ಒಟ್ಟು 1315 ಕಡೆಗಳಲ್ಲಿ , 104 ದಾಸರು , 1058 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯಜಯ ಶ್ರೀ ರಾಮ ನಮೋ |ಜಯ ಜಯ ಶ್ರೀ ಕೃಷ್ಣ ನಮೋ ಪ.ಸಿರಿಯರಸನು ಶೃಂಗಾರವ ಮಾಡಿ |ಸಿರಿಗಂಧವನೆ ಹಣೆಗಿಟ್ಟು ||ತರುಣ ತುಳಸಿ ವನಮಾಲೆಯ ಧರಿಸಿ |ಹರಿತುರುಕಾಯಲು ಹೊರಗೆ ಹೊರಟನು1ಹೊತ್ತು ಹೋಯಿತುತುರು ಬಿಡಿಯೆನ್ನುತ |ಸಾತ್ತ್ವತ ನುಡಿದನು ಗೋಪಿಯೊಡನೆ ||ತುತ್ತುರು ತುತ್ತುರು ತುರುತುರುಯೆನ್ನುತ |ಒತ್ತಿ ಸ್ವರಗಳನು ಪೊಂಗೊಳಲೂದುತ 2ವನಿತೆ ಸಟ್ಟುಗದೊಳು ಅಕ್ಕಿಯ ತೊಳಸಿ |ಒನಕೆಯಿಂದಓಗರ ಹದನೋಡಿ ||ಮಿನುಗುವ ಸೀರೆಯ ತಲೆಗೆ ಸುತ್ತಿಕೊಂಡು |ವನಕೆ ಹೋಗಲೆಂದು ಹೊರಗೆ ಹೊರಟಳು 3ಹರಿಸ್ವರವೆನ್ನುತ ಒಬ್ಬಳುಕೇಳಿನೆರೆಮನೆಗೆ ಹೋಗಿ ಕಡ ಕೇಳಿದಳು ||ಒರಳು ಕೊಡುವಿರಾ ಅರಸಿನ ಅರೆದು |ಮರಳಿ ಬೇಗ ತಂದೀವೆನೆನುತಲಿ 4ಹಸುವಿಗೆ ಇಟ್ಟಲು ಹಾಲುಓಗರ |ಬಿಸಿಮಡ್ಡಿಯ ಗಂಡಗೆ ಚಾಚಿ ||ಸೊಸೆಯನು ಅಟ್ಟಿಸಿ ತೊತ್ತನು ಪಾಲಿಸಿಮೊಸರ ಕಾಸಿ ಹೆಪ್ಪ ಹಾಕಿದೊಳೊಬ್ಬಳು 5ಗಿಳಿಗೆ ಹಾಸಿದಳು ಹಾಸು ಮಂಚವನು |ಅಳಿಯನ ಪಂಜರದೊಳಗಿರಿಸಿ ||ತಳಿಗೆಯಲ್ಲಿ ತಮ್ಮನ ಮಲಗಿಸಿ ತೊಟ್ಟಿ - |ಲೊಳಗೆ ಎಡೆಯನು ಮಾಡಿದಳೊಬ್ಬಳು 6ಅಟ್ಟವೆಂದು ಹತ್ತಿ ಅಗಳಿಯ ಮೇಲೇಇಟ್ಟಳು ಸಾದೆಂದು ಸಗಣಿಯನು ||ಕಟ್ಟಬಾಯಿಗೆ ಕಾಡಿಗೆಹಚ್ಚಿ |ಕೃಷ್ಣನ ಸ್ಮರಿಸುತ ಹೊರಗೆ ಹೊರಟಳು 7ಅಂಗನೆ ಚೌರಿಯು ಕಾಲಿಗೆ ತಗುಲಿಸಿ |ಮುಂಗೈಯಲಿ ತಾಳಿಯ ಬಿಗಿದು ||ಸಿಂಗರ ಸರವನು ನಡುವಿಗೆಕಟ್ಟಿ |ರಂಗನ ಸ್ಮರಿಸುತ ಹೊರಟಳೊಬ್ಬಳು 8ಕಟ್ಟಿ ಮುತ್ತಿನೋಲೆ ಮೊಣಕಾಲ್ಗಳಿಗೆ |ಗಟ್ಟಿ ಕಂಕಣವ ಕಿವಿಗಿಟ್ಟು ||ತೊಟ್ಟಿಲೊಳಗೆ ಶಿಶು ಅಳುವುದ ಕಂಡು |ಕಟ್ಟಿದ ನೆಲುವನು ತೂಗಿದಳೊಬ್ಬಳು 9ತರುಣಿಯೊಬ್ಬ ಸಂನ್ಯಾಸಿಯ ಕಂಡು |ನೆರೆಮನೆ ಕೂಸೆಂದೆತ್ತ ಬರಲು ||ಅರಿದಾವ ಗಾಳಿ ಸೋಕಿತೆನುತಲಿ |ಪುರಂದರವಿಠಲನು ನಗುತಿದ್ದನು ಸಖಿ 10
--------------
ಪುರಂದರದಾಸರು
ಜಲದನೀಲಗಾತ್ರ ಏತರ ಚೆಲುವ ರುಕ್ಮಿಣಿ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಬಿಳಿಯ ಜಡೆಯ ಮೈಯ ಜೋಗಿಗೊಲೆದ ಪಾರ್ವತಿ ಪ.ಉದಕದೊಳಗೆ ವಾಸವೇಕೆ ಸದನವಿಲ್ಲವೆ |ಸುದತಿಸುಡುವ ಕಾಡಿಗಿಂತ ಲೇಸು ಅಲ್ಲವೆ1ಶೃಂಗಿಯ ಬೆನ್ನಿಲೆತ್ತಿದವನ ಸೊಗಸು ನೋಡಿದೆ |ಗಂಗೆಯ ಶಿರದಿ ಪೊತ್ತವನ ಗುರುವ ಕೇಳಿದೆ 2ವಸುಧೆ ನೆಗಹಿ ಬೇರೆ ಮೆಲುವ ಅಶನವಿಲ್ಲವೆ |ಹಸಿದು ವಿಷವ ಕುಡಿದ ಎಂತು ಸ್ವಾದವಲ್ಲವೆ 3ಕರುಳ ಕೊರಳ ಸರವು ಏಕೆ ಸರವು ದೊರಕದೆ |ಕೊರಳ ರುಂಡಮಾಲೆ ಏಕೆ ಕಾಂಚನವಿಲ್ಲದೆ 4ಧರಣಿ ಮೂರಡಿ ಬೇಡಲಿಕ್ಕೆ ದೊರೆಯು ಅಲ್ಲವೆನರಕಪಾಲ ಪಿಡಿವ ಜಗದ ಕರ್ತೃವಲ್ಲವೆ 5ಮಾತೆಶಿರವ ಅಳಿದವನ ಮಾಲೆ ಕೇಳಿದೆಯಾ !ತಾತನಾಚಿ ಸುತನ ಕೊಂದು ನೀತಿ ನೋಡಿದೆಯಾ 6ಕೋತಿಗಳನು ಕೂಡಲಿಕ್ಕೆ ಜಾತಿ ತನ್ನದೆ |ಭೂತಗಣಗಳಾಳುವುದಕೆ ಭೀತಿ ಇಲ್ಲವೆ 7ಹತ್ತಿರಿದ್ದ ವಾಜಿಬಿಟ್ಟು ಹದ್ದನೇರ್ವರೆ |ಎತ್ತಿನ ಬೆನ್ನ ನೇರಿದವರು ಉತ್ತಮರಾಹರೆ 8ಸುತ್ತಲಿದ್ದಬಾಲೆಯರೊಳು ಬತ್ತಲಿರುವರೆ |............... ಶಾಪ ಹತ್ತಲಿಲ್ಲವೆ 9ಹರಿಹರರೊಳು ಭೇದವೇನು ಹೇಳೆ ರುಕ್ಮಿಣಿಪುರಂದರವಿಠಲ ತಾನೆ ಬಲ್ಲ ಕೇಳೆ ಪಾರ್ವತಿ 10
--------------
ಪುರಂದರದಾಸರು
ಜಲಧಿತಕ್ಕದೊ ನಿನ್ನಳಿಯಗೂ ನಿನಗೂ |ಹಲವು ಬಗೆಯಿಂದಲಿ ಪರೀಕ್ಷಿಯನು ಮಾಡಿದರೆ ಪಮೊದಲೆ ತಿಳದಷ್ಟು ನಿನ್ನ ಮಹತ್ಮಿ ವರ್ಣಿಸುವೆ |ತುದಿಗಂಡು ಬಲ್ಲೆನೇ ಅಧಮ ನಾನೂ ||ಎದುರಿಗಂಬುವದಾಡಿಕೊಂಡ ಬಗೆ ಬ್ಯಾರೆಲ್ಲೀ |ಮುದದಿಂದ ದಯಮಾಡಿ ಕೇಳೊ ರತ್ನಾಕರನೇ 1ನಿನ್ನಿಂದ ಹುಟ್ಟಿಹುದು ವಿಷವು, ಗುರುವಿನ ಪತ್ನಿ |ಯನ್ನು ಸ್ವೀಕರಿಸಿದನು ನಿನ್ನ ಮಗನೂ ||ಘನ್ನತರ ಮಕರಾದಿಗಳು ನಿನ್ನ ಪರಿವಾರ |ಇನ್ನೆಷ್ಟು ಪೇಳಲಿ ಚರಿತ್ರ ಪಾರಾವಾರ 2ನಿನ ಒಡಲಿಗೆಷ್ಟಾದರನ್ನ ಸಾಕೆನಿಸದೂ |ದಣಿದು ಬಂದವರಿಗಾಶ್ರಯವು ಕಾಣೇ ||ಉಣಲಿಕ್ಕೆ ಅನ್ನೆಂಬದೆಂಟನೆ ರಸದಂತೆ |ಘನಖ್ಯಾತಿ ದೂರದಲಿ ಬಳಿಗೆ ಬರಲಿಂತಿಹದು 3ಪ್ರೀತಿಯಂ ಬಂದವರು, ಗ್ರಹಣ ವೈಧೃತಿ ವೇತೀ |ಪಾತದಲಿ ನಿನ ದರುಶನಾಗಬೇಕೂ ||ಭೂತ ಬಡದವರಂತೆ ನಿನ್ನ ಕಲ್ಲುಗಳಿಂದ |ಘಾತಿಸಲಿ ಬೇಕು ನೋಡಲ್ಕೆ ಬಹು ಸೋಜಿಗವು 4ತುಳಿದದಕೆ ಹಿಗ್ಗಿದಿಯೋ ಬಹುಮಾನಿ ನೀನೆಲವೊ |ಲಲನಿ ಹಡದೇಳು ಶಿಶುಗಳ ಕೊಂದಳೂ ||ಬಲುಭಂಟಹಿರಿಯಮಗಗರಸುತನ ಕೊಡಲಿಲ್ಲ |ಇಳಿಯೊಳಗೆ ನೀ ಮಾಡಿದನ್ನ್ಯಾಯಕೆಣಿಯುಂಟೆ 5ಸತಿಸಂಗ ಬಿಡಲೊಲ್ಲಿ ಪರ್ವಕಾಲಗಳಲ್ಲಿ |ಸುತಗೆ ಕಡಿಮೆದರಿಂದೆ ಆದಿ ಹ್ಯಾಗೊ ||ಪತಿವ್ರತಾ ಮಗಳಾದಳೊಂದೆ ಸುಗುಣದರಿಂದೆ |ಕ್ಷಿತಿಯೊಳನವರತ ಪೂಜಿಸಿಕೊಂಬಿ ಜನರಿಂದ 6ಜಾಮಾತನಿಗೆ ಇಹವು ಮುಖವು ಹತ್ತೊಂಬತ್ತು |ಆ ಮಧ್ಯ ಗಜಲಪನದಂತೆ ಒಂದೂ ||ಭೂಮಿಯೊಳಗಾಶ್ಚರ್ಯ ತಾನೆ ಮಕ್ಕಳ ಪಡೆವ |ಈ ಮಗಳು ಬಹುಸುಖವ ಬಡುವಳಿವನಿಂದಲ್ಲಿ 7ಬೆರಳು ಚೀಪುವನೋಡುಸುಳ್ಳಲ್ಲ ದಾನ |ಪುರುಷ ಬದುಕುವ ಚೋರತನದಿ ಜಾರಾ ||ತರುಣಿಯಾಗಿದ್ದ ನಿನ ಬಳಿಯಲ್ಲಿ ನೀ ಬಲ್ಲಿ |ತುರುಗಾಟವ ಕೊಡಲಿ ಕೊಂಡಡವಿಯೊಳಗಿರುವ 8ಗುರುಸ್ವಾಮಿ ಪಿತ ಬ್ರಹ್ಮ ವಂಶದ್ರೋಹಿಗಳವನ |ಪರಿವಾರ ಮಕ್ಕಳಿಗೆ ಮಾವನಾದಾ ||ಉರುಗ ಶಯನಂಡಜಾಧಿಪ ವಹನ ನೀಲಾಂಗ |ಅರಿತನೃಪಋಷಿಗಳೊಳಗೊಬ್ಬರಿಗ್ಯು ಮಗನಲ್ಲ 9ಕುಲಸೂತ್ರವಿಲ್ಲ ಒಂದೇ ರೂಪನಲ್ಲ ನಿ- |ಶ್ಚಲನಲ್ಲ ವತಿ ಕಠಿಣ ವಕ್ರವದನಾ ||ಬಲು ಕೋಪಿ ತಿರದುಂಬ ಸ್ತ್ರೀಯರಿಬ್ಬರ ಕೊಂದ |ಅಲವಜಾರನು, ಬತ್ತಲಿರುವ, ಕಲಹಕೆ ಪ್ರೀಯ 10ಕೊಟ್ಟೆಲ್ಲ ಅವನಿಗೀ ಕನ್ನಿಕಿಯ ಸವತಿಯರು |ಎಷ್ಟೋ ಮಲಸುತರಿಹರದಕೆ ದಶ ಮಡೀ ||ಸಿಟ್ಟಾಗ ಬ್ಯಾಡವನ ವಾರ್ತಿ ಕೇಳಲು ಜನರು |ಬಿಟ್ಟು ಸಂಸಾರವೆಂದಿಂದಿಗೊಲ್ಲದಿಹರೂ 11ನಿನ್ನ ಮಗಳವನಿತ್ತವನ ಮಗಳ ಮದಿವ್ಯಾದಿ |ಕನ್ಯ ವಿಕ್ರಯ ಪರಸ್ಪರವೆನಿಸಿತೂ ||ಇನ್ನೇಸೊ ನಿಮ್ಮ ನಿಮ್ಮಲ್ಲಿದ್ದ ನಡತಿಗಳು |ಅನ್ಯರಿದುಕೇಳಿಭಜಿಸರೊ ಶುದ್ಧ ಭಕುತಿಯಲೀ 12ಏನಾದರೇನು ಶ್ರೀ ಪ್ರಾಣೇಶ ವಿಠಲನಿಗೆ |ನೀನೆಗತಿನಿರ್ದೋಷ ವಸ್ತುವೆಂದೂ ||ಶ್ರೀನಳಿನಭವಮುಖರುನಿತ್ಯವಂದಿಸುತಿಹರೊ |ನೀನವನ ಮಾವನಾದಿನ್ನು ಪೂಜಿತನಲ್ಲೆ 13
--------------
ಪ್ರಾಣೇಶದಾಸರು
ಜೋಗಿಯ ಕಂಡೆಪರಮಯೋಗಿಯ ಕಂಡೆಭೋಗಿಶಯನಗಂಬೂರ ಚರ್ಚಿತಾಂಗ ವೆಂಕಟೇಶಪ.ವೇದವ ಕದ್ದೊಯ್ದವನ ಕೊಂದ ಜೋಗಿಯ ಕಂಡೆಭೂಧರಧರನಾದ ಜೋಗಿಯ ಕಂಡೆಭೇದಿಸಿ ಪಾತಾಳ ಪೊಕ್ಕು ಗರ್ಜಿಪ ಜೋಗಿಯ ಕಂಡೆಆದರದಿ ಕಂದನ ನುಡಿಯನಾಲಿಸಿ ಬಂದ 1ಅಂಗುಟದಿ ಬೊಮ್ಮಾಂಡವ ಸೀಳಿದ ಜೋಗಿಯ ಕಂಡೆಹೆಂಗಳ ತಲೆಯನರಿದ ಜೋಗಿಯ ಕಂಡೆಅಂಗನೆಗೋಸುಗಾರಣ್ಯ ಸಂಚಾರಿ ಜೋಗಿಯ ಕಂಡೆಪೊಂಗೊಳಲನೂದಿ ಮೂಜಗವನು ಮೋಹಿಸುವ 2ಕನ್ಯೇರ ವ್ರತಗೇಡಿ ದಿಗಂಬರ ಜೋಗಿಯ ಕಂಡೆಉನ್ನತ ವಾಜಿಯೇರಿದ್ದ ಜೋಗಿಯ ಕಂಡೆಪನ್ನಗಾದ್ರಿವರದ ಪ್ರಸನ್ನವೆಂಕಟೇಶನೆಂಬತನ್ನ ನಂಬಿದವರನು ಬಿಡದೆ ಪಾಲಿಸುವ 3
--------------
ಪ್ರಸನ್ನವೆಂಕಟದಾಸರು
ತಪ್ಪುಗಳನೆಲ್ಲ ನೀನೊಪ್ಪಿಕೊಳ್ಳೊ - ನ-|ಮ್ಮಪ್ಪ ಕಾಯಬೇಕುತಿಮ್ಮಪ್ಪನೀನೆಪಸತಿ-ಸುತ ಸಂಸಾರಗಳಿಗೆ |ಮತಿ ಹೀನನಾದೆನು ವ್ಯರ್ಥ ||ಮಿತಿಗಾಣೆನಯ್ಯ ಎನ್ನ ಪಾಪಗಳಿಗೆ |ಗತಿಯದಾವುದು ಪೇಳೊ ಮುಂದೆನಗೆ 1ಬಿಸಿಲು ಬಿರುಮಳೆ ಗಾಳಿಯೊಳಗೆ-ಬಲು-|ದೆಸೆಗೆಟ್ಟು ದೇವ ತಿರುಗಿದೆ ||ಹಸಿವು-ತೃಷೆಗಳು ಬಹು ಬಾಧಿಸಲು |ಹುಸಿಯಾಡಿದೆನಯ್ಯ ಹುಟ್ಟು ಮೊದಲು 2ಸ್ನಾನ-ಸಂಧ್ಯಾವಂದನವರಿಯೆ-ನಾನಾ-|ದಾನ-ಧರ್ಮದ ಗುರುತುಗಳಿಯೆ ||ಹೀನಜನರ ಸಂಗವ ಮರೆಯೆ-ಸು-|ಙ್ಞÕನಿಗಳನು ಬಾಯೆಂದು ಕರೆಯೆ 3ಗಂಗೆ ಅಗ್ರೋದಕಗಳ ತಂದು - ನಾ-|ಮಂಗಳಮಜ್ಜನಮಾಡಲಿಲ್ಲವೆಂದೂ ||ಹೊಂಗೇದಗೆ ಪುಷ್ಪವನೊಂದು ಶ್ರೀ-|ರಂಗಗರ್ಪಿಸಲಿಲ್ಲ ಕಾಯೊ ಬಂದು 4ಪೀತಾಂಬರದಿ ವಸ್ತ್ರಗಳಿಂದ -ದಿವ್ಯ-|ನೂತನವಾದ ಆಭರಣದಿಂದ ||ಪ್ರೀತಿಪಡಿಸಲಿಲ್ಲಾದರದಿಂದ-ಹೇ-|ಸೀತಾಪತೆ ಕೃಷ್ಣ ಹರಿಮುಕುಂದ 5ಗಂಧಾಕ್ಷತೆ ಪುಷ್ಪಗಳಿಂದ -ಬರಿ-|ಒಂದುದಳಶ್ರೀ ತುಳಸಿಯಿಂದ ||ಇಂದಿರೇಶನ ಅರ್ಚಿಸದರಿಂದ -ಬಹು-|ನೊಂದು ದೂರಾದೆ ಸದ್ಗತಿಯಿಂದ 6ಏಕಾರತಿ ದೂಪಾರತಿಯ -ಎಂದು-|ಶ್ರೀಕಾಂತ ನಿನಗೆ ನಾ ಮಾಡಲಿಲ್ಲ ||ವ್ಯಾಕುಲದಲಿ ಹೋಯಿತು ಹೊತ್ತು -ಬಂದು-|ನೀ ಕರುಣಿಸು ಲಕ್ಷ್ಮೀರಮಣ 7ಪಾಯಸ ಪಂಚಭಕ್ಷ್ಯಗಳಿಂದ -ಬಲು-|ಆಯತವಾದ ಶಾಕಗಳಿಂದ ||ತೋಯೆ ಶಾಲ್ಯನ್ನ ಸದ್ಘøತದಿಂದ -ಶ್ರೀ-|ಮಾಯಾಪತಿಗೆ ಅರ್ಪಿಸಲಿಲ್ಲ 8ಮಂಗಳಾರತಿಯ ನಾ ಮಾಡಲಿಲ್ಲ-ಜಯ-|ಮಂಗಳವೆನ್ನುತ ಪಾಡಲಿಲ್ಲ ||ಕಂಗಳ ನೋಟದಿ ನೋಡಲಿಲ್ಲ -ನರ-|ಸಿಂಗನೀ ಬಾಯೆಂದು ಕರೆಯಲಿಲ್ಲ9ಹರಿಯ ಪಾದಕೆ ಬಿದ್ದವನಲ್ಲ -ನರ-|ಹರಿಗೆ ಪ್ರದಕ್ಷಿಣೆ ಮಾಡಲಿಲ್ಲ ||ಹರಿದಿನದುಪವಾಸ ವ್ರತವು ಇಲ್ಲ -ಬಲು-|ಹರಿಯ ದಾಸರ ಸಂಗ ಎನಗಿಲ್ಲ 10ಹೋಮಾರ್ಚನೆ ಔಪಾಸನವೆಲ್ಲ |ನೇಮದಿಂದಲಿ ನಾ ಮಾಡಲಿಲ್ಲ ||ಕಾಮಾತುರನಾಗಿ ಕಂಡಕಂಡ ಕಡೆ |ಸ್ವಾಮಿಯ ಕಾಣದೆ ತಿರುಗಿದೆನೊ 11ಅತಿಥಿಗಳ್ ಬಂದರೆ ಮನೆಗೆ -ಅಂದೆ-|ಗತಿಯಿಲ್ಲವಯ್ಯ ಕೊಡುವುದಕೆ ||ಯತಿಯ ಕಂಡರೆ ನಿಂದಿಸಿದೆ-ಶ್ರೀ-|ರತಿಪತಿ ಪಿತ ನೀ ದಯ ಮಾಡೊ 12ಎಷ್ಟು ಹೇಳಲಿ ಎನ್ನವಗುಣವ -ಅವು-|ಅಷ್ಟು ಇಷ್ಟೆಂದು ಎಣಿಕೆಯಿಲ್ಲ ||ದೃಷ್ಟಿಯಿಂದ ನೋಡಿ ದಯ ಮಾಡೊ -ಶ್ರೀ-|ಬೆಟ್ಟದ ವೆಂಕಟ ಪುರಂದರವಿಠಲ 13
--------------
ಪುರಂದರದಾಸರು
ತಾರಮ್ಮಯ್ಯ-ಯದುಕುಲ-ವಾರಿಧಿಚಂದ್ರಮನಪಮಾರಜನಕನ-ಮೋಹನಾಂಗನ-|ಸೇರಿ ಸುಖಿಸೆ ಹಾರೈಸಿ ಬಂದೆವು ಅ.ಪಬಿಲ್ಲು ಹಬ್ಬಗಳಂತೆ_ಅಲ್ಲಿ ಬೀದಿ ಶೃಂಗಾರವಂತೆ ||ಮಲ್ಲಕಾಳಗೆ ಮದ್ದಾನೆಗಳಂತೆ |ಫುಲ್ಲಾಕ್ಷನು ತಾನಲ್ಲಿಗೆ ತೆರಳಿದ 1ಮಧುರಾಪುರವಂತೆ-ಅಲ್ಲಿ-ಮಾವ ಕಂಸನಂತೆ ||ಒದಗಿದ ಮದಗಜತುರಗಸಾಲಿನಲಿ |ಮದನಮೋಹನ ಕೃಷ್ಣ ಮಧುರೆಗೆ ತೆರಳಿದ 2ಅತ್ತೆ ಮಾವನ ಬಿಟ್ಟು-ಬಂದೆವು ಹಿತ್ತಲ ಬಾಗಿಲಿಂದ ||ಭಕ್ತವತ್ಸಲನ ಬಹು ನಂಬಿದ್ದೆವು |ಉತ್ಸಾಹ ಭಂಗವ ಮಾಡಿದನಮ್ಮ 3ರಂಗನ ನೆರೆನಂಬಿ-ಬಂದೆವು-ಸಂಗ ಸುಖವ ಬಯಸಿ ||ಭಂಗಿಸಿ ನಮ್ಮನು ಹಾಗೆ ಪೋದನಮ್ಮ |ಮಂಗಳ ಮೂರುತಿಮದನಗೋಪಾಲನು4ಶೇಷಗಿರಿಯ ಮೇಲೆ-ಹರಿ ತಾ-ವಾಸವಾಗಿಹ ಕಾಣೆ ||ಸಾಸಿರನಾಮದ ಒಡೆಯನೆಂದೆನಿಸಿದ |ಶ್ರೀ ಪುರಂದರವಿಠಲರಾಯನ 5
--------------
ಪುರಂದರದಾಸರು
ತಾಳು ತಾಳೆಲೊ ರಂಗಯ್ಯ- ನೀ |ತಾಳು ತಾಳೆಲೊ ಕೃಷ್ಣಯ್ಯ ಪನಾಳೆ ನೀನು ನಮ್ಮ ಮನೆಗೆ ಬಂದರೆ |ಕಾಲಕಂಬಕೆಕಟ್ಟಿಪೇಳುವೆ ಗೋಪಿಗೆಅ.ಪದೊರೆಗಳ ಮಗನೆಂಬುದಕೇನೊ-ಬಹು |ಧುರದಿ ಮನೆಯ ಪೊಕ್ಕ ಪರಿಯೇನೊ ||ದುರುಳತನದ ಬುದ್ಧಿ ಸರಿಯೇನೊ-ನೀನು |ತಿರಿದು ಬೇಡುಂಡದ್ದು ಮರೆತೆಯೇನೊ 1ಚಿಕ್ಕಮಕ್ಕಳು ಇಲ್ಲವಂತೇನೊ-ನಿನಗೆ |ಕಕ್ಕೂಲಾತಿಯಿಂದಲಿ ನಿನ್ನ ||ಸಿಕ್ಕಿದ ಶ್ರೀಲೋಲ ಹಿಡಿಹಿಡಿಯೆಂದರೆ |ಬಿಕ್ಕಿ ಬಿಕ್ಕಿ ಅತ್ತರೆ ಬಿಡುವರೇನೊ 2ಕಟ್ಟಿದ ತುರುಗಳ ಮೊಲೆಯುಂಡು-ಕರು |ಬಿಟ್ಟ ಕಾರಣವೇನು ಹೇಳೊ ||ಸೃಷ್ಟೀಶ ಪುರಂದರವಿಠಲರಾಯನೆ |ಇಟ್ಟಿಗೆಯ ಮೇಲೆ ಬಂದು ನಿಂತ ಕಾರಣವೇನೊ? 3
--------------
ಪುರಂದರದಾಸರು
ತು0ಟನಿವನು ಕಾಣಮ್ಮ ಗೋಪಾಲನು|ಉಂಟೋ ಇಲ್ಲವೊ ಕೇಳಮ್ಮ ಪಎಂತೆರಡು ಸಾವಿರ ನಂತರ ಹೆಂಗಳತುಂಟು ಮಾಡಿ ರವಿಕೆಗಂಟು ಬಿಚ್ಚಿ ನಿಂತ ಅ.ಪಹಸಿರು ಪಟ್ಟೆಯನು ಉಟ್ಟು - ನಮ್ಮನೆ ಹೆಣ್ಣು|ಮೊಸರು ಕಡೆಯುತಿರಲು||ನಸುನಗುತಲಿ ಬಂದುಕುಸುಮಮಲ್ಲಿಗೆ ಮುಡಿಸಿ|ಬಸಿರುಮಾಡಿದನೆಂಥ ಹಸುಳನೆಗೋಪಿ||1ಮುದ್ದುನಾರಿಯರು ಕೂಡಿ-ನಮ್ಮನೆಯಲಿ|ಉದ್ದಿನ ವಡೆಯ ಮಾಡಲು||ಸದ್ದು ಮಾಡದೆ ಎಂದು ಎದ್ದೆದ್ದು ನೋಡುತ|ಇದ್ದ ವಡೆಯನೆಲ್ಲ ಕದ್ದು ಮೆದ್ದೋಡಿದ 2ಗೊಲ್ಲ ಬಾಲಕರ ಕೂಡಿ-ಮನೆಯಲಿದ್ದ |ಎಲ್ಲ ಬೆಣ್ಣೆಯ ಮೆಲ್ಲಲು ||ಗುಲ್ಲು ಮಾಡದೆ ನಾವು ಎಲ್ಲರು ಒಂದಾಗಿ |ತಳ್ಳ ಹೋದರೆ ನಮಗೆ ಬೆಲ್ಲವ ತೋರಿದ 3ಹೊತ್ತು ಮುಳುಗುವ ಸಮಯದಿ-ನಮ್ಮನೆ ಹೆಣ್ಣು |ಹತ್ತಿ ಹೊಸೆಯುತಿರಲು |ಮುತ್ತು ಹವಳ ಸರ ಕತ್ತಿಗೆ ಹಾಕಿ ಸೀರೆ |ಎತ್ತಿ ನೋಡಿದನು ತಾ ಬತ್ತಲೆ ನಿಂತ 4ತಿಲಕ ಕತ್ತುರಿಯನಿಟ್ಟು-ನಮ್ಮನೆ ಹೆಣ್ಣು |ಗಿಲುಕು ಮಂಚದಲಿರಲು ||ತಿಲಕ ತಿದ್ದುತ ಕುಚಕಲಶ ಪಿಡಿದು ತನ್ನ |ಕೆಲಸವ ತೀರಿಸಿದ ಪುರಂದರವಿಠಲ 5
--------------
ಪುರಂದರದಾಸರು
ತ್ರಿಜಗದ್ವಾ ್ಯಪಕಹರಿಎನುವರು ಸುಜನರುನಿಜದಲಿ ಪೇಳಿವದಾರಕ್ಕಾಅಜಭವಾದಿಗಳಿಗರಸನಾದಹದಿನಾಲ್ಕು ಲೋಕಕೆ ದೊರೆ ತಂಗಿ 1ನೀರೊಳು ಮುಳುಗುತ ಮೀನರೂಪದಿಸಾರುವ ಮಯ್ಯವದಾರಕ್ಕನೀರೊಳು ಮುಳುಗಿ ವೇದವ ತಂದು ಸುತಗಿತ್ತಧೀರ ಮತ್ಸ್ಯಮೂರುತಿ ತಂಗಿ 2ಭಾರಬೆನ್ನಿಲಿ ಪೊತ್ತು ಮೋರೆ ಕೆಳಗೆ ಮಾಡಿನೀರೊಳು ವಾಸಿಪದಾರಕ್ಕವಾರಿಧಿಮಥಿಸಿದಮೃತ ಸುರರಿಗೆ ಇತ್ತಧೀರಕೂರ್ಮಮೂರುತಿ ತಂಗಿ3ಕೋರೆದಾಡಿಯಲಿ ಧಾರುಣಿ ನೆಗಹಿದಫೋರನೆನುವರಿವದಾರಕ್ಕಕ್ರೂರ ಹಿರಣ್ಯಾಕ್ಷನ ಕೊಂದು ಭೂಮಿಯ ತಂದಶೂರ ವರಹ ಮೂರುತಿ ತಂಗಿ 4ಕ್ರೂರರೂಪತಾಳುತ ಕರುಳ್ವನಮಾಲೆ ಹಾಕಿದವದಾರಕ್ಕಪೋರನ ಸಲಹಲು ಕಂಬದಿಂದುಸಿದನಾರಸಿಂಹ ಮೂರುತಿ ತಂಗಿ 5ಮೂರಡಿ ಭೂಮಿಯ ದಾನವ ಬೇಡಿದಹಾರ್ವನೆನುವನಿವದಾರಕ್ಕಧೀರ ಬಲಿಯ ಭಕ್ತಿಗೆ ಮೆಚ್ಚಿ ಬಾಗಿಲು ಕಾಯ್ದವಾಮನ ಮೂರುತಿ ಇವ ತಂಗಿ 6ಮೂರು ಏಳುಬಾರಿಧಾರುಣಿ ಚರಿಸಿದಶೂರನೆನುವರಿವದಾರಕ್ಕವೀರ ಕ್ಷತ್ರಿಯರ ಮದವನಡಗಿಸಿದ ಪರಶು-ರಾಮ ಮೂರುತಿ ತಂಗಿ 7ಕೋತಿಗಳೊಡನಾಡಿ ಸೇತುವೆ ಕಟ್ಟಿದ ಪ್ರ-ಖ್ಯಾತನೆನುವರಿವದಾರಕ್ಕಮಾತರಿಶ್ವನಿಗೆ ಒಲಿದಂಥ ದಶರಥರಾಮ ಚಂದ್ರ ಮೂರುತಿ ತಂಗಿ 8ಗೋಕುಲದೊಳು ಪಾಲ್ಬೆಣ್ಣೆ ಮೊಸರುನವನೀತಚೋರನಿವದಾರಕ್ಕಲೋಕಗಳೆಲ್ಲಾ ತಾಯಿಗೆ ಬಾಯೊಳುತೋರ್ದಗೋಪಾಲಕೃಷ್ಣ ಮೂರುತಿ ತಂಗಿ 9ತ್ರಿಪುರರ ಸತಿಯರ ವ್ರತಗಳನಳಿದನುಗುಪಿತನೆನುವರಿವದಾರಕ್ಕಕಪಟನಾಟಕ ಸೂತ್ರಧಾರಿ ಶ್ರೀ-ಹರಿಬೌದ್ಧ ಮೂರುತಿ ತಂಗಿ10ಅಶ್ವುವನೇರುತ ಹಸ್ತದಿ ಖಡ್ಗ ಪುರು-ಷೋತ್ತಮನೆನುವರಿವದಾರಕ್ಕಸ್ವಸ್ತದಿ ಕಲಿಯೊಳು ಸುಜನರ ಪಾಲಿಪಕರ್ತೃ ಕಲ್ಕಿ ಮೂರುತಿ ತಂಗಿ 11ಶಂಖು ಚಕ್ರ ಗದೆ ಪದುಮವು ಸಿರದಿ ಕಿ-ರೀಟಧಾರಿ ಇವದಾರಕ್ಕಪಂಕಜಾಕ್ಷಿ ಪದ್ಮಾವತಿಪತಿಶ್ರೀ-ವೆಂಕಟೇಶ ಮೂರುತಿ ತಂಗಿ 12ಮಮತೆಲಿ ಸುಜನರ ಶ್ರಮ ಪರಿಹರಿಸುವಕಮಲಾಪತಿ ಇವದಾರಕ್ಕಕಮಲಪತ್ರಾಕ್ಷ ಶ್ರೀ ಕಮಲನಾಭ ವಿ-ಠ್ಠಲ ಮೂರುತಿ ಕೇಳಿವ ತಂಗಿ 13
--------------
ನಿಡಗುರುಕಿ ಜೀವೂಬಾಯಿ
ದಡ ಸೇರಿಸು ಭವದ ಕಡಲಿನದಡ ಸೇರಿಸು ಹರಿಯೆಕಡೆ ಮೊದಲಿಲ್ಲದ ಕ್ಲೇಶದ ವಾರಿಯಕಡು ಕಾಂಕ್ಷದ ಬಲುತೆರೆಯ ಪ.ಸಾಧು ಸಮಾಗಮ ಸಚ್ಛಾಸ್ತ್ರ ಶ್ರವಣಾದಿಗಳಿಲ್ಲದೆ ಕೆಡುವೆಮೇದಿನಿಯೊಳು ಮೂಢಾತ್ಮನು ನಾ ಶ್ರೀಪಾದವ ಹೊಂದಿಸು ಹರಿಯೆ 1ಸಾಸಿರ ನಾಮದಿ ತುಲಸೀ ಕುಸುಮವಶ್ರೀಶನಿಗರ್ಪಿಸಲಿಲ್ಲಹೇಸದೆ ಬಾರದುದನ್ನೆ ಬಯಸುತವಾಸುದೇವಕೆಟ್ಟೆನಲ್ಲ2ಮನ ವಶವಾಗದು ತನು ಮಡಿಯಾಗದುಕನಸಲಿ ಧರ್ಮವನರಿಯೆಒಣಮಾತಲಿ ದಿನ ಹೋದವು ಪರಗತಿಗನುಕೂಲಲ್ಲದು ದೊರೆಯೆ 3ದುವ್ರ್ಯಸನಕೆ ಬೇಸರೆನೆಂದಿಗೆಘನಗರ್ವಿಲಿ ವರ್ತಿಪೆನಲ್ಲಪರ್ವತ ನೆಗಹುವ ನುಡಿಯನ್ನಾಡುವೆನಿರ್ವಾಹಕಡ್ಡಿಯೊಳಿಲ್ಲ4ನನ್ನ ಗುಣದ ನಂಬಿಕೆ ನನಗಿಲ್ಲನಿನ್ನಯ ನಾಮವೆ ಗತಿಯುಇನ್ನಾದರು ಕಡೆಗಣ್ಣಲೆನೋಡುಪ್ರಸನ್ವೆಂಕಟ ಸಿರಿಪತಿಯೆ 5
--------------
ಪ್ರಸನ್ನವೆಂಕಟದಾಸರು
ನಡೆಯೊ ನಿಮ್ಮಮ್ಮನೆಡೆಗೆ ಹೋಗುವ ನಿನ್ನತುಡುಗಬುದ್ಧಿಯನೆಲ್ಲ ಬಿಡಿಸುವೆ ಕಳ್ಳ ನಡೆ ಗಡಪ.ಏನೆಲೆ ಠÀಕ್ಕ ನಯನವೆ ಇಕ್ಕೆನಿನ್ನ ಮೈ ಹುದುಗಿಸಿದೆ ಬಾಯಿ ಜೊಲ್ಸುರಿಸಿದೆ 1ಕಂಬವಾಶ್ರೈಸಿದೆ ನಂಬೆ ವಂಚಿಸಿದೆದಂಭಪರಳಿದೆ ಕುಂಭಿಣಿಜಳ ಕೂಡ್ದೆ 2ಕೆನೆ ಮೊಸರು ಕದ್ದೆ ವಿನೀತೆರೊಂಚಿಸಿದೆಕೊನೆಗೋಡಿ ಹೋಗ್ವೆ ಪ್ರಸನ್ನವೆಂಕಟ ಕೃಷ್ಣ 3
--------------
ಪ್ರಸನ್ನವೆಂಕಟದಾಸರು
ನಡೆರಂಗ ನಡೆ ಕೃಷ್ಣ ನಡೆ ಮನೆಗೆಧೃಡ ಭಕ್ತರ ಕೂಡಿ ದ್ವಾರಕೆಗೆ ಪ.ಬಂದ ಜನರಿಗೆಲ್ಲ ಗಂಧ ಕುಂಕುಮವನಿಟ್ಟುತಂದು ತಾಂಬೂಲ ಕೊಡುತಲೆತಾಂಬೂಲ ಕೊಡುತಲೆ ರುಕ್ಮಿಣಿಕುಂದವ ಮಾಡಿ ಬಗೆಯದೆ 1ಮಿತ್ರೆ ದ್ರೌಪತಿದೇವಿ ಮತ್ತೆ ಪಾದಕ್ಕೆರಗಿಅತ್ಯಂತ ನಾವು ನುಡಿದೆವಅತ್ಯಂತ ನಾವು ನುಡಿದ ಅಪರಾಧವಚಿತ್ತದೊಳಿಡದೆ ಕರುಣಿಸು 2ಅರಗಿಳಿ ಮಾತಿನಹರದಿಸುಭದ್ರಾ ತಾನುಎರಗಿದಳುಭಾವೆಚರಣಕ್ಕೆಎರಗಿದಳುಭಾವೆಚರಣಕ್ಕೆ ರುಕ್ಮಿಣಿಯಪರಮಆಶೀರ್ವಾದ ಇರಲೆಂದು3ಅತ್ತಿಗೆಯರೆಂದು ಅರ್ಥಿಲಾಡಿದ ಮಾತುಮತ್ತೊಂದು ನೀವು ತಿಳಿಯದೆಮತ್ತೊಂದು ನೀವು ತಿಳಿಯದೆ ರಂಗನಮಿತ್ರೆಯರೆ ನಿಮ್ಮ ದಯವಿರಲಿ 4ಬಂದು ಪಾಂಡವರೆಲ್ಲ ಇಂದಿರೇಶಗೆ ಎರಗಿಚಂದಾಗಿ ತಾವು ಕೈ ಮುಗಿದುಚಂದಾಗಿ ತಾವು ಕೈ ಮುಗಿದು ನುಡಿದರುಕುಂದುಗಳೆಣಿಸದೆ ಸಲುಹೆಂದು 5ಭಾವಮೈದುನತನದಿ ನಾವೊಂದು ವಿನಯದಿಯಾವ ತಪ್ಪುಗಳ ಎಣಿಸದೆಯಾವ ತಪ್ಪುಗಳ ಎಣಿಸದೆ ಶ್ರೀ ಕೃಷ್ಣದೇವ ನೀ ಮಾಡೊ ದಯವನೆ 6ತಂದೆ ರಾಮೇಶಗೆ ನಾವಂದ ಮಾತುಗಳೆಲ್ಲಕುಂದವ ಮಾಡಿ ಬಗೆಯದೆಕುಂದವ ಮಾಡಿ ಬಗೆಯದೆ ನಮ್ಮನೆಗೆಬಂದು ಬಂದೊಮ್ಮೆ ಸಲುಹಯ್ಯ 7
--------------
ಗಲಗಲಿಅವ್ವನವರು
ನಂಬಿ ಕೆಟ್ಟವರುಂಟೆ - ಕೃಷ್ಣಯ್ಯನ |ನಂಬಲಾರದೆ ಕೆಟ್ಟರು ಪ.ಅಂಬುಜನಾಭನ ಪಾದವ ನೆನೆದರೆ |ಇಂಬುಗೊಡದ ದುಃಖ ಹರಿಸುವ ಶ್ರೀ ಕೃಷ್ಣ ಅಪಬಲಿಯ ಪಾತಾಳಕಿಳುಹಿ - ಭಕ್ತನ ಬಾ - |ಗಿಲವ ಕಾಲುವೆ ನಾನೆಂದ ||ಛಲದೊಳು ಅಸುರರ ಶಿರಗಳ ತರಿದು ತಾ |ನೊಲಿದು ವಿಭೀಷಣಗೆ ಪಟ್ಟಗಟ್ಟಿದ ಈ ಕೃಷ್ಣ 1ತರಳ ಪ್ರಹ್ಮಾದಗೊಲಿದು - ಹಿರಣ್ಯಕನ ಉ - |ಗುರಿನಿಂದಲೆ ಸೀಳಿದ |ಕರಿರಾಜಗೊಲಿದುನೆಗಳು ನುಂಗುತಿರಲಾಗ ||ಪರಿಹರಿಸಿದ ಜಲದೊಳು ಪೊಕ್ಕು ಶ್ರೀ ಕೃಷ್ಣ 2ಪಾಂಡವರಿಗೆ ಒಲಿದು - ಕೌರವರನು |ತುಂಡು ಛಿದ್ರಮಾಡಿದೆ ||ಗಂಡರೈವರ ಮುಂದೆ ದ್ರೌಪದಿ ಕೂಗಲು |ಕಂಡು ಕರುಣದಿ ಕಾಯ್ದ ಪುರಂದರವಿಠಲನ 3
--------------
ಪುರಂದರದಾಸರು
ನಮೋ ನಮೋ ಕಾಲಭೈರವ ಹರಿಯ ಚರಣ-ಸಮೀಪದೊಳಗಿದ್ದು ಮೆರೆವ ಪ.ಸಮೀಚೀನಜ್ಞಾನಭಕ್ತ-ಸಮೂಹವಕಾವಲಕ್ಷ್ಮೀ-ರಮಣನ ಕಾರ್ಯಮಂತ್ರಿ-ಯು ಮಾಧವನ ಸಮಾನಬಲ ಅ.ಪ.ಬೆಟ್ಟದೊಡೆಯ ಶ್ರೀನಿವಾಸನ ಪಾದಕಮಲ-ಮುಟ್ಟಿ ಭಜಿಪ ವೈರಿಮರ್ದನಸೃಷ್ಟಿ ಮೂರರಲ್ಲಿ ಕೀರ್ತಿ-ಪಟ್ಟ ದಿಟ್ಟ ಧೀರಪರಮನಿಷ್ಠ ಪುಷ್ಪ ತುಷ್ಟಿಪ್ರದ ಬ-ಲಿಷ್ಠ ಶ್ರೇಷ್ಠ ಭೂತಪತಿಯೆ 1ಶ್ರೀನಿವಾಸನಾಜೆÕ ಮೀರದೆ ನಡೆಸುವದೆ ಪ್ರ-ಧಾನ ಕಾರ್ಯ ನಿನ್ನದೆಂಬುದೆತಾನು ಕಿಂಚಿದರಿತು ಸನ್ನಿ-ಧಾನವನ್ನೋಲೈಸಿ ಬಂದೆದೀನಬಂಧು ಸುಗುಣಸಿಂಧುಮಾನತ್ರಾಣವಿತ್ತು ಸಲಹೊ 2ಅಂತರಂಗದಲ್ಲಿ ಪ್ರಾರ್ಥನೆ-ಮಾಡಿದರೆಸ್ವಂತ ಬಂದುಮಾಡುರಕ್ಷಣೆಅಂತ್ಯಕಾಲದಲ್ಲಿ ಹರಿಯಚಿಂತನೆಗೆ ವಿಘ್ನ ಬಾರ-ದಂತೆಕಾವಮಹಾ ತೇಜೋ-ವಂತ ಹೊಂಕಾರಿಸೂರಿ3ಕಾಲಕಾಲದಲ್ಲಿ ಭಕ್ತರ ಮನೋಭೀಷ್ಟಪಾಲಿಸುವ ಚಂದ್ರಶೇಖರಖೂಳಜನರ ಗರ್ವಮುರಿವಶೂಲಪಾಣಿ ಸುಗುಣಶ್ರೇಣಿಮೂಲಪತಿಯ ಪಾದಪದ್ಮಮೂಲದೊಳಗೆ ನಲಿವ ಚೆಲುವ 4ತೋರಿಕೊಳ್ಳದೆಭೂರಿಮಹಿಮೆಯ ಭಕ್ತರಿಂಗಾ-ಧಾರವಾಗಿ ರಾಜಿಸಿರುವೆಯಧೀರ ಲಕ್ಷ್ಮೀನಾರಾಯಣನಸೇರಿದಾನತರ್ಗೆ ಮಂ-ದಾರಮಹೋದಾರ ಗಂ-ಭೀರ ಧೀರ ಚಾರುಚರಿತ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಳಿನಜಾಂಡತಲೆಯದೂಗೆ |ಇಳೆಯು ನಲಿದು ಮೋಹಿಸುತಿರಲು ||ಕೊಳಲ ಪಿಡಿದು ಬಾರಿಸಿದನು |ಚೆಲುವ ಕೃಷ್ಣರಾಯನು ಪಪೊಳೆವ ಪೊಂಬಟ್ಟೆಯ ದಟ್ಟಿ |ಅಳವಡಿಸಿ ನೆಗಹಿನಿಂದ ||ಹಲವು ರನ್ನದುಂಗುರವಿಟ್ಟ |ಚೆಲುವ ಬೆರಳ ನಟಿಸುತ |||ಲಲಿತವಾಮಭಾಗತೋಳ-|ಲೊಲಿದು ಓರೆನೋಟದಿಂದ ||ಬಲದಪಾದಎಡಕೆ ಚಾಚೆ |ನಳಿನಪದಗಳೊಪ್ಪುತಿರಲು 1ಸೆಳನಡುವಿನೊಳಗೆ ಕತ್ತರಿ |ಕಳೆಯ ಸಂಚಿ, ಗಜುಗು ಚೀಲ ||ಬಿಳಿಯ ಮಣಿಯು ಗುಳ್ಳೆಗಳಿರಲು |ಮಲಯಜಾನು ಲೇಪನ ||ಜಲಜನೇತ್ರ ಕೌಸ್ತುಬಾಧಿ-|ಗಳದಿ ಸ್ವರಗಳೊಪ್ಪುತಿರಲು ||ಲಲಿತವೇಣುಕಲ್ಪನೆಯಲಿ ಗೋ-|ವಳರೆಲ್ಲರು ಕುಣಿಯಲು 2ಮಾರವಿ ದೇಸಿ ಗುರ್ಜರಿ ಭೈರವಿ |ಗೌರಿನಾಟಿಸಾವೇರಿ ಆಹೇರಿ ||ಪೂರವಿ ಕಾಂಬೋದಿ ಪಾಡಿ ದೇಶಾಕ್ಷಿ ಶಂ-|ಶಕರಾಭರಣ ರಾಗದಿ ||ಪೂರವಿ ಕಲ್ಯಾಣಿ ವಸಂತ ತೋಡಿ |ವರಾಳಿ ಗುಂಡಕ್ರಿ ಸಾರಂಗ ಸಾಳಗ ||---------------------ಸೋರಟ ಭೂಪಾಳಿ ಶ್ರೀ ರಾಗದಿಂದಲಿ 3ಹರುಷದಿ ಬಾರಿಸುವ ರವಕೆ |ಪುರದ ಸ್ತ್ರೀ ಜನರು ಎಲ್ಲ ||ಮರೆದು ಮಕ್ಕಳ ಮನೆಯ ಕೆಲಸ |ಮರೆದು ಹರಿಯ ಬಳಸಲು ||ಕರಿಯು ಮೃಗವುಕೇಸರಿಶರಭ|ಹರಿಣ ನವಿಲುಉರಗಮೋಹಿಸಿ ||ನೆರೆದು ಮರೆದು ಜಾತಿವೈರವ |ಸ್ವರವ ಕೇಳುತಿರಲು 4ಕರಗೆ ಗಿರಿಯ ಕಲ್ಲು ತರುಗ-|ಳೆರಗಿ ಪಕ್ಷಿ ತತಿಗಳಿರಲು ||ಸುರರುಸುಮನ ಸುರಿಯುತಿರಲು |ಧರೆಯು ಮುದದಿ ಕುಣಿಯುತಿರಲು ||ಶರಧಿಉಕ್ಕಿಸರಿತುಸೊಕ್ಕಿ |ಪುರರಿಪುವಿಧಿಪೊಗಳುತಿರಲು ||ವಿರಚಿಸಿದ ಪುರಂದರವಿಠಲ |ಮುರಲಿಗಾನ ಮಾಡಿದ 5
--------------
ಪುರಂದರದಾಸರು