ಒಟ್ಟು 1875 ಕಡೆಗಳಲ್ಲಿ , 111 ದಾಸರು , 1413 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾಸುದೇವ ಹರಿ ವಿಠಲಾ | ಪೋಷಿಸುವುದಿವನಾ ಪ ನೀಸಲಹದಿರೆ ಅನ್ಯ | ಆಶ್ರಯಗಳುಂಟೇ ಅ.ಪ. ದಾಸವೃತ್ತಿಯಲಿದ್ದು | ಮೀಸಲಳಿಯದೆ ಇರುವದಾಸದೀಕ್ಷಾಂಕಿತವು | ಲೇಸು ದೊರೆಯದಲೇ |ಘಾಸಿ ಪಡುತಲಿ ಮನದಿ | ಆಶ್ರಯಿಸಿ ಎನ್ನ ಸುಪ್ತೀಶ ಸೂಚ್ಯಪರಿ ಉಪ | ದೇಶವಿತ್ತಿಹೆನೋ 1 ಒಂದೊಮ್ಮೆ ಇವನಮ್ಮ | ಬಂಧುವೆಂದೆಣಿಸಿಹನೊಇಂದಿರಾಪತಿ ಹರಿಯೆ | ಕಂದರ್ಪಜನಕಾತಂದೆತಾಯಿಯು ನೀನೆ | ಕುಂದುನೆಣಿಸದೆ ಇವನಾಛಂದದಲಿ ಸಲಹೊ ಹರಿ | ನಂದ ಮುನಿವಂದ್ಯಾ 2 ತಾರತಮ್ಯಜ್ಞಾನ ಮೂರೆರಡು ಭೇದಗಳವಾರವಾರಕೆ ತಿಳಿಸಿ | ಕಾಪಾಡೊ ಹರಿಯೇ |ಮಾರಪಿತಮುರಮೈರಿ | ವೈರಾಗ್ಯ ಭಾಗ್ಯಕ್ಕೆದಾರಿತೋರುತ ಪೊರೆಯೊ | ವಾರಿಜಾಂಬಕನೇ 3 ಉತ್ತಮಾನುಷ್ಠಾನ | ಇತ್ತು ಈತಗೆ ನೀನುಚಿತ್ತದೊಳು ವ್ಯಾಪ್ತ ಸ | ರ್ವತ್ರ ಸ್ಮøತಿಯಿತ್ತು |ಎತ್ತು ಭವವನಧಿಯಿಂ | ಕೃತ್ತಿವಾಸನ ತಾತಮತ್ತನ್ಯ ಬೇಡೆ ನಿನ | ಚಿತ್ತದೊಲ್ಲಭನೇ 4 ದೇವ ದೈತ್ಯರು ದೇಹ | ಆವಾಶಿವಿಹರೆಂಬಭಾವಗಳ ತಿಳಿಸುತ್ತ | ತೀವ್ರುಪಾಸನವಾ |ದೇವ ಇವಗಿತ್ತು ಸಂ | ಭಾವಿಪುದು ಶ್ರೀಹರಿಯೆಗೋವಿಂದಾಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವಾಸುದೇವನ ಭಜಿಸೊ ಪ ವೇಷಹಾಕಿದರೇನು ವೇದಾರ್ಥ ತಿಳಿದೀತೆ ಅ.ಪ ಉದರಂಭರಣಕ್ಕಾಗಿ ಪದ ಪದ್ಯಗಳ ಹೇಳಿ ತುದಿಮೊದಲಿಲ್ಲದ ದೋಷಕೆ ಗುರಿಯಾಗಿ ಸದಮಲನೆಂದರೆ ಸರ್ವರು ನಗರೇನೊ 1 ದುರಿತ ಪರಿಹರವೆಂದು ಆಡುತಲಿದೆ ಶೃತಿಯು ಕರಣತ್ರಯವು ಶುದ್ಧಿಯಿರ ಬೇಕದಕೆ ಮುಖ್ಯ ಕಾರಣ ಬಾಯಿಂದ ನುಡಿದರೇನಾಯಿತು2 ಪಂಚಸದ್ವರ್ಣಾವು ಪರಮಾತ್ಮನ ನಾಮ ವಂಚನೆ ಇದರೊಳಿಲ್ಲಾ ಸರ್ವರು ನುಡಿವರು ಗರ್ವವೇತಕೆ ನಿನಗೆ 3 ಕಾಲಕಾಲಕೆ ಹರಿಯೋಲಗವ ಮಾಡಿ ವೇಳೆಗೆ ದೊರೆತದ್ದು ಭುಂಜಿಸುತಲಿ ಲಕ್ಷ್ಮೀ- ಲೋಲನ ಕಂಡ ಕಂಡಲಿ ಸ್ಮರಣೆಗೈದೂ 4 ಹೊರಗೆ ಡಂಭವ ಬಿಡು ಒಳಗೆ ನಿಶ್ಚಲನಾಗು ಪರರಿಗೆ ಹಿತವ ತೋರು ಗುರುರಾಮವಿಠಲನು ಕರುಣದಿ ಕೈಪಿಡಿದು ಪರಮಸೌಖ್ಯವನೀವ ನಿಜಭಕ್ತನಾದರೆ 5
--------------
ಗುರುರಾಮವಿಠಲ
ವಿಕ್ರಮಾ - ಪಾಹಿ - ತ್ರಿವಿಕ್ರಮಾ ಪ ವಿಕ್ರಮ ನಮಿಪೆ ನಾ ನಿನ್ನ | ನೀನುಚಕ್ರವ ಪಿಡಿದೊಂದು ದಿನ್ನ | ಆಹನಕ್ರನುದ್ದರಿಸಿದ | ಪ್ರಕ್ರಯ ನಾನರಿತುರುಕ್ರಮ ಶರಣೆಂಬೆ | ವಕ್ರ ಮನವ ಕಳೆಅ.ಪ. ಪುಟ್ಟ ರೂಪವನೆ ತಾಳುತ್ತಾ | ಬಲಿಯಇಷ್ಟಿಯೊಳವನ ಬೇಡುತ್ತಾ | ದಾನಕೊಟ್ಟೆನೆಂದವನು ಪೇಳುತ್ತಾ | ಬರೆಶಿಷ್ಟ ಶುಕ್ರನು ಬೇಡೆನ್ನುತ್ತಾ | ಆಹಕಟ್ಟಲು ಗಿಂಡೀಯ | ದಿಟ್ಟ ಶುಕ್ರನ ಕಣ್ಣಪುಟ್ಟ ದರ್ಭೆಲಿ ಚುಚ್ಚಿ ಮೆಟ್ಟಿ ನಿಂತೆಯೊ ಬಲಿಯ 1 ಥೋರ ರೂಪದೊಳು ಅಂಬರಾ | ಹಬ್ಬಿಧಾರುಣಿ ಅಳೆದ ಗಂಭೀರ | ಮತ್ತೆಮೂರನೇದಕೆ ಬಲಿಯ ಶಿರ | ವತ್ತಿಭಾರಿ ಪಾತಾಳಕ್ಕೆ ಧೀರಾ | ಆಹಪೌರೋಚನಿಯನ್ವತ್ತಿ | ದ್ವಾರವ ಕಾಯುತ್ತತೋರಿದೆ ಕರುಣವ | ಭೋರಿ ದೈವರ ಗಂಡ3 ಪಾದ ತೊಳೆದೂ | ಬಿಡೆಬ್ರಹ್ಮಾಂಡದೊಳು ತಾನು ಬಂದೂ | ಆಹಸುಮ್ಮನಸರ ಲೋಕ | ಕ್ರಮ್ಮಿಸುತಲಿ ಬರುವಅಮ್ಮಹ ಗಂಗೆ ಪೆ | ತ್ತೆಮ್ಮನುದ್ದರಿಸಿದಾ 3 ಬಾದರಾಯಣ ಬಳಿ ಭವ್ಯಾ | ನಾಗಿಮೋದ ತೀರ್ಥರಿಂದ ಸೇವ್ಯಾ | ನೀನುವಾದಿರಾಜರಿಗೊಲಿದು ತ್ವರ್ಯಾ | ಬಂದುಸ್ವಾದಿ ಪುರದಿ ನಿಂದು ಸ್ತವ್ಯಾ | ಆಹಮೋದದಿ ನೆಲೆಸುತ್ತ | ಕಾದುಕೊಂಡಿಹೆ ನಿನ್ನಪಾದವ ಪೊಗಳೂವ | ಸಾದು ಸಂತತಿಯನ್ನ 4 ಹೀನ ಮಾನವನೆಂದು ಎನ್ನಾ | ಉದಾಸೀನ ಮಾಡುವಿಯೇನೊ ಘನ್ನ | ಕೇಳೊನೀನು ತ್ರೈಭುವದಿ ಪಾವನ್ನಾ | ನೆಂದುಗಾನದೋಳ್ ತವ ಪಾದವನ್ನಾ | ಆಹಆಗಮಿಸುತ ಬಂದ | ಮಾನವನೆನ್ನನುಧೀನನೆಂದೆನಿಸಾರೆ | ಜ್ಞಾನವ ನೀಡೆನಗೇ 5 ಪ್ರತಿ ಪ್ರತಿ ವತ್ಸರದೊಳು | ಮಾಸಹತ್ತೆರಡು ಪೂರ್ಣಿಮದೊಳು | ತವರಥದೊತ್ಸವ ಕಾರ್ಯಗಳೂ | ಬಲುಹಿತದಿ ತವ ದಾಸರುಗಳೂ | ಆಹಅತಿ ವೈಭವದಿಂದ | ವಿತರಣೆಯಿಂದಲಿಪ್ರತಿಯಿಲ್ಲವೆಂದೆನ್ನೆ | ವಿಸ್ತರಿಸುವರಯ್ಯ 6 ಪರಿ ಪೊಗಳುತ ಚೆನ್ನಾ | ಆಹಗುರು ಗೋವಿಂದ ವಿಠ್ಠಲ | ಪರಮ ಪುರುಷನೆಂದಾನರ್ತನಗೈಯುತ | ನರರೇನು ಧನ್ಯರೋ7
--------------
ಗುರುಗೋವಿಂದವಿಠಲರು
ವಿಜಯ ಗುರು ಕರಜಾತ | ಮೋಹನ್ನರಾಯಾ ಪ ಪಾದ ರಜಕಾಗಿ | ಭಜಿಪೆ ತವ ಚರಣಾ ಅ.ಪ. ಸುಖತೀರ್ಥ ಸಿದ್ಧಾಂತ | ಪ್ರಾಕೃತದಿ ರಚಿಸಿ ಅಜಭೃಕುಟ ಸಂಜಾತ | ಸುರಮುಖರು ಹರಿಪದಕೇ |ಮುಕುಟಗಳ ಚಾಚಿ ಸದ್ | ಭಕುತಿ ಬೇಡುವರೆಂಬಉಕುತಿ ತರತಮ ಪೇಳಿ | ಮುಕುತಿ ಪಥತೋರ್ದ 1 ಗುರು ಚರಣ ಸರಸಿಜ | ದ್ವಯಕೆರಗಿಬಿನ್ನವಿಸಿ |ಶರಣಜನ ಸಂತತಿಯ | ನೆರೆ ಪೊರೆಯಲೂ |ವರಅಭಯದಿಂ ಚಿನ್ನಿ | ವರದ ಕುಲಸ್ಥಿರ ಮಾಡ್ದಪರಿಸರ ಕುಲೋತ್ಪನ್ನ | ಪೊರೆಯೊ ಮೋಹನ್ನಾ 2 ಭವ ಕಾಯ ಬಳಲಿಹುದೂ |ಶ್ರೀಯರಸ ನಮ್ಮ ಗುರು | ಗೋವಿಂದ ವಿಠಲಪದಪ್ರೀಯದಲಿ ತೋರಯ್ಯ | ಜೀಯದಮ್ಮಯ್ಯಾ 3
--------------
ಗುರುಗೋವಿಂದವಿಠಲರು
ವಿಜಯ ರಾಯರ ಭಜಿಸದವ ನಿರ್ಭಾಗ್ಯ ಕಾಣೋ ಪ ಅಜಭವರಕಿಂತಧಿಕ ಗಜವರದ ಪರನೆಂದಾ ಅ.ಪ. ಋಷಿಗಳೆಲ್ಲರು ಕಲೆತು ಸತ್ರಯಾಗವ ಮಾಡೆಹೃಷಿಕೇಶ ಚತುರಾಸ್ಯ ಕೈಲಾಸ ವಾಸಾ |ಈಸು ಮೂರ್ತಿಗಳಲ್ಲಿ ಮಿಗಿಲಾರು ಎಂದೆನ್ನೆಸೂಸಿ ಮೂರ್ಲೋಕಗಳ ಶ್ರೀಶ ಪರನೆಂದಾ 1 ದೇವಮುನಿ ನರನಾಗಿ ಭುವಿಯಲ್ಲಿ ಜನಿಸುತಾದೇವದೇವನ ಸ್ತೋತ್ರ ಕವನವನೆ ಗೈದಾ |ಆವ ಲಕ್ಷವು ಪಂಚಕೆ ನ್ಯೂನ ಪಾದವ ಮಾಡ್ದದೇವ ಮುನಿ ಸುತ ಗುರು ಮಧ್ವಪತಿ ವಿಠಲಾ 2 ಜವನವರು ಕೊಂಡ್ಯೋಗೆ ಜವಪುರಿಗೆ ತನಯನಾಜವನೊಡನೆ ಶೆಣೆಶಾಡಿ ಹರಿಗೆ ಮೊರೆಯಿಡಲು |ಜೀವದಾನವ ಪೊಂದಿ ಚಿಪ್ಪಗಿರಿಗೆ ತೆರಳಲುಜೀವಂತ ನಾದನೈ ತನಯ ಮೋಹನ್ನಾ 3 ಪೂರ್ಣಬೋಧರ ಮತವ ಗಾನ ರೂಪದಿ ಪೇಳಿಪೂರ್ಣಗುಣ ಹರಿಯೆಂದು ಸ್ಥಾಪಿಸುತಲೀ |ಪೂರ್ಣ ಸಂಪ್ರೀತಿಯಲಿ ನೆಲೆಸಿ ಚಿಪಗಿರಿಯಲ್ಲಿಪೂರ್ಣನಂಘ್ರಿಯ ಭಜಿಸಿ ಭಕ್ತರನೆ ಪೊರೆದಾ 4 ಯುವ ಸಂವತ್ಸರದ ಸುಕಾರ್ತಿಕದ ಸಿತಪಕ್ಷಯಾದು ಗುರುದಿನ ದಶಮಿ ಮೊದಲ್ಯಾಮದಿ |ಪವನಾಂತರಾತ್ಮ ಗುರು ಗೋವಿಂದ ವಿಠ್ಠಲನಸ್ತವನದಿಂದಲಿ ಪೊರಟ ಹರಿಯ ಪುರಕಾಗಾ 5
--------------
ಗುರುಗೋವಿಂದವಿಠಲರು
ವಿಜಯರಾಯ | ಗುರು | ವಿಜಯರಾಯ ಪ ವಿಜಯರಾಯ | ಗುರು | ವಿಜಯರಾಯ ಅ.ಪ. ಎರಡನೆ ಯುಗದೊಳು | ವಿ | ಸುರಲೀಲ ಕಪಿಯಾದ್ನೊ |ವಿ|ಹರಿಕಾರ್ಯಕನುವಾಗಿ | ವಿ | ಹರಿಕರುಣ ಪಾತ್ರನೆ | ವಿ | 1 ಭಂಜನ ಪಾದ | ವಿ | ಸುಕಮಲವ ಸೇವಿಸೆ | ವಿ |ಪ್ರಕಟಿ ಯಾದವರಲ್ಲಿ | ವಿ | ನಿಕಂಪಾನೆನಿಸೀದೆ | ವಿ | 2 ಪುರಂದರ ದಾಸರೋಳ್ ತುರುಕರು ನೀನಾಗಿ | ವಿ | ಹರಿಚರಿತೆ ಕೇಳಿದೆ | ವಿ |3 ಪರ ವಿದ್ಯಾರ್ಜಿಸಿದ್ಯೊ | ವಿ | 4| ಗುರು ವಾಜ್ಞದಿ ಮತ್ತೆ | ವಿ | ತಿರಿಪಾದ ಪೂರೈಸೆ ವಿ |ವರ ಭೂಸುರನಾಗಿ | ವಿ | ಹರಿಚರಿತೆ ಪೇಳಿದೆ | ವಿ | 5 ವತ್ಸರ ಮಾಸ | ವಿ |ಎರಡು ಐದನೆ ದಿನ | ವಿ | ಗುರುವಾರ ಪ್ರಹರದಿ | ವಿ | 6 ವರಯೋಗ ಮಾರ್ಗದಿ | ವಿ | ಗುರು ಗೋವಿಂದ ವಿಠಲನ | ವಿ |ಚರಣಾಬ್ಜ ಸೇರುತ | ವಿ | ಮೆರೆವೆ ಭಕ್ತರ ಮನದಿ | ವಿ |7
--------------
ಗುರುಗೋವಿಂದವಿಠಲರು
ವಿಜಯರಾಯರ ಪಾದವ ನೀ ಮಾನವ ಪ ವೃಜಿನವೆಲ್ಲವ ಕಳೆದು ಕರುಣದಿ | ಅಜನನಯ್ಯನ ತೋರುವ ಅ.ಪ. ಜಗಕೆ ಹರಿ ಪರನೆಂದು ತಾ ಭುಜ ಯುಗಗಳೆತ್ತಿ ಸಾರಿದಾ || ಭೃಗು ಮುನಿ ಇವರೆಂದು ಭಾವಿಸಿ ಮಿಗೆ ಸುಭಕ್ತಿಲಿ ಸರ್ವದಾ 1 ವರಹಜಾ ತಟದಲ್ಲಿ ಚೀಕಲ | ಪರವಿಗ್ರಾಮದಿ ಜನಿಸಿದ || ಪರಿಪರಿಯಲನುಭವಿಸಿ ಬಡತನ ಭವ ವೈರಾಗ್ಯ ಧರಿಸಿದ 2 ಭಕುತಿ ಪೂರ್ವಕವಾಗಿ ಬಿಡದಲೆ | ಸಕಲಕ್ಷೇತ್ರವ ಚಲಿಸಿದಾ || ಮುಕುತಿ ಸುಖದಾತಾರನಾದ | ಲಕುಮಿ ರಮಣನ ತುತಿಸಿದಾ 3 ತಾ ಸುಸ್ವಪ್ನದೊಳೊಂದು ದಿನ ಶ್ರೀ ವ್ಯಾಸ ಕಾಶಿಗೆ ತೆರಳಿದಾ || ವಾಸುದೇವನ ಕಂಡು ನಮಿಸಿ ಲೇಸು ವರ ಸ್ವೀಕರಿಸಿದಾ 4 ಪುರಂದರಾರ್ಯರ ಕವನಗಳು ಮೂರೆರಡು ಲಕ್ಷಕೆ ತ್ರಯಪದ ಕೊರತೆ ತಾ ಪೂರೈಸಿದ 5 ಬಾಲೆಯೋರ್ವಳು ಬಂದು ಪ್ರಾರ್ಥಿಸೆ ಕೇಳುತಾಕೆಯ ಪತಿಯನು ಕಾಲ ಪಾಶವ ಬಿಡಿಸಿ ಕರುಣದಿ ಪಾಲಿಸಿದ ಸುಮಹಾತ್ಮರ 6 ಶ್ರೀಮನೋಹರ ಶಾಮಸುಂದರ ನಾಮ ಮಹಿಮೆಯ ವಿಧ ವಿಧ ಭೂಮಿ ಸುಮನಸ ಸ್ತೋಮಕನುದಿನ ಪ್ರೇಮದಿಂದಲಿ ಬೀರಿದ 7
--------------
ಶಾಮಸುಂದರ ವಿಠಲ
ವಿಜಯವಿಠ್ಠಲ ನಾಮ ಭಜಿಸಿದಾ ಮಾನವಗೆ ಸತತ ಸಂಪದವಕ್ಕು ಪ ಕಾಯ ಶುಚಿಯಾಗುವದು ಕಠಿನತನ ಪೋಗುವದು ಆಯು ಹೆಚ್ಚುವುದು ನಿಯೋಗಿ ಯಾಹಾ ನಾಯಿ ಮೊದಲಾದ ಪ್ರಾರಬ್ಧ ಜನುಮಗಳಿರಲು ಬಾಯಿಲಿಂದಾಕ್ಷಣ ತೀರಿ ಪೋಪವು ಕೇಳಿ 1 ದ್ವೇಷಿಗಳು ಎಲ್ಲ ಬಾಂಧವರಾಗಿ ಇಪ್ಪರು ದ್ವೇಷ ಪುಟ್ಟದು ತನಗೇತರ ಮೇಲೆ ದೇಶ ಮಧ್ಯದಲಿ ತಾನೆ ಎಲ್ಲಿ ಇದ್ದರೂ ಕೋಶಾಧಿಪತಿಯಾಗಿ ಸಂಚರಿಸುತಿಪ್ಪರು2 ಹೀನ ವಿಷಯಂಗಳಿಗೆ ಅವನ ಮನವೆರಗಿದರೆ ಕಾಣಿಸುವನು ತಾನೆ ಮುಂದೊಲಿದು ಏನು ಹೇಳಲಿ ಹರಿಯ ಅನುಕಂಪನಾತನಕೆ ಕಾಲ ಕಡೆಗಾಣನು 3 ದೇವಾದಿ ಮುನಿತತಿಯ ಮೊದಲಾದವರು ನೆನೆದು ಆವಾವ ಸೌಖ್ಯದಲಿ ಇಪ್ಪರದಕೋ ಭಾವದಲಿ ತಿಳಿದು ಭಕುತಿಯ ಮಾಡಿರೋ ಜನರು ಕಾವುತಲಿಪ್ಪ ಸರ್ವಾಶ್ರಯನಾಗಿ ಹರಿ4 ಕಂಡವಗೆ ದೊರಕದು ಈ ನಾಮ ಜಪಿಸಿದರು ಕಂಡವಗೆ ಬಲು ಸುಲಭ ಭಯವೆಯಿಲ್ಲಾ ಮಂಡಲವ ಚರಿಸಿ ನಾನಾ ವ್ರತ ಮಾಡದಿರಿ ಕೊಂಡಾಡು ವಿಜಯವಿಠ್ಠಲನ ಆಸರ ಸೇರಿ5
--------------
ವಿಜಯದಾಸ
ವಿಠಲ ನಮೋ ವಿಠಲ ಮುಟ್ಟಿಭಜಿಪ ದೀನನಿಷ್ಟಾರ್ಥ ಪಾಲಿಸು ಪ ಹೇಸಿಪ್ರಪಂಚದಿ ನಿಂದು ಮಹ ಕ್ಲೇಶಪಂಚಕದಲಿ ಬೆಂದು ಕೆಟ್ಟ ವಾಸನತ್ರಯದಿಂದ ನೊಂದು ಬಲು ಘಾಸಿಯಾದೆ ದಯಾಸಿಂಧು ಆಹ ದೋಷದೂರನೆ ಎನ್ನ ದೋಷನಾಶನ ಗೈದು ಪೋಷಿಸು ಅನುಮೇಶ ದಾಸನೊಳ್ದಯವಾಗಿ 1 ಮರವೆಯೆಂಬುವ ಕವಚ ತೊಟ್ಟು ಬಲು ದುರುಳತನಕೆ ಮನಗೊಟ್ಟು ಮಹ ದರಿವಿನ ಅರಮನೆ ಸುಟ್ಟು ಆಹ ಪರಮದುರಿತದಿ ಬಿದ್ದು ಮರುಳನಾಗಿ ನಿಮ್ಮ ಚರಣಸರೋಜಕ್ಕೆ ಮರೆಹೊಕ್ಕೆ ಕರುಣಿಸು 2 ಹೊಂದಿ ಭಜಿಪೆ ನಿನ್ನ ಬೇಡಿ ಎನ್ನ ಮಂದಮತಿಯ ಕಡೆಮಾಡಿ ನಿಜಾ ನಂದ ಸುಜ್ಞಾನಪದ ನೀಡಿ ಭವ ಬಂಧ ಸಂಕೋಲೆ ಗಡ ಕಡಿ ಆಹ ಸಿಂಧುನಿಲಯ ಬೇಗ ದಂದುಗ ಪರಿಹರಿಸಿ ಕಂದನ್ನ ಉದ್ಧರಿಸು ತಂದೆ ಶ್ರೀರಾಮಯ್ಯ 3
--------------
ರಾಮದಾಸರು
ವಿತ್ತ ವನಿತಾದಿ ವಿಷಯವೆಂಬಕನಸಿನ ಸಿರಿಯ ನೆಚ್ಚಿ ತೊನೆದುಕೊಂಬರಲ್ಲದೆ 1ಪೊಲೆಯ ಬೊಂಬೆಯೊಳು ತುಂಬಿದ ಕೀವುಮಲಮೂತ್ರಸಂದೋಹ ತೊಗಲು ರೋಮಎಲು ಮಜ್ಜೆ ಮಾಂಸದವ್ಯೂಹ ಎಷ್ಟು ತೊಳೆದರೂಹೊಲಸು ನಾರುವ ಚೋಹ ಮತ್ತಿದಕೊಂದುಕುಲಗೋತ್ರ ನಾಮರೂಪು ಚಲುವ ಚೆನ್ನಿಗನಿವ ಸಲೆ ಜಾಣನೆಂದು ಮೂಢರುಗಳಹಿಕೊಂಬರಲ್ಲದೆ 2ಮಡದಿಯಾದರಿಲ್ಲ ಮಕ್ಕಳು ಮಕ್ಕಳಾದರೆಒಡಮೆಲ್ಲವದು ಬರಲು ಸತಿಸುತರುಮಡಿದು ಹೋಗುವ ದುಃಖಂಗಳು ಗಳಿಸಿದರ್ಥಕೆಡುವಾ ಸಂಕ್ಲೇಶಂಗಳು ತನಗೆ ಮುಂಚಿಅಡಸಿ ಬರುವದೊ ಮೃತಿ ಜಡರು ಈ ಬದುಕನೆಚ್ಚಿಸಡಗರ ಬಡುತ ಹಿಗ್ಗಿ ಕೊಡಹಿಕೊಂಬರಲ್ಲದೆ 3ಬಾಲಕನಾಗ್ಯೊಂದು ಕ್ಷಣವು ಪ್ರಾಯದಿ ಕಾಮಲೋಲುಪನಾಗ್ಯೊಂದು ಕ್ಷಣವು ಧನಾಢ್ಯನೆಂಬಮೂಳ ಹೆಮ್ಮೆ ಒಂದು ಕ್ಷಣವು ದಾರಿದ್ರ್ಯ ಮುಪ್ಪುಜೋಲುವ ತನುವೊಂದು ಕ್ಷಣವು ನಾನಾವೇಷದಾಳಿದ ನಟನಂತಾಡಿ ಕಾಲನ ಬಾುಗೈದುವಬಾಳುವೆಗೆ ಖೂಳಜನರು ವೋಲಾಡಿಕೊಂಬರಲ್ಲದೆ 4ನೆರೆ ಭೋಗಕೆ ರೋಗಭಯ ಸುತ ಸಂಬಂಧಿನೆರವಿಗೆ ವಿಯೋಗ ಭಯ ದ್ರವ್ಯಕ್ಕೆ ಭೂಪರ ಭಯವು ಚೋರ ಭಯ ಕಾಯಕೆ ಭಯಂಕರನಾದ ಕೃತಾಂತ ಭಯ ತಾಪತ್ರಯವೀಪರಿಯನೇಕ ಚಿಂತೆಯಲ್ಲಿ ಕೊರಗುತುರಿವ ಮನೆಯೊಳಗಿರುವೆ ಸುಖದಲೆಂಬರು ಮೂಕೊರೆಯಮೊಂಡರಲ್ಲದೆ * 5
--------------
ಗೋಪಾಲಾರ್ಯರು
ವಿದ್ಯಾವಿದ್ಯಕಮೀರಿದಾಗುಣತ್ರಯಾ ದಾವನು ಹೊಂದಾದಿಯಾ ನಿಚಯಾಸರ್ವಕ್ಕುದಾವಾಶ್ರಯಾ ಶುದ್ಧಾತ್ಮಾ ಸುಖದಾಲಯಾ ಸತುಚಿದಾನಂದೈಕರಸನಿಶ್ಚಯಾ ಸಿದ್ಧಾಂತ ಪ್ರತಿಪಾದ್ಯದಾವನುದಯಾ ಶ್ರೀ ದೇವ ದತ್ತಾತ್ರಯಾ 1 ಜಗದೋಳಾವನಸದುಗುಣಾ ನಿರಗುಣಾ ಸ್ವಾರೂಪದಾ ಲಕ್ಷಣಾ ಬಗೆ ಬಗೆಯಲಿ ಮಾಡಲು ವಿವರಣಾ ನೇತಿನೇತಿ ಶೃತಿ ವಚನಾ ಮುನಿಜನಾ ನಿಶ್ಚೈಸದಿಹ ರಾವನಾ ಪ್ರಗಟೀಸಿಹನು ನೋಡಿದೇ ನಿಜಘನಾ ಶ್ರೀದತ್ತ ನಿರಂಜನಾ 2 ನಿಶ್ಚಯಿಸದಿಹದಾವನಲಿ ತಾಂಪೌರಾಣಿತಿಹಾಸ ಭೇದಿಸುತಲೀ ನೆಲೆ ಗಾಣದೇ ನಿಲ್ಲಲೀ ಅಪದಿಂದ ಮೀಮಾಂಸತರ್ಕವರಲೀ ಬೆಂಡಾದವು ನೋಡಲೀ ಅಪರ ಘನ ಬಂದಿದೇಧರಿಯಲೀ ಬೆಂಡಾದವು ನೋಡಲೀ 3 ಪಾತಾಳಾದಿಯ ಲೋಕವೇಳುಸರಳು ದಾವನ ಪದ ಕಟಗಳು ಖ್ಯಾತಿಂದೇಭುವನೇಳು ಊಧ್ರ್ವಕಿರಲು ನಾಭಿಂದ ಸಿರವಾಗಲು ಸೀತಾಂಶು ರವಿದಾವನಂಬಕಗಳು ಅಶಾವೆ ಶ್ರೀತಂಗಳು ದತ್ತೆನಿಸಲು4 ಅಮರಂಗಣಾ ದಾವನುದರ ವಿಶ್ವಕಾಗಿ ಭುವನಾ ಶ್ರೀಮದ್ರಮಾರಮಣಾ ನಖದಾಧೀನಾ ಶ್ರೀದತ್ತ ಮನ ಮೋಹನಾ 5 ಸರ್ವೆಶ ಸರ್ವೋತ್ತಮಾ ಸರ್ವಾಧಾರನುದಾವ ದೇವಗರಿಮಾ ಪೂಜ್ಯನು ಸಕಲಾಗಮಾ ಸರ್ವಾತೀತನು ದಾವನಂಘ್ರಿ ಕಮಲಾ ಸೇವಿಸುವಳು ಶ್ರೀರಮಾ ಶ್ರೀದತ್ತ ಗುರುವೇನಮಃ 6 ಅನಸೂಯಾ ಕರರತ್ನನಾಗಿಜನಿಸೀ ಇಷ್ಟಾರ್ಥವನು ಪೂರಿಸೀ ಯೋಗಾಂಗವನು ಪ್ರಕಟಿಸಿ ಸ್ಮರಿಸೀದವರಲ್ಲಿ ಬಹುಕರುಣಿಸೀ ಶ್ರೀ ದತ್ತಪದ ಧ್ಯಾಯಿಸೀ 7 ಮೆರೆವಾ ಮುಪ್ಪುರದಿಂದೇರುವಾ ಸಾರೀ ಸಾವಿರದಳ ಪದ್ಮದಿರುವಾ ಸ್ವಾನಂದ ಭೋಗಿಸುವಾ ಮುದ್ರಾಂಕುರವ ಬೀರುವಾ ಶ್ರೀದತ್ತ ಗುರು ಎನಿಸುವಾ8 ಕಾತ್ರ್ಯವೀರ್ಯವರವಾಯದುರಾಯನುದ್ಧರಿ ಸಿದಾ ಗುರುಮಹೀಪತಿ ನುಡಿಸಿದಾ ಸ್ವಾನಂದ ಸುಖ ಬೀರಿದಾ ಸದಾ ಪಡೆವನು ಗತಿಸಂಪದಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ವಿಬುಧ ಪ್ರಿಯ ವಿಠಲ | ಶುಭದ ಪೊರೆ ಇವನಾ ಪ ಅಬುಜ ಜಾಂಡೋದರನೆ | ಕುಬುಜೆ ಸದ್ ವರದಾ ಅ.ಪ. ದಾಸನಾಗಲು ಇವಗೆ | ಆಶೆ ಪ್ರೇರಕನಾಗಿವಾಸು ದೇವಾಖ್ಯ ತೈ | ಜಸನೆ ಕಾರ್ಯರೂಪಿಸೂಸಿತವ ರೂಪವನು | ಲೇಸಾಗಿ ತೋರಿಸೆಹೆಕೇಶವನೆ ಅದನೆ ಉಪ | ದೇಶಿಸಿಹೆ ಹರಿಯೆ 1 ಪ್ರೀಯ ಅಪ್ರೀಯ ಉ | ಭಾಯಾನು ಭವದಲ್ಲಿಆಯುತನು ನೀನಾಗಿ | ಉದ್ವೇಗ ಕೊಡದೇನಿಯುತಕರ್ಮದಿ ರತನ | ದಯದಿಂದ ನೀಮಾಡಿಹಯಮೊಗಾಖ್ಯ ಹರಿಯೆ | ಕೈಯಪಿಡಿ ಇವನಾ 2 ಲೋಕವಾಕ್ಯದಿ ವಿರಸ | ಲೋಕೈಕನಾಥನುವಾಕ್ಯದೊಳು ರತಿಯನ್ನೆ | ನೀ ಕೊಟ್ಟಿ ಕಾಯೋ |ಮಾಕಳತ್ರನದಾಸ | ಸಂಕುಲದಿ ಸದ್‍ಭಕ್ತಿಶ್ರೀಕರನೆ ನೀನಿತ್ತು | ಸಾಕ ಬೇಕಿವನಾ 3 ಮಧ್ವಮತದಲಿ ದೀಕ್ಷೆ | ಶುದ್ಧ ಹರಿ ಗುರುಭಕ್ತಿಅದ್ವೈತ ಕ್ರಯವರಿಯೆ | ವಿದ್ಯೆ ಸಂಘಟಿಸೀಕೃದ್ಧಖಳ ನಿವಹಗಳ | ಪ್ರಧ್ವಂಸಗೈಯುತಲೀಉದ್ದರಿಸೋ ಇವನನ್ನು | ಮಧ್ವಾಂತರಾತ್ಮ 4 ವೇದ ಕದ್ದೊಯ್ದವನ | ಬಾಧೆ ನೀ ಪರಿಹರಿಸಿಸಾದುಗಳ ಪೊರೆದಂತೆ | ಆದರಿಸಲಿವನಾಮೋದಿ ಗುರು ಗೋವಿಂದ | ವಿಠಲನೆ ಬಿನ್ನವಿಪೆಮೈದೊರಿ ಸಲಹುವುದು | ಸಾಧುವಂದಿತನೇ 5
--------------
ಗುರುಗೋವಿಂದವಿಠಲರು
ವಿಶಿಷ್ಟಾದ್ವೈತ ಮತವೇ ಮತವು ಪ ವಿಷ್ಣು ಪದವೇ ಶಾಶ್ವತ ಪದವು ಅ.ಪ ವಸಿಷ್ಠ ನಾರದ ಸನಕಾದಿ ವಂದ್ಯರ ವಿಶಿಷ್ಟ ಪರಿಗ್ರಹ ವೇದಾಂತ ಸಾರದ 1 ಅಸೇತುಹಿಮಾಚಲ ವಿಶೇಷದ ವಿಶೇಷ ಪ್ರಮಾಣ ಚತುಷ್ಟಯದ 2 ಚಿತ್ತು ಅಚಿತ್ತೀಶ್ವರ ತತ್ತ್ವವನು ಪ್ರತ್ಯೇಕವಾಗಿಯೇ ಬೋಧಿಸಿಹ 3 ಪರ ವ್ಯೂಹ ವಿಭವಾಂತರ ಅರ್ಚಾ ಪರಿಪರಿರೂಪದ ಶ್ರೀಹರಿ ಪೂಜನ 4 ರಹಸ್ಯತ್ರಯ ಮಂತ್ರ ವಿಶಿಷ್ಟದ ಸಹಮತ ಸುಲಭೋಪಾಯವಿಧಾನದ 5 ಅಜ ಸುರರೆಲ್ಲರು ಹರಿಮತ ಹರಿಯೊಬ್ಬನ ಪಾದವೆ ಮೋಕ್ಷಪÀಥ 6 ಪ್ರಧಾನ ಧರ್ಮದ ಉಪವೃತ್ತಿಯ ಬೇಡದ ಶರಣಾಗತಿಯ 7 ಸತತವು ಹೆಜ್ಜಾಜಿಕೇಶವನಾಮ ನುತಿಸಿದವನ ಭವಬಂಧನ ಬಿಡಿಸುವ 8
--------------
ನಾರಾಯಣಶರ್ಮರು
ವಿಶ್ವ ಕಾಯೋ ಎನ್ನ ಪ ಪರಮಾತ್ಮ ನೀ ದೂರ ಮಾಡಿದರೆ ಗತಿಯೇನು ಅ.ಪ ನಿನ್ನ ಲೋಕಕೆ ಎನ್ನ ವೈದಾಗ ಕರುಣಾತ್ಮ ನಿನ್ನ ಕ್ರಿಯ ಗುಣ ರೂಪ ತೋರಿ ಎನಗೆ ನಿನ್ನ ಪರಿವಾರ ಜನರಲ್ಲಿ ಸೇರಿಸಿ ಪರಮ ಧನ್ಯನಾ ಮಾಡಯ್ಯ ಮದ್ಬಿಂಬ ಮಾರಮಣ 1 ಸ್ಮøತಿ ಜ್ಞಾನ ಮನ ಬುದ್ಧಿ ಮಾತ್ರ ಭೂತವು ಕರಣ ಧಾತು ಸಪ್ತಕ ಪಂಚ ಕೋಶಗಳಲಿ ಸತಿ ಸಹಿತ ಪ್ರಥಮಾಂಗನಲಿ ಕುಳಿತು ನೀ ಸತತ ಪ್ರತಿ ತತ್ವ ವ್ಯಾಪಿಸಿ ಜೀವಕರ್ಮವ ಮಾಳ್ಪೆ 2 ಚತುರ ದಶಲೋಕದಲಿ ಪ್ರತಿದೇಹರಥ ನಿನಗೆ ಕೃತಿರಮಣ ಸರ್ವತ್ರ ನಿನ್ನ ಲೀ¯ ಸತಿ ರಮಣ ಸುರರೆಲ್ಲ ಗತನಿದ್ರರಾಗಿನ್ನು ನೋಳ್ಪರೈ ಮಹಚಿತ್ರ 3 ಕಂಡ ಕಡೆಯಲಿ ಪೂಜೆ ಭಂಡಾರ ತುಂಬಿಹುದು ವಿಧಿ ಸುರರು ಸರ್ವತ್ರ ನಿನ್ನ ಕಂಡು ಪೂಜಿಪರಯ್ಯಾ ಪೂರ್ಣ ವಿಭವಗಳಿಂದ ಮಂಡÉ ಬಾಗಿದೆ ಭಕ್ತ ತಂಡದಲಿ ಇಡು ಎನ್ನ 4 ಪೂಜ್ಯ ಪೂಜಕನಾಗಿ ಪರಿಪೂರ್ಣ ವೈಭವದಿ ಪೂಜಿಸುವೆ ನಿನ್ನ ನೀ ಸರ್ವಕಾಲ ಭೋಜ್ಯ ಭೋಕ್ತøನಾಗಿ ಆನಂದ ಸಿರಿಗೀವೆ ಅಜರುದ್ರ ಸುರಗಣಕೆ ಉಣಿಸಿ 5 ಹದಿನೆಂಟು ನರಮುಖವು ಮಧ್ಯ ಗಜಮುಖ ದೇವ ಪದವೆರೆಡು ಭುಜ ನಾಲ್ಕು ಪದುಮೆ ರಮಣ ಉದಯಾರ್ಕ ಕಿರೀಟ ಕುಂಡಲಭೂಷ ಗದೆ ಪದುಮ ಆರೆ ಶಂಖ ಮಣಿಯುಕ್ತ ಮಾಲಧರ 6 ಮೂರ್ತಿ ಜಯೇಶವಿಠಲ ವಿಶ್ವನಾಮಕ ವಿಶ್ವವ್ಯಾಪ್ತಗುಪ್ತ ಉಚ್ಛ್ವಾಸ ಬಿಡುತಿಹೆನೊ ಉಡುಗಿ ಸಕಲ ಶಕ್ತಿ ಉತ್ಸಾಹ ನೀಡಯ್ಯ ಸ್ವಾಂತರದಿ ಕಲೆತೆನ್ನ 7
--------------
ಜಯೇಶವಿಠಲ
ವಿಷಯಾಸೆ ಬಿಡಲೊಲ್ಲದೋ ದೇವ ಪ. ವಸುದೇವಸುತ ನಿನ್ನ ವಶವಾಗೋತನಕ ಅ.ಪ. ಉದಯದಲಿ ಎದ್ದು ಹರಿಪದಗಳನು ಸ್ಮರಿಸದಲೆಕುದಿದು ಪರರನ್ನೆ ಬೈದು ಸುಯಿದುಮುದದಿಂದ ಮಜ್ಜನವ ಮಾಡದಲೆ ಕಂಡಕಡೆಒದಗಿ ಪರಸದನಕಾಗಿ ಪೋಗಿಮದಗರ್ವದಿಂದ ಗುರುಹಿರಿಯರಿಗೆ ವಂದಿಸದೆಕದನವನೆ ತೆಗೆದು ಬಂದು ನಿಂದುಇದೆ ಸಾಧನವೆಂದು ಉದರ ನೆವದಿ ತಿರುಗಿಸುದತಿಯರ ಸುಖಬಡಿಸಿ ಮದನವೆಗ್ಗಳನಾದೆ 1 ಓದುವೆನು ವಿದ್ಯೆಗಳ ಓದನದ ಬಯಕೆಯಲಿಸಾಧುಶಾಸ್ತ್ರಗಳ ಮರೆದು ತೊರೆದುಕಾದುವೆನು ತರ್ಕವ್ಯಾಕರಣ ಬಲದಿಂದಬೀದಿಬೀದಿಯಲಿ ಚರಿಸಿ ಅರಸಿಮಾಧವನ ಪೂಜಿಸದೆ ಪರರ ಅನ್ನವನುಂಡು ಶೋಧಿಸದೆ ಪುಣ್ಯಪಾಪ ಲೇಪಕ್ರೋಧದಿಂದಲಿ ಇನಿತು ಪರಿಪರಿಯ ಬವಣೆÀಯಿಂದಬೋಧನೆಗೆ ಒಳಗಾಗಿ ಕುಧರ್ಮವನು ಪಡೆದೆ2 ಪರರ ಸೌಭಾಗ್ಯ ವಿದ್ಯಾ ಮಕ್ಕಳ ಕಂಡುಮರುಗಿ ಮನದೊಳಗೆ ಕೊರಗಿ ಸೊರಗಿತರತರಕೆ ಪರರಾಂಗನೆಯರ ಚೆಲುವಿಕೆ ಕಂಡು[ತೆರೆದ] ಕಣ್ಣಿಂದ ನೋಡಿ ಬಾಡಿಎರಗಿ ಮನ ಅವರಲ್ಲಿ ಏಕಾಂತದಲಿ ಕಂಡುಕರದಿ ಸನ್ನೆಯನು ಮಾಡಿ ಕೂಡಿಹೊರಗೆ ಗುಣವಂತನೆಂದೆನಿಸಿ ಧರೆಯೊಳಗೆ ಪಾಮರ ಬುದ್ಧಿಯಿಂದ ಸಂಚರಿಸಿ ನಿನ್ನನು ಮರೆದೆ3 ದೇಶದೇಶಕೆ ಧನದಾಸೆಗಾಗಿ ನಡೆದುಬ್ಯಾಸರದೆ ಮನೆ ಮನೆಗೆ ಪೋಗಿ ಕೂಗಿಭೂಸುರೋತ್ತಮರು ನಾವೆಂದು ಪರರಮುಂದೆಹೇಸದಲೆ ಪೇಳಿಕೊಂಡು ಭಂಡುಮೋಸಗೊಳಿಸಿ ಪರರ ಆಶ್ರಯವನೆ ಮಾಡಿಭೇಷಜವ ತೋರಿ ಕಳೆದೆ ಪೊಳೆದೆಈಸುಪರಿ ಧನವ ತಂದು ಕೂಳನೆ ಹಾಕಿಆಸತಿಸುತರೆನಗೆ ಗತಿಯೆಂದು [ಗುಣಿಸಿದೆ] 4 ಕಾಯದಾಸೆಗಾಗಿ ನೋಯಬಯಸದಲೆ ಉ-ಪಾಯವ ಚಿಂತಿಸುತ್ತಲಿತ್ತಹೇಯವಿಲ್ಲದೆ ಸ್ನಾನ ಸಂಧ್ಯಾವಂದನೆ ತೊರೆದುತೋಯಿಸದೆ ದೇಹವನ್ನು ಇನ್ನುಮಾಯಮೋಸಗಳಿಂದ ಬಾಯಿಗೆ ಬೇಕಾದ್ದುಆಯಾಸಪಟ್ಟು ತಂದು ತಿಂದುಶ್ರೀಯರಸ ಹಯವದನರಾಯನೆ ನಾ ನಿನ್ನಮಾಯವನು ತಿಳಿಯದನ್ಯಾಯದಿಂದಲಿ ಕೆಟ್ಟೆ 5
--------------
ವಾದಿರಾಜ