ಒಟ್ಟು 1228 ಕಡೆಗಳಲ್ಲಿ , 101 ದಾಸರು , 1006 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಕೃಷ್ಣಲೀಲಾ ಕೀರ್ತನೆಗಳು38iÀುಶೋದೆ ಮಜ್ಜಿಗೆ ಮಾಡುತಂ ಮುದದಿಂ-ದಶೋಕನಮಲ ಸುಲೀಲೆಯನು ||ವಿಶೇಷ ಭಕ್ತಿಂಧಾಡುವಳಾ ಕಥಾ-ರಸ ಯಥಾಮತಿ ರಚಿಸುವೆನು ಪಹತ್ತವತಾರದಿ ಮತ್ತರ ಶಿಕ್ಷಿಸಿಉತ್ತಮರನು ಸಂತೈಸಿದನು ||ಭೃತ್ಯಭವಾರ್ಣವಬತ್ತಿಸುವಿವನನುಎತ್ತುವೆನತಿ ಧನ್ಯಳು ನಾನು 1ನದಿಜನಕನ ಕೊಡದುದ ಕದೊಳೆರೆವೆನುಮದನಪಿತನ ಸಿಂಗರಿಸುವೆನು ||ವದನತೆರದೆನ್ನ ಬೆದರಿಸಿದನ ಬಲುಹದದಿಂದಿರು ಎಂದಾಡುವೆನು 2ಅಣು ಮಹತ್ತೇ ಕಾಲಕೆ ತಿಳಿಯದೆದಣಿದೆನು ಪಾದಗಳನುಕಟ್ಟಿ||ಜನನಿಗೆ ಸಿಕ್ಕದನೆಂಬರ ತೋರಿಸಿಧನಪಜರ ಪೊರೆದ ಮರಕುಟ್ಟಿ 3ಅಗಣಿತರೂಪಿವನಂಗದಿ ಕಂಡಳುಜಗದಂಬೆಂಬರು ಸಜ್ಜನರು ||ಮಗುವೆಂದನುದಿನ ಮುದ್ದಿಸಿ ಕೊಂಕಳೊ-ಳಗಿಡುವೆ ಯನಗೇನೆಂಬುವರೊ 4ಮೀನಾಂಬರೆ ಈ ಪರಿಯಿಂದಲಿ ಶ್ರೀಪ್ರಾಣೇಶ ವಿಠಲನ ಪಾಡುವಳು ||ಈ ನುಡಿಯಾದರದಿಂ ಕೇಳಲುಭವಕಾಣರು ಪರದಲಿ ಸುಖ ಬಹಳ 5
--------------
ಪ್ರಾಣೇಶದಾಸರು
ಸಂಕ್ಷಿಪ್ತ ವಿರಾಟಪರ್ವಕೇಳು ಜನಮೇಜಯರಾಜ ಭೂಮಿ-ಪಾಲ ಪಾಂಡವರ ಸತ್ಕಥೆಯ ಪ.ಶ್ರೀಲಲಾಮನ ನೆನೆದುಭೂರಿವ-ನಾಳಿಯನು ಸಂಚರಿಸಿ ಸಜ್ಜನಕೇಳಿಯಲಿ ವನವಾಸದವಧಿಯಕಾಲವನು ಕಳೆಕಳೆದು ಬಂದರು ಅ.ಪ.ದರ್ವೀಧರಹಸ್ತನಾಗಿ ಮಹಾಪರ್ವತದಂತುರೆ ಮಸಗಿನಿರ್ವಹಿಸಿ ಸೂದತ್ವವನು ಸಲೆಗರ್ವಿತಾಧಮ ಕೀಚಕನ ಕುಲಸರ್ವವನು ಸಂಹರಿಪ ಭೀಮ ಪೆ-ಸರ್ವಡೆದ ಗುರುವರ್ಯ ಬಂದನು 1ಕಡುಗಲಿ ಕಲಿಮಲಧ್ವಂಸ ಎದ್ದುನಡೆದು ಬಂದನು ಪರಮಹಂಸನಿಡುಕಿ ಮನದಿ ವಿರಾಟರಾಯನಪೊಡವಿಗಿಡೆ ಪದ ಕೀಚಕಾಖ್ಯನಎಡದ ಭುಜ ಕಂಪಿಸಿತು ಮೂಜಗದೊಡೆಯನುಡುಪತಿಕುಲಶಿಖಾಮಣಿ 2ಗಂಗಾದಿ ನದಿಗಳ ತೀರ ಪಟ್ಟಣಂಗಳ ಗೈದ ಸಂಚಾರತುಂಗಬಲ ಮಲ್ಲರುಗಳನು ಸಲೆಸಂಘಟಿಸಿ ಜೀಮೂತವೀರಪ್ಪಸಂಗದಲಿ ವೈರಾಟಪುರ ರಾಜಾಂಗಣಕೆ ಭದ್ರಾಂಗ ಬಂದನು 3ಇಂತು ಮಲ್ಲರನೆಲ್ಲ ಸದೆದು ಬಲವಂತರಿರಲು ನೃಪಗೊಲಿದುಸಂತಸವ ಬಡಿಸುತ್ತಲಿರಲ್ವಾಕುಂತಿತನಯರು ಹರಿಯ ನಾಮವಚಿಂತಿಸುತ ದಶಮಾಸ ಕಳೆದಾನಂತರದ ವೃತ್ತಾಂತವೆಲ್ಲವ 4ಕಥೆಯಂತೆ ಹಿಂದೆ ರಾವಣನ ಕೆಟ್ಟಗತಿಗನುಚರ ಕೀಚಕನಸ್ಥಿತಿಯು ದ್ರುಪದಜೆಗಾದಮಾನಚ್ಯುತಿಗೆ ಕಾರಣನಾದ ಜಡ ದು-ರ್ಮತಿ ಖಳಾಧಮನೊಂದು ದಿನನೃಪಸತಿಸಭೆಗೆ ಅತಿ ಹಿತದಿ ಬಂದನು 5ಪಾಪಿ ಕೀಚಕನಿಗಿಂತುಸುರಿ ದ್ರುಪದಭೂಪಾಲಕನ ಕಿಶೋರಿಶ್ರೀಪತಿಯ ನಾಮವನು ಸ್ಮರಿಸುತ-ಲಾ ಪತಿವ್ರತೆ ತೊಲಗಲಂಗಜತಾಪತಪ್ತಾಂತಃಕರಣನಾ ಪರಿಯ ಮತಿ ವ್ಯಾಪಿಸಿದನು 6ಲಾಲಿಸಿ ಮಾಲಿನಿವಚನ ತೋಷತಾಳಿದ ದುರ್ಗುಣಸದನಕಾಲಪಾಶದಿ ಬಿಗಿವಡೆದು ಹೇ-ರಾಳ ಮುದಕೀಲಾಲ ಸಲೆ ಕ-ಲ್ಲೋಲಜಾಲದಿ ಮುಳುಗಿ ನರ್ತನಶಾಲೆಗಾಗಿ ಕರಾಳ ಬಂದನು 7ಮಥಿಸಿ ಕೀಚಕನ ಮಂಟಪದಿ ದ್ರುಪದಸುತೆಗೆ ತೋರಿಸಲತಿ ಮುದದಿಸತಿಶಿರೋಮಣಿ ಕಂಡು ಮನದೊಳ-ಗತುಳ ಹರುಷವನಾಂತು ಸರ್ವೋನ್ನತಭುಜನ ಚುಂಬಿಸಿದಳುಪತಿವ್ರತೆಯರ ಶಿರೋರತುನೆ ಪಾವನೆ 8ಇತ್ತ ವಿರಾಟನಗರದ ಸರ್ವವೃತ್ತಾಂತವೆಲ್ಲವ ತಿಳಿದಧೂರ್ತದುರ್ಯೋಧನ ದುರಾಗ್ರಹಚಿತ್ತಗ್ರಹಿಸಿದ ಕಾರ್ಯಕಾರಣವೃತ್ತಿಯಲ್ಲಿ ಪಾಂಡವರು ನಿಜವೆಂ-ದಾಪ್ತಜನರೊಳು ವಿಸ್ತರಿಸಿದನು 9ಸುರನದೀಸುತಕರ್ಣದ್ರೋಣ ಕೃಪಾದ್ಯರು ಕೂಡಿ ಕುಜನಪ್ರವೀಣಪೊರಟ ಪರಮೋತ್ಸಾಹ ಸಾಹಸಭರತಿ ಕೌರವರಾಯ ಮತ್ಸ್ಯನಪುರವರ ಸಮೀಪದಿ ಸುಶರ್ಮನಕರೆದೊರೆದ ಭೂವರ ನಿರ್ಧರ 10ನುಡಿಯ ಕೇಳುತಲಿ ಸುಶರ್ಮ ನಿಜಪಡೆಯ ನೆರಹಿ ವೈರಿವರ್ಮದೃಢಕರಿಸಿ ದಿನಮಣಿಯು ಪಶ್ಚಿಮ-ಕಡಲ ಸಾರುವ ಸಮಯ ಗೋವ್ಗಳಪಿಡಿದು ಗೋಪರ ಕೆಡಹಿ ಬೊಬ್ಬಿ-ಟ್ಟೊಡನೊಡನೆ ಪಡಿಬಲವನರಸಿದ 11ಹಾರಿಸಿದನು ರಥ ಪಾರ್ಥನರನಾರಿವೇಷದ ಪುರುಷಾರ್ಥತೋರಿಸುವೆನೆಂಬುತ್ಸಾಹದೊಳುಬ್ಬೇರಿ ಮನದೊಳು ಕೃಷ್ಣನಂಘ್ರಿಸ-ರೋರುಹಕೆ ಮಣಿದುತ್ತರನ ಸಹಸೇರಿ ನಗರದ್ವಾರ ದಾಟಿದ 12ಭೀತಿಯ ಬಿಡು ಬಾರೆಂದು ಪುರುಹೂತಸುತನು ಎಳತಂದುಘಾತಿಸುವೆ ರಿಪುಬಲವನೆಂದು ವ-ರೂಥದಲಿ ಕುಳ್ಳಿರಿಸಿ ನೃಪತನುಜಾತಸಹ ಪಿತೃವನದ ಮಧ್ಯ ಶ-ಮೀತರುವಿನೆಡೆಗೋತು ಬಂದರು 13ಇಂತು ತಿಳಿಸುತಲರ್ಜುನನು ಬಲವಂತನು ಧನುಶರಗಳನುತಾಂ ತವಕದಿಂ ಧರಿಸಿವಿಜಯಮ-ಹಾಂತ ವೀರಾವೇಶಭೂಷಣವಾಂತು ಶಂಖನಿನಾದದಿಂರಿಪುತಿಂಥಿಣಿಯ ಭಯಭ್ರಾಂತಗೊಳಿಸಿದ 14ಹೂಡಿ ಬಾಣವನುರ್ಜುನನು ಚೆಂ-ಡಾಡಿದ ರಿಪುಬಲವನ್ನುಮೂಢ ದುರ್ಯೋಧನನ ಕಣೆಗಳಜೋಡಣೆಗಳಿಂ ಬಿಗಿದು ತನ್ನೋಶಮಾಡಿಕೊಂಡನು ಗೋಪಗೋವ್ಗಳನಾಡಲೇನದ ಪ್ರೌಢತನವನು 15
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಸತ್ಯಕೆ ಶಿವನೀಗ ಮೆಚ್ಚುವಸತ್ಯವಿಲ್ಲದಿರೆ ಶಿವನೆಂತು ಒಲಿವಪಕೊಟ್ಟನಲ್ಲವೆ ಶಿಖಿಧ್ವಜ ಕೃಷ್ಣಗರ್ಧ ದೇಹವಕೊಡನೆ ಶಿಬಿಯು ಕೊಯ್ದು ಇಂದ್ರಗೆ ಮಾಂಸವಕೊಡನೆ ಚಂದ್ರಹಾಸ ಕೊರೆದು ಹೋಮ ಕಂಗವಕೊಡನೆ ಕಪೋತ ಶಿಬಿಗೆ ಶರೀರವ1ಕೊಡನೆ ಭದ್ರಾಯು ತನ್ನ ಕುಲವಧುವಕೊಡನೆ ದಧೀಚಿ ಕಲಹಕೆ ಬೆನ್ನೆಲುವಕೊಡನೆ ಶಿರಿಯಾಳನೀಗ ತನ್ನ ಮಗನಕೊಡನೆ ಕರ್ಣನೀಗಕರ್ಣಕುಂಡಲವ2ಈ ಪರಿಯ ನಿಷ್ಠೆಯಂತೋ ಆಶ್ಚರ್ಯವನೀಗಪಾಪಲೇಪಕೆ ತಾನು ಹೊರತೀಗ ಆದವಕಾ ಪಥಗಳನ್ನೆಲ್ಲಾ ಕಡೆಯ ದಾಟಿದವಭೂಪ ಚಿದಾನಂದ ಬಗಳೆ ಯಾದವ3
--------------
ಚಿದಾನಂದ ಅವಧೂತರು
ಸತ್ಸಂಗವಿಡಿದು ಸರ್ವೋತ್ತಮನೆ ಗತಿಯೆಂದುನೆಚ್ಚಿ ಅರ್ಚಿಸು ಗಡ ಮನುಜ ಪ.ವಿರಹ ಶಬ್ದಗಳ ಮೈಯ್ಯೊಲಿದೊಲಿದುಕೇಳಿಸತಿಯರ ಧ್ವನಿಗೆ ಮಗುಳೆ ಮೋಹಿಸುತಹರಿಣ ಘಂಟಾರವಕೆ ಬಲೆ ಬೀಳುವಂತಾಗದಿರುಹರಿಕಥೆಯಕೇಳಿಬಾಳು1ಅರಿಯದರ್ಭಕನು ಕೆಂಡವ ಮುಟ್ಟಿ ಅಳುವಂತೆಪರಸ್ತ್ರೀಯ ಸರಸಕೊಳಗಾಗಿನರಕದೊಳು ಬೀಳ್ವ ಪಾಮರನೆ ಹರಿಚರಣಾಬ್ಜಸ್ಪರುಶ ದೊರಕುವುದೆಂತೊ ನಿನಗೆ 2ದೀಪ ಕಾಶಕೆ ಪತಂಗವು ಕೆಡೆವ ಪರಿಯು ಸಲ್ಲಾಪವು ಪರಸತಿಯರೊಡನೆಶ್ರೀಪತಿಯ ಮೂರುತಿಯ ಕಂಡೆರಗು ಮೂಢಮತಿಪಾಪ ಬುದ್ಧಿಗಳನ್ನುಜರಿದು3ಶಸ್ತ್ರ್ತಧಾರೆಯ ಮಧುವ ಬಯಸುವಂತನ್ಯೋತ್ತಮ ಸ್ತ್ರೀಯರಧರಸುಧೆಬಯಸಿಚಿತ್ತವ್ಯಸ್ತವ ಮಾಣದೊಮ್ಮೆಗಾದರೆಹರಿಭಕ್ತಿರಸವೀಂಟಿ ಸುಖಿಯಾಗು 4ವನಜವನವಂ ಬಿಟ್ಟು ಅಳಿವೃಂದ ಚಂಪಕದನನೆಗೈದಿ ಪ್ರಾಣ ಬಿಡುವಂತೆವನಿತೆಯರ ವಾಸನೆಯೆ ನಿರಯದೌತಣವೆಂದುವನಜಾಕ್ಷ ನಿರ್ಮಾಲ್ಯ ಸೂಡು 5ಇಂತೆಂಬ ಪಂಚಭೌತಿಕದೇಹದಾಸೆಯೊಳುಸಂತತದಿಲಂಪಟನೀನಾಗಿಅಂತ್ಯದೊಳುಜರೆಕಾಡುವಾಗ ಕಫ ವಾತವೆಮುಂತಾದ ವ್ಯಥೆ ಬೆನ್ನ ಬಿಡವು 6ಭಸ್ಮಕ್ರಿಮಿಕೀಟವಾಗಿ ಪೋಪ ಕಾಯಕೆ ನಂಬಿವಿಸ್ಮರಣೆ ಬೇಡ ಹರಿಪದಕೆಕಶ್ಮಲಾನ್ವಿತವಾದ ಯೋನಿಗಳ ಬರವರಿತುವಿಸ್ಮರಣೆ ಬೇಡ ಹರಿಪದಕೆ 7ಬಲ್ಲಿದರ ಸಿರಿಯ ಸೈರಿಸಲಾರೆನೆಂದೆಂಬಕ್ಷುಲ್ಲಕರ ನುಡಿಯನಾಡದಿರುಎಲ್ಲಿ ಭಾಗವತರ ನಿಕೇತನಾಜೆÕಯ ಕೇಳೆಅಲ್ಲಿ ಮಧುಕರವೃತ್ತಿತಾಳು8ಹರಿದಾಸರ ವಿಲಾಸವೆ ಎನ್ನ ಸಿರಿಯೆಂದುಹರಿದಾಸರಡಿಗೆ ಮಗುಳೆರಗಿಹರಿದಾಡುವ ಮನಕೆ ಸೆರಯಿಕ್ಕಿ ಹರಿಯನೆ ನೆನೆದುಹರುಷ ಪುಳಕಿತನಾಗಿ ಬಾಳು 9ದಶಇಂದ್ರಿಯಂಗಳಿಗೆ ವಶವಾಗದಿರು ಏಕಾದಶಿ ವ್ರತಕೆ ವಿಮುಖವಾಗದಿರುದಶಶಿರಾರಿಯ ನಾಮದಶನವೆಭುಂಜಿಸುದಿಶೆಯರಿತೂ ಕಾಣನಾಗದಿರು 10ಪದ್ಮನಾಭನ ಪಾದಪದ್ಮವೆ ಗತಿಯೆಂದುಪದ್ಮಜನ ಪದಕೆ ಪೋಗುವನಪದ್ಧತಿಯವಿಡಿದುವರಪದ್ಮಪತಿ ವಾಸ ತ್ರೈಸದ್ಮನಿಗೆ ಉದ್ಯೋಗಮಾಡು11ಕಡು ಬಂಧುಬಳಗ ಸತಿಸುತರುಂಟು ವೃತ್ತಿಯೊಳುಕಡಿಮಿಲ್ಲವೆಂಬ ಪಾಶವನುಕಡಿದು ಕಡಲೊಡೆಯನೆ ಸಲಹೆಂದು ಗರ್ಜಿಸಲುಕಡೆಹಾಯಿಸಬಲ್ಲದಿದು ನಿನಗೆ 12ಆವಾಗೆ ಜಗಕೆ ಸರ್ವೋತ್ತಮನೆ ಹರಿಯೆಂದುಜೀವೋತ್ತಮನೆ ವಾಯುವೆಂದುಭಾವಶುದ್ಧಿಗಳಿಂದ ಬಯಲುಡಂಬಕಬಿಟ್ಟುಜೀವಿಸಲು ಸ್ವರೂಪ ಸುಖವಾಹುದು 13ವರಊಧ್ರ್ವಪುಂಡ್ರಹರಿಮುದ್ರೆಯನಲಂಕರಿಸುಶಿರಿ ತುಲಸಿ ಪದ್ಮಸರ ಧರಿಸುಸ್ಮರನ ಶರಕಂಜದರಿಯಾರುವರ್ಗವನೊದೆದುಹರಿದು ಬಹ ದುರಿತಗಳ ಸದೆದು 14ಏಸುಜನ್ಮದಿ ಬಂದು ನೊಂದೆ ಭವಾಟವಿಯೊಳುಮೋಸ ಹೋಗದಿರಿನ್ನು ತಿಳಿದುಬೇಸರದೆ ಉರಗಾದ್ರಿವರದ ಪ್ರಸನ್ವೆಂಕಟೇಶನಂಘ್ರಿಯ ಬಿಡದೆ ಭಜಿಸು 15
--------------
ಪ್ರಸನ್ನವೆಂಕಟದಾಸರು
ಸದಾಶಿವನೆ ರುದ್ರಾ | ಕಳೆವುದ ಭದ್ರಾ |ಸದಾಗತಿಯ ಪದ | ಮಧುಕರ ನೆನಿಸುತಸುಧಾ ರಸವನೆರೆ || ಭಜಿಸುವವರ ಪೊರೆ ಪಗಜಅಜಿನಾಂಬರ |ಭುಜಗಭೂಷವರವಿಜಯಗಿತ್ತೆ ಶರ |ವೃಜಿನವೃಂದ ಹರಬಿಜಯಿಸಿ ಮನದಿ | ರಜವ ಕಳೆಯೊ ತ್ವರ ಅ.ಪ.ಕೃತ್ತಿವಾಸನೆ | ಭಕ್ತರಾರ್ತಿಹ |ಚಿತ್ತದಲಿನೆಲೆ| ಸುತ್ತ ಪಾಲಿಸೋ ||ಎತ್ತೆ ಈಭವ| ತಪ್ತನಾಗಿಹ |ಗುತ್ತಮೋತ್ತಮ |ವಿತ್ತಕೊಡು ಹರ 1ರೂಪವೈಕೃತ |ರೂಪತೈಜಸ|ರೂಪತಾಮಸ| ಈ ಪರಿಯಕೊಂಡ||ಶ್ರೀಪ ಪದಕ | ಲಾಪದಲ್ಲಿಡು |ವೈಪರೀತ್ಯ ಪ್ರ | ಲಾಪಕಳೆಶಿವ 2ಹೇ ಪವನಜನೆ | ತಾಪಸ ಪ್ರಿಯ |ತಾಪಕಳೆ ಗೌ | ರೀಪನೇಭವಕೂಪಕಳೆವ ದ | ಯಾ ಪಯೋ ನಿಧಿ |ಗೋಪಗುರುಗೋವಿಂದ ವಿಠಲಾಪ್ತ 3
--------------
ಗುರುಗೋವಿಂದವಿಠಲರು
ಸಂದಿತಯ್ಯ ಪ್ರಾಯವು |ಸಂದಿತಯ್ಯ ಪ್ರಾಯವು ಪಮೂರು ತಿಂಗಳುಸಂದುಹೋಯಿತು ತಿಳಿಯದೆ ||ಬಂದೆ ತಾಯಿಯ ಜಠರದಲಿ ಮ-|ತ್ತೊಂದು ಬುದ್ಧಿಯನರಿಯದೆ ||ಬೆಂದೆ ನವಮಾಸದಲಿ ಗರ್ಭದಿ |ಒಂದು ದಿವಸವು ತಡೆಯದೆ ||ಕುಂದದೀಪರಿಯೊಂದು ವರುಷವು |ಇಂದಿರೇಶನೆ ಕೇಳು ದುಃಖವ 1ಕತ್ತಲೆಯೊಳಿರಲಾರೆನೆನುತಲಿ |ಹೊತ್ತೆ ಹರಕೆಯ ನಿನ್ನನು ||ಮತ್ತೆ ಜನಿಸಲು ಭೂಮಿಯೊಳು ನಾ |ಅತ್ತುನಿನ್ನನು ಮರೆತೆನು ||ಮತ್ತೆ ಮಲ-ಮೂತ್ರದೊಳು ಬಾಲ್ಯದಿ |ಹೊತ್ತು ದಿನಗಳ ಕಳೆದೆನು ||ಮತ್ತೆ ನರಕದೊಳುರುಳುತುರುಳುತ |ಉತ್ತಮೋತ್ತಮ ನಿನ್ನ ನೆನೆಯದೆ 2ಚಿಕ್ಕತನವನು ಮಕ್ಕಳಾಟದಿ |ಅಕ್ಕರಿಂದಲಿ ಕಳೆದೆನು ||ಸೊಕ್ಕಿ ಹದಿನಾರಲಿ ನಾನತಿ |ಮಿಕ್ಕಿ ನಡೆದೆನು ನಿನ್ನನು ||ಸಿಕ್ಕಿ ಬಹು ಸಂಸಾರ ಮಾಯೆಯ |ಕಕ್ಕುಲಿತೆಯೊಳು ಬಿದ್ದೆನು ||ಹೊಕ್ಕುದಿಲ್ಲವು ನಿನ್ನ ಪಾದವ |ರಕ್ಕಸಾರಿಯೆ ಕೇಳು ದುಃಖವ 3ಸುಳಿದೆ ಮನೆಮನೆ ಕಳೆದೆ ಕಾಲವ |ಉಳಿದ ಯೋಚನೆ ಮಾಡದೆ ||ಬೆಳೆದೆ ತಾಳೆಯ ಮರದ ತೆರದಲಿ ||ಉಳಿವ ಬಗೆಯನು ನೋಡದೆ ||ಎಳೆಯ ಮನದೊಳೆ ಇಳೆಯ ಜನರೊಳು |ಬಳಕೆ ಮಾತುಗಳಾಡಿದೆ ||ಕಳೆದೆ ಈ ಪರಿಯಿಂದ ಕಾಲವ |ನಳಿನನಾಭನೆ ನಿನ್ನ ನೆನೆಯದೆ 4ಎಡೆಬಿಡದೆಅನುದಿನದಿ ಪಾಪದ |ಕಡಲೊಳಗೆ ನಾನಾಳ್ದೆನು ||ದರವ ಕಾಣೆದೆ ಮಧ್ಯದಲಿ ಎ-|ನ್ನೊಡಲೊಳಗೆ ನಾನೊಂದನು ||ದೃಢದಿ ನಿನ್ನಯ ಧ್ಯಾನವೆಂಬಾ |ಹಡಗವೇರಿಸು ಎನ್ನನು ||ಒಡೆಯ ಪುರಂದರವಿಠಲ ಎನ್ನನು |ಬಿಡದೆ ಕಾಯೈ ಬೇಗ ಶ್ರೀಹರಿ5
--------------
ಪುರಂದರದಾಸರು
ಸಲ್ಲದು ಸಲ್ಲದು ಜ್ಞಾನ ಬೋಧೆಸುಳ್ಳರಿಗೆ ಮತ್ತು ಶುಂಠರಿಗೆಪಮುಂದೆ ಹೊಗಳಿ ಹಿಂದೆ ನಿಂದಿಸುವರಿಗೆಸಂದೇಹಿಸುತ ಸಜ್ಜನರಿಗೆ ಹಳಿಯುತಮುಂದೆ ಕಾಣದೆ ಮೂರ್ಖತೆಯಲಿ ನುಡಿಯುತಕುಂದುಕೊರತೆಯಹ ಕುಹಕರಿಗೆ1ಬರಡು ಮಾತಿನಲಿಕಾಲಕಳೆಯುತಜರಿದುನುಡಿಯುತಾ ಕೂಡಿ ನಗುವರಿಗೆಇರುಳು ಹಗಲು ಇಹಪರದಿ ಬಿದ್ದಿಹನರರುಗಳಿಗೆ ಮತಿ ನಷ್ಟರಿಗೆ2ಬ್ರಹ್ಮ ನುಡಿಯ ಮೂರು ನುಡಿಯನೆ ಕಲಿತಬ್ರಹ್ಮ ವಿದ್ವಾಂಸರು ವಾದಿಸುವಬ್ರಹ್ಮತಾವಾಗುವ ಪರಿಯೆಂತೋಪರಬ್ರಹ್ಮ ಚಿದಾನಂದನ ಕಾಣದವರಿಗೆ3
--------------
ಚಿದಾನಂದ ಅವಧೂತರು
ಸಾಕು ಮಾಡಿರವ್ವ ರಂಗನ | ಏಕೆ ದೂರುವಿರೆ? ಪಬೆಟ್ಟು ಬಾಯೊಳಗಿಟ್ಟರೆ ರಂಗ - ಕಚ್ಚಲರಿಯನೆ |ಕಟ್ಟಿರುವೆಯನು ಕಂಡರೆ ಬವ್ವೆಂದು - ಚಿಟ್ಟನೆ ಚೀರುವನೆ ||ರಟ್ಟೆಯ ಹಿಡಿದು ನಡಸಲು ರಂಗ -ದಟ್ಟಡಿಇಕ್ಕುವನೆ |ಭ್ರಷ್ಟ ಮಾತುಗಳನೆಷ್ಟೋ ಕಲ್ಪಿಸಿ |ಪಟ್ಟ ಪಟ್ಟಿಗೆ ರಟ್ಟು ಮಾಡುವುದು 1ಅರಿಯದಂತೆ ನೊರೆಹಾಲನು ಕುಡಿವನೆ -ಕರೆಕರೆಮಾಡುವನೆ |ಇರಲು ಮನೆಯೊಳಗೆ ಬರುತ ನಿಮ್ಮ ಮನೆ - ಮೊಸರನು--------------------ಸುರಿಯವನೆ ||ಸರಸಿಜಾಕ್ಷಿಯರೆ ಪರಿಪರಿಯಿಂದಲಿ |ಹರಲಿ ಮಾಡುವುದಿದು ತರವೇನಮ್ಮ 2ಚಿಕ್ಕ ಚಿಕ್ಕ ಗೋವಕ್ಕಳ ಕೂಡ ಚೆಂಡನಾಡುವಾಗ |----------------------------------------ಸಿಕ್ಕಿತೆನುತ ಬಹು ಚಕ್ಕಂದಾಡುತ |ಗಕ್ಕನೆ ಹೋಗಿ ಕೈಯಿಕ್ಕಿ ತೆಗೆದನೆ 3ಮಾಲೆಗಂಬದೋಪಾದಿಯಲಿ ನೀವು ಬಹಳ ಬೆಳೆದಿರೀಗ |ನೀಲಕುಂತಳೆಯೆ ದಧಿಶೋಧಿಸಿ ಓಲಾಡುತ ಕಡೆವಾಗ ||ಬಾಲಕೃಷ್ಣನಿಗೆ ಜೋಲುವ ಕುಚಗಳು |ನಿಲುಕುವ ಬಗೆ ಹೇಗೆ? ||ಖೂಳಸೆಟವಿಯರು ಕಾಳವಾಗಿಹರು |ಕೇಳಿಕೇಳಿ ಬೇಸತ್ತಿಹೆನಮ್ಮ 4ಫುಲ್ಲನಾಭನಿವ ಒಲ್ಲದನಾದರೆ ಎಲ್ಲ ಒಯ್ದಿಡಬೇಕೆ? |ಖುಲ್ಲತನದಿ ನೀವ್ ನಿಲ್ಲಗೊಡದಿಹಿರಿ ಗುಲ್ಲುತನವು ಸಾಕೆ ||--------------------ಸಲ್ಲದು ಈ ನುಡಿ ಪುರಂದರವಿಠಲಗೆ |ಹಲ್ಲೊಳಗಾತನ ಇಟ್ಟಿರಬೇಡಿ 5
--------------
ಪುರಂದರದಾಸರು
ಸಾಕು ಸಾಕಿನ್ನು ಸಂಸಾರಸುಖವು |ಶ್ರೀಕಾಂತ ನೀನೊಲಿದು ಕರುಣಿಸೈ ಹರಿಯೆ ಪಉದಿಸಿದುವು ಪಂಚಭೂತಗಳಿಂದ ಔಷಧಿಗ-|ಳುದಿಸಿದುವು ಔಷಧಿಗಳಿಂದನ್ನವು ||ಉದಿಸಿದುವು ಅನ್ನದಿಂ ಶುಕ್ಲ-ಶೋಣಿತವೆರಡು |ಉದಿಸಿದುವು ಸ್ತ್ರೀ-ಪುರುಷರಲ್ಲಿ ಹರಿಯೆ 1ಸತಿಪುರುಷರೊಂದಾಗಿ ರತಿಕ್ರೀಡೆಗಳ ಮಾಡೆ |ಪತನವಾದಿಂದ್ರಿಯವು ಹೊಲೆ-ರುಧಿರವು ||ಸುದತಿಯುದರದೊಳೆರಡು ಏಕದಲಿ ಸಂಧಿಸಲು |ಬುದಬುದನೆ ಮಾಸಪರ್ಯಂತರದಿ ಹರಿಯೆ 2ಮಾಸವೆರಡರಲಿ ಶಿರಮಾಸಮೂರರಲಂಗ |ಮಾಸನಾಲ್ಕರಲಿ ಚರ್ಮದ ಹೊದಿಕೆಯು ||ಮಾಸವೈದರೊಳುನಖರೋಮ ನವ ರಂಧ್ರಗಳು |ಮಾಸವೇಳಲಿ ಧಾತು ಹಸಿವು ತೃಷೆಯು 3ತಿಂಗಳೆಂಟರಲಿ ಪೂರ್ವಾನುಭವ ಕರ್ಮಗಳ |ಭಂಗವನು ಪಡಲಾರೆ ಭವಭವದೊಳು ||ಅಂಗನೆಯ ಉದರಕಿನ್ನೆಂದಿಗೂ ಬರೆನೆಂದು |ಹಿಂಗದಲೆ ಧ್ಯಾನಿಸುತ ಕಳೆದೆನೈ ದಿನವ 4ಇನಿತು ಗರ್ಭದೊಳು ನವಮಾಸ ಪರಿಯಂತರದಿ |ತನು ಸಿಲುಕಿ ನರಕದಲಿ ಆಯಾಸಗೊಂಡು ||ಘನಮರುತವೇಗದಿಂ ಅರುಹನಲ್ಲಿಯೆ ಮರೆತುಜನಿಸುವಲಿ ಮೃತಭಾವದೊಳು ನೊಂದೆ ಹರಿಯೆ 5ಧರೆಯಮೇಲುದಿಸಿ ಬಹು ವಿಷ್ಣುಮಾಯೆಗೆ ಸಿಲುಕಿ |ಪರವಶದೊಳಿರಲು ನೀರಡಿಸಲಾಗ ||ಹೊರಳಿ ಗೋಳಿಡುತ ಕಣ್ದೆರೆಯ ಹರಿಯನು ಮರೆವ |ದುರಿತರೂಪದ ತನುವ ಧರಿಸಿದೆನೊ ಹರಿಯೆ 6ಶಿಶುತನದೊಳಿರಲು ನೊಣ ಮುಸುಕಲಂದದಕಳಲು |ಹಸಿದನಿವನೆಂದು ಹಾಲನೆ ಎರೆವರು ||ಹಸು-ತೃಕ್ಷೆಗಳಿಂದಳಲು ಹಾಡಿ ತೂಗುವರಾಗ |ಪಶುವಂತೆ ಶಿಶುತನದೊಳಿರಲಾರೆ ಹರಿಯೆ 7ನಡೆಯಲರಿಯದ ದುಃಖ ಮನಸಿನೊಳು ಬಯಸಿದುದ |ನುಡಿಯಲರಿಯದ ದುಃಖ ವಿಷಮದಿಂದ ||ಅಡಿಯಿಡುತ ಮೆಲ್ಲನೇಳುತ ಬೀಳುತಲಿ ತೊದಲು-|ನುಡಿಯೊಳಿಹ ಬಾಲ್ಯದೊಳಗಿಲಾರೆ ಹರಿಯೆ 8ಬಾಲ್ಯದೊಳು ಕೆಲವು ದಿನ ಬರಿದೆ ಹೋಯಿತು ಹೊತ್ತು |ಗೋಳಿಡುತವಿದ್ಯೆಕರ್ಮಗಳ ಕಲಿತು ||ಮೇಲೆ ಯೌವನದುಬ್ಬಿನೊಳು ಮದುವೆಯಾಗಿ ನಾಬಾಲೆಯರ ಬಯಸಿ ಬಹು ಮರಳಾದೆ ಹರಿಯೆ | 9ಜ್ವರದ ಮೇಲತಿಸಾರ ಬಂದಂತೆ ಯೌವನದಿ |ತರುಣಿಯೊಡನಾಡಿಕೂಡಿದವಿಷಯದಿ ||ತರುಣಿ-ಸುತರ್ಗನ್ನ ವಸ್ತ್ರಾಭರಣವೆಂದೆನುತ |ಪರರ ಸೇವೆಯಲಿ ನಾ ಕಡುನೊಂದೆ ಹರಿಯೆ 10ನೆತ್ತರವು ತೊಗಲು ಮಾಂಸದ ಹುತ್ತು ಜೊತ್ತುಗಳ |ಹತ್ತು ಇಂದ್ರಿಯದ ಬಹುರೋಗದಿಂದ ||ಮತ್ತೆ ಕಾಲನ ಬಾಯತುತ್ತು ಬಹುವಿಧ ಕರ್ಮ-||ಕತ್ತಲೆಯೊಳೀ ದೇಹ ಕರಕಾಯ್ತು ಹರಿಯೆ 11ದಿಟ್ಟತನದಲಿ ಗಳಿಸಿ ತರುವಾಗ ಸತಿಸುತರು |ಕಟ್ಟಿಕಾದಿಹರು ಮುಪ್ಪಡಸಲಾಗ ||ತಟ್ಟನೇ ಕೆಟ್ಟನುಡಿಗಳ ಬಯ್ಯುತಳಲುವರು |ಮುಟ್ಟಿನೋಡರು ಸರಕುಮಾಡರೈ ಹರಿಯೆ 12ಎಷ್ಟವಜೆÕಯ ಮಾಡೆ ಮತ್ತವನಿಗಳಲುತಿರೆ |ಕಟ್ಟಳೆಯ ದಿನತುಂಬಿಮೃತನಾಗಲು ||ಕುಟ್ಟಿಕೊಂಡಳುತ ಹೋಯೆನುತ ಬಂಧುಗಳೆಲ್ಲ |ಮುಟ್ಟದಲೆ ಹೆಣನೆಂದು ದೂರದೊಳಗಿಹರು 13ಸತ್ತ ಹೆಣಕಳಲೇತಕೆಂದು ಬಂಧುಗಳೆಲ್ಲ |ಸುತ್ತಿರ್ದು ಹೊತ್ತು ಹೋಯಿತು ಎನ್ನುತ ||ಹೊತ್ತು ಕೊಂಡಗ್ನಿಯಲಿ ತನುವ ಬೀಸಾಡುವರು |ಮತ್ತೆ ಧರಣಿಯಲಿ ನಾ ಜನಿಸಬೇಡವೊ ಹರಿಯೆ 14ಇನ್ನು ಈ ಪರಿಪರಿಯ ಯೋನಿಮುಖದಲಿ ಬಂದು |ಬನ್ನವನು ಪಡಲರೆ ಭವಭವದೊಳು ||ಜನ್ಮ-ಮರಣಾದಿ ಕ್ಲೇಶಗಳನ್ನು ಪರಿಹರಿಸಿ |ಸನ್ಮತಿಯೊಳಿರಿಸೆನ್ನ ಪುರಂದರವಿಠಲ 15
--------------
ಪುರಂದರದಾಸರು
ಸಾಕು ಸಾಕು ಸಂಸಾರ ಸಂಖ್ಯಾಗಿಲ್ಲ ಒಲ್ಲೆ ಒಗೆತನವ ಪ.ಆರುಮಂದಿ ಗಂಡರಾಳುವರು ಎನ್ನಆರುಮಂದಿಗೆ ಮೂರು ಸುತರೆನಗೆಆರು ಮೂರೇಳ್ಪರುಭಾವ - ಮೈದುನರೆಲ್ಲಆರರೆಂದರೆ ಬಿಡರು ಆರಿಗುಸುರಲಮ್ಮ 1ಹತ್ತುಮಂದಿ ಬೆನ್ನ ಮುತ್ತಿಕೊಂಡರೆಮತ್ತೆ ಬಿಟ್ಟೆನೆಂದೆ ಬಿಡಗೊಡರುಅತ್ತಿಗೆ ನಗೆಹಣ್ಣಿ ಹೊತ್ತು ಹೊತ್ತನೊಳೆಮ್ಮನೆತ್ತಿಯೊಳು ಹಸ್ತವಿಟ್ಟೆನ್ನ ಸಲುವರಮ್ಮ 2ಪಂತರೈವರು ಎನ್ನ ತೊಂತ ಹಂತಯೆಂದುಸಂಚಿತದ ಕರ್ಮವನುಣಿಸುವರುವಂಚನೆಯಳಿದ ಪ್ರಪಂಚವನು ಕಳೆದಿಹಮಿಂಚಿನ ಪರಿಯವಿರಿಂಚಿಬರೆದಿಹನಮ್ಮ3ಜೇಷ್ಠನಾಗಿಹ ಪುತ್ರ ಧರ್ಮನ ಅಗಲಿಸಿಭ್ರಷ್ಟ ಆತ್ತೆಯು ಮೈತ್ಯುವಾಗಿಹಳುಮೆಟ್ಟಿಲಿನ ಹೊರಗೆ ಕಣ್ಣಿಟ್ಟು ಸಾಧುಗಳನುದೃಷ್ಟಿಸಿ ನೋಳ್ಪನೆಂದರೆ ಕ್ಷಣ ಬಿಡರಮ್ಮ 4ಒಂಬತ್ತು ಬಾಗಿಲ ಊಳಿಗವನು ಮಾಳ್ಪಕುಂಬತದ ನರತ ಕಾವರ ದಾಳಿಢಂಭಕವನು ಬಿಟ್ಟು ಇಂಬಿನೊಳಟ್ಟು ವಿಶ್ವಂಭರ ಪುರಂದರವಿಠಲ ಧ್ಯಾನದಗುಟ್ಟು5
--------------
ಪುರಂದರದಾಸರು
ಸುಲಭಪೂಜೆಯಕೇಳಿ ಬಲವಿಲ್ಲದವರು<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕಾಲಕಾಲದಕರ್ಮಕಮಲಾಕ್ಷಗರ್ಪಿಸಿರಿಪ.ಇರುಳು ಹಚ್ಚುವ ದೀಪ ಹರಿಗೆ ನೀಲಾಂಜನವು |ಮರುವುಡುವ ಧೋತರವು ಪರಮವಸ್ತ್ರ ||ತಿರುಗಾಡಿ ದಣಿಯುವುದು ಹರಿಗೆ ಪ್ರದಕ್ಷಿಣೆಯುಮರಳಿ ಹೊಡಮರುಳುವುದು ನೂರೆಂಟು ದಂಡ 1ನುಡಿವ ಮಾತುಗಳೆಲ್ಲ ಪಾಂಡುರಂಗನ ಜಪವುಮಡದಿ ಮಕ್ಕಳು ಎಲ್ಲ ಒಡನೆ ಪರಿವಾರ ||ನಡುಮನೆಯ ಅಂಗಳವುಉಡುಪಿ ಭೂವೈಕುಂಠಎಡ ಬಲದ ಮನೆಯವರು ಕಡುಭಾಗವತರು 2ಹೀಗೆ ಈ ಪರಿಯಲಿನಿತ್ಯ ನೀವರಿತಿರಲುಜಗದೊಡೆಯ ಶ್ರೀ ಕೃಷ್ಣ ದಯವ ತೋರುವನು ||ಬೇಗದಿ ತಿಳಿದುಕೇಳಿ ಹೋಗುತಿದೆ ಆಯುಷ್ಯಯೋಗಿಪುರಂದರವಿಠಲ ಸಾರಿ ಪೇಳಿದನು3
--------------
ಪುರಂದರದಾಸರು
ಹನುಮ-ಭೀಮ-ಮಧ್ವ60ಕರುಣಿಸೈಹರಿಚರಣಸೇವೆ ನಿರುತಪಪರಿಪರಿಯ ಕ್ಲೇಶಗಳ ಪರಿಹರಿಸುತ ಪೊರೆವದುರಿತದೂರ ಹರಿಯಚರಣಸೇವಕನೆಅ.ಪಕಂಜಾಕ್ಷನ ದಯದಿ ಅಂಜದೆ ನೀರಧಿಯಹಿಂಜರಿಯದೆ ದಾಂಟಿ ಸಂಜೆ ಕಳೆಯೆ ಲಂಕೆರಂಜಿಸುವದು ಕಂಡು ಕಂಜಾಕ್ಷಿಗುಂಗುರ ಪ್ರ-ಭಂಜನನೀಡಿದೆಯೊ ಅಂಜನೆಯತನಯ1ದುರಳ ದೈತ್ಯನಾದ ಜರೆಯ ಸುತನ ಸೀಳಿಹರಿಗರ್ಪಿಸಿ ಸರ್ವವನು ಧರಣಿ ಭಾರನಿಳುಹಿಹರಿಯ ಮನವನರಿತು ಪರಿಪರಿಲಿ ಸೇವಿಸುತಪರಮಭಕ್ತನಾದೆ ಪರಿಸರನೆ ಸಲಹೊ2ಮುದ್ದು ಕೃಷ್ಣನ ಸೇವೆ ಶುದ್ಧಮನದಿ ಮಾಡಿಸದ್ವೈಷ್ಣವರ ಕುಲದ ಪದ್ಧತಿಯನರುಹಿಪದ್ಮನಾಭಕಮಲನಾಭ ವಿಠ್ಠಲನೊಲಿಸಿಸದ್ಗ್ರಂಥಗಳ ರಚಿಸಿ ಉದ್ಧರಿಸಿದೆ ಜಗವ 3
--------------
ನಿಡಗುರುಕಿ ಜೀವೂಬಾಯಿ
ಹರಿಯೆ ಅಚ್ಯುತಾನಂತ ಗೋವಿಂದದುರುಳಹಿರಣ್ಯಕ ಅಸುರ ಅವತರಿಸಿದರೆ ಎಲ್ಲಿಪರಿಪರಿಯ ಲೋಕ ಪಾತಾಳ ಸ್ವರ್ಗವ ಗೆದ್ದುಪಡೆದು ಅವನ ಸತಿಯ ಸುರಪತಿಯು ಎಳೆತರಲುಅಲ್ಲಿ ಗರ್ಭದಲಿ ಪ್ರಹ್ಲಾದನಿಹನೆಂದುಹರಿಯೆ ಚಂಡಹಿರಣ್ಯಕ ಅಸುರ ದಂಡಿಸುವದುಷ್ಟಮರ್ದನ ದೂರಾತಿದೂರ ಜಗ-ಪರಿಪರಿಯಿಂದ ತುತಿಸುತ್ತ ಕರಗಳ ಮುಗಿಯೆಇತ್ತ ಸುರರೆಲ್ಲ ತಮ್ಮ ತತ್ತಸ್ಥಾನಕೆ ಪೋಗೆಒರೆದೊರೆದು ಪೇಳಿ ಬಹು ಬಗೆ ಬಗೆಯಿಂದಲಿನಮ್ಮ ಅಂತರ ತತ್ವ ನಿಶ್ಚಯವೆ ಇದು ಸರಿಅನ್ಯರಲ್ಲವು ನಾವು ಹಿತವರೆ ನಿನಗಿನ್ನುಭಿನ್ನ ದೇಹ್ಯವುನೋಡುಮುನ್ನಿಂದಲಿ ಇನ್ನುಬಾಧ್ಯ ಬಾಧಕ ಹರಿಯೆ ಸಾಧ್ಯ ಸಾಧನಕೆಹರಿಚಂಡಮಾರ್ಯರು ತಾವು ಚೆಲುವ ಬಾಲಕಿ ಕೇಳುಆವ ವಿಪರೀತವನೆ ಅಲ್ಲದ್ದು ನುಡಿದನುಏಸುಬಗೆಯಿಂದ ಉಪಾಯದಲಿ ಕೇಳಿದರುಈಸು ದಿನ ಇವ ಎನ್ನ ಸುತನು ಎಂದರಿದಿದ್ದೆನಾನಾ ಬಗೆಯಿಂದ ವಧೆಗೇನೇನು ಉಪಾಯಎಲ್ಲಿ ಪ್ರಹ್ಲಾದ ನಿನ್ನೊಡೆಯನು ಇನ್ನುಭುಂಗಿ ಭುಂಗಿಗೆ ಬ್ರಹ್ಮಾಂಡವೆಲ್ಲ ಗದ್ದರಿಸಿನ್ನುಬಿರಬಿರನೆ ಕಣ್ಣುಗಳ ಬಿಡುವುತ್ತ ಹೂಂಕರಿಸಿಕೆಡಿಸದೆ ತಾನಿತ್ತವರಸತ್ಯವೆಂದೆನಿಸಿಪರಿಪರಿಯಿಂದ ಸಿರಿದೇವಿಗೆಇದೆ ಸಮಯವೆಂದುಸಿರಿಅಜಭವಾದಿಗಳೆಲ್ಲಪರಿಪರಿಯಿಂದಸುರ ಋಷಿಪಿತೃ ಗಂಧರ್ವಕಂದ ಪ್ರಹ್ಲಾದನ್ನ ಮುಂದಕ್ಕೆ ಕರೆದು ನಿಮ್ಮಮೆಚ್ಚಿದೆನು ಪ್ರಹ್ಲಾದ ವರವ ಬೇಡೆಂದೆನಲುಆಗ ಪ್ರಹಲ್ಲಾದಗೆ ಕರಕಮಲಗಳಿಂದಹರಿಯೆ ಜಗಕಿನ್ನು ಇರತೋರಿನ್ನು ಪ್ರಹಲ್ಲಾದಜಯ ಜಯತು ಪ್ರಹ್ಲಾದವರದ ಜಗದಾಧಾರ
--------------
ಗೋಪಾಲದಾಸರು
ಹರಿಯೆ ನೀನು ಎನ್ನಾ ಮೊರೆಯ ಲಾಲಿಸೆಂದೆನೂ ಪಥsÀರವಲ್ಲ ನಿನಗೇನೂ ಅ.ಪಪರಮಭಕುತಿಯಿಂದಾ ನಿನ್ನಪರಿಯ ವಾಕ್ಯವಕೇಳಿನಾನೂಜರಿದುಬಿಟ್ಟರೆ ನೀನೂಪರಮಕೋಪವಮಾಡಿಧರಣೀಶರೊಡನೆ ಕಾದಾಡಿ ಸಾ -ವರತುರಗವನೇರೋಡೀ 1ನಿನ್ನಾ ಬೇಡಿದಾರೆ ಅ -ದನ್ನು ನೀಡದಾಲೆ ಆ -ಬನ್ನಬಡಿಸುವರೆ ಎಂದಾಎನ್ನ ನುಡಿಯಾಕೇಳಿಚಿನ್ನಕಶಿಪುನ ಕೊಂದು ಭೂ -ವನ್ನೇ ದಾನವ ತಂದು ತಾ -ಯನ್ನೇ ನೀನೇ ಕೊಂದು ಅ -ರಣ್ಯದೊಳು ಬಂದೂ ಗೋ -ವನ್ನೆ ಕಾವುತ ನಿಂದೂಪರ-ಘನ್ನ ತುರಗೇರುವೆನೆಂದೂ 2ಪಾತಕಕಳೆಯೋ ಇನ್ನಾಪಾತಕಕಳೆÀಯದಿರುವರೇನೋಯಾತರ ಮಾತೆಂದು ನುಡಿಯಲದು -ಪಾಥಾಚರನು ತಾನೂ ಅದು -ಶ್ವೇತವರಾಹನುಅತ್ತನರಮೃಗರೂಪಾನುತಾತನಾಜÕವ ಕೇಳ್ಯಾನುಪರ-ಧೂತಾನೆನಸಿದಾನು ಅವ -ಶ್ವೆತಾಶ್ವಗ ಗುರುಜಗನ್ನಾಥವಿಠಲ ನೀನೂ 3
--------------
ಗುರುಜಗನ್ನಾಥದಾಸರು
ಹಲವು ಜನ್ಮದಲ್ಲಿ ಹರಿಯ ನೆನೆಯಲಿಲ್ಲಕಲಿಗಳು ಆಗಿ ನೀ ಕೆಡಬೇಡ ಮನುಜ 1ನೀಚಜಾತಿಯಲಿ ಪುಟ್ಟಿ ಅಧಮನಾಗಿರಬೇಡಭಜಿಸು ಭಕ್ತಿಗಳಿಂದ ಮಹಾಮಹಿಮ ಕೃಷ್ಣರ 2ನಂದ ಭದ್ರಾ ಜಯರಿಕ್ತ ಪೂರ್ಣ ವೆಂಬೊಚೆಂದುಳ್ಳ ತಿಥಿಯಲ್ಲಿಘೃತನವನೀತದಧಿಕ್ಷೀರ3ನಂದದಿ ಸಕ್ಕರೆಘೃತನವನೀತದಧಿಕ್ಷೀರದಿಂದಲಿ ಅರ್ಚಿಸಿ ಸುಕೃತವಪಡಿ4ಶಯನಾದಿಗಳಿಂದ ಶಾಖಾದಿ ಫಲವ್ರತಭಯದಿಂದ ಮಾಡೋರೆ ಸತತ 5ಅದರಿಂದ ಚಾತುರ್ಮಾಸ ನಾಲ್ಕು ತಿಂಗಳುಉಳಿದಿನ ಬಂತಲ್ಲ ಭವನ ಪಾವಕ(?) ಭೀತಿ 6ಆಷಾಢÀ ಶುದ್ಧ ಏಕಾದಶಿ ಮೊದಲಾಗಿಕಾರ್ತಿಕ ಶುದ್ಧ ದ್ವಾದಶಿ ಪರಿಯಂತ್ರ 7ಶ್ರೀಕಾಂತ ಯೋಗನಿದ್ರೆಲಿ ತಾ ಪವಳಿಸಿಈಕ್ಷಿಸುತಿರುವೋನೆ ಭಕ್ತರ 8ಹರಿಮಲಗ್ಯಾನೆ ಎಂದು ಅಜ್ಞಾನದಲಿ ನೀವ್ ಕೆಡಬೇಡಿಪರಿಪರಿಕಲ್ಪೋಕ್ತದ ಪ್ರಕಾರದ ವ್ರತಗಳ ಮಾಡಿ9ಸ್ನಾನ ಸಂಧ್ಯಾವಂದನೆಯ ಕಾಲಕಾಲದಲಿ ಮಾಡಿಮನದಲ್ಲಿ ವಾಮನನ ನೆನದು ಸುಕೃತವಪಡಿ10ಅತಿಥಿಗಳ ಮನ್ನಿಸಿ ಅನಾಚಾರಗಳ ಬಿಡಿಸತಿಸುತರನೆ ಒಡಗೂಡಿ ವಿಹಿತವ್ರತಗಳ ಮಾಡಿ 11ಆಷಾಡಮಾಸದಲಿ ಶಾಕ ಹದ್ದಿನ ಮಾಂಸಭೂಷಣ ಶ್ರಾವಣದಲಿದಧಿನಾಯಿಶ್ಲೇಷ್ಮ12ಭಾದ್ರಪದ ಮಾಸದಲಿ ಪಾಲು ಸುರಾಪಾನ ಆಶ್ವೀಜಕಾರ್ತೀಕ ಮಾಸದಲಿ ಚಿತ್ರಕ್ರಿಮಿರಾಶಿದ್ವಿದಳಬಹುಬೀಜ13ಮಾಸನಿಷಿದ್ಧ ವಸ್ತುವನು ಕುದಿಸಿ ಬೇಯಿಸಿದರೆಅಸ್ತ್ರವನು ದೇವರ ಅಂಗದೊಳಿಟ್ಟಂತೆ 14ಮಾಸನಿಷಿದ್ಧ ವಸ್ತುವನು ದೇವರಿಗೆ ಸಮರ್ಪಿಸಿದರೆಬಹುಕಲ್ಪ ನರಕದೊಳದ್ದುವಿರಿ ಪಿತೃಗಳ 15ಧರ್ಮಜರು ನಾರದರು ಸ್ತುತಿ ಮಾಡುತಿರುವೋರುಧರ್ಮರಾದರ ಸಂವಾದ ಚಾತುರ್ಮಾಸದ ಸಂಕಲ್ಪ 16ಈ ಕಥೆ ವ್ರತವನೆಲ್ಲ ಅರಿತು ಯೋಚಿಸಿದವರಿಗೆಬೇಕೆಂಬೊ ಮುಕ್ತಿಯನು ಕೊಡುವ ಹಯವದನ 17
--------------
ವಾದಿರಾಜ