ಒಟ್ಟು 8803 ಕಡೆಗಳಲ್ಲಿ , 129 ದಾಸರು , 4024 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃತ್ತಿಕೋತ್ಸವ ಗೀತೆ ಕೃತ್ತಿಕೋತ್ಸವ ನೋಡುವ ಬಾರೆ ನ ಮ್ಮಾರ್ತಿಯ ಪರಿಹರಿಪನು ನೀರೆ ಪ. ಬಹುಚಂದದಿ [ನಿಂದ]1 ಚಂದಂದಾಭರಣ ತೊಟ್ಟನೆ ಅರ್ತಿಯಿಂದಲೆ ತಾ ಪೊರಟಾನೆ 2 ಮಹಾಧ್ಯಾನದ ಮೇಲಿರಿಸಿ ಭಕ್ತವತ್ಸಲನಾಲಯಕೆಲ್ಲ 3 ಯಾರದಿಂದಲೆ ಶ್ರೀರಂಗನೇರಿ ಚಕ್ರಮೂರುತಿಯಮಂಟಪದಲ್ಲಿ 4 ಪಂದ (?)ವನಿತ್ತಾನೆ ಮುದದಿ ಲಕ್ಷ್ಮಿಗೆ ಸೇವೆ ಕೊಟ್ಟಾನೆ 5 ಆಳುಗಳ ಕೈಲಿತ್ತು ಪೊರೆದಾನೆ ಭಕ್ತರ ಹಸ್ತದಲಿ ಚಿತ್ತೈಸಿದನೆ 6 ಇಂದಿರೆರಮಣ ಗೋವಿಂದನೆ ಭವಬಂಧನಂಗಳನೆಲ್ಲ ಕಳೆವನೆ 7 ಅರ್ತಿಯಿಂದಲೆ ನೋಡಿದವರಿಗೆ ಮುಕ್ತಿಯ ಕೊಡುವನು ಸತ್ಯವಿದು 8
--------------
ಯದುಗಿರಿಯಮ್ಮ
ಕೃತ್ತಿವಾಸ ಪೂಜ್ಯ ಚರಣೇ | ಮಹತತ್ವಮಾನಿ ಸತಿಯೆ ಸುಗುಣೆ ||ಅ|| ನಿತ್ಯ ನೀಡೆ ಹರಿಯ ಸ್ಮರಣೆ ಅ.ಪ. ವಿಧ್ಯುದ್ವಾಕ್ ದಿಙËಮಾನಿಯೆ | ಹೇದ್ಯುಪೃಥಿವಿ ಭಾರತೀಯೇಪ್ರದ್ಯುಮ್ನ ಕೃತಿಗೆ ಕುಮಾರಿಯೆ | ಬುಧ್ಯಾಭಿಮಾನಿಯೇ ಕಾಯೆವಿದ್ಯುತಿಸ್ಥಿತಿ | ಬುಧ್ಯಾಬ್ದಿಯೆ | ವಿಧ್ಯೇತರ | ಅವಿಧ್ಯೆಯ ಕಳೆಸದ್ಯೋಜನ | ಶ್ರದ್ದಾಂಬಾ | ಮದ್ದೇಹದಿ | ಸಿದ್ಧಿಸು ಹರಿ 1 ಮಂದ ಪತಿ | ಸುಂದರ ಪದ | ಸಂಧಿಸು ಮನ | ಮಂದಿರದಲಿ 2 ಭಿಕ್ಷೆ ನೀಡೆ ತಾಯೇ | ಯುಕುತಿ ಶಾಸ್ತ್ರ ಒಂದನರಿಯೇಸೌಖ್ಯ ತೀರ್ಥ ಮತವನ್ವೊರೆಯೇ ಮುಕುತಿ ಮಾರ್ಗ ತೋರಿ ಪೊರೆಯೇ ||ತೋಕನು ಎನೆ | ಸ್ವೀಕರಿಸುತ | ಲೋಕರುಗಳ | ವಾಕನು ದೂ-ರೀಕರಿಸು ಪ | ರಾಕೆನ್ನುವೆ | ಭೀಕರಭವ | ನೀ ಕರಗಿಸು 3 ಕಡಗ ಕಂಕಣ ದ್ವಾರ ಧಾರೆ | ಜಡಿತ ದುಂಗುರ ದೋಷ ದೂರೆಮುಡಿದ ಮಲ್ಲಿಗೆ ಕುಂಚುಕಧಾರೆ | ಉಡುಗೆ ಬಿಳುಪಿನಂಬರೆ ನೀರೇ || ಒಡ ನಡುವು | ನಿಡಿತೋಳೂ | ತೊಡೆಕದಳೀ | ಬಡುವು ಪರೀ |ಅಡಿಗೆರಗುವೆ | ಪೊಡ ವೀಶನ | ಧೃಡ ಭಕುತಿ | ತಡೆಯದೆ ಕೊಡು4 ಶರಣು ಮುಂದಣ ವಾಣಿ ಕರುಣ | ಗುರು ಗೋವಿಂದ ವಿಠಲ ಚರಣಾ |ಭರಣವೆನಿಪ ಸುಗುಣ ಗಣಾ | ಒರೆದು ಕಳೆಯೆ ಭವದ ಬಂಧನ |ಮಾರಯ್ಯನ | ಆರಾಧನೆ | ಚಾರೀಸದೆ | ಧಾರಾಣಿಗೆಭಾರಾದೆನು | ಕಾರುಣ್ಯವ | ತೋರೂವುದು ಭಾರತಿಯೇ 5
--------------
ಗುರುಗೋವಿಂದವಿಠಲರು
ಕೃಪಣ ಶ್ರೀಪಾದಾರ್ಚನೆಯನಿತ್ತು ಪ ಅಪಾರ ಜನುಮದ ಪಾಪೌಘ ಬೆನ್ನಟ್ಟಿ ತಾಪಗೊಳಿಸುತ್ತಿದೆ ಈ ಪರಿಭವದೊಳು ಅ.ಪ. ಪತಿತ ನಾನಾದರೂ ಪತಿತ ಪಾವನ ನೀನು ಪಶುಪತಿ ಪಾಪಹರ ಗತಿಹೀನರಿಗೆ ನೀನೆ ಗತಿದರ್ಶಕನೆಂದು ತುತಿಸುತ್ತಿಹುದು ವೇದತತಿ ಸಮ್ಮತವಾಗಿ 1 ಭವಭವದಲಿ ಬಂದು ಬವಣೆಗಳಲಿ ಬೆಂದು ಬಳಲಿದೆ ಭಕ್ತ ಬಂಧು ಭವಹರ ನೀನೆಂಬುದನು ಭವಿಗಳಿಂ ನಿತ್ಯ ಶ್ರವಣದಿ ಕೇಳಿ ನಿನ್ನವರವನೆನಿಸಿದೆ 2 ಗೌರಿ ಮನೋಹರ ಗೌರಾಂಗ ಭಕ್ತರು ದ್ಧಾರಿಯೆ ಶೂಲಧರ ಸಾರಿದೆ ನಿನ್ನಂಘ್ರಿವಾರಿಜಯುಗಳವ ಕಾರುಣ್ಯದಲಿ ನೋಡು ಅಭಯವ ನೀಡು 3 ಮುಪ್ಪುರಹರ ಮುಕ್ಕಣ್ಣ ಗಂಗಾಧರ ಮೃತ್ಯು ಮೃತ್ಯುವೆ ಶಂಕರಾ ಸರ್ಪಭೂಷಣ ಅಪಮೃತ್ಯು ನಿವಾರಣ ಕಪ್ಪುಗೊರಳ ಕೃತ್ತಿವಾಸ ಸುರೇಶ 4 ಅಜ ಸಂತನಧ್ವರ ಭಜನೆಯ ಕೆಡಿಸಿದ ವಿಜಯ ವಿಗ್ರಹ ಶರೀರ ಸುಜನರ ಹೃದಯಾಂಬುಜದಲ್ಲಿ ಮಿನುಗುವ ರಜದೂರ ಶ್ರೀಕಾಂತ ನಿಜಭಕ್ತ ಗುರುವರ 5
--------------
ಲಕ್ಷ್ಮೀನಾರಯಣರಾಯರು
ಕೃಪೆ ನಿಮ್ಮದಾಗಬೇಕು ಸ್ವಾಮಿ ನಿಮ್ಮರಿಯಲಿಕ್ಕೆ ಅಪಾರ ಮಹಿಮೆ ನಿಮ್ಮ ಸುಂಪಾದ ತಿಳಿಯಲಿಕ್ಕೆ ಧ್ರುವ ಭ್ರಾಂತಗೆಲ್ಲಿಹುದಯ್ಯ ಪೂರ್ಣನಿಂತ ನಿಲಕಡೆಙÁ್ಞನ | ಎಂತುಹೇಳಿದರ ಖೂನ ಶಾಂತಹೊಂದದಯ್ಯಮನ | ಪಂಥ ಪರಮ ಗುಹ್ಯಸ್ಥಾನ ತಂತುವಿಡಿಯಲು ನಿರ್ಗುಣ | ಅಂತು ಇಂತು ಎಂಬುಂದೆ ನಾನಂತ ಗುನ ನಿಧಾನ 1 ಖೂನ ತಿಳಿಯಲಿಕ್ಯಗಾಧಗುರು ನಿಮ್ಮಶ್ರೀಪಾದ | ಬೋಧ ನೀಡಬೇಕು ಸುಪ್ರಸಾದ | ನೀನೆವೆ ನಿತ್ಯವಾದ ವಸ್ತು ಪರಿಪೂರ್ಣ ಸದಾ | ದೀನ ಬಂಧು ದಯದಿಂದ ಖೂನದೋರೊ ಆಶ್ರಯದ 2 ಮಂದ ಮತಿ ನಾನು ಭಕ್ತಿ ಮಾಡಲರಿಯೆನು ಒಡಿಯನಹುದಯ್ಯ ನೀನುಮಹಿಪತಿಯ ಕಾಮಧೇನು ಕೊಡಲಿಕ್ಕೆ ಪೂರ್ಣ ನೀನು ಸ್ವಾಮಿ ಕಾವ ಕರುಣನು ಪಿಡಿದಿಹ್ಯ ನಿಮ್ಮ ನಾನು ದಿವ್ಯ ಪಾದಪದ್ಮವನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಪೆಯಿರಲಿ ಸ್ವಾಮಿ ಕೃಪೆಯಿರಲಿ ಅಪರಿಗಣ್ಯ ಸುಗುಣಾಂಬುಧಿ ಹರಿ ನಿನ್ನ ಪ. ಬೇರಿಗೆ ದಿವ್ಯ ಕಾವೇರಿ ನದಿಯ ಜಲ ಧಾರೆಯಿರಲು ಕೊಂಬೆಗಳುಬ್ಬಿ ಸಾರಭರಿತ ಫಲದೋರುವ ತರುವಂತೆ ಧಾರುಣಿಪರು ಕೈ ಸೇರುವರು 1 ಶತ್ರುಗಳಂಜಿ ಬಗ್ಗುವರು ಕಾಳ ಕೂಟ ಪಥ್ಯವಾಗುವುದು ನಿನ್ನಣುಗರಿಗೆ ನಿತ್ಯ ಮಾಡುವಾ ದುಷ್ಕøತವೆಲ್ಲವು ಪರ- ಮೋತ್ತಮ ಧರ್ಮಕರ್ಮಗಳಾಹಲೂ 2 ಕನಸು ಮನಸಿನಲ್ಲಿ ನೆನೆಸುವ ಕಾರ್ಯಗ- ಳನುಕೂಲವಾಗುವದನುದಿನವು ಮನಸಿಜನಯ್ಯ ನೀನನುವಾಗಿರೆ ಸರ್ವ ಜನರೆಲ್ಲರು ಬಹು ಮನ್ನಿಸುವರು 3 ಋಗ್ಯಜುಸ್ಸಾಮಾಥರ್ವಣಗಳೆಂಬ ವೇದ ಸ- ಮಗ್ರ ನೀ ಕರುಣಿಸಿ ಒಲಿದಿರಲು ಸುಜ್ಞಾನ ಭಕ್ತಿ ವೈರಾಗ್ಯ ಸಹಿತವಾಗಿ ಭಾಗ್ಯದೇವತೆ ಕೈ ಸೇರುವಳು 4 ಈ ಕಾರಣದಿಂದನೇಕರ ಬಯಸದೆ ಶ್ರೀಕರ ನೀ ಕರುಣಿಸಿದರಿಂದು ಸಾಕೆಂದೊದರುವೆನೇಕಮನದಲಿ ದ- ಯಾಕರ ವೆಂಕಟರಮಣನಿಂದು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕೃಷ್ಣ ಎಂಥಾದೊ ನಿನ್ನ ಕರುಣ ಶಿಷ್ಯ ಜನರುದ್ದೇಶಬಂದ್ಯೊ ನೀ ಕರುಣ ದುಷ್ಟಜನರ ಮಾಡಿದ್ಯೊ ನೀ ಮರ್ದನಿ ದೃಷ್ಟಿಸಿ ಮಾಡುವೆ ಸಾಧು ಸಂರಕ್ಷಣೆ 1 ಹುಟ್ಟಿ ವಸುದೇವನಲ್ಲಿ ಬಂದು ಹೊಳೆದ್ಯೊ ದಿಟ್ಟತನದಲಿ ನಂದಗೋಕುಲದಿ ಬೆಳೆದ್ಯೊ ಮೆಟ್ಟಿ ವಿಷದ ಹಾವಿನ ಹೆಡೆಯ ತುಳಿದ್ಯೊ ಕುಟ್ಟಿ ಕಂಸಾಸುರನ ಪ್ರಾಣವೆಳೆದ್ಯೊ 2 ಮೊಲಿಯನುಂಡು ಕೊಂಡಿ ಪೂತನಿ ಪ್ರಾಣ ಕಾಲಿಲೊದ್ದು ಕೊಂದ್ಯೋ ಶಕಟಾಸುರನ ಬಾಲತನದಲಿ ಕೆಡಹಿದ್ಯೊ ಮಾವನ ನೆಲೆಯು ತಿಳಿಯದು ಇನ್ನೊಬ್ಬರಿಗೆ ಪೂರ್ಣ 3 ತುರುಗಳ ಕಾಯ್ದ್ಯೊ ನೀ ಗೋವಿಂದ ಬೆರಳೆಲೆತ್ತಿದ್ಯೊ ಹಿರಿಯ ಮುಕುಂದ ಮರುಳು ಮಾಡಿದ್ಯೊ ಗೋಪಿಕೇರ ವೃಂದ ಹರುಷಗೈಸಿದೆ ಅನೇಕ ಪರಿಯಿಂದ 4 ಹಾಲು ಬೆಣ್ಣೆ ಕದ್ದು ತಿಂಬು ನಿನ್ನಾಟ ಬಾಲಗೋಪಾಲರ ಕೂಡಿ ನಿನ್ನೂಟ ಚಲುವ ನಾರೇರ ನೋಡುವ ನಿನ್ನೋಟ ಒಲಿದು ಕುಬ್ಜಿಯ ಬೆನ್ನ ಮಾಡಿದ್ಯೊ ನೀಟ 5 ಗುರುಮಗನ ತಂದುಕೊಟ್ಯೋ ನೀ ಪ್ರಾಣ ಸುರಬ್ರಹ್ಮಾದಿಗಳರಿಯರು ನಿನ್ನ ತ್ರಾಣ ಶರಣಾಗತರ ವಜ್ರಪಂಜರು ಪೂರ್ಣ ವರಮುನಿಗಳಿಗಾಗಿಹೆ ನೀ ನಿಧಾನ 6 ಒಲಿದು ಪಾಂಡವರಿ ಗಾದಿ ಸಹಕಾರಿ ಬಲವ ಮುರಿದ್ಯೊ ನೀ ಕೌರವರ ಸಂಹಾರಿ ಪರಿ ಅಟ ನಿನ್ನದೊ ಶ್ರೀ ಹರಿ ಪರಿ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃಷ್ಣ ಎನಗೆ ಬಂದರಿಷ್ಟವ ಕಳೆದು ನಿನ್ನ ನಿಷ್ಠೆಯಲಿ ಇರುವಂತೆ ಇಷ್ಟೆ ಮಾತುರವೀಯೋ ಪ ನಿರ್ದೋಷ ಗುಣವಾರುಧಿ ನಿರ್ಧಾರವಾಗಿ ನುಡಿವೆ ಸಿದ್ಧಾಂತ ಮತದಲಿ ಪೊದ್ದಿಪದೆ ಸಾಕು 1 ಅಜ ಭವಾದ್ಯರು ನಿನ್ನ ಭಜಿಪರಾರು ದೋಷ ಮಾನವ ತಿಳಿದು ಭಜಿಸಬಲ್ಲೆನೆ ದೇವಾ 2 ಮಧ್ವ ಸರೋವರದಲ್ಲಿ ಇದ್ದು ಪೂಜೆಯಗೊಂಬ ಮುದ್ದು ವಿಜಯವಿಠಲ ಬಿದ್ದೆ ನಿನ್ನಯ ಪದಕೆ 3
--------------
ವಿಜಯದಾಸ
ಕೃಷ್ಣ ಕದ್ದು ಬಂದೆನಯ್ಯ ರಂಗ ಮದ್ದು ಕಾಣೆನಯ್ಯ ಕಣ್ಣು ಕೊಟ್ಟು ಇಟ್ಟೆ ಇಲ್ಲಿ ನಿನ್ನ ನೋಡಲೆಂದು ಪ ನಾನು ನನ್ನದೆಂದು ಭ್ರಾಂತಿ ತಂದುಕೊಂಡೆನಯ್ಯ ನಿನ್ನದೆನ್ನದೆಂದೆ ನಾನು ನನ್ನ ಬಿಟ್ಟು ನೀನು ನಿಂತೆ ಅ.ಪ ಎಲ್ಲಿ ಇಲ್ಲ ನೀನು ದೇವ ಕುಂದು ಕೊರತೆಯುಂಟೆ ನಿನಗೆ ಖುಲ್ಲಮೋಹವೆಂಬ ಮೋಡ ನಿನ್ನ ಬೆಳಕು ಮುಚ್ಚಿತಯ್ಯ ಕಾಲಕಳೆದು ಕಲಿತೆ ನಿನ್ನ ಕಾಲುಬಿಟ್ಟರಿಲ್ಲ ಕೂಲ ಸೇರಿಸಯ್ಯ ಬೇರೆ ದಾರಿಯಿಲ್ಲವಯ್ಯ 1 ಅರಿತು ಪೇಳ್ವೆನಯ್ಯ ಕೃಷ್ಣ ನೀನು ಹೇಳಿ ಕೊಟ್ಟೆ ಆಗ ಬರಿದೆ ಕೆಟ್ಟು ಹೋದೆ ದೇವ ಒಳಿತು ಮಾಡವಯ್ಯ ಈಗ ಮರೆತು ನಿಲ್ಲಲಾರೆ ನಿನ್ನ ಕಲೆತುಬಂದು ನಿಲ್ಲೊ ನೀನು [ವರ]ಶೆಲ್ವ ಭಾಗ್ಯವಯ್ಯ ನೀನು ಭೋಗಮೋಕ್ಷವಯ್ಯ ದೇವ2
--------------
ಸಂಪತ್ತಯ್ಯಂಗಾರ್
ಕೃಷ್ಣ ಕೃಷ್ಣ ಕೃಷ್ಣ ಕೃಷ್ಣ ಕೃಷ್ಣ ನಿನ್ನ ನೋಡುವೆ ಪ. ಹಾಡಿ ದಣಿಯುವೆ ಅ.ಪ ಅನುದಿನದಿ ನಿನ್ನ ನಾಮ ನೆನೆಯುವಂತೆ ಜಿಹ್ವೆಯಲ್ಲಿ ನಿತ್ಯ 1 ಹರುಷದಿಂದ ನಿನ್ನ ನಾಮ ಸ್ಮರಿಸುವೆನೋ ದೇವ ದೇವ ಎನ್ನ ಮರಣ ಸಮಯದಲ್ಲಿ ನಿನ್ನ ಸ್ಮರಣೆ ಇತ್ತು ಕಾಯೋ 2 ಮೊದಲಿನಿಂದ ಭಜಿಸಿದೆನಾ ಹೃದಯದಲ್ಲಿ ನೋಯುತಿರುವೆ ಮುದದಿ ಬಂದು ಎನ್ನ ಜಿಹ್ವೆಗೊದಗೊ ಆಗ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ಕೃಷ್ಣ ಕೃಷ್ಣ ಬೇಡಿಕೊಂಡೆ ಕೃಪೆಯ ಪಾಲಿಸೋ ಪ ಎಷ್ಟು ಎಷ್ಟು ಕೇಳಿಕೊಂಡೆ ಎಳ್ಳಷ್ಟು ದಯಬಾರದೇ ಅ.ಪ ಬಳಲುತಿಹೆನು ಎತ್ತೋ ಕರುಣಿ 1 ನಿನ್ನ ಬಿಟ್ಟು ಇರುವೆನೆನೋ ನಿನ್ನದಯದಿ ನನ್ನ ಬದುಕು ನಿನ್ನ ಮರೆತೆ ತಪ್ಪುಕ್ಷಮಿಸು ನಿನ್ನ ದಾಸ ಪ್ರಾಣರಾಣೆ2 ಈಗ ಆಗ ಎಂದು ಹೇಳಿ ಭೋಗದಲ್ಲೇ ರತಿಯ ನೀಡಿ ನಾಗಶಯನ ನಾಮಸುಧೆಯ ಬೇಗ ಕೊಡದೆ ಬಿಡುವರೇನೋ3 ದಾಸನೆಂದು ಭಕ್ತಿಯಿತ್ತು ನಾಶಮಾಡೋ ಕುಂದುಗಳ ನೀ4 ಲೋಕವೆಲ್ಲ ಪೊರೆದ ನಿನಗೆ ಸಾಕೆ ಎನ್ನ ಕಷ್ಟವೇನೋ ನಾಕ ದೊರೆಯೆ ಪುಣ್ಯಶ್ಲೋಕ 5 ಬರಿಯ ಶುಂಠ ನಾನು ಹರಿಯೆ ಅರಿಯೆದಾರಿ ವಲಿಸೆನಿನ್ನ ಶರಣ ಜನರ ಬಿಡನು ಎಂಬ ಬಿರುದೊಂದೆ ಧೈರ್ಯವೆನಗೆ 6 ಶಿರಿಯರಮಣ “ಕೃಷ್ಣವಿಠಲ” ಶರಣು ಜ್ಞಾನ ಸುಖದ ಚರಣವೆರಡು ತೋರಿಸೆನಗೆ ನಿರುತ ಹೃದಯ ಕಮಲದಲ್ಲಿ 7
--------------
ಕೃಷ್ಣವಿಠಲದಾಸರು
ಕೃಷ್ಣ ಪಾಲಿಸು ಪರಮ ಕೃಪಾಲಯ ಪ. ಪಾಲಿಸು ನಿನ್ನಯ ಬಾಲನು ಬೇಡುವ ಬಯಕೆಯ ಲಕ್ಷ್ಮೀ- ಲೊಲ ನೀ ಕರದು ತಾರಾಕೆಯ ಅ.ಪ. ತುರುವು ಮೊಲೆಯನುಂಬ ಕರುವಿನ ಬೆನ್ನನು ತುರಿಸುತ ತಿರುಗುವ ತೆರದಲಿ ನೀ- ನಿರುವಿಯೆಂದರಿದೆನು ಮನದಲಿ ಚರಣ ಪಂಕಜಗಳ ಶರಣ ಹೊಕ್ಕೆನ್ನನು- ದ್ಧರಿಸು ಶ್ರೀಕಾಂತ ಗುಣದಲಿ ಸ್ವೀ- ಕರಿಸುತ ನನ್ನ ನಿನ್ನ ಕೆಲದಲ್ಲಿ 1 ಖಗರಾಜ ಭೂಧರವರ ನಾಗಭೂಷಣ ಶಕ್ರ ಪೂಜಿತ ನಿನ್ನಾ- ವಾಗ ಕಾಂಬೆನು ಗೃಹರಾಜಿತ ಮೂಗಭಾವದ ತಪ್ಪ ಮನಕೆ ತರುವರೆ ಮ- ಹಾ ಗಣಪತಿ ಶಬ್ದ ವಾಚ್ಯನೆ ಎನ್ನ ಬೇಗ ಕರೆಸು ಸರ್ವಾಧ್ಯಕ್ಷನೆ 2 ಎಲ್ಲವು ನಿನಗೊಪ್ಪಿಸುವೆ ಎಂಬುದ ನೀ ಬಲ್ಲಿ ಶ್ರೀಭೂರಮೆನಲ್ಲನೆ ಎನ- ಗಿಲ್ಲ ಭಾರವು ಜಗಮಲ್ಲನೆ ತಲ್ಲಣ ಬಿಡಿಸಿ ಪಾಲಿಸು ಶಿರದಲಿ ಪದ ಪಲ್ಲವನನು ವೆಂಕಟೇಶನೆ ಸರಿ- ಯಲ್ಲ ನಿನಗೆ ಶ್ರೀನಿವಾಸನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಕೃಷ್ಣ ಭವರೋಗದ ಮದ್ದುಕೃಷ್ಣ ಅಭಿಮಾನವ ಕಾಯ್ವಾತ ನಿಂದಲ್ಲಿದ್ದುಪ. ದುಷ್ಟ ದನುಜರ ಹುಡಿಗುಟ್ಟಿ ನಂಬಿದ ಸುರರದಿಟ್ಟರ ಮಾಡಿದ ಜಗಜಟ್ಟಿ ರಂಗ ಧೀರ1 ಪಾದ 2 ಮಧ್ವರ ಪೂಜಿತ ಪಯೋಬ್ಧಿ ತನುಜೆಯರಸಹೃದ್ಯ ಹಯವದನ ಸಮೃದ್ಧ ವೈಕುಂಠಾಧೀಶ 3
--------------
ವಾದಿರಾಜ
ಕೃಷ್ಣ ಮುರಾರಿ ಕೇಶವ ಮುರಾರಿಅಚ್ಚುತಾನಂತ ಗೋವಿಂದ ಮುರಾರಿಪ. ವೇಷಧಾರಿಯಾಗಿ ಬಂದು ಅಸುರರ ಸಂಹರಿಸಿಭೂಸುರರಿಗ್ವೊರವನಿತ್ತ್ಯೋ ಕೇಶವ ಮುರಾರಿ 1 ನಾ ತಾಳಲಾರೆನೊ ಲೋಕಾಧಿಪತಿಯೆ ಕಾಯೊಅನಾಥರಕ್ಷಕ ನಾರಾಯಣನೆ ಮುರಾರಿ 2 ಮಾಧವ ಮುರಾರಿ3 ಅನೇಕ ಗೋವ್ಗಳ ಕಾಯ್ದ ಗೋಪಾಲಮೂರುತಿಗೋಪಿಯರರಸ ಗೋವಿಂದ ಮುರಾರಿ 4 ಕಟ್ಟಿದ ಕಾಮನೆಯ ಬಿಟ್ಟು ಕಳಚಿ ಮನ-ದಿಷ್ಟಾರ್ಥವನೀವ ವಿಷ್ಣು ಮುರಾರಿ 5 ಮಧುರವಾಕ್ಯಗಳಿಂದ ಮಂದಿರಕಾಗಿ ಬಾರೊಮನಸಿಜನಯ್ಯ ಮಧುಸೂದನ ಮುರಾರಿ 6 ತಿದ್ದಿದ ಕಸ್ತುರಿತಿಲಕ ತಿಗುರಿದ ಪರಿಮಳಗಂಧಮುದ್ದು ನಸುನಗೆಯ ತ್ರಿವಿಕ್ರಮ ಮುರಾರಿ7 ಕಾಮಿನಿ ಅಗಲಿಬಂದು ಸೀಮೆನಾಳುವೆÀನೆಂದುನೇಮವಾಕ್ಯದಿ ನಿಂದ ವಾಮನ ಮುರಾರಿ 8 ಶ್ರೀಯರಸ ಮೇಳದಿ ರಮಿಸಿ ಬಹುಕಾಲದಿಸಿಂಧುಶಯನ ಶ್ರೀಧರನೆ ಮುರಾರಿ 9 ಋಷಿಗಳಿಗ್ವರವಿತ್ತು ಬೃಂದಾವನದಲ್ಲಿ ನಿಂದುಹರುಷವಾರಿಧಿ ಹೃಷಿಕೇಶ ಮುರಾರಿ 10 ಪಾವನ್ನ ಮೂರುತಿ ಪರಮದಯಾಳು ನೀನೆಪಾಲಿಸೊ ಶ್ರೀಪದ್ಮನಾಭ ಮುರಾರಿ11 ದಾನವರ ಮರ್ದಿಸಿ ಸುಮನಸರಿಗೊಲಿದದಾನದತ್ತನೆ ದಾಮೋದರನೆ ಮುರಾರಿ 12 ಶಂಕೆಯಿಲ್ಲದೆ ಗೆಲಿಸು ಶಂಖಚಕ್ರವ ಧÀರಿಸಿ ಅ-ಲಂಕಾರವಾದ ಸಂಕರ್ಷಣನೆ ಮುರಾರಿ 13 ವಾಸುದೇವ ಮುರಾರಿ 14 ಇದ್ದ ಗೋಪೇರಮನೆಯ ಕದ್ದು ಬೆಣ್ಣೆಯ ಮೆದ್ದಪದ್ಮದಳಾಕ್ಷ ಪ್ರದ್ಯುಮ್ನ ಮುರಾರಿ 15 ಅನಿರುದ್ಧ ಮುರಾರಿ16 ಪುನಗು ಕಸ್ತೂರಿಗಂಧ ಪರಿಮಳಪುಷ್ಪದಿಂದ ಪುಣ್ಯಮೂರುತಿ ಪುರುಷೋತ್ತಮನೆ ಮುರಾರಿ 17 ಅವನಿ ಅಧೋಕ್ಷಜ ಮುರಾರಿ 18 ನಾನೇನ ಪೇಳಲಿ ನಗೆನಗೆಯಲ್ಲಿ ಅಕ್ಷಿಕ್ರೂರವಾಯಿತು ನಾರಸಿಂಹ ಮುರಾರಿ 19 ಮೆಚ್ಚಿದೆ ನಾ ನಿನ್ನ ಪಕ್ಷಿವಾಹನ ಸ್ವಾಮಿಮುಚ್ಚುಮರೆಗಳ್ಯಾಕೊ ಅಚ್ಚುತ ಮುರಾರಿ 20 ಜಾಣತನದಿ ಪೋಗಿ ಜಾರಸ್ತ್ರೀಯರನ್ನುಒಡಗೂಡಿ ಆಡಿದ ಜನಾರ್ದನ ಮುರಾರಿ21 ಉಗುರಲ್ಲಿ ಹಿರಣ್ಯಕನ ಸೀಳಿ ಉರದಲ್ಲಿ ಮಾಲೆಯ ಧರಿಸಿಉಬ್ಬಲ್ಲಿ ಮೆರೆದ ಉಪೇಂದ್ರ ಮುರಾರಿ 22 ಹಿರಣ್ಯಾಕ್ಷತನಯನಂದು ಕರೆಯೆ ಕಂಬದಿ ಬಂದಗರುವದಿಂದಲೆ ನರಹರಿಯೆ ಮುರಾರಿ 23 ಅಟ್ಟಡವಿಯ ತಪಸು ಎಷ್ಟುದಿನವೊ ಸ್ವಾಮಿಪಟ್ಟಣಕಾಗಿ ಬಾರೊ ಕೃಷ್ಣಮುರಾರಿ 24 ಎಲ್ಲರ ಸಲಹಿದ ಫುಲ್ಲಲೋಚನ ಸ್ವಾಮಿಪಾಲಿಸೊ ಶ್ರೀಹಯವದನ ಮುರಾರಿ 25
--------------
ವಾದಿರಾಜ
ಕೃಷ್ಣ ರುಕ್ಮಿಣಿ ವಿವಾಹದೈದು ದಿನದಲ್ಲಿ ಅರ್ಥಿ(ಯಿಂ)ಂದೋಕುಳಿಯನಾಡಿ ಕುಂಕುಮ ಗಂಧ ಬುಕ್ಕಿ ್ಹಟ್ಟಲೂ(ಲುರು?) ಟಣಿಯ ಮಾಡಿ ಆರತಿನೆತ್ತಿ ಮುತ್ತೈದೇರು ಪಾಡಿ ವೀಳ್ಯಗಳ ನೀಡಿ ಸರ್ಪಶಯನನು ತನ್ನ ಸತಿಯ ಎತ್ತಿ ಬರುವೋ ಕಾಲದಲ್ಲಿ ಚಿಕ್ಕ ಸುಭದ್ರೆ ತಾ ಬಾಗಿಲು ಕಟ್ಟಿ ತಾ ನಗುತ ನುಡಿದಳು 1 ಪಟ್ಟದರಸಿಕೂಡ ಮತ್ತೆಲ್ಲಿ ಪಯಣ ಈ ವಾರ್ತೆ ಹೇಳುವುದೆನಗೆ ಕೇಳುವೆ ಕೊಟ್ಟು ಎನಮನ ಕಾಮಿತಾರ್ಥವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 2 ನಾರಿಮಣಿಯೆ ನವರತ್ನದ ಹೆರಳು ಬಂ- ಗಾರ ರಾಗಟೆಯು ಗೊಂಡ್ಯ ಕಂಕಣ ವಂಕಿ ದ್ವಾರಾ ಹರಡಿಯು ಚೆಂದ ಒಪ್ಪುವ ಗೆಜ್ಜೆ ನಾಗಮುರಿಗೆಯು ಕಾಲ ಪೈಜಣ ಗೆಜ್ಜೆ ರುಳಿ ವೈಡೂರ್ಯದ್ವೊಡ್ಯಾಣವನೆ ಮಾಣಿಕ್ಯದ್ವಾಲೆ ಮೋಹನ್ಮಾಲೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 3 ಪಚ್ಚಮಾಣಿಕದ ಗೊಂಡ್ಯಗಳು ಬಾಜುಬಂದು ರತ್ನಹ್ಹೆರಳುಬಂಗಾರ ಕಂಕಣವಂಕಿ ಹಸ್ತಕಡಗವು ದ್ವಾರ್ಯ ಪುತ್ಥಳಿ ಏಕಾವಳಿಯ ಸರ ಚಿಂತಾಕು ಸರಿಗೆ ತೆತ್ತಿಸಿಯರಚಂದ್ರರಾಗಟೆÉ ಮತ್ತೆ ಎನಗಮ್ಮಯ್ಯಕೊಡುವಳು ಅರ್ಥಿಯಿಂದೀಗೆನ್ನ- ಮನೋರಥ ದಂiÀiಮಾಡಣ್ಣಯ್ಯ ಶ್ರೀಕೃಷ್ಣಯ್ಯ 4 ಹರದಿ ನಿನಗೆ ಹವಳದ ಕಾಲ್ವಜ್ರದ ಮಂಚ ಜರದ ಸುಪ್ಪತ್ತಿಗೆಯು ಹಾಸಿಕೆ ಲೋಡು ವರಪೀಠ ವಸನಂಗಳು ಚ- ಪ್ಪರ ಮಂಚಕ್ಕೊಲೆವೋ ಮುತ್ತಿನ ಗೊಂಚಲು ರವಿಪೋ- ಲ್ವ ರಥವು ಕರಿತುರಗ ಕರೆವೆಮ್ಮೆ ಗೋವ್ಗಳು ತರತರದ ಛತ್ತರಿಗೆ ಚಾಮರ ಜರತಾರಂಚಿನ ಸೀರೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 5 ಪನ್ನಂಗಶಯನ ಕೇಳೆನ್ನ ಗಲ್ಲದಲೊಪ್ಪೋ ಸಣ್ಣ ಮುತ್ತಿನ ಗೊಂಚಲು ದ್ರಾಕ್ಷಿಯ ಬಳ್ಳಿ ಹೊನ್ನಾ ್ವಲೆ ಸರಪಳಿಯು ಹೊಸ ಪ್ರೀತಿಯಲಿನ್ನು ನಾ ಬೇಡಿದ್ದು ಕೊಡುವನು ಮನ್ಮಥನ ಪಿತ ಎನ್ನ ಮನೋರಥ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 6 ಮುದ್ದು ಸುಭದ್ರ ಮೇಲಾದ ಜೊತೆಯ ಮುತ್ತು ವÀಜ್ರ ಕೆಂಪನು ಕೆತ್ತಿಸಿ ಕೊಡುವೆನೀಗ ತಿದ್ದಿ ಮಾಡಿದ ಮೂಗುತಿ ಪಾರ್ಥನ ರಥಕಿದ್ದು ಆಗುವೆ ಸಾರಥಿ ನಡೆಸುವೆನು ಕೀರ್ತಿ ಉಗ್ರಸೇನಗೆ ಹೇಳಿ ಇದರೊಳ- ಗರ್ಧ ರಾಜ್ಯವ ಕೊಡಿಸಿ ನಾ ನಿನ್ನುದ್ದ ಹಣ ಬಿಡು ತಂಗಿ ಕೋಮಲಾಂಗಿ 7 ಅಚ್ಚುತ ಬಲರಾಮರೆಂಬೊ ಎನಗೆ ಜೋಡು ಹೆಚ್ಚಿನ ಭುಜಗಳಿನ್ನು ಯಶೋದ ದೇವಕ್ಕಿ ರೋಹಿಣೀದೇವೇರು ಇರಲು ತಂದೆ ಶ್ರೇಷ್ಠನಾದ್ವಸುದೇವನು ನೀ ಕೊಡುವುದೇನು ಮುತ್ಯನಾಗಿದ್ದುಗ್ರಸೇನನು ಮತ್ತೆ ನಾ ಬೇಡಿದರೆ ಈ ಕ್ಷಣ ಕೊಟ್ಟು ಬಿಡನೇ- ನಧರ್À ರಾಜ್ಯವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 8 ಎಷ್ಟು ಹೇಳಿದರು ಸನ್ಮತವಿಲ್ಲೆ ಸುಭದ್ರೆ ಮತ್ತೇನು ಕೊಡಲೆ ನಾನು ಮನಕೆ ಬೇಕಾದಿಷ್ಟವ ಬೇಡೆ ನೀನು ಭಾರ ಎಷ್ಟು ತಡೆಯಲಾರೆನೆ ನೀನು ಕೈಬಿಟ್ಟು ಬಿಡುವೆನು ಬೆಟ್ಟವನು ಕಿರು ಬೆಟ್ಟಿಲಿಂದೆ ಎತ್ತಿನಿಂತಿದ್ದೇಳು ದಿವಸ ಕದವ ಬಿಡು ತಂಗಿ ಕೋಮಲಾಂಗಿ 9 ಪಕ್ಷಿವಾಹನ ನಿನ್ನ ಚೊಚ್ಚಲಮಗಳ ಎನ್ನಚ್ಛದ ಅಭಿಮನ್ಯುಗೆ ಮಾಡುವುದು ಅ- ಪೇಕ್ಷವಾಗೇದೆ ಎನಗೆ ಬೇಡುವೆನು ನಿಶ್ಚಯ ಮಾಡಿ ಜನರೊಳಗೆ ಕೊಡು ಕೀರ್ತಿ ನಿನಗೆ ಪಟ್ಟದರಸಿಯ ಸಹಿತ ನೀ ಒಡಂಬಟ್ಟು ಎನಗ್ವಚನವನೆ ಪಾಲಿಸು ಕಟ್ಟಿದ್ಹಾದಿಯ ಬಿಟ್ಟು ಪೋಗುವೆ ದಯಮಾಡಣ್ಣಯ್ಯ ನೀ ಕೃಷ್ಣಯ್ಯ 10 ತರವಲ್ಲೆ ರುಕ್ಮಣಿ ಬೀಗತನವ ಭಾಳ ಪರಿ- ಯಾಲೋಚನೆ ಮಾಡು ರುಕುಮನ ಗಡ್ಡ ಶಿರ ಪಟ್ಟಿ ಪನ್ನಿ ನೋಡು ದೊರೆ ಶಿಶುಪಾಲ ವರನವಸ್ಥೆಯ ಕೊಂಡಾಡು ಧೈರ್ಯವನೆ ಮಾಡು ಬರೆದು ಓಲೆಯ ಕಳಿಸಿ ಎನ್ನ ಕರೆಸಿ ಬೆನ್ನ ್ಹತ್ತೋಡಿಬಂದ ಬಿರುದನರಿಯೇ ನ್ವರ ಶುಭಾಂಗಿನಿ ಕದವ ಬಿಡು ತಂಗಿ ಕೋಮಲಾಂಗಿ 11 ಕೃಷ್ಣ ಸುಭದ್ರೆ ಮಾತುಗಳ ರುಕ್ಮಿಣಿ ಕೇಳಿ ಮತ್ಯಾತಕೆನ್ನ ದೂರು ಯತಿಗಳ ಬೆನ್ನ ್ಹತ್ತಿ ಹೋದವರು ದಾರು ಕೃತ್ಯವ ನಡೆಸಿದರೆನ್ನ ನಾದಿನೇರು ಚಿತ್ರಾಂಗಿಯೇರು ಹಸ್ತಿನಾವತಿ ಅರಸು ಧರ್ಮರು ಹೆಚ್ಚಿನ್ಹಿರಿ ಯಣ್ಣಯ್ಯ ಭೀಮನು ಪಾರ್ಥಸುತ ಎನ್ನ ಸೋದರಳಿಯಗೆ ಕೊಟ್ಟೇನು ತೌರುಮನಿಗ್ಹೆಣ್ಣು 12 ರಂಗ ಸುಭದ್ರೆ ಮಾತಿಗೆ ಬಪ್ಪಿ ್ವ್ವಳ್ಯವ ಕೊಟ್ಟು ಚಂದ್ರಗಾವಿಯ ಕುಪ್ಪಸ ಜರದ ಪೀ- ತಾಂಬ್ರದುಡುಗೊರೆ ಕೊಡುತ ಮುತ್ತಿನ ಹಾರ ತಂದು ಕೊರಳಿಗೆ ಹಾಕುತ ರುಕ್ಮಿಣಿಯ ಸಹಿತ ಬಂದ ಭೀಮೇಶ ಕೃಷ್ಣ ಪಾರ್ಥನ ರಂಭೆ ಕನ್ಯವಗೆದ್ದಳೆನುತಲಿ ಸಂಭ್ರಮದಿ ದೇವೇಂದ್ರ ಬ್ಯಾಗನೆ ಚೆಂದದÀಲ್ಹೂಮಳೆಯ ಕರೆದರು 13
--------------
ಹರಪನಹಳ್ಳಿಭೀಮವ್ವ
ಕೃಷ್ಣಚಿತ್ತ ಕೃಷ್ಣಚಿತ್ತ ಕೃಷ್ಣಚಿತ್ತ ಎನ್ನಿರೊ ಪ. ಕೃಷ್ಣಧ್ಯಾನದಿಂದ ಪರಮ ತುಷ್ಟರಾಗಿ ಸುಖದುಃಖ ಕಷ್ಟ ಕರ್ಮಂಗಳು ಎಲ್ಲ ಅಷ್ಟು ಹರಿಯಾಧೀನವೆಂದು ಅ.ಪ. ಜನನವಾದ ಕಾಲದಿಂದ ಇನಿತು ಪರ್ಯಂಕಾರದಲ್ಲಿ ಅನುಭವಿಸಿದಂಥ ಕರ್ಮ ಗುಣನಿಧಿಯಾಧೀನವೆಂದು1 ಕಷ್ಟದಲ್ಲಿ ಕಳೆದ ಕಾಲ ಅಷ್ಟರಲ್ಲೆ ಪಟ್ಟ ಸುಖ ಕೊಟ್ಟ ಹರಿಯು ಎನಗೆ ಎನುತ ಕೆಟ್ಟ ವಿಷಯ ಮನಕೆ ತರದೆ 2 ಕಾಮ ಕ್ರೊಧ ಲೋಭ ಮೋಹ ಆ ಮಹಾ ಮದ ಮತ್ಸರಗಳು ಕಾಮಿಸಿ ಮನ ಕೆಡಿಸುತಿರಲು ಶ್ರೀ ಮನೋಹರನಾಟವೆಂದು 3 ಪೊಂದಿದಂಥ ಮನುಜರಿಂದ ಕುಂದು ನಿಂದೆ ಒದಗುತಿರಲು ಇಂದಿರೇಶನ ಕರುಣವೆಂದು ಒಂದು ಮನಕೆ ತಾರದಂತೆ 4 ಮಾನ ಅಪಮಾನಗಳು ದೀನನಾಥನಧೀನವೆಂದು ಜ್ಞಾನಿಗಳ ವಾಕ್ಯ ನೆನೆದು ಮಾನಸದ ದುಃಖ ಕಳೆದು 5 ಹೊಟ್ಟೆ ಬಟ್ಟೆಗೊದಗುವಂಥ ಅಷ್ಟು ಕಷ್ಟ ಸುಖಗಳೆಲ್ಲ ವಿಷ್ಣುಮೂರ್ತಿ ಕೊಟ್ಟನೆಂದು ಮುಟ್ಟಿ ಮನದಿ ಹರಿಯ ಪದವ 6 ಹರಿಯ ಧ್ಯಾನ ಮಾಡುವುದು ಹರಿಯ ಧ್ಯಾನ ಅರಿಯುವುದು ಮೂರ್ತಿ ಕಾಣುವುದು ಹರಿಯಧೀನವೆಂದು ತಿಳಿದು 7 ಗುರುಕೃಪೆಯಿಂ ದತ್ತವಾದ ವರ ಸುಜ್ಞಾನವರೆಯ ತಿಳಿದು ಹರುಷ ಕ್ಲೇಶಾ ಮನಕೆ ತರದೆ ಮೂರ್ತಿ ಮನಕೆ ತಂದು 8 ನಿಷ್ಟೆಯಿಂ ಗೋಪಾಲ ಕೃಷ್ಣವಿಠ್ಠಲಾಧೀನ ಜಗವು ಇಟ್ಟ ಹಾಗೆ ಇರುವೆನೆಂದು ಗಟ್ಟಿಮನದಿ ಹರಿಯ ಪೊಂದಿ 9
--------------
ಅಂಬಾಬಾಯಿ