ಒಟ್ಟು 1594 ಕಡೆಗಳಲ್ಲಿ , 104 ದಾಸರು , 1331 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಗೋವಿಂದ ವಿಠಲನೆ | ಕಾಪಾಡ ಬೇಕಿವಳಾ ಪ ಹೇ ಗರುಡ ಧ್ವಜನೆ ಹರಿ | ನಿನ್ನ ಮೊರೆ ಹೊಕ್ಕವಳಾ ಅ.ಪ. ಪರಿ ಆಪನ್ನ ಪರಿಪಾಲಾ 1 ಲೌಕಿಕದ ಮಮತೆಗಳ | ನೀ ಕಡಿದು ಕಾಪಾಡೊಏಕಮೇವನ ದೇವ | ಪ್ರಾಕ್ಕು ಕರ್ಮವ ಕಳೆದುಭಕುತಿ ಜ್ಞಾನವನಿತ್ತು | ಕಾಪಾಡೊ ಹರಿಯೇಯುಕುತಿಯಲಿ ನಿನ್ನಂಥ | ದೇವರನ ಕಾಣಿಸಯ್ಯ 2 ಪಾಂಚ ಭೌತಿಕ ದೇಹ | ಅಸ್ಥಿರತೆ ತಿಳಿಸುತ್ತಪಂಚಾತ್ಮ ನಿನ ಧ್ಯಾನ | ಮಗ್ನಳೆಂದೆನಿಸೊ |ಸಂಚಿತಾಗಾಮಿಗಳ | ನಾಶ ಗೈಸುತಲಿತ್ತಕೊಂಚಮಾಡೊ ಪ್ರಾರಬ್ಧ | ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಶ್ರೀ ದೇವರ ಸ್ತೋತ್ರ ಪಾಹಿ ಪಂಢರಿರಾಯಾ | ಮಾಂ |ಪಾಹಿ ಪಾಂಡವ ಪ್ರೀಯಾ ಪ ಹಿಂದೆ ನಾನು ನಿನ್ನಾ | ದರುಶನ |ಕೆಂದು ಬಂದು ಘನ್ನಾ ||ನಂದದಿ ನಿಂದವನಾ | ರಕ್ಕಿಸಿಮುಂದೆ ನಲಿದೆ ಚೆನ್ನಾ 1 ಅಷ್ಟೆ ಮಾತ್ರ ಸಾಕು | ದುರಿತಗ |ಳಟ್ಟಿ ಕಾಯಬೇಕು ||ಮಟ್ಟು ಮಾಡಬೇಕು | ವಿಷಯಗ |ಳಟ್ಟಿ ಹಾಕಿ- ನೂಕು 2 ಮರುತ ಮತದೊಳಿಟ್ಟು | ನಿನ್ನನು |ಸ್ಮರಿಪ ಭಾಗ್ಯಕೊಟ್ಟು ||ಗುರು ಪ್ರಾಣೇಶ ವಿಠಲ | ನಿನ್ನವನೆಂದುಕರ ಪಿಡಿದು ಕರೆಯೋ 3
--------------
ಗುರುಪ್ರಾಣೇಶವಿಠಲರು
ಶ್ರೀ ಧೀರೇಂದ್ರರು ಚಾರು ನಿಮ್ಮಯ ಚರಣತೋರಿಸುದ್ಧರಿಸಬೇಕೊ ಪ. ಆರು ಇವನೆಂದು ನೀವ್ ಗಾರುಮಾಡದಲೆನ್ನ ಸಾನುರಾಗದಿ ಪೊರೆಯಬೇಕೊ ಸ್ವಾಮಿ ಅ.ಪ. ವರದಾ ತೀರದಿ ನಿಂದು ವರ ಕೊಡಿವೀಯೆಂದು ಘನಗರ್ವ ನಿನಗ್ಯಾತಕೊಸುರಪತಿಯ ಬಲದಲ್ಲಿ ಇಹೆನೆಂದು ನೀ ಬಲು ಜರಿದು ನೋಡಲಿ ಬ್ಯಾಡವೊಆರುಗತಿಯಿಲ್ಲವೆಂದೀರ ನಿನ್ನೆಡೆ ಬರಲು ಏರಿ ಕೂಡ್ರುವುದುಚಿತವೇಸಾರಿ ಹೇಳುವೆ ನಿನಗೆ ಚೋರದಾಸನು ನಾನು ಘೋರರೂಪದಿ ಬಂದು ತೋರೋ ಸ್ವಾಮಿ 1 ರಘುಕುಲತಿಲಕನ ಭಕ್ತಿಪಾಶದಿ ಕಟ್ಟಿಚಕ್ರವರ್ತಿಯೆನಿಸಿ ಗೋಕುಲದ ಗೊಲ್ಲನ ಯುಕುತಿಯಲಿ ನೀನೊಲಿಸಿದ್ಯೊಶಕ್ತಿಯಿಂ ಕಲಿಯುಗದಿ ಧೀರೇಂದ್ರ ಪೆಸರಿನಿಂ ದುರಿತಗಳ ಕಳೆಯುವಿಯೊಧಿಃಕರಿಸಿ ವಾದಿಗಳ ದೇಶದೊಳ್ ಚರಿಸಿದ ವಸುಧೀಂದ್ರ ಸಂಜಾತ ಪೊರೆಯೆ ಸ್ವಾಮೀ 2 ಹೆಣ್ಣಿನಾಶೆಗೆ ಬಿದ್ದು ಹೊನ್ನು ಸ್ಥಿರವೆಂದು ನಾ ಮಣ್ಣುಪಾಲಾದೆನೊತನುವು ತನ್ನದು ಎಂಬ ಭಿನ್ನ ಜ್ಞಾನವನೇ ಹೊಡೆದೋಡಿಸೆಮಾನ್ಯವಂತರ ಸಂಗ ಇನ್ನು ಮೇಲಾದರೂ ದಯಪಾಲಿಸೊಘನ್ನ ಮಹಿಮಾ ತಂದೆವರದವಿಠಲನಲ್ಲಿ ಜ್ಞಾನದಿಂ ಭಕ್ತಿ ವ್ಯೆರಾಗ್ಯವನೆ ಈಯೋಸ್ವಾಮಿ 3
--------------
ಸಿರಿಗುರುತಂದೆವರದವಿಠಲರು
ಶ್ರೀ ನರಸಿಂಹ ನರಸಿಂಹ ಪಾಹಿ ಶ್ರೀಶ ಪೊರೆವರಾರಿಲ್ಲ ಬೇರೆ ಸೇವ್ಯ ಪ ಅನಿರುದ್ಧ ನಾ ನಿನ್ನ ಮರೆತೆ ಶುದ್ಧವೈಷ್ಣವತನವನೀಯೊ ಪ್ರಸಿದ್ಧಿ ಅದ್ಭುತಶಕ್ತ ವಿಭುವೆ 1 ಸಾಧ್ಯಸಾಧನವನ್ನು ಬಿಟ್ಟು ಪ್ರದ್ಯುಮ್ನ ನಾ ನಿನ್ನ ಮರೆತೆ ವಿದ್ಯುದೀಶನೆಸ್ವಾಮಿ ಸಲಹೊ ವೇದವೇದ್ಯಾನಂತ ಮಹಿಮ 2 ಸಂಚಿಂತೆ ಸಂಸ್ಮರಣೆ ತೊರೆದು ಸಂಕರ್ಷಣ ನಿನ್ನ ಮರೆತೆ ಸಂಸಾರತಾಪಗಳ 1 ತೊರೆಯೊ ಶಂಕರ ಸುರ ಶಂಭು ಸೇವ್ಯ 3 ವಸನ ಮನೆ ಹಣ ಹೆಣ್ಣು ಹುಡುಕಿ ವಾಸುದೇವನೆ ನಿನ್ನ ಮರೆತೆ ಪಸು ಶಿಶುವಾದೆನ್ನ ಪೊರೆಯೊ ಶ್ರೀಶ ಮುಕ್ತೇಶ ಸರ್ವೇಶ 4 ಅನಿಮಿತ್ತಬಂಧು ಮೂಲೇಶ ಅನ್ಯರ ನಾನರಿಯೆ ನಾರಾಯಣ ವನರುಹಾಸನ ತಾತ ಪ್ರಸನ್ನ ಶ್ರೀನಿವಾಸನೆ ಕೃಷ್ಣವ್ಯಾಸ 5
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ನಾಥ ಯದುನಾಥ ಖ್ಯಾತಾ ಶ್ರೀನಾಥ ಯದುನಾಥ ಪ ದೀನೋದ್ಧಾರಿ ದಾನವ ವೈರಿ ಮಾನವನಿತ್ತು ಪೊರಿ ಉದಾರೀ 1 ಜ್ಞಾನಾಜ್ಞಾನಾ ನಿನ್ನಾಧೀನಾ ಏನೊಂದರಿಯೆ ಹರಿ ಮುರಾರೀ 2 ಪಂಢರಿನಾಥಾ ಪಾಂಡವ ದೂತ ತೊಂಡ ವತ್ಸಲ ದಾತಾ ಶ್ರೀಕಾಂತಾ 3
--------------
ಲಕ್ಷ್ಮೀನಾರಯಣರಾಯರು
ಶ್ರೀ ಪತಿಯೆ ನಿನ್ನ ದಯವೆಂತಾಹದೋ ಪಾಪಕರ್ಮವ ಮಾಡಿ ಜೀವಿಸುವೆ ನಿರುತ ಪ ಬಾಲತನವನು ಬಾಲಲೀಲೆಯಿಂದಲಿ ಕಳೆದೆ ಕೀಳು ಜನರೊಡನೆ ಸ್ನೇಹವ ಬೆರಸಿದೆ ಹಾಳು ಹರಟೆಗೆ ಹೊತ್ತು ಸಾಲದೋಯಿತು ಯನಗೆ ಶ್ರೀ ಲೋಲ ನಿನ್ನಡಿಗೆ ದೂರಾದೆ ನಾನು 1 ಬುದ್ಧಿ ಪೂರ್ವಕದಿ ಸದ್ವಿದ್ಯೆಯನು ಕಲಿಯದಲೆ ಶುದ್ಧ ತಾಮಸ ವಿದ್ಯದೊಳು ರಮಿಸಿದೆ ಮಧ್ವಶಾಸ್ತ್ರದಸಾರವನ್ನು ತಿಳಿಯದೆ ನಾನು ಕದ್ದಕಳ್ಳನ ತೆರದಿ ಬಾಳಿದೆನು ಬರಿದೆ 2 ಪ್ರಾಯತನವೆ ವಿಷ ಪ್ರಾಯವಾಯಿತು ಎನಗೆ ಕಾಯಜನ ಉಪಟಳದಿ ಮತ್ತನಾದೆ ತೋಯಜಾಕ್ಷಿಯರ ದುರ್ಮಾಯ ಜಾಲಕೆ ಸಿಲುಕಿ ನೋಯಿಸಿದೆ ನಿಜ ಸತಿಯ ಪರಿಪರಿಯಲಿಂದ 3 ಮದನ ಜನಕನೆ ನಿನ್ನ ಮಧುರನಾಮವ ಮರೆದು ಸುದತಿಯರ ಅಧರಾಮೃತಕೆ ಬೆರೆದು ವಿಧಿಕುಲಾಚರಣೆ ಜರೆದ್ಹÀÀಗಲಿರುಳು ನಾರಿಯರ ವದನವನು ನೋಡಿ ಮೋದಿಪನರಾಧಮನೊಳ್ 4 ಉದರ ಗೋಸುಗ ಪರರ ಹೃದಯ ದ್ರವಿಸುವ ತೆರದಿ ವಿಧ - ವಿಧದಿ, ಆತ್ಮ ಸ್ತೊತ್ರವನೆ ಪೊಗಳಿ ಸದ-ಸದ್ವಿ ವೇಕವನು ತೊರೆದನ್ಯರ್ಹಳಿದು ಬಲು ಚದುರ ನಾನೆಂಧೇಳಿ ಮೋಸಗೊಳಿಸುತ ಜನರ 5 ಸಿರಿ ಚರಣಕ್ಕೆ ಶಿರ ಬಾಗ ದ್ಹರಿ ಭಕುತರಿಗೆ ವಿನಯದಿಂದೆರಗದೆ ನಿರುತದಲಿ ನಾಚಿಕಿಲ್ಲದಲೆ ಭೂದನುಜಯ ವಾನರಿಗೆ ಕರಮುಗಿದು ಜೀವಿಪÀಖೂಳ ಮನುಜನೊಳು 6 ಸತ್ಯಧರ್ಮವÀ ತ್ಯಜಿಸಿ ಮತ್ತೆಯುತ್ತಮರಜಾ - ನ್ನತ್ಯವನು ಸಹಿಸದಲೆ ತತ್ತಳಿಸುವೆ ಪೆತ್ತವರ ಸೇವಿಸದೇ ಮಿಥ್ಯವನೆ ಬೊಗಳಿದು - ಷ್ಕøತ್ಯದಿಂಬಾಳ್ವ ಉನ್ಮತ್ತನರ ಪಶುವಿನೊಳು 7 ಹರಿಗೆರಗದಿರುವÀÀ ಶಿರ ಹರಿಯ ಸ್ಮರಿಸದ ಜಿಂಹೆ ಹರಿವಾರ್ತೆಯಾಲಿಸದ ಕರ್ಣಂಗಳು ಕರ ಹರಿಯ ನೋಡದ ಚಕ್ಷು ಸರುವ ಪರಿಯ ಪವಿತ್ರದೇಹಧರಿಸಿದ ನರಗೆ 8 ವಿತ್ತ ಪಹರಿಸಿ ಪರರ ನಿಂದಿಸಿ ಪರರ ಬಲುವಂಚಿಸಿ ಪರಮೇಷ್ಟಿ ಜನಕನೆ ಪರತರ ಪರಂಜ್ಯೋತಿ ಪರದೈವನೆಂದರಿಯದಿರುವ ಪಾಮರನಿಗೆ 9 ನಾಮಾಡದಿಹ ಪಾಪ ವೀಮಹಿಯೊಳೊಂದಿಲ್ಲ ಸೀಮೆಗಾಣಲು ರವಿಜನಿಗೆ ಸಾಧ್ಯವಿಲ್ಲ ಆ ಮಹಾನರಕÀಂಗಳೆನಗೆÀ ತಕ್ಕವು ಅಲ್ಲ ಸ್ವಾಮಿ ನೀಪೊರೆಯದಿರೆ ಯನಗಾರು ಗತಿಯಿಲ್ಲ 10 ಏನಾದರೊಳಿತೆ ವರದೇಶ ವಿಠಲ ನಿನ್ನಾ ಙÁ್ಞನುಸಾರದಿ ಕರ್ಮಗಳ ಮಾಡಿದೆ ಧೀನರಕ್ಷಕನೆಂಬ ಬಿರಿದು ನಿಜ ವಿದ್ದರಾ - ದೀನನಾದವನನುದ್ಧರಿಸಲರಿಯಾ 11
--------------
ವರದೇಶವಿಠಲ
ಶ್ರೀ ಪುರಂದರದಾಸರ ಸ್ತೋತ್ರ ಪದ ವಂದಿಪೆ ಪುರಂದರದಾಸರ ಪಾದದ್ವಂದ್ವಕೆ ನಾನು ನಿರಂತರ ಪಮಂದರೋದ್ಧರ ಗೋವಿಂದ ಮುಕುಂದನಎಂದಿಗೂ ವಂದಿಸುತಿರ್ಪರ ಅ.ಪ ಒದಗಿದ ಜ್ಞಾನವನೋಡಿಸಿ ಮತ್ತೆಸದಮಲ ಜ್ಞಾನವ ಪಾಲಿಸಿಪದುಮನಾಭನ ಕಥೆ ಕೇಳಿಸಿ ಸನ್‍ಮುದದಿ ಪಾಲಿಪರ ಧ್ಯಾನಿಸಿ 1 ಮೊರೆ ಹೊಕ್ಕ ಸುಜನಗಿಹಪರದ ಸುಖತರಗಳನೊದಗಿಸಿ ಹರಿಪದದಪರಮಭಕ್ತಿಯ ನೀವರೆಂದರೆ ದಾವಾಗಸ್ಮರಿಸುವೆನವರಿಗೆ ಕರಮುಗಿದು 2 ಪಥ ತೋರಿಸಿ ಕಾಯ್ವಜ್ಞಾನಿಗಳರಸನ ತುತಿಸಿ ತುತಿಸಿ 3
--------------
ವೇಣುಗೋಪಾಲದಾಸರು
ಶ್ರೀ ಭಾರತೀ ದೇವಿಯ ಸ್ತೋತ್ರ ಪಾಲಿಸೆನ್ನನು ಪವಮಾನನ ರಾಣಿ ಪಾಲಿಸೆನ್ನ ಸುಗುಣಾಲಯ ಶ್ರೀಹರಿ ಲೀಲೆ ತಿಳಿಸಿ ಭವಜಾಲವ ಹರಿಸೆ ಪ ಮಾತರಿಶ್ವÀ ಸತಿ, ಪ್ರೀತಿಲಿ ಹರಿಪದ ದೂತನೆನಿಸಿ, ಅನಾಥನ ಪೊರಿಯೆ 1 ವಿದ್ಯುನ್ನಾಮಕೆ ವಿದ್ವಜ್ಜನಪಾ - ದದ್ವಯ ಸೇವಿತ ಬುದ್ಧಿಯ ನೀಡೆ 2 ಲಿಂಗನಿವಾಸಿ ವಿಲಿಂಗಗೈಸಿ ಯನ್ನ ರಂಗನ ಪದದಲಿ ಭೃಂಗನ ಮಾಡಿ3 ಜನನಿಯೆ ನಿನ್ನಯ ತನಯಗೆ ಙÁ್ಞನದ ಸ್ತನವನಿತ್ತು ಪೊರೆ ಹನುಮನರಸಿಯೆ 4 ಶರಣಾಗತಜನ ಪೊರೆಯುವ ಕರುಣಿಯ ವರದೇಶ ವಿಠಲನ ಚರಣವ ತೋರೆ 5
--------------
ವರದೇಶವಿಠಲ
ಶ್ರೀ ಭಾರತೀದೇವಿ ಎಂತು ನೀವಶವಾದಿಯೇ ಭಾರತಿದೇವಿ ಎಂತು ನೀ ಮರುಳಾದಿಯೆ ಪ ಕಂತು ಹರನ ತಾಯಿ ದಂತಿಗಮನೆ ದಮಯಂತಿ ಕಾಂತಸುತೆ ಅ.ಪ ಧರೆಯೊಳು ಪುಟ್ಟುತಲಿ | ಆಕಾಶಕ್ಕೆ ಭರದಿಂದ ಜಿಗಿಯುತಲಿ ಸರಸಿಜ ಸಖನಾದ | ತರಣಿಯ ಫಲವೆಂದು ಅರಿತು ಭಕ್ಷಿಸಲ್ಹೋದ | ತರು ಚರ ರೂಪಿಗೆ 1 ಪುಂಡರೀಕಾಕ್ಷ ಕೇಳಿ | ದ್ವಾಪರದಿ ಪ್ರಚಂಡಗೆ ಒಲಿಯುತಲಿ ಭಂಡ ಬಕನ ಶಿರದಿಂಡು ಗೆಡಹಿ ಅವನ ಭಂಡಿ ಓದನವನ್ನು ಉಂಡ ಪುಂಡಗೆ ಮಾತೆ 2 ಶ್ರೀ ಶಾಮಸುಂದರನೇ ತ್ರೈಲೋಕ್ಯಕ್ಕೆ ಈಶನೆಂಬುದು ತಾನು ಲೇಸಾಗಿ ಪೇಳಲು | ಲೇಶವಾದರು ನಿನ್ನ ಆಶೆ ಇಲ್ಲದೆ ಸನ್ಯಾಸಿ ಆದವನಿಗೆ 3
--------------
ಶಾಮಸುಂದರ ವಿಠಲ
ಶ್ರೀ ಮದಾಚಾರ್ಯ ಮುನಿ ಪ್ರೇಮದಲಿ ಸಲಹೊ ಪ. ಕಾಮಪೂರ್ಣನೆ ಎನ್ನ ಕಾಮಿತವನೀಯೊ ಅ.ಪ. ದ್ವಿತೀಯಯುಗದಲಿ ವಾಯುಸುತನಾಗಿ ಅವತರಿಸಿ ಕ್ಷಿತಿಸುತೆಗೆ ಉಂಗುರವ ಹಿತದಿಂದಲಿತ್ತೆ ತೃತಿಯುಗದಲಿ ಕುಂತಿಸುತನಾಗಿ ಕೌರವರ ಹತಗೊಳಿಸಿ ಹರಿಯಪದ ಹಿತದಿ ಧ್ಯಾನಿಸಿದೆ 1 ಕಲಿಯುಗದೊಳವತರಿಸಿ ಕಲಿಕಲ್ಮಷವ ಕಳೆದು ಒಲಿಸಿ ಹರಿಯನು ತುರಿಯ ಆಶ್ರಮದಲಿ ಸುಲಭಮಾರ್ಗವ ತೋರಿ ಸುಜನರನು ರಕ್ಷಿಸಿದೆ ಕಲಿಕಾಲ ಸಲಹೆನ್ನ ನೆಲಸಿ ಹೃದಯದಲಿ 2 ಆಚಾರ್ಯರೂಪದಲಿ ಗೋಚರಿಸಿ ಸ್ವಪ್ನದಲಿ ಸೂಚಿಸಿದೆ ದಾಸತ್ವ ಸಿದ್ಧಿಸಲಿ ಎಂದು ಯಾಚಿಸೆನೊ ಅನ್ಯರನು ನಾಚಿಕೆಯ ತೊರೆದಿನ್ನು ನೀಚತನವನೆ ಬಿಡಿಸಿ ಗೋಚರಿಸೊ ಸತತ 3 ಉಪದೇಶವನೆ ಇತ್ತೆ ಗುಪಿತದಿಂ ಸ್ವಪ್ನದಲಿ ಚಪಲತನದಲಿ ನಾನು ಅರಿಯಲಿಲ್ಲ ಅಪರಿಮಿತ ಮಹಿಮ ಶ್ರೀ ಗುರುಗಳಲಿ ನೀ ನಿಂತು ತಪ್ಪನೆಣಿಸದೆ ಎನ್ನ ನಮನ ಸ್ವೀಕರಿಸೊ 4 ವೇದವ್ಯಾಸರ ಪ್ರಿಯನೆ ಮೋದದಲಿ ಶಿಶುವಾದೆ ಶ್ರೀ ದುರ್ಗೆ ತಾ ಬಂದು ಎತ್ತಿದಳೊ ನಿನ್ನ ವಾದಿಗಳ ಗೆದ್ದ ಅನಾದಿ ಮುನಿ ನಮಿಸುವೆನೊ ಶ್ರೀದ ಗೋಪಾಲಕೃಷ್ಣವಿಠ್ಠಲನ ತೋರೊ 5
--------------
ಅಂಬಾಬಾಯಿ
ಶ್ರೀ ಮಧ್ವಮತ ಸಾಗರದೊಳಗೆ ಲೋಲಾಡಿ ಆ ಮಹಾತತ್ವ ತಾರತಮ್ಯಗಳ ತಿಳಿದು ಕಾಮ ಕ್ರೋಧಗಳೆಲ್ಲ ಹಳಿದು ಗುರು ಹನುಮಂತ ಭೀಮ ಮಧ್ವಮುನಿಯ ಸಾರಿರಯ್ಯ | ಅಯ್ಯಯ್ಯಾ ಪ ಅಂಜನೇಯ ಗರ್ಭದಲಿ ಜನಿಸಿ ಆಕಾಶದಲ್ಲಿ ಕಂಜನಾಪ್ತನ ತುಡುಕಿ ಕಿಷ್ಕಿಂಧದಲಿ ಕಪಿ ರಂಜನನ ಕೂಡಿ ಪಂಪಾ ತೀರದಲಿ ದೇವಂಜನ ಪಾದವ ಅಕ್ಷರಿ ಎನೊ ಭಂಜನವ ಮಾಡಿ ಲಂಕೆಯನುರಿಪಿ ಬಂದ ಪ್ರ ಭಂಜನಿಯ ಭಜಿಸಿರಯ್ಯಾ | ಅಯ್ಯಯ್ಯಾ | 1 ಧರ್ಮನಂದನೊಡನೆ ಜನಿಸಿ ಹಾಲಹಲ ಉಂಡು ಸೀರ್ಮುಟ್ಟಿ ಪೋಗಿ ನಾಗನ ಗೆದ್ದು ಅರಗಿನ ಅರ್ಮನೆಯ ದಾಟಿ ವನದೊಳಗೆ ಹಿಡಂಬನ ಶಾ ರಿರ್ಮುರಿದು ಸೀಳಿ ಬಿಸಟು ಕಿರ್ಮೀರ ದನುಜರ ಸದೆದು ಪೂತಂದು ಸು- ಶರ್ಮಕನ ಬಿಗಿದು ಕಣದೊಳಗೆ ದುಶ್ಯಾಸನನ ನಿರ್ಮಳಾತ್ಮಕನ ಭಜಿಸಿರಯ್ಯಾ | ಅಯ್ಯಾಯ್ಯಾ 2 ಹರಿಯೆ ಪರನೆಂದು ಬೊಬ್ಬಿಕ್ಕಿ ವಾದಿಗಳೆದೆ ಬಿರಿಯೆ ದು:ಶಾಸ್ತ್ರಜ ಜರಿಯೆ ದುರ್ಮತಗಳು ಪರಿಯ ಬಿಡದು ಠಕ್ಕೆ ಮೆರೆಯೆ ಧರೆಯೊಳಗೆ ಈ ಪರಿಯೆ ಮುನಿಗಾರು ಸರಿಯೆ ಪೊರೆಯ ಭಕ್ತರಿಗೆ ಸುಧೆ ಗರಿಯೆ ಜ್ಞಾನ ಮಾರ್ಗಾಂಕುರಿಯೆ ವೇದದ ಸಾರ ನೆರಿಯೆ ರಿಪುಕಾಲ ಮದಕರಿಗೆ ಕೇಸರಿಯೆ ಒಪ್ಪುವ ಭಜಿಸಿರಯ್ಯಾ | ಅಯ್ಯಯ್ಯಾ 3 ಅಜನಾಗಿ ಮುಂದೆ ಪಸರಿಸಿ ಬೆಳೆದು ಹರುಷದಲಿ ತ್ರಿಜಗವನು ನಿರ್ಮಾಣವನು ಮಾಡಿ ಒಂದೊಂದು ಸೃಜಿಸುವನು ಚಿತ್ರವಿಚಿತ್ರ ಗುಣಗಣವುಳ್ಳ ಇವನೆಂದು ವೇದಗಳು ಸಾರುತಿವೆ ಕುಜನಮತವನೆ ಪಿಡಿದು ಪುಸಿಯಿದು ಎಂದೆನ್ನದೆ ಭಜಿಸಿ ಗುರುಪಥವಿಡಿದು ಸಂದೇಹವನೆ ತೊರೆದು ಸುಜನರ ಶಿರೋಮಣಿಯಯ್ಯ | ಅಯ್ಯಾಯ್ಯಾ4 ಜಾತಿ ಸಂಕರವಾಗಿ ಜಾತಿ ಧರ್ಮವ ತೊರೆದು ಜಾತವೇದ ಸಯಜ್ಞ ಇಲ್ಲದಿದರೆ ವನಜ ಸಂ ಮೌಕ್ತಿದಮಣಿ ನುಡಿದ ಕರುಣದಲಿ ದ್ವಿ ಜಾತರನ ಉದ್ಧರಿಸ ಪೋಗೆನಲು ಜಯ ತನೋ ಜಾತ ಪುಟ್ಟಿದನು ಇಳಿಯೊಳಗೆ ಮಧ್ಯಗೇಹರ ಜಾತನಂ ಭಜಿಸಿರಯ್ಯ | ಅಯ್ಯಯ್ಯಾ | 5 ಇಳಿಯೊಳಗೆ ಬಲವಂತನಾದ ಮತ ಮಧ್ವಮತ ಸುಲಭವಾಗಿಹುದು ಸುಲಭರಿಗೆ ಕಮಲಕೇತಪನ ಹೊಳಪು ಹೊಳೆದಂತೆ ವಿಕಸಿತಾ ಮಾಡಿ ಸುಜ್ಞಾನ ಜಲಧಿಯೊಳಗಾಡಿಸುವುದು ಮಲತು ನಿಂತಿರ್ದ ಹರಿನಾಮ ದಂಡವಾ ಗುರುಕುಲತಿಲಕನಂ ಭಜಿಸಿರಯ್ಯಾ | ಅಯ್ಯಯ್ಯಾ |6 ದುರವಾದಿಗಳ ಗಂಡ ಗಜದಭೇರುಂಡ ಸಂ ಕರಣ ಪ್ರಾಣವನರದು ದುರ್ಮಾಯಿ ಮಿಥ್ಯದ ಕುಹಕ ಮುರಿದು ಉರಹಿ ಅರಿಗಳಂಗದ ಚರ್ಮ ಸುಲಿದು ಭೇರಿಗೆ ಹಾಕಿ ಹರಿಸೆ ಓಂಕಾರ ಮಣಿಯಂ ಭಜಿಸಿಯ್ಯಾ | ಅಯ್ಯಯ್ಯಾ 7 ಗುರುಕರುಣ ಪಡೆದ ಮಾನವನೆ ಸರ್ವಕೃತಾರ್ಥ ಗುರುಕರುಣ ಪಡೆಯದಿದ್ದವನ ಜನ್ಮವೇ ವ್ಯರ್ಥ ಉರಗ ಉಪವಾಸ ತಂತ್ರ ಕರಿ ಕರುಣತಿಪ್ಪುವದು ಗುರು ದಯಾಕರನಾಗೆ ಹರಿವೊಲಿದು ಸಲಹುವನು ಪಾದವ ನಂಬಿರೈಯ್ಯ | ಅಯ್ಯಯ್ಯಾ 8 ಪದ್ಧತಿಯ ಕೇಳಿ ಶುದ್ಧಾತ್ಮರಿದು ವರಗುರು ಮಧ್ವ ದುಗ್ಧಾಬ್ಧಿಯನು ಕಟಿದ ನವ ನವನೀತ ಮುದ್ದೆಯನು ತೆಗೆದು ನವವಿಧ ಭಕುತಿರಸದಿಂದ ಮೆದ್ದು ಸದ್ಭಾವದಲಿ ಸದ್ವೇಷ್ಣವರಾಗಿ ಮೃತ್ಯುವಿನ ಗೋನಾಳಿ ಒದ್ದು ಕಾಲನ ಮೀರಿ ವೈಕುಂಠಪುರ ಸಾರಿ ಸಿರಿ ಪಾದದ್ವಯವ ಭಜಿಸಿರಯ್ಯಾ ಅಯ್ಯಯ್ಯ 9
--------------
ವಿಜಯದಾಸ
ಶ್ರೀ ಮುದ್ದು ಮೋಹನ್ನ | ವಿಠಲ ಪೊರೆ ಇವನಾ ಪ ನಾಮ ಸಂಸೃತಿ ಇವಗೆ | ಸತತ ನೀನಿತ್ತು ಅ.ಪ. ವೇಣುಲೋಲನ ಮಹಿಮೆ | ಗಾನಮಾಡಲು ಇವಗೆಜ್ಞಾನವಂಕುರಿಸಲ್ಕೆ | ಜ್ಞಾನಿಸಂಗವಕೊಡೊ |ಮಾನನಿಧಿ ಮಧ್ವಾಖ್ಯ | ಸನ್ಮತದಲುದಿಸಿಹನೊ ಮೌನಿಜನ ವೃಂದ ಸ | ನ್ಮಾನ ಮಾಳ್ವವನಾ 1 ಭವವನದಿ ನವಪೋತ | ಶ್ರವಣ ಸಾಧನವಿತ್ತುನವನವ ಸುವಿಶೇಷ | ಮಹಿಮಯುತ ಹರಿಯಾಪ್ರವರ ಗುಣರೂಪಗಳ | ಸ್ತವನ ಮಾಳ್ವಂತೆಸಗಿಪವನಾಂತರಾತ್ಮಕನೆ | ಪಾಲಿಸೊ ಇವನಾ 2 ಕಾಕು ಸಂಗವಕೊಡದೆಮಾಕಳತ್ರನದಾಸ | ಸಂಕುಲದಲಿರಿಸೋವ್ಯಾಕುಲಾರ್ಥಿಕ ಕಳೆಯೆ | ಬೇಕಾದ ವರಗಳನೆನೀ ಕೊಟ್ಟುಕಾಯೊ ಕೃ | ಪಾಕರನೆ ಹರಿಯೇ 3 ತೈಜಸನೆ ನೀನಾಗಿ | ಯೋಜಿಸಿದ ಅಂಕಿತವ ಮಾಜದಲೆ ಇತ್ತಿಹೆನೊ | ನೈಜ ಮಾರ್ಗದಲೀಮಾಜಗಜನ್ಮಾದಿ ನಿ | ವ್ಯಾಕಜ್ಯ ಕಾರುಣಿಕವಾಜಿವದನನೆ ಪೊರೆಯೊ | ವೃಜನಾರ್ಥನೆನಸೀ 4 ಸಂತ ಸಂಗವನಿತ್ತು | ಅಂತರಾತ್ಮಕ ನಿನ್ನಚಿಂತೆಯಲ್ಲಿರುಸುತಲಿ | ಭ್ರಾಂತಿಯಿರದೊಂದುಅಂತ ಗೈಯುವಮಾರ್ಗ | ಕಂತುಪಿತ ನೀನಿತ್ತುಕಾಂತ ಗುರು ಗೋವಿಂದ | ವಿಠಲಾ ಪೊರೆ ಇವನಾ 5
--------------
ಗುರುಗೋವಿಂದವಿಠಲರು
ಶ್ರೀ ಮೊದಲಗಿತ್ತಿ ಕೃಷ್ಣಣ್ಣನವರಿಗೆ ಅಂಕಿತಪದ ಕ |ಳಂಕ ರಹಿತನ ಮಾಡೋ ನೀ ಮಾಡೋ ಅ.ಪ. ಸಂತತ ನಿನ್ನಯ ಚರಿತೆಯ ಕೇಳಲಿ |ಅಂತರಾಗದಿ ಪಾಡಲಿ |ಸಂತರ ಸಹವಾಸವನು ಕೊಟ್ಟು ಸತತ ನಿ |ಶ್ಚಿಂತ ಪುರುಷನ ಮಾಡೋ ಕಾಪಾಡೋ 1 ಪಂಚಭೇದ ಮತಿಯನಿತು |ಮರುತ ಮತವನ್ನು ಪೊಂದಿ |ಸಿರಿಯರಸನೆ ತವಗುಣ ಕರ್ಮನಾಮವ |ವರ ಜಿಂಹ್ವಯೊಳಿರಿಸೋ, ಉದ್ಧರಿಸೋ 2 ಶ್ರೀಶ ಪ್ರಾಣೇಶ ವಿಠಲರೇಯ ನೀನ್ನನು |ಲೇಸಾಗಿ ಪ್ರಾರ್ಥಿಸುವೆ |ಆಶಿಯ ಬಿಡಿಸಿನ್ನು ಮೀಸಲ ಮನಮಾಡಿ |ನೀ ಸುಜ್ಞಾನವನೆ ಪಾಲಿಸೋ, ಲಾಲಿಸೋ 3
--------------
ಶ್ರೀಶಪ್ರಾಣೇಶವಿಠಲರು
ಶ್ರೀ ಮೋಹನದಾಸರು ಇನ್ನಾದರು ಎನ್ನ ಪೊರೆಯೊ | ಮೋಹನರಾಯನಿನ್ನವನಲ್ಲವೇನೋ ಪ ಬನ್ನ ಬಡಿಪದುಚಿತವೇನೋಚೆನ್ನ ಶ್ರೀ ವಿಜಯ ದಾಸಾರ್ಯರ ಚಿಣ್ಣಾ ಅ.ಪ. ಎನ್ನ ಪಾಲಿಸಿದಂದದೀ | ಸಕಲ ಪ್ರಪನ್ನರ ಸಲಹುವುದೆಂದೂ ಬಿನ್ನಪಗೈದು ಮೋಹನ್ನ ವಿಠಲನೀಗೆ ಘನ್ನುಪಕಾರವ ಮಾಡಿದ ಧೀರಾ 1 ಮನ್ನವಚ ಕಾಯದಿ | ನಿನ್ನಯ ಚರಣ |ವನ್ನು ಪೂಜಿಪೆ ಮೋಹನ್ನ |ಮನ್ನಿಸಿಯೆನ್ನಯ ಅವಗುಣವೆಣಿಸದೆಕುನ್ನಿಯ ಕಾಯೊ ಸದ್ಗುರುವೆ ಪ್ರಸನ್ನ 2 ಸಾರ |ಭಕ್ತರಿಗರ್ಥಿಲಿ ಸ್ತವನ |ಮುಕ್ತಿದಾಯಕ ಗುರುಗೋವಿಂದ ವಿಠಲನವ್ಯಕ್ತಮಾಡಿಸೊ ಗುರು ಮೋಹನ್ನರಾಯಾ 3
--------------
ಗುರುಗೋವಿಂದವಿಠಲರು
ಶ್ರೀ ರಮಣಪತಿ ವಿಠಲ ನೀ ಕರುಣಿಸೋ |ಮಾರಪಿತ ಮರುತ ಮನೆಮಂದಿರ ನಿವಾಸಾ ಪ ಉದಯದಲಿ ಎದ್ದು ಹರಿಧ್ಯಾನವನು |ಮುದದಿಂದ ಬ್ಯಾಸರದೆ ನಿರುತ ಮಾಡಿ |ಸದಮಲ ಶ್ರೀ ಮುದ್ರಿಊಧ್ರ್ವಪುಂಡ್ರವ |ಪದುಮಾಕ್ಷಿ ಶ್ರೀತುಲಸಿಸರಗಳಿಂದಾ 1 ಸಿರಿ ಬೊಮ್ಮ ಪಂಚಭೇದ ಜ್ಞಾನದ, ತತ್ವವಿಚಾರ |ಹರಿದಾಸ ಸಹವಾಸ ಸರ್ವದಾ ಕೊಟ್ಟು 2 ಶ್ರೀಶ ಪ್ರಾಣೇಶ ವಿಠ್ಠಲರಾಯನೇ ನಿನ್ನ |ದಾಸತ್ವವನೆ ಕೊಟ್ಟು ಉದ್ಧರಿಪದೋ ||ಲೇಸಾಗಿ ಪ್ರಾರ್ಥಿಸದೆ ಎನ್ನ ಭಿನ್ನಪವು ಉ |ದಾಸಿಸದೆ ನೀ ಕರುಣಿಸೆಂದು ದಿನದೇ 3
--------------
ಶ್ರೀಶಪ್ರಾಣೇಶವಿಠಲರು