ಒಟ್ಟು 2882 ಕಡೆಗಳಲ್ಲಿ , 122 ದಾಸರು , 2152 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೊ ಪರಮ ಪಾವನ್ನ ಕಮ ಲಾಲಯ ನಂಬಿದೆ ನಿನ್ನ ಆಹ ನಖ ತೇಜ ಮೂರ್ಲೋಕದರಸೆ ನೀನಾಲಯ ಬಿಡದಲೆ ಅ.ಪ ಹಿಂದೆ ಪ್ರಹ್ಲಾದನ ಮೊರೆಯ ಕೇಳಿ ಬಂದು ಕಾಯಿದೆ ಭಕ್ತ ಪ್ರಿಯ ಸುಖ ಸಂದೋಹ ಮೂರುತಿ ಆಯ ತಾಕ್ಷ ಎಂದೆಂದು ಬಿಡದಿರು ಕೈಯ ಆಹ ವೃಂದಾರ ಕೇಂದ್ರಗೆ ಬಂದ ದುರಿತಂಗಳ ಹಿಂದೆ ಮಾಡಿ ಕಾಯ್ದೆ ಇಂದಿರಾರಮಣನೆ 1 ಹರಣದಲ್ಲಿ ನಿನ್ನ ರೂಪ ತೋರಿ ಪರಿಹರಿಸೊ ಎನ್ನ ಪಾಪ ದೂರ ದಿರದಿರು ಹರಿಸಪ್ತ ದ್ವೀಪಾಧಿಪ ಸಿರಿಪತಿ ಭಕ್ತ ಸಲ್ಲಾಪ ಆಹ ಕರಣಶುದ್ಧನ ಮಾಡಿ ಕರೆಯೊ ನಿನ್ನ ಬಳಿಗೆ ನರಕಂಠೀರವ ದೇವ ಚರಣ ಆಶ್ರೈಸಿದೆ 2 ಶರಣ ಪಾಲಕನೆಂಬೊ ಬಿರುದು ಕೇಳಿ ತ್ವರಿತದಿ ಬಂದೆನೊ ಅರಿದು ಇನ್ನು ಪರಿ ಅಪರಾಧ ಜರಿದು ಪರತರನೆ ನೋಡೆನ್ನ ಕಣ್ತೆರೆದು ಆಹ ಮರಣ ಜನನಂಗಳ ತರಿದು ಬಿಸುಟು ನಿನ್ನ ಶರಣರ ಸಂಗದಲ್ಲಿರಿಸಿ ಉದ್ಧರಿಸೆನ್ನ 3 ಸಂಸಾರ ಸಾಗರ ದೊಳಗೆ ಎನ್ನ ಹಿಂಸೆ ಮಾಡುವರೇನೊ ಹೀಂಗೆ ನಾನು ಕಂಸಾರಿ ಅನ್ಯರಿಗೆ ಬಾಗೆ ಮತ್ತೆ ಸಂಶಯವಿಲ್ಲ ಮಾತಿಗೆ ಆಹ ಹಂಸ ಡಿಬಿಕರನ್ನು ಧ್ವಂಸ ಮಾಡಿದ ಶೌರಿ ಮೂರ್ತಿ ದಿವಸ ದಿವಸದಲ್ಲಿ 4 ಭವ ಶಕ್ರಾದ್ಯಮರ ಕೈಯ ನಿರುತ ತುತಿಸಿಕೊಂಬ ಧೀರ ಶುಭ ಪರಿಪೂರ್ಣ ಗುಣ ಪಾರಾವರ ಭಕ್ತ ವಾರಿನಿಧಿಗೆ ಚಂದಿರ ಆಹ ಸ್ಮರನ ಕಾಂತಿಯ ನಿರಾಕರಿಸುವ ತೇಜನೆ ಎರವು ಮಾಡದೆ ಹೃತ್ಸರಸಿಜದೊಳು ತೋರಿ 5 ಮೊದಲು ಮತ್ಸ್ಯಾವತಾರದಿ ವೇದ ವಿಧಿಗೆ ತಂದಿತ್ತ ವಿನೋದಿ ಶ ರಧಿಯೊಳು ಸುರರಿಗೋಸ್ಕರದಿ ನೀನು ಸುಧೆಯ ಸಾಧಿಸಿ ಉಣಿಸಿದೆ ಆಹ ಅದುಭೂತ ಭೂಮಿಯ ತೆಗೆದೊಯ್ದುವನ ಕೊಂಡು ಮುದದಿ ಹಿರಣ್ಯಕನುದರ ಬಗಿದ ಧೀರ 6 ಬಲಿಯ ಮನೆಗೆ ಪೋಗಿ ದಾನ ಬೇಡಿ ತುಳಿದೆ ಪಾತಾಳಕ್ಕೆ ಅವನ ಪೆತ್ತ ವಳ ಶಿರ ತರಿದ ಪ್ರವೀಣ ನಿನ್ನ ಬಲಕೆಣೆಗಾಣೆ ರಾವಣನ ಆಹ ತಲೆಯನಿಳುಹಿ ಯದುಕುಲದಿ ಜನಿಸಿ ನೀನು ಲಲನೇರ ವ್ರÀ್ರತವಳಿದಾಶ್ವಾರೂಢನೆ 7 ಮಾನಸ ಪೂಜೆಯ ನೀ ದಯದಿ ಇತ್ತು ಶ್ರೀನಾಥ ಕಳೆ ಭವವ್ಯಾಧಿ ಕಾಯೋ ಅನಾಥ ಬಂಧು ಸುಮೋದಿ ಚತುರಾ ನನಪಿತ ಕೃಪಾಂಬುಧಿ ಆಹ ತಾನೊಬ್ಬರನರಿಯೆ ದಾನ ವಿಲೋಲನೆ ಏನು ಮಾಡುವ ಸಾಧನ ನಿನ್ನದೊ ಹರಿ8 ನಿನ್ನ ಸಂಕಲ್ಪವಲ್ಲದೆ ಇನ್ನು ಅನ್ಯಥಾವಾಗಬಲ್ಲುದೆ ಹೀಂಗೆ ಚೆನ್ನಾಗಿ ನಾ ತಿಳಿಯದೆ ಮಂದ ಮಾನವನಾಗಿ ಬಾಳಿದೆ ಆಹ ಎನ್ನಪರಾಧವ ಇನ್ನು ನೀ ನೋಡದೆ ಮನ್ನಿಸಿ ಕಾಯೋ ಜಗನ್ನಾಥ ವಿಠಲ 9
--------------
ಜಗನ್ನಾಥದಾಸರು
ಪಾಲಿಸೊ ಮನ್ಮಾನಸಾ | ಮಂದಿರಶ್ರೀಲೋಲ ಭಕ್ತ ಪೋಷ ಪ ಭಂಜನ ರಾಮ | ಗಾಳಿ ಸುತಗೆ ಪ್ರೇಮ ಅ.ಪ. ದೈತ್ಯ ಜನರು ಬಹಳಾ | ಎನ್ನ ತಮ್ಮಭೃತ್ಯನ ಮಾಡಿ ಜಗಳಾ ||ನಿತ್ಯವಾಡುತಲೆನ್ನ | ಕೃತ್ಯಾಗಳಿಗೆ ದೋಷಎತ್ತಿಸುತಿಹರಯ್ಯ ದೈತ್ಯ ನಿಷೂದನ 1 ಸಂಚೀತಾಗಾಮಿ ನಾಶಾ | ಗೈ ಭವವಂಚೀತನಿಹೆ ಶ್ರೀಶಾ ||ಹೆಂಚು ಹಾಟಕ ಸಮ | ಸಂಚಿಂತನೆಯ ಕೊಟ್ಟುಕೊಂಚ ಮತಿಯ ಕಳೆ | ವಾಂಛಿತಾರ್ಥದ ಹರಿ 2 ಜನ್ಮಾಜನ್ಮವು ಬರಲೀ | ತವಸ್ಮøತಿಕರ್ಮಾಕರ್ಮದೊಳಿರಲೀ ||ಭರ್ಮ ಗರ್ಭನಯ್ಯ | ಸುಮ್ಮನಸರ ಪ್ರೀಯನಿರ್ಮಲ ಭಕ್ತಿಯಿತ್ತು | ಹಮ್ರ್ಯದೊಳಗೆ ತೋರೊ 3 ಸುರರು ಭೋಕ್ತ ಭಂಜನ ಭವ 4 ಭವ ಭವ | ಕಾರುಣ್ಯಾತ್ಮಕ ದೇವ 5
--------------
ಗುರುಗೋವಿಂದವಿಠಲರು
ಪಾಲಿಸೊ ಶ್ರೀನಿವಾಸ ಪಾಲಿಸೊ ಶ್ರೀನಿವಾಸ ಪಾಲಾಬ್ಧಿಶಯನ ಕಾಪಾಲಿಯ ಕಾಯ್ದ ಗೋ ಪಾಲ ಹರಿ ವಿಶ್ವರೂಪ ಲೋಕಾಧೀಶ ಪಾಲಯವಾಗೆನ್ನ ಪಾಲಿಲಿದ್ದ ಶಿಶುಪಾಲಕ ಎನ್ನ ಕಾಯನ್ನಾ ಪ ಮನೆ ನಿನಗಾಗಿ ದೇಹಾ ಸುಮ್ಮನೆ ಪೇಳುವುದಿಲ್ಲ ಹ ಮ್ಮನೆ ಬಿಡಿಸುವುದು ಘಮ್ಮನೆ ಬಂದು ಒಲಿದು ನಿ ಮ್ಮನೆ ಭಕ್ತರ ಕೂಡ ನೆಮ್ಮನೆ ಕೊಟ್ಟ ಬಲನ ತ ಮ್ಮನೆ ನಡಿಸುವುದು ತಿಮ್ಮನೆ ಅಜಿತಾನಂತ ನಾ ಸಾರ್ವಭೌಮನೆಯಾಗಿ ಪುಟ್ಟಿ ಭೀ ಮನೆ ಗುರು ನಿತ್ಯಾ ಸಮನೆ ಎಂದು ಪೇಳಿದಾ ಮನೆಯಲ್ಲಿ ಇಡು ಮಾಮನೆಯುಳ್ಳಾ ಮಹಿಮನೆ ವೆಂಕಟೇಶಾ1 ಮನ ದುರ್ವಿಷಯಕೆ ಗಮನವಾಗಿ ಪೋಗುತಿದೆ ಕಾಮನ ಸಂಬಂಧವುಪಶಮನ ಮಾಡು ಬೇಗ ಸುಧಾ ಮನ ಮಿತ್ರ ಪವಿತ್ರ ಸುಮ್ಮನಸಕೊಡಿಯಾ ವಾ ಮನ ಮೂರುತಿಯೆ ಮನಸಂಹಾರ ಬಮ್ಮನ ಬಿಡಿಸಿದಾ ಹಿ ಮನ ಭಾವನೆ ನಿನ್ನ ಮನನಾದಿ ದಿನಯಸ್ತ ಪರಿಯಂತ ನೇಮನ ಚಿಂತಿಸುವಂತೆ2 ಜನನ ಮರಣ ಶೂನ್ಯಾ ಜನಕಾದ್ಯನಂತಗಂಗ ಜನಕಾಯಿದಾನಾದಿ ದೈವ ಅ ಜನನಯ್ಯ ಸ್ವರ್ಣ ಕಾಯಂ ಜಿನೆ ಪುತ್ರಪ್ರಿಯ್ಯಾ ದುಷ್ಟ ಜನಮರ್ದನಾ ಬಲು ಯೋಜನ ಮೆರೆವ ದೇವ ಸು ಜನಪಾಲ ಗುಣಶೀಲಾ ಜನುಮ ಜನುಮಕ್ಕು - ಜನಮತಿ ಕಳೆದು ರಂ ಜನವಾದಾ ಜ್ಞಾನ ಪುಂಜಿನ ಮಾಡು ದನುಜ ಭಂ ನಿರಂಜನ ನಿರ್ಮಳ ಅಂಜನ ಗಿರಿವಾಸಾ 3
--------------
ವಿಜಯದಾಸ
ಪಾಲಿಸೋ | ಪಾವ9ತಿಯ ಪ್ರಾಣೇಶ | ಪಾಲಿಸೋ ಪ ಪಾಲಿಸೆಮ್ಮನು ಪಶುಪತಿಯೆ | ನಿಜ | ಬಾಲಾಕ9 ಕೋಟಿದೀಧಿತಿಯೆ | (ನಮ್ಮ) | ಏಳಿಗೆಗೊಳಿಪ ಸದ್ಗತಿಯೆ ಎಂಬು || ಮೂಲ ಮೂರುತಿ ಸರ್ವಕಾಲಕಾಲನೆ ತ್ರೀ || ಶೂಲವ ಪಿಡಿದೆನ್ನ ಆಲಸ್ಯ ತ್ಯಜಿಸಿನ್ನು 1 ಪ್ರಮಥ ಪ್ರಜಾಪ್ರಭೂದಾರ | ಧರ್ಮ | ದ್ರುಮ ಸುಮನಸರಿಗಾಧಾರ |ಜಗ | ತ್ಕ್ರಮಜಳಿಂತೆನುವ ವಿಚಾರ | ಸ್ವಾಮಿ | ನಮಿಸಿ ಕೇಳುವೆ ಸವ9ಸಾರ | ಆಹಾ || ಗಾತ್ರ | ದ್ಯುಮಣಿಸನ್ನುತ ನಮೋ | ನಮೋಯೆಂಬೆ ಜಯ ಶಂಭೋ 2 ಶರಣವತ್ಸಲ ಮೃತ್ಯುಂಜಯನೆ | ನಿನ್ನ | ಮರೆಯ ಹೊಕ್ಕೆನು ಕಾಲಾಂತಕನೆ | ಎನ್ನ | ಕರುಣದಿ ಸಲಹೊ ಶಂಕರನೆ | ಶಿರ- ವೆರಗಿ ಬೇಡುವೆ ದಯಾಪರನೆ | ದೇವ || ಕರುಣಾಸಾಗರ ನಿನ್ನ | ತರಳನಾಗಿದೆ9ನ್ನ | ಪರ ಗುರುರಾಯನೆ 3
--------------
ಸದಾನಂದರು
ಪಾಲಿಸೋ ಹರಿ ಪಾಲಿಸೋ ಫಾಲನಯನಸಖ ಭಕ್ತಾಂತರಾತ್ಮಕ ಪ ಪಾಲಿಸು ಫಲ ಸುಪ್ರದಾತ ಮೊರೆ ಪಾಲಿಸು ಸುಜನನ್ನುತ ಖರೆ ಪಾಲಿಸು ಸತತ ವಿಖ್ಯಾತ ದೊರೆ ಪಾಲಿಸು ನುತರ ಸಂಪ್ರೀತ ಆಹ ಪಾಲ ಪಾವನಗಾತ್ರ ಪಾಲತ್ರಿಜಗಸ್ತೋತ್ರ ಪಾಲಿಸು ಕೃಪಾನೇತ್ರ ಪಾಲಪಾವನಯಾತ್ರ 1 ಕೊರಳ ಕೌಸ್ತುಭಮಣಿಮಾಲ ಬಹು ಕಾಲ ಮಹ ಕರುಣದೊರದಿ ಸುರಜಾಲ ಬಹು ಪ್ರಳಯ ಗೆಲಿದಿ ತೋರಿ ಲೀಲಾ ಆಹ ಹರಣಜನರಮರಣ ಕರುಣ ಭರಣಪೂರ್ಣ ಶರಣಜನರ ಪ್ರಾಣ ಮರಣ ಗೆಲಿಸುವ ತ್ರಾಣ 2 ನಿತ್ಯ ನಿಮ್ಮಯ ನಿಜಭಕ್ತಿ ನೀಡು ನಿತ್ಯ ನಿಮ್ಮಯ ನಿಜಸ್ತುತಿ ನೀಡು ನಿತ್ಯ ನಿಮ್ಮಯ ನಿಜಮತಿ ನೀಡು ನಿತ್ಯ ನಿರ್ಮಲ ನಿಜಮುಕ್ತಿ ಆಹ ನಿತ್ಯನಿರ್ಮಲ ರಾಮ ನಿತ್ಯನಿರ್ಮಲ ನಿಮ್ಮ ನಿತ್ಯನಿರ್ಮಲ ಪ್ರೇಮ ನಿತ್ಯನಿರ್ಮಲ ನಾಮ 3
--------------
ರಾಮದಾಸರು
ಪಾವನಕರ ನಾಮಾ ಪರಮ ಪುರುಷ ರಾಮಾ ಪ ದೇವೋತ್ತಮ ಸಾರ್ವಭೌಮ | ದಾನವಕುಲ ಭೀಮ ಅ.ಪ ನಿಗಮಾಗಮ ಪರಿಪೂರಣ | ಸುಗುಣಾಕರ ಮುನಿತೋಷಣ ಖಗಮಾನಸ ಮಣಿಭೂಷಣ | ಸುರನರಶರಣಾ 1 ಜಗಜೀವನ ಲಯಕಾರಣ | ಪವನಾತ್ಮಜ ಕರುಣಾ ಸುಗುಣಾಕರ ಭವತಾರಣ | ಮಾಂಗಿರೀಶ ಕಮಲಚರಣ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಪಾಹಿಮಾಂ ಪರಮೇಶ ಪಾಹಿಪನ್ನಗಭೂಷ ಪಾಹಿಕೈಲಾಸವಾಸ ಪ ಸ್ವಾಮಿ ಗಿರಿಜಾನಾಥ ಸಮರ ವಿಜಯ ತ್ರಿಣೇತ್ರ ಸುಜನ ವಿನುತ ಕಾಮಿತಾರ್ಥ ಪ್ರದಾತ ಕ್ಷೇಮತರ ಸುಚರಿತ್ರ ಸಾಮಗಜ ವದನ ತಾತರಾಮೇಶ ಕೇಶಪುನೀತ ಪ್ರಖ್ಯಾತ 1 ಕಾಲ ಭಾಳಾಕ್ಷಭಯ ಸಂಹಾರ ಜನಸಾರ ಶೂಲಧರ ಕರುಣಾಕರ ಶೀಲವರಗುಣ ಸುಂದರ ಹರಪಾಶ ಭಯವಶಂಕರ ಓಂಕಾರ 2 ಬಲಸಾಕಾರತ ವಿಶಾಲ ಏಕಮಯ ತ್ರಿಗುಣದಿಂದ ಖಿಲಲೋಕ ವಿಸೂತ್ರ ಜಾಲ ಸಾಕೆನ್ನ ಭವದಳಲ ಶೋಕವನು ನೀಕೇಳದೇಕೆ ಈ ಚೇಷ್ಟೆಬಹಳ ಕಾಲ ಮೂಕಾಂಬಿಕಾಂಬಲೋಲ3 ನಾಗವಾಹನ ನಮಿತನೆ ಯೋಗಮಾಯಾತೀತನೆ ಸಾಗರಾಂಬರದೊಡೆಯನೆ ಭಾಗವತ ಭಾಗಚಂದಿರಧರನೆ ಹರನೆ 4 ಧರಣಿಯೊಳಗೆ ವಿಶೇಷತರ ಗೌಜದೊಳುವಾಸ ವರಋಷಿ ಸ್ಥಾಪನೇಶ ಸರಸಕೀರ್ತಿ ವಿಲಾಸ ಸ್ಮರಹರ ಸುರಾಧ್ಯಕ್ಷ ದುರಳ ದಾನವ ವಿನಾಶ ದುರಿತಹರ ನಿರ್ದೋಶ ಧರಣಿ ಸುರಜನರಕ್ಷ ಕರಿಚರ್ಮಧರಮಹೇಶ ಉರಗರಾಜ ವಿಭೂಷವರ ಗುರು ವಿರೂಪಾಕ್ಷ ಪುರಮಥನ ಗೌತಮೇಶ 5
--------------
ಕವಿ ಪರಮದೇವದಾಸರು
ಪಾಹಿಮಾಂ ರಾಮಚಂದ್ರ ಅಚಲಾಂ ಭಕ್ತಿಂ ದೇಹಿ ಕಲ್ಯಾಣಸಾಂದ್ರ ಪ. ಶ್ರೀಹರಿ ನಾಗಾರಿವಾಹನ ಶ್ಯಾಮಲ- ದೇಹ ರಾಕ್ಷಸ ಸಮೂಹ ವಿದಾರಕ ಅ.ಪ. ಸಜ್ಜನ ಕಲ್ಪವೃಕ್ಷ ಪಾಪಾಂಕುರ- ಭರ್ಜನ ವಿಬುಧಪಕ್ಷ ಧೂರ್ಜಟಿಸಖ ದೂಷಣಾರಿ ದ್ಯುಮಣಿಕೋಟಿ- ಪ್ರಜ್ವಲಿಪ ಪರಮ ಜಗಜ್ಜೀವನಧಾಮ ಪೂರ್ಣಬ್ರಹ್ಮ ರಘುವಂ- ಜಯಾಕಾಂತ ಪ್ರಭುವೆ 1 ವರಾಹ ಪ್ರ- ಹ್ಲಾದವರದ ಗುಣಧಾಮ ಸಾಧುವಟುವೇಷವಿನೋದ ಭಾರ್ಗವ ಬಹು ಕ್ರೋಧಿ ಕ್ಷತ್ರಿಯಕುಲ ಭೇದಿ ರಾವಣಾಂತಕ ಕುವಾದಿಜನದುರ್ಬೋಧಬದ್ಧವಿ- ಶ್ರೀಧರ ರಮಾಮೋದಮಾನಸ 2 ಕಾಶಿಮಠಸ್ಥ ಯತಿ ಪರಂಪರ್ಯ- ಭೂಷಣ ಶುದ್ಧಮತಿ ಶ್ರೀ ಸುಕೃತೇಂದ್ರ ಸನ್ಯಾಸಿ ಪೂಜಿತಪಾದ ವಾಸುದೇವ ತವ ದಾಸ್ಯವ ಪಾಲಿಸು ಸುಭದ್ರ ಶ್ರವಣ ಪ- ಭವ ರುಗ್ಭೇಷಜನೆ ನರಕೇಸರಿಯೆ ಶ್ರೀ ವ್ಯಾಸ ರಘುಪತಿ 3 ಪಾರಗಾಣರು ನಿನ್ನಯ ಬ್ರಹ್ಮಾದ್ಯರು ಭೂರಿಗುಣದ ಮಹಿಮೆಯ ಸೂರಿಜನಪ್ರೀತ ಸೀತಾನಯನ ಚ- ಕೋರಚಂದ್ರನು ಮಹೋದಾರ ಶಾಙ್ರ್ಗಧರ ಮೀರಣಾತ್ಮಜವರದ ನತಮಂದಾರ ಕೈರವಶ್ಯಾಮ ರಾಮನ 4 ಪ್ರಣವರೂಪ ನಿರ್ಲೇಪ ನಿತ್ಯಾತ್ಮದು- ರ್ಜನವನೋದ್ದಹನೋದ್ದೀಪ ಮನುಕುಲಮಣಿ ಮುನಿಗಣ ಸಮಾಹಿತ ಜನಾ- ರ್ದನ ಬ್ರಹ್ಮಾದ್ಯಖಿಳ ಚೇತನರು ನಿನ್ನಾಧೀನ ಚಿದಾನಂದೈಕ ದೇಹನೆ ಭಕುತಿ ಭಾಗ್ಯವನು ಪಾಲಿಸು 5
--------------
ತುಪಾಕಿ ವೆಂಕಟರಮಣಾಚಾರ್ಯ
ಪಿಡಿದೆತ್ತೊ ಕೈಯ್ಯಾ ಕೃಷ್ಣಯ್ಯ ಪ ಪಿಡಿದೆತ್ತೊ ಕೈಯ್ಯಾ ಪಾಲ್ಗಡಲೊಡೆಯನೆ ಭವ ಕಡಲಿನೊಳಗೆ ಬಿದ್ದು ಬಾಯ್ಬಿಡುವೆ ಬೇಗದಿ ಬಂದು ಅ.ಪ ತಾವರೆನಾಭಾ ಕಾವದÀು | ಎನ್ನ ಜೀವನಲಾಭಾ ಶ್ರೀವ್ಯಾಸಮುನಿಗೊಲಿದವ | ನೆಂದರಿತು ಬಂದೆ ಶ್ರೀವೇಣುಗೋಪಾಲಕೃಷ್ಣ | ಗೋವಳರೊಡೆಯ ಭಾವ ಭಕುತಿಗಳೊಂದನರಿಯೆನು ಹೇವವಿಲ್ಲದೆ ದಿನವ ಕಳೆದೆನು ಸಾವಧಾನವ ಮಾಡಲಾಗದು ಶ್ರೀವರನೇ ನವವಿಧ ಭಕುತಿ ನೀಡುತ 1 ಅನುಮಾನವ್ಯಾಕೆ | ನೀನೆ ಗತಿ ಎನುವೆನು ಬಲ್ಲಿ ಅನುದಿನ ಸೇವಿಪೆ ಅನಘನೆ | ಎನ್ನಘ ಗಣನೆ ಮಾಡದೆ ಮುನ್ನ ಅನುವಾಗಿ ಪಾಲಿಸೊ ಮಾನವೇದ್ಯನೆ ಮನದಿ ನಿರ ತನುದಿನದಿ ನಿನ್ನಯ ಧ್ಯಾನವಿತ್ತು ಮನೋವಿಷಾದವನಳಿಯೆ ನಿನ್ನನು ಮರೆಯೆನುಪಕೃತಿ ಸತತ ಸ್ಮರಿಸುವೆ 2 ಶ್ರೀ ನರಹರಿಯೆ ಭಕುತಜನ | ವನಜದಿನಮಣಿಯೆ ಸಾನುರಾಗದಿ ಕೇಳ್ವೆ | ಹನುಮನ ಮತದಲ್ಲಿ ಅನುಚಾದ ಜ್ಞಾನವ | ಕನಸಿನಲಿ ಮನಸಿನಲಿ ಜನನಿ ಜನಕ ತನುಜೆ ವನಿತೆಯಾ ತನುವಿನಲಿ ನೆಲೆಸಿರುವ ಭ್ರಾಂತಿಯ ಹೀನಗೈಸಿ ಮನೋಭಿಲಾಷೆಯ ಭಾರ ನಿನ್ನದು 3
--------------
ಪ್ರದ್ಯುಮ್ನತೀರ್ಥರು
ಪೀಠಸಮರ್ಪಣೆಕಂ|| ಮಾನಸ ಪೂಜೆಯ ವಿರಚಿಸಿಶ್ರೀನಿಲಯನ ಚರಣಗಳಿಗೆ ಪಾವುಗೆಗಳ ನಾಂಆನತನಾಗುತಲೊಪ್ಪಿಸಿಭಾನುವಿನ ಪಥದಲಿಳುಹಿ ಬಿಂಬದಿ ಭಜಿಪೆಂಬಂದೀ ಪೀಠದಿ ನೆಲಸೊ ಹೃÀದಯಮಂದಿರದಿಂದಾ ಕರುಣದಿಂ ವೆಂಕಟರಾಯಾ ಪಪುರದೊಳು ವಿಮಲೆಯುತ್ಕುರುಷಣಿಯಗ್ನಿ ಯೊಳಿರುವಳು ಜ್ಞಾನೆ ದಕ್ಷಿಣದೇಶದಿನಿರುರುತಿಯೊಳು ಕ್ರಿಯೆ ವರುಣನೊಳ್ಯೋಗಾಖ್ಯೆಮರುತನೊಳ್ಪ್ರಹ್ವಿ ಸೋಮನೊಳ್ ಸತ್ಯೆುಹಳಾಗಿ 1ಈಶನೊಳೀಶಾನೆ ಮಧ್ಯದೊಳನುಗ್ರಹೋಪಾಸಿಕೆಯಾದಿಯಾಗಿರುತಿಹರುವಾಸುದೇವನೆ ನಮ್ಮನೊಲಿದು ರಕ್ಷಿಸುವರೆಸಾಸಿರ ನಾಮಸನ್ನುತನೆ ಸಂತಸದಿಂದ 2ಅನಲನೊಳ್ ಧರ್ಮ ನಿರುರುತಿಯೊಳ್ ಜ್ಞಾನವುತನುಗೊಂಡು ವೈರಾಗ್ಯ ಮರುತನೊಳುವಿನಯದಿಂದೈಶ್ವರ್ಯನೀಶದೇಶದಿ ಸೇವೆಗನುಕೂಲರಾಗಿ ಕಾದಿರುವರೆನ್ನೊಡೆಯನೆ 3ಮುಂದೆಯಧರ್ಮ ದಕ್ಷಿಣದೊಳಜ್ಞಾನವುಹಿಂದೆಡೆಯೊಳಗವೈರಾಗ್ಯ ತಾನುಇಂದುದೇಶದೊಳನೈಶ್ವರ್ಯನೊಂದಿರುವನುಇಂದೆಮ್ಮನೊಲಿದು ರಕ್ಷಿಸಲು ಗೋವಿಂದನೆ 4ಕಲಶದೊಳ್ ಗಂಗಾದಿ ನದಿಗಳು ಶಂಖದಜಲದೊಳು ಬ್ರಹ್ಮಾದಿಗಳ ತೀರ್ಥಸಂಘವುಒಲಿದಘ್ರ್ಯ ಪಾದ್ಯಾಚಮನ ಸ್ನಾನ ಶುದ್ಧಾಂಬುಗಳ ಪಂಚಪಾತ್ರೆಗಳೊಳು ನೆಲಸಿವೆ ಸ್ವಾಮಿ 5ಪುರುಷಸೂಕ್ತದಿಂದೆನ್ನ ಶರೀರದೊಳ್ಪೂಜಿಪವರಬಿಂಬದೊಳು ನ್ಯಾಸಗೈದಿಹೆನುಪರಮ ಮಂತ್ರಾಧಿದೇವತೆಗಳನೆಂಟು ಪನ್ನೆರಡಕ್ಕರದ ವಿದ್ಯೆುಂದಲು ಜಗದೀಶ 6ಗುರುವಾಸುದೇವಾರ್ಯರೂಪದಿ ಶ್ರೀರಂಗಪುರದ ಕಾವೇರಿ ತೀರದೋಳು ನೀನೆಕರುಣಿಸಿದತಿ ಗೋಪ್ಯ ಮಾರ್ಗದಿಂದರ್ಚಿಪೆತಿರುಪತಿ ಕ್ಷೇತ್ರದ ದೊರೆಯೆ ವೆಂಕಟರಾಯ 7ಓಂ ನಂದಗೋಪಪ್ರಿಯಾತ್ಮಜಾಯ ನಮಃ
--------------
ತಿಮ್ಮಪ್ಪದಾಸರು
ಪುಟ್ಟಿದನು ಜಗದೀಶ | ಜಗಭಾರ ನೀಗಲುವೃಷ್ಣಿಕುಲದಲಿ ಈಶ | ದೇವಕಿಯ ಜಠರದಿಕೊಟ್ಟು ಅವಳಿಗೆ ಹರ್ಷ | ಕರುಣಾಬ್ದಿ ಭೇಶ ಪ ಅಟ್ಟಹಾಸದಿ ದೇವದುಂದುಭಿ | ಶ್ರೇಷ್ಠವಾದ್ಯಗಳೆಲ್ಲ ಮೊಳಗಲುಅಷ್ಟಮಿಯ ದಿನದಲ್ಲಿ ಬಲು ಉ | ತ್ಕøಷ್ಟದಲ್ಲಿರೆ ಗ್ರಹಗಳೆಲ್ಲವು ಅ.ಪ. ಪರಿ ದೇ-ವಕ್ಕಿಯಲಿ ಉದ್ಭವಿಸೀ | ಸಜ್ಜನರ ಹರ್ಷೀಸಿ ||ವಕ್ರಮನದವನಾದ ಕಂಸನು | ಕಕ್ಕಸವ ಬಡಿಸುವನು ಎನುತಲಿನಕ್ರಹರ ಪ್ರಾರ್ಥಿತನು ದೇ | ವಕ್ಕಿ ವಸುದೇವರಿಂದಲಿ 1 ದೇವ ಶಿಶುತನ ತಾಳೀ | ನಗುಮೊಗವ ತೋರಲುದೇವ ವಾಣಿಯ ಕೇಳೀ | ಅನುಸರಿಸಿ ಆದ ವಸುದೇವ ತನಯನ ಕೈಲೀ | ಕೊಂಡಾಗ ಬಂಧನಭಾವ ಕಳಚಿತು ಕೇಳೀ | ಶ್ರೀ ಹರಿಯ ಲೀಲೇ ||ಪ್ರಾವಹಿದ ಸರಿದ್ಯಮುನೆ ವೇಗದಿ | ಭಾವ ತಿಳಿಯುತ ಮಾರ್ಗವೀಯಲುಧೀವರನು ದಾಟುತಲಿ ಶಿಶು ಭಾವದವನನ ಗೋಪಿಗಿತ್ತನು 2 ವಿಭವ ||ತಂದು ಶಿಶು ಸ್ತ್ರೀಯಾಗಿ ಮಲಗಿರೆ | ಬಂದು ಕಂಸನು ಕೈಲಿ ಕೊಳ್ಳುತಕಂದನಸು ಹರಣಕ್ಕೆ ಯತ್ನಿಸೆ | ಬಾಂದಳಕ್ಕದು ಹಾರಿ ಪೇಳಿತು 3 ದುರುಳ ಭಯವನೆ ಪೊಂದಿ ತೆರಳುತತರಳರಸುಗಳ ನೀಗ ತನ್ನಯ | ಪರಿಜನಕೆ ಅಜ್ಞಾಪಿಸಿದ ಕಂಸ 4 ಆರೊಂದನೆಯ ದಿನದಿ | ಗೋಕುಲಕೆ ಬಂದಳುಕ್ರೂರಿ ಪೂಥಣಿ ವಿಷದಿ | ಪೂರಿತದ ಸ್ತನ ಕೊಡೆಹೀರಿ ಅವಳಸು ಭರದಿ | ಮೂರೊಂದು ಮಾಸಕೆಭಾರಿ ಶಕಟನ ಮುದದಿ | ಒದೆದಳಿದೆ ನಿಜಪದದಿ ||ಮಾರಿ ಪೂಥಣಿ ತನುವನಾಶ್ರಿತ | ಊರ್ವಶಿಯ ಶಾಪವನೆ ಕಳೆಯುತಪೋರ ಆಕಳಿಸುತ್ತ ಮಾತೆಗೆ | ತೋರಿದನು ತವ ವಿಶ್ವರೂಪ 5 ಭಂಜನ ||ಪಾನಗೈಯ್ಯುತ ದಾನ ವನ್ಹಿಯೆ | ಹನನ ವಿಷತರುರೂಪಿ ದೈತ್ಯನ ಧೇನುಕಾಸುರ ಮಥನ ಅಂತೆಯೆ | ಹನನ ಬಲದಿಂದಾ ಪ್ರಲಂಬನು6 ಪರಿ ಗೋವರ್ಧನ | ಶಂಖ ಚೂಡನ ಶಿರಮಣಿಯು ಬಲು ಅಪಹರಣ | ಅರಿಷ್ಟಾಸುರ ಹನನ ||ಹನನಗೈಯ್ಯಲು ಕೇಶಿ ಅಸುರನ | ಘನಸುವ್ಯೋಮಾಸುರನ ಅಂತೆಯೆ ಮನದಿ ಯೋಚಿಸಿ ಕಂಸ ಕಳುಹಿದ | ದಾನ ಪತಿಯನು ಹರಿಯ ಬಳಿಗೆ 7 ಬಲ್ಲ ಮಹಿಮೆಯ ಹರಿಯ | ಅಕ್ರೂರ ವಂದಿಸಿಬಿಲ್ಲಹಬ್ಬಕೆ ಕರೆಯ | ತಾನೀಯೆ ಕೃಷ್ಣನುಎಲ್ಲ ತಿಳಿಯುತ ನೆಲೆಯ | ಪರಿವಾರ ಸಹಿತದಿಚೆಲ್ವ ರಥದಲಿ ಗೆಳೆಯ | ಅಕ್ರೂರ ಬಳಿಯ ||ಕುಳ್ಳಿರುತ ಶಿರಿ ಕೃಷ್ಣ ತೆರಳುತ | ಅಲ್ಲಿ ಯಮುನೆಲಿ ಸ್ನಾನ ವ್ಯಾಜದಿ ಚೆಲ್ವತನ ರೂಪಗಳ ತೋರುತ | ಹಲ್ಲೆಗೈದನು ಗೆಳೆಯ ಮನವನು 8 ಬವರ | ಗೈವುದಕೆ ಬರ ಹರಿಹಲ್ಲು ಮುರಿಯುತ ಅದರ | ಸಂಹರಿಸಿ ಬಿಸುಡಲುಮಲ್ಲ ಬರೆ ಚಾಣೂರ | ಹೂಡಿದನು ಸಂಗರ ||ಚೆಲ್ವ ಕೃಷ್ಣನು ತೋರಿ ವಿಧ್ಯೆಯ | ಮಲ್ಲನನು ಸಂಹರಿಸುತಿರಲು ಬಲ್ಲಿದನು ಬಲರಾಮ ಮುಷ್ಟಿಕ | ಮಲ್ಲನನು ಹುಡಿಗೈದು ಬಿಸುಟನು 9 ಜಲಧಿ | ಆವರಿಸಿ ಬರುತಿರೆಹರಿಯ ಬಲ ಸಹ ಭರದಿ | ಸಂಹರಿಸಿ ಅವರನುಕರಿಯ ವೈರಿಯ ತೆರದಿ | ಹಾರುತಲಿ ಮಂಚಿಕೆಲಿರುವ ಕಂಸನ ಶಿರದಿ | ಪದಮೆಟ್ಟಿ ಶಿಖೆ ಪಿಡದಿ ||ಗರುಡನುರಗನ ಪಿಡಿದು ಕೊಲ್ಲುವ | ತೆರದಿ ಕೃಷ್ಣನು ಪಿಡಿದ ಕಂಸನ ಕರದಿ ಖಡ್ಗದಿ ಶಿರವ ನಿಳುಹಲು | ನೆರೆದ ಸುಜನರು ಮೋದಪಟ್ಟರು 10 ಮಂದ ಮೋದ ಪಡಿಸುವ 11
--------------
ಗುರುಗೋವಿಂದವಿಠಲರು
ಪುಟ್ಟಿಸಿದ್ದೇನು ಕಾರಣವೋ ಸೃಷ್ಟಿಗೋಡೆಯಾ ಪ. ಶ್ರೀಕೃಷ್ಣ ಮೂರುತಿವೊಂದಿಷ್ಟು ತಿಳಿಯದೋ ಮಾಯಾ ಜೀಯಾ ಅ.ಪ. ಆವಾವ ಸಾಧನವಾಗಲಿಲ್ಲಾ ಯನ್ನಿಂದ ಶ್ರೀದೇವಾ ಕರವ ಬಿಡುವುದುಚಿತವೇನು ಮಾಧವಾ ನಿನ್ನ ಮನದಣಿಯ ನೋಡಾದೆ ಹಾಗಾದೆ 1 ಹರಿಮೂರ್ತಿ ನೋಡಲೊಲ್ಲಾದು ಯನ್ನಮನವು ಪರಪುರುಷರ ನೋಡಿತು ಮನಸು ಹೊಲೆಗೆಡಿಸಿತು ಪುರುಷೋತ್ತಮನ ಮರಿತಿತು 2 ಹರಕಥಾ ಶ್ರವಣ ಕೇಳದು ಎನ್ನ ಕರ್ಣಂಗಳು ಪರವಾರ್ತೆಗೆ ಹೊತ್ತು ಸಾಲದು ಸರ್ವೋತ್ತಮನೆ ನಿನ್ನ ಮರೆತೆನು ಉನ್ಮತ್ತಳಾದೆ 3 ಹರಿನಿರ್ಮಾಲ್ಯವ ಕೊಳ್ಳದು ಯನ್ನ ಮೂಗು ಪರಪುರುಷರಾ ಮೈಗಂಧವಾ ಆಘ್ರಾಣಿಸುವುದು ನಿನ್ನ ನಾಮ ಸ್ಮರಣೆಯನು ಮರೆತೆನು 4 ಹರಿಯಾತ್ರೆಯಾ ಮಾಡಲಿಲ್ಲ ಯನ್ನ ಕಾಲು ಜಾರಸ್ತ್ರೀಯರ ಮನೆಮನೆ ತಿರುಗುವೆನು ಪರಿ ನೀಯನ್ನ ಮರೆಯುವುದುಚಿತವೆ 5 ಎನ್ನ ಇಂದ್ರಿಯಗಳು ಈ ಪರಿವ್ಯರ್ಥವಾಯಿತು ಸಾರ್ಥವಾಗಲಿಲ್ಲ ಪಾರ್ಥಸಾರಥಿ ನಿನ್ನ ನೋಡಿ ಪವಿತ್ರಳಾಗಲಿಲ್ಲ ಏಕಿನ್ನ ಈ ಪರಿಯ ಮರುಳು ಮಾಡುವಿದೇವಾ ಧರೆಯೊಳಗೆನ್ನ ತಂದುದಕೆ ಬಂದಕಾರ್ಯವಾಗಲಿಲ್ಲ 6 ಆವಬಾಧೆಯು ನಾನರಿಯೆ ಪರಜಾತಿಯ ಆ ಮನಸು ಪೋಗುವುದು ಕೋತಿಯಂದದಿ ಕುಣಿಸುವರು ಇದು ರೀತಿಯೆ 7 ಭವಸಾಗರದೊಳು ಇದ್ದು ಸೊರಗಲಾರೆನೊ ಘಾಸಿಗೊಳಿಸುವುದು ನಿನಗೆ ಧರ್ಮವೆ ವಾಸುದೇವನೆ ನಿಮ್ಮ ನಾಮವನು ನೆನೆಯದೇ 8 ಇರುಳು ಹಗಲು ಹೀಗೆ ದುರುಳತನದಲಿ ತಿರುಗಿದೆನು ಗುರು ಹಿರಿಯರಂಘ್ರಿಗೆ ಶಿರವ ಬಾಗದೆ 9 ಎಷ್ಟು ಮೊರೆ ಹೊಕ್ಕರೇನು ಒಂದಿಷ್ಟು ದಯಪುಟ್ಟದು ನಾನೀಗ ದ್ವೇಷಿಯೇನೋ ಶೇಷಶಯನನೆ ನಮ್ಮ ಕಾಳೀಮರ್ಧನಕೃಷ್ಣನೆ 10
--------------
ಕಳಸದ ಸುಂದರಮ್ಮ
ಪುಣ್ಯ ಕ್ಷೇತ್ರವ ಸ್ಮರಿಸಿ ಧನ್ಯರಾಗಿರೋ ಪ ನಿಮ್ಮ | ಮುನ್ನೆ ಮಿಕ್ಕಾದಘ ಮಹ ಅನ್ಯಾಯ ಅಳಿದು ಅನು ಕಾರುಣ್ಯನಿಧಿ ಹರಿ ಒಲಿವಾ ಅ.ಪ. ಕ್ಷೇತ್ರ ಮಧುರೆ ಗೋಕುಲ ವೃಂದಾವನ ನಾಸಿಕ ತ್ರಿಯಂಬಕ ಮುದ್ಗಲಕ್ಷೇತ್ರ ಪರಾಶರ ಮಗನಾಶ್ರಮ ವಾರಣಾಸಿ ಭಾರದ್ವಾಜ ಕ್ಷೇತ್ರ ಅರುಣಾಚಲ ದರ್ಭಶಯನ ಮಧ್ಯಾರ್ಜುನ 1 ಸುಂದರ ಸಿಲಾಚಯ ಜಂಬುಕೇಶ್ವರ ಮಹಾನಂದಿ ಚಿದಂಬರ ವೀರ ರಾಘವ ದೇವ ಸ್ಕಂದ ನಿಬ್ಬಣಸ್ವಾಮಿ ಕಾರ್ತಿಕ ಖಗಶೇಷ ನಂದ ಯೇಕಾಂಬರೇಶ ಮಂದಾಕಿನಿ ಇಪ್ಪ ಸಾಗರ ಯಯಾತಿಗಿರಿ ಒಂದೊಂದು ಕೋಟೀಶ್ವರಾ 2 ಸಿರಿ ದ್ವಾರಕಾ ಸಿಂಹಾದ್ರಿ ನೀಲಕಂಠನಿಧಿ ವೀರ ನಾರಾಯಣವೋ ಕೇದಾರ ಕುರುಕ್ಷೇತ್ರ ಪುಷ್ಕರ ಕ್ಷೇತ್ರ ಮಾರಕಾಪುರಿ ಚನ್ನಾ 3 ಉದ್ಭವ ಆದಿ ಅನಂತ ಬಲಕ್ಷೇತ್ರ ಪುಂಡರೀಕಾಕ್ಷ ಸುಧಿಯೆಂದು ಕನ್ಯಾಕುಮಾರಿ ಮುದದಿ ಮಹಂಕಾಳಿ ಹಸ್ತಿಪಳಿನಾಥ ಪದ ಮುರಳಿ ತ್ರಿವಿಕ್ರಮ 4 ಕೂರ್ಮ ನೆಲ್ಲನಪ ಧರಣೀಧರ ಚಾಪವಾಣಿ ಕ್ಷೇತ್ರ ಶ್ರೀನಿವಾಸನೆದ ನಿಧಿ ಗೌರೀ ಮನೋಹರ 5 ಶಂಕರನ ಕ್ಷೇತ್ರ ಗೋಗರ್ಭ ಶೇತುವನ ಗಜಾರಣ್ಯ ಓಂಕಾರನಾಥ ದೇವಾ ವೇದಿ ಗೋಪಾಲನಿಧಿ ಅಲಂಕಾರ ಮುಕ್ತಿ ಕ್ಷೇತ್ರ 6 ಮಳೂರಪ್ರಮೇಯ ಶಿವಾ ಅಂತಕನಗೆ ದ್ವಾಪುರತೀರ್ಥ ನಿವರ್ತಿ ಅಂತು ಆದಿಶ್ರೀರಂಗ ನೀಲಾರಣ್ಯ ರಾಜವನ ನೈಮಿಷ ಭೋಕ್ತ 7 ಅಂದದಲಿಯಿಪ್ಪ ನಿಧಿ ಮಾಧವಸ್ವಾಮಿ ಮೇಲು ಘಟಿಕಾಚಲ ಬದರಿ ನರಸಿಂಹ ರವಿಸೇತು ಗಣ ಮುಕ್ತೇಶ್ವರ ಕಾಲದೂತ ಗೆದ್ದ ಕ್ಷೇತ್ರ ಭವಾನಿಗುಡಿ ವ್ಯಾಳನಿಧಿ ಮಹಾಲಕುಮಿ ರಘುನಾಥ ಶಿವಗಂಗೆ ಬಾಲಕೃಷ್ಣ ಕ್ಷೇತ್ರ ಕರವೀರ ಪುರ ವಿಶಾಲ ವಿಹಂಗಕ್ಷೇತ್ರ 8 ಪೇಳಿದುದಕ್ಕೆ ಆರಿಗೆ ಅಳವಲ್ಲ ನೆನಸೋದು ಮಾನವರು ಮೀಸಲಾಮನದಲ್ಲಿ ಅನಂತ ಜನುಮದ ದೋಷ ವಿ- ಪಾಲಿಸುವ ಕುಲಕೋಟಿಗಳ9
--------------
ವಿಜಯದಾಸ
ಪುಣ್ಯ ದೊರಕುವುದು ಅನು ಗಣ್ಯವಾಗಿದ್ದ ಸತಿಯಿದ್ದ ಜನರಿಗೆ ಪ ಬಡತನವಿದ್ದರು ನೆರೆಹೊರೆ ಮನೆಯಲ್ಲಿ ನುಡಿ ಬಿಚ್ಚಿ ಪೇಳದೆ ಸೌಮ್ಯಳಾಗಿ ಬಿಡದೆ ಮಾಡುವ ಗೃಹಕೃತ್ಯಂಗಳು ಜಗ ಅನುದಿನ 1 ವಿಪರೀತ ಕಾಲಗಳಟ್ಟಿದ ಕಾಲಕ್ಕು ಸ್ವಪನಾದಿಯಪ ಕಳವಳಿಸದಲೇ ಪತಿ ಸೇವೆ ಅಫಲದಲ್ಲಿ ಮಾಡಿ ಒಲಿದೊಲಿದಾಡುವ2 ಲಾವಣ್ಯ ಪುರುಷರ ಕಂಡರು ಮನದಲ್ಲಿ ಭಾವಿಸಬೇಕು ಸಹೋದರರು ಎಂದು ವಿಭೂತಿ ರೂಪವ ನಿತ್ಯ 3 ಬಂದು ತಂದರೆ ಸಾವಿರ ಮಾಡಿ ಚಿಂತಿಸಿ ಇಂದಿರೇಶನೆ ಪತಿರೂಪವೆಂದು ಅಂದದದಲಿದ್ದ ವಿಭವಾನುಸಾರ ಆ ನಂದವಾಗಿ ಸಂಸಾರದೊಳಗಿರೆ 4 ಪತಿಯ ಜನಕ ಮಾತೃ ಮಿಗಿಲಾದ ಜನರಿಗೆ ಹಿತವಂತಳಾಗಿ ನುಡಿಸಿಕೊಳುತಾ ಗಾತ್ರ ಸರ್ವದಾ ಪ್ರತಿದಿನ ಸುವಿನುವಳಾ ನಾರಿ ಅಧಿಕಾರಿ 5 ಚಕೋರ ಚಂದ್ರಮನಲ್ಲಿ ಮನಸು ಇಟ್ಟು ಸುಖಬಡುವಂತೆ ನಾನಾ ಪ್ರಕಾರ ಕಕುಲಾತಿಯಿಂದ ಕಾಮುಕಳಾಗದೆ ಮಹಾ ಭಕುತಿಯಿಂದಲಿ ಗುರು ಹಿರಿಯರ ಸಮ್ಮತ 6 ಸಂತಜನರೆಂಬ ಕ್ಷೀರಾಂಬುಧಿ ಮಧ್ಯ ಸಂತತ ಮೀನಿನಂದದಿ ಬೀಳುತಾ ಪತಿ ಧರ್ಮವಹಿಸಿ ಶ್ರೀ ಕಾಂತನ ಗುಣಕಥೆ ಕೇಳಿ ಪೊಗಳಲಾಗಿ 7 ನಾಮ ಮೊದಲು ಮಾಡಿ ಪ್ರಕೃತಿಯ ಪರಿಯಂತ ಪ್ರೇಮದಿಂದಲಿ ಗುಣಗಳ ಗುಣಿಸೀ ಕಾಮಾದಿ ಚತುರ್ವಿಧÀ ಪುರುಷಾರ್ಥ ತನ್ನಯ ಸ್ವಾಮಿಯಲಿಂದಲಿ ಸಂಪಾದಿಸುತಿಪ್ಪಾ 8 ಆವಾವ ಪ್ರಯೋಜನ ಮಾಡಲು ಸರ್ವದ ದೇವದೇವೇಶನಾಧೀನವೆಂದೂ ಭಾವದಲಿ ತಿಳಿದನ್ಯ ಕರ್ಮವ ಬಿಟ್ಟು ಪಾವನ ವಿಜಯವಿಠ್ಠಲನ ಭಕುತಿಯಿಂದಾ 9
--------------
ವಿಜಯದಾಸ
ಪುಣ್ಯೋದವೇ ಈ ಪುಣ್ಯಭೂಮಿಯೊಳು ಪನ್ನಂಗಶಯನ ಸನ್ನುತಿಪ ದಾಸರಿಗೆ ಪ ಕಡುಸಿರಿವಂತರಾದೊಡೆ ಬಡವರ ಬಾಯ್ಬಡಿಯದೆ ಕೊಡುವಿಡುವ ಕೆಡದತಿ ಪುಣ್ಯ ಬಡತನವಿರ್ದಡೆ ಎಡೆಬಿಡದೆ ಒಡಲೊಳು ಜಡಜಾಕ್ಷನಡಿಧ್ಯಾನ ಹಿಡಿದ ಮಹಪುಣ್ಯ 1 ಮಡದಿಯರೊಂದಿಗೆ ಬಿಡದೆ ಸಂಸಾರಗೈಯೆ ದೃಢಯುತರು ಮನೆಯೊಳಗಡಿಯಿಡುವ ಪುಣ್ಯ ಸಡಗರದಿ ಮಕ್ಕಳನ್ಹಡೆದು ಮೋಹದಿ ಜಗ ದೊಡೆಯನ್ಹೆಸರಿಟ್ಟು ನುಡಿಯುವ ಪುಣ್ಯ 2 ತಿರುಕರಾಗಿರ್ದಡೆ ತಿರಿದು ತಂದನ್ನವನು ಹರಿಯಪ್ರಸಾದವೆಂದು ತಿರಿದುಣುವ ಪುಣ್ಯ ಪರಮಪುರುಷನ ಚರಣ ನಿರುತ ಸ್ಮರಿಪ ಪುಣ್ಯ 3 ಹಿಂದೆ ಮುಂದೆ ತಮಗೆ ನಿಂದೆಯಾಡಲು ಆ ನಂದದಿ ಹಿಗ್ಗದ ಕುಂದದ ಪುಣ್ಯ ಮಂದಿಮಕ್ಕಳು ಬಿಡದ್ಹೊಂದಿಸಲದು ಹರಿ ಗೆಂದು ಅರ್ಪಿಸಿ ಮನಸೊಂದೆಮಾಡಿದ ಪುಣ್ಯ 4 ನೀರಿನೊಳಿರಲೇನರಣ್ಯದೊಳರಿಲೇನು ಘೋರತಾಪದಿರಲೇನಪಾರಜ್ಞಾನಿಗಳು ಪಾರಮೋಕ್ಷಕ್ಕಧಿಪ ಧೀರ ಶ್ರೀರಾಮಪಾದ ವಾರಿಜದೊಳು ಮನ ಸೇರಿಸಿದ ಪುಣ್ಯರಿಗೆ5
--------------
ರಾಮದಾಸರು