ಒಟ್ಟು 36720 ಕಡೆಗಳಲ್ಲಿ , 136 ದಾಸರು , 10408 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಂಬದಿರು ಈ ದೇಹ ನಿತ್ಯವಲ್ಲ |ಅಂಬುಜಾಕ್ಷನ ಭಜಿಸಿ ಸುಖಿಯಾಗು ಮನವೇ ಪ.ಎಲು ರಕ್ತ ಮಾಂಸಗಳ ಮೇಲೆ ಚರ್ಮದ ಹೊದಿಕೆ |ಮಲಮೂತ್ರ ಒಳಗೆ ಕ್ರಿಮಿರಾಶಿಯಿಹವು ||ಹಲವು ವ್ಯಾಧಿಯ ಬೀಡು ಪಂಚಭೂತದ ನಾಡು |ಹುಲುದೇಹವನು ನೆಚ್ಚಿ ಕೆಡಬೇಡ ಮನವೆ 1ಸತಿಸುತರು ಹಿತರೆಂದು ಮತಿಮರೆತು ಮಮತೆಯಲಿ |ಅತಿಕಾಂಕ್ಷಿಯಿಂದ ದುರ್ವಿಷಯ ಬಲಿದು ||ಸತತ ಲಕ್ಷ್ಮೀಪತಿಯ ಶರಣೆನದೆ ಇಹಪರದ |ಗತಿಶೂನ್ಯನಾಗಿ ಕೆಡಬೇಡ ಮನವೆ 2ಪರರ ನಿಂದಿಸದೆ ಪರವಧಗಳನು ಬಯಸದೆ |ಗುರು - ವಿಪ್ರಸೇವೆಯನುಮಾಡು ಬಿಡದೆ ||ಹರಿಸ್ತುತಿಯ ನೀ ಕೇಳು ಹರಿಕೀರ್ತನೆಯ ಪಾಡು |ಪರಮಪುರಂದರವಿಠಲನೊಲಿದು ಪಾಲಿಸುವ3
--------------
ಪುರಂದರದಾಸರು
ನಂಬಬೇಡ ನಾರಿಯರನುಹಂಬಲಿಸಿ ಹಾರಯಿಸಬೇಡಅಂಬುಜಾಕ್ಷಿಯರೊಲುಮೆ ಬಯಲುಡಂಬಕವೆಂದು ತಿಳಿಯಿರೊ ಪ.ನೋಟವೆಲ್ಲ ಪುಸಿಯು - ಸತಿಯರಾಟವೆಲ್ಲ ಸಂಚು - ಸನ್ನೆಕೂಟವೆಲ್ಲ ಗನ್ನ - ಘಾತುಕನೋಟವೆಲ್ಲ ವಂಚನೆವಾತಬದ್ಧ ಹೆಂಗಳಲ್ಲಿಕೋಟಲೆಗೊಂಡು ತಿರುಗಬೇಡಮಾಟಗಾತಿಯರೊಲುಮೆ ಬಯಲುಬೂಟಕವೆಂದು ತಿಳಿಯಿರೊ 1ಸೋತನೆಂದು ವಿಟಗೆ ದೈನ್ಯಮಾತನಾಡಿ ಮರುಳಗೊಳಸಿಕಾತರವ ಹುಟ್ಟಿಸಿ ಆವನಮಾತೆ - ಪಿತರ ತೊಲಗಿಸಿಪ್ರೀತಿ ಬಡಿಸಿ ಹಣವ ಸೆಳೆದುರೀತಿಗೆಡಿಸಿ ಕಡೆಯಲವನಕೋತಿಯಂತೆ ಮಾಡಿ ಬಿಡುವಚಾತಿಕಾರ್ತಿ ಹೆಂಗಳೆಯರ 2ಧರೆಯ ಜನರ ಮೋಹಕೆಳಸಿಭರದಿ ನೆಟ್ಟು ಕೆಡಲುಬೇಡಎರೆಳೆಂಗಳ ಹೆಂಗಳೊಲುಮೆಗುರುಳೆ ನೀರ ಮೇಲಿನಮರೆಯಬೇಡ ಗುರುಮಂತ್ರವಸ್ಥಿರವಿಲ್ಲದ ಜನ್ಮದಲ್ಲಿಕರುಣನಿಧಿ ಪುರಂದರವಿಠಲನಚರಣಸ್ಮರಣೆ ಮಾಡಿರೊ3
--------------
ಪುರಂದರದಾಸರು
ನಂಬಿ ಕೆಟ್ಟವರುಂಟೆ - ಕೃಷ್ಣಯ್ಯನ |ನಂಬಲಾರದೆ ಕೆಟ್ಟರು ಪ.ಅಂಬುಜನಾಭನ ಪಾದವ ನೆನೆದರೆ |ಇಂಬುಗೊಡದ ದುಃಖ ಹರಿಸುವ ಶ್ರೀ ಕೃಷ್ಣ ಅಪಬಲಿಯ ಪಾತಾಳಕಿಳುಹಿ - ಭಕ್ತನ ಬಾ - |ಗಿಲವ ಕಾಲುವೆ ನಾನೆಂದ ||ಛಲದೊಳು ಅಸುರರ ಶಿರಗಳ ತರಿದು ತಾ |ನೊಲಿದು ವಿಭೀಷಣಗೆ ಪಟ್ಟಗಟ್ಟಿದ ಈ ಕೃಷ್ಣ 1ತರಳ ಪ್ರಹ್ಮಾದಗೊಲಿದು - ಹಿರಣ್ಯಕನ ಉ - |ಗುರಿನಿಂದಲೆ ಸೀಳಿದ |ಕರಿರಾಜಗೊಲಿದುನೆಗಳು ನುಂಗುತಿರಲಾಗ ||ಪರಿಹರಿಸಿದ ಜಲದೊಳು ಪೊಕ್ಕು ಶ್ರೀ ಕೃಷ್ಣ 2ಪಾಂಡವರಿಗೆ ಒಲಿದು - ಕೌರವರನು |ತುಂಡು ಛಿದ್ರಮಾಡಿದೆ ||ಗಂಡರೈವರ ಮುಂದೆ ದ್ರೌಪದಿ ಕೂಗಲು |ಕಂಡು ಕರುಣದಿ ಕಾಯ್ದ ಪುರಂದರವಿಠಲನ 3
--------------
ಪುರಂದರದಾಸರು
ನಂಬಿ ಚೊಕ್ಕಟಿಂಬು ಪಡೆಯಿರೈ ಪ.ಇಂಬುಪಡೆದು ಹರಿಯಚರಣಅಂಬುಜಬಂಡುಂಡು ಮಿಕ್ಕಹಂಬಲವ ಉಳಿದುಭೂರಿಸಂಭ್ರ್ರಮಿಸುವವರಕೇಳಿಅ.ಪ.ಹರಿವ ಮನವಕಟ್ಟಿವಿೂರಿಬರುವ ದುರಿತಕಂಜದೆ ಸುತ್ತಿರುವ ಮಾಯಾಪಾಶ ಹರಿವ ಹರುವನಾಲಿಸಿಗುರುವಿನಾಜ್ಞಾದಂತೆ ಪುಣ್ಯದುರುಹು ಬಲ್ಲ ಪ್ರೇಕ್ಷಕಲ್ಪತರುವ ಪಿಡಿದು ನಷ್ಟ ಕಳೇವರವು ತನ್ನದಲ್ಲವೆಂದು 1ಆವಾಗೆ ಸಚ್ಛಾಸ್ತ್ರ ಶ್ರವಣಭಾವಗುಟ್ಟುಕೇಳಿಭಕುತಿಠಾವುಗಂಡು ಹಸಿವು ತೃಷೆಯಕಾವಘಸಣೆಯಸಾವಿಗ್ಹೊಂದದಂತೆ ಸಾಧುಸೇವ್ಯಗರುಡಗಮನನಂಘ್ರಿಸೇವೆಗಧ್ಯಕ್ಷಿತರಾಗಿ ನೀವೀಗ ವೈರಾಗ್ಯ ಬಲಿದು 2ಕ್ಷುದ್ರಭೋಗಬಯಸದೆ ದಾರಿದ್ರ ಭೀತನಾಗದೆ ಸಮುದ್ರಭವನನೆಂದು ಶ್ರೀಮುದ್ರಾಭರಣದಭದ್ರ ಭಾಗವತನು ಆಭದ್ರ ಬುದ್ಧಿಯಲ್ಲಿ ಕೂಡಿಚಿದ್ರೂಪ ಪ್ರಸನ್ನವೆಂಕಟಾದ್ರಿ ಭೋಗಶಯನನೆಂದು 3
--------------
ಪ್ರಸನ್ನವೆಂಕಟದಾಸರು
ನಂಬಿದವರಿಗೆ ಇಂಬುದೋರುವ |ಲಂಬೋದರ ಗಣನಾಯಕ ಪಶಂಭು ಶಂಕರಸುತನೆ ಭಕ್ತಕುಟುಂಬಿ ವಿಘ್ನನಾಯಕ ಅ.ಪಏಕದಂತ ವಿವೇಕದಾತನೆ | ಲೋಕನಾಥ ಪ್ರಖ್ಯಾತನೆಶೋಕಹರಹೇರಂಬಗಜಮುಖಕಾಕುಜನಸಂಹಾರಕನೆ ಜಯತು ಜಯತು 1ಕುಂಕುಮಾಂಕಿತ ದೇವದೇವನೆ | ಕಿಂಕರನ ನುತಿಪಾತ್ರನೆಶಂಕರಿಯ ಸುಕುಮಾರ ಮಧುಪುರಪಂಕಜಾದಳನೇತ್ರನೆ ಜಯತು ಜಯತು 2ವಿಘ್ನಘನಕಾಂತಾರಕ ನಲನೆ | ವಿಘ್ನ ಮೇಘಕೆ ಅನಿಲನೆವಿಘ್ನಕರ ಯಾಮಿನಿಗೆಭಾಸ್ಕರವಿಘ್ನಸಾಮಜಕೇಸರಿಜಯತು ಜಯತು 3ಗಂಧಚಂದನ ಪುಷ್ಪಫಲಗ | ಳಿಂದ ನಿನ್ನನು ಪೂಜಿಸಿವಂದಿಸುವೆ ನಿನ್ನಂಘ್ರಿ ಕಮಲಕೆ ಸಲಹೊಸಲಹೊ ಗೋವಿಂದದಾಸನ ಜಯತು ಜಯತು 4
--------------
ಗೋವಿಂದದಾಸ
ನಂಬಿದೆ ನಾಗರಾಜ ಹರಿಯ ಪಾ-ದಾಂಭೋಜಭಕ್ತಿಭಾಜ ಪ.ಶಂಭುಶಕ್ರಾದ್ಯರು ಹಂಬಲಿಪರು ನಿನ್ನತುಂಬಿದ ಜೀವಕದಂಬಾಭಿಮಾನಿಯೆ ಅ.ಪ.ಸಾವಿರ ಜಿಹ್ವೆಯೊಳು ಹರಿಯ ಸ್ತುತಿಗೈವೆನಿರತಕೃಪಾಳುಶ್ರೀವಾಸುದೇವನ ಕರುಣ ನಿನ್ನಲ್ಲೆಷ್ಟುದೇವೇಶನಾದರು ಯಾವನು ಬಣ್ಣಿಪಶ್ರೀವಧೂವರನ ಕಮಲಪದ ರಾ-ಜೀವ ಸೌಂದರ್ಯವನು ತನ್ನಯಸಾವಿರಾಕ್ಷಿಗಳಿಂದ ಕಾಣುತಕೇವಲಾನಂದಾಬ್ಧಿ ಮಗ್ನನೆ 1ಶಿರವೊಂದರಲಿ ಬ್ರಹ್ಮಾಂಡ ಸಾಸವೆಯಂತೆಧರಿಸಿದೆ ಸುಪ್ರಚಂಡವರರಘುರಾಮನಾವರಜ ಲಕ್ಷ್ಮಣನಾದೆಹರಿಕೃಷ್ಣರಾಯನ ಪಿರಿಯನಾಗಿ ಅವ-ತರಿಸಿ ಭೂಭಾರವನುರೆ ಸಂ-ಹರಿಸಿ ವೇದ ಪುರಾಣ ತತ್ತ್ವವಶರಣಜನರಿಗೆ ಬೋಧಿಸುವ ಮಹಾಕರುಣಿ ಕಮಲಾಕಾಂತನ ಭಕ್ತನೆ 2ಲಕ್ಷ್ಮೀನಾರಾಯಣನ ನಿದ್ರಾಸ್ಪದರಕ್ಷಿಸು ಕೃಪೆಯಿಂದೆನ್ನಸಾಕ್ಷಾದಚಲರೂಪ ನಿನ್ನೊಳು ನೆಲಸಿದಪಕ್ಷಿವಾಹನ ಜಗದಧ್ಯಕ್ಷ ಶ್ರೀನಿವಾಸಮೋಕ್ಷ ಮಾರ್ಗಪ್ರದರ್ಶಿ ಸತತ ಮು-ಮುಕ್ಷು ಜನಮನಹರ್ಷ ನಿರ್ಜರ-ಪಕ್ಷ ಸುಫಲಪ್ರದ ಸದಾ ನಿರ-ಪೇಕ್ಷ ಗುರುವರ ರಾಕ್ಷಸಾಂತಕ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂಬಿದೆ ನಿನ್ನ ಗಣೇಶ ಜಗ-ದಂಬಿಕಾತನಯ ವಿಶ್ವಂಭರದಾಸ ಪ.ಲಂಬೋದರ ವಿಘ್ನೇಶ ಶರ-ಣೆಂಬುದು ಸುರನಿಕುರುಂಬ ಮಹೇಶ ಅ.ಪ.ತರುಣಾದಿತ್ಯಪ್ರಕಾಶ ನಿನ್ನಶರಣಾಗತನಾದೆ ಮೋಹನ ವೇಷಸುರುಚಿರಮಣಿಗಣಭೂಷ ಜಗದ್ಗುರುವೆ ಗುಹಾಗ್ರಜ ಪೊರೆಯೋನಿರ್ದೋಷ1ಸಂತಜನರ ಮನೋವಾಸ ಮೋಹಭ್ರಾಂತಿಯಜ್ಞಾನಧ್ವಾಂತವಿನಾಶಶಾಂತಹೃದಯ ಸುಗುಣೋಲ್ಲಾಸ ಏಕದಂತ ದಯಾಸಾಗರ ದೀನಪೋಷ 2ಲಕ್ಷ್ಮೀನಾರಾಯಣನೆ ವ್ಯಾಸಗುರುಶಿಕ್ಷಿತ ಸುಜ್ಞಾನ ತೇಜೋವಿಲಾಸಅಕ್ಷರಬ್ರಹ್ಮೋಪದೇಶವಿತ್ತುರಕ್ಷಿಸು ದನುಜಾರಣ್ಯಹುತಾಶ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂಬಿದೆ ನಿನ್ನ ಪಾದವ - ವೆಂಕಟರಮಣನಂಬಿದೆ ನಿನ್ನ ಪಾದವ || ಪನಂಬಿದೆ ನಿನ್ನ ಪದಾಂಬುಜಯುಗಳವಇಂಬಿತ್ತು ಸಲಹಯ್ಯ ಶಂಖ-ಚಕ್ರಧರನೆ . ಪತಂದೆಯು ನೀನೆ ತಾಯಿಯು ನೀನೆಬಂಧು ಬಳಗವು ನೀನೆ ||ಬಂದ ದುರಿತವೆನ್ನ ಹೊಂದಿಕೊಳ್ಳದಂತೆತಂದೆ ಸಲಹೊ ಮುಕುಂದ ಮುರಾರಿ 1ಚಿಕ್ಕಂದು ಮೊದಲು ನಾನು ನಿನ್ನಯಪಾದಹೊಕ್ಕು ಜೀವಿಸುತಿಹೆನು ||ಗಕ್ಕನೆ ಜ್ಞಾನವನಕ್ಕರೆಯಲಿ ಕೊಡುಮಕ್ಕಳ ಮಾಣಿಕ್ಯ ರುಕ್ಮಿಣಿಯರಸಾ 2ಮರೆತು ನಾ ಮಾಯೆಯೊಳು ಮುಳುಗಿದೆ ಅದನರಿತು ಅರಿಯದಾದೆ ||ಮರೆಯದೆ ಎನ್ನನು ಪೊರೆಯೆ ಕೃಪಾನಿಧಿವರದ ಶ್ರೀವೆಂಕಟಪುರಂದರವಿಠಲ3
--------------
ಪುರಂದರದಾಸರು
ನಂಬಿದೆ ನಿನ್ನ ಶಾಂಭವೀಸುತಲಂಬೋದರ ಗುರುವರ ಧವಳಾಂಬರಾವೃತ ಪ.ವಿಘ್ನಭಂಜನ ವಿಶ್ವರಂಜನಮಗ್ನಗೈಸಬೇಡ ಭವದಿ ನಿರ್ಗತಾಂಜನ 1ಭಾರಯಾರದು ವಿಘ್ನಹಾರಿಸುವದುಭಾರತಾರ್ಥ ಭಾಸ್ಕರಾಚಾರ್ಯ ನಿನ್ನದು 2ರಕ್ಷಣೀಯನೆ ಮುಮಕ್ಷುಪ್ರಿಯನೆಲಕ್ಷ್ಮೀನಾರಾಯಣಾಂಘ್ರಿ ಲಕ್ಷಿತಾತ್ಮನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂಬಿದೆನು ಜಗದಂಬೆ ನಿನ್ನನು ಪಾಲಿಸು ಸರ್ವಾ-ರಂಭಸೂತ್ರಳೆ ಇಂಬುದೋರಿನ್ನು ಪ.ಅಂಬುಜಾಂಬಕಿ ಶುಂಭಮರ್ದಿನಿಕಂಬುಗ್ರೀವೆಹೇರಂಬಜನನಿಶೋ-ಣಾಂಬರಾವೃತೆ ಶಂಭುಪ್ರಿಯೆ ದಯಾ-ಲಂಬೆ ಸುರನಿಕುರುಂಬಸನ್ನುತೆ ಅ.ಪ.ಕ್ರೂರದೈತ್ಯವಿದಾರೆ ಮಹದಾಕಾರೆ ಮಂಗಲೇ ವಿಶ್ವಾ-ಧಾರೆ ಕಲ್ಮಷದೂರೆ ಕದನಕಠೋರೆ ನಿಶ್ಚಲೆ ಪಾರಾ-ವಾರ ಸಮಗಂಭೀರೆ ಸುಗುಣವಿಹಾರೆ ನಿರ್ಮಲೆ ರತಿಶೃಂ-ಗಾರೆ ರಿಪುಸಂಹಾರೆ ತುಂಬುರುನಾರದಾದಿಮುನೀಂದ್ರ ನುತಚರ-ಣಾರವಿಂದೆ ಮಯೂರಗಾಮಿನಿಸೂರಿಜನ ಸುಮನೋರಥಪ್ರದೆ 1ಮೂಲರೂಪೆ ದಯಾಲವಾಲೆವಿಶಾಲಸುಗುಣಯುತೆ ಮುನಿಜನ-ಲೋಲತರುಣಮರಾಳೆ ಸಚ್ಚರಿತೆ ನವಮಣಿಮಾಲೆ ಮನ್ಮಥಲೀಲೆ ರಿಪುಶಿರಶೂಲೆ ಸಚ್ಚರಿತೆ ಹಿಮಗಿರಿ-ಬಾಲೆ ನೀಲತಮಾಲವರ್ಣೆ ಕ-ರಾಳಸುರಗಿ ಕಪಾಲಧರೆ ಸುಜ-ನಾಳಿಪಾಲನಶೀಲೆ ಹಿಮಕರಮೌಳಿಶೋಭಿತೆ ಕಾಳಿಕಾಂಬಿಕೆÉ 2ಶೋಕಮೋಹಾನಾನೀಕದೂರೆ ಪಿನಾಕಿಸುಪ್ರೀತೆ ಕೋಟಿ ದಿ-ವಾಕರಾಭೆಪರಾಕುಶರಣಜನೈಕಹಿತದಾತೆ ಸುರನರ-ಲೋಕಮಾತೆ ನಿರಾಕುಲಿತೆ ಸುವಿವೇಕಗುಣವ್ರಾತೆ ಮಾನಸ-ವಾಕುಕಾಯದಿಂದ ಗೈದಾನೇಕ ದುರಿತವ ದೂರಗೈದು ರ-ಮಾಳಕಳತ್ರನ ಪಾದಭಕುತಿಯ ನೀ ಕರುಣಿಸು ಕೃಪಾಕರೇಶ್ವರಿ3ಈಶೆ ಪಾಪವಿನಾಶೆ ಮಣಿಗಣಭೂರಿಪ್ರದೆ ಶಕ್ತಿವಿ-ಲಾಸೆ ವಿಗತವಿಶೇಷೆ ಕೃತಜಯಘೋಷೆ ಸರ್ವವಿದೆ ಮನ್ಮನ-ದಾಸೆಗಳ ಪೂರೈಸು ಸಜನರ ಪೋಷೆ ಕುಂದರದೆ ಶಂಕರೋ-ಲ್ಲಾಸೆ ಯೋಗೀಶಾಶಯಸ್ಥಿತೆವಾಸವಾರ್ಚಿತೆ ಶ್ರೀಸರಸ್ವತಿದೋಷರಹಿತೆ ಮಹೇಶೆ ಸುಗುಣರಾಶಿ ಸುರತತಿದಾಸಜನಯುತೆ 4ಸಾಮಗಾನಪ್ರೇಮೆ ರಾಕ್ಷಸ ಭೀಮೆ ರುದ್ರಾಣಿ ಅರಳ-ಗ್ರಾಮದೇವತೆ ಕ್ಷೇಮದಾಯಿನಿ ತಾಮರಸಪಾಣಿ ಪಶುಪತಿ-ವಾಮಭಾಗಲಲಾಮೆ ಮಂಗಲಧಾಮೆ ಫಣಿವೇಣಿ ಜಯಜಯಶ್ರೀಮಹಾಲಕ್ಷ್ಮಿ ನಾರಾಯಣಿರಾಮನಾಮಾಸಕ್ತೆ ಕವಿಜನ-ಸ್ತೋಮಕೃತ ಪರಿಣಾಮೆ ಭೌಮೆ ಪುಲೋಮಜಾರ್ಚಿತೆಸೋಮಶೇಖರಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂಬಿರೈ ಕರುಣಾಂಬುಧಿ ಕೋಮಲಕಂಬುಕಂಧರಹರಿಯಪ.ಯೋಗಿಮನಮುದ ರಾಗ ಮೂರುತಿಯ ದೊರೆಯಪಾಲಿತ ಕೌಂತೇಯಭಾಗವತತನಕಾಗಿ ತಾ ದಯವಗೈದ ಭರದಿಂದ ತೋರ್ವಯೋಗ ಮಾಯಾಧೀಶ ಸತ್ಸಕಲಾಗಮಾರ್ಚಿತಭೋಗಿಶಯನಸ-ರಾಗಕಪ್ಪನಿಯೋಗಿಸುವರೆ ಮಹಾಗಿರಿಯಿಂದಲಿ ಸಾಗಿ ಬಂದನ 1ಮಂದವಾರದಿ ಮಿಂದು ಮಡಿಗಳನು ಉಟ್ಟು ಕಾಣಿಕೆಯನಿಟ್ಟುಮಂದರಾಧರ ನೀನೆ ಗತಿಯೆಂದು ಬಂದು ಕೈಮುಗಿದುನಿಂದುವಂದಿಸುತ ಬಲ ಬಂದು ಚರಣದ್ವಂದ್ವಸೇವೆಯ ಕುಂದದರ್ಚಿಸಿದಂದುಗವ ಬಿಡಿಸೆಂದು ಪೇಳ್ದರೆ ಮಂದಹಾಸಾನಂದವೀವನು 2ಕಾಸುವೀಸದ ಬಡ್ಡಿ ಭಾಷೆಯನು ಬಿಡನು ನಮ್ಮೊಡೆಯನುದೇಶದೇಶದಿ ಕಷ್ಟ ತರಿಸುವನು ತಾನು ಭಕ್ತರ ಕಾಯುವನುಘಾಸಿಯಾಗದೆ ಧನಿಯ ಹಣವನುಸೂಸಿ ಕರುಣಾರಾಸ ರಾಜ್ಯದವಾಸವಾಗಿಹ ಒಕ್ಕಲಿಗರೆಂಬೀ ಸುಮನದಿಂ ಕೇಶವನ ಪದವ 3ಕಷ್ಟವಿಲ್ಲದೆ ಇಷ್ಟ ದೊರಕುವದು ನೆನೆದುಸುಖದಿಂ ಬಾಳುವದುದೃಷ್ಟಿಯಿಂದಲಿನೋಡುನಮ್ಮ ದೊರೆಯ ಹರಿಯಪರಿಯ ನೀನರಿಯಾಸಿಟ್ಟುಮಾಡುವ ಸ್ವಾಮಿನಿನ್ನೊಳಗಿಟ್ಟುಕೊಂಡರೆ ಕೆಟ್ಟು ಹೋಗುವಿಒಟ್ಟುಗೂಡಿಸಿ ತಟ್ಟನೆಲ್ಲ ಮುಂದಿಟ್ಟುಯಿರೆ ಕೈಗೊಟ್ಟು ಕಾಯುವ 4ಮಾನನಿಧಿ ಭಕ್ತರನು ಮನ್ನಿಸುವ ನಲಿವ ಕರುಣವ ಗೈವಭಾನುಕೋಟಿಪ್ರಕಾಶದಿಂದಿರುವ ಮೆರೆವ ಮಹಾನುಭಾವಏನನೆಂಬೆನು ಆದಿ ಶ್ರೀಲಕ್ಷ್ಮೀನಾರಾಯಣ ತಾನೆ ಕಾರ್ಕಳಸ್ಥಾನ ರಾಜಧಾನಿಯಲಿ ಮೆರೆವನನವರತದಿ ಶ್ರೀನಿವಾಸನ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಮಸ್ಕಾರ ಮಾಡುವೆನು ಭಾಸ್ಕರನಿಗೆನಮಸ್ಕಾರ ಮಾಡುವೆನುಪನಮಸ್ಕಾರ ಮಾಡುವೆ ಸಮವರ್ತಿ ತಾತಗೆಕುಮುದವಿರೋಧಿಗೆ ಕಮಲಮಿತ್ರನಿಗೆಅ.ಪತಮವೆಂಬ ಯಾಮಿನಿಯ ನಿವಾರಿಸಿದ್ಯುಮಣಿಶೋಭಿಸೆ ಭೂಮಿಯನಮಿಸಿದ ಭಕ್ತರ ದೋಷನಾಶವಗೈದಅಮಿತ ಮಂಗಳದ್ವಯ ಅಯನ ಆದಿತ್ಯಗೆ1ಉರಗರೂ ಗಂಧರ್ವರು ಅಪ್ಸರ ಸ್ತ್ರೀಯರಧರಣಿಸುರರುಯಕ್ಷರುಪರಿಪರಿಯಲಿ ಬಂದು ಸೇವೆಯನೆಸಗಲುಭರದಿಂದ ಬರದಿ ಸಂಚರಿಸುವರ್ಕಗೆ2ಗಾಲಿ ಒಂದರ ರಥದೀ ಬಂಧಿಸಿದಂಥಏಳಶ್ವಗಳ ಮಧ್ಯದೀಕಾಲಿಲ್ಲದರುಣನು ಸಾರಥಿಯಾಗಿರೇಮೂರ್ಲೋಕವನು ಸುತ್ತಿ ಬೆಳಗುವ ತರಣಿಗೆ3ಮಾಸಕ್ಕೆ ಒಂದೊಂದರ ಸಂಖ್ಯೆಯೊಳ್ರಾಶಿ ಚಕ್ರದಿ ಸಂಚಾರದೇಶದಿ ಪ್ರಾಣಿಗಳಾಯುಷ್ಯವ ಸೆಳೆಯುವದೋಷವರ್ಜಿತ ಕಮಳಸಾಕ್ಷಿ ಮಾರ್ತಾಂಡಗೆ4ಹಿರಣ್ಯರೇತಸ್ಸುಭಾನುನವಗ್ರಹಾ-ದ್ಯರೊಳು ಶೋಭಿಸುತೀರ್ಪನುಧರಣಿಗೆ ಲಕ್ಷಯೋಜನ ದೂರ ತೋರುವಹರ ಗೋವಿಂದ ದಾಸನೊಡೆಯ ಪ್ರಭಾಕರಗೆ ನಮಸ್ಕಾರ5xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ನಮೋ ನಮಸ್ತೇ ಉಮಾತನಯ ಕುಮಾರಾಗ್ರಜ ಪ.ಅಮೋಘ ಶಮದಮಾದಿಗುಣಸಮೂಹ ಗತವಿಮೋಹ ಸದಾ ಅ.ಪ.ಭಾರತವ ಬಾದರಾಯಣನು ಪೇಳಿದಂತೆ ಬರೆದೆ ಭಾರತವಮಾರಜ ಭ್ರಮೆಯ ದೂರಗೈದ ಸುವಿ-ಚಾರಧೀರ ಸುರವಾರವಿನುತ ಪದ 1ವಂದಿಸುವೆವೃಂದಾರಕೇಂದ್ರಯೋಗೀಂದ್ರತವಚರಣಕೆ ವಂದಿಸುವೆವೃಂದಾರಮಂದಾರಚಂದನಚರ್ಚಿತಚಂದ್ರಚೂಡ ಮನೋನಂದ ಮೂರುತಿಯೆ 2ಸುಕ್ಷೇಮವಸುಜನಪಕ್ಷಪಾವನಮುಮುಕ್ಷುಜನಪ್ರಿಯ ಸುಕ್ಷೇಮದಲಕ್ಷ್ಮೀನಾರಾಯಣ ಲಕ್ಷಿತಾತ್ಮನೆ ವಿ-ಪಕ್ಷರಕ್ಷೋಗಣಶಿಕ್ಷ ಸೂಕ್ಷ್ಮ ಮತೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಮೋ ನಮೋ ಕಾಲಭೈರವ ಹರಿಯ ಚರಣ-ಸಮೀಪದೊಳಗಿದ್ದು ಮೆರೆವ ಪ.ಸಮೀಚೀನಜ್ಞಾನಭಕ್ತ-ಸಮೂಹವಕಾವಲಕ್ಷ್ಮೀ-ರಮಣನ ಕಾರ್ಯಮಂತ್ರಿ-ಯು ಮಾಧವನ ಸಮಾನಬಲ ಅ.ಪ.ಬೆಟ್ಟದೊಡೆಯ ಶ್ರೀನಿವಾಸನ ಪಾದಕಮಲ-ಮುಟ್ಟಿ ಭಜಿಪ ವೈರಿಮರ್ದನಸೃಷ್ಟಿ ಮೂರರಲ್ಲಿ ಕೀರ್ತಿ-ಪಟ್ಟ ದಿಟ್ಟ ಧೀರಪರಮನಿಷ್ಠ ಪುಷ್ಪ ತುಷ್ಟಿಪ್ರದ ಬ-ಲಿಷ್ಠ ಶ್ರೇಷ್ಠ ಭೂತಪತಿಯೆ 1ಶ್ರೀನಿವಾಸನಾಜೆÕ ಮೀರದೆ ನಡೆಸುವದೆ ಪ್ರ-ಧಾನ ಕಾರ್ಯ ನಿನ್ನದೆಂಬುದೆತಾನು ಕಿಂಚಿದರಿತು ಸನ್ನಿ-ಧಾನವನ್ನೋಲೈಸಿ ಬಂದೆದೀನಬಂಧು ಸುಗುಣಸಿಂಧುಮಾನತ್ರಾಣವಿತ್ತು ಸಲಹೊ 2ಅಂತರಂಗದಲ್ಲಿ ಪ್ರಾರ್ಥನೆ-ಮಾಡಿದರೆಸ್ವಂತ ಬಂದುಮಾಡುರಕ್ಷಣೆಅಂತ್ಯಕಾಲದಲ್ಲಿ ಹರಿಯಚಿಂತನೆಗೆ ವಿಘ್ನ ಬಾರ-ದಂತೆಕಾವಮಹಾ ತೇಜೋ-ವಂತ ಹೊಂಕಾರಿಸೂರಿ3ಕಾಲಕಾಲದಲ್ಲಿ ಭಕ್ತರ ಮನೋಭೀಷ್ಟಪಾಲಿಸುವ ಚಂದ್ರಶೇಖರಖೂಳಜನರ ಗರ್ವಮುರಿವಶೂಲಪಾಣಿ ಸುಗುಣಶ್ರೇಣಿಮೂಲಪತಿಯ ಪಾದಪದ್ಮಮೂಲದೊಳಗೆ ನಲಿವ ಚೆಲುವ 4ತೋರಿಕೊಳ್ಳದೆಭೂರಿಮಹಿಮೆಯ ಭಕ್ತರಿಂಗಾ-ಧಾರವಾಗಿ ರಾಜಿಸಿರುವೆಯಧೀರ ಲಕ್ಷ್ಮೀನಾರಾಯಣನಸೇರಿದಾನತರ್ಗೆ ಮಂ-ದಾರಮಹೋದಾರ ಗಂ-ಭೀರ ಧೀರ ಚಾರುಚರಿತ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಮೋ ನಮೋ ಪಾರ್ವತಿ ನಿನಗೇ |ಸಮೀರಜನಕ ಒಲಿಯಲೆನಗೇ ಪಬಂದಾ ರಾಯರ ಶಕ್ತಿ ಬಂಧನ ಮಾಡಿ ಯೋಗಾ |ಸಂಧಿಸಿ ಕೊಡು ರಾಮಚಂದ್ರನಿಗೇ 1ಕ್ರೂರಾ ರಾವಣ ನಿಂತು ದೂರೆ ಮಾಡಿದ ಮಾತು |ಈ ರಾಯರಿಗೆಸ್ಮøತಿಹಾರಿಸಮ್ಮಾ 2ಪ್ರಾಣೇಶ ವಿಠಲಾನೆ ಆಣುಮನಾದರೆ |ನಾನೆಂದು ಮರಿಯೆ ನಿನ್ನನು ದೇವಿ 3
--------------
ಪ್ರಾಣೇಶದಾಸರು