ಒಟ್ಟು 3495 ಕಡೆಗಳಲ್ಲಿ , 122 ದಾಸರು , 2470 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೆನೆದು ಬದುಕಿರೋ ಸತತ ನೆನೆದು ಬದುಕಿರೋ ಪ ನೆನೆದು ಬದುಕಿ ಸುಜನರೆಲ್ಲಘನಗುಣಾಂಬುಧಿ ಶ್ರೀಪಾದರಾಯರ ಅ.ಪ ಇತರ ಧ್ಯಾನವೆಲ್ಲವನುಳಿದುಅತಿಶಯದ ವಿರಕ್ತಿ ಬಲಿದುಮತಿ ವಿಶೇಷವೆನಿಪ ಮಧ್ವಮತಾಂಬುನಿಧಿಗೆ ಪೂರ್ಣಚಂದ್ರನ 1 ದುರಿತ ದೂರನಶಮದಮಾದಿ ಗುಣಸಮುದ್ರನ2 ಶುಭ ಚರಿತನ 3 ವಾದಿಕುಂಜರ ಪಂಚಮುಖನಸಾಧು ಸಜ್ಜನ ಕಲ್ಪವೃಕ್ಷನವೇದ ಶಾಸ್ತ್ರ ಪುರಾಣದಲಿಆದಿಶೇಷನ ಪೋಲ್ವ ಮುನಿಯ 4 ಸನ್ನುತ ಪರಮವನಧಿ ಗಂಭೀರ ಶ್ರೀಪಾದರಾಯರ 5
--------------
ವ್ಯಾಸರಾಯರು
ನೆನೆದು ಸುಖಿಸಿ ನಮ್ಮ ಆದಿ ಶರಣರಾ ಅನುದಿನ ಹರಿ ಮೆಚ್ಚಿದ ಪ್ರಿಯರಾ ಪ ಪ್ರಲ್ಹಾದ ನಾರದ ಪರಾಶರ ಮುನಿ ವಲ್ಲಭ ರುಕ್ಮಾಂಗದಾ ಧ್ರುವರಾ ಉಲ್ಹಾಸದಿಂದಲಿ ಅಂಬರೀಷ ಗಜೇಂದ್ರನಾ ಬಲ್ಲಿದ ಬಲಿ ಗುಣ ಸಾಗರರಾ ಹನುಮ ವಿಭೀಷಣ ಜಾಂಬವ ಅಜಮಿಳ ಮುನಿ ಮುಚಕುಂದಾರ್ಜುನ ಮುಖ್ಯರಾ 1 ಉದ್ಧವ ಉಪಮಾನ್ಯನು ಜನÀದೋಳಧಿಕರಾದಾ ಪುಂಡಲೀಕ ಭೀಷ್ಮರಾ ಭಕುತಿ ವನಧಿಯೊಳು ಮೆರೆವರ ತನವಾದಾ 2 ಶುಕಶೌನಕ ಮುಖ್ಯ ಸಜ್ಜನರಾ | ಪ್ರಕಟದಿ ಮಹಿಪತಿ ನಂದನು ಸ್ತುತಿಸಿದ | ಮುಕುತಿಗೆ ಯೋಗ್ಯ-ನಾ ಮಾಡುವರಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೆನೆವವಗೆ ಹರಿಯುಂಟು ನೆನೆಯದವಗೆ ಮದ ವೆಂಟು ಪ ನೆನೆವ ಮನವಿರಲುಂಟು ಮುನಿಸುತನ ನಂಟು ಅ.ಪ ನೆನೆವ ಧೃವನೂ ಗೆದ್ದ ಶುಕಮಹಾಮುನಿಗೆದ್ದ ನೆನೆವ ಹನುಮನೂ ಗೆದ್ದ ಶರಭಂಗ ಮುನಿಗೆದ್ದ ನೆನೆವ ಗಜಪತಿಗೆದ್ದ ವಾಲಿತನಯನೂ ಗೆದ್ದ ಕನಕದಾಸನು ಗೆದ್ದ ಇದು ಸರ್ವಸಿದ್ಧ 1 ಧುರದಿ ರಾವಣ ಬಿದ್ದ ವರವಿಭೀಷಣ ಗೆದ್ದ ದುರುಳ ಕಶಿಪೂ ಬಿದ್ದ ಪ್ರಹ್ಲಾದ ಶಿಶುಗೆದ್ದ ಹಿರಿಯವಾಲಿಯುಬಿದ್ದ ಸುಗ್ರೀವ ಗೆದ್ದ 2 ಸುಲಭನೊ ಮಾಂಗಿರಿಯ ರಂಗ ಜಗದಾನಂದ ಫಲವ ಕೊಟ್ಟಳಿಗೊಲಿದ ವಿಷಧರೆಯ ಸದೆದ ಬಲು ಮೆರೆದ ಕೌರವನ ಕುಲವಿನಾಶವ ಗೈದ ಚೆಲುವ ಮಾಂಗಿರಿರಂಗ ಶರಣರಿಗೆ ವರದ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೆನೆವೆನನುದಿನ ನೀಲನೀರದವರ್ಣನ ಗುಣರನ್ನನಮುನಿಜನಪ್ರಿಯ ಮುದ್ದು ಉಡುಪಿನ ರಂಗನ ದಯಾಪಾಂಗನ ಪ. ದೇವಕೀ ಜಠÀರೋದಯಾಂಬುಧಿಚಂದ್ರನ ಸುಖಸಾಂದ್ರನಗೋವ್ರಜಕೆ ಘನ ಯಮುನೆಯನು ದಾಟಿ ಬಂದನ ಅಲ್ಲಿ ನಿಂದನಮಾವ ಕಳುಹಿದ ಮಾಯಶಠವಿಯ ಕೊಂದನ ಚಿದಾನಂದನ ದೇವರಿಪು ದೈತ್ಯೇಂದ್ರ ಶಕಟನ ಒದ್ದನ ಶ್ರುತಿಸಿದ್ಧನ 1 ಗೋಕುಲದ ಗೋಪಿಯರ ಸಂಚಿತ್ತ ಚೋರನ ಬಹು ಧೀರನ ಅ-ನೇಕ ನಾರಿಯರ್ವಸನವನು ಕದ್ದೊಯ್ದನ ಪುರಗಾಯ್ದನನಾಕಿಯರ ನೋಯಿಪಧೇನುಕ ವತ್ಸವಿಘಾತ ವಿಖ್ಯಾತನಕಾಕುಮತಿ ಕಾಳಿಂಗನ ಫಣ ತುಳಿದನ ಆವಗೊಲಿದನ 2 ಕರ ಪಿಡಿದನ ಸುಧೆಗುಡಿದನಬಾಲ ಭಾಮೆಯರೊಡನೆ ಜಲಕ್ರೀಡೆಗಿಳಿದನ ಅಲ್ಲಿ ನಲಿದನಲೀಲೆಯಲಿ ಲಲನೆಯರಿಗಿಷ್ಟವ ಕೊಟ್ಟನ ಸಂತುಷ್ಟನ 3 ಕ್ರೂರ ಬಕ ಕೇಶಿಗಳನೆಲ್ಲ ಸೀಳ್ದನ ಸುರರಾಳ್ದನ ಅಕ್ರೂರ ಕರೆಯಲು ಹರುಷದಿಂದಲಿ ಬಂದನ ಸುರವಂದ್ಯನಸಾರಿ ಕುಬ್ಜೆಗೆ ಭೂರಿಸಂತಸವಿತ್ತನ ಅತಿಶಕ್ತನವಾರಣವ ಒದ್ದು ಕೆಡಹಿದಾಪ್ರತಿಮಲ್ಲನ ಅತಿಚೆಲ್ವನ4 ಸುಲಭದಿಂದಲಿ ಶಿವನ ಧನುವನು ಮುರಿದನ ನೆರೆಮೆರೆದನಮಲೆತÀ ಮಲ್ಲರ ಮಡುಹಿರಂಗದಿ ನಿಂತನ ಜಯವಂತನಖಳಕುಲಾಗ್ರಣಿ ಕಂಸನೆಂಬನ ಹೊಡೆದನ ಹುಡಿಗೆಡೆದನಬಲದಿ ತಾಯಿತಂದೆ ಬಂಧನ ಕಡಿದನ ಕೀರ್ತಿ ಪಡೆದನ 5 ಭುವನ ಪಟ್ಟವನುಗ್ರಸೇನಗೆ ಕೊಟ್ಟನ ಅತಿ ದಿಟ್ಟನಯುವತಿಯರಿಗುದ್ಧವನ ಕಳುಹಿದ ಜಾಣನ ಸುಪ್ರವೀಣನವಿವಿಧ ವಿದ್ಯಾ ಕಲೆಗಳನ್ನೆಲ್ಲ ಅರಿತನ ಶುಭಚರಿತನ ಜವನ ಶಿಕ್ಷಿಸಿ ದ್ವಿಜನ ಕಂದನ ತಂದನ ಆನಂದನ 6 ಕುಮತಿ ಖಳ ಮಾಗಧನ ಯುದ್ಧದಿ ಗೆದ್ದನ ಅನವದ್ಯನದ್ಯುಮಣಿಸಮ ದ್ವಾರಕೆಯ ರಚಿಸಿದುದಾರನ ಗಂಭೀರನಸುಮತಿ ಮುಚುಕುಂದನೊದ್ದ ಯವನನ ಸುಟ್ಟನ ಅತಿದಿಟ್ಟನವಿಮಲ ಸುಚರಿತ್ರಾಷ್ಟಮಹಿಷಿಯರಾಳ್ದನ ನೆರೆಬಾಳ್ದನ 7 ಮುರನರಕ ಮುಖ್ಯರನು ಚಕ್ರದಿ ತರಿದನ ಕರಿವರದನಸುರತರುವ ಸತಿಗಾಗಿ ತಂದ ಸಮರ್ಥನÀ ಜಗತ್ಕರ್ತನದುರುಳ ಶಿಶುಪಾಲಾದಿ ದೈತ್ಯ ಸಂಹಾರನ ಬಹು ಶೂರನಕುರುಕುಲಕೆ ಲಯವಿತ್ತ ಪಾಂಡವಪ್ರೀಯನ ಕವಿಗೇಯನ 8 ಸಂತತವೀ ಸಾರÀ ಕತೆಯನು ಕೇಳ್ವರ ನೆರೆ ಬಾಳ್ವರಕಂತುಪಿತ ಕಾರುಣ್ಯದಿಂದಲಿ ಹೊರೆವನು ಸುಖಗರೆವನುಇಂತು ಇಳೆಯ ಸುಜನರ ಸಲಹುವ ಕಾಂತನ ಸಿರಿವಂತನಪಂಥವುಳ್ಳ ಪ್ರಸನ್ನ ಹಯವದನ್ನನಮುನಿಮಾನ್ಯನ 9
--------------
ವಾದಿರಾಜ
ನೆರೆನಂಬಿದವನೆ ಧನ್ಯಾ ಈ ಗುರುಪದ ಪ ನೆರೆನಂಬಿದವ ರಘತರಿವ ವೇದವ್ಯಾಸ ಕರ ಪಾದ ಅ.ಪ ವರಮಣಿಯೊಳು ಶಿರಿತನದಿಂದಲ್ಲಿ ಮೆರೆವ ನಾಯ ಕರ ಮಂದಿರದಿ ಜಾತರಾಗಿ ಪರಮ ಮಹಿಮರಾದ ಗುರು ರಘೋತ್ತಮರಿಂದ ಪರವಿದ್ಯೆಯನು ಪೊಂದಿ ಚರಿಸಿ ದಿಗಂತದಿ ವರವೇದ ವ್ಯಾಸರಿಂದ ತುರಿಯಾಶ್ರಮ ಪಡೆದು ಸಚ್ಚಿಷ್ಯರಿಂದÀ ಸಂತತ ಪ್ರವಚನ ಮಾಡುತಲಿ ಆನಂದ ತೀರ್ಥರ ಮತ ಶರಧಿಗೆ ಪೂರ್ಣ ಚಂದಿರನೆನಿ ಪರ ಪದ 1 ಯಾದವಾರ್ಯರಿಗೆ ಅಗಾಧ ಮಹಿಮರು ಈ ಪೂರ್ಣಬೋಧ ಗ್ರಂಥಾರ್ಥ ಗ್ರಂಥಗಳನ್ನು ಟೀಕಾ ಕೃ ಕೌವÀುುದಿಗಳನು ರಚಿಸಿದಂಥಾ ವಾದಿ ಮಾತಂಗ ಮೃಗಾಧಿಪರನ್ನು 2 ಕರೆದು ಶಿಷ್ಯರಿಗೆ ಹರಿ ಪಾದಂಗುಟದಿಂದ ಸುರನದಿಯನು ಸಾಕ್ಷಾ- ತ್ಕರಿಸಿ ತೋರಿಸಿದಂಥ ಗುರು ಕೃಷ್ಣದ್ವೈಪಾಯನ ತೀರ್ಥರಿಗೆ ಘನವಾದ ಮಹಿಮೆಯನಾ ಸುರತರು ಸಮ ಚರಣ 3 ವೃಂದಾವನದೆಡೆ ಒಂದು ಪ್ರದಕ್ಷಿಣಿ ವಂದನೆ ಮಾಡಲು ಮಂದನಾದರು ಪ್ರಾಜ್ಞನೆಂದು ಕರೆಸುವನು ವಂಧ್ಯೆಯಾದರು ಬಹುಕಂದರ ಪಡೆವಳುಸಂದೇಹವ್ಯಾಕಿಲ್ಲಿ ದೂರಮಾಡುತಲಿ ಆ ನಂದವ ಗರಿಯುವರ ಭಕ್ತರ ದುರಿತಾಂಧಕಾರಕ್ಕೆ ರವಿ ಯಂದದಲಿಪ್ಪರ 4 ವರಭೀಮಾತೀರದಿ ಪರಿಶೋಭಿಸುವ ಮಣಿ ಪುರದಿ ಪಂಡಿತ ಭೂಮಿ ಚರಣಾರಾಧಕರನು ಸುಮಂದಿರದಿ ಕುಳಿತು ನಿತ್ಯ ಮೂಲದಲಿ ಮೆರೆವ ಧೇನಿಸುತಿಪ್ಪ ಗುರುವೇದೇಶರ ಶುಭ ಚರಣ ಯುಗಲವ 5
--------------
ಕಾರ್ಪರ ನರಹರಿದಾಸರು
ನೆಲೆಗೊಂಡದೇನು ಮನಮೇಗಚಲಿಸುವೆ ನೀನು ಹಲವು ವಿಷಯದೊಳು ಪಸಿಲುಕಿದ ಬಗೆುಂದ ಹೊಲಬುದಪ್ಪಿತು[ಸಲೆ]ನಿನ್ನ ನಿಜವ ನೀ ಕಾಣು ಅ.ಪಗುರುವಿನಂಘ್ರಿಗೆ ನೀನು ನಮಿಸಿ ನಿನ್ನಮರವೆಯ ಭಾವವ ಕೆಡಿಸಿಕರಣವ ನಿಲುಕಡೆಗೊಳಿಸಿ ಬಹುಕರುಣವ ನಿನ್ನೊಳಗಿರಿಸಿಪರಮಾತ್ಮನಾಗ್ಯನ್ಯ ವಿಷಯಮೊಂದಲಾಶೆಪರಿದು ಭ್ರಾಂತಿಯಲೊಂದಿದ ಸುಖವ ಸೂಸಿ 1ಮನೆಯೊಂದು ನನಗಿಹುದೆಂದು ಅಲ್ಲಿಜನರೆಡೆಗೊಳೆ ದುಃಖ ಬಂದುಅನುಭವಿಪುದು ಯುಕ್ತವೆಂದು ಅದ[ಕನು]ಕೂಲವಾಗಬೇಕೆಂದುಅನುದಿನವನು ಸಂಧಾನದಿ ನಿಂದು ಗುರು ಕೊಟ್ಟಅನುಭವ ಬಯಲಾಗಿ ಭ್ರಮೆಗೆ ನೀ ಸಂದು 2ನೀನೊದು ಕೊಡಹೇಳಿ ಕೇಳಿ ಅಲ್ಲಿಹೀನತೆಯನು ಬಹುತಾಳಿದೀನರು ನೀವೆಂದು ಪೇಳಿ ಅನುಮಾನದ ಬಲು ಬಿರುಗಾಳಿಏನೆಂಬೆ ಬೀಸಲು [ತಾ] ನದರೊಳಗಾಳಿಜ್ಞಾನಹೋುತು ಭೇದ ಬುದ್ಧಿಯ ತಾಳಿ 3ಮಾಯಕವಾಗಿರೆ ಜಗವೂ ಬಹೂಪಾಯಗಳಿಂದ್ರಜಾಲಕವೂಆಯವರಿಯದದರಿರವೂ ತನ್ನತಾಯ ಕಾಣದ ಶಿಶುತನವೂಈಯಶೇಷವು ಸ್ವಪ್ನದನುಭವವಳಿವವುಬಾಯಮಾತಿನಜ್ಞಾನ ಕಪಟ ಸಂಭ್ರಮವೂ 4ಪರಮಾತ್ಮನೊಬ್ಬನಾಗಿಹನೂ ತಾನುಪರಿ ಪರಿ ರೂಪ ತೋರುವನುಅರಿತೆ ಭೇದವನಿದ ನೀನು ಬಹುಜರೆಯುತ ಗುಣದೋಷಗಳನುಗುರುವಾಸುದೇವರೂಪಿಲಿ ನಿನ್ನ ಕರವನುತಿರುಪತಿ ವೆಂಕಟ ಪಿಡಿಯೆ ಭ್ರಾಂತೇನು 5
--------------
ತಿಮ್ಮಪ್ಪದಾಸರು
ನೋಡಮ್ಮಮ್ಮಾ ಎಂಥವನಿವಾ ಚಿನ್ನನೆ| ಗೋಪಿಯ ಕಂದಾ ಅಂತವ ದೋರಗುಡನೆ ಪ ಸಗಟನ ಮುರಿದೊತ್ತಿದ|ಮೊಲೆಯ ಕೊಟ್ಟ| ಮುಗುದೆಯ ಪ್ರಾಣ ಹೀರಿದಾ 1 ವಿಷಮಡು ಕಲಕಿದನೆ|ಕಾಳಿಂಗನಾ| ವಸುಧೆಗೆ ಎಳೆತಂದನೆ 2 ಪಶುಪಕ್ಷಿ ಮೃಗಾಂಗನೇರು|ಕೊಳಲಧ್ವನಿಗೆ| ನಿಸಿದಿನಿ ಮರುಳಹರು3 ತಿನಬ್ಯಾಡಮಣ್ಣವೆಂದರೆ|ಬಾಯೊಳು ಜಗವ| ದೋರಿದ ಜನ ಬೆದರೆ 4 ತಂದೆ ಮಹಿಪತಿ ಸ್ವಾಮಿಯ|ಹೇಳಲಿ ನಾನು ಒಂದೆರಡೆಂದು ಲೀಲೆಯ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೋಡಯ್ಯಾ ಹರಿಯೆ ಪ ಪಂಡರಪುರ ನಿಲಯನೆ ಕುಂಡಲಿಶಯನನೆ ಅ.ಪ. ಪುಂಡರೀಕಗೊಲಿದವನೆ | ಅಂದು ಶುಂಡಾಲವ ಪೊರೆದವನೆ ಅಂಡಜ ವರ ವಾಹನನೆ | ಎನ್ನ ಮಂಡೆಯ ಮೇಲ್ಕರವಿಡುತಲಿ 1 ವಿಜಯಗೆ ಸಾರಥಿಯಾದಿ | ಅವನ ಭುಜಗ ಶರದಿಂದ ಪೊರೆದಿ ನಿಜ ಭಕುತಗೆ ನೀ ಒಲಿದ | ದೇವ ಕುಜನಮರ್ದನ ಹರಿ ಮುದದಿ 2 ಪಟುತರ ದೇಹ ಪ್ರಕಾಶ | ದಿಂದ ವಟುವಂತೆ ಮೆರೆವ ಶ್ರೀಶ ಕುಟಿಲ ರಹಿತ ರಂಗೇಶ | ವಿಠಲ ಹಟಮಾಡದೆ ಕಣ್ತೆರದು 3
--------------
ರಂಗೇಶವಿಠಲದಾಸರು
ನೋಡಿ ನಿನ್ನನು ಧನ್ಯಳಾದೆನು ಮಾಡಿ ಕೃಪೆಯನು ಮನ್ನಿಸೂಬೇಡಿಕೊಂಬೆನು ಭವವ ಮುಂದಕೆ ನೀಡದಂಘ್ರಿಯೊಳೊಂದಿಸೂ ಪಕೃಷ್ಣ ನಿನ್ನನು ಮುದ್ದನಾಡುತ ಕಷ್ಟವನು ಕಡೆಗಾಂಬೆನೂಇಷ್ಟದೈವವು ನನ್ನ ಜಠರದಿ ಪುಟ್ಟೆ ನಿನ್ನನು ಕಂಡೆನೂದುಷ್ಟಕರ್ಮಗಳೆಲ್ಲವನು ನೆರೆ ನಷ್ಟಗೈಯುವ ದೇವನೂಪುಟ್ಟಮಗುವಾಗಿರಲು ಕೇಶವ ಮುಟ್ಟಿಲಾಲಿಪಳಾದೆನೂ 1ಬಟ್ಟಚೆಲು'ನ ರತ್ನದರಳೆಲೆ ಕಟ್ಟಿ ಬೊಪ್ಪದೊಳೊಲೆಯಲೂಪುಟ್ಟ ಮಾಗಾುಗಳು ಕಿ'ಗಳವಟ್ಟು ಕದಪುಗಳೊಪ್ಪಲೂನಟ್ಟನಡು ಪಣೆಯಲ್ಲಿ ಕತ್ತುರಿಬಟ್ಟು ಬೆಡಗನು ಬೀರಲೂಇಟ್ಟ ಕಪ್ಪಿನ ಕಣ್ಗಳೆಸೆಯಲು ಬಿಟ್ಟಬಾಯಲಿ ಸ'ಯಲು 2ಮುತ್ತು ರತ್ನಗಳನ್ನು ತೆತ್ತಿಸಿ ಸುತ್ತಕಾಂತಿಯ ಬೀರುವಉತ್ತಮದ ಮಕುಟವನು ನಿನ್ನಯ ನೆತ್ತಿಗಿಡುವೆನು ಕೇಶವಮತ್ತು ಕಂಕಣಗಳನು ಕರಗಳಿಗಿತ್ತು ಕಟ್ಟುವೆ ಪವಳವಾಸತ್ಯವಂತನೆ ನೀನು ಶಿಶುತನವೆತ್ತೆ ಪಡೆದೆನು ಭಾಗ್ಯವಾ 3ಸನ್ನುತನೆ ಪದಕಗಳ ಸರಗಳ ನಿನ್ನ ಕೊರಳಿಗೆ ಕಟ್ಟಿಚಿನ್ನ ಮುಕ್ತದಿ ಪೊಳೆವ ಕೌಸ್ತುಭವನ್ನು ಉರಕಳವಡಿಸುವಾರನ್ನ ಮಾಣಿಕದುಡಿಯ ಸೂತ್ರಗಳನ್ನು ಕಟಿಯಲಿ ರಚಿಸುವಾಇನ್ನು ಬಹು'ಧವಾಗಿ ಮನ್ನಿಪುದನ್ನು ವ'ಸಿದೆ ದಾಸ್ಯವಾ 4ಕಟ್ಟಿ ಘಂಟೆಯ ಸರವ ಕಟಿಯಲಿ ಪುಟ್ಟ ಶ್ರೀಮೃದುಪಾದವಾಮುಟ್ಟಿ ಕೈುಂದಂದುಗೆಗಳ ನಾನಿಟ್ಟು ಘಲಿಘಲಿಗುಟ್ಟುವಾಬಟ್ಟಗೆಜ್ಜೆಯ ಸಣ್ಣಸಾಲ್ಗಳ ದಟ್ಟಗೊಳಿಸೀಯೆಂದವಾನೆಟ್ಟದ್ಟೃಯಲೀಕ್ಷಿಸುತ ಹೊರಗಟ್ಟಿಬಿಟ್ಟೆನು ಕ್ಲೇಶವಾ 5ಒಂದು ಸ್ತನವನು ಸ'ಯುತಲೆ ಮತ್ತೊಂದು ಸ್ತನವನು ಕರದಲಿತಂದು ವದನದೊಳಿಟ್ಟು ದಣಿಯುತ ಮಂದಹಾಸದ ಮುಖದಲಿಇಂದಿರೇಶನೆ ನಿನ್ನ ನೋಡುತ ಇಂದು ಸಲ'ದೆ ಕೃಪೆಯಲಿವಂದಿಪರು ನಿನ್ನಡಿಗೆ ಸುರಮುನಿವೃಂದ ಭಾ'ಸಿ ಮನದಲಿ 6ಸಕಲ ಲೋಕಾಧಾರನಾಗಿಯೆ ಸಕಲ ಜೀವರ ಸಾಕ್ಷಿಯೆಪ್ರಕಟವಾಗೆನಗೀಗ ತೋರಿದೆ ಮುಕುತಿದಾಯಕ ಮೂರ್ತಿಯೆಭೃಕುಟಿಯಲಿ ನಿರ್'ುಸಿದ ಮಾಯೆಯ 'ಕರಿಸುವನುಸಾರಿಯೆಚಕಿತಳಿಗೆ ನನಗೊಲಿದೆ ತಿರುಪತಿ ವೆಂಕಟನಡಿಗೆ ಸ್ವಾ'ುಯೆ7
--------------
ತಿಮ್ಮಪ್ಪದಾಸರು
ನೋಡಿದೆ ಗುರುಗಳ ನೋಡಿದೆ ಪ ನೋಡಿದೆನು ಗುರುರಾಘವೇಂದ್ರರ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ಈಡು ಇಲ್ಲದೆ ಕೊಡುವ ಗುರುಗಳಅ.ಪ ಗಾಂಗೇಯ ಶಯ್ಯಜನು ಈ ನದಿಯ ತೀರದಲ್ಲಿ ಯಾಗವ ಮುದದಿ ರಚಿಸಿ ಪೂರೈಸಿ ಪೋಗಿರ ಲದನು ತಮ್ಮೊಳು ತಿಳಿದು ತವಕದಿ ಹೃದಯ ನಿರ್ಮಲರಾಗಿ ರಾಗದಿ ಬುಧಜನರ ಸಮ್ಮೆಳದಲಿ ಸಿರಿ ವದನನಂಘ್ರಿಯ ತಿಳಿದು ನೆನೆವರ ಉದಿತ ಭಾಸ್ಕರನಂತೆ ಪೊಳೆವರ 1 ಆಲವಬೋಧ ಮಿಕ್ಕಾದ ಮಹಮುನಿ ಗಳು ಸಅಂಶರು ಒಂದು ರೂಪದಿ ನೆಲೆಯಾಗಿ ನಿತ್ಯದಲಿ ಇಪ್ಪರು ಒಲಿಸಿಕೊಳುತಲಿ ಹರಿಯ ಗುಣಗಳ ತಿಳಿದು ತಿಳಿಸುತ ತಮ್ಮ ತಮಗಿಂ ರಧಿಕರಿಂದುಪದೇಶ ಮಾರ್ಗದಿ ಕಲಿಯುಗದೊಳು ಕೇವಲ ಕ ತ್ತಲೆಯ ಹರಿಸುವ ಸೊಬಗ ಸಂತತ 2 ರಾಮ ನರಹರಿ ಕೃಷ್ಣ ಕೃಷ್ಣರ ನೇಮದಿಂದೀ ಮೂರ್ತಿಗಳ ಪದ- ತಾಮರಸ ಭಜನೆಯನು ಮಾಳ್ಪರು ಕೋಮಲಾಂಗರು ಕಠಿನಪರವಾದಿ ಸ್ತೋಮಗಳ ಮಹಮಸ್ತಕಾದ್ರಿಗೆ ಭೂಮಿಯೊಳು ಪವಿಯೆನಿಸಿದ ಯತಿ ಯಾಮ ಯಾಮಕೆ ಎಲ್ಲರಿಗೆ ಶುಭ ಕಮಿತಾರ್ಥವ ಕರೆವ ಗುರುಗಳ 3 ನೂರು ಪರ್ವತ ವರುಷ ಬಿಡದಲೆ ಚಾರು ವೃಂದಾವನದಲಿ ವಿ ಸ್ತಾರ ಆರಾಧನೆಯು ತೊಲಗದೆ ವಾರವಾರಕೆ ಆಗುತ್ತಿಪ್ಪುದು ಸಾರೆ ಕಾರುಣ್ಯದಲಿ ಲಕುಮೀ ನಾರಾಯಣ ತಾ ಚಕ್ರರೂಪದಿ ಸಾರಿದವರಘವ ಕಳೆದು ಇವರಿಗೆ ಕೀರುತಿಯ ತಂದಿಪ್ಪುದನುದಿನ4 ಮಿತವು ಎನದಿರಿ ಇಲ್ಲಿ ದಿನ ದಿನ- ಕತಿಶಯದೆ ಆಗುವುದು ಭೂಸುರ ತತಿಗೆ ಭೋಜನ ಕಥಾಶ್ರವಣ ಭಾ- ರತ ಪುರಾಣಗಳಿಂದಲೊಪ್ಪುತ ಕ್ಷಿತಿಯೊಳಗೆ ಮಂಚಾಲೆ ಗ್ರಾಮಕೆ ವ್ರತಿಯ ಇಲ್ಲವೆಂದೆನಿಸಿಕೊಂಬುದು ಪತಿತಪಾವನ ವಿಜಯವಿಠಲನ ತುತಿಸಿಕೊಳ್ಳುತ ಮೆರೆವ ಗುರುಗಳ 5
--------------
ವಿಜಯದಾಸ
ನೋಡಿದೆ ವೇಂಕಟ ನಿನ್ನ ಪ ಕೊಂಡಾಡಿ ಬೇಡಿದೆ ವರವನ್ನ ಆಹಾ ರೂಢಿಯೊಳಗೆ ನಿನಗೆ ಈಡುಗಾಣೆನೊ ದೇವ ನಾಡುದೈವಗಳೆಲ್ಲ ಒಡಿಪೋದವೊ ಸ್ವಾಮಿ ಅ.ಪ ಮಣಿಗಣಮಯದ ಕಿರೀಟ, ಕಪ್ಪುವ ರಣಕುಂತಲದ ಲೋಲ್ಯಾಟ, ಯುಗತ ರಣಕುಂಡಲ ಬಹು ಮಾಟ ಅರ ಗಿಣಿ ಶÀಶಿಪೋಲ್ವ ಲಲಾಟ ಆಹಾ ಎಣೆಗಾಣೆ ಕಸ್ತೂರಿ ಮಣಿರ್ದಿಪ ಭ್ರೂಯುಗ ಕುಣಿಯುತ ಸ್ಮರಧನು ಗಣಿಸದೊ ಎಲೋದೇವಾ 1 ವಾರಿಜಯುಗಸಮನಯನ, ನಾಸ ಚಾರುಚಂಪಕ ತೆನೆ, ವದನದೊಳು ತೋರುವ ಸುಂದರರದನ ಪಂಕ್ತಿ ಸಾರಿದಾಧರ ಬಹು ಅರುಣ, ಆಹಾ ಸಾರಸಮುಖದೊಳು ಸೇರಿ ಶೋಭಿಪ ಚುಬಕ ಕೂರುಮಯುಗಕದಪು ಸಾರಕಟಾಕ್ಷವ 2 ಕಂಧರಾಂಕಿತ ಸತ್ರಿರೇಖಾ, ಕಂಠ ಪೊಂದಿಪ್ಪೊದ್ವರ್ತುಲ ಕ್ರಮುಕ, ಕೊರಳ ಸುಂದರಕೌಸ್ತುಭಪದಕ, ಬಹು ಬಂಧುರ ಚೆÉೈತ್ರ ಸುರೇಖ ಆಹಾ ಹಿಂದೆ ಸಿಂಹÀದ ಹೆÉಗಲಿನಂದದಲೊಪ್ಪಿದ ಸ್ಕಂಧದಿ ಶೋಭಿಪ ಒಂದು ಸರಿಗೆಯನ್ನು 3 ಸ್ವನ್ನ ಏಕಾವಳಿಹಾರಾ, ಬಾ ಪುತ್ಥಳಿ ಸಿರಿಯಾಕಾರ, ಬಹು ಚನ್ನವಾಗಿಹ ನಾನಾಹಾರ, ಶುಭ್ರ ವರ್ಣ ಶೋಭಿಪ ಜನಿವಾರ ಆಹಾ ಇನ್ನು ಗುಂಡಿನಮಾಲೆ, ಘನ್ನ ಜಲಸರಪಳಿ ಉನ್ನತದಾನಘ್ರ್ಯ ರನ್ನ ಜಯಂತಿಯಾ 4 ಶಿರಿವತ್ಸಲಾಂಛನಹೃದಯ, ಸುರ ಕರಿಕರತೆರಬಾಹು ಶಿರಿಯಾ, ನಾಲ್ಕು ಕರಗಳೊಪ್ಪವವೀಪರಿಯ, ಮೇಲಿ ನ್ನೆರಡು ಹಸ್ತದಿ ಶಂಖ ಅರಿಯ ಆಹಾ ವರರತ್ನ ಮುದ್ರಿಕೆ ಧರಿಸಿದ ಬೆರಳುಳ್ಳ ಕರತೋಡ ಕಡಗಕ್ಕೆ ಸರಿಗಾಣೆ ಧರೆಯೊಳು 5 ಪರಮವೈಕುಂಠದಕಿಂತ ಈ ಧರಿತಳವದಿಕವೆನ್ನು ತಾ ಬಲ ಕರದಿಂದ ಜನಕೆ ತೋರುತಾ ಬಾಹು ಎರಡು ಆಜಾನುಪೂರಿತಾ ಆಹಾ ಸ್ವರಣರತ್ನ ಖಚಿತ ವರನಾಗಭೂಷಣ ಧರಿಸಿ ಟೊಂಕದಿ ವಾಮಕರವಿಟ್ಟು ಮೆರೆವೋದು 6 ಹಸ್ತಯುಗದಿ ತೋಡ್ಯ ಕಡಗ, ಪ್ರ ಶಸ್ತ ರತ್ನದ್ಹರಳಸಂಘ ರಚಿತ ಸಿಸ್ತಾದÀ ಉಂಗುರ ಬೆಡಗ, ಬಹು ವಿಸ್ತರಾಂತರ ಭುಜಯುಗ ಆಹಾ ಹಸ್ತಿವರದ ಸಮಸ್ತಲೋಕಕೆ ಸುಖ ವಿಸ್ತಾರ ನೀಡುತ ಸಿಸ್ತಾದ ದೇವನ 7 ಉದರ ತ್ರಿರೇಖ ರೋಮಾಳಿನಾಭಿ ಪದುಮ ಶೋಭಿಪ ಗುಂಭಸುಳಿ ಮೇಲೆ ಉದಯಾರ್ಕ ಪೋಲುವ ಕಲೆ ಇಂದ ಸದಮಲಾಂಬರಪಟಾವಳಿ ಆಹಾ ಬಿದುರಶೋಭಿüತ ಮಹಾಚÀದುರದೊಡ್ಯಾಣವು ಪದಕ ಮುತ್ತಿನ ತುದಿ ವಿಧವಿಧ ಪೊಳೆವೋದು 8 ರಂಭೆ ಪೋಲುವ ಊರುಸ್ತಂಭ, ಇಂದು ಡಿಂಬ ಭಕ್ತ ಕ ದಂಬ ಮೋಹಿಪ ವಿಡಂಬ ಆಹಾ ಅಂಬುಜಾಸನಪಿತನ ತುಂಬಿದ ಮೀನ್ಜಂಘ ನಂಬಿದ ಜನರನ್ನ ಇಂಬಾಗಿ ಸಲಹೋನಾ 9 ಪರಡೆರಡು ಮಾಣಿಕ್ಯಾವರಣ, ಪೊಳೆವ ಕಿರುಗೆಜ್ಜೆನೂಪುರಾಭರಣ ಇಟ್ಟು ಮೆರೆವೊ ಗಂಗೆಯ ಪೆತ್ತ ಚರಣ ಯುಗ ನಿರುತ ಭಜಿಪರೊಳತಿ ಕರುಣ ಆಹಾ ಮರೆಯದೆ ಮಾಡುತ ಪರಿಪರಿ ಸೌಖ್ಯವ ಕರೆದುನೀಡುವನಹಿಗಿರಿವಾಸ ಶ್ರೀಶÀನ್ನ 10 ಪೋತೇಂದು ನಖಯುತ ಬೆರಳ ಸಾಲು ದೂತತತಿಗೆ ಸುಖಗಳನಿತ್ತು ನೀತಙÁ್ಞನ ಭಕ್ತಿಗಳ ನಿತ್ಯ ಪ್ರೀತಿಪಡೆಯೆ ಮುಕ್ತಿಗಳ ಆಹಾ ವಾತಗುರುಜಗನ್ನಾಥವಿಠಲನತಿ ನಿತ್ಯ 11
--------------
ಗುರುಜಗನ್ನಾಥದಾಸರು
ನೋಡಿದೆ ಹರನಾ ನೋಡಿದೆ ಪ. ಹರನ ಕೊಂಡಾಡಿದೆ ಪಾದಪಾವನ್ನ ರೂಢಿಯೊಳಗೆ ಇಂಥಾ ಈಡಿಲ್ಲ ಶಿವನಾ ಜೋಡಿಶಿರವ ಬಾಗುವೆನಾ ಶಿರವಾ ಅ.ಪ. ಶುಕ ದೂರ್ವಾಸ ರೂಪದ ರುದ್ರಾ ನೀನು ಅವತಾರ ತಾಳಿದ್ಯೊ ವೀರಭದಾ ಮಥನವಾ ಮಾಡಲು ಸಮುದ್ರಾ ನೀನು ವಿಷಪಾನ ಮಾಡಿದ್ಯೊ ಆದ್ರ್ರಾ || ಆಹಾ|| ನೀಲಕಂಠನಾಮವು ಬಂದವು ನಿನ್ನ ನೋಡುವರ ಮನಕೆ ಆನಂದವ ಕೊಡುವುದು ಜಗಕೆ 1 ಕರದಲಿ ಡಮರು ತ್ರಿಶೂಲಗಳಿಂದಾ ನೀನು ಶೋಭಿಪಿಯೋ ಬಲುಛಂದಾ ಗಳದಲ್ಲಿ ದ್ರಾಕ್ಷಾಮಾಲೆಗಳಿಂದಾ ನಾಗಭೂಷಣಾಯಿಂದಾ || ಆಹಾ|| ಶಿರದಾ ಜಡಿಯೋಳು ಗಂಗಿಯ ಧರಿಸಿದ ಧೀರನು ಹರಿಯಾ ರೂಪಕೆ ಮರುಳಾದ ಶಂಕರನ 2 ಕೈಲಾಸಪುರಧೀಶ ವಾಸಾ ನೀನು ಸರ್ವರಮನಕೆ ಉಲ್ಲಾಸ ನೀನು ಸತಿಗೆ ತಾರಕ ಮಂಗಳ ಉಪದೇಶಾ ಸ್ಮಶಾನವನು ಕಾಯ್ದ ಹರಿದಾಸಾ || ಆಹಾ|| ನಂದಿವಾಹನನಾಗಿ ಆನಂದಾದಿ ಮೆರೆಯುವ ಸಿಂಧುಶಯನನ ಕಾಳಿಮರ್ಧನಕೃಷ್ಣನ ತಂದು ತೋರಿಸುವನ 3
--------------
ಕಳಸದ ಸುಂದರಮ್ಮ
ನೋಡಿದೆನು ಉಡುಪೀ ನಿವಾಸನ ನೋಡಿದೆನು ಯಾದವೇಶನ ನೋಡಿದೆನು ಮಾನಿಸ ವೇಷನ ನೋಡಿದೆನೊ ಲಕುಮೇಶನ ಪ ಪರಶುರಾಮನು ಭೂಮಿ ಸುರರಿಗೆ ಸರವು ಧಾರುಣಿ ಧಾರಿಯಾ ಎರದು ಕೇಸರಗಿರಿಯ ಪಡುಮೂಲ ಶರನಿಧಿಯನು ಶರದಲೀ ಭರದಿ ಬಿಡಿಸಿದ ಶೂರ್ಪಕಾರದ ತೆರದಿ ನೆಲ ನೀ ಧರುಣಿಗೆ ಪರಮ ಸಾಹಸ ರಾಮಭೋಜನು ಅರಸನಾದುದು ನೋಡಿದೆ 1 ಯಾಗಗೋಸುಗ ರಾಮ ಭೋಜನು ನೇಗಿಲಿಯ ಕೊನೆಯಿಂದಲಿ ಆಗ ಭೂಮಿಯ ಶೋಧಿಸÀಲು ಬಂದು ನಾಗ ಬಂದಿತು ಮೃತವಾಗಿ ತೂಗಿ ಶಿರವನು ಭೃಗು ಕುಲೇಶಗೆ ಬಾಗಿ ನೆನೆಯಲು ಸಂಕೇತಾ ಸಾಗಿ ಭೂಮಿಪಾಲ ರಿಪು ಚನ್ನಾಗಿ ಒಲಿದದು ನೋಡಿದೆ 2 ತಿಳುಹಿದನು ಪೂರ್ವದಲಿ ಈ ಫಣಿ ಖಳನು ಕಾಣೊ ಇವನಿಂದು ಅಳಿದು ಪೋದದು ಲೇಸು ಭೂಸುರ ಕುಲಕೆ ಸಂತೋಷವಾಯಿತು ಒಲುಮೆಯಲಿ ಸತ್ಕಾರ ವಿಧ ವೆ ಗ್ಗಳವಾಗಿ ಸುಯಾಗವ ಸುಲಭ ಮನದಲಿ ಮಾಡೆನಲು ನಿ ಶ್ಚಲ ಭಕುತಿಲಿ ಸ್ತುತಿಸಲು 3 ಇಂದಿರಾಪತಿ ಕರುಣಿಸೆಂದು ಅಂದಿಗಾ ರಾಮ ಭೋಜನು ಒಂದು ಕ್ರೋಶದ ಅಗಲ ರಜತಾ ಚಂದದಾಸನ ಮಾಡಿಸಿ ತಂದು ದೇವನ ಕುಳ್ಳಿರಿಸಿ ಆ ನಂದದಲಿ ಓಲಾಡುತಾ ಕುಂದದಲೆ ಮೇಧವನು ಮುಗಿಸಿ ಗೋ ವಿಂದನ ಪ್ರೀತಿಪಡಿಸಿದಾ 4 ಭೂತಳದೊಳು ರಜತಪೀಠಾಖ್ಯ ಖ್ಯಾತಿ ಆಯಿತು ಸರ್ವದಾ ಆ ತರುವಾಯದಲ್ಲಿ ಭಾರ್ಗವ ಭೂತನಾಥನ ನಂದದಿ ವಾತ ಭಕ್ಷನ ನಡುವೆ ನಿಂದನು ಮಾತುಯಿದು ಪುಶಿಯಲ್ಲವೊ ಪೂತುರೆ ಮೋಹಕವೆ ತೋರಿದ ಜಾತ ರಹಿತಗೆ ನಮೋ ನಮೋ 5 ಪರಿ ಇರಲು ಗಂಗೆಯ ಕಾಂತ ಮಹಾ ತಪವನೆ ಮಾಡಿ ಸಂತತ ಗೋಪಾಲಕೃಷ್ಣನ ಸಂತೋಷವನು ಬಡಿಸಿದಾ ಚಿಂತೆಯಲಿ ವಿದೂರನಾದನು ಮುಂತೆ ನಡೆದ ಕಥೆ ಕೇಳಿ ಕಂತುಹರನನ ಒಲಿಸಿ ಉಡುಪಾ ಕಾಂತ ವರವನೆ ಐದಿದಾ 6 ಮೂರು ಯುಗದಲಿ ಈ ಪರಿಯಾಗೆ ಮಾರುತ ಮಧ್ಯಗೇಹನ ಚಾರು ಮನೆಯಲಿ ಜನಿಸಿ ವೈಷ್ಣವಾ ಚಾರ್ಯ ಈ ದುಶ್ಯಾಸ್ತ್ರವ ಹಾರಿಸಿದ ಹರುಷದಲಿ ರುಕ್ಮಿಣಿ ದ್ವಾರಕೆಲಿ ಪೂಜೆ ಮಾಡಿದ ಮೂರುತಿಯ ಸ್ಥಾಪಿಸಿದ ಲೀಲೆಯು ಆರು ಬಣ್ಣಿಸಲಾಪರು 7 ಇದೇ ರಜತಪೀಠ ಅಜಕಾನನವಿದೆ ಇದೇ ಉಡುಪಿ ಇದೇ ಶಿವಕುಲ್ಲ್ಯ ಅದರ ಬಳಿಯಲಿಯಿಪ್ಪ ತೀರ್ಥವ ಅದುಭುತವ ವರ್ಣಿಸುವೆನು ಇದೇ ಅನಂತ ಸರೋವರವು ಮ ತ್ತಿದೇ ವಾರುಣ್ಯಚಂದ್ರಮತೀರ್ಥ ಇದಕೆ ಮಧ್ವಸರೋವರ ವೆಂ ಬದು ಕಾಣೊ ಶ್ರುತಿ ಉಕ್ತಿಲಿ 8 ಸಕಲ ದೇಶದ ಜನರು ತ್ರಿವಿಧ ಸುಖವಾರಿಧಿಯೊಳು ಸೂಸುತಾ ಅಖಿಳ ವೈಭವದಿಂದ ಬಪ್ಪ ಅಕಟ ಸಂದಣಿಗೇನೆಂಬೆ ಸೂರ್ಯ ಬಂದ ಕಾ ಲಕೆ ಕೃಷ್ಣನ ನೋಡುವೆನೆಂದು ಚಕ್ಕನೆ ನಿಲ್ಲದೆ ಬಂದು ನೆರದಂದು ಮುಕ್ತಾರ್ಥ ಹರಿಪ್ರೇರಕಾ 9 ಸಜ್ಜನರ ಸಿರಿಚರಣ ರಜದಲಿ ಮಜ್ಜನವ ಗೈವುತ ಹೆಜ್ಜಿಹೆಜ್ಜಿಗೆ ಕೃಷ್ಣ ಕೃಷ್ಣ ಅಬ್ಜನಾಭ ನಾರಾಯಣ ಮೂಜಗತ್ಪತೆ ಎಂದು ಸ್ತೋತ್ರ ನಿ ರ್ಲಜ್ಜನಾಗಿ ಪಠಿಸುತಾ ರಜ್ಜುಪಾಣಿಯ ಬಹಿರದಿಂದ ನಿ ವ್ರ್ಯಾಜ್ಯ ಭಕುತಿಲಿ ನೋಡಿದೆ 10 ಮೊದಲು ನಮಿಸಿದೆ ಚಂದ್ರಶೇಖರ ಪದುಮಗರ್ಭನ ಮಗನೆಂದು ಅದರ ತರುವಾಯದಲ್ಲಿ ಮಾಯಿಯ ಸದಬಡೆದ ಪೂರ್ಣಬೋಧರು ಸದಮಲಾ ಕುಳುತಿಪ್ಪ ಸ್ಥಾನವ ಒದಗಿ ನೋಡಿ ಕೊಂಡಾಡುತಾ ಮದನ ಜನಕಾನಂತ ಸ್ವಾಮಿಯ ಪದಯುಗಳವನು ನೋಡಿದೆ11 ರತುನ ಗರ್ಭದೊಳಧಿಕವಾದ ತೀ ರಥವಿದು ಮಧ್ವಾಖ್ಯದಿ ಸತತ ಬಿಡದಲೆ ಇಲ್ಲಿ ಭಾಗೀ ರಥಿವಾಸ ನದಿಗಳ ಕೂಡಿ ನುತಿಸಿ ಮೆಲ್ಲನೆ ಮುಟ್ಟಿ ಮಿಂದು ಮತ್ತೆ ಕರ್ಮದ ಚರಿಯವ ಹಿತ ಮನಸಿನಲ್ಲಿ ಮಾಡುವಂಥ ಕೃತ ಕಾರ್ಯವನು ನೋಡಿದೆ 12 ಅಲ್ಲಿಂದ ನವರಂಧ್ರಗಳು ಕಂಡು ಪುಲ್ಲಲೋಚನ ಕೃಷ್ಣನ ಸೊಲ್ಲಿನಿಂದಲಿ ಪಾಡಿ ಭಾರತಿ ವಲ್ಲಭನ ಕೊಂಡಾಡುತಾ ಮೆಲ್ಲ ಮೆಲ್ಲನೆ ದ್ವಾರವನೆ ಪೊಕ್ಕು ನಿಲ್ಲದಲೆ ಸಮೀಪಕೆ ಬಲ್ಲವನು ಗುಣಿಸುತ್ತ ಭಕುತ ವ ತ್ಸಲನಂಘ್ರಿ ನೋಡಿದೆ13 ಮೂರು ಬಗೆ ಭೂಷಣವ ಧರಿಸಿದ ಮೂರುತಿ ಇದೇ ಕಾಣಿರೊ ಪಾರುಗಾಣರು ಈತನ ಅವ ತಾರ ಗುಣಕ್ರಿಯೆ ಮಹಿಮೆಯಾ ವಾರಿಜೋದ್ಭವ ಶಿವ ಮುಖಾದ್ಯರು ಸಾರಿ ಹಾಹಾ ಎಂಬರೊ ಧಾರುಣಿಗೆ ಇದೇ ದೈವ ನವನೀತ ಚೋರನ ಕೊಂಡಾಡಿದೆ 14 ತ್ರಾಹಿ ತ್ರಯಾವಸ್ಥೆ ಪ್ರೇರಕ ತ್ರಾಹಿ ತ್ರಯಗುಣ ವಿರಹಿತಾ ತ್ರಾಹಿ ತ್ರಯಧಾಮ ವಾಸ ಸರ್ವೇಶ ತ್ರಾಹಿ ತ್ರಯ ರೂಪಾತ್ಮಕಾ ತ್ರಾಹಿ ತ್ರಯವನು ಗೆದ್ದ ಪ್ರಸಿದ್ಧ ತ್ರಾಹಿ ತ್ರಯವನು ಕೊಡುವನೆ ತ್ರಾಹಿ ತ್ರಯಗಣ್ಣ ವನಪಾಲಕ ತ್ರಾಹಿ ತ್ರಯಲೋಕಾಧಿಪಾ 15 ಪಾಹಿಪರಮಾನಂದ ಗೋವಿಂದ ಪಾಹಿ ಪರತರ ಪರಂಜ್ಯೋತಿ ಪಾಹಿ ಪತಿತ ಪಾವನ್ನ ಮೋಹನ್ನಾ ಪಾಹಿ ಪಾಲಾಂಬುಧಿಶಾಯಿ ಪಾಹಿ ಜಗದತ್ಯಂತ ಭಿನ್ನಾ ಪಾಹಿ ನಿರ್ಭಿನ್ನ ಸ್ವರೂಪ ಪಾಹಿ ನಖಶಿಖ ಜ್ಞಾನ ಪೂರ್ಣನ ಪಾಹಿ ಎನ್ನಯ ಪ್ರೇಮನೆ 16 ನಮೋ ನಮೋ ಚತುರಾತ್ಮ ಗುಣನಿಧಿ ನಮೋ ನಮೋ ಪುನ್ನಾಮಕ ನಮೋ ನಮೋ ವಟಪತ್ರಶಾಯಿ ನಮೋ ನಮೋ ಪುಣ್ಯಶ್ಲೋಕನೆ ನಮೋ ನಮೋ ಸಮಸ್ತ ಸರ್ವಗ ನಮೋ ನಮೋ ಸರ್ವ ಶಬ್ದನೆ ನಮೋ ನಮೋ ಅವ್ಯಕ್ತ ವ್ಯಕ್ತಾ ನಮೋ ನಮೋ ನಾರಾಯಣ 17 ಜಯ ಜಯತು ಕರಿವರದ ವಾಮನ ಜಯತು ನಾರದ ವಂದ್ಯನೆ ಜಯ ಜಯತು ಪ್ರಹ್ಲಾದ ರಕ್ಷಕ ಜಯ ಜಯತು ಪಾರ್ಥನ ಸಾರಥೆ ಜಯ ಜಯತು ಅಂಬರೀಷ ಪರಿಪಾಲಾ ಜಯತು ಪರಾಶರನುತಾ ಜಯ ಜಯತು ಪಾಂಚಾಲಿ ಮಾನ ಕಾಯ್ದನೆ ಜಯ ಜಯತು ಗೋಪಿಕಾ ವಲ್ಲಭಾ18 ಇನಿತು ಬಗೆಯಲಿ ತುತಿಸಿ ದೇವನ ಮನದಣಿಯ ಕೊಂಡಾಡುತಾ ಕ್ಷಣಬಿಡದೆ ತನ್ನ ನೆನೆಸಿದವರಿಗೆ ಹೊಣೆಯಾಗಿ ಪಾಲಿಸುವನು ಜನುಮ ಜನ್ಮದಲಿಂದ ಮಾಡಿದ ಘನದುರಿತ ಪರ್ವತಗಳು ಚಿನಿಗಡೆದು ಸಾಧನವೆಲ್ಲ ವೇಗ ತನಗೆ ತಾ ಮಾಡಿಸುವನು 19 ವ್ಯಾಧ ಭೂಸುರ ವೇಷವು ಭೇದ ಮಾಡಿದ ನಾರಾಯಣಿ ಸುಪ್ರಸಾದ ನಿರ್ಮಲರೂಪವು ಆದಿವಾರವು ವಿಡಿದು ಎರಡು ಐದು ದಿನ ಪರಿಯಂತವು ಶ್ರೀಧರೇಶನು ವೇಷ ಧರಿಸಿದ್ದು ಸಾಧು ಸಂಗಡ ನೋಡಿದೆ20 ಉದಯಕಾಲದ ಪೂಜೆಯಾಗಲು ಮುದ ನಿರ್ಮಾಲ್ಯ ವಿಸರ್ಜನೆ ಇದೆ ಪೂರೈಸಲು ಮತ್ತೆ ಪಂಚ ಸುಧ ಪೂಜೆ ಉದ್ವಾರ್ಥನೆ ಒದಗಿಯಾಗಲು ಮೇಲೆ ಸುಧ ವಿಧುದಂತೆ ಬೆಣ್ಣೆ ಶರ್ಕರ ಇದೆ ಮಹ ಪೂಜೆ ನೋಡಿದೆ 21 ಗಂಧ ಪರಿಮಳ ತುಲಸಿ ಪುಷ್ಪಾ ನಂದ ಭೂಷಣ ಧರಿಸಿಪ್ಪ ಒಂದು ಕೈಯಲಿ ದಾಮ ಕಡಗೋ ಲಂದದಲಿ ತಾಳಿದಾ ಮಂದರಿಗೆ ಇದು ಸಾಧ್ಯವಲ್ಲವು ಮುಂದೆ ಯತಿಗಳು ಮಂತ್ರವ ಮಂದ ನಗಿಯಲಿ ಪೇಳುತಿಪ್ಪ ಚಂದವನು ನಾ ನೋಡಿದೆ 22 ಎತ್ತುವ ಧೂಪಾರತಿಗಳು ಹತ್ತೆಂಟು ಬಗೆ ಮಂಗಳಾ ರುತ್ತಿ ನಾನಾ ನೈವೇದ್ಯ ಷಡುರಸ ಮೊತ್ತಂಗಳು ಪರಿವಿಧಾ ಉತ್ತಮ ಶಾಖಾದಿ ಘೃತದಧಿ ತತ್ತಕ್ರಫಲ ಪಕ್ವವು ಸುತ್ತಲು ತಂದಿಟ್ಟು ಅರ್ಪಿ ಸುತ್ತಲ್ಲಿಪ್ಪುದು ನೋಡಿದೆ 13 ಮಂತ್ರ ಘೋಷಣೆ ಭಾಗವತಜನ ನಿಂತು ಗಾಯನ ಮಾಡಲು ಅಂತವಿಲ್ಲದೆ ವಾದ್ಯಸಂದಣಿ ಚಿಂತಿಸುವ ನಿಜದಾಸರು ವಂತು ವಾಳೆಯಿಲ್ಲದಾ ಜನ ಸಂತೋಷದಲಿ ನಲಿವುತಾ ತಂತ್ರ ಸಾರೋಕ್ತದ ಪೂಜೆ ಅತ್ಯಂತವನು ನಾ ನೋಡಿದೆ 24 ತೀರ್ಥ ಪ್ರಸಾದ ಗಂಧ ಅಕ್ಷತೆ ಅರ್ಥಿಯಲ್ಲಿ ಕೊಡುವರು ವ್ಯರ್ಥವಲ್ಲಿವು ಇಲ್ಲಿ ಒಂದು ಮು ಹೂರ್ತವಾದರು ಎಂದಿಗೂ ಶುಭ ಪ ದಾರ್ಥ ಬಡಿಸಲು ಉಂಡು ಕೃ ತಾರ್ಥನಾದೆನು ಜ್ಞಾನವಧಿಕ ಸಾರ್ಥಕರನ ನೋಡಿದೆ25 ತರಣಿ ಮಕರಕೆ ಬರಲು ಗೋಪಾಲ ಮೆರೆವ ವೈಭವವೆಂಬೆನೇ ಗಜ ತುರಗ ಹರಿ ಗರುಡ ಶ್ರೀ ಹನುಮಂತನಾ ವರ ರೂಢನಾಗಿ ಮೆರೆದು ಆಮೇಲೆ ಮಿರುಗುವ ರಥವನೇ ಏರಿ ಪರಮ ವೇಗದಿ ಚತುರ್ವೀಧಿಯ ತಿರುಗಿ ಬಪ್ಪದು ನೋಡಿದೆ 26 ಓಕಳಿಯ ಸಂಭ್ರಮವೆ ಪೇಳಲು ಗೋಕುಲಕೆ ಸಮನೆನಿಸಿತು ವಾಕು ಕೇಳ್ ಸುರ ಮುನಿಗಳೊಡನೆ ಲೋಕಕ್ಕಾಶ್ಚರ್ಯ ತೋರುತಾ ಸೋಕಿ ಸೋಕದ ಹಾಸೆ ಓಕುಳೀ ಹಾಕಿ ಆಡುವ ಲೀಲೆಯ ಈ ಕಲಿಯುಗದಲ್ಲಿ ಸೋಜಿಗ ಈ ಕಥೆಯಾದುದು ನೋಡಿದೆ 27 ವಾಲಗ ಎಡಬಲದಲಿ ಪಂಜು ಕಟ್ಟಿಕೆಕಾರರು ರಂಜಿಸುವ ಪಲ್ಲಕ್ಕಿ ಸೇವಿಪ ರಂಜಳವಾಗಿ ಒಪ್ಪಲು ಕುಂಜರಾರಿಯ ಪೀಠದಮೇಲೆ ಕಂಜಲೋಚನ ಕುಳ್ಳಿರೆ ನಿ ರಂಜನದಲಿ ಪೂಜಿಸುವ ಮತಿ ಪುಂಜ ಯತಿಗಳ ನೋಡಿದೆ 28 ಶ್ರುತಿ ಪುರಾಣಗಳುಪನಿಕ್ಷತ್ ವೊ ಸತು ಶಾಸ್ತ್ರ ಪ್ರಬಂಧವು ಭಾಗವತ ಸುಸಂ ಗೀತಿಯಲಿ ರಾಗ ಭೇದವು ಶ್ರುತಿ ಕಥಾಭಾಗ ಪದ್ಯ ಅಷ್ಟಕ ಮಿತಿಯಿಲ್ಲದಲಿಪ್ಪ ಪ್ರಸಂಗ ತತುವ ಮಾರ್ಗದಿ ನುಡಿವ ಬಲು ಉ ನ್ನತ ಮಹಿಮರ ನೋಡಿದೆ 29
--------------
ವಿಜಯದಾಸ
ನೋಡಿದೆನು ಕೃಷ್ಣನ್ನ | ದಣಿಯ ನೋಡಿದೆನು ಕೃಷ್ಣನ್ನ | ಮನದಣಿಯ ಪ. ಪಾಡಿದೆನು ವದನದಲಿ ಗುಣಗಳ ಮಾಡುತಲಿ ಸಾಷ್ಟಾಂಗ ಕಡು ಕೃಪೆ ಬೇಡಿದೆನು ಹರಿಯ ಅ.ಪ. ಅರುಣ ಉದಯದ ಮುನ್ನ ಯತಿಗಳೂ ಶರಣವತ್ಸಲನನ್ನು ಪೂಜಿಸಿ ಕರದಿ ಕಡಗೋಲನ್ನು ಪಿಡಿದಿಹ ಬಾಲರೂಪನಿಗೆ ತರತರದ ನೇವೇದ್ಯವರ್ಪಿಸಿ ತುರುಕರುಗಳಾರತಿ ಗೈಯ್ಯುತ ಪರಮಪುರುಷಗೆ ವಂದಿಸಲು ಈ ಚರಿತ ಮತ್ಸ್ಯನ್ನಾ 1 ಮಧ್ವರಾಯರ ಹೃದಯವಾಸಗೆ ಮುದ್ದು ಯತಿ ಪಂಚಾಮೃತಂಗಳ ಶುದ್ಧ ಗಂಗೋದಕದ ಸ್ನಾನವಗೈಸಿ ಸಡಗರದಿ ಮಧ್ಯೆ ಮಧ್ಯೆ ನೈವೇದ್ಯವರ್ಪಿಸಿ ಮುದ್ದು ತರಳರಿಗ್ಹೆಜ್ಜೆ ಪಂಕ್ತಿಯು ಅಗಣಿತ ಕೂರ್ಮರೂಪನ್ನಾ2 ಉದಯಕಾಲದಿ ಸರ್ವ ಜನಗಳು ಮುದದಿ ಮಧ್ವ ಸರೋವರದೊಳು ವಿಧಿಯಪೂರ್ವಕ ಸ್ನಾನ ಜಪ ತಪವಗೈದು ಮಾಧವನಾ ಉದಯದಾಲಂಕಾರ ದರ್ಶನ ಪದುಮನಾಭಗೆ ನಮನಗೈವರು ವಿಧಿಕುಲಕೆ ಉದ್ಧಾರಕರ್ತನು ವರಹನೆಂದಿವನಾ 3 ಪಾಲಿಸಲು ಬಾಲನ ಶ್ರೀ ಗೋ ಪಾಲಕೃಷ್ಣನು ಕಂಭದಲಿ ಲೀಲೆಯಿಂದಲಿ ಉದಿಸಿ ಖೂಳನ ಸೀಳೀ ತೊಡೆಯಲ್ಲಿ ಬಾಲೆಯನು ಕುಳ್ಳಿರಿಸಿಕೊಂಡಘ ಜಾಲಗಳ ಸುಡುವಂಥ ದೇವನು ಬಾಲರೂಪವ ಧರಿಸಿ ನಿಂತಿಹ ಲೋಲ ನರಹರಿಯ 4 ಅದಿತಿ ದ್ವಾದಶವರ್ಷ ತಪಸಿಗೆ ವಿಧಿ ಜನಕ ತಾ ಕುವರನಾದನು ಅದರ ತೆರದಲಿ ವ್ರತವ ಗೈದ ವೇದವತಿಗಿನ್ನು ಚದುರ ತನಯನ ವರವನಿತ್ತನು ಯದುಕುಲಾಗ್ರಣಿ ಅವರ ಭಕ್ತಿಗೆ ಒದಗಿ ಬಂದ ಮೂರ್ತಿವಾಮನನೆಂಬ ವಟುವರನ5 ದುಷ್ಟ ಕ್ಷತ್ರಿಯರನ್ನೆ ಕೊಲ್ಲುತ ಅಷ್ಟು ಭೂಮಿಯ ದಾನಗೈಯುತ ದಿಟ್ಟ ತಾನೆಲ್ಲಿರಲಿ ಎಂಬುವ ಯೋಚನೆಯ ತಳೆದು ಅಟ್ಟಿ ಅಬ್ಧಿಯ ಪುರವ ನಿರ್ಮಿಸಿ ಪುಟ್ಟ ರೂಪವ ತಾಳಿ ಬರುತಲಿ ಮೆಟ್ಟಿ ನಿಂತಿಹ ರಜತ ಪೀಠದಿ ಶ್ರೇಷ್ಠ ಭಾರ್ಗವನ 6 ಪಿತನ ಆಜ್ಞೆಯ ಪೊತ್ತು ಶಿರದಲಿ ಸತಿ ಅನುಜ ಸಹಿತದಿ ಜತನದಲಿ ವನವಾಸ ಮುಗಿಸುತ ದಶಶಿರನ ಕೊಂದ ಅತಿ ಸಹಾಯವ ಗೈದ ಶರಧಿಗೆ ಪ್ರತಿಯುಪಕಾರವನು ಕಾಣದೆ ಜತನದಲಿ ತಾ ನಿಲ್ಲೆ ನೆಲಸಿದ ಜಾನಕೀಪತಿಯ7 ಗೋಪಿಯರ ಉಪಟಳಕೆ ಸಹಿಸದೆ ಗೋಪನಂದನರೊಡನೆ ಕಾದುತ ತಾಪಪಡಿಸುವ ಕಂಸರನುಚರರಿಂದ ಕಳದೋಡಿ ಗೋಪಿ ಮೊಲೆ ಕೊಡುತರ್ದದಲಿ ಬಿಡೆ ಈ ಪರಿಯ ತಾಪಗಳ ಸಹಿಸದೆ ತಾಪಸರ ಪೂಜೆಗಳ ಬಯಸುತ ಬಂದ ಗೋಪತಿಯ 8 ವೇದ ಬಾಹಿರರಾದ ದುರುಳರು ವೇದ ಮಾರ್ಗವ ಪಿಡಿಯೆ ಸುರತತಿ ನೀ ದಯದಿ ಸಲಹೆಂದು ಪ್ರಾರ್ಥಿಸೆ ಜಿನ ವಿಮೋಹಕನೂ ವೇದರ್ಥವ ಗುಪ್ತದಲಿ ತಾ ಬೋಧಿಸುತ ಮೋಹಕವ ಕಲ್ಪಸಿ ಬುದ್ಧ ಪ್ರಮೋದನೆಂಬುವನಾ 9 ಚತುರ ಪಾದವು ಕಳದು ಧರ್ಮವು ಅತಿಮಲಿನವಾಗುತಲಿ ಕಲಿಜನ ಚತುರ ಜಾತಿಯ ಕಲೆತು ಕಂಗೆಡೆ ಭಕ್ತವರ್ಗಗಳು ಗತಿಯು ನೀನೆ ಪೊರೆಯೊ ಎಂದೆನೆ ಸತಿಯ ಹೆಗಲೇರುತಲಿ ಖಡ್ಗದಿ ಹತವಗೈಯ್ಯುತ ಖಳರ ಸುಜನರ ಪೊರೆದ ಕಲ್ಕಿಯನು10 ನೋಡಿದೆನು ವರ ಮಚ್ಛ ಕೂರ್ಮನ ನೋಡಿದೆನು ಧರಣೀಶ ನೃಹರಿಯ ನೋಡಿದೆನು ವಾಮನನ ಭಾರ್ಗವ ರಾಮಚಂದ್ರನನೂ ನೋಡಿದೆನು ಕಡಗೋಲ ಕೃಷ್ಣನ ಬುದ್ಧ ಕಲ್ಕಿಯ ನೋಡಿದೆನು ಗುರು ವರದ ಗೋಪಾಲಕೃಷ್ಣವಿಠ್ಠಲನ 11
--------------
ಅಂಬಾಬಾಯಿ
ನೋಡಿದೆನು ತಿರುವೆಂಗಳೇಶನಾ ಮಾಡಿದೆನು ಭಕುತಿಯಲಿ ವಂದನೆ ಬೇಡಿದೆನು ಕೊಂಡಾಡಿ ವರಗಳ ನಾಡೊಳಗೆ ಈಡಿಲ್ಲದಪ್ಪನಾ ಪ ಘನಸುಂದರ ಜ್ಞಾನ ತೀರ್ಥ ಆನಂದ ಧನ ವರಹಾ ವೈರಾಗ್ಯನಿಲಿ ರ ತುನ ಚಂದ್ರಮ ವರಧÀರ್ಮ ನಾರಾ ಯಣ ಭಕುತಿ ಶ್ರೀಕಾಂತಿ ಬ್ರಹ್ಮಾ ರುಣ ವೃಷಭ ಶ್ರುತಿ ಗರುಡ ಸರ್ಪ ಜನತ ಪೂಜಿಪ ಸುರ ಸುಧಾನಂತ ಇನಿತು ಪೆಸರುಳ್ಳ ಪುಷ್ಕರಾದ್ರಿಯಾ1 ಖಗನ ಪೆಗಲಲಿ ನಗವ ತಂದ ಜಗದೊಳು ಸುವರ್ಣಮುಖರಿ ನಿ ಮ್ನಗ ತೀರದಲಿ ಸ್ಥಾಪಿಸಿದ ಸುತ್ತಲು ಝಗಝಗಿಸುದೆ ನೋಳ್ಪ ಜನರಿಗೆ ಹಿಮ್ಮೊಗವಾಗಿ ಪೋದವು ಯುಗ ಯುಗ ಕಥಾಭೇದ ಬಗೆಬಗೆ ಪೊಗಳಿದರೆ ನೆಲೆಗಾಣೆ ಅನುದಿನಾ 2 ಸರಸ್ವತಿಗೆ ಮುನಿಯಿಂದ ಶಾಪವು ಬರಲು ಭರದಲಿ ಬಂದು ವಿರಜಾ ಸರತಿಯೊಳು ಬೆರಸಿದಳ್ ತಪದಲಿ ಹರಿಯ ಕರುಣವ ಪಡೆದು ಪ್ರತಿದಿನ ಸ್ಮರಸಿದವರಿಗೆ ಪುಣ್ಯವೀವುತ ಸರುವ ಸರೋವರಧಿಕವೆನಿಪ ಸುಂ ದರ ಸ್ವಾಮಿ ಪುಷ್ಕರಣಿಯನು ತ್ರಿ ಕರಣ ಬಲು ಒಂದಾಗಿಬಿಡದಲೆ 3 ಎರಡೈದು ಪ್ರಾಕಾರ ಗೋಪುರಾ ಎರಡೈದು ದ್ವಾರಗಳು ಕಟ್ಟಿದಾ ಮಕರ ತೋರಣ ಧರೆಗೆ ಮಟ್ಟಿದ ಎಡಬಲದ ಪೂ ಸರಗಳೊಪ್ಪಲು ದ್ವಾರಪಾಲಕರಿ ರುತಿಪ್ಪರಲ್ಲೆಲ್ಲಿ ಕಾವುತಾ ನಿಕರ ತುಂಬಿರೆ ಪರಿಪರಿಯ ಮಂಟಪಗಳಿಂದಾ 4 ಭಂಗರಹಿತ ಬಂಗಾರಮಯವಾದಾ ತುಂಗ ಆನಂದ ನಿಲಯ ವಿಮಾನಾ ಕಂಗಗಳಿಗೆ ಬಲು ತೇಜಿಃಪುಂಜದಿ ಹಿಂಗದಲೆ ಗೋಚರಿಸುತದೆ ನರ ಸಿಂಗ ಮೂತ್ರ್ಯಾದಿಗಳು ಪ್ರಾಣ ಭು ಜಂಗಧರಾದಿ ದಿಕ್ಪಾಲರೆಲ್ಲರು ಸಂಗ ಮತಿಯಲಿ ವಾಸವಾಗಿರೆ ಮಂಗಳಾಂಗ ಪ್ರಿಯಾಂಗ ಪ್ರಿಯನಾ 5 ಮುಕ್ತಿ ಬೀದಿಗಳೆರಡು ವಿ ರಕ್ತಿ ಜ್ಞಾನ ಸತ್ಕರ್ಮ ಬಲು ದೃಢ ಭಕ್ತಿಯೋಗವು ಯಾವ ತ್ಯಾಗ ಸಂ ವ್ಯಕ್ತ ರಾಗವು ಈಪರಿ ಸು ಉಕ್ತಿ ದ್ವಾದಶ ಸಾಲ ಬೀದಿಗ ಳುಕ್ತ ಜನ ಸಂಚರಿಸುತ್ತಿಪ್ಪರು ಶಕ್ತನೊಬ್ಬನೆ ಜಗದೊಳೀತನೆ ವ್ಯಕ್ತ ಅವ್ಯಕ್ತದಲಿ ಚಿತ್ರವಾ 6 ಲೋಕೇಶ ಲೋಕಪಾಲಕರು ಖಗ ಕಾಕೋದರ ಗಂಧರ್ವ ಸನಕಾದಿ ಲೋಕ ಚಕ್ಷು ಸೀತಾಂಶು ಉದಿಸಿದರು ಏಕಾಂತನು ವಾಯುನಂದನ ಪಾಕಶಾಸನ ಸೌಮ್ಯ ಗುರು ಕವಿ ನಾಕಜನ ಮಿಗಿಲಾದ ಭಕ್ತರು ಏಕಗುಣವಾರಂಭಿಸಿ ಅ ನೇಕ ಗುಣದಲಿ ಭಜಿಸುತಿಪ್ಪುದಾ7 ಸಾರಿದರೆ ನೆಲೆದೋರದು ಕಂ ಸಾರಿ ಚಿನ್ಮಯ ಲೀಲೆಗೆ ಮತ್ತಾರಾದರು ಗಣ್ಯಮಾಳ್ಪರೆ ಧಾರುಣಿಲಿ ಮಧ್ಯದಲಿದಕೆ ಎ ದಿರುಗಾಣೆನು ಎಲ್ಲಿ ಚರಿಸಲು ಮಾರುತನು ತಾನೊಬ್ಬ ಬಲ್ಲ ವಿ ಸ್ತಾರವಿದರ ವಿಚಾರ ಮತಿಯಲಿ8 ಧೀರ ಜಗದೋದ್ಧಾರ ರಿಪು ಸಂ ಹಾರ ನಾನಾವತಾರ ನವನೀತ ಜಾರ ಶಿರೋಮಣಿ ಶ್ರೀ ನಾರಿಯರರಸನೆ ತಾ ಭಕ್ತ ಚ ಕೋರ ಚಂದ್ರಮ ಪೂರ್ಣ ಸುಂದರ ಸಾರ ಭವಾರ್ಣವತಾರ ಕಾರಣ ವೀರ ವಿತರಣ ಶೂರನೆನಿಪನ್ನ ದ್ವಾರದಲಿ ಬಂದು ಸ್ತುತಿಸಿದೆನು ನಿಂದೂ 9 ಈ ವೈಲಕ್ಷಣವುಳ್ಳ ದೊರೆತನ ಈ ವೈಭವ ಸರ್ವೋತ್ತಮನೆಂಬದು ಈ ವೈಭೋಗ ಸಾಕಲ್ಯವಾಗಿದೆ ಈ ವೈಯಾರವು ಈತಗಲ್ಲದೆ ಈ ವೈಕುಂಠನ ನೋಡುವುದು ಮಹಾ ಈ ವೈದಿಕದ ಭಾಗ್ಯಕ್ಕೆಣೆಯೆ ಈ ವೈಧಾತ್ರಿಗೆಯಿವನು ಪೇಳಿದ ಈ ವೈಚಿತ್ರವ ಕೇಳಿ ಮನದಲಿ 10 ರನ್ನಮಯ ಕಿರೀಟ ಕುಂಡಲ ಕರ್ಣ ಕಸ್ತೂರಿನಾಮ ಪಣೆಯಲಿ ಕೆನ್ನೆ ಚಂಪಕ ನಾಸದಂತ ಪ್ರ ಸನ್ನ ವದನಾಂಭೋಜಲೋಚನಾ ಚಿನ್ನಸರ ಉಡುದಾರ ಸರಿಗೆ ಮೋ ಹನ್ನ ಪೀತಾಂಬರ ನೂಪುರಗೆಜ್ಜೆ ಸನ್ನಿಧಿಗೆ ನಡೆತಂದು ದೇವವರೇ ಣ್ಯನಂಘ್ರಿಯ ನೆನೆದೆ ಚೆನ್ನಾಗಿ 11 ಮೆರೆವ ಉತ್ಸವ ವಾಹನಂಗಳು ನೆರೆದ ಪ್ರಜೆದಟ್ಟಡಿಯಾಗಿದೆ ನೋಡಿ ಎರಡೊಂದು ವಿಧದವರುಯಿಲ್ಲಿಗೆ ಬರುವರೈ ಅವರವರ ತಕ್ಕದು ಹರಿಯ ಫಲವನು ಕೊಡುವನಿಲ್ಲದೆ ಅರಮರೆ ಇಲ್ಲಿದಕೆ ಎಂದಿಗು ಮೊರೆವ ನಾನಾ ವಾದ್ಯ ರಭಸ ವಿ ಸ್ತರಿಸ ಬಲ್ಲೆನೆ ನೂತನೂತನಾ 12 ರಥದ ಸಂಭ್ರಮವಾರು ಬಲ್ಲರು ಪ್ರತಿಗಾಣೆ ಈ ಪೃಥ್ವಿಯೊಳಗೆ ಅ ಪ್ರತಿ ಸಾಹಸಮಲ್ಲ ತನ್ನಯ ಸತಿಯೊಡನೆ ಪರುಠವಿಸಿ ಪೊಳೆವುತ್ತ ಚತುರ ಬೀದಿಯ ಸುತ್ತಿ ಸುಮನಸ ತತಿಯ ಸಂಗಡ ಬರುವ ಭರ ಉ ನ್ನತವ ಗುಣಿಸುತ್ತ ನಲಿನಲಿದು ಅ ಚ್ಯುತನ ಕ್ರೀಡೆಯ ಸ್ಮರಿಸಿ ನಮೋ ಎಂಬೆ13 ರಾಜರಾಜೇಶ್ವರ ನಿರಂತರ ರಾಜಿಸುತಿಪ್ಪ ಬಗೆಬಗೆ ಸಂಪೂಜೆಯಲಿ ರಾಜೋಪಚಾರದಿ ಮೂಜಗದೊಳು ಈ ನಿಧಿಯಲಿದ್ದ ಸೋಜಿಗವೆ ಮತ್ತೆಲ್ಲಿಯಿಲ್ಲವು ರಾಜಶೇಖರ ಬಲ್ಲವನೊಬ್ಬನೆ ಮಾಜದಲೆ ಸಜ್ಜನರು ಸತ್ಕರ್ಮ ಬೀಜಮಂದಿ ಮಾಡಿಬಿಡಲೆ 14 ದರ ಸುದರಶನ ಪಾಣಿ ತನ್ನ ಸಂ ದರುಶನವೆಮಗಿತ್ತು ಘನ ಆ ದರ ಪಾಲಿಸಿ ಸಂಚಿತಗಾಮಿ ಪಠಿಸಿ ಪ್ರಾರಬ್ಧವೇ ತೀರಿಸಿ ಕರುಣದಿಂದಲಿ ದಿವ್ಯರೂಪದ ಗುರುತು ತೋರುವ ಅಂತರಂಗದಿ ಪರಮಪಾವನ ವಿಜಯವಿಠ್ಠಲ ಪೊರೆವ ಪ್ರೀತಿಲಿ ಬಂದು ಮರಿಯದೆ15
--------------
ವಿಜಯದಾಸ