ಒಟ್ಟು 1347 ಕಡೆಗಳಲ್ಲಿ , 97 ದಾಸರು , 1063 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ಬೆನ್ನುಬಿದ್ದು ಧನ್ಯನಾದೆನು ಪನ್ನಂಗಶಯನನಿನ್ನ ಬೆನ್ನುಬಿದ್ದು ಧನ್ಯನಾದೆನು ಪಇನ್ನು ಭವದೊಳು ಅನ್ಯರಂಜಿಕೆಯನ್ನು ತಪ್ಪಿಸಿನಿನ್ನ ಕರುಣವನು ತೋರಿದಿ ಸನ್ನುತಾಂಗರೂಢಿಯೊಳು ನಾನು ಮೂಢನಾದೆನು ಧೃಢದಿ ನಿನ್ನಗಾಢಮಹಿಮೆಯ ಅರಿಯದಲೆ ಇನ್ನು ಬಡಬಡಿಸಿಕೊಂಡುಕೇಡಿಗೊಳಗಾಗಿ ಕೆಡುತಲಿರ್ದೆನು ಬಿಡದೆ ಪರರನುಬೇಡಿ ಆಸೆಯಿಂ ಭಂಗಮಾಡುತ ಖೋಡಿಯಪ್ಪುದ ಕಂಡು ನೀನೆಮೂಢನೊಳು ದಯಮಾಡಿ ಕರುಣವನೀಡಿ ಕುರುಹನು ತೋರ್ದಿ ದೇವ 1ಹೊಂದಿಕೊಂಡೀ ಮಾಯಾಜಾಲವನು ಒಂದನರಿಯದೆಮಂದಮತಿಯಾಗಿ ಕೆಡುತಲಿ ನಾನುಬಂಧನದ ಭವದ ಸಿಂಧುವಿನೊಳಗಾಡುತಿರ್ದೆನುನೊಂದು ಬೆಂದೆನುಮಂದಭಾಗ್ಯನ ಮಂದಮತಿಗಳುಒಂದು ಉಳಿಯದಂತೆ ಮಾಡೆನ್ನ್ಹøದಯ ಮಂದಿರದೊಳುನಿಂದುನೀನೆ ಮುಂದಕ್ಹಾಕಿದಿ ಮಂದರೋದ್ಧಾರ2ಮರುಳತನವನು ದೂರಮಾಡಿದಿ ಹರಿಯೆ ಎನ್ನಸರುವ ದುರ್ಗುಣ ತರಿದು ಹಾಕಿದಿ ಕರುಣದೆನ್ನದುರಿತಪರ್ವತಮೂಲ ಕಿತ್ತಿದಿ ಮರೆವು ಹರಿಸಿದಿಪರಮಕರುಣಾಕರನೆ ನಿನ್ನುಪಕಾರ ಮರಿಯೆನಾವಕಾಲದಿಪರರ ಬೇಡದಪದವಿನೀಡಿದಿಶರಣಜನಪ್ರಿಯ ಸಿರಿಯರಾಮ 3
--------------
ರಾಮದಾಸರು
ನಿನ್ನದೇ ಹಂಗೆನಗೆ ಶ್ರೀಹರಿನಿನ್ನದೇ ಹಂಗೆನಗೆ ಪನಿನ್ನದೇ ಹಂಗೆನಗುನ್ನತ ಸುಖವಿತ್ತುಮನ್ನಿಸಿ ದಯದಿಂದೆನನುದ್ಧರಿಸಯ್ಯ ಅ.ಪಜಿಹ್ವೆಗೆ ನಿಮ್ಮಯ ಧ್ಯಾನದ ಸವಿಸಾರವಿತ್ತಯ್ಯಾಭವಭವದಲ್ಲಿ ಪುಟ್ಟಿ ಜನಗೀಡೆನಿಸುವದಯದಿ ಪಿಡಿದು ಎನ್ನ ಭವಭಯಹರಿಸಿದಿ 1ವಿಸ್ತಾರ ತವಚರಿತ ಪಾಮರನ್ಹಸ್ತದಿಂ ಬರೆಸುತ್ತಅಸ್ತವ್ಯಸ್ತವೆಲ್ಲ ನಾಸ್ತಿ ಮಾಡಿ ನೀನೆಪುಸಿಯಾಗೆನ್ನಗೆ ಸ್ವಸ್ಥಪಾಲಿಸಿದಿ 2ಸದಮಲ ಶ್ರೀರಾಮ ಭಕುತಾಭಿ ಸದಮಲ ತವನಾಮಸುದಯದಿಂದೆನ್ನಯ ವದನದಿ ನಿಲ್ಲಿಸಿಸದಮಲವೆನಿಪ ಸಂಪದವಿಯ ನೀಡಿದಿ 3
--------------
ರಾಮದಾಸರು
ನಿನ್ನವ ನಾನಲ್ಲೇನೊ ರಂಗ ನಿರ್ಜರೋತ್ತುಂಗ ಪ.ಹುಚ್ಚ ಮಗನ ತಾಯಿತಂದೆ ಹಚ್ಚ ಬಲ್ಲರೆ ಸಾಕದೆನಿಚ್ಚನಿನ್ನ ನಾಮ ಕಾಯೋ ನಿಶ್ಚಯಬುದ್ಧಿ ನೀಡೀಗೆ1ಹಣವಳ್ಹೇವಲ್ಲದಿರೆ ಹೀನೈಸಿ ಚೆಲ್ಲುವರೆಜನಿತದುರ್ಗುಣರಾಶಿ ಜನಕ ನೀ ನಿವಾರಿಸೊ 2ಶರಣು ಹೊಕ್ಕವರವಸರಕೊದಗುವ ದೇವಸೇರಿದೆ ಶ್ರೀ ಪಾದಾಬ್ಜವಸಿರಿಪ್ರಸನ್ವೆಂಕಟದೇವ3
--------------
ಪ್ರಸನ್ನವೆಂಕಟದಾಸರು
ನಿರುತ ನಿನ್ನಯ ಲೀಲೆಯನೆ ಹಾರೈಸುವೆ ಮುದ್ದುತಾರೊ ಕಂದಕಿರುಗುರುಳಿನ ಚೆಲ್ವ ಬಾಲಕರನ್ನನೆ ಮುದ್ದು ತಾರೊ ಪ.ನಿದ್ರೆ ಪೂರಿತವಿಲ್ಲದೆ ನಡೆಯುತ ಬಂದು ಮುದ್ದು ತಾರೊ ಕಂದಮೆದ್ದು ಕಾಯಿ ಕಳಲೆ ಕಿರುನಗೆ ಜೊಲ್ವಾಯ ಮುದ್ದು ತಾರೊ 1ಧುಡುಮೆಂಬ ಕಡೆವ ದನಿಗೆ ದುಡು ದುಡು ಬಂದುಮುದ್ದು ತಾರೊ ಕಂದಉಡುಗೆ ಜಗ್ಗುತ ತೊದಲ್ನುಡಿದು ಮೊಗವ ನೋಡಿ ಮುದ್ದು ತಾರೊ 2ನವನೀತನೀಡಲು ಆಯೆಂಬ ಪುಟ್ಬಾಯ ಮುದ್ದು ತಾರೊ ಕಂದಹವಣಾದ ಸಣ್ಹಲ್ಲು ಎಳೆದುಟಿ ಸೊಂಪಿನ ಮುದ್ದು ತಾರೊ 3ಅಂಬೆಗಾಲಿಕ್ಕುತೆನ್ನನು ಕಂಡು ಕರವೆತ್ತಿ ಮುದ್ದು ತಾರೊ ಕಂದಕಂಬುಕಂದರ ನಿನ್ನ ಮನದಣಿಯಪ್ಪುವೆ ಮುದ್ದು ತಾರೊ 4ಚಿನ್ನರ ಬಡಿದು ನಾನಲ್ಲೆಂದು ಬಾಯಾರ್ವ ಮುದ್ದು ತಾರೊ ಪ್ರಸನ್ನವೆಂಕಟಾಚಲವಾಸವಿಲಾಸನೆ ಮುದ್ದು ತಾರೊ 5
--------------
ಪ್ರಸನ್ನವೆಂಕಟದಾಸರು
ನೋಡೆನ್ನೊಳು ಮೂಡಣಾದ್ರಿ ಪ್ರೌಢ ಕೃಷ್ಣ ಕೃಪೆಮಾಡುಚಿತ್ತ ಕಾಡಿತಭಯ ನೀಡು ಕೃಷ್ಣಪ.ಬಾಯೆಂಬರಿಲ್ಲೊ ಎಂಬರಿಲ್ಲ ಕಾಯೊ ಕೃಷ್ಣಫುಲ್ಲಸಾಯಕನ ಗಾಯ ತಪ್ಪಿಸಯ್ಯ ಕೃಷ್ಣ 1ಭೂರಿಜನ್ಮದ ಧಾರೆಯಳಿಯೊಶೌರಿಕೃಷ್ಣಭವವಾರಿಧಿಯ ತಾರಿಸೊ ಉದಾರಿ ಕೃಷ್ಣ 2ದುಷ್ಟಸಂಗ ನಷ್ಟವಾಗಲಿಷ್ಟು ಕೃಷ್ಣಾಮಿತತುಷ್ಟಿನನ್ನ ಕಷ್ಟ ಬಡಿದಟ್ಟು ಕೃಷ್ಣ3ಎಂದು ನಿನ್ನ ಹೊಂದುವೆನೊ ತಂದೆ ಕೃಷ್ಣ ಭದ್ರಮಂದಿರನೆ ಇಂದಿರೇಶ ನಂದ ಕೃಷ್ಣ 4ದಾಸ ದಾಸ ದಾಸನಾ ನಿರ್ದೋಷಿ ಕೃಷ್ಣ ನೀನೆಪೋಷಿಸಯ್ಯ ಪ್ರಸನ್ವೆಂಕಟೇಶ ಕೃಷ್ಣ 5
--------------
ಪ್ರಸನ್ನವೆಂಕಟದಾಸರು
ಪಂಚಮಿಯ ದಿನರಂಭೆs :ಏನಿದು ಇಂದಿನವಿಭವನಮ್ಮಶ್ರೀನಿವಾಸನ ಮಹಾತ್ಮವಮಾನಿನಿರನ್ನೆ ನೀ ಪೇಳೆ ಭಕ್ತಾ-ಧೀನದ ಚರಣದ ಲೀಲೆಭಾನುಉದಯದಲಿ ವೀಣಾದಿ ಸು-ಗಾನ ವಾದ್ಯ ನಾನಾವಿಧ ರಭಸದಿ 1ಎತ್ತಲು ನೋಡಿದಡತ್ತ ಜನ-ಮೊತ್ತವಿಲಾಸವಿದೆತ್ತಚಿತ್ತದಿ ನಲಿನಲಿದಾಡಿ ತೋಷ-ವೆತ್ತಿರುವನು ಒಟ್ಟುಗೂಡಿಸುತ್ತುಮುತ್ತು ಒತ್ತೊತ್ತಿಲಿಹರು ವಿ-ಪ್ರೋತ್ತಮ ಶ್ರೀಹರಿಭಕ್ತರ ಮಯವಿದು 2ಚಾಮರ ಛತ್ರ ಸಿಗುರಿಯು ಜನ-ಸ್ತೋಮಪತಾಕೆ ತೋರಣವುಹೇಮದ ಕಂಚುಕಿ ಈಟಿ ಗುಣ-ಧಾಮನ ಬಿರುದುಗಳ್ ಕೋಟಿಆ ಮಹಾಭೇರಿ ಪಟಹ ನಿಸ್ಸಾಳಕಸಾಮಗಾನ ಸಾಮ್ರಾಜ್ಯವೋಲಿಹುದು 3ಬಾಲರು ವೃದ್ಧ ಯೌವನರು\ಜನ-ಜಾಲವೆಲ್ಲರು ಕೂಡಿಹರುಲೋಲಸ್ರೀಮುಂದ್ರಾಂಕಿತದಿ ಬಹು ವಿ-ಶಾಲ ದ್ವಾದಶನಾಮ ಮುದದಿಆಲಯದೊಳಗಿಹ ಬಾಲಕಿಯರು ಸಹಸಾಲಂಕೃತ ಸಮ್ಮೇಳದಿ ನಲಿವರು 4ಒಂದು ಭಾಗದಿ ವೇದಘೋಷ ಮ-ತ್ತೊಂದು ಭಾಗದಿ ಜನಘೋಷಇಂದಿನ ದಿನದತಿಚೋದ್ಯ ಏ-ನೆಂದು ವರ್ಣಿಸುವದಸಾಧ್ಯಚಂದಿರಮುಖಿ ಯಾರೆಂದೆನಗುಸುರೆಲೆಮಂದರಧರಗೋವಿಂದನ ಮಹಿಮೆಯ5ಪೇಳಲೇನದಾ ಮೂರ್ಲೋಕದೊಳಗೀ ವಿ-ಶಾಲವ ನಾ ಕಾಣೆ ಪ.ಸೋಜಿಗಸೌಭಾಗ್ಯ ಸಂಪದಕಿದು ಬೀಜ ಕಾಣೆಲೆರಾಜೀವನಾಭನ ಪೂಜಾವಿನೋದದಿರಾಜವದನೆ ವನಭೋಜನದಿಂದಿನ 1ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು 2ಇಂದಿನ ದಿನದಂದವನೂತನವೆಂದು ನೀ ಪೇಳುವಿಚಂದಿರ ಮುಖಿ ಜನಸಂದಣಿಗಳು ಮಹಾಮಂದಿ ಓಲೈಸುವರಿಂದು ಮುಕುಂದನ 3ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆ ಪ.ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆಕಾಣುವ ಯೋಗಭೋಗ 1ಎನಗತಿ ಮನವು ನಿನಗತಿ ಛಲವುಜನುಮಾಂತರ ಪುಣ್ಯವೈಸೆ ನೀ 2ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾ ಪ.ಅನವರತದಿಂದ ಬರುವ ಪುರುಷನಲ್ಲಮೀನಕೇತನ ಶತರೂಪ ಕಾಣೆ 1ನೂತನ ಪುರುಷನಿವನ್ಯಾರೆಂದರಿಯೆನಮ್ಮಾಶಾತಕುಂಭದ ಮಂಟಪವೇರಿ ಬರುವನಮ್ಮಾ 2ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾತರತರ ರತ್ನವರದ ಬಾಯೊಳಿರುವದಮ್ಮಾ 3ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾಪರಮಪುರುಷನಂತೆ ತೋರುವನು ಅಮ್ಮಾ4ಬಾಲಾರ್ಕನಂತೆ ಮುಖ ಪ್ರಜ್ವಲಿಪುದುನೀಲಮಾಣಿಕ್ಯ ಕಾಂತಿಯ ಸೋಲಿಪುದು 5ಮೂರ್ಲೋಕದೊಳಗೆ ಸರಿಯುಪಮೆತೋರಲರಿಯೆಕಾಲಿಗೆರಗುವೆನು ಪೇಳಬೇಕು ಸಖಿಯೆ 6ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾಬೆರಳೊಳು ವಜ್ರದುಂಗುರವನಿಟ್ಟವನಮ್ಮಾ 7ವರರತ್ನಖಚಿತದಾಭರಣದಿಂದ ಮೆರೆವಚರಣಸರೋಜದೊಳು ರೇಖೆಯಿಂ ಶೋಭಿಸುವ8ವಲ್ಲಭೆಯರ ಸಹಿತುಲ್ಲಾಸದಿ ಬರುವಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ 9ಬಲ್ಲಿದಪುರುಷನಿವನೆಲ್ಲಿಂದ ಬಂದಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ 10ಊರ್ವಶಿ :ನೋಡುನಿತ್ಯಾನಂದಕರನಮೂಡಗಿರಿಯಿಂದೋಡಿ ಬಂದನ ನೋಡೆ ಪ.ಛಪ್ಪನ್ನೈವತ್ತಾರು ದೇಶಕಪ್ಪಕಾಣಿಕೆಗೊಂಬ ತೋಷಸರ್ಪಶೈಲ ರಾಜವಾಸಚಪ್ಪರ ಶ್ರೀ ಶ್ರೀನಿವಾಸ 1ತಿರುಗುತ್ತಿಪ್ಪಾ ತಿರುಮಲೇಶಶರಣ ರಾಮನ ಭಕ್ತಿಪಾಶದುರುಳಿನಲಿ ನಿಂದಿರ್ಪಶ್ರೀಶತರಿಸುವನುಕಾಣಿಕೆವಿಲಾಸ2ಪಟ್ಟದರಸನಾದ ದೇವಸೃಷ್ಟಿಯಾಳುವಜಾನುಭಾವದೃಷ್ಟಿಗೋಚರವಾಗಿ ಕಾಯ್ವಇಷ್ಟವೆಲ್ಲವ ಸಲಿಸಿ ಕೊಡುವ 3ವೃಂದ ನೆರಹಿ ವನಕೆಅಂದಣವೇರಿ ಮುಕುಂದನೊಲವಿನಲಿಕುಂದಣಮಂಟಪವೇರಿ ಮತ್ತೊಬ್ಬನುಸಂದರುಶನವಂ ನೀಡುತ ಯಿಬ್ಬರುಒಂದಾಗುತ್ತಾನಂದವ ಬೀರುತ್ತ 1ಅಕ್ಕ ನೀನೋಡುಬಹುಮಾನದಿಸಿಕ್ಕಿದಿ ಬಿರುದು ಪೊತ್ತಾತೆಕ್ಕೆಪಕ್ಕೆಯ ವಿಲಾಸ ಮನಸಿನೊಳುಉಕ್ಕುವದತಿ ತೋಷಇಕ್ಕೆಲದಲಿ ಬೀಸುವ ಚಾಮರಗಳ ವಕ್ಕಣಿಸುವಸ್ತುತಿಪಾಠಕ ಜನಗಳಮಿಕ್ಕಿ ನೊಡುವ ನೋಟಕೆ ಮನಸಿನೊಳುಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2ಛತ್ರ ಚಾಮರ ತೋರಣ ಪತಾಕೆಪವಿತ್ರ ನಿಶಾನಿಧಾರಣಾಸುತ್ರಾಮಾರ್ಚಿತ ಚರಣಭಕ್ತರನುಪವಿತ್ರಗೈಯುವ ಕಾರಣಮಿತ್ರಮಂಡಳವನು ಮೀರಿ ಪೊಳೆವುತಿಹರತ್ನಖಚಿತ ಮಂಟಪದಲಿ ಮಂಡಿಸಿಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವಕೀರ್ತಿಯ ಧರಿಸಿ ಜಗತ್ರಯಪಾವನ 3ವಾಲಗಶ್ರುತಿಭೇರಿಡಿಂಡಿಮನಿಸ್ಸಾಳ ಪಟಹಭೂರಿತಾಳ ಮೃದಂಗ ರವದಿಂದಜನಜಾಲಕೂಡಿರುವಮೇಳವಿಸುತ್ತನುಕೂಲಿಸಿ ಬಹು ಬಿರುದಾಳಿಗೆ ಸಂಭ್ರಮದೇಳಿಗೆಯಿಂದಲಿಕೋಲು ಪಿಡಿದು ಓಹೋಯೆಂಬಂಥ ವಿ-ಶಾಲ ಭಕ್ತರ ಮೇಲು ಸಂತೋಷದಿ 4ದೇಶದೇಶದ ಜನರು ನಾನಾ ವಿಧಭಾಷೆ ಪ್ರವರ್ತಕರುಆಶಾಪಾಶರು ಪಾತಕಮಾನಸ-ರೀ ಸಮಯದಿ ಶ್ರೀನಿವಾಸನೆ ಎಮ್ಮಯದೋಷಗಳೆಲ್ಲವ ನಾಸಿಸು ಯೆನುತಭಿ-ಲಾಷೆಯ ಜನಗಳ ಪೈಸರದಿಂದಲಿ 5ವೇದಶಾಸ್ತ್ರಪೌರಾಣಪ್ರಜÕರು ತರ್ಕವಾದಿಪಾಠಕ ಜಾಣಸಾಧು ಕುಶಲದಿ ವಿದ್ಯಾಪ್ರವೀಣವಿನೋದ ಸಿದ್ಧ-ಸಾಧ್ಯ ಸಾದರದಿಂದ ಸರಸಕವಿ ವಾಗೀಂ-ದ್ರಾದಿಗೀರ್ವಾಣಸಮುದಾಯದಿಂದ ಕೃ-ಪೋದಯ ತೋರುತ್ತಾದಿಮೂರುತಿ ಜಯ-ನಾದದಿ ಭಕ್ತರಮೋದಪಡಿಸುತ್ತಾ6ರಂಭೆ : ನಾರಿ ಕೇಳೆ ಶ್ರೀರಮಾಧವಸ್ವಾರಿ ಪೊರಟ ಕಾರಣ ಪೇಳೆ 1ಯಾವ ರಾಜ್ಯದಿ ಪ್ರಭುದೇವಸ್ವಾರಿಯಠೀವಿಯ ಕಾಣೆ ಅಂತರ್ಭಾವವೇನೆ 2ಭೂರಿದೇಶವ ಸಂತತಪ .ವೀರವೈಷ್ಣವ ಭಕ್ತರು ಸದ್ಭಕ್ತಿಯಸಾರದಿ ನಿಲಿಸಿದರುಮಾರಜನಕನಿಗೆ ಮನನಿಲ್ಲದೆ ಸಂ-ಚಾರಕೆ ತಾ ಮೈದೋರಲು ಬೇಕೆಂ-ಬೀ ರೀತಿಗೆ ತಾ ಪೂರ್ವಸ್ಥಾನ ವಿ-ಚಾರಕೆ ಬಂದಿಹ ಕಾರಣವೀಗಲೆ 1ರಾಜ ಬಂದನೆ ಅಮ್ಮಾ ಆಶ್ರಿತಸುರ-ಭೂಜಬಂದನೆ ಅಮ್ಮಾಓಜೆಯಿಂದಲಿ ಕಾಣಿಕೆಯನ್ನು ಒಪ್ಪಿಸಿರಾಜಕದಿವ್ಯಾರತಿಯನು ಎತ್ತುತರಾಜೀವನಾಭನೆ ರಕ್ಷಿಸೆನುತ್ತಲಿಸೋಜಿಗಪಟ್ಟೆಲ್ಲಾಜನವಿರ್ದುದು 2
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪದಾಯುಗವ ನೀಡಿನ್ನಾ ಪಬುಧಾಮತಿಯನಿತ್ತು ಬದೀಗನಾಗಿಪ್ಪೆ ಅ.ಪಮುದಾದಿ ಮುಖದಲಿ ಉದಾಯಗೈಸಿದಿ 1ವಿದಾರಿತಾರಿಯೆ ಪದೂಮನಾಭನೆ 2ದಾತಾಗುರುಜಗನ್ನಾಥವಿಠಲ ನಿಜದೂತಾನೆನಿಪ ಎನ್ನ ಮಾತು ಲಾಲಿಸೊ ಸ್ವಾಮೀ 3
--------------
ಗುರುಜಗನ್ನಾಥದಾಸರು
ಪವಡಿಸು ಪರಮಾತ್ಮಾ ಶ್ರೀ ಶ್ರೀಶಾಪವಡಿಸು ಪರಮಾತ್ಮಾ ಪಪರಮಭಕ್ತರನು ಪೊರೆಯುವ ದೇವನೆಅ.ಪರನ್ನಮಂಟಪದೊಳು ಕನ್ನಡಿಯಂದದಿಸ್ವರ್ಣವರ್ಣದಲಿಹ ಪನ್ನಂಗ ಕಾದಿಹ 1ಸುತ್ತಲು ತುಂಬುರರು ನಾರದರು ಸ್ತೋತ್ರವ ಮಾಡಿಅತ್ಯಂತ ಹರುಷದಿ ಚಿತ್ತೈಸೆಂದೆನುವರು 2ಥಳಥಳಿಸುವ ದಿವ್ಯತಾರೆಗಳಂದದಿಲಲನೆಶ್ರೀ ಭೂದೇವಿಯರು ಸೇವಿಪರು ನಿನ್ನ3ವೇದವ ಕದ್ದನ ಭೇದಿಸಿ ಅಜನಿಗೆವೇದವ ತಂದಿತ್ತು ಆದರಿಸಿದ ದೇವ 4ಮುಳುಗಿದ ಗಿರಿಯನು ಧರಿಸಿ ಬೆನ್ನಲಿ ಬೇಗಸುರರಿಗೆ ಅಮೃತವ ಕುಡಿಸಿದಮಾಧವ5ಸುರಮುನಿಗಳಿಗೆಲ್ಲಾ ಅಭಯವ ನೀಡುತವರಹರೂಪತಾಳಿ ಬಳಲಿ ದಣಿದು ಬಂದಿ6ಕಂದನಿಗಾಗಿ ದೊಡ್ಡ ಕಂಬದಿಂದುದಿಸಿ ಖಳನಕೊಂದು ಕರುಳ ವನಮಾಲೆ ಧರಿಸಿ ದಣಿದಿ 7ಮೂರಡಿ ಭೂಮಿಯ ಬೇಡಿ ಬಲೀಂದ್ರನದೂಡಿ ಪಾತಾಳಕೆ ಬಹಳ ಬಳಲಿ ಬಂದಿ 8ಭೂಮಿ ಪಾಲಕರನ್ನು ಸೋಲಿಸಿಬಾರಿಬಾರಿವಾರಿಜಾಕ್ಷ ಶ್ರೀರಾಮರಿಗೊಲಿದೆಯೊ 9ಸೇತುವೆಯನ್ನುಕಟ್ಟಿದೂರ್ತರಾವಣನ ಕುಲವಘಾತಿಸಿ ಕೊಂದ ರಘುನಾಥನೆ ಬಳಲಿದೆ 10ವಸುದೇವ ಕಂದನೆ ಶಿಶುರೂಪಿನಿಂದಲಿಅಸುರೆ ಪೂತಣಿ ಅಸುಹೀರಿ ಬಳಲಿ ಬಂದಿ 11ತಿದ್ದಿ ತ್ರಿಪುರಾಸುರರ ಮರ್ದಿಸಿ ಸುಜನರಿಗೆಮುದ್ದು ತೋರಿದ ಸುಪ್ರಸಿದ್ಧ ಮೂರುತಿ ಬೇಗ 12ಕರದಿ ಖಡ್ಗವ ಧರಿಸಿ ಸಿರದಿ ಕಿರೀಟ ಹೊಳೆಯೆಇಳೆಯ ಮನುಜರಿಗೆಲ್ಲ ಸುಲಭನಂದದಿ ತೋರ್ಪಿ 13ಮಂಗಳಚರಿತ ವಿಹಂಗವಾಹನ ಸುರಗಂಗೆಯಪಿತ ಸಾಧುಸಂಗವಂದಿತ ದೇವ 14ಗರುಡಗಮನ ಕೃಷ್ಣ ಉರಗನ್ಹಾಸಿಗೆಯೊಳುಸಿರಿದೇವಿ ಸಹವರ ಕಮಲನಾಭ ವಿಠ್ಠಲ 15
--------------
ನಿಡಗುರುಕಿ ಜೀವೂಬಾಯಿ
ಪಾದಕಂಡು ಪಾವನಾದೆನು ಶ್ರೀಗಿರಿಯ ನಿಲಯನಪಾದಕಂಡು ಪಾವನಾದೆನು ಪಪಾದಕಂಡು ಪಾವನಾದೆನುಮಾಧವನ ಪ್ರಸಾದ ಪಡೆದೆನುಹಾದಿಗಾಣದೆಪರಮದುರ್ಭವಬಾಧೆಯೊಳು ಬಿದ್ದು ತೊಳಲಿ ಬಳಲುತಮೇದಿನಿಯೊಳು ಜನುಮ ತಾಳಿಭೇದಮತದ ಹಾದಿಬಿಟ್ಟು ಅ.ಪನೀಲಬಣ್ಣದೊಪ್ಪುವ ಸುಂದರ ಶುಭಕಾಯಇಂದಿರೆಲೋಲತ್ರಿಜಗಮೋಹನಾಕಾರ ಕೊರಳಪದಕಮಾಲಕೌಸ್ತುಭಮುಕುಟಮಣಿಹಾರ ರತ್ನದುಂಗುರಕಾಲೊಳ್ಹೊಳೆಯುವ ಗೆಜ್ಜೆಸರಪಳಿಶೀಲವೈಷ್ಣವ ನಾಮ ಪಣೆಯಲಿಕಾಳರಕ್ಕಸಕುಲಸಂಹಾರನಪಾಲಸಾಗರಕನ್ನೆವರನಪಾಲಮೂಲೋಕಸಾರ್ವಭೌಮನಮೇಲು ಭೂವೈಕುಂಠದಲ್ಲಿ 1ಉಟ್ಟದುಕೂಲ ಶಲ್ಯ ಜರತಾರ ಕೈಯಲ್ಲಿ ಕಂಕಣಪಟ್ಟ ರತ್ನದ ನಡುವಿಗುಡಿದಾರ ವರ್ಣಿಸುವರಾರುಸೃಷ್ಟಿಯೊಳಗೀತ ಮೀರಿದವತಾರ ಇನಕೋಟಿ ಪ್ರಭಾಕರಬಿಟ್ಟು ವೈಕುಂಠ ಇಹ್ಯಕೆ ಸಾಗಿಬೆಟ್ಟದ ಮೇಲೆ ವಾಸನಾಗಿಕೊಟ್ಟು ವರಗಳ ಮೂರು ಜಗಕೆಶೆಟ್ಟಿಯಂದದಿ ಕಾಸುಕೊಳ್ಳುವದುಷ್ಟಭ್ರಷ್ಟ ಶಿಷ್ಟರೆಲ್ಲರಇಷ್ಟದಾಯಕದಿಟ್ಟ ದೇವನ 2ಒಂದೆ ಮನದಲಿ ಸಕಲ ಸೇವಕರು ಭಯಭಕುತಿಯಿಂದಬಂದು ಹರಕೆಯ ತಂದು ನೀಡುವರು ತುಂಬರನಾರದರೊಂದಿಗಾನದಿಂ ಪಾಡಿ ಪೊಗಳುವರು ಆನಂದ ಕೋರುವರುಹೊಂದಿ ಭಜಿಸುತ ಸಪ್ತಋಷಿಗಣಬಂದು ಇಳಿವರು ಬಿಡದೆಅನುದಿನವಂದ್ಯ ನಿಗಮಾದಿಬಂಧು ಭಜಿಪರಕಂದುಗೊರಳಾದಿ ಬ್ರಹ್ಮಸುರರಿಂಗಂಧಪರಿಮಳಕುಸುಮದ್ರವ್ಯಗಳಿಂದ ಸೇವೆಯ ಗೊಂಬದೇವನ 3ಉದಯಕಾಲದಿ ಬಾಲನವತಾರ ಮಧ್ಯಾಹ್ನಕಾಲದಿಸದಮಲಾಂಗ ಯೌವನಾಕಾರಸುಸಂಧ್ಯಾಕಾಲದಿಮುದುಕನಾಗಿ ಕಾಂಬ ಮನೋಹರ ಬಹುಮಹಿಮಗಾರಪದುಮವದನ ಮದನನಯ್ಯಪದುಮವತಿಯ ಪ್ರಾಣಪ್ರಿಯಒದಗಿಬಂದ ಭಕುತಜನರನುಸುದಯದಿಂದ ಕರೆದು ಪ್ರಸಾದಮುದದಿ ನೀಡುತ ಕೃಪೆಯದೋರಿಸದಮಲಸಂಪದವನೀವನ 4ತೀರದೀತನ ಲೋಕಶೃಂಗಾರ ಏರಿ ನೋಡಲುಪಾರಗಿರಿತುದಿ ಗಾಳಿಗೋಪುರ ಮುಂದೆ ನಡೆಯಲುದಾರಿಯಲಿಕೊಳ್ಳಏಳು ವಿಸ್ತಾರ ಪರಮಪರತರತೋರುವ ಮಹ ಗುಡಿಯು ಗೋಪುರದ್ವಾರ ಚಿನ್ನದ ಕಳಸ ಬಂಗಾರಗಾರುಮಾಡದೆ ದಾಸಜನರನುತಾರತಮ್ಯದಿ ಪೊರೆಯಲೋಸುಗುಸೇರಿಧಾರುಣಿ ವೈಕುಂಠವೆನಿಸಿದಧೀರವೆಂಕಟ ಶ್ರೀಶ ರಾಮನ 5
--------------
ರಾಮದಾಸರು
ಪಾರ್ವತೀದೇವಿ ಸ್ತೋತ್ರ137ಪಾರ್ವತಿ ದಕ್ಷಕುಮಾರಿ ನಿನ್ನ | ಸಾರ್ವೆ ಸಂತತ ಕುಜನಾರೀ ||ಆಹಾ||ದೂರ್ವಾಸನರ್ಧಾಂಗಿ ಸರ್ವಜೆÕ ಯನ್ನಯ ||ಚಾರ್ವಾಕ ಮತಿ ಕೀಳಿ ತೋರ್ವದು ಸುಪಥವ ಪದುರ್ಗೆ ಭವಾನಿ ರುದ್ರಾಣಿ ಗೌರಿ | ಸ್ವರ್ಗಜಿನಾರಾಧ್ಯ-ಮಾನಿ || ಸೇರೆದುರ್ಗುಣದವರ ಸುಜ್ಞಾನಿ | ಭಕ್ತವರ್ಗ ಪೋಷಕ ಶುಕ-ವಾಣೀ ||ಆಹಾ||ನಿರ್ಗುಣರಾದುತ್ತಮರ್ಗೆವೊಲಿವ ಅಪ |ವರ್ಗದ ನಾಳೆ ನರರ್ಗೆ ಮಣಿಸದಿರೆ 1ಚಂಡಿ ಕಾತ್ಯಾಯಿನಿ ಉಮ್ಮಾ ನಾಲ್ಕು | ಮಂಡೆಯವನಸೊಸೆ | ಯಮ್ಮಾ | ನಾಡೆಕಂಡು ಭಜಿಪೆನಿತ್ಯನಿಮ್ಮ |ಪಾದಪುಂಡರೀಕದ್ವಯವಮ್ಮಾ ||ಆಹಾ||ಉಂಡು ವಿಷವ ನಿನ್ನಗಂಡಬಳಲಿ ಕೈ |ಕೊಂಡೌಷಧ ತಂಡ ತಂಡದಲೆನಗೀಯೆ 2ಪಾವಕನೊಳು ಪೊಕ್ಕ ಪತಿವ್ರತೆ | ಯಾವಾಗ ಮಾನಿಸತ್ಕಥೆ | ಯಲ್ಲಿಭಾವನೆ ಕೊಡೆಪ್ರತಿಪ್ರತಿ | ಜಾವ ಜಾವಕೆ ಷಣ್ಮುಖಮಾತೆ ||ಆಹಾ||ಕೋವಿದರೊಡತಿ ಕೇಳಾವಾಗ ವೈರಾಗ್ಯ |ವೀವದು ದುರಾಪೇಕ್ಷೆ ನಾವೊಲ್ಲೆನೆಂದೆಂದೂ 3ಬೇಡಿದಭೀಷ್ಟವ ಕೊಡುವೆ | ದಯ ಮಾಡಿ ಭಕ್ತರಕರಪಿಡಿವೆ | ದೋಷಕಾಡುಳಿಯದಂತೆ ಸುಡುವೆ | ನಿನ | ಗೀಡೆ ಮಹದ್ಭಯಕಡಿವೆ ||ಆಹಾ||ರೊಢೀಶ ಶಿವನೆಂದು ಆಡಿಸದಿರು ಬುದ್ಧಿ |ಗೇಡಿ ದಾನವರಂತೆ ನೀಡು ಶ್ರೀಹರಿ ಸೇವೆ 4ಮೇಶ ಪ್ರಾಣೇಶ ವಿಠ್ಠಲನೆ | ಜಗದೀಶನೆಂಬುವ ದಿವ್ಯ-ಜ್ಞಾನೆ | ಕೊಟ್ಟು |ಪೋಷಿಪುದೆನ್ನ ಸುಜಾಣೆ | ನೀನುದಾಸಿಸೆ ನಾನಾರಕಾಣೆ ||ಆಹಾ||ಈಶೆ ಪಂಚ ಮಹಾದೋಷಿ ಬಿಡದೆ ನಿತ್ಯಾ |ಈ ಶರೀರದೊಳಿಹ್ಯಘಾಸಿಮಾಡುವನನ್ನು 5
--------------
ಪ್ರಾಣೇಶದಾಸರು
ಪಾಲಿಸು ಗಜವದನ ಸುಮತಿಯಲೋಲನಿಖಿಲವಿದ್ಯೆಮೂಷಕವಾಹನಪವರವಿದ್ಯಪ್ರದಾತ ಸುರಗಣಸೇವಿತಪರಮಪಾವನೆ ಪರಮೇಶ್ವರಿವರಸುತ 1ವಿಮಲಗುಣಗಣ ಅಮಿತ ಜ್ಞಾನಪೂರ್ಣಕ್ರಮದಿ ಲೋಕದಾದಿ ಪೂಜ್ಯಕೆ ಕಾರಣ 2ಮಲಿನ ಮಮ ಮನ ಕಳೆದು ನೀಡೆಲೋ ಜ್ಞಾನವಲರೆ ಶ್ರೀರಾಮನಡಿ ಪ್ರೇಮಸಂಪಾದನ 3
--------------
ರಾಮದಾಸರು
ಪಾಲಿಸೊ ವನಮಾಲಿ ಮುಂದೆನ್ನಬಾಲಕನಲೆಯಲೆಸದವನ ಪ.ಹದ್ದನೇರ್ವನಿರುದ್ಧ ನಿನ್ನಲ್ಲಿಬುದ್ಧಿ ನಿಲ್ಲದು ಶುದ್ಧ ವೃತ್ತಿಲಿಮುದ್ದುಮಕ್ಕಳು ಮುಗ್ಧರಲ್ಲೆಅಯ್ಯತಧ್ಯಾನಾಲಾಪ ಬಿದ್ದದ್ದಲ್ಲಯ್ಯ 1ತುಲಸಿ ಪುಷ್ಪಾಂಜಲಿ ತರಲಿಲ್ಲಹೊಳೆವಂಘ್ರಿಗರ್ಪಿಸಲು ಹೊತ್ತಿಲ್ಲಬಲು ಧನ ಬಹ ಕೆಲಸ ಕೈಕೊಂಡೆಕಲಿಕೂಡ ನಿರಯದ ಭೋಗುಂಡೆ 2ಆಡುವ ಮಾತು ಮಾಡಲರಿತರಿಯೆಬೇಡುವರಿಗುಣ ನೀಡಲಿಕ್ಕರಿಯೆಖೋಡಿಗೇನುಂಟು ಸುಖ ಹೇಳು ತಂದೆಹಾಡುವೆ ನಿನ್ನ ಕಾಡುವೆನಿಂದೆ 3ಹೆತ್ತ ತಾಯಿ ಕುತ್ತಿಗೊತ್ತಿದರಾರೊಮತ್ತೆ ತಂದೆ ಮಾರಲಿತ್ತರಿನ್ನಾರೊಪೃಥ್ವಿಪ ಸುಲಿದರೊತ್ತರೆಂಬುವರುಕರ್ತನೀನಿದ್ದೆನ್ನೆತ್ತುವರಾರು4ಕರುಣವಾರಿಧಿ ಕರುಣಿಸು ಗಡಪರಮಭಾಗವತರಿರುವಲ್ಲೆನ್ನಿಡುಪರಸನ್ನ ವೆಂಕಟರಸ ನೀ ಬಾರೊಮರಣ ಹೊಂದದ ಅರಮನೆಗೊಯ್ಯೊ 5
--------------
ಪ್ರಸನ್ನವೆಂಕಟದಾಸರು
ಪ್ರತಿಪದೆಯ ದಿನರಂಭೆ : ಓಹೊ ಬಲ್ ಬಲ್ ಬಲ್ ಶ್ಯಾಣೆ ಜಾಣೆ ಪ.ಈ ದಿವಸದಿ ನಿನ್ನೆಯ ದಿನದವನನ್ನುಆದರಿಸಲು ಕಾರ್ಯೋದಯವೇನೆಓಹೋ ಬಲ್ ಬಲ್ ಶಾಣೆ ಜಾಣೆ ಅ.ಪ.ಊರ್ವಶಿ : ಚಿತ್ತಜರೂಪೆ ಸರ್ವೋತ್ತಮ ಭಾಷೆಯನಿತ್ತಿಹ ಕಾರಣದಿಉತ್ತಮ ಶ್ರೀಪಾದ ಎತ್ತಲು ಬೇಕೆಂದುಒತ್ತಾಯಗೈದ ಮೋದಿ 1ಮತ್ತೊಂದು ಕಾರಣ ಉಂಟು ಶ್ರೀಹರಿಗಿವನಿತ್ಯವಾಹನ ಕಾಣೆಲೆಇತ್ತ ಪಯಣಗೈವೊಡತ್ತಬೇಕಾದರೆಭೃತ್ಯನಿವನು ಹೇ ಬಾಲೆ 2ಆದಕಾರಣದಿಂದ ನಾದಿನಿ ಕೇಳೆ ಪ-ಕ್ಷಾದಿಯೊಳಿವನ ಮ್ಯಾಲೆಪಾದವ ನೀಡಿ ವಯೋದಯದಿಂದ ಶ್ರೀಮಾಧವಬರುವ ಕಾಣೆ3ಕೇರಿಕೇರಿಯ ಮನೆಯಾರತಿಗಳನೆಲ್ಲಶ್ರೀರಮಾಧವ ಕೊಳ್ಳುತಭೂರಿವಾದ್ಯಗಳ ಮಹಾರವದಿಂದಲಿಸಾರಿ ಬರುವನು ಸುತ್ತ 4ಭಾವೆನೀ ಕೇಳೆ ನಾನಾ ವಿಧದಿಂದಲಿಸೇವಕರಿಗೆ ದಯದಿಪಾವನಗೈದು ಮಹಾವಿನೋದೇಕಾಂತಸೇವೆಯ ಗೊಂಡ ಕಾಣೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪ್ರಸನ್ನ ಶ್ರೀ ರಾಜರಾಜೇಶ್ವರ ಸ್ತೋತ್ರ ಹಾಗೂ ಶ್ರೀ ಕಪಿಲ43ರಾಜರಾಜೇಶ್ವರನೇ ರಾಜೀವವದನ ಶ್ರೀರಾಜರಾಜೇಶ್ವರಿ ಪತೇ ಶರಣು ಮಾಂಪಾಹಿರಾಜೀವಪಿತ ನೀನು ಕನ್ಯೆಯರಿಗೆವರಪ್ರಜಾಸಂಪತ್ ಉದ್ಯೋಗ ಈವಿ ಭಜಕರಿಗೆ ಪವೇಧಕಾಯಜಸ್ವಾಯಂಭುವ ಮನು ಶತರೂಪಾಈ ದಂಪತಿಗೆರಡು ಗಂಡುಗಳು ಪ್ರಿಯವ್ರತಉತ್ಥಾನಪಾದ ಮೂರು ಹೆಣ್ಣು ಮಕ್ಕಳುಅಕೂತಿ ದೇವಹೂತಿ ಪ್ರಸೂತಿ ಎಂಬುವರು 1ಶ್ರೀಪತಿಯೇ ನಿನ್ನ ಕಾರುಣ್ಯ ಬಲದಿಂದಸುಪುಣ್ಯ ಶ್ಲೋಕ ಆದಿಮನು ತನ್ನರೂಪಗುಣಶ್ರೇಷ್ಠ ಕನ್ಯೆಯರಿಗೆ ತಕ್ಕಾನು-ರೂಪವರರುಗಳಿಗೆ ಮದುವೆ ಮಾಡಿಸಿದನು2ಪುತ್ರಿಕಾ ನಿಯಮದಿ ಆಕೂತಿ ದೇವಿಯನುಸುತಪೋಧನ ಪ್ರಜೇಶ್ವರ ರುಚಿಗೆ ಕೊಟ್ಟನಿರ್ದೋಷ ಕಲ್ಯಾಣ ಗುಣಗಣಾರ್ಣವ ನೀನುಪ್ರಾದುರ್ಭವಿಸಿದಿ ಯಜÕಶ್ರೀಯು ದಕ್ಷಿಣಾದೇವಿಯು 3ಕರ್ದಮ ಪ್ರಜೇಶ್ವರರ ಭಕ್ತಿ ತಪಸ್ ಏನೆಂಬೆಶ್ರೀದ ನಿನ್ನಯ ಭಕ್ತ ವಾತ್ಸಲ್ಯಕ್ಕೆಣೆಯುಂಟೆಪದ್ಮಜನು ಕರ್ದಮಗೆ ಪ್ರಜಾಃಸ್ರುಜ ಎನ್ನಲುಭಕ್ತಿಯಿಂ ತಪಗೈಯೇ ಪ್ರತ್ಯಕ್ಷನಾದಿ 4ಸುಪುಷ್ಕರಾಕ್ಷ ನೀಸೂರ್ಯತೇಜಃಪುಂಜಪ್ರಪನ್ನರ್ಗೆ ಬೀರುವ ಕಾರುಣ್ಯನೋಟವಿಪುಲಾಬ್ಜವದನಸುಂದರಸುಳಿಗೊರಳುಸುಭ್ರಾಜಕುಂಡಲಕಿರೀಟದಹೊಳಪು5ಉರುಕಾಂತಿಯಿಂ ಜ್ವಲಿಪಅರಿಶಂಖ ಗದೆಯಶುಭ್ರೋತ್ಪಲ ಪುಷ್ಪ ಕರಗಳ ಹಿಡಿದಿಹಿವಿರಾಜಿಸುವ ಕೌಸ್ತುಭಶಿತ ಪದ್ಮೋತ್ಪಲಸ್ರಜಶ್ರೀರಮಣ ನಿನ್ನ ಶ್ರೀವತ್ಸ ಸೌಂದರ್ಯ ಏನೆಂಬೆ 6ದ್ವಿಷÉೂೀಡಶ ಶುಭಲಕ್ಷಣ ಸುಲಕ್ಷಿತಪುಷ್ಪಭವ ವರವಾಯು ಸಂಸೇವ್ಯ ಶ್ರೀಶಶೇಷಾಹಿ ಭೂಷಣಾದ್ಯಮರಸನ್ನುತನೀನುಪಕ್ಷಿಸೋಪರಿ ಅಂಬರದಿ ನಿಂತಿ 7ಉತ್ತಮಶ್ಲೋಕ ನಿನ್ನ ಕರ್ದಮ ಹರುಷದಿನೋಡಿಕ್ಷಿತಿಯಲ್ಲಿ ಬಿದ್ದು ಸನ್ನಮಿಸಿ ಸ್ತುತಿಸೇಮಾಧವನೇ ನೀನು ಹೇಳಿದಿ ಸ್ವಾಯಂಭುವನುಶತರೂಪಾ ದೇವಹೂತಿ ಸಹ ಬರುವನೆಂದು 8ಆ ಮನು ದಂಪತಿಯು ಮತ್ತು ದೇವಹೂತಿಯುಧರ್ಮನಿಷ್ಠರೂ ಸದ್ಗುಣಾದಿ ಶ್ರೇಷ್ಠರೆಂದಿರಮಣೀಯ ಆಕೆಯ ಕರ್ದಮರು ಪರಸ್ಪರ ಅರ್ಹರೆಂದಿಹೆಣ್ಣುಮಕ್ಕಳೊಂಬತ್ತು ಸ್ವಯಂ ನೀ ಅವತರಿಪಿ ಎಂದಿ 9ಸತಿಸುತಾ ಸಹ ಸ್ವಾಯಂಭುವ ಬರಲು ಮುನಿಯುಆದರದಿ ಸ್ವಾಗತ ನೀಡಿ ರಾಜನಲಿ ಯುಕ್ತಸದ್ಭೋಧ ರೂಪದಲಿ ಮಾತನಾಡೆ ಮನವುಬಂದ ಕಾರ್ಯ ಹೇಳಿದನು ವಿನಯ ಗಾಂಭೀರ್ಯದಿ 10ದುಹಿತ್ರು ಸ್ನೇಹ ಪರಿಕ್ಲಿಷ್ಟ ಮನದಿಂದ ದೀನನಾ ಹೇಳುವುದು ಕೃಪೆಯಿಂದ ಕೇಳಿರಿ ತಮ್ಮಬಹುಶೀಲಗುಣವಯಸ್ ರೂಪಾದಿಗಳಮಹರ್ಷಿ ನಾರದರು ಹೇಳಿ ಕೇಳಿಹಳು ದೇವಹೂತಿ 11ಸರ್ವಾತ್ಮನಾ ತಮಗೆಅನುರೂಪಗೃಹಿಣಿ ಅಗುವಳುಅವಳನ್ನ ದಯದಿಂದ ವಧುವಾಗಿ ಸ್ವೀಕರಿಸಿವಿವಾಹ ವಿಧಿಪೂರ್ವಕ ಮಾಡಿಕೊಳ್ಳಿರಿ ಎಂದುಈ ವಿಧದಿ ರಾಜ ಕೋರಲು ಮುನಿಯು ಒಪ್ಪಿದನು 12ಸಾಧು ಮಾತುಗಳಾಡಿ ಹಸನ್ಮುಖವ ತೋರಿಸಿಕರ್ದಮರು ಅರವಿಂದನಾಭನ್ನ ಸ್ಮರಿಸುತ್ತಶಾಂತವಾಗಿ ಸುಮ್ಮನೇ ಕುಳಿತರು ಆಗ ಮನುವಿಧಿಪೂರ್ವಬ್ರಾಹ್ಮಿವಿವಾಹಕ್ಕೆ ಏರ್ಪಾಡು ಮಾಡಿದನು 13ಶ್ರೀವರನೇ ನಿನ್ನಾನುಗ್ರಹ ಬಲದಿಂದಲೇದಿವ್ಯಾಭರಣ ಉಡುಗೊರೆ ವೈಭವದಿಂದದೇವಹೂತಿ ಕರ್ದಮರ ವಿವಾಹ ಮಾಡಿ ಕೃತಕೃತ್ಯಸ್ವಾಯಂಭುವ ಬರ್ಹಿಷ್ಮತಿ ಸೇರಿದನು 14ಕರ್ದಮರು ದೇವಹೂತಿಯು ಗೃಹಸ್ಥತನ ಚರಿಸಿದನುಪತಿಇಂಗಿತವರಿತು ಪಾರ್ವತಿ ಶಿವನಿಗೆಎಂತಹ ಸೇವೆ ಮಾಳ್ಪಳೋ ಅದರಂತೆ ಪ್ರೀತಿಯಿಂದಪತಿಸೇವೆ ಮಾಡುತ್ತಿಹಳು ದೇವಹೂತಿ ಸಾಧ್ವಿ 15ಯೋಗಾತಿಶಯ ಸಾಮಥ್ರ್ಯದಿ ಕರ್ದಮರುಕಾಮಗ ವಿಮಾನ ನಿರ್ಮಿಸಿ ದಾಂಪತ್ಯಸುಖ ವಿಹಾರವ ಮಾಡಿ ಹೇ ಸ್ವಾಮಿ ನಿನ್ನ ಕೃಪದಿಮಕ್ಕಳು ಸ್ತ್ರೀ ಪ್ರಜಾ ಒಂಭತ್ತು ಹುಟ್ಟಿದವು 16ಶ್ರೀಕರ ನಾರಾಯಣ ನೀ ಕಪಿಲಾವತಾರಆ ಕರ್ದಮರು ದೇವಹೂತಿ ಮಗನೆನಿಸಿಉತ್ಕøಷ್ಟ ಸಾಧು ಸಾಂಖ್ಯ ತತ್ವೋಪದೇಶವಅ ಕುಟಿಲ ಮಾತೆಗೆ ಬೋಧಿಸಿದ್ದು ಪ್ರಸಿದ್ಧ 17ಕರ್ದಮರ ಒಂಭತ್ತು ಕನ್ಯೆಯರು ಕಲಾ, ಅನಸೂಯ,ಶ್ರಧ್ಧಾ, ಹರ್ವಿಭೂ, ಗತಿ, ಕ್ರಿಯಾ, ಊರ್ಜಾ,ಶಾಂತಿಖ್ಯಾತಿಸಾಧ್ವಿಗಳಿವರು ಮರೀಚತ್ರಿ, ಅಂಗೀರ, ಪುಲಸ್ತ್ಯ ಪುಲಹಕ್ರತುವಶಿಷ್ಟಾ ಭೃಗುಗಳಿಗೆ ಮದುವೆ- ಆದರೀ ಕ್ರಮದಿ18ಐಶ್ವರ್ಯವಂತ ಸ್ವಾಯಂಭುವ ಮನು ತನ್ನ ಮಗಳುಪ್ರಸೂತಿಯನು ಬ್ರಹ್ಮಪತ್ರ ದಕ್ಷನಿಗೆ ಕೊಟ್ಟು ಆಕೆಪ್ರಸವಿಸಿದಳು ಷೋಡಶಾಮಲಲೋಚನೆ ಪುತ್ರಿಯರಸುಶೀಲ ಸಾಧ್ವಿಯರು ಮದುವೆ ಅದರು ಸುಲಭದಿ 19ಶ್ರಧ್ಧಾ, ಮೈತ್ರಿ, ದಯಾ, ಶಾಂತಿ, ತುಷ್ಟಿ, ಪುಷ್ಟಿ, ಕ್ರಿಯಾಉನ್ನತಿ, ಬುದ್ಧಿ, ಮೇಧಾ, ತಿತಿಕ್ಷಾ, ಹ್ರೀಮೂರ್ತಿಹದಿಮೂರು ಈ ಕನ್ಯೆಯರು ಮದುವೆ ಆದರು ಧರ್ಮಗೆಸಾಧ್ವಿ ಸ್ವಾಹಾಪತಿ ಅಗ್ನಿಪಿತೃಗಳ ಪತ್ನಿ ಅದಳು ಸ್ವಧಾ 20ಶ್ರೀ ರಮಾಪತಿ ನಿನ್ನ ಕಾರುಣ್ಯ ಏನೆಂಬೆಪಿತೃದೇವರೊಳ್ ಅಂತರ್ಗತನಾಗಿ ನೀನೇಪಿತೃದೇವರ್ಗಳನ್ನ ಪುತ್ರ ಸಂತಾನ ಬೇಕೆಂದುನರರು ಬೇಡಿಕೊಂಡರೆ ಭಕ್ತಿ ಮೆಚ್ಚಿ ಫಲವೀವಿ 21ಸತಿದೇವಿ ಭವನ ಪತ್ನಿಯಾದಳು ವಿಹಿತದಿಪತಿಭಕ್ತಿ ಪತಿಸೇವಾ ಸದಾರತಳು ಭವಾನಿಹದಿನಾರು ಕನ್ಯೇಯರ ದಕ್ಷನುಹರಿನಿನ್ನದಯದಿಮದುವೆ ಮಾಡಿ ಕೊಟ್ಟನು ಹಾಗೂ ಪುನರವತಾರದಲ್ಲೂ 22ಧನಹೀನರಿಗೂ ನೀನು ಉದಾರ ಕಾರುಣ್ಯದಿಧನಒದಗಿಸಿ ಮದುವೆ ಮಾಡಿಸುವಿಯೋಮುನಿವರ್ಯ ರುಚಿಕರಿಗೆ ವರುಣನ ದ್ವಾರ ನೀಕನ್ಯಾಶುಲ್ಕ ಒದಗಿಸಿ ವಿವಾಹ ಮಾಡಿಸಿದಿ 23ಪಶುಪತ್ನಿ ಸಂತಾನ ಯಜÕ, ಧನ ವಿವಾಹೋತ್ಸವಯಶಸ್ ತೇಜೋಬಲ ವೀರ್ಯ ಪ್ರಜಾಸೃಷ್ಟಿ ಅಧಿಕಾರಐಶ್ವರ್ಯ ಇಂತಹುದು ದಕ್ಷಗೆ ಬಹು ಕೊಟ್ಟು --ಅವನೋಳ್ ಇದ್ದುಯಶ ಎಂದು ಕರೆಸಿಕೊಂಬ ಶ್ರೀರಮಣ ಶ್ರೀಕರ --ನಮೋ ನಮೋ ನಿನಗೆ 24ನಂದಿನೀಧರ ಶಿವನೊಳ್ ಅಂತರ್ಯಾಮಿಯಾಗಿರುತಪುಂಸ್ತ್ರೀ ಪ್ರಜಾಸೃಷ್ಟಿ ಮುಂಜಿ ಮದುವೆ ಮಕ್ಕಳು ಮೊಮ್ಮಕ್ಕಳುಇಂಥಾ ಸಂತಾನ ಮತ್ತು ಆಯುಷ್ಯ ಸುಖವೀವಿ ಪ್ರಜಾತಿಹಿಅಮೃತಂ ಆನಂದ ಎಂದು ಕರೆಸಿಕÉೂಂಬ ನಿನಗೆ ಶರಣು 25ಮನು ಸ್ವಾಯಂಭುವ ದಕ್ಷ ಮರುತ ದೇವತೆಗಳೊಳ್ಶ್ರೀನಿಧಿಯೇ ನೀನಿದ್ದು ಪ್ರಜೋತ್ಪತ್ಯಾದಿಗಳನ್ನು ಈವಿಈ ನುಡಿಗಳ ಪಠಣ ಫಲ ಮೋಕ್ಷಹೇತು- ಸಜ್ಞಾನ ಲಾಭವುಇನ್ನೂ ಅವಾಂತರ ಫಲ ವಿವಾಹ ಸಂತಾನಆಯುರಾರೋಗ್ಯ ಉದ್ಯೋಗಪ್ರಾಪ್ತಿ26ಮಂದಜಾಸನಪಿತ ಶ್ರೀ ಪ್ರಸನ್ನ ಶ್ರೀನಿವಾಸಒಂದು ಪುತ್ರ ಬೇಕೆನ್ನೆ ಮೂವರನ್ನು ನೀ ಕೊಟ್ಟೆಅಂದು ನೀನೇ ತೋರ್ದಿ ಮಗನಾಗಿ ಮನುವಿಗೆಒಂದೇಮನದಿ ಇದು ಪಠಿಸೆ ನೀ ಒಲಿವೆ 27-ಇತಿ ಶ್ರೀ ರಾಜೇಶ್ವರ ಸ್ತೋತ್ರ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ಶ್ರೀ ವಾಮನಪ್ರಥಮ ಅಧ್ಯಾಯಶ್ರೀ ವಾಮನಪ್ರಾದುರ್ಭಾವಸಾರಭೂಮಾದಿ ಗುಣನಿಧಿಯೇಅನಘಮಂಗಳರೂಪವಾಮನ ಸುಸೌಂದರ್ಯಸಾರ ಲಕ್ಷ್ಮೀಶಬ್ರಹ್ಮೇಶ ಮುಖವಂದ್ಯ ಶರಣು ಸೌಭಾಗ್ಯದನೆಬ್ರಹ್ಮಾಂಡ ಬಹಿರಂತವ್ರ್ಯಾಪ್ತ ಸರ್ವೇಶ ಪಉದಿತಭಾಸ್ಕರ ನಿಭ ಸ್ವಕಾಂತಿಯಲಿ ಜ್ವಲಿಸುತಿಸುದರ್ಶನ ಗದಾ ಜ್ಞಾನಪ್ರದ ದರಾಹಸ್ತಪದುಮೆ ಸಹ ಅಜುವಿಷ್ಣು ಮಂತವ್ಯ ಸರ್ವಸ್ಥಶೃತಿವೇದ್ಯ ಅಜಸೇವ್ಯಪ್ರಣವಪ್ರತಿಪಾದ್ಯ1ಸರ್ವ ಸೃಷ್ಟಿ ಸ್ಥಿತಿ ಲಯ ನಿಯಮನ ಜ್ಞಾನಆವೃತಿ ಬಂಧ ಮೋಕ್ಷಕೆ ಮುಖ್ಯಕರ್ತಸುವರ್ಣಾಂಡವ ಪಡೆದು ವ್ಯಾಪಿಸಿ ಅದರೊಳುಅವತಾರಗಳ ಮಾಡಿ ಸಜ್ಜನರ ಕಾಯುವಿ 2ವೇದೋದ್ಧರಮತ್ಸ್ಯಸತ್ಯವ್ರತನಿಗೆ ಒಲಿದಿಮಂದರವ ಪಾಲ್ಗಡಲಲಿ ಪೊತ್ತಕೂರ್ಮಇಂದಿರಾಪತಿ ಅಜಿತ ಮೋಹಿನಿ ಧನ್ವಂತರಿದೈತ್ಯಹರ ಭೂಮಿ ಉದ್ಧರ ಭೂವರಾಹ 3ಪಾಪಘ್ನ ಪ್ರಹ್ಲಾದ ರಕ್ಷಕ ನೃಸಿಂಹನೇವಿಷ್ಟ ವಾಮನ ತ್ರಿವೃತ್ ಗೋಪಬಾಲಸುಪವಿತ್ರ ಜಮದಗ್ನಿಸುತ ಪರುಶುರಾಮಪ್ರಭಂಜನಸೇವ್ಯಶ್ರೀರಾಮಚಂದ್ರ4ಅಜ್ಞಾನ ಹೃತ್ತಿಮಿರಸೂರ್ಯವೇದವ್ಯಾಸನಿಜಭಕ್ತಜನ ಪಾಂಡವಪ್ರಿಯ ಕೃಷ್ಣದುರ್ಜನ ವಿಮೋಹಕ ಸುರಸುಬೋಧಕ ಬುಧ್ಧಸುಜನವಂದ್ಯನೆ ಧರ್ಮಸ್ಥಾಪಕನೆÀ ಕಲ್ಕಿ 5ಷಡ್ರೂಪ ಹಯವದನ ಮಹಿದಾಸ ತಾಪಸಕ್ಷಿಪ್ರವಸುಪ್ರದ ಶ್ರೀಕರ ಯಜÕ್ಯ ಕಪಿಲಅತ್ರಿಸುತ ವೃಷಭಾದಿ ಅನಂತಸುಖ ಚಿದ್ರೂಪಅಪ್ರತಿ ಮಹೈಶ್ವರ್ಯ ಪೂರ್ಣ ಏಕಾತ್ಮ 6ನಿವ್ರ್ಯಾಜ ಭಕ್ತಾಗ್ರಣಿಯು ಪ್ರಹ್ಲಾದನುಆ ಆರ್ಯನ ಸುತ ವಿರೋಚನನೆಂಬುವನುಆ ದೈತ್ಯನ ಪುತ್ರ ಬಲಿಮಹಾರಾಜನುಆಧಿಕ್ಯ ಹೊಂದಿದನು ಬಲಪೌರುಷದಲಿ 7ದೈತ್ಯೇಯ ಬಲಿರಾಜ ಬಲಉನ್ನಾಹದಿಂಜಗತ್ರಯವ ತನ್ನ ವಶ ಮಾಡಿಕೊಂಡಇಂದ್ರಾದಿಗಳು ಐಶ್ವರ್ಯ ಶ್ರೀಯಶಸ್ಥಾನವಿದುರರಾಗಲು ದೇವಮಾತೆ ಯೋಚಿಸಿದಳು 8ಸರ್ವಭೂತ ಗುಹಾವಾಸವಾಸುದೇವಜಗದ್ಗುರುಸರ್ವ ಜಗತ್ಪತಿ ಕೇಶವನಿಗೆ ಪ್ರಿಯವಾದಪಯೋವ್ರತವ ಭಕ್ತಿಯಿಂದಲಿ ಮಾಡುವುದೆಂದುದೇವಮಾತೆಗೆಪತಿಕಶ್ಯಪ ಪೇಳಿದನು9ಆದಿವರಾಹನೇ ಮಹಾಪುರುಷ ಸರ್ವ -ಭೂತ ನಿವಾಸನೇವಾಸುದೇವಸದಾ ಸರ್ವ ಸಚ್ಛಕ್ತಿ ಪರಿಪೂರ್ಣ ಸರ್ವವಿದ್ಯಾಧಿಪತಿ ಶುಭಮಂಗಳ ಸ್ವರೂಪ 10ಸರ್ವ ಜಗಜ್ಜ£್ಮ್ಞದಿಕರ್ತನೇ ಜಗದೀಶಸರ್ವ ಜಗತ್ರಾಣ ಚೇಷ್ಟಕ ನಿಯಾಮಕನೇವಿಶ್ವತೋ ಮುಖ ಆದಿದೇವ ನಿನಗೆ ನಮೋಶ್ರೀವರ ನಾರಾಯಣ ನರಹರೇ ಸ್ವಾಮಿ 11ಮರಗದ ಶ್ಯಾಮ ಅನಿರುದ್ಧ ಪ್ರದ್ಯುಮ್ನಸಿರಿಕಾಂತ ಸರ್ವೇಶ ಕೇಶವ ನಮಸ್ತೆಪುರುಟಾಂಬರಧಾರಿ ಸುರವರೇಣ್ಯನೇ ನಮೋಸರ್ವ ವರದನೇ ಶ್ರೀದ ಕರುಣಾಂಬುನಿಧಿಯೇ 12ಅದಿತಿ ದೇವಿಯು ಪಯೋವ್ರತವ ಮಾಡಿದಳುವಿಧಿಪೂರ್ವಕ ಭಕ್ತಿ ಶ್ರಧ್ಧೆಯಿಂದಆದಿ ಪೂರುಷ ಭಗವಂತ ಶಂಖ ಚಕ್ರಗದಾಧರನೇ ಅದಿತಿಗೆ ಪ್ರತ್ಯಕ್ಷನಾದಿ 13ಕಣ್ಣೆದುರಿಗೆ ನಿಂತ ನಿನ್ನ ನೋಡಿ ಅದಿತಿಆನಂದ ಬಾಷ್ಪವ ಸುರಿಸುತ್ತ ದೀರ್ಘಪ್ರಣಾಮವ ಮಾಡಿದಳು ಗದ್ಗದ ಕಂಠದಿಂನಿನ್ನ ಸ್ತುತಿಸಿದಳು ಆ ದೇವಮಾತೆ 14ತೀರ್ಥಪಾದನೇ ತೀರ್ಥಶ್ರವ ಶ್ರವಣ ಮಂಗಳನಾಮಧೇಯನೇ ಯಜÉÕೀಶ ಯಜÕಪುರುಷಅಚ್ಯುತನೇ ರಕ್ಷಿಸುವಿ ಪ್ರಪನ್ನಪಾಲಕ ನಮೋಶ್ರೀದ ಶ್ರೀಪತೇ ವಿಷ್ಣೋ ಧೀನನಾಥ 15ಅಖಂಡೈಕ ಸಾರಾತ್ಮ ವಿಶ್ವವ್ಯಾಪಕವಿಶ್ವಅಕಳಂಕ ಸರ್ವೋರು ಸಚ್ಚಕ್ತಿಪೂರ್ಣಏಕಾತ್ಮ ಸರ್ವಜÕ ಸುಖಜ್ಞಾನಪ್ರದ ಭೂಮನ್ನಿಖಿಳಗುಣ ಐಶ್ವರ್ಯಪೂರ್ಣ ಹರೇ ಶ್ರೀಶ 16ಅದಿತಿಯ ವ್ರತಾಚರಣೆ ಮೆಚ್ಚಿ ಕಮಲಾಕ್ಷ ನೀಅದಿತಿಯ ಸುತನೆನಿಸಿ ಭವಿಸುವಿ ಎಂದಿಮುದದಿ ಈ ರಹಸ್ಯವ ಪತಿಗೆ ಪೇಳ್ದಳು ಅದಿತಿಆ ದಂಪತಿ ಕೂಡಿ ನಿರೀಕ್ಷಿಸಿದರು ನಿನ್ನ 17ಜಗನ್ನಿವಾಸನೆ ನೀನು ದೇವಮಾತೆಯೊಳುಝಗಝಗಿಸಿಪೊಳೆದಿಯೋ ಉರು ಮಹಾತೇಜಪೊಗಳಲಳವೇ ನಿನ್ನ ಲೀಲಾವತಾರಗಳಅಗಣಿತಮಹಿಮೆಗಳ ದೇವ ದೇವೇಶ18ಸನಾತನನೇ ಅನಘನೇ ಅಜನೇ ಭಗವಂತನೇನೀನು ಅದಿತಿಯಲಿ ಅವತರಿಪುದರಿತುವನರುಹಾಸನ ಹಿರಣ್ಯಗರ್ಭನು ಬಂದುಶ್ರೀನಿಧಿಯೇ ಶ್ರೀಶ ನಿನ್ನನ್ನು ಸ್ತುತಿಸಿದನು 19ಜಯೋರುಗಾಯ ಭಗವನ್ ಉರುಕ್ರಮ ನಮೋಸ್ತುತೇತೋಯಜಾಸನ ಹೀಗೆ ಇನ್ನೂ ಬಹುವಿಧದಿ ಸ್ತುತಿಸಿದತೋಯಜಾಕ್ಷಶಿಪಿವಿಷ್ಟ ವಿಷ್ಣು ಸರ್ವೋತ್ತಮಅಚ್ಯುತಾನಂತೋರು ಶಕ್ತಿಮಯ ನಿನ್ನ 20ಪದುಮಭವ ಸನ್ನುತನೇಆನಂದಮಯನೀನುಪ್ರಾದುರ್ಭವಿಸಿದಿ ಅದಿತಿ ದೇವಮಾತೆಯಲಿಚತುರ್ಭುಜವು ಶಂಖಗದಾಅಬ್ಜಚಕ್ರಪೀತ ಕೆಂಪು ವಸನವನ್ನ ಧರಿಸಿದ್ದಿ 21ಅನುಪಮ ಸುಸೌಂದರ್ಯ ಚಾರ್ವಾಂಗ ಕಾಂತಿಯುನಳಿನಾಯತೇಕ್ಷಣ ಮಕರಕುಂಡಲವುಆನಂದ ಸುಪ್ರಚುರ ವದನಾರವಿಂದವುಏನೆಂಬೆ ಗಂಭೀರವಕ್ಷ ಶ್ರೀವಕ್ಷ 22ವನಮಾಲೆ ಸುಸ್ಫುರತ್ ಕಿರೀಟಾಂಗದಾದಿಗಳುವನಜಾಸನಾಶ್ರಿತ ಕೌಸ್ತುಭಮಣಿಯುಸುನೂಪುರ ತೊಟ್ಟ ಶುಭಮಂಗಳಪಾದನಿನ್ನ ಪ್ರಾದುರ್ಭಾವ ವರ್ಣಿಸಲು ಅರಿಯೆ 23ಸೌರಶ್ರಾವಣಸಿಂಹ ಚಾಂದ್ರ ಭಾದ್ರಪದನೀ ಪ್ರಾದುರ್ಭವಿಸಿದ್ದು ಸಿತಶ್ರಾವಣದ್ವಾದಶಿಚಿತ್ರ ವಾದ್ಯಗಳ ಘೋಷ ಸಿದ್ಧಿ ವಿದ್ಯಾಧರರುಸುರಗಾಯಕರುಗಳ ಗಾಯನ ನೃತ್ಯ 24ಜಯ ಜಯತು ಜಯ ಜಯ ವಾಮನ ವಟುರೂಪಜಯ ಜಯತು ಶಾಶ್ವತ ಸರ್ವಸ್ಥ ವಿಷ್ಣೋಜಯ ಜಯತು ಸರ್ವ ಜಗಜ್ಜನ್ಮಾದಿಕರ್ತಜಯ ಜಯಪರಮಪೂರ್ಣೈಶ್ವರ್ಯ ಜಯತು25ಸುಂದರವಟುವಾಮನ ನಿನ್ನ ನೋಡಿಮಂದಜಾಸನಮಹಾ ಋಷಿವರ್ಯರು ಬಹುಆನಂದಭರಿತರು ಆಗಿ ಸಂಸ್ಕಾರಅಂದದಿ ಚರಿಸಿದರು ವೈದೀಕ ರೀತಿಯಲಿ 26ಬ್ರಹ್ಮಾದಿದೇವರು ಮಹಾಋಷಿಗಳುಪರ-ಬ್ರಹ್ಮ ವಾಮನ ನಿನಗೆ ಉಪನಯನರೂಪಮಹಾಪೂಜೆ ಚರಿಸಿದರು ಮುದಭಕ್ತಿಯಿಂದಲಿಮಹಾರ್ಹನೇ ನಿನಗಿದು ಅವತಾರ ಲೀಲ 27ದೇವವರೇಣ್ಯ ಬ್ರಹ್ಮಣ್ಯದೇವನೇ ನಿನಗೆದೇವತಾವೃಂದವು ನೆರದಿದ್ದ ಮುನಿಗಳುಸಾವಿತ್ರೀಂ ಸವಿತಾ ಭ್ರವೀತ್ ಬೃಹಸ್ಪತಿ ಬ್ರಹ್ಮಸೂತ್ರಂಈ ವಿಧದಿ ಮುದಮನದಿ ಅರ್ಪಿಸಿದರು 28ಕಮಂಡಲ ವೇದಗರ್ಭನು, ಕೃಷ್ಣಾಜಿನಭೂಮಿ, ದಂಡ, ಸೋಮ,ಕುಶಸಪ್ತ ಋಷಿಗಳುಸುಮೇಖಳ ಕಶ್ಯಪ,ಕೌಪೀನಅದಿತಿಯುಉಮಾ ಭಗವತಿಬಿಕ್ಷಾಪಾತ್ರೆ ವಿತ್ತಪನು 29ಈ ರೀತಿ ಮೇಖಳಸೂತ್ರಆಚ್ಛಾದನಛತ್ರ ಕೃಷ್ಣಾಜಿನ ಕಮಂಡಲು ದಂಡಪಾತ್ರೆ ಅಕ್ಷಮಾಲಾದಿ ವಸ್ತುಗಳು ದರ್ಭೆಪರಿಪರಿ ದೇವತೆಗಳು ಅರ್ಪಿಸಿದರು 30ಮಹಾಪೂರುಷ ಶಿಪಿವಿಷ್ಟ ವಾಮನ ವಿಷ್ಣೋಮಹಾದುರ್ಗ ಭೂ ಶ್ರೀಶ ನಿನ್ನ ಉಪನಯನಮಹೋತ್ಸವದ ವೈಭವವು ಹೋಮ ಪೂಜಾದಿಗಳುಮಹಿಯಲ್ಲಿ ಅಸದೃಶವು ಸರ್ವಕಾಲದಲು 31ಸೂತ್ರಮೇಖಳಕೌಪೀನಆಚ್ಛಾದನಛತ್ರಮಾಲಾ ಕಮಂಡಲು ದಂಡಹಸ್ತಚಂದ್ರಾರ್ಕ ಕೋಟ್ಯಮಿತ ಜ್ಯೋತಿರ್ಮಯ ವಟುರೂಪಶ್ರೀರಮಣಪದ್ಮಭವರುದ್ರಾದಿವಂದ್ಯ32ಮಧ್ವಸ್ಥ ಪರ್ವಸ್ಥ ಮತ್‍ಸ್ಥ ವಿಧಿತಾತಜ್ಯೋತಿರ್ಮಯ ತ್ರಿವೃನ್ನಾಮ ವಾಮನ ಮಂತವ್ಯಮೋದಮಯ ಶ್ರೀಯುಕ್ ಪ್ರಸನ್ನ ಶ್ರೀನಿವಾಸಮುದಜ್ಞಾನಧನ ಆಯುರ್ಭಾಗ್ಯದನೇ ಶರಣು 33-ಇತಿ ಪ್ರಥಮಾಧ್ಯಾಯ ಸಂಪೂರ್ಣಂ -ದ್ವಿತೀಯ ಅಧ್ಯಾಯದಾನಪ್ರಕರಣಸಾರಭೂಮಾದಿ ಗುಣನಿಧಿಯೇಅನಘಮಂಗಳರೂಪವಾಮನ ಸುಸೌಂದರ್ಯಸಾರ ಲಕ್ಷ್ಮೀಶಬ್ರಹ್ಮೇಶ ಮುಖವಂದ್ಯ ಶರಣು ಸೌಭಾಗ್ಯದನೆಬ್ರಹ್ಮಾಂಡ ಬಹಿರಂತವ್ರ್ಯಾಪ್ತ ಸರ್ವೇಶ ಪಸರಸಿಜೋದ್ಭವ ಸುರವೃಂದ ಮಹಾಋಷಿಗಳುಮರೀಚಿಸುತ ಮೊದಲಾದ ಸುಧೀಗಳು ನಿನಗೆಚರಿಸಿದ ಉಪನಯನ ರೂಪಮಹೋತ್ಸವವಸ್ವೀಕರಿಸಿ ಜ್ವಲಿಸಿದಿ ಬ್ರಹ್ಮಣ್ಯದೇವ 1ನೋಡಿದ ಮಾತ್ರದಲೆಸುಜನವಿಶ್ವಾಸಿಗಳುಮಾಡಿದ ಪಾಪ ಪರಿಹರಿಪ ನರ್ಮದೆಯದಡ ಉತ್ತರದಲಿ ಯಜÕ ಶಾಲೆಕಟ್ಟಿದೊಡ್ಡಕ್ರತುಮಾಡುತ್ತಿದ್ದನು ಬಲಿರಾಜ2ಮೌಂಜಿಮೇಖಳ ಸೂತ್ರದಿಂದ ಬೆಳಗುತ್ತಸಜಲ ಕಮಂಡಲು ಸುದಂಡ ಛತ್ರಪ್ರಜ್ವಲಿಪ ಚಿನ್ಮಯ ಜಟಿಲ ವಾಮನವಿಪ್ರಯಜÕ ಶಾಲೆಯೊಳು ಪ್ರವೇಶ ಮಾಡಿದಿಯೋ 3ಜ್ವಲಿಸುವ ಸ್ವಕಾಂತಿಯುಕ್ಮಾಯಾಮಾಣವಕಬಾಲ ಸುಂದರ ಬ್ರಹ್ಮಚಾರಿಹರಿನಿನ್ನಬಲಿರಾಜ ಆಚಾರ್ಯ ಶುಕ್ರಾದಿಗಳು ನೋಡಿಬಲುಹರುಷದಲಿ ಎದ್ದು ಸ್ವಾಗತಮಾಡಿದರು 4ಭಗವಂತ ವಾಮನ ನಿನ್ನ ಪಾದದಿಬಲಿಬಾಗಿ ನಮಿಸಿ ಸ್ವಾಗತಂ ತೇ ನಮಸ್ತುಭ್ಯಂಹೀಗೆಂದು ತನ್ನ ಪಿತೃಗಳು ತೃಪ್ತರಾದರುತನ್ನ ಕುಲ ಪಾವಿತವಾಯ್ತೆಂದು ಪೇಳ್ದ 5ವನಜಜಾಂಡದ ಒಡೆಯ ರಾಜರಾಜೇಶ್ವರನೇನಿನ್ನ ಮುಂದೆಕರಮುಗಿದು ಬಲಿರಾಜಧೇನುಕಾಂಚನ ಗ್ರಾಮವಿಪ್ರಕನ್ಯಾದಿಗಳುಏನು ನೀ ವಾಂಛಿಸಿದರೂ ಕೊಳ್ಳಬಹುದೆಂದ 6ಸುಗಮಸುಹೃತ್ ಧರ್ಮಯುಕ್ ಈ ಮಾತಲ್ಲಿಭಗವಂತ ನೀ ಪ್ರೀತನಾದದ್ದು ಪ್ರಕಟಿಸಿಲೋಕದಲಿ ಪ್ರಖ್ಯಾತ ಬಲಿಯ ಕುಲಕೀರ್ತಿಯಪೊಗಳಿದಿಯೋ ಬ್ರಾಹ್ಮಣ ಮಹೇಜ್ಯ ಪರಮೇಶ 7ಆಕಾಶದಲಿ ಆಹ್ಲಾದಕರ ಉಡುಪನುಪ್ರಕಾಶಿಸುವಂತೆ ಪ್ರಹ್ಲಾದನ ಯಶಸ್ಸುಉತ್ಕøಷ್ಟವಾದದ್ದು ವ್ಯಾಪಿಸಿ ಜಗತ್ತಲ್ಲಿಪ್ರಕಾಶಿಸುತೆ ಆ ಕುಲೋತ್ಪನ್ನನು ಬಲಿಯು 8ಮಹಾ ಗದಾಯುಧದಾರಿ ದಿಗ್ವಿಜಯ ಶೂರನುಆ ಹಿರಣ್ಯಾಕ್ಷನ ಅಣ್ಣನು ಆದಪ್ರಹ್ಲಾದಪಿತ ಹಿರಣ್ಯಕಶಿಪು ವೀರನುಮಹೀಯಲ್ಲಿ ಖ್ಯಾತವು ಈ ದೈತ್ಯ ಕುಲವು 9ಆ ಜಗತ್ ಪ್ರಖ್ಯಾತ ಪ್ರದ್ಲಾದನಸುತದ್ವಿಜವತ್ಸಲ ತನ್ನ ಆಯುಷ್ಯವದ್ವಿಜವೇಷದಿ ಬಂದ ಸುರರಿಗೆ ಕೊಟ್ಟಿದ್ದುಮೂರ್ಜಗ ಅರಿವುದುಬಲಿಆ ಕುಲೀನ10ಇಂಥ ಕುಲದಲಿ ಬಂದ ಪ್ರಹ್ಲಾದ ಪೌತ್ರಈ ಧರ್ಮವಂತಬಲಿಎಂದು ನೀ ಪೇಳಿಪದಾನಿ ತ್ರೀಣಿ ದೈತ್ಯೇಂದ್ರ ಸಂಹಿತಾನಿಪದಾಮಮ ಎಂದು ಭೂಮಿ ಯಾಚಿಸಿದಿ 11ನಳಿನಜಾಂಡದ ದೊರೆಹರಿನಿನ್ನ ಮಾಯೆಯಿಂಬಾಲಿಶಮತಿಯೇ ಮೂರಡಿ ಯಾಕೆ ಕೇಳುತಿ ಎಂದಬಲಿಯು ತನ್ನಲಿ ಕೊಂಡವ ಪೂರ್ಣನಾಗುವಮತ್ತೆಲ್ಲೂ ಪುನರ್ಯಾಚಿಸನು ಎಂದು ಪೇಳಿದನು 12ಕರ್ಮಜ ದೇವತಾ ಕಕ್ಷದವ ಬಲಿರಾಜಕರ್ಮನಿಮಿತ್ತದಿ ಸಂಸಾರ ಸುಳಿಯಊರ್ಮಿಗಳಿಗೊಳಗಾದ ಭಕ್ತನಲಿ ಕರುಣಿಸಿದಿಧರ್ಮನೀತಿ ಪೇಳಿದಿ ಶ್ರೀಶ ಮುಕುಂದ 13ಇಂದ್ರಿಯ ಅಭಿಲಾಷೆ ಜಯಿಸದವನ ಆಶೆಗೆಮಿತಿಯಿಲ್ಲ ಬೆಳೆಯುವುದು ಮೇಲು ಮೇಲುಯದೃಚ್ಛಾಲಾಭ ಸಂತುಷ್ಟ ವಿಪ್ರನತೇಜಸ್ಸುವರ್ಧಿಸುವುದು ಮತ್ತು ಸುಖವೀವುದೆಂದಿ 14ಈ ರೀತಿ ಬಲಿರಾಜನಿಗೆ ಇನ್ನೂ ಪೇಳಿಮೂರಡಿ ಮಾತ್ರವೇ ಕೊಳ್ಳುವಿ ಎನಲುಧಾರೆ ಎರೆದು ಕೊಡಲು ಬಲಿಯು ನಿಶ್ಚೈಸಲುಅರಿತು ಶಿಷ್ಯನ ಎಚ್ಚರಿಸಿದ ಶುಕ್ರ 15ವೇದ ವೇದಾಂತಕೋವಿದಶುಕ್ರಾಚಾರ್ಯರುಬುದ್ಧಿ ವಿದ್ಯಾ ನಿಪುಣರು ಕುಶಲ ಕವಿವರರುದೈತ್ಯರಿಗೆ ಕುಲಗುರು ಶ್ರೀದ ಶ್ರೀಹರಿ ನಿನ್ನಭಕ್ತವರ್ಯರು ಎಂದು ನಮಿಪೆ ಸಂತೈಸು 16ಶಿಷ್ಯ ವೈರೋಚನನಿಗೆ ಪೇಳಿದನು ಶುಕ್ರಶ್ರೀಶ ಭಗವಂತನು ವಿಷ್ಣು ಅವ್ಯಯನೆಕಶ್ಯಪ ಅದಿತಿಯಲಿ ಭವಿಸಿ ದೇವತೆಗಳಕಾರ್ಯಸಾಧನಕಾಗಿ ಬಂದಿರುವ ಎಂದ 17ಮತ್ತು ಪೇಳಿದ ಈ ದಾನ ಕೊಡುವುದರಿಂದದೈತ್ಯರಿಗೆ ಅಕ್ಷೇಮ ಬಲಿಯ ಶ್ರೀ ಸ್ಥಾನ ಯಶಸ್ಸುಮೊದಲಾದ ಸರ್ವವೂ ಪೋಗುವವು ಸ್ವರ್ಗ ಸಂ -ಪತ್ತು ಅಧಿಪತ್ಯವ ಶಕ್ರನಿಗೆ ಕೊಡುವ 18ಇಂಥಾಮಾಯಾಮಾಣವಕಹರಿವಾಮನನುಪಾದಎರಡಲಿಧರೆದಿವಿ ಅಳೆದು ಮೂರ-ನೇದನುಬಲಿಕೊಡಲು ಆಗದೆ ನರಕ ಪೋಗು-ವದು ತಪ್ಪಿಸೆ ದಾನ ಕೊಡಬೇಡ ಎಂದ 19ಇನ್ನೂ ಬಹು ವಿಧದಲಿ ದಾನ ಬಗೆ ಶುಕ್ರತನ್ನ ಶಿಷ್ಯನಿಗೆ ಬೋಧಿಸಿದರೂ ಸಹಮನ ಸೋಲದೆ ಬಲಿರಾಜ ಧಾರೆ ಎರೆದುದಾನವ ಕೊಡುವೆನು ಎಂದ ವಿನಯದಲಿ 20ಗುರುಗಳ ಮಾತಲ್ಲಿ ಅನಾದರವ ತೋರಿಸಿದಆ ರಾಜನಿಗೆ ಶಾಪ ಇತ್ತರು ಶುಕ್ರರುಸಿರಿಸ್ಥಾನಾದಿಗಳು ನÀಷ್ಟವಾಗುವದೆಂದುಗುರು ಶಪಿಸಿದರೂ ಬಲಿಯ ಮನ ಚಲಿಸಲಿಲ್ಲ 21ಪ್ರತ್ಯಗಾತ್ಮನೇ ಈಶ ಸರ್ವಪ್ರೇರಕ ಸ್ವಾಮಿಭೃತ್ಯವತ್ಸಲ ನೀನು ಬಲಿಯ ಉತ್ಕಷ್ಟಭಕ್ತಿ ಶ್ರದ್ಧೆ ಸತ್ಯ ಧರ್ಮ ತೋರ್ಪಡಿಸಿದಿಅಂತಃ ಪ್ರೇರಕನಾಗಿಬಲಿಶುಕ್ರರಲ್ಲಿ22ಒಳ್ಳೇ ಮೌಕ್ತಿಕ ಆಭರಣ ಮಾಲಾಧರಳುಶೀಲೆ ಪತ್ನಿ ವಿದ್ಯಾವಳಿ ದೇವಿ ಸಹಿತಬಲಿಸ್ವರ್ಣ ಕಲಶ ಜಲದಿಂದ ನಿನ್ನನಳಿನಪದಯುಗವ ಅವನಿಜಿಸಿದ ಮುದದಿ23ಅಚಲಿತ ಭಕ್ತಿಮಾನ್ ಈ ಮಹಾನ್ ಬಲಿರಾಜಅರ್ಚಿಸಿ ಉದಕದಿಂದಲಿ ಧಾರೆ ಎರೆದುಅಚ್ಯುತನೇ ಶ್ರೀಯಃಪತೇ ವಾಮನ ನಿನಗೆ ನೀಇಚ್ಚೈಸಿದ ದಾನ ಹರುಷದಿ ಕೊಟ್ಟ 24ಮುದಾನ್ವಿತರಾದ ದೇವಗಣ ಗಂಧರ್ವವಿದ್ಯಾದರ ಸಿದ್ಧ ಚಾರಣ ಕಿನ್ನರಾದಿಗಳುದೈತ್ಯೇಂದ್ರಬಲಿಕರ್ತೃಕದಾನ ಆರ್ಜವವಉದ್ಗಾಯನ ಮಾಡಿ ಪುಷ್ಪಮಳೆ ಕರೆದರು 25ಬಲಿನಿನ್ನ ಜಗತ್ಪಾವನ ಪಾದೋದಕವತಲೆಯಲಿ ತಾ ಧರಿಸಿ ಕೊಟ್ಟ ಮೂರಡಿದಾನಮಾಲೋಲ ಸರ್ವೇಶ ವಿಶ್ವರೂಪನೇ ವಿಷ್ಣುಲೀಲೆಯಿಂದಲಿ ಕೈ ನೀಡಿ ವಾಮನ ಸ್ವೀಕರಿಸಿದಿ 26ಮಧ್ವಸ್ಥ ಸರ್ವಸ್ಥ ಮತ್‍ಸ್ಥ ವಿಧಿತಾತಜ್ಯೋತಿರ್ಮಯ ತ್ರಿವೃನ್ನಾಮ ವಾಮನ ಮಂತವ್ಯಮೋದಮಯ ಶ್ರೀಯುಕ್ ಪ್ರಸನ್ನ ಶ್ರೀನಿವಾಸಮುದಜ್ಞಾನಧನ ಆಯುರ್ಭಾಗ್ಯದನೇ ಶರಣು 27-ಇತಿದ್ವಿತೀಯಅಧ್ಯಾಯ ಸಂಪೂರ್ಣಂ-ತೃತೀಯ ಆಧ್ಯಾಯಶ್ರೀ ತ್ರಿವಿಕ್ರಮವಿಜಯಸಾರಭೂಮಾದಿ ಗುಣನಿಧಿಯೇಅನಘಮಂಗಳರೂಪವಾಮನ ಸುಸೌಂದರ್ಯಸಾರ ಲಕ್ಷ್ಮೀಶಬ್ರಹ್ಮೇಶ ಮುಖವಂದ್ಯ ಶರಣು ಸೌಭಾಗ್ಯದನೆಬ್ರಹ್ಮಾಂಡ ಬಹಿರಂತವ್ರ್ಯಾಪ್ತ ಸರ್ವೇಶ ಪಕಿಂಪುರುಷಕಿನ್ನರಚಾರಣ ಗಂಧರ್ವಾದಿಸುಪರ್ವಾಣ ಗಾಯಕರ ಗೀತೆ ವಾದ್ಯಗಳುಶುಭಘೋಷ ಮಾಡುತಿರೆ ಬಲಿರಾಯ ದಾನವಅರ್ಪಿಸಿ ಕೃತಕೃತ್ಯದಿ ನೋಡಿದ ನಿನ್ನ 1ಉರು ಗುಣಾರ್ಣವ ಮಹೈಶ್ವರ್ಯ ನಿಜಸಚ್ಛಕ್ತಿಹರಿವಾಮನ ನೀನು ವರ್ಧಿಸಿ ಅದ್ಭುತದಿಸುಬೃಹತ್ ವಿಶ್ವರೂಪವ ಕಾಣಿಸಿ ನಿಂತಿನೀರುರುಹ ಜಾಂಡಾಂತರ್ ಬಹಿವ್ರ್ಯಾಪ್ತ ವಿಷ್ಣೋ 2ದೋಷದೂರ ನಿನ್ನ ಒಂದು ರೂಪದಿ ಉಂಟುದೋಷವಿಲ್ಲದ ಪೂರ್ಣ ಅಭಿನ್ನ ಅನಂತನಿನ್ನೀಶಶಕ್ತಿಯಿಂ ಎಲ್ಲವ ಅಡಗಿಸಿಅಕ್ಷೋಭ್ಯ ನೀ ಪ್ರಕಟ ಮಾಡುವಿ ಆಗಾಗ 3ಉತ್ತಮ ಮಹಾಮಹಿಮ ನಿನ್ನ ಈ ರೂಪದಿಭೂ ದಿವಿ ದಿಕ್ ಸರ್ವ ಅಧೋಧ್ರ್ವ ಲೋಕಸುತಪಸ್ವಿ ಮುನಿಗಳು ದೇವನರತ್ರಿರ್ಯಗ್ ಸರ್ವಪ್ರತಿಷ್ಠತವಾಗಿರುವುದು ಕಂಡನು ಬಲಿಯು 4ಈ ಮಹಾವಿಭೂತಿ ರೂಪದಿ ಕಂಡ ತನ್ನಆ ಮಹಾಕ್ರತು ಋತ್ವಿಕ್ಕುಗಳಾಚಾರ್ಯಆ ಮುಖದಿ ನೆರೆದಿದ್ದ ಸದಸ್ಯರನ್ನು ಕಂಡತನ್ಮಾತ್ರ ಭೂತೇಂದ್ರಿಯ ಜೀವಯುಕ್ತ 5ಅನಘಾಂಘ್ರಿ ಪದಯುಗದಿ ಜಲಮೇಘ ಅಧಸ್ ಭೂಮಿಕಣುಕಾಲು ಜಾನೂಲಿ ಮಹಾದ್ರಿ ಪಕ್ಷಿಗಳುಘನಉರುದ್ವಯದಿ ಮಾರುತಅಂಬುಕಣಗಳುವರ್ಣಜಾಲ ಮಿಂಚು ಗುಹ್ಯದಲಿ ಸಂಧ್ಯಾ 6ಜಘನದಲಿ ದೈತ್ಯರ ಗುಂಪುಗಳುಹೊಕ್ಕುಳಲಿನಭಕುಕ್ಷಿಯಲಿ ಸಪ್ತಸಿಂಧುನಕ್ಷತ್ರ ಜ್ಯೋತಿರ್ಮಯಮಾಲಾ ಉರದಲಿಅಕಳಂಕ ಹೃದಯದಲಿ ಧರ್ಮ 7ಸ್ತನದಲಿ ಸತ್ಯವು ಮನಸ್ಸಲಿ ಚಂದ್ರನುಅನುಪಮ ವಕ್ಷದಲಿ ಶ್ರೀ ಪದ್ಮಹಸ್ತಕಂಠದಲಿ ಸುಸ್ವರ ಶಬ್ದ ಸಾಮಾದಿಗಳುಕರ್ಣದಲಿ ದಿಕ್‍ಭುಜದಿ ಇಂದ್ರಾದಿಸುರರು 8ನಾಸಿಕ್ಕದಲಿ ಶ್ವಾಸವಾಯು ಕಣ್ಣಲಿಸೂರ್ಯಶಿರಸ್ಸಲಿ ಮೇಘವು ವದನದಲಿ ªಹ್ನಿರಸನದಿ ಜಲೇಶನು ವಾಣಿಯಲಿ ವೇದಗಳುನಿಷೇಧವಿಧಿಶಾಸನ ಹುಬ್ಬು ಎರಡಲ್ಲೂ9ರೆಪ್ಪೆಯಲಿ ಅಹೋರಾತ್ರಿ ಕ್ರಮಣದಲಿ ಯಜÕವುಸುಪುಷ್ಟದಿ ಅಧರ್ಮ ಸ್ಪರ್ಶದಿ ಕಾಮಲೋಭವು ಅದsÀರದಿ ಮಾಯೆಯು ಹಾಸದಲಿಕೋಪ ಲಲಾಟದಲಿಅಂಬುರೇತಸಲಿ10ಮೃತ್ಯು ಛಾಯೆಯಲ್ಲಿ ಓಷಧಿ ರೋಮದಲಿನದಿಗಳು ನಾಡಿಯಲಿ ಕಲ್ಲು ನಖದಲಿಇಂದ್ರಿಯಗಳಲ್ಲಿ ದೇವಗಣ ಋಷಿ ಸಮೂಹವುಬುದ್ಧಿಯಲ್ಲಿಅಜಗಾತ್ರದಲಿ ಚರಾಚರವು11ಉರುಕ್ರಮ ವಿಶ್ವಮೂರ್ತಿ ವಾಮನ ವಿಭೋಪರಮಪೂರುಷ ನೀನೀರೂಪತೋರಿಸಲುನೆರೆದಿದ್ದ ಅಸುರರು ವಿಸ್ಮಯದಿ ನೋಡುತ್ತಬೆರಗಾಗಿ ನಿಂತರು ಏನೂ ತೋರದಲೆ 12ಸುದರ್ಶನ ಚಕ್ರ ಪಾಂಚಜನ್ಯವು ಶಂಖಕೌಮೋದಕೀ ಗದಾಶಾಙ್ರ್ಗ ಮಹಾಧನುಸ್ಸುಬತ್ತಳಿಕೆಗಳುಅಕ್ಷಯಸಾಯಕವುಕತ್ತಿಖೇಟಕಮುಖ್ಯ ವಿಷ್ಣು ಆಯುಧಗಳು13ಅಸಹ್ಯ ತೇಜೋಯುತ ಚಕ್ರ ಮೊದಲಾದಈಶ ನಿನ್ನಯ ಆಯುಧಗಳು ಇರಲುಪಾಶ್ರ್ವದಿ ನಿಂತಿದ್ದರು ಆನಂದಾದಿಪಾರ್ಷದರು ಸಹ ಲೋಕಪಾಲಕರು ಎಲ್ಲಾ 14ಸ್ಫುರದ್ ಕಿರೀಟಾಂಗದ ಮೀನ ಕುಂಡಲವುಉರದಿ ಶ್ರೀವತ್ಸ ರತ್ನೋಜ್ವಲ ಮೇಖಳಾದಿಗಳುಪೀತಾಂಬರ ಮಾಲೆ ಧರಿಸಿ ಪ್ರಜ್ವಲಿಸಿದಿಉರುಕ್ರಮ ಹರೇ ಶ್ರೀಶ ಭಗವಂತ ವಿಷ್ಣೋ 15ರಾಜರಾಜೇಶ್ವರ ತ್ರಿವಿಕ್ರಮ ನಿನ್ನೊಂದುರಾಜೀವಪಾದದಿಂದಕ್ಷಿತಿಸರ್ವ ಅಳೆದಿಭುಜ ಶರೀರದಿ ಆಕ್ರಮಿಸಿದಿನಭದಿಕ್ಕುಹೇ ಜಗದೀಶನೇ ನಮೋ ನಮೋ ಶರಣು 16ದ್ವಿತೀಯಪಾದದಿ ನೀನು ದ್ಯುಲೋಕ ಸ್ವರ್ಗಾದಿಸತ್ಯ ಲೋಕೋ¥ರಿ ವ್ಯಾಪಿಸಿ ನಿಲ್ಲಲುತೃತೀಯ ಪಾದಕೆ ಸ್ಥಳ ಅಣ್ವತಿ ಇಲ್ಲವುಎಂದರಿತ ಆ ಮಹಾಬಲಿ ದಾನಶೂರ 17ತ್ರಿವಿಷ್ಟಪ ಮಹರ್ಜನೋ ತಪ ಸತ್ಯಲೋಕಗಳತ್ರಿವಿಕ್ರಮ ನಿನ್ನಯ ಪಾದವು ವ್ಯಾಪಿಸಿತೀವ್ರ ಸರಸಿಜಜಾಂಡಕಟಾಹಭೇದಿಸೆ ಬ್ರಹ್ಮಅವನಿಜಸಲಾ ಪಾದದಿಂ ಗಂಗೆ ಪಡೆದಿ 18ಸತ್ಯಲೋಕವು ನಿನ್ನನಖಕಾಂತಿಯಿಂದಜ್ಯೋತಿಯಲಿ ಮುಳುಗಲು ಬ್ರಹ್ಮದೇವಎದ್ದು ಬಂದು ಪಿತ ನಿನ್ನ ಪಾದವ ಕಂಡುಅತಿ ಮುದದಿ ಪೂಜಿಸಿದ ಪರಿವಾರ ಸಹಿತ 19ಬ್ರಹ್ಮಸಹ ವಂದಿಸಿದರು ನಿನ್ನ ಮರೀಜಾದಿಮಹಂತರು ಸನಕಾದಿಯೋಗಿಗಳು ಸರ್ವಮಹಾಪುರಾಣ ಸಂಹಿತ ವೇದ ವೇದಾಂಗದಿಮಹಾಸದಾಗಮ ದೇವತಾ ಸಮೂಹ 20ಕಮಂಡಲದಿ ಜಲ ಪೂರೈಸಿಹರಿನಿನ್ನಕಮಲಪಾದಕೆ ಆಘ್ರ್ಯಪಾದ್ಯಾದಿ ಪೂಜೆನೇಮದಿ ಅತಿಮುದ ಭಕ್ತಿಯಿಂದಲಿ ಜೀವೋ -ತ್ತಮ ಬ್ರಹ್ಮ ಮಾಡಿದನು ನಿಜ ಪುಣ್ಯಶ್ಲೋಕ 21ತ್ರಿವಿಕ್ರಮನೇ ನಿನ್ನಯ ಪಾದತೀರ್ಥವೇ ಗಂಗಾಪವಿತ್ರತಮವೆಂದು ತ್ರಿಲೋಕದಲಿ ಪ್ರಸಿದ್ಧದೇವ ದೇವೋತ್ತಮನೇ ಅದ್ಭುತ ಮಹಾಮಹಿಮಪೂರ್ವವೋಲ್ ನಿಂತಿ ವಾಮನ ರೂಪದಲಿ 22ಕಮಲಾಸನಾದಿಗಳು ಲೋಕಪಾಲಕರೆಲ್ಲತಮ್ಮ ತಮ್ಮ ಅನುಚರ ಸುರರ ಸಮೇತನರ್ಮದಾ ತೀರಸ್ಥ ಬಲಿಯಕ್ರತುಶಾಲೆಯಲಿವಾಮನನೆ ನಿನ್ನ ಬಳಿ ಬಂದು ತುಂಬಿದರು 23ಜಯ ಜಯ ಜಯತು ಅನಂತ ಮಹಿಮನೆ ನಿನ್ನತೋಯಜೋದ್ಭವ ಮೊದಲಾಗಿ ಸುರವರರುಅಘ್ರ್ಯಪಾದ್ಯ ಗಂಧ ಧೂಪ ದೀಪಮಾಲಾನೃತ್ಯಗಾಯನದಿ ಪೂಜಿಸಿದರು ಮುದದಿ 24ಆನಂದ ಉಕ್ಕುವ ಭಕ್ತಿಯಿಂದಲಿ ನಿನ್ನಅನಂತ ಮಹಾತ್ಮ್ಯ ಕೊಂಡಾಡಿ ಸುತ್ತಿಸಿಸುಧ್ವನಿಯಲಿ ಜಯಘೋಷ ಮಾಡಿದರುದುಂದುಭಿಭೇರಿಶಂಖಗಳ ಬಾರಿಸುತ25ಬ್ರಹ್ಮದೇವನ ಸುತ ಜಾಂಬವಂತನು ಆಗಮಹಾಭೇರಿ ಶಬ್ದಿಸಿ ದಿಕ್ಕು ವಿದಿಕ್ಕುಮಹಾರ್ಹ ವಾಮನ ನಿನ್ನ ವೈಭವ ಕೊಂಡಾಡಿದ್ದುಮಹೋತ್ಸವ ಎಂದರು ಮುದದಿ ಸಜ್ಜನರು 26ಸಜ್ಜನರು ಸುರರೆಲ್ಲಾನಂದ ಭರಿತರು ಆಗೆದುರ್ಜನ ದೈತ್ಯರು ನಿಂದಿಸಿ ವಾಮನನುದ್ವಿಜರೂಪಿ ಮಾಯಾವಿ ವಿಷ್ಣು ಸುರಕ್ಷಪಕ್ಷನುವಂಚಕನು ಎನ್ನುತ್ತ ಅರ್ಭಟಮಾಡಿದರು 27ಸತ್ಯಧರ್ಮನುಬಲಿತಡೆದರೂ ಮೀರಿದೈತ್ಯರು ಅಚ್ಯುತನ ಕೊಲ್ಲಲು ಬಾರೆಜಯವಿಜಯವಿಷಕ್ಸೇನಾದಿಸುರರುದೈತ್ಯರಲಿ ಬಹು ಜನರ ಕೊಂದುಹಾಕಿದರು 28ನಂದ ಸುನಂದಜಯವಿಜಯಬಲಪ್ರಬಲಪತತ್ರಿಪಕುಮುದಕುಮುದಾಕ್ಷ ಜಯಂತಶೃತದೇವ ಪುಷ್ಪದಂತ ವಿಷಕ್ಸೇನಸಾತ್ವತಾದಿ ಸರ್ವರ ಶೌರ್ಯ ಏನೆಂಬೆ 29ವಿಪ್ರಚಿತ್‍ಯಾದಿ ದೈತ್ಯರಿಗೆ ಪೇಳಿದಬಲಿಪ್ರಭು ಭಗವಂತನ ಇಚ್ಛಾನುಸಾರವೇಲಭಿಸುವುದು ಸರ್ವವು ಜಯವು ಅಪಜಯವುಲಭಿಸಲು ಜಯ ಈಗಕಾಲಅಲ್ಲವೆಂದು30ಸಾತ್ವಿಕ ಧರ್ಮವಾನ್ಬಲಿಇನ್ನೂ ಬೋಧಿಸಲುಯುದ್ಧದಲಿ ತಾಡಿತ ದೈತ್ಯರು ಪಾತಾಳಯೈದಿದರು ಬೇಗನೆ ಏನೆಂದು ವರ್ಣಿಸುವೆಸದ್ಧರ್ಮ ಸುಜ್ಞÕನಿ ಭಕ್ತಬಲಿಗುಣವ31ಪದುಮಜಾಂಡದ ಪ್ರಭುವೇ ನಿನ್ನಾಜÉÕಯಿಂ ಗರುಡಬಂಧಿಸಿದ ವರುಣ ಪಾಶದಲಿ ಬಲಿಯಬಂಧಿಸಲು ಮಹಾಧ್ವನಿ ಹಾಹಾಕಾರವುಎದ್ದಿತು ದಿಕ್ಕು ವಿದಿಕ್ಕು ಸರ್ವತ್ರ 32ಬ್ರಷ್ಟ ಶ್ರೀ ಸ್ಥಿರಪ್ರಜÕ ಮಹಾಯಶಸ್ವಿ ಬಲಿಯವಿಷ್ಣು ಪ್ರಭವಿಷ್ಣು ವಾಮನ ನೀ ಕೇಳ್ದಿಅಷ್ಟು ಸ್ಥಳಗಳು ಎರಡು ಪಾದದಲಿ ಅಡಗಿದವುಕೊಟ್ಟು ಪೂರೈಸು ಮೂರನೇಪಾದಎಂದು33ಹೇಳಿದಂತೆ ಕೊಡದಿದ್ದರೆ ನಿರಯದಲಿಬೀಳ ಬೇಕೆಂಬುವುದು ಗುರುಗಳೊಪ್ಪುವರುಹೇಳಿದಂತೆ ಕೊಡು ಮೂರನೇಪಾದಸ್ಥಳಇಲ್ಲದಿದ್ದರೆ ನರಕ ಹೋಗು ಎಂದಿ ಬಲಿಗೆ 34ಪದಂ ತೃತೀಯಂ ಕುರು ಸೀಷ್ರ್ಣ ಮೇ ನಿಜಂಎಂದು ಪೇಳುತಬಲಿವರುಣಪಾಶಬಂಧಕೂ ನಿರಯಕೂ ಶೋಕದಿ ಅಂಜುವನಲ್ಲಸಾಧುಸತ್ಯದ ಕೊರತೆಗೇವೆ ಅಂಜುವೆನೆಂದ 35ನೈವಾರ್ಥ ಕೃಛ್‍ರಾಧ್ ಭವತೋ ವಿನಿಗ್ರಹಾದ ಸಾಧು ವಾದಾದ್ ಭೃಷ ಮೃದ್ವಿಜೇಯಥಾಎನ್ನುತಬಲಿಮತ್ತು ತನ್ನ ಕುಲಹಿರಿಯರುನಿನ್ನೊಲಿಸಿಕೊಂಡ ವಿಧ ಸ್ಮರಿಸಿ ಪೇಳಿದನು 36ಉತ್ತಮ ಶ್ಲೋಕ ಹರೇ ಪರಮಗುರು ನಿನ್ನಭಕ್ತವರ್ಯನು ಸಾಧು ಪ್ರಿಯ ಸತ್ಯಧರ್ಮಪ್ರಹ್ಲಾದ ಸರ್ವ ಐಹಿಕ ವಸ್ತು ಸಂಸೃತಿಹೇತುಎಂದು ನಿನ್ನ ಪದ್ಮಾಂಘ್ರಿಯಲ್ಲೇ ರತನಾದ37ಇನ್ನೂ ಬಹುವಾಗಿಬಲಿಭಕ್ತಿಯಿಂ ಮಾತಾಡೆಶ್ರೀನಿಧಿ ನಿನ್ನ ಪ್ರಿಯ ಪ್ರೇಮಿ ಪ್ರಹ್ಲಾದಪೂರ್ಣೇಂದು ಉದಿಸಿದಂದದಿ ಬಂದು ನಿಂತನುಹೊನ್ನು ವಸನಾಬ್ಜಾಕ್ಷ ಸುಂದರ ವಿಗ್ರಹನು 38ಬಂಧಿತಬಲಿಪಿತಾಮಹ ಪ್ರಹ್ಲಾದನಿಗೆಮೂಧ್ರ್ನಾ ನಮಿಸಿದನು ನೇತ್ರಾಂಬು ತುಳಕೆಪದ್ಮಜ ಸುನಂದೇಶನಂದಾದ್ಯುಪಾಸಿತಇಂದಿರೇಶನೆ ನಿನಗೆ ನಮಿಸಿದ ಪ್ರಹ್ಲಾದ 39ಮೋದಬಾಷ್ಪದಿ ನಮಿಸಿ ಪೇಳಿದನು ನೀಬಲಿಗೆಇಂದ್ರಪದ ಕೊಟ್ಟಿದ್ದಿ ಕೊಂಡೀಗ ಅದನ್ನೇಘಾತಕ ಮೋಹಕ ಶ್ರೀ ಕಳೆದು ಅನುಗ್ರಹ ಮಾಡಿದಿಎಂದು ನಮಿಸಿದ ಜಗದೀಶ್ವರನೇ ನಿನಗೆ 40ನಾರಾಯಣಅಖಿಳಲೋಕ ಸಾಕ್ಷಿಯೇ ನಿನಗೆಈ ರೀತಿ ಪ್ರಹ್ಲಾದ ಪೇಳಿದ ತರುವಾಯವಾರುಣದಿ ತನ್ನಪತಿಕಟ್ಟಿಲ್ಪಟ್ಟಿದ್ದು ಕಂಡುಕರಮುಗಿದು ನಮಿಸಿದಳು ನಿನಗೆಬಲಿಜಾಯಾ41ಇಂದ್ರಸೇನ ಎಂಬ ಮತ್ತೊಂದು ಹೆಸರುಂಟುಬಂಧಿತ ಬಲಿರಾಜನಿಗೆ ತತ್ಪತ್ನಿವಿಂದ್ಯಾವಳಿ ದೇವಿ ಭಯ ಭಕ್ತಿಯಿಂದಉಪೇಂದ್ರ ನಿನಗೆ ಬಿನ್ನೈಸಿದಳು ನಮಿಸಿ 42ಆನಂದಮಯಪೂರ್ಣಕಾಮ ಪ್ರಭು ನೀನುವನರುಹಭವಾಂಡವ ಕ್ರೀಡಾರ್ಥ ಪಡೆದಿಅನನ್ಯಾಧೀನ ಸ್ವತಂತ್ರ ಸರ್ವೇಶನುನೀನೇವೆ ಸರ್ವಕರ್ತನು ಅನ್ಯರಲ್ಲ 43ನೀನೇವೇ ಬ್ರಹ್ಮಾಂಡ ದೊರೆಕರ್ತಆಗಿರಲುಅನ್ಯರಿಗೆ ಕರ್ತೃತ್ವ ಸ್ವಾಮಿತ್ವವಿಲ್ಲತಾನು ದೊರೆ ಕೊಂಡಿಹೆ ಕೊಟ್ಟಿಹೆ ಬಿಟ್ಟಿಹೆ ಎಂಬಹೀನ ಅಹಂಕಾರ ಮಾತು ಅಸಂಗತವು 44ದೇವ ದೇವನೇ ನಿನ್ನ ನಾಭಿಜ ಬಿನ್ನೈಸಿದಅವಿಕ್ಲವ ಮನದಿಂದ ಸರ್ವಸ್ಥ ನಿನಗೆನಿವೇದಿಸಿದಬಲಿರಕ್ಷಣಾರ್ಹನಾಗಿಹನುಸರ್ವಸ್ವಾಮಿಯೇ ಭೂತಭಾವನಭೂತೇಶ45ಮಂದನಾದರು ಅರ್ಪಿಸೆ ನಿನ್ನ ಪದಯುಗದಿಭಕ್ತಿಯಿಂ ದೂರ್ವಾಂಕುರ ಸಲೀಲವಾದರೂಉತ್ತಮ ಸೌಭಾಗ್ಯಗತಿ ಈವಿ ಅಂಥವಗೆಂದುಖ್ಯಾತ ಮೂರ್ಜಗದಿ ಕೊಂಡಾಡುತಿಹರೆಂದು 46ಪದ್ಮಜಗೆ ನೀ ಪೇಳ್ದಿ ಈಬಲಿಮಹಾರಾಜಅತಿ ಕಷ್ಟಕೊಳಗಾದ ಶತ್ರು ಪೀಡಿತನುಶಪ್ತನಾಗಿ ಸ್ಥಾನ ಕಳಕೊಂಡರೂ ಸಹಸತ್ಯವಾಕ್ ತ್ಯಜಿಸದ ಸದ್ಧರ್ಮವಂತ 47ಸುವ್ರತ ಈ ಬಲಿಗೆ ಅಮರರಿಗೂ ದುಷ್ಪ್ಮಾಪ್ಯಸಾವರ್ಣಿ ಮನು ಕಲ್ಪದಿ ಇಂದ್ರ ಪದವಈವಿ ನೀ ಎಂದು ಅವ ಆ ಕಾಲದವರೆಗಿರಲಿವಿಶ್ವಕರ್ಮ ನಿರ್ಮಿತ ಸುತಲಿದಿ ಎಂದಿ 48ಆಧಿ ವ್ಯಾಧಿ ಶ್ರಮ ಉಪದ್ರವಗಳಿಲ್ಲ -ದಂಥ ಸುತಲದಲಿ ಸುಖದಿಂದಿರಲಿಎಂದು ನೀ ಬ್ರಹ್ಮನಿಗೆ ಪೇಳಿ ಬಲಿಯನು ನೋಡಿಇಂದ್ರಸೇನ ಮಹಾರಾಜ ಭದ್ರಮಸ್ತುತೆ ಎಂದಿ 49ಸುತಲದಲಿ ಪರಿವಾರ ಸ್ವಜನರಿಂದೊಡಗೂಡಿಭದ್ರದಿ ಸೌಭಾಗ್ಯದಿ ವಾಸಮಾಡುದೈತ್ಯಶತ್ರುಗಳು ಕಾಟಕೊಟ್ಟರೆಅವರಕತ್ತರಿಸುವುದು ಸುದರ್ಶನವು ಎಂದಿ 50ಸದಾ ಸನ್ನಿಹಿತನಾಗಿದ್ದು ರಕ್ಷಿಸುವಿಸದಾ ನಿನ್ನ ದರ್ಶನ ಮಾಡಬಹುದುದೈತ್ಯರ ಸಂಗದಿಂ ಅಸುರಭಾವ ಬಂದರೆ ನಿನ್ನಸುದರ್ಶನದಿ ಅದು ಪೋಪುದು ಎಂದಿ 51ಮಹೈಶ್ವರ್ಯಪೂರ್ಣಹರಿನಿನ್ನ ಮಾತುಕೇಳಿಮಹಾನುಭಾವನು ಸಾಧುಪ್ರಿಯ ಬಲಿರಾಯಮಹಾನಂದ ಬಾಷ್ಪವ ಸುರಿಸುತ್ತ ಸ್ತುತಿಸಿದಮಹಾಕೃಪಾಂಬುಧೇ ಭಕ್ತವತ್ಸಲ ನಿನ್ನ 52ಅನತೇಷ್ಟಪ್ರದ ಪ್ರಪನ್ನಪಾಲಕ ವಿಭೋತನಗೆ ಪೂರ್ವದಿ ಲೋಕಪಾಲಕರ್ಗೆ ಸಿಕ್ಕದಅನುಗ್ರಹ ಮಾಡಿರುವಿ ಅಸುರನು ತಾನುಎನ್ನುವದು ಎಣಿಸದೆÀ ಕೃಪೆ ಮಾಡಿದಿ ಎಂದ 53ಕೃತಜÕ ಭಕ್ತನುಬಲಿಹರಿನಿನಗೆ ನಮಿಸಿದನುಪದುಮಭವಗೂ ಸದಾಶಿವಗೂ ನಮಿಸಿದನುಬಂಧಿಸಿದ ವರುಣಪಾಶವು ಬಿಟ್ಟು ಹೋಯಿತುಹೇ ದಯಾನಿಧೇ ನಿನ್ನ ಕರುಣದಿಂದಲ್ಲೆ 54ಈ ರೀತಿ ಹರಿವಾಮನ ನೀನು ಕ್ರೀಡಿಸಿದಿಶಕ್ತನಿಗೆ ಸ್ವರ್ಗಾಧಿಪತ್ಯ ಪುನರಿತ್ತಿಸುರಮಾತೆ ಅದಿತಿಗೆ ಪಯೋವ್ರತ ಫಲವಿತ್ತಿಸರ್ವಜಗತ್ತಿಗೆ ಸುಕ್ಷೇಮಒದಗಿಸಿದಿ 55ಸಿರಿಧರಾಪತಿ ವಿಷ್ಣು ಶಿಪಿವಿಷ್ಣು ವಾಮನಹರಿನಿನಗೆ ಮೂರಡಿ ಸ್ಥಳ ದಾನ ಕೊಟ್ಟುಮೂರನೇಪಾದತನ್ನ ಶಿರ ಮೇಲೆ ಇಡು ಎಂದಧೀರ ಬಲಿಗೆ ಭಾವಿ ಇಂದ್ರಪದವಿತ್ತಿ 56ಇನ್ನಾರಿಗೂ ಈ ಸಮಯದಿ ಸಿಕ್ಕದನಿನ್ನಯ ಮಹವಿಶೇಷ ಪ್ರಸಾದ ಕೊಟ್ಟಿರುವಿವನಜಭವ ಶಿವ ವಂದ್ಯಹರಿನೀನು ರಕ್ಷಕನುನೀನೆಲ್ಲಿ ನಾವು ಅಸುರರು ಎಲ್ಲಿ ಸ್ವಾಮಿ 57ಜಗತ್ ಸೃಷ್ಟ್ಯಾದಿಗಳ ಲೀಲೇಯಿಂದಲಿ ಮಾಳ್ಪಿಸರ್ವಗ ಸಮ ಅವಿಕ್ರಯ ವಿವಿಧಫಲದಹೀಗೆ ಇನ್ನೂ ಬಹು ತತ್ವನಿಬಿಡ ಸ್ತೋತ್ರಉಕ್ಕುವ ಭಕ್ತಿಯಲಿ ಮಾಡಿದ ಪ್ರಹ್ಲಾದ 58ವತ್ಸಪ್ರಹ್ಲಾದ ಭದ್ರಂತೇ ಎನ್ನುತಸುತಲಕೆಬಲಿಸಹ ಪೋಗಿ ಸುಖಿಸುವುದುಗದಾಪಾಣಿ ನಿನ್ನನ್ನುನಿತ್ಯನೋಡಿ ಮಹಾ-ನಂದ ಹೊಂದಿಕರ್ಮಕಳೆಎಂದು ಪೇಳ್ದಿ59ಸಾಧುಪ್ರಿಯ ಪ್ರಖ್ಯಾತ ಪ್ರಹ್ಲಾದ ಬಲಿರಾಜಪ್ರದಕ್ಷಿಣಿ ನಮಸ್ಕಾರ ಭಕ್ತಿಯಿಂ ಮಾಡಿಆದಿ ಪೂರಷ ನಿನ್ನ ಅನುಜÉÕೀಯ ಕೊಂಡುಪೋದರು ಸುತಲಕ್ಕೆ ಮಹಾಬಿಲ ದ್ವಾರ 60ಮಧ್ಯದಲೆ ತಡೆಯಾದ ಬಲಿಯಜÕ ಪೂರೈಸೆಯಜÉÕೀಶ ಯಜÕ ಪೂರುಷ ಭೂಮ ನೀನುಆಜÉÕ ಮಾಡಲು ಶುಕ್ರಾಚಾರ್ಯ ಬ್ರಾಹ್ಮಣರೊಡೆಯಜÕ ಕರ್ಮವ ಸಾಂಗ ಪೂರ್ಣ ಮಾಡಿದರು 60ಬ್ರಹ್ಮ ಶಿವ ದಕ್ಷ ಮನು ಬೃಗ್ ವಾಂಗೀರಾದಿಗಳುಕುಮಾರ ದೇವರ್ಷಿಗಳು ಪಿತೃ ಭೂಮಿಪ ಸರ್ವರುವಾಮನನೇ ಲೋಕೈಕಪತಿಪಾಲಕನೆನುತ ನಿನಗೆನಮಿಸಿ ತೋಷಿಸಿದನು ಅದಿತಿ ಕಶ್ಯಪರು 62ಸರ್ವಲೋಕಂಗಳಿಗೂ ಸರ್ವವೇದಂಗಳಿಗೂಸರ್ವದೇವತೆಗಳಿಗೂ ಧರ್ಮ ಯಶಸ್‍ಸಿರಿಗೂಸರ್ವಸುವ್ರತಗಳಿಗೂ ಸ್ವರ್ಗಾಪವರ್ಗಕ್ಕೂಸರ್ವವಿಭೂತಿಪತಿಮಂಗಳ ಉಪೇಂದ್ರ63ಪದುಮಜನು ಅನುಮೋದಿಸಿ ಇಂದ್ರ ಬೇಡಲುನೀ ದೇವಯಾನದಿ ಇಂದ್ರ ಸಹ ಕುಳಿತುತ್ರಿದಿವ ಸೇರಿದಿ ಇಂದ್ರೇಂದ್ರ ಉಪೇಂದ್ರ ಆ -ನಂದಮಯ ಜಗದೀಶ ಶ್ರೀಪತೇ ಭೂಮನ್ 64ಅದಿತಿ ದೇವಿಯ ಹೊಗಳಿ ವಿಷ್ಣು ವಾಮನ ನಿನ್ನಅದ್ಭುತ ಮಹಿಮೆ ಕೊಂಡಾಡಿ ಕೀರ್ತಿಸುತಪದುಮಭವ ಶಂಕರ ಭೃಗ್‍ವಾದಿಮುನಿಪಿತೃ ಸಿದ್ಧರು ಸ್ವಸ್ವಸ್ಥಾನಯೈದಿದರು 65ವಾಮನನು ವಿಶ್ವರೂಪ ಪ್ರಕಟಿಸಿ ದಾನವಸ್ತುಭೂಮಿ ದಿವಿಯ ಈರಡಿಗಳ ವ್ಯಾಪಿಸಿದ್ದುನೇಮಿ ವಿಪ್ರಚಿತ್ತಿ ಪೇಳಿದ ಮಾಯಾಜಾಲವು ಅಲ್ಲವಿಷಮ ವಸ್ತುವ ದೋಷ ಕಿಂಚಿತ್ತೂ ಅಲ್ಲ 66ಪ್ರಾಥಮಿಕವಾಗಿ ಶ್ರೀ ವಿಷ್ಣುರೂಪಒಂದೊಂದಲೂಅನಂತರೂಪಗಳು ಸುಖಜ್ಞಾನಾದಿ ಪೂರ್ಣವಾಗಿಶಶ್ವದೇಕ ಪ್ರಕಾರವಾಗಿ ಇಹುದೆಂದು ಶಾಸ್ತ್ರ ಸಾರುತಿವÉಸ್ವತಃ ಅವ್ಯಕ್ತಹರಿಪ್ರಕಟಿಸುವ ಸ್ವೇಚ್ಛೆಯಿಂ ಆಗಾಗ67ಅಣೋರಣಿಯಾನ್ ಮಹತೋ ಮಹೀಯಾನ್ತನ್ನ ವಾಮನ ರೂಪದಲ್ಲೇ ತನ್ನ ವಿಶ್ವರೂಪತಾನೇ ವ್ಯಕ್ತ ಮಾಡಿದನು ವಿಷ್ಣು ವ್ಯಾಪನಶೀಲಗುಣರೂಪ ಅಭಿನ್ನ ಅವ್ಯಯನು 68ಮತ್ತೂ ಬಲಿರಾಜನಿಗೆ ಶ್ರುಕ್ರಾಚಾರ್ಯರುಮೊದಲೇವೇ ಹೇಳಿದರು ವಾಮನನು ವಿಷ್ಣು ಅವ್ಯಯನುಇಂದ್ರನಿಗೆ ಪುನಃ ರಾಜ್ಯ ಕೊಡಲಿಕ್ಕೆ ದಾನಕೇಳಿಕ್ಷಿತಿದಿವಿ ಸರ್ವವ ಎರಡು ಪಾದದಿಂ ಅಳೆವನೆಂದು69ಈ ರೀತಿ ಬಲಿರಾಜ ದಾನಕೊಡುವ ಪೂರ್ವದಲೆಹರಿವ್ಯಾಪನಶೀಲ ವಿಷ್ಣುವೇವೇ ವಾಮನನೆಂದುಅರಿತೇವೇಶಕ್ರಸಾಧಕ ದಾನ ಕೊಟ್ಟಿಹನುಮುಚ್ಚುಮರೆ ವಿಷಯ ವಂಚನೆಗೆ ಸಿಲುಕಲಿಲ್ಲ 70ಮೋಸಕ್ಕೆ ಒಳಗಾಗಿ ಅಲ್ಲ ಮನಸಾ ತಿಳಿದೇಅಸುರರಿಪು ವಿಷ್ಣುಗೆ ಬಲಿರಾಜ ತಾನೇಈಶಾರ್ಪಣಜಗತ್ರಯದಾನ ಕೊಟ್ಟಿಹನುಎಂದು ಹೇಳಿ ಕೀರ್ತಿಸಿದರು ದೇವಗಾಯಕರು 71ಕಿನ್ನರಕಿಂಪುರುಷಗಂಧರ್ವರು ಕೊಂಡಾಡಿದರುಮನಸ್ವಿನಾನೇನ ಕೃತಂ ಸುದುಷ್ಕರಂವಿದ್ವಾನ್ ಅದಾದ್ ಯದ್ರಿಪವೇ ಜಗತ್ರಯಂಏಕೋನ ವಿಂಶತ್ ಅಧ್ಯಾಯ ಶ್ಲೋಕ ಇಪ್ಪತ್ತು 72ಬಲಿರಾಜನು ರಾಣಿ ವಿಂದ್ಯಾವಳಿಯುಅಲ್ಲಿ ಬಂದ ಪ್ರಹ್ಲಾದ ಮಹಾರಾಜನುಪ್ರಲಂಭನ ವೈಷಮ್ಯ ವಾಮನ ಮಾಡಲಿಲ್ಲಬಲಿಗೆ ಮಹಾ ಅನುಗ್ರಹ ಮಾಡಿದಿ ಎಂದು ತಿಳಿದಿಹರು 73ಶಿಪಿವಿಷ್ಟ ವಾಮನ ತ್ರಿವಿಕ್ರಮನೆ ನಿನ್ನಸುಪವಿತ್ರ ಚರಿತೆ ಇದುಕೇಳಿಪಠಿಸುವರ್ಗೆಪಾಪ ಪರಿಹಾರವುಶುಭಮಂಗಳವಿತ್ತುಸೌಭಾಗ್ಯಪ್ರದ ಶ್ರೀಶ ಸದ್ಗತಿ ಈವಿ 74ಮಧ್ವಸ್ಥ ಸರ್ವಸ್ಥ ಮತ್‍ಸ್ಥವಿಧಿತಾತಜ್ಯೋತಿರ್ಮಯ ತ್ರಿವೃನ್ನಾಮ ವಾಮನ ಮಂತವ್ಯಮೋದಮಯ ಶ್ರೀಯುಕ್ ಪ್ರಸನ್ನ ಶ್ರೀನಿವಾಸಮುದಜ್ಞಾನಧನ ಆಯುರ್ಭಾಗ್ಯದನೇ ಶರಣು 75- ಇತಿ ತೃತೀಯ ಅಧ್ಯಾಯ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು