿ ಬಾರೆಶುಭಶ್ರೋಣಿ ಬಾರೆ ಎಂದು ಕರೆದಳು ಕೊರವಂಜಿ 4613ವಚನಅಮ್ಮ ರುಕ್ಮಿಣಿಯಮ್ಮ ಉಮ್ಮ್ಮಯವಟ್ಟುಮುಮ್ಮೊರದ ರತುನ ಮುತ್ತಿನ ಕಾಣಿಕಿಟ್ಟುಪರಬೊಮ್ಮಪ್ರಸನ್ವೆಂಕಟಕೃಷ್ಣನ ಅಡಿಗಳನಮ್ಮಿಸುತ ಮನೋರಥವÀ ಮನದಿ ಬೆಸಗೊಳ್ಳಲು 47ಉಂಡ ಊಟ ಕಂಡ ಕನಸು ಪುಂಡರೀಕಾಂಬಕಿಯೆತಂಡ ತಂಡದ ವಾರುತೆಗಳ ಪೇಳುವೆನು ಸಖಿಯೆಹಿಂಡುದೈವದಗಂಡಪ್ರಸನ್ವೆಂಕಟ ಕೃಷ್ಣನ ಕಣ್ಣಾರಕಂಡು ಸಾರುವಕೊರವಿಎಳ್ಳನಿತು ಸಟೆಯರಿಯೆ4815ಚೂರ್ಣಿಕೆಕಾಸಿನಾಸೆಯವಳು ನಾನಲ್ಲಭಾಷೆ ಹುಸಿದರೆ ಬಿರುದು ಬಿಸುಡುವೆನೆಲ್ಲಭಾಷೆ ಪಾಲಕರು ನಮ್ಮ ಸಿದ್ಧರೆಲ್ಲ ಲೇಸುಲೇಸೆಂದುಕೇಸಕ್ಕಿತಿಮ್ಮಯ್ಯನ ಬೆತ್ತವ ಮುಟ್ಟೆಲೆ ದುಂಡೆಎನ್ನ ಮನದ ದೈವ ಎನ್ನಕ್ಕ ಕೇಳೆಯವ್ವತಿರುಮಲೆ ತಿರುವೆಂಗಳಯ್ಯವರಅಹೋಬಲ ನರಸಿಂಗಯ್ಯಹರಿಕಂಚಿ ವರದರಾಜಯ್ಯಶಿರಿ ರಂಗದ ರಂಗರಾಯಯ್ಯಬದರಿಯ ನರನಾರಾಯಣಯ್ಯಪುಂಡರೀಕವರದ ಪಂಢರಿರಾಯ ಎಮ್ಮಉಡುಪ ಕುಲಜ ಮನ್ನಾರು ಕೃಷ್ಣಮ್ಮಒಡ್ಡಿಜಗನ್ನಾಥ ಅಲ್ಲಾಳನಾಥಯದುಗಿರಿನಾಥ ಶಿರಿಮುಷ್ಣನಾಥಕೃತಪುರದ ವೀರ ನಾರಾಯಣಕೊಲ್ಲಾಪುರದ ಕನ್ನೆ ವೇಲಾಪುರದ ಚೆನ್ನಅನಂತಶಯನ ಜನಾರ್ದನ್ನಅನವರತಪರಸನ್ನ ವೆಂಕಟ ಕೃಷ್ಣನ ಕನ್ನೆಇಂತಪ್ಪಾನೇಕ ದೈವ ಏಕವೆಂದು ಏಕಾನೇಕವೆಂದುನಂಬಿಪ್ಪೆನೆ ಕೇಳೆಯವ್ವ 4916ಇಂತಿಪ್ಪ ಎನ್ನ ಮನೆಯ ದೈವ ಅವರಂತವ ಬೊಮ್ಮರರಿಯರವ್ವ ವಿಶ್ರಾಂತಿಲಿ ಕೊಂಡಾಡುವೆನವ್ವ ನಾನುಕಂತುವಿನಣ್ಣನ ಮಗಳವ್ವ 50ಇಪ್ಪಲ್ಲಿಪ್ಪಕೊರವಿನಾನಲ್ಲ ಹೋಗಿಬಪ್ಪೆ ಹದಿನಾಲ್ಕು ಲೋಕಕೆಲ್ಲಛಪ್ಪನ್ನದೇಶಗಳ ಸುದ್ದೀನೆಲ್ಲಕೇಳಿಬಪ್ಪುವ ಕಜ್ಜವ ಕೃಷ್ಣ ಬಲ್ಲ 51ಆವಾವ ದೇಶದ ಸುದ್ದಿ ಕೇಳವ್ವ ನಿನ್ನಭಾವದ ಬಯಕೆಯನೆಲ್ಲ ಕೇಳವ್ವಶ್ರೀವರ ಪ್ರಸನ್ನವೆಂಕಟಾದ್ರಿ ಕೃಷ್ಣ ದ್ವಾರಕಿಂದಾವಾಗ ಬಪ್ಪನೆಂದು ಕೇಳವ್ವ 5217ಚೂರ್ಣಿಕೆಓಯಮ್ಮ ನಿನ್ನವರುಗಳು ಆ ಬಲಮಗು ಮದನಕಾಮಬುಡುಕ್ಕಾನೆ ಪರತಾನು ಚಿಂತಿಶೆ ಮಾಣಮ್ಮನಾ ತಿರುಕ್ಕಿ ವಂದ ದೇಶ ಐವತ್ತಾರು ಶೊಲ್ಲರೆಅಂಗ ವಂಗ ಕಳಿಂಗ ಕಾಂಬೋಜ ಭೋಟಕರ್ನಾಟಕ ಘೋಟ ಮಹಾಘೋಟಜಿನ್ನ ಮಹಾಜಿನ್ನ ಜೊನ್ನಗಕಾಶ್ಮೀರ ತುರುಷ್ಕಮಾಗಧಬಂಗಾಳ ಗೌಳ ಮಾಳವ ಮಲೆಯಾಳನೇಪಾಳ ಗೌಡ ಗುರ್ಜರ ಕೊಂಕಣದರ್ದುರಬರ್ಬರ ಸೌರಾಷ್ಟ್ರ ಮಹಾರಾಷ್ಟ್ರಸಂಬರ ಮುಂಗಿಳ ಘೋಟ ಮುಖಏಕಪಾದ ಸೌಳ ಸಂಸಾಳಕಆನರ್ತ ಹಮ್ಮೀರ ಕೊಮ್ಮೀರಮತ್ಸ್ಯಪಾಂಚಾಲರಾಜಶೇಖರ ವರಶೇಖರ ಯುಗಂಧರ ಮಧ್ಯದೇಶಲಂಬಕರ್ಣ ಸ್ತ್ರೀರಾಜ್ಯ ಆಂಧ್ರ ದ್ರವಿಡಅರವ ಕನ್ನಡ ತುಳುವ ತುಳಾಂಡಜಾಳೇಂದ್ರ ಕೈಕೇಯ ಕೌಸಲ ಕಂಚಿಕನೋಜ ಸವ್ವೀರಸಿಂಧುಕೇರಳವೈದರ್ಭ ದೇಶದೊಳ್ಕುಂಡಿನಾಪುರದೊಳ್ ನಿನ್ನಂ ಕಂಡುಮನದಂಡಲಿಕೆಗೆ ಸಾಗಿತ್ತೆನೆಲೆ ದುಂಡೆ 5318ಈ ನಾಡ ಚರಿಸಿ ನಿನ್ನರಸುತ ಬಂದೆನೆಜಾಣೆ ಬಂಗಾರವ್ವ ಕೈ ತೋರೆ 54ನಿನ್ನ ಕಾಣುತ ಹಸಿವೆ ನೀರಡಿಕೆಲ್ಲ ಹೋಯಿತುಜಾಣೆ ಬಂಗಾರವ್ವ ಕೈ ತೋರೆ 55ಸಂಧಾನಕ್ಹಾರುವನಟ್ಟಿದ್ದೆ ಮೊದಲಹುದೇನೆ ಮಂಗಳದೇವಿ ಕೈ ತೋರೆ 56ನೀ ಬರೆದೊಕ್ಕಣೆ ಯದುರಾಯನರಿತಾನುಸೌಭಾಗ್ಯವಂತೆ ಕೈ ತೋರೆ 57ರಥವನೇರಿಕೊಂಡು ಬರಹ ನೋಡಿಕೊಳ್ವಜಾಣೆ ಬಂಗಾರವ್ವ ಕೈ ತೋರೆ 58ಧ್ಯಾನದ ಕಳವಳ ಮುಸುಡುಗಂಟಿನ ಚಿಂತೆಮಾಣು ಮಂಗಳದೇವಿ ಕೈತೋರೆ 59ತ್ರಿಭುವನೇಶ ಪ್ರಸನ್ನವೆಂಕಟ ಕೃಷ್ಣತಾ ಬಹನೆಲೆ ದುಂಡಿ ಕೈ ತೋರೆ 6019ಚೂರ್ಣಿಕೆಎಲೆಲೆ ಎಳೆವೆಂಗಳೆ ಎಲೆ ಹುಲ್ಲೆಗಂಗಳೆಮಹಾಭೂಷಣದ ಮಾರುವೇಣಿ ಮಡದಿಯರಸುಪ್ಪಾಣಿಕೀರವಾಣಿ ಕಿಸಲಯಪಾಣಿಕಂಧಿಜ ಬಿಂಬವದನೆ ಕುಲಿಶಮಣಿರದನೆಮದನಕಾರ್ಮುಕೋಪಮ ಭ್ರೂಲತೆಯಳೆ ಮಹಾಲಕುಮಿಯಳೆಅರುಣವಿಧ್ರುಮಾಧರೆ ಅಬ್ಜಜಾ ಕಂಧರೆಅರ್ಧಚಂದ್ರನ ಪೋಲ್ವಡಿ ಪಣೆಯಳೆ ಅನಘ್ರ್ಯ ಚೂಡಾಮಣಿಯಳೆಸಿಂಧೂರಸೀಮಂತಿನಿಯೆಸಿರಿತಿಲಕದ ಶೋಭಿನಿಯೆನುಣ್ಗದಪುನಾಸಿಕಮಣಿಯಳೆ ನೂತನೊಜ್ರದೋಲೆಯಳೆನಿಷ್ಕ ಕಂಠಾಭರಣೆಯಳೆ ನಿತ್ಯಮಂಗಳ ಸೂತ್ರಿಯಳೆನಿಡುಜಾಲಕ ಮಾಲೆಯಳೆಬುಗುಡಿ ಚಳತುಂಬು ಕೊಪ್ಪಿನ ಕಿವಿಯಳೆಬಾವಲಿ ನಾಗೋತ್ರ ಪೊಂಬರಳೆಲೆ ಲಲಿತ ಬಾಹುಲತೆಯಳೆಲಸತ್ವನಜಕೋರಕ ಸ್ತನಿಯಳೆಕಡು ತೆಳ್ವೋದರಿ ನಿಮ್ನ ನಾಭಿಯಳೆಕಂಠೀರವಕಟಿಯಳೆ ಕರಭೋರು ಯುಗಳೆಯಳೆಅಪರಂಜಿಕಂಚುಕಾಂಬರ ಉತ್ತರೀಯಳೆಅಮೂಲ್ಯ ಕಾಂಚಿದಾಮಾಂಕಿತಳೆಬಟುಗನ್ನಡಿ ಜಾನುದ್ವಯಳೆ ಬ್ಞಣ ಪಂಚಕನ ಬತ್ತಳಿಕೆ ಜಂಘೆಯಳೆಕೋಮಲತರಾಂಘ್ರಿ ಸರಸಿಜಯುಗಳೆನೀಲಪಚ್ಚ ಪದ್ಮರಾಗ ಹೀರ ಮುತ್ತಿನ ಪೆಂಡೆಯಳೆಕಾಲಂದಿಗೆ ಮೆಂಟಿಕೆ ವೀರಮುದ್ರೆ ಕಿರಿ ಪಿಲ್ಲಿಯಳೆಮಣಿಮಯಾಂಗುಲ್ಯದ ವಲಯಾಭರಣೆ ಮದಗಜಗಮನೆಪ್ರತಿಯಿಲ್ಲದ ರನ್ನದ ಬೊಂಬೆ ಪರಬೊಮ್ಮನ ಪಟ್ಟದ ರಂಭೆಬಾಬಾ ತಾತಾ ಎಂದು ವಾಮಕರವಬೇಡಲಿತ್ತಳಾ ರುಕ್ಮಿಣಿ ತಾಯಿ 6120ಜಗದ ನಾರಿಯರ ಕೈಗಳ ಕಂಡೆನವ್ವಮೃಗಮದಗಂಧಿ ನಿನ್ಹೋಲ್ವರಿಲ್ಲವ್ವ 62ಯುಗಯುಗಾಂತರ ದೇಶ ದೇಶದಲ್ಲವ್ವಅಗಲ್ಯಾಟವಿಲ್ಲ ನಿನ್ನರಸ ನಿನಗವ್ವ 63ಸವತೇರು ಬಹಳುಂಟು ನೆಂಟರ ಜಾಣೆ ಎಲೆ ಬೀಗರ ಸುಗುಣೆಯುವತಿ ಪ್ರಸನ್ವೆಂಕಟ ಕೃಷ್ಣ ನಿನ್ನ ಪ್ರಾಣ 6421ಕಣಿ ಕೇಳೆ ಕಣಿ ಕೇಳೆ ಕಣಿ ಕೇಳೆ ಚೆಲ್ವೆಕಣಿ ಕೇಳೆ ನಿನ್ನ ಮನದಾ ಮಾತ್ಹೇಳ್ವೆಎಣಿಕೆಗೊಳ್ಳದಿರಮ್ಮಇಂದುನಾಳೆಂದುಗುಣನಿಧಿ ಗೋಪಾಲ ಬಹ ದಯಾಸಿಂಧು 65ತ್ರುಟಿಯುಗವಾಗಿದೆ ನಿನಗೀಗ ಮುಗ್ಧೆಕುಟಿಲಮಾಗಧಸಾಲ್ವ ನೆನೆವ ದುರ್ಬುದ್ಧೆಘಟಿಸದೆಂದಿಗೆ ಖಳರ ಮನೋರಥ ಸಿದ್ಧೆದಿಟವೆನ್ನವಾಕುಸುರಲೋಕ ಪ್ರಸಿದ್ಧೆ66ಹಿಂದೊಮ್ಮೆ ಖಳರು ಗೋವಿಂದ ಬಂದಾಗಮಂದಮತಿಯಲಿ ಮನ್ನಿಸದಿರಲಾಗಇಂದ್ರ ಸಿಂಹಾಸನವ ಹರಿಗೆ ಕಳುಹಿಸಿದವೃಂದ ದೈತ್ಯರಿಗೆಲ್ಲ ಭಯವ ಸೂಚಿಸಿದ 67ಜಂಭಾರಿಕುಲಿಶಕಂಜುತ ಪೋಕರೆಲ್ಲಥಂಬಿಸಿದರು ವಾಗಾಡಂಬರವೆಲ್ಲಅಂಬುಜಾಕ್ಷಗೆ ನಿನ್ನತಾತಪೂಜಿಸಿದಅಂಬುಜನಾಭ ತನ್ನೊಳುವಿಶ್ವತೋರ್ದ68ಅದನೆಲ್ಲ ಬಲ್ಲ್ಯವ್ವ ಹರಿಯ ನಿಜನಲ್ಲೆಬೆದರಿದೊಲ್ಲೋರ್ವ ನಿನ್ನ ಮಾಯವ ಬಲ್ಲೆಪದುಮಜ ಭವರ ಹೃದಯಾಬ್ಜ ನಿಯಂತ್ರೆಉದಧೀಶನಾಜÕದಿ ಸರ್ವಸ್ವತಂತ್ರೆ 69ಕೇಳಮ್ಮ ನಿನ್ನ ಹೆತ್ತವರಿಗೆ ನಿನ್ನಮೇಲೆ ಹಂಬಲ ಬಹಳ ಪಾಪಿ ನಿಮ್ಮಣ್ಣಆಲೋಚನೆಯಿಲ್ಲದೆ ನಿಶ್ಚೈಸಿದ್ದಾನೆ ಶಿಶುಪಾಲಗೆ ನಿನ್ನ ಕೊಡುತೇನಂತೈದಾನೆ 70ಆಗಲ್ಯಾಕವನಿಂದಲೀಕಜ್ಜ ಬುರ್ರಾಬೇಗ ಭೀಷ್ಮಕನಂತರ ಬಲ್ಲ ಶ್ರೀಧರ್ರಾಸಾಗರಶಯನ ತಾ ಸಮಯಕೈತರುವನೇಗಿಲಧರನು ಕೃಷ್ಣನ ಕೂಡ ಬರುವ 71ಆ ಗೌರಿ ಮೌನಿಯೆಂಬುವಳ ಪೂಜೆಯಲಿಯೋಗವಾಗಿದ್ರ್ದಾ ಕಾಪುರುಷ ಸಭೆಯಲ್ಲಿಮೇಘಮುಸುಕಿರ್ದ ಚಂದಿರನಂತೆ ನಿನ್ನಯೋಗೇಶ ಪ್ರಸನ್ವೆಂಕಟ ಕೃಷ್ಣ ನೊಯ್ವ ಚೆನ್ನ 7222ಇನಿತೆಲ್ಲ ಕೊರವಂಜಿಕರವಪಿಡಿದು ಹೇಳಿಕ್ಷಣ ಕ್ಷಣಕೊಡೆಯನ ಹೊಗಳಿನೆನಪಿಗೆ ಬೆಸಗೊಂಬೆ ಕಾಲಜ್ಞಾನದ ವಾರ್ತೆಎನಗೆ ತಿಮ್ಮಯ್ಯ ಹೇಳೆಂದು 73ಶ್ರೀ ರುಕ್ಮಿಣಿಯ ಮನದುಲ್ಲಾಸವನೆಲ್ಲಪೂರೈಸುವೆನೆಂಬ ನುಡಿಯತೋರು ಎನ್ನಯ ನಾಲಿಗೆಯಿಂದಲುಸುರುವೆವೀರ ದ್ರಾವಿಡ ವೆಂಕಟಯ್ಯ 74ಶರಣ್ಯೆಲೆ ಸತ್ಯನೆ ಶರಣ್ಯೆಲೆ ನಿತ್ಯನೆಶರಣು ಶರಣು ನಿತ್ಯಮುಕ್ತಶರಣು ಪರೇಶನೆ ಶರಣು ಅವಿನಾಶನೆಶರಣು ಪ್ರಸನ್ವೆಂಕಟ ಕೃಷ್ಣ 7523ವಚನಓ ರುಕ್ಮಿಣಿ ತಾಯಾರೆಉನ್ನ ಮನಸಿಲೆ ನಿನೈಚ್ಚ ಕಾರ್ಯಂ ಕೈಕ್ಕೂಡಿನಾಲ್ಎನಕ್ಕೆ ಎನ್ನ ಸಂತೋಷಂ ಪಣ್ಣಿರಾಯ್ಓಯಮ್ಮ ಉನ್ ಪ್ರಾಣನಾಯಗನ್ ಶ್ರೀಕೃಷ್ಣನ್ ವಂದುಪೊಟ್ಟಣೆ ಕೈ ಪಿಡಿಚ್ಚಿ ಕಲ್ಯಾಣಂ ಪಣ್ಣಿಕೊಳ್ಳರಾಂಇಂದ ವಾರ್ತೆ ತಪ್ಪಿನಾಲ್ ನಾಂ ಕೊರ್ತಿಯೇ ಅಲ್ಲೆಉನ್ ತಮಯನ್ ರುಗ್ಮಂ ವೇಕ್ಕತ್ತೆ ಕೊಲ್ಲರಂ ವರಾನುಓಯಮ್ಮ ಇಂದ ವಾರ್ತೆಯೈ ಪಣ್ಣಿಕೋ ಅª, À್ಮು 7624ಮದ್ಯಪಾನಿತಾಮಸಯವನನ ಕೊಲಿಸಿದನೆನಿದ್ರೆಗೈವ ರಾಯನಿಂದಲಿಸದ್ದಿಲ್ಲದೆ ಮಧುರೆ ಜನರ ಸಾಗರದಮಧ್ಯ ದ್ವಾರಕೆಯಲ್ಲಿಟ್ಟನೆ 77ಯವನ ಸೈನ್ಯಜಲಧಿಬತ್ತಿಸಿ ಸಾಲ್ವಾದ್ಯರಹವಣಮುರಿದು ನಿಜರ ಹೊರೆವನು ನಿನ್ನವಿವಹ ಮಾಳ್ಪೆನೆಂಬ ಮಾಗಧನು ಚೈದ್ಯ ತನ್ನಕುವರನೆಂದು ಮಾನವಿಡಿದಿಹ 78ಇನಿತರೊಳು ರಂಗರಾಯನು ಮೋಹರದಿಮಣಿರಥವನೇರಿ ಬಹನುವನಿತೆ ನಿನ್ನಂದಣವ ನೋಡುತ ಜಿಗಿವನಲ್ಲಿಂದ ಘನತರ ಮೃಗೇಂದ್ರನಂದದಿ 79ನರಿಯ ಹಿಂಡಿನೊಳಗಿನಾನೆಯ ಒಯ್ವ ತೆರದಿಹರಿನಿನ್ನಪ್ಪಿಕೊಂಡುಹಾರುವಗರುಡನಮೃತ ಕಲಶವ ಸುರರ ಗೆದ್ದುಹರುಷದಿಂದೊಯ್ಯುವಂತೆ ಒಯ್ವನು 80ಸರಸಿಯಾಬ್ಜ ಹಂಸ ಒಯ್ವವೋಲ್ ಪರಮಪುರುಷತ್ವ, ರಿಯ ತನ್ನ ರಥಕೆ ಒಯ್ವನೆಬರಿಯ ದುಗುಡವ್ಯಾಕೆ ಬಾಲಕಿಪ್ರಸನ್ವೆಂಕಟ ಕೃಷ್ಣ ನಿನ್ನ ಮೆಚ್ಚುಗಾರನೆ 81ಬಂದನೆಂಬ ನುಡಿಯು ಬರುತಿದೆಜವದಿಕೃಷ್ಣಬಹನೆಂಬ ನುಡಿಯು ಬರುತಿದೆ 8225ಚೂರ್ಣಿಕೆನೀಡೆಯವ್ವ ಎನ್ನ ಮನೆ ಗಂಡನ ಕಾಟ ಘನ್ನವವ್ವಕ್ಷಣಕೈದು ನಡೆಯವನವ್ವಒಮ್ಮಾನ ತಿರಿತಂದರೆ ಇಮ್ಮಾನ ಬೇಡುವನವ್ವಚೆಂಬಣ್ಣ ಕರಿಬಿಳಿಯಬಟ್ಟೆನಮ್ಮತ್ತೆಗಳವ್ವಆರು ಮಂದಿ ಗಂಡನ ಗೆಳೆಯರವ್ವಏಳು ಪದರು ಮೂರು ತ್ಯಾಪೆ ಗುಡಲುಂಟವ್ವಎಪ್ಪತ್ತೆರಡು ಸಾವಿರ ನುಲಿಯ ಸಿಂಬಿಗಳವ್ವಗುಡಲೊಳು ಮೂರು ಒಲೆಯುಂಟವ್ವಗುಡಲು ಬಿದ್ದರೆ ನುಲಿಗೆ ಮಾರ್ಯೆವ್ವಒಂಬತ್ತು ಗುದ್ದಿನೊಳಗೆ ಹತ್ತು ಹೆಗ್ಗಣದೋಡ್ಯಾಟವವ್ವಕೊರವನ ಕೈಯಿಚ್ಛೆ ಮೂರು ನಾಯಿಗಳವ್ವಎಣಿಕಿಲ್ಲದ ಕುತ್ತಗಳುಂಟವ್ವಕೊಬ್ಬಿನ ಸವತೇರೆಂಟು ಮಂದಿ ಕೊರವಗೆ ಮಚ್ಚೂಡುವರವ್ವಸಂಸಾರದಲೆಳ್ಳನಿತು ಸುಖವಿಲ್ಲವ್ವಅತ್ತೆಗಳಾಟ ಗಂಡನ ಬ್ಯಾಟ ಸವತಿಯರ ಕಾಟನೆರೆಹೊರೆಯವರ ನೋಟ ಮನೆಯ ಮಾಟಗತರಸದೂಟಕಂಜಿ ನಡುನಡುಗಿಮೂರೂರ ಹಾದಿ ಮೆಟ್ಟಿ ಬಂದುಆರೂರರಸಿನ ಮೊರೆ ಹೊಕ್ಕೆನೆಯವ್ವವಿದರ್ಭದೇಶದ ಕುಂಡಿನಾಪುರದೊಳು ನಿನ್ನ ಗುರುತಕೇಳಿಉಪವನದ ಪ್ರದ್ಯೋತನಾಳ್ವ ಎರಡು ಬಾವಿಯ ಮ್ಯಾಗಣಹೂವಿನ ತೋಟದ ನಡುವೆ ಬುತ್ತಿಯನುಂಡು ನಿನ್ನ ಕಂಡುಕುಂತಳಾಪುರದಲ್ಲಿ ಕುಳಿತುಂಬಬ್ರಹ್ಮಾನಂದದವರ ಭಾಗ್ಯವ ಬೇಡ ಬಂದೆನೆ ಅವ್ವಅಸುವಿಗೆ ಹಾಲನೆರೆಯವ್ವಶಿಶುವಿಗೆನವನೀತನೀಡೆಯವ್ವಬಂಗಾರೆವ್ವ ಸಿಂಗಾರೆವ್ವ ಸೋರ್ಮುಡಿಯವ್ವಮಲ್ಲಿಗೆದುರುಬು ಸಂಪಿಗೆದುರುಬುಪಚ್ಚೆ ಮರುಗ ಮುಡಿವಾಳ ಶಾವಂತಿಗೆ ತುರಬಿನವ್ವಪ್ರಸನ್ವೆಂಕಟಕೃಷ್ಣನ ತೋಳ್ತಲೆಗಿಂಬಿನವ್ವ ನೀಡೆಯವ್ವ 8326ವಚನಇಂತಾಧ್ಯಾತ್ಮವಂ ಪೇಳಿಕಂತುವಿನಯ್ಯನ ಕಾಂತೆಯಂ ಸಂತಸಪಡಿಸಿಅಂತರಂಗದಿ ಚಿಂತಾಯಕನಂ ನೆನೆನೆನೆದುಭ್ರಾಂತಿ ಪರವಶಾದಂತೆ ಕೆಂಜೆಡೆಯಂ ತೂಗಿ ತೂಗಿಅಂತದತ್ಯಂತ ತೂಳಂತುಂಬಿಇಂತೆಂದಳಾ ಕೊರವಂಜಿ 8427ಬರುತಾನೆ ಜಾಣೆ ಬರುತಾನೆಬರುತಾನೆ ಚೆಲ್ವೆ ಬರುತಾನೆ 85ಹಿಂಡುಭಂಡರೆಲ್ಲ ಕೂಡಿ ನಿನ್ನ ಮುಚ್ಚಲು ಎತ್ತಿಕೊಂಡು ಒಯ್ವ ಜಾಣ ಬರುತಾನೆಪುಂಡರೀಕಸುರಗಿ ಖಡ್ಗ ಭಿಂಡಿವಾಲ ನುಗ್ಗುಮಾಡಿದಂಡಿಸುವ ಜಾಣ ಬರುತಾನೆ 86ಕುಂಡಿನಾಪುರದಿ ನೆರೆದ ಕೊಂಡಿ ಕುಹಕರ ತಲೆಯಚಂಡನಾಡ್ವ ಜಾಣ ಬರುತಾನೆಮಂಡೆಯಲ್ಲಿ ಪಚ್ಚಚೂಡವಿಟ್ಟು ರುಕ್ಮನಭಿಮಾನಕೊಂಡೇನೆಂಬ ಜಾಣ ಬರುತಾನೆ 87ತಂಡ ತಂಡದಲ್ಲಿ ನಿನ್ನಯ್ಯನ ಸದ್ವಾಸನನ್ನಉಂಡೇನೆಂಬ ಜಾಣ ಬರುತಾನೆಲೆಂಡದಾನವಾರಿ ಪ್ರಸನ್ನವೆಂಕಟಕೃಷ್ಣ ಬೊಮ್ಮಾಂಡಪತಿ ಜಾಣ ಬರುತಾನೆ 8828ಚೆನ್ನೆ ಕೊರವಂಜಿ ಮಾತು ಶ್ರೀಕನ್ಯೆಕೇಳಿನಲಿವಾಂತುಮನ್ನಿಸಿ ಗುಣವ ಕೊಂಡಾಡಿ ಮುಕ್ತಿರನ್ನಗಾಣಿಕೆಯನು ನೀಡಿ 89ಎಲೆ ಸತ್ಯಲೋಕದ ಕೊರವೆ ನೀಬಲು ಸತ್ಯ ನುಡಿದೆ ನಾನರಿವೆಛಲದಂಕ ದೇವರದೇವ ಈಖಳರೊಳು ಒಯ್ವುದರಿದವ್ವ 90ಹರಿರಥವೇರಿ ಬಾಹೋಣ ಕಾಪುರುಷರ ಮತ ಕೆಡಿಸೋಣಗುರುಪ್ರಸನ್ವೆಂಕಟ ಕೃಷ್ಣ ಬಂದುಹೊರೆವುದುಂಟೇನವ್ವ ರಮಣಿ 9129ನಂಬಲೇನೆ ನಿನ್ನ ಮಾತು ಕೆಳದಿ ಕೊರವಮ್ಮ ನಮ್ಮಂಬುಜಾಕ್ಷ ಬಾಹನೇನೆ ದೇವಿ ಕೊರವಮ್ಮ 92ಉಡಿಯ ಕಂದನಾಣೆ ಇಡುವೆ ನಂಬೆ ರುಕ್ಮಿಣಿ ನಾನುಡಿವ ನಾಮದಾಣೆ ಇಡುವೆ ನಂಬು ರುಕ್ಮಿಣಿ 93ಎಡದ ತೋಳು ತೊಡೆಕಂಗಳುಹಾರಲೊಳಿತೇನೆ ಚಿಲಿಪಿಲಿನುಡಿವಶಕುನಎಡದ ಗೌಳಿಯ ನುಡಿಯು ಒಳಿತೇನೆ94ಕಡಲಶಯನ ನಿನ್ನ ಪ್ರಾಣದೊಡೆಯ ಬಪ್ಪನೌ ಎನ್ನಪಡೆದನಯ್ಯ ಪ್ರಸನ್ನವೆಂಕಟಕೃಷ್ಣ ತಪ್ಪನೌ 9530ನಿನ್ನಗಂಡಬೆಣ್ಣೆಗಳ್ಳ ಕನ್ನೆಗೊಲ್ಲತಿಯರ ನಲ್ಲಕಣ್ಣೆವೆ ಸನ್ನೆಗಾರ ನಂದಗೋಪ ಕುಮಾರ 96ಚಿನ್ನತನದಿ ದಶಲಕ್ಷ ಚಿನ್ನರ ಪಡೆದನು ದಕ್ಷಪೊನ್ನ ಕೊಳಲನೂದಿ ಮೂಜಗವ ಮೋಹಿಸುವ 97ಉನ್ಮತ್ತಮಾತುಳನ್ನ ತುಳಿದ ತನ್ನ ಪೆತ್ತವರೆಡರ್ಗಳೆದಮನ್ನಿಸಿ ಪಾಂಡವರÀ ಪೊರೆದ ಚಿನ್ಮಯ ಸುಖದ 98ಪೆಣ್ಗಳ್ ಹದಿನಾರುಸಾವಿರದ ನೂರೆಂಟನಾಳ್ವ ಚದುರನಿನ್ನ ಪ್ರಾಣ ಪ್ರಿಯ ಬಂದ ಪ್ರಸನ್ನವೆಂಕಟ ಕೃಷ್ಣ ಮುಕುಂದ 9931ನುಡಿ ನುಡಿಯೆಲೆ ಬಡನಡುವಿನ ಮಡದಿ ನಿನ್ನುಡಿಗುಚಿತವಕೊಡುವೆನಡಿವಿಡಿವೆ ಮನವಿಡುವನೆ ಕಡಲೊಡೆಯ ಕೈವಿಡಿವನೆ ಎನ್ನ ಕಡೆಯ ನೋಡಿ ನುಡಿವನೆ ಸವಿನುಡಿಯಕಡು ಬಲಿಭುಜ ಗಡಣಂಗಳ ನಡುವ್ಹಂಸನಪಡಿಮಿಡುಕುವೆನುಡಿ ಬೇಗೆಂದು ಪಡೆಗೂಡಿ ಹಲಿಯೊಡನಾಗಮ ನುಡಿಯೇ ನಿನ್ನುಡಿಗಮೃತವ ಪಡೆಯೇ ಮತ್ತೀಜಡಜಡಿ ಲೋಕೊಡೆಯೆ ಪ್ರಸನ್ನವೆಂಕಟ ಕೃಷ್ಣರಾಯನನುಡಿಯೆಲೆ ನುಡಿನುಡಿಯೆ ನುಡಿನುಡಿಯೆ 10032ಹರಿಬರುತಾನೆ ಗುರುತು ಗಂಟ ಕಟ್ಟೆಪಕೇಳೆ ನರಸಿಂಗನಂಗನೆಯನೊಯಿದು ಕೆಟ್ಟನರಿಗಳಾಳಬಲ್ಲವೇನೆ ನಲಿದು ನೀನುದುರುಳರಿಗೆ ದಕ್ಕಬಲ್ಲ್ಯೇನಮ್ಮ ನಿನ್ನಾಚರಣೆಯೆಲ್ಲ ಜಗದ್ವಿಡಂಬನಮ್ಮ 101ನನ್ನ ತರಳನಾಣೆ ಸಟೆಯನಾಡೆನಮ್ಮ ನಾನೊರೆದವಾಕುಸಾಕ್ಷಿ ಬರುತಾವಮ್ಮ ಮ್ಯಾಲರಕೆಯುಳ್ಳ ತಾಯಿಯಾದರೆ ನೀ ನನ್ನಕರೆಸಿ ಕೇಳೆ ನಿನ್ನ ಮನೆಗೆ ಜಾಣೆ 102ನಿನ್ನ ಹೆಸರ ತಕ್ಕ ಊಟವ ನೀಡೀಗ ನಾಹಸಿದೆನೆಂದು ಉಂಡುಕೊರವಿಬೇಗಪ್ರಸನ್ನವೆಂಕಟ ಕೃಷ್ಣನ ರಾಣಿಗೆÉ ಹಾರೈಸಿದಳು ಬಸುರು ಬುಡುಕೆಂದು 10333ಚಕ್ಕನೆ ನಿಂತಳು ಕೊರವ್ಯಮ್ಮ ಕಂಡುಫಕ್ಕನೆ ನಿಂತಳು ರುಕ್ಮಿಣಮ್ಮ ಪ್ರಾಣದಕ್ಕರ ಬಿಡಲಾರೆ ನಿನ್ನ ಗೆಳತಿ ಪ್ರೇಮಉಕ್ಕುತಿದೆ ನೀ ಹೋಗುವುದೊಳಿತೆ ಎನಲು ನಕ್ಕು 104ಶ್ರೀ ಗೋಪಾಲ ಬಾಹನಕ ನಿಲ್ಲೆ ವಿಯೋಗ ತಾಳಲಾರೆ ನೀ ಬಲ್ಲೆಹೀಗೆನೆÀ್ನ ಬೇಡಿಕೊಂಡಳು ಮರುಳೆ ನೆನೆದಾಗೆ ಬಹೆನೆಂದ್ಹೇಳಿ ತೆರಳೆ ಅನುರಾಗದಿಂದ 105ಆವ ಪರಿಂದಾರೆ ಹರಿಸೇವೆ ಮಾಡಿದೇವಋಷಿ ನಿಜಾನಂದ ತೀವಿಶ್ರೀವರ ಪ್ರಸನ್ವೆಂಕಟ ಕೃಷ್ಣನ ಮಹತೇವಿಡಿದು ಹೊಗಳುತ ಮುನಿರನ್ನ ರಾಮೆಯಾಜÕದಿ 10634ಸುರಋಷಿಪೇಳ್ದ ಒಕ್ಕಣೆಯಹರುಷದಿ ಕೇಳ್ದ ರುಕ್ಮಿಣಿಯಅರಸ ಪ್ರಸನ್ನವೆಂಕಟ ಕೃಷ್ಣನಿರುತದಿ ಜಯ ನಮಗೀವ 107ಜಯ ಜಯ ಚಿನ್ಮಯಮೂರ್ತಿಜಯ ಜಗನ್ಮಯ ಸ್ವಚ್ಛಕೀರ್ತಿಜಯ ಜಯ ಪ್ರಸನ್ವೆಂಕಟ ಕೃಷ್ಣಜಯಮೂರ್ತಿನಿನಗೆ ಶರಣು108
--------------
ಪ್ರಸನ್ನವೆಂಕಟದಾಸರು
ನಾರಾಯಣ ನಿನ್ನ ನಾಮದ ಸ್ಮರಣೆಯ |ಸಾರಮೃತವೆನ್ನ ನಾಲಗೆಗೆ ಬರಲಿ ಪಕೂಡುವಾಗಲು ನಿಂತಾಡುವಾಗಲು ಮತ್ತೆ |ಹಾಡುವಾಗಲು ಹರಿದಾಡುವಾಗ ||ಖೋಡಿವಿನೋದದಿ ನೋಡದೆ ನಾ ಬಲು |ಮಾಡಿದ ಪಾಪ ಬಿಟ್ಟೋಡಿ ಹೋಗುವ ಹಾಗೆ 1ಊರಿಗೆ ಹೋಗಲಿ ಊರೊಳಗಿರಲಿ-|ಕಾರಾಣಾರ್ಥಗಳೆಲ್ಲ ಕಾದಿರಲಿ ||ವಾರಿಜನಾಭನರಸಾರಥಿಸನ್ನುತ|ಸಾರಿಸಾರಿಗೆ ನಾ ಬೇಸರಿಸದ ಹಾಗೆ 2ಹಸಿವು ಇದ್ದಾಗಲಿ ಹಸಿವಿಲ್ಲದಾಗಲಿ |ರಸ-ಕಸವಿರಲಿ ಹರುಷವಿರಲಿ ||ವಸುದೇವಾತ್ಮಜ ಶಿಶುಪಾಲಕ್ಷಯ ||ಅಸುರಾಂತಕ ನಿನ್ನ ಹೆಸರು ಮರೆಯದಂತೆ 3ಕಷ್ಟದಲ್ಲಿರಲಿ ಉತ್ಕøಷ್ಟದಲ್ಲಿರಲಿ-|ಎಷ್ಟಾದರು ಮತಿಗೆಟ್ಟಿರಲಿ ||ಕೃಷ್ಣ ಕೃಷ್ಣ ಎಂದು ಶಿಷ್ಟರು ಪೇಳುವ |ಅಷ್ಟಾಕ್ಷರ ಮಹಾಮಂತ್ರದ ನಾಮದ 4ಕನಸಿನೊಳಾಗಲಿ ಕಳವಳಿಕಾಗಲಿ |ಮನಸುಗೊಟ್ಟಿರಲಿ ಮುನಿದಿರಲಿ ||ಜನಕಜಾಪತಿ ನಿನ್ನ ಚರಣಕಮಲವನು |ಮನಸಿನೊಳಗೆ ಒಮ್ಮೆ ನೆನೆಸಿಕೊಳ್ಳುವ ಹಾಗೆ 5ಜ್ವರ ಬಂದಾಗಲು ಚಳಿ ಬಂದಾಗಲು |ಮರಳಿ ಮರಳಿ ಮತ್ತೆ ನಡೆವಾಗಲು ||ಹರಿನಾರಾಯಣದುರಿತನಿವಾರಣ |ಇರುಳು ಹಗಲು ನಿನ್ನ ಸ್ಮರಣೆ ಮರೆಯದಂತೆ 6ಸಂತತಹರಿನಿನ್ನ ಸಾಸಿರನಾಮವ |ಅಂತರಂಗದಾ ಒಳಗಿರಿಸಿ ||ಎಂತೋ ಪುರಂದರವಿಠಲರಾಯನೆ |ಅಂತ್ಯಕಾಲದಲಿ ಚಿಂತಿಸುವಂತೆ 7
--------------
ಪುರಂದರದಾಸರು
ನಾರಾಯಣನೆಂಬ ನಾಮವ ನೇಮದಿ ನೆನೆಯುತಿರೆಚ್ಚರಿಕೆ |ನೀರ ಮೇಲಿನ ಗುಳ್ಳೆ ನಡೆಯೆಂಬ ಡಿಂಭವ ನಂಬದಿರೆಚ್ಚರಿಕೆ ಪ.ಪರರು ಮಾಡಿದ ಪಾತಕವ ನಾಲಿಗೆಯೊಳುಚ್ಚರಿಸದಿರೆಚ್ಚರಿಕೆಗುರು ಹಿರಿಯರ ಸೇವೆ ಮಾಡದೆ ಉದರವ ಪೊರೆಯದಿರೆಚ್ಚರಿಕೆ ||ಹರಿದಿನದುಪವಾಸ ಇರುಳ ಜಾಗರವ ನೀ ಮರೆಯದಿರೆಚ್ಚರಿಕೆನರಹರಿಯಂಘ್ರಿಯ ಸ್ಮರಿಸದೆ ನರಸ್ತುತಿ ತರವಲ್ಲ ಎಚ್ಚರಿಕೆ 1ಹೀನ ಮಾನನಿಯರ ಧ್ಯಾನಕಾನನದೊಳಿಳಿಯದಿರೆಚ್ಚರಿಕೆನಾನೆಂಬ ಅಹಂಕಾರ ಮಾಡಿ ನರಕದೊಳು ನರಳದಿರೆಚ್ಚರಿಕೆ ||ಜಾಹ್ನವಿ ಸ್ನಾನಸಂಧ್ಯಾನ ಧಾನ್ಯವ ಸುಜಾÕನ ಮುಂದೆ ಜ್ಞಾಚ್ಚರಿಕೆಜಾನಕಿರಮಣನ ಧ್ಯಾನವೆ ಧರ್ಮ ಸಂತಾನ ಮುಂದೆಚ್ಚರಿಕೆ 2ಮಡದಿ ಮಕ್ಕಳೆಂಬ ಕಡುಮೋಹಕೆ ಸಿಲುಕಿ ಕೆಡಬೇಡವೆಚ್ಚರಿಕೆನಡೆವಾಗ ನುಡಿವಾಗ ಗಿಡವೆಲ್ಲ ನೆಂಟರು ಕಡೆಗಿಲ್ಲ ಎಚ್ಚರಿಕೆ ||ಕೊಡುಗೈಯ ಮಾಡದೆ ಮಡುಗಿದ ಧನ ಸಂಗಡ ಬಾರದೆಚ್ಚರಿಕೆ |ಒಡೆಯ ಶ್ರೀ ಪುರಂದರವಿಠಲನ ನೆನೆದು ನೀ ಕಡೆ
--------------
ಪುರಂದರದಾಸರು
ನಾರಾಯಣಯೆಂದರಾಗದೇ ನಿನ್ನಘೋರದುರಿತದೂರ ಹೋಗದೇವಾರಿಜನಾಭನ ವಲಿಸದೇನರಶಾರೀರದಲಿ ಬಂದು ಫಲವೇನಿದೆ1ಸಾರಷಡ್ರಸಾನ್ನ ಭುಜಿಸುತ್ತಪರದಾರಾಂಶದಲಿ ಮನವಿರಿಸುತ್ತಾಕ್ರೂರಕೃತ್ಯವನಿತ್ಯಗೈಯ್ಯುತ್ತ ಯಮ-ನೂರಿಗೆ ಪೋಗುವದೇನು ಹಿತ2ನಡೆವಾಗ ನುಡಿವಾಗ ಕುಡಿವಾಗ ವೀಳ್ಯಮಡಿವಾಗ ಕೊಡುವಾಗ ಪಡೆವಾಗ ಜಲಜನಾಭನಎಡಬಿಡದೀಗಾ ನೆನೆಕಡೆಗೆ ನಾಲಿಗೆ ಬಿದ್ದು ನುಡಿಯಲಾಗಾ3<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಈಶಣತ್ರಯದಲಿ ಸಿಲುಕುತ್ತಾ ಒಂದುನಶಿಸೆ ತಾಡಕಕೃತಿಗೈಯುತ್ತಾಎಸೆವ ಮೂರು ವೈರಾಗ್ಯ ತಾಳುತ್ತಾ ಸುತ್ತುಈಶ ತ್ರಿಮೂರ್ತಿ4ಜನಿಸುತ್ತಲೇನ ತಂದಿರುವೆಯೋ ನಾಳೆತನುವನೀ ..... ಲೇನನೊಯ್ವೆನೊತನುಮಧ್ಯ ಭಾಗ್ಯದಿ ಮೆರೆವೆಯೋ ನಿನ್ನಜನುಮದ ನೆಲೆಯ ನೀನರಿವೆಯೊ5ಇಂದುಸುಕರ್ಮ ಮಾಡದೆ ನೀನು ನಾಳೆಎಂದರೆ ತನುವಿಗೆ ನಿಜವೇನುಚಂದದಿ ಸ್ಮರಿಸು ಗೋವಿಂದನು ತಾನೆಬಂದು ದಾಸರ ನೋಡಿ ಪೊರೆವಾನು6
--------------
ಗೋವಿಂದದಾಸ
ನಿನಗೆ ತಿಳಿದಂತೆ ಮಾಡುವದಯ್ಯ ಬೇಡೆನಲು |ಯನಗೆ ಸ್ವಾತಂತ್ರ್ಯವುಂಟೇ ||ಮನಸಿಜಪಿತ ನಿನ್ನ ಮೀರಿ, ಸಿರಿ, ವಿಧಿ,ಶರ್ವ|ತೃಣ ಮುರಿಯೆ ಶಕ್ತರಲ್ಲಾ ಹರಿಯೇ ಪಅಪಮಾನ ಮಾಡಿಸೊ ಕೋಪವನೆ ಹೆಚ್ಚಿಸೊಕೃಪಣತನದಲ್ಲಿರಿಸೊ |ಅಪಹಾಸಗೈದಿಸೋ ಡಾಂಭಿಕದವನೆನಿಸೋಉಪವಾಸದಲ್ಲೇ ಇರಿಸೊ |ಕೃಪೆಯುಳ್ಳ ನರನೆನಿಸೋ ಮಾನವೆಗ್ಗಳ ಕೊಡಿಸೊಚಪಲ ಬುದ್ಧಿಯನೆ ಕಲಿಸೊ |ಅಪರಾಧವನೆ ಹೊರಿಸೊ ಬಲು ಭಯವ ತೋರಿಸೋತ್ರಿಪುರಾಂತಕರ್ಚಿತ ಪದ ಹರಿಯೇ 1ಬೈಸು ಬೈದಾಡಿಸೊ ಬಾಂಧವರನಗಲಿಸೊಹೇಸಿಕೆಯು ಲಜ್ಜೆ ತೋರಿಸೊ |ಗ್ರಾಸವನೇ ಉಣಿಸೋ ನರರಾಲಯವ ಕಾಯಿಸೋಕ್ಲೇಶನಿತ್ಯದಲಿ ಬಡಿಸೊ |ಆಶೆಯನು ಜರಿಸು ಕೈಕಾಲುಗಳ ಕುಂಠಿಸೊದೋಷಕ್ಕೆ ಮನವಂಜಿಸೋ |ವಾಸುದೇವನೆ ನಿನ್ನ ವ್ರತವ ಮಾಡಿಸುವಂದುದೇಶ ಬಹುಕಡೆಗೆ ತಿರುಗಿಸೊ ಹರಿಯೇ2ಕವನಗಳ ಪೇಳಿಸೊಕರ್ಮಬಾಹಿರನೆನಿಸೊಭುವನದೊಳು ಭಂಡನೆನಿಸೊ |ಕವಿಸು ಅಜ್ಞಾನವನು ಸನ್ಮತಿಯ ಪ್ರೇರಿಸೊಕಿವಿ ಮಾತ್ರ ದೃಢದಲಿರಿಸೋ |ಜವನ ಸದನದ ಪೊಗಿಸೋ ಬಂಧಾನದೊಳಗಿರಿಸೊತವ ದಾಸರೊಳು ಕೂಡಿಸೊ |ದಿವಿಜರೊಲ್ಲಭ ನ್ಯಾಯವನ್ಯಾಯವನೆಮಾಡುಭವಪಂಕದೊಳು ಮುಳುಗಿಸೋ ಹರಿಯೇ 3ಹೆತ್ತವರ ಸೇವೆ ಮಾಡಿಸೊ ನೀಚರ ಬಳಿಯತೊತ್ತು ಕೆಲಸವ ಮಾಡಿಸೋ |ಚಿತ್ತ ಚಂಚಲಗೊಳಿಸೊ ವೈರಾಗ್ಯ ಪುಟ್ಟಿಸೊಉತ್ತಮರ ನೆರೆಯಲಿರಿಸೊ |ಮುತ್ತಿನಾಭರಣಿಡಿಸೊ ತಿರುಕೆಯನೆ ಬೇಡಿಸೊವಿತ್ತಸಂಗ್ರಹ ಮಾಡಿಸೊ |ಮುತ್ತೆಗೊಲಿದಿಹನೆ ವಿಷ ಕುಡಿಸೊ ಅಮೃತವುಣಿಸೊಮತ್ತೊಬ್ಬರಾರು ಗತಿಯೋ ಹರಿಯೇ 4ಸಾಲಗೊಯ್ಯನಮಾಡುಕಂಡ ಕುಲದಲಿ ತಿನಿಸುಕೀಳು ಮನುಜರ ಪೊಂದಿಸೋ |ನಾಲಿಗೆಗೆಡಕನೆನಿಸೊ ಸತ್ಯ ವಚನಿಯು ಎನಿಸೊಸ್ಥೂಲ ಪುಣ್ಯವ ಮಾಡಿಸೋ |ಕೇಳಿಸೋ ಸಚ್ಛಾಸ್ತ್ರ, ನೀತಿಯರಿಯನು ಎನಿಸೋಆಲಯದಿ ಸುಖದಲಿರಿಸೋ |ಮೂಲೋಶ ಪತಿಯೆಹರಿಕುದುರೆಯೇರಿಸೊ ಮತ್ತೆಕಾಲು ನಡಿಗೆಯಲೆ ನಡೆಸೊ ಹರಿಯೇ 5ಅರಸು ಪದವಿಯ ಕೊಡಿಸೊಕಾಷ್ಠಭಾರವ ಹೊರಿಸೊಪರದೂಷಣೆಯ ಮಾಡಿಸೊ |ಮರ್ಯಾದೆಗಳು ತಿಳಿಸು ಅತಿಮೂಢನೆಂದೆನಿಸೊನಿರುತ ರೋಗದಲಿ ಇರಿಸೋ |ಕರೆಕರೆಯ ಹಿಂಗಿಸೊ ದಿವ್ಯ ವಸನವನುಡಿಸೊಸುರಗಂಗಿ ತಡಿಯೊಳಿರಿಸೊ |ಪರಮಾತ್ಮನೆ ವಂಧ್ಯನೆನಿಸೊ ಸುತರನ್ನೆ ಕೂಡೊಮರಿಸೋ ದುರ್ವಿಷಯಗಳನೂ ಹರಿಯೆ6ಮಾಕಾಂತ ಪ್ರಾಣೇಶ ವಿಠಲ ನೀನಿತ್ತುದಕೆಶೋಕಿಸಲು ಸಲ್ಲದಯ್ಯ |ಆ ಕುಂಭೀಪಾಕ ಮೊದಲಾದ ನರಕದೊಳೆನ್ನಹಾಕಿದರೂ ಒಳಿತೆ ಜೀಯಾ |ಈ ಕಲಿಯುಗದಿಪಂಚಭೇದತಿಳಿಯದ ದೈತ್ಯರಾಕುಲದೊಳಿರಿಸಬೇಡ |ಶ್ರೀ ಕಾಳೀಕಾಂತನರ್ಚನೆ ಸರ್ವ ಕಾಲದಲಿಬೇಕುಬಿನ್ನಪಲಾಲಿಸೋ ಹರಿಯೇ 7
--------------
ಪ್ರಾಣೇಶದಾಸರು
ನಿನ್ನ ಸಮಾನ ದೇವರುಂಟೇನೋ ಎನ್ನಯ್ಯ ರಂಗ ಪನಿನ್ನ ಸಮಾನ ದೇವರುಂಟೇ ಇನ್ನೀ ಭುವನಭವಾಂಡದೊಳಗೆಬನ್ನಬಡಿಸದೆ ದಾಸಜನರ ನಿನ್ನ ಪ್ರಾಣಸಮಮಾಡಿ ಪೊರೆಯುವಿ ಅ.ಪಸೋಮಕಾಸುರ ದೈತ್ಯನ್ನ ವಧಿಸಿ ವೇದವನು ತಂದುನೇಮದಿಂ ಮತ್ತೀ ಸೃಷ್ಟಿ ನಿಲ್ಲಿಸಿ ಸಾಗರವ ಮಥಿಸಿಪ್ರೇಮದಮೃತ ಸುರರಿಗುಣಬಡಿಸಿ ನಿಸ್ಸೀಮನೆನಿಸಿಸೋಮಶೇಖರನಮಿತ ಕಷ್ಟವ ಪ್ರೇಮ ದೃಷ್ಟಿಯಿಂ ದೂರ ಮಾಡಿಭೂಮಿತ್ರಯಕೆ ಕ್ಷೇಮ ನೀಡಿದಿ ಕಾಮಿತ ಭಕ್ತರ್ವರಪ್ರದಾತ 1ಎರಡೆ ಅಡಿಗಿಡಿಭುವನವನು ತುಳಿದಿ ಅಮಿತಮಹಿಮಪರಮಉಗ್ರರೂಪ ಧರಿಸಿದಿ ಭಕುತಗಾಗಿಅರಮನೆಯ ಸ್ತಂಭೊಡೆದು (ಮೂ) ಡಿದಿ ಪರಮದಯಾನಿಧಿಚರಣದಾಸರ ಪೊರೆಯುಲೋಸುಗ ನರನ ರೂಪದಿನಿರುತ ವಿಪಿನಕೆ ತೆರಳಿ ದಕ್ಷಿಣಶರಧಿ ಹೂಳಿಸಿದುರಳರ್ಹಾವಳಿ ದೂರ ಮಾಡಿದಿ 2ದ್ವಾರಕೆಂಬ ಪುರವ ನಿರ್ಮಿಸಿ ಅದಕೊಡೆಯನೆನಿಸಿಸಾರಭಕುತರ ಇಷ್ಟಪೂರೈಸಿ ಮಹಲೀಲೆ ನಡೆಸಿಪರಮಕಂಟಕರನ್ನು ನಾಶಿಸಿ ಧರೆಭಾರಮಿಳಿಸಿಪರಮಸುರಗಣಕ್ಹರುಷವಿತ್ತು ಧಾರುಣಿಯನು ಪರಿಶುದ್ಧಮಾಡಿಕರುಣದಾಳುವಿ ಭುವನತ್ರಯವನು ಶರಣಜನಪ್ರಿಯವರದ ಶ್ರೀರಾಮ 3
--------------
ರಾಮದಾಸರು
ನಿನ್ನ ನಾನೇನೆಂದೆನೆ ಬಗಳಾಮುಖಿ ನಿನ್ನ ನಾನೇನೆಂದೆನೆನಿನ್ನ ನಾನೇನೆಂದೆ ತತ್ವವ ಕೇಳುತ ಚೆನ್ನಾಗಿಎನ್ನ ಬಳಿ ಕುಳ್ಳಿರೆಂದೆನಲ್ಲದೇಪಹತ್ತಿಯನರೆ ಎಂದೆನೇ ಹಳ್ಳದ ನೀರಹೊತ್ತು ಹಾಕೆಂದೆನೆ ಮತ್ತೆ ಹರಡಿಯ ತೋರಿ ಬೀ-ಸುತ್ತೆ ಚವುರಿಯಲಿಮತ್ತೆ ಗಾಳಿಯ ನೀಗ ಬೀಸೆಂದೆನಲ್ಲದೇ1ಕುಸುಬೆಯ ಒಡೆಯೆಂದೆನೇ ಕುದುರೆಯ ಮೈ-ಹಸನಾಗಿ ತೊಳೆಯೆಂದೆನೇಹೊಸ ಪೀತಾಂಬರವನುಟ್ಟು ಹೂವಮುಡಿಯೊಳು ಇಟ್ಟುಅಸಿಯ ಹಿಡಿದು ಮುಂದೆ ನಡೆಯೆಂದೆನಲ್ಲದೆ2ಕಲ್ಲನು ಹೊರು ಎಂದೆನೆಎಲ್ಲ ಕೆಲಸವನೀಗ ಮಾಡೆಂದೆನೆಬಲ್ಲಂತೆ ಪಾರುಪತ್ಯವನು ಮಾಡುತ್ತಾ ಕಾಲ್ಗೆಜ್ಜೆಘುಲ್ಲೆನಿಸಿ ನಡೆ ಎಂದೆನಲ್ಲದೇ3ಗೋಡೆಯನು ಬಳಿ ಎಂದೆನೆರಾಗಿಯ ಹಿಟ್ಟನು ಬೀಸೆಂದೆನೆಈಡಾಗಿ ಒಪ್ಪುವಾಭರಣಗಳ ನೀ ತೊಟ್ಟುಆಡುತ್ತ ಮಠದೊಳಗೆ ಇರು ಎಂದೆನಲ್ಲದೇ4ಬಟ್ಟೆಯನು ಒಗೆ ಎಂದೆನೆದುಷ್ಟರನು ಕೂಡಿ ನಲಿಯೆಂದೆನೇಶಿಶು ಚಿದಾನಂದ ಬ್ರಹ್ಮಾಸ್ತ್ರ ದೈವ ತಾನಿಷ್ಟ ದೇವತೆಯಾಗಿ ನೆಲೆಸೆಂದೆನಲ್ಲವೆ5
--------------
ಚಿದಾನಂದ ಅವಧೂತರು
ನಿನ್ನ ನೋಡಿ ಧನ್ಯನಾದೆನೊ ಶ್ರೀಕೃಷ್ಣ ದಯದಿಮನ್ನಿಸಯ್ಯ ಮರೆಯ ಹೊಕ್ಕೆನು ಪಅನ್ನಪಾನದಿಂದ ಬೆಳೆದ ತನುವು ಸ್ಥಿರವಿದೆಂದು ನಂಬಿಮುನ್ನ ಮತಿಹೀನನಾಗಿ ನಿನ್ನ ಸ್ಮರಣೆ ಮರೆತೆ ಅ.ಪಮಾಯ ಪಾಶದಲಿ ಸಿಲುಕಿದೆಯನ್ನನಗಲಿ ಅಳಿದ ತಾಯಿತಂದೆಯರಿಗೆ ಮರುಗಿದೇ ಪ್ರಿಯಮಡದಿ ಪರಸ್ತ್ರೀಯರಲಿ ಮೋಹವೆರಸಿಮರುಳನಾದೆಕಾಯಸುಖವನೆಣಿಸಿಸರ್ವೇ ನ್ಯಾಯ ತಪ್ಪಿ ನಡೆದೆ ಕೃಷ್ಣಾ 1ಹಲವು ಜನ್ಮವೆತ್ತಿ ತೊಳಲಿದೇ ತರಳನೆನಿಸಿಹಲವು ಜಾತಿ ಮೊಲೆಯ ಭುಜಿಸಿದೆಹಲವು ದೇಶಗಳನು ಸುತ್ತಿ ಹಲವುಕ್ರೂರಕೃತ್ಯ ಗೈದೆ ತಲೆಯ ಹಿಂದೆಇರುವ ಮೃತ್ಯು ನೆಲೆಯನರಿಯದಿರ್ದೆ ಕೃಷ್ಣಾ 2ಆಶಾಪಾಶಗಳಲಿ ಸರ್ವ ದೋಷ ಮೋಸವೆಣಿಸದಾದೆಲೇಸ ಕಾಣೆ ಮುಂದೆ ಯಮನ ಪಾಶಕರ್ಹನಾದೆ ಕೃಷ್ಣಾ3ಅರಿಗಳಾರು ಮಂದಿ ದೇಹದಿ ನೆಲಸಿರ್ದು ಎನ್ನಮರುಳುಗೊಳಿಸೆ ಇಂದ್ರಿಯ ಸಹಾಯದಿನರವು ಮಾಂಸ ಅಸ್ಥಿಯಿಂದ ವಿರಚಿಸಿದ ದೇಹವಿದನುಪರಿಪರಿಯ ಶೃಂಗರಿಸುತ ಸ್ಮರನ ತೆರದಿ ಮೆರೆದೆ ಕೃಷ್ಣಾ 4ಒಂದು ದಿನವು ಸುಖವ ಕಾಣೆನೂ ಈ ಜೀವನಸಂಬಂಧಿಗಳ್ಯಾರೆಂಬುದನರಿಯೆನೂಬಂಧು ನೀನೇ ಸರ್ವಪ್ರದನು ಮುಂದೆ ಜನುಮವೆತ್ತದಂತೆಬಂದು ಎನ್ನ ಸಲಹೋ ಗೋವಿಂದದಾಸನೊಡೆಯ ಕೃಷ್ಣಾ 5
--------------
ಗೋವಿಂದದಾಸ
ನಿನ್ನ ಭಕುತಿಯನು ಬೀರೊ ಎನ್ನಮನ್ನಿಸಿ ಸಲಹುವರಾರೋ ಪಸನ್ನುತಸನ್ಮಾರ್ಗ ತೋರೋ ಆಪನ್ನರಕ್ಷಕ ಬೇಗ ಬಾರೋ ಅ.ಪಪನ್ನಗಶಯನ ಲಕ್ಷ್ಮೀಶಾ ವೇದಸನ್ನುತಪಾದಸರ್ವೇಶಾಇನ್ನು ಬಿಡಿಸು ಭವಪಾಶಾ ಪ್ರಸನ್ನ ರಕ್ಷಿಸೊ ಶ್ರೀನಿವಾಸಾ 1ನಾರದ ಗಾನವಿಲೋಲಾ ಸ್ವಾಮಿಭೂರಿಭಕ್ತರ ಪರಿಪಾಲಾಶ್ರೀ ರಮಣಕರುಣಾಲವಾಲ- ದೇವನೀರದಶ್ಯಾಮ ಗೋಪಾಲಾ2ಕರಿರಾಜವರದ ಪ್ರಮೇಯಾ ಎನ್ನನರಿತು ನಡೆಸೊ ಯೋಗಿಧ್ಯೇಯ ||ಸುರಮುನಿ ಹೃದಯನಿಕಾಯ-ನಮ್ಮಪುರಂದರವಿಠಲರಾಯಾ3
--------------
ಪುರಂದರದಾಸರು
ನಿರುತ ನಿನ್ನಯ ಲೀಲೆಯನೆ ಹಾರೈಸುವೆ ಮುದ್ದುತಾರೊ ಕಂದಕಿರುಗುರುಳಿನ ಚೆಲ್ವ ಬಾಲಕರನ್ನನೆ ಮುದ್ದು ತಾರೊ ಪ.ನಿದ್ರೆ ಪೂರಿತವಿಲ್ಲದೆ ನಡೆಯುತ ಬಂದು ಮುದ್ದು ತಾರೊ ಕಂದಮೆದ್ದು ಕಾಯಿ ಕಳಲೆ ಕಿರುನಗೆ ಜೊಲ್ವಾಯ ಮುದ್ದು ತಾರೊ 1ಧುಡುಮೆಂಬ ಕಡೆವ ದನಿಗೆ ದುಡು ದುಡು ಬಂದುಮುದ್ದು ತಾರೊ ಕಂದಉಡುಗೆ ಜಗ್ಗುತ ತೊದಲ್ನುಡಿದು ಮೊಗವ ನೋಡಿ ಮುದ್ದು ತಾರೊ 2ನವನೀತನೀಡಲು ಆಯೆಂಬ ಪುಟ್ಬಾಯ ಮುದ್ದು ತಾರೊ ಕಂದಹವಣಾದ ಸಣ್ಹಲ್ಲು ಎಳೆದುಟಿ ಸೊಂಪಿನ ಮುದ್ದು ತಾರೊ 3ಅಂಬೆಗಾಲಿಕ್ಕುತೆನ್ನನು ಕಂಡು ಕರವೆತ್ತಿ ಮುದ್ದು ತಾರೊ ಕಂದಕಂಬುಕಂದರ ನಿನ್ನ ಮನದಣಿಯಪ್ಪುವೆ ಮುದ್ದು ತಾರೊ 4ಚಿನ್ನರ ಬಡಿದು ನಾನಲ್ಲೆಂದು ಬಾಯಾರ್ವ ಮುದ್ದು ತಾರೊ ಪ್ರಸನ್ನವೆಂಕಟಾಚಲವಾಸವಿಲಾಸನೆ ಮುದ್ದು ತಾರೊ 5
--------------
ಪ್ರಸನ್ನವೆಂಕಟದಾಸರು
ನಿಲ್ಲಿಸಬೇಕೊ ಯಾದವರ ಹೊಲ್ಲಗುಣದವರನಿಲ್ಲಿಸಬೇಕೊ ಇವರ ಬಿಲ್ಲಿಗೆ ಅಂಜದವರಗೊಲ್ಲರು ನಮ್ಮ ಸರಿ ಅಲ್ಲವೊ ಧರ್ಮರಾಯ ಪ.ಒಡೆಯ ಧರ್ಮನು ಹರಿಯ ಅಡಿಗೆರಗುವೆÉನೆಂದನಡೆದು ಹೋಗಲುರಾಯ ತಡೆಯಬೇಕೆಂದ ಭೀಮ 1ಕಂಜನಾಭನ ಮನೆಯ ಎಂಜಲು ಬಳೆವವನರಂಜಿಸಿ ಕರೆಯಬ್ಯಾಡ ಅಂಜಿಕೆ ಏನು ಅವನ 2ಪಾರ್ಧನು ರಾಯಗೆ ಪಾರ್ಥಿಸಿ ಹೇಳಿಕೊಂಡಸಾರಥಿಯ ಕರೆಯೋದು ಕೀರ್ತಿ ಅಲ್ಲವೊರಾಯ 3ನಕುಲನುರಾಯಗೆ ಯುಕ್ತಿಲೆ ಹೇಳಿಕೊಂಡಸಖನಯ್ಯನ ಕುಶಲವು ಮುಖವ ಮಾಡಿದವನಲ್ಲೊ 4ಕೇಳಯ್ಯ ರಮಿ ಅರಸು ಗಾಳಿಸಿ ಬಯಸಿಕೊಂಡಬಹಳ ಮನ್ನಿಸ ಬ್ಯಾಡ ಹೇಳಿಕೊಂಡ ಸಹದೇವ 5
--------------
ಗಲಗಲಿಅವ್ವನವರು
ನಿಲ್ಲು ರಂಗ ನಿಲ್ಲು ರಂಗ ನಿಲ್ಲೆಲೊ ರಂಗನಿಲ್ಲು ಮಜ್ಜಿಗೆಯನೆಲ್ಲ ಚೆಲ್ಲಿ ಬೆಣ್ಣೆ ಮೆದ್ದ ಕಳ್ಳ ಪ.ಜಾವ ಜಾವಕೆ ಕಾಡುವೆ ನಾವು ಕಟ್ಟಿದರೋಡುವೆಹಾವಳಿಗಾರೆವೊ ನಿನ್ನ ದೇವಕಿ ಚಿನ್ನಗೋವಳೆಗಾರ್ತಿರ ಚಿತ್ತವ ಆವಾಗೆ ಗೆದ್ಯೊಮಾಧವದೇವಿ ಗೋಪಿಗೆ ಹೇಳುತೈದೆವೊ ನಡೆ ಯಾಕೊ ಪಿಂತೆ 1ಬಾಲ ಬಾಲ ಬಾಲನೆಂದು ತಾಳಬೇಕೆಷ್ಟು ದಿನೆಂದುಮೇಲೆ ಬಲ್ಲಿದರ ಮಗ ನೀಲಮೇಘಾಂಗಕಾಲಿಗೆರಗುವೆವಿನ್ನು ಪಾಲಿಸೊ ನಮ್ಮನು ನೀನುನಾಲಿಗೇಲಿ ನಿಮ್ಮ ಗುಣಂಗಳ ಹೇಳೋದು ಕಠಿಣ 2ಬಿಟ್ಟು ಕೆಟ್ಟೆವೊ ಪಾದವ ಕಟ್ಟೆವೊ ಬಾರೊ ದೇವಸಿಟ್ಟಲಿ ಯಶೋದೆ ಮೇಲೆ ಅಟ್ಟಿ ಬಿಡಲುಗಟ್ಟಿ ಮೊಸರು ಹಾಲನು ಅಷ್ಟು ಕುಡಿದಧಿಕನೊದಿಟ್ಟ ಪ್ರಸನ್ನವೆಂಕಟ ಕೃಷ್ಣ ನಿಮ್ಮಮ್ಮನಾಣಿಟ್ಟೆ 3
--------------
ಪ್ರಸನ್ನವೆಂಕಟದಾಸರು