ಒಟ್ಟು 11785 ಕಡೆಗಳಲ್ಲಿ , 132 ದಾಸರು , 6311 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳಯ್ಯ ಸದ್ಗುರುರಾಯ | ಈಗ ಏಳು ತುರಗ ಸೂತನುದಯಿಸುವ ಸಮಯ ಪ ಎದ್ದು ಶಿಷ್ಯರ ಕರೆಯಬೇಕು | ಗುರು ಇದ್ದ ದೋಷವ ಕಳೆಯಬೇಕು ಪರಿ ಶುದ್ಧರ ಮಾಡಿ ನೀನುದ್ಧರಿಸಬೇಕು 1 ಭಾಗವತ ಶಾಸ್ತ್ರವಿಚಾರ ಮುರೆರಡು ವಿಧ ಭೇದ ತಾರತಮ್ಯ ಸಾರುತ ಸಲಹೋ ಶಿಷ್ಯಪರಿವಾರ 2 ಪದಸುಳಾದಿಗಳ ಕೇಳಬೇಕು | ಕೇಳಿ ಅದರೊಳಿರುವ ತತ್ವವಿವರಿಸಬೇಕು ಮದಡತನವ ಕಳೆಯಬೇಕು ನಿನ್ನ ಪದ ನಂಬಿದವರಿಗೆ ಮುದಗರಿಯ ಬೇಕು 3 ಸತ್ಯನಾರಾಯಣ ಕಥೆಯ | ಬಹುವಿಸ್ತಾರವಾಗಿ ನೀ ಬಿತ್ತರಿಸಯ್ಯ | ಭೃತ್ಯರಾ ಮಾಯೆ ಓಡಿಸಯ್ಯ ಅಜ್ಞಾನ ಜ್ಞಾನ ಭಕ್ತಿ ವೈರಾಗ್ಯ ಸಂಪತ್ತು ನೀಡಯ್ಯ 4 ಒಂದೂರು ನಿಲಯನೆ ಏಳೊ ಶಾಮ ಸುಂದರವಿಠಲನ ಮಂದಿರನಾಳೋ ಬಂದ ನಿಂದೆಗಳೆಲ್ಲ ಹೂಳೋ ನಿನ್ನ ಪೊಂದಿದ ನಮ್ಮನ್ನು ಅಗಲಿದೆ ಆಳೊ 5
--------------
ಶಾಮಸುಂದರ ವಿಠಲ
ಏಳಯ್ಯ ಸ್ವಾಮಿ ಏಳಯ್ಯ ಪ ಏಳು ಇಂದ್ರಾದಿ ಸುರಾಳಿಗಳೆಲ್ಲ ನಿ- ನ್ನೂಳಿಗ ಬಯಸಿ ಕಾದಿರುವರೊ ಕೃಷ್ಣಾ ಅ.ಪ ವಕ್ಕಿತನಯ ಬೇಗ ಏಳಯ್ಯ ಜಾಕೃತಿ ತೋರುವೆ ಏಳಯ್ಯ 1 ಮುರಿದ ಮಹಾತ್ಮನೆ ಏಳಯ್ಯ ತರುಣಿಯರೊಡನೆ ರಾಸಕ್ರೀಡೆಯಾಡಿದ ಪರಮ ರಸಿಕನೀನು ಏಳಯ್ಯ 2 ಬಲ್ಲಿದನು ನೀನಂತೇಳಯ್ಯ ನಿಲ್ಲಿಸುವರೆ ಬೇಗ ಏಳಯ್ಯ 3 ದೇವಿ ಕೈ ಪಿಡಿಯಲು ಏಳಯ್ಯ ಭಾವಜಪಿತ ಕೃಷ್ಣ ಏಳಯ್ಯ 4 ನರಗೆ ಸಾರಥಿಯಾಗಿ ಜಯವ ಕೊಡಿಸಿ ಯುಧಿ | ಷ್ಠಿರಗೆ ಪಟ್ಟವಗಟ್ಟು ಏಳಯ್ಯ ನರನಂತೆ ನಟಿಸಿ ದಾಸರ ಪರಿಪಾಲಿಪ | ಗುರುರಾಮ ವಿಠಲನೆ ಏಳಯ್ಯ 5
--------------
ಗುರುರಾಮವಿಠಲ
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಏಳು ಏಳು ಕೇಶವಾ ಶ್ರೀಮಾಧವಾ ಏಳು ಏಳು ಕೇಶವಾ ಪ ಏಳಯ್ಯ ಮಧುಸೂದನ ಚಕ್ರಧಾರೀ ಏಳಯ್ಯ ನಿಜಶೌರಿ ದಶರೂಪಧಾರೀ ಏಳಯ್ಯ ದೇವಕಿಕಂದ ಉದಾರೀ ಏಳಯ್ಯ ಮುರಹರ ಕೌಸ್ತುಭಧಾರೀ1 ತ್ರಿಜಗವನ್ನು ಬೇಗ ಪಾಲಿಸಲೇಳು ಭಜಕರ ಕರುಣದಿ ರಕ್ಷಿಸಲÉೀಳÀು ಸುಜನರ ಮರೆಯದೆ ವರದೆತ್ತಲಿಕೆ ಯೇಳು ಕುಜನರ ಹರುಷದಿ ತರಿಯಲೇಳು 2 ದಾಸದಾಸರು ಬಂದು ಸೇವಿಸುತಿಹರೇಳು ತಾಸು ತಾಸಿಗೆ ತತ್ವವರುಹಲೇಳು ದಾಸಗೆ ನಿತ್ಯದಿ ಭಾಸವಾಗಲೇಳು ದಾಸಗೆ ಮುಕ್ತಿಯ ಪಾಲಿಸಲೇಳು 3 ಅರುಣೋದಯವಾಯ್ತು ಕಿರುಣೋದಯವಾಯ್ತು ಭರದಿಂದ ಸೂರ್ಯನು ಮೇಲೇರುತಿಹನು ಚರಣ ಕಿಂಕರರೆಲ್ಲ ಸಂಸಾರ ಶರಧಿಯ ಸರಸದಿ ದಾಂಟಿ ನಿಂನನು ಸೇರುತಿಹರು 4 ವಿದ್ಯೆಯರುಹಲು ಯೇಳು ಜ್ಞಾನವೀಯಲು ಯೇಳು ಬುದ್ದಿಯ ಕಲಿಸಿ ಆತ್ಮವ ಸೇರಲೇಳು ಮದ್ದು ಭವರೋಗಕ್ಕೆ ಬೇಗನೀಯಲು ಯೇಳು ಎದ್ದು ಲೋಕಕ್ಕೆ ನೀ ಬೆಳಗಲೇಳು 5 ಸನ್ನುತ ವರ ದೂರ್ವಾಪುರಕೆ ದಿಗ್ದೇಶದಿಂ ದೀನದಾಸರು ಬಂದು ಘನಭಕ್ತಿಯಿಂದ ನಿತ್ಯ ಮಾಡುವರಯ್ಯ ಚನ್ನಕೇಶವಾ ಸೇವೆ ಸ್ವೀಕರಿಸೇಳು 6
--------------
ಕರ್ಕಿ ಕೇಶವದಾಸ
ಏಳು ಏಳೆನುತ ಭಾನು ಬರುತಿಹ |ಹೇಳುವರ್ಯಾರಿಲ್ಲ ನಿಮಗೆ ಜ್ಞಾನವ ಪ ಇರುಳೆಲ್ಲ ನೀವಿನ್ನು ವಿಷಯಕೆ ಮರುಳಾಗಿ |ಹರಟಿಯೊಳಗೆ ಸೊರಗುತಿಹರೀ ||ತರಳಾಕ್ಷಿಯರ ಅಂಗಸಂಗಕೆ ಬೆಂಡಾಗಿ |ಬರದ ಆಯುಷ್ಯ ಬರಿದೇ ಕಳೆವಿರೀ 1 ಮಾಡಲಿಲ್ಲವು ಧ್ಯಾನ ಯೋಗ ಜಪ ತಪ |ನೀಡಲಿಲ್ಲವು ದಾನ ಧರ್ಮವ ||ನೋಡಲಿಲ್ಲವು ಸಾಧುಸಂತರ ನಡತೆಯ |ಕೇಡ ಬಂದಿತು ಮುಂದೆ ನೋಡಲು 2 ತಂದೆ ಭವತಾರಕನೆ ಹಿಂದಾದುದಾಗಲಿ |ಮುಂದಾರ ನೀವಿನ್ನು ಒಂದು ನಿಮಿಷವು |ಗೊಂದಲ ಬಿಟ್ಟು ಅರಿತು ಕೊಂಡು | ಹೊಂದಿರಿ ಪೂರ್ಣ ಆನಂದವನೆಂದು 3
--------------
ಭಾವತರಕರು
ಏಳು ಗೋಪಾಲ ಬಾಲ ಇನ್ನೂ ಭಾಳ ಹೊತ್ತಾಯಿತು ಭಕ್ತ ಪರಿಪಾಲ ಪ. ಮುನಿಜನರೆದ್ದು ಪೂಜಿಸೆ ನಿನ್ನ ನಿಂತಿರೆ ಮನುಜರೆಲ್ಲರೂ ಕಾದಿಹರು ದರುಶನಕೆ ಸನಕಾದಿ ವಂದಿತ ಸರ್ವೇಶನೆಂತೆಂದು ವಿನಯದಿಂದಲಿ ನುತಿಪರು ಭಾಗವತರು 1 ತಾರೆಗಳಡಗಿತು ಕಮಲಗಳರಳಿತು ಪೂರ್ವ ದಿಕ್ಕಿನಲಿ ತೋರುವ ರವಿ ಉದಯ ಭೇರಿ ತುತ್ತೂರಿ ನಗಾರಿ ಬಾರಿಸುತಿದೆ ಸಾರಿ ಕೂಗುತಲಿದೆ ಕೋಳಿ ವೃಂದಗಳು 2 ಬಾಲಲೀಲೆಗಳಿಂದ ಗೋವಳರೊಡನಾಡಿ ಭಾಳ ಆಯಾಸವಾಗಿಹುದೆ ಕಂದಯ್ಯ ಬಾಲೆ ಗೋಪ್ಯಮ್ಮ ನಿನ್ನ ಲಾಲಿಸಲಿಲ್ಲವೆ ಬಾಲಯತಿಗಳು ಪೂಜಿಸುವರೇಳಯ್ಯ 3 ಬಿಸಿಬಿಸಿ ನೀರು ಪಂಚಾಮೃತವೆರೆಯುತ ಹಸನಾದ ಪಾಲು ಸಕ್ಕರೆ ಉಂಡೆಗಳು ಹಸುಗೂಸು ನಿನಗೆ ಹುಗ್ಗಿಯು ದೋಸೆ ಪೊಂಗಲು ಬಿಸಜಾಕ್ಷ ಯತಿಗಳರ್ಪಿಸುವರೇಳಯ್ಯ 4 ನುತಿ ಕೇಳಲಿಲ್ಲ ಆ ದಣಿದೆಂದು ಮಲಗಿದ್ಯಾ ಶ್ರುತಿ ವೇದತತಿಗಿಂತ ಚತುರ ಮಾತಿನೊಳು ಹಿತದಿ ಯಶೋದೆ ಎಬ್ಬಿಸಲೆಂದು ಮಲಗಿದ್ಯಾ ಚ್ಯುತದೂರ ಗೋಪಾಲಕೃಷ್ಣವಿಠ್ಠಲಯ್ಯ 5
--------------
ಅಂಬಾಬಾಯಿ
ಏಳು ನಾರಾಯಣ ಏಳು ಲಕ್ಷ್ಮೀರಮಣಏಳು ಬೆಳಗಾಯ್ತರುಣ ಬೀರುತಿದೆ ಕಿರಣ ಪ ರಂಗ ಬರುತಿಹನೆಂದು ಮಂಗಳಾಂಗಿಯರೆಲ್ಲಅಂಗಳ ಸಾರಿಸಿಸುತೆ ಮಂಗಳವ ಪಾಡುತ್ತೆರಂಗೋಲಿಯೊಳು ನಿನ್ನ ಚಿತ್ರವನು ರೇಖಿಸುತೆಶೃಂಗರಿಸುತಿಹರು ನೋಡೆದ್ದು ಬಾರೋ 1 ಹಿಂಡಿ ನೊರೆ ಹಾಲ್ಗಳನು ಗಿಂಡಿಯೊಳು ತಂದಿಟ್ಟುಕೊಂಡು ವದನವ ತೊಳೆಯ ಬಿಸಿ ನೀರು ತಂದಿಟ್ಟುತಂಡತಂಡದಿ ಭಕುತ ಮಂಡಲಿಯು ಕಾದಿಹುದು ಹೆಂಡತಿಯನೊಡಗೂಡಿಯುಂಡು ತಣಿಯು ಬಾರೋ2 ವೆಳ್ಳೆ ತುಂಬಿಗಳಾಡೆ ಮಂಗಳಾರತಿ ಮಾಡಿಬೆಳ್ಳಿ ಕಳಶಗಳೆನಲು ಅಮೃತವನು ತುಂಬಿಬೆಳ್ಳನೆಯ ಹೂಗಳನು ಮಡಿ ತಳಿಗೆಯೊಳು ಹಿಡಿದುಬಳ್ಳಿ ಮಲ್ಲಿಗೆ ತಾವು ಆತುರದಿ ನಿಂತಿಹವು 3 ಚಿಕ್ಕೆಗಳು ಬಾಡುತಿವೆ ಚೊಕ್ಕೆಲರು ತೀಡುತಿದೆಮಕ್ಕಳಾಡುಲೆವೆ ಕಕ್ಕುಲತೆಯೊಲಿ ನಮ್ಮ ರಕ್ಷಿಸಲು ನೀನೇಳು 4 ಕರ ಮಕದು ಭಕುತಿಯಿಂದಲಿ ಬೇಡುವರುಪಾವು ಮಂಚವ ಬಿಟ್ಟು ಬೇಗೆದ್ದು ಬಾರೋ 5 ಕಂಜದೆಲೆಯಲಿ ಬಿದ್ದ ಮಂಜುವನಿಗಳ ಮೇಲೆಕೆಂಜೆಡೆಯನಾಂಶುಗಳು ರಂಜಿಸಲು ದೀಪದೊಳುಕಂಜನಾಭ ನಿರಾಂಜನವ ಬೆಳಗಲಿಕೆಮುಂಜಾಮದಲೆ ಕಾಯುತಿಹಳೊ 6 ಶಿರಬಾಗಿ ನಿನ್ನ ಚರಣಗಳಿಗೆ ಬಂದಿದೆ ಶರಣನಿರುತ ಧನವಾರೋಗ್ಯವಿತ್ತು ದುರಿತಾಪಹರಣಪರಿಕಿಸದೆ ರಕ್ಷಿಸಲು ಬಾರೋ ಕರುಣಾಭರಣವರ ಗದುಗಿನಲಿ ಮೆರೆವ ವೀರನಾರಾಯಣ 7
--------------
ವೀರನಾರಾಯಣ
ಏಳು ನಾರಾಯಣನೆ - ಏಳು ವಾಸುದೇವಏಳು ಕೃಷ್ಣಾಚ್ಯುತನೆ _ ಏಳು ಹೇ ಮಾಧವಾ ಪ ಏಳು ವೈಕುಂಠನೇ - ಏಳು ಕಾರುಣ್ಯನೇಏಳು ಲಕ್ಷ್ಮೀಶನೇ - ಏಳು ಭಗವಂತ ನಮಿಪೇ 1 ಏಳು ಮಧ್ವೇಶನೇ _ ಏಳು ಪ್ರಾಣೇಶನೇಏಳು ರುದ್ರೇಶನೇ - ಏಳಾಂಬಿಕೇಶಾ 2 ಏಳು ಇಂದ್ರೇಶನೇ - ಏಳು ಶಚಿಗೀಶನೇಏಳು ವಿಪ್ರೇಕ ಭ - ಕೇಶನೆ ಗೋಪತೇ 3 ಕಾರುಣಿಕ ಮೂರ್ತೇ4 ಏಳು ಸಾಮ ಪ್ರಿಯನೆ - ಸರ್ವ ಕಾರಣ ಮೂರ್ತೆಏಳು ವೇದಾರ್ಥ ಪ್ರಿಯ - ಸರ್ವದಾ ಇಹನೇ 5 ಏಳು ಗದ್ಯ ಪ್ರಿಯನೆ - ಪುರಾಣ ಪುರುಷನೇಏಳು ಸ್ತೋತ್ರ ಪ್ರಿಯನೆ - ಸರ್ವದಾ ವಿಶ್ವಮೂರ್ತಿ 6 ಏಳು ಗುರು ಹೃದಯನೇ - ಪವನಾಂತರಾತ್ಮನೇಏಳು ಗುರು ಗೋವಿಂದ - ವಿಠಲ ಹಯವದನ 7
--------------
ಗುರುಗೋವಿಂದವಿಠಲರು
ಏಳು ನಿದ್ದೆಯು ಸಾಕು ರಂಗನಾಥ ಪ ತಾಳು ತಾಳೆನಲೇಕೆ ಮಾಂಗಿರಿ ನಿವಾಸ ಅ.ಪ ಜಗವ ಪೋಷಿಪಚಿಂತೆ | ಮಿಗಿಲಾದ ದೇವಂಗೆ ಸೊಗಸಾದ ನಿದ್ದೆಯಾಪರಿವುಂಟೇ ನಗಜಗವ ಪೊತ್ತವನ ಬಳಗವು ಏನೆಂಬೇ ನಗೆಬೇಡ ಕಣ್ತೆರೆಯೊ ಮಾಂiÀiಕಾರ 1 ನಿದ್ದೆಗೆಡಿಸಲು ಪಾಪ ಇದ್ದರೆ ನನಗಿರಲಯ್ಯ ಸದ್ದಿಲ್ಲದಿಹುದೇ ಭಕ್ತರು ಹಾಡಿ ಕುಣಿಯೇ ಒದ್ದಮುನಿಗಾ ಪಾಪವಿದ್ದಿತೇ ಕರುಣಾಳು ಎದ್ದು ಬಾ ಬಾರೈಯ ಮಾರನಯ್ಯ 2 ಬಲ್ಲೆ ಬಲ್ಲೆನು ನಿನ್ನ ಚೆಲ್ಲಾಟಗಳನೆಲ್ಲ ಬೆಲ್ಲವನು ಕಂಡಿರುವೆ ಮುತ್ತದಿಹುದೇ ಸಿರಿ ಮಾಂಗಿರಿಯ ರಂಗ [ಒಲ್ಲೆನದೆ ಈಯಯ್ಯ ಎನಗು ಬೆಲ್ಲದಸವಿಯ]3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏಳು ಪಂಡರಿವಾಸ ಏಳು ಶ್ರೀ ದೇವೇಶ ಏಳು ಮುಕ್ತ ಗಿರೀಶ ಏಳು ಹೃದೇಶ ಪ. ಏಳು ಮೂಲೋಕದೀಶ ಏಳು ಹೃತ್ಪದವಾಸ ಏಳು ಏಳಯ್ಯ ಶ್ರೀಶಾ ಏಳು ಸರ್ವೇಶಾ ಅ.ಪ. ಗಂಗಾ ಭಾಗೀರಥಿ ತುಂಗಭದ್ರಾ ಯಮುನ ಸಂಗಮ ತ್ರೀವೇಣಿ ಸರಸ್ವತಿ ಸರಯೂ ಮಂಗಳೆ ಚಂದ್ರಭಾಗೆಯೋಳ್ ಕೂಡಿ ಸೇವಿಸೆ ರಂಗಾ ಬಾಗಿಲೋಳ್ ನಿಂತು ಕಾದಿಹಳಯ್ಯ 1 ಪುನಗು ಜವಾಜಿ ಕಸ್ತೂರಿ ಬೆರಸಿದ ಜಲ ನಿನಗೆ ತೈಲವನೊತ್ತಿ ಎರೆವೆನೆಂದು ಕನಕ ರತ್ನದಿ ಭೂಷಿತರಾದ ದೇವ ಕನ್ನಿಕೆಯರು ಕಾದಿಹರೈಯ್ಯ ಲಕುಮಿಪತಿ 2 ಪಂಚಬಾಣನ ಪಿತನೆ ಪಂಚಾಮೃತ ತಂದು ಪಂಚಕನ್ನೆಯರು ಎರೆವೆನೆಂದು ಮಿಂಚು ಕೋಟಿಯತೇಜಾಭರಣ ಪೀತಾಂಬರ ಪಂಚ ರೂಪಗೆ ಉಡಿಸಿ ಶೃಂಗರಾಗೈಯುವರು 3 ಕಸ್ತೂರಿ ತಿಲಕವು ಕನಕಾಂಬರದ ಶಾಲು ಸುತ್ತಿದ ಮುಂಡಾಸು ಶೃಂಗರಿಸಿ ಮತ್ತೆ ಕಾಸಿದ ಹಾಲು ಹಣ್ಣು ಸಕ್ಕರೆ ಕೊಟ್ಟು ಎತ್ತಿ ಬೆಳಗುವ ಮುತ್ತಿನಾರುತಿ ವಿಠಲ 4 ಪಾಪರಹಿತ ಏಳು ಪಾವನ್ನ ರೂಪ ಏಳು ಗೋಪಾಲಕೃಷ್ಣವಿಠಲ ಹರಿ ಏಳು ಶ್ರೀಪದ್ಮಭವಮುಖರಾಪಾರ ಮುನಿಗಳು ರೂಪ ನೋಡಲು ಇಲ್ಲಿ ಕಾದಿಹರೇಳಯ್ಯ5
--------------
ಅಂಬಾಬಾಯಿ
ಏಳು ಬೆಳಗಾಯಿತು ಬಾಲಕೃಷ್ಣಬಹಳ ಮಕ್ಕಳು ನಿನ್ನ ಕೇಳುತಿಹರೋ ಪ ಬರುವಿ ಮನೆಯೊಳಗೆಂದು ಕರೆದು ಪಾಲನು ರುಚಿರತರುಣಿಯರು ಬಚ್ಚಿಟ್ಟು ಶರಣದೊಳಗೆಸರಸ ಮೊಸರನೆ ಕಡೆದು ತ್ವರದಿ ಬೆಣ್ಣೆಯ ತೆಗೆದುಮರೆಮಾಡಿ ಮೂಲೆಯೊಳು ಸುರಿಸುತಿಹರೊ 1 ತರಣಿ ಬಂದಾ2 ಏಸು ಪುಡುಗರು ನಮ್ಮ ವಾಸದೆದುರಿಗೆ ನಿಂತುಘೋಷದಿಂದಲೆ ವತ್ಸರಾಶಿ ತುರುವಾಕೂಸೆ ಕರೆವರು ನಿನ್ನ ಭೂಷಿಸುವೆ ಬೇಗೇಳುತಾಸು ಹೊರಗ್ಹೋಗಿ ಇಂದಿರೇಶ ಬಾ ಬೇಗ 3
--------------
ಇಂದಿರೇಶರು
ಏಳು ಲೋಕದಲಿ ಹೇಳುವರು ಅವರಕೀರ್ತಿಕೇಳಿ ಕೇಳಿ ಬಲ್ಲೆವಮ್ಮ ದೂತೆ ಬಹಳ ಬಹಳ ಭಾಗ್ಯವೇನೆ ದೂತೆ ಹೇಳಲ್ವಶವಲ್ಲವೇನೆ ದೂತೆ ಪ. ಕೃಷ್ಣನಂಘ್ರಿ ಕಮಲದಲೆ ನಿಷ್ಠನಾಗಿ ಧರ್ಮರಾಯ ಅಷ್ಟು ರಾಜ್ಯನಾಳುವನೇನ ದೂತೆ 1 ದಿಟ್ಟ ಧರ್ಮರಾಯ ದ್ರವ್ಯ ಶ್ರೇಷ್ಟ ದ್ವಿಜರಿಗೆ ಕೋಟಿಕೊಟ್ಟು ಕೊಟ್ಟು ಕಳಿಸೋನೇನೆ ದೂತೆ 2 ಮಾಧವನ ಭಕ್ತರಿಗೆ ಆದರದಿ ದ್ರವ್ಯ ಸಹಿತಗೋದಾನಗಳು ಕೊಡುವೊನೇನೆ ದೂತೆ 3 ನೀಲವರ್ಣನ ಭಕ್ತರಿಗೆ ಸಾಲಿಗ್ರಾಮ ಕೋಟಿ ಲಕ್ಷಮ್ಯಾಲೆ ದ್ರವ್ಯ ಕೊಡುವೋನೇನೆ ದೂತೆ 4 ಶ್ಯಾಮವರ್ಣನ ಭಕ್ತರಿಗೆ ಪ್ರೇಮದಿಂದ ದ್ರವ್ಯ ಸಹಿತ ಭೂಮಿದಾನ ಕೊಡುವೊನೇನೆ ದೂತೆ5 ಪನ್ನಂಗಶಯನನ ಭಕ್ತರ ಮನ್ನಿಸಿ ದ್ರವ್ಯಗಳಿಂದ ಕನ್ಯಾದಾನ ಮಾಡೋನೇನೆ ದೂತೆ 6 ಉತ್ತಮ ದ್ವಿಜರಿಗೆ ರಾಯ ಮುತ್ತು ಮಾಣಿಕರತ್ನ ಸಹಿತಛತ್ರ ಚಾಮರ ಕೊಡುವೋನೇನೆ ದೂತೆ 7 ಆನೆ ಕುದುರೆ ಅಂದಣವು ನಾನಾ ಭೂಷಣಗಳು ವಸ್ತ್ರಜ್ಞಾನಿಗಳಿಗೆ ಕೊಡುವೊನೇನೆ ದೂತೆ 8 ಸಂಪತ್ತು ದ್ವಿಜರಿಗೆ ಕೊಟ್ಟು ದಂಪತ್ತು ಪೂಜೆಗಳ ಮಾಡಿಗುಂಪು ಗುಂಪು ಕಳುಹೋನೇನೆ ದೂತೆ 9 ಮಿತಿ ಇಲ್ಲದೆ ಅನ್ನ ಮಧ್ವಮತದ ಜನಕೆ ಕೊಟ್ಟುಲಕ್ಷ್ಮೀಪತಿಗೆ ಅರ್ಪಿಸುವನೇನೆ ದೂತೆ 10 ಯದುಪತಿಯ ಭಕ್ತರಿಗೆ ಉದಕ ಪಾತ್ರೆ ಕೊಟ್ಟುರಾಯ ಅಧಿಕ ಕೀರ್ತಿ ಪಡೆಯುವನೇನೆ ದೂತೆ11 ತುಷ್ಟರಾಗಿ ಆಶೀರ್ವಾದ ಕೊಟ್ಟುರಾಯಗೆ ದ್ವಿಜರು ಕೃಷ್ಣಗರ್ಪಿಸೆಂಬೋರೇನೆ ದೂತೆ 12 ರತಿ ಇಟ್ಟು ರಾಮೇಶನಲ್ಲೆ ವ್ರತವ ಕೋಟಿ ಮಾಡಿರಾಯಕೃತ ಕೃತ್ಯನಾಗುವನೇನ ದೂತೆ13
--------------
ಗಲಗಲಿಅವ್ವನವರು
ಏಳು ಶ್ರೀ ಗುರುರಾಯ ಏಳು ಪರಮಪ್ರಿಯ ಏಳು ಮಂಗಳಕಾಯ ಭಕ್ತಜನಪ್ರಿಯ ಏಳಯ್ಯ ಬೆಳಗಾಯಿತು ಪ. ಬಳಲಿ ಬಂದಿರುವಂಥ ಬಾಲ ಶಿಷ್ಯಂದಿರನು ಸುಲಲಿತದ ಪ್ರಿಯ ವಾಕ್ಯದಿಂದ ಸಂತೈಸಿ ಮಲಿನ ಮನವನೆ ತಿದ್ದಿ ಸುಜ್ಞಾನ ಬೋಧಿಸಿ ನಳಿನನಾಭನ ಪಾದಕೊಪ್ಪಿಸಲಿಬೇಕು 1 ಶುದ್ಧಾಂತಃಕರಣದಿಂ ಪೊದ್ದಿರುವ ಶಿಷ್ಯರನು ಉದ್ಧಾರಗೈಯಲಂಕಿತಗಳಿತ್ತು ಸಾರ ತತ್ವಾಮೃತವನುಣಿಸಿ ಪದ್ಮನಾಭನ ದಾಸರೆಂದೆನಿಸಬೇಕು 2 ಎದ್ದು ಸ್ನಾನವಗೈದು ತಿದ್ದಿ ನಾಮವನ್ಹಚ್ಚಿ ಪದ್ಮಾಕ್ಷಿ ತುಳಸಿ ಮಾಲೆಗಳ ಧರಿಸಿ ಗದ್ದುಗೆಯೊಳು ಕುಳಿತು ಹೃದ್ವನಜಸ್ಥಾನ ಪದ್ಮಪಾದವ ಮನದಿ ಸ್ಮರಿಸಬೇಕು 3 ಹಿಂದ್ಯಾರು ಪೊರೆದರು ಮುಂದ್ಯಾರು ಕಾಯ್ದರು ತಂದೆ ನೀವಲ್ಲದಿರೆ ಪೊಂದಿದರಿಗೆ ತಂದೆ ಮುದ್ದುಮೋಹನದಾಸವರ ಎಮ್ಮೊಳು ಕುಂದನೆಣಿಸದೆ ಕಾಯೊ ಕರುಣಾಳು ಗುರುವೆ 4 ಆಪನ್ನ ರಕ್ಷಕನೆ ಗೋಪಾಲಕೃಷ್ಣವಿಠ್ಠಲನಂಘ್ರಿ ಕಮಲ ಕೃಪಾಳು ತೋರು ನೀ ಕೃಪೆಮಾಡು ಕಣ್ತೆರದುಶ್ರೀ ಪದ್ಮಜಾತರೊಂದಿತನ ದಾಸಾರ್ಯ 5
--------------
ಅಂಬಾಬಾಯಿ
ಏಳು ಶ್ರೀನಿವಾಸ ಏಳು ಲಕ್ಷ್ಮೀರಮಣ ಏಳು ಬೆಟ್ಟದೊಡೆಯ ಏಳು ಭಕ್ತರ ಪ್ರೀಯ ಏಳಯ್ಯ ಬೆಳಗಾಯಿತು ಹರಿಯೇ ಪ. ಆದಿಶೇಷನ ಮೇಲೆ ಅಪ್ರಮೇಯನು ನೀನು ಆದರದಿ ಮಹಲಕ್ಷ್ಮಿಯೊಡನಿರಲೂ ಸುರರು ಸನಕ ಸನಂದನರು ಆದರಿಸೆ ಬಾ ಬೇಗ ಬಾಗಿಲನು ತೆಗೆದು ಆದಿಮೂರುತಿ ನಿನ್ನ ಮುಖ ದರ್ಶನವ ಮಾಡಿ ಮೋದ ಪಡುತಲೆ ಭಕ್ತ ಕೋಟಿ ಸ್ತುತಿ ಮಾಡಲು ಮಾಧವನೆ ಹಾಸು ಮಂಚವನಿಳಿದು ಬಾ ಕತ್ತಲೆ ಹರಿಪಾ ದಿವಾಕರನ ತೆರದಿ ಹರಿಯೇ ಏಳಯ್ಯ ಬೆಳಗಾಯಿತು 1 ಕಾಸಿದ್ಹಾಲನೆ ತಂದು ಕಾವಡಿಯಲಿ ತುಂಬಿ ಲೇಸಾಗಿ ನಿನ್ನ ಭಕ್ತರು ನಿಂತಿದಾರೆ ವಾಸುದೇವನೆ ನಿನಗೆ ಮಲ್ಲಿಗೆ ಕುಸುಮ ಭಾಸುರಾಂಗನೆ ತಂದು ಅರ್ಪಿಸಲು ಭಕ್ತರು ಏಸು ಹೊತ್ತಿನಿಂದ ತುಳಸೀ ದಳ ತಂದು ವಾಸುಕೀಶಯನಗೆಂದು ಭೂಸುರರು ನಿಂದಾರೆ ವೇದ ಘೋಷದಿಂದ ಈಸು ನುಡಿಗಳು ನಿನ್ನ ಕರ್ಣಕೇಳಲಿಲ್ಲವೆ ಏಸು ಮೆಚ್ಚಿಸಿಹಳೋ ಲಕ್ಷ್ಮೀ ನಿನ್ನ ಸರಸದೊಳು ವಾಸುಕೀಶಯನ ಹಾಸಿಗೆಯಿಂದೇಳೋ ದೊರೆಯೆ ಏಳಯ್ಯ ಬೆಳಗಾಯಿತು2 ಕರುಣಾಸಾಗರ ನಿನಗೆ ಕರುಣೆ ಬರುವಾತೆರ ಪರಿಪರಿಯ ಸ್ತೋತ್ರದೊಳು ನಾರಿಯೇರು ಕರೆವರೋ ಕರಗತ ಕಾಮಧೇನು ನೀನೆಂದು ಕರದೊಳಾರತಿಯ ಪಿಡಿದೂ ತರತರದ ಉಡಿಗೆ ತೊಡಿಗೆ ನಿನಗೀಯಲು ಸರಸರನೆ ದೇಶದೇಶದಿ ಬಂದು ನಿಂತಿದ್ದಾರೆ ಶರಧಿ ಗಂಭೀರನೆ ವರ ಶ್ರೀ ಶ್ರೀನಿವಾಸನೆ ಕರುಣೆ ತೋರುತ್ತ ನಿನ್ನ ಭಕ್ತರ ಮೇಲೆ ವರ ನಾರಿಯರ ನಾಟ್ಯ ವೈಭವದಿ ವರದುಂದುಭಿ ವಾದ್ಯದಲಿ ವರ ತಾಳ ಮೇಳದಿಂ ವರ ಶೇಷಾದ್ರಿವಾಸ ವೆಂಕಟೇಶನೆ ಏಳಯ್ಯ ಬೆಳಗಾಯಿತು 3
--------------
ಸರಸ್ವತಿ ಬಾಯಿ
ಏಳೇಳು ಬಾಲಕನೆ ಅಜ್ಞಾನನಿದ್ರೆಯಿಂ ಏಳು ತಿಳಿವಿಕೆ ಎಂಬ ಎಚ್ಚರವ ಹೊಂದುತಲಿ ಪ ಹಾಳು ಮಾಯೆಯು ಎಂಬ ಮೇಲುಮುಸುಕನು ತೆಗೆದು ಕೀಳು ಬಾಳುವೆಯೆಂಬ ಹಾಸಿಗೆಯ ಸುತ್ತುತಲಿ ಕೇಳು ಕಿವಿದೆರದೇಕಚಿತ್ತದಿಂ ಶ್ರುತಿಯೆಂಬ ಕೋಳಿ ಕೂಗುತಲಿಹುದು `ತತ್ವಮಸಿ' ಎಂದು 1 ಬಿತ್ತರಿಸಿಹುದು ಮುಮುಕ್ಷುತ್ವ ಮುಂಬೆಳಗಾಗೆ ಚಿತ್ತವೆನ್ನುವ ಕಮಲವರಳಿಹುದು ನೋಡೀಗ ಸುತ್ತಲಡಿಗಿದ ಸುವಾಸನೆಯ ಮೂಸುತಲಿ ನೀ ಉತ್ತು ಮೋತ್ತುಮ ನಿಜಾನಂದವನು ಪಡೆವುದಕೆ 2 ಜ್ಞಾನನಿಂದಕರೆಂಬ ಗೂಗೆಗಳು ಅಡಗಿದವು ಕಾಣದಾದವು ಕುತರ್ಕಗಳೆಂಬ ತಾರೆಗಳು ಸ್ವಾನುಭವಸುಜ್ಞಾನಭಾನುವುದಯಿಸುತಿಹನು ಜ್ಞಾನಿಶಂಕರನ ಸದ್ಬೋಧವನೆ ಸ್ಮರಿಸುತಲಿ 3
--------------
ಶಂಕರಭಟ್ಟ ಅಗ್ನಿಹೋತ್ರಿ