ಒಟ್ಟು 1096 ಕಡೆಗಳಲ್ಲಿ , 91 ದಾಸರು , 977 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಸಾರ ದುಷ್ಟೆಂದು ತಿಳಿದ ಮಹಾತ್ಮರಸಂಸಾರ ಮಾಡುವುದು ಹ್ಯಾಗೆಸಂಸಾರದೊಳಗಿದ್ದು ಇಲ್ಲದ ವಿವರವಬರೆದೆನು ದೃಷ್ಟಾಂತವಾಗೆಪನಾರಿ ಪುತ್ರರೊಳಗೆ ತಾವು ಕಲೆತಿದ್ದುನಾಸ್ತಿಯಾಗಿಹರದು ಹ್ಯಾಗೆವಾರಿಯೊಳಗೆ ತಾವರೆಕರ್ಣ ತಾನಿರ್ದುನೀರಿಗೆ ಅಂಟದ ಹಾಗೆ1ಎಲ್ಲ ಪ್ರಪಂಚವ ಮಾಡುತ್ತ ನಿತ್ಯದಿಎರಡು ಆಗಿಹರದು ಹಾಗೆಹಲ್ಲೊಳಗೆ ನಾಲಗೆ ತಾನು ಇರುತಿರ್ದುಹಲ್ಲ ಬುಡಕೆ ಬೀಳದ್ಹಾಗೆ2ಶಿಷ್ಯ ಚಿದಾನಂದನಾಗಿ ಸಂಸಾರವಮುಟ್ಟಿಮುಟ್ಟದಿರು ಹ್ಯಾಗೆಹುಟ್ಟು ನಾನಾಕಾರಗಳನು ತೊಳಸಿಯೆಹುಟ್ಟು ರುಚಿಯ ಅರಿಯದ್ಹಾಗೆ3
--------------
ಚಿದಾನಂದ ಅವಧೂತರು
ಸಹಜಸಮಾಧಿಸಹಜ ಬ್ರಹ್ಮವಾದುದೇಸಹಜಸಮಾಧಿಪಅರಸಾಗಿಕುಳಿತಿದ್ದು ಅರಸಾಗಿ ಮಲಗಿದ್ದುಅರಸಾಗಿ ನುಡಿವುದೇ ಸಹಜಸಮಾಧಿ1ಜಗಬೇರೆಯಾಗದೇ ತಾ ಬೇರೆಯಾಗದೇಜಗತಾನೊಂದಾದುದೇ ಸಹಜಸಮಾಧಿ2ಒಳಗೆಂಬುದಿಲ್ಲವೇ ಹೊರಗೆಂಬುದಿಲ್ಲವೇಒಳಹೊರಗು ಒಂದಾಗೆ ಸಹಜಸಮಾಧಿ3ಎಲ್ಲಿದ್ದರೇನಿಲ್ಲ ಎಲ್ಲುಂಡರೇನಿಲ್ಲಎಲ್ಲವು ತಾನಾಗೆ ಸಹಜಸಮಾಧಿ4ಚಿದ್ವಸ್ತುವಾಗಿಯೇ ಚಿನ್ಮಾತ್ರವೇ ಇದ್ದುಚಿದಾನಂದನಿಹುದೇ ಸಹಜಸಮಾಧಿ5
--------------
ಚಿದಾನಂದ ಅವಧೂತರು
ಸಾಂಖ್ಯತಾರಕ ಅಮನಸ್ಕಾ ಬಿರುದಂತಾಗಿತೆಗೆವುದುಮಾಯೆಮುಸುಕುಪಜೀವನು ನೀನಲ್ಲವೆಂದು ನನಗಾವ ಪ್ರಪಂಚವು ಕಾರಣವಿಲ್ಲೆಂದುಇವ ಬ್ರಹ್ಮವು ನೀ ಸತ್ಯವೆಂದು ಗುರುದೇವನಿಂದಲಿಬೋಧಿಪುದೇ ಸಾಂಖ್ಯ ಎಂದು1ತನ್ನಲ್ಲಿಯೆ ಇಟ್ಟು ಕಣ್ಣು ಒಳಗೊಳಗೆ ತಾಕುಳಿತುಥಳಥಳಿಸುತಲಿನ್ನು ಭಿನ್ನವೆಂಬುದ ಕಳೆದಿನ್ನುಸಂಪನ್ನ ಸುಖವನು ಎಂಬುವುದ ತಾರಕವೆನ್ನು2ಮರತೆ ಮನದ ಎಚ್ಚರದು ಏನು ಕರುಹಿಲ್ಲದವಳಹೊರಗೆಂಬುದನು ಬರೆತುಂಬಿಹ ತೇಜದೊಳ್ ಸದ್ಗುರು ಚಿದಾನಂದನ ಮನವೆಯಿದು3
--------------
ಚಿದಾನಂದ ಅವಧೂತರು
ಸಾಧನವೇಕೆ ಸಾಧನವೇಕೆಸದ್ಗುರುನಾಥ ಸನಿಹದಿ ಇರಲಿಕೆಪಯಮನಿಯಮಾಸನ ಎಂಬಿವು ಯಾಕೆಕಮಲಾಸನವನು ಬಲಿಯಲದೇಕೆಶ್ರಮದಲಿ ವಾಯುವ ಬಿಗಿಯಲದೇಕೆಭ್ರಮಿತದಿ ಬ್ರಹ್ಮನ ಕಾಣುವುದೇಕೆ1ಮಿತ ಆಹಾರವ ಮಾಡಲದೇಕೆಅತಿ ವೈರಾಗ್ಯವು ದೇಹಕೆ ಯಾಕೆಸತತವು ಕಾಡನು ಸೇರುವುದೇಕೆಮತಿ ತಿಳಿಯದೆ ತಿರುಗಾಡುವುದೇಕೆ2ಶರಧಿಯು ತಾನಿರೆ ಒರತೆಯದೇಕೆತರಣಿಯೆ ತಾನಿರೆ ದೀಪವದೇಕೆಗುರುಚಿದಾನಂದನಿರೆ ಯೋಗಗಳೇಕೆಗುರುಕೃಪೆ ದೊರೆತರೆ ಭಯ ತಾನೇಕೆ3
--------------
ಚಿದಾನಂದ ಅವಧೂತರು
ಸಾರ್ಥಕವು ಸಾರ್ಥಕವು ಸಾರ್ಥಕವುದೇಹಕ್ಕೆಗತಿಕಂಡರೆಪಸಂಸಾರತೃಷೆಎಂದರಿದರೆಸಂಸಾರಕೆ ಹತ್ತದಿದ್ದರೆಅಂಶವಿದು ಜಗ ಬ್ರಹ್ಮವೆಂದರೆಸಂಶಯ ಮೂಲವನೆ ಕಳೆದರೆ1ತನುವಿನ ಅಭಿಮಾನ ಬಿಟ್ಟರೇಮನದ ಧಾವಾಂತ ನೀಗಿದರೆಘನದುರ್ಗುಣಗಳಕುಡಿಚೂಡಿದರೆಕನಕವು ನರಕವು ಸರಿಯೆಂದಾದರೆ2ಗುರುಪಾದಕ್ಕೆ ಮೊರೆ ಹೊಕ್ಕರೆಗುರುವಿಂದ ತನ್ನನು ತಿಳಿದರೆಗುರುವಾಗಿಯೇ ತನ್ನನು ಕಂಡರೆಗುರುಚಿದಾನಂದನಾಗಿಯೆ ನಿಂತರೆ3
--------------
ಚಿದಾನಂದ ಅವಧೂತರು
ಸುಬ್ರಹ್ಮಣ್ಯ ಸ್ವಾಮಿ ತೇ ನೌಮಿ ಶರಣಾಗತರ್ಗೆನಿರ್ಭಯವ ಪಾಲಿಸು ಪ್ರೇಮಿ ಪ.ಅಭ್ರವಾಹನಾದಿದೇವ ಸಭ್ಯ ಸಂಭಾವಿತ ಜಗ-ದಭ್ಯುದಯ ತೇಜೋಮಯ ಕರ್ಬುರಾಂತಕ ನಿಶ್ಯೋಕ ಅ.ಪ.ಭಾವಭಕ್ತಿಭಾಗ್ಯಶೂನ್ಯರು ನಿನ್ನಯ ಪದಸೇವೆಗಾಲಸ್ಯವ ಮಾಳ್ಪರುಕೇವಲ ದುರ್ಜನರು ಬಾರರು ದೇವದೇವ ನಿನ್ನ ಕರು-ಣಾವಲಂಬಿಗಳನೆಲ್ಲ ಕಾವನೆ ಮಹಾನುಭಾವನೆ 1ಚಂದ್ರಸೂರ್ಯರಿರುವ ತನಕ ಸ್ಥಾನಿಕ ವಿಪ್ರ-ರಿಂದ ಪೂಜೆಗೊಳೈ ಷಣ್ಮುಖವಂದನೀಯ ಪಾರ್ವತಿಯ ನಂದನ ನಳಿನಾಯತಾಕ್ಷಇಂದುಶೇಖರಕುಮಾರ ಸ್ಕಂದನೆ ನಿತ್ಯಾನಂದನೆ 2ಪಾವಂಜಾಖ್ಯಸುಕ್ಷೇತ್ರವಾಸ ಪೊರೆಯೊ ಪರಮೇಶಕೇವಲ ವಿಜ್ಞಾನಪ್ರಕಾಶಭಾವಜೋಪಮ ಲಾವಣ್ಯ ಕೋವಿದಾಗ್ರಗಣ್ಯ ಮಹಾ-ದೇವ ಲಕ್ಷ್ಮೀನಾರಾಯಣನ ಸೇವಕ ಬುದ್ಧಿದಾಯಕ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸುವ್ವಿ ಎಂದು ಪಾಡಿರೆ ಸುಜ್ಞಾನ ದೇವರಭವಹರಿವುದು ಭಯವಿಲ್ಲ ಸುವ್ವಿಪಂಚ ಶಕ್ತಿಗಳೆಂಬಪರಮಮುತ್ತೈದೆಯರುವಂಚನೆಗೆ ದೂರಾಗಿ ವರ್ತಿಸುತ ಸುವ್ವಿವಂಚನೆಗೆ ದೂರಾಗಿ ವರ್ತಿಪಐದೆಯರುಮುಂಚೆ ಬೇಗದಲಿ ಮಡಿಯಾಗಿ ಸುವ್ವಿ1ಕ್ಷೇತ್ರದ ಒರಳಲ್ಲಿ ಕ್ಷರನೆಂಬ ಅಕ್ಕಿಯುಕ್ಷೇತ್ರಜÕನೆಂಬ ಒನಕೆಯ ಸುವ್ವಿಕ್ಷೇತ್ರಜÕನೆಂಬ ಒನಕೆಯ ಪಿಡಿದುಪಾತ್ರನಾಗೆಂದು ಹರಸುತ ಸುವ್ವಿ2ಆರು ಮೂರಾದವನ ಐದು ಎಂಟಾದವನಬೇರೇಳು ನಾಲ್ಕೆರಡು ಬಗೆಯಾದವನ ಸುವ್ವಿಬೇರೇಳು ನಾಲ್ಕೆರಡು ಬಗೆಯಾದನೆಲ್ಲನುವಾರಣದಿ ನೀವೆಲ್ಲ ತಳಿಸಿರೆ ಸುವ್ವಿ3ವಾಸನೆಯ ಮೆರುಗನು ಒಳಿತಾಗಿ ತಳಿಸುತ್ತಸೂಸದಂತೆಲ್ಲವ ಮಗುಚುತ್ತ ಸುವ್ವಿಸೂಸದಂತೆಲ್ಲವ ಮಗಚುತ್ತ ಅಕ್ಕಿಯರಾಶಿಯನು ಮಾಡಿ ಬಿಡಿರವ್ವ ಸುವ್ವಿ4ಪರವಸ್ತುವಾದವನ ಪರಬ್ರಹ್ಮವಾದವನಪರಮಾತ್ಮನೆಂಬ ಪುರುಷನ ಸುವ್ವಿಪರಮಾತ್ಮನೆಂಬ ಪುರುಷ ಚಿದಾನಂದನಪರಮನೈವೇದ್ಯದ ಪಾಕಕ್ಕೆ ಸುವ್ವಿ5
--------------
ಚಿದಾನಂದ ಅವಧೂತರು
ಸುಳಾದಿಧ್ರುವತಾಳರಾಮ ರಘುಕುಲ ಸಾರ್ವಭೌಮ ಪೂರಣಕಾಮಜೀಮೂತಶಾಮ ಶ್ರೀಮೂಲರಾಮಕೋಮಲ ಶರೀರ ಸೀತಾ ಮುಖಾಂಬುಜಭ್ರಮರಪ್ರೇಮಸಾಗರ ಭಕ್ತಜನ ಮನೋಹರಸಾಮಜಾತಿಹರ ಸಾಮಗಾನಾದರ ನಿಸ್ಸೀಮ ಗುಣಗಂಭೀರ ಏಕವೀರಸ್ವಾಮಿ ಮಠದರಸ ಮುನಿಸ್ತೋಮ ಮಾನಸಹಂಸನೀ ಮನ್ನಿಸು ಪ್ರಸನ್ನವೆಂಕಟಾದ್ರೀಶ ರಘುರಾಮ 1ಮಠ್ಯತಾಳಪಿಂತೆ ಸಮೀರಜನ ಸೇವೆಗೆ ಮೆಚ್ಚತ್ಯಂತ ಪ್ರಸನ್ನನಾಗ್ಯವನ ಶುಭಕರಸಂತತಿಗಭಯವನಿತ್ತಪೆನೆಂದೀಶನಿಂತಿಹೆ ಪ್ರಸನ್ನವೆಂಕಟಪತಿರಾಮಕಂತುಜನಕನಿತ್ಯಾನಂದನೆ ನಿನ್ನಂತವರಿಯೆ ನಿಗಮಾಗಮಕಳವೆ 2ತ್ರಿಪುಟತಾಳನಿರುತ ವೈಕುಂಠ ಮಂದಿರವಿದ್ದುಪರಣ ಕುಟೀರವನಾಶ್ರಯಿಸುವ ಘನತೆಯೆತ್ತವರಪೀತಾಂಬರ ದಾಮವನು ಬಿಟ್ಟುವಲ್ಕಲಧರಿಸಿ ಕಾನನದಿ ಸಂಚರಿಪೋದೆತ್ತನರಲೀಲೆಗಿದು ಶ್ಲಾಘ್ಯವೆಂದು ತೋರಿದೆ ಜಗದೆರೆಯ ಪ್ರಸನ್ನವೆಂಕಟಾದ್ರಿ ರಘುರಾಮ 3ಅಟ್ಟತಾಳಹರವರದಲಿ ಬಲು ಮತ್ತಾದ ರಜನೀಚರವರ ಲಂಕೆಯಲಿ ಬಲಿದು ಗರ್ವದಿಸುರವರರನುರೆ ಬಾಧಿಸಲವರನುಪೊರೆವರು ದಾರಯ್ಯ ನಿನ್ನಿಂದಸ್ಥಿರವರದಾಯಕ ಪ್ರಸನ್ವೆಂಕಟಗಿರಿವರನಿಲಯ ಕೌಸಲ್ಯೆಯ ಕಂದ 4ಆದಿತಾಳಅಕಳಂಕ ಅಕುತೋತಂಕ ಅಕಳಂಕಮಕುಟಕುಂಡಲಕೌಸ್ತುಭಕೇಯೂರ ವಲಯಾಂಕಿತಕೋದಂಡಕಾರ್ಮುಕಪಾಣಿಅಕಳಂಕ ಸುಖತೀರ್ಥವಂದಿತ ಪಾದಕಮಲ ವಿಧಿನುತ ಮಖಪಾಲಕ ಪ್ರಸನ್ನವೆಂಕಟಾಧಿಪ ಅಕಳಂಕ 5ಜತೆಅಂದು ನರಹರಿಯತಿಗೆ ಅಂದದಲ್ಲೊಲಿದಿಲ್ಲಿಬಂದು ನೀನಿಂತೆ ನಿಜರಮಣಿಯೊಡನೆಎಂದೆಂದು ಸತ್ಯಾನಭಿವ ತೀರ್ಥಗುರುಹೃದಯಮಂದಿರನೆ ಪ್ರಸನ್ನವೆಂಕಟವರದ ರಾಮ
--------------
ಪ್ರಸನ್ನವೆಂಕಟದಾಸರು
ಸುಳ್ಳೇ ತೋರಿದೆ ಜಗವೆಲ್ಲಸುಳ್ಳಾದವರಿಗೆ ಸುಳ್ಳುಸುಳ್ಳೇ ತೋರಿದೆ ಜಗವೆಲ್ಲಪಮೂರು ಮೂರುತಿ ಮೂರು ಶಕ್ತಿಯೆ ಸುಳ್ಳುಮೂರು ಸ್ಥಾನ ಮೂರು ಗುಣಗಳೇ ಸುಳ್ಳುಮೂರು ಮೂಲವೇ ಸುಳ್ಳು ತಾನಿಹುದೇ ಸುಳ್ಳು1ಚಂದ್ರ ಸೂರ್ಯರುಗಳೆಂಬುವರೆ ಸುಳ್ಳುಇಂದ್ರರು ಅಹಮಿಂದ್ರರು ಸುಳ್ಳುಸಾಂದ್ರನಕ್ಷತ್ರವೇ ಇದು ಸುಳ್ಳು ತಾನಿಹುದೆ ಸುಳ್ಳು2ದಿಗ್ಗಜಗಳು ದಿಕ್ಪಾಲಕರೆ ಸುಳ್ಳುವಗ್ಗಿಗರಹ ವಸು ಎಂಬರು ಸುಳ್ಳುಸ್ವರ್ಗವೆಂಬುದು ಅದು ಸುಳ್ಳು3ಬಹುಲೋಕವು ಭುವನಂಗಳು ಸುಳ್ಳುಇಹಪರ ಎಂಬವು ಎರಡಿವು ಸುಳ್ಳುಬಹಿರಂಗವೆಂಬುದಿದು ಸುಳ್ಳು ತಾನಿಹುದೆ ಸುಳ್ಳು4ನಾನಾರೂಪದ ಬಹೂರೂಪವೆ ಸುಳ್ಳುನಾನಾ ವಿನೋದಂಗಳು ಇವು ಸುಳ್ಳುನಾನಾ ಬೆಳಕುಗಳು ಅವು ಸುಳ್ಳು ತಾನಿಹುದೆ ಸುಳ್ಳು5ಬ್ರಹ್ಮಾಂಡವು ತಾನಿಹುದೇ ಸುಳ್ಳುಪಿಂಡಾಂಡವು ತಾ ಮೊದಲಿಗೆ ಸುಳ್ಳುಕಂಡೆನೆಂದೆಂಬುವು ಎಲ್ಲ ಸುಳ್ಳು ತಾನಿಹುದೆ ಸುಳ್ಳು6ಸುಳ್ಳು ಚಿದಾನಂದನೆಂಬುದು ಸುಳ್ಳುಸುಳ್ಳಿನ ಕೀಲನು ಅರಿತರಿಗೆ ಸುಳ್ಳುತಿಳಿಯದವರಿಗೆ ನಿಜಸುಳ್ಳು ತಾನಿಹುದೇ ಸುಳ್ಳು7
--------------
ಚಿದಾನಂದ ಅವಧೂತರು
ಸೈಶಬಾಸ ಗಬರು ದರೋಡೆ ಬರತದಅಬಬ್ಬ ನೋಡಿದರೆ ಆರ್ಭಟಸಬಬ ಐತಿದು ಸಾಧುರ ಪುಣ್ಯಶುಭನುಡಿಯುತದ ಶಕುನದ ಹಕ್ಕಿಪಐದು ಮಂದಿ ನೆಲೆಗಳ್ಳರು ಕೂಡಿಊರ ಆತ್ಮದಲಿ ಸೇರುವರುಐಕ್ಯದಿಂದ ಶ್ರೀ ಗುರುವಿನ ಕೂಡಿಐದು ಮಂದಿ ಬಿಟ್ಟೋಡುವರು1ಎಂಟು ಹತ್ತು ಮಂದಿ ಬಂಟರು ಕೂಡಿಮುತ್ತಿಗೆ ಹಾಕಿ ನಿನ್ನ ಕೆಡಿಸುವರುಸತ್ಯನಾದ ಶ್ರೀ ಗುರುವಿನ ನೆನೆದರೆಹತ್ತು ಮಂದಿ ಬಿಟ್ಟೋಡುವರು2ನೋಡಿ ಬಗೆಯೋ ನಿನ್ನ ಕಾಡವು ಹುಲಿಗಳುಬೇಡಿದ ಪದಾರ್ಥ ದೊರಕುವುದುಕೂಡಿ ಭಜಿಸೊ ಶ್ರೀ ಚಿದಾನಂದನಮೂಲ ಮಂತ್ರಪ್ರಣವದೊರಕುವುದು3
--------------
ಚಿದಾನಂದ ಅವಧೂತರು
ಸೊಕ್ಕು ನೋಡಿ ಯೋಗೀಶನ ಸೊಕ್ಕು ನೋಡಿಮಿಕ್ಕು ಮೀರಿ ಮೂರಕ್ಕರಗಳಕಂಡುನಕ್ಕು ಪಶ್ಚಿಮಗಿರಿ ಪೊಕ್ಕು ಬೆಳಗಿ ಜನಪಮೂರಕಟ್ಟಿಮೂರನು ಅರಶೀರಗುಟ್ಟಿಆರು ಎಂಟನೆ ಅಟ್ಟಿ ಐದು ಏಳನು ಮೆಟ್ಟಿತೋರುವ ಎರಡು ನಾಲ್ಕನು ತೊಲಗಿಸಿದಾತನ1ಲೋಕದ ಕೂಡ ಕೂಡಿಯೆ ವಿವೇಕ ಬೇಡಏಕವೆಂಬುದು ಬಿಡ ಅನೇಕವೆಂಬುದ ನಾಡಮೂಕ ಪದಗಳೆಂದು ನಿರಾಕರಿಸುತಲಿಹನು2ಅಕ್ಷಯಮುಚ್ಚಿ ತೆರದು ತೆರದಕ್ಷಯ ಮುಚ್ಚಿರಕ್ಷಿಸುತಿಪ್ಪ ಭಾಳೇಕ್ಷಣ ತಾನೆಂದು-ಪೇಕ್ಷೆಮಾಡುತ ಸರ್ವವ ನಿರೀಕ್ಷಿಸುತಿರುವವನ3ಮತಗಳ ನೆನೆದು ಶಾಸ್ತ್ರಗಳ ಗೆಲಿದುಪಾತಾಳಕಿಟ್ಟ ಮತಿ ಮೋಕ್ಷಗಳ ಬಿಟ್ಟ ತಿರುಗಿಸಿ ತಿರುಗಿಸಿ ಹುಟ್ಟಸತತ ಕಾಲದಿ ತನ್ನ ಮತಿ ಹಿಡಿಯೆಂಬನ4ಏನುಪಾಯ ಈ ಯೋಗಿಗೆ ಇನ್ನೇನು ನ್ಯಾಯತಾನಾಗದಗುರುಚಿದಾನಂದನ ತಾ ಕಂಡುತಾನೆ ತಾನಾಗಿ ತೋರುವ ನಿಜ ಯೋಗಿಯ5
--------------
ಚಿದಾನಂದ ಅವಧೂತರು
ಹನುಮ ನಮ್ಮ ತಾಯಿತಂದೆ-ಭೀಮನಮ್ಮ ಬಂಧು ಬಳಗ |ಆನಂದ ತೀರ್ಥರೆಮಗೆ ಗತಿಗೋತ್ರವಯ್ಯ ಪತಾಯಿ ತಂದೆ ಹಸುಳೆಗಾಗಿ ಸಾಯ ಮಾಡಿ ಸಾಕುವಂತೆಆಯಾಸವಿಲ್ಲದೆ ಸಂಜೀವನ ತಂದೆ ||ಗಾಯಗೊಂಡ ಕಪಿಗಳನ್ನು ಸಾಯದಂತೆ ಪೊರೆದೆ ರಘುರಾಯನಂಘ್ರಿಗಳೆ ಸಾಕ್ಷಿ ತ್ರೇತಾಯುಗದಲ್ಲಿ 1ಬಂಧು ಬಳಗದಂತೆ ಆಪ್ಪದ್ಬಂಧುವಾಗಿ ಪಾರ್ಥನಿಗೆಬಂದ ದುರಿತಂಗಳ ಪರಿಹರಿಸಿ ||ಅಂಧಕಜಾತಕ ಕೊಂದು ನಂದನಂದನಿಗರ್ಪಿಸಿದ ಗೋ-ವಿಂದನಂಘ್ರಗಳೆ ಸಾಕ್ಷಿ ದ್ವಾಪರಯುಗದೆ 2ಗತಿಗೋತ್ರರಂತೆ ಸಾಧುಮತಿಗಳಿಂಗೆ ಗತಿಯನಿತ್ತುಮತಿಗೆಟ್ಟ ಇಪ್ಪತ್ತೊಂದು ಮತವ ಖಂಡಿಸಿ |ಮತಗೆಟ್ಟ ವೈಷ್ಣವರಿಗೆ ಗತಿಯ ತೋರಿದೆ ಪರಮಾತ್ಮಗತಿಪುರಂದರವಿಠಲ ಸಾಕ್ಷಿ ಕಲಿಯುಗದಲ್ಲಿ3
--------------
ಪುರಂದರದಾಸರು
ಹರ ಹರ ಹರ ಹರ ಹರ ಹರಹರ ಹರ ಹರ ಹರ ಹರ ಹರಪಹರ ಹರ ಹರ ಹರ ಹರ ಹರಏಳತಲೆನ್ನಿ ಹರ ಹರ ಹರ ಹರಬೀಳುತಲೆನ್ನಿ ಹರ ಹರ ಹರ ಹರ1ನಡೆಯುತಲೆನ್ನಿ ಹರ ಹರ ಹರ ಹರನುಡಿಯುತಲೆನ್ನಿ ಹರ ಹರ ಹರ ಹರ2ಉಣ್ಣುತಲೆನ್ನಿ ಹರ ಹರ ಹರ ಹರಉಡುವಾಗಲೆನ್ನಿ ಹರ ಹರ ಹರ ಹರ3ಮಲಗುತಲೆನ್ನಿ ಹರ ಹರ ಹರ ಹರವಂದಿಸುತೆನ್ನಿ ಹರ ಹರ ಹರ ಹರ4ಚಿದಾನಂದನನು ಹರ ಹರ ಹರ ಹರಚಿಂತಿಸೆ ಚಿಂತೆಯು ಹರ ಹರ ಹರ ಹರ5
--------------
ಚಿದಾನಂದ ಅವಧೂತರು
ಹುಚ್ಚು ಮುಂಡೆ ನೀನಾಗಬೇಡ ಹೇಳುವೆ ಕೇಳುಹುಚ್ಚು ಮುಂಡೆ ಹುಚ್ಚು ಮುಂಡೆಯು ಅಲ್ಲಬ್ರಹ್ಮವೇ ನೀನಾಗಿಹೆ ಹುಚ್ಚು ಮುಂಡೆಪಸರ್ವದೇಹಕೆ ನರದೇಹವು ಉತ್ತಮ ಹುಚ್ಚು ಮುಂಡೆಇರುವ ದೇಹದಿ ನಿನ್ನ ಸಾರ್ಥಕ ಮಾಡಿಕೋ ಹುಚ್ಚು ಮುಂಡೆಉರ್ವಿಪ್ರಪಂಚವು ಸತ್ಯವೆಂದು ಎನಬೇಡ ಹುಚ್ಚು ಮುಂಡೆತೋರುವುದಿಂದ್ರಜಾಲದ ತೆರದಿ ಸ್ವರ್ಗ ಮತ್ರ್ಯವುಹುಚ್ಚು ಮುಂಡೆ1ಸತಿಸುತರನು ನೀನು ನಂಬಿ ಕೆಡಬೇಡ ಹುಚ್ಚು ಮುಂಡೆಸತಿಯೆಷ್ಟು ಸುತರೆಷ್ಟು ಆದರು ನಿನಗೆ ಹುಚ್ಚು ಮುಂಡೆಮಿತಿಯಿಲ್ಲದ ದೇಹವಾದವು ನಿನಗೆ ಹುಚ್ಚು ಮುಂಡೆಮತಿಗೆಟ್ಟು ಮರೆತು ಜನ್ಮವನಂತವ ತಿರುಗುವರೆ2ಸ್ವಪ್ನದ ಸುಖದಂತೆ ಸಂಸಾರವಿದು ಮೃಷೆ ಹುಚ್ಚು ಮುಂಡೆಇರುವೆನಾಚಂದ್ರಾರ್ಕವೆಂದು ಎಂಬೆಯೋ ಹುಚ್ಚು ಮುಂಡೆಅಪ್ಪಯ್ಯ ಹೋದನು ಮುತ್ತಯ್ಯ ಹೋದನು ಈ ಪರಿಯಿಂದೆ ಹುಚ್ಚು ಮುಂಡೆಮುಪ್ಪಾದೆ ಇಂತು ಭವದ ಸುಳಿಯಲಿ ಬಿದ್ದು ಹುಚ್ಚು ಮುಂಡೆ3ಕಾರ್ಯೋಪಾಧಿ ಯಿಂದ ಹುಚ್ಚು ಮುಂಡೆ ನೀನಾದೆ ಹುಚ್ಚುಮುಂಡೆಕಾರ್ಯಕಾರಣ ಉಪಾಧಿಯು ನಿನಗಿಲ್ಲವು ಹುಚ್ಚು ಮುಂಡೆಕಾರ್ಯಗುಣಗಳಿಂದ ನಿನ್ನ ತಿಳಿವುದು ಕಷ್ಟ ಹುಚ್ಚು ಮುಂಡೆಕಾರಣ ಗುಣದಲ್ಲಿ ತಿಳಿಯೆ ತಿಳಿಸುವೆ ನಿನ್ನ ಹುಚ್ಚು ಮುಂಡೆ4ಹೊಂದು ಸದ್ಗುರುಪಾದ ತಿಳಿ ನಿನ್ನ ಬ್ರಹ್ಮೆಂದು ಹುಚ್ಚು ಮುಂಡೆನಿಂದುನಾಶಿಕಗೊನೆಯ ನೋಡಿ ದೃಷ್ಟಿಯಿಡು ಹುಚ್ಚು ಮುಂಡೆಚಂದ್ರರು ಶತಕೋಟಿ ಬೆಳಗುವರು ತಾವಲ್ಲಿ ಹುಚ್ಚು ಮುಂಡೆಸುಂದರ ಚಿದಾನಂದನಾಗುವೆ ನಿಜದಲ್ಲಿ ಹುಚ್ಚು ಮುಂಡೆ5
--------------
ಚಿದಾನಂದ ಅವಧೂತರು
ಹುಚ್ಚು ಹತ್ತಿತು ಹುಚ್ಚು ಹುಚ್ಚು ಜ್ಞಾನದ ಹುಚ್ಚುಹುಚ್ಚು ತಿಳಿವುದಲ್ಲ ಹುಚ್ಚನ ಗುರುವೇ ಬಲ್ಲಪನಿರ್ಮಳಾಂಗದ ಹುಚ್ಚುನಿಗಮಶಿರದ ಹುಚ್ಚುಕರ್ಮರಹಿತನ ಹುಚ್ಚುಕಮನೀಯಹುಚ್ಚು1ಸಜ್ಜನ ಸಂಗದ ಹುಚ್ಚು ಸಂತೋಷಪೂರಿತ ಹುಚ್ಚುವೆಚ್ಚವಿಲ್ಲದ ಹುಚ್ಚು ಎಣಿಸಬಾರದು ಹುಚ್ಚು2ಬ್ರಹ್ಮಾನಂದದ ಹುಚ್ಚು ಭೇದರಹಿತದ ಹುಚ್ಚುಹಮ್ಮನಳಿದ ಹುಚ್ಚು ಪರಿಪೂರ್ಣ ಹುಚ್ಚು3ಮತವ ಕಡಿದಾ ಹುಚ್ಚು ಮಹತ್ತೆನಿಪಾ ಹುಚ್ಚುಸತತ ಶಾಂತಹ ಹುಚ್ಚು ಸಹಜಾನಂದದ ಹುಚ್ಚು4ಲೋಕ ಸಾಕ್ಷಿಕ ಹುಚ್ಚು ಲೋಕವುತಾನಾದ ಹುಚ್ಚುಏಕವೆಂಬ ಹುಚ್ಚು ಯಮನ ಗೆಲಿದಾ ಹುಚ್ಚು5ಆರರ ಮೇಲಣ ಹುಚ್ಚು ಅನ್ಯಮನಸ್ಕದ ಹುಚ್ಚುಚಾರುತಾಮಸಹುಚ್ಚು ಚಲನೆಯಿಲ್ಲದ ಹುಚ್ಚು6ಗುರುಭಕ್ತಿಯ ಹುಚ್ಚು ಗುರೂಪದೇಶದ ಹುಚ್ಚುಸ್ಮರಣೆ ಬಲಿದ ಹುಚ್ಚು ಸಮನಿಸಿದ ಹುಚ್ಚು7ಜ್ಯೋತಿರ್ಮಯದ ಹುಚ್ಚು ಜಾತಿ ನಿರ್ಮೂಲದ ಹುಚ್ಚುಖ್ಯಾತಿಯಾಗಿಹ ಹುಚ್ಚು ಭೇದರಹಿತದ ಹುಚ್ಚು8ಚಿನ್ಮಯ ಚಿದ್ರೂಪದ ಹುಚ್ಚು ಚಿದಾನಂದನ ಹುಚ್ಚುತನ್ಮಯವಾಗಿದೆ ಹುಚ್ಚು ತಿಳಿಯಲರಿಯುವುದು ಹುಚ್ಚು9
--------------
ಚಿದಾನಂದ ಅವಧೂತರು