ಒಟ್ಟು 2066 ಕಡೆಗಳಲ್ಲಿ , 122 ದಾಸರು , 1524 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀ ದೇವಿ ಇಂದಿರೆ ನಾ ನಿನ್ನ ವಂದಿಸಿ ಬೇಡುವೆ ಬಂದು ನೀ ಪಾಲಿಸೇ ಚಂದಿರವದನೆ ಪ ಸಿಂಧು ಕುಮಾರಿಯೆ ಎಂದಿಗೂ ನಿನ್ನ ಪದ ದ್ವಂದ್ವವ ಸೇವಿಪೆನೆಂದು ನಾ ಬೇಡುವೆ ಅ.ಪ ದೇವಿ ನಿನ್ನಂಘ್ರಿಯ ಸೇವಿಸಿ ಪದ್ಮಭವ ಭಾವಿ ಫಣೇಶ ಸುರಾಧಿಪರೆಲ್ಲರು ಈ ವಿಧವಾದನುಭಾವವ ಪೊಂದಿರಲು ಈ ವಿಷಯಕೆ ಶ್ರುತಿ ಸಾವಿರವಿರುವುದೆ 1 ಪನ್ನಗವೇಣಿಯೆ ನಿನ್ನನೆ ನಂಬಿರಲು ಸಣ್ಣ ಮನುಜರ ವರ್ಣಿಪುದೇಕೆಲೆ ಎನ್ನಪರಾಧವ ಮನ್ನಿಸಿ ಕೃಪೆಯನು ಎನ್ನೊಳು ತೋರಲು ಧನ್ಯ ನಾನಾಗುವೆ 2 ತಾಮರಸಾಕ್ಷಿಯೆ ನಾಮಗಿರೀಶ ಶ್ರೀ ಸ್ವಾಮಿ ನೃಸಿಂಹನ ಕಾಮಿನೀಮಣಿಯೇ ಕೋಮಲಗಾತ್ರಯೆ ಶ್ರೀ ಮಹಾಲಕ್ಷ್ಮಿ ಎನ್ನ ಸಹೋದರಿ 3
--------------
ವಿದ್ಯಾರತ್ನಾಕರತೀರ್ಥರು
ಲಕ್ಷ್ಮೀದೇವಿ ಕಮಲಾಕ್ಷಿ ತಾಯೆ ಸೂಕ್ಷ್ಮಮತಿಯನಿತ್ತು ಪೊರೆದು ರಕ್ಷಿಪದೇವಿ ಪ ಹರಿಯರಾಣಿ ಭುಜಗವೇಣಿ ಪರಿಪರಿಯ ಕ್ಲೇಶಗಳಳಿವ ದುರಿತದೂರನ ಕರಪಿಡಿಯುತ ಬಾ ಪರಿ ವೈಭವದಿ 1 ವಂದಿಸುವೆ ನಿನ್ನ ಪದಕೆ ಅಂಬುಜಾಕ್ಷಿ ಕರುಣವ ಮಾಡಿ ಕಂಬು ಕಂಧರನೊಡಗೂಡುತ ಬಾ ಸಂಭ್ರಮ ಸೂಸುತಲಿ 2 ಗೆಜ್ಜೆ ಪೈಜನಿ ಪಾಡಗರುಳಿಯು ಸಜ್ಜಾಗಿಹ ಕಾಲುಂಗುರ ಧ್ವನಿಯ ಮೂರ್ಜಗದೊಡೆಯನ ಕರಪಿಡಿಯುತ ಬಾ ಸಜ್ಜನ ರಕ್ಷಕಳೆ 3 ನಡುವಿಗೆ ನವರತ್ನದ ಪಟ್ಟಿ ಬಿಡಿಮುತ್ತುಗಳುದುರುವ ಪೀತಾಂಬರ ಬಡನಡÀು ಬಳುಕುತ ಅಡಿ ಇಡು ಬಾ ನಿ- ನ್ನೊಡೆಯನ ಕೂಡುತಲಿ 4 ಕರದಲಿ ಕಂಕಣ ಹಾಸರ ಬಳೆಗಳು ಬೆರಳಲಿ ಉಂಗುರ ಥಳಥಳಿಸುತಲಿ ಗರುಡಗಮನ ನೊಡಗೂಡುತ ಬಾ ಬಾ ಗರುವವು ಮಾಡದಲೆ5 ವಂಕಿನಾಗಮುರುಗಿ ಕರದಲಿ ಬಿಂಕದಿ ಪಿಡಿದಿಹ ತಾವರೆ ಕುಸುಮವು ಪಂಕಜಾಕ್ಷನೊಡಗೂಡುತ ಮನ ಶಂಕೆಯು ಮಾಡದಲೆ6 ಕಠ್ಠಾಣಿಸರ ಪದಕಗಳ್ಹೊಳೆಯುತ ಕಟ್ಟಿದ ಉಂಗುರಡ್ಡಿಕಿ ಶೋಭಿಸುತ ಚಿತ್ತಜನಯ್ಯನನೊಡಗೂಡುತ ಬಾ ಮತ್ತೆ ಹರುಷದಲಿ 7 ಥಳಥಳಿಸುವ ಗಲ್ಲಕೆ ಅರಿಶಿನವು ನಲಿಯುವ ಮೂಗುತಿ ಮುಖುರ ಬುಲಾಕು ಹೊಳೆವ ಮೀನು ಬಾವಲಿ ಚಳತುಂಬುಗಳ್ಹೊಳೆಯುತ ಘಳಿಲನೆ ಬಾರಮ್ಮ 8 ಕುರುಡಿ ಬಾವಲಿ ಬುಗುಡಿ ಚಂದ್ರ ಮುರುವಿನ ಕಾಂತಿ ಮುಗುಳ್ನಗೆ ಮುಖವು ಉರುಗಾದ್ರೀಶನ ಕರಪಿಡಿಯುತ ಬಾ ಕರೆ ಕರೆ ಮಾಡದಲೆ 9 ಘಣೆಯಲಿ ಕುಂಕುಮ ಬೈತಲೆ ಬಟ್ಟು ಥಳಥಳಿಸುವ ಕಣ್ಣಿಗೆ ಕಪ್ಪಿಟ್ಟು ಎಳೆಬಾಳೆಯ ಸುಳಿಯಂದದಿ ಬಳುಕುತ ಘಳಿಲನೆ ಬಾರಮ್ಮ10 ಕೆಂಪಿನ ರಾಗುಟಿ ಜಡೆ ಬಂಗಾರವು ಸಂಪಿಗೆ ಮಲ್ಲಿಗೆ ಸರಗಳ ಮುಡಿದು ಸೊಂಪಿಲಿ ಶ್ರೀ ಹರಿಯೊಡನಾಡುತ ನಲಿಯುವ ಸಂತಸ ತೋರಮ್ಮ11 ಇಂದಿರೆ ಶ್ರೀರಮೆ ಭಾರ್ಗವಿಯೆ ನಂದತ್ರಯಾ ಸದಾಸುಶೀಲೆ ಸುಗಂಧಿ ಸುಂದರಿ ಮಂದಗ ಮನೆಯೆ ಚಂದದಿ ಬಾರಮ್ಮ 12 ಸುತ್ತೆಲ್ಲ ಸುರಸ್ತ್ರೀಯರು ಮುತ್ತಿನ ಛತ್ರ ಚಾಮರದರ್ಪಣ ಪಿಡಿದು ನೃತ್ಯಗಾಯನ ಮಾಡುತ ಕರೆವರು ಸತ್ವರ ಬಾರೆನುತ 13 ಶ್ರಮ ಪರಿಹರಿಸೆನುತಲಿ ಬೇಡುವೆನು ಮಮತೆಲಿ ಕರಗಳ ಮುಗಿಯುತ ಬೇಡಲು ಕಮಲನಾಭ ವಿಠ್ಠಲನೊಡನೆ ಶ್ರೀ- ಕಮಲೆಯು ಬರುತಿಹಳು14
--------------
ನಿಡಗುರುಕಿ ಜೀವೂಬಾಯಿ
ಲಕ್ಷ್ಮೀನಾರಾಯಣ ಕಾಯೋ ನಿನ್ನ ನಂಬಿದವರÀುಕ್ಷಿಯೊಳು ಜಗಂಗಳನಿತ್ತು ರಕ್ಷಿಸಿದ ಶ್ರೀಶ ಪ. ಕಂದ ಪ್ರಹ್ಲಾದನ್ನ ಕಾಯ್ದೆ ಚಂದದಿ ಕಾಯೊಯೆಂದು ಬಂದಮುಂದೆ ನಿಂದ ಮಂದಿಯೊಳು ನಿಂದು ನೀ ಸಲಹಯ್ಯ 1 ಕರಿರಾಜ ಕರೆಯಲು ಭರದಿ ಬಂದು ಪೊರೆದೆ ನೀಶರಣು ರಕ್ಷಾಮಣಿಯೆ ಸಿರಿಯಮ್ಮಗೊಲಿದೆ ನೀ 2 ಶರಣು ಮುಖ್ಯ ಸುರರ ವರದೈವವಾದೆ ನೀನುಶರಣು ರಕ್ಷಾಮಣಿಯೆ ಸಿರಿಯಮ್ಮಗೊಲಿದೆ ನೀ 3 ಮೀನಾಂಕ ತಲೆದೊರಿದೆ ನೀ 4 ಹಯವದನನಾಗಿ ನೀ ತ್ರಯೀಚೋರರನ್ನು ಕೊಂದುಸ್ತ್ರೀಯರಿಗೆ ನ್ಯಾಯದಿಂದ ದಯ ಬೀರಿದೆಯಲ್ಲ 5
--------------
ವಾದಿರಾಜ
ಲಕ್ಷ್ಮೀಪ್ರಿಯರ ಚರಣ ಭಜನೆ ನಿರುತದಿಂದ ಮಾಡುವ ಪ ಲಕ್ಷ್ಮೀಪತಿಯ ಕರುಣ ಪಡೆದು ಹರುಷದಿ ನಾವ್ ಬದುಕುವ ಅ.ಪ ಸದ್ಪೈಷ್ಣವ ಕುಮುದಕಾಭಿ ವೃದ್ಧಿ ತರುವ ಗೋಸುಗ ಮಧ್ವ ಮತಾಬ್ಧಿಯಲ್ಲಿ ಉದ್ಭವಿಸಿದ ಚಂದ್ರರ 1 ವ್ಯಾಸಮುನಿಗೆ ಒಲಿದ ಕೃಷ್ಣನ ಸೋಸಿನಿಂದ ಪೂಜಿಸಿ ವ್ಯಾಸಸೂತ್ರ ಭಾಷ್ಯ ಉಪ ನ್ಯಾಸ ಮಾಡಿ ಮರೆವರ 2 ದೀನ ಜನರ ವೃಂದಕೆ ಸುರ ಧೇನು ಎನಿಪ ಮುನಿವರ ಶ್ರೀ ನರಹರಿಗೆ ತಾವು ಅನುಗರಾಗಿ ಇರುವರ 3
--------------
ಪ್ರದ್ಯುಮ್ನತೀರ್ಥರು
ಲವಕುಶರ ಹಾಡು ಹರಿಹರ ಬ್ರಹ್ಮ ತ್ರಿಮೂರ್ತಿಗಳ ಬಲಗೊಂಡು *ಗುರುಹಿರಿಯರ ಪಾದಕ್ಕೆರಗೀ | ಅಜನ ಪಟ್ಟದ ಶ್ರೀ ಸರಸ್ವತಿಯನೆ ಬಲಗೊಂಡು ತೊಡಗುವೆ ರಾಮರ ಕಥೆಯಾ 1 ಬಣ್ಣದ ಅಕ್ಷತೆ ಕಣ್ಣು ತುಂಬೆ ಪುಷ್ಪ ಸು ವರ್ಣ ದಕ್ಷಿಣೆ ತಾಂಬೂಲಾ | ಉಮ್ಮಿಯ ಪುತ್ರ ಗಣೇಶಗೆ ಅರ್ಪಿಸಿ ವರ್ಣಿಪೆ ಲವಕುಶರ ಕಥೆಯಾ 2 ಕುಲದ ಸ್ವಾಮಿ ಕದ್ರಿ ನರಸಿಂಹನ ಬಲಗೊಂಡು | ಗುರು ಮಧ್ವರಾಯರ ನೆನೆದು | ಮನದಲ್ಲಿ ವಿಷ್ಣು ದೇವತೆಗಳ ಬಲಗೊಂಡು ತೊಡಗುವೆ ರಾಮರ ಕಥೆಯಾ 3 ವೇದಪಾರಾಯಣ ಅಂತ್ಯದ ಪೀಠಕ ಮಾಧವ ಹರಿ ಸುಗೋತ್ರ | ವೇದ ಮೂರುತಿ ಕೊಂಡಪ್ಪನ ಪುತ್ರಿಕೆಗೆ (?) ಹೇಳಿದಳುಹರಿನಾಮ ಕಥೆಯಾ 4 ಯಗ್ನ ಸಂತತಿಯೂ ಪೀಠಕವೂ | ಅಜ್ಞಾನಿ ಮೂಢಜೀವರಿಗೆ 5 ಹರುವುಳ್ಳ ನಿರಯಾಗಿಗಳೂ | ಹರವುಳ್ಳ ಕೈ(?)ಮುನಿವಳ್ಳೇರು ಜಾಣರು ತಿಳಿವೂದು ಅರ್ಥಸಂದೇಶ 6 ನಾಡನ ಕಥೆಯಲ್ಲ ಬೇಡುಂಬ ಪದನಲ್ಲ ನಾಡೊಳಗೆ ಹರಿನಾಮ ಕೇಳಿದ ಜನರಿಗೆ | ವಿಲ್ಲವಾಗುವುದು 7 ಪ್ರಚಂಡರು ರಾಮಲಕ್ಷ್ಮಣರು | ಇತ್ತಬೇಟೆಯನಾಡುವ ಕ್ರಮಗಳ ಚಂದವಿನ್ನೆಂತು ವರ್ಣಿಸಲೆ 8 ತಾಂಬೂಲ ಶ್ರೀಮೊಗದಿಂದೆ | ಇಂದುವದನೆಯ ಬಿಗಿದಪ್ಪಿ ಮುದ್ದಾಡಿದ ಇಂದುವದನೆ ಗರ್ಭವೆಂದ 9 ನಳಿನನಾಭನು ತನ್ನ ಲಲನೇಯ ಮುಖನೋಡಿ ಲಲನೆ ನಿನ್ನ ಪ್ರೇಮವೇನೆ | ಮುನಿಯು ಆಮುನಿಗಳು ಕೂಡಿದ ನಂತ್ರ ವನಭೋಜನ ತನಗೆಂದ್ಲೂ 10 ಹಲವು ಕಾಲವು ಸೀತೆ ಅಸುರರ ವಡನಾಡಿ ನೆನದಳು ಋಷಿಗಳಾಶ್ರಮವಾ | ಹಸನವಲ್ಲವು ಸೀತೆ ಇನ್ನು ನೀನುಳಿವದು ಋಷಿಗಳಾಶ್ರಮಕೆ ಹೋಗೆಂದಾ 11 ಅಯೋಧ್ಯಾಪುರದ ವಾನರರೆಲ್ಲಾ ಬಿಟ್ಟು ಕೈಹಿಡಿದ ಪುರುಷನ ಬಿಟ್ಟು | ನೆನದಾಳು ಋಷಿಗಳಾಶ್ರಮವ 12 ಅಂದು ಶ್ರೀರಾಮರು ಬೇಟೆಗ್ಹೋದೇವೆಂದು ಇಂದು ಡಂಗುರವ ಸಾರಿದರೂ | ಒಂದು ಗಳಿಗೆ ಮುಹೂರ್ತತಡೆಯಲಾಗದು ಎಂದು ಮಂದಿ ಮಕ್ಕಳ ಕರಸಿದರೂ 13 ಬಂದರು ಮಂತ್ರಿ ಮಾನ್ಯರು ಪ್ರಹಸ್ತರು ಬಂದರು ಪ್ರಧಾನೇರು | ಬಂದರು ರವಿಗುರಿನವಿಗುರಿಕಾರರು (?) ಬಂದರು ವಾಲಗದೋರೊಪ್ಪಿದರು 14 ಆಟಪಾಟದೋರು ನೋಟಕ್ಕೆ ದಾರಾರು ಸೂತ್ರದವರು ಸುವ್ವಿಯವರು | ಪಾಟಕ್ಕೆ ದಾರಾರು ಪೊಗಳುವ ಭಂಟರು ರಘು ನಾಥನೋಲಗದಲೊಪ್ಪಿದರೂ 15 ಹೊನ್ನು ಹಲಗೆಯವರು ಬೆನ್ನಬತ್ತಲೆಯವರು ಚಿನ್ನಬಿನ್ನಾಣನಾಯಕರೂ | ಚೆನ್ನಿಗರಾಮರ ಪೊಗಳುವ ಭಂಟರು ಬಿನ್ನಾಣದಿಂದೊಪ್ಪುತಿಹರೂ 16 ಪಟ್ಟಾವಳಿ ಹೊಸಧೋತರವು ಇಟ್ಟರು ಆಭರಣವನ್ನೂ | ಮಕರಕುಂಡಲ ಕಿರೀಟವೂ ಇಟ್ಟರು ನೊಸಲ ಕಸ್ತುರಿಯಾ 17 ಹಾರಮಾಣಿಕನಿಟ್ಟು ಕಾಲುಪೆಂಡೆಯನಿಟ್ಟು ನ್ಯಾವಳದ ಉಡುದಾರನಿಟ್ಟು ಸೂರ್ಯನ ಕುಲದ ಕುಮಾರರು ನಾಲ್ವರು ಏರಿದರು ಹೊನ್ನ ರಥವಾ 18 ವಾಯುವೇಗ ಮನೋವೇಗವೆಂಬೋ ರಥ ಏರಿದರೆ ರಾಮಲಕ್ಷ್ಮಣರೂ | ಸೂರ್ಯ ತಾನೆ ರಥವ ನಡೆಸೆ ಕೂಡ ಬೇಟೆಗೆ ತೆರಳಿದರು 19 ಅತ್ತಿ ಆಲದ ಮರ ಸುತ್ತ ಹೆದ್ದುಮ್ಮರಿ ಉತ್ತತ್ತಿ ಬೆಳಲು ದಾಳಿಂಬ ಉತ್ತಮ ಅಶ್ವತ್ಥ ಇಪ್ಪಿಯ ವನಗಳು ವಿಸ್ತರವನವೊಪ್ಪುತಿಹವೂ 20 ನಾರಂಗ ಬೆರಸಿದ ಕಿತ್ತಳಿ ಹರಿಸಿಣದ ತೋಪು ಎಲಿತ್ವಾಟ ಅರಸುಮಕ್ಕಳು ರಾಮಲಕ್ಷ್ಮಣರೆಲ್ಲರು ಬೆರಸಿ ಬೇಟೆಯ ನಾಡುತಿಹರೂ 21 ಯಾರಾಡಿಗಿಡಗಳು ಕ್ಯಾದೀಗಿವನಗಳು ನಾಗಸಂಪಿಗೆಯ ತೋಪುಗಳು | ಜೋಡೀಲಿ ಭರತ ಶತ್ರುಘ್ನರೆಲ್ಲರು ಕಾಲಾಳು ಬೇಟೆನಾಡಿದರೂ 22 ಉದ್ದಂಡ ಕೇಕಾಪಕ್ಷಿ ಚಂದಾದ ಬಕನ ಪಕ್ಷಿಗಳೂ | ಅಂದಾದ ಆಲಿವಾಣ ಆಲಹಕ್ಕಿಯು ರಾಮ ಚಂದ್ರನು ಬೇಟೆಯಾಡಿದನು 23 ಬೇಟೆನಾಡಿ ಬಂದು ನಿಂತಾರು ನೆರಳಲ್ಲಿ ಒಂದುಗಳಿಗೆ ಶ್ರಮವ ಕಳೆದು ನಂದನವನದಲ್ಲಿ ತನಿಹಣ್ಣು ಮೆಲುವೋರು ಗಂಗೆಯ ಉದಕ ಕುಡಿಯುವೋರು 24 ನಳಿನನಾಭನು ತಾನು ಬಳಲಿ ಬೇಟೆಯನಾಡಿ ನೆರಳಲ್ಲಿ ತುರಗ ಮೇಯಿಸಿದ ಕಿರಿಯಲಕ್ಷ್ಮಣ ದೇವ ತೊಡೆಯನ್ನೆ ಕೊಡು ಎಂದು ಮಲಗೀದ ಒಂದು ನಿಮಿಷವನೂ 25 ಮುಂದಿನ ಆಗೆಂತ್ರವ(?) ಕಂಡನು ಕನಸಿನಲಿ ರಾಮ ಕಂಗೆಟ್ಟು ಮೈಮುರಿದೆದ್ದಾ | ಕಂದ ಲಕ್ಷ್ಮಣ ಕೇಳೊ ಇಂದೆನ್ನ ಸೊಪ್ನದಲಿ ಬಂದಿಹಳೊಬ್ಬ ತಾಟಕಿಯೂ 26 ಇಂದುವದನೆಮುಡಿ ಪಿಡಿದಳೆವೊ ದುಕಂಡೆ ತುಂಡರಾವಣ ಕುಯೋದು ಕಂಡೆ | ಇಂದು ನೀ ಸೀತೆಯ ಕರೆದೊಯಿದು ಕಾನನದಿ ದಿಂಜಾರಿಳಿಸೋದು ಕಂಡೆ 27 ಮುನ್ನ ಅರಿಯದೆ ನಾವು ಬಂದೆವೋ ಲಕ್ಷ್ಮಣ ಇನ್ನು ಸೀತೆಗೆ ಜಯವಿಲ್ಲಾ | ಅಂದು ಶ್ರೀರಾಮರಾ ಬೇಟೆ ಮೂಲಕದಿಂದೆ ಬಂದಾಳು ಮಾಯದ ಗರತಿ | 28 ಬಂದು ಅಯೋಧ್ಯಾಪುರದ ಬೀದಿಯವಳಗೆ ಚಂದದಿ ಕುಣಿದಾಡುತಿಹಳು | ಅಂದು ಶ್ರೀ ರಾಮರ ಅರಮನೆ ಬಾಗಿಲಿಗೆ ಚಂದುಳ್ಳ ದ್ವಾರಪಾಲಕರೂ 29 ಬಂದು ಅಸುರೆ ನಿನ್ನ ಬಿಡವಲ್ಲೆನೆಂದರೆ ಬಂದಡರಿದಳರಮನೆಗೆ ಕಂಡು ಜಾನಕಿ ತಾನು ಕರಸಿದಳಾಗಲೆ ಬಂದಳು ಮಾಯದ ಗರತಿ 30 ಬಂದು ಪಾದಕ್ಕೆರಗಿ ಕೈಮುಗಿದು ನಿಂತಳು ತಂದಳು ನಾಗ ಸಂಪಿಗೆಯಾ | ಅಂಗನೆ ಜಾನಕಿ ನೀಮುಡಿಯೆಂದು ಕೊಟ್ಟರೆ ಸಂದೇಹ ಬಟ್ಟಳಾ ಸೀತೆ 31 ಈನಾಡ ಗರತಿ ನೀನಲ್ಲ | ದಾರು ಬಂಧುಗಳುಂಟು ದಾರ ಬಳಿಗೆ ನೀ ಬಂದೀ 32 ಈರೇಳು ಲೋಕವ ಸುತ್ತಿ ತಿರುಗಿ ಬಂದೆ ನಾಗಲೋಕಕ್ಕೆ ಬಾಹೆನೆಂದು ನಾಗಲೋಕದಿಂದ ದೇವಲೋಕಕ್ಕೆ ಬಂದೆ ದೇವಿಗೆ ಕಾಣಿಕೆ ತಂದೇ 33 ಹೊನ್ನು ಹಣವನೀವೆ ಅನ್ನವಸ್ತ್ರವನೀವೆ ಇನ್ನು ನೀವಲಿದದ್ದು ಈವೆ | ಇನ್ನು ನೀವಲಿದದ್ದು ಚೆನ್ನಾಗಿ ಕೊಡುವೆನು ಬಿನ್ನವಿಸೆ ಗರತಿ ನೀ ಅಂದ್ಲೂ 34 ಹೊನ್ನು ಹಣವನೊಲ್ಲೆ ಅನ್ನವಸ್ತ್ರವನೊಲ್ಲೆ ನಿನ್ನ ಭಾಗ್ಯವು ನಾನೊಲ್ಲೆ | ಮುನ್ನಿನ ಅಸುರರೂಪ ಇನ್ನು ನೀಬರೆದರೆ ಹರಣ ಹೊರುವೆನು 35 ಮುನ್ನವನು ಕಂಡು ಕೇಳರಿಯ | ಪನ್ನಂಗಧರ ರಾಮ ಬಂದರೆ ಬೈದಾರು ಗಮನ ಮಾಡಂದ್ಲೂ36 ಅಂದರೆ ಸೀತೆ ತನ್ನಂಗಕ್ಕೆ ಬರಲೆಂದು ತಂದು ತೊಡೆದಳು ಭಸುಮವನು | ಅಂದೆನ್ನ ವನಕೆ ಪ್ರದಕ್ಷಿಣೆ ಬರುವಾಗ ಉಂಗುಷ್ಟವನು ಕಂಡುಬಲ್ಲೆ 37 ಉಂಗುಷ್ಟದಂದಕ್ಕೆ ಮುಂದೆ ಪಾದವ ಬರಿ ಹಿಂದೆ ಹಿಂಬುಡ ಮೊಣಕಾಲು | ಹೊಂದಿಸಿ ಬರೆ ಎಂದಳವಳು 38 ಚಂದಾದ ಕಾಗದ ಲೆಕ್ಕಣಿಕೆ ಪಿಡಿದು ತಂದು ಕೊಟ್ಟಳು ಸೀತೆ ಕೈಗೆ | ಒಂದು ಕಾಯಕೆ ಹತ್ತು ಸಿರಗಳ ಬರೆದಳು ಮುಂದೆರಡು ಪಾದವ ಬರೆದಳು 39 ಒಂದರ ಹಿಂದೊಂದು ವರ್ಣಿಸಿ ಬರೆದಳು ತಂದು ನಿಲಿಸಿದಳು ರಾವಣನಾ | ಚಂದವಾಯಿತು ದೇವಿ ವರವಕೊಡೆನುತಲಿ ಎಂದೆಂದಿಗೂ ಅಳಿಯದ್ಹಾಗೇ 40 ಅಳಿದು ಉಳಿಯದಿರು ಉಳಿದು ನೀ ಕೆಡದಿರು ಧರಿಯವಳಗೆ ಅಡಗದಿರು | ಕಿರಿಯ ಲಕ್ಷ್ಮಣದೇವ ಹೊಡೆದರೆ ಮಡಿ ಎಂದು ವರವ ಕೊಟ್ಟಳು ಸೀತೆ ಪಠಕೆ 41 ಮರೆ
--------------
ಹೆಳವನಕಟ್ಟೆ ಗಿರಿಯಮ್ಮ
ಲಾಲಿ ಆಡಿದ ರಂಗ ಲಾಲಿ ಆಡಿದ ಪ. ಬಾಲೆ ರುಕ್ಮಿಣಿ ದೇವೇರೊಡನೆ ಮೂರು ಲೋಕನಾಳ್ವ ದೊರೆಯುಅ.ಪ. ಸಾಧು ಮಚ್ಚಕಚ್ಚಪರೂಪನಾಗಿ ಭೇದಿಸಿ ತಮನ ಕೊಂದುವೇದವನ್ನು ಮಗನಿಗಿತ್ತು ಭೂದೇವಿಯರೊಡನೆ ಕೃಷ್ಣ 1 ಅಮೃತ ಬಡಿಸಿ ಸತ್ಯಭಾಮೆಯರೊಡನೆ ಕೃಷ್ಣ2 ವರಾಹ ರೂಪನಾಗಿ ಆದಿ ಹಿರಣ್ಯಕನ ಕೊಂದುಮೇದಿನಿಯ ಮೇಲಕೆ ತಂದು ರಾಧೆಯೊಡನೆ ನಗುತ ಕೃಷ್ಣ 3 ಪುಟ್ಟಬಾಲನ ನುಡಿಯ ಕೇಳಿ ಕೆಟ್ಟ ಕಶ್ಯಪನುದರ ಸೀಳಿಅಷ್ಟಮಂಗಳವಾದ್ಯವಾಗಲು ಅಷ್ಟ ಸ್ತ್ರೀಯರೊಡನೆ ಕೃಷ್ಣ 4 ಸುರರು ಲಕುಮಿಯೊಡನೆ ನಗುತ ಕೃಷ್ಣ 5 ಯುದ್ಧದಲಿ ಕೊಡಲಿ ಪಿಡಿದು ಗುದ್ದಿ ಕ್ಷತ್ರೇರ ಶಿರವ ತರಿದುಗೆದ್ದ ಸಿಂಹನೆನಿಸಿಕೊಂಡು ಪದ್ಮಾವತಿಯ ಕೂಡೆ ಕೃಷ್ಣ 6 ಸೇತುಬಂಧನವನ್ನೆ ಮಾಡಿ ಧೂರ್ತರಾವಣನ್ನ ಕೊಂದುಖ್ಯಾತಿಪಡೆದು ಪುರಕೆ ಬಂದು ಸೀತೆಯೊಡನೆ ರಾಮಚಂದ್ರ 7 ಒಂದು ಏಳು ಎಂಟುಸಾವಿರ ಇಂದುಮುಖಿಯರನ್ನು ಕೂಡಿಮಂದಮಾರುತ ಚಂದ್ರ ಬರಲು ನಂದಗೋಕುಲದ ದೊರೆಯು 8 ಅಂಬರವ ತೊರೆದು ದಿಗಂಬರÀ ವೇಷವನ್ನೆ ಧರಿಸಿಮಂಗಳಾಂಗ ಮಾರಜನಕ ರಂಗನಾಯಕಿಯೊಡನೆ ಕೃಷ್ಣ9 ಅಚ್ಚಮುತ್ತಿನಾಭರಣವಿಟ್ಟು ಲಕ್ಷವಿಲ್ಲದೆ ಹಯವನೇರಿಭಕುತರಿಗೆ ಅಭಯಕೊಡುತ ಭಕ್ತವತ್ಸಲ ಹಯವದನ 10
--------------
ವಾದಿರಾಜ
ಲಾಲಿ ನಿತ್ಯಾನಂದ ಲಾವಣ್ಯ ಕಂದ ಲಾಲಿ ಭೃತ್ಯಾರ್ತಿ ವಾರಣನೆ ಗೋವಿಂದ ಲಾಲಿ ಜೀಯಾ ಪ್ರತ್ಯಗಾತ್ಮ ಮುಕುಂದ ಲಾಲಿ ರಮಾಧೃತ ಚರಣಾರವಿಂದ ಲಾಲಿ ಪ. ಆದಿ ಮಧ್ಯಾಂತ ವಿದೂರನಾಗಿಹನ ವೇದಾಂತ ವೇದ್ಯ ವೈಭವ ಪಕ್ಷಿಗಮನ ತಾಪ ಕಳಿವವನ ಮೋದದಿ ಪಾಡಿ ತೂಗುವೆನು ಮಾಧವನ 1 ಈರಾರು ದಿಗ್ಗಜವೆಂಟು ಕಾಲುಗಳು ಪಾರಾವಾರಗಳೆಂಬ ಪೊಳೆವ ಪೊಟ್ಟಿಗಳು ಧಾರಾರೂಪ ಭಾಗೀರಥಿ ಸರಪಣಿ ಸೇರಿಸಿ ಡೋಲ ಶೃಂಗಾರ ಗೈಯುವೆನು 2 ನಿರ್ಮಲವಾದೇಳು ಹಲಿಗೆಗಳಿರುವ ಭರ್ಮಗಿರಿಯೆ ಸಿಂಹಾಸನವನಿಟ್ಟಿರುವ ಧರ್ಮಾರ್ಥ ಕಾಮ ಮೋಕ್ಷಗಳೆಂಬ ಫಲವ ಮರ್ಮವನರಿತು ಕಟ್ಟುವೆ ಒಳ್ಳೆಯ ರಥವ 3 ಸೂರ್ಯ ಚಂದ್ರಮರೆಂಬ ಧಾರಾದೀಪಗಳು ತಾರಕಿಗಳು ಸುತ್ತಲಿರುವ ಚಿನ್ಹೆಗಳು ಭವ ಜಯ ಜಯವೆಂಬ ಭರವು ನೀರಜಾಲಯೆ ಕೂಡಿ ಪಾಡುವ ಸ್ವರವು 4 ಕೋಟಿ ಭಾಸ್ಕರ ರಾಭ ಕೋಟೀರ ಕುಂಡಲ ಪಾಟಲಾಧರ ಮುಕುರರಾಭ ಕಪೋಲ ನಳಿನ ಪತ್ರ ನೇತ್ರ ಜ- ಚಾಪ ಧಾಟಿ ಭ್ರೂಯುಗಳ 5 ಪೂರ್ಣ ಮಾಲಾನಂತ ಪೌರ್ಣಮಿಯ ವಿಧು ವರ್ಣ ಮುಖಾಬ್ಜಸುಪರ್ಣವರೋಹ ಕರ್ಣ ಹೀನ ಕಶಿಪೂ ಪರಿಶಯನ ದು- ಗ್ಧಾರ್ಣವ ಮಂದಿರ ಸ್ವರ್ಣ ನಿಭಾಂಗ 6 ಕಂಬು ಸುಗ್ರೀವ ವಿಲಂಬಿತ ವನಮಾಲ ಅಂಬುಜ ಚಕ್ರ ಗದಾಕರ ಹಸ್ತ ಕೌಸ್ತುಭ ಜಗ- ನಾಭ 7 ವಿತತ ರೇಖಾತ್ರಯಯುತಮೃದುದರ ಮಧ್ಯ ಗತ ಕಿಂಕಿಣೀ ಜಾಲ ಕಾಂಚಿ ಕಲಾಪ ಪೀವರೋರು ಸಂ- ಮೂರ್ತಿ 8 ಸಿಂಜನ ಜೀರ ರಂಜಿತ ಚರಣ ಕಂಜಾಂಕುಶಕೇತು ರೇಖಾಲಂಕರಣ ಮಂಜುಳ ಮೃದು ಪಾದತಳ ಮುಕ್ತಾಭರಣ ಸಂಜೀವನ ರಾಜ ಸಂಪ್ರೀತಿ ಕರಣ 9 ಔತ್ತಾನಪಾದಿಯನಾಧಾರಗೊಂಡು ನಿತ್ಯ ತೂಗಾಡುವ ತೊಟ್ಟಿಲ ಕಂಡು ಹಿಂಡು ಬಹು ತೋಷಗೊಂಡು ಸತ್ಯಭಾಮೆಯ ಕಾಂತನಾಡುವ ಚೆಂಡು 10 ಪತಿತ ಪಾವನ ಪರಮಾನಂದ ರೂಪ ಸತತ ತಾನೆ ಪರಿಹರಿಸುವ ತಾಪ ವಿತತ ಮಹಿಮ ವೆಂಕಟಾಚಲ ಭೂ ಗತಿಯಾಗಿ ತೋರುವ ತನ್ನ ಪ್ರತಾಪ 11
--------------
ತುಪಾಕಿ ವೆಂಕಟರಮಣಾಚಾರ್ಯ
ಲಿಂಗಾ ಎನ್ನಂತರಂಗ ಪ ಮಂಗಳಾಂಗ ಸರ್ವೋ-ತುಂಗನೆ ರಾಮ ಅ. ಪ. ಮಂದಾಕಿನೀಧರಗೆ ಗಂಗಾಂಬು ಮಜ್ಜನವೆ ಚಂದ್ರಮೌಳಿಗೆ ಗಂಧ ಕುಸುಮಾರ್ಪಣೆಯೆ ಕಂದರ್ಪಜಿತಗೆ ಮಿಗಿಲಾಪೇಕ್ಷೆಯೆ ರಾಮಾ 1 ಘನವಿದ್ಯಾತುರಗೆ ಮಂತ್ರಕಲಾಪವೆ ಧನವತಿಯ ಸಖಗೆ ಕೈಕಾಣಿಕೆಯೆ ಮನೆರಜತ ಪರ್ವತಗೆ ಫಣಿಯ ಆಭರಣವೆ ಮನೋ ನಿಯಾಮಕಗೆನ್ನ ಬಿನ್ನಹವೆ ರಾಮಾ2 ವೈರಾಗ್ಯ ನಿಧಿಗೆ ಈ ವಿಷಯ ಪದಾರ್ಥವೆ ಗೌರಿಯ ರಮಣಗೆ ಈ ಸ್ತೋತ್ರವೆ ವೀರ ರಾಘವ ವಿಜಯವಿಠ್ಠಲ ನಿಜಹಸ್ತ ವಾರಿಜದಳದಿಂದುದ್ಭವಿಸಿದ ಮಹಾ 3
--------------
ವಿಜಯದಾಸ
ಲೇಸಾಗಿ ಭಜಿಸುವೆ ಗೋಪಾಲದಾಸರ ರಾಶಿ ದುರಿತಂಗಳಾ ಪ ವಾಸವಾ ಪಿಡಿದ ವಜ್ರವೀಗಿರಿಯಂತೆ ನಿಶ್ಶೇಷದಿ ಭೇದಿಪರೊಇವರು ಅ.ಪ. ಸತಿ ಗಿರಿವಾಸ ನಾಮಕಳಾ ಸುರುಚಿರೋದರವೆಂಬೊ ಶರನಿಧಿಯಲ್ಲಿ ಚಂದಿರನಂತೆ ಉದಿಸಿಹರೋ ಇವರು 1 ಸದಮಲಮನದಲ್ಲಿ ಪದುಮನಾಭನ ನಾಮ ಪದೋಪದಿಯಲ್ಲಿ ಬಿಡದೇ ಪದರೂಪದಲ್ಲಿ ಪೊಗಳುವೊ ಸುಜನರಿಗೆ ಮೋಹವನುಣಿಸುತಿಹರೊ ಇವರು 2 ವಿಜಯದಾಸರೇ ತಮ್ಮ ನಿಜಗುರುಗಳೂ ಎಂದು ಭಜಿಪರೋ ಭಕುತಿಯಲ್ಲಿ ದ್ವಿಜವರ್ಯ ಜನಕಿಷ್ಟ ಸೃಜಿಸೋರು ಕಲ್ಪ ಭುಜದಂತೆ ನಿರುತದಲ್ಲಿ ಇಲ್ಲಿ 3 ತೊಂಡ ಪ್ರಹ್ಲಾದ ಪ್ರಿಯನ ಮಂಡಲ ಯತಿಗಳ ಬೆಳೆಪ ಯಾತ್ರೆಗಳ ಕೈಕೊಂಡು ಸೇವಿಸುತಿಹರೊ ಇವರು 4 ಭಕುತಿ ಪ್ರಾಚುರವಾಗೆ... ಹರಿನಾಮಪ್ರಕಟಿಸಿ ಕವನದಿಂದಾ ನಿಖಿಳಾಭೀಷ್ಟವನೀವ ಲಕುಮೀಪತಿಯೇ ಎಂದು ಭಕುತಗೆ ಬೋಧಿಪರೊ ಇವರು 5 ಆವಾವ ಕ್ರಿಯೆಗಳಲ್ಲಾವಾವ ಕಾಲದಿ ತಾವದಗಿನ್ನು ಹರಿಕಾವ ಸುಜೀವರ ಈ ವಿಧವೆಂದು ತನ್ನವರಿಗುಪದೇಶಿಪಾ6 ಭವ ತೋಯದಿ ಕಡೆಗೆತ್ತುವಾ . 7 ಸುಜನ ಜನರ ಕಾಯಕ್ಲೇಶವ ಕಳೆದು ಮಾಯಾರಮಣನ ವಲಿಸುವಂಥ ದಿವ್ಯ ಉಪಾಯವ ತೋರಿಪರೊ ಇವರು 8 ಮಂದ ಮನುಜ ನಾನು ಒಂದೊಂದಿವರ ಗುಣವೃಂದ ಪೊಗಳಲೊಶವೇ ತಂದೆ-ವರದಗೋಪಾಲವಿಠ್ಠಲನ ಹೊಂದಿ ಸೇವಿಪ ಗುರುವೇ 9
--------------
ತಂದೆವರದಗೋಪಾಲವಿಠಲರು
ಲೋಕನೀತಿ ಮನವೇ ನೀ ಭಜಿಸು| ರಾಮನಾಮವನು ಘನ ಮುಕ್ತಿಸಾಧನೆ | ಪಾದನಾಮವನು ಪ ಅಂದದ ನಾಮ| ಚಂದದ ನಾಮ|| ವಂದಿಸೆ ಮನಕಾ| ನಂದದ ನಾಮ 1 ಕೋಮಲ ನಾಮ| ನಿರ್ಮಲ ನಾಮ| ಕಾಮಿತವೀವ ಸು| ಪ್ರೇಮದ ನಾಮ 2 ಪಾವನ ನಾಮ| ಶ್ರೀವರ ನಾಮ|| ಪವನಸಂಜಾತನು ಸ್ಮರಿಸುವ | ನಾಮ 3 ಅಗಣಿತ ಮಹಿಮ|| ಜಗದಭಿರಾಮನ | ಘನಗುಣ ನಾಮ 4 ಭಕ್ತಾದಿ ಜನರು| ಭಜಿಸುವ ನಾಮ| ಮುಕ್ತಿಸಾಧನವಾದ| ಭಕ್ತಿಯ ನಾಮ 5
--------------
ವೆಂಕಟ್‍ರಾವ್
ಲೋಕನೀತಿಯ ಪದಗಳು 448 ಅನ್ನದಾನವನ್ನೆ ಮಾಡು ಕನ್ಯದಾನವನ್ನೆ ಮಾಡುನಿನ್ನ ನಂಬಿದರ ಪೊರೆದುನ್ನತ ಹರ್ಷದಿ ಬಾಳುಸನ್ನುತ ಸರ್ವಲೋಕಗಳನ್ನು ರಕ್ಷಿಸುವನಾಗ ಪ್ರ-ಸನ್ನ ಮೂರುತಿಯಾಗುರನ್ನದ ರಾಶಿಗಳನ್ನು ಚಿನ್ನದ ಆಭರಣಗಳನ್ನುಭೂಸುರರಿಗಿತ್ತು ಮನ್ನಿಸು ಉದಾರನಾಗುಮನ್ನೆಯರೆಲ್ಲರು ಬಂದುನಿನ್ನನೋಲೈಸಲೆಂದು ಅಪರ್ಣೆಪರಿಸಿದಳು 1 ಕೋಟಿ ಗೋದಾನವ ಮಾಡು ಸಾಟಿಯಿಲ್ಲದಂಥಾ ಪಂಚಕೋಟಿ ಗಜದಾನ ಶತಕೋಟಿಯಶ್ವದಾನಗಳಮೀಟಾದ ಬ್ರಾಹ್ಮರಿಗಿತ್ತು ಕೀರ್ತಿವಂತನಾಗು ಕಿ-ರೀಟ ಶೌರ್ಯದೊಳಾಗು ಮೀಟಾದ ಮಂತ್ರಿಗಳ ಕಿ-ರೀಟ ರತ್ನಕಾಂತಿಗಳ ಕೋಟಿ ನಿನ್ನ ಪಾದದಲ್ಲಿಧಾಟಿಯಾಗಿರುವನಾಗುಲೂಟಿಸಿ ವೈರಿಗಳನು ಗೋಟುಗೊಳಿಸುವ ಶಶಿಜೂಟ ಭಕ್ತನಾಗು 2 ಇತ್ತೆರದೆ ಬೀಸುತಿಹ ಮುತ್ತಿನ ಚಾಮರ ಶ್ವೇತಛ್ಛತ್ರ ಸೀಗುರಿಗಳ ಮೊತ್ತದ ಸಾಲೊಳಗೆ ಒ-ಪ್ಪುತ್ತಲಿರುವವನಾಗು ಸತ್ಯವಂತನಾಗು ಸುವ್ರತ ನೀನಾಗುಪೆತ್ತವರ ನೋಡಿ ನಲಿವುತ್ತಿರಲು ಭೂಸುರರುಮುತ್ತಿನಕ್ಷತೆಯನಾಂತುಪೃಥ್ವಿಯ ವೊಳಗೆಲ್ಲಾ ಸ-ರ್ವೋತ್ತಮ ಪುರುಷನಾಗೆನುತ್ತಮಸ್ತಕದಿ ತಳಿವುತ್ತ ಪರಸಿದರು 3 ಇಂದ್ರನಾಗು ಭೋಗದೊಳು ಸತ್ಯವಾಕ್ಯದೊಳು ಹರಿ-ಶ್ಚಂದ್ರನಾಗು ಪಾಲನೆಯ ಮಾಡುವುದರೊಳಗೆ ಉ-ಪೇಂದ್ರನಾಗು ಬುದ್ಧಿ ಕೌಶಲದೊಳು ತಿಳಿಯಲು ನಾ-ಗೇಂದ್ರ ನೀನಾಗುಚಂದ್ರನಾಗು ಶಾಂತಿಯೊಳಗೆಂದು ವಂದಿಮಾಗಧರವೃಂದ ಕರವೆತ್ತಿ ಜಯವೆಂದು ಪೊಗಳುತ್ತಿರಲಾ-ಚಂದ್ರಾರ್ಕವು ಸೌಖ್ಯದಿ ಬಾಳೆಂದು ಸಾನಂದದೊಳಾಗಇಂದಿರೆ ಪರಸಿದಳು4 ಧೀರನಾಗುದಾರನಾಗು ಸೂರಿಜನವಾರಕೆ ಮಂ-ದಾರನಾಗು ಸಂಗರ ಶೂರನಾಗು ವೈರಿ ಜ-ಝ್ಝೂರನಾಗು ಮಣಿಮಯ ಹಾರನಾಗುವೀರಾಧಿವೀರ ನೀನಾಗುಭೂರಮಣನಾಗು ಮಂತ್ರಿವಾರ ಸಂರಕ್ಷಕನಾಗುಕಾರುಣ್ಯಸಾಗರನಾಗು ಕಾಮಿತಫಲಿದನಾಗುಶ್ರೀ ರಾಮೇಶನಪಾದಾಬ್ಜ ವಾರಿಜ ಭಕ್ತನಾಗೆಂದುಶಾರದೆ ಪರಸಿದಳು5
--------------
ಕೆಳದಿ ವೆಂಕಣ್ಣ ಕವಿ
ವಂದನೆ ಮಾಡಿರೈ ವ್ಯಾಸ ಮುನೀಂದ್ರರ ಪಾಡಿರೈ ಪ ವಂದಿಸುವರ ಭವಬಂಧವ ಬಿಡಿಸಿ ಆ ನಂದವ ಕೊಡುವ ಕರ್ಮಂದಿವರೇಣ್ಯರ ಅ.ಪ ಸದ್ಗುಣ ಸಾಂದ್ರಾ ಚಂದ್ರಿಕಾದಿ ಪ್ರಬಂಧತ್ರಯ ನಿರ್ಮಿಸಿದಾ ಮತವರ್ಧಿಸಿದಾ ಸತಿ ಮೆಚ್ಚಿಸಿದಾ ಹಿಂದಕೆ ಹರಿಯನು ಸ್ತಂಭದಿ ತೋರಿದ ಕಂದ ಪ್ರಹ್ಲಾದರೆ ಬಂದಿಹರೆನ್ನುತ 1 ಕೃಷ್ಣರಾಯನಿಗೆ ದುಷ್ಟಯೋಗ ಪರಿಹರಿಸಿ ರಾಜ್ಯವಹಿಸಿ ಯ- ಥೇಷ್ಟ ದಾನಫಲಕೊಟ್ಟು ನೃಪನನುಗ್ರಹಿಸಿ ರಾಜ್ಯದೊಳಿರಿಸಿ ಶ್ರೇಷ್ಠವಾದ ಸಿಂಹಾಸನದಲಿ ಕುಳ್ಳಿರಿಸಿ ಆಜ್ಞೆಯ ತಿಳಿಸಿ ಎಷ್ಟು ಮಹಿಮರೆಂದರಿತು ಇವರ ಮನ ಮುಟ್ಟಿ ಭಜಿಪರಿಗ ಭೀಷ್ಟೆಯಗರಿವರ 2 ಸೂರ್ಯಯತಿ ಕುಲ- ವರ್ಯ ಗುರುಮಧ್ವಮ ತದಿಸದ್ವೈಷ್ಣವ ಕುಮುದಕೆ ಭಾರ್ಯಾ ಪಾವನ ಚರ್ಯ ಪರಮಮಹಿಮ ಬ್ರಹ್ಮಣ್ಯ- ತೀರ್ಥರಿಗೆ ತನಯಾ ಕವಿಜನಗೇಯಾ ಶರಣರ ಪೊರಿಯುವ ಶಿರಿಕಾರ್ಪರನರಹರಿಯ ನೊಲಿಸಿರುವ ಪರಮ ಮಹಾತ್ಮರ3
--------------
ಕಾರ್ಪರ ನರಹರಿದಾಸರು
ವಂದನೆಯ ಮಾಡುವೆ ಶ್ರೀಗುರುವಿಗೆ- ವಂದನೆಯ ಮಾಡುವೆÀ ಪ ವಂದನೆ ಮಾಡುವೆನಿಂದು ಯದುಶೈಲದೋಳ್ ಚಂದದೊಳಿರುತಿಹ ತಂದೆ ನಾರಾಯಣಗೆ ಅ.ಪ ಹರುಷದಿಂದಲಿ ಇನ್ನು ಹರಸಿ ಸಜ್ಜನರಿಗೆ ವರಗಳ ಕೊಡುತಿಹ ವರಲಕ್ಷ್ಮಿ ತಾಯಿಗೆ 1 ಹಿರಿದಾದ ದೈತ್ಯನ ಸೀಳಿ ಸಂತೋಷದಿ ಮೊರೆಹೊಕ್ಕ ಕಂದನ ಪೊರೆದ ನರಸಿಂಹಗೆ 2 ಪಾವನತರಮಾದ ದೇವಸಮೂಹವ ಕಾವ ಕೃಪಾನಿಧಿ ಕಲ್ಯಾಣಮ್ಮಗೆ 3 ವಿಸ್ಫುರಿತದಲ್ಲಿರ್ಪ ವೈರ್ಮುಡಿ ತಿರುಮಣ್ಣು ಸರ್ಪಶಯನಗರ್ಪಿಸಿದಂತ ಗರುಡಗೆ 4 ಶ್ರೀಲೋಲನಡಿಗಳ ಲೀಲಾಮೃತಗಳ ಶೀಲರಾಗಿ ಕುಡಿದ ಶ್ರೇಷ್ಠ ಆಳ್ವಾರ್ರಿಗೆ 5 ವರದವಿಠಲನ ಒಲಿದು ತಾ ಬಂದಿನ್ನು ಗಿರಿಯೊಳು ನೆಲೆಸಿದ ವರ ಗುರುಪೀಠಕೆ 6 ಪಂಕಜಾಕ್ಷನಪಾದಪಂಕಜ ನಂಬಿಹ ವೆಂಕಟಪುರದೊಳಗಿರುವ ವೈಷ್ಣವರಿಗೆ 7 ವಿಷ್ಣುವಿನಂಶದಿ ಪುಟ್ಟಿ ಸಂತೋಷದಿ ಸೃಷ್ಟಿಯನಾಳ್ವ ಶ್ರೀ ಕೃಷ್ಣಭೂಪಾಲಗೆ8 ಮರೆಯದೆ ಭಕ್ತರ ಕರುಣದಿಂದಲಿ ಕಾಯ್ವ ವರಮಹದೇವನ ಪುರದಶ್ರೀರಂಗಗೆ 9
--------------
ರಂಗದಾಸರು
ವಂದಿಪೆ ಮುದದಿಂದಲಿ ನಾನು ವಂದಿಪೆ ಮುದ್ದು ಗಣಪಗೆ ವಂದಿಪೆ ಪ ನಂನಂದನನಾಮ ಮನದೊಳು ಆ- ನಂದದಿ ಭಜಿಸುವ ಚಂದ್ರಶೇಖರಸುತಗೆ ಅ.ಪ. ಆಕಾಶಕಭಿಮಾನಿ ಶ್ರೀಕಂಠವರಪುತ್ರ ರಾಕೇಂದುವದನ ಶ್ರೀಕಾಂತ ನಿಜಭಕ್ತ ಏಕಾಂತದಲಿ ಹರಿ ಆಕಾರತೋರಿಸಿ ನೂಕುತಭವಪಾಶ ಸಾಕು ಸಾಕು ಎಂದು 1 ವರವರದಾಯಕ ಸುರಗಣಪೂಜಿತ ವರಕರಿಮುಖವೇಷ ವರಸರ್ಪಕಟಿಸೂತ್ರ ಸಿರಿಕಾಂತಸೇವೆಗೆ ಬರುವ ವಿಘ್ನಂಗಳೆಲ್ಲ ಭರದಿಂದ ತರಿಯುತ ಕರುಣದಿ ಸಲಹೆಂದು 2 ವೇದವ್ಯಾಸರಶಿಷ್ಯ ಮೋದಕಗಳ ಪ್ರಿಯ ಮದನನಸೋದರ ಮುದವಿದ್ಯೆದಾಯಕ ಮಧ್ವಾಗಮದಲಿ ಅದ್ದುತ ಎಮ್ಮನು ಶುದ್ಧರನು ಮಾಡೋ ಸಿದ್ಧಿ ವಿನಾಯಕನೆಂದು 3 ಏಕದಂತನೆ ವರ ಆಖುವಾಹನ ಭಕ್ತರ ಶೋಕ ಹರಿಸೊ ಬೇಗ ಲೋಕ ವಂದಿತನೆ ರಕ್ತಾಂಬರ ತನು ರಕ್ತಗಂಧಪ್ರಿಯ ವಿ - ರಕ್ತಿನೀಡುತ ಹರಿಭಕ್ತನೆಂದೆನಿಸು ಎಂದು 4 ಪಾಶಾಂಕುಶ ಶಶಿದರ್ಪಭಂಜನ ಶ್ರೀಶನಾಭಿವಾಸ ವಿಶಾಲಕರ್ಣಯುತ ನಾಶಗೈಸುತವಿಷಯ ವಾಸನೆಗಳೆಲ್ಲ ವಿಶ್ವೋಪಾಸಕ ಪ್ರಭು ಶ್ವಾಸಾವೇಶಯುತನೆಂದು 5 ಚಾರುದೇಷ್ಣನೆ ನಿನ್ನ ಚರಣಕ್ಕೆ ಶರಣೆಂಬೆ ಸರಿನೀನು ಧನಪಗೆ ಗುರುಶೇಷಶತರಿಗೆ ತರಿದು ತಾಪತ್ರಯ ವರಜ್ಞಾನ ವೈರಾಗ್ಯ ಹರಿಭಕ್ತಿ ಹರಿ ಧ್ಯಾನ ನಿರುತ ಕೊಡು ಎಂದು 6 ಜಯತೀರ್ಥ ಹೃದಯದಿ ವಾಯುವಿನೊಳಿಪ್ಪ ಸಿರಿ ತಾಂಡವ ಕೃಷ್ಣವಿಠಲ ರಾಯನ ಧ್ಯಾನ ಕಾಯಾ ವಾಚಾ ಮನಸಾ ದಯಮಾಡಿ ಸಲಹೈಯ್ಯ ಜೀಯಾ ಗಣಪನೆಂದು7
--------------
ಕೃಷ್ಣವಿಠಲದಾಸರು
ವಂದಿಪೆ ಶ್ರೀಮನ್ನಾರಾಯಣಗೆ ವಂದಿಪೆ ಅಮ್ಮ ಲಕ್ಷ್ಮೀದೇವಿಗೆ ಪ ವಂದಿಪೆ ವಿಶ್ವಕ್ಸೇನರಿಗೆ ಕುಂದದಿರಲಿ ಎನ್ನ ಸನ್ಮತಿ ಎಂದು ಅ.ಪ ವಂದಿಪೆ ನಾ ಮೊದಲಾಳ್ವಾರರಿಗೆ ಅಂದದಿ ಹರಿಯ ತೋರಿಕೊಟ್ಟರಿಗೆ ಕಂದಮಿಳಲಿ ಸೊಲ್ವ ನುಡಿಗಳಿಗೆ ಪ್ರ- ಬಂಧದಿವ್ಯಗಳ ಬೆಳಗಿಸಿದವರಿಗೆ 1 ವಂದಿಪೆ ವಂದಿಪೆ ಆಚಾರ್ಯರಿಗೆ ಚಂದದಾ ಯತಿತ್ರಯರುಗಳಿಗೆ ಸುಂದರ ಶ್ರೀವೈಷ್ಣವ ತತ್ವಗಳನು ಹೊಂದಿಸಿ ಬಂಧಿಸಿ ಸ್ಥಾಪಿಸಿದವರಿಗೆ 2 ಇನ್ನು ವಂದಿಪೆ ಗುರುಪೀಠಕ್ಕೆ ಚೆನ್ನ ತಿರುನಾರಾಯಣಪುರಕೆ ಉನ್ನತ ರಂಗದಾಸಯತಿವರ್ಯಗೆ ಸನ್ನುತ ಪಿತಾನುಜ ಶಾಮದಾಸರಿಗೆ 3 ಸಾಜದಲೆನ್ನಲಿ ಅರಿವನು ಮೂಡಿಸಿ ಓಜನನಾಗಿಸೆ ಕೇಶವ ನಾಮದಿ ಆರ್ಜಿಸಿ ಉಪಾದಾನದಿ ಬಳಲಿದ ಪೂಜ್ಯಪಿತ ವೆಂಕಟರಂಗಾರ್ಯರಿಗೆ 4 ವಂದಿಪೆ ಕೊನೆ ಮೊದಲಿಲ್ಲದೆ ವಂದಿ- ಪೆಂ ದಾಸನ ಮಾಡಿದ ದೇವನಿಗೆ ತಂದೆ ಜಾಜಿಪುರಾಧೀಶನಿಗೆ ಮುದ- ದಿಂದ ಶ್ರೀ ಚೆನ್ನಕೇಶವಗೆ 5
--------------
ನಾರಾಯಣಶರ್ಮರು