ಒಟ್ಟು 1228 ಕಡೆಗಳಲ್ಲಿ , 101 ದಾಸರು , 979 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹುಚ್ಚು ಹಿಡಿಯಿತೊ - ಎನಗೆ ಹುಚ್ಚು ಹಿಡಿಯಿತು ಪಅಚ್ಯುತನ ನಾಮವೆಂಬ ಮೆಚ್ಚು ಮದ್ದು ತಲೆಗೆ ಏರಿ ಅ.ಪವಾಸುದೇವನೆಂಬ ನಾಮ ವದನದಲಿ ಒದರುವೆ - ಮಾಯಪಾಶವೆಂಬ ಬಲೆಯ ಹರಿದು ಹರಿದು ಬಿಸುಡುವೆ ||ಕೇಶವನ ಹೂವ ಎನ್ನ ಮುಡಿಗೆ ಮುಡಿಸುವೆ - ಭವದಕ್ಲೇಶವೆಂಬ ಗೋಡೆಯನ್ನು ಕೆದರಿಕೆದರಿ ಬಿಸುಡುವಂಥ 1ಕೃಷ್ಣನಂಘ್ರಿ ಕಮಲಗಳಲಿ ನಲಿದು ನಲಿದು ಬೀಳುವೆ -ಭವಕಷ್ಟವೆಂಬ ಕುಂಭಗಳನು ಒಡೆದು ಒಡೆದು ಹಾಕುವೆ ||ನಿಷ್ಠರನ್ನು ಕಂಡವರ ಹಿಂದೆ ಹಿಂದೆ ತಿರುಗುವೆಭ್ರಷ್ಟ ಮನುಜರನ್ನು ಕಂಡು ಕಲ್ಲು ಕಲ್ಲಿಲಿಕ್ಕುವಂಥ 2ಮಂದಮತಿಗಳನು ಕಂಡರೆ ಮೂಕನಾಗುವೆನು - ಹರಿಯನಿಂದೆ ಮಡುವವರ ಮೇಲೆ ಮಣ್ಣ ಚೆಲ್ಲುವೆ ||ಮಂದರಾದ್ರಿಧರನ ದಿನದೊಳನಶನನಾಗುವೆ ಎನ್ನತಂದೆ ಪುರಂದರವಿಠಲನ ಪೊಗಳಿ ಪಾಡಿ ಆಡುವಂಥ 3
--------------
ಪುರಂದರದಾಸರು
ಹೇಳಲಾಗದು ತತ್ವ ಹೇಳಲಾಗದು ಜ್ಞಾನಖೂಳಮೂಳರಾದ ಕುಹಕಿಗಳಿಗೆಪನಾರುತಿಹ ತೊಗಲನು ಕಡಿದನಾಯಿ ಮುಖದ ಮುಂದೆದಾರವಟ್ಟದಲಿ ತುಪ್ಪವ ನೀಡಲು ಅರಿವುದೆಘೋರಸಂಸಾರ ವಿಷಗಟ್ಟಾಗಿ ಹಿಡಿದವಗೆಸಾರಬೋಧೆಯನರಿಯಲು ತಿಳಿಯುವುದೇ1ಗೊಜ್ಜಲ ತೃಣವನು ತಿಂಬ ಗಾರ್ಧಭನ ಮುಂದೆಸಜ್ಜಿಗೆಯ ತಂದಿಡಲಿಕೆ ಅದನರಿವುದೆಲಜ್ಜೆಯಹ ನಾನಾ ಮೋಹ ಪಾಶಲಿಪ್ಪರಿಗೆಸಜ್ಜನ ಶಾಸ್ತ್ರವನೊರೆಯಲದು ತಿಳಿವುದೇ2ದೊಡ್ಡಕ್ಕಚ್ಚನೆ ಕುಡಿವ ಗೊಡ್ಡೆಮ್ಮೆಯ ಮುಂದಕೆಲಡ್ಡುಗೆಯ ತಂದಿಡಲಿಕೆ ಅದನು ತಿಳಿವುದೇದಡ್ಡ ಬುದ್ಧಿಯು ಬಲಿತು ದೊಡ್ಡನಾದವಗೆದೊಡ್ಡ ಚಿದಾನಂದ ಬ್ರಹ್ಮವು ತಿಳಿವುದೇ3
--------------
ಚಿದಾನಂದ ಅವಧೂತರು
ಹೊಯ್ಯಾಲೊ ಡಂಗುರವ - ಜಗ - |ದಯ್ಯನಯ್ಯ ಶ್ರೀಹರಿ ಅಲ್ಲದಿಲ್ಲವೆಂದುಪ.ಅಷ್ಟೈಶ್ವರ್ಯದ ಲಕುಮಿಯ ಅರಸೆಂದು |ಸೃಷ್ಟಿ - ಸ್ಥಿತಿ - ಲಯಕರ್ತನೆಂದು ||ಗಟ್ಟಿಯಾಗಿ ತಿಳಿದುಹರಿ ಎನ್ನದವರೆಲ್ಲ |ಭ್ರಷ್ಟರಾದರು ಇಹ - ಪರಕೆ ಬಾಹ್ಯರು ಎಂದು 1ಹರಿಯೆಂಬ ಬಾಲನ ಹರಹರ ಎನ್ನೆಂದು |ಕರುಣವಿಲ್ಲದೆ ಪಿತ ಬಾಧಿಸಲು ||ತರಳನ ಮೊರೆಕೇಳಿ ನರಮೃಗರೂಪದಿ |ಹರಿಯ ನಿಂದಕನ ಸಂಹರಿಸಿದ ಮಹಿಮೆಯ 2ಕರಿ ಆದಿಮೂಲನೆ ಕಾಯೆಂದು ಮೊರೆಯಿಡೆ |ಸುರರನು ಕರೆಯಲು ಬಲ್ಲದಿರೆ ||ಗರುಡನನೇರದೆ ಬಂದು ಮಕರಿಯ ಸೀಳ್ದು |ಕರಿರಾಜನ ಕಾಯ್ದ ಪರದೈವ ಹರಿಯೆಂದು 3ಸುರಪಗೊಲಿದು ಬಲಿಯ ಶಿರವನೊದ್ದಾಗಲೇ |ಸುರಸವು ಉದಿಸೆ ಶ್ರೀ ಹರಿಪಾದದಿ ||ಪರಮೇಷ್ಟಿ ತೊಳೆಯಲು ಪವಿತ್ರೋದಕವೆಂದು |ಹರ ತನ್ನ ಶಿರದಲ್ಲಿ ಧರಿಸಿದ ಮಹಿಮೆಯ 4ಮಾನಸಲಿಂಗಪೂಜೆಗೆ ಮೆಚ್ಚಿ ಶಿವ ಬಂದು |ಬಾಣನ ಬಾಗಿಲ ಕಾಯ್ದಿರಲು |ದಾನವಾಂತಕ ಸಾಸಿರ ತೋಳ ಕಡಿವಾಗ |ಮೌನದಿಂದೊಪ್ಪಿಸಿಕೊಟ್ಟ ಶಿವನು ಎಂದು 5ಭಕ್ತಗೊಲಿದು ಭಸ್ಮಾಸುರಗೆ ಶಿವ ವರವಿತ್ತು |ಭಕ್ತನ ಭಯದಿಂದ ಓಡುತಿರೆ ||ಯುಕ್ತಿಯಿಂದಸುರನ ಸುಟ್ಟು ಶಿವನ ಕಾಯ್ದ |ಶಕನು ಶ್ರೀಹರಿ ಅಲ್ಲದಿಲ್ಲವೆಂದು 6ಗರಳಜ್ವಾಲೆಗೆ ಸಿರಿರಾಮ - ರಾಮನೆಂದು |ಸ್ಮರಿಸುತಿರಲು ಉಮೆಯರಸನಾಗ ||ಕೊರಳು ಶೀತಲವಾಗೆ ಸಿತಿಕಂಠ ತನ್ನಯ |ಗಿರಿಜೆಗೆ - ರಾಮಮಂತ್ರವ ಕೊಟ್ಟ ಮಹಿಮೆಯ 7ಹರಬ್ರಹ್ಮ ಮೊದಲಾದ ಸುರರನುದಶಶಿರ |ಸೆರೆಹಿಡಿದು ಸೇವೆಯ ಕೊಳುತಿರಲು ||ಶರಧಿಯ ದಾಟಿ ರಾವಣನ ಸಂಹರಿಸಿದ |ಸುರರ ಲಜ್ಜೆಯ ಕಾಯ್ದ ಪರದೈವ ಹರಿಯೆಂದು 8ಜಗದುದ್ಧಾರನು ಜಗವ ಪೊರೆವನೀತ |ಜಗ ಬ್ರಹ್ಮಪ್ರಳಯದಿ ಮುಳುಗಲಾಗಿ ||ಮಗುವಾಗಿ ಜಗವನುದ್ಧರಿಸಿ ಪವಡಿಸಿ ಮತ್ತೆ |ಜಗದ ಜನಕಪುರಂದರವಿಠಲನೆಂದು9
--------------
ಪುರಂದರದಾಸರು
ಹೊಲೆಯ ಹೊಲತಿ ಇವರವರಲ್ಲಹೊಲಗೇರಿಯೊಳು ಹೊಲೆಯ ಹೊಲತಿಯಿಲ್ಲ ಪ.ಸತಿಯಳ ವಶನಾಗಿಜನನಿ - ಜನಕರಿಗೆಅತಿ ನಿಷ್ಟುರ ನುಡಿವವ ಹೊಲೆಯಸುತರ ಪಡೆದು ವಾರ್ಧಿಕ್ಯ ಮದವೇರಿಪತಿದ್ಟೇಷ ಮಾಡುವಳೆ ಹೊಲತಿ 1ಗುರುಗಳಲ್ಲಿ ವಿದ್ಯೆಗಳನು ಕಲಿತುಹಿರಿಯರ ಬಳಲಿಸುವವ ಹೊಲೆಯಪರಪುರಷಗೊಲಿದು ತನ್ನ ಪುರುಷನವಿರಸವ ಮಾಡುವ ಕುಲಕೇಡಿತೆ ಹೊಲತಿ 2ಒಡೆಯನನ್ನವನುಂಡು ಅಡಿಗಡಿಗೆ ಬಾಯ್ಬಿಡದೆ ತರ್ಕಿಸುವ ಜಡ ಹೊಲೆಯಬಡತನ ಬಂದರೆ ಪುರುಷನ ರಚ್ಚೆಗೆಬಿಡದೆ ತಹಳೆ ಶುದ್ಧ ಹೊಲತಿ 3ನೂರೊಂದು ಕುಲ ಕುಂಬಿಪಾಕಕಟ್ಟುವಪರನಾರಿಯಲ್ಲಿ ವೀರ್ಯವಿಟ್ಟವ ಹೊಲೆಯಆರೊಳು ಕಲಹಾಪಸ್ಮಾರಿ ದುರ್ಮುಖಿಯು - ಕಠೋರಕುಮತಿ ಶುದ್ಧ ಹೊಲತಿ 4ಅಜನುತ ಪುರಂದರವಿಠಲನ ದಾಸರಭಜನೆಯ ದಾರಿಯ ಬಿಟ್ಟವ ಹೊಲೆಯನಿಜವರ್ಯರಾದ ಸಜ್ಜನರ ಪಾದಪದ್ಮವಭಜಿಸದಿರುವಳೆ ಶುದ್ಧ ಹೊಲತಿ 5
--------------
ಪುರಂದರದಾಸರು