ಒಟ್ಟು 28225 ಕಡೆಗಳಲ್ಲಿ , 136 ದಾಸರು , 9942 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ವಾಮಿ ಶಂಕರನಿರಲಿಕ್ಕೆಕಾಮದಕಳವಳಿಕೇಕೆಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಗುರುನಾಮ ನಿಧಾನಿರಲಿಕ್ಕೆ | ಎನಗಿಲ್ಲೆಂಬುವದೇಕೆ ಅ.ಪ.ಅನಾಥ ಬಂಧುಅನುದಿನಎನಗಿರೆ |ಅನುಕೂಲದ ಚಿಂತ್ಯಾಕೆ |ತನುಮನಧನದೊಳು ತಾನೆ ತಾನಿರಲು |ಅನುಮಾನಿಸಲಿನ್ಯಾಕೆ ಸ್ವಾಮಿ1ದಾತನೊಬ್ಬ ಶ್ರೀನಾಥ ಎನಗಿರಲು |ಯಾತಕೆ ಪರರ ದುರಾಶೇ |ಮಾತು ಮಾತಿಗೆ ತೋರುವಸದ್ಗುರು ತೇಜಃ ಪುಂಜಗಳ್ಯಾಕೆ ಸ್ವಾಮಿ2ದೊಡ್ಡದು ಸಣ್ಣದು ಧಡ್ಡನು ಜಾಣನು |ಎಂದೆಣಿಸುವದಿನ್ಯಾಕೆ | ಗುಡ್ಡದ್ಹಾಂಗಶ್ರೀ ಶಂಕರನಿರಲು ದುಡ್ಡಿನ ಹಂಗುಗಳ್ಯಾಕೆ ಸ್ವಾಮಿ3
--------------
ಜಕ್ಕಪ್ಪಯ್ಯನವರು
ಸ್ವಾಮಿ ಸತ್ಯಾಧಿರಾಜ ಮುನಿಗೆಣೆಗಾಣೆ ನಾಭೂಮಿಯ ಮೇಲೆ ಚತುರನಸಾಮಥ್ರ್ಯ ನೋಡಿರಿ ಭಕುತಿಯನರಿಯದಪಾಮರನನು ಬಾಗಿಸುವನ ಪ.ಗುರುಸತ್ಯಾಭಿನವರಾಯನ ಪಟ್ಟದಾನೆಯುಧÀರೆಯ ಮೇಲೋಡಾಡುವಂತೆಚರಿಸುತ ಖಳರನಂಜಿಸಿ ತಪ್ಪ ಕೈಕೊಂಡುಗುರುಪಾದಕೊಪ್ಪಿಸಿ ನಿಂತ 1ಕಲ್ಲು ಕರಗುವುದು ಕೆಚ್ಚು ಮಣಿವುದು ಇದೆಲ್ಲಿಯ ಗಾದೆಯೆಂದೆನಲುಕಲ್ಲೆದೆ ಮಾನಿಸರ ದ್ರವಿಸುವ ಕೆಚ್ಚೆದೆಕ್ಷುಲ್ಲರ ಮಣಿಸುವಕೇಳಿ2ಆಲಸ್ಯವೆ ಮೋಕ್ಷೋಪಾಯ ದಹನೆಂದುಕಾಲವ ಕಳೆಯನು ವ್ಯರ್ಥಮೂಲ ರಘುಪತಿ ಪಾದಾರವಿಂದವ ಮೇಲೆಮೇಲರ್ಚಿಪ ಸಮರ್ಥ 3ಜ್ಞಾನ ಭಕುತಿ ವೈರಾಗ್ಯಪ್ರಣವಜಪಧ್ಯಾನ ಮೌನ ಪರಿಪೂರ್ಣಆನಂದತೀರ್ಥ ಶಾಸ್ತ್ರಾಂಬುಧಿ ತಿಮಿಂಗಿಲದೀನರಸುರತರುಜಾಣ4ತಂದೆ ಸತ್ಯಾಭಿನವ ತೀರ್ಥ ಕರಜಾತಎಂದೆಂದು ಸುಜನರ ಪ್ರಿಯಇಂದಿರೆರಮಣ ಪ್ರಸನ್ವೆಂಕಟೇಶನಹೊಂದಿದ ಸದ್ಗುಣಗೇಹ5
--------------
ಪ್ರಸನ್ನವೆಂಕಟದಾಸರು
ಸ್ವಾಮಿತ್ವದವರಿಗೆ ಅಯುಕ್ತವೇ ಯುಕ್ತ |ಶ್ರೀಮನೋರಮನೆ ಪೇಳುವೆ ಕೇಳು ಶಕ್ತ ಪಮಾವನಿಗೇ ಮಾವನಾದೆಯಲೊ ಜನ್ಮಾರಭ್ಯ |ನೀವೊಡಲ ಹೊರದೆ ಚೋರತನ ಮಾಡಿ ||ಕೋವಿದಂಗತಿ ಮೆಚ್ಚು ಜಾರತನ ಮಾಡಿದುದು |ಆ ವನಿತೆ ಮೆದ್ದ ಫಲ ಮೆದ್ದಿ ನಿರ್ದೋಷಿ 1ನರಸೇವೆಯ ಮಾಡಿ ಪೆಸರಾದಿ ಮಾತೆಯ ಕೊಂದೆ |ಧರೆಯೊಳಗೆ ಮಾತುಲನ ಕೊಲ್ಲಬಹುದೇ ||ತಿರುಕಿ ಬೇಡಿಸುವಳರಸರನ ನಿನ್ನಯ ರಾಣಿ |ಪರಿಮಿತಿಯಿಲ್ಲದ ದುರಾಚಾರಿ ನಿನ್ನಯ ಮಗನು 2ಮೈದುನನು ಗುರುದ್ರೋಹಿ ಮೊಮ್ಮಗನು ಬಹು ಚಾಡಿ |ಮೇದಿನಿಯೊಳಗೆ ಹೇಳುತಲೆ ತಿರುಗುವ ||ಶ್ರೀದ ಪ್ರಾಣೇಶ ವಿಠ್ಠಲನೇ ನೀನೇ ದೊರೆ |ಯಾದ ಕಾರಣ ದಕ್ಕಿತಿದು ಇಲ್ಲದರೆ ಸಲ್ಲ 3
--------------
ಪ್ರಾಣೇಶದಾಸರು
ಸ್ವಾಮಿಪರಾಕುಮಹಾಸ್ವಾಮಿ ಸಜ್ಜನಪ್ರೇಮಿಪ.ಕ್ಷೀರಸಾಗರಶಯನ ನಿವಾಸಾಪಾರಗುಣಗಣಾಶ್ರಯಪಾರಮೇಷ್ಠಿ ಪ್ರಮುಖಾಮರಪೂಜಿತಚಾರುಪದಾಬ್ಜದ್ವಯ ದನು-ಜಾರಿ ಧನಂಜಯಪ್ರಿಯ ಮದವಾರಣಕೃತನಿರ್ಭಯ ನಮ್ಮದೂರನುಲಾಲಿಸುಚಿನ್ಮಯ ಜಯ1ದುಷ್ಟ ನಿಶಾಚರರಟ್ಟುಳಿಘನಕಂಗೆಟ್ಟುದು ಸುರಮುನಿಗಣ ಆಭ್ರಷ್ಟರು ಮಾಡುವ ನಿಷ್ಠುರಕೆ ಮೈಗೊಟ್ಟೆವು ಸಂಕರ್ಷಣ ನಾವಿ-ನ್ನೆಷ್ಟೆಂಬುದು ದುರ್ಗುಣವಶ ಬಿಟ್ಟೆವು ಸುರಪಟ್ಟಣ ನಮ್ಮಕಷ್ಟವು ಪದಕರ್ಪಣ ಪರಾಯಣ 2ಅಂತರಂಗ ಬಹಿರಂಗ ಭ್ರಷ್ಟದನುಸಂತತಿ ಸಂತತಿ ಭಾರಿ ಬಲುಭ್ರಾಂತಿವಿಜ್ಞಾನವಿತಾನಧುರೀಣರ್ಸಂತಾಪಿಪರು ಮುರಾರಿ ನಮ್ಮಸಂತೈಸೈ ಗಿರಿಧಾರಿ ಶ್ರೀಕಾಂತ ಕೃಪಾರ್ಣವಶೌರಿಜಗ-ದಂತ ವಿಹಾರಿ ನಿರಂತ ಪರಂತಪ 3ಚೆನ್ನಕೇಶವ ಚರಾಚರಾತ್ಮ ಚೈತನ್ಯರೂಪ ಶ್ರೀರಂಗ ನಮ್ಮಬಿನ್ನಪಲಾಲಿಸುತ್ರಿಭುವನವನ್ನುಸನ್ನುತಶುಭಾಂಗ ಸ-ರ್ವೋನ್ನತ ಮಹಿಮತರಂಗದುರಿತಾನ್ವಯತಿಮಿರಪತಂಗ ಸುಪ್ರಸನ್ನಸದೋದಿತವಿಹಂಗತುರಂಗ4ನೀಲೇಂದೀವರ ಶ್ಯಾಮಲ ಕೋಮಲಕಾಲನಿಯಾಮಕ ಪ್ರಾಣ ನಿನ್ನೋಲಗ ಸೇವಕರಾಳಿಯೂಳಿಗವ ಕೇಳು ತ್ರಿಲೋಕತ್ರಾಣನತಪಾಲ ಪರೇಶ ಪುರಾಣ ಶ್ರೀಲೋಲ ವಿಗತ ಪರಿಮಾಣ ಹೃದ-ಯಾಲಯಮಣಿ ಲಕ್ಷ್ಮೀನಾರಾಯಣ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸ್ವಾಮಿಪುಷ್ಕರ ತೀರನಿಲಯನಮೋಸ್ವಾಮಿವರಾಹ ವೆಂಕಟನಾಯಕಸ್ವಾಮಿಪಾಹಿಪಾಹಿ ಸ್ವಾಮಿತ್ರಾಹಿಸ್ವಾಮಿ ವರಾಹವೆಂಕಟನಾಯಕ ಪ.ಯಜÕಗಾತ್ರ ವಿಧಿನುತ ಪ್ರಭು ಶ್ರೀಯಜÕವರಾಹವೆಂಕಟನಾಯಕಯಜÕ ಭೋಕ್ತø ಹೇಮಾಂಬಕ ಹರಯಜÕವರಾಹವೆಂಕಟನಾಯಕ1ಭೂಭಯದೂರ ಧರಾಮನೋಹರಭೂವರಾಹ ವೆಂಕಟನಾಯಕಶೋಭಿತ ಬಾಲಚಂದ್ರೋಪಮಕ್ರೋಡಭೂವರಾಹ ವೆಂಕಟನಾಯಕ 2ಶ್ವೇತಾದ್ರೀಶಾರ್ಚಿತ ಪಾದಕಮಲಶ್ವೇತವರಾಹ ವೆಂಕಟನಾಯಕಪಾತಕಮೋಚಕಪ್ರಸನ್ವೆಂಕಟಶ್ವೇತವರಾಹ ವೆಂಕಟನಾಯಕ 3
--------------
ಪ್ರಸನ್ನವೆಂಕಟದಾಸರು
ಸ್ವಾಮೀ ರಕ್ಷಿಸು ಸುಬ್ರಹ್ಮಣ್ಯಕಾಮಿತಪ್ರದ ಸುರಸ್ತೋಮಾಗ್ರಗಣ್ಯ ಪ.ಜನ್ಮ ಜನ್ಮಾಂತರದ ಕರ್ಮಾನುಸಾರದಿಂದುರ್ಮತಿಗೆಳಸಿಯಹಮ್ಮಮತೆಯಲಿದುರ್ಮದಾಂಧನಾದೆದುರಿತದೂರವಿರಿಸುನಿರ್ಮಲಜ್ಞಾನೋಪದೇಶವನಿತ್ತೆನ್ನ 1ಪ್ರತ್ಯಗಾತ್ಮನ ನಾಮ ಕೀರ್ತನೆ ಗೈಯುತ್ತಭಕ್ತಿಸೌಭಾಗ್ಯವಿರಕ್ತಿಯ ನೀಡುಭೃತ್ಯವತ್ಸಲ ಭವಭಯಹರ ಗಿರಿಜಾ-ಪುತ್ರನೆ ಪರಮಪವಿತ್ರ ಸುಚರಿತ್ರನೆ 2ಸುರಲೋಕವನುಕಾವಧುರಧೀರ ಪ್ರಭು ನಿನಗೀನರಲೋಕವನು ಕಾವದುರು ಕಷ್ಟವೇನುಪರಿಶುದ್ಧ ಸ್ಥಾನಿಕಧರಣೀಸುರಕುಲ-ಗುರುವೆಂದು ಚರಣಕ್ಕೆ ಶರಣಾಗತನಾದೆ 3ಸಾಕುವಾತನು ನೀನೆ ಸಲಹುವಾತನು ನೀನೆಬೇಕು ಬೇಡೆಂಬುವರ ನಾ ಕಾಣೆ ದೊರೆಯೆಲೋಕೇಶ ಸುಕುಮಾರ ಶೋಕಮೋಹವಿದೂರನೀಕರಿಸದೆಯೆನ್ನ ಸ್ವೀಕಾರ ಮಾಡಯ್ಯ 4ಪೃಥ್ವಿಯೊಳ್ಪಾವಂಜೆ ಕ್ಷೇತ್ರಾಧಿವಾಸನೆಸುತ್ರಾಮಾದಿ ಸುರಮೊತ್ತ ಪೂಜಿತನೆಕರ್ತಲಕ್ಷ್ಮೀನಾರಾಯಣನ ಸಾರೂಪ್ಯನೇದೈತ್ಯದಲ್ಲಣ ವಲ್ಲೀದೇವಿ ಮನೋಹರನೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹಂಚಿನ ಇದಿರಲಿ ಹಲ್ಲನು ತೆಗೆಯಲುಮಿಂಚುವ ಕನ್ನಡಿಯಾದೀತೆ ? ಪ.ಮಿಂಚಿನ ಬೆಳಕಲಿ ದಾರಿಯ ನಡೆದರೆಮುಂಚುವ ಊರಿಗೆ ಮುಟ್ಟೀತೆ ? ಅಪಬಾಲರ ಭಾಷೆಯ ನಂಬಿ ನಡೆದರೆಶೀಲದ ಕೆಲಸಗಳಾದೀತೆ ?ಜೋಲುವ ಹೋತಿನ ಮೊಲೆಗಳ ಹಿಂಡಲುಹಾಲಿನ ಹನಿಯದು ಹೊರಟೀತೆ ?ಕಾಲುವೆ ಬಚ್ಚಲಕುಣಿ ನೀರಿಗೆ -ಘನಬಾಳೆಯ ತೋಟವು ಆದೀತೆ ?ಮೇಲುಬಣ್ಣಾದಾ ಆಲದ ಹಣ್ಣುನಾಲಿಗೆಸವಿಯನು ಕೊಟ್ಟೀತೆ ? 1ಭಾಷೆಯ ನುಡಿಗಳಿಗಾಸೆ ಮಾಡೆ ಮನದಾಸೆಯ ಕಾರ್ಯಗಳಾದೀತೆ ?ದೋಸೆಯ ಛಿದ್ರದಿ ಆರಿಸೆ ಕಾಳಿನರಾಶಿಯು ಹಸನವು ಆದೀತೆ ?ಕಾಸಿ ಕಬ್ಬಿಣವ ಗಟ್ಟಿ ಕೂಡಿಟ್ಟರೆಮಾಸದ ಮನೆ ಬದುಕಾದೀತೆ ?ಕಾಸಾರದೆದುರಿಗೆ ಹರಿಕಥೆ ಹೇಳ್ದರೆಸೋಸಿ ಕೇಳ್ದು ತಲೆದೂಗೀತೆ ? 2ಮಿಥ್ಯಾವಚನಿಯ ಮಾತನು ನಂಬಲುಹೊತ್ತಿಗೆ ಅದು ಬಂದೊದಗೀತೆ ?ಸತ್ತವನೆದುರಿಗೆ ಸುತ್ತಲು ಕುಳಿತುಅತ್ತರೆ ಆ ಹೆಣ ಕೇಳೀತೆ ?ನಿತ್ಯನಪುಂಸಕನೈದಲು ತರುಣಿಗೆಚಿತ್ತ ಸುಖವು ಸೂರಾದೀತೆ ?ಕುತ್ತಿಗೆಗೊಯ್ಕನ ಕಾಲು ಹಿಡಿದರೆಹತ್ಯದೊಳ್ಹೇಸಿಕೆಹುಟ್ಟೀತೆ ?3ಬೋರಗಲ್ಲಿನ ಮುಂದೆ ಬಡತನ ಹೇಳಲುಸಾರಸುಖಕ್ಕನುವಾದೀತೆ ?ಚೋರನು ಚಂದ್ರಗೆ ಕೈಮರೆ ಮಾಡಲುಚೌರ್ಯಕೆ ಕತ್ತಲು ಒದಗೀತೆ ?ನೀರಿಲ್ಲದ ಕೆರೆಯೊಳಗೆ ಮತ್ಸ್ಯದಾಹಾರಿಗೆ ಮೀನವು ದೊರಕೀತೆಕಾರಣವಿಲ್ಲದ ಲೌಕಿಕ ಕಥೆಯಿಂಘೋರನರಕ ಭಯ ತಪ್ಪೀತೆ ?4ಬೆಟ್ಟಕೆ ಕಲ್ಲನು ಹೊತ್ತೊಯ್ದೊಗೆಯಲುಹೊಟ್ಟೆಗೆಓದನ ಸಿಕ್ಕಿತೆ ?ಹುಟ್ಟು ಬಂಜೆಗೆ ಹಡೆಯುವ ವ್ಯಥೆ ಹೇಳಲುಹೊಟ್ಟೆಯಲಿ ಕಳವಳ ಹುಟ್ಟೀತೆ ?ಕೆಟ್ಟ ಬಯಸುವರಿಗೆ ಮೃಷ್ಟಾನ್ನವುಣಿಸಲುಕೆಟ್ಟ ಮಾತು ಅದು ಬಿಟ್ಟೀತೆ?ದಿಟ್ಟ ಪುರಂದರವಿಠಲರಾಯನಬಿಟ್ಟರೆ ಸದ್ಗತಿಯಾದೀತೆ? 5
--------------
ಪುರಂದರದಾಸರು
ಹನುಮ - ಭೀಮ - ಮಧ್ವ ಮುನಿಯನೆನೆದು ಬದುಕಿರೊಅನುಮಾನಂಗಳಿಲ್ಲದಲೆ ಮನದಭೀಷ್ಟಂಗಳನೀವ ಪಪ್ರಾಣಿಗಳ ಪ್ರಾಣೋದ್ದಾರ ಪ್ರಾಣರಲ್ಲುತ್ತಮ ಮತ್ತೆಪ್ರಾಣಾಪಾನ ವ್ಯಾನೋದಾನ ಸಮಾನರೊಳುತ್ಕøಷ್ಟ ||ಕಾಣಿರೇನೋ ಕಾಯಕರ್ಮ ಚಕ್ಷುರಿಂದ್ರಿಯಗಳಿಗೆತ್ರಾಣಕೊಟ್ಟು ಸಲಹುವ ಜಾಣಗುರುಮುಖ್ಯಪ್ರಾಣ1ಕಾಮಧೇನು ಚಿಂತಾಮಣಿ ಕಲ್ಪವೃಕ್ಷನಾದ ಸ್ವಾಮಿಪ್ರೇಮದಿಂದ ನೆನಯುವವರ ಭಾಗ್ಯಕ್ಕೆಣೆಯುಂಟೇ ? ||ಸಾಮಾನ್ಯವಲ್ಲವೊ ಈಗ ಮೋಕ್ಷಾದಿ ಸಂಪದದಾತಆ ಮಹಾ ಪರೋಕ್ಷಜ್ಞಾನ ದಾಢ್ರ್ಯ ಭಕುತಿ ಕೊಡುವ 2ಅವತಾರ ತ್ರಯಗಳಿಂದ ಶ್ರೀಹರಿಯ ಸೇವಿಸುವತವಕದಿ ಪೂಜಿಪ ಮಹಾಮಹಿಮೆಯುಳ್ಳವನು ||ಕವಿತೆವಾಕ್ಯವಲ್ಲವಿದು ಅವಿವೇಕವೆಂದೆಣಿಸಬೇಡಿಭವಬಂಧನ ಕಳೆದುಕಾವಪುರಂದರವಿಠಲನ ದಾಸ3
--------------
ಪುರಂದರದಾಸರು
ಹನುಮ ನಮ್ಮ ಕಾಮಧೇನು ಭೀಮ ನಮ್ಮ ಕಲ್ಪವೃಕ್ಷಆನಂದತೀರ್ಥಗುರು ಚಿಂತಾಮಣಿ ಪ.ಸೂತ್ರರಾಮಾಯಣ ಮಹಾವ್ಯಾಕರ್ಣ ಪಂಚರಾತ್ರ ಭಾರತಪುರಾಣ ಶ್ರುತ್ಯರ್ಥ ಸುಧಾರಸವಾವೇತ್ತøಜನಕಾ ಸಂತತಕಿಂಪುರುಷವರುಷದಿ ಉಣಲಿತ್ತನಾ ಸುಸ್ವರದಿ ಶ್ರೀರಾಮಪ್ರಿಯನು 1ರಾಜಸೂಯ ಮೂಲದಿಂದ ಶಾಖೋಪಶಾಖ ಸಧರ್ಮಸೋಜಿಗದ ಕರ್ಮಕುಸುಮ ಬ್ರಹ್ಮತ್ವಛಲದಿರಾಜಿಸುತ್ತ ಸಹಸ್ರಾಕ್ಷ ಸಖಮುಖ್ಯದ್ವಿಜರ್ಗೆ ಸುಖಬೀಜ ನಿಂತು ಹೊರೆದನು ಶ್ರೀಕೃಷ್ಣ ಪ್ರಿಯನು 2ಹಂತ ಭಾಷ್ಯಧ್ವಾಂತದಿ ವೇದಾಂತವಡಗೆಪೋಕಮಣಿಮಂತನ ಮುರಿದನು ಮೂವತ್ತೆರಡು ಲಕ್ಷಣದಿಕಾಂತಿಯಿಂದ ಪ್ರಸನ್ನವೆಂಕಟ ಕಾಂತನ್ನ ಪ್ರಕಾಶಿಸಿದಚಿಂತಿತಾರ್ಥ ನಮಗೀವ ಶ್ರೀವ್ಯಾಸಪ್ರಿಯನು ವೇದವ್ಯಾಸಪ್ರಿಯನು 3
--------------
ಪ್ರಸನ್ನವೆಂಕಟದಾಸರು
ಹನುಮ ನಮ್ಮ ತಾಯಿ ತಂದೆಭೀಮ ನಮ್ಮ ಬಂಧು ಬಳಗಆನಂದತೀರ್ಥರೆ ನಮ್ಮ ಗತಿಗೋತ್ರರು ಪ.ತಾಯಿ ತಂದೆ ಹಸುಳೆಗಳಿಗೆ ರಸಾಯನುಣಿಸಿ ಸಾಕುವಂತೆಆಯಾಸವಿಲ್ಲದೆ ಸಂಜೀವನವ ತಂದುಗಾಯಗೊಂಡ ಕಪಿಗಣವಪ್ರಿಯದಿಂದ ಪೊರೆದ ರಘುರಾಯನಂಘ್ರಿಗಳೆ ಸಾಕ್ಷಿ ತ್ರೇತಾಯುಗದಿ 1ಬಂಧು ಬಳಗದಂತೆ ಆಪದ್ಬಾಂಧವನಾಗಿ ಪಾರ್ಥರಿಗೆಬಂದ ಬಂದ ದುರಿತಗಳ ಪರಿಹರಿಸಿಅಂಧಕಜಾತರ ಕೊಂದುಅಂದೆ ಕೃಷ್ಣಾರ್ಪಣವೆಂದಾ ಯದುಕುಲೇಂದ್ರನಂಘ್ರಿಗಳೆ ಸಾಕ್ಷಿ ದ್ವಾಪರಾಂತ್ಯದಿ 2ಗತಿಗೋತ್ರರಂತೆ ಸಾಧುತತಿಗಳಿಗೆ ಸುಜ್ಞಾನವಿತ್ತುಮತಿಗೆಟ್ಟ ಇಪ್ಪತ್ತೊಂದು ಕುಭಾಷ್ಯಂಗಳಗತಿಗೆಡಿಸಿ ವೈಷ್ಣವರಿಗೆ ಸದ್ಗತಿಯ ತೋರಿದ ಪ್ರಸನ್ವೆಂಕಟಪತಿವ್ಯಾಸಾಂಘ್ರಿಗಳೆ ಸಾಕ್ಷಿ ಕಲಿಯುಗದಿ3
--------------
ಪ್ರಸನ್ನವೆಂಕಟದಾಸರು
ಹನುಮ ನಮ್ಮ ತಾಯಿತಂದೆ-ಭೀಮನಮ್ಮ ಬಂಧು ಬಳಗ |ಆನಂದ ತೀರ್ಥರೆಮಗೆ ಗತಿಗೋತ್ರವಯ್ಯ ಪತಾಯಿ ತಂದೆ ಹಸುಳೆಗಾಗಿ ಸಾಯ ಮಾಡಿ ಸಾಕುವಂತೆಆಯಾಸವಿಲ್ಲದೆ ಸಂಜೀವನ ತಂದೆ ||ಗಾಯಗೊಂಡ ಕಪಿಗಳನ್ನು ಸಾಯದಂತೆ ಪೊರೆದೆ ರಘುರಾಯನಂಘ್ರಿಗಳೆ ಸಾಕ್ಷಿ ತ್ರೇತಾಯುಗದಲ್ಲಿ 1ಬಂಧು ಬಳಗದಂತೆ ಆಪ್ಪದ್ಬಂಧುವಾಗಿ ಪಾರ್ಥನಿಗೆಬಂದ ದುರಿತಂಗಳ ಪರಿಹರಿಸಿ ||ಅಂಧಕಜಾತಕ ಕೊಂದು ನಂದನಂದನಿಗರ್ಪಿಸಿದ ಗೋ-ವಿಂದನಂಘ್ರಗಳೆ ಸಾಕ್ಷಿ ದ್ವಾಪರಯುಗದೆ 2ಗತಿಗೋತ್ರರಂತೆ ಸಾಧುಮತಿಗಳಿಂಗೆ ಗತಿಯನಿತ್ತುಮತಿಗೆಟ್ಟ ಇಪ್ಪತ್ತೊಂದು ಮತವ ಖಂಡಿಸಿ |ಮತಗೆಟ್ಟ ವೈಷ್ಣವರಿಗೆ ಗತಿಯ ತೋರಿದೆ ಪರಮಾತ್ಮಗತಿಪುರಂದರವಿಠಲ ಸಾಕ್ಷಿ ಕಲಿಯುಗದಲ್ಲಿ3
--------------
ಪುರಂದರದಾಸರು
ಹನುಮದ್ಭೀಮ ಮಧ್ವನಾಮ ಪ್ರಣತಕಲ್ಪದ್ರುಮಘನಕೃಪಾಳು ಭಕ್ತಚಿಂತಾಮಣಿ ಯೋಗೀಂದ್ರಲಲಾಮ ಪ.ಭಾರತಿಪತಿ ನಿಖಿಲವಿಶ್ವಾಧಾರ ಭಾವೀಬ್ರಹ್ಮಸಾರತತ್ತ್ವ ವೇದಾರ್ಥಕೋವಿದ ಧೀರಜೀವೋತ್ತಮ1ಭರ್ಗವಾಸವಾದಿ ದಿವಿಜವರ್ಗಸುಖಧಾಮನಿರ್ಗುಣೋಪಾಸಕ ಮೋಕ್ಷಮಾರ್ಗದರ್ಶಿನಿಷ್ಕಾಮ2ಸೂತ್ರನಾಮಕ ವಾಯುದೇವ ವಿಚಿತ್ರಕರ್ಮನಿಸ್ಸೀಮಕರ್ತಲಕ್ಷ್ಮೀನಾರಾಯಣನಭೃತ್ಯಸಾರ್ವಭೌಮ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹನುಮನ ಮತವೆ ಹರಿಯ ಮತವು |ಹರಿಯ ಮತವೇ ಹನುಮನ ಮತವು ಪಹನುಮನು ಒಲಿದರೆಹರಿತಾನೊಲಿವನು |ಹನುಮನು ಮುನಿದರೆ ಹರಿಮುನಿವ ಅ.ಪಹನುಮನ ನಂಬಿದ ಸುಗ್ರೀವ ಗೆದ್ದ |ಹನುಮನ ನಂಬದ ವಾಲಿಯು ಬಿದ್ದ 1ಹನುಮನು ಒಲಿದ ವಿಭೀಷಣ ಗೆದ್ದಹನುಮನು ಮುನಿಯಲು ರಾವಣ ಬಿದ್ದ 2ಹನುಮನುಪುರಂದರವಿಠಲನ ದಾಸ|ಹನುಮನೊಳ್ಪುರಂದರವಿಠಲನಾವಾಸ3
--------------
ಪುರಂದರದಾಸರು
ಹಮ್ಮುನಾಡಲಿಬೇಡಹಮ್ಮು ಈಡೇರದು<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಹಮ್ಮಿನಿಂದಲಿ ನೀವು ಕೆಡಬೇಡಿರಯ್ಯ ಪ.ಮುನ್ನೊಮ್ಮೆ ರಾವಣನು ಜನಕನಾ ಸಭೆಯಲ್ಲಿತನ್ನಳವನರಿಯದಲೆ ಧನುವೆತ್ತಲುಉನ್ನತದ ಆ ಧನು ಎದೆಯ ಮೇಲೆ ಬೀಳಲುಬನ್ನಬಟ್ಟುದ ನೀವು ಕೇಳಿಬಲ್ಲಿರಯ್ಯ1ಕುರುಪತಿಯ ಸಭೆಯಲ್ಲಿ ಕೃಷ್ಣ ತಾ ಬರಲಾಗಿಕರೆದು ಮನ್ನಣೆಯನ್ನು ಮಾಡಿದಿರಲುಧರೆಗೆ ಶ್ರೀ ಕೃಷ್ಣನಂಗುಟವನಂದೊತ್ತಲುಅರಸುಆಸನ ಬಿಟ್ಟು ಉರುಳಾಡಿದ2ಅತಿ ವೇಗದಲಿ ಕೃಷ್ಣ ಸತ್ಯಭಾಮೆಯ ಕರೆದುಸೀತೆ ನೀನಾಗೆಂದು ನೇಮಿಸಿದನುಮತಿವಂತೆ ಬಗೆಬಗೆಯ ಶೃಂಗಾರವಾದರೂಸೀತಾ ಸ್ವರೂಪ ತಾನಾಗಲಿಲ್ಲ 3ಹನುಮನನು ಕರೆಯೆಂದು ಖಗಪತಿಯನಟ್ಟಲುಮನದಲಿ ಕಡುಕೋಪದಿಂದ ನೊಂದುವಾನರನೆ ಬಾಯೆಂದು ಗರುಡ ತಾ ಕರೆಯಲುಹನುಮ ಗರುಡನ ತಿರುಹಿ ಬೀಸಾಡಿದ 4ಇಂತಿಂತು ದೊಡ್ಡವರು ಈ ಪಾಡು ಪಟ್ಟಿರಲುಪಂಥಗಾರಿಕೆ ತರವೆ ನರಮನುಜಗೆ ?ಚಿಂತಾಯತನು ಚೆಲ್ವ ಪುರಂದರವಿಠಲನಸಂತತವು ನೆನೆ ನೆನೆದು ಸುಖಿಯಾಗೊ ಮನುಜ 5
--------------
ಪುರಂದರದಾಸರು
ಹರ ಹರ ಹರ ಹರ ಹರ ಹರಹರ ಹರ ಹರ ಹರ ಹರ ಹರಪಹರ ಹರ ಹರ ಹರ ಹರ ಹರಏಳತಲೆನ್ನಿ ಹರ ಹರ ಹರ ಹರಬೀಳುತಲೆನ್ನಿ ಹರ ಹರ ಹರ ಹರ1ನಡೆಯುತಲೆನ್ನಿ ಹರ ಹರ ಹರ ಹರನುಡಿಯುತಲೆನ್ನಿ ಹರ ಹರ ಹರ ಹರ2ಉಣ್ಣುತಲೆನ್ನಿ ಹರ ಹರ ಹರ ಹರಉಡುವಾಗಲೆನ್ನಿ ಹರ ಹರ ಹರ ಹರ3ಮಲಗುತಲೆನ್ನಿ ಹರ ಹರ ಹರ ಹರವಂದಿಸುತೆನ್ನಿ ಹರ ಹರ ಹರ ಹರ4ಚಿದಾನಂದನನು ಹರ ಹರ ಹರ ಹರಚಿಂತಿಸೆ ಚಿಂತೆಯು ಹರ ಹರ ಹರ ಹರ5
--------------
ಚಿದಾನಂದ ಅವಧೂತರು