ಒಟ್ಟು 3475 ಕಡೆಗಳಲ್ಲಿ , 128 ದಾಸರು , 2419 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾದನಾದ ಸುನಾದವ ತಿಳಿದವ ನಾದ ಮೂರುತಿ ನಿಜನಾದ ಪ ಆರು ಅರಿಗಳು ಅವರನು ಗೆಲುವೊಡೆ ಆಶ್ರಯ ತಾನಿದೆ ನಾದಧೀರತನದಲಿಹ ನಾಲ್ವರ ಸಾಧಿಸೆ ದಿಟವು ತಾನಿದೆ ನಾದ 1 ಅಷ್ಟಮದಂಗಳನೆಲ್ಲವ ತಿಳಿವೊಡೆ ಆದಿಯಹುದು ಈ ನಾದದುಷ್ಟರು ಐವರ ದೃಢವನು ಕೆಡಿಸಲು ದೃಷ್ಟಿಗೆ ತಾನಿದೆ ನಾದ 2 ಮೂರು ಮೂರು ಮೂರೆನಿಸುವ ತ್ರಿಪುಟಿಯ ಮೂಲನಾಶವಿದೆ ನಾದಚೋರರು ಸಪ್ತಾ ಸಪ್ತರು ಎಂಬರ ಭೇದಿಸೆ ತಾನಿದೆ ನಾದ3 ಎರಡರ ಭೇದವನೆಲ್ಲವನಳಿವೊಡೆ ಎಡೆದೆರಪಿಲ್ಲದ ನಾದಭರಿತವನಂದಾನಂದವ ತುಳುಕುವ ಭಾಗ್ಯವು ತಾನಿದೆ ನಾದ 4 ನಾದದಿ ನಿತ್ಯವು ಬೆರೆತಿಹ ಪುರುಷನೆ ನಾದ ಚತುರ್ಮಖನಾದವಾದರಹಿತ ಚಿದಾನಂದ ಗುರುವಿನ ಪಾದದೊಳಗೆ ಅವನಾದ 5
--------------
ಚಿದಾನಂದ ಅವಧೂತರು
ನಾದವ ಕೇಳುತ ನಿದ್ರೆಯ ಮಾಡುತ ಬ್ರಹ್ಮವು ತಾನಾಗಿನಾದವ ಕೇಳುತ ನಾನಾ ಗುಣಗಳು ಹೋದವು ತಾವಾಗಿ ಪ ಕೂಡಿತು ದೃಷ್ಟಿ ಪರಬ್ರಹ್ಮದಿ ತಾ ಅನುದಿನದಲಿ ಬಾಗಿಮನ ಇಂದ್ರಿಯಗಳು ಹುಡುಕಿದರಿಲ್ಲ ಹೋದವು ತಾವಾಗಿ1 ನಾನಾ ವರ್ಣದ ಛಾಯೆಯ ನೋಡುತ ನಿದ್ರೆಯ ಮಾಡಿದೆನೋಭಾನು ಕೋಟಿ ಛಾಯೆಯ ನೋಡುತ ನಿದ್ರೆಯ ಮಾಡಿದೆನೋ 2 ಕಾಣದ ರೂಪದ ಕಾಣುತಲೆ ನಾ ಕಾಮಿಸಿ ಮಲಗಿದೆನೋಬೋಧ ಚಿದಾನಂದ ಸದ್ಗುರು ನಾಥನ ಧ್ಯಾನವ ಮಾಡಿದೆನೊ 3
--------------
ಚಿದಾನಂದ ಅವಧೂತರು
ನಾದವನಾಲಿಸೋ ನಿತ್ಯದಿ ನಾದದೊಳಗಿನ ನಾದ ಸುನಾದಓಂಕಾರ ನಾದವನರಿವನೆ ಧನ್ಯ ಯೋಗೀಶ ಪ ನಾದದಿಂದಲಿ ಅಷ್ಟಪಾಶವಿಕ್ಕಡಿಯಹುದುನಾದದಿಂದಲಿ ಮದಗಳೆಂಟುಡುಗಿ ಹೋಗುವವುನಾದದಿಂದಲಿ ಅರಿಗಳರುವರೂ ತೊಲಗುವರುನಾದದಿಂದಲಿ ಕರ್ಮವು ದೂರಹುದುನಾದದಿಂದಲಿ ಧರ್ಮವು ವೃದ್ಧಿಪುದುನಾದದಿಂದಲಿ ಬ್ರಹ್ಮವು ಯೋಗೀಶ 1 ನಾದದಿಂದಲಿ ಮೌನ ತನಗೆ ತಾನಾಗುವುದುನಾದದಿಂದಲಿ ಚತುಸ್ಸಾಧನವು ದೊರಕುವುದುನಾದದಿಂದಲಿ ಸಪ್ತ ಭೂಮಿಕೆಗಳಾಗಿಹವುನಾದದಿಂದಲಿ ಜ್ಞಾನವು ಸ್ಥಿರವಹುದುನಾದದಿಂದಲಿ ಚಿತ್ರವಚಲವಹುದುನಾದದಿಂದಲಿ ಸರ್ವರು ಯೋಗೀಶ 2 ನಾದದಿಂದಲಿ ಬುದ್ಧಿ ನಿರ್ಮಲವಾಗುವುದುನಾದದಿಂದಲಿ ಮನವು ಹಿಡಿತದಲಿರುತಿಹುದುನಾದದಿಂದಲಿ ದೃಕ್‍ದೃಶ್ಯ ಸಾಧನವಹುದುನಾದವೆ ಬ್ರಹ್ಮವಹುದುಚಿದಾನಂದನಾದವನ ತೋರಲು ಬಹುದು ಅವನಲಿಭೇದವಿಲ್ಲದೆ ಕೂಡಲುಬಹುದು ಯೋಗೀಶ 3
--------------
ಚಿದಾನಂದ ಅವಧೂತರು
ನಾದವಾದನು ನಾದದ ಮನೆಯಿದ್ದ ಅಚ್ಚರಿ ನೋಡಿವಾದಿಗಳನು ಗೆದ್ದು ಜಯವ ತಾ ಮಾಡಿ ನಾದವಾದನು ಪ ಸುಮನಸವೆಂದೆಂಬ ಕುದುರೆಯ ಹತ್ತಿಅಮಲವೆನಿಪ ಧೈರ್ಯದ ಕತ್ತಿಯ ಹಿಡಿದುಭ್ರಮಣೆಯಲ್ಲದ ವಿವೇಕ ಫೇರಿಯಿಂದವಿಮಲಾನಂದದಿ ದುಮುಕಿಸುತಿರುತಿಪ್ಪ ನಾದವಾದನು1 ಅಷ್ಟ ಆನೆಗಳ ತಲೆಗಳ ಹೊಡೆದುಷಷ್ಟರಧಿಕರ ಸಾಲನು ಕಡಿದುದುಷ್ಟಕುದುರೆಗಳ ಏಳರ ಕಾಲನು ಉಡಿದುಕಷ್ಟರೂಪದ ಚೋರರೈವರನು ದೂಡಿದ ನಾದವಾದನು 2 ಈಷಣತ್ರಯ ಪ್ರಧಾನರ ಜೀವವ ಕಳೆದುವಾಸನೆ ದಳವಾಯ್ಗಳೀರ್ವರ ನೆರೆ ತುಳಿದುಮೋಸಗಾರರ ದೊರೆ ನಾಲ್ವರನಳಿದುಏಸು ನುಡಿಯಲಿ ತಾನೊಬ್ಬನೇ ಉಳಿದು ನಾದವಾದನು 3 ದೋಷಕರೆಲ್ಲರ ದೇಶ ಬಿಟ್ಟೋಡಿಸೆನಾದವಾದರು ಎಲ್ಲರು ಕೊನೆಗೆ ಉಳಿದವರೆಲ್ಲಾಸಾಷ್ಟಾಂಗ ವೆರಗಿದರುವಾಸಿ ಪಂಥವ ಬಿಟ್ಟು ಕೊಂಡಾಡುತ ನಾದವಾದನು 4 ಇಂತು ರಣವ ಮಾಡಲು ಕೈಯ ಸುರಗಿಸಂತೋಷವೆಂಬ ಮೃತದಿ ತಾ ಮುಳುಗಿಶಾಂತನಾಗಿಯೆ ಚಿದಾನಂದ ಗುರುವಿಗೆರಗಿನಿಂತು ನೋಡಿಯೆ ಕಂಡನಾತನೆ ತಿರುಗಿ ನಾದವಾದನು 5
--------------
ಚಿದಾನಂದ ಅವಧೂತರು
ನಾದಾನಂದದಿ ಮುಳುಗಾಡೋ ಪ ಇಲ್ಲವೆಂಬುದು ಸಲ್ಲ ಗುರುಎಲ್ಲಾ ಪೂರಿತನಹುದಲ್ಲ ಇದ ಬಲ್ಲವರು ಬಲ್ಲರೆಲ್ಲತಾನೆಲ್ಲ ತಿಳಿಯೆ ನೀ ಸಾಕ್ಷಿಕನಹುದಲ್ಲ 1 ಮತಿಯಿಂದ ತಿಳುಕೋ ವಿಚಾರ ಈಗತಿಯಲ್ಲಿ ಆತ್ಮನು ಪೂರಗತಿಗೆ ಕೇಡಿಲ್ಲ ಇದು ಸ್ಥಿರ ಮಹದತಿ ಸೌಖ್ಯ ಪದಕೆ ರಾಜ ನೀನೆ ಉದಾರ 2 ಭೇದ ಭೇದವು ನಿನಗೇತಕೆ ನೀವಾದ ದೂರನು ಪರಕೆ ಈವಾದ ಸಂವಾದಗಳ್ಯಾತಕೆ ಮಹದಾದಿ ಪುರುಷನು ನೀನಹುದು ಬಿಡು ಜೋಕೆ 3 ಸತ್ಯ ಸಂವಿದ್ರೂಪ ಆತ್ಮ ನೋಡೆಪ್ರತ್ಯಾಗಾತ್ಮ ಪರಕತೀತ ಆರಿಂದಲಾದುದುಖ್ಯಾತ ಸುನಾದವರಿದನೇ ನಿರ್ಭೀತ ಮಹಾನಾದ ಚಿದಾನಂದನ ಕೂಡಿದನಾತ4
--------------
ಚಿದಾನಂದ ಅವಧೂತರು
ನಾನಾನಂತಪರಾಧಿ ಎನ- ಗೇನಿಲ್ಲವು ದೃಢಬುದ್ಧಿಪ. ನೀನೇ ಗತಿ ನಿನ್ಹೊರತು ಕಾವರನು ಕಾಣೆನು ಕರುಣಾಂಬೋಧಿಅ.ಪ. ಹಂದಿಯಂತೆ ತಿಂದು ಬೆಳದೆ ಎನ್ನ ಮುಂದಣ ಗತಿಯನು ಮರೆತೆ ಹಿಂದಿಲ್ಲವು ಮುಂದಿಲ್ಲವು ಲೋಕದಿ ನಿಂದ್ಯಾಪಾತ್ರ ತಾನಾದೆ1 ಮುತ್ತಿತು ಯೆನಗಜ್ಞಾನ ಎನ್ನ ಚಿತ್ತದಿ ಕೊಡು ನಿನ್ನ ಧ್ಯಾನ ನಿತ್ಯ ತವಚರಣ ಭಕ್ತಿಜ್ಞಾನವ ನಿತ್ತು ಕಾಯೊ ಸುತ್ರಾಣ2 ಗತಿಯಾರಿಲ್ಲನ್ಯತ್ರ ಶ್ರೀ- ಪತಿಯೆ ಕಾಯೊ ಸುಚರಿತ್ರ ಕ್ರತುಪಾಲ ಲಕ್ಷ್ಮೀನಾರಾಯಣ ಭಾ- ರತಿಪತಿನುತ ಸುರಮಿತ್ರ3
--------------
ತುಪಾಕಿ ವೆಂಕಟರಮಣಾಚಾರ್ಯ
ನಾನಿನ್ನ ತೆಗಳಿದೆನೇ ರಂಗಯ್ಯ ನಾನಿನ್ನ ಮಹಿಮೆಯ ಹೊಗಳಿದೆನಲ್ಲವೆ ಪ ನೀನೇತಕೆನ್ನೊಳು ದಯತೋರದಿರುವೆ ನಾನಿನ್ನ ಚರಣವ ದೃಢದಿ ನಂಬಿರುವೆ ಅ.ಪ ಮೀನಾಗಿ ನಾಲ್ಕುಮಕ್ಕಳ ಹೊತ್ತು ತಂದೆ ನೀನೇ ಕಮಠನಾಗಿ ನಗವೆತ್ತಿ ನಿಂದೆ ದಾನವ ಸಂಹಾರಕಾಗಿ ಸೂಕರನಾದೆ ನೀನೇ ನರಹರಿಯೆಂದು ನುತಿಸಿದೆನಲ್ಲದೆ 1 ಭೂಮಿಯನಳೆದವನೆಂದೆ ನೀನೇ ಭೂಮಿಪರನು ಕೊಂದೆ ಎಂದೆ ಭೂಮಿಜೆಯರಸ ರಾವಣವೈರಿಯೆಂದೆ ಕಾಮಪಾಲನು ಹಲಧರನೆಂದೆನಲ್ಲದೆ 2 ತರುಣಿದ್ರೌಪದಿಗಾಗಿ ಕುರುಕುಲವಿರಿದೆ ತುರಗವನೇರಿ ದುಷ್ಟರನೆಲ್ಲ ತರಿದೆ ಶರಣ ಜನರಿಗಾಗಿ ಹರಿಹರ ನೀನಾದೆ ವರದ ಮಾಂಗಿರಿರಂಗ ನೀನೆಂದೆನಲ್ಲದೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾನಿನ್ನ ಧ್ಯಾಸದೊಳಿರುವೆ ಹರಿ ನೀನೆನ್ನ ಧ್ಯಾಸದೊಳಿರಬೇಕು ಸತತ ಪ ಬೆಳಗು ನಿನ್ನೊಳಗಯ್ಯ ಬೆಳಗಿನೊಳಗೆ ನೀನು ಕಳೆಯೊಳಗೆ ನೀನಯ್ಯ ಕಳೆಯು ನಿನ್ನೊಳಗೆ ಇಳೆಮೂರು ನಿನ್ನೊಳಗೆ ಇಳೆಯೊಳು ನೀನಯ್ಯ ಒಲಿದು ನೀ ಎನ್ನನು ಸಲಹಯ್ಯ ಸತತ 1 ವೇದದೊಳಗೆ ನೀನು ವೇದ ನಿನ್ನೊಳಗಯ್ಯ ನಾದ ನಿನ್ನೊಳು ದೇವ ನಾದದಿ ನೀನು ಬೋಧ ನಿನ್ನೊಳು ಪ್ರಭು ಮಾಧವ ಸತತ 2 ನೀನಿಟ್ಟ ಸೂತ್ರದಿಂ ನಾನಾ ಸೃಷ್ಟಿಗಳೆಲ್ಲ ನಾನುತಾನೆನ್ನುತ ಕುಣೀತಿಹ್ಯವೊ ನಾನು ನಿನ್ನೊಳು ಜೀಯಾ ನೀನು ನಿನ್ನೊಳು ತಂದೆ ಧ್ಯಾನದಾಯಕ ಶ್ರೀರಾಮಯ್ಯ ಸತತ 3
--------------
ರಾಮದಾಸರು
ನಾನೀಯದಿದ್ದರೆ ನೀನೇನನೀವೆ ಪ ನಾನು ಎಂಬುದು ಮಾತ್ರ ನಾ ನಿನಗಿತ್ತರೆ ಏನನೀಯುವೆ ರಂಗ ದೀನದಯಾಳು ಅ.ಪ ಅವಲಕ್ಕಿಯನು ತಂದವಗೆ ಭಾಗ್ಯವನಿತ್ತೆ ನವಫಲವನಿತ್ತವಳಿಗೆ ಒಲಿದೆ ನವನೀತವಿತ್ತರ್ಗೆ ಸುವಿಲಾಸಗಳನಿತ್ತೆ ಭುವಿಯೆಲ್ಲವಿತ್ತಂಥವನ ಬಾಗಿಲಕಾಯ್ದೆ 1 ಗಜರಾಜನಂದು ಪಂಕಜವೊಂದನಿತ್ತಂದು ಅಜಗರನನು ಕೊಂದು ಸೌಜನ್ಯವನಿತ್ತೆ ಭುಜದ ಮೇಲೆ ನಿನ್ನನಂಗಜ ಪೊತ್ತು ತಿರುಗಲು ರಜತಪದವಿಯನಿತ್ತು ವಿಜಯ ನೀ ಗೈದೆ 2 ಮಡದಿಮಣಿಯು ತಾನುಟ್ಟ ಪೀತಾಂಬರ ದೆಡ್ಡೆಯ ಹರಿದು ನಿನ್ನ ಅಡಿಗೆ ಕಟ್ಟಲ್ಕೆ ಮಡದಿಗೆ ಅಕ್ಷಯದುಡುಗೆಯ ನೀನಿತ್ತೆ ಮೃಡನು ತಾನೇನು ಕೊಡಲೋ ಗೋವಿಂದಾ 3 ಜಗಜಟ್ಟಿ ಹನುಮನು ಬಗೆದು ನಿನ್ನಯ ದುಗುಡವ ಬಿಡಿಸಿದ ಬಗೆಯ ನೀನÀರಿತೂ ಜಗದೊಳು ಸರಿಯಾದುಡುಗರೆಯಿಲ್ಲದೆ ನಗುತ ನಿನ್ನನು ನೀನೆ ಸೊUಸಿನಿಂದಿತ್ತೆ 4 ನಾನೆಂಬುದಲ್ಲದೆ ಏನುಂಟು ಎನ್ನೊಳು ನೀನೀವೆನಿದ ಮಾತ್ರ ಶ್ರೀನಾಯಕೇಶ ಏನನಾದರೂ ಸರಿ ನೀನೀಯೋ ಮುರವೈರಿ ನಾನು ನನ್ನದು ನಿನ್ನಧೀನ ಮಾಂಗಿರಿರಂಗ5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾನು ನಿನ್ನ ಏನು ಅಂದೆನೊ ರಂಗರಾಯಾ ನಾನು ನಿನ್ನ ಏನು ಅಂದೆ ನಾಲ್ಕು ದಿಕ್ಕಿನೊಳಗೆ ನಿಮ್ಮ ಧ್ಯಾನಪಥವು ದೊಡ್ಡದೆಂದು ದೃಢವು ಮಾಡಿ ಹೇಳ್ದೆನಲ್ಲದೆ ಪ ಕುಂಡಲೀಶ ಶಯನನಾದ ಪುಂಡಲೀಕವರದ ಬ್ರ ಹ್ಮಾಂಡವೆಲ್ಲ ನಿಮ್ಮ ಉದರ ಅಂಡದಲ್ಲಿ ಇರುವುದೆಂದೆ ಮಂಡಿಗೊರಳನು ಇದೆವೆಂದನೆ ಮತ್ತೆ ಮತ್ತೆ ಕುಂಡಗೊಳರ [ಪುಂಡಗೊಲ್ಲರ] ಕುಲದೈವವೆಂದೆನೆ ಹಿಂಡುಲೋಕಗಳಿಗೆಲ್ಲ ಹಿರಿಯ ನೀನೆಯಂದೆನಲ್ಲದೆ 1 ಸಕಲಯೋಗಿ ಜನರ ಹೃದಯ ನಿಖರವಾಗಿ ನಿಂತು ಎಲ್ಲ ಭಕುತರನ್ನು ರಕ್ಷಿಸುವ ಲಕುಮಿರಮಣಾನಂದೆ ನಲ್ಲದೆ ಕಕುಲಾತಿಯ ಮಾಡೆನೆಂದೆನೆ ಅಕಳಂಕ ಮಹಿಮನಾದ ಆದಿ ಮೂರುತಿ ಎಂದೆನಲ್ಲದೆ 2 ಬೊಟ್ಟಿನಿಂದ ಧರೆಯನೆತ್ತಿ ಚೇಷ್ಟೆಜನರ ಉರಳಿಸಿದ ಕೃಷ್ಣ ಮೂರುತಿನೀನೆಯೆಂದು ಇಷ್ಟದಿಂದ ಪಾಡುವೆನಲ್ಲದೆ ಸೃಷ್ಟಿನೀಟಗೊಲ್ಲನೆಂದೆನೆ ನಿನ್ನ ಮಗನ ಸುಟ್ಟು ಅವನ ಮಿತ್ರನೆಂದೆನೆ ಸೃಷ್ಟಿಗಧಿಕವಾದ `ಹೊನ್ನವಿಠ್ಠಲ' ರಾಯನಂದೆನಲ್ಲದೆ 3
--------------
ಹೆನ್ನೆರಂಗದಾಸರು
ನಾನು ನಿನ್ನ ಸೇವಕ ಏನಾದರೂ ಬರಲಿ ನಿನ್ನ ಬಿಡುವನೆ ರಂಗಾ ಪ ಅಪತ್ತೆ ಬರಲಿ ಅತಿಶಯದ ಕ್ಲೇಶವೇ ಬರಲಿ ಕೋಪ ಕಾಮಾದಿಗಳು ವೆಗ್ಗಳಿಸಲಿ ಪಾಪದ ರಾಶಿಗಳು ಬಂದು ಬೆನ್ನಟ್ಟಲಿ ಶ್ರೀಪತಿ ನಿನ ಪಾದವನು ಬಿಡಬಲ್ಲನೆ 1 ಬಟ್ಟೆ ಅತಿ ಕಠಿಣವಾಗಲಿ ಯಮನಾಳು ಬಲು ಭಯಂಕರರಾಗಲಿ ಯಮನು ದಂಡಿಸಿ ತೀವ್ರ ನಿರಯದೊಳಗೆ ಇಡಲಿ ಕಮಲನಾಭನೆ ನಿನ್ನ ಪಾದವನು ಬಿಡಬಲ್ಲನೆ2 ಲೋಕದೊಳಗಿದ್ದ ಜನರಿಗೆ ಬಪ್ಪ ದೋಷಗಳು ಏಕವಾಗಿ ಎನಗೆ ಬರಲಿ ಇಂದೆ ನಾ ಕಳವಳಿಸಿದರು ನಿನ್ನಂಘ್ರಿಯಗಳಾಣೆ ಶ್ರೀಕಾಂತ ವಿಜಯವಿಠ್ಠಲರಂಗ ಕೇಳೊ3
--------------
ವಿಜಯದಾಸ
ನಾನು ಸಜ್ಜನನಾದೊಡೆಹೀನವಿಷಯಂಗಳಿಗೆ ಎರಗುವೆನೇನಯ್ಯ ಪ. ಚಿತ್ತವÀ ಪುರುಷೋತ್ತಮನಲ್ಲಿಡದೆಉತ್ತಮರಾದವರೊಡನಾಡದೆತತ್ವವಿಚಾರವೊಂದರಿಯದೆ ನಾನು-ನ್ಮತ್ತರಸಂಗವ ಮಾಡುವೆನೇನಯ್ಯ1 ನಿರುತವು ಪರನಿಂದೆಗಳ ಮಾಡುತಲಿಗುರುಹಿರಿಯರನು ವಿಚಾರಿಸದೆಗುರುವೆ ದೈವವೆಂದರಿಯದೆ ನಾನುಪರರ ಒಡವೆಯನು ಬಯಸುವೆನೇನಯ್ಯ 2 ಹೇಯಶರೀರವ ಪೋಷಿಸುವೆನೆಂದು-ಪಾಯವನು ಮಾಡಿ ನಾ ಬಳಲುತಿಹೆರಾಯರು ಮಾಡಿದ ಶರಣರ ಹೊರೆವಹಯವದನ ನಿನ್ನ ನಾ ಮರೆತಿಹೆನೇನಯ್ಯ 3
--------------
ವಾದಿರಾಜ
ನಾನೆ ಭ್ರಮಿಸಿದೆನೊ ವಿಷಯದಿ ಮಮತೆ ನೀನೆ ಸೃಜಿಸಿದೆಯೊ ಪ. ಅನಾದಿ ನಿಧಾನ ನೀನೆ ತಿಳಿದು ನೋಡೊ ಅ.ಪ. ಬನ್ನ ಬಡಿಸುತಿದೆಕೈವಲ್ಯದರಸನೆ ನೀ ವಿಚಾರಿಸಿ ಕಾಯೊ 1 ಸ್ವತಂತ್ರ ನೀನು ಅಸ್ವತಂತ್ರ ನಾನು ದೂತನ್ನ ಈ ತೆರಕಾತುರಗೊಳಿಪುದು ಏತರಘನವೊ ಇದರಿಂದಖ್ಯಾತೇನುಫಲವೊ ಎನ್ನೊಳು ನಿನಗೇತಕೀ ಛಲವೊ ಭವದಿ ಕೈ-ಸೋತು ಬಿನ್ನೈಸುವೆ ಮಾತುಮನ್ನಿಸಿ ಕಾಯೊ2 ಕಕ್ಕಸ ಭವದೊಳು ಠಕ್ಕಿಸಿ ಸಿಗಹಾಕಿ ಸಿಕ್ಕುಬಿಡಿಸದೆ ನೀ-ನಕ್ಕು ಸುಮ್ಮನಿರಲು ದಿಕ್ಕ್ಯಾರೊ ಎನಗೆ ದಣಿದು ಮೊರೆ-ಯಿಕ್ಕುವೆ ನಿನಗೆ ಬಂದು ಬೇಗ ನೀ ತಕ್ಕೊನೀ ಕೈಗೆ ಎನ್ನವಗುಣ ಲೆಕ್ಕಿಸದಲೆ ಕಾಯ್ಯಬೇಕಯ್ಯ ಕೊನೆಗೆ 3 ಪ್ರಿಯ ನೀನೆನಗೆಂದು ಅಯ್ಯ ನಿನ್ನ ನಂಬಲು ಮಯ್ಯ ಮರೆಸಿ ವಿ-ಷಯದುಯ್ಯಾಲೆಗೊಪ್ಪಿಸಿದೆ ಸಯ್ಯಲೊ ದೊರೆಯೆ ಇಂಥವನೆಂದುಅಯ್ಯೊ ಮುನ್ನರಿಯೆ ಕರುಣಿ ಎಂಬೊ ಹಿಯ್ಯಳಿ ಸರಿಯೆ ಇನ್ನಾದರುಕಯ್ಯ ಪಿಡಿಯಲು ಕೀರ್ತಿ ನಿನಗೆಲೊ ಹರಿಯೆ4 ಮೊದಲೆಮ್ಮಾರ್ಯರು ನಿನ್ನ ಪದನಂಬಲವರಘ ಸದೆದು ಸಮ್ಮುದದಿಸಂ-ಪದವ ನೀಡಿದೆಯಂತೆ ಅದನು ಮರೆದೆಯೊ ಶಕುತಿಯು ಸಾಲದಲೆ ಜ-ರಿದೆಯೊ ಜನರು ಪೇಳಿದ ಮಾತು ಪುಸಿಯೊ ನಿಜ ತೋರಲು ಬುಧನುತ ಗೋಪಾಲವಿಠಲ ಕೀರುತಿಯೊ 5
--------------
ಗೋಪಾಲದಾಸರು
ನಾನೆಲ್ಲಿ ಜ್ಞಾನಿಯು ನಾನೆಲ್ಲಿ ಸುಜನನು ಹೀನ ವಿಷಯಗಳುಂಬ ಶ್ವಾನನಂತಿರುವೆ ಪ ಗಾತ್ರ ಬಳಲಿಸಿ ಮದನಸೂತ್ರ ಬೊಂಬೆಯು ಎನಿಸಿ ನೇತ್ರದಿಂದಪಾತ್ರದವರನು ನೋಡಿ ಸ್ತೋತ್ರಮಾಡುತ ಹಿಗ್ಗಿರಾತ್ರೆ ಹಗಲು ಕೆಟ್ಟ ವಾರ್ತೆಯಲ್ಲಿರುವೆ 1 ಧನದಾಸೆ ಘನವಾಗಿ ಅಣು ಮಹತ್ಕಾರ್ಯದೊಳುತಣಿಸಿ ದಣಿಯಲು ತೃಣವು ದೊರೆಯದಿರಲುಮನೆ ಮನೆಗೆ ಬಾಯ್ದೆರೆದು ಶುನಕನಂತೆ ದಿನಗಳೆವೆಮನುಜ ಪಶುವಿಗೆ ಇನ್ನು ಮುನಿಯೆಂಬಿರೆಂತೋ2 ನಾಲಗೆಯ ರುಚಿಯಿಂದ ಸಾಲದಾಯಿತು ಬಯಕೆಕಾಲ ಕಾಲಕೆ ನೆನಸಿ ಹಾಳಾದರೂಶೀಲಗಳ ಕಳಕೊಂಡು ಚಾಲುವರಿಯುತ ಪರರಆಲಯದ ಉಚ್ಚಿಷ್ಠ ಮೇಲಾದ ಸವಿಯ3 ಸ್ನಾನಧ್ಯಾನವನರಿಯೆ ಸಾನುರಾಗದಿ ಭಕ್ತಿಕೂನ(ಗುರುತು)ವಿಲ್ಲದೆ ಡಂಭ ಮೌನಿಯೆನಿಸಿನಾನಾ ವಿಷಯ ಮನದಿ ನಾ ನೆನೆಸುವೆ ನಿತ್ಯಏನಾದರೂ ಕಷ್ಟ ಕಾಣದಂತಿರುತಿಪ್ಪೆ 4 ಪತಿತರೊಳು ಎನ್ನಂಥ ಪತಿತರೊಬ್ಬರ ಕಾಣೆಗತಿಯು ನೀನಲ್ಲದೆ ಅನ್ಯರಿಲ್ಲಪತಿತ ಪಾವನನೆಂಬೊ ಬಿರುದುಂಟುಮಾಡುವಕ್ಷಿತಿಪತಿ ಶ್ರೀಕೃಷ್ಣರಾಯ ನೀನಹುದೋ5
--------------
ವ್ಯಾಸರಾಯರು
ನಾನೇ ಸಜ್ಜನನಾದಡೆ ಇಂಥ ಹೀನ ವಿಷಯಗಳಿಗೆರಗುವೆನೇನಯ್ಯ ಪ. ನಿರುತದಿ ಪರರ ನಿಂದಿಸುತಿಹೆನೆಗುರುಹಿರಿಯರು ಸಜ್ಜನರೆನ್ನದೆಹರಿ ಪರದೈವವೆಂದರಿತು ಭಜಿಸದೆಪರರ ವಡವೆಗಳ ಬಯಸುವೆನೇನಯ್ಯ 1 ಚಿತ್ತವ ಪುರುಷೋತ್ತಮನ ಮನದಲ್ಲಿಡದೆಉತ್ತಮರಾದವರೊಡನಾಡದೆತತ್ವ ವಿಚಾರವ ಮಾಡದೆ ನಾನು ನ್ಮತ್ತರ ಸಂಗವ ಮಾಡುವೆನೇನಯ್ಯ 2 ಹೇಯ ಶರೀರವ ಪೋಷಿಸಿಕೊಂಡುಪಾಯವ ಚಿಂತಿಸಿ ಬಳಲುವೆನುರಾಯರ ಶರಣರ ಸಲಹುವರಂಗವಿಠಲನ ಬಿಡುವೆನೇನಯ್ಯ 3
--------------
ಶ್ರೀಪಾದರಾಜರು