ಒಟ್ಟು 1531 ಕಡೆಗಳಲ್ಲಿ , 112 ದಾಸರು , 1197 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆತ್ಮನಿವೇದನ ಭಕುತಿ ತನ್ನಾತ್ಮವನೀವ ಪರಮಾತ್ಮ ವಿಶ್ವಾತ್ಮಗೆ ಪ.ಸರ್ವಕರ್ಮಕರ್ತ ಸರ್ವಕಾಲವರ್ತಸರ್ವಕಾರ್ಯಕೆಹರಿಸ್ವತಂತ್ರನುಸರ್ವಾರ್ಥದಲಿ ಪೂರ್ಣಸರ್ವೇಂದ್ರಿಯ ನಿಯಂತ್ರಸರ್ವದೇಶ ಕಾಲವ್ಯಾಪ್ತ ಗೋಪ್ತನೆಂದು 1ಕಾಸು ಕೋಶಗೇಹದೇಹೇಂದ್ರಿಯ ಪ್ರಾಣಸ್ತ್ರೀ ಸುತ ಪ್ರಿಯ ದಾಸಿ ದಾಸರನುಈಶಗರ್ಪಣೆ ಮಾಡಿ ದಾಸದಾಸನಾಗಿಲೇಶವು ತನಗೆನ್ನದೆ ಸರ್ವಾರ್ಪಿಸುವುದು 2ಜನ್ಮ ಜನ್ಮಾಂತರ ಧರ್ಮ ಕರ್ಮಂಗಳುನಿರ್ಮಲ ಜ್ಞಾನ ವೈರಾಗ್ಯ ಭಕ್ತಿಸ್ವರ್ಮಂದಿರ ಭವಯಾತ್ರೆ ಗರ್ಭಯಾತ್ರೆರಮೆಯ ರಮಣಗರ್ಪಣವೆಂಬ ನಿಷ್ಠೆಯ 3ಅಹರ್ನಿಶಿಶ್ವಾಸೋಚ್ಚ್ವಾಸಾವಸ್ಥಾತ್ರಯಬಹು ಜಪತಪ ಅರ್ಚನೆಸಂಭ್ರಮಬಹುಭಿ:ಶ್ರವಣ ಬಹುಧಾಶ್ರವಣ ಮನನಶ್ರೀಹರಿ ಧ್ಯಾನ ಧ್ಯಾಸಾತ್ಮಾಥರ್Àದಿ 4ಅಲಂಬುದ್ಧಿಯನು ಬಿಟ್ಟು ಅಲಸಮತಿಯನು ಸುಟ್ಟುಅಲಸಲಕ್ಷಣ ವಿಸ್ಮøತಿಯನುನೀಗಿಅಲವಬೋಧಾಚಾರ್ಯ ಮತದವರನು ಪೊಂದಿಲಲಿತ ಪ್ರಸನ್ವೆÉಂಕಟ ಚತುರಾತ್ಮಗೆ 5
--------------
ಪ್ರಸನ್ನವೆಂಕಟದಾಸರು
ಆರಿಗೂ ಕೊಟ್ಟು ನಾನ್ಹುಟ್ಟಿಲ್ಲ ಸ್ವಾಮಿಹಾರೈಸಲೆಂತೀಯ್ವಿ ಭಕ್ತಜನ ಪ್ರೇಮಿ ಪವಸನಕಾಣದೆ ಪೋಗಿ ದೆಸೆ ಬತ್ತಲೆ ಬಂದುಬಸವಳಿದು ಬಾಯಾರಿ ದೆಸೆಗೆಟ್ಟು ಬೇಡುವರಕುಶಲಂಗಳರಿಯದೆ ಹಾಸ್ಯಗೈಯುತ ನಕ್ಕೆವಸನನಾಂ ಬಯಸಲೆಂತೊಸೆದು ನೀಂ ಕೊಡುವಿ1ಧನವಂತನಾಗಿ ನಾ ಧನವಿಲ್ಲದವರಿಗೆಶುನಕನಂದದಿ ಕೂಗುತಣಕವಾಡಿದೆನುಕನಸು ಮನಸಿನಲಿ ವಿನುತಧರ್ಮವನರಿಯೆರಿಣಕಳೆದು ಹರಿಯೆನೆ ನಿನಗೆ ಕರುಣೆಂತು 2ಮೂರುದಿನವಾಯಿತು ಘೋರಬಡುವೆನು ತುಸು ಆಹಾರ ಹಾಣದೆ ಕೃಪೆ ದಾರಿಗೆ ಬರದೆನುತಭೋರಿಟ್ಟು ಕೂಗ್ವುದ ಸಾರಿ ಕೇಳುತ ನಾನುದೂರ್ಹೋದೆ ಎನ್ನ ತಪ್ಪು ಕ್ಷಮಿಸು ಶ್ರೀರಾಮ 3
--------------
ರಾಮದಾಸರು
ಆರಿತ್ತರಭವನೇ ಈ ಮನವನೆನಗೆವಾರಿಜೋದ್ಭವಪಿತನೆ ನೀನಲ್ಲದೆ ಬೇರೆ ಪಪರಮಪಾವನ ನಿನ್ನಪರಮಪರತರ ಚರಿತೆಸ್ಥಿರವೆಂದು ನೆರೆನಂಬಿ ಅರಿವ ಬುದ್ಧಿಯನುಮೆರೆವ ನಿಮ್ಮಯ ಬಿರುದ ಹರುಷದಿಂ ಸ್ಮರಿಸ್ಮರಿಸಿಹಿರಿ ಹಿರಿ ಹಿಗ್ಗುತ ಬರೆವ ಈಕರವ1ನಿನ್ನ ದಾಸರಪಾದಭಿನ್ನವಿಲ್ಲದೆ ನೋಡಿಉನ್ನತ ಸುಖಪಡೆವ ಧನ್ಯದ್ವಯನಯನಮುನ್ನ ನಾ ಮಾಡಿದ ಪುಣ್ಯಫಲವೆಂದರಿದುನಿನ್ನ ಚರಣಕೆ ನಮಿಪ ಮಹಪುಣ್ಯಶಿರವ 2ಗಾಢಮಹಿಮನೆ ನಿಮ್ಮ ಈಡಿಲ್ಲದ ಲೀಲೆರೂಢಿಯೊಳಧಿಕೆಂದು ಆಡ್ಯಾಡಿ ಕುಣಿದುಕಾಡಿ ಬೇಡುವ ಮಹಗಾಢ ನಿಮ್ಮಡಿಭಕ್ತಿನೀಡಿದವರೆನಗಾರುನೋಡುಶ್ರೀರಾಮ3
--------------
ರಾಮದಾಸರು
ಆರಿದ್ದರೇನಯ್ಯ ನೀನಲ್ಲದೆನಗಿಲ್ಲಕಾರುಣ್ಯ ನಿಧಿ ಹರಿಯೆ ಕೈಯ ಬೆಡಬೇಡ ಪದುರುಳಕೌರವನಂದು ದ್ರುಪದಜೆಯ ಸೀರೆಯನುಕರದಿಂದ ಸೆಳೆಯುತಿರೆ ಪತಿಗಳೆಲ್ಲ ||ಗರಹೊಯ್ದರಂತಿದ್ದರಲ್ಲದೇ ನರಹರಿಯೆಕರುಣದಿಂ ನೀನಲ್ಲದಾರು ಕಾಯ್ದವರು 1ಅಂದು ನೆಗಳಿನ ಬಾಧೆಯಿಂದ ಗಜರಾಜನನುತಂದೆ ನೀ ವೈಕುಂಠದಿಂದ ಬಂದು ||ಇಂದಿರೇಶನೆ ಚಕ್ರದಿಂದ ನೆಗಳಿನ ಬಾಯಸಂಧಿಯನು ಸೀಳಿ ಪೊರೆದೆಯೆಲೊ ನರಹರಿಯೇ 2ಅಜಮಿಳನು ಕುಲಗೆಟ್ಟು ಕಾಲದೂತರು ಬರಲುನಿಜಸುತನ ಕರೆಯಲವನತಿ ವೇಗದಿ ||ತ್ರಿಜಗದೊಡೆಯನೆಪುರಂದರವಿಠಲ ಕರುಣದಲಿನಿಜದೂತರನು ಕಳುಹಿ ಕಾಯ್ದೆ ಗಡ ಹರಿಯೇ 3
--------------
ಪುರಂದರದಾಸರು
ಆರು ಹಿತವರು ಮನವೆ ಮೂರು ಮಂದಿಗಳೊಳಗೆನಾರಿಯೋ ಧಾರಿಣೀಯೊಧನದಬಲು ಸಿರಿಯೊ ?ಪ.ಅನ್ಯರಲಿ ಜನಿಸಿರ್ದ ಅಂಗನೆಯ ಕರೆತಂದುತನ್ನ ಮನೆಯಲ್ಲಿ ಯಜಮಾನಿಯೆನಿಸಿಭಿನ್ನವಿಲ್ಲದೆ ಅರ್ಧ ದೇಹವೆನಿಸುವ ಸತಿಯುಕಣ್ಣಿನಲಿ ನೋಡಲಂಜುವಳು ಕಾಲನೊಯ್ವಾಗ 1ಮುನ್ನ ಶತಕೋಟಿ ರಾಯರುಗಳಾಳಿದ ನೆಲನತನ್ನದೆಂದು ಶಿಲೆಯ ಶಾಸನವ ಬರೆಸಿಬಿನ್ನಾಣದಿ ಮನೆಗಟ್ಟಿ ಕೋಟೆ - ಕೊತ್ತಳಿವಿಕ್ಕಿಚೆನ್ನಿಗನೆ ಅಸುವಳಿಯ ಊರ ಹೊರಗಿಕ್ಕುವರು 2ಉದ್ಯೋಗ - ವ್ಯವಹಾರ ನೃಪಸೇವೆ ಮೊದಲಾಗಿಕ್ಷುದ್ರತನ ಕಳವು ಪರದ್ರೋಹದಿಂದಬುದ್ಧಿಯಿಂದಲಿ ಧನವ ಗಳಿಸಿಕ್ಕಿ ಅಸುವಳಿಯಸದ್ಯದಲಿ ಆರುಂಬವರು ಹೇಳು ಮನುಜಾ 3ಶೋಕಗೈದಳುವವರುಸತಿ - ಸುತರು ಭಾಂದವರುಜೋಕೆ ತಪ್ಪಿದ ಬಳಿಕ ಅರ್ಥವ್ಯರ್ಥಲೋಕದಲಿ ಸ್ಥಿರವಾದ ಕೀರ್ತಿ ಅಪಕೀರ್ತಿಗಳುಸಾಕಾರವಾಗಿ ಸಂಗಡ ಬಾಹುವಲ್ಲದೇ ? 4ಅಸ್ಥಿರದ ದೇಹವನು ನೆಚ್ಚಿ ನೀ ಕೆಡಬೇಡಸ್ವಸ್ಥದಲಿ ನೆನೆಕಾಣೊ ಪರಮಾತ್ಮನಚಿತ್ತಶುದ್ದಿಯಲಿ ಶ್ರೀ ಪುರಂದರವಿಠಲನಭಕ್ತಿಯಿಂದಲಿ ನೆನೆದು ಮುಕ್ತಿಪಡೆ ಮನವೆ 5
--------------
ಪುರಂದರದಾಸರು
ಆರೇ ರಂಗನ ಆರೇ ಕೃಷ್ಣನಆರೇ ರಂಗನ ಕರೆಯಬಂದವರು ಪಗೋಪಾಲಕೃಷ್ಣನ ಪಾಪವಿನಾಶನ |ಈ ಪರಿಯಿಂದಲಿ ಕರೆಯ ಬಂದವರು 1ವೇಣುವಿನೋದನ ಪ್ರಾಣಪ್ರಿಯನ |ಜಾಣೆಯರಸನ ಕರೆಯ ಬಂದವರು 2ಕರಿರಾಜವರದನ ಪರಮಪುರಷನ |ಪುರಂದರವಿಠಲನ ಕರೆಯ ಬಂದವರು 3
--------------
ಪುರಂದರದಾಸರು
ಆರೋಗಣೆಯ ಮಾಡೋ ಎನ್ನಯ್ಯಆರೋಗಣೆಯ ಮಾಡೋ ಪ.ನಾರದಾರ್ಚಿತಪಾದ ನಾರಾಯಣ ಸ್ವಾಮೀ ಅ.ಪಸರಸಿಜಾಲಯೆ ಲಕ್ಷ್ಮಿ ಸರಸ್ವತಿಭಾರತಿಪರಿಪರಿ ಅಡಿಗೆಯ ಸಿದ್ದ ಮಾಡಿಹರೊ ||ಪರಿಮಿತಿಯಿಲ್ಲದ ರುಚಿಯ ಪದಾರ್ಥವಪರಮಪುರುಷ ಉಂಡು ದಯ ಮಾಡೋ ಸ್ವಾಮಿ1ಅಂಬುಜಮುಖಿ ಲಕ್ಷ್ಮಿ ತಾಂಬೂಲ ಕೊಡುವಳುಕಂಬುಕಂಧರನೇ ನೀ ಕೈಕೊಳು ಬೇಗ ||ರಂಭೆ ಊರ್ವಸಿ ಮೇನಕೆ ಮೊದಲಾದವರುಸಂಭ್ರಮದಿ ಬಂದು ನಾಟ್ಯಕೆ ಕಾದಿಹರೊ ಸ್ವಾಮಿ 2ಸರಸಿಜಭವನಯ್ಯ ಪುರಂದರವಿಠಲಸರುವಭೋಗಭುಂಜಿಪ ನರರ ಪಾಲಿಸೊ ದೇವಾ3
--------------
ಪುರಂದರದಾಸರು
ಇದರೆನ್ನಧಿಕ ಸುಖವೊಂದವೊಲ್ಲೆಪದುಮನಾಭನೆ ನಿನ್ನ ಪಾದಯುಗ್ಮವೆ ಸಾಕ್ಷಿ ಪಮಧ್ವ ಮತದೊಳಗೆ ಜನಿಸಿ ದ್ವಾದಶನಾಮ |ಮುದ್ರೆ ಶ್ರೀ ತುಲಸಿ ಅಕ್ಷಮಾಲೆ ಧರಿಸಿ ||ಶುದ್ಧ ಗ್ರಂಥವನೋದಿ ಅದ್ವೈತರನು ಹಳಿದು |ಸದ್ವೈಷ್ಣವನೆಂದೆನ್ನಿಸಿಕೊಂಡರೆ ಸಾಕು 1ಹಿರಿಯರಾದವರಿಗೆ ಬಾಗಿ, ದಾನವ ಮಾಡಿ |ನಿರುತ ಸತ್ಕಥೆಗಳ ಕೇಳುತಲಿ ||ವರಮಂತ್ರ ಜಪಿಸುತ ಪಂಚಯಜÕವ ಮಾಡಿ |ಹರಿದಿನ ವ್ರತವನು ನಡೆಸುತಿಪ್ಪುದೆ ಸಾಕು 2ಪ್ರಾಣೇಶ ವಿಠಲ ನೀನೇ ಸರ್ವೋತ್ತಮ, ಬ್ರಹ್ಮ- |ಪ್ರಾಣಾದಿಗಳು ನಿನ್ನ ದಾಸರೆಂಬ ||ಜ್ಞಾನವೆ ಗಳಿಸಿ ವೈಷ್ಣವರ ಮನೆಯ ಬಾಗಿ - |ಲನು ನಿರುತ ಕಾಯ್ದು ಜೀವಿಸುವದೇ ಸಾಕು 3
--------------
ಪ್ರಾಣೇಶದಾಸರು
ಇದಿರಾರೊ-ಗುರುವೆ-ಸಮರಾರೊ ಪಮದನಜನಕಪ್ರಿಯ ಗುರುಮಧ್ವರಾಯಅ.ಪಸನ್ನುತಮಹಿಮ ಪ್ರಸನ್ನವದನ ನಿನ-ಗನ್ಯನಲ್ಲವೊ ನೀಯೆನ್ನ ರಕ್ಷಿಸಬೇಕೋ ||ನಿನ್ನ ನೋಡಿದವರ್ಧನ್ಯರಾಗುವರುಎನ್ನ ದಯಾಮೂರ್ತಿ ಮನ್ನಿಸಿ ನೋಡೋ 1ದುರ್ಜನರನು ಗರ್ಜೆನೆಯಿಂದ ಓಡಿಸಿಸಜ್ಜನರನು ಸಂರಕ್ಷಿಸಿದಾತನೆ |ಈ ಜಗದಲಿ ಮಧ್ಯಗೇಹರ ಪತ್ನಿಯಪೂಜ್ಯ ಜಠರದಲಿ ಜನಿಸಿದ ಧೀರ 2ವೇದಶಾಸ್ತ್ರಗಳಿಂದ ಮಾಯಿಗಳ ಖಂಡಿಸಿಸಾಧಿಸಿ ಹರಿಯೆ ಸರ್ವೋತ್ತಮನೆಂದು ||ಮೋದಭರಿತವಾದ ದಿವ್ಯಶಾಸ್ತ್ರವ ಗೈದಮೋದತೀರ್ಥ-ಪುರಂದರವಿಠಲದಾಸ3
--------------
ಪುರಂದರದಾಸರು
ಇಲ್ಲೆ ಕರೆಯ ಬ್ಯಾಡ ಕ್ಷುಲ್ಲಕರ ತಾಸುನಿಲ್ಲಿಸಿ ಹಾಸ್ಯ ಮಾಡಿ ಅಕ್ಕಯ್ಯ ಪ.ನಲ್ಲೆ ದ್ರೌಪತಿ ನಿನ್ನ ನಿಲ್ಲಿಸಿದವಗುಣಎಲ್ಲಮನಕೆತಾರೆ ಅಕ್ಕಯ್ಯ 1ವÀಂಚಕ ಗುಣದವರ ಮುಂಚೆ ನಿಲ್ಲಿಸಬೇಕುಪಾಂಚಾಲಿಬೇಡಿಕೊಂಬೆ ಅಕ್ಕಯ್ಯ 2ಬೂಟಕಗುಣದವರಪಾಟುಬಡಿಸುವಿ ತಾಸÀುಕೋಟಿ ಜನರು ನೋಡ ಅಕ್ಕಯ್ಯ 3ಗರುವಿನ ಗೊಂಬೆಯರ ಹಿರಿಯತನ್ಹಾಂಗಿರಲಿಕರವಮುಗಿಯೋಣವಂತೆ ನಾಳೆಗೆ ಅಕ್ಕಯ್ಯ4ಕೃಷ್ಣನ ಮಡದಿಯರ ಶ್ರೇಷ್ಠತನ ಹಾಂಗಿರಲಿಸಾಷ್ಟಾಂಗಕ್ಕೆರಗೋಣವಂತೆ ನಾಳಿಗೆ ಅಕ್ಕಯ್ಯ 5ನಿಂದಕರನ ತಾಸು ನಿಂದಿಸೋದುಚಿತವಂದಿಸುವೆನು ನಿನಗೆ ಅಕ್ಕಯ್ಯ 6ಸಿರಿರಮಿ ಅರಸನು ಭರದಿ ನಗುವಂತೆಇವರ ಗರವು ಮುರಿಯಬೇಕು ಅಕ್ಕಯ್ಯ 7
--------------
ಗಲಗಲಿಅವ್ವನವರು
ಇಲ್ಲೇ ವೈಕುಂಠ ಕಾಣಿರೊ -ಸಿರಿ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಲ್ಲಭನಂಘ್ರಿಯ ನೆರೆನಂಬಿದವರಿಗೆ ಪ.ನುಡಿಯೆರಡಾಗದೆ ಕಡುಕೋಪ ಮಾಡದೆ |ಬಡತನ ಬಂದರು ಲೆಕ್ಕಿಸದೆ ||ಬೆಡಗು ಹೆಣ್ಣುಗಳ ಕಡೆಗಣ್ಣೊಳು ನೋಡದೆ |ಧೃಡಚಿತ್ತದಲಿ ಶ್ರೀ ಹರಿಯ ನಂಬಿದವರಿಗೆ 1ಪಕ್ಷಪಾತವಿಲ್ಲದನ್ನದಾನಂಗಳನು - |ಪೇಕ್ಷೆಯ ಮಾಡದೆ ಗುರುಹಿರಿಯರನು |ಮೋಕ್ಷವ ಬಯಸುತ ಅನ್ಯಾಯವಳಿಯುತ |ಲಕ್ಷ್ಮೀನಾರಾಯಣನ ಬಿಡದೆ ಧೇನಿಪರಿಗೆ 2ಪರಹಿತವನು ಮಾಡಿ ಕೆರೆಬಾವಿಗಳ |ಅರವಟಿಗೆಯ ಸಾಲಮರವ ಹಾಕಿ ||ಸಿರಿಪುರದರಸು ಶ್ರೀ ಪುರಂದರವಿಠಲನ |ಸ್ಥಿರಚಿತ್ತದಲಿ ಬಿಡದೆ ಸ್ಮರಿಸುತಲಿ ಹರಿಗೆ 3
--------------
ಪುರಂದರದಾಸರು
ಇಷ್ಟುಪಾಪವನು ಮಾಡಿದುದೆ ಸಾಕೊ |ಸೃಷ್ಟಿಗೀಶನೆ ಎನ್ನನುದ್ಧರಿಸಬೇಕೊ ಪಒಡಲಕಿಚ್ಚಿಗೆ ಪರರ ಕಡು ನೋಯಿಸಿದೆ ಕೃಷ್ಣ |ಕೊಡದೆ ಅನ್ಯರ ಋಣವನಪಹರಿಸಿದೆ |ಮಡದಿಯ ನುಡಿಕೇಳಿಒಡಹುಟ್ಟಿದವರೊಡನೆ |ಹಡೆದ ತಾಯಿಯ ಕೂಡಹಗೆಮಾಡಿದೆ1ಸ್ನಾನಸಂಧ್ಯಾನಜಪ ಮಾಡದಲೆ ಮೈಗೆಟ್ಟೆ |ಜ್ಞಾನಮಾರ್ಗವನಂತು ಮೊದಲೆ ಬಿಟ್ಟೆ ||ಏನ ಹೇಳಲಿ ಪರರ ಮಾನಿನಿಗೆ ಮನಸಿಟ್ಟೆ |ಶ್ವಾನ- ಸೂಕರನಂತೆ ಹೊರೆದೆ ಹೊಟ್ಟೆ2ವ್ರತ ನೇಮ ಉಪವಾಸ ಒಂದು ದಿನ ಮಾಡಲಿಲ್ಲ |ಅತಿಥಿಗಳಿಗನ್ನವನು ನೀಡಲಿಲ್ಲ |ಶೃತಿ ಶಾಸ್ತ್ರ ಪುರಾಣ ಕಥೆಗಳನು ಕೇಳಲಿಲ್ಲ |ವೃಥವಾಗಿ ಬಹುಕಾಲ ಕಳೆದನಲ್ಲ 3ಶುದ್ಧ ವೈಷ್ಣವ ಕುಲದಿ ಉದ್ಭವಿಸಿದೆನೋ ನಾನು |ಮಧ್ವ ಮತಸಿದ್ದಾಂತ ಪದ್ಧತಿಗಳ ||ಬುದ್ಧಿಪೂರ್ವಕ ತಿಳಿದು ಪದ್ಮನಾಭನು ದಿನದಿ |ಕದ್ದುಂಡು ಕಾಯವನು ವೃದ್ಧಿಮಾಡಿದನಯ್ಯ 4ತಂದೆ - ತಾಯ್ಗಳ ಸೇವೆ ಒಂದು ದಿನ ಮಾಡಲಿಲ್ಲ |ಮಂದಭಾಗ್ಯದಬವಣೆತಪ್ಪಲಿಲ್ಲ ||ಹಿಂದೆ ಮಾಡಿದ ದೋಷ ಬಂದುಳಿಯದರುಹಿದೆನು |ತಂದೆ ಪುರಂದರವಿಠಲ ಮುಂದೆನ್ನ ಕಾಯೊ 5
--------------
ಪುರಂದರದಾಸರು
ಈ ಪರಿಯ ಅಧಿಕಾರ ಒಲ್ಲೆ ನಾನು |ಶ್ರೀಪತಿಯೆ ನೀನೊಲಿದು ಏನ ಕೊಟ್ಟುದೆ ಸಾಕು ಪಚಿರಕಾಲ ನಿನ್ನ ಕಾಯ್ದು ತಿರುಗಿದುದಕೆ ನಾನು |ಕರುಣದಲಿ ರಚಿಸಿ ನೀ ಈ ದುರ್ಗದಿ ||ಇರ ಹೇಳಿದುದಕೆ ನಾ ಹೊಕ್ಕು ನೋಡಿದೆ ಒಳಗೆ |ಹುರುಳ ಲೇಶವು ಕಾಣೆ ಕರಕರೆಯು ಬಲುನೋಡು 1ದಾರಿಯಲಿ ಹೋಗಿ ಬರುವವರಉಪಟಳಘನ|ಚೋರರಟ್ಟುಳಿಗಂತೂ ನೆಲೆಯೆ ಇಲ್ಲ ||ವೈರಿವರ್ಗದ ಜನರು ಒಳಗೆ ಬಲು ತುಂಬಿಹರು |ಮಿರಿ ನಿನ್ನಲಿ ಮನವನೂರಿ ನಿಲಗೊಡರು 2ಸರಿಬಂದ ವ್ಯಾಪಾರ ಮಾಡಿ ತಾವೆನ್ನನ್ನು |ಬರಿಯ ಲೆಕ್ಕಕೆ ಮಾತ್ರ ಗುರಿಯ ಮಾಡಿ ||ಕರಕರೆಯ ಬಡಿಸಬೇಕೆಂದು ಯೋಚಿಸುತಿಹರು |ಕರೆದು ವಿಚಾರಿಸಿ ನ್ಯಾಯ ಮಾಡಿಸು ದೊರೆಯೇ 3ನಾಮಾಂಕಿತಕೆ ಮಾತ್ರ ಅಧಿಕಾರವೆನಗಿತ್ತೆ |ಸ್ವಾಮಿತ್ವವೋನೋಡುಮನೆಮನೆಯಲಿ ||ಭೀಮ ವಿಕ್ರಮರವರು ದುರ್ಬಲಾಗ್ರಣಿ ನಾನು |ಗ್ರಾಮ ಒಪ್ಪಿಸೆ ನಮಿಪೆ ಸಂಬಂದ ತೆರಮಾಡು 4ಕಾಲಕ್ಕೆ ಕರೆಯ ಬಂದವರಿಗೆ ಒಳಗಾಗಿ |ಪಾಳೆಯವನೊಪ್ಪಿಸಿ ಕೊಡುವೆವೆಂದು ||ಆಲೋಚಿಸಿಹರಯ್ಯ ಈಗಲೆನಗೆ ನಿನ್ನ |ಆಳುಗಳ ಬಲಮಾಡಿ ಎನ್ನ ರಕ್ಷಿಸು ದೊರೆಯೆ 5ಕ್ಷಣಕೆ ನೂರುಪಟಳ ಈ ಕೋಟೆಗೆಲೊ ರಾಯ |ಅನುವಾದ ದಿವಸವೊಂದಾದರಿಲ್ಲ ||ಮೊನೆಗಾರ ಜನವಿಲ್ಲ ಇದ್ದವರು ವಶವಿಲ್ಲ |ಕೊನೆಗೊಂಡು ಗ್ರಾಮ ಕಾಪಾಡುವ ತೆರನೆಂತೊ 6ಎನಗೆ ಈ ಬಹುನಾಯಕರ ಕೊಂಪೆಯೊಳು ವಾಸ-|ವನು ಬಿಡಿಸಿ ನಿನ್ನ ನಿಜ ಪಟ್ಟಣದೊಳು ||ಮನೆ ಮಾಡಿಕೊಡಲು ನಾನಿನ್ನ ನೋಡಿಕೊಳುತ |ಅನುಗಾಲಬದುಕುವೆನೊ ಪುರಂದರವಿಠಲ7
--------------
ಪುರಂದರದಾಸರು
ಈ ಪರಿಯ ಅಧಿಕಾರ ಒಲ್ಲೆ ನಾನುಶ್ರೀಪತಿಯೆ ನೀನೊಲಿದು ಏನು ಕೊಟ್ಟುದೆ ಸಾಕುಚಿರಕಾಲ ನಿನ್ನ ಕಾದು ತಿರುಗಿದುದಕೆ ನೀನುದಾರಿಯಲ್ಲಿ ಹೋಗಿ ಬರುವುದಕ್ಕೆಉಪಟಳಘನ್ನನಾಮಾಂಕಿತಕೆ ಮಾತ್ರ ಅಧಿಕಾರವೆನಗಿತ್ತೆಸರಿಬಂದ ವ್ಯಾಪಾರ ತಾವು ಮಾಡಿ ಎನ್ನಕಾಲಕ್ಕೆ ಕರೆಯ ಬಂದವರಿಗೆ ಒಳಗಾಗಿಕ್ಷಣಕೆ ನೂರುಪಟಳ ಈ ಕೋಟೆಗೆಲೊ ರಾಯಇನಿತನಾಯಕದ ಕೊಂಪೆ ಒಳಗಿನವಾಸ-
--------------
ಗೋಪಾಲದಾಸರು
ಈ ಸಮಯಕಲ್ಲದಿನ್ನೆಲ್ಲಿ ಕಾಯೊದೋಷರಹಿತ ವಸುದೇವ ನೀ ಕಾಯೊ ಕೃಷ್ಣ ಪನಿನ್ನಂಘ್ರಿಯನು ಭಜಿಸಿದವರ ಬಾಳ್ವೆಯ ಕಾಯೊ |ಎನ್ನಸತಿಸುತರು ನಿನ್ನವರೆ ಕಾಯೊ ||ನೀನಲ್ಲದನ್ಯರನು ಕಾಣೆ ಕವಳಿಯ ಕಾಯೊ |ಮುನ್ನ ಸ್ಥಿರವಾಗಿ ನೀನೆಂಬೆ ಕಾಯೊ 1ಪರವೆಣ್ಣುಗಳಿಗೆ ಎನ್ನ ಮನಸು ಕಾತರಿ ಕಾಯೊ |ದುರಿತದುಷ್ಕರ್ಮ ಮುಂಚಿಲ್ಲ ಕಾಯೊ ||ಕರೆಕರೆಯ ಸಂಸಾರಕಷ್ಟು ಕಡಲಿಯ ಕಾಯೊ |ದುರಿತಭವಶರಧಿಗೆ ತಾರೆ ಕಾಯೊ2ತ್ರಿವಿಧಪಾಪಂಗಳಿಗೆ ಪದವು ಉದ್ದಿನ ಕಾಯೊ|ಭವಸಾಗರದೊಳೀಸೆಂಬೆ ಕಾಯೊ ||ದಿವಿಜೇಂದ್ರ ಕೃಷ್ಣ ಕೈಪಿಡಿದು ಒಲಿದು ಕಾಯೊ |ನವ ಮುಕ್ತಿಪುರಂದರವಿಠಲ ನೀ ಬಿಡದೆ ಕಾಯೊ3
--------------
ಪುರಂದರದಾಸರು