ಒಟ್ಟು 3173 ಕಡೆಗಳಲ್ಲಿ , 122 ದಾಸರು , 2278 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮ ಪುರುಷ ಹರಿ ಗೋವಿಂದ - ಸಿರಿವರ ನಾರಾಯಣ ಗೋವಿಂದ ಪ ನಿಶೆವೆಸರಸುರನ ಉಸಿರ ತೊಲಗಿಸಿದೆಕುಸುಮ ಶರನ ಪಿತ ಗೋವಿಂದವಸು ಪೂರಿತ ಶ್ರುತಿ ಮಸುಳಿಸದೆ ತಂದೆಬಿಸಜ ಸಂಭವನಯ್ಯ ಗೋವಿಂದ 1 ಮಂದರ ಸಿರಿ ಗತವಾಗದ ಮುನ್ನಕ್ಷಿತಿ ಪೆತ್ತನಯ್ಯ ಗೋವಿಂದ 2 ಭೂತಳವೆರಸಿ ರಸಾತಳಕಿಳಿದಿಹಪಾತಕನ ಕಂಡೆ ಗೋವಿಂದಆತನೊಡನೆ ಕಾದಾತನ ಗೆಲಿದು ಮ-ಹೀತಳವನು ತಂದೆ ಗೋವಿಂದ 3 ದುರುಳಾಸುರನ ನಡುಗರುಳ ಮಾಲೆ ಮುಂ-ಗೊರಳೊಳು ಧರಿಸಿದೆ ಗೋವಿಂದಗರಳ ಕೊರಳನು ಬೆರಳೆತ್ತಿ ಪೊಗಳಲುತರಳಗೊಲಿದೆ ನೀ ಗೋವಿಂದ4 ವಾಮನನಾಗಿ ನಿಸ್ಸೀಮ ಬಲಿಯ ಕೈಯಭೂಮಿಯನಳೆಕೊಂಡೆ ಗೋವಿಂದತಾಮರಸ ಪದದಿ ಕನಕ ಗರ್ಭಯೋಗವ್ಯೋಮ ಗಂಗೆಯ ತಂದೆ ಗೋವಿಂದ 5 ಸುರ ಪಶುವಿಗೆ ಋಷಿಯನು ಕೊಂದನ ಬಹುಕರ ಬಲ ಮುರಿದೆಯೊ ಗೋವಿಂದತರ ಹರಿಸದೆ ವಸುಧೆಯ ಒಡೆತನ ಭೂಸುರರಿಗೆ ನೀಡಿದೆ ಗೋವಿಂದ 6 ತ್ರಿಣಯನ ತಾತ್ಪರ್ಯ ರಾವಣನ ಶಿರರಣದೊಳುರುಳಿಸಿದೆ ಗೋವಿಂದಕ್ಷಣಮೆಣಿಸದೆ ಸದ್ಗುಣವಂತ ವಿಭೀ-ಷಣಗಭಯವಿತ್ತೆ ಗೋವಿಂದ 7 ಕ್ರತು ಸಿರಿ ಭೂಭಾರೋತ್ತಾರಣ ಬಲಯುತ ಗೋವಿಂದ 8 ಕಥೆಯನು ನಿರ್ಮಿಸಿ ಪತಿವ್ರತೆಯರ ಘನವ್ರತಗಳ ಕೆಡಿಸಿದೆ ಗೋವಿಂದಜತೆಯಗಲದ ಪುರ ತ್ರಿತಯ ಗೆಲಿದು ದೇ-ವತೆಗಳ ಸಲಹಿದೆ ಗೋವಿಂದ 9 ಜಾಜಿಯ ಮರಕತ ತೇಜಿಯನೇರಿ ವಿ-ರಾಜಿಪ ರಾವುತ ಗೋವಿಂದಸೂಜಿಯ ಬೆನ್ನೊಳು ರಾಜಿಪ ತೆರದಿ ಸ-ಹಜರೊಳಡಗಿರ್ಪ ಗೋವಿಂದ 10 ಮೇದಿನಿಗೋಸುಗ ಕಾದಿ ಕಲಹದಿ ವಿ-ರೋಧಿಗಳ ಕೊಂದೆ ಗೋವಿಂದಸಾಧುಗಳಿಗೆ ಸುಖವೀಯುವ ಬಾಡದಶ್ರೀಧರ ಕೇಶವ ಗೋವಿಂದ 11
--------------
ಕನಕದಾಸ
ಪರಮ ಪುರುಷನ ನೆನೆಯಿರೋ | ನರಕ ಭೀತ ಕಳ್ಳನರರೇ ನೀವು || ಶರಣಾಗತಾರ್ಥ ಪಾಲಕನೆಂಬಬಿರುದು ಇವನಿಗಲ್ಲದಿನ್ನೊಬ್ಬಗುಂಟೇ ಪ ಹರಿಯೆಂದು ಹೃದಯದಲಿ ಸ್ಮರಿಸಿ ಕರಿರಾಜ ಕರವೆತ್ತಿಕರೆಯೆ | ಉರದಲೊರಗಿಹ ಸಿರಿಗೆ ಸರಿಸಿ | ಸಾರಂಗರಿಯ ಧರಿಸಿಗರುಡನ ಮರೆತು | ಬರಿ ಗಾಲಿಲೆ ಬರುವಾ 1 ಮಂಗಳನು ಜರಿದು ಜಗವು ಕರುಣವಿಲ್ಲದೆ |ಕರಿಣಿಗಳುದಕದ ಹೊಲಸು ಹೇಸಿಕೆಗೆ |ಬೇಸರಗೊಳ್ಳದೆ ಬಂದವನ ಪುಷ್ಕರವೆತ್ತಿ |ಚಕ್ರದಿ ನಕ್ರನ ಮುಖ ಕಡಿವ 2 ಸುರರು ಕಿನ್ನರರು ಬೆರಗು ಬೀರುತಲಿರಲುವರ ಚತುರ್ಭುಜ ರುಕ್ಮ ವಸನಗಳು ಕೊಡುವ3
--------------
ರುಕ್ಮಾಂಗದರು
ಪರಮ ಸಂಜೀವನವು ಗುರು ನಿಮ್ಮನಾಮ ಸರುಮುನಿಯು ಸೇವಿಸುವ ದಿವ್ಯನಾಮ ಧ್ರುವ ದುರಿತ ಹರಿಸಿದ ನಾಮ ಮೊರೆಯ ಹೊಕ್ಕವರ ಸ್ಥಿರ ಹೊರೆವ ನಾಮ ತರಳ ಪ್ರಲ್ಹಾದನವಸರಕೆ ಒಲಿದಿಹ ನಾಮ ಸ್ಮರಿಸುವರ ವಜ್ರಪಂಜರ ನಿಮ್ಮ ನಾಮ 1 ಧರೆಯೊಳಗೆ ದ್ರೌಪದಿಯ ಸ್ಮರಣಿಗೊದಗಿದ ನಾಮ ಕರುಣದಿಂದಭಿಮಾನಗಾಯ್ದ ನಾಮ ದಾರಿದ್ರ್ಯವನು ಸುಧಾಮನಿಗಿಂಗಿಸಿದ ನಾಮ ಸಿರಿ ಸಂಪತ್ತವು ಅಯಿತೀ ನಾಮ 2 ಹರುಷಕರವಿತ್ತು ಉಪಮನ್ಯಗೊಲಿದ ನಾಮ ಕ್ಷೀರಸಾಗರದ ನಾಮ ಶರಣುಹೊಕ್ಕವರ ಪರಿಪರಿ ಕಾಯ್ದ ನಾಮ ಧೀರ ಧ್ರುವಗಚಳ ಪದವಿತ್ತ ನಾಮ3 ಕರೆದು ನಾರಗ ನೆಂದವನ ತಾರಿಸಿದ ನಾಮ ಪರಮಪಾತಕ ಪರಿಹರಿಸಿದ ನಾಮ ವರ ಮುನಿಜನರ ತೃಪ್ತಿಗೈಸುವ ನಾಮ ಪರಮ ಭಕ್ತರ ಪ್ರಾಣಪ್ರಿಯ ನಾಮ 4 ದುರಿತ ದಾರಿದ್ರ್ಯ ವಿಧ್ವಂಸಗೈಸುವ ನಾಮ ಕರುಣಸಾಗರ ಪರಿಪೂರ್ಣ ನಾಮ ನರಕೀಟಕ ಮಹಿಪತಿಯ ತಾರಕ ನಾಮ ಪರಮ ಸಾಯೋಜ್ಯ ಗುರು ದಿವ್ಯ ನಾಮ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪರಮಾತ್ಮನೆ ನೀ ಸರಿ ಎಂದು ಕರಗದ ತಮದಲ್ಲಿ ಸೇರುವದೆ ಪ ಜೀವ ಪರಮಾತ್ಮಗೆ ಭೇದವ ಆವಾವ ಕಾಲಕ್ಕೆಯಿಲ್ಲವೆಂದು ದೇವನ ಬಳಿಗೆ ನೀ ದೂರಾಗಿ ಈ ವಸುಧೆಯೊಳು ಬದುಕುವರೆ 1 ಭೇದ ಜೀವಕೆ ಜೀವ ಎಂದಿ ಗಾದರು ಇಲ್ಲವೆಂದು ನುಡಿದು ಈ ದುರಾಚಾರದಲ್ಲಿ ನಡೆದು ಮಾದಿಗನಂತೀಗ ಮಾರ್ಮಲಿದು2 ಜಡ ಪರಮಾತ್ಮ ಜಡ ಜಡಕೆ ಜಡ ಜೀವಕೆ ಅಭೇದವೆಂದು ಕಡುಗರ್ವದಿಂದಲಿ ಉಚ್ಚರಿಸಿ ಮಡಿದು ನರಕಕ್ಕೆ ಉರುಳುವರೆ 3 ಅರಸಿನ ಬಳಿಗೆ ತೋಟಿಗ ಬಂದು ಅರಸೆ ನೀನೆ ನಾನೆಂದಡೆ ಉರವಣಿಸಿ ಕೊಲ್ಲಿಸಿ ಅವನ ಶೆರಿಯ ಹಾಕದೆ ಮನ್ನಿಸುವನೆ 4 ದಾಸನ ದಾಸನು ಎಂದು ಏಸು ಜನ್ಮಕೆ ಅಹುದೆಂದು ದ್ವೇಷವು ತೊರೆದು ನೆನಿಸಿದರೆ ಮೀಸಲಾಗಿಡುವ ವಿಜಯವಿಠ್ಠಲಾ 5
--------------
ವಿಜಯದಾಸ
ಪರಮೇಶ್ವರ ಪೂರ್ಣ ತುಂಬ್ಯಾನ ಪರಾಮರಿಸಿ ನಿಮ್ಮೊಳಗೆ ಪರದೆ ಇಲ್ಲದೆ ಪರವಸ್ತುದೋರುವ ಕರುಣಿಸಿ ನಿಮಿಷದೊಳಗೆ ಸದ್ಗುರು ಜಗದೊಳಗೆ ಎರಡಿಲ್ಲದೆ ಗುರುಚರಣಕ ಮನಬೆರೆದನುಭವಿಸುವದಾವಾಗೆ ತ್ರಾಹಿ ತ್ರಾಹಿ 1 ನಿಜಮಾಡುವದೆಲ್ಲ ಡಾಂಭಿಕ ಮಾಡದು ತಾ ನಿಜಸುಖ ಕೂಡಲು ಪುಣ್ಯೊದಗ್ಯಾಗಲು ಗುರುಕೃಪೆ ನೋಡುದು ಕೌತುಕ ಗೂಡಿನೊಳನೇದಾ ತ್ರಾಹಿ ತ್ರಾಹಿ 2 ರಾಜಿಸುತಿಹ್ಯ ಶ್ರೀಪಾದ ಅನುದಿನ ತಾ ಸೇವಿಸಬೇಕು ಸುಬೋಧ ಮಾಜದೆ ಗುರುಚರಣಕ್ಕೆ ತನುಮನಧನ ಭಜಿಸಬೇಕು ಸರ್ವದಾ ರಾಜಯೋಗಪ್ರಸಾದ ತ್ರಾಹಿ ತ್ರಾಹಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪರಮೌಷಧಿ ಸಿಕ್ಕಿತು ಪರಿಪರಿರೋಗ ಪರಿಹಾರಕಿದು ದಕ್ಕಿತು ಪ ಜ್ವರದ ಬೇಗೆಗೆ ದಾಹ ಕರುಳ ಕುಂದಿಸಿಯೆನ್ನ ನರಳಿಸಿದಾಗ ಮಾಂಗಿರಿರಂಗಾ ಎಂದೆಂಬ ಅ.ಪ ಸುರನರೋರಗ ಗರುಡ ಚರಣ ಗುರು ದಿವಾಕರ ಕಿನ್ನರಾಪ್ಸರ ಶರಣಜನ ಕರುಣಾಕರ ಶ್ರೀ ಧರ ಸುಖಂಕರ ಶೌರಿಯೆಂಬಾ1 ಪಿತ್ತವು ತಲೆಗೇರಿತು ಸುತ್ತಲು ಕಣ್ಗೆ ಕತ್ತಲೆ ಮುಸುಕಿದ್ದಿತು ಚಿತ್ತಪಲ್ಲಟಿವಾಗಿ ಮತ್ತನಾಗಿರಲಾಗ ನೆತ್ತಿಯೊಡೆದ ಎನ್ನ ಕುತ್ತಿಗೋಂಕಾರ 2 ಚಿತ್ತ ಮಸ್ತಕ ನೆತ್ತಿಗಳ ಬೆಂಬತ್ತಿ ಮತ್ತತೆಯಿತ್ತ ಪತ್ತದ ಕತ್ತಲೆಯನುತ್ತರಿಸಿದುತ್ತಮ ಚಿತ್ತಜನಪೆತ್ತಚ್ಯುತಾ ಯೆಂಬ 3 ಉಸಿರು ಉಗ್ಗಡಿಪಾಗ ವಸುದೇವ ಸುತಯೆಂಬ 4 ರಸರಸಂಗಳೊಳೆಸೆದು ವಾಸಿಸಿ ಉಸಿರು ಬಸಿರನು ವಸುವಿಲಾಸದೊಳೆಸೆದು ಪೊಸ ಪೊಸ ಎಸಕದಿಂ ಸುಖ ರಸವನೀಯುವ ರಾಮಯೆಂಬಾ 5 ಕರ ನೇತ್ರಗಳು ತಂಪಿಂಪಿನ ಸವಿ ಬಲೆಯೊಳು ಬಿದ್ದುವು ಜವ ನೇಣೆಸೆದಾಗ ಭವದೂರಹರಿ ಯೆಂಬ 6 ಶಿವ ಭವಾಮರಪವನಪಾವಕ ಜವ ಶಶಾಂಕವಾಕರಾನಕ ಶ್ರೀಧರ ಹರೇ ಭವದೂರನೆಂಬಾ 7 ಲಕ್ಷನಾಮಗಳೆಲ್ಲ ಲಕ್ಷಣವಾದ [ತು ರಕ್ಷೆಯೀಯುವಗುಳಿಗೆ] ಮಾತ್ರಾ ಮೋಕ್ಷಸುಖವನಿತ್ತು ರಕ್ಷಿಪುದೆಂಬುದ ದಕ್ಷಸುತೆಗೆ ಫಾಲಾಕ್ಷ ತಾಂ ಪೇಳಿದ 8 ಅಕ್ಷಯಾತ್ರವಿಪಕ್ಷ ರಾಕ್ಷಸ ಶಿಕ್ಷ ಸುಜನರಕ್ಷ ಪ್ರದವ ಅ ಧ್ಯಕ್ಷ ನುತಕಮಲಾಕ್ಷ ಶರಣಕಟಾಕ್ಷ ಲಕ್ಷ್ಮೀಪಕ್ಷ [ಮೂಂಗಿರಿರಂಗ] ಯೆಂಬಾ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪರರ ಮನೆಗೆ ಪೋಗಿ ತಿರುಗುವೆ ಯಾತಕೆ ಸುರತರುವಿರುವದ ಅರಿಯದೆ ಮನುಜ ಪ. ವರದಿಹ ಸುರಮುನಿ ಗುರುವರ ನಾರದ ಪೊರೆವ ಹರಿ ಎಂದ ಪುರಂದರದಾಸರ ಅ.ಪ. ವರ ದಿವಕರನೇಳದ ಮುನ್ನ ಸ್ಮರಿಸುತ ಹರಿಯ ನೀನೇಳೆಂದು ಕರುಣಸಾಗರ ಹರಿಚರಣಕೆ ನಿನ್ನಯ ಹರಣವ ಬಾಗುತೆ ಪೊರೆವ ನಿನ್ನ ಜೀವವೆಂದರುಹಿದ ಮರೆತು ನೀನನುದಿನ 1 ಅಂಗನೆ ದ್ರೌಪದಿ ಗಂಗ ಸ್ನಾನಕೆ ಪೋಗೆ ರಂಗನ ಚರಣವ ಸ್ಮರಿಸುವಂಥ ಶುಕರು ಹೆಂಗಳೆಯನು ಮಾನಂಗಳ್ವಸ್ತ್ರವ ಬೇಡೆ ಮಂಗಳೆ ಕೈಯಿಂದ ರಂಗನ ಕೊಡಿಸಿರೆಂದು ಮರೆತುನೀನನುದಿನ2 ತೋರಿದ ಜಗಕೆ ಕೃಷ್ಣನೆಂಬೋ ನಾರಿ ಸೊಲ್ಲ ಕೇಳಿ ಭೋರೆಂಬೊ ಸಭೆಗೆ ತಾ ಕೋರಿದಕ್ಷಯ ಶೀರೆ ಶ್ರೀ ಶ್ರೀನಿವಾಸನು ಮರೆತು ನೀನನುದಿನ3
--------------
ಸರಸ್ವತಿ ಬಾಯಿ
ಪರಸುಖಕರಾ ಗುರುಬೋಧಸಾರಾ ಮರಣಾ ಜರಾ ದುರಿತಾದಿ ದೂರಾ ಪ ಜೀವಭಾವವಾ ಸಟೆಯಾಗಿ ಗೈವ ದೇವಭಾವನಾ ಬಗೆಸಿನಿಲಿಸುವಾ ಸಾವಿನಂಜಿಕೆ ದೂರಾಗಿ ಮಾಳ್ಪ ಜೀವಂತಮುಕುತಿ ಕರದೀಯುವಾ 1 ದೃಶ್ಯವೆಂದು ತೋರ್ಪ ವಿಶ್ವತ್ಯಾಗ ಮಾಡಿ ದೃಶ್ಯವಸ್ತುವಿಂದ ಬೇರೆನಿಸುವಾ ಶಾಶ್ವತಾದ ಆ ಪದ ತೋರಿ ಮನದ ಕಶ್ಮಲವನು ಕಳೆವ ಭವತಾರಕಾ 2 ಭೇದಭಾವವಾ ಛೇದಿಸುತ ಮನದಿ ಬೋಧನಾರಾಯಣನ ಕೃಪೆ ಪೊಂದಿದಾ ಬೋಧರೂಪ ಗುರುವು ಪೇಳಿರ್ದ ಬೋಧ ಸಾಧು ಶಂಕರಾರ್ಯ ತಾನೆನ್ನುವಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಪರಿ ನೆಲಸಿದೀ ಏ ಸ್ವಾಮಿ ಪರಿ ನೆಲಸೀದಿ ಏಸುಪರಿ ನೆಲಸೀದಿ ದಾಸಜನ ಹೃದಯದಿ ಭೂಸ್ವರ್ಗ ಪಾತಾಳ ಬ್ಯಾಸರ ಮಾಡಿದಿ ಪ ಎಸೆವ ಚಂಚಲ ಶಿರಿಯು ತವರ್ಕಣ್ ಮಸಕು ಮಾಡಿದಳೇನೋ ಬಿಸಜಸಂಭವ ವೇದಪಠಣದಿ ಕುಶಲ ನುಡಿಯನೇನೋ ಅಸ್ವಧಿಪ ಪ್ರಾಣ ಸೊಸಿಯ ವಾಣಿಯು ಸ್ವಸುತೆ ಭಾರತೀ ಉಸುರಿಬಿಟ್ಟಳೇನೋ 1 ಮುಪ್ಪೊಳಲುರಿಗಾನು ಪೌತ್ರನು ವೊಪ್ಪುವ ಮೈಗಣ್ಣಾ ತಪ್ಪದೆ ಸೇವಿಸುವ ಸುಮನಸರಪ್ಪಣಿತ್ತರೇನೋ ತಪ್ಪದಾಸರನ ಮುಗಿಪ್ಪ ಗರುಡ ಶೇಷ- ರೊಪ್ಪಿಗಿಯಿಲ್ಲದೆ ತಪ್ಪಿಸ್ಯೋಡಿ ಬಂದ್ಯಾ 2 ಸುರಲೋಕವಾಸಾವು ಶ್ರೀಹರೆ ಪರಮಸೌಖ್ಯವಲ್ಲೆ ಸುರತರುಧೇನುಗಳು ನಿನಗೆ ತಾವ್ ಕೊರತೆ ಮಾಡಿದವೇನೋ ಸುರಮುನಿಗಂಧರ್ವರ ಗಾಯನ ಬಿಟ್ಟು ಸರಸವೇನು ಕಂಡಿ ನರಸಿಂಹವಿಠಲ3
--------------
ನರಸಿಂಹವಿಠಲರು
ಪರಿ ಪೋಷಕ ತ್ವಂ ಪ ಮಾ ಕಮಲಾಸ ದಿವೌಕಸ ಪ್ರೇರಕ ಏಕಮೇವ ಜಗದಾಧಾರಕಾ 1 ಅನಿರುದ್ಧ ಮುಕುಂದಾ 2 ನಾಭಿ ಪದ್ಮ ಸುನಿಕೇತನ ಪ್ರದ್ಯುಮ್ನಾಭಿಧ ಷಣ್ಮಹಿಷಿಯರರಸಾ 3 ಅಷ್ಠ ದಳಗಳಲಿ ವಸುದಿಕ್ಷತಗಳಅಷ್ಟ ನಿಯಂತ ಸಂಕರುಷಣನೇ 4 ಎರಡು ದಶವು ದಳ ಸರಸಿವಾಸನೆಎರಡಾರರ್ಕರ ನಿಯಾಮಕ ಹರಿಯೆ 5 ಎರಡೆಂಟರ ದಳ ಇಂದ್ರ ಯೋನಿಯಲಿಉರಗೇಶಣ ನಾರಾಯಣನೇ 6 ಖಗ ವಾಹನನೇ 7 ಪದುಮ ಸಾಸಿರ ದಳ ವಸನೆ ಈಶಾಪದುಮಜ ಪೋಷಕ ವಾಸುದೇವಾ 8 ಸಪುತ ಚಕ್ರದಲಿ ವ್ಯಾಪಿಸಿ ಪೊರೆಯುವಖಪತಿಗಮನ ಗುರು ಗೋವಿಂದ ವಿಠಲಾ 9
--------------
ಗುರುಗೋವಿಂದವಿಠಲರು
ಪರಿಪಾಲಿಸುವುದು ಎಮ್ಮನು ಪರಮಾತ್ಮನ ರಾಣಿ ಕರುಣಾಕರನ ಪಾದಸ್ಮರಣೆಯನೆ ಕೊಟ್ಟು ಪ ಅಮರೇಶ ವಂದ್ಯಳೆ ಕಮಲಾಲಯೆ ನೀಬಂದು ಶ್ರಮವಿಲ್ಲದೆಯನ್ನೆಯ ಮಮತೆಯನು ಬಿಡಿಸು 1 ವಸುದೇವಸುತನ ರಾಣಿ ಅಸುರ ಸಂಹಾರಳೇ ನಿನ್ನ ವಶವಾದ ಮೇಲೆ ಅಂಭ್ರಣಿಯೆ ನಸುನಗುತ ಈಗ 2 ಮಂದರೋದ್ಧಾರಎನ್ನ ಸಂದುಸಂದಲಿ ಕಾರ್ಯವ ನಿಂದುಮಾಡಿಸುವಂಥದನ್ನು ಚಂದದೀಬೋಧವಕೊಟ್ಟು 3 ಮಂಗಳಾಂಗಿಯೆ ನಿನ್ನ ಮುಂಗಾಣದೆಸೊರಗಿದೆ ಅಂಗಜಪಿತನ ಜಾಯೇ ಭಂಗಪಡಿಸದೆಬೇಗಾ 4 ಪದ್ಮಸಂಭವನಮಾತೆ ಮುದ್ದುಮೋಹನವಿಠಲ ಪದ ಪದ್ಮಗಳನೀನೊಲಿದು ಹೃತ್ಪದ್ಮದಲಿ ಕಾಣಿಸುತ 5
--------------
ಮುದ್ದುಮೋಹನವಿಠಲದಾಸರು
ಪರಿಪಾಲಿಸೈ ವರ ವೆಂಕಟೇಶ ಚರಣಾಬ್ಜಯುಗ ಸ್ಮರಣೆಯನಿತ್ತು ಪ ದುರಿತಾಧಿದೂರ ಪರತತ್ವಸಾರ ಪರಮಾತ್ಮನೆ ಪೊರೆ ಎನ್ನುತ ಕರಿರಾಜ ಮೊರೆಯಿಡುತಿರಲು ನೀ ಗರುಡನ ಏರಿ ತ್ವರೆಯಿಂದ ಬಂದೆ ಪರಮ ದಯಾಕರ ಶ್ರೀನಿವಾಸ 1 ಪಾಪಿಷ್ಠನು ಅಜಾಮಿಳನೆಂದು ಕೋಪದಿ ಯಮ ಭಟರೆಳೆಯುತಿರೆ ತಾಪಕೆ ತನ್ನ ಪುತ್ರನ ಕೂಗುತಲಿರೆ ಕೃಪೆಯಿಂದ ನಿಜಪುರಕೆ ಒಯ್ದೆ 2 ಕನಕಾಚಲನಿಧಿ ಲಕ್ಷ್ಮೀಕಾಂತ ಪ್ರಣತಾರ್ಥಿಹರ ಆನಂದಕರ ವನಜಾಸನಾದಿ ಅಮಿಷಪಾಲ ಯೋಗಿ ಮನ ಕುಮುದಲೋಲ 3
--------------
ಲಕ್ಷ್ಮೀನಾರಯಣರಾಯರು
ಪರಿಭವ ತಾಪಹರಣ ಪ ದಯದಿ ಯುವತಿಯಕುಲ ಉದ್ಧಾರಣ ಜವದಿ ಕರಿಧ್ರುವಬಂಧಮೋಚನ ಯುವತಿಗಕ್ಷಯವಿತ್ತು ಒಲಿದು ಹಯವ ಪಿಡಿದು ರಥವ ನಡೆಸಿದ ಭುವನ ಬ್ರಹ್ಮಾಂಡ ಸೂತ್ರಧಾರಕ ಶಿವಸುರಾರ್ಚಿತ ಪೊರೆ ಸುಹೃದಯ ಅ.ಪ ಪತಿತಪಾವನ ಶ್ರೀಶಕೇಶವ ಸಹಸ್ರಾಕ್ಷಶಯನ ಮಾಧವ ಭೋಗ ಗರುಡಗಮನ ಪತಿತಪಾವನೆ ಇಂದಿರೆಂiÀi ಜೀವ ಜಗದಾದಿದೇವ ಯತಿತತಿನುತ ಪವಿತ್ರನಾಮ ಕ್ಷಿತಿಸುತೆಪತಿ ಪವಿತ್ರ ಮಹಿಮ ಸತಿಯರವ್ರತಹರ ಜಿತಮಹಮುಪ್ಪುರ ಕೃತ್ರಿಮ ಮುರಹರ ಮಥನಸಾಗರ ನುತಿಪರ್ಹಿತಕರ ಸುಪಥರಾಧಾರ ಹಿತದಿ ಪೊರೆಯೆನ್ನ ಕರುಣಾನಿಕರ 1 ನಿರುತ ಜನರ ಕಲ್ಪತರು ನೀನು ಭಯಭಕ್ತಿಯಿಂದ ಸ್ಮರಿಸಿ ಬೇಡ್ವರ ಪರಮಸುರಧೇನು ಸುರಗಂಗಾಜನಕ ಶರಣು ಸಜ್ಜನರಮಿತ ದಯಾ ಪರನು ವಿಶ್ವರಕ್ಷಕನು ಮರಣರಹಿತ ಮದನತಾತ ಶುಭ ಸಚ್ಚರಿತ ದುರುಳ ಸಂಹರ ಶರಣುಮಂದಾರ ಸುಗುಣರೋದ್ಧಾರ ಶರಣಭಜಕರ ವರಸುಖಕರ ಕರಣಿಸಭವನೆ ತ್ವರಿತ ಸುವರ 2 ಕುಸುಮನಯನ ಸ್ವತಂತ್ರ ಮಹಲೀಲ ದಿವಕೋಟಿ ಪ್ರಭಾಕರ ಕುಸುಮಗಾತ್ರ ಮಹತಂತ್ರ ಮಾಯಜಾಲ ಗೋವರ್ಧನೋದ್ಧಾರ ಕುಸುಮಧರ ಕುರುಕುಜನಕುಲಕಾಲ ಗೋಪಾಲಬಾಲ ಕುಸುಮನಾಭ ಕೌಸ್ತುಭಾಂಬರ ಅಸಮ ತುಲಸಿಮಾಲಾಲಂಕಾರ ಒಸೆದು ದಾಸನ ಪುಸಿಯೆಂದೆನಿಸದೆ ಹಸನುಮತಿಯಿತ್ತು ಪೋಷಿಸನುದಿನ ಎಸೆವ ತವಪಾದ ನಂಬಿ ಮರೆಬಿದ್ದ ಅಸಮದಯಾನಿಧಿ ಮಮ ಶ್ರೀರಾಮ 3
--------------
ರಾಮದಾಸರು
ಪರಿಹರಿಸು ದಯಾನಿಧಿ ಶರಣರ ಸಂಕಟವಾ ಧರೆಯ ತಳದಿ ನಾ ಪರಮಧೀನನು ಮರೆಯದಿಯೋ ಪದವಾ ಪ ಜಲದೊಳಗೆ ಪೊಕ್ಕರೂ ನಿನ್ನ ಬಿಡುವನಲ್ಲಾ ಬಲುಬೆಟ್ಟದ ಬುಡದೊಳು ಕುಳಿತರು ಪಿಡಿವೆನಲ್ಲಾ ನೆಲವಿಡಿದು ಕೋರೆಯಲಿ ತೋರ್ದರು ಅರಿವೆನಲ್ಲಾ ಗಲವರೆಗೆ ಸಿಂಹಮೊಗ ಧರಿಸಿದರೂ ಸರಿ ಬೆಚ್ಚಿ ಬೆವರೋನಲ್ಲಾ 1 ಸರಿ ತಿರಕನಂತೆ ನೀ ತಿಳಿದರೂ ಬಿಡುವನಲ್ಲಾ ಕರತಳದಿ ಕೊಡಲಿಯ ಪಿಡಿದರೂ ಸರಿವನಲ್ಲಾ ನೆರೆ ಧರಿಸಿ ಜಟವನ ಪೊಕ್ಕರೂ ಬಿಡುವನಲ್ಲಾ ಕರದಿ ಚಕ್ರವ ಪಿಡಿದು ತೋರಲೆಂದೆಂದಿಗುಜ್ವಲನಲ್ಲಾ 2 ವಸನಗಳಿಲ್ಲದೆ ನುಸುಳನರಿದೆನಲ್ಲಾ ಎಸೆವ ಸಮತುರಗವೇರಿ ಪೋಗಲು ಬಿಡುವನಲ್ಲಾ ದಶರೂಪಿ ನಿನ್ನನು ಬಿಡುವ ಶರಣನಲ್ಲಾ ಕುಸುಮನಾಭ ಶಿರಿ ನರಸಿಂಹವಿಠ್ಠಲ ಆಲಿಸೆನ್ನ ಸೊಲ್ಲಾ 3
--------------
ನರಸಿಂಹವಿಠಲರು
ಪಲಿಮಾರು ಮಠದ ಶ್ರೀರಘುವರ್ಯರ ಕೃತಿಗಳು ಯುಗ್ಮ ಉಡುಪಿನ ಕೃಷ್ಣನೇ 1 ದ್ವಾರಕಾಪುರದಲ್ಲಿ ದೇವಕಿ ಸರಸ ಬಾಲಕ ಲೀಲೆಯಾ ತೋರು ಎನುತಲಿ ದಧಿಯ ಮಥಿಸಲು ಕರುಣಿ ಬಾಲ್ಯವ ತೋರಿದೆ2 ತೊಡೆಯನೇರಿ ಸ್ತನ್ಯಪಾನವ ಮಾಡಿ ಮೋದವ ತಾಯಿಗೆ ಕೊಡುತ ಕಡೆಗೋಲ್ ನೇಣು ಸಹಿತಲಿ ಪ್ರೌಢ ನೀನಪಹರಿಸಿದೆ 3 ಮೊಸರು ಭಾಂಡವನೊಡೆದು ಬೆಣ್ಣೆಯನಸುನಗುತಲೀ ಭಕ್ಷಿಸೀ ಶೇಷಶಯನನೆ ನೀನು ಕುಣಿಯೆ ಸಂ- ತೋಷಪಟ್ಟಳು ದೇವಕಿ4 ಸತಿ ನುಡಿದಳು 5 ವಿತತ ವೈಭವ ಈ ಪರಿಯಲಿಪ್ರತಿಮೆಯನ್ನೇ ಮಾಡಿಸಿ ಸತತ ಪೂಜೆಯ ಮಾಳ್ಪರೀ ಅತಿ ಪ್ರೀತಿಯಿಂದಲಿ ಕೊಡು ಎನಗೆ 6 ಪರಿ ಪೇಳೆ ವಿಶ್ವ-ಕರ್ಮನಿಂದಾ ಮಾಡಿಸಿ ಕಮಲನಾಭನು ಇತ್ತು(ದ್ದು) ಅದರಲಿ ವಿಮಲ ಪೂಜೆಯ ಕೊಂಡನು 7 ಶರಧಿ ತೀರದಲಿತ್ತನು8 ನಾವೆಯಲ್ಲಿ ಗೋಪಿಚಂದನ ಸಂವೃತಾರ್ಚಯು ಬರುತಿರೆ ನಾವೆಯೊಡೆಯಲು ಮಧ್ವಮುನಿಪನು ಭಾವದಿಂದಲೆ ತಂದನು 9 ಅವರರೊಡೆಯ ಶ್ರೀ ಮರುತಪತಿತತ್ ಪ್ರತಿಷ್ಠೆಯ ವಿರಚಿಸಿ ಕುಮುದ ಬಂಧು ಕ್ಷೇತ್ರದಲಿ ನಿ-ನ್ನಮಿತ ಪೂಜೆಯ ಮಾಡಿದ 10 ನನ್ನ ಹಿರಿಯರ ಪುಣ್ಯ ಫಲಿಸಲು ನಿನ್ನ ಪೂಜೆಯ ಮಾಡುತಧನ್ಯನಾದೆನು ಮುಕ್ತಿ ಕರಗತ ಎನ್ನಗಾಯಿತು ಕೃಷ್ಣನೇ 11 ಮಧ್ವಪೂಜಿತ ರಕ್ಷಿಸೆನ್ನನು ಸಾಧ್ವಸೋಝ್ಝಿತ ಸದ್ಗುಣ ಸಾಧ್ವಲಂಕೃತ ವೇಷ ಮುಕ್ತಿ ಪ-ದಾಬ್ಜನೇ ರಘುತಿಲಕನೇ 12
--------------
ಅನ್ಯದಾಸರು