ಒಟ್ಟು 3517 ಕಡೆಗಳಲ್ಲಿ , 124 ದಾಸರು , 2540 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರದ ಮುನಿವರರೆ | ಸದ್ಗುರುವರ ನಾರಾಯಣ ಪ್ರಿಯಶ್ರೀ ಪ ನಾರದ ಮುನಿವರರೆ ನಿಮ್ಮಯ ಚಾರುಚರಣಕೆ ನಮಿಪೆನು ಆ ದ್ವಾರಕಾಪುರನಿಲಯ ಕೃಷ್ಣನ- ಸಾರ ಪೇಳ್ದಿರಿ ಅ.ಪ. ಪರಮ ಸುಂದರ ರೂಪನು | ಆ ಕೃಷ್ಣನು ಪರತರ ಪರಮಾತ್ಮನು ಶರಣಜನ ಮಂದಾರನಾತನು ಕರುಣಶರಧಿಯು ಕಾಮಜನಕನು ಸರಸಿಜೋದ್ಭವ ಸುರರಿಗಧಿಕನು ಹರಿಯು ಇವನೆಂದರುಹಿದಿರಿ ಗುರು 1 ಲೋಕಮೋಹಕನಯ್ಯನು | ಶ್ರೀಕೃಷ್ಣನು ಲೋಕ ವಿಲಕ್ಷಣನು ಲೋಕ ಕಂಟಕರನ್ನು ಶಿಕ್ಷಿಸಿ ನಾಕ ನಿಲಯರ ಭರದಿ ರಕ್ಷಿಸಿ ಲೋಕ ಕಲ್ಯಾಣವನ್ನು ಗೈದ ತ್ರಿ ಲೋಕದೊಡೆಯನೆಂದರುಹಿದಿರಿ ಗುರು 2 ವಿಧಿ ಶುಭರೂಪನ | ಶ್ರೀಕೃಷ್ಣನ ದೇವಾದಿದೇವೇಶನ ಪಾವನಾಂಘ್ರಿಗಳನ್ನು ಪೂಜಿಸಿ ಸೇವಿಸುವ ಸೌಭಾಗ್ಯವೆಂದಿಗೆ ದೇವ ಕರಿಗಿರಿನಿಲಯ ನರಹರಿ ಯಿವನೆಂಬುದನೆನಗೆ ತಿಳುಹಿರಿ 3
--------------
ವರಾವಾಣಿರಾಮರಾಯದಾಸರು
ನಾರಸಿಂಹ ಶ್ರೀ ನಾರಸಿಂಹ ಪಾರುಗಾಣಿಸಿ ದುರಿತೌಘಹರಿಸಿ ಕಾಯೊ ಪ ನರಹರಿ ಜ್ವರಹರ ಘೋರವ್ಯಾಧಿಯ ಪರಿಹಾರಗೈಸಿ ಪರಿಪಾಲಿಸಬೇಕಯ್ಯಾ ಅ.ಪ ಘುಡು ಘುಡಿಸುತ ಪಲ್ಕಡಿದು ಚೆಂಡಾಡುತ ಮೃಡನೆ ಪರನು ಎಂದು ನುಡಿದ ಕಶಿಪುವಿನ ಒಡನೆ ಕಂಭದಿ ಬಂದು ಒಡಲ ಬಗೆದು ನಿನ್ನ ಧೃಡ ಭಕುತಗೆ ಬಂದೆಡರ ಬಿಡಿಸಿದೆ1 ತುಷ್ಟಿಪಡಿಸೊ ಪರಮೇಷ್ಟಿಯ ಪಿತ ನಿನ್ನ ದೃಷ್ಟಿಯಿಂದ ಅನಿಷ್ಟ ನಿವಾರಣ ಅಷ್ಟಕರ್ತೃತ್ವದ ಪ್ರಭೋಕಷ್ಟಹರಿಸಿಭಕ್ತ- ರಿಷ್ಟ ಪಾಲಿಪ ಸರ್ವಸೃಷ್ಟಿಗೊಡೆಯ ದೇವ2 ಸಂಕಟ ಬಿಡಿಸೊ ಭವಸಂಕಟದಿಂದ ಶ್ರೀ ವೇಂಕಟೇಶಾತ್ಮಕ ಭೀಕರ ರೂಪ ಶಂಕರಾಂತರ್ಗತ ಸಂಕರುಷಣ ಮೂರ್ತೇ ಮಂಕುಹರಿಸಿ ಪಾದಪಂಕಜ ತೋರಯ್ಯ 3
--------------
ಉರಗಾದ್ರಿವಾಸವಿಠಲದಾಸರು
ನಾರಾಯಣ ಕೃಷ್ಣನಂದ ಮುಕುಂದಾ ಪ ನಿನ್ನೆತ್ತಿ ಆಡಿಸಲು ನಂದ ಯಶೋದೆಯಲ್ಲಾ ನಿನ್ನೆಂತು ಸೇವಿಸುವೆ ಪೇಳು ಇಂದಿರೆರಮಣಾ1 ನಿನ್ನ ಸಹಪಾರಿ ಸುಧಾಮನಾನಲ್ಲಾ ನಿನ್ನೆಂತು ಸೇವಿಸಲೊ ಯದುಕುಲೋತ್ತಮನೇ2 ಅಗರು ಚಂದನ ಪರಿಮಳದ್ರವ್ಯಗಳನೆ ತಂದು ಅರ್ಪಿಸಲು ಕುಬುಜೆಯಲ್ಲಾ ಆದರದಿ ಪಾಲ ನೀಡೆ ವಿದುರನಲ್ಲಾ ಅನಂತ ಗುಣಪೂರ್ಣನೇ ಶ್ರೀ ಹರಿ3 ಗೋವುಪಾಲನು ತಂದು | ನಿನಗ ಭಿಷೇಕ ಮಾಡುವೆನೆ ವಿಧ ವಿಧ ಪುಷ್ಪಗಳ ತಂದು ಅರ್ಚಿಸಲು ಪೊಕ್ಕಳೊಳು ಪುಷ್ಪವನೆಪಡೆದಿರುವೆ ಹರಿಯೆ 4 ಕರಿರಾಜ ನಿನ್ನ ಕರೆಯೆ ಕರುಣದಿಂದ ಬಂದೆ ಪ್ರಹ್ಲಾದಗೋಲಿದು ಕಂಬದಲಿ ನಿಂತೇ ದ್ರೌಪದೀ ದೇವಿಗಕ್ಷಯಾಂಬರ ವಿತ್ತೆ ಅಂತೆ ಎನ್ನಪಾಲಿಸೊ ಲಕ್ಷ್ಮೀಕಾಂತನೇ 5 ಪರಿಪಯಲಿಭಕ್ತರ ಪಾಲಿಸಿದೆಯೊ ದೇವಾ ಪರಮ ದಯಾಳುವೆಂದೆನಿಸಿಕೊಂಡೇ ಪರಮ ಪುರುಷನು ನೀನು ಪಾಮರನು ನಾನಹುದೊ ದಾರಿ ಕಾಣದೆ ಇರುವೆ ದಯೆತೋರು ಮುರಾರಿ6 ಭಕ್ತವತ್ಸಲ ನೀನೆ ಭಯನಿವಾರಣ ನೀನೇ ಭಾಗವತಜನಪ್ರಿಯ ನೀನೆ ಸರ್ವರಕ್ಷಕ ನೀನೆ ಶ್ರೀ ವೇಂಕಟವಿಠಲಾ 7
--------------
ರಾಧಾಬಾಯಿ
ನಾರಾಯಣ ನರಹರಿಯೆ ನರ ಜನ್ಮದಿ ಸಿಲುಕಿದೆನು ಮರಳಿ ಜನಿಸದಂದಲೆನ್ನ ಕರುಣಿಸೋ ಕ್ಷೀರವಾರಿಧಿಶಯನ ಪ ಮುರಹರ ಮಧುಸೂಧನ ಶ್ರೀಹರಿ ಧರಣೀಧರ ವರಾಹ ನಾರಾಯಣ ವಟು ವಾಮನ ಕೇಶವ ವಾರಿಜದಳನಯನ 1 ನಂದನಂದನ ಹರಿಯೆ ನಾರದವಂದಿತ ಸುರ ಸಂಹಾರಿ ಮಂದಜಾಯತನಯನ 2 ಅರಿಗದೆ ಶಂಖಾಬ್ಜ ಕರದೊಳು ಮೆರೆವ ಪೀತಾಂಬರ ಧಾರಿ ಕರಿವದನನೆ ಕಾಳಿಂಗಮರ್ಧನ ಸರಸಿರುಹದಳನಯನ 3 ಮುಳುಗಿದೆನು ಎತ್ತು ಕಮಲನಯನ 4 ಬಲ್ಲುದೇ ಕರು ಎತ್ತಿಕೋ ಹರಿಯೇ 5
--------------
ಕವಿ ಪರಮದೇವದಾಸರು
ನಾರಾಯಣ ರಕ್ಷಿಸೋ ನಮ್ಮನು ಲಕ್ಷ್ಮೀ ನಾರಾಯಣ ರಕ್ಷಿಸೋ ಪ ಪಾರರಹಿತ ಭವಪಾರಾವಾರದಿ ಬಲು ಘೋರತಾಪವು ಮೀರಿತೋ ಭವದೂರ ನಿತ್ಯೋದಾರ ಕರುಣದಿ ಅ.ಪ ಶ್ರೀಶ ನಿನ್ನರ್ಚಿಸದೆ ಶ್ರೇಯಸ್ಸುಖ ಕಳತ್ರ ನಿವೇಶ ತನುಜ ಮಾಯಾ ಪಾಶದೊಳಗೆ ಶಿಲ್ಕಿ ಗಾಸಿಯಾದೆನು ಜಗದೀಶ ನಿಖಿಲಸು ರೇಶ ಕಮಲಫಲಾಶನಯನ ದಿ ನೇಶಶತ ಸಂಕಾಶ ವ್ಯಾಘ್ರಗಿರೀಶ ಭವಭಯ ಪಾಶ ಹರಪರಮೇಶ ವಂದಿತ 1 ದೇಹಾಭಿಮಾನದಲ್ಲಿ ತೀವಿದ ಭೂತ ಸೋಹಮೆಂಬುವ ಬಲು ಮೋಹದಿ ಸಿಲುಕಿ ದಾ ಸೋಹಮೆನ್ನದೆ ದೈವ ದ್ರೋಹಿಯಾದೆನು ವಿದೇಹಜಾವರಿ ಗೂಹ ನೋಚಿತದೇಹ ವಿಜಿತ ವಿ ದೇಹ ಖಗವರವಾರಶುಭಪರಿವಾಹ ನಿಖಿಲ ನಿ ರೀಹ ಲೋಕವಿಮೋಹನಾಚ್ಯುತ 2 ಗುರುಹಿರಿಯರ ಮರೆದು ಗರ್ವದಿ ಧರ್ಮಾವ ಚರಣೆಯ ನೆರೆತೊರೆದು ಜರಿದು ದುರ್ಗತಿಗೆ ನಾ ಗುರಿಯಾದೆನು ಹರಿ ಪರಮಪುರುಷ ಪಾವನ ಚರಣ ಸುಗುಣಾ ಭರಣ ದೀನೋ ಭವ ಸಂಹರಣವಿಶ್ವಂ ಭರಣ ಪುಲಿಗಿರಿ ವರದವಿಠಲ 3
--------------
ವೆಂಕಟವರದಾರ್ಯರು
ನಾರಾಯಣ ಹರಿಗೋವಿಂದ ನಾರದವರದ ಮುಕ್ಕುಂದಾ ಪ ಸುಜ್ಞಾನಿಗಳಾದವರ ಮಾನಸಾಂತರದಿ ಮಹಿಮೆಯು ತೋರುತ ನಾನಾಪರಿಯಲಿ ನಟನೆಯು ಮಾಡುವಾ 1 ಸುಂದರ ವಿಗ್ರಹ ಸುಜನರ ಪೋಷಕನಂದನಂದನ ವಂದಿತ ಮುನಿಜನಾಮಂದರಧರ ಮಾನದ ಜಗದ್ಭರಿತಾ ಅಮಿತ ಪರಾಕ್ರಮ ಮೂರ್ತಿ ಆಗರ ದ್ವಾರಕ ಹರಿಪುರ ಸ್ಥಳವು ಭಾಗೀರಥಿಪಿತ ಭವ ವಿಮೋಚನ ಕೃಷ್ಣ ನಾಗಶಯನ ಶ್ರೀನಿಲಯನ 2 ಪುಂಡರೀಕಾಕ್ಷ ಶ್ರೀ ಪಾಂಡವ ಪಕ್ಷಕ ಪಂಡಿತ ರಕ್ಷಕ ಪರಮಾತ್ಮನೆ ಹಿಂಡೂ ದೈತ್ಯರ ಕುಲ ಚಂಡಾನೆ ಭೇರಿಸಿ ಭೂಮಂಡಲವನಾ ಳ್ವಂಥ ಮಹಿಮ ಪ್ರಕಾಶ 3 ಅಗಣಿತ ಚರಿತ ಅನಂತನಿನ್ನಾ ಬಗೆಬಗೆಯಿಂದಲಿ ಭಜಿಸುವ ಭಕುತರ ಆಘಗಳ ಖಂಡಿಸುವಾ ಹರಿ 'ಹೊನ್ನವಿಠ್ಠಲ ' 4
--------------
ಹೆನ್ನೆರಂಗದಾಸರು
ನಾರಾಯಣ--------ಜಾಯನಮ: ಪ ಸರ್ವವಾರಿಜೋದ್ಭವ ಹರಿ ನೀ ಪೊತ್ತ ಶಿರಲೋಕ ಎರಡೇಳಾರೊಳಾನೇಕ ದ್ವಾದಶಾದಿ-- ಶಾಸನ ಆದಿದಿಕ್ಪಾಲರಾ ಬೇಕಾದ ಹಾಗೆ ಪತಿ ¨್ರಹ್ಮನೀನೆ 1 ಜಗದೊಳು ಹುಟ್ಟಿದ ಪ್ರಾಣಿಗಳಿಗೆ ಎಲ್ಲ ಬಗೆ ಬಗೆ ಸಂಹಾರ ಕರ್ತನಾಗಿ ಅಗಣಿತ ಮಹಿಮ ತಾಮಸಯುಕ್ತನಾದಂಥ ಮೃಗ ಚರ್ಮಾಂಬರಧರ ಮಹಾದೇವನೀನೆ 2 ಸಕಲ ಚರಾಚರ ಸಲಹುತಲಿರುವಂಥ ನಿಕರಾದಿ ಸಾತ್ವಿಕ ನಿಜಧರ್ಮಾದಿ ಅಕಲಂಕ ಮಹಿಮ ಶ್ರೀಹರಿ 'ಹೊನ್ನ ವಿಠ್ಠಲ’ ಸಕಲ ಸ್ವತಂತ್ರನಾದ ಸರ್ವೋತ್ತಮ ನೀನೆ 3
--------------
ಹೆನ್ನೆರಂಗದಾಸರು
ನಾರಾಯಣತೇ - ನಮೋ ನಮೋ ತಾರಕ ಪದಯುಗ - ನಮೋ ನಮೋ ಪ ಪಾರಾಶರತೇ ನಮೋ ನಮೋ ಗುಣ ವಾರಿಧಿ ಸುಖಮಯ - ನಮೋ ನಮೋ ಅ.ಪ ಇಂದಿರೆ ಮನುಕುಮುದೇಂದು ಪರಾವರ ನಂದಗುಣಾರ್ಣವ ನಮೋ ನಮೋ ಸಿಂಧುಶಯನ ಅರವಿಂದ ಸುನಾಭ ಮಹೇಂದ್ರ ವಿನಾಂತನೆ ನಮೋ ನಮೋ1 ಸುಂದರ ವೀ ಜಗ _ ತಂದೆ ಮಹಾಬಲ ಕುಂದು ವಿದೂರನೆ ನಮೋ ನಮೋ ಮಂದಜ ಭವಮನ ಸ್ಪಂದನ ಕರುಣಿಯೆ ನಮೋ ನಮೋ2 ಸುಂದರ ತಮ ಅರವಿಂದ ಸುಲೋಚನ ಕಂಧರ ಪಾಣಿಯ ನಮೋ ನಮೋ ನಂದನ ಕಂದ ಮುಕುಂದ ಜನಾರ್ಧನ ಛಂದಸು ವೇದ್ಯನೆ ನಮೋ ನಮೋ 3 ನಾಶರಹಿತ ಸ್ವತಂತ್ರಗುಣಾತ್ಮಕ ವಾಸುದೇವತೇ ನಮೋ ನಮೋ ಭೇಶಕಾಂತಿ ಮುಕ್ತೇಶ ಪರಾಮೃತ ವಿಶ್ವಜೂತಿ ಬಲ ನಮೋ ನಮೋ 4 ಶೇಷಶಯನ ವಾರಾಸಿಗೇಹ ಮಾಯೇಶ ಸನಾತನ ನಮೋನಮೋ ಓಸು ಜಾಡಾಜಡ ರಾಸಿ ಬಿಂಬಗುಣ ಭಾಸಕ ನಾಯಕ ನಮೋ ನಮೋ 5 ದೇವ ದೇವ ಜಗ ಪಾವನ ಚರಿತ ವಿಭಾವರಿ ಚರಹರ ನಮೋ ನಮೋ ಜೀವರ ಜೀವ ವಿಭಾವ ಸುನಾಯಕ ಭಾವುಕ ಜನಪ್ರಿಯ ನಮೋ ನಮೋ 6 ಅಂಡಜವಾಹನ ಪುಂಡರೀಕನುತ ಪಾಂಡುರಂಗತೇ ನಮೋ ನಮೋ ತೊಂಡವತ್ಸಲಾಖಂಡ ವಿಜಯ ಕೋದಂಡಪಾಣಿ ತೇ ನಮೋ ನಮೋ 7 ಭವ ಸಂಕಟ ನಾಶಕ ಶಂಕರ ಮಹಿಮನೆ ನಮೋ ನಮೋ ಸುಂಕ ಸುಲಿವ ಬಿರುದಾಂಕಿತ ಕುಟಿಲಾ ಟಂಕರಹಿತ ತೇ ನಮೊ ನಮೋ 8 ಪರಮೇಷ್ಠಿ ಜನಕ “ಶ್ರೀ ಕೃಷ್ಣವಿಠಲ” ವಿಭು ನಮೋ ನಮೋ ಅಷ್ಟಕರ್ತ ಶಿಪಿವಿಷ್ಠಸುನಾಮಕ ಧಿಟ್ಟ ನೃಸಿಂಹನೆ ನಮೋ ನಮೋ 9
--------------
ಕೃಷ್ಣವಿಠಲದಾಸರು
ನಾರಾಯಣನ ನೆನೆ ವರ್ಣಿಸು ಮನ್ನಿಸುಆರಾಧನೆಗಳ ಮಾಡುತ ಪಾಡುತನೀರಾಜನದಿಂದಲರ್ಚಿಸಿ ಮೆಚ್ಚಿಸಿ ವೇದಪಾರಾಯಣಪ್ರಿಯನÀ ಪ. ಅವನ ಶ್ರವಣ ಮನನ ನಿಧಿಧ್ಯಾಸನಶ್ರೀವಿಷ್ಣುವಿನ ಭಕ್ತಿಮಹಾಪ್ರಸಾದಂಗಳುಕೈವಲ್ಯ ಪದಕಿಕ್ಕಿದ ನಿಚ್ಚಣಿಕೆ ಎಂದು ಭಾವಜ್ಞರು ಪೇಳ್ವರೊಜೀವನ ಜವನಬಾಧೆಯ ತಪ್ಪಿಸಿಪಾವನ ವೈಕುಂಠಪುರದೊಳಗೆಂದೆಂದುಆವಾಸವನು ಮಾಡಿ ಸುಖಿಸಬೇಕಾದರೆ ಸೇವಿಸು ವೈಷ್ಣವರ 1 ಲೋಕದಿ ವರಂ ವರಯ ಭದ್ರಂತೆಋತೆ ಕೈವಲ್ಯಮಾತ್ಮನಃಏಕಮೇವೇಶ್ವÀರಸ್ತ ಸಾದ್ಭಗವಾನ್ ವಿಷ್ಣುರವ್ಯಯ ಎಂಬಾಈ ಕಲಿಯುಗದಲಿ ಬೇಕಾದ ಪುರಾಣಾದಿವಾಕುವಿವೇಕವ ಮನದಿ ವಿಚಾರಿಸಿಸ್ವೀಕರಿಸು ವೈಷ್ಣವ ಮತವ ಜೀವ ನಿರಾಕರಿಸನ್ಯಮತವ 2 ದ್ವಾರಾವತಿಯ ಗೋಪಿಚಂದನದಿಂದಶ್ರೀರÀಮಣನ ವರ ನಾಮವ ನೆನೆ-ದೆರಡಾರೂಧ್ರ್ವ ಪುಂಡ್ರಗಳ ಧರಿಸೆಂದೆಂದು ವೀರವೈಷ್ಣವಗುರುವಸೇರಿ ಸಂತಪ್ತ ಸುದರುಶನ ಶಂಖಧಾರಣವನು ಭುಜಯುಗದಲಿ ಮಾಡಿಮುರಾರಿಯ ಮಂತ್ರಗಳವರಿಂದ ಕೇಳುತ ಓರಂತೆ ಜಪಿಸುತ್ತಿರು 3 ಹರಿ ನಿರ್ಮಾಲ್ಯವ ಶಿರದಿ ಧರಿಸುತಿರುಹರಿ ನೈವೇದ್ಯವನೆ ಭುಂಜಿಸುತಿರುಇರುಳು ಹಗಲು ಹರಿಸ್ಮರಣೆಯ ಬಿಡದಿರು ದುರುಳರ ಕೂಡದಿರೊಹರಿಪದ ತೀರ್ಥದ ನೇಮವಬಿಡದಿರುಹರಿಪರದೇವತೆ ಎಂದರುಪುತಲಿರುಗುರುಮುಖದಿಂದ ಸಚ್ಛಾಸ್ತ್ರ ಪುರಾಣವ ನಿರುತದಿ ಕೇಳು 4 ತುಷ್ಟನಹನು ಎಳ್ಳಷ್ಟು ಮುಂದಿಟ್ಟರೆಅಷ್ಟಿಷ್ಟೆನ್ನದೆ ಸಕಲೇಷ್ಟಂಗಳಕೊಟ್ಟುಕಾಯ್ವನು ಶಕ್ರನಿಗೆ ತ್ರಿವಿಷ್ಟಪಪಟ್ಟವ ಕಟ್ಟಿದವದುಷ್ಟರನೊಲ್ಲ ವಿಶಿಷ್ಟರಿಗೊಲಿವ ಅ-ನಿಷ್ಟವ ತರಿದೊಟ್ಟುವ ಜಗಜಟ್ಟಿ ಅರಿಷ್ಟಮುಷ್ಟಿಕಾದ್ಯರÀ ಹುಡಿಗುಟ್ಟಿದ ವಿಠಲ ಬಹು ದಿಟ್ಟ 5 ಕಂದ ಬಾಯೆಂದರೆ ನಂದನಿಗೊಲಿದಿಹಕುಂದುಕೊರತೆ ಬಂದರೆ ನೊಂದುಕೊಳನುಇಂದಿರೆಯರಸ ಮುಕುಂದ ಮುಕುತಿಯ ನಂದನವನೀವ ದೇವಸಂದೇಹವಿಲ್ಲದೆ ಒಂದೆಮನದಿ ಸ-ನಂದನಾದಿಗಳು ಭಜಿಸಲು ಒಲಿವ ಉ-ಪೇಂದ್ರನ ಶುಭಗುಣಸಾಂದ್ರನ ಯದುಕುಲಚಂದ್ರನ ವಂದಿಸಿರೊ 6 ಓಡುವ ಅಡಗುವ ದೇವರೆ ಬಲ್ಲರುಬಾಡುವ ಬೇಡುವ ಮುನಿಗಳೆ ಬಲ್ಲರುನೋಡುವ ಕೂಡುವ ಮುಕುತರೆ ಬಲ್ಲರೊಡನಾಡುವ ರಮೆ ಬಲ್ಲಳುಊಡುವ ಪಾಡುವ ಯಶೋದೆ ಬಲ್ಲಳುಕಾಡುವ ಖಳರ ಮರ್ದಿಸಿ ಹುಡಿಗುಟ್ಟಿದನಾಡೊಳು ಕೇಡುಗಳೆವ [ಕೃಷ್ಣನಿಗೀಡೆಂದಾಡದಿರು] 7 ಆವನ ಪಕ್ಷವದಕೆದುರಿಲ್ಲಆವನ ಕುಕ್ಷಿಯೊಳಕ್ಕು ಜಗತ್ರಯಆವನು ಶಿಕ್ಷಿಪ ರಕ್ಷಿಪನು ಮತ್ತಾವನು ಪಾವನನುಆವನ ಶಿಕ್ಷೆಯ ಮಿಕ್ಕವರಿಲ್ಲ ಕೇ-ಳಾವನುಪೇಕ್ಷೆ ಕುಲಕ್ಷಯವೆನಿಪುದುಆವನುರುಕ್ರಮ ವಿಕ್ರಮನೆನಿಸಿದ ದೇವನಿಗಾವನೆಣೆ 8 ಪತಿ ಆವನ ಚರಣಸೇವಕನಾದಸುರರೊಳಗೀ ಹಯವದನಗಿನ್ನಾರನು ಸರಿಯೆಂದುಸುರುವೆನೊ 9
--------------
ವಾದಿರಾಜ
ನಾರಾಯಣನಲ್ಲದಿಲ್ಲ ಜಗದಿ ಪ ನಾರಾಯಣನೆ ವಾರಿಶಾಯಿಯಾದ ಮೇಲೆ ವಾರಿಸಂಪರ್ಕವಿಲ್ಲದ ವಸ್ತುವುಂಟೆಅ.ಪ ತೃಣ ಲತೆ ತರು ವನಸ್ಪತಿ ಸಂತತಿಯೊಳೆಲ್ಲ ಗಣನೆಯಿಲ್ಲದ ಪ್ರಾಣಿವರ್ಗದೊಳೆಲ್ಲ ಅಣುಮಹತ್ತೆನಿಪ ಚರಾಚರಗಳೊಳೆಲ್ಲ ಅಣಗಿ ಪೋಷಿಪ ರಸ ವಾರಿಯಾದ ಮೇಲೆ 1 ಧರೆಯೊಳಗಡಗಿಹ ಧಾತುಜಾಲವ ಕರಗಿಸಿ ನೆರೆ ವನಸ್ಪತಿವರ್ಗಕೆ ಉಣಿಸನಿತ್ತು ಪರಿ ಧಾನ್ಯ ಫಲಂಗಳ ರಚಿಸುತ್ತ ಹರಹಿ ಲೋಕದೊಳೆಲ್ಲರನು ಪೋಷಿಪ ಪ್ರಭು 2 ಒಂದೇ ಸ್ಥಳದಲಿ ಮೊಳೆತು ಬೆಳೆವ ಬೀಜಕ್ಕೆಲ್ಲ ಒಂದೇ ವಾಸನೆ ಗುಣ ರುಚಿಗಳುಂಟೇ ಸಂದೇಹ ಬೇಡ ನಿರ್ಲಿಪ್ತ ತಾನವುಗಳ ಕುಂದಿಸದೆ ಗುಣ ಸ್ವಭಾವಗಳ ಪೋಷಿಸುವ 3 ಸರ್ವವಸ್ತುಗಳಲ್ಲು ಅಂತರ್ಯಾಮಿಯಾಗಿ ಸರ್ವ ಚರಾಚರಕೆ ನಿಯಾಮಕನಾಗಿ ಸರ್ವರೊಳಡಗಿ ಪೋಷಿಪ ಘನಪ್ರಭುವಾಗಿ ಸರ್ವರುತ್ಪತ್ತಿ ಸ್ಥಿತಿಗೆ ಕಾರಣನಹ 4 ಪರಮಪುರುಷ ತನ್ನನಂತ ಮಹಿಮೆಯೊಳು ಕಿರಿದೊಂದಂಶದಿ ವಾರಿರೂಪದೊಳಿಂತು ಸರುವ ಚರಾಚರದಿರುತಂತರ್ಗತನಾಗಿಪೊರೆವ ಜನವ ರಘುರಾಮವಿಠಲ ಪ್ರಭು 5
--------------
ರಘುರಾಮವಿಠಲದಾಸರು
ನಾರಾಯಣನಾಮ ಭಜಿಸೋ ನಿರುತದಲಿ ನರನೇ ಪ ಮಾಯದ ಸಂಸಾರದಿ ಪಾರಾಗೋ ಉಪಾಯವಿದು ಸಸಾರ ಕಾಯಜನೈಯನ ಭಜಿಸೋ ಶ್ರೀ ಗುರುವಾಯು ದೇವರ ದ್ವಾರಾ 1 ಧ್ಯಾನ ಕೃತಯುಗದಿ ಯಜ್ಞವು ತ್ರೈತದಿ ಅರ್ಚನೆ ದ್ವಾಪರದಿ ಗಾನದಿ ಕಲಿಯಲಿ ಪಾಡಲು ಕೇಶವ ತಾನೇ ವಲಿವ ತ್ವರದಿ 2 ಅನಲ ಪಕ್ವಗೈಸಿದ ಅನ್ನವನಸ್ಕೊಳ್ಳೊಮಿಸುವಂತೆ ಹನುಮೇಶವಿಠಲ ಕೊಟ್ಟಾತನು ಅರ್ಪಿಸು ಅದರಂತೆ 3
--------------
ಹನುಮೇಶವಿಠಲ
ನಾರಾಯಣಯೆಂಬೊ ನಾಮವನು ನೆನೆದರೆ ಹಾರಿ ಹೋಹುದು ಜನ್ಮಜನ್ಮದ ಪಾಪಗಳು ಮುಕ್ತಿದೋರಿಸು ಮುರಾರಿ ಪ. ಸಕಲವೇದ ಪುರಾಣ ಶಾಸ್ತ್ರಗಳ ತಿಳಿದೋದಿ ಭಕ್ತಿಯಲಿ ತಾಯತಂದೆಯ ಚಿತ್ತವಿಡಿದವರ ಸುಕುಮಾರನೆನಿಸಿಕೊಂಡು ಪ್ರಕೃತಿಯಲಿ ಹೋಮಕ್ಕೋಸ್ಕರ ಸಮಿದೆ ತರಹೋಗಿ ದುಷ್ಕøತ್ಯದ ಫಲದಿಂದ ಅಂತ್ಯಜಳನು ಕಂಡು ಕಾ- ಅರಿತರಿಯದೆ 1 ನಿಲ್ಲು ನಿಲ್ಲೆಲೆ ಕಾಂತೆ ನಿನಗೊಲಿದೆ ನೀನಾರು ಸೊಲ್ಲಿಸೆನ್ನೊಡನೆ ಸತಿಯರ ಕುಲಕೆ ಕಟ್ಟಾಣಿ ಹುಲ್ಲೆನೋಟದ ಭಾವಕಿ ಸಲ್ಲಿಲಿತ ಗಾತ್ರೆ ಸೊಕ್ಕಾನೆ ಮೆಲ್ಲಡಿಯವಳೆ ಮಲ್ಲಿಗೆಗಂಧಿ ಮದನನ ಕೈಯ ಮಸೆದಲಗೆ ಸೆರಗ ಪಿಡಿದ 2 ವಿಪ್ರ ಕೇಳು ನಾವು ಕುಲಹೀನರೆಮ್ಮನೆಯ ಹೊಲಸಿನ ಮಾಂಸ ಗೋವಿನ ಚರ್ಮದ್ಹಾಸಿಕೆಯು ಹಿಂಡು ಬಲು ಘೋರ ಎನಿಸಿಪ್ಪುದು ಬಲೆಗೆ ಸಿಕ್ಕಿದ ಪಕ್ಷಿ ಬೇಂಟೆಯವಗಲ್ಲದೆ ಕುಲವ ಕೂಡುವದೆ ಕಾಮಿನಿ ಕೇಳು ನಿನ್ನೊಡನೆ ಛಲವೊಂದೆ ಎನಗೆ ಎಂದ3 ವ್ಯರ್ಥ ಎನ್ನೊಡನೆ ಮಾತ್ಯಾಕೆಲೊ ವಿಪ್ರ ಚಿತ್ತವೆನ್ನಲ್ಲಿ ಇದ್ದರೆ ಹೋಗಿ ನೀ ಎನ್ನ ನಿನಗೊಲಿವೆನೆಂ[ದಳು] ಅತ್ತ ಕಾಮಿನಿಯ ಒಡಗೂಡಿ ಆಕೆಯ ಪಿತನ ಹತ್ತಿರಕೆ ಹೋಗಿ ಕೇಳಿದರಾತನಿಂತೆಂದ ಇಂಥ ಮೊತ್ತಕೊಳಗಾಗದಿರೊ 4 ಆಗದಾಗದು ಎನ್ನ ಕುಲಬಂಧು ಬಳಗವÀನು ನೀಗಿ ನಿಮ್ಮೊಡನೆ ಕೂಡುವೆನೆಂಬ ಮತವೆನಗೆ ನಾಗಭೂಷಣನ ಪಣೆಗಣ್ಣಿಂದ [ಲುರಿದನ] ಬಾಣತಾಗಿತೆನ್ನೆದೆಯನೆಂದ ಕೂಗಿ ಹೇಳಿದೆ ನಿನ್ನ ಕುಲವಳಿಯದಿರೆಂದು ಹೋಗಿ ಕೂಡೊ ಹೆತ್ತ ತಾಯಿತಂದೆಗಳ ಅದು ಆಗದಿದ್ದರೆ ಆಚೆ ಮನೆಯೊಳಗೆ ನೀವಿಬ್ಬರಲ್ಲಿರಿ ಹೋಗ್ಯೆಂದನು 5 ಹಾಲಂತ ಕುಲವ ನೀರೊಳಗದ್ದಿಪೂರ್ವದ ಶೀಲವನಳಿದು ಸತಿಯೊಡಗೂಡಿ ತಾನು ಚಾಂ- ಡಾಲತಿಗೆ ಹತ್ತುಮಕ್ಕಳ ಪಡೆದು ತಾನವರ ಲೀಲೆಯನು ನೋಡಿ ಹಿಗ್ಗಿ ಆಲಂಬನದಲಿ ಅಜಾಮಿಳನು ಇರುತಿರಲಾಗ ಕಾಲ ಬಂದೊದಗಿ ಕರೆಯಿರೊ ಪಾತಕಿಯನೆಂದು ಯಮನಾಳುಗಳು ಇಳಿದರಾಗ 6 ಎಡೆಗೈಯ ಪಾಶಗಳು ಹಿಡಿದ ಚಮ್ಮಟಿಗಳು ಒಡನೊಡನೆ ಚವುರಿಗಳು ವಜ್ರದ ಮೋತಿಯ [ಕಾಗಡಿ] ಘುಡು‌ಘುಡಿಸುತಲಿ ನಿಂತರು ಕಡುಹಸುಳೆ ಕಂದನಿವನೆಷ್ಟು ಅಂಜುವನೆಂದು ಗಡಗಡನೆ ನಡುಗಿ ಕಂಗೆಟ್ಟು ಅಜಾಮಿಳ ತಾನು ಲಾಲಿಸಿದ ಸ್ವಾಮಿ 7 ಮರಣಕಾಲದಿ ಶ್ರೀಹರಿಯೆಂಬ ನಾಮವನು ಹರಿವುದಾಕ್ಷಣದಲ್ಲಿ ಕರುಣದಿಂದಜಮಿಳನ ಕರೆತನ್ನಿರಿಲ್ಲಿಗೆಂದ ಉರದೊಳೊಪ್ಪುವ ತುಳಸಿದಂಡೆ ಪೀತಾಂ- ಬರವು ಗದೆ ಶಂಖ ಚಕ್ರ ದ್ವಾದಶನಾಮವನು ಧರಿಸಿ ಕರವೆತ್ತಿ ಅಂಜ ಬ್ಯಾಡೆಲೊ ಎಂದು ಹರಿದಾಸರೈ ತಂದರು 8 ಪುಂಡರೀಕಾಕ್ಷನ ಭೃತ್ಯನ ಭಾಧಿಸುವ ಲಂಡರಿವರ್ಯಾರು ನೂಕಿ ನೂಕಿರೊ ಎಂದು ಯಮನ ದಂಡವನು ಮುರಿದು ಬಿಸಾಡಿ ನಿಮ್ಮಸುವ ಹಿಂಡುವೆವು ಎಂದರಾಗ ಕಂಡ ಹರಿದೂತರಿಗೆ ಯಮನಾಳುಗಳೆರಗಿ ಭೂ- ಮಂಡಲದೊಳಗೆ ಎಮ್ಮೊಡೆಯ ಯಮಧರ್ಮನ ಉದ್ದಂಡರಹುದೆಂದರಾಗ 9 ತಂದೆ ಕೇಳೆಮ್ಮ ಬಿನ್ನಪವ ಲಾಲಿಸಿ ನೀವು ಒಂದು ದಿನ ಹರಿಯೆಂಬ ಧ್ಯಾನವನರಿಯನು ನಾವು ಬಂದೆಳೆಯಲಾತ್ಮಜನ ನಾರಗಾ ಎನಲು ಕುಂದಿತೆ ಇವನ ಪಾಪ ಹಂದಿಕುರಿಗಳಿರ ನಿಮಗಿಷ್ಟು ಮಾತುಗಳ್ಯಾಕೆ ನಿಂದಿರದೆ ಹೋಗ್ಯೆಂದು ನೂಕಿ ಯಮನಾಳ್ಗಳನು ತಂದಪೆವು ದಿವ್ಯ ಪುಷ್ಪಕವನೆಂದೆನುತ ಬಂದರಾ ವೈಕುಂಠಕೆ 10 ಎದ್ದು ಅಜಾಮಿಳನು ಮೂರ್ಛೆಯ ತಿಳಿದು ಎಚ್ಚೆತ್ತು ಬಿದ್ದ ಕಾಯವನು ಭಾದಿಸಿದವರ್ಯಾರು ಉ- ಪದ್ರವನು ಬಿಡಿಸಿದ ದಿವ್ಯ ಸ್ವರೂಪ[ದ] ಸುಧಾತ್ಮರಾರು ಎಂದ ಮದ್ಯಪಾನವ ಮಾಳ್ಪ ಹೆಂಗಸಿನ ಒಡನಾಡಿ ಅದ್ದಿದೆ ನೂರೊಂದು ಕುಲವ ನರಕದೊಳೆಂದು ತಾನತಿ ಮರುಗುತ 11 ವಿಪ್ರ ಕುಲದಲ್ಲಿ ಪುಟ್ಟಿ ವೇದಶಾಸ್ತ್ರವನೋದಿ ಮುಪ್ಪಾದ ತಾಯಿ-ತಂದೆಯ ಬಿಟ್ಟು ಬುಧÀ ಜನರು ಮದನ ಬಾಧೆಗೆ ಸಿಲುಕಿ ದುಷ್ಟ ತಾಪವ ಪೊತ್ತೆ ಜನನಿಂದಕನಾದೆ ಅಪ್ರತಿಮ ಅನಂತಪಾತಕಿ ಭುವನದಲಿ ತಪ್ಪಲಿಲ್ಲವೆ ಪಣೆಯ ಬರದ ಬರಹಗಳು ಇನ್ನು ಭಾಪುರೆ ವಿಧಿ ಎಂದನು 12 ಇಷ್ಟು ದಿನ ಹರಿಯೆಂಬೊ ನಾಮವರಿಯೆನು ನಾನು ದುಷ್ಟಯವÀುದೂತರನು ಕಂಡು ಚಂಡಾಲತಿಗೆ ಪುಟ್ಟಿದ ಮಗನ ನಾರಗನೆಂದು ಕರೆದರೆ ಮುಟ್ಟಿದವೆ ನಿಮಗೆ ದೂರು ಇಷ್ಟು ಅವಗುಣಗಳನು ಎಣಿಸಲಿಲ್ಲವೆ ಸ್ವಾಮಿ ಎಷ್ಟು ಕರುಣಾಕರನೊ ಎಂದು ಸ್ನಾನವ ಮಾಡಿ ಬಿಟ್ಟು ತಾಪತ್ರಯವ ಭಯ ನಿವಾರಣ ಹರಿಯ ಗಟ್ಯಾಗಿ ಧ್ಯಾನಿಸಿದನು 13 ತನ್ನ ನಾಮವ ನೆನೆವ ಭಕ್ತರಾದವರೆಲ್ಲ ಧನ್ಯರಿವರಹುದೆಂದು ಜಗವರಿಯಬೇಕೆಂದು ಉನ್ನತವಾದ ಪುಷ್ಪಕವ ತಾ ಕಳುಹಿದ ಪನ್ನಗಾರಿವಾಹನ ಅನ್ಯಾಯ ಇವಗಿಲ್ಲ ಅವನಿಯೊಳಗುತ್ತಮನು ಎನ್ನಯ್ಯ ಏಳೆಂದು ಕೈಲಾಗವÀನು ಕೊಡಲು ಉನ್ನತವಾದ ಪುಷ್ಪಕವೇರಿ ಅಜಮಿಳನು ಹರಿಯ . ಸನ್ನಿಧಿಗೆ ನಡೆದ 14 ಜಲಜನಾಭನ ದಿವ್ಯನಾಮವನು ನೆನೆದರೆ ಕುಲಕೋಟಿ ದೋಷಗಳಿಲ್ಲ ಕುಂದುಗಿಂದುಗಳಿಲ್ಲ ಸಲುವರಲ್ಲೆಂದ ಯಮನು ನಲವಿಂದ ಹೆಳವನಕಟ್ಟೆ ಶ್ರೀ ವೆಂಕಟನ ನೆಲೆಯರಿತು ನೆನೆದವರ್ಗೆಮನ ಭಾದೆಗಳಿಲ್ಲ ಸಾಯುಜ್ಯ ಪದವೀವ ಬಲು ನಂಬಿ ಭಜಿಸಿ ಜನರು 15
--------------
ಹೆಳವನಕಟ್ಟೆ ಗಿರಿಯಮ್ಮ
ನಾರಾಯಣಾ ಹರಿನಾರಾಯಣಾ ಕೃಷ್ಣಾ ನಾರಾಯಣಾ ಸ್ವಾಮಿ ನಾರಾಯಣಾ 1 ಅಚ್ಯುತಾನಂತ ಗೋವಿಂದ ಪರಬ್ರಹ್ಮ ಸಚ್ಚಿದಾನಂದ ಶ್ರೀ ನಾರಾಯಣಾ 2 ಭಕ್ತವತ್ಸಲ ದೇವಾ ಪಂಡವಾಪಕ್ಷಕಾ ಮುಕ್ತಿ ದಾಯಕ ಶ್ರೀ ನಾರಾಯಣಾ 3 ನಂದನಂದನ ಆನಂದ ಶಂಕರ ಪ್ರೀಯಾ ವಂದಿತಾ ಮುನಿಜನರ ನಾರಾಯಣ 4 ಇಂದಿರಾರಮಣ ಮುಕುಂದ ಮುರಹರಿ ಮಂದರಧರ ಹರಿನಾರಾಯಣ 5 ದ್ರೌಪದಿ ರಕ್ಷಕಾ ದಾನವಾ ಶಿಕ್ಷಕಾ ಕವಿಜನ ಪೋಷಕ ನಾರಾಯಣಾ 6 ರಾವಣ ಮರ್ದನಾ ಆಜೀವಲೋಚನಾ ಯದುಕುಲಾಬ್ದಿ ಚಂದ್ರ ನಾರಾಯಣಾ 7 ಅಕ್ರೂರವರದಾ ನಿಜಾನಂದ ಮೂರುತಿ ಚಕ್ರಧರ ಹರಿ ನಾರಾಯಣಾ 8 ಭವ ನಾಯಕ ವಿಷ್ಣು ನಾರಾಯಣಾ 9 ಗಂಗಜನಕ ದೇವೋತ್ತುಂಗ ಮಹಾನುಭಾವ ಶೃಂಗಾರ ಮೂರುತಿ ನಾರಾಯಣಾ 10 ಅಂಬುಜಾದಳ ನೇತ್ರಾ ಅಜಮಿಳಾರಕ್ಷಕ ಪತಿ ನಾರಾಯಣ 11 ಪಕ್ಷಿವಾಹನ ಜಗದೃಕ್ಷಾ ಸುಲಕ್ಷಣಾ ಲಕ್ಷ್ಮೀರಮಣ ಶ್ರೀ ನಾರಾಯಣಾ 12 ಕಮಲಸಂಭವಪಿತಾ ಕರುಣಪಯೋನಿಧಿ ಅಮಿತ ಪರಾಕ್ರಮ ನಾರಾಯಣಾ 13 ಮೂರ್ತಿ ಪೂಜಿತ ಸರ್ವತ್ರಾ ಪೂತನ ಸಂಹಾರ ನಾರಾಯಣಾ 14 ದಿನಕರಾ ಕುಲದೀಪಾ ದೀನ ದಯಾಪರ ಅನಿಮಿತ್ತ ಬಂಧು ದೇವಾ ನಾರಾಯಣಾ 15 ಕಾಲಿಯಾ ಮರ್ದನಾ ಗಂಗಾಧರಾರ್ಚಿತ ಕಲ್ಮಷರಹಿತ ಶ್ರೀನಾರಾಯಣಾ 16 ಪಾಲಿತಾ ಸುರಮುನಿ ಪಾಪವಿನಾಶನಾ ವಾಲಿ ಸಂಹಾರಕಾ ನಾರಾಯಣ 17 ದಶರಥನಂದನ ಧರಣಿರಕ್ಷಕಾ ಲವ ಕುಶಪಿತಾ ಶ್ರೀಹರಿನಾರಾಯಣಾ 18 ವೇದಗೋಚರ ನಿಗಮಾಗಮ ವೇದ್ಯ ಸು- ನಾದ ವಿನೋದ ಶ್ರೀನಾರಾಯಣ 19 ಕೋಟಿದರ್ಪಕ ರೂಪಲಾವಣ್ಯ ಭಕ್ತ ಸಂಕಟ ಪರಿಹಾರ ನಾರಾಯಣಾ 20 ವಾರಿಧಿ ಬಂಧನಾ ವನಚರ ಪಾಲನಾ ವೈಕುಂಠ ಶ್ರೀನಾರಾಯಣಾ 21 ಗಜರಾಜ ವರದಾ ಕಾಮಿತಫಲದಾಯಕಾ ಅಜಭವ ಪೂಜಿತಾ ನಾರಾಯಣಾ 22 ಸಾಧುಜನ ಪ್ರಿಯಾ ಸಾಮಗಾನವೇಣು ನಾದ ಲೋಲ ಕೃಷ್ಣ ನಾರಾಯಣಾ 23 ಯಾದವ ಕುಲದೀಪಾ ಯಶೋದಾನಂದನಾ ಯಜ್ಞರಕ್ಷಕಾ ಹರಿನಾರಾಯಣಾ 24 ಕೇಶವಾ ಮಾಧವಾ ಕೃಷ್ಣ ದಾಮೋದರಾ ವಾಸುದೇವ ಹರಿನಾರಾಯಣ 25 ಸುಂದರ ವಿಗ್ರಹಾಸುಗುಣ ವಿಲಾಸ ಆನಂದ ನಿಲಯಾ ಹರಿನಾರಾಯಣಾ 26 ವ್ಯಾಸಾಂಬರೀಷ ವಾಲ್ಮೀಕ ನಾರದಾ ಪಾರಾಶರ ವಂದಿತ ನಾರಾಯಣ 27 ದೋಷದೂರಾ ನಿರ್ದೋಷಾ ಪರಮಪುರಷ ಪೋಷಿತ ಜಗತ್ರಯ ನಾರಾಯಣಾ 28 ಮಕರಕುಂಡಲಧರಾ ಮಹಿಮಾ ಚರಾಚರಾ ಸಕಲಂತರ್ಯಾಮಿ ನಾರಾಯಣ 29 ಲೋಕನಾಯಕಾ ವಿಲಾಸ ಮೂರುತಿ ತ್ರೀಲೋಕ ವಂದ್ಯ ಹರಿನಾರಾಯಣಾ 30 ವಿಶ್ವವ್ಯಾಪಕಾ ಘನ ವಿಶ್ವರೂಪಾ ಮಹಾ ವಿಶ್ವೇಶ್ವರಾ ಹರಿನಾರಾಯಣಾ 31 ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ದೇವ ಸಕಲ ಕರ್ತ ನೀನೆ ನಾರಾಯಣಾ 32 ಆಪನ್ನ `ಹೆನ್ನೆ ವಿಠ್ಠಲ ' ನಾರಾಯಣಾ 33
--------------
ಹೆನ್ನೆರಂಗದಾಸರು
ನಾರಿ ಗೌರಿ ಕೌಮಾರಿ ವಾರಿಜಾಕ್ಷನ ಚರಣ ವಾರಿಯನು ಧರಿಸುವ ನಾರಿ ಗೌರಿ ಕೌಮಾರಿಪ ಬಾಣ ಕುಂಭನೆಂಬೊ ದಾನವರೀರ್ವರು ಕ್ಷೋಣಿಯೊಳು ಬಂದಲ್ಲಿ ತಪವ ಮಾಡಿ ಕಮಲ ಗರ್ಭನವೊಲಿಸಿ ವೇಗದಲಿ ಏನು ವರ ಬೇಡೆನಲು ನಗುತಲವನು ಸುರಿದನು 1 ಸಂಬಂಧಿಗಳೆಮ್ಮ ಕೊಲ್ಲಲ್ಲಿ ಉಳಿದವರ ಬಗಿಯದಂತೆ ವರವನು ಪಾಲಿಸೆನಲು ನಗುತ ಲೋಕೇಶ ದುರುಳರಿಗೆ ಸಲೆ ಇತ್ತಾ 2 ಚತುರ್ದಶ ಲೋಕವನು ಗೆದ್ದು ತ್ರಿದಶರಾ ಮಿತಿಯಿಲ್ಲದೆ ಮಾನಭಂಗ ಮಾಡಿ ಪತಿತರು ಈ ತೆರದಲಿರುತಿರಲು ವಿಬುಧರು ಚತುರ ಮುಖಗೆ ಮೊರೆಯಿಡಲು ಹರಿಗೆ ಬಿನ್ನೈಸಿ3 ತಿಳಿದು ಕುಂಡಲನೊಲಿದು ದ್ವಾಪಾರಾಂತ್ಯದಲಿ ಖಳ ಕಂಸನೆಂಬುವನು ಪುಟ್ಟಿ ತನ್ನ ಬಲದಲಿ ತನ್ನ ಅನುಜೆಯರ ಶರೆಯುಯಿಟ್ಟು ಬಳಲಿಸುವವಳಿಗೊಲಿದು ಅವತಾರ ಮಾಳ್ಪ ಯುದಕುಲದಲಿ 4 ಎನ್ನ ಕೂಡಲೀ ದುರ್ಗಿ ಜನಿಸಿ ಬರಲು ಅವ ಳನ್ನ ಕೊಲ್ಲುವೆನೆಂದು ಕಂಸ ಮುನಿಯೆ ತನ್ನ ಶಕ್ತಿಯಿಂದಾ ಗಗನಕ್ಕೆ ಪಾರಿ ಬರಲು ಘನ್ನ ಘಾತುಕರನ್ನ ಮಡುಹಿ ಬಿಡುವಳೆನಲು 5 ಇಂತು ಪೇಳಲಿ ಅಜನು ಸಂತೋಷದಿರಲಿತ್ತ ದಂತಿ ಗಮನಳು ಉದುಭವಿಸಿ ಬಂದು ಪಿಂತೆ ಮಾಡಿದ ತಪಸು ಸಿದ್ಧಿಸಿತು ಎನಗೆನುತ ಅಂತಕರಾಗಿದ್ದ ಖೂಳರ ಸದೆ ಬಡಿದು 6 ಹರಿಕೃಪೆಯಿಂದ ದಕ್ಷಿಣ ಶರಧಿಯಲಿ ನಿಲ್ಲಲು ಪರಮ ಮುನಿ ಅಗಸ್ತ್ಯ ಪೂಜಿಸಿದನು ಶರರಾಜ ಬಂದು ಮದುವೆನೈದಲು ಪರಮೇಷ್ಠಿ ಹರನ ಸಹಿತಲಿ ನಡೆತಂದಾ 7 ಬರಲಾಕ್ಷಣದಲ್ಲಿ ಕಲಿಯುಗ ಪ್ರಾಪುತವಾಗೆ ಮರಳೆನಿಂದರು ವರ ಸುಧೇಂದ್ರವೆಂಬೊ ಪುರದಲ್ಲಿ ಪೂಜೆಗೊಳ್ಳುತಲ್ಲಿರಲು ಇತ್ತ ಸುಂ ದರ ಕನ್ಯಾಮಣಿಯಾಗಿ ದಶದಿಶಿಗೆ ಪೊಳೆಯುತಿರೆ8 ಅಂದಾರಭ್ಯನಾಗಿ ಕನ್ಯಾಕುಮಾರಿ ಎನಿಸಿ ಬಂದು ನವತೀರ್ಥದಲಿ ಯಾತ್ರೆ ಜನರು ಮಿಂದಾಗಲೆ ಮನದಂತೆ ಭಕುತಿಯನಿತ್ತು ಪೊಂದಿಸುವೆ ವಿಜಯವಿಠ್ಠಲನ ಪಾದದಲ್ಲಿ9
--------------
ವಿಜಯದಾಸ
ನಿಂತ ಭಾವದ ಬಗೆಯನೆಂತು ಬಣ್ಣಿಪೆನುಚಿಂತಾಯಕನೆ ನೀನು ಚಿತ್ಸ್ವರೂಪದಲಿ ಪಸಕಲ ಲೋಕವ ಸೃಜಿಸಿ ಸಕಲದೊಳು ನೀ ನೆಲಸಿಸಕಲವನು ನಿನ್ನೊಳಗೆ ಸಲೆ ಸೇರಿಸಿಪ್ರಕಟಿಸಿದ ಜಗವೆಲ್ಲ ಪರಿಪರಿಯ ಕಲ್ಪದಲಿಪ್ರಕೃತಿಯಲಿ ಲಯವಾಗೆ ಪರಮ ಸದ್ರೂಪದಲಿ 1ಚಿತ್ರಕರ್ಮಗಳಿಂದ ಚರಿಸಿ ನಾನಾತ್ವದಲಿಚಿತ್ರದಂದದಿ ತೋರಿ ಚೈತನ್ಯವಾಗಿಕರ್ತೃಭೋಕ್ತøತ್ವದಲಿ ಕರಣಾದಿ ರೂಪದಲಿಚಿತ್ರರಚನೆಗೆ ಸಾಕ್ಷಿ ಚಿತ್ಸ್ವರೂಪದಲಿ 2ಹರಿ ಹರ ಬ್ರಹ್ಮ ಯಮ ಹರಿ ವರುಣ ಧನದಾದಿಸುರಮುನಿಗಳೊಳಗಿರುವ ಸುಖವೆಲ್ಲ ನಿನ್ನನಿರತಿಶಯ ಸುಖದಲ್ಲಿ ಲೇಶನೀನಿತ್ತವರವರದರವರೆಂದೆನಿಸಿ ಮೆರೆದು ಸುಖರೂಪದಲಿ 3ಈ ವಿಧದ ದೇವತೆಗಳಿರವ ನೋಡಿದರವರುದೇವ ನೀನೊಲಿದು ದಯಮಾಡಿದವರುಭಾವಿಸುತ ನಿನ್ನಂಘ್ರಿಕಮಲವನು ಭಕ್ತಿಯಲಿಭಾವ ನಿನ್ನೊಳು ನಿಲಲು ಭುವನೇಶ ನಿತ್ಯದಲಿ 4ಪರಿಪೂರ್ಣ ಪರಮೇಶ ಪರಮ ಮಂಗಳರೂಪಪರನೆನಿಸಿ ದೇಶಕಾಲಾದಿಗಳಿಗೆಗುರುಮೂರ್ತಿ ಶ್ರೀ ವಾಸುದೇವಾರ್ಯರೆಂದೆನೆಸಿತಿರುಪತಿಯ ವೆಂಕಟನೆ ಹೃದಯಕಮಲದಲಿ 5ಓಂ ಸರ್ವತೀರ್ಥಾತ್ಮಕಾಯ ನಮಃ
--------------
ತಿಮ್ಮಪ್ಪದಾಸರು