ಒಟ್ಟು 2264 ಕಡೆಗಳಲ್ಲಿ , 110 ದಾಸರು , 1592 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೆನ್ನೊಳು ಪಂಥಾ ಶ್ರೀಕಾಂತಾ ಪ. ಯಾಕೆ ಪಂಥ ಲೋಕೈಕನಾಥ ದಿ- ವಾಕರಕೋಟಿಪ್ರಭಾಕರ ತೇಜನೇ ಅ.ಪ. ಪೂರ್ವಾರ್ಜಿತ ಕರ್ಮದಿಂದಲಿ ಇರ್ವೆನು ನರಜನ್ಮ ಧರಿಸುತ ಗರ್ವದಿಂದ ಗಜರಾಜನಂತೆ ಮತಿ ಮರ್ವೆಯಾಯ್ತು ನಿನ್ನೋರ್ವನ ನಂಬದೆ ಗರ್ವಮದೋನ್ಮತ್ತದಿ ನಡೆದೆನು ಉರ್ವಿಯೊಳೀ ತೆರದಿ ಇದ್ದೆನಾದರೂ ಸರ್ವಥಾ ಈಗ ನಿಗರ್ವಿಯಾದೆಯಹ ಪರ್ವತವಾಸ ಸುಪರ್ವಾಣ ವಂದಿತ 1 ಯಾರಿಗಳವಲ್ಲ ಮಾಯಾ ಕಾರ ಮಮತೆ ಸಲ್ಲ ಸಂತತ ಸಾರಸಾಕ್ಷ ಸಂಸಾರಾರ್ಣವದಿಂದ ಪಾರಗೈದು ಕರುಣಾರಸ ಸುರಿವುದು ನತ ಮಮ ಕಾರ ಹೋಯ್ತೆ ಕಡೆಗೆ ಏನಿದು ಭಾರಿ ಭಾರಿ ಶ್ರುತಿ ಸಾರುವುದೈ ದಯ ವಾರಿಧಿ ನೀನಿರಲ್ಯಾರಿಗುಸುರುವುದು 2 ಬಾಲತ್ವದ ಬಲೆಗೆ ದ್ರವ್ಯದ ಶೀಲವಿತ್ತೆ ಎನಗೆ ಆದರೂ ಪಾಲಿಸುವರೆ ನಿನಗಾಲಸ್ಯವೆ ಕರು- ಸಾಲದೆರಡು ಮೂರು ನಿನ್ನಯ ಮೂಲ ಸಹಿತ ತೋರು ಮುನಿಕುಲ ಪಾಲ ಶ್ರೀಲಕ್ಷ್ಮೀನಾರಾಯಣ ಗುಣ ಶೀಲ ಕಾರ್ಕಳ ನಗರಾಲಯವಾಸನೇ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾಕೊ ದಯಬಾರದು ಹರಿ ನಿನಗ್ಯಾಕೊ ದಯಬಾರದು ಪ. ಶ್ರೀಕರ ಲೋಕೇಶ ಏಕಾನೇಕ ಸ್ವರೂಪಅ.ಪ. ಕಾಮಿತಾರ್ಥದಾಯಕರ ಸ್ವಾಮಿ ಲೋಕನಾಯಕ ಭೀಮವಿಕ್ರಮ ಶ್ರೀರಾಮ ನಿರಾಮಯ1 ಸುಂದರಿನಾಥ ಸುರೇಂದ್ರವಂದಿತ ಕಂದನ ಕಂದಾರವಿಂದದಳನಯನ 2 ಅಕ್ಷರಬ್ರಹ್ಮ ಸಂರಕ್ಷಿಸು ನಮ್ಮ ಪಕ್ಷೀಂದ್ರವಾಹನ ಲಕ್ಷ್ಮೀನಾರಾಯಣ3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾಚಿಸುವೆನು ನಿನ್ನನಿದಕೆ ಕರುಣಸಾಗರ ಗಮನ ಜಗತ್ಪಾಲ ಪ್ರಭುವರ ಪ ದೈನ್ಯರಾಹಿತ್ಯ ರಹಿತ ಜಾಡ್ಯರಹಿತವು ಪಾದ ಕಮಲರತಿ ಸದಾವಕಾಲವು 1 ಪ್ರಭುವೆ ನಿನ್ನ ಭೃತ್ಯನಾನಾದಿಕಾಲದಿ ಅಭಯವಿತ್ತು ಪಾಲಿಸೆನ್ನ ಹೇ ದಯಾನಿಧೆ 2 ತುಷ್ಟನಾದರೇನುರುಷ್ಟನಾರೇನೊಲೊ ಇಷ್ಟದೈವ ನಿನ್ನ ಹೊರತು ಗತಿಯ ಇಲ್ಲೆಲೊ 3 ತುಷ್ಟನಾದ ಬಳಿಕ ನೀನೆ ಹೇ ಕೃಪಾಕರ ಬಿಟ್ಟುನಿನ್ನ ಭಜೀಸಲ್ಯಾಕೆ ಯಿತರಕಾಯ್ವರ 4 ನೀನೆ ರೋಷವನ್ನು ತಾಳೆ ಸುಜನಬಂಧುವೆ ದೀನನನ್ನು ಕಾಯ್ವರಾರು ನೀನೆಯಲ್ಲವೆ 5 ದೋಷ ಕ್ಷಮಿಸುವಲ್ಲಿ ನಿನ್ನ ಪೋಲ್ವ ಅರಸರು ದೇಶಸರ್ವಗಳಲಿ ಪುಡುಕಲಲ್ಲೆ ದೊರಕರು 6 ಎನ್ನಸರಿ ಕೃತಘ್ನ ವಂಚನೀಯ ಮಾಳ್ಪನ ವನ್ನಜಾಭವಾಂಡದೋಳಾವಲ್ಲಿ ಕಾಣೆನಾ 7 ದೀನ ದಾಸ ನಿನಗೆ ನಾನು ಹೇ ಜಗತ್ಪತೆ ಮಾಣದೆಲ್ಲಿರಲ್ಲಿ ತೋರಿ ಪ್ರೇಮ ಸಾಮ್ಯತೆ 8 ಎನ್ನ ವಿಷಯ ಭಯವು ನಿನಗೆ ಲಕ್ಷವಾವುದು ಮನ್ನಿಸೆನ್ನ ಪೊರೆವ ಸರ್ವಭಾರ ನಿನ್ನದು 9 ಈಶಪೂರ್ಣಕಾಯ ನಿನಗಸಾಧ್ಯವಾವುದು ಆಶೆಯನ್ನದಾವಘನವು ನಿನಗೆ ತೋರ್ಪುದು 10 ದಾಸನಾಶೆಪೂರ್ತಿಸಲ್ಕಾಲಸ್ಯವುಚಿತವೋ? ಅಶಿಶಿಸುವನು ದಾಶಗೈವುದೇನು ನೀತವೋ? 11 ಲೋಕನಾಥ ಕರುಣ ಪೂರ್ಣನೇ ಪರಾತ್ಪರ ಯಾಕೆ ಯೊನ್ನೊಳಿನಿತು ನೀನು ನಿರ್ದಯಾಪರ 12 ಗರವತಾಯಿತನನುಜಗೀಯೆ ಅವುದೋಗತಿ ತರುಳನಲ್ಲಿ ಕರುಣಿಸುವದು ಕೃಷ್ಣ ಮೂರುತಿ 13 ದಾತ ಜ್ಞಾತನು ನಿನ್ನ ವಿನಹಾಭಿಷ್ಟಫಲದ ಕರ್ತೃ ಆವನು 14 ಲಕ್ಷ್ಮಿಪತಿಯ ಪೋಲ್ಪೋದಾರ ಸುಗುಣ ಶೀಲನ ಈಕ್ಷಿಸಲ್ಕೆ ಜಗದೊಳಾರನೆಲ್ಲಿ ಕಾಣೆನಾ 15 ನಿನ್ನ ಔದಾರ್ಯ ಸರ್ವರಲ್ಲಿ ಸಾಮ್ಯವು ಎನ್ನೊಳಿನಿತ್ತು ನಿನ್ನದ್ಯಾಕೆ ಕಾರ್ಪಣ್ಯವು 16 ಆರ್ತಬಂಧುವೆಂದು ನಿನಗೆ ಶರಣುಬಂದೆನು ಸಾರ್ಥಕವನು ಮಾಡುವಿಯೊ ಜರಿದೆ ಬಿರುದನು 17 ದೀನ ಬಂಧು ಕರುಣಸಿಂಧು ಸುಹೃದ್ಬಾಂಧವ ಹೀನ ಭವಾರ್ಣವದಿ ಮಗ್ನನಿರುವೆ ಭೂಧವ 18 ತಾರಿಸೈ ಭವಾಬ್ದಿಯಿಂದ ಇಂದಿರಾವರ ಸೂರಿಜನರ ಸಂಗವೆನ್ನಗೀಯೋಗಿರಿಧರ19 ಶ್ರೀನೃಸಿಂಹ ಸತತ ನೀನು ಸದಯ ಮೂರುತಿ ದೀನ ನನ್ನೊಳ್ಯಾಕೆ ನಿರ್ದಯವ ತೋರುತಿ 20 ಸಾಧುಗಳು ನಿರ್ಗುಣಿಗಳಲ್ಲಿ ದಯವÀ ಮಾಳ್ಪರು ಸಾದರದಲಿ ಸರ್ವರಲ್ಲಿ ಸದಯರಿಪ್ಪರು 21 ಧನ್ಯಜನಕೆ ನಿನ್ನನೀವುದೇನು ಅಚ್ಚರ ದ್ಯೆನ್ಯ ಬಡುವನನ್ನು ಪಾಲಿಸುವದು ಪರತರ 22 ಚಂದ್ರಚಾಂಡಾಲಗೃಹದ ಮೇಲೆಯಾದರು ಸುರತರು 23 ಈತೆರ ಶ್ರೀ ಪತಿಯೆ ಎನಗೆ ಪ್ರೀತನಾಗೆಲೋ ನೀತವಾಗಿ ಕರುಣದಿಂದ ಕರವಪಿಡಿಯಲೊ 24 ಪುನಃ ಪುನಃ ನಿನ್ನನಿದನೆ ಬೇಡಿಕೊಂಬೆನಾ ಮನದೊಳು ಪ್ರಸನ್ನನಾಗು ಜನಕಜಾರಮಣ25 ಪಂಚರಾತ್ರಾಗಮೋಕ್ತ ಈಸ್ತುತಿಯನು ವಿನುತ ಶ್ರೀ ರಾಮಚಂದ್ರನು 26 ಮುದದಿ ಮನಸಿನೊಳಗೆ ತಾನೆವದಗಿ ಪೇಳಿದ ಅದನೆ ಶ್ರೀವರದೇಶ ವಿಠಲ ನುಡಿಸಿ ಬರೆಸಿದ 27
--------------
ವರದೇಶವಿಠಲ
ಯಾತಕಿನ್ನಾಥನೆಂಬುವದೂ ಕರುಣಾಳು ಜಗ - ನ್ನಾಥದಾಸರ ಸೇರಿಕೊಂಬುವದೂ ಪ ಭೀತಕರ ಬಹು ಜನ್ಮಕೃತ ಮಹಾ ಪಾತಕಾದ್ರಿಗಳನು ಭೇದಿಸಿ ಮಾತುಳಾಂತಕನಂಘ್ರಿ ಕುಮುದ ನೀತ ಭಕ್ತಿಯ ನೀಡಿ ಸಲಹುವ ಅ.ಪ. ಘೋರಸಂಸಾರ ಪಾರಾವಾರ ದಾಟಿಸುವಾ ಲಕ್ಷ್ಮೀ ನಿತ್ಯ ಭಾರ ವಹಿಸಿರುವಾ ಮೂರು ಲೋಕೋದ್ಧಾರ ದುರಿತೌಘಾರಿ ಕೃಷ್ಣ ಕಥಾಮೃತಾಬ್ಧಿಯ ಸಾರ ತೆಗೆದು ಬೀರಿ ಕರುಣವ ಬೀರಿ ಸುಜನೋದ್ಧಾರ ಮಾಡಿದ 1 ವೇದಶಾಸ್ತ್ರ ಪುರಾಣವೆಲ್ಲವ ತೋರಲಿಟ್ಟಿಹರು ಬಹು ವಿಧ- ವಾದ ದುರ್ಮತವಾದಿಗಳ ಮಾರ್ಗದಿ ಕಟ್ಟಿಹರೊ ಮೋದತೀರ್ಥ ಮತಾನುಗತ ಸದ್ವಾದಪೂರ್ಣ ಪರಮಾತ್ಮದರ್ಶನ ಶ್ರೀದನೊಲಿದು ಕೃಪಾಕಟಾಕ್ಷ ಪ್ರಸಾದ ಒಲಿವ ವಿನೋದಗೊಳಿಸುತ2 ಶ್ರೀರಮಾಪತಿ ಸರ್ವಸುಗುಣಾಧಾರ ದಯದಿಂದಾ ಮುರಲಾ ಸೇರಿ ಬರುವದು ಸರ್ವಸಂಪತ್ಪಾರವಾನಂದ ಕಾರುಣಿಕತನದಿಂದಲಿಂತುಪಕಾರವ ಮಾಡಿ ದೀನ ಜನರಿಗೆ ಧೀರ ಶ್ರೀದವಿಠಲನ ತೋರಿದರು ನಿಜಭಕ್ತಜನರಿಗೆ 3
--------------
ಶ್ರೀದವಿಠಲರು
ಯಾತಕೀಹಂಕಾರವು ಸರ್ವವು ಜಗನ್ನಾಥನ ಪರಿವಾರವು ಪ. ಸ್ವಾತಿಯ ಮಳೆಯೊಳು ಸುರಿವಂಥ ನೀರನು ಜಾತಕ ಪಕ್ಷಿಗೆ ದೊರಕುವ ತೆರದೊಳಿಂನ್ಯಾತಕೀ ಅ.ಪ. ಈಶ ಪ್ರೇರಣೆಯಿಲ್ಲದೇಸು ಮಿಡುಕಿದರು ಶ್ವಾಸ ಬಿಡಲು ಸಲ್ಲದು ಘಾಸಿಗೊಂಡರೆ ನುಂಗಲೋಸುಗ ಮನುಜಗಿ- ನ್ನೇಸು ನಂಬಿಕೆ ಇಹದು ಮೂರ್ಖತ್ವ ಸರಿದು ಘಾಸಿಗೊಳದೆ ರಮೇಶನಿತ್ತದೆ ಲೇಸೆನುತ ಅವನಂಘ್ರಿಕಮಲದ ದಾಸಜನರೊಡನಾಡಿಕೊಳದೆ ದುರಾಸೆ ಕಡಲೊಳಗೀಸಲಾರದೆ 1 ತಾನೆಂಬ ಹಂಕೃತಿ ತಾಳ್ವ ಮನುಜಗಿಂತ ಹೀನರ ಕಾಣೆನಿನ್ನು ಯಾ- ಕೆನಲನ್ನಪಾನದೊಳಿಚ್ಛೆಯನು ತಡೆಯಲನು- ಮಾನಗೊಳುವನಾತನ ಸ್ವಾತಂತ್ರ್ಯವೇನು ಶ್ರೀನಿಕೇತನ ಮನದೊಳನುಸಂಧಾನಗೊಳಿಸುವ ತೆರವಹುದು ಪವ ಮಹಿಮೆಯರಿಯದೆ 2 ವಾರುಧಿಯೊಳಗೆ ಸಂಚಾರಮಾಡುತ ಪರಿ- ವಾರವ ಸೇರಿರುವ ಯೋಚಿಸುವ ನಿತ್ಯದಿ. . . . ಶ್ರೀ ರಮಣ ಚರಣಾರವಿಂಧಾಧರವೆ ಗತಿಯೆಂದು ನಂಬು ಖ- ತನ್ನಿರವ ಮನದಲಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾತಕೆ ದಯಮಾಡಲೊಲ್ಲೆ ರಂಗಯ್ಯ - ಜಗ ಪ ನ್ನಾಥ ನಿನ್ನ ನಂಬಿದೆನಲ್ಲೊ ರಂಗಯ್ಯ ಅ ಚಿಕ್ಕಂದು ಮೊದಲೆ ನಾನು ರಂಗಯ್ಯ - ನೀನೆದಿಕ್ಕೆಂದು ನಂಬಿದೆನೊ ರಂಗಯ್ಯ1 ನೆಂಟರಿಷ್ಟರು ನೀನೆ ರಂಗಯ್ಯ - ನೀನೆಬಂಟರಿಗೆ ಬಂಟನಯ್ಯ ರಂಗಯ್ಯ2 ದಾಸರ ದಾಸನಯ್ಯ ರಂಗಯ್ಯ - ಕರ್ಮಪಾಶಗಳ ಮೋಚನೆ ಮಾಡೊ ರಂಗಯ್ಯ3 ಶೇಷಗಿರಿ ವಾಸ ರಂಗಯ್ಯ - ಆದಿಕೇಶವನೆ ರಕ್ಷಿಸೊ ರಂಗಯ್ಯ4
--------------
ಕನಕದಾಸ
ಯಾತಕೆ ಮರೆತೆನ್ನ ಯತಿಕುಲ ತಿಲಕನೆ ಪ್ರೀತಿಯ ಬಯಸುತ ಬಂದೆ ಪ ವಾತಸುತಗತಿಪ್ರಿಯ ದೂತನೆ ನಾಥನೀನೆಂತೆಂದು ನಂಬಿದೆ ಖ್ಯಾತಗುರು ಶ್ರೀ ರಾಘವೇಂದ್ರನೆ ಅ.ಪ. ದೇಶದೇಶದಿ ಬರುವ ದಾಸಜನರÀಘ ನಾಶಗೈಸಿ ಪೊರೆವೊ ದಾಶರಥಿ ಕಿಂಕರಾ ಶೇಷಶಯನನ ದೋಷ ಜ್ಞಾನ ವಿಶೇಷದಿಂದಲಿ ನ್ಯಾಸಮಾಡಿದೆ ಭೂಸುರೋತ್ತಮ 1 ಛಲದಿ ಭಕ್ತಿಯ ಮಾಡಿ ಒಲಿಸಿ ಹರಿಯ ಪಾದ ಲಲಿತಕೀರ್ತಿಲಿ ಮೆರೆದೆ ಭಳಿರೆ ಭಳಿರೆ ಗುರುವೇ ಗೊಲ್ಲಕೃಷ್ಣನ ಚೆಲ್ವ ನಾಟ್ಯದಿ ನಿಲ್ಲಿಸಿದ ನಿನಗೆಲ್ಲಿ ಸರಿಯೈ ನಲ್ಲ ಯತಿವರ ಕಾಲಿಗೆರಗುವೆ ಶೀಲಭಕುತಿಯ ಪಾಲಿಸೀಗಲೆ 2 ವ್ಯಾಸಮುನಿಯು ಎನಿಸಿ ಶ್ವಾಸಮತವ ಮೆರೆಸಿ ದೋಷ ಹರಿಸಿ ಧೊರೆಗೆ ದಾಸ ದೀಕ್ಷೆಯ ತೋರ್ದೆ ಈಶದಾಸರ ಭೇದ ವಾದವ ಆಶುಕವಿತದಿ ವಿಶದಪಡಿಸಿದೆ ಶ್ರೀಶಶಯನನಾವೇಶ ಸಂಯುತ ಭೇಶಕಾಂತಿ ವಿಶಾಲಕರುಣಿಯೆ 3 ದಾತ ಈತನೆಂಬ ಖ್ಯಾತಿ ಬಿರುದು ನಿನಗೆ ಪ್ರೀತಿಯಿಲ್ಲವೇ ಗುರುವೇ ಜೋತು ಬಂದೆ ಅಡಿಗೇ ಬೋಧೆಯ ನೀತಿ ಪೇಳಿದೆ ಏತಕೀತಡ ಮಾತಲಾಲಿಸು ದೂತನಿನ್ನವ ಪೂತಕಾಯನೆ4 ಪರಮ ಭಕ್ತರ ವೃಂದ ನಿರುತ ನಮಿಪ ಚೆಂದ ಅರಿಯೆ ವರ್ಣನೆ ಎಂದ ಸುರಿಸು ಭಕ್ತಿಯ ಗಂಧ ಸೂರಿ ಬೀರಿಕರುಣವ ಭಾರತೀಶನ ಸಾರಶಾಸ್ತ್ರದಿ ತೋರು ತತ್ವಾರ್ಥ 5 ಲೋಕ ಹರಕೆ ನೀಡಿ ಸಾಕಿ ಸಲಹೆ ಹೆಜ್ಜೆ ನೂಕಿ ದುರಿತರಾಶಿ ಸಾಕುಹರಿಯ ತೋರಿ ಶ್ರೀಕರಾರ್ಚಿತ ಪಾದಪಲ್ಲವ ಪಾಕನಾಶನ ಏಕ ವೀರನ ನಾಕ ಋಷಿಗತಿಪ್ರಿಯ ಶಿಷ್ಯನೆ 6 ಪಾಹಿ ಜ್ಞಾನದ ಖಣಿಯೆ ಪಾಹಿ ಭಕ್ತರ ನಿಧಿಯೆ ಪಾಹಿ ಮತಿಮತಸ್ಥಂಭ ಪಾಹಿ ಶ್ರೀ ಹರಿಯ ದೂತ ಪಾಹಿಸುಗುಣೋದಾರ ಮಹಿಮನೆ ಪಾಹಿನತಜನ ಭಾರವಹಿಪನೆ ಪಾಹಿಜಯಮುನಿ ವಾಯುವಂತರ ಗೇಹ ಸಿರಿಕೃಷ್ಣವಿಠಲ ಭಜಕ 7
--------------
ಕೃಷ್ಣವಿಠಲದಾಸರು
ಯಾತಕೊ ಭಯ ಭೀತಿ ಚಪಲತೆಯು ನಿನ ಗ್ಯಾತಕೊ ಮೂಢಮಾನವ ಪ ಪಾತಕವಳಿ ಗುರುನಾಥನ ಕೃಪೆಯೊಳು ಭೂತಳದತಿಶಯದಾತನು ಕಾಣುವಾ ಅ.ಪ ಈತರದಿ ನೀ ಬಾರದಿರುವಿಯಲ ಮೂಢಮಾನವ ರಾತ್ರಿ ಬೆಳಕಿನೊಳೇಕವಾಗೋ ಭಲಾಸಿ ಶೀತೆಯ ಕೊಂಡೊಯ್ದಾತನ ತಮ್ಮಗೆ ಪ್ರೀತಿಲಿ ಸ್ಥಿರಪದವಿತ್ತನು ಚೀ ಚೀ ನಿನಗ್ಯಾತಕೋ 1 ಯಾತ್ರೆ ಮಾಡೆಲೊ ಕ್ಷೇತ್ರವನ್ನರಿತು ಮೂಢಮಾನವ ಸೂತ್ರ ಪಿಡಿದಲ್ಲಿ ಪಾತ್ರನಾಗೆಲೊ ಧಾತ್ರಿಯೊಳು ತುಲಶೀರಾಮನು ಮಾತ್ರ ತಾ ನಿಜ ಧೋತ್ರವ ತೊಡಿಸುವ ಯಾತಕೊ 2
--------------
ಚನ್ನಪಟ್ಟಣದ ಅಹೋಬಲದಾಸರು
ಯಾತರ | ಜನುಮಾ | ಶಿರಿನಾಥನ ವಲುಮೆಗೆ ದೂರಾದ ನರನಾ ಪ ಉಂಡುಂಡು ವರಗುತ ಕಂಡಲ್ಲಿ ತಿರುಗುತ | ಭಂಡ ಮಾತುಗಳಾಡಿ ದಿನನೂಕುತಾ | ಮಂಡಲೇಶನ ಭಕ್ತಿ ಮಂಡಿಸಿ ಮನದೊಳು | ಖಂಡ ವಿಷಯದಾಶೆ ಗಂಡಲುವವನಾ 1 ಸ್ನಾನ ಸಂಧ್ಯಾನಿಲ್ಲಾ ಧ್ಯಾನ ಮೌನಗಳಿಲ್ಲಾ | ಭವ ಕಾನನವನು ಸೇರಿ | ಶ್ವಾನ ಸೂಕರನಂತೆ ಬಾಳುತಲಿಹನಾ 2 ಹಿಂದಿನ ಪುಣ್ಯದೀ ಬಂದದೀ ನರದೇಹ | ಮುಂದ್ಯಾವ ಗತಿಯೆಂಬ ಬೆಜ್ಜರದೀ | ತಂದೆ ಮಹಿಪತಿ ನಂದನ ಪ್ರಭು ಗೋ | ವಿಂದ ಮುಕ್ಕುಂದೆಂಬ ನಾಮವ ನೆನಿಯದೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾತರ ಭಯ ಶ್ರೀನಾಥನ ಪರಮ ಸುಪ್ರೀತಿಯ ಪಡೆದವಗೆ ಪ ವಿಧಿ ನಿಜಸುಖದಾತ ನೆಂದರಿತವಗೆ ಅ.ಪ ಬಂಧು ಜನರು ತನಗೊಂದಿಸಿದಾಕ್ಷಣ ಬಂದ ಭಾಗ್ಯವೇನೊ ಹಿಂದೆ ಮುಂದೆ ತನ್ನ ನಿಂದಿಸಿ ನುಡಿಯಲು ಕುಂದಾದದ್ದೇನೊ ಮಂದಿರದಲಿ ತಂದಿಟ್ಟಿರುವವಗೆ 1 ದುಸುಮುಸುಗುಟ್ಟುವ ಸತಿಸುತರಿಂದಲಿ ಹಸಗೆಟ್ಟದ್ದೇನೋ ಅಶನಾಚ್ಛಾದನ ತರಲಿಲ್ಲವೆನುತಲಿ ವ್ಯಸನ ಪಡುವುದೇನೊ ವಸುದೇವನಸುತನೊಶದೊಳಗಿರುವವಗೆ 2 ಘಾಸಿಯಿಂದಲಾಯಾಸ ಪಡುತ ಅವಾಸದೊಳಿದ್ದೇನೋ ಕಾಶಿ ಕಂಚಿ ಕಾಳಹಸ್ತಿ ಮೊದಲಾದ ದೇಶ ತಿರುಗಲೇನೋ ಸಂತೋಷದಲ್ಲಿರುವವನಿಗೆ 3
--------------
ಜಗನ್ನಾಥದಾಸರು
ಯಾತರವ ನಾನಯ್ಯ ಇಂದಿರೇಶ ಹೋತಾಹ್ವಯನೆ ನಿನ್ನಾಧೀನ ಜಗವೆಲ್ಲ ಪ ಕಾಲಗುಣಕರ್ಮ ಸ್ವಭಾವಗಳ ಮನ ಮಾಡಿ ಶ್ರೀಲೋಲ ನೀ ಸರ್ವರೊಳಗೆ ಇದ್ದು ಲೀಲೆಗೈಯುತ ಲಿಪ್ತನಾಗದೆ ನಿರಂತರದಿ ದಿವಿಜ ದಾನವ ತತಿಯ 1 ತಿಳಿಸಿಕೊಂಬುವ ನೀನೆ ಶ್ರುತಿತತಿಗಳೊಳಗಿದ್ದು ತಿಳಿಸುವವ ನೀನೆ ಉಪದೇಶಕರೊಳು ತಿಳಿವವನು ನೀನೆ ಬುದ್ಧ್ಯಾದಿಂದ್ರಿಯಗಳೊಳು ನಿಖಿಳ ವ್ಯಾಪಾರ ಮಾಡುತಲಿಪ್ಪೆ 2 ಅಗಣಿತ ಮಹಿಮೆ ಜಗಜ್ಜನ್ಮಾದಿಕಾರಣನೆ ತ್ರಿಗುಣವರ್ಜಿತ ತ್ರಿವಿಕ್ರಮ ತ್ರಿಧಾಮಾ ವಿನುತ ಜಗನ್ನಾಥ ವಿಠ್ಠಲ ನಿನ್ನ ಪೊಗಳಿ ಹಿಗ್ಗುವ ಭಾಗ್ಯಕೊಡು ಜನ್ಮ ಜನ್ಮಕೂ 3
--------------
ಜಗನ್ನಾಥದಾಸರು
ಯಾತರವನೆಂದುಸುರಲಿ - ಜಗನ್ನಾಥ ಮಾಡಿದ ಒಂದು ನರರೂಪವಯ್ಯ ಪ ಮುಟ್ಟು ಹುಟ್ಟಿನೊಳು ನೆಟ್ಟನೆ ನಾ ಬಂದೆತೊಟ್ಟಿದ್ದೆನಾಗ ತೊಗಲಬಕ್ಕಣಇಷ್ಟರೊಳಗೆ ಒಂದು ವಿವರವರಿಯದಂಥಭ್ರಷ್ಟಗೆ ನನಗಿನ್ಯಾತರ ಕುಲವಯ್ಯ 1 ಸೂತಕ ದುರ್ಗಂಧದ ಮಲಮೂತ್ರನಿಂದ ಠಾವಲಿ ತನ್ನ ನಿಜವರಿಯದೆಬಂದದ್ದು ಬಚ್ಚಲ ಗುಣಿ ತಿಂದದ್ದು ಮೊಲೆ ಮಾಂಸ - ಇಂಥಅಂಧಕಗೆ ನನಗಿನ್ಯಾತರ ಕುಲವಯ್ಯ 2 ಒಂಬತ್ತು ಎಜ್ಜದೊಳೊಸರುವ ಹೊಲಸದುತುಂಬಿ ತುಳುಕುವ ಕೊಡವಾಗಿರಲುಇಂಬಿಲ್ಲದೆ ಹೊಲೆಗೊಂಡ ಠಾವಿನಲಿ ಬಂದಂಥಡಂಬಕ ನನಗಿನ್ಯಾತರ ಕುಲವಯ್ಯ3 ಕರುಳು ಖಂಡ ನಾರುವ ಚರ್ಮರೋಹಿತನರಪಂಜರದೀ ಹುರುಳಿಲ್ಲದನರದೇಹ ಹೊತ್ತು ತಿರುಗುವಂಥತಿರುಕ ನನಗಿನ್ಯಾತರ ಕುಲವಯ್ಯ 4 ಹಚ್ಚಡದ ಮೇಲೆ ಲಚ್ಚಿಕೆಯಿಟ್ಟಂತೆಹೆಚ್ಚು ಕಡಮೆ ಎಂದು ಹೆಣಗಾಡುತನಿಚ್ಚ ಕಾಗಿನೆಲೆಯಾದಿಕೇಶವನಹುಚ್ಚಗೆ ನನಗಿನ್ಯಾತರ ಕುಲವಯ್ಯ 5
--------------
ಕನಕದಾಸ
ಯಾತವರ ನಾನಲ್ಲವೊ ಹರಿ ಬರಿದೆ ಖ್ಯಾತಿಯನು ತಂದಿತ್ತಿಯ ಪ ಮಾತುಗಳು ನಾಲುಕಾಡಿ ಸಭೆಯೊಳಗೆ ಪ್ರೀತಿ ಬಡಿಸುವೆನೊ ನರರ ರೀತಿಯಲಿ ಶ್ರುತಿ ಸ್ಮøತಿಗಳ ಪಠಿಸಿ ಶ್ರೀ- ನಾಥ ನಿನ್ನ ತೋಷಿಸಿದೆನೆ 1 ಜಪಮಣಿಗಳನು ತಿರುಹಿಸಿ | ಲೋಕರನ ಕಪಟಗೊಳಿಸುವೆನಲ್ಲದೆ ತಪ ಮಾಡಿದೆನೆ ಮನದಲಿ | ನಿನ್ನಯ ಕೃಪೆಯು ಉದಿಸುವ ತೆರದಲಿ 2 ದಾಸ ವೇಷವ ಧರಿಸಿದೆ ಕನಕದಾ- ವಾಸನೆಯಿಂದಲ್ಲದೆ ವಾಸುದೇವವಿಠಲ ಶರಣ ತಾ ಲೇಶವರಿಯೆನು ಕರುಣಿಸೊ 3
--------------
ವ್ಯಾಸತತ್ವಜ್ಞದಾಸರು
ಯಾರವನು ಹೊರಗೆನಿಂತ ಬಾರಾನ್ಯಾಕವನು ಪ ನೀರಮುಳುಗಿ ಬಂದು ಘೋರಪರ್ವತ ತಂದು ಧಾರುಣಿಯನು ಕದ್ದ ದನುಜನ ಕೊಂದು ನರಹರಿ ರೂಪದಿ ತರಳಗೊಲಿದುಪುಟ್ಟ ಚರಣದಿಂ ಧರಣಿಯನಳೆದ ಮಹಾತ್ಮನೋ 1 ಕೊಡಲಿಯ ಪಿಡಿದು ತಾ ಬಿಡದೆ ಕ್ಷತ್ರಿಯರನ್ನು ಮಡುಹಿ ಬಂದವನಿವನೇನೋ ಮಡದಿಗಾಗಿ ದೊಡ್ಡಅಡವಿಯೊಳು ಮನೆಕಟ್ಟಿ ಬಿಡದೆ ಗೋಕುಲದಲ್ಲಿ ನೆಲೆಸಿರುವಾತನೋ 2 ಬೆತ್ತಲೆ ನಿಂತ್ಹತ್ತಿ ಮತ್ತೆಕುದುರೆಯ ಚಿತ್ತಬಂದಂತೆ ತಾ ತಿರುಗುವನೋ ಉತ್ತಮನಾದ ಶ್ರೀ ಪ್ರಾಣನಾಥವಿಠಲನು ಎತ್ತನೋಡಿದರು ಸುತ್ತುತ್ತಲಿರುವನು 3
--------------
ಬಾಗೇಪಲ್ಲಿ ಶೇಷದಾಸರು
ಯಾರಿಗುಸುರಲಿ ಸಾರತತ್ವ ವಿ ಚಾರ ಭವದೂರಾ ಪ ಚಾರು ಸೇರಿ ಮುಕ್ತಿಯ ಸೊರೆವಿಡಿವುದಿನ್ಯಾರಿಗುಸುರಲಿ ಅ.ಪ. ಶ್ರೀ ಗುರುನಾಥನ ಕಟಾಕ್ಷದಿ ತ್ಯಾಗಿಸಿ ಸಂಸಾರದ ಗೊಡವೆಯ ಯೋಗಿಯಂದದೊಳಿದ್ದು ಆಗಮ ನಿಗಮಾರ್ಥಕೆ ಸಿಲುಕದ ಯೋಗ ಘನವನೊಳಗೊಂಡಿಹ ಅಂಗದ ಯೋಗಾನಂದದುಯ್ಯಾಲೆಯ ತೂಗಿ ನೆಲೆಗೆ ನಿಂದಿಹ ನಿಜಸುಖವಿನ್ಯಾರಿಗುಸುರಲಿ 1 ಉದರದ ನಾಭಿಯ ನೀಳದ ತುದಿ ಹೃದಯ ವಾರಿಜದೊಳಗಿಪ್ಪ ಶಿವ ಸದನ ಲಿಂಗವ ಕಂಡು ಅದು ಇದು ಬೇರ್ಪಡಿಸದೆ ಹೃದಯದಿ ಚದುರ ಸಾಧು ಸತ್ಪುರುಷರ ಮತದಲಿ ಮುದದಿ ಮುಕ್ತಿ ಮಾನಿನಿಗೆ ಮಂಗಲ ಮದುವೆಯಾದ ಮನಸಿನ ಮಹಾ ಗೆಲವಿನ್ಯಾರಿಗುಸುರಲಿ 2 ನೆತ್ತಿಯೊಳ್ ಹೊಳೆ ಹೊಳೆವ ಚಿದಾ ದಿತ್ಯನ ಪ್ರಕಾಶವ ಕಂಡು ಚಿತ್ತದಿ ನಲಿದಾಡಿ ಉತ್ತಮಾನಂದಾತ್ಮರಸ ಸವಿ ಯುತ್ತ ಚಪ್ಪರಿದು ಶರಣರ ಮೊತ್ತದೊಡನೆ ಕುಣಿಕುಣಿದು ಬ್ರಹ್ಮನ ಗೊತ್ತು ತಿಳಿದ ಗುರುತಿನ ವಿಸ್ತರವಿನ್ಯಾರಿಗುಸುರಲಿ 3 ಕುಂದುವ ಕಾಯದ ಸುಖಿಕೆಳೆಸದೆ ಹೊಂದಿದ ಸರ್ವಾಂಗದ ಶೋಧಿಸಿ ಒಂದೇ ದೇವನೊಳಾಡಿ ವಂದಿಸಿ ಗುರುಹಿರಿಯರ ಚರಣಕೆ ಹೊಂದಿ ಹೊಂದಿ ಓಲಾಡುವ ಅರಿಗಳ ಬಂದಿಯೊಳಗೆ ಸಿಲುಕದೆ ಬ್ರಹ್ಮಾ ನಂದರಸಾಮೃತ ಸವಿದಿಹ ಸುಖವಿನ್ಯಾರಿಗುಸುರಲಿ 4 ಹಲವು ಯೋನಿಯೊಳಗೆ ಹೊರಳ ಕುಲ ಛಲ ಶೀಲವ ಮೂರಡಗಿಸಿ ಸುಲಭ ವಂಶದೊಳುಂಡು ಮಲಿನ ಮಾಯಾಮೋಹಕೆ ಸಿಲುಕದೆ ಬಲೆಯ ಛೇದಿಸಿ ಮುಕ್ತಾಂಜ್ಯದ ಬಗೆ ಇನ್ಯಾರಿಗುಸುರಲಿ 5
--------------
ಭಟಕಳ ಅಪ್ಪಯ್ಯ