ಒಟ್ಟು 1724 ಕಡೆಗಳಲ್ಲಿ , 104 ದಾಸರು , 1456 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಧಿ ಸುಖಾತ್ಮಜೆ ಪ ಶರಣು ತವ ಚರಣಾರವಿಂದಕೆ ಶರಣು ಸುರನುತ ಜಂಘಕೇಶರಣು ಕರಿಕರಭೋರು ಯುಗಳಕೆ ಶರಣು ಸುಟೊಂಕಕೆ1 ಕರ ಕಣ್ಣು ಮೂಗು ಭ್ರೂಲತೆ ಕರಣಾಭರಣಕೆ 2 ಶರಣು ಸಾಲಕ ಬಿಂಬ ಫಾಲಕೆ ಶರಣು ಕುಸುಮಿತ ವೇಣಿಗೆಶರಣು ಮಾಧವನಂಕ ಬಿಂಬದಿ ಮೆರೆವ ಸುಖ ಮುತ್ತೈದಿಗೆ 3 ಕಾಲ ಸ್ವಭರ್ತೃಸುಮಜಿತೆ ಭಕ್ತಪೋಷಣೆಕೃತ್ಯ ಕರುಣಾ ಸಾರಸಾಂಡ ಸುಪಾಸ್ತ ಸಂಸಿತಳೆ ನೀ4 ಸೊಲ್ಲು ಪೇಳುವೆ ಸ್ನೇಹದಿಂದಲಿಪುಲ್ಲನಾಭನ ಪರಿಚಿಸೀ ಈಗವನಲ್ಲಿ ನೀ ಪೇಳೆ 5 ದೇವಶರ್ಮನು ನಿನ್ನ ಚರಣಾಧ್ಯಾನದಲಿ ಸನ್ನುತಿಸಿ ಕರುಣತೋಯಜಾಕ್ಷನ ಕಂಡು ಸುಖಿಸಿದುಪಾಯವ ಬಲ್ಲವನು 6 ಸುಂದರಾಂಗಿಯೆ ಸಾರಸಾಕ್ಷಿಯೆ ಮಂದಹಾಸಿನಿ ಮಾರಮೋಹಿನಿಇಂದಿರೇಶನ ಮಾನಿನಿಯೆ ತವಕದಿಂದ ನಿಂತಿಹೆನು 7
--------------
ಇಂದಿರೇಶರು
ಶಾಂತಿನಿಲಯ ಸುಖದ ಪ ಭ್ರಾಂತನಾದೆ ಪರಿಭವದ ತಂತು ತಿಳಿಯದಕಟ ಶ್ರೀ ಕಾಂತ ಕಾಯೊ ಪಿಡಿದು ಕರು ಣಾಂತರಂಗ ಕುಸುಮನಾಭ 1 ಉದಧಿಯಂದದುಕ್ಕಿಬರುವ ಅಧಮನಕೆ ಕಲ್ಪನೆಗಳು ಒದಗಿ ವಿಧ ವಿಧ ನೋಯಿಪು ದಿದನು ಬೇಗ ಪರಿಹರಿಸು 2 ನಂಬಿಭಜಿಪ ಭಕುತಜನರಿ ಗಿಂಬು ನೀನೆ ಅಂಬುಜಾಕ್ಷ ಇಂಬುಗೊಟ್ಟು ಸಲಹು ಸದಾ 3
--------------
ರಾಮದಾಸರು
ಶಾಂತೇರಿ ಕಾಮಾಕ್ಷಿ ಲಕ್ಷ್ಮೀಕಾಂತನ ಸೋದರಿ ಸಂತಜನರ ಭಯನಿವಾರಿ ಕಂತುಸಹಸ್ರ ಸುಂದರಿ ಪ. ಬಂಗಧಿ ದೇವಿ ಸುಪ್ರಸಿದ್ಧೆ ಮಹೇಶ್ವರಿ ಶುದ್ಧ ಶ್ರೀಹರಿಭಕ್ತಿಜ್ಞಾನ ಶ್ರದ್ಧೆಯ ನೀಡಮ್ಮ ಶಂಕರಿ 1 ಪಂಚಾಸ್ಯನಾರಿ ಪಾವನೆ ಕಾಂಚನಾಭೆ ಗೌರಿ ಪಂಚ ಮಹಾಪಾಪವಿದಾರಿ ಪಾಹಿಮಾಂ ಶ್ರೀವಿಶ್ವಂಭರಿ 2 ಸುಕ್ಷೇತ್ರ ಕುಮಟಾಖ್ಯ ನಗರಾಧ್ಯಕ್ಷೆ- ದೇವಿ ಭವಾನಿ ತ್ರೈಕ್ಷನ ರಾಣಿ ಕಲ್ಯಾಣಿ ಲಕ್ಷ್ಮೀನಾರಾಯಣಿ3
--------------
ತುಪಾಕಿ ವೆಂಕಟರಮಣಾಚಾರ್ಯ
ಶಾರದೆ ನಿನ್ನ ಪಾದವ ಆರಾಧಿಸುವೆವುವಾರಿಜ ಭವಕ್ಕೆ ಸೇರಿಸು ಹರಸು ಪ. ನಿತ್ಯ ಭಜಿಸುವೆವುಸಚ್ಚಿದಾನಂದನ ಚಿತ್ತದಿ ನಿಲ್ಲಿಸ1 ರಂಭೆ ನಮ್ಮಯ ಹೃದಯ ಅಂಬರದೊಳು ನಿಂತುಅಂಬುಜನಾಭನ ತುಂಬಿಸು ಮನದಿ2 ಅರಿಷಿಣ ಕುಂಕುಮ ಬೆರೆಸಿದ ಪರಿಮಳಸರಸದಿ ಕೈ ಕೊಂಡು ಅರಸಿಯರ ಗೆಲಿಸ 3 ಅತ್ತಿ ಹೂವಿನಸೀರೆ ಮುತ್ತಿನಾಭರಣವಅರ್ಥಿಲೆ ಕೈ ಕೊಂಡು ಮಿತ್ರೆಯರ ಗೆಲಿಸ4 ಪತಿ ಸೌಭಾಗ್ಯವ ರಚಿಸಲುಶೀಘ್ರದಿ ತೋರಿಸೆ ಕುಗ್ಗದೆ ನಮಗೆ 5 ಪತಿ ನಿತ್ಯ ರಾಮೇಶನ ತತ್ವವ ರಚಿಸುವೆ ಸತ್ಯವ ನುಡಿಸೆ ಶಾರದಾದೇವಿ6
--------------
ಗಲಗಲಿಅವ್ವನವರು
ಶಿರಬಾಗಿ ಬೇಡ್ವೆ ಎನ್ನನು ಪೊರೆಯೋ ಹರಿಯೇ ಶರಣ ರಕ್ಷಕನೆಂಬೊ ಬಿರುದುಳ್ಳ ದೊರೆಯೇ ಪ ಘನಮಹಿಮನೇ ನಿನ್ನ ಪಾವನ ಚರಣಕಮಲ ಎಂಬೋ ಮನವ ಆಕರ್ಷಿಸುವ ಪಂಜರದಲಿ ವನಜನಾಭನೆ ಎನ್ನ ಮನವೆಂಬ ರಾಜಹಂಸ ನನ್ನ ಲೋಲ್ಯಾಡಿಸೋ ಅನುದಿನದಲಿ 1 ಇಂದಿನ ದಿನವೇ ಸ್ಮøತಿಯಿಂದ ಇರುವಾಗ ಮು- ಕುಂದ ತವ ಸ್ಮರಿಸುವೆÉ ಕೊಡು ಮೋಕ್ಷವಾ ಮುಂದೆ ಅಂತ್ಯದಲಿ ಕಫ ಪಿತ್ತ ಶೀತಾದಿ ಕಂಠ ಗುಂದಿ ವಿಸ್ಮøತಿಯಾಗಿ ಸ್ಮರಣವಹುದೈಯ್ಯಾ 2 ಶ್ರೀಶ ಹನುಮೇಶವಿಠಲನೇ ನಿನ್ನಾಧೀನ ದಾಸನ ಮನದಪೇಕ್ಷವ ಪೂರಿಸೋ ಕೇಶವನೆ ಶಾಸಕನೆಂದು ಆಶಿಸಿ ಬಂದೆ ಬೇಸರ ಮಾಡದಲೆ ಪೋಷಿಸೈ ಸ್ವಾಮಿ 3
--------------
ಹನುಮೇಶವಿಠಲ
ಶಿರಿದೇವಿಯೆ ಪೊರಿಯುವದೆನ್ನನು ತಾಯೆ ಭಾ ಸ್ಕರ ಪುರ ನಿಲಯೆ ಪ ಧರಣಿಸುರವರÀನಿಗೊಲಿದು ಶ್ರೀಗಂಧದ ವರ ಶಿಲೆಯೊಳು ನೆಲಿಸಿರುವ ಶುಭಾಂಗಿಯೆ ಅ.ಪ ಲಕುಮಿಯೆ ತವ ದರುಶನ ವರುಷಂಪ್ರತಿ ಮಾಡುವ ನೇಮಾಸಕ್ತ ಶ್ರೀ ಲಕ್ಷ್ಮೀಕಾಂತ ತತ್ಕರಸಂಪೂಜಿತ ಸತಿ 1 ಪದ್ಮೇ ಪ್ರಣಮಾಮಿ ಭವತ್ಪದ ಪದ್ಮೆ ವಾರಿಜದಳ ಸದ್ಮೆ ಪದ್ಮಾನನೆ ಸ್ಮರಿಸುವೆ ಕರಧೃತ ಪದ್ಮೆ ವಾಸಯಿ ಮಮಸದ್ಮನಿ ಪದ್ಮಾವತಿ ಪದ್ಮಜನುತ ಪದಪದ್ಮೇ ಉದ್ಭವಿಸಿದ ಪದ್ಮದಿ ಪದ್ಮನಾಭ ಹೃತ್ಪದ್ಮನಿವಾಸಿನಿ 2 ಸಿಂಹಧ್ವಜ ಶೋಭಿತೆ ಸಾನುರಾಗದಿ ಭಜಿಸುವರಿಗೆ ಪ್ರೀತೆ ಕಾಮಿತ ಫಲದಾತೆ ಜ್ಞಾನಾ ಸದ್ಭಕುತಿಯು ಕರುಣಿಸು ಮಾತೆ ವರದಾಭಯಹಸ್ತೆ ರಾಣೆಯೆ ನಮಿಸುವೆ 3 ವಂದಾರುಜನ ಮಂದಾರಾಮಿಂದಿರಾ ಸುಂದರಾನನಾಂ
--------------
ಕಾರ್ಪರ ನರಹರಿದಾಸರು
ಶುಕ ಮುನಿವಂದ್ಯ ಹರಿ ಮುಖ ಪೀಠದಲಿ ಕುಳಿತೂ ಪ ಸುಖದಿ ನೀ ಪವಡಿಸಯ್ಯಾ ಅ.ಪ ಬೊಮ್ಮ ದಿವಿಜ ಭವರೋಗ ವೈದ್ಯ ನಿಂ ನವಸರದೂಳಿಗ ನವಸುಂದರ ನಿದ್ದೆ ಪೊ ತ್ತವನೇ ನೀ ಪವಡಿಸಯ್ಯಾ 1 ತುಂಬುರು ನಾರದನೆಂಬರು ವೀಣೆಯ ಸಂಭ್ರಮದಿಂ ಮೇಳೈಸಿ ಅಂಬುಜನಾಭ ನೀನೆಂಬ ಗೀತವ ಸವಿ ದುಂಬಿ ಪಾಡಲು ಕೇಳುತಾ ಟುಂಬ ನೀ ಪವಡಿಸಯ್ಯಾ 2 ಪೆಡೆದಲೆಗನ ಮೃದುವಡೆದ ಹಾಸಿನ ಮೇ ಲಿಡಿಕಿರಿ ವಡಸಿಸುವಾ ಯಡಕೆಲೆ ಸಂಭ್ರಮಿಸೇ ಮಡದಿ ರನ್ನಳು ಸೌಮ್ಯನಾಯಕಿ ಯೊಡನೈಗೂಡಿ ಮೃಡನುತನೆ ಪವಡಿಸಯ್ಯಾ 3
--------------
ಬೇಲೂರು ವೈಕುಂಠದಾಸರು
ಶುಭ ವಾಸುದೇವ ಮೂರುತಿಗೆ ಪಕುಂದಣಕೆ ಸರಿಯಾದ ಕಾಯದತಿ ಕಾಂತಿಗೆಸಿಂಧುವನು ಪೋಲ್ವ ಗಂಭೀರ ರಸಕೆಇಂದುಬಿಂಬವ ಜರೆವ ಮುಖದ ಸೊಂಪಿನ ಸಿರಿಗೆಕಂದರ್ಪ ಕೋಟಿ ಲಾವಣ್ಯ ನಿಧಿಗೆ 1ಅಭಯದಾನವ ಕೊಡುವ ಕರಗಳತಿ ಚೆಲು'ಕೆಗೆಶುಭಗಳಿಗೆ ನೆಲೆಯಾದ ನೇತ್ರಗಳಿಗೆ'ಭವಗಳಿಗೆಡೆಬಿಡದ ಮುಗುಳುನಗೆಯೊಗು'ುಗೆಗೆತ್ರಿಭುವನಂಗಳನಳೆದ ಪದ ನಳಿನಗಳಿಗೆ 2ಜ್ಞಾನಮುದ್ರೆಯ ಕರದಿ ಜ್ಞಾನೋಪದೇಶವನುತಾನೆ ಕರೆದಿತ್ತು ಭಕ್ತರ ಸಲಹುತಾ ಮಾನವನು ಕಡೆಗೊತ್ತಿ ಮಾನ್ಯ ತಾನೆಂದೆನಿಪಶ್ರೀನಿಕೇತನ ನಿಜದ ಚಿನ್ಮಯಾತ್ಮಕಗೆ 3ಕಾವೇರಿ ಗಂಗೆಯೊಲು ಕಮಲನಾಭನ ಕಥೆಯ ಪಾವನದ ತೀರ್ಥದಲಿ ಪಾಪವಳಿದು ಜೀವಭಾವವ ಬಿಟ್ಟು ಬ್ರಹ್ಮ ತಾನೇಯಾಗಿಯಾವಗವು ಸುಖಶರಧಿಯಾದ ಚಿನ್ಮಯಗೆ 4ರಾಗಾದಿರ'ತನಿಗೆ ರಾಗಿಗಳ ಸಂಸಾರಸಾಗರವ ದಾಟಿಸುವ ಬೋಧ ಘನಗೆಯೋಗಿಗಳ ಸಂಮತಗೆ ಗುರು ವಾಸುದೇವಗೆಯೋಗೇಶ ತಿರುಪತಿಯ ವೆಂಕಟೇಶ್ವರಗೆ 5ಓಂ ಶ್ರೀವತ್ಸಕೌಸ್ತುಭಧರಾಯ ನಮಃ
--------------
ತಿಮ್ಮಪ್ಪದಾಸರು
ಶುಭಸುಂದರ ಕಾಯಾ ವಿಭುವೆ ಸುರಗುರುರಾಯಾ | ಅಭಿವಂದಿಸುವೆನೊ ಜೀಯ್ಯಾ ಪ ಕರವ ಜೋಡಿಸಿ ಬಿನ್ನೈಪಾ || ದುರಿತ ರಾಶಿ | ಪರಿಹಾರ ಮಾಡಿಸಯ್ಯಾ 1 ಮಾರುತಿ ಸದಾಗತಿ ಭಾರತೀಪತಿ ಯತಿ | ಮಾರಾರಾತಿಗೆ ನೀ ಗತಿ || ಮಾರಿಗಳಿಗೆ ನಿರುತ ಮಾರಕ ನೀನಹುದೋ2 ವಾಯು ಎನಗೆ ಸಂಪೂರ್ಣಾಯು ಪಾಲಿಸೊ ಸರ್ವ | ಸಾಯುಜ್ಯ ಸಾರೂಪ್ಯನೆ || ಕುಯುಕ್ತಿ ಜನರ ಗದಾಯುದ್ಧದಿಂದಟ್ಟಿ | ಈ ಯುಗದೊಳು ಬಲವಾಗೋ 3 ಕಾಯ ನಿನ್ನದು ಗುಣನಿ | ಕಾಯ ನಿರ್ದೋಷ ಕಾಯಾ || ಕಾಯಾ ಐದಳಮಾನ | ಕಾಯ್ದ ಕಲಿವೈರಿ | ಕಾಯಜಪಿತನ ದೂತಾ 4 ಪಂಕಜನಾಭನ ಅಂಕದಲ್ಲಿಪ್ಪ ಬಿಂಕವ ತಾಳದಿರೊ | ಸಂಕರುಷಣ ನಮ್ಮ ವಿಜಯವಿಠ್ಠಲನ ಹೃ ತ್ಪಂಕದೊಳು ತೋರಿಸೊ 5
--------------
ವಿಜಯದಾಸ
ಶೇಷ ಪರ್ಯಂಕ ಶಯನ ವಿಠಲ ಪೊರೆ ಇವಳ ಪ ವಾಸುದೇವನೆ ನಿನ್ನ | ದಾಸಿ ಎಂದೆನಿಸಿ ಭವಪಾಶವನೆ ಕಳೆಯೊ ಸುವಿ | ಶೇಷ ಹರಿಯೇ ಅ.ಪ. ಪತಿಸುತರು ಹಿತರಲ್ಲಿ | ವಿತತವಾಗಿರುವಂಥಅತಿಶಯದ ತವರೂಪ | ಸತತ ಚಿಂತಸುವಾ |ಮತಿಯನೇ ಕರುಣಿಸುತ | ಕೃತ ಕಾರ್ಯಳೆಂದೆನಿಸೊಕ್ಷಿತಿರಮಣ ಭಿನ್ನವಿಪೆ | ಪತಿಕರಿಸೊ ಇದನಾ 1 ಬುದ್ಧಿಯಲಿ ಸನ್ನಿಹಿತ | ವೃದ್ಧಿಗೈಸಿವಳಲ್ಲಿಮಧ್ವಮತ ಸಿದ್ಧಾಂತ | ಪದ್ಧತಿಗಳಾಅಧ್ವರೇಡ್ಯನೆ ಅನಿ | ರುದ್ಧ ಮೂರುತಿ ಹರಿಯೇಕೃದ್ಧಖಳ ಸಂಹಾರಿ | ಪದ್ಮನಾಭಾ 2 ಕೀಚಕಾರಿ ಪ್ರಿಯನೆ | ಮೋಚಕೇಚ್ಛೆಯ ಮಾಡಿಪ್ರಾಚೀನ ಕರ್ಮದಿಂ | ಮೋಚನವ ಗೈಸೋ |ಯಾಚಿಸುವೆನೋ ಸವ್ಯ | ಸಾಚಿಸಖ ನೀನೆಂದುಈಕ್ಷಿಪುದು ಕರುಣ ಕಟಾಕ್ಷದಲಿ ಹರಿಯೇ 3 ಸಾರ ಸುಖಸಾಂದ್ರಾ 4 ಕಾವ ಕರುಣಿಗಳರಸ | ಭಾಮಕರ ಪರಿಪಾಲಾಓವಿತವ ಸಂಸ್ಮರಣೆ | ಸಾರ್ವಕಾಲಿದಲೀಈವುದಿವಳಿಗೆ ಎಂದು | ಭಾವದಲಿ ಭಿನ್ನವಿಪೆಗೋವಿದಾಂ ಪತಿಯೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶೇಷಶಯನ ಶ್ರೀಕೃಷ್ಣನಿಗಾರತಿ ಸತಿ ಲಕುಮಿಯು ಮಾಡಿದಳು ಪ ಸಾಸಿರನಾಮನ ಭೂಸುರಪಾಲನ ಸೋಸಿನಿಂದ ಸ್ಮರಿಸುತ ಮನದಿ ಅ.ಪ ಅಂಬುಧಿಯುದುಕದಿ ಆಲದ ಎಲೆ ಮೇಲೆ ಅಂಗುಟವನು ಬಾಯೊಳಗಿಟ್ಟು ತುಂಬಿಗುರುಳ ಮುಖಕಮಲದ ಚಲುವಗೆ ಸಂಭ್ರಮದಲಿ ಮುತ್ತಿನಾರತಿಯ 1 ಮಂದರಧರ ಗೋವಿಂದಗೆಮ್ಮಯ ಕುಂದುಗಳೆಣಿಸದೆ ಸಲಹೆನ್ನುತಾ ವಂದಿಸಿ ಪ್ರಾರ್ಥನೆ ಮಾಡುತ ಬೇಗದಿ ಇಂದಿರೇಶ ಸಲಹೆಂದೆನುತ 2 ಗೋವರ್ಧನವನು ಎತ್ತಿ ಸುಜನರನು ಗೋಗೋಪಾಲರ ಪೊರೆದವಗೆ ಗೋಪತಿ ಕಮಲನಾಭ ವಿಠ್ಠಲನಿಗೆ ಗೋಪಿಯರೊಡನಾಡುವ ಹರಿಗೆ 3
--------------
ನಿಡಗುರುಕಿ ಜೀವೂಬಾಯಿ
ಶೌನಕಾದಿ ಮುನಿಗಳಿಗೆ ಸಾನುರಾಗದಲಿ ಪೇಳಿದರು 1 ಕೈಲಾಸಶಿಖರ ಮೆರೆವುದು ಮೇಲಾದ ರತ್ನಕಾಂತಿಗಳಿಂ2 ಜಂಬುಕೇತಕಿ ಪನಸ ಪುನ್ನಾಗ ಸರ್ವಾತಿಶಯದಲಿ ತೋರುವದು 3 ಸಿದ್ಧಿದಾಯಕ ವೆಂದಿಲ್ಲಿ ಪದಧ್ಯಾನದಿ ಕುಳಿತಿಹರು 4 ದಿವಿಜ ಅವನಿಧರಾಗ್ರಣಿಯಾಗಿ ಭುವನೋದರತ್ವದಿ ಭುವನಜನಾಭ ಶ್ರೀಧವನಂತೆ ಗಿರಿಯು ಮೆರೆಯುವುದು5 ಪಾರ್ವತಿಯೊಡನೆ ಸತಿ ನಮಿಸಿ ನುಡಿದಳು 6 ನುಡಿಯ ಲಾಕ್ಷಣದಿ ನಾಕರುಣಿಸುವೆ ಕೇಳೆಂದ7 ವರಮಹಾಲಕ್ಷ್ಮಿಯ ವೃತವು ದೊರೆವುದು ಸಕಲಸೌಭಾಗ್ಯ 8 ಶ್ರಾವಣ ಪೂರ್ಣ ಮಾಸಿಯ ದಿನದಿ ಪೂಜಿಪದು ವಿಶ್ವಾಸದಿಂದಾರಾಧಿಸುತಲಿ 9 ಪಕ್ವಾನ್ನ ಲೇಹ್ಯಾದಿ ನೈವೇದ್ಯ ತತ್ತನ್ನಿಯಾಮಕರ ಚಿಂತಿಪುದು 10 ಕೃಪಾಪಯೋನಿಧೆಯ ಪೂಜಿಪುದು ಬಿಂಬಾಪರೋಕ್ಷಿಗಳು ಪೂಜಿಪರು 11 ಕಾಮಿತ ಪಡೆದವರ್ಯಾರು ಮಹಾಮಹಿಮೆಯನು ಚನ್ನಾಗಿ12 ಮಡದಿ ತಾನಿರಲು ಕರೆಯುವರೆಲ್ಲಾರು ಪುರದಿ 13 ವನಜನಾಭನ ಶೇವೆಯೆಂದು ಗುಣದಿ ಭೂಷಿತಳು 14 ಬಂದಳು ವರಮಹಾಲಕ್ಷ್ಮಿ ಪರಮ ಸಂಭ್ರಮದಿ 15 ನಿರ್ಮಿಸುವನು ಜಗವೆಲ್ಲ ನೀ ಕರುಣಿಸು ಮಾತೆ 16 ಶ್ರಾವಣ ಹರುಷದಿಂದೆನ್ನಯ ವೃತವ ವರಗಳನಿತ್ತಳು ದಯದಿ 17 ಸಂತೋಷದಲಿ ಪೇಳಲವರು ಚಿಂತಿತ ಫಲವೀವುದೆಂದು 18 ಸಿಂಗರಿಸಿದಳಾದಿನದಿ ವಿಪ್ರಾಂಗನೆಯರನು ಕರೆದಳು 19 ಶಿರಿದೇವಿ ಪೂಜಾಸಾಧನವ ನೆರೆದರಾ ದ್ವಿಜನಮಂದಿರದಿ 20 ಕುಂಭಗಳಿಟ್ಟಘ್ರ್ಯಾದಿಗಳಿಂ ಸುರರ ಸಮ್ಮುಖದಿ 21 ಇಂದಿರ ದೇವಿಗಾರುತಿಯ ಬಂಧÀ£ವÀನÉ ಮಾಡುತಿಹರು 22 ಪೂಜಿಸುತಿರಲಾಗೃಹವು ಸೋಜಿಗವಾಯ್ತು ನೋಳ್ಪರಿಗೆ 23 ಕೊರಳೊಳುನವರತ್ನಹಾರ ಸಿರಿದೇವಿ ಕರುಣವಿದೆಂದು 24 ಇತ್ತರು ಬಾಗಿಣಗಳನು ಪೋದರು ತಮ್ಮ ಮನೆಗೆ 25 ಪುಣ್ಯದಿಂದೆಲ್ಲರು ನಾವೆಂ ಧನಧಾನ್ಯ ಸಂಪದಾಗಮನ 26 ಪಾಲಿಸುವಳು ಸಿರಿಯೆಂದು ಶಿವನು ಹೀಗೆಂದು ||27| ಕಾಯಜ ಜನನಿಯ ಕಾಯುವದೆಂದು ನೀ ತಿಳಿಯೆ 28 ನಿರ್ಮಲ ಭಕ್ತಿಜ್ಞಾನ ವೈರಾಗ್ಯ ಇಳೆಯೊಳು ಕಾರ್ಪರ ನಿಲಯ ಶ್ರೀನರಹರಿ ಒಲಿವನು ನಿರುತ ಪಠಿಸಲು30
--------------
ಕಾರ್ಪರ ನರಹರಿದಾಸರು
ಶೌರಿ ಬಾರೋ ಭಕ್ತರ ದೊರೆ ಬಾರೋ ಬಾಬಾ ಮನೆಗೆ ಪ ಚಾರುತರ ನವರತುನದ ಶೃಂ- ಗಾರ ರಥದೊಳು ಕುಳಿತು ಬೇಗನೇ ಭೇರಿ ವಾದ್ಯಗಳೆಲ್ಲ ಮೊಳಗಲು ನಾರಿ ರುಕ್ಮಿಣಿ ಭಾಮೆ ಸಹಿತಅ.ಪ ಸುರರು ಅಸರರು ಕೂಡಿ ಶರಧಿಯ ಮಥಿಸಲು ಭರದಿ ಪುಟ್ಟಲು ಸುಧೆಯು ಪರಮ ಹರುಷದಿಂದ ದೊರಕಿತಮೃತವೆಂದು ಅಸುರರೆಲ್ಲರು ಬರಲು ಬೆರಗಾಗಿ ಸುರರೆಲ್ಲ ಉಪಾಯವನರಿಯದೆ ಗಗನ ನೋಡುತಿರಲು ತ್ವರದಿ ಶ್ರೀಹರಿ ಅವರ ನೋಡುತ ಪರಿಪರಿಯ ಆಭರಣ ಪೀತಾಂ- ಬರಗಳಿಂದಲಂಕರಿಸಿ ಸುಂದರ ತರುಣಿ ರೂಪವ ಭರದಿತಾಳಿದೆ 1 ಹರಿಯ ಸ್ತ್ರೀರೂಪವ ಪರಶಿವ ಸ್ಮರಿಸುತ ಮರಳಿ ನೋಡಲಪೇಕ್ಷಿಸೆ ಪರಿ ಪ್ರಾರ್ಥಿಸೆ ಪರಮಾತ್ಮ ನುಡಿದನು ಇದುತರವಲ್ಲೆನುತ ಉರಗ ಭೂಷಣನ ಪ್ರಾರ್ಥನೆ ಸಲಿಸುವೆನೆಂದು ತರುಣಿಯಾದನು ಹರಿಯು ಪರಮಸೂಕ್ಷ್ಮದ ವಸನ ವಡ್ಡ್ಯಾ- ಣಗಳಲಂಕರಿಸುತ್ತ ವನದೊಳು ಚರಿಸುತಿರೆ ಹರ ಬೆರಗಾಗಿ ಹಿಂದೋ- ಡುತಲಿ ಬರೆ ಮರೆಯಾದ ದೇವನೆ 2 ಹಿಂದೆ ದೈತ್ಯನು ಬಹುಚಂದದಿ ತಪಗೈದು ಕಂದುಗೊರಳನ ಮೆಚ್ಚಿಸೇ ಬಂದನಾಗಲೇ ಶಂಭು ಇಂದುವರ ಬೇಡೆನಲು ವಂದಿಸಿ ಬೇಡಿದ ವರವ ತಾನು ಅಂದು ವರಗಳ ಕೊಟ್ಟು ಹಿಂದಿರುಗಲು ಶಿವನು ಹಿಂದೆ ಬೆನ್ನಟ್ಟಿದ ರಕ್ಕಸನೂ ಹಿಂದÀುರಗದಲೆ ಓಡುತಲೆ ಶ್ರೀ ತಂದೆ ಕಮಲನಾಭ ವಿಠ್ಠಲ ನೆಂದು ಮೊರೆಯಿಡೆ ಕೇಳಿ ತ್ವರದಲಿಬಂದು ರಕ್ಷಿಸಿ ಕಾಯ್ದ ಶ್ರೀಹರಿ 3
--------------
ನಿಡಗುರುಕಿ ಜೀವೂಬಾಯಿ
ಶೌರಿ ಬಾರೋ ಶ್ರೀಹರಿ ಪ ಬಾರೋ ಬಾರೋ ಕರುಣಾನಿಧಿ ನಿನ್ನನು ಬಾರಿ ಬಾರಿಗೆ ಸಿರಬಾಗಿ ನಮಿಸುವೆನು ಅ.ಪ ಮಾರನಯ್ಯನೆ ಮಂಗಳರೂಪ ತೋರೊ ಬೇಗನೆ ಸಾರಸಾಕ್ಷ ಸನ್ಮಂಗಳ ಮಹಿಮನೆ ತೋರೋ ನಿನ್ನ ಮಹಾ ಮೀನರೂಪವನು 1 ಸುಂದರಾನನ ಚಂದಿರವದನ ಮಂದಹಾಸನೆ ದುರಿತ ಕಳೆವಂದದಿ ಬೆನ್ನಿಲಿ ಮಂದರವೆತ್ತಿದ2 ಆದಿದೈತ್ಯನು ಭೂದೇವಿಯಪಹಾರ ಗೈದನು ಆ ದಿತಿಜರ ಸಂಹಾರ ಮಾಡಲು ನೆಲ ವರಾಹ ಬೇಗ 3 ಕಂದನಾಡಿದ ಆ ನುಡಿ ಕೇಳಿಯಾನಂದ ತಾಳಿದ ಮಂದರೋದ್ಧರ ಮುಚುಕುಂದ ವರದ ಸುರ- ಗಂಗೆಯ ಪಿತ ನರಸಿಂಗರೂಪದಿ 4 ಬಾಲರೂಪದಿ ಬೇಡಿದ ದಾನ ಭೂಮಿ ಮಾತ್ರದಿ ಬೇಡಿದುದನೆ ಕೊಟ್ಟಾಮಹೀಪಾಲನ ದೂಡಿ ಪಾತಾಳಕ್ಕೆ ಬಾಗಿಲ ಕಾಯ್ದೆ 5 ಶೂರ ರಾಜರ ಸಂಹಾರ ಮಾಡಿ ತೋರಿ ಶೌರ್ಯವ ಸಾಗರಶಯನಗೆ ತೋರಿ ಪರಾಕ್ರಮ ಶೂಲಿಯ ಧನುವಿತ್ತೆ ರೇಣುಕಾತ್ಮಜ 6 ವಾನರಾಧಿಪ ಹಗಲಿರುಳು ಭಕ್ತಿಮಾಡಿ ಧ್ಯಾನಿಪ ಶ್ರೀ ಮಾನಿನಿಯಳ ಕೈಪಿಡಿಯುತ ಅಯೋಧ್ಯದಿ ಮೆರೆದ ಶ್ರೀರಾಮ ಚಂದಿರನೆ 7 ಪಾಂಡುನಂದನ ಮಾಡಿದ ನಿನ್ನ ಬಂಡಿ ಬೋವನ ಸಂದೇಹಿಸದಲೆ ಅಂದು ಅವರ ಮನೆ ಎಂಜಲ ಬಳಿದ ಮುಕುಂದನೆ ಬೇಗದಿ 8 ಮಂಗಳಾತ್ಮಕ ತ್ರಿಪುರರ ಮದ ಭಂಗನಾಶಕ ಮಂಗಳಮಹಿಮ ವಿಹಂಗವಾಹನ ಸುರ ಸಂಗೀತಲೋಲ ಕೃಪಾಂಗ ದಯಾನಿಧೆ 9 ತೇಜಿಯನೇರುತ ಸುಜನರು ಮಾಳ್ಪಪೂಜೆಗೊಳ್ಳುತ ರಾಜೀವಾಕ್ಷ ರಕ್ಕಸ ಸಂಹಾರಕ ಅ- ಪಾರ ಮಹಿಮ ರಥವೇರುತ ತವಕದಿ 10 ಕಂಜಲೋಚನ ಕಮಲಾಯತಾಕ್ಷ ಮಂಜುಭೂಷಣ ಕಂಜದಳಾಂಬಕ ಕಮಲನಾಭ ವಿಠ್ಠಲಝಗಝಗಿಸುವ ಮದ್ಹøದಯ ಮಂಟಪಕೇ 11
--------------
ನಿಡಗುರುಕಿ ಜೀವೂಬಾಯಿ
ಶೌರಿ ಅಡಿಗಳನು ಧ್ಯಾನಿಸುವ ಮತಿ ಕೋರಿ ಪ ಮೃಡ ಪುರಂದರರೊಡೆಯ ಶ್ರೀಹರಿ ಕಡಲಶಯನನ ಬಿಡದೆ ಭಜಿಪರ ಸಡಗರದಿ ಸನ್ಮಾರ್ಗ ತೋರುವ ಬಡವರ ಆಧಾರಿ ನರಹರಿ ಅ.ಪ ನಿನ್ನ ದಾಸರ ಸಂಗದೊಳಿರಿಸೆನ್ನ ಬೇಡುವೆನು ನಿನ್ನ ನಿನ್ನ ನಾಮಸ್ಮರಣೆ ಅನುದಿನ ನಿನ್ನ ಚರಣವ ಭಜಿಪ ಭಕ್ತರನು ಕೊಂಡಾಡುವಂಥ ಅ- ಚ್ಛಿನ್ನ ಭಕ್ತರ ಕೂಟದಲಿರಿಸೆನ್ನ ಸನ್ನುತಾಂಗನೆ ಸರ್ವವ್ಯಾಪಕ ನಿನ್ನ ಮೊರೆ ಹೊಕ್ಕಿರುವೆ ಪಾಲಿಸು ಪನ್ನಗಾದ್ರಿವಾಸ ವೆಂಕಟ ಆ- ಪನ್ನ ಜನರನು ಪೊರೆವ ಕರುಣಿಯೆ 1 ಗಜ ನೀ ಕೇಳಿ ತ್ವರದೊಳು ಬಿಡದೆ ರಕ್ಷಿಸಿ ಪೊರೆದ ಕರುಣಾಳು ಬಡವ ವಿಪ್ರಗೆ ಒಲಿದೆ ಕ್ಷಿಪ್ರದೊಳು ಸೌಭಾಗ್ಯವಿತ್ತೆ ಹುಡುಗ ತಪವಿರೆ ಅಂದು ಅಡವಿಯೊಳು ತಡೆಯದಲೆ ನೀನೊಲಿದೆ ಭಕುತಿಗೆ ಒಡೆಯರೈವರ ಮಡದಿ ಮೊರೆ ಕೇಳಿ ಬಿಡದೆ ಅಕ್ಷಯವೆಂದು ಸಲಹಿದೆ ದೃಢ ಭಕುತರನು ಬಿಡದೆ ಪೊರೆಯುವೆ 2 ರಂಗನಾಥ ನಿನ್ನಂಘ್ರಿ ಕಮಲಗಳ ಭಜಿಸುವವರ ಭವ ಹಿಂಗಿಸುತ ಪೊರೆದಂಥ ಚರಿತೆಗಳ ಸಂಗರಹಿತನೆ ಬಿಡಿಸು ಬಂಧಗಳ ಸಲಹೆಂದು ಪ್ರಾರ್ಥಿಪೆ ಅಂಗಜನಪಿತ ತರಿದೆನ್ನಪರಾಧ ಮಂಗಳಾಂಗ ಪ್ಲವಂಗ ವತ್ಸರ ಗಂಗಾಜನಕ ನಿನ್ನಂಘ್ರಿ ಭಜಕರ ಹಿಂಗದಲೆ ಪಾಲಿಸುತ ಪೊರೆ ಕೃಪಾ-ಪಾಂಗ ಕಮಲನಾಭ ವಿಠ್ಠಲನೆ 3
--------------
ನಿಡಗುರುಕಿ ಜೀವೂಬಾಯಿ