ಒಟ್ಟು 2602 ಕಡೆಗಳಲ್ಲಿ , 107 ದಾಸರು , 1651 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರೆಯದಿರು ಮರೆಯದಿರು ಹರಿಯನು ಪಾಪಿ ಪ ಮರೆಯದಿರೆ ನೀ ಮೈಕುಂಠಕೆ ಪೋಪಿಅ.ಪ. ಮೂರು ದಿನ ಬಾಳ್ವ ಸಂಸಾರವ ನೋಡಿ ಬಾರಿ ಹರುಷಿಸದಿರು ನೀನೆಲೊ ಖೋಡಿ 1 ಮತಿವಂತನಾದರೆ ಹರಿಪುರಕೆ ಪೋದಿ ಸತಿಸುತರ ನಂಬೆ ನಿನ ಬಾಯಲಿ ಬೂದಿ 2 ಸಿರಿಯ ನಂಬಿದ ದುರ್ಯೋಧನ ಬಿದ್ದ ಹರಿಯ ನಂಬಿದ ಭೀಮಸೇನನು ಗೆದ್ದ 3 ಆನೆ ಕುದುರೆ ರಥ ಭಂಡಾರವು ನಿಂದೆ ಪ್ರಾಣ ಹೋಗುವಾಗವು ಬಾರವು ಹಿಂದೆ 4 ರಂಗೇಶವಿಠಲನ ನಂಬಿದವ ಜಾಣ ಅಂಗನೆಯರ ನಂಬಿದ ಮನುಜನೆ ಕೋಣ 5
--------------
ರಂಗೇಶವಿಠಲದಾಸರು
ಮರೆಯೊಕ್ಕೆ ನಿನ್ನನು ಮರುಗಿ ರಕ್ಷಿಸಬೇಕು ಶಂಕರೇಶಾಗಿರಿಜೆಯಾಣ್ಮನೆದೇವ ಕೆರೆಗೋಡಿಪುರದೀಶ ಶಂಕರೇಶಾ ಪಮರಳಿ ಮರಳಿ ಗರ್ಭಕುರುಳಿ ನಾನೊಂದೆನುಪರಿಪರಿ ಕರ್ಮದ ಫಲಗಳನುಣಲಾಗಿದುರಿತ ತೊಲಗದೀವರೆಗು ನಾನೇಗೈವೆಕರುಣಾರಸ ನಿನಗೇತಕುದಿಸದಿದೆ 1ಸೂತ್ರಧಾರಕ ನೀನು ಸಕಲಜೀವರಿಗೆಲ್ಲಪಾತ್ರ ಕೃಪೆಗೆ ನಾನು ಪ್ರೇಮದಿಂ ನೋಡಿನ್ನುಗೋತ್ರಾರಾತಿ ವಂದಿತ ಪಾದಕಮಲನೆಸ್ತೋತ್ರವ ಮಾಳ್ಪುದ ಮೊದಲೆ ನಾನರಿಯೆನು2ಮರತಿ ಪುಟ್ಟದು ನಾನಾವಿಧ ಭವಸುಖದಲಿವರೆತರಿತೆನೆನಿಸಿದ ಕರ್ಮದ ಬಲುಹಿನಿಂಬೆರೆತು ಬಯಲ ಮೋಹದಲಿ ಮೋಸಹೋದೆನುಕುರಿತು ಕಾಮ್ಯವ ಭಜಿಸಿದೆನೊ ನಿನ್ನನು3ಉರಿಗಣ್ಣ ದೃಷ್ಟಿಯಿಂ ದುರಿತವ ದಹಿಸಿನ್ನುವರಶಶಿನೇತ್ರದಿಂ ನೋಡಿ ತಾಪವ ಪರಿಹರಿದಶ್ವನೇತ್ರದಿ ಜ್ಞಾನವನರುಹಿಸುಶರಣಾಗತನಪರಾಧವನೆಣಿಸದೆ 4 ಪರಾಕು ಶಂಕರೇಶಾ5
--------------
ತಿಮ್ಮಪ್ಪದಾಸರು
ಮರೆವಾರೆ ಎನ್ನ ರಾಘವೇಂದ್ರ ಗುರುವೆ ಸಂಪನ್ನ ಕರೆದು ಕಾಮಿತಗಳ ಕರವೆ ನಾ ನಿನಗೆಂದು ಪ ದಾರಿಯ ತಪ್ಪಿ ಪೋಗುವ ಧೀರ ಫೋರನ್ನ ದಾರಿಯ ಪಿಡಿಸಿನ್ನು ಪುರವನ್ನೆ ತೋರಿಸೆ ಊರಿನವೊಳಗೆ ಅವನ ಆಗಾ ದೂರ ನೋಡುವರೆ ದೋಷಗಳ ವಿಚಾರಮಾಡುವರೆ ಧೀರರು ಆವ ಪರಿಯಲವನ ಪಾರಗಾಣಿಪರಲ್ಲದೆ 1 ಹಸಿದು ಪರರ ಕೇಳದ ದ್ವಿಜವರಿಯನ್ನ ಶಿಶುವಿನ ನೋಡಿ ದಯದಿಂದ ಕರದಿನ್ನು ಹಸಿದ್ಯಾಕೊ ಎಂದು ಪಾಕವ ಮಾಡಿ ಹಸನಾಗಿ ತಂದು ಬಡಿಸುವ ಅವಸರದಿ ನಿಂದು,ಅವನ ದೋಷ ಪಸರಿಸಿ ಉಣಿಸಿದ ಜನರುಂಟೆ ಧರೆಯೊಳು 2 ಜಲಪಾನಾತುರನಾಗಿ ಜಲವ ಕೇಳಿದ ವಿಪ್ರ- ಕುಲ ತರಳನನು ನೋಡಿ ಕೃಪೆಯಿಂದ ಸುರನದಿ ಜಲವನೀವೆನೆಂದು ಬ್ಯಾಗನೆ ದಿವ್ಯ ಕಲಶವ ತಂದು ಬಾರೆಲೊ ಬಲು ಆಲಸ್ಯವ್ಯಾಕೆಂದು ನಿನ್ನಯ ಪಂಕ ತೊಳಿಯ ಕೊಡುವೆನೆಂದು ತಡವ ಮಾಡುವರೆ 3 ಸುಶರೀರ ತನುವನು ಮನದಲಿ ಬಯಸಿ ತಾ ಉಸರದ ಮುನಿತನಯನ ಕಂಡು ತಾವಾಗಿ ಕುಶಲವ ಕೇಳಿ, ದೇವತ ವೈದ್ಯ ಅಸಮರೆಂದೇಳಿ, ರಸ ಮಾಡೆಂದೇಳಿ, ಅವಗೆ ದಿವ್ಯ ರಸವನು ಪೇಳಿ, ಪಸಿ ನಿನ್ನಲಿದ್ದಾ ಕಿಸರು ಪೋದರೆ ಕೊಡುವೆವೆಂದು ನಿಲುವರೆ 4 ಅರ್ತಿಯ ಭಕುತನ್ನ ನೋಡೀಗ ನಿನ ದಿವ್ಯ ಕೀರ್ತಿಯ ನೋಡಿಕೊ, ವಾಸುದೇವವಿಠಲನ ಮೂರ್ತಿಯ ಭಜಕ ಭಕ್ತರಾಭೀಷ್ಟ ಪೂರ್ತಿಗೆ ಜನಕ ನಿನ್ನಯ ಗುಣ ಸ್ಫೂರ್ತಿಗೆ ಜನಕ, ನಿನ್ನಯ ಗುಣ ಸ್ಫೂರ್ತಿ ಉಳ್ಳನಕ ಪಾಪದ ಲೇಶ ವಾರ್ತಿ ಎನಗೆ ಇಲ್ಲವೆಂದು ನಿಶ್ಚೈಸಿದೆ 5
--------------
ವ್ಯಾಸತತ್ವಜ್ಞದಾಸರು
ಮಲಗು ಮಲಗಮ್ಮ ತಾಯೆ ಶ್ರೀಹರಿಯ ಜಾಯೆ ಮಲಗು ದುಗ್ಧಾಬ್ಧಿನಿಲಯೆ ಸಾಗರನ ತನಯೆ ಜೋ ಜೋ ಪ ಇಂದಿರೆಯೆ ಹರಿ ನಿನ್ನ ಅಂದವನು ನೋಡಿ ಮಂದರಧರ ತನ ವಕ್ಷದಿ ಮಂದಿರವ ಮಾಡಿ ಚಂದದಿ ಮುದ್ದಿಪನು ಗೋವಿಂದ ನಲಿದಾಡಿ ಮಂದಸ್ಮಿತನಾಗಿ ತಾ ನಿಂದಿರುವ ನಿನ ಕೂಡಿ 1 ಮೂರುಕಣ್ಣ ಮೋಹಿಸಿದನೇನೆಂಬೆನಾಗ ಮಾರಮಣನು ಸ್ತ್ರೀ ವೇಷಧರಿಸಿದಾಗ ಆ ರಮೇಶ ಮರುಳಾದನಮ್ಮ ನಿನಗೀಗ ನೀರೆ ನೀ ಮಲಗು ನಿಶ್ಚಿಂತಳಾಗಿ ಬೇಗ 2 ಪನ್ನಗಾರಿಧ್ವಜಗೆ ಛತ್ರ ಚಾಮರವಾದಿ ಉನ್ನಂಥ ವಸ್ತ್ರ ಆಭರಣಗಳು ನೀನಾದಿ ಅನ್ನಪಾನಾದಿಗಳಿತ್ತು ತೃಪ್ತಿಪಡಿಪಳಾದಿ ನಿನ್ನಂತೆ ಸೇವಿಪರ್ಯಾರು ಮೂರು ಭುವನದಿ 3 ಏನು ಸುಕೃತಗೈದಿದ್ದೆ ನಾ ಕಾಣೆನಮ್ಮಾ ಜಾಣೆ ನಿನಗೆಣೆಯ ಕಾಣೆ ಜನನಿ ಕೇಳಮ್ಮಾ ತಾನೆ ತನ್ನಲ್ಲಿ ರಮಿಪನಲ್ಲವೇನಮ್ಮಾ ದಾನವಾಂತಕನು ನಿನ್ನ ಕೈಪಿಡಿದನಮ್ಮಾ 4 ಮಂಗಳಾಂಗಿಯೆ ನಿನಗೆ ಸರಿಸಮರ್ಯಾರಿಲ್ಲ ಭೃಂಗಕುಂತಳೆ ಕೈ ಜೋಡಿಪರು ಸುರರೆಲ್ಲ ಬಂಗಾರದ ಮಂಚವಣಿಯಾಗಿಹುದಲ್ಲ ರಂಗೇಶವಿಠಲ ತಾ ಪವಡಿಸಿರ್ಪನಲ್ಲ 5
--------------
ರಂಗೇಶವಿಠಲದಾಸರು
ಮಹದೇವ ಮದ್ರೋಗ ಮೂಲವಳಿಯೊ ಪ ಮಹದಾದಿಗಳ ದೈವ ಹರಿಯಲ್ಲಿ ರತಿ ನಿಲಿಸಿ ಅ.ಪ. ಸರ್ವಸಿದ್ಧನೆ ವಿಷಯ ಪರ್ವತಕೆ ಮಹಕುಲಿಶ ಕಮಲ ಭೃಂಗ ಮರ್ವೆಂಬ ಮಾರಿಯನು ಅವಳ ನೇತ್ರದಿ ಸುಟ್ಟು ಸರ್ವಾತ್ಮ ಹರಿಧ್ಯಾನಮಗ್ನ ಮನ ನೀಡೆನಗೆ 1 ತಾಳಲಾರೆನೊ ಸ್ವಾಮಿ ಕಾಳ ವಿಷಯದ ದೋಷ ಫಾಲಾಕ್ಷ ಬಿಡಿಸೈಯ್ಯ ಭೋಗದಾಸೆ ಶೀಲ ಮನದಲಿ ಹರಿಯ ಲೀಲೆ ಲಾವಣ್ಯಗಳ ಮೇಲಾಗಿ ನೋಡುವ ಮಹಕರುಣ ಮಾಡೆನ್ನ 2 ಭಾರತೀಶನ ಪಾದಕಮಲ ಮಧುಪನೆ ನಿನ್ನ ಕಾರುಣ್ಯವಾದವನೆ ಶೌರಿವಶನೊ ಮಾರಾರಿ ಮದ್ಭಾರ ವಹಿಸಿ ಪಾಲಿಸು ಎನ್ನ ಧೀರ ತವ ಚರಣಾಬ್ಜ ವಾರಿಜಕೆ ಮೊರೆ ಹೊಕ್ಕೆ 3 ಎನ್ನ ಹೀನತೆ ನೋಡಿ ಘನ್ನ ಭಯಗೊಂಡಿಹೆನೊ ಧನ್ಯರ ಮಾಳ್ಪ ದಯ ನಿನ್ನದಯ್ಯಾ ಪುಣ್ಯತಮ ಮೂರುತಿಯ ಪ್ರತಿಬಿಂಬ ಹರಿಸಖನೆ ಧನ್ಯನಾ ಮಾಡೆನ್ನ ವಿಷಯ ಜಯ ದಯಮಾಡಿ 4 ಅಮಿತ ಮಂಗಳದಾಯಿ ವಿಭವ ವಾಮದೇವ ಮಮತಾದಿ ಅಭಿಮಾನ ದೋಷವರ್ಜಿತ ಮಹಾ ಸಾಮ್ರಾಜ್ಯ ಯೋಗಕ್ಕೆ ಅಧಿನಾಥ ಕರುಣಿಪÀುವುದು 5 ಶಂಭು ಶಂಕರ ತವ ಪದಾಂಬುಜದಿ ಶಿರವಿಟ್ಟು ಹಂಬಲಿಪೆನಿಷ್ಟಪದ ಪಾಲಿಸೆಂದು ತುಂಬಿತ್ವಕ್ಕರಸನ ಹೃದಂಬುಜದೊಳರಳಿಸಿ ಮೂರ್ತಿ ದರುಶನ ನೀಡೊ 6
--------------
ಜಯೇಶವಿಠಲ
ಮಹಿಮೆ ನೋಡಿರೈ ರಾಯರ ಮಹಿಮೆ ಪಾಡಿರೈ ಪ ಜಲಜನಾಭನೊಲುಮೆ ಪಡೆದು ಇಳೆಯೊಳು ಪ್ರಖ್ಯಾತರಾದ ಅ.ಪ ರಾಘವೇಂದ್ರ ಯತಿಗಳೆಂದು ಬಾಗಿ ನಮಿಸುವವರ ಮನದ ರಾಗ ದ್ವೇಷಾದಿಗಳ ಕಳೆದು ನೀಗಿಸುವರೊ ಭವದ ಬಂಧ 1 ತಾಳ ತಂಬೂರಿಪಿಡಿದು ಭೋಗಶಯನನನ್ನು ಭಜಿಸಿ ಕೂಗಿ ಪಾಡುತಿರಲು ನಲಿದು ಬೇಗ ಪಾಲಿಸುತಲಿ ನಲಿವ2 ದೇಶದೇಶದವರು ಬಹಳ ಕ್ಲೇಶಪಡುತ ಬರಲು ಅವರ ಕ್ಲೇಶಗಳನು ಕಳೆದು ಪರಮ ಉ- ಲ್ಲಾಸ ನೀಡಿ ಪೊರೆಯುವಂಥ 3 ಸೀತಾಪತಿಯ ಪೂಜಿಸುತಲಿ ಖ್ಯಾತರಾದ ಯತಿಗಳನ್ನು ಪ್ರೀತಿಯಿಂದ ಸೇವಿಸುವರ ಪಾತಕಗಳ ಕಳೆದು ಪೊರೆವ 4 ಗಳದಿ ಹೊಳೆವ ತುಳಸಿ ಮಾಲೆ ಹೊಳೆವ ನಗೆಯ ಮುಖದ ಭಾವ ಕಮಲನಾಭ ವಿಠ್ಠಲನೊಲಿಸಿ ಹಲವು ವಿಧದಿ ಪೂಜಿಸುವರು5
--------------
ನಿಡಗುರುಕಿ ಜೀವೂಬಾಯಿ
ಮಾಡಬಾರದು ನೋಡಿ ಕೇಡಿಗರ ಸಂಗ ಭಂಗ ಧ್ರುವ ಹೊಟ್ಟೆಯನು ಹೊಕ್ಕು ಕಟ್ಟಿಗೆ ತಂದು ನಿಲಿಸ ುವರು ಗುಟ್ಟಲೀಹ ಮಾತು ತುಟ್ಟಿಗೆ ತಾಹರು ಕೊಟ್ಟಿದೆನೆ ಬಾಯಾರಿ ಬಟ್ಟೆಗೆಳ ತಾಹರು ನಟ್ಟಸ್ನೇಹದ ಬಳಕಿ ತುಟ್ಟಿಸುವರು 1 ಬೆಲ್ಲ ಬಾಯಲಿ ಸುರಿಸಿ ಎಲ್ಲರನು ಮೋಹಿಸುತ ಅಲ್ಲಹುದು ಮಾಡಿ ಗೆಲವಿಸಿಕೊಂಬರು ಸಲ್ಲದರ ಕೈವಿಡಿದು ಇಲ್ಲದನೆ ಸ್ಥಾಪಿಸುತ ಬಲ್ಲಿದರ ಭ್ರಮೆಗೆಡಿಸಿ ಅಣಕವಾಡುವರೋ 2 ಏನನಾದರೆ ಕೊಟ್ಟು ಹೀನಮನುಜರ ಸಂಗ ಮಾನ್ನಣೆಯಲಿದ್ದು ತಾಂ ತ್ಯಜಿಸಿ ಬ್ಯಾಗೆ ದೀನಮಹಿಪತಿ ಪ್ರಾಣದೊಡೆಯ ಶ್ರೀನಿಧಿಚರಣ ನೆನವರ ನೆರೆಲಿದ್ದು ಸುಖಿಸುವುದು ಲೇಸು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಡಿ ಗುರುಧ್ಯಾನ ನೋಡಿ ನಿಜಸ್ಥಾನ ಧ್ರುವ ಹೋಗ ಹೋಗಬ್ಯಾಡಿ ಏಕವಾಗಿ ನೋಡಿ ಜೋಕೆಯಿಂದ ಕೂಡಿ ಸುಖವು ಸೂರ್ಯಾಡಿ 1 ನೋಡಿ ನಿಮ್ಮ ಖೂನ ಕೂಡಿ ಸಮ್ಯಙÁ್ಞನ ಗುಹ್ಯ ಧನ ಮಾಡಿರೊ ಜತನ 2 ಮಾಡಿ ಗುರುಸ್ತುತಿ ಮೂಢ ಮಹಿಪತಿ ನೋಡಿ ನಿಜವ್ಯಕ್ತಿ ಪಡೆದ ಸದ್ಗತಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಡಿ ನೀವು ಸತ್ಸಂಗ ನೋಡಿ ಘನ ಅಂತರಂಗ ಧ್ರುವ ಸಾರಿದೂರಲಿಕ್ಕೆ ವೇದ ಅರರಿವದೆನಗಗಾಧ ದಾರಿದೋರಿಕುಡು ಬೋಧ ಗುರುಪ್ರಸಾದ 1 ಬದಿಲಿರಲಿಕ್ಕೆ ಖೂನ ಇದಕ್ಯಾಕುದ್ದರಿ ಜ್ಞಾನ ಛೇದಿಸಿ ಅನುಮಾನ ಭೇದಿಸಿರೊ ಪೂರ್ಣ 2 ಹಿಡಿಯಲಿಕ್ಕೆ ಸತ್ಸಂಗ ಓಡಿಬಾವ್ಹಾ ಶ್ರೀರಂಗ ಮಾಡಿ ಭವಭಯಭಂಗ ನೋಡುವ ಕೃಪಾಂಗ3 ಎಲ್ಲಕ್ಕೆ ಶಿಖಾಮಣಿ ಸುಲಭ ಈ ಸಾಧನಿ ಸೊಲ್ಲಿಗೆ ಮುಟ್ಟಿದ ಪ್ರಾಣಿ ಬಲ್ಲವ ಸುಜ್ಞಾನಿ 4 ಪಿಡಿದು ಸತ್ಸಂಗತಿ ಕಡಿದು ಹೋಯಿತು ಭ್ರಾಂತಿ ಪಡೆದ ಸುಖ ವಿಶ್ರಾಂತಿ ಮೂಢ ಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಡಿ ಸಾಧುಸಂಗ ನೋಡಿ ಅಂತರಂಗ ಧ್ರುವ ಕೇಳಿ ಎನ್ನಮಾತ ಹೇಳುವೆ ನಾ ಹಿತ ಅಳಿಯದಾರ್ಜಿತ ತ್ವರಿತ 1 ಪಥ ಬ್ಯಾಗ ಗೂಢ ರಾಜಯೋಗ ಮಡಬ್ಯಾಡಿ ಸೋಂಗ ನೋಡಿ ಬ್ರಹ್ಮಭೋಗ2 ಠಕ್ಕಠವಳಿ ಅಲ್ಲ ಸುಖಸಾಧು ಬಲ್ಲ ಮಿಕ್ಕವರಿಗೆಲ್ಲ ಸಿಕ್ಕುದು ತಾನಲ್ಲ 3 ಒಮ್ಮನ ಮಾಡಿ ನಿಮ್ಮೊಳಗ ನೋಡಿ ಬ್ರಹ್ಮರಸ ಕೂಡಿ ಸುಮ್ಮನೆ ಸೂರ್ಯಾಡಿ 4 ಇಹ್ಯಪರ ಪೂರ್ಣದಯಾಳು ನಿಧಾನ ಮಹಿಪತಿ ಪ್ರಾಣ ಗುರು ಶ್ರೀಚರಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಡು ನೀ ಹರಿಯ ಭಜನಿ ಪ ಹರಿಯ ಭಜನಿ ಮಾಡು ಹಲವು ಯೋಚನೆಯ ಬಿಡು ಶರಣರೊಳಗೆ ಕೂಡು ಸಿರಿಧರನ ನೋಡು 1 ಹರಿಜನರನ್ನೇ ನೋಡಿ ಅವರ ಪಾದವು ಪಿಡಿ ಶರೀರ ಸಾಧ್ಯನಿಕೆ ಮಾಡಿ ಶರಣ ತತ್ವವುಪಡಿ 2 ಸಿಂಧುಶಯನ ಹರಿ ಎಂದು ಸ್ತುತಿಸೂತೇರಿ ದಂದಗಳನೆ ಮರಿ ದೇವರೆಯೆಂದು ಇರಿ 3 ಸುರಮುನಿ ವಂದ್ಯನಾ ಸುಗುಣ ವಿಲಾಸ ನಾ ಅನುದಿನ ಭಜಿಸಿ 4 ದೇಹ-----ವೆಂದೂ ದಿನಮಾನ ತಿಳಿದಂದೂ ಮಹ ಹೊನ್ನ ವಿಠ್ಠಲ ಎಂದೂ ----- 5
--------------
ಹೆನ್ನೆರಂಗದಾಸರು
ಮಾತಿನಂತಲ್ಲನುಭವ ಜ್ಞಾನ ಮರುಳಜನ ಬಲ್ಲವೇನ ಯತಿಮುನಿಗಳು ಸಾಧಿಸುವ ಖೂನ ಮನೋನ್ಮನದ ಸಾಧನ ಧ್ರುವ ನುಡಿಜ್ಞಾನಾಡಿ ತೋರಬಹುದು ನಾಡ ಲೋಕದೊಳೆಲ್ಲ ನಡಿಜ್ಞಾನದೆ ದುರ್ಲಭವದು ಆಡಿ ದೋರಲಿಕ್ಕಿಲ್ಲ ಗುಹ್ಯ ನಿಜಬೋಧಿದು ಒಡೆದ್ಹೇಳುವದಲ್ಲ ಒಡನೆ ಸದ್ಗುರು ಘನ ದಯದಲಿದು ಪಡೆದವನೆ ತಾಂ ಬಲ್ಲ 1 ಕಲಿತಾಡುವ ಮಾತಿಗೆ ಸಿಲುಕದ ಮೂಲವಸ್ತುದ ಖೂನ ನೆಲೆನಿಭವೆ ತಾ ಅಗಮ್ಯಿದು ಬಲು ಸೂಕ್ಷ್ಮಸ್ಥಾನ ಬಲಿಯದೆ ರೇಚಕ ಪೂರ್ವಿದು ನೆಲೆಗೊಳ್ಳುದು ಸಾಧನ ನಿಲಕಡ್ಯಾಗದೆ ಕುಂಭಕಲಿದು ಬಲಿಯದು ಗುರುಙÁ್ಞನ 2 ಸ್ವಾನುಭವ ಸುಖ ಸಾಧಿಸಿ ಅನುದಿನದಿ ನೋಡಿ ಮನಗೆದ್ದು ಜನಕೆ ಮೋಹಿಸುವ ಅನುಭವ ಹೇಳಬ್ಯಾಡಿ ಭಾನುಕೋಟಿತೇಜನೊಲಿದು ತಾ ಖೂನಾಗುವ್ಹಾಂಗ ಮಾಡಿ ದೀನ ಮಹಿಪತಿ ಸ್ವಾಮಿ ಮನಗಂಡು ಮನೋಹರ ಕೊಂಡಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾತು ಸವಿಯೋ ಅವರ ಮಾತು ಸವಿಯೋ ಮಾತಿಲಾತ್ಮಾನುಭವದ ಸ್ಥಿತಿಯಗೂಡಿಸುವರ ಧ್ರುವ ನಿತ್ಯಾನಿತ್ಯದಿತ್ಯರ್ಥದ ತತ್ವಾರ್ಥಸಾರಾಯ ಬೀರಿ ಸತ್ಯ ಸನಾತನದ ಸುಪಥವಗೂಡಿಸುವರ 1 ಚಿತ್ತ ಶುದ್ದವನೆ ಮಾಡಿ ಮತ್ತವಾದ ಪರಬ್ರಹ್ಮಯ ಎತ್ತ ನೋಡಿದರತ್ತ ಪ್ರತ್ಯಕ್ಷ ತೋರಿಸುವರ 2 ಸ್ವಾನುಭವಾಮೃತವನು ಙÁ್ಞನಾಂಜನದುಲುಣಿಸಿ ತಾನೆ ತಾನಾದ ದೀನ ಮಹಿಪತಿ ಸ್ವಾಮಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾತೆಂದೆನಬ್ಯಾಡಿ ಧ್ರುವ ಎಲ್ಲಿ ನೋಡಿದರೆ ತಾ ಅಲ್ಲಿಗಲ್ಲಿಗಿಹ್ಯ ಎಲ್ಲ ಕಡೆಯಲ್ಲೇಕೋಮಯವೊ ಸುಲ್ಲಭವಾಗಿಹ್ಯಬಲ್ಲ ಜ್ಞಾನಿಗೆ ಭಾಸುತಿಹ್ಯ ಫುಲ್ಲಲೋಚನ ಪ್ರಾಣದೊಲ್ಲಭನು 1 ಎತ್ತ ನೋಡಿದರತ್ತ ಸುತ್ತಸುತ್ತಲಿಹ್ಯ ನಿತ್ಯವಾಗಿಹ್ಯ ಹೃತ್ಕಮಲದಲಿ ತುತ್ತಾಯಿತ ತಾ ಮಾಡಿ ನಿತ್ಯಸಲಹುವ ಹತ್ತಿಲೆ ಹೊಳೆಯುತ ಚಿತ್ತದಲಿ 2 ಹಿಂದೆನೋಡಿದಿರಿಹ ಮುಂದೇನೋಡಿದಿರಿಹ್ಯ ಸಂಧಿಸಿಹನು ಅಂತರಾತ್ಮದಲಿ ತಂದೆ ತಾಯಿಯು ಬಳಗಾಗಿಹ್ಯ ತಾನೆ ಎಂದಿಗೆ ಅಗಲದೆ ಅನುದಿನದಲಿ 3 ಜನವನದೊಳಗಿಹ್ಯ ಜನಾರ್ಧನ ತಾನು ತನುಮನದೊಳು ಥಳಥಳಸುತಲಿ ಅನುಮಾನವಿಲ್ಲದೆ ಅನಿಮಿಷದಲಿ ನೋಡಿ ಆಣುರೇಣುದಲಿ ಪರಿಪೂರ್ಣನು 4 ಸಾರಿಚಲ್ಲೆದ ಪರಬ್ರಹ್ಮಸ್ವರೂಪವಿದು ಸೂರ್ಯಾಡಬಹುದು ಸುಜ್ಞಾನಿಗಳು ತೋರದು ಎಂದಿಗೆ ಗುರುಕೃಪೆಯಿಲ್ಲದೆ ತರಳಮಹಿಪತಿ ವಸ್ತುಮಯವಿದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಧವ ಬೇಡಿಕೊಂಬೆ ಪ ನೋಡಿ ನೀ ದಯಮಾಡಿ ಎನ್ನಯ ಪೀಡೆ ದೂರಮಾಡು ಬೇಗದಿಅ.ಪ ಅದ್ರಿಧರನೆ ಪರಮದಯಾಸ ಮುದ್ರ ಎನ್ನನು ಕೊಲ್ಲುವ ಕಡುದಾ ರಿದ್ರ್ಯಕಳೆದು ಬಯಲುಮಾಡಿ ಭದ್ರವಾಗಿ ಕಾಯೊ ಹರಿಯೆ 1 ಕ್ಷುದ್ರದನುಜರ ಸದೆದು ಭರದಿ ಅದ್ರಿಯೆತ್ತಿ ಭಕ್ತಜನರ ಸುಖ ಸ ಮುದ್ರದಿರಿಸಿ ಪೊರೆದೆಯೊ ಭುಜ ಗಾದ್ರಿಶಾಯಿ ಸುದೃಷ್ಟಿಲೆನ್ನ 2 ಎನ್ನ ಮನಸಿನ ಡೊಂಕ ತಿದ್ದಿ ನಿನ್ನ ಚರಣದಾಸನೆನಿಸಿ ಬನ್ನಬಡಿಸದೆ ಇನ್ನು ಜಗದಿ ಮನ್ನಿಸಿ ಪೊರೆ ವರದ ಶ್ರೀರಾಮ3
--------------
ರಾಮದಾಸರು