ಒಟ್ಟು 5630 ಕಡೆಗಳಲ್ಲಿ , 130 ದಾಸರು , 3590 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಛೀ ಹಳಿ ಥೂ ಖೋಡಿ ಪಾಪಿ ಮನವೆ, ನಿನ್ನ ಪ ಕುಹಕ ಬುದ್ಧಿಗಳೆಲ್ಲ ಬಿಡು ಕಂಡ್ಯ ಮನವೆಅ.ಪ ಬಣ್ಣದ ಬೀಸಣೆಗ್ಯಂತೆ ಹೆಣ್ಣು ತಿರುಗೋದ ಕಂಡು ಕಣ್ಣು ಸನ್ನೆಯಮಾಡಿ ಕೈ ಹೊನ್ನು ತೋರಿ ತಣ್ಣೀರು ಹೊಯಿದ ಹೊಸ ಸುಣ್ಣದಂತೆ ಕುದಿದು ನಿನ್ನ ಕಣ್ಣಿಗೆ ಮಣ್ಣು ಚೆಲ್ಲಿಕೊಂಬರೆ ಮನವೆ 1 ನೆರೆಹೊರೆ ಮನೆಗಳಲಿ ಪ್ರಸ್ಥವನ್ನು ಮಾಡಿದರೆ ಕರೆಯದೆಲೆ ಮೊದಲ್ಹೋಗಿ ಹಾಳು ಹರಟೆ ಬಡಿಗಂಟು ಸುದ್ದಿ ನೂರಾರು ಹೇಳಿ ಅವರ ಹಿರಿಯ ಮಗನಂತೆ ಉದರವ ಪೊರೆವೆ ಮನವೆ 2 ಉತ್ತಮಾನ್ನವ ನೀಡೆ ಮುಸುರೆ ಬಯಸುವಂತೆ ಚಿತ್ತದೊಲ್ಲಭನ ಸಂಗಡದಿ ನಲಿದು ಮತ್ತೆ ಉಪರತಿಗೆ ಪರಪುರುಷನ ಬಯಸುವ ತೊತ್ತು ಬುದ್ಧಿಯನೆಲ್ಲ ಬಿಡು ಕಂಡ್ಯ ಮನವೆ 3 ಪಗಡೆ ಚದುರಂಗ ಕವಡೆಯನಾಡÀ ಕರೆದರೆ ನಿಗುರುವುವು ಕರ್ಣಗಳು ಮೊಚ್ಚೆಯಂತೆ ಜಗದೀಶನ ದಿನದಿ ಜಾಗರಕೆ ಕರೆದರೆ ಮುಗಿಲ್ಹರಿದು ಬಿದ್ದಂತೆ ಧರೆಗಿಳಿವೆ ಮನವೆ 4 ವಾಸುದೇವನ ಪೂಜೆಯೊಮ್ಮೆ ಮಾಡೆಂದರೆ ಬೇಸತ್ತು ತಲೆಯ ಚಿಟ್ಟಿಕ್ಕಿ ಕುಳಿತೆ ಆ ಸಮಯದೊಳಗೊಬ್ಬ ಕಾಸು ಕೊಟ್ಟೇನೆನಲು ದಾಸಿ ಮಗನಂತೆ ಬೆನ್ನಟ್ಟಿ ಪೋದೆ ಮನವೆ 5 ಕುಳ್ಳಿರುವ ಸ್ಥಳವೆಷ್ಟು ಕೂಳು ತಿಂಬುವುದೆಷ್ಟು ಉಳ್ಳನಕ ಕೀರ್ತಿಯಪಕೀರ್ತಿಯೆಷ್ಟು ಗುಳ್ಳೆಯಂದದ ದೇಹನೆಚ್ಚಿ ನೀ ಕೆಡಬೇಡ ಉಳ್ಳಿಪÀರೆ ಸುಲಿದರೆ ಹುರುಳಿಲ್ಲ ಮನವೆ 6 ಬಿಂದು ಮಾತ್ರವೊ ಸುಖವು ದು:ಖ ಪರ್ವತದಷ್ಟು ಸಂದೇಹವಿಲ್ಲವಿದು ಶಾಸ್ತ್ರಸಿದ್ಧ ಎಂದೆಂದು ಸಿರಿಯರಸ ವಿಜಯವಿಠ್ಠಲನಂಘ್ರಿ ಕುಂದದೆ ಹೃದಯದೊಳು ನೆನೆಕಂಡ್ಯ ಮನವೆ 7
--------------
ವಿಜಯದಾಸ
ಜಗಕೆ ಶಾಂತಿಯನೀವ ಜಗನ್ನಾಥನೇ | ನಿನ್ನ ಬಗೆಯರಿತ ಸುಜನರಿಗೆ ಕ್ಲೇಶವಿನ್ನುಂಟೇ ಪ. ನಾನಾ ಇಂದ್ರಿಯಗಳಿಗೆÀ ನೀನೇ ಪ್ರೇರಕನಾಗಿ ನಾನಾ ವಿಧ ಸುಖದುಃಖ ತಗಲಿಸುತ ಮನಕೇ ಜ್ಞಾನವಂತರ ಹೃದಯ ವಾಸನಾಗಿರುತಿರ್ದು ಮಾನಿತರ ಬಳಲಿಸುವ ಕಾರಣವದೇನೈ 1 ಭೂಸುರÀರ ಮನಕ್ಲೇಶ ನಾಶಗೈಸುತ ಸತತ ಪೋಷಿಸೆಲೊ ಸ್ವಾಮಿ ಸಂತೋಷವಿತ್ತು ನಾಶರಹಿತನೆ ಭಕ್ತರಾಶೆ ಪೂರೈಪ ಗುಣ ರಾಶಿ ನಿನ್ಹೊರತಿಲ್ಲ ಅಬುಜಜಾಂಡದೊಳೂ2 ಮನಕೆ ಶಾಂತಿಯ ನೀಡೋ ಮಾಧವನೆ ಮಮತೆಯಲಿ ಮನದ ಅಭಿಮಾನಿಗಂತರ್ಯಾಮಿ ಸ್ವಾಮಿ ಚಿನುಮಯನೆ ಗೋಪಾಲಕೃಷ್ಣವಿಠ್ಠಲ ಪ್ರೇಮಿ ಘನ ಗುರುಗಳಂತರ್ಯಾಮಿಯೆ ಮಧ್ವನಾಥಾ3
--------------
ಅಂಬಾಬಾಯಿ
ಜಗಜಗಿಸುವ ಈ ಸೊಗಸಿನ ಪೀಠಕೆ ನಗುನಗುತ ಬಾರೊ ದೇವ ಪ ಗಗನರಾಯನಿಗೆ ಮಗಳೆಂದೆನಿಸಿದ ಜಗಕೆ ಜನನಿ ಕೈಮುಗಿದು ಪ್ರಾರ್ಥಿಸುವಳು ಅ.ಪ ಅಂಗನೆಯರು ಶ್ರವಣಂಗಳ ತುಂಬುವ ಸಂಗೀತದ ಸಾರಂಗಳರ್ಪಿಸುವರೊ 1 ನಾದಸ್ವರದ ಸೊಗಸಾದ ಧ್ವನಿಗಳಲಿ ನಾದ ಬ್ರಹ್ಮನು ತಾ ಕಾದು ನೋಡುತಲಿಹ 2 ಪರಿಮಳ ಪುಷ್ಪದ ಸುರಿಮಳೆ ನೋಟವು ಸ್ಮರಣೆಗೆ ತರುವುದು ಸಿರಿಯ ವಿವಾಹವ 3 ಭೂಸುರರೆಲ್ಲರು ಆಶೀರ್ವಚನವ ಶ್ರೀಶ ನಿನ್ನಯ ಸಂತೋಷಕೆ ನುಡಿವರು 4 ಸುಖ ಸಂತೋಷವು ಮುಖ ಮುಖದಲಿಹುದು ತವ ಸುಖಾಗಮನದಿಂ ಲಕುಮೀ ಪ್ರಸನ್ನನೇ 5
--------------
ವಿದ್ಯಾಪ್ರಸನ್ನತೀರ್ಥರು
ಜಗಜೀವನಾ ಪ ಶಾಮಸುಂದರ ಮುನಿಜನ ಮಾನಸ ಪಂಕಜ ಲೋಚನಾ ದಾಮೋದರ ಗೋಪೀಜನ ಮೋಹನಾ ಅಹಿಲ್ಯಾ ಶಾಪ ವಿಮೋಚನಾ 1 ಮಾಧವ ಹರಿ ಶ್ರೀ ವತ್ಸಾಂಕ ಜನಾರ್ಧನಾ ಯಶೋದಾ ನಂದನ ಯದುಕುಲ ಮಂಡಲಾ ಕಂಸ ಚಾಣೂರ ಮರ್ದನಾ2 ಸರಸಿಜ ಭವಭೆವ ಸುರಪತಿ ಪೂಜಿತ ಗುರುವರ ಮಹಿಪತಿ ನಂದನ ಸಾರಥಿ ಭವ ಭಂಜನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಗತ್ಪಾಲಾ ಸದ್ಗುಣಶೀಲಾ ರಮಾಲೋಲಾ ಪ ನಿತ್ಯ ವಿಮಲಾ ಬಹುಗುಣ ಶೀಲಾ ಪಾಹಿ ಕೃಪಾಲಾ1 ನಿತ್ಯಾನಂದಾ ದೇವಕಿಕಂದಾ ಕಂಸನ ಕೊಂದಾ ಬಾಲ ಗೋವಿಂದ ನೀ ದಯದಿಂದಾ ಪಾಹಿ ಮುಕುಂದಾ 2 ಅಮರಾಧೀಶಾ ಅಸುರನಾಶಾ ಪರಮ ಪ್ರಕಾಶಾ ಗೋಕುಲವಾಸಾ ಭಕ್ತಪೋಷಾ ಶ್ರೀಹನುಮೇಶವಿಠಲ 3
--------------
ಹನುಮೇಶವಿಠಲ
ಜಗದಯ್ಯ ನಿನ್ನಪಾದ ಜಗದಖಿಲ ಜನರು ಬಗೆ ತಿಳಿಯಲಾರರು ಸುಗುಣಿರೊಂದಲ್ಲದೆ ಪ ಜಾರೆ ಸೇರುವಳೆ ಸುವಿಚ್ಯಾರದ ಮಾತುಗಳ ಜಾರ ಸೇರುವನೆ ಜ್ಞಾನಸಾರ ಬೋಧಾಮೃತವ ಚೋರ ಸೇರುವನೆ ಇನತೋರಿಸಲು ಕಿರಣಗಳ ಕ್ಷೀರಮಂ ಸೇರುವನೆ ಸುರಪಾನಿಗೀಯಲು 1 ವಿಧವೆಗೆ ಸೇರುವುದೆ ಒದಗುವವರ ಬಸಿರು ಮುದುಕನಿಗೆ ಸೇರುವುದೆ ಹದದ್ಹೆಣ್ಣಿನೊನಪು ಅಧಮರಿಗೆ ಸೇರುವುದೆ ಸದಮಲಿನ ಕಥಾಶ್ರವಣ ಬುಧಜನಕೆ ಸೇರುವುದೆ ಕದನಿಕರ ನೆರೆಯು 2 ಜೀನನಿಗೆ ಸೇರುವುದೆ ದಾನಿಗಳ ಗಾಂಭೀರ್ಯ ಹೀನನಿಗೆ ಸೇರುವುದೆ ಜಾಣರೊಡನುಡಿಯು ಸುಕೃತ ಕಾಣದ ಪಾಪಿಗೆ ಮಮ ಪ್ರಾಣ ಶ್ರೀರಾಮ ನಿನ್ನ ಧ್ಯಾನ ಸೇರುವುದೆ 3
--------------
ರಾಮದಾಸರು
ಜಗದಾದಿವಂದ್ಯನಿಗೆ ಶರಣುಪ ಪನ್ನಗಾನಗದೊಡೆಯ ಶರಣು 1 ತವಪದನಖಾಗ್ರಕೆ ಶರಣು2 ಮೂಡಲಾಗಿರಿಗೆ ಶರಣು ಗಿರಿಯ ಅಡಿದಾವರೆಗಳಿಗೆ ಶರಣು3 ನಡೆರ್ವಡಿಗಳಿಗೆ ಶರಣು4 ಮೆಟ್ಟು ಮೆಟ್ಟಲಿಗೆ ಶರಣು ಮನಮುಟ್ಟ ಮೆಟ್ಟಲೇರುತಿಹ ನಿನ್ನಿಷ್ಟ ಭಕ್ತರಿಗೆ ಶರಣು 5 ತನುಕಷ್ಟ ಹರಿಸಿ ಮನತುಷ್ಟಿಯನು ತೋರ್ವ ಬೆಟ್ಟದಂದಕ್ಕೆಲ್ಲ ಶರಣು 6 ಪರಿವಾರಕ್ಕೆಲ್ಲ ಶರಣು7 ಸ್ವರಶಬ್ದವಾಚ್ಯತವ ಶರಣು 8 ಚೆಲ್ವ ಗಾಳಿಗೋಪುರ ದ್ವಾರಕ್ಕೆ ಶರಣು 9 ಲೀಲೆಯಿಂದಲಿ ನಿನ್ನನೋಲೈಪ ಭಕ್ತರ ಪಾದಪಲ್ಲವಂಗಳಿಗೆ ಶರಣು 10 ಗೋವಿಂದ ಸಚ್ಚಿದಾನಂದ ಮುಕುಂದನೆಂದು- ಚ್ಚರಿಪ ಭಕ್ತರಿಗೆ ಶರಣು11 ಹರಿ ಹರೀ ಹರಿ ಎಂದು ಹರಿದಾರಿ ಪಿಡಿದ ವರ ಅಡಿದಾವರೆಗಳಿಗೆ ಶರಣು 12 ಪರಿಪರಿ ಭಾಧೆಯಿಂ ತರಳನ್ನ ಕಾಯ್ದ ಶ್ರೀ ನರಹರಿಯ ಚರಣಾರವಿಂದಕ್ಕೆ ಶರಣು 13 ತಿರುದಾರಿ ಮೊಣಕಾಲ ಮುರಿಗೆ ಶರಣು 14 ಭಕ್ತರಾಪತ್ತಳಿವ ಶಕ್ತಿಸಂಪತ್ತೀವ ಉತ್ತಮೋತ್ತಮ ಭಕ್ತರಾ ಮಂಟಪಕ್ಕೆ ಶರಣು 15 ಭಕ್ತಿಯಿಂದಲಿ ಸಪ್ತಗಿರಿಯ ದಾಟಿದ ಹರಿ- ಭಕ್ತಜನಸಂದೋಹಗಳಿಗೆ ಶರಣು 16 ಭಕ್ತರುಧ್ಧರಿಸಲು ನಿಂದ ಸಮೀರನಿಗೆ ಶರಣು17 ಜೀವರಿವರೆನ್ನುವರು ದರುಶನವನೀಯೆಂದು ಕ- ರವ ಮುಗಿದು ಹರಿಯ ಸ್ತುತಿಸುವಗೆ ಶರಣು 18 ಪಾವನಾ ಮೂರ್ತಿಯನು ಮಾನಸದಿ ಧೇನಿಸಲು ಭಾವಶುಧ್ದಿಯನೀವ ಜೀವೇಶನಿಗೆ ಶರಣು 19 ಸಚ್ಚಿದಾನಂದಾತ್ಮ ಶ್ರೀ ಮುಕುಂದನ ದಿವ್ಯ ಅರಮನೆಯ ಮಹಾದ್ವಾರಕ್ಕೆ ಶರಣು 20 ಸಿರಿ ಅವ್ಯಾಕೃತಾಕಾಶಾವರಣಕ್ಕೆ ಶರಣು 21 ತೀರ್ಥಮಹಿಮೋಪೇತ ಸ್ವಾಮಿಪುಷ್ಕರಣೀ- ತಟವಿರಾಜಿತ ಅಶ್ವತ್ಥವೃಕ್ಷರಾಜನಿಗೆ ಶರಣು22 ಭೂದೇವಿಯಾರಮಣ ಆದಿಭೂವರಹ ಮೂರ್ತಿಯ ಶ್ರೀಪಾದಯುಗ್ಮಕ್ಕೆ ಶರಣು 23 ಬ್ರಹ್ಮಾಂಡದೊಡೆಯನ ದಿವ್ಯ ನಿಲಯದೊಳಿರುವ ಬಹಿರಾವರಣಕ್ಕೆ ಶರಣು 24 ಸರ್ವಗುಣಸಂಪೂರ್ಣ ವೈಕುಂಠಮಂದಿರನ ಸ್ವರ್ಣಮಯ ಸುಪರ್ಣಸ್ಥಂಭಕ್ಕೆ ಶರಣು 25 ಗಮನ ನಿರ್ಗಮನವುಳ್ಳ ಸುಮನಸರ ಭಕ್ತಜನಸಂಘಕ್ಕೆ ಶರಣು26 ಅಂತರಾವರಣಕ್ಕೆ ಶರಣು 27 ಕಾಂಚನರೂಪ ಸುವರ್ಣಮುಖರೀನದಿ ವಿ- ರಾಜಿತ ತೊಟ್ಟಿತೀರ್ಥ ಸಮಸ್ತ ತೀರ್ಥಗಳಿಗೆ ಶರಣು 28 ಸುಮನಸರು ಹೃನ್ಮನದಿ ಧೇನಿಸುವ ಕಾಂಚನ ವಿಮಾನದಲಿ ಬೆಳಗುತಿಹ ಶ್ರೀ ಶ್ರೀನಿವಾಸನಿಗೆ ಶರಣು 29 ಭೂಗಿರಿಯ ಸೇರಿದ ಶ್ರೀಹರಿಗೆ ಶರಣು 30 ವಾರಿಯೊಳಗ್ಯೋಲಾಡಿ ಶ್ರೀಶೈಲದೊಳು ನಿಂ- ತ ಶ್ರೀಲೋ¯ನಾಗಿರ್ಪಗೆ ಶರಣು31 ಶೇಷ್ಠನೆನಿಸಿದ ದಿಟ್ಟ ಮೂರುತಿಗೆ ಶರಣು 32 ಧರೆಯ ಕೆದರೀ ಬಂದು ಗಿರಿಯ ವರಹನ ಬೇಡಿ ಮರುಳುಮಾಡಿದ ಮಾಯಾರಮಣನಿಗೆ ಶರಣು 33 ತರಳರೂಪವ ಕೆಡಿಸಿ ಗಿರಿಯ ಹುದರಯೊಳಡಗಿ ಸುರಜೇಷ್ಠನೆಂದೀಗ ಪೂಜೆ ಗೊಂಬುವಗೆ ಶರಣು 34 ವಟಪತ್ರಶಾಯಿ ನೀ ವಟುವಾಗಿ ಬೇಡಿ ಭ- ವಾಟವಿಯ ದಾಟಿಸಲು ನಿಂದವಗೆ ಶರಣು 35 ಪೆತ್ತಮಾತೆಯ ಹರಿಸಿ ಮೆತ್ತನಿಲ್ಲಿಗೆ ಬಂದು ಉತ್ತಮಾಗತಿಪ್ರದ ಸರ್ವೋತ್ತಮಗೆ ಶರಣು 36 ಕ್ಷಿತಿಸುತೆಯ ಮಾತನು ಹಿತದಿ ಪಾಲಿಸೆ ವೇದ- ವತಿಯ ಪತಿಯಾಗಿ ನಿಂದವಗೆ ಶರಣು 37 ಗುಟ್ಟಾಗಿ ಪಾಲ್ಕುಡಿದು ಪೆಟ್ಟಿನಾ ನೆಪದಲ್ಲಿ ದೃಷ್ಟಿಗೋಚರನಾದ ಬೆಟ್ಟದೊಡೆಯನಿಗೆ ಶರಣು38 ಉತ್ತಮಾಸ್ತ್ರೀಯರಿಗೆ ನಾಚಿ ಬತ್ತಲೆಯಾಗಿ ಹುತ್ತದೊಳು ಅಡಗಿಯೆ ಮೆರೆದವಗೆ ಶರಣು 39 ಸಿರಿಯ ಹಯವನು ಮಾಡಿ ಚರಿಸಿ ಹರಿಸಿಕೊಂಡವನಿಗೆ ಶರಣು 40 ಹಿರಣ್ಯಗರ್ಭನ ಜನಕ ಸನ್ಮಹಿಯ ಸನ್ನಿಧಿಯ ಕನಕಮಯಕವಾಟಕ್ಕೆ ಶರಣು 41 ತಟಿಕ್ಕೋಟಿನಿಭ ಪೂರ್ಣ ಸಂಪೂರ್ಣ ಲಕ್ಷಣ ಸನ್ಮಾಂಗಳಾ ಸುಂದರ ಮೂರ್ತೇ ತವ ಶರಣು42 ಮುಕ್ತಾಮುಕ್ತಗಣ ವಂದಿತಾ ತವ ಶರಣು43 ನಂದಸುನಂದನ ಜಯವಿಜಯಾದಿ ಪಾ- ಸಂಸೇವ್ಯಮಾನ ತವ ಶರಣು44 ಸರ್ವಾಂಗುಳ್ಳಂಗುಷ್ಠದಳ ವಿಲಸಿತ ಸತ್ ಪಾದ- ಪಂಕಜ ಧ್ವಜ ವಜ್ರಾಂಕುಶಾದಿ ಸುಚಿಹ್ನ ಚಿಹ್ನಿತ ತವ ಶರಣು 45 ಗುಲ್ಫಾರುಣನಖ ಧೃತಾ ದೀಧಿತಿಯುಕ್ತ ತವ ಶರಣು 46 ಬೃಹತ್ ಕಟಿತಟಶ್ರೋಣಿ ಕರಭೋರು ದ್ವಯಾನಿಶ್ರ ತವ ಶರಣು 47 ವೈಜಯಂತಿ ವನಮಾಲ ತವ ಶರಣು 48 ಪ್ರಲಯ ಪೀವರಭುಜ ತುಂಗಂಶೋರಸ್ಥ ಲಾಶ್ರಯ ತವ ಶರಣು 49 ನ್ವಿತ ತವ ಶರಣು50 ಚಾರುಪ್ರಸನ್ನವದನ ಮಂದಹಾಸ ನಿರೀಕ್ಷಣ ಸು- ಭದ್ರನಾಸ ಚಾರುಸುಕರ್ಣ ಸುಕಪೋಲಅರುಣ ತವ ಶರಣು 51 ಸಹಸ್ರ ಫÀಣಶಿರೋಮಣಿಪ್ರಭಾನ್ವಿತ ಶೇಷಶೈಲಸ್ಥ ಶಾಂತ ಪದ್ಮಪತ್ರಾಯತೇಕ್ಷಣ ತವ ಶರಣು 52 ಅನಂತವೇದೋಕ್ತ ಮಹಿಮೋಪೇತ ಸರ್ವಸ್ವರವರ್ಣ ಸರ್ವಶಬ್ದವಾಚ್ಯ ಪ್ರತಿಪಾದ್ಯ ಶರಣು 53 ಸಚ್ಚಿದಾನಂದಾತ್ಮ ಸರ್ವಸುಗುಣೋಪೇತ ಸರ್ವ ಹೃತ್ಕಮಲಸ್ಥಿತ ತವ ಶರಣು 54 ಅಣುತ್ರ್ಯಣು ತೃಟಿಲವ ಕ್ಷಣಾದಿಕಾಲ ಮಹ- ತ್ಕಾಲಾತ್ಮಕ ನಿತ್ಯನಿರ್ಮಲಮೂರ್ತೇ ತವ ಶರಣು 55 ಪರ ಮೇಷ್ಟಿವಂದಿತ ತವ ಶರಣು 56 ತೈಜಸ ಪ್ರಾಜ್ಞ ತುರ್ಯಾ ದ್ಯಷ್ಟರೂಪಾತ್ಮಕ ತವ ಶರಣು57 ಕಂಸಾರಿ ಮುರಾರಿ ಶ್ರೀಹರಿಯೆ ಶರಣು58 ಭವರೋಗಭೇಷಜ ಭಕ್ತಜನಬಂಧೋ ಮುಚುಕುಂದವರದ ಗೋವಿಂದ ಶರಣು 59 ಮುಕ್ತಾಮುಕ್ತಾಶ್ರಯ ಭಕ್ತಜನಸಂರಕ್ಷಣಾ ವ್ಯಕ್ತಾವ್ಯಕ್ತ ಮಹಿಮ ತವ ಶರಣು 60 ತತ್ತದಾಕಾರ ಜಗದಾಪ್ತ ಶರಣು 61 ಚೇತನಾಚೇತನ ವಿಲಕ್ಷಣ ಸ್ವಗತಭೇದವಿವ- ರ್ಜಿತ ಪತಿತಪಾವನಮೂರ್ತೇ ತವ ಶರಣು 62 ಕ್ಷರಾಕ್ಷರ ಪರುಷಪೂಜಿತ ಪಾದ ಪುರಾಣಪುರುಷೋತ್ತಮನೆ ಶರಣು 63 ರವಿಕೋಟಿಕಿರಣ ರತ್ನಕನಕಮಯ ಮುಕು- ಟಾನ್ವಿತ ತವಶಿರಸ್ಸಿಗೇ ತವ ಶರಣು 64 ಸುಂದರಾನಂದ ಆನನಕೆ ಶರಣು 65 ಶ್ರೀಲೋಲ ಶರಣು 66 ಪೂವಿಲ್ಲನಾ ಬಿಲ್ಲ ಪೋಲ್ವ ಹುಬ್ಬು ಕಂಜ - ದಳದೋಲ್ ಚಂಪಕಾಮುಗುಳಿಗೆಣೆನಾಸಿಕಕೆ ಶರಣು 67 ಮಕರ ಕರ್ಣಕುಂಡಲಾನ್ವಿತ ತವ ಕರ್ಣಕ್ಕೆ ಶರಣು 68
--------------
ಉರಗಾದ್ರಿವಾಸವಿಠಲದಾಸರು
ಜಗದೋದ್ದಾರನ ಸಖಿ ಮೊದಲಿಗೆ ಬಲಗೊಂಬೆಮುದದಿಂದ ಮುಯ್ಯ ಗೆಲಿಸೆಂಬೆನಲ್ಲೆ ನಮೋ ಎಂಬೆ ಸುರರ ಎಲ್ಲರ ಬಲಗೊಂಬೆ ಪ. ನಿಗಮ ತಂದವನಿಗೆ ಮುಗಿವೆವು ಕರಗಳನಗವ ಪೊತ್ತವನ ಬಲಗೊಂಬೆ 1 ಜಗವನೆತ್ತಿದವಗೆ ಜಾಣಿ ವಂದಿಸಿಕರುಳು ಬಗೆದ ನರಸಿಂಹನ ಬಲಗೊಂಬೆ 2 ಪೊಡವಿಯನಾಳಿದವಗೆ ಬಿಡದೆ ವಂದಿಸಿಕೊಡಲಿಯ ಪಿಡಿದ ಭಾರ್ಗವನ ಬಲಗೊಂಬೆ 3 ಸೇತುವೆ ಕಟ್ಟಿದವಗೆ ಪ್ರೀತಿಲೆ ನಮಿಸಿಪಾರಿಜಾತ ತಂದವನ ಬಲಗೊಂಬೆ4 ವಸ್ತ್ರ ಹೀನಗೆ ನಾವು ಅತ್ಯಂತ ನಮಿಸಿ ಕುದುರೆಹತ್ತಿದ ರಾಮೇಶನ ಬಲಗೊಂಬೆ 5
--------------
ಗಲಗಲಿಅವ್ವನವರು
ಜಗದ್ಗುರೋ ರಾಮ ತ್ರಾಹಿ ಶ್ರೀ ರಾಮಚಂದ್ರಜಗದ್ಗುರೋ ರಾಮ ತ್ರಾಹಿ ಪದಶರಥನಂದನ ದನುಜ ವಿಮರ್ದನಪಶುಪತಿನುತ ಗುಣ ರವಿನಯನ 1ಕೌಸಲ್ಯಾತ್ಮಜ ಕಮನೀಯಾನನಕೋಮಲ ಕುವಲಯ ದಳ ವರ್ಣ 2ವನಚರ ಪೋಷಕ ಸೇತು ವಿಧಾಯಕಘನ ಧನುಃಶರಧರ ಧೃತಲೋಕ 3ಜಯಜಯ ರಾಘವ ಜಾನಕೀವಲ್ಲಭಭಯಗಣ ನಾಶನ ಭಾನು ನಿಭ 4ದಶಮುಖ ನಂದನ ಮಾನ ವಿಭಂಜನಬಿಸಜಜ ಪೂಜಿತ ಪದನಳಿನ 5ಮುನಿಮಖಪಾಲಕ ತಾಟಕೀಶಿಕ್ಷಕಮುನಿಸತಿದಾಯಕ ಮುನಿತಿಲಕ 6ತರಣಿ ಕುಲೋದ್ಭವ ತಿರುಪತಿ ಗಿರಿವರಸ್ಥಿರಸ್ಥಿತ ವೆಂಕಟ ಸುಖಸಾರ 7ಓಂ ಮ್ಟುಕಾಸುರ ಚಾಣೂರ ಮಲ್ಲಯುದ್ಧವಿಶಾರದಾಯ ನಮಃಕಂ||ಸ್ಥಿರವಾರದರ್ಚನೆಯು ಸುಸ್ಥಿರ ಸಂಪದ್ಭಕ್ತಿ ವಿಜ್ಞಾನಪ್ರದವೆಂದೇಸ್ಥಿರಚಿತ್ತನಾಗಿ ಮಾಡ್ದೆನುಸ್ಥಿರವಾಗಿರು ಮನದಿ ನೀನೆ ವೆಂಕಟರಮಣಾ
--------------
ತಿಮ್ಮಪ್ಪದಾಸರು
ಜಗನ್ನಾಥದಾಸರ ಸ್ತೋತ್ರ ಅಂಬುಜಾಕ್ಷಿ ಸ್ತಂಭದಿಹನ್ಯಾರೇ - ಸಾರೇ ಪ ನಂಬಿ ಭಜಿಸುವ ಭಕುತರ ಮನದಹಂಬಲ ನೀಡುವರೆ - ನೀರೇ ಅ.ಪ ಸುರರೊಡೆಯನೋಲ್ ಪರಿಪರಿಯಲೈ- ಶ್ವರ್ಯದಿಂ ರಾಜಿಸುವರ್ಯಾರೇಹರಿಕಥಾಮೃತ ಗ್ರಂಥ ವಿರಚಿಸಿಧರಣಿ ಸುರರುದ್ಧರಿಸಿದವರೆ 1 ಫುಲ್ಲಲೋಚನೆ ಬಲ್ಲೆಯಾ ಇವ -ರಿಲ್ಲಿರುವ ಕಾರಣವಿದೇನೆಫುಲ್ಲನಾಭನ ಪುಡುಕುತಲೀಪ್ರಹ್ಲಾದನನುಜ ಸಹ್ಲಾದರಿವರೆ 2 ಜಲಜ ತುಳಸಿಮಣಿ ಸುಮಾಲಿಕೆಗಳದಿ ಧರಿಸಿಹನ್ಯಾರೆ - ನೀರೇಕಲಿಯುಗದಿ ಕಮಲಾಪತಿ ವಿ- ಠಲನ ಒಲಿಸಿದಿಳೆಯೊಳಗೆ ಮೆರೆವರೆ 3
--------------
ಕಮಲಪತಿವಿಠ್ಠಲರು
ಜಗನ್ನಾಥದಾಸರು ರಕ್ಷಿಸೋ-ಗುರುವರ-ರಕ್ಷಿಸೋ ಪ ಈಕ್ಷಿಸೊ ಕರುಣ ಕಟಾಕ್ಷದಲಿನ್ನ ಶಿಕ್ಷಿಸು ಮಧ್ವಾಗಮವ ಮುನ್ನ ಉಕ್ಕಿಸು ಭಕ್ತಿ ವಿರಕ್ತಿ ಚೆನ್ನ | ಆಹ ಲಕ್ಷ್ಮೀಕಾಂತನ ಅಪರೋಕ್ಷದಲಿ ಕಂಡು ಪ್ರ- ತ್ಯಕ್ಷ ಔತಣ ಉಂಡ ದಕ್ಷ ಶ್ರೀ ಜಗನಾಥ ವಿಠಲನ ದೂತ ಅ.ಪ. ನರಸಿಂಹದಾಸರ ಕುವರಾ-ಧರಿಸಿದೆ ಶ್ರೀನಿವಾಸನಪೆಸರ ವರಕವಿತಾ ಹುಟ್ಟಿನ ಸಾರ-ಮೆರೆಯಿತು ಕೀರ್ತಿ ಅಪಾರ \ಆಹ ವರದೇಂದ್ರನ್ನ ಅಶುಕವಿತಿಯಲಿಪೊಗಳಿ ವರಶಿಷ್ಯನಾಗುತ ಮೂರೊಂದು ಶಾಸ್ತ್ರದಿ ಕಡುಹುಲಿ ಎನಿಸಿದೆ 1 ನ್ಯಾಯಶಾಸ್ತ್ರದಿ ಜಗಜ್ಜಟ್ಟೀ-ವೇದಾಂತರಸಗಳ ಭಟ್ಟಿ ಮಾಯಾವಶಿರ ಮೆಟ್ಟಿ-ಅಹಂಕಾರ ಶಿರದಲಿಟ್ಟಿ ಆಹ ಶ್ರೇಷ್ಠವಿಜಯದಾಸರು ಮನೆ ಮುಟ್ಟಿ ಕರೆದರು ನಿನ್ನ ಬಹು ಬಹು ಕಂಗೆಟ್ಟೀ ಬತ 2 ಹೋಯಿತು ಕಳೆಮುಖದಿಂದ ಕಚ್ಚಿತು ಭರದಿಂದ ಆಹ ಭರದಿ ಹರಿಯ ಕರುಣ ಜರುಗಿ ಪೋದುದಕಂಡು ಕೊರಗಿ ಕೊರಗುತ ಕ್ಷೇತ್ರ ತಿರುಗುತ ಕೊನೆಗೆ ಗುರು ರಾಘವೇಂದ್ರರ ಪುರವ ಸೇರುತ ಬಹಳ ಕಾಯ ದೆರಗಿ ಸೇವೆಯಗೈದೆ 3 ಕರುಣಾಮಯನು ಸ್ವಪ್ನದಿ ಗುರುವು- ಗುರು ದ್ರೋಹ ಕಾರಣ ವರುಹಿ ಸುರಿಸಿ ಆಶೀರ್ವಾದವ ಶಿರದಿ- ತೆರಳೆಂದ ವಿಜಯದಾಸರ ಬಳಿ ಆಹ ತೆರೆದು ಕಂಗಳು ಒಡನೆ ತರಿದು ಮದಮಾತ್ಸರ್ಯ ಕರೆದು ಕುಡಿಯುತ ಶಿಷ್ಯ- ವರನು ಎನಿಸುತ ಚರಣಸಾರುವ ಬಿಡದೆ ಗೋಪಾಲದಾಸರ 4 ಸ್ವಗುರುಭಾವವತಿಳಿದು ತನ್ನಾಯುವನೆ ಇತ್ತ ಆಹ ಕೊಂಡು ಆಯುರ್ದಾನ ತೊಂಡನೆಂದಡಿಗೆರಗಿ ಕೊಂಡು ಶ್ರೀಹರಿದಾಸ ಗಂಡುದೀಕ್ಷೆಯ ಒಡನೆ ತಾಂಡವಾಡುತ ಪೋಗಿ ಪಾಂಡುರಂಗನ ಪುರದಿ ಮಂಡೆ ಮುಳುಗಿಸೆ ನದಿಲಿ ಕಂಡೆ ಅಂಕಿತ ಶಿರದಿ 5 ಪಂಡಿತನಾನೆಂಬ ಹೆಮ್ಮೆ ಬರಿ-ಪುಂಡತನವಲ್ಲದೆ ಹರಿಯ ನಿಜ ನಿನ್ನ ಚರಿತೆ ಆಹ ತಂಡತಂಡದ ಕವನ ದಂಡೆ ಹಾರಲು ಹರಿಗೆ ಕೊಂಡು ಔಡಣ ನಡಿಸೆ ಉಂಡು ಸಂತಸದಿಂದ ತುಂಡುಗೈಯುವ ಭವವ ಕಂಡೆ ನಾಕವ ಭುವಿಲಿ 6 ದೇಶದೇಶಗಳ ಸಂಚರಿಸಿ-ಹೇಸಿ ಮತಗಳ ನಿರಾಕರಿಸಿ ಪೊರೆದೆ ಹರೆಸಿ ಆಹ ಭಾಷಾದ್ವಯ ಯೋಜನೆ ಮೀಸಲು ನಿನಗೆಂಬೆ ವ್ಯಾಸ ರಾಜಾದಿಗಳ ಆಶೆಯಂದದದಿ ತತ್ವ- ರಾಶಿ ತುಂಬುತ ಗ್ರಂಥರಾಜ ರಚಿಸುತ ಜಗಕೆ ತೋಷ ತಂದಿತ್ತಿಯೊ ದಾಸಜನರುಲ್ಲಾಸ 7 ಶ್ರೀಮದ್ಧರಿಕಥಾಮೃತಸಾರ-ನೇಮ ದಿಂದೋದುವನೆ ಧೀರ ತಾಮಸರಿಗಿದು ಬಹಳದೂರ- ನೀಮಾಡಿದೆ ಮಹೋಪಕಾರ ಆಹ ಕಾಮವರ್ಜಿತವಾಗಿ ಪ್ರೇಮದಿ ನರಹರಿಯ ಭಾಮಸಹ ಸಂತತ ನೇಮದಿಂ ಧ್ಯಾನಿಸುತ ನಿತ್ಯ ಸಕಲೇಂದ್ರಿಯ ವ್ಯಾಪಾರ ಧೂಮಕೇತುವು ಎನಿಸುತ ನಮ್ಮಘಕಾನನಕೆ 8 ಪ್ರಾಣೇಶ ಕರ್ಜಗಿ ದಾಸಾರ್ಯರವೃಂದ- ನೀನಾಗಿ ಪೂರೆದಂತೆ ಘನ ಅಭಿಮಾನದಿಂದ ದೀನರೆಮ್ಮಯವೃಂದ ಕಾಯೆಂಬೆ ಮುದದಿಂದ- ತಾಣ ನಿಮ್ಮದೆ ನಮಗೆ ದಾಸಪಂಥ ಸ್ತಂಭ ಆಹ ಕೃಷ್ಣಾಗ್ರಜ ಶಲ್ಯ ಸಹ್ಲಾದ ಮತ್ತಾ ಪುರಂದರ ದಾಸಾತ್ಮಜನೀನಂತೆ ದೀನಜನೋದ್ಧಾರಗೈಯ್ಯೆ ಮುಂದೇಳುಬಾರಿ ಜನ್ಮಯೆತ್ತು ವಿಯಂತೆ ಶರಣು ಕರುಣಾಮಯ 9 ಕನ್ನಡಕೆ ಮುಳ್ಳು ಕುವರ ನೀಮುದ್ದು ಆಹ ಶರ್ಕರಾಕ್ಷಸಗೋಸ್ಥ ಅನುಸಂಧಾನ ಕ್ರಮ ಸು ನೀಕವಡಗಿಸಿ ಕವನ ಕಡಲೊಳು ಸಾಕಿಹೆ ಹರಿ ಭಕ್ತಸಂಘವ ಹಿರಿಯ ದಾಸರ ಪಥವನನುಸರಿಸಿ ಶಕ್ತನಾವನು ಗುಣಿಸೆ ನಿನ್ನುಪಕಾರ ಜಗಕೆ 10 ಸಣ್ಣವನು ನಾ ನಿನ್ನು ಗುರುವೇ-ನಿನ್ನವ ಸತ್ಯ ಮನ್ಮನ ಪ್ರಭುವೆ ಮನ್ನಿಸಪರಾಧ ಕಲ್ಪ ಧ್ರುಮವೆ-ಚಿಣ್ಣರ ಸಲಹೆ ಪಿತಗೆ ಶ್ರಮವೆ ಆಹ ಘನ್ನ ಜಯತೀರ್ಥ ವಾಯ್ವಂತರ್ಗತ ಶ್ರೀ ಕೃಷ್ಣವಿಠಲ ತದ್ವನನೆಂದು ಭಜಿಸುವ ಭಾಗ್ಯ ಜನ್ಮಜನ್ಮಂತರ ಕೊಟ್ಟು ಕಾಪಾಡುವಂಥ ನಿನ್ನಭಯಕರವೆನ್ನ ಶಿರದಲಿಡುವಲಿ ಸತತ 11
--------------
ಕೃಷ್ಣವಿಠಲದಾಸರು
ಜಡಮತಿಗಡ ಕಡಿದೀಡ್ಯಾಡಿ ಪಡಿರೋ ಸನ್ಮಾರ್ಗವ ಹುಡುಕ್ಯಾಡಿ ಪ ಗಡಗಡಸದೃಢದಯಿಡುತೋಡೋಡಿ ಪಡಿರೋ ಕಡು ಅನಂದ್ವೊಯ್ಕುಂಠ ನೋಡಿ ಅ.ಪ ಚಿಂತೆ ಭ್ರಾಂತಿಗಳ ದೂರಮಾಡಿ ನಿ ಶ್ಚಿಂತರಾಗಿರೋ ಮನ ಮಡಿಮಾಡಿ ಶಾಂತಿತೈಲ್ಹೊಯ್ದು ಜ್ಞಾನಜ್ಯೋತಿಕುಡಿ ಚಾಚಿ ನಿಂತು ನೋಡಿರೋ ಹರಿಪುರದಕಡೆ ಅಂತ್ಯ ಪಾರಿಲ್ಲದಾತ್ಯಂತ ಪ್ರಕಾಶದಿಂ ನಿಂತು ಬೆಳಗುತಾರೋ ಆನಂತಸೂರ್ಯರು ಕೂಡಿ 1 ಬೋಧಾದಿಮಯ ಮಹದ್ವಾರಗಳು ಮತ್ತು ವೇದ ನಿರ್ಮಯ ಪುರಬೀದಿಗಳು ಆದಿಅಂತಿಲ್ಲದಷ್ಟ ಭೋಗಗಳು ವಿ ನೋದ ಮುಕ್ತಿ ಕಾಂತೇರಾಟಗಳು ವೇದವೇದಾಂತ ಅಹ್ಲಾದದಿಂ ಪೊಗಳುವ ಸುಜನ ಮಹದಾದಿಪದವಿಗಳು2 ಸೇವಿಪ ಸುರಮುನಿಗಣಗಳು ಕೋವಿದ ನಾರದಾದಿ ಗಾನಗಳು ರಂಭೆ ನಾಯಕಿಯರ ಮಹನರ್ತನಗಳು ಸಾವಿರಮುಖಪೀಠದ್ಹೊಳೆವ ಶ್ರೀರಾಮನ ಪಾವನಪಾದಕಂಡು ಸಾವ್ಹುಟ್ಟು ಗೆಲಿರೆಲೋ 3
--------------
ರಾಮದಾಸರು
ಜನನಿ ರುದ್ರಾಣಿ ರಕ್ಷಿಸು ಎನ್ನ ಜಗದೀಶನ ರಾಣಿ ಪ. ವನಜಭವಸುರಮುನಿಕುಲಾರ್ಚಿತೆ ಕನಕವರ್ಣಶರೀರೆ ಕಮಲಾ- ನನೆ ಕರುಣಾಸಾಗರೆ ನಮಜ್ಜನ- ಮನಮುದಾಕರೆ ಮಾನಿತೋದ್ಧರೆ ಅ.ಪ. ಆದಿಕೃತಾಯುಗದಿ ಪ್ರತಿಷ್ಠಿತ- ಳಾದೆ ಧರಾತಳದಿ ಆದಿತೇಯರ ಬಾಧಿಸುವ ದಿತಿ- ಜಾಧಮರ ಭೇದಿಸಿದೆ ಸಜ್ಜನ- ರಾದವರ ಮನ್ನಿಸಿದೆ ತ್ರೈಜಗ- ದಾದಿಮಾಯೆ ವಿನೋದರೂಪಿಣಿ 1 ಖಂಡ ಪರಶುಪ್ರೀತೆ ನಿಖಿಲಬ್ರ- ಹ್ಮಾಂಡೋದರಭರಿತೆ ಚಂಡಮುಂಡವೇತಂಡದಳನೋ- ದ್ದಂಡಸಿಂಹೆ ಅಖಂಡಲಾರ್ಚಿತೆ ಪಾಂಡುತನುಜ ಕೋದಂಡ ವಿತರಣೆ ಚಂಡಿಕೇ ಕರದಂಡಲೋಚನಿ2 ಸಿಂಧೂರ ಸಮಯಾನೆ ಸರಸ ಗುಣ- ವೃಂದೆ ಕೋಕಿಲಗಾನೆ ಸುಂದರಾಂಗಿ ಮೃಗೇಂದ್ರವಾಹಿನಿ ಚಂದ್ರಚೂಡಮನೋಜ್ಞೆ ಸತತಾ- ನಂದಪೂರ್ಣೆ ಮುನೀಂದ್ರನುತೆ ಸುಮ- ಗಂಧಿ ಗೌರಿ ಶಿವೇ ಭವಾನಿ 3 ಲಂಬೋದರಮಾತೆ ಲಲಿತ ಜಗ- ದಂಬಿಕೆ ಗಿರಿಜಾತೆ ಕಂಬುಕಂಠಿ ಕಾದಂಬನೀಕು- ರುಂಬಜಿತಧಮ್ಮಿಲ್ಲೆ ತವ ಪಾ- ದಾಂಬುಜವ ನಾ ನಂಬಿದೆನು ಎನ- ಗಿಂಬು ಪಾಲಿಸೆ ಶುಂಭಮರ್ದಿನಿ 4 ಘನವೇಣುಪುರವಾಸೆ ಸರ್ವಾರ್ಥದಾ- ಯಿನಿ ತ್ರೈಜಗದೀಶೆ ಸನಕನುತೆ ಶ್ರೀಲಕ್ಷುಮಿನಾರಾ- ಯಣಭಗಿನಿ ಶ್ರೀಮಹಿಷಮರ್ದಿನಿ ಮನಮಥಾಮಿತರೂಪೆ ಕಾತ್ಯಾ- ಯಿನಿ ನಿರಾಮಯೆ ಮಂಜುಭಾಷಿಣಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಜನ್ಮ ಸಫಲ ಕಾಣಿರೋ ನಮ್ಮ ಗುರು ವಾದಿರಾಜರಾಯರ ಕಂಡು ಜನ್ಮ ಸಫಲ ಕಾಣಿರೋ ಪ ಯುಕ್ತಿ ಮಲ್ಲಿಕೆಯೆಂಬ ಗ್ರಂಥ ಮಾಡಿಹರು ಮತ್ತೆ ಮುತ್ತಿನ ಸಿಂಹಾಸನವನೇರಿಹರು ಮತ್ತೆ ದುರ್ವಾದೀಭಗಳಿಗೆ ಮೃಗೇಂದ್ರರು ಸೂತ್ರನಾಮದಿ ಮುಂದೆ ಮೆರೆವರು 1 ದಾಸಕೂಟಗಳಲ್ಲಿ ರತ್ನದಂತಿಹರು ಭಾಸುರಕಾಯದಿ ನೂರ ಇಪ್ಪತ್ತು ವರ್ಷಗಳೊಳಗಿದ್ದು ಮೆರೆದವರು 2 ಮೂಜಗದೊಳಗಿಂಥ ಗುರುಗಳೆಲ್ಲಿಹರು ಕಂಜಸುತನ ಪದವೇರುವವರು ರಾಜೇಶ ಹಯಮುಖ ಕಿಂಕರಾಗ್ರಣಿಗಳು ರಾಜಿಪ ಶ್ರೀಸೋದಾಪುರದೊಳಗಿಹರು 3
--------------
ವಿಶ್ವೇಂದ್ರತೀರ್ಥ
ಜನ್ಮ ಸಫಲವಾಯಿತು ಪ. ಆದಿ ಅನಂತ ಜನಾರ್ದನನ ಕಂಡುಎನ್ನ ಜನ್ಮ ಸಫಲವಾಯಿತು ಅ.ಪ. ಬ್ರಹ್ಮಾನಂದ ಸುಗುಣ ನಿಮ್ಮ ಮಹಿಮೆಯ ಅ-ಗಮ್ಯಗೋಚರನೆಂದು ಸ್ತುತಿಸುತಿರೆಬ್ರಹ್ಮರುದ್ರಾದಿಗಳು ಇಂದ್ರ ಚಂದ್ರಾದಿಗಳುನಿರ್ಮಲಮೂರುತಿ ನಿಮ್ಮ ನಿಜವ ತೋರಿದಮ್ಯಾಲೆ 1 ಒಡ್ಡಿ ನಿಂತದ್ದು ಕಂಡು 2 ಮಕರಕುಂಡಲ ಕೌಸ್ತುಭ ಕೊರಳವೈಜಯಂತೀ ಮಾಲಿಕೆಗಳ ಕಂಡು ಎನ್ನ 3 ನಡುವಿನ [ಬಾಗಿಲಲಿ]ನಾಭಿಕಮಲ ಕಂಡೆಉದ್ಭವಿಸಿ ಮೆರೆವ ವಿರಿಂಚಿಯ ಕಂಡೆಜಡಿವೊ ಪೀತಾಂಬರ ನಡುವಿನೊಡ್ಯಾಣವಉಡಿಗೆಜ್ಜೆ ಮೇಲಿನ ಕಿರುಗೆಜ್ಜೆಗಳ ಕಂಡು 4 ಮೂರನೆ ಬಾಗಿಲಲಿ ಮುದ್ದು ಶ್ರೀಚರಣವುಶ್ರೀದೇವಿ ಭೂದೇವಿ ಸೇವೆಮಾಳ್ಪುದ ಕಂಡೆಸುರರು ಮಾನವರ ಕಂಡೆ ಸ್ತೋತ್ರಮಾಳ್ಪುದ ಕಂಡೆಉರಗಶಯನ ಮ್ಯಾಲೆ ಹಯವದನನ ಕಂಡು ಎನ್ನ 5
--------------
ವಾದಿರಾಜ