ಒಟ್ಟು 12179 ಕಡೆಗಳಲ್ಲಿ , 134 ದಾಸರು , 5885 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂತುಪಿತ ಕರುಣಾಕರ ನಿನ್ನ ಚಿಂತೆಯೊಳಗಿರಿಸಿ ಸಲಹಯ್ಯಾ ಜನಾರ್ದನಾ ಪ ಉಣ್ಣದುರಿಯುವಮನವ ನಿನ್ನಡಿದಳಿರನೆಳಲ ತಣ್ಣಸದಲಿರಿಸಿ ಸಲಹಯ್ಯ ಜನಾರ್ದನಾ 1 ವಿಪ್ರ ವಧೆಯಿಂದಲಾದಡಂ ವಿರಚಿಸಿದ ಲಾವಿಕವೆಂದದನೆ ಬಯಸಿ ಬಯಸೀ ದೇವ ಮನಕನವರತ ನಿನ್ನ ಪದ ತೀರ್ಥದಾ ಜೀವನವನಿತ್ತು ಸಲಹಯ್ಯಾ 2 ಭೂಮಿಯದು ಬುಧದಾನ ಸುರದಾನವಾದಡಂ ಆ ಮಹಿಯ ತನ್ನತ್ತ ಸೆಳೆವೆನೆಂದೂ ಕಾಮಿಸುವ ಮನಕೆ ನಿನ್ನಮಲಪಾದಾಂಬುಜವ ಸೀಮೆಯೊಳಗಿರಿಸು ವೈಕುಂಠ ಜನಾರ್ದನಾ 3
--------------
ಬೇಲೂರು ವೈಕುಂಠದಾಸರು
ಕಂತುಪಿತನೆ ನಿನ್ನ ಎಂತು ವರ್ಣಿಪೆ ಲಕ್ಷ್ಮೀ -ಕಾಂತ ಪಾಲಿಸೆನ್ನನು ನಿರಂತರದಲಿ ಪ ಕುಂತಿಪುತ್ರಗೆ ನೀನತ್ಯಂತ ಸಾರಥಿತ್ವವ ಮಾಡಿನಿಂತು ದುರ್ಯೋಧನನ ಶಿರವ ಅಂತಕನಿಗೊಪ್ಪಸಿದ ಧೀರ ಅ.ಪ ಸುಂದರವದನ ನಿನ್ನ ಕಂದ ಭಜಿಸಲು ಮುದದಿಂದ ಕಂಬದೊಳ್ಬಂದೆ ಮಂದರೋದ್ಧರಸಿಂಧುಶಾಯಿ ರಕ್ಕಸನ ಕೊಂದು ಕರುಳ ಮಾಲೆಯನ್ನುಚೆಂದದಿಂ ಕಂಧರದೊಳ್ಧರಿಸಿದಾನಂದಮೂರ್ತಿ ಇಂದಿರೇಶ1 ಕದಂಬ ಪೂಜಿತಾಂಘ್ರಿಯುಗಳನಂಬಿದ ಭಕ್ತರ ಕಾಯ್ವ ಅಂಬುಜನೇತ್ರಅಂಬರೀಷ ದ್ವಾದಶಿ ವ್ರತವ ಸಂಭ್ರಮದಿ ಮಾಡುತಿರೆಡೊಂಬಿಯಿಂ ದೂರ್ವಾಸ ಶಪಿಸೆ ಬೆಂಬಿಡದೆ ಚಕ್ರದಿ ಸಲಹಿದ2 ಗಂಗೆಯ ಜನಕ ನಿನ್ನ ಅಂಗನೆ ದ್ರೌಪದಿದೇವಿಭಂಗಬಿಡಿಸೆಂದು ಕೂಗೆ ಮಂಗಳಾಂಗನೆಸಾಂಗದಿಂದ ವಸ್ತ್ರಂಗಳ ಹಿಂಗದೆ ಪಾಲಿಸಿದಂಥರಂಗವಿಠಲ ಪಾಲಿಸೀಗ ತುಂಗ ವಿಕ್ರಮ ಎನ್ನ ಮಾತ 3
--------------
ಶ್ರೀಪಾದರಾಜರು
ಕತ್ತಲೆಗಂಜುವುದೇನುಮೈದುನ ನಿನ್ನ ಬತ್ತಲೆ ಮಾಡಿದನ ಚಿತ್ತ ಸ್ವಸ್ಥ್ಯವಾದ ಚಪಲಾಕ್ಷಿ ನೀ ಇಂಥಕತ್ತಲೆಗಂಜುವುದೇನ ಪ. ಪುನುಗಿನ ಪರಿಮಳ ಬಿನುಗು ಬೆಕ್ಕಿಗೆ ಉಂಟೆನಿನ್ನ ಮನದಿ ಪಾಂಡವರು ಸರಿಯೆಂದು ದ್ರೌಪತಿನಿನ್ನ ಮನದಿ ಪಾಂಡವರು ಸರಿಯೆಂದು ಕೈ ಹಿಡಿದಿಜನರೆಲ್ಲ ನಗರೆ ಜಗದೊಳು ದ್ರೌಪತಿ1 ಗಿಳಿಯಂಥ ಕಳೆಯ ಹೊಳೆಯ ಬಲ್ಲುದೆ ಗುಬ್ಬಿತಿಳಿದು ನಿನ್ನ ಗರವು ಬಿಡು ಕಂಡ್ಯಾ ದ್ರೌಪತಿತಿಳಿದು ನಿನ್ನ ಗರವು ಬಿಡು ಕಂಡ್ಯಾ ಐವರೂ ಹಳಿದುಕೈ ಹೊಯಿದು ನಗರೇನ ದ್ರೌಪತಿ2 ಆತುರವಾಗಿದ್ದ ಕೀಚಕನಿಗೆಮಾತು ಕೊಟ್ಟವನ ಮಡುಹಿದಿಮಾತು ಕೊಟ್ಟವನ ಮಡುಹಿದ ನಿನ್ನಂಥಫಾತಕಳುಂಟೆ ಜಗದೊಳು ದ್ರೌಪತಿ3 ಮಾಯಗಾರುತಿ ಪತಿಯ ದಾಯದಾಟಕೆ ಹಚ್ಚಿಕಾಯದ ಕಾಂತಿ ಅಡಗಿಸಿಕಾಯದ ಕಾಂತಿ ಅಡಗಿಸಿ ಮೆರೆಸಿದಿಯಾವ ಕಚ್ಚೆತನ ಪರಿಯಲೆ ದ್ರೌಪತಿ4 ಸೃಷ್ಟಿಕರ್ತನೆಂಬೊ ಧಿಟ್ಟ ಗಂಡನ ಒಯ್ದುಅಟ್ಟು ಹಾಕುವನ ಪರಿಯಲಿಅಟ್ಟು ಹಾಕುವನ ಪರಿಯಲಿ ಕೈಯೊಳುಹುಟ್ಟು ಕೊಟ್ಟವನ ಮೆರೆಸೀದಿ ದ್ರೌಪತಿ 5 ಕಳೆಯ ಸುರಿಯುವ ಮುದ್ದು ಎಳೆಯ ಚನ್ನಿಗಪತಿಗೆಬಳೆಯನೆ ಇಡಿಸಿ ಜನರೊಳುಬಳೆಯನೆ ಇಡಿಸಿ ಜನರೊಳು ರೂಪವ ತಿಳಿಯದಂತವನ ತಿರುಗಿಸಿ ದ್ರೌಪತಿ 6 ರಾಜಪುತ್ರನ ಒಯ್ದುತೇಜಿ ಕೆಲಸಕೆ ಇಟ್ಟಿಸೋಜಿಗವಲ್ಲ ಜನರೊಳು ಸೋಜಿಗವಲ್ಲ ಜನರೊಳು ರೂಪವಮಾಂಜುಕೊಂಡವನ ಮೆರೆಸಿದಿ ದ್ರೌಪತಿ7 ಘನ ಗಂಭೀರನ ಒಯ್ದು ದನದ ಕೆಲಸಕೆ ಇಟ್ಟಿಜನರೆಲ್ಲ ನಗರೆ ಜಗದೊಳುಜನರೆಲ್ಲ ನಗರೆ ಜಗದೊಳು ದ್ರೌಪತಿಮನಬುದ್ಧಿ ಎಂದು ಬರಬೇಕು8 ಅತಿ ಅಂತಃಕರಣಿ ಹಿತದ ಅಗ್ರಜನ ಒಯ್ದುರಥಿಕನ ಮಾಡಿ ಮೆರೆಸಿದಿ ದ್ರೌಪತಿರಥಿಕನ ಮಾಡಿ ಮೆರೆಸಿದಿ ರಾಮೇಶನ ಪತಿಗಳಭಿಮಾನ ಇರಲುಂಟೆ ದ್ರೌಪತಿ9
--------------
ಗಲಗಲಿಅವ್ವನವರು
ಕತ್ತಲೆಯೊಳಗಣ ಬಾವಿ ಕಾಲ್ದಪ್ಪಿ ಬೀಳಬೇಡಮೃತ್ಯುವಲ್ಲದೆ ಅದು ನಿತ್ಯವಲ್ಲ ಪ ರಾವಣನೆಂಬುವ ಬಿದ್ದು ರಂಗಕ್ಕೆ ಈಡಾದಭಾವಿಸೆ ಜಲಂಧರನು ಬದುಕಲಿಲ್ಲಕೇವಲ ಕೀಚಕನೆಂಬುವವ ಕೇಡ ಹೇಳುವುದೇನುದೇವ ಇಂದ್ರನೆಂಬವನ ದೇಹ ಕೆಟ್ಟಿತು 1 ನಹುಷನೆಂಬುವ ಬಿದ್ದು ನಾಚಿಕೆಗೆ ಈಡಾದಬಹು ಹೇಳುವುದೇನು ವಾಲಿಯುಬದುಕನುಮಹಾಮಾಯಾವಿ ಎಂಬುವನ ಬಣ್ಣ ಕಂಡವರಿಲ್ಲಊಹಿಸೆ ಭಸ್ಮಾಸುರನು ಉರಿದುಹೋದ 2 ಕತ್ತಲೆ ಬಾವಿಯಲಿ ಬಿದ್ದು ಕೆಟ್ಟವರು ಹಲವರುಂಟುಕತ್ತಿಯ ಧಾರೆಗೆ ಇಕ್ಕಿದಾ ಮಧುವದುಚಿತ್ತಶುದ್ಧರು ಚಿದಾನಂದ ಭಕ್ತರು ಕಂಡುಕತ್ತಲೆಯ ಬಾವಿಯಲಿ ಬೀಳಲಿಲ್ಲ 3
--------------
ಚಿದಾನಂದ ಅವಧೂತರು
ಕತ್ತೆಯು ನೀನಲ್ಲ ಕರುಣಾಕರನಹೆ ಕತ್ತೆಯಾಗಬೇಡ ಕತ್ತೆಸತ್ಯ ಚಿದಾನಂದ ನೀನರೆ ಮರೆತರೆ ಕತ್ತೆನೀನಾಗುವೆ ಕತ್ತೆ ಪ ಬೊಂಬೆಗೆ ಪ್ರಾಣವನಿಟ್ಟು ದೇವರು ಎಂಬೆ ದೇವರು ಅವು ಕತ್ತೆಬೊಂಬೆಗೆ ಪ್ರಾಣ ಪ್ರತಿಷ್ಠೆಯ ಮಾಡಲು ನೀನಾರು ಹೇಳಲೋ ಕತ್ತೆಬೊಂಬೆ ಸತ್ತವಲ್ಲೊ ಪ್ರಾಣ ತೆಗೆದುಕೊಳ್ಳೆ ನೀರ ಮುಳುಗು ನೀನು ಕತ್ತೆಬೊಂಬೆ ಚೇತನ ಸಾಕ್ಷಾತ್ಕಾರವೆ ಇರೆ ದೇವ ನೀನೆಂತಲ್ಲ ಕತ್ತೆ 1 ಹಿಂದಣ ಪುರಾಣ ಹೇಳುವೆ ನೀನೀಗ ನಿನ್ನ ಪುರಾಣವೆಲ್ಲೊ ಕತ್ತೆಬಂದವನಾರೋ ಹೋಗುವನಾರೋ ಎಂಬುದು ತಿಳಿಯಲಿಲ್ಲ ಕತ್ತೆಬಂದೆಯೋ ಅವಿದ್ಯೆ ದೆಸೆಯಿಂದ ರೂಪಿಗೆ ಜೀವ ನೀನೆನಿಸಿ ಕತ್ತೆಎಂದು ಎಂದಿಗೂ ನೀ ಬ್ರಹ್ಮವೆ ಸತ್ಯವು ಯೋಚನೆ ಬಿಡು ನೀ ಕತ್ತೆ 2 ನಮಕ ಚಮಕ ಅಭಿಷೇಕ ಮಾಡುವಿ ಏನಂತ ಮಾಡುವಿ ಕತ್ತೆಸಮನಿಸಲಿಲ್ಲ ವೇದಾಂತದರ್ಥವು ನಿನಗೆ ಸುಡು ನಿನ್ನ ತಿಳಿವಿಗೆ ಕತ್ತೆಕಮಲಮುಖಿಯ ಸುತರನು ನೀನು ನಂಬುವೆ ಪ್ರಪಂಚ ಸತ್ಯವೇನೋ ಕತ್ತೆಭ್ರಮಣಕ್ಕೆ ಸಿಲುಕಿ ನಾನಾ ಭಂಗಪಡುವೆ ಭಾವಿಸಿ ತಿಳಿನೀ ಕತ್ತೆ 3 ಕನಸಿನನುಭವದಂತೆ ಪ್ರಾರಬ್ಧ ತೋರುವುದು ದೇಹದಾರಿಗಳಿಗೆ ಕತ್ತೆಚಿನುಮಯಾತ್ಮಕನಲ್ಲಿ ಪ್ರಾರಬ್ಧ ತೋರಿಯೆ ತನಗೆ ತಾನಡಗುವುದು ಕತ್ತೆನಿನಗದು ಏನಿಲ್ಲ ಮನಸಿನ ಭ್ರಾಂತಿಯೆನಲನುಭವಿಸುವೆ ಕತ್ತೆ 4 ಪಾದ ತಿಳಿ ತತ್ತ್ವಮಸಿಯನ ಕತ್ತೆಬಂಧಿಸಿ ಆಧಾರ ಚಕ್ರವನೇರು ಏರಿ ನಿಂತು ಭ್ರೂಮಧ್ಯದಿ ಕತ್ತೆಮುಂದೆ ಹರಿಯ ನೋಡು ಸಹಸ್ರಾರದ ಪೀಠ ಛಂದದಿ ಅಡರ್ಮೇಲೆ ಕತ್ತೆಸುಂದರ ಚಿದಾನಂದ ನಾಗಿಯ ಥಳಥಳ ಬೆಳಕಲ್ಲಿ ಬೆಳಕಾಗೊ ಕತ್ತೆ5
--------------
ಚಿದಾನಂದ ಅವಧೂತರು
ಕತ್ತೆಲ್ಲ ಕಳೆದ್ಹೋತ್ಯು ಜತ್ತೆಲ್ಲ ಬಿದ್ಹೋತ್ಯು ಬತ್ತಲೆ ಬತ್ತಲೆ ಮನುಜ ಬತ್ತಲೆ ಬತ್ತಲೆ ಪ ಮನುಜ ಬತ್ತಲೆ ಬತ್ತಲೆ ಬತ್ತಲೆ ಮನುಜ ಬತ್ತಲೆ ಬತ್ತಲೆ ಬತ್ತಲೆ ಮನುಜ ಬತ್ತಲೆ ಬತ್ತಲೆ ಬತ್ತಲೆ ಬತ್ತಲೆ ಮನುಜ ಬತ್ತಲೆ ಬತ್ತಲೆ ಮನುಜ ಬತ್ತಲೆ ಬತ್ತಲೆ ಬತ್ತಲೆ ಮನುಜ ಬತ್ತಲೆ ಬತ್ತಲೆ ಮನುಜ ಬತ್ತಲೆ ಬತ್ತಲೆ
--------------
ನರಸಿಂಹವಿಠಲರು
ಕಥನಕಾವ್ಯಗಳು ಶ್ರೀ ವೆಂಕಟೇಶ ಪಾರಿಜಾತ ಅಧ್ಯಾಯ ಒಂದು ಶ್ರೀಪತಿರ್ಭೃಗುಣಾ ಸರ್ವಲೋಕೋತ್ಕøಷ್ಟ ಇತೀ ಪಿತ: ಗೋಕ್ಷೀರ ಸಿಕ್ತ ಸರ್ವಾಂಗೋ ವಲ್ಮೀಕಸ್ಥ: ಶುಭಂ ದಿಶೇತ | ಶ್ರೀಸಹಿತ ಶ್ರೀವೆಂಕಟೇಶಗೆ ಸಾಸಿನಾರತಿ ಮಾಡಿ ಬೇಡುವೆ ಭಾಷೆ ಭಾಷೆಗೆ ಎನಗೆ ಬುದ್ಧಿವಿಕಾಸ ಕೊಡುಯಂದು ಕರಮುಗಿದು ಬೇಡುವೆ ದಾಶರಥಿ ನಿಜದಾಸ ಕಲ್ಲೊಳ್ಳೀಶಗೊಂದಿಸುವೆ 1 ಸಂತತಿಗೆ ನತಿಸುವೆ ಐಜಿ ವೆಂಕಟರಾಮವರ್ಯರ ಪೂಜೆಯಲ್ಲಿರುವೆ ಜಗತಿಯಲಿ ಜನಿಸಿ ಅವರಾ ಪೂಜಿತಾಖ್ಯವು ವಹಿಸಿದವರನು ಪೂಜಿಸುವೆ ಬಿಡದೆ2 ಪೊಂದಿ ಆ ಗುರು ಪುತ್ರರಾಗಿರುವ ವಿಷ್ಣುತೀರ್ಥರನು ನಮಿಪೆ ಮತ್ತೆ ಸ್ವೋತ್ತಮರಾಗಿ ಇರುವ ಗುರುಗಳಿಗೊಂದಿಸುತ ಸ ರ್ವೋತ್ತಮಾನಂತಾದ್ರಿ ರಮಣನ ಮಹಿಮೆ ಪೇಳುವೆನು3 ವಚನ ಬುದ್ಧಿ ಪೂರ್ವಕ್ಹಿಂ ಸಂಪೂರ್ಣ ಸರ್ವ ದೇವೋತ್ತಮನು ಇರುವನ್ಯಾರೆಂದು ತಿಳಿ ಸರ್ವಲೋಕದಲಿ ಕೇಳಿ ಪೂರ್ವದಲ್ಲಿ ಪೋದ ಪೂರ್ವಿಕನÀ ಮನೆಯಲ್ಲಿ ಗರ್ವ ಅವನಲ್ಲಿ ಕಂಡು ಇರುವ ನಡೆದನಲ್ಲಿ 1 ನೋಡಿದನು ಆಗಲ್ಲಿ ಪ್ರೌಢೆ ಪಾರ್ವತಿಯು ಮಾತಾಡಿದಳು ನಾಚುತಲಿ ಬೇಡಬಿಡು ಪ್ರಾಣೇಶ ನೋಡು ಭೃಗು ಮುನಿಬಂದ ಬೇಡಿಕೊಂಬುವೆನೊ ಗಾಢನೆ ಕಣ್ಕೆಂಪು ಮಾಡಿ ಮುನಿಯಿದ್ದಲ್ಲಿ ಓಡಿಬಂದನು ಪೂಜೆಯ ಬೇಡ ಈ ಲೋಕದಲಿ ನೋಡಿ ಲಿಂಗವ ಪೂಜೆ ಮಾಡಲಿ ಜನರು 2 ಪರಿ ಶಾಪ ಮೆಟ್ಟಿದನು ವೈಕುಂಠ ಥಟ್ಟನೆ ಮತ್ತಲ್ಲಿ ದಿಟ್ಟ ದೇವನ ಕಂಡ ಪಟ್ಟದರಸಿಯಕೂಡಿ ಧಿಟ್ಟಾಗಿ ಮಲಗಿರಲು ಸಿಟ್ಟಿಲÉೂದ್ದನು ಒಳ್ಳೆ ಪೆಟ್ಟು ಅವನೆದಿಗೆ ಮುಟ್ಟಿ ಮುನಿ ಪಾದವನು ತುಷ್ಟನಾಗಿ 3 ಧ್ವನಿ ಮೇಲಿಷ್ಟು ಸಿಟ್ಟು ಕಾರಣ ಪೇಳಿಷ್ಟು ತಪ್ಪಿತು ಕ್ಷಮಿಸಿಷ್ಟು 1 ಎಳ್ಳುಕಾಳಷ್ಟು ನೊಂದು ಕೊಂಡಿದ್ದಾವು ಎಷ್ಟೋ 2 ಧರೆಯೊಳಗೆ ದ್ವಿಜರಿಗೆ ಸರಿಯಾರು ಇಲ್ಲೆಂದು ಬರುವುದು ಭಯ ಬಹಳಷ್ಟು ವರದಾನಂತಾ ದ್ರೀಶನ ಪರಮ ಭಕ್ತರಿಗೆ ಬರಬಾರದೆಂದಿಗೂ ಸಿಟ್ಟು 3 ವಚನ ಇಂದಿರಾಪತಿಯು ಹೀಗೆಂದು ಮುನಿಪಾದಂಗಳÀÀÀ ಚಂದದಿಂದಲಿ ಒತ್ತಿತ್ವರದಿಂದ ಉಷ್ಣೋದಕವನು ತಂದು ತೊಳೆಯುತ ಇಂದು ಪಾವಿತನಾದೆನೆಂದು ಹರುಷದಲ್ಲಿ ಮುಂದೆ ಭೃಗುಮುನಿಯು ಮುಕುಂದನ ಸರ್ವರಿಂದಧಿಕ ಸತ್ಯತಿಳಿರೆಂದ ಮುನಿಗಳೆಲ್ಲ ಮುಂದೆ ವೈಕುಂಠದಲಿ ಇಂದಿರಾದೇವಿ ಗೋವಿಂದನಾಟವ ಕಂಡಂದಳೀ ಪರಿಯು1 ರಾಗ:ಮೋಹನ ಕಲ್ಯಾಣಿ ಆದಿತಾಳ ಹರಿಯೆ ಪೋಗುವೆ ನಾನು ಮುನ್ನಿರುತಿರು ಒಬ್ಬನೇ ನೀನು ತಿರುಕನಾಗಿ ಇರುತಿರುವ ಭೂಸುರನು ಭರದೊಳೊದ್ದ ನಿನ್ಹಿರಿಯತನವೇನು ಪ ನಿನ್ನ ಶ್ರೀವತ್ಸವಿದು ಬಹು ಮಾನ್ಯವು ಎಂದೆನಿಸುವುದು ಮಾನ್ಯ ವಾಗಿಹುದು 1 ಬಡವ ಬ್ರಾಹ್ಮಣರಿಂದ ನೀ ಕಡೆಗೆ ಕೂಡಿರು ಚಂದಾ ಮಡದಿಯ ಹಂಬಲ ಬಿಡುದೂರದಿಂದ ತಡಮಾಡದೆ ನಾ ನಡದೆ ಗೋವಿಂದಾ 2 ಇನ್ನೆನ್ನ ಗೊಡವ್ಯಾಕೊ ಬಿಡು ನಿನ್ನ ಸಂಗತಿ ಸಾಕು 3 ಎನ್ನ ವೈರಿಗಳ ಮನ್ನಿಸುವ್ಯಾಕೋ ನನ್ನಿಚ್ಛೆಯಲಿ ನಾ ಇನ್ನಿರಬೇಕೊ 4 ಹಿಂದಕೆ ಕುಂಭೋದ್ಭವನು ಎನ್ನ ತಂದೆಯ ನುಂಗಿದ ತಾನು ಅಂದಿಗೆ ಎನಗಾನಂದವು ಏನು 5 ಮತ್ತೆನ್ನ ಸೊಸೆಗವರು ಬಹು ಭಕ್ತಿಯಲಿ ಪೂಜಿಸುವರು ವೈರಿಯವರ್ಹೊರತು ಇನ್ಯಾರು 6 ಹುಡುಗ ಬುದ್ಧಿಯು ಎಂದು ನಾ ಕಡೆಗೆ ಬಲ್ಲೆನು ನಿಂದು ಮಡುವ ಧುಮುಕಿ ಕಲ್ಪಡೆಯ ಪೊತ್ತಿಹುದು ಪಿಡಿದು ಭೂಮಿಯ ಕಂಭ ಒಡೆದು ಬಂದಿಹುದು 7 ಬಡವ ಬ್ರಾಹ್ಮಣನಾದಿ ಚಪಗೊಡಲಿಯ ಕೈಯಲಿ ಪಿಡಿದಿ ಮಡದಿಯ ಕಳಕೊಂಡು ತುಡುಗ ನೀನಾದಿ ಹಿಡಿದು ಬತ್ತಲೆ ಖೊಟ್ಟಿ ಕಡವನೇರಿದಿ 8 ಎಷ್ಟು ಪೇಳಲೆ ನಿನಗೆ ನೀನೆಷ್ಟು ಮಾಡಿದಿ ಹೀಗೆ ಅಷ್ಟು ಮನಸಿನೊಳಗಿಟ್ಟುನೂ ಆಗ ಕಟ್ಟಕಡಿಗೆ ಬಲು ಸಿಟ್ಟು ಬಂತೆನಗೆ 9 ಎಲ್ಲರಿಗುತ್ತಮ ನೀನು ಎಂದಿಲ್ಲಿದ್ದೆ ಮೋಹಿಸಿನಾನು ಬಲ್ಲಿದನಂತಾದ್ರಿಯೊಳಿರು ನೀನೆ 10 ರಾಗ:ಸಾರಂಗ ಆದಿತಾಳ ಪರಿ ಕಲಹ ಮಾಡಿ ತ್ವರಿತದಿಂದ ನಡೆದಳು ಕರವೀರಪುರಕೆ ಪ ಪರಮಾತ್ಮನು ತಾ ಮುಂದೀಪರಿ ಚಿಂತಿಸುತಿಹನು ಸಿರಿಯಿಲ್ಲದ ವೈಕುಂಠ ಸರಿಬಾರದು ಎನಗೆ1 ದೀನನಾದೆನು ಹಾ ನಾನು ಕಾಣುವೆನೆಂದು ಪ್ರಾಣ ನಿಲ್ಲದು ಪಟ್ಟದ ರಾಣಿಯ ಬಿಟ್ಟು 2 ಇನ್ಹ್ಯಾಂಗೆ ಇರಲಿ ಇನ್ನಾಕೆಯ ಹೊರತು ಕಣ್ಣಿಗೆ ವೈಕುಂಠಾರಣ್ಯ ತೋರುವುದು ಇನ್ನೆಲ್ಹೋಗಲಿ ಎಂದು ಬಂದ ತನ್ನಿಂದ ತಾನು3 ಶ್ರೀ ವೈಕುಂಠಕಿಂತ ಶ್ರೀ ವೆಂಕಟಗಿರಿಯು ಅಧಿಕವೆಂದು ಭಾವಿಸೀ ಪರಿಯು ಆವತ್ತಿಗೆ ಬೇಗಲ್ಲೇ ತಾ ವಾಸಕೆ ನಡೆದ ದೇವ ತಿಂತ್ರಿಣೆಯೆಂಬೋ ಆ ವೃಕ್ಷವಕಂಡ 4 ಅಡಗಿದ ಮೆಲ್ಲನೆ ಪೋಗಿ ಅಲ್ಲ್ಯಾದೇಶದಲೊಬ್ಬ ಜೋಳಾಖ್ಯನು ಎಲ್ಲರಿಂದಲಿ ತನ್ನ ಪುರದಲ್ಲೆ ಇರುವಾ5 ಶಿವನ ಕರುವಿನ ಮಾಡಿ ತಾನಾಕಳಾಗಿ ಅವನ ತಾಯಿಯು ಲಕ್ಷ್ಮೀ ಅವನ ಮಾರಿದಳು ಕೊಂಡ 6 ನಿತ್ಯ ವರಸಾಧು ಗುಣದಿಂದ ಸರಸಾಗಿ ಕೂಡಿ ಚರಿಸಿ ಬರುವುದು ವೇಂಕಟಗಿರಿಗ್ಹೋಗಿ ನಿತ್ಯ7 ಬಂದ ಕಾರಣವೇನು ಎಂದು ಸ್ಮರಿಸುತಲಿ ಇಂದಿರೇಶಗೆ ಭಕ್ತಿಯಿಂದ ಕ್ಷೀರವನು ಚಂದಾಗಿ ಕರೆವುದು ಬಂದು ಹುತ್ತಿನಲಿ 8 ಹಿಂಡದು ತನ್ನ ಕರುವಿನ ಪರಿ ರಾಜನ ಹೆಂಡತಿಯ ಆಗ ಚಂಡ ಕೋಪದಿ ಗೋಪನ ಕಂಡಂದಳು ಹೀಗೆ 9 ವಚನ ನೀ ಏನು ಮಾಡುವಿನಿತ್ಯ ಕುಡಿವುದೋ ವತ್ಸ ಏನುಮಾಡು ಪ್ರಾಣಕೊಂಬುವೇನು ತಾನು ಗಾಭರಿಗೊಂಡು ಧ್ಯಾನಿಸುತ ಆ ರಾಜ ಮಾನಿನಿಗೆ ನುಡಿದ ಬಹು ದೀನನಾಗಿ 1 ರಾಗ:ದಂತಿ ಆದಿತಾಳ ಅರಿಯೆ ತುರುಗಳ ಕಾಯ್ಕೊಂಡು ಬರುವೆ ನಾ ಇದಹೊರ್ತು ಪ ಕಟ್ಟುವರ್ಯಾರೊ ಅರಿಯೆ ಬರಿದೆ ನೀ ಎನ್ನ ಮೇಲೆ ಹರಿಹಾಯುವದ್ಯಾಕೆ ಅರಿಯೆ 1 ಪಾಲಾಗುವುದೊ ಅರಿಯೆ ಸರಸಾಗಿ ತಿಳಿನೀನು ನೆರೆಯೊರೆಯವರನಾ ಅರಿಯೆ 2
--------------
ಅನಂತಾದ್ರೀಶ - ಕಥನಕಾವ್ಯಗಳು
ಕಥನಾತ್ಮಕ ಹಾಡುಗಳು ಉದ್ಭವಿಸಿದ ಕಂಬದಿ | ಶ್ರೀ ನಾರಸಿಂಹ ಉದ್ಭವಿಸಿದ ಕಂಬದಿ ಪ. ಉದ್ಭವಿಸಿದ ಬೇಗ ಪದ್ಮಸಂಭವಪಿತ ಮುದ್ದು ಬಾಲಕನ ಉದ್ಧರಿಸುವೆನೆಂದು ಅ.ಪ. ದುರುಳನು ಪ್ರಹಲ್ಲಾದನು | ಪರಿಪರಿಯಿಂದ ಕರಕರಪಡಿಸೆ ಕುವರನ ನರಹರಿ ಎನ್ನನು ಪೊರೆ ಎಂದು ಮೊರೆಯಿಡೆ ಸುರರು ನೋಡುತಿರೆ ಭೋರ್ಗರೆಯುತ ಆ ಕ್ಷಣ 1 ಎಲ್ಲಿರುವನು ಹರಿ ಎಂದು | ದೈತ್ಯನು ಮಗನ ಇಲ್ಲಿ ಸ್ಥಂಭದಿ ತೋರೆಂದು ಖುಲ್ಲನು ಹಿಂಸಿಸೆ ಸರ್ವತ್ರದಿ ಶ್ರೀ- ನಲ್ಲನಿರುವನೆಂದು ಸಾಧಿಸೆ ಭಕ್ತನು 2 ತನಯನ ನುಡಿ ಉಳಿಸಲು | ನರಹರಿ ಹೊಸಲೊಳ್ ಇನನು ತಾ ಮುಳುಗುತ್ತಿರಲು ದನುಜನ ತೊಡೆಯ ಮೇಲಿಟ್ಟು ನಖದಲಿ ಕನಲಿ ಸೀಳಿ ಕರುಳ್ಮಾಲೆ ಧರಿಸುತ 3 ಸುರರು ಜಯ ಜಯವೆನ್ನುತ | ಪೊಗಳುತ್ತಲಿರೆ ನರಹರಿ ಉಗ್ರ ತಾಳುತ ಸುರರು ಬೆದರಿ ಪ್ರಹ್ಲಾದನ ಕಳುಹಲು ಕರಿಗಿರಿ ನರಹರಿ ಶಾಂತನೆನಿಸಿದ 4 ತಾಪವಡಗಿತು ಜಗದಲಿ | ವರ ಭಕ್ತನಿಂದ ಶ್ರೀಪತಿ ಲಕುಮಿ ಸಹಿತಲಿ ಗೋಪಾಲಕೃಷ್ಣವಿಠ್ಠಲ ಗುರುವರದ ಈ ಪರಿಯಿಂದ ಭಕ್ತರ ಪೊರೆಯಲು5
--------------
ಅಂಬಾಬಾಯಿ
ಕಥನಾತ್ಮಕ ಹಾಡುಗಳು ನೋಡಬನ್ನಿರಿ ಕಾರ್ಪರೇಶನ ಪಾಡಿರೈ ಸರ್ವೇಶನಾ ರೂಢಿಯೊಳು ಶೇಷಾದ್ರಿನಿಲಯನ ಕೂಡಿಕೊಂಡಿಲ್ಲಿರುವನ ಪ ಚಿಪ್ಪಗಿರಿ ದಾಸಾರ್ಯರೀತರು ಪಿಪ್ಪಲವ ಕಂಡಾಗಲೇ ಕಾರ್ಪರಾರಣ್ಯೆಂಬ ಪದದಿ ಸಂಕ್ಷಿಪ್ತ ಮಹಿಮೆಯ ಪೇಳ್ದರು 1 ಅಪರದಿಗ್ಭಾಗದಲಿ ನೋಡಲು ಸಪತ ಋಷಿಗಳ ಸ್ಥಾನವು ತ್ರಿಪಥಗಾಮಿನಿ ವ್ಯಕ್ತಳಾದಳು ತಪಕೆ ವಿಶ್ವಾಮಿತ್ರರ 2 ಯತ್ರಶ್ವೇತ ಶೃಂಗ ಕೃಷ್ಣಾಚೋತ್ತರ ವಾಹಿನಿಯೊಳು ತತ್ತದಾನ ಸ್ನಾನ ಕಾಸಿಗೆ ಉತ್ತಮವು ಫಲವೀಯಲು 3 ಚಾರುಕೃಷ್ಣಾತೀರವಿದರೊಳು ಕಾರ್ಪರಾಖ್ಯ ಮುನೀಂದ್ರನಾ ಘೋರತಪ ಕೊಲಿದರಳೆ ಮರದಾಗಾರನೆನಿಸಿದ ಧೀರನ 4 ನೀರಜಾಸನ ಮುಖ್ಯ ಸುರ ಪರಿಹಾರ ಸೇವಿತ ಚರಣನ ಸೇರಿದವರಘ ದೂರ ಮಾಡುವ ಘೋರನರಹರಿ ರೂಪನ 5 ಇಂತು ಅಶ್ವತ್ಥಾಂತರದಿ ಸಿರಿಕಾಂತನರಿಯನೆ ವಿಪ್ರರೊಳ್ ಶಾಂತ ನಾರಪ್ಪಯ್ಯನೆಂಬ ಮಹಾಂತರಿಲ್ಲಿರುತಿಪ್ಪರು 6 ದೊಡ್ಡವರ ಗುರುತರಿಯದಿವರನು ದಡ್ಡರೆನ್ನುತ ಭ್ರಾತ್ರರು ದೊಡ್ಡ ಕೃಷ್ಣಾನದಿಯೊಳಿವರನು ಕಟ್ಟಿ ಹಾಕಲು ಕೋಪದಿ 7 ಕಡಲಶಯನನ ಕರುಣದಿಂದಲಿ ದಡಕೆ ಸೇರಿದನಂತರ ದೃಢ ವಿರಾಗದಿ ವೆಂಕಟಾದ್ರಿಗೆ ನಡೆದರಾಗಲೆ ಹರುಷದಿ 8 ಶುಭ ಪಂಕಜ ಷಟ್ವದಾಯಿತ ಚಿತ್ತರು ಕೃಷ್ಣನಿರುತಿಹ ಬೆಟ್ಟದಡಿಯನು ಮುಟ್ಟಿಮಲಗಲು ಸ್ವಪ್ನದಿ9 ಇಲ್ಲಿ ದರ್ಶನವಿಲ್ಲ ನೀವಿರುವಲ್ಲಿ ಪುಣ್ಯಸ್ಥಾನವು ಪೋಗಿರೋ ಭೂಸುರ 10 ಧೇನು ರೂಪದಿ ಬರುವೆ ಕಾರ್ಪರ ಕಾನನದ ಅಶ್ವತ್ಥದಿ ಕಾಣುವುದು ಕ್ಷೀರಾಭಿಷೇಚನ ಧ್ಯಾನಿಸೆನ್ನನು ದ್ವಿಜವರ 11 ಇಂತುಸ್ವಪ್ನದಿ ಸೂಚಿಸಿದ ವೃತ್ತಾಂತವನು ಸಂಚಿಂತಿಸಿ ಕಂತು ಜನಕನ ಇಚ್ಛೆಯಿಂದಲೆ ಸಂತಸದಿ ಗಿರಿಗೊಂದಿಸಿ 12 ಮುಂದೆ ನಡೆದರು ಹಿಂದೆ ಗೆಜ್ಜೆಗಳಿಂದ ಬರುತಿಹ ಗೋಗಳ ಗೋವಿಂದನಂಘ್ರಿಯ ಸ್ಮರಿಸುತ 13 ಕುರುಕಿ ಹಳ್ಳಿಯ ಗ್ರಾಮದಿ ತಿರುಮಲೇಶನ ಕಂಡರು 14 ಗುರುತನು ಕಾಣುತ ಬಂದನು ಎನ್ನುತ 15 ಮುನಿವರನು ಸುಖದಿಂದಿರುತಿರೆ ತಿರೆ 16 ಬಂದರಲ್ಲಿಗೆ ತಮ್ಮ ಗ್ರಾಮದ ಬಂಧು ಬಾಲಕರೆಲ್ಲರು ಕಾಯುವದೆನುತಲಿ 17 ಚಾರು ಶಿಲೆಯೊಳಗೊಂದುದಿನ ಅಂಗಾರದಲಿ ಪ್ರಾಣೇಶನ ಪರಿಹಾರನುನಿಮಗೆಂದರು 18 ಪಾದ ನಿಷ್ಠೆಯಿಂದಲಿ ಸೇವಿಸೆ ಸಿದ್ಧಿಗಳಾಗ್ವವು 19 ನಾರಪ್ಪಯ್ಯರೆಂಬ ಮಹಾತ್ಮರು ಹರಿ ಸಂತತ 20 ಧರಣಿಯನು ಸಂಚರಿಸುತ ಚೆನ್ನೂರ ಗ್ರಾಮದಿ 21 ತೋರಿತಂದಿನ ರಾತ್ರಿಯೋಳ್ ಮಹಿಮೆಯಾ 22 ಭೂಪನ ಸ್ಪಪ್ನದಿ ತರುವನು ತೋರಿಸಿ 23 ಕಟ್ಟಿಸೆಲೊ ಭೂಪತಿಯೆ ಮಂದಿರ ಕೃಷ್ಣವೇಣಿಯ ಗರ್ಭದಿ ಶ್ರೇಷ್ಠನೆನ್ನಯ ಕರುಣದಿ 24 ಸುಪ್ರಭಾತದಲೆದ್ದು ನೃಪತಿಯು ಸ್ವಪ್ನಸೂಚಿತ ಸ್ಥಾನವ ಕ್ಷಿಪ್ರ ನೋಡುವೆನೆನುತ ಸೈನ್ಯದಿ ಕಾರ್ಪರಕೆ ಬಂದಿಳಿದನು25 ಆನೆಗಳು ಕಟ್ಟಿರುವ ಶಿಲೆಗಳು ಕಾಣಿಸುವ ವೀಗಾದರು ನನಸೇವಿಸಿದನು 26 ಮಂದಿರವಮೇಲ್ ನಿರ್ಮಿಸಿ ಇಂದಿರೇಶನ ಪದಕೆ ಭೂಸಂಬಂಧ ವೃತ್ತಿಯನೊಪ್ಪಿಸಿ27 ಹಿಂದೆ ನೋಡಲು ಚಂದ್ರಶೇಖರ ನಂದಿಪತಿ ಮಂದಿರಗಳು ವಂದೇ ವತ್ಸರದೊಳಗೆ ಶಿಲ್ಪಿಗಳಿಂದ ಕಟ್ಟಿದ ಶಿಲೆಗಳು 28 ವೃಷ್ಟಿಯ ಮಹಿಮೆಯ ಕಾಮಿತಾರ್ಥವನೀವುದು 29 ಮಾಸ ದೊ ಶರಧಿ ಸೇರುವ ಸಮಯದಿ 30 ಷೋಡಶ ಕರಗಳಿಂ ಹೊರಟನು ವೃಕ್ಷದಿ31 ತೀರ್ಥ ಸ್ನಾನದ ನರಹರಿ ದರ್ಶನ 32 ದಕ್ಷಿಣಾಯನ ಪರ್ವದಲಿ ಈ ವೃಕ್ಷದೆಡೆಯಲಿ ಸ್ನಾನವು ಮೋಕ್ಷ ಮಾರ್ಗಕೆ ಸಾಧನವು ಪ್ರದಕ್ಷಿಣಾದಿಕಮೆಲ್ಲವು33 ಮಂದಿರವ ಕಾಣುತಲೆ ಶ್ರೀಗೋವಿಂದ ಗೋವಿಂದೆನುತಲಿ ಬಂಧು ವರ್ಗ ಸಮೇತ ಭಕುತರ ವೃಂದ ಬರುವದು ನೋಡಿರೈ34 ಪಾಲಿನಭಿಷೇಕದಿ ಅರ್ಚನ ಪಾಲಕಿಯ ಸೇವಾವಧಿ ವಾಲಗವ ಕೈಕೊಳುತ ಭಕುತರ ಪಾಲಿಸುವ ನರಸಿಂಹನ 35 ವಾರವಾರಕೆ ಭಕ್ತಜನ ಪರಿವಾರ ಸೇವೆಯಕೊಳ್ಳುತ ಘೋರತರ ಸಂಸಾರ ಭಯಪರಿಹಾರ ಮಾಡುವ ದೇವನ 36 ತಪ್ಪದಲೆ ಪ್ರತಿವರ್ಷ ದ್ವಿಜ ಸಂತರ್ಪಣಾದಿಗಳಿಂದಲಿ ಕೊಪ್ಪರದಿ ನವರಾತ್ರ ಮೊದಲಾದುತ್ಸವಾದಿಗಳಾಗ್ವವು 37 ಹಿಂದೆ ಚಾತುರ್ಮಾಸ್ಯ ಕಾಲವು ಬಂದಿರಲು ವಿಭುದೇಂದ್ರರು ಬಂದರಿಲ್ಲಿಗೆ ಶಿಷ್ಯರಾದ ಯತೀಂದ್ರ ನಾರಾಯಣಾರ್ಯರು38 ಆ ಸಮಯದಿ ರಘುನಾಥ ತೀರ್ಥ ಯತೀಶರಿಲ್ಲಿಗೆ ಬಂದರು ತೋಷದಲಿ ವಿಭುದೇಂದ್ರ ತೀರ್ಥಮುನೀಶರವರಿಗೆ ಪೇಳ್ದರು39 ವೃಕ್ಷದಲಿ ಸನಿÀ್ನಹಿತ ನರಹರಿಯಕ್ಷನೆದುರಿಗೆ ನಮ್ಮಯ ಶಿಷ್ಯರೋದುವ ಗ್ರಂಥದರ್ಥ ಪರೀಕ್ಷೆ ಮಾಡಿರಿ ಎಂದರು40 ಮೌನಿರಘುನಾಥಖ್ಯರವರನು ಏನು ಓದುತಿರೆನ್ನಲು ಆನುಪೂರ್ವಿ ಸುಧಾಖ್ಯ ಗ್ರಂಥಾರ್ಥಾನುವಾದವ ಮಾಡಲು41 ಮೇದಿನಿಯಲಿ ವಾದಿಜಯ ಸಂಪಾದಿಸಿರಿ ನೀವೆಂದರೂ ಸಾದರದಿ ನಿಮಗೆಲ್ಲ ಜನ ಶ್ರೀಪಾದರಾಜರು ಎನ್ನಲಿ42 ಸೇವೆಯ ಮಾಡಲು ಒಂದು ವತ್ಸರದೊಳಗೆ ಸತ್ಯಾನಂದ ಯತಿಗಳ ಜನನವು43 ಸತ್ಯಧರ್ಮರು ಬಂದರೀ ಸುಕ್ಷೇತ್ರದರ್ಶನ ಮಾಡಲು ಮುತ್ತಿನ್ಹಾರವ ಪದಕ ಸಹಿತಾಗಿತ್ತರೀ ನರಸಿಂಹಗೆ 44 ಇದ್ದರಿಲ್ಲಿ ಜ್ಞಾನವೃದ್ಧ ಜನಾರ್ದನಾಭಿದ ಒಡೆಯರು ಶುದ್ಧ ಮನದಲಿ ನರಹರಿಯ ಪದಪದ್ಮ ಸೇವೆಯ ಮಾಡುತ45 ಬಿಡದೆ ತಪವಾಚರಿಸಿ ಕಾರ್ಪರದೊಡೆಯನನುಪಮ ಕರುಣವ ನಿತ್ಯದಲಿ ಪರಿಶುದ್ಧ ಮಧುಕರ ವೃತ್ತಿಯಿಂ ತಂದನ್ನವ ಎತ್ತಿ ವೃಕ್ಷಕೆ ಕಟ್ಟುವರು ಇದು ಬುತ್ತಿ ನಾಳೆಗೆ ಎನ್ನುತ47 ಪನ್ನಗಾರಿ ಧ್ವಜನಿಗರ್ಪಿಸಿ ಉಣ್ಣುತಿಹರಾನಂದದಿ48 ಮಂದಮತಿ ಭೂದೇವನೊಬ್ಬನು ನಿಂದೆ ಮಾಡಿದನಿವರನು ತಂದು ಕಟ್ಟಿದ ಅನ್ನ ತಂಗಳೆಂದು ತಿಳಿಯದೆ ಉಂಬರು 49 ನಿಂದೆ ಮಾಡಿದ ವಿಪ್ರನನು ಕರೆಸೆಂದರರ್ಚನ ಸಮಯದಿ ತಂದು ವೃಕ್ಷದಿ ಕಟ್ಟಿದನ್ನವ ತಂದು ಕೆಳಗಿಡಿರೆಂದರು 50 ಪೋಗಲು ವಿಪ್ರನು ಕೆಳಗಿಂತೆಂದರು
--------------
ಕಾರ್ಪರ ನರಹರಿದಾಸರು
ಕಥೆಕಾರ ದೇವಿಯೆಂದು ಕಥೆಯ ಹೇಳಿದ ತೆರದಲಿಮಿತಿಯಿಲ್ಲದ ಮೃಷೆ ಸಂಸಾರವದು ಇರುತಿಹುದು ಆಪರಿಯಲ್ಲಿ ಪ ಸತಿಯಂಬುವಳಾರು ತಾವಾರುಸುತರಿಂದ ಗತಿಯಾಗುವುದೆಲ್ಲಿಮಿತಿಯಿಲ್ಲದ ಬಹುಬಂಧು ಬಳಗಗಳುಬಹರೆ ತನ್ನ ಹಿಂದಲ್ಲಿ1 ಹಗೇವಿನ ಬತ್ತವು ಬಣಬೆಯ ಸೊಪ್ಪೆಯುಬಗೆ ಬಗೆವಸ್ತುವು ತಾನೆಲ್ಲಿಬಿಗುಮಿಗೆಯಾದ ದನಕರುವುಗಳುಬರಲಿಲ್ಲವು ತಾವಂದದಲ್ಲಿ 2 ತಳ್ಳಿಗೆ ತಳ್ಳಿ ಸುಳ್ಳು ಸಂಸಾರವುತೆಗೆಲೀಯದು ಈ ಬಗೆಯೆಲ್ಲಿಎಲ್ಲಕೆ ಮಂತ್ರವು ತಾ ಚಿದಾನಂದನುಎನಲಿಕೆ ಪಾಪವು ಇನ್ನೆಲ್ಲಿ 3
--------------
ಚಿದಾನಂದ ಅವಧೂತರು
ಕಂದ ಕೃಷ್ಣ ನೀನು ಪವಡಿಸಲೆಂದು ನಾ- ನೊಂದು ಕಥೆಯ ಪೇಳ್ವೆನೋ ನಂದನನೇ ಒಂದು ಕಥೆಯ ಪೇಳ್ವೆನು ಪ ಹಿಂದಿನ ಯುಗದಲ್ಲಿ ಶ್ರೀರಾಮನೆಂಬೊರ್ವ ಕಂದ ಕೌಸಲ್ಯಗಾದ ಮುಂದೆ ಪೇಳು ಹುಂಕಾರದಿ ಕೇಳಿದೆ ಚಂದವಾದೀ ಕಥೆಯ ಸುಧೇಯ 1 ಆತನ ಪತ್ನಿ ಸುಶೀಲೆ ಸೀತೆಯೆಂದು ಖ್ಯಾತಳಾದಳು ಜಗದಿ ಮೂಡಿದನೆಂದೆ ಹುಂ ಮಾತೆ ಮುಂದಕೆ ಪೇಳು ಸೀತಾರಾಮರ ಕಥೆಯು ಸುಶ್ರಾವ್ಯ 2 ಪಂಚವಟಿಯಲಿ ಸಂಚರಿಸುತ್ತಿರೆ ಪಂಚದ್ವಯಾನನನು ಕೊಂಚ ಮಾತ್ರ ಹುಂಕಾರವ ನುಡಿ ವಿ- ರಿಂಚಿ ಪಿತನು ಮುನಿದಾ ಸದ್ದಾದ3 ಮಿಥ್ಯಾಯೋಗಿ ಯಾಗಿ ಸತ್ಯಮಹಿಮಳ ತಾ- ನೆತ್ತಿ ಕೊಂಡೋದನಯ್ಯ ಒತ್ತರಿಸಿತು ಕೋಪ ಮತ್ತೆ ನುಡಿದ ಹರಿ ಎತ್ತ ಸೌಮಿತ್ರೆ ಧನುರ್‍ಧರರ ಧನುರೇತ್ತ ಸೌಮಿತ್ರಿ ಧನುರ್ 4 ಪುಟ್ಟ ಕೂಸÉ ಆರ್ಭಟವೆಷ್ಟು ಮಾಡುವೆ ನಿಟ್ಟಿಪುದಸದಳವು ಥsÀಟ್ಟನೆ ಮಲಗೈಯ್ಯಾ ದಿಟ್ಟಿ ನರಸಿಂಹವಿಠಲ ಪಟ್ಟರಿಸುವೆನಯ್ಯ ರಂಗೈಯ್ಯಾ ಪಟ್ಟರಿಸುವೆನಯ್ಯಾ 5
--------------
ನರಸಿಂಹವಿಠಲರು
ಕಂದ||ಗುರುವಾಸುದೇವರಂಘ್ರಿಸ್ಮರಣೆಗೆ ಸಂತೋಷ'ೀವ ಒಬ್ಬಟ್ಟಿನ ನುತಿವೆರಸಿದ ಕೀರ್ತನೆ ಪೇಳುವೆಹರುಷದಿ ಲಾಲಿಪುದು ಸುಜನರ್ಬಾಲೋಕ್ತಿಯನೂ1ಬೆಲ್ಲವು ಗೋಧಿಯು ತೊಗರಿಯುಒಳ್ಳೆಣ್ಣೆಯು ತುಪ್ಪವೆಂಬೀಯೈದ ನುತಿಯಲುಎಲ್ಲಾ ಲೋಕವ ನಿರ್'ುಸಿಚಲ್ಲಿದಭೂತಗಳು ತತ್ವಾರ್ಥಕ್ಕಾಸ್ಪದ'ಲ್ಲ 2ಹರುಷದಲಿದರೊಳು ಬೆರೆದಿಹಪರಮನು 'ಂಗಡಿಸಿ ದೂಸಿ ಮತ್ತೊಡಗೂಡಿಸಿಕರಗುತ ಪ್ರಮದರಿದರೊಳುನೆರೆಪೊಂದುವನೀಗ ಜೀವನಿದು ತತ್ವಾರ್ಥವೂ 3
--------------
ತಿಮ್ಮಪ್ಪದಾಸರು
ಕಂದನ ತೂಗಿದಳು ಯಶೋದೆ ಕಂದನ ತೂಗಿದಳು ಪ ಇಂದಿರಾರಮಣನ ಅಂದವದನದಲಿ ಮಂದಹಾಸವ ನೋಡಿ ನಂದದಿ ಹಿಗ್ಗುತ ಅ.ಪ ತಾಮರಸಾಕ್ಷನ ಕೋಮಲಾಂಗವ ನೋಡಿ ಆ ಮಹಿಳೆಯು ಬಲು ಪ್ರೇಮಭರಿತಳಾಗಿ 1 ಜಗಜಗಿಸುವ ನವಮಣಿಯ ತೊಟ್ಟಿಲಲಿ ಜಗದೀಶನು ತನ್ನ ಮಗನೆಂದು ತಿಳಿಯುತ 2 ಪದಮನಾಭನನು ಹೃದಯದಿ ನೆನೆಯುತ ಮದದಿಂದಲಿ ದಿವ್ಯ ಪದಗಳ ಪಾಡುತ 3 ಲಕ್ಷ್ಮೀಶನು ಇತ್ತ ಪುತ್ರಭಿಕ್ಷೆಯೆಂದು ಅಕ್ಷಿಗಳಲಿ ಸುಖಬಾಷ್ಪವ ಸುರಿಸುತ 4 ತನ್ನ ಸೌಭಾಗ್ಯವು ಅನ್ಯರಿಗಾವುದೆಂದು ಸತಿ 5
--------------
ವಿದ್ಯಾಪ್ರಸನ್ನತೀರ್ಥರು
ಕಂದನಿಗೆ ಕಾಲಿಲ್ಲವಮ್ಮ, ಪುಟ್ಟಿ-ಪ ದಂದಿಂದ ಈ ಅಂಬೆಗಾಲು ಬಿಡದಮ್ಮ ಅ.ಪ ಮಳೆ ಹೊಳೆ ಕತ್ತಲೊಳು ತರಳ ಮಗ ಬೆದರಿದನೊಕಳೆಯುಳ್ಳ ಮುಖಕೀಗ ಗ್ರಹ ಸೋಕಿತೋಎಳೆಯ ಬೆಳದಿಂಗಳೋಳೆತ್ತಣ ದೃಷ್ಟಿ ತಾಕಿತೊಲಲನೆ ಮೀಸಲ ಹಾಲು ಮೆರೆದೆರೆದ ಪರಿಯೊ 1 ಬೆಣ್ಣೆಯನು ಮೆಲ್ಲುತ ಬೆದರಿ ಬಾಯಾರಿದನೊಉಣ್ಣೆ ಪೂತನಿ ಮೊಲೆಯ ವಿಷ ಸೋಂಕಿತೋಅಣ್ಣ ಪಾಪಿಯ ಭಯಕೆ ಅಂಜಿ ಕಾಲಿಟ್ಟನೊಹೆಣ್ಣು ದೈತೇಯರ ಕಾಲಲಿ ಬಂದ ಸರಕೊ 2 ಧುರವಿಜಯ ಶ್ರೀಕೃಷ್ಣರಾಯಗೆ ನಿಮ್ಮಹರದೇರಂದವ ತೋರಬಂದ ಪರಿಯೋಧರೆಗಧಿಕ ವಿದ್ಯನಗರವಳಿತೆಂದು ಉದಯಗಿರಿಯಿಂದ ಬಂದ ಮುದ್ದು ಬಾಲಕೃಷ್ಣಗೆ 3
--------------
ವ್ಯಾಸರಾಯರು
ಕಂದನೆಂದೆನಿಸಿದ ಕೌಸಲ್ಯದೇವಿಗೆ ರಾಮ ಎನಬಾರದೆ ಇಂದಿರಾಪತಿ ರಾಮಚಂದ್ರಗೆ ಶ್ರೀರಘುರಾಮ ಎನಬಾರದೆ 1 ಶಿಶುವಾಗಿ ಅವತಾರ ಮಾಡಿದ ದಶರಥನಲಿ ರಾಮ ಎನಬಾರದೆ ಋಷಿಯಜ್ಞ ಸಲಹಿ ರಕ್ಕಸರನೆ ಕೊಂದ ಶ್ರೀರಾಮ ಎನಬಾರದೆ 2 ಸಾತ್ವಿಕ ದೈವವೆ ತಾಟಕಾಂತಕ ಶ್ರೀರಾಮ ಎನಬಾರದೆ 3 ಪಾದನಖವು ಸೋಕಿ ಪಾದನಾಶನವಾಗೆ ರಾಮ ಎನಬಾರದೆ ಶ್ರೀಪತಿ ಕರುಣದಿ ಶಿಲೆಯು ಸ್ತ್ರೀಯಾಗಲು ರಾಮ ಎನಬಾರದೆ 4 ಸಕಲ ಸದ್ಗುಣ ಪೋಗಿ ಮಿಥಿಲಾ ಪಟ್ಟಣದಿ ರಾಮ ಎನಬಾರದೆ ತ್ರಿಪುರ ಸಂಹಾರ ತ್ರಿನೇತ್ರನ ಧನುವೆತ್ತಿ ರಾಮ ಎನಬಾರದೆ 5 ಚೆಲ್ವೆ ಜಾನಕಿ ಮಲ್ಲಿಗೆಯ ವನಮಾಲೆಯು ರಾಮ ಎನಬಾರದೆ ವಲ್ಲಭಗ್ಹಾಕಲು ಫುಲ್ಲಲೋಚನೆ ಸೀತಾರಾಮ ಎನಬಾರದೆ 6 ಮಂಗಳ ಮಹಿಮೆ ಸೀತಾಂಗನೆ ಕೊರಳಿಗೆ ರಾಮ ಎನಬಾರದೆ ಮಾಂಗಲ್ಯ ಬಂಧನ ಮಾಡಿದ ಮಹಾತ್ಮನು ರಾಮ ಎನಬಾರದೆ 7 ಜಗದೇಕ ಸುಂದರಿ ಜಾನಕಿಯನೆ ಗೆದ್ದ ರಾಮ ಎನಬಾರದೆ ಜಗದೀಶ ಜನಕಗೆ ಜಾಮಾತನೆನಿಸಿದೆ ರಾಮ ಎನಬಾರದೆ 8 ಮುದ್ದು ಜಾನಕಿ ಕೂಡಿ ಅಯೋಧ್ಯಕೆ ಬರುತಿರೆ ರಾಮ ಎನಬಾರದೆ ಮಧ್ಯ ಮಾರ್ಗದಿ ಬಂದಿದ್ದನು ಭಾರ್ಗವ ರಾಮ ಎನಬಾರದೆ 9 ತನ್ನ ತಾನೇ ಗೆದ್ದು ಧನ್ಯನೆಂದೆನಿಸಿದಿ ರಾಮ ಎನಬಾರದೆ ಬ್ರಹ್ಮ ಶಂಕರರಿಂದಿನ್ನು ಉತ್ತಮನಾದ ರಾಮ ಎನಬಾರದೆ 10 ಪಟ್ಟಗಟ್ಟಲು ಪರಮೋತ್ಸವ ಕಾಲಕ್ಕೆ ರಾಮ ಎನಬಾರದೆ ದುಷ್ಟ ಕೈಕೆಯ ನಿಷ್ಠೂರ್ವೊಚನವ ಕೇಳಿದ ರಾಮ ಎನಬಾರದೆ 11 ಆ ಲಕ್ಷುಮಿಯ ಮಾತಲಕ್ಷ್ಯವ ಮಾಡದೆ ರಾಮ ಎನಬಾರದೆ ಲಕ್ಷ್ಮಣ ಲಕ್ಷ್ಮಿ ಕೂಡ್ವನವಾಸ ತಿರುಗಿದ ರಾಮ ಎನಬಾರದೆ 12 ಸತಿ ಆದೇನೆಂದಸುರೆಯ ರಾಮ ಎನಬಾರದೆ ನಾಶÀರಹಿತ ಕಿವಿ ನಾಸಿಕನಳಿಸಿದ ಶ್ರೀ ರಾಮ ಎನಬಾರದೆ 13 ದಂಡಕಾರಣ್ಯದಿ ಕಂಡು ಮಾರೀಚನ್ನ ರಾಮ ಎನಬಾರದೆ ಹಿಂದ್ಹೋಗೆ ರಾಘವ ಬಂದ ರಾವಣನಲ್ಲೆ ರಾಮ ಎನಬಾರದೆ 14 ಘಾತಕ ರಾವಣ ಜಗನ್ಮಾತೆನೊಯ್ಯಲು ರಾಮ ಎನಬಾರದೆ ಸೋತು ಜಟಾಯು ಯುದ್ಧವ ಮಾಡಿ ತಾ ಬೀಳಲು ರಾಮ ಎನಬಾರದೆ 15 ಒಲಿದು ಸುಗ್ರೀವಗೆ ವಾಲಿ ವಧೆಯ ಮಾಡಿ ರಾಮ ಎನಬಾರದೆ ವಾನರಗಳ ಕೂಡಿ ವಾರಿಧಿಕಟ್ಟಿದ ಶ್ರೀರಾಮ ಎನಬಾರದೆ16 ಲೋಕ ಮಾತೆಯ ಲಂಕಾನಾಥ ತಾ ಒಯ್ದಾಗ ರಾಮ ಎನಬಾರದೆ ಸೀತಾಕೃತಿಯನಿಟ್ಟಶೋಕ ವನದೊಳು ರಾಮ ಎನಬಾರದೆ 17 ಮಂಡೋದರಿಯ ಗಂಡನ್ನ ದಶಶಿರಗಳ ರಾಮ ಎನಬಾರದೆ ಚೆಂಡನಾಡಿದ ಕೋದಂಡ ಪಾಣಿಯ ಶ್ರೀರಾಮ ಎನಬಾರದೆ 18 ಪ್ರೀತಿಂದ್ವಿಭೀಷಣಗೆ ಪಟ್ಟವಗಟ್ಟಿ ರಾಮ ಎನಬಾರದೆ ಸಿಂಧು ದಾಟಿದ ರಾಮ ಎನಬಾರದೆ 19 ಆದಿ ಲಕ್ಷುಮಿ ಕೂಡಿ ಹೋದನಯೋಧ್ಯಕೆ ರಾಮ ಎನಬಾರದೆ ಶ್ರೀದೇವಿ ಸಹಿತ ಪಟ್ಟಣ ಹೊಕ್ಕ ಪಟ್ಟಾಭಿರಾಮ ಎನಬಾರದೆ20 ಭರತ ಸುಮಿತ್ರ ಕೌಸಲ್ಯಗೆ ಸುಖವಿಟ್ಟ ರಾಮ ಎನಬಾರದೆ ಮುಕ್ತಿದಾಯಕ ಮುಂದೆ ಬಿಡದೆ ಕಾಪಾಡುವ ರಾಮ ಎನಬಾರದೆ21 ಪತ್ನಿ ವಾರ್ತೆಯ ತಂದ ಪವನಸುತಗೆ ಒಲಿದ ರಾಮ ಎನಬಾರದೆ ಸತ್ಯ ಲೋಕದ ಆಧಿಪತ್ಯವ ಕೊಟ್ಟ ಶ್ರೀ ರಾಮ ಎನಬಾರದೆ22 ರಾಮ ರಾಮನು ಎಂದು ಕÀರೆಯೆ ಭಕ್ತಿಯ ನೋಡಿ ರಾಮ ಎನಬಾರದೆ ಪ್ರೇಮದಿ ತನ್ನ ನಿಜಧಾಮವ ಕೊಡುವೋನು ರಾಮ ಎನಬಾರದೆ 23 ಅರಸಾಗಯೋಧ್ಯವನಾಳಿ ಯದುಕುಲದಲಿ ರಾಮ ಎನಬಾರದೆ ಹರುಷದಿ ಭೀಮೇಶ ಕೃಷ್ಣನಾಗ್ಯುದಿಸಿದ ರಾಮ ಎನಬಾರದೆ 24
--------------
ಹರಪನಹಳ್ಳಿಭೀಮವ್ವ