ಒಟ್ಟು 2434 ಕಡೆಗಳಲ್ಲಿ , 120 ದಾಸರು , 1882 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮದೇವರ ಸ್ತೋತ್ರ* ಮಟ್ಟತಾಳ ಕಂಬು ವಿಹಂಗ ಗಮನ ವಿಭುವೆನಂಬಿದವರ ಪೊರೆವ ವ್ಯಾಸವಿಠಲ ನೀ-ನೆಂಬುವರನ ನಂಬಿದ ನೀಚನ ಮರಿಯಾದಿರು 2 ತ್ರಿವಿಡಿತಾಳ ಜಿಹ್ವೆ ನುಡಿಯದುಸವಿಯದ ನಾನಾ ರಸವನುಂಡು ಬಹುಕಾಲಸವೆದು ಪೋದವು ನಟ್ಟ ಮನವು ಇನ್ನು ತಿರಗದುತವ ವಿಸ್ಮøತಿಯಲಿಂದ ಭೂ ವನದೊಳಿದ್ದ ಮಾ-ನವರ ಚರಿಯದಲಿ ಕೋಪವೆ ತಗ್ಗದುಎವೆ ಇಡುವಿನಿತು ಕಾಲವಾದರು ಪೂಜಾವಿವರದಲ್ಲಿಗೆ ಚಿತ್ತವು ನಿಲ್ಲದು ಭವವಿದೂರನೆ ಕೇಳುಕವಲ ಬುದ್ಧಿಯಲಿಂದ ನವನವ ರೂಪದ ಯುವತಿಯರನಿವಹದ ಅನುಭವ ದ್ವಿವಿಧವಿಂದಿಗೇ ಕಾ-ಯವ ನೋಡಲಿದ್ದಂತೆ ಇಲ್ಲದಂತೆಧ್ರುವದಲಿ ನುಡಿವೆ ಎನ್ನವಗುಣವಿನ್ನೊಂದುಭವಸಾಗರವ ದಾಟಿಸುವ ಜ್ಞಾನಿಗಳ ಪ್ರೀತಿಯನೆ ತ-ಗ್ಗುವಂತೆ ಚತುರ ತೋರುವೆಇವುಗಳಿಂದಾಗುವ ಜನನ ಬಾಧಿಯ ಬಲ್ಲೆಜೀವರಲ್ಲಿ ಹೀನ ಜನ್ಮವ ಬರುವದು ಬಲ್ಲೆಸ್ಥಾವಿರಾಯ ವ್ಯಾನಾದಿ ನೆಗುವವು ಪುಣ್ಯಾಖ್ಯಗಿರಿಗೆಪವಿಯಂಬದನುಗಾಲ ಪಠಿಸಬಲ್ಲೆಪವನನಂತರ್ಯಾಮಿ ಶ್ರೀವ್ಯಾಸವಿಠಲ ಇಂಥಅವಿವೇಕ ಮನುಜಂಗೆ ಆವಗತಿಯಾಗುವದೊ 3 ಅಟ್ಟತಾಳ ಅನ್ಯಾಯ ನಡತಿಗಳ ಚರಿಸುತಲಿಪ್ಪಮನುಜಾಧಮನಿಗೆ ಮಹಿಯೊಳಗೆ ವಿಪ್ರಜನ್ಮವ ನೀನಿತ್ತದಾವ ಬಗೆಯ ಕಾಣೆಇನ್ನೀಗ ಮಾಡುವ ಅನ್ಯಾಯ ನಡತಿಯುತಣ್ಣನ ಕಿಡಿಯಂತೆ ತತ್ಕಾಲಕಿಪ್ಪದುಘನ್ನ ಬವಣೆ ಮುಂದೆ ಅನುಭವವೇ ನಿಜಪನ್ನಗ ಶಯನ ಶ್ರೀ ವ್ಯಾಸವಿಠ್ಠಲ ಸುಪ್ರಸನ್ನ ವದನ ದೇವ ನಿನ್ನ ಪಾದವೆ ಗತಿ 4 ಆದಿತಾಳ ಪಾದ ಚೆನ್ನಾಗಿ ಪೊಂದಿಸಿನಿನ್ನವನಿವನೆಂದು ಮನುಜರಿಂದ ನುಡಿಸಿನಿನ್ನ ಕೀರ್ತನೆಯ ವದನದಿಂದ ಪೇಳಿಸಿಇನ್ನು ಈ ಬಗೆ ಮಾಳ್ಪರೆ ಘನ್ನದಯಾಂಬುಧೇಮನ್ನ ವಾಚ ಕಾಯದಿ ಅನ್ಯಾಯ ಪೆಚ್ಚಿಸದೆಎನ್ನ ಬೆಳವಿಗೆಯಂತೆ ಬೆಳಸದಂತೆ ಮಾಡಿದೆಮನ್ನಣಿಸುವ ಜನರಿಂದ ಮಾಂದ್ಯವ ಮಾಡಿಸಿದೆಸನ್ಯಾಯವಲ್ಲ ಧೊರಿಯೆ ನಿನ್ನ ಚಿತ್ತವೊ ಸ್ವಾಮಿಸನ್ಮುನಿಗಣ ಪ್ರೀಯ ವ್ಯಾಸವಿಠ್ಠಲರೇಯಾನಿನ್ನವರವನೊ ನಿನ್ನ ಸರಿ ಬಂದ ಬಗೆ ಮಾಡೊ 5 ಜತೆ ವೇಣುಗೋಪಾಲ ದಾಸರ ಮನ ಮಂದಿರಾ |ಪ್ರಾಣ ನಿನ್ನದೊ ವ್ಯಾಸವಿಠ್ಠಲ ಗೋಪಾಲಕೃಷ್ಣ ||
--------------
ವ್ಯಾಸವಿಠ್ಠಲರು
ಭಕುತವತ್ಸಲ ಶೀಲಾ-ಶೇಷಗಿರಿಯ ಲೋಲಾ ಪ ನೀ ಕರುಣಿಸೊ ಎನ್ನಾ-ಕುಲಸ್ವಾಮಿ ಘನ್ನಾಅ.ಪ ಮಂದಭಾಗ್ಯನು ನಾನು ವೃಂದಾರಕ ವಂದ್ಯ ತಂದೆ ಎನಗೆಂದೆಂದು ಅನಿಮಿತ್ತಬಂಧೂ ವಂದಿಪೆ ನಿನ್ನಯ ದ್ವಂದ್ವಪಾದದ ಧ್ಯಾನ ಅ- ದೊಂದನಾದರು ಇತ್ತು ಬಂಧವ ಪರಿಹರಿಸೊ ಹಿಂದೆ ನಿನ್ನಯ ನಾಮ ಒಂದೇ ಬಂಧಹರಿಸಿತು ಭಕುತವೃಂದಕೆ ಅಂದು ಅವರೇನೆಂದು ಕರೆದರೋ ಮಂದರೋದ್ಧರ ಬಂಧಮೋಚಕ1 ಓಲೈಪರೋ ಮುಕ್ತಜಾಲ ನಿನ್ನ ಕಾಲನಾಮಕ ಆಪತ್ಕಾಲಬಾಂಧವನೆಂದು ಕಾಲಿಗೆರಗುವೆ ಕೃಪಾಳು ನೀನಲ್ಲವೆ ಸೊಲ್ಲಲಾಲಿಸೊ ಲಕುಮಿನಲ್ಲ ನೀ ನಲ್ಲದಲೆ ಇನ್ನಿಲ್ಲವೆಂದಿಗೂ ಬಲ್ಲಿದರಿಗತಿಬಲ್ಲಿದನು ಆ- ವಲ್ಲಿ ನೆನೆದರೆ ಅಲ್ಲೇ ಪೊರೆವೆ 2 ಪುರಾಣಪುರುಷನೆ ಪರಮ ಕರುಣಿ ಎಂದು ಪುರಾಣದೊಳು ನೀನೆ ಪ್ರತಿಪಾದ್ಯನೊ ಕರಿ ಧ್ರುವ ಭೃಗು ಭೀಷ್ಮರ ಚರಿತೆಯ ನೋಡಲು ಹರಿ ನಿನ್ನ ಸರಿಯುಂಟೆ ದುರಿತಾಪಹಾರದಿ ಸ್ಮರಿಪರಘ ಪರಿಹರಿಪ ಶ್ರೀಪ ಸುರಪಹರಮುಖವಿಬುಧವಂದ್ಯ ದರಸುದರ್ಶನಧಾರಿ ಶ್ರೀ ವೇಂಕಟೇಶಉರುಗಾದ್ರಿವಾಸ ವಿಠಲಾ 3
--------------
ಉರಗಾದ್ರಿವಾಸವಿಠಲದಾಸರು
ಭಕುತಾಭಿಮಾನಿ ಸಕಲದೇವರ ಧಣಿ ನಿಖಿಲವ್ಯಾಪಕ ವಿಮಲ ಮುಕುತಿದಾಯಕನೆ ನೀ ಪ ವೇದವೇದಕ್ಕೆ ಸಿಲ್ಕದಾದಿಮೂರುತಿ ನಿನ್ನ ಪಾದಧ್ಯಾನದ ಶಕ್ತಿ ಸಾಧನಕೊಡು ಹರಿಯೆ 1 ಕಮಲಪೀಠಾದಿಸುರರು ಭ್ರಮಿಸುವ ತವಪಾದ ಕಮಲಕೃಪೆಯಿತ್ತೆನಗೆ ವಿಮಲಪತಿಯೆ ನೀಡೊ 2 ಭವಮಾಲೆ ಗೆಲಿಸೆನ್ನ ದಯದಿಂದ ಸಲಹಯ್ಯ ಭವರೋಗವೈದ್ಯನೆ ದಯಾಕರ ಶ್ರೀರಾಮ 3
--------------
ರಾಮದಾಸರು
ಭಕುತಿಯ ಪಾಲಿಸು ಜೀಯಾ ಮುಂದೆ ಮುಕುತಿಗೊಡವೆ ಯಾಕೆ ನೀನೊಲಿದ ಮೇಲೆ ಪ ತನುವೆ ನಿನ್ನಾಧೀನವೆನಿಸು ಇದು ಅನುದಿನ ಕೊಡು ಏಕಪ್ರಕಾರ ಮನಸು ಧನ ವಡವೆಯ ಕಂಡ ಕನಸು ಎಂದು ನಿತ್ಯ ನಿನ್ನಂಘ್ರಿ ನೆನಸು 1 ತತ್ವದ ಮತದೊಳಗಿರುಸು ಪುಶಿ ಉತ್ತರ ಮತವೆಂಬ ಮಾರ್ಗವ ಮೆರೆಸು ಉತ್ತಮರೊಳಗೆನ್ನನಿರಿಸು ಭವ ವತ್ತುವ ನಿನ್ನ ನಾಮಮೃತ ಸುರಿಸು 2 ಶ್ರವಣ ಮನನ ಧ್ಯಾನವೀಯೋ ಎನ್ನ ಅವಗುಣವೆಣಿಸದೆ ಕರುಣಾಳು ಕಾಯೊ ಅವಸಾನದಲಿ ನೀನೆ ಗತಿಯೊ ತ್ರೈ ಭುವನೇಶ ವಿಜಯವಿಠ್ಠಲ ನೀ ದೊರೆಯೋ 3
--------------
ವಿಜಯದಾಸ
ಭಕ್ತಜನ ಪಾಲಕ - ಭಕ್ತಿಸುಖದಾಯಕ ಮುಕ್ತೀಶ ದೀನಬಂಧು ಕೃಷ್ಣ ಪ ಯುಕ್ತಿಯಲಿ ನಿನ್ನಂಥ ದೇವರನು ನಾಕಾಣೆ ಸತ್ಯವತಿ ಸುತÀನೆ ಕಾಯೋ ಕೃಷ್ಣ ಅ.ಪ. ಆನಂದತೀರ್ಥ ಮುನಿಯ ಧ್ಯಾನಿಪರ ಸಂಗ | ಆನಂದದಲಿ ನಿಲಿಸೊ ಕೃಷ್ಣ || ದೀನಜನ ಮಂದಾರ ನೀನೆಂದು ನಂಬಿದೆನೊ | ಸಾನುರಾಗದಲಿ ಕಾಯೋ ಕೃಷ್ಣ 1 ಕೆಟ್ಟ ಜನರ ಸಂಗ ಇಷ್ಟು ದಿನವೂ ಮಾಡಿ | ಭ್ರಷ್ಟನಾಗಿ ಪೋದೆನೋ ಕೃಷ್ಣ || ಬೆಟ್ಟದೊಡೆಯನೆ ನಿನ್ನ ಮುಟ್ಟಿ ಭಜಿಸುವ ಭಾಗ್ಯ | ಇಷ್ಟಗಳ ಎನಗೆ ಕೊಡಿಸೋ ಕೃಷ್ಣ 2 ಅಜಜನಕ ಗಜವರದ ಭುಜಗಶಯನನೆ ನಿನ್ನ | ಭಜಿಪ ಭಾಗ್ಯವನೆ ಕೊಡಿಸೊ ಕೃಷ್ಣ || ನಿಜವಾಗಿ ನಿನ್ಹೊರುತು ಸಲಹುವರ ನಾ ಕಾಣೆ |ವಿಜಯವಿಠ್ಠಲರೇಯ ಕೃಷ್ಣ 3
--------------
ವಿಜಯದಾಸ
ಭಕ್ತನಾಗೋ ಹರಿಗೆ ಓ ಮನುಜ ಪ ನಾಲಗೆಯಲಿ ಶ್ರೀಲೋಲನ ನಿಜಗುಣ ಜಾಲವ ಕೊಂಡಾಡೋ ಓ ಮನುಜ 1 ಮಾನಸದಲಿ ಸದಾ ಜಾನಕಿ ರಮಣನ ಧ್ಯಾನವ ಮಾಡುತಿರೋ ಓ ಮನುಜ2 ಕರಯುಗಳಗಳಿಂ ವರಗೋಪಾಲನ ಚರಣ ಪೂಜೆಮಾಡೋ ಓ ಮನುಜ 3 ರವಿಕುಲ ತಿಲಕನ ಸುವಿಮಲ ಚರಿತೆಯ ಕಿವಿಯಲಿ ಕೇಳುತಿರೋ ಓ ಮನುಜ4 ಶ್ರೀಹರಿಯ ಜಗನ್ಮೋಹನ ಮೂರ್ತಿಯ ಊಹಿಸಿ ನೋಡುತಿರೋ ಓ ಮನುಜ 5 ಶಾಸ್ತ್ರ ಸಿದ್ಧವಹ ಕ್ಷೇತ್ರತೀರ್ಥಗಳ ಯಾತ್ರೆಯ ನೀಮಾಡೋ ಓ ಮನುಜ 6 ಶ್ರೀಶಗರ್ಚಿಸಿದ ಸುವಾಸಿತ ತುಲಸಿಯ ನಾಸಿಕದಲಿ ಮೂಸೊ ಓ ಮನುಜ7 ಸಾಧುಜನಗಳಿಗೆ ಮೋದವೀವ ಶ್ರೀ ಪಾದಗಳಿಗೆ ನಮಿಸೋ ಓ ಮನುಜ 8 ಭೋಗಿಶಯನಗನುರಾಗದಿಂದ ಶಿರ ಬಾಗಿ ಸತತ ನಡೆಯೋ ಓ ಮನುಜ 9 ಈಜಗದಲಿ ತಾ ಜಾಜಿ ಶ್ರೀಶನು ರಾಜಿಪುದನು ಕಾಣೋ ಓ ಮನುಜ 10
--------------
ಶಾಮಶರ್ಮರು
ಭಕ್ತರ ಸುರಧೇನು ಶಕ್ತರ ಬಂಧು ನೀ ಪ ಭಕ್ತರ ಮೊರೆ ಕೇಳೋ ಲಕ್ಷ್ಮೀಪ್ರಿಯ ರಮಣ ಅ.ಪ ಪ್ರಾಚೀನ ಹಿರಿಯರ ಯೋಚಿಸಿ ನೋಡಲು ಕಂಟಕ ವಿಮೋಚಿಸಿ ಕಾಯ್ದಯ್ಯ1 ಕರಿರಾಜ ಧ್ರುವಮುನಿ ವರ ವಿಭೀಷಣರನ್ನು ಪರಮಪದವನಿತ್ತು ಕರುಣದಿ ಪೊರೆದಯ್ಯಾ 2 ದೀನನೋಳ್ದಯವಾಗಿ ಹೀನಸ್ಥಿತಿ ಪರಿಹರಿಸೊ ಧ್ಯಾನಿಸುವರಿಗತಿ ಸುಲಭನೆ ಶ್ರೀರಾಮ 3
--------------
ರಾಮದಾಸರು
ಭಕ್ತರುದ್ಧಾರಕ ದಾಸರಾಯರಿವರ್ಯಾರೇ ಪೇಳಕ್ಕ ಪ. ಮುಕ್ತಿಗೊಡೆಯನ ಮಾರ್ಗತೋರಿ ಭವ ಮುಕ್ತಿಗೊಳಿಪ ಶ್ರೀ ಗುರುವೆಲೆ ತಂಗಿ ಅ.ಪ. ಕಂದರಂದದಿ ಪೊಂದಿದವರ ಪೊರೆಯುವರ್ಯಾರೇ ಪೇಳಕ್ಕಯ್ಯ ನಂದಕಂದನ ಅಂಕಿತ ಕೊಡುವವರ್ಯಾರೇ ಪೇಳಕ್ಕಯ್ಯ ಸಿಂಧುಶಯನನ ತೋರುವೆನೆಂಬುವರ್ಯಾರೇ ಪೇಳಕ್ಕಯ್ಯ ಬಿಡಿಸುವ ದಾಸೋತ್ತಮರೆಲೆ ತಂಗಿ 1 ಭಾವಜನಯ್ಯನ ಭಾವಿಸಿ ಭಜಿಸುವರ್ಯಾರೇ ಪೇಳಕ್ಕಯ್ಯ ಸಾವಕಾಶವಿಲ್ಲದೆ ತತ್ವವನೊರೆಯುವರ್ಯಾರೇ ಪೇಳಕ್ಕಯ್ಯ ಪಾವನಮಾನಿಗತಿ ಪ್ರಿಯರೆಂದೆನಿಸುವರ್ಯಾರೇ ಪೇಳಕ್ಕಯ್ಯ ನಾಮಾತ್ಮಕರಲೆ ತಂಗಿ 2 ಮಂದಮತಿಗಳ ಬಂದು ಕಾಯ್ವರಿವರ್ಯಾರೇ ಪೇಳಕ್ಕಯ್ಯ ಗಂಧಾಕ್ಷತೆ ಪದ್ಮಾಕ್ಷಿಯ ಧರಿಸಿಹರ್ಯಾರೇ ಪೇಳಕ್ಕಯ್ಯ ಬಂದು ಸ್ವಪ್ನದಿ ಅಭಯ ಕೊಡುವರಿವರ್ಯಾರೇ ಪೇಳಕ್ಕಯ್ಯ ಪೊಂದಿ ಭಜಿಸಿದ ಮಹಿಮರೆ ತಂಗಿ 3 ಕಷ್ಟವ ಬಿಡಿಸಿ ಉತ್ಕøಷ್ಟವ ತೋರಿದರ್ಯಾರೇ ಪೇಳಕ್ಕಯ್ಯ ಸೃಷ್ಟೀಶ ನಿತ್ಯಾನಂದನ ತೋರಿದರ್ಯಾರೇ ಪೇಳಕ್ಕಯ್ಯ ತುಷ್ಟಿಬಡಿಸಿ ವಚನಾಮೃತ ಕರೆಯುವರ್ಯಾರೇ ಪೇಳಕ್ಕಯ್ಯ ಶ್ರೇಷ್ಠ ದಾಸರೆಂದೆನಿಸಿ ಗೋಪಾಲಕೃಷ್ಣವಿಠಲಗತಿ ಪ್ರ್ರಿಯರೆ ತಂಗಿ4
--------------
ಅಂಬಾಬಾಯಿ
ಭಕ್ತಿಗೆ ಮೂರು ಗುಣಗಳು ಬೇಕು ಯುಕ್ತಿವಂತರು ಕೇಳಿ ಮುಕ್ತಿಶೀಲವು ತಿಳಿದು ನಿಜವಿರಕ್ತತನದಲಿ ಬಾಳಿ ಧ್ರುವ ಪ್ರೇಮ ಪ್ರೀತಿ ರತಿ ನೇಮದಲಿ ಶ್ರೀಸ್ವಾಮಿ ಚರಣದಲಿಡಬೇಕು ಸೌಮ್ಯ ಸಮಾಧಾನದಲಿ ತಾನಮೃತವನು ಹಿಡಿಯಬೇಕು ನಿರ್ಮಳದಲಿ ನಡಿಬೇಕು ಪಡೆದು ಸಮದೃಷ್ಟಿಗುಡಬೇಕು 1 ನಿತ್ಯ ವಿವೇಕವು ತಿಳಿದು ಪಥ್ಯದಲಿ ನಡಿಯಬೇಕು ಚಿತ್ತವೃತ್ತಿ ಸವೃತ್ತಿಯ ಮಾಡಿ ಸತ್ಯದಲಿ ನುಡಿಯಬೆಕು ಉತ್ತಮೋತ್ತಮ ವಸ್ತುದ ನಿಜಸುಖ ಹೃತ್ಕಮಲದಲಿಡಬೇಕು ಭಕ್ತಿಗೆ ಭಾವನೆ ಬಲಗೊಂಡು ವೈರಾಗ್ಯದ ಸುಖ ತೊಡಬೇಕು 2 ಸೋಹ್ಯ ಸೋನ್ನಿಯ ಸೂತ್ರವ ತಿಳಿದು ಸ್ಥಾಯಿಕನಾಗಿರಬೇಕು ಧ್ಯೇಯಧ್ಯಾತಧ್ಯಾನವ ತಿಳಿದು ಮಾಯದ ಮೊನೆ ಮುರಿಬೇಕು ನ್ಯಾಯ ನೀತಿಯ ನೆಲೆನಿಭವನು ಉಪಾಯದಲಿ ಅರಿಯಬೇಕು ಪಾಯಕನಾಗನುದಿನ ಮಹಿಪತಿ ಗುರುಪಾದದಿ ಸ್ಥಿರವಿರಬೇಕು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಜನೆ ಭಾಗ್ಯ ಒಂದೇ ಸಾಲದೇ | ಹರೀ ಪ. ಭಜಕರಾದವರಿಗೆ ಹಗಲು ಇರುಳು ಮಾಳ್ಪಾ ಭಜನೆ ಭಾಗ್ಯ ಒಂದೇ ಸಾಲದೆ ಅ.ಪ. ಭಕ್ತರೆಲ್ಲರು ಕೂಡೀ ಮುಕ್ತಿಗೊಡೆಯನ ಪಾಡಿ ಭಕ್ತಿ ಭಾಗ್ಯವ ಬೇಡಿ ನೃತ್ಯವ ಗೈಯುವಾ 1 ತಾಳ ತಂಬೂರಿ ಗೆಜ್ಜೆ ಮೇಳನದಿಂದಲೀ ತೋಳುಗಳೆತ್ತಿ ಪಾಡೀ ವೇಳೆಯ ಕಳೆವಂಥಾ 2 ಹಿಂದೆ ಮುಂದಾಡುವ ನಿಂದಕರಾ ನುಡಿ ಒಂದು ತಾರದೆ ಮನಕಾನಂದವ ಬೀರುವಾ 3 ಕಟ್ಟಳೆ ಮೀರದೆ ಬಿಟ್ಟು ಬಿಡದೆ ನಿತ್ಯ ನಿಷ್ಠೆಯಿಂದಲಿ ಗುರು ಕೊಟ್ಟ ಅಜ್ಞೆ ಎಂಬಾ 4 ಮೂರ್ತಿ ನಿಂತು ಒಳಗೆ ಹೊರಗೆ ಸಂತಸಪಡಿಸೆ ಏಕಾಂತ ಭಕ್ತರು ಮಾಳ್ಪ 5 ಸಾಸಿರ ಸತ್ಕರ್ಮ ಮೀಸಲು ಫಲಗಳೂ ಶ್ರೀಶನ ಧ್ಯಾನಕೆ ತ್ರಾಸಿಗೇರದೆಂಬ 6 ಪದ್ಧತಿಯಂತೆ ತಂದೆ ಮುದ್ದುಮೋಹನ್ನ ಗುರು ಪದ್ಮ ಪಾದಕೆ ಸೇರಿ ಪೊದ್ದಿದ ದಾಸ್ಯದ 7 ತ್ರಿಗುಣದ ಕಲ್ಮಶ ವಗೆದು ದೂರಕೆ ಮನ ಮಿಗಿಲಾಗಿ ಹರಿಪದ ತಗಲಿಕೊಂಬುವುದಕ್ಕೆ 8 ನರ್ತಗೈಯ್ಯುತ ಸುತ್ತಿ ಪ್ರದಕ್ಷಿಣೆ ಎತ್ತಿ ಸ್ವರವ ಹರಿ ಮೂರ್ತಿಯ ಪಾಡುವಾ 9 ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನನು ಇಟ್ಟು ಹೃತ್ಕಮಲದಿ ಮುಟ್ಟುವೋ ಹರಿ ಪುರ 10
--------------
ಅಂಬಾಬಾಯಿ
ಭಜನೆಯ ಪದ ಭಕ್ತ ವತ್ಸಲ ಸ್ವಾಮಿ ಭಯನಿವಾರಣ ದೇವ ಭರದಿಂದ ಬಂದುದ್ಯಾಕೆ ಪೇಳಯ್ಯಾ ಪ ಭಾರ ಹೊತ್ತು ಬಂದೆಯಾ ಕೋರೆದಾಡಿಗಳಿಂದ ಧಾರೂಣಿ ಎತ್ತೀ ತಂದು ಭಾರ ವಾಯಿತೆಂದು ಬಂದೆಯಾ 1 ಬಾಲಕಾನಾ ನುಡಿಯ ಕೇಳಿ | ಬೇಗದಿಂದಾ ಬಂದೆಯಾ ದುರುಳನ್ನ ಕೊಂದು ಕರುಳ ಮಾಲೆಯಧರಿಸಿ ನೀ ತರಳಗಭಯವಿತ್ತು ಬಂದೆಯಾ2 ಬಲಿಯ ದಾನಾಬೇಡಿ ನೀನು ಕೊಡಲಿ ಪಿಡಿದೂ ನಿಂತೆಯಾ ಮಡದಿಯಾ ಕದ್ದವನ ಬಿಡದೆ ಬೆನ್ನಟ್ಟಿಕೊಂಡು ಸಡಗರದಲಿ ನೀ ಬಂದೆಯಾ 3 ಮಧರೇಲಿ ಹುಟ್ಟಿ ಮಲ್ಲಾರ ಮಡುಹೀ ಮಾವ ಕಂಸನ ಕೊಂದು ಬಂದೆಯಾ ಆನಂದಿಂದಿಲ್ಲಿ ಬಂದೆಯಾ 4 ವಸನಾ ವಿಲ್ಲದೆ ನೀನು ಪಶುವನ್ನೇರಿಕೊಂಡು ವಸುಧೆಯ ಒಳಗೆಲ್ಲಾ ತಿರುಗೀದೆಯಾ ನೀ ಬಂದೆಯಾ5 ಕರಿಯಾ ಮೊರೆಕೇಳಿ ನೀ ತ್ವರಿತಾದಿಂದಾ ಬಂದೆಯಾ ಮ ಕರಿವರದನೆಂದೆನಿಸಿಕೊಂಡೆಯಾ 6 ಕಷ್ಟ ಪಡುವಾ ಜನರ ಕಂಡು ಕಡುದಯದಿಂ ಬಂದಿಯಾ ಪಕ್ಷಿವಾಹನನೇ | ಲಕ್ಷಮಿರಮಣನೆ | ಕಟಾಕ್ಷವನೇ ಬೀರುವಿಯಾ 7 ಹತ್ತವತಾರವ ಎತ್ತಿ ಬೇಸತ್ತು ನೀ ಮತ್ತೆ ನೀನಿಲ್ಲ ಬಂದಿಹೆಯಾ ಬರುವರು ಕಂಡೆಯಾ 8 ಲಕ್ಷ್ಮಿ ಇಲ್ಲದೆ ನಾನಿರೆನೆನುತಲಿ ವೈಕುಂಠ ಬಿಟ್ಟು ಬಂದೆಯಾ ಭಕ್ತಾರ ಸಲಹಲು ಬಂದಿಹೆಯಾ 9 ಹುಡುಕೀಕೊಂಡಿಲ್ಲೇ ಬಂದಿಹೆಯಾ 10 ಪಾಪನಾಶಿನಿ ಸ್ನಾನ ಮಾಡೋರು | ನಿನ್ನ ಧ್ಯಾನ ಬೇಡೋರು ಮನದಿಕ್ಷ್ಟಾರ್ಥಗಳ ಸಲಿಸಲು | ಆತೂರದಿಂದಲಿ ಬಂದೆಯಾ 11 ರೀತಿಗಳಿಂದ ಸೇವಿಸುವರು ನಿನ್ನ ಕೆರಂಡಾಡುವರು 12 ಬಳಿ ಬಂದಿಹರು ಬೇಡುತಾ ನಿಂದಿಹರೂ13 ಪಡುತಲಿ ಬಂದಿಹರು ಸಂತಯಿಸಬೇಕೆನುತ ಬಂದಿಹೆಯಾ14 ಬಳಿ ಬಂದಿಹರೂ ಬೀಸಾಡಲೂ ಬಂದಿರುವಿಯಾ 15 ಬಂದಿಹರೂ ನಿನಗೊಂದಿಸುವರೂ 16 ಹೆಜ್ಜೆಗೆ ನಿನ್ನ ವಂದಿಸುತಲೀ ಬಾಷ್ಟಗಳ ಸುರಿಸುವರೂ 17 ನಲಿಯುವರೂ ಕುಣಿ ದಾಡುವರೂ 18 ದೋಬಿಕೊಳ್ಳುತ ನೀ ನಿಂತಿರುವೇ ಯಲ್ಲಾನುಕಸಕೊಂಡು ಕಳುಹುವಿಯೇ 19 ತೀರೀತೆಂದು ತಿಳಿಯುತಲೀ ಧನ್ಯರಾದೇವೆನುತ ತೆರಳುತಿಹರೂ 20 ಮೇಲಾದ ಭಕ್ಷಗಳ ಬಡಿಸುವೋರು
--------------
ರಾಧಾಬಾಯಿ
ಭಜಿಸಿ ಬದುಕೆಲೋ ಮಾನವ ಶ್ರೀಹರಿನಾಮ ತಾರಕಮಂತ್ರವ ಪ. ದುರಿತಕೋಟಿಗಳಂ ಪರಿಹರಿಸಿ ನಿಜಪದ ಸರಸೀರುಹದೊಳಗಿರಿಸಿ ಪೊರೆವನ 1 ದುರ್ಜನ ನಿಂದೆಗೆ ಲಜ್ಜಿತನಾಗದೆ ದುರ್ಜನ ದಮನನ ಧ್ಯಾನದೇ ನೀಂ 2 ಪೊಗಳಲು ಹಿಗ್ಗದೆ ತೆಗಳಲು ತಗ್ಗದೆ ಬಗೆಕುಂದದೆ ಸಮ್ಮೋದದೇ ನೀಂ 3 ಅಷ್ಟಮದಂಗಳ ಕಟ್ಟುತೆ ದೃಢದಿ ದೃಷ್ಟಿನಿಲ್ಲಿಸಿ ನಿಷ್ಠೆಯೋಳ್ ನೀಂ4 ದೋಷರಹಿತ ಶ್ರೀಶೇಷಗಿರೀಶನ ದಾಸರವಾಸನೆನ್ನಿಸಿ ಸಂತತಂ 5
--------------
ನಂಜನಗೂಡು ತಿರುಮಲಾಂಬಾ
ಭಜಿಸಿರೊ ಬಿಡದೆ ವಿರಾಜಮಾನರಾಗಿ ನಿತ್ಯ ಕುಜನರೊಳಾಡದಲೆ ನಿಜ ಭಕುತಿಯಿಂದ ಭುಜಬಲವುಳ್ಳ ಪರಜರಟ್ಟುವ ದಿ ಗ್ವಿಜಯ ಸತ್ಯಪೂರ್ಣರ ಸುಜನರೊಂದಾಗಿಪ ಭರದಿಂದ ಬಂದು ನಿಂದು ನಿರೀಕ್ಷಿಸಿ ನಿರ್ಮಳ ಕರಯುಗಳ ಮುಗಿದು ಶಿರವಾನಿಲ್ಲದೆ ಧರಣಿಯಾ ಮ್ಯಾಲೊಂದು ತೀವರ ಸಾಷ್ಟಾಂಗ ನಮ ಸ್ಕರಿಸಿ ಕೊಂಡಾಡಿ ನಿಂದಿರಲಾನರರಿಗೆಲ್ಲ ಪರಿಹರವೊ ಬಂದರಘಳಿಗೆಯಲಿ ದುರುಳರಿಗಾಯ್ತು ಮರಿಯದೆ ಚೆನ್ನಾಗಿ1 ನೆರೆನಂಬಿ ನಿಮ್ಮಯ ಗೋತುರ ಸಹಿತಕ್ಕೆ ಜ್ಞಾನಾಂ ಕುರವಾಗುವುದು ಇದು ಉರುಕಾಲ ಸಿದ್ಧವೆನ್ನಿ ತರತಮ್ಯ ತತ್ವ ತಾತ್ಪರಿಯ ವಿಧ ತಿಳಿದು ಸುರರು ಮೆಚ್ಚುತಲಿರೆ ಮುರರಿಪು ಚತುರ್ದಶ ಧರಣಿಗೆ ಪರನೆಂದು ಬಿರಿದನು ಎತ್ತಿ ಡಂಗುರವ ಹೊಯಿಸಿ ಡಿಂಗರರಿಗೆ ಸಚ್ಛಾಸ್ತ್ರ ಕೊಡುವ ಯತಿಶಿರೋಮಣಿ ಕರ್ನಾ 2 ಪಾದಾಂಬುಜಾತ ಕೃಷ್ಣಾ ತನು ಭವಸರಿತ ನಿವಾಸಾ ದಿವಿಜೇಶನಾಯುಧ ಕವಚದಿಂದಲಿ ತನ್ನವರನ ಪೊರೆದೆತ್ತಿ ನವವಿಧ ಬಗೆ ತೋರಿ ತವಕದಿ ಕೋಲುಪುರ ಪವಿತುರ ಸ್ಥಳದಲ್ಲಿ ರವಿಯಂತೆ ಪೊಳವರು ಭವದೋಷ ಕಳೆವುತಾ ಕವಿಗಳ ಮನೋಹರ ವಿಜಯವಿಠ್ಠಲನ ಶ್ರವಣ ಮನನ ಧ್ಯಾನವನು ಬಲ್ಲವರಾ3
--------------
ವಿಜಯದಾಸ
ಭಜಿಸು ಮನವೆ ಭಜಿಸು ಮನವೆ ಅಜ ಸುರ ಮುನಿ ವಂದಿತ ಪಾದ ಪೂಜಿಸು ನಿಜಸ್ವರೂಪ ನಿತ್ಯ ಸುಜನ ಮನೋಹರನ 1 ಪರಮಪುರುಷ ಪರಂಜ್ಯೋತಿ ಪಾರಾವಾರ ಹರಿಗೋಪಾಲ ಕರುಣಾಕೃಪಾಲ ಮೂರುತಿ ಸ್ವಾಮಿ ಸಿರಿಲೋಲನ 2 ಅತೀತ ಗುಣಾನಂತಮಹಿಮ ಪತಿತಪಾವನ ಪೂರ್ಣ ಸತತ ಸದೋದಿತ ಪಾದ ಅತಿಶಯಾನಂದನ3 ಅವ್ಯಕ್ತ ಅವಿನಾಶ ಸು ದಿವ್ಯ ಸುಪವಿತ್ರದಾಗರ ಘವಘವಿಸುವ ದಿವ್ಯ ತೇಜ ರವಿಕೋಟಿ ಕಿರಣನ 4 ಅನಾಥಬಂಧು ಅನುದಿನ ಅಣುರೇಣು ತೃಣಪೂರ್ಣ ಪ್ರಾಣದೊಡೊಯ ಮಹಿಪತಿ ದೀನದಯಾಳುನಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಜಿಸುವರ ಭಾಗ್ಯವೆ ಭಾಗ್ಯ ಭುವನದಲಿತ್ರಿಜಗದೊಡೆಯನು ರಾಮಕೃಷ್ಣ ರೂಪಿನಲಿರಲು ಪಶ್ರುತಿ 'ಧಿತ ನಿಯಮಗಳ ಮಾಡಿ ತದನಂತರದಿಶತಸಹಸ್ರರಿಗೊರೆದು ಕಾವ್ಯ ಪಾಠವನುಶ್ರುತಿಗಗೋಚರ ಕೃಷ್ಣ ಪಾದಪೂಜೆಯ ನಿತ್ಯಜಿತಮನಸ್ಕದಿ ರಚಿಸಿ ನಲಿವ ಮೂರ್ತಿಯನು 1ವೇದಾಂತ ಶಾಸ್ತ್ರವನು ವೇದ'ತ್ತುಗಳಿಂಗೆವಾದಗುಟ್ಟದ ತೆರದಲುಪದೇಶಗೈದುವೇದಶಾಸ್ತ್ರಾರ್ಥವನು ಸಾದರದಿ ಸಕಲರಿಗೆಬೋಧಿಸುವ ಸಂಸಾರಸಾಗರೋತ್ತಾರರನು2ರಾಮಾವತಾರದಲಿ ರಾಮನೆಂದೇ ನಾಮವಾಮೇಲೆ ದ್ವಾಪರದಿ ರಾಮ ಕೃಷ್ಣರೆಂದುನಾಮವೆರಡವರಿಂಗೆ ತನುವೆರಡು ಬಳಿಕೀಗರಾಮಕೃಷ್ಣನಾಮದಲಿ ಕಲಿಯುÀಗದಿ ಜನಿಸಿರಲು 3ಅವತಾರವೆಂಬುದುಪಚಾರವಲ್ಲಿದು ಕೇಳಿಭವನ ಪ್ರತಿಬಿಂಬ ಶ್ರೀ ಶಂಕರಾಚಾರ್ಯಭವದೂರ ಗುರುಮೂರ್ತಿ ಕೃತ ಗ್ರಂಥ ವ್ಯಾಖ್ಯಾನಕಿವರೆಂದು ಆನಂದ ಘನ ಸ್ವಪ್ನವಾಗಿರಲು 4ಅಜನ ಭಜನೆಯಲಜನು ತ್ರಿಜಗರಕ್ಷಾರ್ಥದಲಿಅಜನ ಪೌತ್ರತ್ವದಲಿ ನಿಜಸತಿಯ ನೆವದಿತ್ರಿಜಗ ಕಂಟಕ ರಾವಣನ ಮುರಿದು ಭಜಕರಿಗೆಅಜ ಪದ' ಮೊದಲಾಗಿ ಕೊಟ್ಟ ರಾಮನನು 5ಭೂ'ು ಭಾರವನಿಳುಹಲೆಂದು ನೇಮವ ಧರಿಸಿರಾಮನನುಜನು ತಾನು ಕೃಷ್ಣನೆಂದೆನಿಸಿಭೀಮ ಘಲುಗುಣ ಧರ್ಮ ಮುಖದಿ ಕೌರವ ಪಡೆಯಭೂ'ುಯಲಿ ನೆಲೆಗೊಳಿಸಿದಮಲ ಮೂರ್ತಿಯನು 6ಧರೆಗಧಿಕವೆಂದೆಂಬ ದೃಷದಪುರದಲಿ ನಿಂದುಶರಣಾಗತರ ಸಲ' ಮ'ಮೆಗಳ ಮೆರೆದುತಿರುಪತಿಯ ವೆಂಕಟನ ಪ್ರತಿಬಿಂಬ ಗುರುವರ್ಯಪರವಾಸುದೇವ ಶ್ರೀ ರಾಮಕೃಷ್ಣಾರ್ಯರನು 7ಓಂ ಪುಣ್ಯಾಯ ನಮಃ
--------------
ತಿಮ್ಮಪ್ಪದಾಸರು