ಒಟ್ಟು 4835 ಕಡೆಗಳಲ್ಲಿ , 124 ದಾಸರು , 3413 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಯ ಕೃಷ್ಣವೇಣಿ ದುರ್ಜನರ ಗಂಟಲಗಾಣಿ ನಿತ್ಯ ಕಲ್ಯಾಣಿ ಪ ಹರಜಡಿಯಲಿ ಜನಿಸಿ ಹರಿಪಾದ ಜಲವೆನಿಸಿ ಮುರಹರನ ವರ್ಣ ಪೆಸರವನೇ ಪೊತ್ತು ಧರೆಯೊಳಗೆ ಮಹಾಬಳೇಶ್ವರದಲ್ಲಿ ನೆಲೆಯಾಗಿ ಪೊರಿದೆ ಶರಣಾಗತರ ದುರಿತಗಳ ತರಿದೆ 1 ದೋಷರಹಿತಾಥೆರೆಯೊಳು ಸಾಸಿರ ಭಾಗದಲಿ ಆ ಸಲಿಲ ಬಿಂದು ಪವಮಾನ ಬಂದೂ ಬೀಸಿದಾ ಸಮಯದಲಿ ಜೀವರಾಸಿಯ ಮೇಲೆ ಕ್ಲೇಶ ಶೋಕ ವಿನಾಶ 2 ಅಷ್ಟಾರ್ಥಮಾಸ ಕೃಷ್ಣಪಕ್ಷ ಚತುರ್ದಶಿ ಕೃಷ್ಣವಾರ ವಿಷ್ಣು ತಾರೆಯಲ್ಲೀ ಕೃಷ್ಣಕೃಷ್ಣಾ ಎಂದು ನಿಷ್ಠೆಯಿಂದಲಿ ಮನ ಮುಟ್ಟಿ ಸ್ನಾನವ ಮಾಡೆ ಕಷ್ಟ ಪರಿಹರಿಪ 3 ಕಪಟ ಸಂಗಮಛಾಯಾ ಶ್ರೀ ಶೈಲ ವರ ಚತುಸ್ಥಾನಗಳಲಿ ವಾಸಮಾಡಿ ಇರಲು ಕ್ತರನು ಮಾಡಿ ಪೊರದೇ 4 ಕಲಿಯುಗದಿ ಕೃಷ್ಣಾ ಸ್ನಾನ ಕೃಷ್ಣ ಸ್ಮರಣಿ ವೆ ಸತಿ ಪೊಗಳಲು ಸಿರಿ ವಿಜಯವಿಠ್ಠಲ ಕಾಣಿಸಿದಿಯಾ5
--------------
ವಿಜಯದಾಸ
ಜಯ ಜಯ ದ್ವಾರಕಾವಾಸ ಜಯ ಮುನಿಮಾನಸಹಂಸ ಪ. ಜಯ ಕಂಸಾಸುರವಿಧ್ವಂಸ ಯದುಕುಲಾವತಂಸ ಅ.ಪ. ಜಯಗೋಪೀಜನಜಾರ ಜಯ ಕೌಸ್ತುಭಮಣಿ ಹಾರ 1 ಜಯಜಯ ಸನ್ನುತಕಾಯ ಜಯಸುರಮುನಿಗೇಯ ಜಯ ಸಾಗರನಿಲಯ ಜಯ ಶುಭಗುಣವಲಯ 2 ಜಯಜಯ ದೈತ್ಯವಿನಾಶ ಜಯ ನುತಶೇಷಗಿರೀಶ ಜಯಜಯ ಮಂಜುಳಭಾಷ ಜಯ ಪಾಂಡವಪರಿತೋಷ3
--------------
ನಂಜನಗೂಡು ತಿರುಮಲಾಂಬಾ
ಜಯ ಜಯ ನಿಮಗೆ ಜಯವಣ್ಣ ಭಯವಿಲ್ಲೀನುಡಿ ಕೇಳ್ ಚಿಣ್ಣ ಪ ಶ್ರೀ ಮನೋಹರನ ಲೀಲೆಯಿದು ಸು ಕ್ಷೇಮವಹುದು ಸತ್ಪುರುಷರಿಗೆ1 ಈ ಜಗತ್ತನೂ ಈಶ್ವರನೂ ತಾ ರಾಜನಾಗಿ ಕಾಪಾಡುವನು 2 ಕುರುಡರು ತಾವ್ ಕೆಡುವರು ಕೊನೆಗೆ 3 ಇದರೊಳುಂಟು ಬಹುವಿಧ ಭೇದ ವದರುತಿಪ್ಪದು ಸಕಲವೇದ4 ಅಂತ್ಯವಿಲ್ಲದಿಹ ಕಾರಣದಿ ಅ ನಂತ್ಯವೆಂದು ಪೇಳ್ವರು ಭರದಿ 5 ಮನುಜ ಜನ್ಮ ಬಹುದುರ್ಲಭವು ಮನನಶೀಲರಿಗಹುದು ಶುಭವು 6 ಮರೆಯಬೇಡಿ ಜನರೆ ನೀವು ಅರಿತು ಅರಿಯದವರಿಗೆ ನೋವು 7 ಕತ್ತಲೆ ಕೊನೆಯಿಲ್ಲದ ಘೋರ 8 ವುಳಿಯದು ನಿಮಗದು ಕೇಳ್ ಜನರೆ 6 ಧರ್ಮವೆಂಬ ಮೂಟೆಯ ಕಟ್ಟೆ ಬಟ್ಟೆ 10 ಗುರುವಾಜ್ಞೆಯ ಮೀರುವುದು ಸಲ್ಲ ಈ ದುರುಳತನ ನಿಮಗೆ ಸರಿಯಲ್ಲ 11 ನಾನೇ ಶ್ರೇಷ್ಠನೆಂಬುವ ಮಾತು ಶಾನೆ ವಡಕು ಗಡಿಗೆಯು ತೂತು 12 ಹಿಂದಿನವರ ಕಷ್ಟವ ನೋಡಿ ಮುಂದಕೆ ಸತ್ ಸಾಧನೆ ಮಾಡಿ 13 ಮೂರು ಕರಣ ಶುದ್ಧಿಯು ಬೇಕು ಧೀರ ಜನರಿಗಿಷ್ಟೇ ಸಾಕು 14 ಜನರ ನೋಡಿ ನಡೆಯಲಿಬೇಡಿ ಕೊನೆಗೆ ನಿಮಗೆ ಕಾಲಿಗೆ ಬೇಡಿ 15 ಹೆಚ್ಚಪೇಕ್ಷಿಸೆ ಬರುವುದಿಲ್ಲ ಮೆಚ್ಚನು ನಿಮಗೆ ಸಿರಿಯನಲ್ಲ 16 ನಿರ್ಮಲ ಮಾರ್ಗ ಹುಡುಕಿದಿರಾ 17 ಜ್ಞಾನರತ್ನ ಸಂಪಾದನೆಯು ಹೀನ ಜನರಿಗಾಗದು ಕೊನೆಯು 18 ದುರಾಸೆಯಲಿ ಕೆಡುವರು ಕೆಲರು ನರಾಧಮರು ಎಂದೆನಿಸುವರು 19 ಪರಿಯಂತ ತಂ ತಮ್ಮಟ್ಟಿಗಿಹುದು ಅಂತ 20 ಗೂಡಿನ ಮೇಲೆ ದುರಭಿಮಾನ ಮಾಡಿ ಮಾಡಿ ಕೆಡುತಿಹರು ಜನ 21 ಯೀಗೂಡಿಗೆವೊಂದಾಧಾರ ಯೋಗಿಗಳರಿವರಿದರಸಾರ 22 ವರ ರಸಗಳು ನಾಲ್ಕು ತೊಗರು 23 ಹಂಚೇಳರಿಂ ಮಾಡಿಹದೇವ 24 ಘಟಿಸಿರುವುದು ಪತ್ತಲೆಯಿದರೊಳ್ 25 ಮರನಿದೆಂದು ಶಾಸ್ತ್ರದ ಮೂಲ ಅರಿಯದೆ ನಾನೆಂಬೆನು ಬಾಲ 26 ಪಕ್ಷಿಗಳೆರಡೀ ಮರದಲ್ಲಿ ಸಾಕ್ಷಿ ಒಂದು ಒಂದಕೆ ಅಲ್ಲಿ 27 ಮರದ ಪಣ್ಣು ತಿಂಬುವದೊಂದು ನಿರುತವು ನೋಡುತಿರುವದೊಂದು 28 ದ್ವಾಸುಪರ್ಣ ಶೃತಿ ಇದರರ್ಥ ದಾಸನಾಗದಿರುವನು ವ್ಯರ್ಥ 29 ಅಧ್ಯಾತ್ಮ ವಿದ್ಯದಲಿ ತೋರುವುದೇ 30 ಜೀವನಾಮ ಆತ್ಮನಿಗುಂಟು ದೇವತಾನು ತಬ್ಬಿದ ಗಂಟು 31 ಅಭೇದ ಶೃತಿಗಳೇನಕ ವಿಧ ಸ್ವಭಾವದಿರುನಡೆ ತೋರುವದ32 ಸುರರುತ್ತಮರು ನರರಾನಿತ್ಯ ಸುರೇತರರು ನೀಚರು ಸತ್ಯ 33 ನೂರು ವರುಷ ಬದುಕುವರೆಂದು ಮೀರಿ ಮನದಿ ಯೋಚಿಸಿ ಮುಂದು 34 ಬಹು ಧನಾರ್ಜನೆಯ ವೂಹೆಯಲಿ 35 ಮೊದಲು ಅನ್ನಕಿಲ್ಲೆಂದು ಮತಿ ವಿಧ ವಿಧ ವಸ್ತ್ರಗಳಲಿ ಪ್ರೀತಿ 36 ನಾಬಡವನು ಎಂದಗಲಿರುಳು 37 ತನಗೆ ಬೇಕಂತ ಚಿಂತೆಯೊಳು 38 ಇತರರ ನೋಡಿ ತನಗಪೇಕ್ಷೆ ಗತಿ ಇಲ್ಲದೆ ಇರುವುದೆ ಶಿಕ್ಷೆ 39 ತಾವ್ ಸಮಂಜಸದಿ ಪೇಳಿದರು 40 ಪ್ರವೃತ್ತಿ ಮಾರ್ಗದ ಸಂಪತ್ತು ಭವಾಂಬುಧಿ ಸುಳಿಯು ವಿಪತ್ತು 41 ಫಲವ ಕೋರಿ ಕರ್ಮವ ಮಾಡಿ ಹಲವು ಯೋನಿಗಳೊಳೋಡಾಡಿ42 ಮರಳಿ ಮರಳಿ ಜನನ ಮರಣದೆ ದರಿಯ ಕಾಂಬ ಬಗೆ ದಾರಿಯದೆ 43 ಇದುವೆ ದೊಡ್ಡ ಸಂಸೃತಿ ವೃಕ್ಷ ತುದಿ ಮೊದಲಿಗು ದೊರಕದು ಮೋಕ್ಷ 44 ಇನ್ನು ಅಕ್ಕ ತಂಗಿಯು ಮೊದಲು 45 ಸತಿ ಸುತರು ಬಳಗಗಳು 46 ಇವರು ತನ್ನವರಿತರರಲ್ಲ ಭವ ಜಲಧಿಯ ಜಂತುಗಳೆಲ್ಲ 47 ಕೊಡದಿದ್ದರೆ ಕೋಪವು ಬಹಳ 48 ವಿತ್ತವಿರಲು ಬಂಧುಗಳೆಲ್ಲ ಹತ್ತಿ ಇವನ ಬಾಧಿಪರೆಲ್ಲ 49 ಸುಳ್ಳುಹೇಳಿದರೆ ಬಹುನಂಬಿಕೆ 50 ಹಿತೋಪದೇಶದಿ ಬಹುಕೋಪ ಪತಿತ ಜನರಿಗೆ ಇದು ಪಾಪ 51 ಒಬ್ಬ ದೈವಲೋಕಕೆ ಸತ್ಯ ಹಬ್ಬವವನ ಭಜಿಪುದಗತ್ಯ 52 ಕಾಮುಕರಿಗೆ ಕಡೆಗೂ ದುಃಖ ನೇಮವದಕೆ ಮೂಲವುರೊಕ್ಕ 53 ಸ್ಪøಹದಿಂದಲೆ ಕೋಪವು ಬಹುದು ವಿಹಿತವೆಂದು ನಗುವನೆ ಸಾಧು 54 ಲೋಭದಿಂದ ಮೂಲಕೆ ನಾಶ ಸ್ವಾಭಾವ್ಯದಿ ದುರ್ಜನಕಾಶಾ 55 ರಾಶಿ ಧನವ ಕೊಳ್ಳೆಯು ಕೊಡುವ 56 ದಾನಕೆಂದರಿಲ್ಲವು ಕಾಸು ದಂಡಕೊಡುವುದಕೆ ಬಹುಲೇಸು 57 ನಷ್ಟವಾದರೂ ಮನಕಿಷ್ಟ ದುಷ್ಟಾತ್ಮರು ಪಡುವರು ಕಷ್ಟ 58 ಆರ್ಯರುಕ್ತಿ ಕೇಳುವುದಿಲ್ಲ ಕಾರ್ಯದಲಿ ವಿಘಾತವೆ ಎಲ್ಲ 59 ಧನವಿದ್ದರು ಸೌಖ್ಯವು ಕಾಣೆ ಘನದುರಾಸೆ ಕುಜನರಿಗೆ ಆಣೆ 60 ಭೂಮಿ ಉಂಟು ತನಗೆಂಬುವರು ನೇಮದಿ ದಂಡವ ತೆರುತಿಹರು 61 ಮಳೆಬೆಳೆಯನು ನಿಂದಿಪರು ಕೆಲರು ಖಳರು ಸುಮನಸರ ದೂಷಿಪರು62 ಮೊದಲು ತುದಿಯಲಿ ದುರಭಿಮಾನ 63 ವ್ಯಾಪಾರದಿ ಧನ ಕಳಕೊಂಡು ಕೋಪ ವ್ಯಾಜ್ಯಕೆಳೆವದೆ ಫಂಡು 64 ಬಲುಧನವ ಕೂಡಿಸುತಲಿ ಮುಂದು 65 ಮುಖದಾಕ್ಷಿಣ್ಯದಿ ಮಾತಾಡಿ ವಿಕಲರನರ ಸ್ನೇಹದಿ ಕೂಡಿ66 ದೊಡ್ಡದಾಗಿ ಮನೆಯನು ಕಟ್ಟಿ ದುಷ್ಟತನದಿ ವಾದಿಸಿ ಬಿಟ್ಟಿ 67 ಕೂಲಿಯವರ ಹೊಟ್ಟೆಗೆ ಕೊಡದೆ ಲೋಲನಾಗಿ ವಂಚನೆ ಬಿಡದೆ 68 ಸಂಸಾರವಿದೆ ಸ್ಥಿರವೆಂದು ಹಿಂಸೆಪಡುತಲಿ ಸದಾನೊಂದು 69 ಚತುರ ಶೀತಿ ಲಕ್ಷಯೋನಿಗಳೊಳ್ ಮತಿಹೀನರಾಗಿ ಜನಿಸುತಲೂ 70 ಭದ್ರವು ತಮಗೆಂದು ಪ್ರಾಣಿಗಳು 71 ಇದಕ್ಕಾಗಿ ಪರಾಧೀನದಲಿ ಪದೇ ಪದೆಗೆ ತಾವು ನೋಯುತಲಿ 72 ಮನುಜ ಜನ್ಮ ಬರುವುದೆ ಕಷ್ಟ ಮಾನಿತನಾದವನೆ ಅತಿ ಶ್ರೇಷ್ಠ 73 ಭೋಧಿಸುವಾತನೆ ಶುಭತಮನು 74 ಸುಜನರಿಲ್ಲವವರದೆ ಪಂಥ 75 ಕರ್ಮಾರ್ಥ ಶೃತಿ ಗಹನದಲಿ ನಿರ್ಮಲರಾಗದೆ ಚಿಂತೆಯಲಿ&ಟಿbsಠಿ
--------------
ಗುರುರಾಮವಿಠಲ
ಜಯ ಜಯ ಪೂರ್ಣಾನಂದ ಜಯ ಜಯ ಗೋಪಿಯ ಕಂದ ಜಯ ಜಯ ವೆಂಕಟ ರಮಣ ರಕ್ಷಿಸು ಕೃಪೆಯಿಂದ ಪ. ಕೃಷ್ಣ ಕೈವಲ್ಯದ ಕರುಣಾ ದೃಷ್ಟಿಯಿಂದಲಿ ನೋಡು ಶರಣಾ ಅಷ್ಟಮದೈಶ್ವರ್ಯ ಕಾರಣ ಕೌಸ್ತುಭಾಭರಣ 1 ನಿತ್ಯ ಮಂಗಳರೂಪ ನಿರ್ಮಲ ಚಿತ್ತ ಚಿದಾನಂದ ಮೂರ್ತಿ ಭೃತ್ಯ ವರ್ಗದೊಳೆನ್ನ ಗ್ರಹಿಸೆ ನಿನಗೆ ಬಹು ಕೀರ್ತಿ 2 ಇನ್ನೊಂದು ದೈವವನರಿಯೆ ನಿನ್ನ ಚರಣ ಪದ್ಮ ಮರೆಯೆ ಪನ್ನಗಾಚಲವಾಸ ಪರಿಪಾಲಿಸು ಬೇಗ ದೊರೆಯೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಯ ಜಯ ಶ್ರೀ ಹರಿ ಶೌರಿ ಜಯ ಜಯ ಮಂದರಧಾರಿ ಜಯ ಜಯ ಶ್ರೀ ಮುರವೈರಿ ಕಂಸಾರಿ ಪ ಮುತ್ತಿನ ಮಂಟಪದಿ ರತ್ನಪೀಠವನಿರಿಸಿ ಅರ್ಥಿಲಿ ಬಾ ಹಸೆಗೆನ್ನುತ ಕರೆವರು ಮುತ್ತೆ ೈದೆಯರುಗಳು 1 ಇಂದಿರೆ ರಮಣ ಬಾ ಕಂದರ್ಪ ಜನಕ ಬಾ ಸುಂದರಾಂಗನೆ ಬಾ ಹಸೆಗೆನ್ನುತ ಚಂದದಿ ಕರೆದರು 2 ಕಂಬು ಕಂದರೆಯೆ ಬಾ ಅಂಬುಜ ಮುಖಿಯೆ ಬಾ ಸಂಭ್ರಮದಲಿ ಬಾ ಹಸೆಗೆನ್ನುತ ಕರೆದರು ಅಂಬುಜ ಮುಖಿಯರು 3 ನಾರಿ ರುಕ್ಮಿಣಿ ದೇವಿ ನಾರದ ವಂದ್ಯನಿಗೆ ಚಾರು ಪರಿಮಳ ಅರಿಶಿನ ಕುಂಕುಮ ಹಾರವನರ್ಪಿಸುತ 4 ಪರಿ ಕುಸುಮಗಳ ಪದಕÀ ಪುಷ್ಪದ ಮಾಲೆ ಪರಮಾತ್ಮನ ಕೊರಳಿಗೆ ಹಾಕುತ ಅಲಂಕರಿಸಿದಳಾಗ5 ಜಯ ಜಯ ಶ್ರೀ ಕೇಶವನೆ ಜಯ ಜಯ ನಾರಾಯಣನೆ ಜಯ ಜಯ ಶ್ರೀ ಮಾಧವನೆ ಜಯ ಜಯ ಗೋವಿಂದ 6 ಜಯ ಜಯ ಶ್ರೀ ವಿಷ್ಣುಹರೆ ಜಯ ಜಯ ಶ್ರೀ ಮಧುಸೂದನನೆ ಜಯ ಜಯ ಶ್ರೀ ತ್ರಿವಿಕ್ರಮನೆ ಜಯ ಜಯ ವಾಮನನೇ 7 ಜಯ ಜಯ ಶ್ರೀ ಶ್ರೀಧರನೇ ಜಯ ಜಯ ಶ್ರೀ ಹೃಷಿಕೇಶ ಜಯ ಜಯ ಶ್ರೀ ಪದ್ಮನಾಭ ಜಯ ದಾಮೋದರನೆ 8 ಜಯ ಜಯ ಸಂಕರ್ಷಣನೆ ಜಯ ಜಯ ಶ್ರೀ ವಾಸುದೇವ ಜಯ ಜಯ ಶ್ರೀ ಪ್ರದ್ಯುಮ್ನ ಅನಿರುದ್ಧ 9 ಜಯ ಜಯ ಶ್ರೀ ಪುರುಷೋತ್ತಮನೆ ಜಯ ಜಯ ಶ್ರೀ ಅಧೋಕ್ಷಜನೆ ಜಯ ಜಯ ಶ್ರೀ ನಾರಸಿಂಹ ಜಯ ಜಯ ಅಚ್ಚುತನೆ 10 ಜಯ ಜಯ ಶ್ರೀ ಜನಾರ್ದನನೆ ಜಯ ಜಯ ಶ್ರೀ ಉಪೇಂದ್ರಹರೇ ಜಯ ಜಯ ಶ್ರೀ ಹರಿ ಶ್ರೀಶಾ ಜಯ ಜಯ ಶ್ರೀ ಕೃಷ್ಣಾ11 ಇಂತು ದೇವನ ಸ್ತುತಿಸಿ ಸಂತಸದಿ ವೀಳ್ಯವನು ಕಂತು ಪಿತನಿಗೆ ಅರ್ಪಿಸಿ ಮುದದಿ ವಂದಿಸಿ ಭಕ್ತಿಯಲಿ12 ಕಮಲಾಕ್ಷಿಯರು ಕೂಡಿ ಕನಕದಾರತಿ ಪಿಡಿದು ಕಮಲನಾಭ ವಿಠ್ಠಲ ಲಕ್ಷ್ಮೀಯರಿಗೆಬೆಳಗಿದರಾಗ 13
--------------
ನಿಡಗುರುಕಿ ಜೀವೂಬಾಯಿ
ಜಯ ಜಯ ಸಕಲಾಧಾರಾ | ಕೃಷ್ಣ ಜಯ ಜಯ ಭಕ್ತೋದ್ಧಾರಾ ಜಯಸಕಲಾಲಂಕಾರಾ | ಕೃಷ್ಣಾ ಯಮುನಾ ವೇಗ ಸಂಹಾರಾ ಜಯ ಜಯ ನಂದಕುಮಾರಾ ಕೃಷ್ಣ ಜಯ ಜೀಮೂತ ಶರೀರಾ ಪ ದೇವಕೀಕುಮಾರಾ ನಿಗಮಗೋಚರಾ ಶಂಖಚಕ್ರಧರ ವಸುದೇವಾನಂದಕರ ಸುರುಚಿರ ಪೀತಾಂಬರಧರ 1 ನಯನ ಮನೋಹರ ಗೋಪೀ ಮಂದಿರ ಸರಸಿಜ ದುರುಳ ಭಯಂಕರ ಶಕಟ ಬಕಾಂತಕ ಶೂರಾ ಕೃಷ್ಣ ಪೂತನಿ ಸಂಹಾರಾ ಅಜ ಸುರ ಮುನಿ ಪರಿವಾರ2 ಧೇನುಕ ದೈತ್ಯವಿದಾರಾ | ಕೃಷ್ಣ ಮರಕತ ಮಣಿಮಯ ಹಾರಾ ತರುಣೀ ಮಣಿಗಣನಿಕರಾ | ಕೃಷ್ಣ ಸರಸಿಜಲಸದಾಕಾರಾ ನವನೀತಕರಾ ಘನ ಮುರಳೀಧರ | ಕುಂಜವಿಹಾರಾ ವಿಷಧರ ಭಯಹರ ಗೋವರ್ಧನಧರ | ಮುಷ್ಟಿಕ ಮಧುರಾ 3 ವಿಹಾರಾ | ಕೃಷ್ಣ ನಾದಾನಂದ ಪ್ರಚಾರಾ ಅಕ್ರೂರಾನತ ಚರಣಾ | ಕೃಷ್ಣ ಮುನಿಜನ ಹೃದಯಾಭರಣ ಕುಬ್ಜಾವಂದಿತ ಚರಣ | ಕೃಷ್ಣ ಘನಮಹಿಮಾ ವಿಸ್ತರಣ ಗೋಪೀಜನಗಣ ಮೌಢ್ಯನಿವಾರಣ 4 ದುರುಳ ವಿದಾರಣ | ಭವಜನಕರುಣ ಹಲಧರ ಭುಜಬಲ ಪ್ರಾಣಾ ಕೃಷ್ಣ ಬೃಂದಾರಕಗಣ ಪ್ರಾಣ 5 ಶಿಶುಪಾಲೋತ್ಸವ ಬಾಣಾ | ಕೃಷ್ಣ ರುಕ್ಮ ಲೋಭ ಮದ ಯಾಣಾ ಅರಿಕುಲ ಸೈನ್ಯ ಕೃಪಾಣಾ | ಕೃಷ್ಣ ಚತುರೋಪಾಯ ಪ್ರವೀಣಾ ರುಕ್ಮಿಣೀರಮಣ ಶುಭಕರಕಂಕಣ ಪಾಂಡವಪೋಷಣ ಹರಣ ಚಕ್ರವಿಭೂಷಣ6 ದ್ರುಪದಸುತಾನತಚರಣಾ | ಕೃಷ್ಣ ಪರಮಾನಂದಾವರಣ ವಿದುರಾನತ ನೀಲಾಂಗ | ಕೃಷ್ಣ ಕರಧೃತವ್ಯರಥಾಂಗ ಕುರುಕುಲ ವನ ಸಾರಾಂಗಾ | ಕೃಷ್ಣ ಗೀತಾವನಜತರಂಗಾ ಕಮಲಾ ಅಂಗ | ಸತ್ವ ತುರಂಗಾ | ಧರ್ಮವಿಹಂಗಾ 7 ಮಾಂಗಿರಿ ರಂಗ ಸುಧಾಂಗಾ ಶುಭಾಂಗ | ಜಯ ಜಯ ಮಾಂಗಿರಿ ರಂಗಾ | ಕೃಷ್ಣ ಜಯ ಜಯ ಗರುಡ ತುರಂಗಾ 8
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಜಯ ಜಯವೆನ್ನಿ ಗುರು ಜಗದೀಶಗೆ ಜಯ ಜಯ ಜಗತ್ರಯ ಪಾವನಗೆ ಧ್ರುವ ಆನಂದೊ ಬ್ರಹ್ಮ ಆನಂದ ಕಂದಗೆ ಅನುದಿನ ಜಯ ಜಯ ಅನುಪಮಗೆ ಸನಕ ಸನಂದನ ವಂದಿತಗೆ ಮುನಿಜನ ಹೃದಯ ನಿವಾಸಗೆ 1 ನಿತ್ಯ ನಿರ್ಗುಣಗೆ ಅಗಣಿತಗುಣ ಪರಿಪೂರ್ಣಗೆ ಝಗಿಝಗಿಸುವ ಜಗನ್ಮೋಹನಗೆ ಜಗಜ್ಜೀವ ಜಗದಾತ್ಮಗೆ 2 ಜಯ ಜಯ ಮಂಗಳ ಮಹಾಮುನಿಗೆ ಮಹಿಮಾನಂದ ಗುರುಮೂರ್ತಿಗೆ ಮಹಿಪತಿ ಸ್ವಾಮಿ ಸರ್ವೋತ್ತಮಗೆ ಜಯ ಜಯವೆನ್ನಿರೊ ಜಗದೊಳಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ಜಯಾ ಶ್ರೀ ವೆಂಕಟೇಶ ಜೀಯ ಪ ಜಯ ಶ್ರೀ ವೆಂಕಟೇಶಜೀಯ ನೀನೆ ಭಯಪ್ರದಾಯಕನಯ್ಯ ||ಆಹಾ|| ಭಯಕೃದ್ಭಯನಾಶನ ನೀ ಎನ್ನ ಕೈಬಿಡದೆ ಕಾಯೊ ಎನ್ನೊಡೆಯನೆ ವೇಂಕಟರಾಯ ಅ.ಪ ಮಂಕುಮಾನವನಾದ ಎನ್ನ ಮನದ ಡೊಂಕು ತಿದ್ದಿದಿ ಸ್ವಪನವನ್ನ ನಿನ್ನ ಅಂಕಿತದಂತೆ ನುಡಿಸೆನ್ನ ಇನ್ನು ಮಂಕುಹರಿಸಿದೆ ಪ್ರಸನ್ನ ||ಆಹಾ|| ಬಿಂಕದಿಂದ ಇಹ ಶಂಕೆ ಹರಿಸಿ ನಿನ್ನ ಕಿಂಕರ ಕಿಂಕರ ಕಿಂಕರನೆನಿಸಿದೆ 1 ಹಿಂದನೇಕ ಪರಿಯಿಂದ ಮನ ಬಂದಂತೆ ನುಡಿಸಿದ್ದರಿಂದ ತಂದೆ ಮುದ್ದು ಮೋಹನ ವಿಠ್ಠಲಾನಂದ ಪೊಂದಿ ಸಂದೇಹ ಹರಿಸಿದ ಚಂದ ||ಆಹಾ|| ಇಂದು ಮುಂದು ಎಂದೆಂದಿಗೂ ನೀ ಭವ ಬಂಧ ಹರಿಸಿ ಕಾಯಬೇಕು ಇಂದಿರೆರಮಣ2 ತ್ವರಿತಾದಿ ದಯಮಾಡೋ ಹರಿಯೆ ನೀನೆ ನಿರುತ ಎನ್ನಯ ಕುಲದ ದೊರೆಯೇ ಭಕ್ತ ಪರಿಪಾಲ ಮೋಕ್ಷದ ಹರಿಯೇ ನಿನ್ನ ಹೊರತು ರಕ್ಷಕರ ನಾನರಿಯೆ ||ಆಹಾ|| ಪರಮಕರುಣಿ ಶ್ರೀ ವೇಂಕಟೇಶಾಭಿನ್ನ ಉರಗಾದ್ರಿವಾಸವಿಠಲ ಜಗದೀಶನೆ 3
--------------
ಉರಗಾದ್ರಿವಾಸವಿಠಲದಾಸರು
ಜಯ ದೇವ ಜಯ ದೇವ ಜಯ ಗುರು ನಾಗೇಶ ದಯಗುಣದಲಿ ನೀ ಮಾಡೊ ಭವತಾಪ ನಾಶ ದ್ರುವ ಜನ್ಮ ಮರಣಗಳೆಂಬ ಖಚ್ಚಿಖವಡಿಗಳು ನಿಮ್ಮ ನಾಮಸ್ಮರಣಿಲೆ ಓಡುದು ದುರಿತಗಳು ಬ್ರಹ್ಮಾನಂದದ ಸುಖ ಭಾಸುದು ಮನದೊಳು ನಮ್ಮ ಸ್ವಾಮಿ ನೀನೆ ಅಹುದೊ ಕೃಪಾಳು 1 ತಾಪತ್ರಯವೆಂಬುದು ಬಲು ಪೀಡಿಯ ಗುಣ ಆಶೆÀ ನೀನೆ ಪರಿಹಾರ ಮಾಡೊ ಘನ ಕರುಣ ಕೋಪತಾಪವೆಂಬುದು ತದ್ದುದುರೀಯ ಗುಣ ಕೃಪೆಯಿಂದಲಿ ಮಾಡುದು ನಿಮ್ಮ ಶ್ರಮ ನಿರ್ವಾಣ 2 ದುರಿತ ಸಂಹಾರ ಸುರಜನ ಸಹಕಾರ ಕರುಣಾಕರ ಗುರುಮೂರ್ತಿ ಮುನಿಜನ ಮಂದಾರ ತರಳ ಮಹಿಪತಿಸ್ವಾಮಿ ಘನ ಕೃಪಾಕರ ಶರಣ ರಕ್ಷಕ ಪೂರ್ಣ ನೀ ಜಗದೋದ್ಧಾರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಗುರು ಮೈಲಾರಿ ಮನಮೈಲ ಮರ್ದಿಸಿದಯ್ಯ ನೀನೆ ಅಸುರಾರಿ ಧ್ರುವ ಖಡ್ಗವ ಕರದಲಿ ಪಿಡಿದು ಖಂಡಿಸಿದಙÁ್ಞನ ಖಂಡೇರಾಯೆನಿಸಿಕೊಂಡು ಪ್ರಕಟಿಸಿದನುದಿನ ಹಿಂಡದೈವಕೆ ಪ್ರಚಂಡನಹುದೊ ಪರಿಪೂರ್ಣ ಮಂಡಲದೊಳು ನಿಮ್ಮ ಕೊಂಡಾಡುದು ತಾ ಸುರಜನ 1 ಮಲಹರಣ ಮಾಡಲು ಧರಿಸಿ ಅವತಾರ ಮೂಲೋಕ ಪಾವನಮಾಡುವ ಸಹಕಾರ ಸಲಹುವೆ ಭಕ್ತಜನರಿಗೆ ನೀ ಘನ ಮಂದಾರ ಮಲೆತಿಹ ದೈತ್ಯರ ಸಂಹರಿಸುವೆ ನೀ ಅತಿಶೂರ 2 ಪತಿ ಅಹದು ಶ್ರೀಗುರು ಭೂಪತಿ ಬಾಹ್ಯಾಂತ್ರಿ ಬೆಳಗುವೆ ಶ್ರೀಪಾದಕೆ ಆರ್ತಿ ಇಹಪರಕೆ ದಾತನಹುದೊ ಶ್ರೀಪತಿ ಜಯಜಯವೆಂದು ಬೆಳಗುವೆ ದಾಸ ಮಹಿಪತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಜಗಜೀವನ ಕರ ರತ್ನ ಧ್ರುವ ಅಜ ಸುರ ಮುನಿ ಪ್ರಾಣ ರಾಜೀವ ನಯನ ಸುಜನ ಸುಭೂಷಣ ತ್ರಿಜಗ ಪಾವನ 1 ಭಕ್ತ ಜನ ಉದ್ಧಾರ ಘನಗುರು ದಾತಾರ ಪತಿತಪಾವನಮೂರ್ತಿ ಮುನಿಜನ ಮಂದಾರ ಅತಿಶಯಾನಂದ ಅನುಪಮ ವ್ಯಾಪಕ ನಿರ್ಧಾರ ಸತತ ಸುಪಥ ಸದ್ಗುರು ಸಹಕಾರ 2 ಸಹ್ಯಾದ್ರಿ ಗಿರಿವಾಸ ಶ್ರೀಗುರು ಸರ್ವೇಶ ಬಾಹ್ಯಾಂತ್ರ ಪರಿಪೂರ್ಣ ಜಗದೀಶ ಮಹಿಪತಿಸ್ವಾಮಿ ಶ್ರೀ ದೇವದೇವೇಶ ದಾತ ಭಾಸ್ಕರಕೋಟಿ ಪ್ರಕಾಶ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ಜಗನ್ನಾಥ ದಯಗುಣದಲಿ ಪರಿಪೂರ್ಣ ಶ್ರೀಗುರು ಮನ್ನಾಥ ಧ್ರುವ ಅಂದಿಗಿಂದಿಗೆ ನೀನೆ ನಿತ್ಯನುಭವದಿಂದ ತಂದಿ ತಾಯಿ ನೀನೆ ಶ್ರೀಹರಿ ಮುಕುಂದ ಬಂಧುಬಳಗ ನೀನೆ ಕುಲಕೋಟಿಗಳಿಂದ ಎಂದೆಂದೆನಗೆ ನೀನೆ ಫಲದೊಲವಿಂದ 1 ಸೃಷ್ಟಿ ಜನ ಪಾಲಕ ನೀನೆ ಸದ್ಗುರು ರನ್ನ ಸೃಷ್ಟಿಯಲಿ ಪೊಗಳುತಲಿ ಶ್ರುತಿಸ್ಮøತಿಗಳು ನಿನ್ನ ಇಷ್ಟ ಕುಲದೈವಗಳೆಂಬುದು ನೀ ಎನ್ನ ದೃಷ್ಟಿಸಿ ಮಾಡುವ ಭಕ್ತಜನರಿಗೆ ಪಾವನ್ನ 2 ಮನೋಹರ ಮಾಡುವ ಮಂಗಳಕರಮೂರ್ತಿ ಘನ ಸುಖದಾಯಕ ನೀನೆ ಜ್ಞಾನದ ನಿಜಸ್ಫೂರ್ತಿ ಭಾನುಕೋಟಿತೇಜ ನೀನೆ ಸಕಲಸಾರ್ಥಿ ಅನುದಿನ ಮಾಡೊ ಮಹಿಪತಿ ಶ್ರೀಪಾದಕೆ ಆರ್ತಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವ ಜಯ ದೇವ ಜಯ ನಿರಂಜನ ಭಂಜನ ಗುರು ತಾರಕ ಋಷಿಮುನಿ ಜೀವನ ಧ್ರುವ ಅನಂತ ಗುಣ ಪರಿಪೂರ್ಣ ಅನಂದಮಯ ಘನ ಸ್ವಾನಂದ ಸದೋದಿತ ಸದ್ಗುರು ನಿಧಾನ ಅನಾದಿ ಮಹಿಮಾನಂದ ಸುಙÁ್ಞನಾಂಜನ ಅನೇಕ ಸಕಲಾಗುಮಪೂಜಿತ ಸೇವಿತ ತ್ರಿಭುವನ 1 ಕಲ್ಪತರು ಚಿಂತಾಯಕ ಅನಾಥ ರಕ್ಷಣ ತ್ರಿಜಗ ಜೀವನ ಅತೀತ ಸುಙÁ್ಞನ ಭಕ್ತ ಕೃಪಾನಿಧಿ ವಿಶ್ವವಂದನ 2 ಸಜ್ಜನ ಸಂಜೀವನ ಸದ್ಗುರು ಚಿದ್ಫನ ಸಗುಣ ನಿರ್ಗುಣ ಸಹಕಾರ ಸುರಮುನಿ ರಂಜನ ಮಹಿಪತಿ ತಾರಕ ಗುರು ಪತಿತಪಾವನ ಸದ್ಬ್ರಹ್ಮಾನಂದ ಸದೋದಿತ ಸದ್ಗತಿ ಸಾಧನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯ ದೇವಿ ಜಗನ್ಮಯೆ ಪಾಹಿ ಜಯ ದೇವಿ ಜಗನ್ಮಯೆ ಪಾಹಿ ಪಜಯ ವಾಗೀಶ್ವರಿ ಜಯ ಕಮಲಾಲಯೆ ಜಯ ಗಿರಿಸುತೆ ಜಯ ಜಾನಕಿ ಅ.ಪಶರಹರಕಲಮಾಯಾಬಿಂದುತ್ರಯಪರಿಶೋಭಿತ ಮನು ಸಂಘಾರಾಧ್ಯೆ 1ಚಂಡಿ ಭಂಡ ಶುಂಭನಿಶುಂಭಾರ್ಧಿನಿಪಂಡಿತವರ್ಧಿನಿ ಪರಮಾರಾಧ್ಯೆ 2ದಶಮುಖ ಪಂಚತ್ವಾಗಮ ಕಾರಣೆದಶದಶವದನಾರ್ದನಿ ನಿರವದ್ಯೆ 3ವಿಧಿ ಹರಿ ಹರ ರುದ್ರೇಶ್ವರ ಭಾವಿತೆಮಧುಸೂದನ ಹೃದಯ ಸದುದವಸಿತೆ 4ವಿಧಿವದನಾಲಯೆ ವಿಧುಧರ ವಾಮಗೆಬುಧ ಹೃನ್ಮುಖ ಕರಣಾಶ್ರಯೆ ಸದಯೆ 5ಷೋಡಶ ಪಂಚಕ ಪಂಚಕ ದಶವಿಧಗೂಢಾಕ್ಷರಮಯ ಶೋಭನ ಗಾತ್ರೆ 6ತಿರುಪತಿ ಕಕುದ್ಗಿರಿ ಪುಣ್ಯ ನದೀ ನದಶರನಿಧಿ ಮಹಿಮಾಸ್ಪದೆ ಶುಭ ವರದೆ 7ಓಂ ಮಾುನೇ ನಮಃ
--------------
ತಿಮ್ಮಪ್ಪದಾಸರು
ಜಯ ಮಂಗಳ ಶುಭ ಶುಭ ಮಂಗಳ ಪ ಜಯ ಮಂಗಳ ಜಗದುದರ ಶ್ರೀದೇವಗೆ ಶುಭ ಮಂಗಳ ಸುಂದರ ವರಲಕ್ಷ್ಮಿಗೆ 1 ಜಯ ಮಂಗಳ ಭಕ್ತರ ಪರಿಪಾಲಗೆ ಭಾರ್ಗವಿ ಮಹಲಕ್ಷ್ಮಿಗೆ 2 ಶುಭ ಶುಭ ಕಮಲಾಸನ ಪಿತನರಸಿಗೆ 3
--------------
ನಿಡಗುರುಕಿ ಜೀವೂಬಾಯಿ