ಒಟ್ಟು 15236 ಕಡೆಗಳಲ್ಲಿ , 134 ದಾಸರು , 5865 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನೆಂದ್ಹೇಳಲಿ ನಾನು | ಸಾಧುರಾ ಮಹಿಮೆಯನು | ಮನವ ವುನ್ಮನಮಾಡೀ | ಘನಸುಖದೊಳುಕೂಡಿ | ಆನಂದದೊಳಗಿಹನು ಪ ಬಹುಮಾತವನಾಡಾ | ಮೌನವಹಿಡಿದುಕೂಡಾ | ಸಹಜದಿ ನುಡಿವಂದಾ | ನಾಡಿದ ರದರಿಂದಾ | ಸ್ವಹಿತದ ಸುಖನೋಡಾ 1 ಅರಿಯಾನಂತಿಹನಲ್ಲಾ | ಅರಿವನು ಉಳಿದಿಲ್ಲಾ | ಅರಹು ಮರಹು ಮೀರಿ | ಕುರ್ಹುವಿನ ಮನೆಸೇರಿ | ಅರಿಸುಖ ಸಮವೆಲ್ಲಾ 2 ಸಾಧುರ ನಿಜವೆಲ್ಲಾ | ಸಾಧು ಆದವ ಬಲ್ಲಾ ಸಾಧುರ ವೇಷದಿ | ಉದರವ ಹೊರೆಯುತಾ | ಬೋಧಿಸುವದಲ್ಲಾ 3 ಆಶೆಯಂಬುದು ಬಿಟ್ಟು ವೇಷವ ಕಳೆದಿಟ್ಟು | ಲೇಸಾಗಿ ಗುರುವರ | ಮಹಿಪತಿಸ್ವಾಮಿಯಾ | ಧ್ಯಾಸದಿ ಬೆರೆತಿಹನು 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೆಂದ್ಹೇಳಲಿ ಸ್ವಾನಂದ ಘನ ಸುಖವು ಧ್ರುವ ಮಾತಿನಂತಲ್ಲ ಜ್ಯೋತಿರ್ಮಯದ ಸುಖ ನೇತಿ ನೆÉೀತಿವೆಂಬುದು ಶ್ರುತಿವಚನ 1 ಹೋಲಿಕೆಯ ಮಾತಿಗಿದು ಕೇಳು ಸಿಲುಕುವುದಿಲ್ಲ ಮೂಲ ತಿಳಿದವನೆ ಬಲ್ಲ ಮ್ಯಾಲೆ ಮಂದಿರದ 2 ಅಂಜನೆ ಇಟ್ಟ ಗುರು ಕೃಪೆಯಿಂದ ನಿಜ ಗುರುತು ಕಂಡವನೆ ಬಲ್ಲ ಹರಿಮಹಿಮೆಯ 3 ಸ್ವಾನುಭವದ ಸುಖಜ್ಞಾನಿಗಳಿಗಲ್ಲದೆ ನೀನು ನಾನೆಂಬವರಿಗೆ ಖೂನ ತಿಳಿಯದು 4 ಮನಕರಿಗಿ ಮಹಿಪತಿ ಘನ ಬೆರೆದ ಗುರುತ ಏನೋ ಎಂತೋ ತಿಳಿ ಮಾತ ಆನಂದಭರಿತ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏನೆಂದ್ಹೇಳಲಿರಂಗನಟ್ಟುಳಿ ಮಾನವರಂತಿವನಲ್ಲಾ ತಾನಾರಿಗೆ ತನ್ನೆಲೆಗುಡ ಗೋಪೀ ಮಾನಿನಿಮಗ ಬಲುಹೊಲ್ಲಾ ಪ ಕೆಳಗಿಲ್ಲದಲಿರೆ ಗೋರಸ ಭ್ಯಾಂಡ್ಯವು | ನೆಲವಿನ ಅಡಕಲ ನೋಡಿ ಅದು | ನಿಲಕದಲಿರೆ ಕೈಗೂಡಿ ಕಡ | ಗೋಲಿಲಿ ಯಜ್ಞ ಮಾಡೀ | ಗೆಳೆಯರ್ವೆರ ಸೈದ ಬಲುಸೂರ್ಯಾಡಿ | ಸಿಲುಕದ ಲ್ಹೋಗುವ ಪೋಡಿ | 1 ಇಕ್ಕಿದ ಕದಗಳು ಇಕ್ಕಿರಬೇಕು | ಫಕ್ಕನೆ ಮನೆಯೊಳು ಸುಳಿದು | ಚಿತ್ತಕ ಮೋಹಿನಿಂದು ಅವ | ರಕ್ಕರದಲಿ ನೆರೆದು ಚಿಕ್ಕ ಬಾರಕೆ | ಠಕ್ಕಿಸಿ ಹೊರುವ ಆ ಮಕ್ಕಳಾಟಿಕೇನಿದು2 ಖೂನಕೆ ಬಾರದೆ ತಾನಲ್ಲಿದಲಿಹ | ನಾನಾ ವೃತ್ತಿಗೆ ಬಂದು ಇದು | ಧೇನಿಸಿ ನೆಲೆ ತಿಳಿಯದ | ನಾನಾ ನೆಂಬವರಿಗೆ ಇದು | ಶ್ರೀನಿಧಿ ಗುರುಮಹಿಪತಿ ಪ್ರಭುವಿನ | ಅನುಮಾನದಲೇ ದೂರುವುದು3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನೆನ್ನುತ್ಹಳಿಯಲಿ ನಿನ್ನ | ನಾನಾವಿಧದಿ ಬೆಳಗುವ ಮಹಮಹಿಮನ ಪ ಸಾಗರ ನಿಲಯನೆಂದೆನಲೇ ನೀಗದ್ವೊಯ್ಕುಂಠ ಮೇಲು ಮಂದಿರನ ರಾಗದಿಂ ದ್ವಾರಕೆ ಪುರಮನೆಯವನೆನಲೇ ಯೋಗದಿಂದಣುರೇಣುತೃಣದಿ ವ್ಯಾಪಕನ 1 ಪನ್ನಂಗ ಹಾಸಿಗೆ ಮಾಡಿಹ್ಯನೆನಲೇ ಉನ್ನತ್ಹಾಸಿಗೆಯ ಮೇಲೆ ಮಲಗಿಕೊಳ್ವವನ ಭಿನ್ನವಿಲ್ಲದೆ ದರ್ಭೆಶಾಯಿಯೆಂದೆನಲೇನು ಚಿನ್ನಮಂಚದ ಮೇಲೆ ಲೋಲ್ಯಾಡುವವನ 2 ಹೊಟ್ಟಿಗ್ಹುಲ್ಲ ತಿಂದವನೆನಲೇ ಶಿಷ್ಟ ದಿವಿಜರಿಟ್ಟ ಮೃಷ್ಟಾನ್ನುಣ್ವವನ ಕೊಟ್ಟ ಹಣ್ಣಿನ ತೋಟ ಹಸಿದು ತಿಂದವನೆನೆ ಸೃಷ್ಟಿ ಈರೇಳಕ್ಕೆ ಅನ್ನ ಕೊಡುವವನ 3 ಅಸುಬಿಟ್ಟ ದಿಕ್ಕಿಲ್ಲದನೆನಲೇ ಅಸಮಲಬಲವುಳ್ಳಂಥ ಯಾದವಾರ್ಯನ ಕುಸುಮನಾಭಂಗೆ ಸಂಸಾರಿಯೆಂದೆನಲೇನು ಎಸೆವ ಪರವಸ್ತು ನಿರ್ಬಯಲು ನಿರ್ಮಯನ 4 ಅಳವಲ್ಲ ಎನಗೆ ನಿನ್ನ ವೊಲಿರೆ ದಿವ್ಯ ಮಹಿಮೆ ತಿಳಿಯುವ ತ್ರಾಣ ಒಲಿದು ಚರಣದಾಸರಾಳಾಗಾಳುವೆನೆಂದು ಇಳೆಯೊಳು ಸಾರುವೆ ನಳಿನಾಕ್ಷ ಶ್ರೀರಾಮ 5
--------------
ರಾಮದಾಸರು
ಏನೆಂಬೆ ನಿಮ್ಮ ಕರುಣವು ದೇವವರ್ಯ, ಶ್ರೀಮ- ಪ ದಾನಂದತೀರ್ಥಾರ್ಯ ಹರಿಕಾರ್ಯಧುರ್ಯ ಅ.ಪ. ವಾರಿಧಿಯ ಗೋಷ್ಪಾದ ನೀರಂತೆ ದಾಟ್ಯಂದುಮಾರು ಮಲೆತಾಕ್ಷನನು ಮುರಿದು ಮೆರೆದೆಸಾರಿ ಬಹ ರಕ್ಕಸರ ಮುರಿದÉೂಟ್ಟಿ ನೀನಿಂದುಮೇರೆಯಿಲ್ಲದ ಭವಾಂಬುಧಿಯ ದಾಟಿಸಿದೆ 1 ದಾನವನಶೋಕವನ ಕಿತ್ತು ಈಡ್ಯಾಡಂದುಶ್ರೀನಾಥಗೆನುತ ಲಂಕೆಯನುರುಪಿದೆಮಾನವರ ಶೋಕವನ ಬೇರೊರಸೆ ಕಿತ್ತಿಂದುದಾನವರಿಹ ಪುರವ ಪೂರೈಸಿ ಮೆರೆದೆ 2 ಬೇಗ ಸಂಜೀವನವ ತಂದಿತ್ತು ಪೊರೆದ್ಯಂದುನಾಗಪಾಶದಿ ನೊಂದ ಕಪಿಕಟಕವಈಗ ಹರಿಭಕುತಿ ಸುಧೆಯ ನೆರೆದು ಪಾಲಿಸಿದೆರಾಗದಿಂ ಭವಪಾಶಬದ್ಧ ಜನರುಗಳನ್ನು 3 ಭವಾಬ್ಧಿ ಮಗ್ನ ಜನಗಳನಿಂದು 4 ಹತ್ತು ದಿಕ್ಕನು ಗೆಲಿದು ರಾಜಸೂಯದಿ ಅಂದುಚಿತ್ತೈಸಿ ಹರಿಗಗ್ರ ಪೂಜೆಯನು ಮಾಡಿದೆಹತ್ತೆರಡು ಮತ್ತೊಂದು ದುರ್ಭಾಷ್ಯ ಜರಿದಿಂದು ಬಿತ್ತರಿಸಿದೆ ಭಾಷ್ಯದಿಂದಗ್ರಪೂಜೆಯನು 5 ದ್ರೌಪದಿಯ ಸಂತವಿಟ್ಟಂದು ಮುಡಿ ಪಿಡಿದೆಳೆದಪಾಪಿ ದುಶ್ಶಾಸನನ ಬಸುರನ್ನು ಬಗೆದೆಪಾಪಿ ಜನರುಗಳೆಳೆಯೆ ವೇದಾಂತ ದೇವಿಯರಶ್ರೀಪತಿಗೆ ಸೇರಿಸಿದೆ ಭಾವವರಿದಿಂದು 6 ಅಂದು ಕಲಿಯಂಶ ದುರ್ಯೋಧನನ ಸಂದುಗಳಕುಂದದೆ ಮುರಿದೆ ಗದೆಯಿಂದ ಸದೆದುಇಂದು ಕಲಿಯನನೇಕ ಶಾಸ್ತ್ರ ಶಸ್ತ್ರಗಳಿಂದಕೊಂದೆಳೆದೆ ಹರಿಯ ಮನ್ನೆಯದಾಳು ಭಳಿರೆ 7 ಶ್ರುತಿಪಂಕಜಗಳರಳೆ ಅಜ್ಞಾನ ತತಿಯೋಡೆಗತಿಗಳಡಗೆ ಮಿಥ್ಯವಾದಿ ಖಳರಕುಮತಗಳು ಮುರಿಯೆ ಸತ್ಪಥವು ಕಾಣಿಸಲುವಿತತವಾಯಿತು ನಿನ್ನ ಪ್ರಭೆ ಸೂರ್ಯನಂತೆ 8 ಜ್ಞಾನಚಂದ್ರಿಕೆ ಪೊಳೆಯೆ ಭಕ್ತಿವಾರಿಧಿಯುಕ್ಕೆಮನ ಚಕೋರವು ವಿಷ್ಣುಪದದಿ ನಲಿಯೆದೀನ ಜನ ಭಯವಡಗೆ ತಾಪತ್ರಯಗಳೋಡೆಆನಂದತೀರ್ಥೇಂದು ಶ್ರೀ ಕೃಷ್ಣ ತಾ ಮೆಚ್ಚೆ 9
--------------
ವ್ಯಾಸರಾಯರು
ಏನೆಲೆ ಸಖಿ ವಾನರ ಮುಖಿ ನೀನು ಒಳ ಒಳಗೆ ಮಾಡಿದ ಯೋಚನೆ ಪ ಹಳೆಯ ಜೌಳಿಗಳು ಘಳಿಲನೆ ತಂದಿಟ್ಟು ಘನವ ಪೇಳಿಕೊಂಬೆ 1 ಭಕ್ಷ್ಯ ಭೋಜ್ಯ ನಿನ್ನ ಕುಕ್ಷಿ ತುಂಬಿದಾರು ಲಕ್ಷ್ಯವಿಲ್ಲದೆ ನಮ್ಮಾ- ನಾಕ್ಷೇಪಿಸುತ್ತಿರುವೆ 2 ಹಪ್ಪಳಾವು ಹತ್ತು ಹೋಳಿಗೆ ಇಪ್ಪತ್ತು ತಪ್ಲೇಲಿ ತಿಳಿ ತುಪ್ಪ ತಪ್ಪದೆ ಮಾಯವಾಯ್ತು 3 ಬಡವರಮ್ಮ ನಾವು ಬಡಿವಾರವೆಮಗಿಲ್ಲ ನಡುಬೀದಿಗೆ ಕಾಲ- ಚಾಚದಿರತ್ತಿಗೆ 4 ಜಲಜಾಕ್ಷ ಗುರುರಾಮ | ವಿ- ಠಲನಾ ಸ್ಮರಿಸುತ್ತಾ ಕಲಹಕಾರಿ ನೀನು ಎಲೆಯ ನೋಡಿವುಣ್ಣೆ 5
--------------
ಗುರುರಾಮವಿಠಲ
ಏನೇನಿಲ್ಲದ ಧನಹೀನನಿಗೆ ಹರಿ ನಾಮವೆ ಭಾಗ್ಯಕರ ಸಾಧಿಸು ಮುಕ್ತೀಕರ ಪ ನೊಂದನು ಮಾಡದಿರೆ ಇಂದಿನ ಜನ್ಮದೊಳಗೆ ದಾರಿದ್ರ್ಯವು ಬಂದು ಪೀಡಿಸುತಲಿದೆ ಮುಂದೆ ಸಾಧಿಸಿ ಕೊಂಬೆನೆಂದರೆ ಕೈಯೊಳೊಂದರೆ ಕಾಸಿಲ್ಲವು ಪಾಲಿಸೋ ಹರಿಯೇ 1 ಕುಟ್ಟಿ ಕೊಂದರೆ ಪಣೆಯ ನಿನ್ನಿಷ್ಟವಮನ ದಣಿಯ ಪಡೆದಷ್ಟು ಉಣ್ಣಬೇಕಲ್ಲದೆ ಪೂಜಿಸೋ ಹರಿಯೆ 2 ಮಾತ್ರವು ಸುಖವಿಲ್ಲ ಜಗದೇಕ ವಂದ್ಯನ ನೆನೆಸು ಶ್ರೀ ಲಕ್ಷ್ಮೀಶನ ಭಜಿಸಿದರೆ ಬೇಕಾದನಿತುವನಿತ್ತು ಕಡೆಗೆ ತನ್ನ ಲೋಕವ ಪಾಲಿಪನು 3
--------------
ಕವಿ ಪರಮದೇವದಾಸರು
ಏನೇನು ಬೇಕಯ್ಯ ಶ್ರೀ ಹರಿಯೆ ನಿನಗೇ ನೀನೆ ಗತಿಯೆಂದು ಸರ್ವಸ್ವವೊಪ್ಪಿಸುವೇ ಪ ತರಳನಾಗಿಹ ಧೃವನು ಘೋರ ತಪವಂಗೈಯ ಹರುಷದಿಂ ಬಾಲಕಗೆ ವರ ಪದವಿಯಿತ್ತೇ ಕರುಣಾಳು ಶ್ರೀ ಹರಿಯೇ ನಿಂನ ಮೆಚ್ಚಿಸಲಿಕ್ಕೆ ಉರುತರದ ತಪವು ಬೇಕೇನೊ ನಾನರಿಯೇ 1 ದೊರೆಯು ರುಕುಮುಂಗದನು ಯೇಕಾದಶೀವ್ರತವ ಸರಸದಿಂದಾಚರಿಸೆ ನಿಜಭಕ್ತಗೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ವ್ರತವು ಬೇಕೇನೊ ನಾನರಿಯೇ 2 ತರಳ ಪ್ರಲ್ಹಾದ ತಾ ಹರಿನಾಮ ಕೀರ್ತಿಸಲು ದುರುಳ ತಾತನ ಕೊಂದು ಕಂದನನು ಪೊರೆದೆ ಕರುಣಾಳು ಶ್ರೀ ಹರಿಯೆ ನಿಂನÀ ಮೆಚ್ಚಿಸಲಿಕ್ಕೆ ಉರುತರದ ಕೀರ್ತನೆಯು ಬೇಕೋ ನಾ ನಾನರಿಯೇ 3 ಭರದಿ ದುಶ್ಯಾಸನನು ಮಾನವಂ ಕಳಯುತಿರೆ ಸರಳೆಗೇ ನೀನೊಲಿದು ಅಕ್ಷಯವನಿತ್ತೇ ಕರುಣಾಳು ಶ್ರೀಹರಿಯೆ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸ್ತೋತ್ರಗಳು ಬೇಕೋ ನಾನರಿಯೇ4 ಧರಣಿಸುತೆ ಜಾನ್ಹಕಿಯೆ ಹುಡುಕಲ್ಕಿ ವಿಕ್ರಮದಿ ಶರಧಿಯನು ದಾಟಿದಗೆ ಭರದಿಂದಲೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ದಾಸ್ಯತ್ವ ಬೇಕೋ ನಾನರಿಯೇ 5 ನಿರುತದಾಸರು ನಿನ್ನ ಸೇವೆಯನು ಮಾಡಲ್ಕೆ ಕರುಣದಿಂ ದಾಸರಿಗೆ ಪ್ರತ್ಯಕ್ಷನಾದೇ ಕರುಣಾಳು ಶ್ರೀ ಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸೇವೆ ಬೇಕೇನೊ ನಾನರಿಯೇ 6 ವರ ದುರ್ವಾಪುರದಲ್ಲಿನಿತ್ತು ಮೆರೆಯುವಿಯೆಂದು ಸಿರಿ ಚನ್ನಕೇಶವನೆ ಪರಮಾತ್ಮನಂದೂ ಕರುಣಾಳು ಶ್ರೀ ಹರಿಯೆ ನಿನ್ನ ನಂಬುತಲಿಂದು ಮರೆಹೊಕ್ಕೆ ಕಾಯೋ ಶ್ರೀ ಈಶ ಸರ್ವೇಶಾ 7
--------------
ಕರ್ಕಿ ಕೇಶವದಾಸ
ಏನೊ ಜೀವ ನನ್ನ ನುಡಿವ ನಾಲಗೆಯು ನಿನ್ನದೇನೊ ಕಾಣೆ ನಿನ್ನಾ ಬಣ್ಣವನೆನ್ನಾಣೆ ಕೇಳು ಪೇಳುವೆನೂ ಪಭೂತಂಗಳು ಪುಸಿಯೇನೊ ಮಾತೆ ಮಾಯೆಯಲ್ಲವೇನೊಏತಕೀಗರ್ವವು ನೀನು ಜಾತನಾದ ಬಗೆಯೇನೊಕೈತವವ ಬಿಡುುನ್ನೂ ಹೇತು ಹೀನೋಕ್ತಿಗಳೇನುನೀತಿಯಾಗಿ ಪೇಳು ನಾನು ತಾತಪ್ಯಮಾನನಪ್ಪೆನೂ 1ಬಿಸಿಲು ದೊರೆದೇರನೆ ನಾನು ಮಸಿಯಮಾತ ನುಡಿವೆ ನೀನುನಶಿದು ಪೋಪೆನಹುದು ನಾನು ಹಸದೊಳಿಪ್ಪುದುಂಟೆ ನೀನುಸಸಿನೆ ತಿಳಿದುಸುರಿನ್ನು ಕುಸಿಯ ಹಾಕದಿರೆನಿನ್ನೂನುಸುಳುದಾರಿ ಮನವನ್ನು ಹೊಸದು ಕೊಂಡಾಡಿದರೇನು 2ನೋಡುವ ಕಣ್ಣು ನಿನ್ನದೇನೊ ಆಡುವಾಟನಿನ್ನದೇನೊಓಡುವ ಕಾಲು ನಿನ್ನದೇನೊ ನೀಡುವ ಕೈ ನಿನ್ನದೇನೊಬೀಡ ಬಿಡುವರೆ ನೀನು ಗೂಡಾಗಿುದ್ದೆ ನಾನುಕೂಡಲಿಂದ್ರಿಯ ಕರಣ ತಾನು ಕಾಡುಪಾಲಾಗುವೆನೀನು 3ಎದ್ದು ನಡೆದಾಡುವೆ ನಾನು ನಿದ್ರೆಗೈವೆ ಮಲಗಿ ನಾನುಹೊದ್ದುಕೊಂಬೆ ಹೊದಿಕೆಗಳನು ಗದ್ದುಗೆಗಧಿಕಾರಿ ನಾನುಸಿದ್ದಿಯೆನ್ನಿಂದಲೆ ತಾನು ನಿರ್ಧರಿಪುದಿದ ನೀನುಬುದ್ದಿಹೀನನಾಗದಿರಿನ್ನು ಬದ್ಧವಾಡು ಕೇಳ್ವೆ ನಾನು 4ತಿರುಪತೀಶನಂಘ್ರಿ ನಾನು ಬರಿಯ ಪ್ರತಿಬಿಂಬ ನೀನುಗುರುವಾಸುದೇವಾರ್ಯರನ್ನು ಎರಗಿ ಸಂಪಾದಿಸಿದೆ ನಾನುಕರೆದು ಬಿಗಿದಪ್ಪಿದರೆನ್ನುವನು ಒರೆಯೆ ಕಿವಿಯೊಳ್ಮಂತ್ರವನ್ನುಭರದಲೆನ್ನ ಜಿಹ್ವೆ ಜಪಿಸಿ ಅಂತೆನೆಂಬೆ ನಿನ್ನ ನೀನು 5ಕಂ||ಒರಟುತ್ತರದಿಂದ ದೇಹವು ಬರಿ ಜಗಳವ ತೆಗೆಯೆ ಜೀವನರಿತಿದರಂದವ ನೆರೆಮೂರ್ಖರ ದಾರಿಯೊಳಗೆಬರುತರುಪುವ ಜಾಣನೆಂದು ನೀತಿಯ ನುಡಿದಂ
--------------
ತಿಮ್ಮಪ್ಪದಾಸರು
ಏನೋ ಮನವೇ ನೀಹೀಂಗಾದಿ ಧ್ರುವ ಏನೋ ಮನವೇ ನೀ ಹೀಂಗಾದಿ | ಸ್ವಾನಂದ ಸುಖ ತಿಳಿಯದೆ ಬಳದಿ | ಮಾನುಭವರ ವಿಡಿನಿಜ ಹಾದಿ | ಭವ ವ್ಯಾಧಿ 1 ಮಂದ ಮತಿತನ ಬಿಡು ಗುಣದಾ | ಹೊಂದೋ ಸದ್ಗುರುವಿನ ಪಾದಾ | ಛಂದದಿ ಪಡಿಯೋ ನಿಜ ಬೋಧಾ | ಸಂದೇಹ ಬಿಡಿಸೆಚ್ಚರಿಸುವದಾ2 ಹೊಗೆ ಅಗ್ನಿಯ ಮುಸುಕಿಹ ಪರಿಯಾ | ಮಾಯಾ | ಬಿಗಿದಾವರಿಸಿಹುದು ನೋಯಾ | ಬ್ಯಾಗನೆ ತಿಳಿ ಗೆಲುವ ಉಪಾಯಾ 3 ಮುಂದ ಹಾಕಿದ ಹೆಜ್ಜೆಯನು | ಹಿಂದಕ ತಿರುಗಿಸದಿರು ನೀನು | ನಿಂದಿಸಲೊಂದಿಸಲಾರೇನು | ಮುಂದಗಿಡದೆ ಬೆರಿ ವಸ್ತವನು 4 ನಿನ್ನ ಸುದ್ದಿಯು ತಾ ನಿನಗಿಲ್ಲಾ | ಇನ್ನಾರೆ ತಿಳಿತನು ಸ್ಥಿರವಲ್ಲಾ | ಮುನ್ನಿನ ಪರಿಕೆಡುವುದು ಸಲ್ಲಾ | ಮನ್ನಿಸು ಮಹಿಪತಿ ಜನ ಸೊಲ್ಲಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಏರ ರಂಗಕಿಷನ್ ದಾರಿ ಚೂಪರಾ ಮಾರ ಸುಂದರ ಪ ಮೊರೆ ಗಾಣರೆ ವಶವೊ ಮಾರಜನಕನೇ ಅ ಸುಜನ ಭಜಕನೆ 1 ರಾರಯನುಚು ಮೇರೆ ಮೂಮೆ- ಕರಿಯಲೇದೆರಾ ಕೋರ ಅನುಚು ತೇರೆ ಚರಣ-ಲೇದು ಕಾದುರಾ 2 ಓಡಿಬನ್ನಿ ಸುಜನರೆಲ್ಲ ಭಜನೆ ತ್ರಿಜಗ ಪೂಜಿತನೆಂಬೊ ಅಜನಪಿತನಗೂಡುವಾ 3 ಧರೆಯೊಳಧಿಕ ಮಧುರ ನಗರ ಪುರಿಯವಾಸನೇ ಯನ್ನ ಭವವಿನಾಶನೇ ಕೋಟಿ ರವಿಪ್ರಕಾಶನೆ ನಿನ್ನ ಚರಣ ಗುರುವು ತುಲಶಿರಾಮದಾಸನೇ 4
--------------
ಚನ್ನಪಟ್ಟಣದ ಅಹೋಬಲದಾಸರು
ಏಸು ಜನ್ಮದ ಸುಕೃತವದು ಬಂದು ಒದಗಿತೋದೇಶಿಕೋತ್ತಮನ ದಯದಿಆಸೆಗಳು ಮರೆಯಾಗಿ ಆಷ್ಟ ಪಾಶಗಳಳಿದುಈಶ ಸರ್ವೇಶನಾಗಿ ಹೋದೆ ಪ ಕಂಗಳ ಮುಚ್ಚಿ ದೇಹದೊಳು ದಿಟ್ಟಿಸಿ ನೋಡೆಮಂಗಳವೆ ತೋರುತಿಹುದು ಅಹುದುತಿಂಗಳಿನ ಕಳೆಯಂತೆ ಬೆಳಕಬೀರುತ ಬೆಳು-ದಿಂಗಳನೆ ಹರಡಿದಂತೆ ಅಂತುಕಂಗೊಳಿಸುತಿಹುದು ಬಗೆಬಗೆಯ ವರ್ಣಛಾಯೆಅಂಗ ವರ್ಣಿಸುವರಾರೋ ಆರೋಬಂಗಾರ ಪುಟದಂತೆ ನಡುಮಧ್ಯೆ ಹೊಳೆಹೊಳೆದುಹಿಂಗದನುದಿನ ತೋರುವ ಗುರುವಾ 1 ಅಮೃತ ಕಳದಿ ಝಳದಿ 2 ನಿತ್ಯವಹ ಪರಮಾತ್ಮ ನಿಶ್ಚಲದಿ ತೋರುತಿದೆಚಿತ್ತವೆಂಬುದು ಸಾಯೇ ಬೇಯೆಮತ್ತೆ ಮನ ದೃಗ್ ದೃಶ್ಯ ಧಾರಣರವರುಎತ್ತ ಹೋದರೋ ಎಲ್ಲರೂಸತ್ಯವಾಗಿಹ ಪರಮ ಬಾಹ್ಯಾಂತರೀಯ ಹೆಸರುಎತ್ತುವರು ಇಲ್ಲದಾಯ್ತು ಹೋಯ್ತುಪ್ರತ್ಯಗಾತ್ಮನು ಚಿದಾನಂದ ಗುರು ತಾನಾದಅತ್ಯುಕ್ತಿ ಹೇಳ್ವುದೇನು ಏನು 3
--------------
ಚಿದಾನಂದ ಅವಧೂತರು
ಏಸುಪರಿ ಈಸಬೇಕೋ ಶ್ರೀಶದಾಸನೇ ಮತ್ತೂರೇಶ ಭವಸಾಗರದಿ ಏಸುಪರಿ ಈಸಬೇಕೋ ಪ ಕೂಸಿನಂಕದಿ ಬಾವು ಘಾಸಿಸುವ ಜ್ವರತಾಪನೋಸರಿಸಲೇಶ ಸಮಯದಿಯೊದಗಲು ಲೇಶವಾದರು ಮಗುವಿನಾಸೆ ಇರದಿರೆ ಪ್ರಾಣೇಶನೇ ಗತಿಯೆನಲು ಲೇಸುಮಾಡಿದೆ ಸ್ವಾಮಿ1 ಎನಿತೆಂದು ಹೇಳಲ್ಯ ನಿನಗೆ ಮನದಳಲು ನೀಗಲಸದಳವಾಗಿ ಬಳಲುವೆನು ತನುವಿನೀ ಸಂಕಟವ ತೊಲಗಿಸೈ ಜವದಿ 2 ದುರಿತ ದೂರಪುದು ಭರದಿ ಎನ್ನೊಡೆಯ ಶ್ರೀರಾಮ ಪೊರೆವಾ ಭವ ಕಿಚ್ಚಿನಿಂದುದ್ಧರಿಸಿ ಎನ್ನನು ನರಸಿಂಹವಿಠ್ಠಲನ ನೆನೆಯೆ ಜಿಹ್ವೆಗನಿಸೊ 3
--------------
ನರಸಿಂಹವಿಠಲರು
ಏಸುಬಾರಿ ಬೇಡಿದರೆ ಹೇಗಾಯಿತು ಹರೇ ವಾಸುದೇವನೆ ನಿನ್ನ ಧ್ಯಾನಕೆ ಸರಿಬಾರದಿರೆ ಪ ಪರಿ ಘಾಸಿಗೊಳಗಾಗಿ ಬಹು ಕ್ಲೇಶದಿಂದಲಿ ನಿನ್ನ ಆಶಿಸಿದವನಾ ಭೂಸುರ ಧೊರಿಯೆ ಶ್ರೀನಿವಾಸ ವೇಣುಗೋಪಾಲ ಕೂಸಿನಂದದಿ ಎತ್ತಿ ಪೋಷಿಸುವುದು ನಿನಗೆ ಹುಟ್ಟದೊ 1 ಸಂಸಾರ ವೆಂಬಂಥ ಶರಧಿಯೊಳು ಮುಳುಗಿ ಬಹು ಹಿಂಸೆ ಬಡುತಲಿ ಬಹಳ ಹೀನನಾಗಿ ಕಂಸಮರ್ದನನಾದ ಘನಮಹಿಮಗೋವಿಂದ ಸಂಶಯವಿಲ್ಲದೆ ನಿಮ್ಮ ಸ್ಮರಿಸುತಲಿ ಅನುದಿನವೂ 2 ಅಘಹರನೆ ನಗಧರನೆ ಆದಿ ಪರಾಕ್ರಮನೆ ನಿಗಮಗೋಚರನಾದ ಘನ 'ಹೊನ್ನ ವಿಠ್ಠಲ 'ನೆ ಜಗತ್ಕರ್ತನೆ ನಿನ್ನ ಚಿಂತನೆಯೆ ಅನುದಿನವೂ ಕರುಣಹುಟ್ಟದೇನು 3
--------------
ಹೆನ್ನೆರಂಗದಾಸರು
ಏಳಯ್ಯ ಗುರುವೆ ಬೆಳಗಾಯಿತು ಏಳಯ್ಯ ಗುರುರಾಯ ಏಳಯ್ಯ ಶುಭಕಾಯ ಏಳು ಮಹರಾಯ ಏಳು ಎನ ಜೀಯಾ ಪ ಶೀಲ ನಿನ್ನ ಭಕ್ತರು ಸಾಲು ಸಾಲಾಗಿ ನಿಂತಿಹರೋ ಅ.ಪ ಉದಯಾದ್ರಿ ಶೃಂಗದಲಿ ಉದಿಸಿದನು ಭಾಸ್ಕರನು ಸದಮಲ ಬುಧರೆಲ್ಲ ಮುದದಿಂದಲೀ ಎದ್ದು ನದಿಯ ಸ್ನಾನವ ಮಾಡಿ ಉದಕ ಪುಷ್ಪಗಳಿಂದ ಪಾದ - ಸಂದರುಶನಕೆ ಬಂದಿಹರೋ 1 ನಿತ್ಯ ಭಜಿಸುವ ಜನರೆಲ್ಲ ಹೊತ್ತು ಮೀರಿತು ಎಂದು ಚಿತ್ತ ಶುದ್ಧಿಯಲಿಂದ ಉತ್ತುಮಾರ್ಹಣೆಗಳಾ ತಮ್ಮ ನೆತ್ತಿಯಿಂದಾ ಪೊತ್ತು ಜತ್ತಾಯುತಾಗಿ ನಿಂತಿಹರೋ ಉತ್ತಮಾ ನಿನ ನಿದ್ರೆ ಹೊತ್ತು ಮೀರ್ಯಾಯಿತೊ ಪಾದ ಒತ್ತಿ ಬೋಧಿಸುತಿಹರೋ ಚಿತ್ತಕ್ಕೆ ತಂದು ತ್ವರಿತದಿ ಏಳೋ 2 ವಿಮತಾದ್ರಿ ಕುಲಿಶನೇ ವಿಮಲ ಗಾತ್ರನೇ ಏಳೋ ದಾತ ದಿವಿಜದೃಮನೆ ವಾರಿಧಿ ಎಳೋ ತಾಮರಸಾಂಬಕನೆ ಏಳೋ ಆಮಯ ಧ್ವಂಸಕÀ ನೀನೇಳೋ ಗೋಮತೀ ಕುಮುದ ಸೋಮ ಸಾಂದ್ರನೆ ಏಳೋ - ಶ್ರೀ ಪಾದ ಭೃಂಗನೇ ಏಳೋ ಯಾಮ ಮೀರಿತು ವಿಶ್ವನಿಯಾಮಕ ದೂತನೇ ಸಾಮಗಾಯನ ಲೋಲ ರಮಾ ವಲ್ಲಭಪ್ರೀಯ ಗುರುರಾಜವರ್ಯ 3 ಮೌನಿ ಕುಲರನ್ನ ಮಾನ ನಿಧಿಯೇ ಎನ್ನ ಬಿನ್ನಪವ ಕೇಳಯ್ಯ ಜೀಯಾ ನಿನ್ನ ಭೋಧಿಪಕನ್ಯ ಜನರುಂಟೆ ನಿನ್ನಿಂದ ನೀ ಚನ್ನಾಗಿ ಏಳೋ ಮುನೆÀ್ನ ಮಹ ಕಾರ್ಯಂಗಳೂ ಘನ್ನವಾಗಿರುತಿಹವು ನಿನ್ಹೊರತು ಇನ್ನಾರು ಮಾಳ್ಪರು ಎನ್ನ ನುಡಿ ಈಗ ಚನ್ನಾಗಿ ಮನದಿ ತಂದು ಮನ್ನಿಸೀ ಪೊರೆಯೊ ಧ್ವರಿಯೇ 4 ಸೋತು ಮಲಗಿದೆಯಾ ಪಾತಕಾಂಬುಧಿ ಪೋತನೇ ಮಾತರಿಶ್ವನ ತಾತ ಪಾದ ಭವ ಯುಗ್ಮದಲಿ ಸಂ - ಜಾತವಾಗಿಹ ಸುಧಾ - ಪೀತ ಕಾರಣ ಮದಾ ಸಂ - ಭೂತದಿಂದ ಮಲಗಿದೆಯಾ ಭೂತನಾಥನ ಗುರು ಜಗ - ನ್ನಾಥ ವಿಠಲನ ದೂತ ನಾನೆಂಬ ಗರುವಿಂದ ಮಲಗಿದೆಯಾ 5
--------------
ಗುರುಜಗನ್ನಾಥದಾಸರು