ಒಟ್ಟು 2677 ಕಡೆಗಳಲ್ಲಿ , 120 ದಾಸರು , 1860 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾಗಿಲನು ತೆಗಿಸಿ ದರುಶನವ ಕರುಣಿಸಿದೆಯೋ ಭೋಗ ನರಸಿಂಹಸ್ವಾಮಿ ಪ. ನಾಗಶಯನನೆ ದೇವ ಕರಿಗಿರಿ ನಿಲಯ ಹರಿ ಯೋಗಿ ಶ್ರೀಗುರು ಹೃದಯ ನಿಲಯ ಅ.ಪ. ಸಿರಿಯನ್ನೆ ತೊಡೆಯ ಮೇಲೆರಿಸಿಕೊಂಡು ನಗುತ ಪರಿಪರೀ ಸೇವೆಯನು ಭಕ್ತರಿಂ ಕೊಳುತ ಪರಮಾತ್ಮ ಪಂಚಾಮೃತದ ಅಭಿಷೇಕವನು ಎರೆಯುತಿರೆ ಕಂಡು ನಾ ಹರುಷಪಟ್ಟೆನೊ ಸ್ವಾಮಿ 1 ಸುರನದಿಯ ಜಲ ತಂದು ನಿನಗಭಿಷೇಕವನೆ ಎರೆದು ಪರಿಪರಿಯ ಪೂಜೆ ಅಲಂಕಾರವನೆ ಮಾಡಿ ತರತರದ ಷಡ್ರಸವ ಭೋಜನವಗೈಸುತಲಿ ವರ ಮಂಗಳಾರತಿಯನೆತ್ತಿದುದ ಕಂಡೆ 2 ಘನ್ನ ಮಹಿಮೆನೆ ಸ್ವಾಮಿ ಎನ್ನ ಬಿನ್ನಪ ಕೇಳಿ ಮನ್ನಿಸಿ ದರುಶನವ ಇನ್ನು ಕರುಣಿಸಿದೆ ನಿನ್ನ ಸಮರಿನ್ಯಾರೊ ಪನ್ನಗಶಯನನೆ ಧನ್ಯರೋ ನಿನ್ನ ಪದವ ನಂಬಿದವರು3 ಶಾಂತರೂಪವ ಧರಿಸಿ ಶಾಂತ ಮೂರುತಿ ಎನಿಸಿ ಅಂತರಂಗದಿ ನಿನ್ನ ಧ್ಯಾನಿಸುವರ ಸಂತೋಷಪಡಿಸುತಲಿ ಕಾಯ್ವ ಕಮಲಾಕಾಂತ ಅಂತರಂಗವ ತಿಳಿದು ಸಂತೈಸೊ ಎನ್ನ 4 ಪಾಪಿ ದೈತ್ಯನ ಕೊಂದು ಕೋಪಿಸದೆ ಭಕ್ತನೊಳು ಕಾಪಾಡಿದೆಯೊ ಪರಮಪ್ರೇಮದಿಂದ ಗೋಪಾಲಕೃಷ್ಣವಿಠ್ಠಲನೆ ಅದರಂದದಲಿ ಕಾಪಾಡೊ ಭಕ್ತರನು ಹೃದಯದಲಿ ನೆಲಸಿ 5
--------------
ಅಂಬಾಬಾಯಿ
ಬಾದರಾಯಣ ಮದದಿ ಮರೆತೆನೊ ಸದಯದಿಂ ಮುದ ಪಾಲಿಸೊ ಪ ಬೋಧ ಮೂರುತೆ ಭಕ್ತರಾ ನುಡಿ ಸಾದರದಿ ನೀನಾಲಿಸೋ ಅ.ಪ ವೇದಭಾಗವ ಮಾಡಿ ವೇದವ್ಯಾಸನೆಂದೆನಿಸಿದಿ ಸದಮಲಾಭಾವದಲಿ ನಿನ್ನಯ ಪಾದಕಮಲವ ತೋರಿದಿ 1 ಗಾತ್ರ ಎನ್ನಯ ಖೇದ ಭಾವವನೋಡಿಸೊ ಮೋದತೀರ್ಥ ಹೃದಾಬ್ಜ ಮಂದಿರ ಸಾಧು ಸಂಗವ ಮಾಡಿಸೋ 2 ತರ್ಕಮುಧ್ರಾಧರನೆ ಎನ್ನ ಕುತರ್ಕ ಬುದ್ಧಿಯನೋಡಿಸೋ ಅರ್ಕಸನ್ನಿಭ ಬ್ರಹ್ಮ ಸುತರ್ಕ ಮಾರ್ಗವ ಬೋಧಿಸೋ 3 ಅಭಯಪ್ರದಕರ ಎನ್ನಭವ ಭಯ ತ್ರಿಭುವನೇಶ್ವರ ಓಡಿಸೀ ಇಭವರದ ಮಧ್ವೇಶ ಸಂತತ ಸಭೆಯ ಸಹನೀ ತೋರೆಲೊ4 ಯೋಗ ಪೀಠನೆ ನೀಗಿಸೆನ್ನಯ ಭೋಗಬುದ್ಧಿಯ ಸರ್ವದಾ ಯೋಗಿಕುಲವರ ಬಾಗಿ ನಮಿಸುವೆ ಯೋಗಮಾರ್ಗವ ತೋರಿಸೊ5 ಮಾ ಕಮಲಜ ಭವೇಂದ್ರವಂದಿತ ಮಾಕಳತ್ರ ನಮೋಸ್ತುತೇ ಯಾಕೆ ಎನ್ನಲಿ ನಿರ್ದಯವು ನೀ ಸಾಕಲಾರದ ಪಾಪಿಯೇ 6 ಸನ್ನುತಿಸಿ ನಾ ನಿನ್ನ ಬೇಡುವೆ ಸನ್ನುತಾಂಘ್ರಿಯ ಸೇವೆಯಾ ಸನ್ಮುನೀವರ ಶ್ರೀ ನರಹರೆ ದಾಸದಾಸರ ದಾಸ್ಯವಾ 7
--------------
ಪ್ರದ್ಯುಮ್ನತೀರ್ಥರು
ಬಾನ್ದಳದ ಬುಡವೆನಗೆ ಅತಿದೂರ ಬೆಳಕೇ ಮನ್ದಿರವು ಶುದ್ಧವಿದೆ ಬಾ ಇದರತಳಕೆ ಪ ಸುಂದರದ ಕಾಂತಿಯನು ಚೆಲ್ಲು ಈ ಮನೆಗೆ ಇಂದು ಬಾ ನಾಳೆಯೆನಬೇಡ ನನ್ನೆಡೆಗೆ ಅ.ಪ ಜನುಮದಂಚಿನ ಬೆಳಕು ನಿನ್ನದೇ ಗೊತ್ತು ನಲಿದು ಬಂದಿಹೆನೊಳಗೆ ನಾ ನಿನ್ನ ಸೊತ್ತು ನಿಲುಕದೆಡೆ ನಿಲಬೇಡ ಬಾ ನನ್ನ ಮುಪ್ಪೆ ಬಲಯುತನ ಮಾಡೆನ್ನ ಸುಜ್ಞಾನಚಿತ್ತೆ 1 ನೀ ಮಾತ್ರವಿತ್ತಲಿರೆ ನನ್ನೈದು ಗೆಳೆಯರು ನೇಮಯುತರಾಗುವರು ಸೊಗಬಾಳ್ವರು ನಾ ಮಾಳ್ಪುದೆಲ್ಲವೂ ನಿನ್ನದೇ ಆಗುವುದು ರಾಮಕೃಷ್ಣರ ನೆನಪು ನನಗೆ ದೊರಕುವುದು 2 ನೀನಿರದ ನನ್ನ ಮನೆ ಕಡುಕತ್ತಲೆಯ ಕೋಣೆ ನೀನಿರದೆ ನಾನಿರಲು ಫಲವೇನು ಕಾಣೆ ಕಾನನದ ಹೂವಿನಂತಿದ್ದೇನು ಫಲವಿಲ್ಲ ಜ್ಞಾನ ಹೊಂಬೆಳಕೆ ಮಾಂಗಿರಿರಂಗ ನೋಡೆ ಭಯವಿಲ್ಲ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾಯಿ ತೆರೆದ ಬಗಿಯೇನೊ ದೇವದೇವ ತೋಯಜದಳ ನೇತ್ರನೆ ನೀಯೆನಗಿದು ಪೇಳೈ ನಿಜವಾಗಿ ಲಕ್ಷ್ಮೀನಾ ರಾಯಣ ನರಸಿಂಹನೆ ಪ ಅಸುರನ ಉದರವ ಹಸನಾಗಿ ಬಗೆವಾಗ ಬಾಯ ತೆರೆದಿಯಾ ಬಿಸಜ ಭವಾಂಡವು ಬಸುರೊಳಗಿದ್ದ ಉ- ಬ್ಬಸಿಗೆ ಬಾಯ ತೆರೆದಿಯೊ 1 ಮಡದೀಯ ರೂಪಕ್ಕೆ ಮರುಳಾಗಿ ಅದರಿಂದ ಬಿಡದೆ ಬಾಯ ತೆರೆದಿಯಾ ದೃಢದಿ ಪ್ರಹ್ಲಾದನ ಒಡೆಯ ರಕ್ಷಿಸೊ ನುಡಿಗೆ ಬಾಯ ತೆರೆದಿಯೊ 2 ಗುರು ಸತ್ಯಬೋಧರಾಯರ ನಿತ್ಯಭಜನೆಗೆ ಬರಿದೆ ಬಾಯ ತೆರೆದಿಯೊ ವರ ಕದರುಂಡಲಗಿ ಹನುಮಯ್ಯನೊಡೆಯನೆ ಕರವ ಮುಗಿವೆ ಕರುಣಿಸೊ 3
--------------
ಕದರುಂಡಲಗಿ ಹನುಮಯ್ಯ
ಬಾಯಿ ನಾರಿದ ಮೇಲೆ ಏಕಾಂತವೆತಾಯಿ ತೀರಿದ ಮೇಲೆ ತೌರಾಸೆಯೆ ಪ ಕಣ್ಣು ಕೆಟ್ಟ ಮೇಲೆ ಕಡುರೂಪು ಚೆಲ್ವಿಕೆಯೆಬಣ್ಣಗುಂದಿದ ಮೇಲೆ ಬಹುಮಾನವೆಪುಣ್ಯ ತೀರಿದ ಮೇಲೆ ಪರಲೋಕ ಸಾಧನವೆಸುಣ್ಣವಿಲ್ಲದ ವೀಳ್ಯವದು ಸ್ವಾದುಮಯವೆ 1 ಕಿಲುಬಿನಾ ಬಟ್ಟಲೊಳು ಹುಳಿ ಕಲಸಿ ಉಣಬಹುದೆಚಳಿಜ್ವರಕೆ ಚಂದನದ ಲೇಪ ಹಿತವೆಮೊಲೆಬಿದ್ದ ಹೆಣ್ಣಿನೊಳು ಮೋಹಕ್ಕೆ ಸೊಗಸಹುದೆಬೆಲೆಬಿದ್ದ ಸರಕಿನೊಳು ಲಾಭ ಉಂಟೆ 2 ನಿತ್ಯ ಸುಖವೆನಬಹುದೆಸತ್ತ್ವ ತಗ್ಗಿದ ಮೇಲೆ ಸಾಮಥ್ರ್ಯವೆಪೃಥ್ವಿಯೊಳು ಕಾಗಿನೆಲೆಯಾದಿಕೇಶವ ನಿನ್ನಸತ್ಯವಾದ ಭಕ್ತಿ ಇರದವಗೆ ಮುಕ್ತಿಯುಂಟೆ 3
--------------
ಕನಕದಾಸ
ಬಾರಮ್ಮ ಇಂದಿರಮ್ಮ ಪ ನೀರೇಜ ಪದಯುಗಕೆ ಸಾರಿ ವಂದಿಪೆನಮ್ಮ ಹಾರಗಳನರ್ಪಿಸುವೆ ಸ್ವೀಕರಿಪುದಮ್ಮ ಅ.ಪ ಆವ ತೆರದಲಿ ನಿನ್ನನರ್ಚಿಸಿದರೂ ಕೊರೆಯೆ ಭಾವಶುದ್ಧಿಯಲಿ ಪೂಜೆಗೈವೆನಮ್ಮ ಓವರಿಗೆ ದಯಮಾಡು ದೇವಗಂಗಾ ಜಲದಿ ಪಾವನ ಪಾದಾಂಬುಜವ ತೊಳೆವೆನಮ್ಮಾ 1 ತವದಿವ್ಯ ಭೂಷಣವ ನವರತ್ನ ಹಾರಗಳ ಸುವಿಲಾಸದಿಂದಿತ್ತು ಮಣಿವೆನಮ್ಮ ಪವಳಪದುಮಾಸನ ವಿಶ್ರಾಂತಳಾಗಮ್ಮ ನವಪುಷ್ಪ ಕುಂಜಗಳ ಧರಿಪೆನಮ್ಮ 2 ಅಗರು ಚಂದನ ಧೂಪಮಿಗೆ ದಿವ್ಯ ಗಂಧಗಳ ಬಗೆಬಗೆಯ ದೀಪಗಳ ನೀಡುವೆನಮ್ಮಾ ಸೊಗಸಾದ ಭಕ್ಷ್ಯ ಭೋಜ್ಯಂಗಳನು ಅರ್ಪಿಸುವೆ ನಗುನಗುತ ಸ್ವೀಕರಿಸಿ ಪಾಲಿಸಮ್ಮ3 ದೇವಕನ್ಯೆಯರೆಲ್ಲ ದಿವ್ಯಗಾನವ ಪಾಡಿ ದೇವಿ ತವಕರುಣೆಯನು ಬೇಡುತಿಹರು ಶ್ರೀವನಿತೆ ನಾನೀವ ತಾಂಬೂಲವನು ಸವಿದು ಜೀವಕೋಟಿಗೆ ಸುಖವನೀವುದಮ್ಮಾ 4 ಪೊಡಮಡುವೆ ನಿನ್ನಡಿಗೆ ಕೊಡು ಭಕ್ತಿಭಾಗ್ಯವನು ಎಡೆಬಿಡದೆ ಹರಿಪಾದ ಸೇವೆಗೈದು ಕಡುಮುದದಿ ನಿನ್ನ ಸಂಕೀರ್ತನೆಯ ಪಾಡಿಸು ಬಡವರಾಧಾರಿ ಮಾಂಗಿರಿಯೊಡೆಯನ ರಾಣಿ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾರಮ್ಮ ಸರಸ್ವತಿ ಬಾ ದ್ರುಹಿಣಯುವತಿ ಬಾ ನಿರ್ಮಲಮತಿ ತೋರಿ ಭಾರತಿ ಪ. ಭುಜಗ ಸದೃಶ ವೇಣಿ ಭಜಕರ ಚಿಂತಾಮಣಿ ಕೀರವಾಣಿ 1 ವೇದಾಂತರಂಗಿಣಿ ನಾದಸ್ವರೂಪಿಣಿ ಪ್ರಾದುರ್ಭವಳಾಗು ಸಾಧ್ವೀಕಲ್ಯಾಣಿ 2 ಅಕ್ಷಯ ಸುಖಭಾಷೆ ಆಶ್ರಿತಕಜನಪೋಷೆ ಲಕ್ಷ್ಮೀನಾರಾಯಣನ ಸೊಸೆ ಸುವಿಲಾಸೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಾರಮ್ಮಾ ಬಾರಮ್ಮಾ ಭಾಗ್ಯದನಿಧಿಯೇ ತೋರಮ್ಮಾ ತೋರಮ್ಮಾ ಕರುಣಾನಿಧಿಯೇ ಪ. ಬಾರಮ್ಮಾ ಮಹಲಕ್ಷ್ಮಿ ತೋರುತ ಕರುಣವ ಬೀರುತ ತವಕದಿ ಸೇರುತ ಪತಿಸಹ ಅ.ಪ. ಶ್ರೀ ರಮಾದೇವಿ ಇನ್ನಾರು ಸಮನಾಗರೇ ಭೂ ರಮೇಶನ ಸೇವೆಗೆ ನಿಲ್ಲಲು ಬಾರಮ್ಮಾ ಭಕ್ತರುದ್ಧಾರ ಮಾಡಲು ಎಲ್ಲಾ ಕಾರಳು ನೀನಾಗಿ ವಾರುಧಿಶಯನಗೆ ಸೇವಿಸಲು ಘೋರತರ ಸಂಸಾರ ಸಾಗರ ಪಾರುಗಾಣಿಪ ಹರಿಯು ನಿನ್ನೊಳು ಸೇರಿಯಿರುತಿಹನೇ ತೋರಿ ಭಕ್ತರಿಗೆ ಚಾರುಕಮಲ ಕರಾರವಿಂದದಿ ಧೀರೆಯೆತ್ತುಪಕಾರ ಮಾಡಲು ವಾರಿಜಾಕ್ಷಿಯೆ ಸಾರುತೀಗಲೆ 1 ಪುಲ್ಲಲೋಚನೆ ನಿನ್ನ ಗಲ್ಲ ಮಿಂಚಿನ ಸೊಬ ಗೆಲ್ಲ ನೋಡುತ ನಿನ್ನ ಒಡನಾಡುವ ಪಲ್ಲವಾಧರೆ ನಿನ್ನ ವಲ್ಲಭ ಹರಿಯಲ್ಲಿ ಎಲ್ಲ ಭಕ್ತರ ಮನಸಲ್ಲ ಅರುಹು ತಾಯೆ ನಿಲ್ಲದೆಲೆ ಕಾನಲ್ಲಿ ಇಹ ಹರಿ ಎಲ್ಲಿ ಭಕ್ತರು ಕರೆ ದಲ್ಲಿ ಬರುತಿಹನೆ ಮಲ್ಲಮರ್ಧನ ಶ್ರೀ ನಲ್ಲ ಕೃಷ್ಣನು ಚೆಲ್ಲಿ ಕರುಣವ ಬಲ್ಲೆ ನಿನಪತಿ ಗುಣಗಳನೆಲ್ಲ ಕಾಯೆ 2 ರಂಗನರ್ಧಾಂಗಿಯೆ ಮಂಗಳ ಮೂರುತಿ ನಿ ನ್ನಂಗಜನಯ್ಯನ ಕಾಣೆ ಕಾಯೆ ಗಂಗಜನಕ ಸಹ ಸರ್ವರಂಗದೊಳಿದ್ದು ನೀ ರಂಗನ ಲೀಲೆಯತಿಸಂಭ್ರಮದಲಿ ನೋಳ್ಪೆ ತುಂಬುರು ನಾರದರು ಪಾಡಲು ರಂಭೆ ಊರ್ವಶಿ ನಾಟ್ಯವಾಡಲು ಸಂಭ್ರಮದಿ ಶ್ರೀ ಶ್ರೀನಿವಾಸನ್ನ ಇಂಬತೋರಿಸೇ ಅಂಬುಜಾಕ್ಷಿಯೇ ಬೆಂಬಿಡದೇ ಎನ್ನ ನಂಬಿರುವೇ ನಿನ್ನ ಕಂಬುಕಂಧರೆ ಕುಂಭಿಣೀಪತಿ ಸಹಿತ ಬೇಗನೆ 3
--------------
ಸರಸ್ವತಿ ಬಾಯಿ
ಬಾರಯ್ಯ ಎನ್ನ ಮನ ಮಂದಿರಕೆ ಪ ಬೇರೊಂದು ಯೋಚನೆ ಮಾಡದೆ ಸಿರಿಪತಿಅ.ಪ ಸೋನೆ ಸೊರಗುವುದೆವಾರ ವಾರಕೆ ಮೇಘವಾರಿಯ ಕರೆದರೆಧಾರುಣಿಗೆ ಕ್ಷಾಮ ಬರುವುದೆ ಕೃಷ್ಣ1 ತಾಮಸ ಬುದ್ಧಿಯೆಂಬಿಯ ನಿನ್ನಶ್ರೀಮೂರ್ತಿ ಹೊಳೆದರೆ ತಮವಡಗದೆಶ್ರೀ ಮನೋಹರನೆ ಭಾನು ಉದಿಸಿದರೆತಾಮಸವಡಗದೆ ಜಗದೊಳು ಕೃಷ್ಣ 2 ನಾ ದೋಷಿ ಕಠಿಣನೆಂತೆಂಬೆಯ ನಿನ್ನಪಾದಪದುಮ ಪಾಪಹರವಲ್ಲವೆಆ ದುಷ್ಟ ಶಿಲೆ ಸೋಕೆ ಋಷಿಪತ್ನಿಯಾದಳುನೀ ದಯಮಾಡೆ ನಾ ನೀಚನೆ ಸಿರಿಕೃಷ್ಣ 3
--------------
ವ್ಯಾಸರಾಯರು
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬಾರೆ ವೆಂಕಟರಮಣಿ ಶ್ರೀದೇವಿ ನೀ ಬಾರೆ ವೆಂಕಟರಮಣಿ ಪ ನಿತ್ಯ ಅ.ಪ. ಏನು ಪುಣ್ಯವೆ ನಂದು ಪಾರಾಯಣನೀನು ಕೇಳುವಿ ಬಂದುಹೀನ ಮಾನವನಿಗೆ ನೀನು ಬರುವಿ ಎಂಬೊಜ್ಞಾನವಿಲ್ಲದೆ ಉಚ್ಚ ಸ್ಥಾನದೊಳಗೆ ಬಾರೆ 1 ಸ್ವಪ್ನದೊಳಗೆ ಬರುವಿ ಶ್ರೀದೇವಿ ನೀಕ್ಷಿಪ್ರದಿಂದಲಿ ಪೋಗುವಿಸರ್ಪಶಯನ ನಮ್ಮಪ್ಪ ಗೋಕುಲ ಬಾಲಅಪ್ಪಿಕೊಳ್ಳುವ ಸುಖ ಒಪ್ಪಿಸಬೇಕಮ್ಮ 2 ಸಿರಿ ರಂಗನಂಕದಿ ಕೂತುಭೃಂಗಕುಂತಳೆ ಹೃದಯಂಗಳದೊಳಗಾಡೆ 3 ಎಲ್ಲ ದೇವತೆಗಳನೆ ತಪಾದಿಯೆಪುಲ್ಲ ವಾರಿಜನಯನೆಗೊಲ್ಲ ಬಾಲನಪಾದ ಪಲ್ಲವ ನೋಡದೆನಿಲ್ಲಲೊಲ್ಲದು ಮನಸೊಲ್ಲು ಲಾಲಿಸೆ ತಾಯೆ4 ಇಂದಿರೇಶನ ರಾಣಿ ಎನ್ನಯ ಮನೋ-ಮಂದಿರದೊಳು ಬಾ ನೀನಂದಗೋಕುಲ ಬಾಲಾನಿಂದು ಕರದೊಳೆತ್ತಿತಂದು ತೋರಿಸೆ ಅರವಿಂದನಿಲಯೆ ಲಕ್ಷ್ಮಿ 5
--------------
ಇಂದಿರೇಶರು
ಬಾರೊ ಗೋಪಿನಾಥ ನಿನ್ನಗಲಿರಲಾರೆನೊ ಪ ಶೌರಿ ಅ.ಪ ವಾರಿಚರ ಕೂರ್ಮನೆ ಧಾರುಣಿ ತಂದನೆ ತೋರ ಕೊರಳ ಹಾರ ವರಮೃಗರೂಪನೆ 1 ಮೇದಿನಿ ಪಾಲಕರ ಕೊಂದು ವೈರಿ 2 ಬೆತ್ತಲೆ ನಿಂತು ದುಷ್ಕøತ್ಯ ಮಾಳ್ಪರ ಕೊಂದು ಉತ್ತಮ ತುರಗವೇರಿದ ಭೃತ್ಯವತ್ಸಲ ದೇವ 3 ವಿಜಯ ರಾಮಚಂದ್ರವಿಠಲರಾಯನೆ ಸುಜನ ವಂದಿತ ನಿನ್ನ ಭಜನೆಯ ಪಾಲಿಸೊ 4
--------------
ವಿಜಯ ರಾಮಚಂದ್ರವಿಠಲ
ಬಾರೊ ಗೋವಿಂದ ಹೃತ್ಸರೋಜಕ್ಕೆ ಪ ಗಾರ ಗುಣಪೂರ್ಣ ಮಾರಜನಕನೆ ಅ.ಪ ಅಂಡಜವಾಹನ ಬ್ರಹ್ಮಾಂಡ ಗುಣಪೂರ್ಣ ತೊಂಡರ ಪಾಲಿಪೊ ಪುಂಡರೀಕಾಕ್ಷನೆ 1 ತುಂಗವಿಕ್ರಮನೆ ಸಂಗೀತಲೋಲನೆ ಮಂಗಳಮಹಿಮನೆ ಗಂಗೆಯ ಪಿತ ಹರಿ 2 ಸಿರಿ ಸಹಿತ ನಿಲಯನೆ ಶೌರಿ ವಾರಿಜದಳ ನಯನ 3 ವಿಜಯ ರಾಮಚಂದ್ರವಿಠಲರಾಯನೆ ಅಜವಂದಿತ ನಿನ್ನ ಭಜನೆಯ ಪಾಲಿಸೊ 4
--------------
ವಿಜಯ ರಾಮಚಂದ್ರವಿಠಲ
ಬಾರೋ ಗೋಪಿಯ ಬಾಲಾ ಮಾನಸದೊಳುತೋರಿಸೋ ಮುಖಕಮಲಾ ಪ ಸೇರಿಸೊ ನಿನ್ನ ಪದ ಸಾರಸಯುಗಳ-ಪಾರ ಸದ್ಗುಣ ಶೀಲ ಅಪ್ಪಯ್ಯ ಕೃಷ್ಣಅ.ಪ. ವಕ್ತ್ರಲಂಬಿತವಾಲಾ ಮಣಿಮಯ ಚಿತ್ರಶೋಭಿತ ಭಾಲಾರತ್ನಕುಂಡಲ ನವಮೋಕ್ತಿಕ ಮಾಲಾ ಭೃತ್ಯಭಾಷಿತ ಪಾಲಾ 1 ಶುಭ ವೇಷಾಶಂಕರಮುಖ ಸುರಾತಂತಂ ವಿನಾಶ ಕಿಂಕರ ಜನ ಘೋಷ 2 ವೇದವನಿತ್ತವನೇ ವಾರಿಧಿಯೊಳು ಭೂಧರ ಪೊತ್ತವನೆಮೇದಿನಿಯನು ಕೋರಿಲ್ಯಾ ಧರಿಸಿದನೇ ನರ ಮೃಗದಾ ಮೊಗದವನೆ 3 ಧಾರುಣಿ ಅಳೆದವನೆ ಭಾರ್ಗವ ಸೀತಾ ಚೋರನ ಗೆಲಿದವನೆ ನಾರಿಮೋಹನ ಜಿನಾಚಾರ್ಯ ಸುತನೆ ಘೋರ ಮ್ಲೇಂಛರ ಹರನೇ 4 ಸಾಮಜ ಶರಣಾ 5
--------------
ಇಂದಿರೇಶರು
ಬಾರೋ ನೂತನ ಗೃಹಕೆ ಹರಿಯೆ ಸಿರಿ ಮಾರುತ ಮುಖಸುರರೊಡಗೂಡಿ ಧೊರಿಯೆ ಪ ಯಾರು ಕೇಳದಲಿಹ ಸ್ಥಳವ ನೀನೆ ಪ್ರೇರಿಸಿ ಗೃಹವ ನಿರ್ಮಿಸಿದೆಯೋ ದೇವ ನೂರಾರು ಪರಿರೂಪಾಂತರವ ಪೊಂದಿ ಈ ರೀತಿ ನವಸುಸಂಸ್ಕøತವಾದ ಗೃಹವ 1 ಈರಪ್ಪÀ ಬಡಿಗನೆಂಬುವನು ಮನಿಯ ಚಾರುತನದಲಿಂದ ನಿರ್ಮಿಸಿರುವನು ತೋರುವ ಸಿಂಹಾಸನವನು ಮಧ್ಯಾ ಗಾರದಿನಿನಗಾಗಿ ವಿರಿಚಿಸಿಹನು 2 ಸುತ್ತಲು ನಿರ್ಭಯವಿಹುದು ವಂ - ಭತ್ತು ದ್ವಾರಗಳಿಂದ ಶೋಭಿಸುತಿಹುದು ಹತ್ತಿರೆ ಗುರುಗೃಹ ವಿಹುದು ಮುಂದೆ ಚಿತ್ತಜನಯ್ಯನ ಮಂದಿರ ವಿಹುದು 3 ಉತ್ತಮ ಗೃಹವೆನಿಸುವದು ಇ - ಪ್ತತ್ತುನಾಲಕುವಸ್ತುಗಳಕೂಡಿಹುದು ಸುತ್ತೇಳು ಪ್ರಾಕಾರವಿಹುದು ಸುತ್ತು ಮುತ್ತಲು ದ್ವಿಜಜನಹೊಂದಿ ಕೊಂಡಿಹುದು 4 ಗೃಹವುನಾಲ್ಕು ವಿಧವಿಹುದು ಸೂಕ್ಷ್ಮ ಗೃಹ ನಿನಗಾಗಿಯೆ ನೇಮಿಸಿಯಿಹುದು ಬಹಿರದಿ ಪಾಕಗೃಹ ವಿಹುದು ಅಲ್ಲಿ ಗೃಹಿಣಿಯಿಂ ತ್ರಿವಿಧಾನ್ನ ಪಕ್ವಗೈತಿಹುದು5 ನಡುಮನೆ ದೊಡ್ಡದಾಗಿಹುದು ಅಲ್ಲಿ ಸಡಗರದಲಿ ಬ್ರಹ್ಮವೃಂದ ಕೂಡುವದು ಬಿಡದೆ ಸತ್ಕಥೆನಡೆಯುವದು ಮುಂದೆ ಪಡಸಾಲೆಯಲಿ ಸರ್ವಜನ ಸಭೆಯಹುದು 6 ಶ್ವಸನ ಮಾರ್ಗವಲಂಬಿಸಿರುವೆ ಮನಿಯ ಹಸನ ಮೆಹದೀನಾದಿಯಿಂ ಮಾಡಿಸಿರುವೆ ಹೊಸಸುಣ್ಣವನು ಹಚ್ಚಿಸಿರುವೆ ಏಕಾ ದಶ ಸೇವಕರ ನಿನ್ನ ವಶದೊಳಿರುಸುವೆ 7 ನಾನಾಧನ ನಿನಗರ್ಪಿಸುವೆನು ತನು ಮಾನಿನಿಸಹ ನಿನ್ನಾಧೀನ ಮಾಡುವೆನು ಜ್ಞಾನಭಕ್ತಿಯೆ ಇಚ್ಛಿಸುವೆನು ನಿನ್ನ ಧ್ಯಾನಾನಂದದಿ ಧನ್ಯನೆಂದಿನಿಸುವೆನು8 ಹರಿಯೆ ಲಾಲಿಸು ಎನ್ನ ಸೊಲ್ಲಾ ಮುಂದೀ - ಪರಿಗೃಹದೊರೆವುದು ಸುಲಭವೇನಲ್ಲಾ ¨ರೆ ನಿನ್ನ ಬಿಡೆನೊ ಶ್ರೀ ನಲ್ಲಾ ಎನ್ನ ಮೊರೆಯ ನಾಲಿಸಿ ನೋಡೋ ವರದೇಶವಿಠಲಾ9
--------------
ವರದೇಶವಿಠಲ