ಒಟ್ಟು 3209 ಕಡೆಗಳಲ್ಲಿ , 121 ದಾಸರು , 2351 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೂರೆಂಟು ನೆನೆದು ಫಲವೇನು ಈರೇಳು ಜಗದೊಡೆಯಹರಿಯನೊಮ್ಮೆ ನೆನೆ ಮನವೆ ಪ. ಧನದಾಸೆಗಳಲದಿರು ಭವದುಃಖ ಬಳಲದಿರುಜನಾರ್ದನನ ಮರೆಯದಿರು ಈ ತನುವ ಪೊರೆಯದಿರುಅನಘಜನರೊಡನಾಡು ದಿನದಿನ ಶುಭವಕೂಡುಇನಿತು ಜನಮವೆ ಸಾಕು ಇನ್ನು ಮುಕುತಿಯೆ ಬೇಕು 1 ಸಾಕು ದುರ್ಜನÀರಾಟ ಸಾಕು ಸತಿಯರ ಬೇಟಸಾಕು ಸವಿಯನ್ನದೂಟ ಸಾಕು ಘನಕೂಟಸಾಕು ದೇಶಕೆವೋಟ ಸಾಕು ಸಲೆ ಭವನೋಟಸಾಕದೆಲ್ಲ ಖಳಕೂಟ ಸಾಕುಮನೆ[ಮಠ] 2 ಕೇಳು ಹರಿಮಹಿಮೆಯನು ಪೇಳು ಹರಿನಾಮವನುಬಾಳು ಬಂದಷ್ಟರಿಂದ ತಾಳು ಹಸಿತೃಷೆಗಳಶ್ರೀಲಲನೆಯಾಳ್ದ ಹಯವದನ ಸಿರಿನರಹರಿಯಆಳುತನವನು ಬೇಡು ಕೀಳು ಬುದ್ಧಿಯ ದೂಡು 3
--------------
ವಾದಿರಾಜ
ನೆಚ್ಚದಿರು ಸಂಸಾರ ಕಾಡಗಿಚ್ಚಿನಂದದಿ ದಹಿಸುವದತಿ ಘೋರ ಪ ಕ್ಷುದ್ರ ಜನರ ಸಂಗತ್ಯಜಿಸೊ | ಸದಾ ಮಧ್ವಸುಶಾಸ್ತ್ರ ಕೇಳಿ ನೀ ಗ್ರಹಿಸೊ ಸದ್ಗುರುಗಳ ಪಾದಾಶ್ರೈಸೊ | ನೀನೆ ಉದ್ಧಾರಕನೆಂದು ಹರಿಯನ್ನೆ ಬಯಸೊ 1 ನಾನೆಂಬೊ ಅಹಂಕಾರಸಲ್ಲ | ನಿನ್ನ ಮಾನಿನಿ ಸುತರು ಸಂಗಡ ಬಾಹೋರಿಲ್ಲ ಈ ನುಡಿ ದಿಟ ಸಟಿಯಲ್ಲ | ಹೀಗೆ | ನೀನಾಚರಿಸಲು ಒಲಿವ ಶ್ರೀನಲ್ಲ2 ಆಶಾಕ್ರೋಧಂಗಳ ಕೀಳೊ | ಹರಿ | ದಾಸರ ದಾಸರ ದಾಸನೆಂದ್ಹೇಳೊ || ದೋಷಕ್ಕೆ ಅಂಜಿ ನೀ ಬಾಳೊ | ಎಲ್ಲ | ಈಶನಾಧೀಶವೆಂಬುದೆ ಮುಕ್ತಿ | ಕೇಳೋ 3 ಹರಿವಾಸರುಪವಾಸ ಮಾಡೊ | ಇರುಳು ಜಾಗರ ಮರಿಬ್ಯಾಡೊ ಮರುದಿನ ನಿದ್ರೆಯ ದೂಡೊ | ಇಂತು ಪರಿಯಲ್ಲಿ ನಡೆದರೆ ನಿನಗಿಲ್ಲ | ಕೇಡು 4 ಇಂದ್ರಿಯಗಳ ನಿಗ್ರಹಿಸೊ | ಮನಿಗೆ | ಬಂದ ಭೂಸುರರಿಗೆ ವಂದಿಸಿ | ಉಣಿಸೊ ಕುಂದು ನಿಂದೆಗಳೆಲ್ಲ ಸಹಿಸೊ | ಶಾಮ ಸುಂದರ ವಿಠಲನ್ನ ನೀ ಪೊಂದಿ ಸುಖಿಸೊ 5
--------------
ಶಾಮಸುಂದರ ವಿಠಲ
ನೆನವಿಗೊಮ್ಮೆ ಹರಿನಾಮಘೋಷ ಮಾಡಿ ಜನುಮ ಸಾರ್ಥಕಾಗುವುದು ಪೂರ್ಣ ನೋಡಿ ಧ್ರುವ ಜನವನ ದೊಳು ಹರಿಯ ಕೊಂಡಾಡಿ ಅನುಮಾನ ಹಿಡಿದು ಕೆಡಬ್ಯಾಡಿರೊ ನೆನವಿಗೊಮ್ಮೆ ನಾಮಘೋಷವ ಮಾಡಿ ನೆನವಿನೊಳು ನೀವು ಘನ ಬೆರದಾಡಿರೊ 1 ಹರಿಯ ನಾಮ ನೆನವುತಿಕ್ಕಿ ಚಪ್ಪಾಳಿ ದೂರಮಾಡಿ ಮನದ ಚಿಂತೆ ಮುಮ್ಮಳಿ ಸಾರಿ ದೂರುತಿದೆ ವೇದ ಪೂರ್ಣ ಕೇಳಿ ಅರಿತು ಹರಿಯ ನಾಮ ನೀವು ಬಲಗೊಳ್ಳಿರೊ 2 ಹರಿನಾಮಕಾಗಬ್ಯಾಡಿ ವಿಮುಖ ಅರಿತು ಮಾಡಿಕೊಳ್ಳಿ ಪ್ರಾಣಪದಕ ತರಳ ಮಹಿಪತಿಯ ತಾರಕ ತೋರುತಿಹ್ಯ ದು ಬ್ರಹ್ಮಸುಖವೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆನೆದು ಬದುಕಿರೋ ಸತತ ನೆನೆದು ಬದುಕಿರೋ ಪ ನೆನೆದು ಬದುಕಿ ಸುಜನರೆಲ್ಲಘನಗುಣಾಂಬುಧಿ ಶ್ರೀಪಾದರಾಯರ ಅ.ಪ ಇತರ ಧ್ಯಾನವೆಲ್ಲವನುಳಿದುಅತಿಶಯದ ವಿರಕ್ತಿ ಬಲಿದುಮತಿ ವಿಶೇಷವೆನಿಪ ಮಧ್ವಮತಾಂಬುನಿಧಿಗೆ ಪೂರ್ಣಚಂದ್ರನ 1 ದುರಿತ ದೂರನಶಮದಮಾದಿ ಗುಣಸಮುದ್ರನ2 ಶುಭ ಚರಿತನ 3 ವಾದಿಕುಂಜರ ಪಂಚಮುಖನಸಾಧು ಸಜ್ಜನ ಕಲ್ಪವೃಕ್ಷನವೇದ ಶಾಸ್ತ್ರ ಪುರಾಣದಲಿಆದಿಶೇಷನ ಪೋಲ್ವ ಮುನಿಯ 4 ಸನ್ನುತ ಪರಮವನಧಿ ಗಂಭೀರ ಶ್ರೀಪಾದರಾಯರ 5
--------------
ವ್ಯಾಸರಾಯರು
ನೆನೆಯುತ್ತ ತಿರಗುವೆನಯ್ಯ ಜೀಯ ನಿನಗ್ಯಾಕೆ ದಯಬಾರದಯ್ಯ ಪ ಮನುಮುನಿನುತ ನಿಮ್ಮ ವನÀರುಹಂಘ್ರಿಯಧ್ಯಾನ ಅನುದಿನ ಬಿಡದೆ ಅ.ಪ ಪೋಷಿಸಲೊಲ್ಲ್ಯಾಕೋ ನೀನು ನಿಮ್ಮಯ ದಾಸನು ನಾನಲ್ಲವೇನು ದೇಶದೇಶಂಗಳನ್ನು ನಾನು ಬಿಡದೆ ಘಾಸ್ಯಾದೆ ತಿರುತಿರುಗಿನ್ನು ಈಸು ದಿವಸ ವ್ಯರ್ಥ ಮೋಸವಾದೆನು ನಿಮ್ಮ ಧ್ಯಾಸ ಮರೆದು ಭವಪಾಶವಿದೂರನೆ 1 ಪರುಷವ ಶಿರದೊಳು ಪೊತ್ತು ಎ ನ್ನಿರವ್ಹಸಿದು ಬಳಲುವಂತಿತ್ತು ಕರದಲ್ಲೆ ಮುಕುರುವಿತ್ತು ಅರಿಯದೆ ಹಂಚಿನೋಳ್ಹಲ್ಕಿಸಿದಂತಿತ್ತು ಪರಮಪುರುಷ ನಿಮ್ಮ ನೆರೆನಂಬಿ ಬದುಕದೆ ದುರಿತದಿಂ ಬಳಲಿದೆ ಪರಿಪರಿ ಹರಿಹರಿ2 ವರಭಕ್ತರಭಿಮಾನ ನಿನಗೆ ಇಲ್ಲೇನು ಸ್ಥಿರ ಮುಕ್ತಿ ಪದದಾಯಕನೆ ಸ್ಥಿರವಾಗಿ ಅರಿದು ನಾ ನಿಮಗೆ ಮರೆಹೋದೆ ಕರುಣದಿ ಕೊಡು ವರಸುತಗೆ ಅರಘಳಿಗ್ಯಗಲದೆ ಸ್ಮರಿಪೆ ನಿಮ್ಮಯ ಪಾದ ಶರಣಾಗತರ ಪಾಲ ಸಿರಿವಂತ ಶ್ರೀರಾಮ 3
--------------
ರಾಮದಾಸರು
ನೆರೆದು ಗೋಪಿಯರೆಲ್ಲರು - ಕೃಷ್ಣಯ್ಯನಕರವ ಪಿಡಿದುಕೊಂಡುಭರದಿಂದ ಬಂದು ಯಶೋದೆಗೆ ಚಾಡಿಯಅರುಹಿದರತಿ ವೇಗದಿ ಪ ಬಲು ಕಳ್ಳ ನಿನ್ನ ಮಗ - ಯಶೋದೆ ಕೇಳೆಹಾಲು ಕರೆಯುತಿರಲುತೊಲೆಗೆ ನಿಚ್ಚಣಿಕೆಯನೆ ಹಾಕದೆ ಸುರಿದನುನೆಲುವಿನ ಪಾಲ್ಮೊಸರ 1 ಅಮ್ಮಯ್ಯ ಇಲ್ಲ ಕಾಣೆ - ಇವಳು ಎನ್ನಸುಮ್ಮನೆ ದೂರುವಳೆಹಮ್ಮಿಂದ ನಾನವಳ ಅಟ್ಟಕ್ಕೆ ನೆಗೆಯಲುಬೊಮ್ಮ ಜಟ್ಟಿಗನೇನಮ್ಮ2 ಮತ್ತೆ ಮುತ್ತಿನಂಥ - ನಿನ್ನೀ ಮಗಹತ್ತಿ ಗವಾಕ್ಷದಿಂದಎತ್ತಿಟ್ಟ ಬೆಣ್ಣೆಯನೆಲ್ಲದ ಮೆದ್ದನುಹೆತ್ತ ಮಕ್ಕಳಿಗಿಲ್ಲದಂತೆ 3 ಗಡಿಗೆ ಬೆಣ್ಣೆ ಮೆಲ್ಲಲು - ಎನ್ನ ಹೊಟ್ಟೆಮಡುವು ಭಾವಿಯೇನೆಹುಡುಗರಿಗರಿಯದೆ ಎತ್ತಿಟ್ಟ ಬೆಣ್ಣೆಯಹೊಡೆದರವರ ಮಕ್ಕಳು 4 ಮರೆತು ಮಂಚದ ಮೇಲೆ - ನಾ ಮಲಗಿರಲುಹರಿವ ಹಾವನೆ ತಂದುಅರಿಯದಂತೆ ಬಂದು ಮುಸುಕಿನೊಳಗಿಟ್ಟುಸರಸರ ಪೋದನಮ್ಮ 5 ಹರಿದಾಡುವ ಹಾವನು - ನಾ ಹಿಡಿಯಲುತರಳ ನಾ ತಡೆಗಾರನೆಹರಕೆಯ ಹೊತ್ತುದನೊಪ್ಪಿಸದಿರಲುಗುರುತು ತೋರಲು ಬಂತೇನೊ6 ಕಕ್ಕಸ ಕುಚಗಳಮುಸುಕಿನೊಳಗೆ ಹಿಡಿದ 7 ಕೇಳು ಕೇಳೆಲೆ ಅವ್ವ - ಇವಳು ಬೇ-ತಾಳನಂತಿರುವಳುಬಾಲಕ ನಾನವಳುದ್ದಕೆ ನೆಗೆವೆನೆಜೋಲುವ ತೊಗಲಿಗಾಗಿ 8 ಮಕ್ಕಳು ಪಡೆದವರು - ಇಲ್ಲದ ಕಳವಿಕ್ಕಬಹುದೆ ಕೃಷ್ಣಗೆಸಿಕ್ಕ ತಪ್ಪು ಸಮೇತ ಎಳೆತಂದರೆತಕ್ಕ ಬುದ್ಧಿಯ ಹೇಳುವೆ 9 ಅಣುಘನರೂಪ ಕಾಣೆ - ನಿನ್ನೀ ಮಗಚಿನುಮಯ ರೂಪ ಕಾಣೆಘನ ಮಹಿಮನು - ಇಂಗಳಗೊಂದಿಯಚೆನ್ನಕೇಶವರಾಯ ಕಾಣೆ 10
--------------
ಕನಕದಾಸ
ನೆರೆನಂಬಿ ಪಡೆಯಿರೊ ಹಿತವ ನಮ್ಮಗುರು ಮಧ್ವಮುನಿಯ ಸಮ್ಮತವ ಪ. ತ್ರೇತೆಯೊಳಂಜನೆತನಯನಾಗಿಸೀತಾರಮಣ ರಘುಪತಿಗತಿಪ್ರಿಯದೂತತನದಿ ಖಳತತಿಯ ಕೊಂದುಖ್ಯಾತಿ ಪಡೆದ ಹನುಮಂತನಾದ ಯತಿಯ1 ದ್ವಾಪರದಲಿ ಭೀಮನೆನಿಸಿ ಪಾಂಡು-ಭೂಪನರಸಿ ಕುಂತಿ ಉದರದಿ ಜನಿಸಿಶ್ರೀಪತಿಗರ್ಥಿಯ ಸಲಿಸಿ ದೈತ್ಯ-ರೂಪ ನೃಪನ ಕೊಂದ ಮುನಿಪನ ಭಜಿಸಿ2 ಕಲಿಯುಗದಲಿ ಯತಿಯಾಗಿ ಈಇಳೆಯ ದುಶ್ಶಾಸ್ತ್ರವ ಜರಿದವರಾಗಿಕುಲಗುರು ಮಧ್ವಪತಿಮುನಿಯೋಗಿ ನಮ್ಮಬಲು ಹಯವದನನ ಬಂಟನೆಂದು ಬಾಗಿ3
--------------
ವಾದಿರಾಜ
ನೆರೆನಂಬಿದವನೆ ಧನ್ಯಾ ಈ ಗುರುಪದ ಪ ನೆರೆನಂಬಿದವ ರಘತರಿವ ವೇದವ್ಯಾಸ ಕರ ಪಾದ ಅ.ಪ ವರಮಣಿಯೊಳು ಶಿರಿತನದಿಂದಲ್ಲಿ ಮೆರೆವ ನಾಯ ಕರ ಮಂದಿರದಿ ಜಾತರಾಗಿ ಪರಮ ಮಹಿಮರಾದ ಗುರು ರಘೋತ್ತಮರಿಂದ ಪರವಿದ್ಯೆಯನು ಪೊಂದಿ ಚರಿಸಿ ದಿಗಂತದಿ ವರವೇದ ವ್ಯಾಸರಿಂದ ತುರಿಯಾಶ್ರಮ ಪಡೆದು ಸಚ್ಚಿಷ್ಯರಿಂದÀ ಸಂತತ ಪ್ರವಚನ ಮಾಡುತಲಿ ಆನಂದ ತೀರ್ಥರ ಮತ ಶರಧಿಗೆ ಪೂರ್ಣ ಚಂದಿರನೆನಿ ಪರ ಪದ 1 ಯಾದವಾರ್ಯರಿಗೆ ಅಗಾಧ ಮಹಿಮರು ಈ ಪೂರ್ಣಬೋಧ ಗ್ರಂಥಾರ್ಥ ಗ್ರಂಥಗಳನ್ನು ಟೀಕಾ ಕೃ ಕೌವÀುುದಿಗಳನು ರಚಿಸಿದಂಥಾ ವಾದಿ ಮಾತಂಗ ಮೃಗಾಧಿಪರನ್ನು 2 ಕರೆದು ಶಿಷ್ಯರಿಗೆ ಹರಿ ಪಾದಂಗುಟದಿಂದ ಸುರನದಿಯನು ಸಾಕ್ಷಾ- ತ್ಕರಿಸಿ ತೋರಿಸಿದಂಥ ಗುರು ಕೃಷ್ಣದ್ವೈಪಾಯನ ತೀರ್ಥರಿಗೆ ಘನವಾದ ಮಹಿಮೆಯನಾ ಸುರತರು ಸಮ ಚರಣ 3 ವೃಂದಾವನದೆಡೆ ಒಂದು ಪ್ರದಕ್ಷಿಣಿ ವಂದನೆ ಮಾಡಲು ಮಂದನಾದರು ಪ್ರಾಜ್ಞನೆಂದು ಕರೆಸುವನು ವಂಧ್ಯೆಯಾದರು ಬಹುಕಂದರ ಪಡೆವಳುಸಂದೇಹವ್ಯಾಕಿಲ್ಲಿ ದೂರಮಾಡುತಲಿ ಆ ನಂದವ ಗರಿಯುವರ ಭಕ್ತರ ದುರಿತಾಂಧಕಾರಕ್ಕೆ ರವಿ ಯಂದದಲಿಪ್ಪರ 4 ವರಭೀಮಾತೀರದಿ ಪರಿಶೋಭಿಸುವ ಮಣಿ ಪುರದಿ ಪಂಡಿತ ಭೂಮಿ ಚರಣಾರಾಧಕರನು ಸುಮಂದಿರದಿ ಕುಳಿತು ನಿತ್ಯ ಮೂಲದಲಿ ಮೆರೆವ ಧೇನಿಸುತಿಪ್ಪ ಗುರುವೇದೇಶರ ಶುಭ ಚರಣ ಯುಗಲವ 5
--------------
ಕಾರ್ಪರ ನರಹರಿದಾಸರು
ನೆರೆನಂಬಿದೆನು ನಾನಿನ್ನ ಪಾದಾಂಬುಜವನು ಕರುಣದಿ ಸಲಹೋ ಎನ್ನಾ ಪ ಹರನದೊಡೆಯ ಗೌರಿ ವರನಾಗಿ ಮೆರೆದಿಹ ಸ್ಮರಹರ ಕರ್ಪೂರ ಧವಳಾಂಗಾ ರಿಪುಭಂಗಾ ದೇವತುಂಗಾ ಮೃಢೇಶ್ವರಲಿಂಗಾ ದೇವರದೇವ ನೀನೆಂದು ರಾವಣ ಬಂದು ದೇವಾ ನೀ ಸಲಹೋ ಇಂದು ಭಾವಕಿ ಬೇಡಿಕೊಂಡರೆ ಭಾವಜೆಯವಗೆ ನೀ ಪಾರ್ವತೀಶ್ವರನೇ ನೆರೆ ಹರಿಧರಹರನೀನೆಂದು ಹರಿಯುತಾ ಬಂದು ಹರನೆ ರಕ್ಷಿಸೋ ನೀ ಎಂದು ಕರದು ಹರಿಮಿತ್ರನ ಕರುಣದಿ ವರವಿತ್ತ ಕರಿಗೊರಳನೆ ಅಮಿತಸರ್ವೇಶಾ ನೆರೆ ಪಡುಗಡಲೊಡೆಯನೆಂದು ಪಾಡುತಬಂದು ಪೊಡವಿಯೊಳ್ ಸ್ತುತಿಪನೆಂದೂ ಒಡೆಯ ಲಕ್ಷ್ಮಣನಿಗೆ ಒಡನೆ ಅಭಯವಿತ್ತ ರಿಪುಭಂಗಾ ಹರನೆ ಭಸಿತಾಂಗಾ
--------------
ಭಟಕಳ ಅಪ್ಪಯ್ಯ
ನೆಲೆಯಾಗಿ ನಿಲಿಸೆನ್ನ ನಿಲಯದಿ ಶ್ರೀಕಾಂತ ಸಿರಿ ಲಲನೆಯರೊಡಗೂಡಿ ಪ. ಸೂಕ್ತ ಪುರಾಣ ಭಾರತಗಳು ಪೊಗಳುವ ಭಕ್ತ ವತ್ಸಲತೆಯ ಬಹುಮತಿಯ ನಿತ್ಯ ಕೊಂಡಾಡುವ ಭೃತ್ಯಜನರ ಬೇಗ ಹೆತ್ತ ತಾಯಿವೊಲೆತ್ತಿ ಪಾಲಿಪ ಹರಿ 1 ವಿಧಿ ವಿಹಿತಗಳಾದ ಸದಮಲ ಕೃತಗಳ ಮುದದಿ ಮಾಡುವ ಸರ್ವ ಬುಧ ಜನರ ಸದನಕ್ಕೆ ಕರತಂದು ವಿಧವಿಧ ಪೂಜೆಯ ಒದಗಿ ಮಾಡುವ ಪೂರ್ಣ ನಿಧಿಮತಿಗಳನಿತ್ತು 2 ಬಂದ ಅತಿಥಿಗಳ ನಿಂದಿಸದಲೆ ಅಭಿ ವಂದಿಸಿ ಸತ್ಕರಿಸುತ ಫಲವ ಕುಂದಿಲ್ಲದಾನಂದ ಸಂದೋಹದಾಯಿ ಮುಕುಂದಗರ್ಪಿಸಿ ಸುಖದಿಂದ ಚರಿಸುವಂತೆ 3 ಅಹಿತಲ್ಪ ಶಯನನೀ ವಹಿಸಿದ ದಾಸರ ಸುರರು ಸಂಗ್ರಹಿಸುವರು ಕುಹಕ ವೈರಿಗಳನ್ನು ಬಹು ದೂರೋಡಿಸಿ ಮಹಾಮಹಿಮ ನೀ ಕರುಣದಿ 4 ಚತುರ ಹಸ್ತಗಳಿಂದ ಚತುರ್ವಿಧ ಫಲರಸ ಸ್ತುತಿಸುವ ದಾಸರೀ ಗತಿ ಬೇಗದಿ ಸತತ ಸುರಿವ ನಾಗಪತಿ ಗಿರಿನಿಲಯ ಶ್ರೀ ಪತಿ ನೀನೆ ಎನಗೆ ಸದ್ಗತಿಯಾಗಿ ಪೊಳವುತ್ತ 5
--------------
ತುಪಾಕಿ ವೆಂಕಟರಮಣಾಚಾರ್ಯ
ನೈವೇದ್ಯ ಸಮರ್ಪಣೆ ಸುಳಾದಿ ಸಿರಿ ದಧಿ ವರುಣಧನ್ಯ ಸುಗಂಧಿನೀ ವಾಮನ್ನರೂಪವನ್ನು ಚಿಂತಿಸು ಸೂಪಕೆ ಗರುಡ - ನೀರನ್ನ ತಿಳಿದು ಸುಂದರಿ ಶ್ರೀಧರನೆನ್ನುಪನ್ನಂಗಶಯ್ಯ ಗುರು ಗೋವಿಂದ ವಿಠಲನುಮನ್ನಿಸಿ ಕೈಗೊಂಡು ಉನ್ನತ ಪದ ಕೊಡುವ 1 ಹುಳಿ ತೊವ್ವೆಯಲಿ ಸೌಪರಣಿ ಮತ್ತೆ ಪ್ರತಾಪಓಲೈಸು ಸುಂದರೀ ಶ್ರೀಧರ ದೇವನ್ನತಿಳಿ ಪತ್ರ ಶಾಖಕೆ ಮಿತ್ರನೆಂಬಿನನಗಾಳಿ ದೇವನೆ ಸಾಧು ಅವನೊಳಗೆ ವಿದ್ಯಾಒಲಿಸು ಹೃಷಿಕೇಶ ದೇವನ್ನಫಲಶಾಖಕೆ ಶೇಷ ಶೂರಾಧಭಿನ ಸು-ಶೀಲಾದೇವಿ ಪದ್ಮನಾಭನ್ನ ತಿಳಿದುಹುಳಿ ಸೊಪ್ಪು ಗೊಜ್ಜು ಸಾರು ಇವುಗಳೊಳ್‍ಶೈಲಜೆ ಕಪಿ ಸಲಕ್ಷಣಾ ದಾಮೋದರತಿಳಿ ಅನಾಮ್ಲ ಸಪ್ಪೆ ಭಕ್ಷಗಳಲ್ಲಿ ರುದ್ರ - ಅ-ನಿಲನು ಜಗತ್ಪತಿ ಜಯಲಕ್ಷ್ಮೀ - ಇವಳಲ್ಲಿ ಶ್ರೀ ಜಯಾಪತಿಯ ಚಿಂತಿಸೆವಲಿವ ಗುರುಗೋವಿಂದ ವಿಠಲ ಆನಂದ 2 ಶರ್ಕರ ಗುಡ ಭಕ್ಷ ಇಂದ್ರನು ಮಹಾಬಲಲಕ್ಕೂಮಿಯಾ ರೂಪ ಶ್ರೀ ವಾಸುದೇವನು ಸೋ-ಪಸ್ಕರಕೆ ಗುರು ಆಕಾಶಾಶ್ರಯ ಮನೋಜವರಲೆಕ್ಕಿಸು ಕಮಲೆಯ ಪ್ರದ್ಯುಮ್ನ ದೇವನಮಿಕ್ಕ ಕಟು ದ್ರವ್ಯವು ಖಾರಕೆ ಯಮಧರ್ಮಸತ್ಕರಿಸೆ ಜಿತನ ಪದ್ಮಾನಿರುದ್ದರಸೊಕ್ಕವರರಿ ಗುರು ಗೋವಿಂದ ವಿಠಲಯ್ಯಸಿಕ್ಕಾ ಸುಳಿವ ಮುಂದೆ ಕಕ್ಕುಲಾತಿಯ ಸಲ್ಲ 3 ಅಚ್ಯುತ ದೇವನ್ನ ಚಿಂ-ತಿಸು ಉಪ್ಪು ಉಪ್ಪಿನಕಾಯಿ ನಿರಋತಿ ಚಿರಚೀವಿವಾಸುವು ಧನ್ಯಾದೇವಿ ಜನಾರ್ಧನನು ಫಲರಸವು ಫಲೋದಕ ಶೀಕರಣೀತ್ಯಾದಿರಸದೊಳ ಹಂಪ್ರಾಣ ಣ್ರಾಣನು ಆದ್ವಯರುಭಾಸಿಸುವಳು ವೃದ್ಧೀದೇವಿ ಉಪೇಂದ್ರನುದೋಷದೂರನು ಗುರು ಗೋವಿಂದ ವಿಠಲ ಪ್ರ-ಕಾಶಿಸುವನು ಬಿಡದೆ ಈಪರಿ ಗುಣಪರ್ಗೆ 4 ಸದನ ಯಜ್ಞಾದೇವಿಯರರಂಗನು ಹರಿ ರೂಪದಲ್ಲಿರುವನು ಉತ್-ತುಂಗ ಸ್ವಾದೋದಕದೊಳಗಿರುವನು ಬುಧನುಪಿಂಗ ಕಣ್ಣಿನ ಮತಿಮತನ ಸುಧಾದೇವಿಅಂಗಜನಯ್ಯ ಶ್ರೀಕೃಷ್ಣನ್ನಧೇನಿಸೆಗಂಗಾಜನಕ ಗುರು ಗೋವಿಂದ ವಿಠಲನುಮಂಗಳ ಕೊಡುವನು ಸಂದೇಹವಿಲ್ಲದೆ5 ಭೋಜನ ದ್ರವ್ಯದಿ ಯೋಚಿಸ್ಯಭಿಮಾನಿಗಳಭೋಜ್ಯ ಗುರು ಗೋವಿಂದ ವಿಠಲನೆ ಭೋಜಕ6
--------------
ಗುರುಗೋವಿಂದವಿಠಲರು
ನೊಂದು ಬಂದೆನೊ ಕಾಂತೇಶ | ಕೈಯನೆ ಪಿಡಿಯೊ ಮಂದಭಾಗ್ಯಳ ಜೀವೇಶ ಪ. ಅಂದು ಶ್ರೀ ರಾಮರ ಸಂದೇಶವನ್ನೆ ಭೂ- ನಿಂದನೆಗೆ ಅರುಹುತಲಿ ಬಹು ಆನಂದಪಡಿಸಿದ ವಾನರೇಶ ಅ.ಪ. ಶೌರಿ | ಭಕ್ತರ ಕಾಯ್ವ ದುರಿತದೂರನೆ ಉದಾರಿ ಚರಣಕ್ಕೆ ನಮಿಸುವೆ ಹರಿಗೆ ಪರಮಾಪ್ತನೆ ದುರಿತ ತರಿಯುತ ಪೊರೆಯೊ ಗುರುವರ ರಾಮಕಿಂಕರ 1 ಗುರುಕರುಣದ ಬಲದಿ | ಅರಿತೆನೊ ನಿನ್ನ ಚರಣ ನಂಬಿದೆ ಮನದಿ ಪರಿ ಭವಕ್ಲೇಶ ಪರಿಯ ಬಣ್ಣಿಸಲಾರೆ ಹರಿವರನೆ ದಯಮಾಡು ಶ್ರೀ ಹರಿ ದರುಶನವನನವರವಿತ್ತು 2 ಕಾಂತನ ಅಗಲಿರಲು | ಚಿಂತೆಯಲಿ ಭೂ ಕಾಂತೆ ವನದೊಳಗಿರಲು ಸಂತೋಷದಿಂ ರಾಮನಂತರಂಗವನರುಹಿ ಸಂತಸವಪಡಿಸುತಲವನಿಸುತೆಯ ನಿಂತೆ ರಾಮರಿಗ್ಹರುಷ ತೋರಿ 3 ದ್ರುಪದ ಸುತೆಯಳ ಕೀಚಕ | ದುರ್ಮನದಲಿ ಅಪಮಾನಪಡಿಸೆ ದುಃಖ ತಪಿಸಿ ನಿನ್ನನು ಬೇಡೆ ಆ ಪತಿವ್ರತೆ ಸತಿ ಕುಪಿತದಿಂದಲಿ ಖಳನ ಕೊಂದೆ ಅಪರಿಮಿತ ಬಲಭೀಮ ಪ್ರೇಮ 4 ಮಿಥ್ಯಾವಾದದ ಭಾಷ್ಯಕೆ | ಸುಜ್ಞಾನಿಗಳ್ ಅತ್ಯಂತ ತಪಿಸುತಿರೆ ವಾತಜನಕನಾಜ್ಞೆ ಪ್ರೀತಿಯಿಂದಲಿ ತಾಳಿ ಘಾತುಕರ ಮತ ಮುರಿದ ಮಧ್ವನೆ ಖ್ಯಾತಿ ಪಡೆದೆÀ ಸಿದ್ಧಾಂತ ಸ್ಥಾಪಿಸಿ 5 ಪ್ರಾಣಪಾನವ್ಯಾನ | ಉದಾನ ಸ ಮಾನ ಭಾರತಿ ಕಾಂತನೆ ಜ್ಞಾನಿಗಳಿಗೆ ಪ್ರೀತ ಜ್ಞಾನ ಭಕ್ತಿಪ್ರದಾತ ದೀನಜನ ಮಂದಾರ ಕಾಯೊ ದೀನಳಾಗಿಹೆ ಕೈಯ ಮುಗಿವೆ 6 ನೋಯಲಾರೆನೊ ಭವದಿ | ಬೇಗನೆ ತೋರೊ ಧ್ಯೇಯ ವಸ್ತುವ ದಯದಿ ವಾಯುನಂದನ ನಿನ್ನ ಪ್ರಿಯದಿಂ ನಂಬಿದೆ ಕಮಲ ದ- ಳಾಯತಾಕ್ಷನ ಮನದಿ ತೋರಿ7 ಹರಣ ನಿನಗೊಪ್ಪಿಸಿದೆ | ಸುರವಂದಿತ ಕರೆದು ಮನ್ನಿಸಿ ಕಾಪಾಡೊ ಸಿರಿವರನನು ಹೃತ್ಸರಸಿಜದಲಿ ತೋರೊ ಧರೆಯ ವಸ್ತುಗಳ್ ಮಮತೆ ತೊರೆಸು ಹರಿಯ ನಾಮಾಮೃತವನುಣಿಸು 8 ಈ ಪರಿಬಂದೆ ಅನಿಲ | ನಿನ್ನೊಳು ವಾಸ ಗೋಪಾಲಕೃಷ್ಣವಿಠ್ಠಲ ಶ್ರೀಪತಿ ಕೃಪೆಯಿಂದ ನೀ ಪ್ರೀತನಾಗುತ ಕೈಪಿಡಿದು ಸಂತೈಸು ಕರುಣದಿ ಭಾಪುರೇ ಕದರುಂಡಲೀಶ 9
--------------
ಅಂಬಾಬಾಯಿ
ನೊಂದೆನಯ್ಯ ನಂದನಂದನ ಪ. ಹಿಂದು ಮುಂದನರಿಯದಿಂದು ತಂದೆ ನೀನೆ ರಕ್ಷಸೆಂದೇ ಅನನ್ಯಭಾವದೇ ಅ.ಪ. ನೋಡಲಿಲ್ಲ ನಿನ್ನಪದವ ಪಾಡಲಿಲ್ಲ ನಿನ್ನ ಗುಣವ ಮಾಡಲಿಲ್ಲ ನಿನ್ನ ಸೇವೆ ಮೂಢನಂದದಿ ದೂಡಿಸುಜನರ ಸಂಗವನ್ನು ಬೇಡಿ ಕೃಪಣರ ಕರುಣೆಯನ್ನು ಕಾಡುಹರಟೆಯಿಂದ ಕಳೆದೆನಕಟ ಕಾಲಮಂ1 ಉರಿವಕೊಳ್ಳಿಯನ್ನೆ ತುಳಿದೆ ಸುರಿದೆನೀರನುರಿಗೆ ಬರಿದೆ ಹಿರಿಯರುಕ್ತಿಯ ಮೀರಿನಡೆದೆ ಮೆರೆದೆ ಗರ್ವದೆ ಶರಣರನ್ನು ಜರಿದು ನುಡಿದೆ ಪರರ ಹಿಂಸೆಗೈದೆ ಮದದೆ ಪರಮಪಾಪಿಯಾದೆ ನಿನ್ನ ಸ್ಮರಣೆ ಮಾಡದೆ 2 ಅರಿತು ಅರಿಯದಾಚರಿಸಿದಂಥಾ ದುರಿತಗಳನು ಕುರಿತು ಕುರಿತು ಪರಿಪರಿಯೊಳೊರಲುತಿಹೆನು ಪರಮಪುರುಷನೇ ವರದನೆಂಬ ಬಿರುದು ನೆನೆದು ಶರಣುಬೇಡುವ ಕಂದನೆಂದು ಕರವಪಿಡಿದು ಪೊರೆಯೊ ಶೇಷಗಿರಿಯ ವರದನೆ3
--------------
ನಂಜನಗೂಡು ತಿರುಮಲಾಂಬಾ
ನೋಡಿ ದಣಿಯವೆನ್ನ ಕಂಗಳು ಈ ಸೋದೆಲಿರುವ ಈಡು ಇಲ್ಲದುತ್ಸವಂಗಳ ಬೇಡಿದವಗೀ ಧ್ವಜಬುತ್ತಿ (?) ನೀಡಿ ದಯಸೂರ್ಯಾಡುವರ ಪ ಯತಿಗಳ ಸಮೂಹವೆಷ್ಟು ಮಿತಿಯಿಲ್ಲದ ಬ್ರಾಹ್ಮಣ್ಯವೆಷ್ಟು ಮತಿಹೀನರಿಗೆ ಗತಿಯ ಕೊಡುವ ಪೃಥಿವಿಗಧಿಕ ಗುರುಗಳನ್ನು 1 ಭೂತನಾಥಗೆರಗಿ ನಿಂತು ವಾತಸುತಗೆ ಕೈಯ ಮುಗಿದು ಆತ ನಾರಾಯಣಭೂತನೆಂಬೋ ನೀತವಾದ ದೂತನಂತೆ2 ಕೊಳಲ ಕೃಷ್ಣ ಧವಳಗಂಗಾ ಹೊಳೆಯೊ ಮುತ್ತಿನ ಗದ್ದಿಗೆ ಮ್ಯಾಲೆ ಕಳೆಯು ಸುರಿವೊ ಕಮಲಪಾದ ಇಳೆಯೊಳ್ ಇಲ್ಲೀಳಿಗೆಯ ಪೂಜೆ 3 ಸನಕಾದಿ ಸುರೇಶನೆದುರು ಕಣಕ ಹ್ವಾಲಗ (ಹೋಳಿಗೆ?)ವನ್ನೆ ಮಾಡಿ ಮನಕೆ ಬಂದ ಮೃಷ್ಟಾನ್ನವನು ಜನಕೆ ತೃಪ್ತಿಬಡಿಸುತಿರಲು 4 ಸುತ್ತ ವೃಂದಾವನದ ಮಧ್ಯೆ ಉತ್ತಮರಾದ ವಾದಿರಾಜರು ಸತ್ಯವತಿಯ ಸುತರ ಎದುರು ನಿತ್ಯಾನಂದಭರಿತರಾಗಿ 5 ಸೃಷ್ಟಿಗಧಿಕಾನಂತಾಸನವು ಶ್ವೇತದ್ವೀಪ್ವೈಕುಂಠವೆಂಬೊ ಮುಕ್ತಸ್ಥಳದಲ್ವಾಸವಾದ ಲಕ್ಕುಮಿ ತ್ರಿವಿಕ್ರಮನ 6 ನೇಮನಿಷ್ಠ ಸೇವಕ ಜನಕೆ ಬೇಡಿದ ಇಷ್ಟಾರ್ಥ ಕೊಡುವೊ ಭೀಮೇಶಕೃಷ್ಣ ದಯದಿ ನೋಡಿದೆ ಹಯವದನನಂಘ್ರಿ 7
--------------
ಹರಪನಹಳ್ಳಿಭೀಮವ್ವ
ನೋಡಿ ನೋಡಿನೊ ರಂಗಾ ನಿನ್ನ ನೋಡಿನೊ ಆಡಲೇನಯ್ಯಾ ಪರಸತಿಯರ ಮೋಹಕ್ಕೆ ಸಿಲುಕಿ ಪ ಹೆಣ್ಣ ನಾ ಕಾಣುತ ಮನಸು ದ್ರವಿಸುವದು ದೃಢವಾಗಿ ಮುನ್ನೆ ದಾರಿದ್ರತನ ಯೆಣಿಸಿಕೊಳದೆ ಕಣ್ಣು ಹೋಗುವ ಸುದ್ದಿ ತಿಳಿಯದಲೆ ನೀಕ್ಷಿಸಿ ನಿತ್ಯ 1 ಜಲ್ಪಸಿಲ್ಪಿಗಳಿಂದ ಮಂತ್ರ ಮಾಡುವೆ ಅವಳಾ ಬಲ್ಪು ವಯ್ಯಾರ ಗುಣಗುಣಿಸಿಕೊಳುತಾ ತಲ್ಪಮಿಕ್ಕಾದ ಭೋಗದ್ರವ್ಯ ಬಯಸಿ ವಿ ಕಲ್ಪ ಸಂಕಲ್ಪದಲ್ಲಿ ಬಳುಲುವೆನುಬ್ಬಸವಳಿದು 2 ವ್ಯಾಖ್ಯಾತ ಪಂಡಿತದ್ವ್ಯಾಪಕ ಪಾಠಕ ಮಹಾ ಪ್ರಖ್ಯಾತ ವೇದವೇದಾಂತ ಪ್ರೌಢ ಸೌಖ್ಯ ಪುಸ್ತಕ ಪಾಣಿ ಜ್ಞಾನಿ ಎನಿಸಲು ಅವಳ ಆಖ್ಯಾನ ಕೇಳುತಲೆ ಕಿವಿಗೊಟ್ಟು ಲಾಲಿಸುವೆ 3 ಬೀದಿಯೊಳು ಪೋಗುವವಾಳೊಂದು ಪ್ರಯೋಜನಕೆ ಹಾದಿಯನು ಹಿಡಿದು ಸಮೀಪ ಬರಲು ಪಾದಕಾದರು ಬಿದ್ದು ಮಾತಾಡುವೆನೆಂಬೊ ಮೋದವನು ತಾಳಿ ಏಕಾಂತ ಹುಡುಕುವೆ 4 ಅಂಧಕ ಮೂಕಿ ಬಧಿರೆ ಹೀನಾಂಗ ಅವರೋತ್ತಮ ಜಾತಿ ವಿಧಿ ನಿಷೇಧವನು ಚಿಂತಿಸದೆ ತೀವರದಿಂದ ಅಧೋಗತಿಗೆ ಇಳುವೆನು ಸತ್ಕರ್ಮವನು ತೊರೆದು 5 ನೀರು ಸೀರೆವೊಗಿವಾಗ ಮೈ ತೊಳೆದು ಉಡುವಾಗ ಉರು ಕುಚ ಕಚ ನೋಳ್ಪ ಆಶೆಯಲ್ಲಿ ಮೂರು ಹತ್ತನೆ ತತ್ವ ನೆನೆನೆನೆದು ಯೋಚಿಸಿ ವಾರಿತಿಯ ಕೇಳಿ ತಲೆದೂಗುವೆನೊ ಲೇಸಾಗಿ 6 ಕಣ್ಣುಯಿದ್ದದಕೆ ಸಾರ್ಥಕವಾಗಲಿಲ್ಲ ಪ್ರ ಸನ್ನ ಮೂರುತಿ ಯೆನ್ನ ಸಾಧನವೇನೊ ಘನ್ನ ಏಲ್ಲೆಲ್ಲಿ ನಾ ನೋಡಿದರೆ ಅಲ್ಲಲ್ಲಿ ನಿನ್ನ ರೂಪವ ತೋರೊ ವಿಜಯವಿಠ್ಠಲ ಒಲಿದು 7
--------------
ವಿಜಯದಾಸ