ಒಟ್ಟು 5111 ಕಡೆಗಳಲ್ಲಿ , 126 ದಾಸರು , 3233 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನುಮನಧವನೆಲ್ಲ ನಿನಗರ್ಪಿಸಿದೆನಿನ್ನು ಎನಗಾವುದಾಧೀನವಿನಿತಿಲ್ಲ ದೇವ ಪ ಜನಕ ನಾನು ಕ್ಷಣಕೆ ಕ್ಷಣಕೆ ಉಣವುದೆಲ್ಲವು ನಿನ್ನ ಪ್ರಸಾದ ಕನಸುಮನಸಿನೊಳಗೆ ನಾನು ಮಣಿವುದೆಲ್ಲವು ನಿನ್ನ ಚರಣ ಅ.ಪ ಮಡದಿಯಿಂ ಮಮತದಿ ಸಡಗರದಾಡ್ಯಾಡಿ ಕಡು ಆನಂದಿಪುದೆಲ್ಲ ಒಡೆಯ ನಿನ್ನಾಟ ಎಡೆಬಿಡದೆ ಅಡಿಗಡಿಗೆ ಕಡುಸಿರಿವಡೆದು ನಾ ಪೊಡವಿಯೋಳ್ಜೀವಿಪುದು ಕಡು ನಿಮ್ಮ ಪ್ರೇಮ ನುಡಿವುದೆಲ್ಲ ನಿನ್ನ ಮಂತ್ರವು ಕೊಡುವುದೆಲ್ಲವು ನಿನ್ನ ಅಧಿಕಾರ ನಡೆವುದೆಲ್ಲವು ನಾ ನಿನ್ನ ಯಾತ್ರೆಯು ಇಡುವತೊಡುವುದು ನಿನ್ನ ಬಿರುದು 1 ಗಳಿಸುವುದೆಲ್ಲ ನಾ ಚಲಿಸದ ತವಪಾದ ನಳಿನದಾಸರಸಂಗೀ ಇಳೆಯೊಳು ಪ್ರಭುವೇ ಬಳಸುವುದೆಲ್ಲ ನಾ ಅಳಕದ ತವಚರಿತ ಕಲಿಯುವುದೆಲ್ಲ ನಿಮ್ಮ ವಿಲಸಿತನಾಮಧ್ಯಾನ ಮಲಗುವುದೇ ನಿಮ್ಮ ಧ್ಯಾನ ಆನಂದ ನಲಿವುದಖಿಲ ನಿಮ್ಮ ಭಜನೆಯು ಅಳಿವುದೆಲ್ಲನುಭವದ ಗುಣಗಳು ತಿಳಿವುದೆಲ್ಲವು ನಿಮ್ಮ ಮಹಿಮೆ 2 ಅಮಿತ ತವಪ್ರೇಮವು ಗಮಿಸುವುದೆಲ್ಲ ನಾ ಸುಮನರ ಸಭೆಯು ಕ್ರಮದಿ ನಾ ಬೇಡುವುದು ವಿಮಲ ಸುಜ್ಞಾನವು ದಮೆ ದಯ ಭಕ್ತಿ ತವ ನಿರ್ಮಲಂಘ್ರಿಯ ಅರಿವು ನೇಮದಿಂ ನಾ ಬರುವುದೆಲ್ಲ ಸ್ವಾಮಿ ನಿಮ್ಮಯ ಮಹಿಮೆ ಖ್ಯಾತಿಯು ಕ್ಷೇಮನಿಧಿ ಶ್ರೀರಾಮ ನಿಮ್ಮೊಳು ಕಾಮಿಸುವುದೇ ನಾ ಮುಕ್ತಿಪದವು 3
--------------
ರಾಮದಾಸರು
ತನುವ ತೊಳೆದ ಮಾತ್ರದಿಂದ ಜನರು ಶುದ್ಧರೆನಿಪರೆ ಪ ಮನದ ಶುದ್ಧಿ ಆದ ಹೊರತು ವನಜನಾಭನೊಲಿವನೇ ಅ.ಪ ದಿನಪನುದಯ ಕಾಲದಿಂದ ದಿನಪನಸ್ತದನ್ನೆಗಾ ಧನವಗಳಿಸುವಾಸೆಯಿಂದ ಮನಸಿನಲ್ಲಿ ಯೋಚಿಸಿ ಮನಸಿಜಾತನಾಟಕೆ ಪರವನಿತೆಯರ ಬೆರೆಯುತುರುಳಿ ಕನಸಿನಲ್ಲಿ ಹರಿಯ ಕಂಡೆ ಎನುತ ಪೇಳ್ವ ಮಾನವಾ 1 ಪರರು ನೋಡಿ ಮೆಚ್ಚಲೆಂದು ಬೆರಳಿನಿಂದ ಮಣಿಯನೆಣಿಸಿ ಶಿರವನೊಮ್ಮೆತೂಗಿ ತೂಗಿ ತೆರೆದು ಮುಚ್ಚಿ ಕಂಗಳ ಹಿರಿಯ ಭಕ್ತನಂತೆ ನಟಿಸಿ ಪರರ ಮೋಸಗೊಳಿಸಿ ದಣಿಸಿ ಬರಿಯಡಾಂಭಿಕ ಮಾಂಗಿರೀಶ್ವರನ ಶರಣನೆನಲು ಸಾಧ್ಯವೇ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನುವೆನ್ನದು ಚೇತನವೆನ್ನದು ಎಂದು ಅನುದಿನ ಪೋಷಣೆಯನು ಮಾಡಿದೆ ಹರಿ ಪ ಚಿನುಮಯ ನಿನ್ನನು ನೆನೆವೆನೆಂದರೆ ಮನ ತನುಮಧ್ಯೆಯರ ತನುವಿನೊಳಿರುತಿಹುದು ಅನಘ ನಿನ್ನನು ನೋಡುವೆ ನಾನೆನ್ನಲು ದೃಷ್ಟಿ ಕನಕಾಂಗಿಯರ ಕುಂಭಸ್ತನದ ಮೇಲಿಹುದಯ್ಯ1 ಚರಣದ ಪೂಜೆಯೊಳಿರುವೆನೆಂದರೆ ಕರವರೆಡು ಕೋಮಲೆಯರನರಸುವುವು ಹರಿಕಥಾಶ್ರವಣದೊಳಿರೆ ಈ ಕಿವಿಗಳು ಹರಿಣಾಕ್ಷಿಯರ ಕಂಠಸ್ವರಕೆ ಮೋಹಿಪವಯ್ಯ 2 ದುರಿತದೂರನ ನಾಮ ಸ್ಮರಿಸದು ನಾಲಿಗೆ ಸರಸಿಜಾಕ್ಷಿಯರೊಳು ಸರಸೋಕ್ತಿ ಪಡೆದು ಚರಣಶ್ರೀತುಳಸಿಯನರಿಯದೆ ನಾಸಿಕ ತರುಣಿಯ ಮೈಗಂಪನರಸಿ ಹಿಗ್ಗುವದಯ್ಯ 3 ನಿನ್ನಂಘ್ರಿಗೆರಗದೆ ಕುನ್ನಿಶರೀರವಿ ದುನ್ನುತಸ್ತನವುಳ್ಳ ಕನ್ನೆಯರೊಳ್ ತನ್ನ ಸುರತಸುಖವನೆ ಚಿಂತಿಸುವದು ಎನ್ನಾಧೀನದೊಳಿಲ್ಲ ನೀನೆ ಬಲ್ಲೆ 4 ಎರವಿನ ಸಿರಿಯಂತೆ ಕರಣಕಳೇವರ ಬರಿದೆ ನನ್ನದು ಎಂದು ಮೆರೆದೆ ನಾನು ಹರಿ ನಿನ್ನದೇ ಸರಿ ದುರಿತಸುಕೃತಕೆನ್ನ ಗುರಿಮಾಡದೆ ಕಾಯೋ ವರದವಿಠಲ ಕೃಷ್ಣ 5
--------------
ವೆಂಕಟವರದಾರ್ಯರು
ತನುವೆನ್ನದು ಚೇತನವೆನ್ನದು ಎಂದು ಅನುದಿನ ಪೋಷಣೆಯನು ಮಾಡಿದೆ ಹರಿ ಪ ಚಿನುಮಯ ನಿನ್ನನು ನೆನೆವೆಂನೆಂzರÀಮನ ತನುಮಧ್ಯೆಯರತನು ವಿನೊಳಿರುತಿಹುದು ಅನಘ ನಿನ್ನನು ನೋಡುವೆ ನಾನೆನ್ನಲು ದೃಷ್ಟಿ ಕನಕಾಂಗಿಯರ ಕುಂಭಸ್ತನದ ಮೇಲಿಹುದಯ್ಯ 1 ಚರಣದ ಪೂಜೆಯೊಳಿರುವೆನೆಂದರೆ ಕರವೆರಡು ಕೋಮಲೆಯರ ನರಸುವುವು ಹರಿಕಥಾಶ್ರವನದೊಳಿರದೆ ಈ ಕಿವಿಗಳು ಹರಿಣಾಕ್ಷಿಯರ ಕಂಠ ಸ್ವರಕೆಮೋಹಿಪವಯ್ಯ 2 ದುರಿತದೂರನ ನಾಮಸ್ಮರಿಸದು ನಾಲಿಗೆ ಸರಸಿಜಾಕ್ಷಿಯರೊಳು ಸರಸ್ತೋಕ್ತಿಪಡೆದು ಚರಣ ಶ್ರೀ ತುಳಸಿಯ ನರಿಯದೆ ನಾಸಿಕ ತರುಣಿಯ ಮೈಗಂಪನರಸಿ ಹಿಗ್ಗುವದಯ್ಯ 3 ನಿನ್ನಂಘ್ರಿಗೆರಗದೆ ಕುನ್ನಶರೀರ ವಿದುನ್ನತಸ್ತನವುಳ್ಳ ಕನ್ನೆಯರೋಳ್ ತನ್ನ ಸುರತಸುಖವನ್ನ ಚಿಂತಿಸುವದು ಯನ್ನಾಧೀನದೊಳಿಲ್ಲ ನೀನೇ ಬಲ್ಲಿ 4 ಎರವಿನ ಸಿರಿಯಂತೆ ಕರಣಕಳೇವರ ಬರಿದೆ ನನ್ನದು ಎಂದು ಮೆರೆದೆ ನಾನು ದುರಿತ ಕೃತಕೆನ್ನ ಗುರಿಮಾಡದೆ ಕಾಯೋ ವರದ ವಿಠಲ ಕೃಷ್ಣ 5
--------------
ಸರಗೂರು ವೆಂಕಟವರದಾರ್ಯರು
ತನುವೆಂಬ ಭವನದಲಿ ಮನವೆಂಬ ಮಂಟಪದಿ ವನರುಹಾಸನ ವಿಹುದು ನಿನಗಾಗಿ ಕೃಷ್ಣಾ ಪ ಅನವರತ ಸ್ವಾಗತವ ಇನಿದಾಗಿ ಪೇಳುತಲಿ ಸನುಮತದೊಳೀರೈದು ಮುನಿವರರು ನಿಂದಿಹರು ಅ.ಪ ಎನಗೆ ತನಗೆಂದಿಬ್ಬರನುವಾಗಿ ಕಾದಿಹರು ಘನ ಮೌನಿಯಂತೊಬ್ಬ ಮಣಿಯುತಿಹನು ವನಜ ಸಂಭವ ಜನಕ ಮುನಿಯೊಡನೆ ನೀ ಬಂದು ಕನಕಮಂಟಪವೇರು ಅವರಿಬ್ಬರೋಡುವರು 1 ಕರಿಯ ಮೈಯವನೊಬ್ಬ ದುರದುರನೆ ನೊಡುವನು ಪರಿವಾರದವರನ್ನು ತೋರುತಿಹನೊಬ್ಬ ಕರದಿ ಸನ್ನೆಯ ಮಾಡುತಿಬ್ಬರೂ ಬರುತಿಹರು ತರಿದವರ ಮಂಟಪವನೇರೊ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನ್ನ ಕಷ್ಟದಿ ತನಗೆ ದೊರಕುವುದು ಹಾಗ ಉನ್ನಂತ ಭಾಗ್ಯಗಳು ಹರಿಯ ವಿನಿಯೋಗ ಪ ಕಟ್ಟಿಗೆಯ ಹೊರೆ ತಂದು ಪಟ್ಟಣದೊಳಿಳುಹಿದರು ಉಟ್ಟ ಬಹಿರ್ವಾಸವನು ಬಿಗಿದಿಟ್ಟರು ಮೊಟ್ಟೆಯನು ಕೊಂಡೊಯ್ದು ಇಟ್ಟದನು ಮಾರಿದರು ಹೊಟ್ಟೆ ತುಂಬಿಸಿ ಕಡೆಗೆ ಕಟ್ಟುವನು ಹಾಗ 1 ಪದಪದ್ಯಗಳ ಹೇಳಿ ಕುಣಿದಾಡಲು ಹದಿನಾರನೆಯ ವಿಧಿಯ ಸದನದೊಳು ಸವಿದುಣಲು ಕದನ ಕರ್ಕಶನಾಗಿ ಕಡಿದು ಬರೆ ಹಾಗ 2 ಸೂಜಿ ನೂಲನು ಕೊಂಡು ಬಾಜಾರದೊಳು ಕುಳಿತು ಸೋಜಿಗದ ಹೊಲಿಗೆಯನು ಮಾಡಿಕೊಡಲು ಕಾಜು ಬಳೆಗಳ ಹೊತ್ತು ದಣಿದು ಮಾರಿದರವಗೆ ರೋಜು ಉಳಿವುದು ಅಸ್ತಮಯಕೆ ಒಂದ್ಹಾಗ 3 ಭಾಗ್ಯವುಳ್ಳವನನ್ನು ಬಾಧಿಸಲು ಅವ ತನಗೆ ಕಾಗೆ ಕರಿದೆನಿಸಿ ತಾ ಕಸ್ತೂರಿ ಹೋಲುವುದೆ ಮೊಗೆಮೊಗೆ ಮಲ್ಲಿಗೆಯು ಪರಿಮಳಿಪುದೆ 4 ಹರಿಯ ಸೇವೆ ಮಾಡೆ ಇಹಪರದ ಸೌಖ್ಯಗಳು ಹರನ ಸೇವೆಯ ಮಾಡೆ ಪರಮ ಪದವು ಸಿರಿಯರಸ ವರಾಹತಿಮ್ಮಪ್ಪ ನಿನ್ನಡಿಯ ಕರುಣರಸ ಹೊರತಾಗಿ ಸಿರಿಯು ಸೇರುವಳೆ 5
--------------
ವರಹತಿಮ್ಮಪ್ಪ
ತನ್ನ ಪ್ರಾಪ್ತಿಯ ಫಲವ ತಾನರಿಯದೆ ಪ ಇನ್ನು ನುಡಿವುದು ಮೂರ್ಖತನವಲ್ಲದೆ ಅ ಸರಸಿಜೋದ್ಭವನು ಫಣೆಯೊಳು ಬರೆದು ನಿರ್ಮಿಸಿದತೆರನೊಂದು ಬೇರುಂಟೆ ತಾನರಿಯದೆಕೆರಕೊಂಡು ಕಂಡವರ ಕೂಡೆ ತಾನಾಡಿದರೆನೆರೆ ದುಃಖವಿದು ಬಿಟ್ಟು ಕಡೆಗೆ ತೊಲಗುವುದೆ 1 ವಿಧಿ ಬೆನ್ನ ಬಿಡಲರಿವುದೆಅಡಿಗಡಿಗೆ ಶೋಕದಲಿ ಅವರಿವರಿಗುಸುರಿದರೆಬಡತನವು ತಾ ಬಿಟ್ಟು ಕಡೆಗೆ ಕದಲುವುದೆ2 ದೆಸೆಗೆಟ್ಟು ನಾಡದೈವಂಗಳಿಗೆ ಎರಗಿದರೆನೊಸಲ ಬರೆಹವ ತೊಡೆದು ತಿದ್ದಲಳವೆವಸುಧೇಶ ಕಾಗಿನೆಲೆಯಾದಿಕೇಶವಸನಂಘ್ರಿಬಿಸಜವನು ಕಂಡು ನೀ ಸುಖಿಯಾಗು ಮನುಜ3
--------------
ಕನಕದಾಸ
ತನ್ನ ಸ್ಮರಣೆ ತಾನರಿಯದ ಮನವು ಚಿನುಮಯ ರೂಪನ ಬೆನ್ನವಿಡಿವುದುಂಟೆ ಪ ಹಾವಿನ ಹೆಜ್ಜೆಯ ಹಾವರಿವಂದದಿ ಭಾವಿಸಿಕೊಳ್ಳದೆ ತಗ್ಗು ಮುಗ್ಗುಗಳ ಗೋವಳನಿಲ್ಲದ ಗೋವಿನ ತೆರನಂತೆ ಜೀವನುಂಗುವ ವ್ಯಾಘ್ರನಗ್ರಕೆ ಸುಳಿಯಲು 1 ಕನ್ನಡಿ ಶುದ್ಧವಾಗಿಯೆ ಕಾಣದ ದೃಷ್ಟಿ ಚಿನ್ನವಾರಿಕೆಯನ್ನು ಮಾಡುವ ಪರಿಯು ನಗದ ಮನ ಮನ್ನಣೆಯಿಲ್ಲದ ಮನೆಯೊಳುಂಬರೆ ಹೇಸ2 ಹೇಳಿದ ಮಾತನು ಕೇಳಿ ಮಾನಸದೊಳು ಮೇಳವಾಗುವೆನೆಂದು ಖೂಳತನದಿ ಪೋಗಿ ಕೇಳಿದ ಉತ್ತರಕುತ್ತರ ಹರಿಸದೆ ಆಳು ಬಾವಿಯ ಹಾರಿ ಹೊಳಚುವ ತೆರನಂತೆ 3 ಕಾಗೆಯು ಗರುಡನ ಸರಿಯೆಂದು ಜೂಜಾಡಿ ಸಾಗರವನು ಹಾರಿ ನಡುವೆ ಬಿದ್ದಂದದಿ ಯೋಗಿಯ ಪರಿಯಂತೆ ತಪವೆಂದು ತನ್ನಯ ಮೂಗ ಮುಚ್ಚಲು ಭವರೋಗ ಹಾರುವುದಂತೆ 4 ಮೀಸಲಿಗೊದಗುವ ಶೇಷಗಿರೀಶನ ಆಸೆಯಗ್ರಾಸವ ಬೇಡಿಕೊಳ್ಳದ ಮನ ಸಾಸಿರ ವೆಗಡದ ಭಾಂಡದೊಳೋಗರ ಬೇಯಿಸಿ ಭುಂಜಿಪೆಯೆಂದು ಮೋಸ ಮಾಡುವದಿಂದು 5 ಚಿತ್ರಿಕ ರಚಿಸಿದ ಸೇನೆ ಸೇನೆಗಳಲ್ಲ ಪ್ರಸ್ತುತಕೊದಗುವದೆನುತಿಹ ರಾಯನ ಮುತ್ತಿಕೊಂಡಿಹ ಪರಸೇನೆಯ ಇದಿರೊಳು ಮೃತ್ಯುದೇವತೆ ಬಂದು ಮೂದಲಿಸುವಳೆಂದು6 ಮೊಸರನ್ನ ತನ್ನ ಕೈಯೊಳಗಿದ್ದಂತೆ ಹಸಿವಾದ ವೇಳ್ಯದಿ ಹಸಿಯ ಮೆಲ್ಲುವದೇಕೆ ಕುಶಲದಿ ನೆನೆಯಲು ಹಸನದಿ ಸಲುಹುವ 7
--------------
ವರಹತಿಮ್ಮಪ್ಪ
ತಪ್ಪಲರಿಯದು ಬರೆದ ಬ್ರಹ್ಮನಿರ್ಮತವು ಒಪ್ಪುವದು ಯತಿ ಮುನಿ ಋಷಿಯ ಸಂತತಿಯು ಧ್ರುವ ಆನಿ ಮೊದಲಿರುವೆ ಕಡೆ ಅಣುಮಾತ್ರಾಕಾರವನು ಮುನ್ನ ಬರೆದಂತೆ ತಾನಡೆಯುತಿಹಂದು ಇನ್ನು ಮುತ್ತನ್ಯ ದೈವಕ ಬಯಸಿ ಬೇಡಿದರೆ ಮುನ್ನಿಗೆ ಕೊಡಬಲ್ಲವೆ ಬಿನಗುದೈವವು 1 ಭಿನ್ನವಿಲ್ಲದೆ ತನುವಿನೊಳು ಆನಂದ ಘನ ಉನ್ನತ ಮಹಿಮ ಪರಿಪೂರ್ಣವಿರಲು ಮೂರ್ತಿ ಶ್ರೀಪಾದವನು ಅನುದಿನ ಭಜಿಸಿ ಘನ ಸುಖವ ಪಡಿಯೊ ಮನವೆ 2 ಕಕ್ಕುಲಾತಿಯ ಬಟ್ಟು ಕಂಡವರ ಕಾಲ್ಗೆರಗಿ ಫಕ್ಕಸಾರಿಯ ಧರ್ಮ ಜರಿಯ ಬ್ಯಾಡ ಸಕಲ ಸಹಕಾರ ಮಹಿಪತಿಸ್ವಾಮಿ ನಿನಗಿರಲು ಭಕುತಿ ಮುಕುತಿಯ ಉಂಟು ಮೂಢ ಜನವೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಪ್ಪು ತಪ್ಪು ತಪ್ಪು ತಪ್ಪಪರಾಧ ಕೋಟಿಯಸರ್ವಂ ತಪ್ಪನ್ನೆಲ್ಲಾ ಕ್ಷ'ುಸಿ ಒಪ್ಪಿಕೊಳ್ಳಯ್ಯ ಗುರುವೆ ಪದೇಹ ತನ್ನದೆಂಬ ಅಹಂಕಾರದ ತಪ್ಪು ತನ್ನಗೇಹ ಸತಿಸುತರ ಮಮತೆ ಪಾಶದ ತಪ್ಪುಮೋಹ ಮದ ಮಾತ್ಸರ್ಯವ ಭ್ರಮೆಗೊಂಬೊ ತಪ್ಪುಓಹೋ! ವ್ಯರ್ಥಕಾಲವ ಕಳೆದೆನಹುದಯ್ಯ 1ಬಕವೃತ್ತಿಯ ಸೇಮೆಂದ ಮುಕುತನೆಂಬೆನೋ ಹರಿ'ಕಳಮತಿಗಳ ಕೂಡಿ ಯೋಗ್ಯನೆಂಬೆನೋಸಕಲ 'ಷಯಸುಖವನುಂಡು ವೈರಾಗಿಯೆಂಬೆನೋ ಹರಿಭಕ್ತರ ಸಂಗವ ಬಿಟ್ಟು ಜ್ಞಾನಿಯೆಂಬೆನೋ 2ಬರಿಯ ಬ್ರಹ್ಮಜ್ಞಾನದಿಂದ ಮರುಳು ಮಾಡಿದೆಪರಿಪರಿಯ ಭಾವಭೇದಗಳನು ತೋರಿದೆಅರಿಯದ್ಹೋದೆನಯ್ಯ ಶ್ರೀಮದ್ಗುರುವೆ ವಾಸುದೇವಾರ್ಯ ನರಸಾರ್ಯ ಅಮರಗಿರಿನಿಲಯ ಸಕಲ ತಪ್ಪು ಮರೆಯಯ್ಯಾ * 3
--------------
ವೆಂಕಟದಾಸರು
ತಮ್ಮ ಕೇಳಿದ್ಯಾ ಪರಬೊಮ್ಮ ನೀನಂತೊ ನಿತ್ಯ ತೃಪಿತನು ನೀನಂತಲ್ಲೊ ಕೃಷ್ಣಯ್ಯ ಸುತ್ತಿ ಬಂದೆನೆ ನಾಲಿಗಾರಿದೆ ಅಮ್ಮ ಹತ್ತು ಸಾವಿರ ಭಾನುಪ್ರಭೆಯುಳ್ಳವನಂತೊ ಕತ್ತಲೆಮನೆ ಪೋಗಲೊಬ್ಬನಂಜುವೆನೆ 1 ಪುರಾಣಪುರುಷ ನೀನಂತಲ್ಲೊ ಕೃಷ್ಣಯ್ಯ ಆರು ತಿಂಗಳು ಪೋದಾವಂದೆಲ್ಲ ಎನಗೆ ನಿರತಿಶಯ ಮಹಾ ಮಹಿಮೆ ಉಳ್ಳವನಂತೊ ಪೂರತಿ ಮನೆಯೊಳು ನಡೆಯಲಾರೆ 2 ಅಣ್ಣಾ ನೀ ಸರ್ವಜ್ಞನೆಂಬೋರೊ ಜಗವೆಲ್ಲ ಬೆಣ್ಣೆಯು ಸಿಗದಲ್ಲೆ ಪುಡುಕಿದರೆ ಸಣ್ಣವ ನೀನಲ್ಲವೆಂಬರೊ ಪಿರಿಯಾರು ಮಣ್ಣು ನಾ ಮೆದ್ದಾರೆ ಟೊಣದೆಲ್ಲವಮ್ಮ 3 ಜಗದುದರನು ನೀನಂತಲ್ಲೊ ಕೃಷ್ಣಯ್ಯ ನಗುಚಾಟಲು ಸಣ್ಣ ಪೊಟ್ಟಿ ನೋಡೆ ನಿಗಮಗಳು ನಿನ್ನ ತುತಿಯಂತೊ ಗೋವಿಂದ ನಗುವರಲ್ಲವೆ ಗೋಪ ನಾರಿಯರು 4 ಮೂಢ ದೈತ್ಯರಿಗೆಲ್ಲದಲ್ಲಣ ನೀನಂತೊ ಜಾಡ ಮೈಯನ ನೋಡಿ ಅಂಜುವೆನೆ ಬೇಡಿದ ಪುರುಷಾರ್ಥ ಕೊಡುವನು ನೀನಂತೊ ಬೇಡಿದೆ ನಮ್ಮಮ್ಮ ಅಮ್ಮೆ ಕೊಡೆಂದು 5 ಬೆಟ್ಟವ ನೀನೆತ್ತಿದಂತಲ್ಲೊ ಕೃಷ್ಣಯ್ಯ ಬಟ್ಟು ನಿನ್ನದು ನೋಡೆ ಎತ್ತಲಾರೆ ಘಟ್ಯಾಗಿ ವಿಪ್ರರು ಪೇಳೋದು ಪುಸಿ ಏನೊ ಹೊಟ್ಟಿಗೋಸುಗ ಸುಳ್ಳು ಪೇಳುವರೆ 6 ಏಸು ಲಕ್ಷ್ಮಣವಿವೆ ನೋಡಬೇಕೆಂದರೆ ಪುಸಿದ್ಯಾಕುಸರಾನು ನೋಡೆಂದನು ಪರಿ ಗೋಪಿಯ ಮೋಸಗೊಳಿಪ ಕೃಷ್ಣ ನಮ್ಮ ಸಲಹಲಿ 7
--------------
ವ್ಯಾಸತತ್ವಜ್ಞದಾಸರು
ತರತಮದಿ ಶರಣು ಮಾಡುವೆ ನಿಮಗೆ ಕರಣಶುದ್ಧಿಯಲ್ಲಿ ಕರುಣ ಮಾಡಿ ಎನ್ನ ಪರಿಪಾಲಿಸಬೇಕು ನಿರುತ ಬಿಡದೆ ಮನ ಸಿರಿಹರಿ ಚರಣಕ್ಕೆ ಎರಗುವಂತೆ ವರಭಕುತಿಯಲ್ಲಿ ಪ ಪರಮೇಷ್ಠಿ ವಾಯು ಸರಸ್ವತಿ ಭಾರತೀ ಉರಗ ಈಶ ಹರಿ ಸತಿಯರು ಮೂ ರೆರಡು ಜನರು ಆ ತರುವಾಯ ಸೌಪರ್ಣಿ ಸಿರಿ ಗುರು ದಕ್ಷನೆ ಶಚಿ ಮರುತ ಪ್ರವಾಹ ಮೂ ವರು ಸನಕಾದ್ಯರು ದುರಿತಶಾಸನ ಶಶಿ ತರಣಿ ಶತರೂಪ ವರುಣ ನಾರದರ 1 ಮುನಿಗಳ ಶ್ರೇಷ್ಠ ಭೃಗು ಅನಲ ಪ್ರಸೂತಗಾಧಿ ತನುಜ ವಾರಿಜಾಜನ್ನತನಯರು ವೈವಸ್ವತ ಸೂರ್ಯ ದನು ಪ್ರವಾಹವೆಂಬ ಅನಿಲನ್ನ ತಳೋದರಿ ಅನಿಲದೇವಜ ಅಶ್ವಿನಿ ದೇವತೆಗಳು ಅನಳಾಕ್ಷಸುತ ಧನಪತಿ ಪ್ರಹ್ಲಾದ ಗುಣಿಸುವೆ ವಸು ಏ ಳನು ದಶರುದ್ರರು ಇನಿತರೊಳಗೆ ಒಬ್ಬನ ಬಿಟ್ಟನು ದಿನ 2 ದಶ ವಿಶ್ವದೇವತರು ಸ್ವಶನರೊಳಗೆಗೀರ್ವರ ರಸದ್ಯುನವಕೋಟಿ ತ್ರಿದಶರೂಪ ಪಿತ್ರರೂ ಎಸವ ಸೋಮ ಪುನರ್ವಾಪಸರಿಪಶತಸ್ಥರು ನಸುನಗೆ ಕರ್ಮಜ ಋಷಿ ಈರ್ವರು ಮನು ಕುಶಲ ಸಪ್ತ್ತರಿಗೆ ತುತಿಸೆ ಕಾಲಕಾಲದಿ 3 ಮಾಂಧಾತ ಬಲಿ ಶಶಿಬಿಂದುವೆ ಪ್ರಿಯವ್ರತ ಪರೀಕ್ಷಿತ ನಂದ ಕಕುಸ್ಥ ಗಯ ಕುಂದದೆ ಯದುಕುಲದಿಂದ ಬಂದ ಹೈಹಯನು ಚಂದ್ರನ ಮಡದಿ ಏಳೊಂದನೆ ಸೂರ್ಯನು ಮಂದಹಾಸಾಂಬುಜ ಬಾಂಧವನಸತಿ ಕಲದರ್ಪನಸೂಸೆ ವೃಂದಾರಕರಿಗೆ 4 ಸದಮಲ ಸ್ವಾಹಾದೇವಿ ಬುಧಾ ಉಷಾದೇವಿ ಶನಿ ಮುದದಿಂದ ಪುಷ್ಕರ ಸಹೃದಯ ತುಂಬರರಿಂದ ಮೊದಲಾಗಿ ನೂರುಮಂದಿ ತ್ರಿದಶ ಗಂಧರ್ವರು ಚದುರೆ ಊರ್ವಸಿ ರಂಭೆ ಅದಿತಿ ಕಶ್ಯಪದಿತಿ ಹದಿನಾರು ಸಾವಿರ ಬುಧನ ಮಕ್ಕಳು ತಪೋನಿಧಿಗಳು ಎಂಭತ್ತು ತದುಪರಿ ಅಜಾನಜ ತ್ರಿದಶರು ಓಜಸ್ತರೆದರಾಗಿ ನಾನಿಂದು 5 ಹರಿಭಕ್ತರಾದ ಅಪ್ಸರ ಸ್ತ್ರೀಯರು ಕೆಲಕೆಲವು ಮರಳೆ ಚಿರಾಖ್ಯನಾಮದಿರುತಿಪ್ಪ ಪಿತೃಗಳು ಪರಿಪರಿ ನೂರುಕೋಟಿ ಪರಮಋಷಿಗಳಿಗೆ ಸುರ ಗಂಧರ್ವರ ವಿಸ್ತರ ಮನುಜ ಗಂಧರ್ವ ಧರಿಣಿಜಾಕವಿ ಮೇಲರಿದು ಜಯಂತಗೆ ಕರ ಮುಗಿವೆ ಕ್ಷಿತಿಪರನು ಕೊಂಡಾಡುತ ಇರುಳು ಹಗಲು ಉತ್ತಮರ ಮನುಜರ ಪಾಡಿ ನಿರುತ ಜಂಗಮ ಸ್ಥಾವರಗಳ ನೋಡುತ 6 ಭುಜಗಶಯನನಿಂದ ಸೃಜಿಸಿದ್ದ ಸರ್ವರಿಗೆ ನಿಜವಾಗಿ ಶಿರವಾಗಿ ಭಜಿಸುವೆ ಚನ್ನಾಗಿ ತ್ರಿಜಗದೊಳಗೆ ಎನ್ನ ರಜ ತಾಮಸ ಗುಣದ ವೃಜವೆ ಓಡಿಸಿ ನಿತ್ಯಸುಜನ ಮಾರ್ಗವ ತೋರಿ ರಜನಿ ಚರಾಂತಕ ವಿಜಯವಿಠ್ಠಲನ್ನ ಭಜಿಪೆನದಕೆ ನಿಮ್ಮ ನಿಜವ್ಯಾಪಾರದಿ ಸೃಜಿಸಿ ಕೊಡುತ ಧರ್ಮ ವೃಜಗಳೊದಗಿಸುತ್ತ ಕುಜನ ಮತದ ಮೇಲೆ ಧ್ವಜವೆತ್ತಿಸುವುದು 7
--------------
ವಿಜಯದಾಸ
ತಲ್ಲಣಿಸದಿರು ಕಂಡ್ಯ ತಾಳು ಮನವೆ ಪ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ಅ ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆಕಟ್ಟೆಯನು ಕಟ್ಟಿ ನೀರೆರೆದವರು ಯಾರೊಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲುಗಟ್ಯಾಗಿ ಸಲಹುವನು ಇದಕೆ ಸಂಶಯವಿಲ್ಲ 1 ಅಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲಅಡಿಗಡಿಗೆ ಆಹಾರವಿತ್ತವರು ಯಾರೊ ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿಬಿಡದೆ ರಕ್ಷಿಪನು ಇದಕೆ ಸಂಶಯವಿಲ್ಲ 2 ನವಿಲಿಗೆ ಚಿತ್ರ ಬರೆದವರು ಯಾರುಪವಳದ ಲತೆಗೆ ಕೆಂಪಿಟ್ಟವರು ಯಾರುಸವಿಮಾತಿನರಗಿಳಿಗೆ ಹಸುರು ಬರೆದವರು ಯಾರುಅವನೆ ಸಲಹುವನು ಇದಕೆ ಸಂಶಯವಿಲ್ಲ3 ಕಲ್ಲಿನಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲಅಲ್ಲಲ್ಲಿಗಾಹಾರ ತಂದೀವರಾರುಬಲ್ಲಿದನು ಕಾಗಿನೆಲೆಯಾದಿಕೇಶವರಾಯಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ 4
--------------
ಕನಕದಾಸ
ತವ ಚರಣಂ ಶರಣಂ ಅಂಡಾಳ್ ಗೋದಾ ಪ ತವಶುಭಚರಣಂ ಭವಭಯತರಣಂ ಭುವನಾಭರಣಂ ಪಾತಕಹರಣಂ ಅ.ಪ ವೇದಾಂತಾಂಬರೆ ಮಾಧವಮಂದಿರೆ ನಾದಸುಧಾಕರೆ ಸಕಲಸುಖಂಕರೆ 1 ಕೃಷ್ಣಕಥಾಮೃತ ಸಾಗರಮಂದಿರೆ ವಿಷ್ಣುಚಿತ್ತಸುತೆ ಕೀರ್ತನಚತುರೇ 2 ಪೂಮಾಲಾಧರೆ ಪಾಮಾಲಾಕರೆ ಶ್ರೀಮಾಂಗಿರಿವರ ಶರಣಸುಖಂಕರೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತವರು ಮನೆಯು ನನ್ನ ಸುವಿದ್ಯಪುರಲ್ಯದೆ ಸಾವಿರಕೊಬ್ಬಗೆ ದೋರುತದೆ ಧ್ರುವ ಸಾವಿರಕೊಬ್ಬನೆ ತಾ ಸುದೇವನೆ ಬಲ್ಲ ಭಾವಿಸದಲ್ಲದೆ ತಿಳಿಯುವದಲ್ಲ ಅವಿದ್ಯಪುರ ದಾಟ, ಮಂದಾಕ್ಕಾಗಲು ಎಲ್ಲ ಆವಾಗ ತಿಳಿವುದು ಹೇಳಿದ ಸೊಲ್ಲ 1 ಸಾವಿರ ತೆನೆಯಲೊಪ್ಪುತದೆ ಒಳಕೋಟ ಠವಿಠವಿಸುತದೆ ನೋಡಿ ಮನಮುಟ್ಟಿ ಅವ್ವ ಅಪ್ಪನೇ ನಮ್ಮ ಇಹಸ್ಥಾನವು ಘಟ್ಟಿ ದೇವಾಧಿ ದೇವನೊಬ್ಬನೆ ಜಗಜಟ್ಟಿ 2 ಬಲು ಅಭೇದ್ಯಸ್ಥಳ ತಿಳಿಯದಿನ್ನೊಬ್ಬರಿಗೆ ನೆಲೆವಂತರಿಗೆ ತಾನು ತಿಳಿವದು ಬ್ಯಾಗೆ ತುಂಬಿ ಥಳಗುಟ್ಟಿ ಹೊಳವ್ಹಾಂಗೆ ಬಲಗೊಂಡು ಕೇಳಿ ಶ್ರೀಸದ್ಗುರುವಿಗೆ 3 ಅಣ್ಣನೆಂಬಾತ್ಹಾನೆ ಅನಂದದಲ್ಹಾನೆ ನೆನೆಪಿಗೊಮ್ಮೆ ಬಂದು ಸುಳವುತ್ಹಾನೆ ಕಣ್ಣೆಲಿ ಕಟ್ಯಾನೆ ತಮ್ಮನೆಂಬತ್ಹಾನೆ ಕ್ಷಣಕೊಮ್ಮೆ ಹೊಳೆವುವಾನೆ4 ಅಕ್ಕನೆಂಬಾಕಿ ತಾ ಸಖರಿ ಅಗ್ಹಾಳೆ ಅಖರದಲೆವ್ವ ಈ ಮಾತು ಕೇಳೆ ಪ್ರಖ್ಯಾತದಲಿ ಪ್ರೀತಿಮಾಡುವ ತಂಗ್ಹ್ಯಾಳೆ ಸುಖ ಸುರುತ್ಹಾಳೆ ಇರುಳು ಹಗಲು 5 ಅತ್ತಿಗೆ ನಾದುನಿ ಭಾವ ಮೈದುನರೆಲ್ಲ ಅಂತ್ಯಕವಾಗ್ಹ್ಯಾರೆ ಮನಿಯೊಳಗೆಲ್ಲ ಸುತ್ತೇಳುವ ಬಳಗ ಉತ್ತುಮರೆನಗೆಲ್ಲ ಹಿತದೋರುತಾರವ್ವ ಸರ್ವಾಪ್ತರೆಲ್ಲ 6 ಸರ್ವಾಪ್ತವೆಂಬುದು ಸರ್ವೇಶನೆ ತಾನು ಸರ್ವದಾ ಎನ್ನೊಳು ತಾ ಕಾಮಧೇನು ಪರ್ವಕಾಲದ ಬಹಳ ಏನೆಂದ್ದೇಳಲಿ ನಾನು ಸರ್ವಾರ್ಥ ಕೊಡುತ್ಹಾನೆ ಸರ್ವಾತ್ಮ ತಾನು 7 ಅವ್ವ ನಮ್ಮಪ್ಪಗೆ ಸರಿ ಇಲ್ಲ ಜಗದೊಳು ಆವ ಕಾಲಕೆ ತಾ ಇವರ ಮೇಲು ಇವರೆಂಬುದು ಒಂದೆ ಮಾತಿನ ಸ್ವಕೀಲು ಸವಿಸುಖಬಲ್ಲರು ಅನುಭವಿಗಳು 8 ತೌರಮನೆಂಬುದು ಪ್ರತ್ಯೇಕಾ ತಾನಿಲ್ಲ ಭಾವಾರ್ಥದ ಮಾತು ಕೇಳಿರೆಲ್ಲ ಅವಗುಣನೆ ಬಿಟ್ಟು ಕೇಳಿ ಸವಿಯ ಸೊಲ್ಲ ಪೂರ್ವಿಕರಿಗಿದೆ ಸಾರವೆಲ್ಲ 9 ಸುದ್ದಿ ಹೇಳಿ ಕಳುಹುಲಿಕ್ಕೆ ಈ ಸಾಧನ ಇದುವೆ ಅಯಿತು ತವರ ಮನಿ ಬುದ್ಧಿವಂತನೆಬಲ್ಲ ಲಕ್ಷಕೊಬ್ಬ ಜ್ಞಾನಿ ಸಿದ್ಧಿದರಿಡುವದು ಸದ್ಗುರು ಪ್ರಾರ್ಥನಿ 10 ಬಳಗದೊಳು ಕೂಡಿ ಒಳಿಥಾಗ್ಯಾಯಿತು ಎನಗೆ ಒಳ ಹೊರಗೆ ಸುಖ ಎದುರಿಟ್ಟತೀಗ ಕುಲಕೋಟಿ ಬಳಗ ಸದ್ಗುರು ಪಾದವ್ಯನಗೆ ಸಲಹುತಾನೆ ಸ್ವಾಮಿ ಮಹಿಪತಿಗೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು