ಒಟ್ಟು 2531 ಕಡೆಗಳಲ್ಲಿ , 118 ದಾಸರು , 1803 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭುವನ ತ್ರಾಣ ಸದ್ಭವ ಪ್ರವೀಣ ಪ ಶ್ಲೋಕ : ಹೀನಾಹೀನ ವಿವೇಕವಿಲ್ಲದೆಸೆವಾ | ನಾನಾ ವಿಧ ಪ್ರಾಣಿ ಭ | ಜ್ಞಾನಾ ಜ್ಞಾನ ತ್ರಿಕಾಖಿಳ ಕ್ರಿಯೆಗಳು | ಹೇ ನಾಥ ನಿನ್ನಿಂದಲಿ || ನಾನಾ ರೂಪ ವಿಶಿಷ್ಟನಾದಿ ರಿಪುಸ್ಸೇನೇಯ ಸಂಹರಿಸಿದೆ1 ಪದ: ಏನ ಹೇಳಲಿ ನಿಜ ಸಂಶಯ ಜನರಾಸೆಯ | ಉದ್ಧರಿಸುವ ಬಗೆಯಾ ಜ್ಞಾನ ಭಕುತಿ ವಿರಕ್ತಿಯಾ | ಕೋಟಿ ಮುಕ್ತಿಯಾ | ನೀ ಕೊಡುವಿ ಕಾಣಯ್ಯಾ | ಶ್ರೀ ನಾರಸಿಂಹನ ಪದಾಶ್ರಯಾ ಗುಣ ಸಂಚಯ | ಮಾಡೊ ಎನ್ನಲ್ಲಿ ದಯಾ | ಮಾಡಿದೆನಯ್ಯಾ | ಮುಂದೇನೋ ಉಪಾಯ 2 ಶ್ಲೋಕ: ನೀನೊಬ್ಬಾನಲ್ಲದಾವ ದೇವತೆಗಳು | ದಾವಂಗೆ ಬಿಟ್ಟೀರ್ವರು | ಜೀವಾತ್ಮಗೆ ಪೇಳ್ವಿರೊ || ಶ್ರೀ ವತ್ಯಾಂಕÀನ ಆಜ್ಞೆಯಿಂದ ತನು ಬಿಟ್ಟಾವ್ಯಾಳಿಗೆ ಪೋಪಿಯೋ | ಪದ: ಕಂಸಾರಿ ಚರಣವ ಭಜಿಸದೆ | ನಿನ್ನ ನೆನೆಯದೇ | ನಾ ಭ್ರಮಿಸಿದೆ ಬುದ್ಧಿಸಾಲದೇ || ಬಹು ಪಾಮರನಾದೆ | ಸಂಶಯ ಬಿಟ್ಟಿನ್ನು ತಪ್ಪದೇ | ನಿನ್ನ ನಂಬಿದೆ | ಇನ್ನು ಬಿಡುವುದು ಚಂದೇ | ಸಂಸಾರದಲ್ಲಿ ಪದೇ ಪದೇ ದುಃಖಪಡಿಸದೆ | ಉದ್ಧರಿಸೆನ್ನ ತಂದೆ 2 ಶ್ಲೋಕ : ಶ್ರೀಶ ಪ್ರೀತಿಗೆ ಕೀಶನಾದೆ ರವಿಯ | ಗ್ರಾಸಕ್ಕೆ ಬೆನ್ನಟ್ಟಿದೆ | ಈಶಾಧೀಶರು ಆತಗಾಗಿ ನಿನಗೆ | ಕಾಶರಭವನ್ಹಾಕಲು || ಲೇಶಾಯಾಸವು ಆಗಲಿಲ್ಲ ನಿನಗೆ ಶ್ವಾಸಾ ಬಿಡದಾಯಿತೋ | ಆಶಾಪಾಶ ಸಮಸ್ತ ಮೂರುಜಗಕೇ | ಆ ಶಕ್ತಿ ಅತ್ಯದ್ಭುತ 3 ಪದ: ವನಧಿ ಲಂಕಾಪುರವ ನೈದಿದೀ|| ಅಂಜದೆ ಸೀತೆಯಾ ನೋಡಿದಿ | ಮಾತನಾಡಿದಿ | ಚೂಡಾರತ್ನವ ಪಿಡಿದಿ | ಬಂಧಿಸಿ ಮನವ ಸಂಚರಿಸಿದಿ | ಆರ್ಭಟಿಸಿ | ರಕ್ಕಸರ ಸೀಳಿದಿ 3 ಶ್ಲೋಕ : ಕನ್ಯಾ ದೇಶನ ಕಂಡು ಅವನ ಪುರವ | ಹವ್ಯಾದಗೆ ಅರ್ಪಿಸೀ | ಅವ್ಯಾಷ್ಟಾಯೆಂದ ವಿಭೀಷಣಾಲಯವನು | ಅವ್ಯಸ್ತ ನಿರೀಕ್ಷಿಸಿ || ರಘುರಾಮರ ದಿವ್ಯಾಂಘ್ರಿಗೇ ವೊಂದಿಸೀ ಸೇವ್ಯ ನಿಜ ಕೃತ್ಯ ಅರ್ಪಿಸಿದೆಯೊ | ಅವ್ಯಾಜ ಭಕ್ತಾಗ್ರಣೇ 4 ಪದ: ಯೋಗ್ಯವ | ಬದಲು ಕಾಣದೆ ದೇವಾ ಸದ್ಭಾವ | ನೋಡಿ | ಗಂಧಮಾದನವ | ಭವ | ಮೊರೆ ಐದಿವರವ 4 ಶ್ಲೋಕ : ಸಂತುಷ್ಟನಾಗಿ ಸ್ವಯಂ | ನಿಂತ್ಹಾಂಗೆ ನೀ ಹುಟ್ಟಿದಿ | ಸಂತಾಪಪ್ರದನಾಗಿ ದುಷ್ಟ ಮಣಿನ್ಮುಂತಾದ ದೈತ್ಯಾಘಕೇ | ಪದ: ಭೀಮಾಸೇನನೆಂಬುವರು | ಧೃತರಾಷ್ಟ್ರನ್ನ ಸುತರು | ಭೀಮನ್ನ ಕೊಲ್ಲಬೇಕೆಂಬೋರು | ವಿಷವನಿತ್ತರು || ಸರ್ಪಗಳ ಕಚ್ಚಿಸಿದರು | ಕ್ಷೇಮವಾಯಿತು ಏನಾದರು | ಸುರತರು | ಮೋಕ್ಷ ಮಾರ್ಗವ ತೋರು 5 ಶ್ಲೋಕ : ಋಕ್ಷ ಕೇಸರಿ ಮಹಾ | ವೃಕ್ಷಾದಿ ಸಂಹಾರಕಾ | ಲಾಕ್ಷಾಗಾರವು ಬಿಟ್ಟು ನಿನ್ನವರ ನಾ | ಸುಕ್ಷೇಮದಿಂದೈದಿಸಿ | ಭಿಕ್ಷಾರ್ಥಾವಿನಿಯುಕ್ತನಾಗಿ ಬಕನಾ | ಲಕ್ಷಿಲ್ಲದೇ ಕುಟ್ಟಿದೀ | ಸಾಕ್ಷೀ ಮೂರುತಿ ಚಿತ್ರವೇ ನಿನಗದಧ್ಯಕ್ಷಗ್ರ ಸರ್ವೇಶಗಾ 6 ಪದ : ದ್ರುಪದಜೆ ಎನಿಸಿದಳು | ಘೋರ ದುಃಶಾಸನು ಮುಟ್ಟಲು | ಮೊರೆಯಿಟ್ಟಳು ದ್ವಾರರಾದಳು | ಧೀರನೆನವೆ ಹೃದಯದೊಳು ಹಗ ಲಿರುಳು | ಭಜನೆಗಳಿಪ್ಪನಂಘ್ರಿಗಳು || 6 ಶ್ಲೋಕ : ಎಲ್ಲಾ ದೈತ್ಯರು ಹುಟ್ಟಿ ಭೂತಳದಿ ನಿನ್ನಲ್ಲೆ ಪ್ರದ್ವೇಷದಿಂ | ದಿಲ್ಲೇ ಇಲ್ಲ ಮುಕುಂದನಾ ಗುಣಗಳು | ಸುಳ್ಳಷ್ಟು ಈ ವಿಶ್ವವೊ || ಇಲ್ಲೆಂಧೇಳಲು ಸದ್ಗುಣಕ್ಕೆ ಗೊತ್ತಿಲ್ಲಾ ತಾನಾಗ ಈ ತತ್ವವೊ | ಪದ : ಸೂನು | ರಾಜತಾಸನದಲ್ಲಿ ಇದ್ದನು | ಒಬ್ಬ ಯತಿಪನು | ವರ ಪಡೆದನು | ಭಾವೀ ಶಿಷ್ಯ ನಿನ್ನನು | ದ್ವಿಜನಾಗಿ ಬಂದು ಆ ಯತಿಯನು ಪೊಂದಿದಿ ನೀನು | ತುರ್ಯಾಶ್ರಮವನು ಯಿನ್ನು 7 ಶ್ಲೋಕ : ದುರ್ವಾದ್ಯುಕ್ತ ಭಾಷ್ಯ ಸಂಘಗಳನು | ಸರ್ವೇದ್ಯನೀ ಖಂಡಿಸೀ | ಸರ್ವಾನಂದದಿ ದಿವ್ಯ ಶಾಸ್ತ್ರಗಳನು | ವಾಗಾಜಯಂ ನಿರ್ಮಿಸಿ || ಗರ್ವೋಚಿÀಸಲ್ಲೋಕಕೆ | ಚೂಡಾಮಣಿ ಪದ: ರಜತಪೀಠ ಪುರದಲ್ಲಿ | ನೀ ಕಲಿಯುಗದಲ್ಲಿ | ಇರುವಿ ಮತ್ತೊಂದರಲ್ಲಿ | ಪಟ್ಟವಾಳಿದಿ ಅಲ್ಲಿ |ವಿಠ್ಠಲನ ವಿಜಯಪಾದದಲ್ಲಿ ಅನುದಿನದಲ್ಲಿ8
--------------
ವಿಜಯದಾಸ
ಭೂತರಾಜರು ಭೂತರಾಜ, ಭೂತರಾಜ, ಭೂತರಾಜ ಜೈ ಜೈ ಜೈ ಪ ಭಾವಿರುದ್ರ ಜೈ ಜೈ ಜೈ ಅ.ಪ. ವಿನುತ ಗುರುವಿನಲ್ಲಿ ಮುನಿಗೆ ಜೈ ಜೈ ಜೈ 1 ಹರಿಯ ಮುಖಜರನ್ನು ಬಹಳ, ಜರಿದು ಜರಿದು ಗರ್ವ ದಿಂದ | ಬೊಮ್ಮರಕ್ಕಸ ಜೈ ಜೈ ಜೈ 2 ಘೋರ ಅಡವಿ ಸೇರಿ ಭರದಿ, ದಾರಿಯಲ್ಲಿ ಬಂದ ಜನರ | ಸೊರೆಕೊಂಡು ಮಾನಧನವ, ಕ್ರೂರನೆಂದು ಕರಸಿ ಕೊಂಡೆ3 ಜ್ಞಾನ ಪೂರ್ಣ ಗುರುವಿನೊಡನೆ, ಮಾನವಾದ ಪಕ್ಷಗೈದೆ4 ಶರಧಿ ವಾದಿರಾಜ, ಭರದಿ ಹರಿಸಿ ಕೀಳು ಜನ್ಮ | ಚರಣ ಭಜಿಪ ಭಾಗ್ಯಕೊಡಲು, ಮೆರದೆ ಭೂತರಾಜ ನೆನಿಸಿ |5 ಕ್ಷಮಿಸನೇನು ಸುತನಪಿತನು, ನಮಿಸಿ ನಿಂತ ನಿನಗೆ ನುಡಿದ | ಸುಖದಿ ಬಾಳೆಂದು6 ಗಾತ್ರ ಕೆಂಪು ನೇತ್ರ | ಚಾರು ವಡವೆ ಗಣವ ಧರಿಸಿ, ವೀರ ರೂಪದಿಂದ ಮೆರೆವೆ 7 ಹಾರಿ ಹೋಗಿ ಧನಪನೆಡೆಗೆ, ತೋರಿ ನಿನ್ನಶೌರ್ಯ ಪಡದು | ಭಾರಿ ರತ್ನ ಮಕುಟ ನುತಿಸಿ, ನೇರ ಶಿರದಲಿಟ್ಟೆ ಗುರುವಿಗೆ 8 ಪಥದಿ ಖಳನ ಕೊಂದು ಬೇಗ ರಥ ಸಮೇತ ಬದರಿಯಿಂದ ಪೃಥಿವಿ ಅಳೆದೆ ದೊರೆಯತಂದು, ವಿತತ ಮಹಿಮ ದುಷ್ಠದಮನ 9 ಕ್ಷೇತ್ರಪಾಲ ಶರಣು ಭಾವಿಸೂತ್ರ ವಲಿಯ ಬಿಡಲು ನಿನ್ನ ಗಾತ್ರಕೆಡಹಿ ಬೇಡಿ ಕೊಂಬೆ, ನೇತ್ರ ನೀಡೊ ಹರಿಯ ಕಾಂಬ ಜೈ10 ಕಳೆದು ಬೇಗ ಹೊಲಸು ಮನವ, ಬೆಳಿಸಿ ಹರಿಯ ದೃಢಸುಭಕ್ತಿ ಕಲಿಯ ತುಳಿವ ಶಕ್ತಿ ನೀಡಿ, ಕಲಸೊ ಸಾಧುಸಂಗ ಜೀಯ, ಜೈ11 ಭಂಗ ಗೈದು ನಿಂತೆ ಅಲ್ಲ ಲಿಂಗ ತಂದೆ ಕದರಿಯಿಂದ, ತುಂಗ ಮಹಿಮ ಮಂಗಳಾಂಗ ಜೈ12 ಕುಣಿದು ಮುದದಿ ಭಜಿಪೆ ಗರಳ ಕಂಠ ಭಾವಿ ಶರಣು, ಚರಣ ಪಿಡಿವೆ ಸ್ತೋತ್ರಪ್ರೀಯ ಜೈ13 ವೈರಿ ವೃಂದ ಮೋದ ಕೊಡಿಸು ತಿರ್ಪೆಭೂಪ |ಜೈ14 ರಾಜ ಬಿರುದು ಸಹಿತ ಭಾರಿ | ವಾಜಿ ಏರಿ ನಡೆಯೆ ವಾದಿ ಅಳಿಯೆ ಸಿಗದು ಜೈ 15 ವಂದು ಕಮ್ಮಿ ನಾಲ್ಕು ಹತ್ತು, ತಂದೆ ವಿಧಿಯ ಕಲ್ಪಗಳಲಿ | ಇಂದು ಉಂಬೆ ದಿವ್ಯ ಪದವಿ16 ಭೀತಿ ಕರವು ನಿನ್ನ ರೂಪ, ವ್ರಾತ್ಯಗಣಕೆ ವಾದಿ ರಾಜ | ದೂತ ನಿನಗೆ ಪ್ರತಿಯ ಕಾಣೆ, ಪ್ರೀತಿ ಸುರಿಸು ಭೃತ್ಯರೆಮಗೆ ಜೈ17 ರಾಜ ರೆಡೆಯ ಬಲದಿ ನೆಲಸಿ, ರಾಜ ಮಂತ್ರಿ ಕೆಲಸ ನಡೆಸಿ ಸೂಜಿ ತಪ್ಪಿಗೆಡೆಯ ಕೊಡದೆ, ರಾಜ ಕ್ಷೇತ್ರ ಕಾಯುತಿರ್ಪೆ ಬೈ18 ಕರ್ಣ ಗುಂಪು, ನಿನ್ನ ಸ್ತುತಿ ಸೇವಿಸುವರು | ದೊಣ್ಣಿ ಸೇವೆ ದುಡುಕಿ ದವಗೆ, ಚಿಣ್ಣರೆಂದು ತಪ್ಪ ಕ್ಷಮಿಸು ಜೈ19 ಚಿತ್ರ ವೈಯ ನಿನ್ನ ಚರಿತೆ, ಭಕ್ತರಿಂದ ಕೊಂಡು ಹರಿಕೆ ಕಿತ್ತು ವಗೆದು ವಿವಿಧ ದೋಷ, ಎತ್ತಿ ಕೊಡುವೆ ಕಾಮಿತಾರ್ಥಜೈ20 ಭೂತ ಪ್ರೇತ ಬಾಧೆ ಸಕಲ, ಆರ್ತಿನಾಶ ಪದವ ಪಠಿಸೆ | ನಲಿವ ಜೈ ಜೈ ಜೈ 21
--------------
ಕೃಷ್ಣವಿಠಲದಾಸರು
ಭೂಮಂಡಲಕೆ ಮಿಗಿಲೆನಿಸಿದ ತಾಯಿಕಂಡು ಬಂದೆನೆ ಪಾಂಡವರ ಭಾಗ್ಯವ ಪ. ಸಂಭ್ರಮದಿರಾಯನು ತುಂಬಿಸಿದ ಮನೆಯೊಳಗೆ ಉಂಬೊ ಪದಾರ್ಥ ಕೋಟಿ ಫಲಕದಳಿ ತಿಂಬೊ ಪದಾರ್ಥ ಕೋಟಿಷಡ್ರಸವೆಂಬೊ ಪದಾರ್ಥ ಕೋಟಿಈ ತೂಗಿಕೊಂಬ ಮಣಿಮಂಚ ಕೋಟಿ ತಾಯಿ1 ವಿತ್ತ ಕೋಟಿಯು ರಾಶಿ ರಾಯನಚಿತ್ತ ಸಂತೋಷ ರಾಶಿ 2 ಏಸುಮುನಿ ಬಳಗ ದಾಸರು ದಾಸಿಯರು ಬೀಸಿ ತೊಟ್ಟಿಲವ ತೂಗÀುವರುಮಕ್ಕಳನ ಸೋಸಿಲೆ ಕರೆದೊಯ್ಯುವರುಮಂಚದಲಿ ಹಾಸಿಗೆ ಹಾಸುವರು ರಾಯಗೆ ಈ ಬಗೆ ಸೇವಕರು ತಾಯೆ 3 ಎಲ್ಲ ಮನೆಯೊಳಗೆ ಮಲ್ಲಿಗೆ ಸಂಪಿಗೆ ಅಲ್ಲೆ ಕ್ಯಾದಿಗೆದವನವುಬುಕ್ಕಿಟ್ಟು ಅಲ್ಲಲ್ಲೆ ಶ್ರೀಗಂಧವುಎಲಿ ಅಡಕಿ ಅಲ್ಲಲ್ಲಿ ತಬಕಿಹೋದುರಾಯಗೆ ಈ ಬಗೆ ಸೇವಕರು ತಾಯೆ 4 ಆನೆಗಳು ಕಟ್ಯಾವ ಕುದರಿಯ ಸಾಲು ರಥಗಳು ಇಟ್ಟಾವ ಬಿಲ್ಲುಗಳು ಪಲ್ಲಕ್ಕಿ ಧಿಟ್ಟಾದ ವಯಿರಗಳು ರಮೆ ಅರಸಗಿಷ್ಟು ಉಪಚಾರಗಳು ತಾಯೆ 5
--------------
ಗಲಗಲಿಅವ್ವನವರು
ಭೂಮಿಜೆಯು ಸೀತೆಯು ಜನನಿ ಗರ್ಭವ ವಡೆದು ಬಂದಳು ದನುಜ ವಧಕೆಂದೇ ಪ ದುರುಳ ದನುಜರು ಪೆಸರು ರಾವಣ ಕುಂಭಕರ್ಣರು ಋಷಿ ಜನಂಗಳ ಮುಖವ ಕೆಡಿಸುತ ಮೆರೆಯುತಿರೆ ಕೇಳ್ದು 1 ಭವದ ಭಟ ಶ್ರೀರಾಮಚಂದ್ರನು ಮೂವರನು ಜರ ಕೂಡಿ ಜನಿಸಿದಾ ಭುವನ ಭಾರವ ಪರಿಹರಿಪೆನೆಂದಭಯ ತೋರುತಲೀ 2 ಸಿರಿಲಕುಮಿ ನಿಜವರನು ಜನಿಸಿದ- ನರಿತು ¥ರಮಾನಂದದಲಿ ತಾ ಭರದಿ ಮೈದೋರಿದಳು ಹರಿಗೆ ತಾನರಸಿ ಎನಿಸಿದಳು 3 ವಾನರರ ಸೇನಾಧಿಪನು ಪವ- ಸೂನು ಶ್ರೀ ಹನುಮನೆಂಬುವನು ದಾನವಾರಿ ಶ್ರೀ ರಾಮಚಂದ್ರಗೆ ಭೃತ್ಯನೆನಿಸಿದನು 4 ವಿಪಿನ ಚರವ್ಯಾಜದಲಿ ರಕ್ಕಸ- ರಪರಿಮಿತ ಕೆಡಹಿದನು ಧರಣಿಗೆ ವಿಪರೀತ ಬತ್ತದ ಶರಧಿಯನು ಹನುಮಂತನ್ಹಾರಿದನು 5 ಪ್ರತಿಭಟಿಸಿ ಶ್ರೀ ರಾಮಚಂದ್ರನು ಅತಿಮೆರೆವ ರಾವಣನ ಮಡುಹಿದಾ ಮತಿವಂತ ಹನುಮನಿಗೆ ಇತ್ತಾ ಚತುರವದನ ಪದಾ 6 ಧರಣಿ ಮಗಳಿಂಗೂಡಿ ರಾಮನು ಧರೆಯನೆಲ್ಲವನಾಳಿ ನ್ಯಾಯದಿ ಸ್ವರಗವಾಸಕೆ ತೆರಳಿದನು ನರಸಿಂಹವಿಠಲನು 7
--------------
ನರಸಿಂಹವಿಠಲರು
ಭೂಮಿಸುರರ ಘನ | ಸ್ತೋಮವಂದಿತ ಮಹಾ ಮಹಿಮಾ ಮಹಾಮಹಿಮ ಸಜ್ಜನ - ತತಿ - ಪ್ರೇಮಾ ಪ ಕಾಮಧೇನು ಸುಕಲ್ಪತರು ಚಿಂ - ತಾಮಣಿಯು ತಾನೆನಿಸಿ ಸರ್ವದ ಕಾಮಿತಾರ್ಥವನಿತ್ತು ಮೆರೆವನು ಈ ಮಹಿಯೊಳು ಸಾರ್ವಭೌಮನು ಅ.ಪ ಪ್ರಾಣತನಯ ವಿಷ್ವಕ್ಸೇನ ಶ್ರೀಹರಿ ಶಾಪದಿಂದ ಶಾಪದಿಂದ ಭೂತಳದಲಿ ಬಂದಾ ಮಾಣವಕ ಪ್ರಹ್ಲಾದನೆನಿಸಿ - ಪ್ರಾಣದೇವಾವೇಶ ಶೇಷನು ಕ್ಷೋಣಿಯೊಳು ಶಿರಿವ್ಯಾಸನೆನಿಸೀ ಮಾಣದಲೆ ಗುರುರಾಘವೇಂದ್ರನು 1 ಅಲವಬೋಧರ ಮತ - ಜಲಧಿಚಂದಿರನೆನಿಪನೀತಾ ನೆನಿಪನೀತ ಲೋಕದಿ ಬಹು ಖ್ಯಾತಾ ಲಲಿತ ವೃಂದಾವನದಿ ನಿಂತು ಹಲವು ಭಕುತರಭೀಷ್ಠಕಾರ್ಯವ ಸಲಿಸಿ ಸುಜನರ ಸಲಹೊಗೋಸುಗ ಸುಲಭತರನಾಗಿರುವ ಗುರುವರ 2 ಕಿಟಜಸರಿದ್ವರ - ತಟದಿ ಸಂತತ ತಾನಿರುವ ತಾನಿರುವ ಭಕ್ತರು ಕರೆಯೆ ಬರುವಾ ಧಿಟ ಸುಭಕ್ತರ ಬಿಡದೆ ತಾನು ಪ್ರ - ಕಟನಾಗಿ ಮಹಿಮೆ ತೋರುವ ಧಿಟ ಗುರು ಜಗನ್ನಾಥ ವಿಠಲನ ಭಟಜನಾಗ್ರಣಿ ಎನಿಸಿ ಮೆರೆವ 3
--------------
ಗುರುಜಗನ್ನಾಥದಾಸರು
ಭೂವರಾಹ ಪಾಲಿಸೆನ್ನ ಶ್ಯಾಮಲಾಂಗ ಕಾಮ ತಾತ ಚಾರು ಚರಣ ಪ ಧರೆಯನ್ನೆತ್ತಿ ತೊಡೆಯೊಳಿಟ್ಟು ಕರಗಳಿಂದಲಪ್ಪಿಕೊಂಬ ಕರುಣದಿಂದ ಸುರರಿಗಭಯ ವಿತ್ತ ದಿವ್ಯ ಕೋಲಮೂರ್ತಿ 1 ಎರಡನೆಯ ಹಿರಣ್ಯಾಕ್ಷ ದೈತ್ಯನನ್ನು ಮಥಿಸಿದಂಥ ಜನಿಸಿದಂಥ ಮಂಗಲಾಂಗ 2 ದೇಶದೊಳ್ ಶ್ರೀಮುಷ್ಣವೆನಿಪ ಕ್ಷೇತ್ರದೊಳಗೆ ನೆಲಸಿದಂಥ ಶೇಷ ಶಿರದೊಳ್ ಚರಣವಿತ್ತ ರಾಜನಾಥ ಹಯಮುಖಾತ್ಮ 3
--------------
ವಿಶ್ವೇಂದ್ರತೀರ್ಥ
ಭೂಷಣವಿದು ಭೂಷಣ ಕೇಶವಧ್ಯಾನ ಪಭೂಷಣವದನಾ ವಿಭೀಷಣ ಧರಿಸುತೆನಾಶರಹಿತ ಪೌರುಷವಾಂತ ಧರಣಿಯೊಳು ಅ.ಪಶೇಷಶಯನನಾಮ ಭೂಷಣದೋಷರಹಿತ ಶಿರೋಧಿ ಭೂಷಣಶ್ರೀಶ ವಿಠ್ಠಲನಾಮ ಭೂಷಣಶೇಷಫಣಿಮಣಿಧೃತ ಭೂಷಣ1 ಕರಯುಗಗಳ ಭೂಷಣ ಹರಿಪೂಜೆಯುಶಿರಕೆ ವಂದನೆ ಭೂಷಣಹರಿಪಾದದರ್ಶನ ವರನೇತ್ರಭೂಷಣವರಕ್ಷೇತ್ರಸಂಚಾರ ಚರಣಕೆ ಭೂಷಣ 2 ಹರಿಯ ಚರಿತೆಯು ಕರ್ಣಭೂಷಣಹರಿತುಳಸಿ ನಾಸಿಕಕೆ ಭೂಷಣಹರಿಯ ಕೊಂಡಾಡುವುದೆ ರಸನೆಗೆ ಭೂಷಣಹರಿಯ ಭಜನೆಯು [ಜಿಹ್ವಾಭೂಷಣ] 3 ಧರೆಯೊಳು ಜನಿಸಿದ ಮಾನವರಿಗೆಹರಿನಾಮವೆ ಭೂಷಣಾಸಿರಿರಮಣನಾಮ ಕಿರೀಟವಯ್ಯವರದನೆಂಬುವನಾಮ ವರಕರ್ಣಾಭರಣವು 4 ಗಂಗಾಜನಕನೆಂಬ ನಾಮವೆ ಅಂತರಂಗಕೆ ಮಣಿಭೂಷಣಾರಂಗನೆಂಬುವ ನಾಮ ಹಸ್ತಸಿಂಗರದ ಪೀತಾಂಬರವು ತಾಮಾಂಗಿರೀಶನ ನಾಮ ಮಂಗಳಕರ ಭೂಷಣವೈ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭೃಂಗ ಜಯ ಶರಣು ಶ್ರೀ ಸುಜ್ಞಾನ ಭಕುತಿ ವೈರಾಗ್ಯಪರನೆ ಜಯ ಶರಣು ದಾಸೋತ್ತಮರ ಮಣಿಯ ನಿನಗ್ಯಾರೆಣಿಯೆ ಗುರು ಪುರಂದರದಾಸರೆ ನಿಮಗೆ ಪ ಪಾಕಶಾಸನಪುರದ ಚಿನಿವಾರ ವರದಪ್ಪ ನಾ ಕುಮಾರನಾಗಿ ಜನಿಸಿ ಸಂಸಾರದೊಳು ಸಂಚರಿಸಿ ಲೌಕಿಕವನ್ನೆ ತೊರೆದು ಈ ಕಲಿಯುಗದಲ್ಲಿ ತುಂಗಾತೀರ ಪಂಪಾ ರಾಕಾಬ್ಜನಂತೆ ಪೊಳೆವ ನಿಧಿಗೆ ಬಂದು ನಿ ರಾಕರಿಸಿ ದುಸ್ಸಂಗ ವೈಷ್ಣವರಾಗಿ ಪತಿಕರಿಸಿ ಹರಿಭಕುತಿಯಾ 1 ಕಾಮಕ್ರೋಧ ಲೋಭ ಮದ ಮತ್ಸರ ಡಂಭ ಈ ಮರಿಯಾದಿಗಳ ಮರ್ಮವನೆ ಕಡಿದು ನಿ ಸಿರಿ ಕೈಕೊಂಡು ಆ ಮಹಾ ರಚನೆಯಲ್ಲಿ ಸೀಮೆಯೊಳು ಪ್ರಾಕೃತದ ಗೀತೆಯಲಿ ಕೊಂಡಾಡಿ ತಾಮರಸ ಸದೆ ಬಡಿದು ಮಧ್ವಸಿದ್ಧಾಂತ ಲ ಹುಯಿಸಿ ಕಾವನೈಯನ ಕುಣಿಸಿದ 2 ಸಿರಿ ವಿಠ್ಠಲನ್ನ ಮೃದು ಪದ್ಮಗಂಧವನು ಮಧುಪÀನಂತೆ ಸೇವಿಸುತ್ತ ಬುದ್ಧಿ ಪೂರ್ವಕದಿಂದಲಿ ಶುದ್ಧ ಮಂದರನೆಲ್ಲ ಎಂದೆಂದಿಗೂ ಬಿಡದೆ ಪೊದ್ದರ್ದ ಪಾಪಗಳು ತಿರುಗಗೊಡದಲೆ ಕಾಲಿ ಮಾರ್ಗದ ಪದ್ಧತಿಯ ಸ್ಥಿತಿ ಪೇಳಿದ 3 ವರದಪ್ಪನೇ ಸೋಮ ಗುರುರಾಯ ದಿನಕರನು ಗುರು ಮಧ್ವಪತಿಯೆ ಭೃಗು ಅಭಿನವನೆ ಜೀವ ಉಪದೇಶಿಸಿ ಪರಮ ಜ್ಞಾನಿಗಳ ಮಾಡಿ ಶರಧಿ ತೆರೆಯಂತೆ ಹರಿಗುಣಗಳನ್ನು ಪೊಗಳುತಿಹ ತರಳರನು ನೋಡಿ ಗುರು ವ್ಯಾಸಮುನಿರಾಯರಿಗೆ ಕರಣ ಚರಿತೆಯಲಿ ನಲಿದಾಡಿದ 4 ಫೃತದ ಬಿಂದಿಗೆ ತಂದ ಅತಿಥಿಯ ವೋಗರನುಂಡ ಸತಿಯಳೆಂದಾ ನುಡಿಗೆ ಚತುರ ಭಾಗ್ಯವನಿತ್ತ ಹಿತನಾಗಿ ದೃಢನೋಡಿದ ಯತಿಯ ಪಂಕ್ತಿಗೆ ಭಾಗೀರಥಿ ನದಿಯ ತರಸಿದ ಸುತನಾಗಿ ನೀರು ನಿಶಿತದಲಿ ತಂದ ಅ ಪ್ರತಿ ದೈವತಾ ಕಿಂಕರ 5 ವಜ್ರ ಪ್ರಹರವಿದು ಸಜ್ಜನರ ದಿವ್ಯ ಚರಣಾಬ್ಜಕ್ಕೆ ಭೃಂಗವಿದು ಹೆಚ್ಚು ಲಜ್ಜೆಯನು ತೊರೆದು ನಿತ್ಯ ಹೆಜ್ಚ್ಚಿ ಹೆಜ್ಚಿಗೆ ಬಿಡದೆ ದಾಸರ ಕರುಣವೆಂಬ ವಜ್ರ ಕವಚವ ತೊಟ್ಟು ನುಡಿದವನ ನುಡಿ ಸತ್ಯ ಅಬ್ಜಭವನೊಡನೆ ಗತಿಗೆ 6 ಎಂತು ವರ್ಣಿಸಲಿ ಎನಗಳವಲ್ಲ ಧರೆಯೊಳಗೆ ಸಂತತಿ ನೆಲಸಿದಂತೆ ಕಾವ್ಯವನೆ ಸ್ಥಾಪಿಸಿ ದಾಸರನ ಸಂತರಿಸಿ ಧರೆಗೆ ತೋರಿ ಸಿರಿ ವಿಠಲನ ಸ್ಮರಿಸುತ ಸು ಪಂಥವನು ಹಿಡಿದು ಸದ್ಗತಿಯಲ್ಲಿ ಸೇರಿದರು ಚಿಂತೆಯೊಳಗಿಟ್ಟ ಗುರುವೆ 7
--------------
ವಿಜಯದಾಸ
ಭೃಂಗ ಭಕ್ತ ಕಾಮಿತಾರ್ಥದ ಮಂಗಳಾಂಗ ತಾಮಸಬಲ ನಿಗ್ರಹಣ ಪತಂಗ ಭ ವಾಮಯಹರ ಭಾರತಿ ಮುಖ ಸಂಗ ಪ. ಮಾನ ಸೇವರಾತಿ ಭೂಪ ಭಾನುಸರಣ ಸುಪ್ರತಾಪ ದೈತ್ಯ ಕ್ಷೋಣಿ ಸಂದರ್ಶಿತ ಕೋಪ ಜಾನಕಿವರನ ನಿಜಾನುಗನೆನಿಪ ಮ- ಹಾನುಭಾವ ಪವಮಾನ ದಯಾಪರ 1 ಇಂದು ಕುಲದಿ ತಾ ಜನಿಸಿ ನಿಜ ಬಂಧುಗಳನು ಸತ್ಕರಿಸಿ ಇಂದಿರೆಯರಸನ ಒಲಿಸಿ ಜರಾ- ಸಂಧ ಮುಖರನು ಸಂಹರಿಸಿ ಒಂದೇ ಕ್ಷಣದಿ ಸೌಗಂಧಿಕ ಕುಸುಮವ ತಂದು ಮಡದಿಗಾನಂದ ತೋರಿದ 2 ಕಲಿಯುಗದೊಳು ತಾ ಬಂದು ಮಾಯಿ ಬಲಿ ಭುಜರನು ಗೆಲವಂದು ಜಲಜನಾಭವ ಕರೆತಂದು ರೌಪ್ಯ ನಿಲಯದಿ ಸ್ಥಾಪಿಸಿ ನಿಂದು ಚೆಲುವ ಶೇಷಗಿರಿ ಪತಿಗತಿಯೆಂದು ನೆಲೆಯ ತೋರಿದ ಪುರುಕರುಣಾಸಿಂಧು 3
--------------
ತುಪಾಕಿ ವೆಂಕಟರಮಣಾಚಾರ್ಯ
ಭೇದವ ಮರೆಸಿದ ನಮ್ಮಯ್ಯ ಸು ಸಾಧನ ತಿಳಿಸಿದ ಪ ಭೇದ ಮರೆಸುತ ವಾದನೀಗಿಸಿ ಪರ ಸಾಧನದ ನಿಜಹಾದಿಗೆ ಹಚ್ಚಿದ ಅ.ಪ ಮಂದಮತಿಯ ತರಿದ ಎನ್ನಯ ಭವ ಬಂಧ ಪರಿಹರಿಸಿದ ಕುಂದುವ ಜಗಮಾಯದಂದುಗ ಗೆಲಿಸಿದ ಕಂದನೆಂದುದ್ಧಾರಗೈದ ತಂದೆ ಸಿಂಧುಶಾಯಿ 1 ಜ್ಞಾನಕೆ ಹಚ್ಚಿದ ಎನ್ನದೆ ನಿಜ ಧ್ಯಾನವ ಪಾಲಿಸಿದ ನಾನಾಯೋನಿಯೊಳು ಜನಿಸಿ ಜನಿಸಿ ಬಹ ಹಾನಿಯಿಂದುಳಿಸಿದ ದಾನವಕುಲಹರ 2 ಏನೆಂದು ಬಣ್ಣಿಸಲಿ ನಮ್ಮಯ್ಯನ ಆನಂದದ ಕೀಲಿ ತಾನೆ ಒಲಿದಿತ್ತೆನ್ನಗಾನಂದಮಯಾಂಬುಧಿ ದೀನಜನಾಪ್ತ ಮಮಪ್ರಾಣ ಶ್ರೀರಾಮಯ್ಯ 3
--------------
ರಾಮದಾಸರು
ಭೋ ಶುಭಕಾಯ ಕೇಶವರಾಯ ದಾಸರ ಪ್ರಿಯ ಶೇಷಶಯ್ಯ ಪ ಹೇಸಿಕೆ ಮಾಯ ಮೋಸದ ಬಲೆಯ ನಾಶನಗೊಳಿಸಿ ಪೋಷಿಸೆನ್ನಯ್ಯ ಅ.ಪ ನಶಿಪ ಸಂಸಾರ ವಿಷಯದ ಘೋರ ಪುಸಿಯೆಂದೆನಿಸಿ ನಿಜಧ್ಯಾಸವ ಕರುಣಿಸೊ 1 ಅಜ್ಞಾನವಳಿಕಿಸಿ ಸೂಜ್ಞರಸಂಗದಿ ಮಗ್ನನೆನಿಸಿ ನಿರ್ವಿಘ್ನದಿ ರಕ್ಷಿಸೊ 2 ಸಾವ ಹುಟ್ಟುವ ಮಹನೋವ ಗೆಲಿಸಿ ಜಗ ಜೀವ ಶ್ರೀರಾಮ ತವಸೇವಕನೆನಿಸೊ3
--------------
ರಾಮದಾಸರು
ಭ್ರಷ್ಟನೆಂದಿಸಿದೆಯಾ ಕೃಷ್ಣನೇ ಎನ್ನ ಪ ಭ್ರಷ್ಟನೆಂದಿನಿಸಿದ್ಯಾ ಸೃಷ್ಟಿಗೀಶನೆ ಪರ ಮೇಷ್ಟಿ ಜನಕ ದಿವ್ಯ ದೃಷ್ಟಿ ಕೊಡದಲೆನ್ನ ಅ.ಪ ನರರ ಸಂದಣಿಯಲಿ ವಿರತಿ ಮಾತಾಡಿಸಿ ಮಾರನಾಟದಿ ಮನವೆರಗುವಂದದಿ ಮಾಡಿ 1 ಕಾಷಾಯ ದಂಡಿ ವೇಷವ ಧರಿಸಿ ಮುನ್ನ ಮೋಸಪಡಿಸಿ ಸ್ತ್ರೀಯರಾಸೆ ಬಿಡಿಸಿದೆನ್ನ 2 ಸೀಲರಂದಲಿ ಜಪಮಾಲೆ ಕೈಯಲಿ ಪಿಡಿಸಿ ಕಾಳಿಮರ್ಧನ ದೇವ ಮಲಿನ ಮನವನಿತ್ತು 3 ಕರವಶವನೆ ಮಾಡಿ ಸರಸದಿಂದ ಕಲೆಹಾಕಿ ಮರೆಸಿ ನಿನ್ನನೆ ಕೃಷ್ಣ ನಿರಯಭಾಗಿಯ ಮಾಡಿ4 ಕರುಣವಾರಿಧಿ ಎನ್ನ ಮರುಳುಗೊಳಿಸಿ ವಿಷಯ ಶರಪಂಜರದಿ ಬಿಗಿದು ಚರಣ ತೋರಿಸದೆಲೆ 5 ಮದ ಮತ್ಸರ ಕಾಮ ಕ್ರೋಧ ಲೋಭ ಮೋಹ ಮಾಧವ 6 ಪತಿತಾಗ್ರಣಿಯು ನಾನು ಪತಿತ ಪಾವನ ನೀನು ಸತತ ನಿನ್ನಯ ಸಂಸ್ಮøತಿಯ ನೀಡದಲೆನ್ನ 7 ದ್ವಿಜ ಅಜಮಿಳ ನಿಜನಾಮದಿಂದಲಿ ಸುಜನನೆಂದೆನಿಸಿದ್ದು ನಿಜತೋರದಲೆನ್ನ 8 ಹೀನರೊಳೆನ್ನೆಂಥ ಹೀನ ಜನರ ಕಾಣೆ ಸಾನುರಾಗದಿ ಕಾಯೊ ಶ್ರೀ ನರಹರಿಯೆ 9
--------------
ಪ್ರದ್ಯುಮ್ನತೀರ್ಥರು
ಮ'ಪತಿ ಸುತ ಕೃಷ್ಣರಾಯ ಕೃಪೆಯಮಾಡೊ ಮಹರಾಯಾಸ'ಸಲಾರೆ ತಾಪತ್ರಯ ಕರುಣದಿ ಪಿಡಿಕೈಯ್ಯಾ ಪನಿನ್ನ ಕರುಳ ಬಳ್ಳಿಯಲಿ ಜನಿಸಿ ನಿನ್ನ ಮರತೆನೆಂದುನೀನು ಮರೆಯಬೇಡಾ ತಾತಾ ಶಿರದಲಿ ಇಡು ವರದಹಸ್ತಾ1ನಿಮ್ಮ ಕೀರ್ತನೆ ಕೇಳುವಾಗ ಮೈ ಮರೆತರು ಸತ್ಯಪೂರ್ಣರುಚಕ್ರಧರನ ನಕ್ರಹರನ ತಂದು ತೋರಿದ ಮಹಾಮ'ಮನೆ 2ಜ್ಞಾನ ಭಕ್ತಿ ವೈರಾಗ್ಯ ತ್ರಿವೇಣಿ ನಿಮ್ಮ ವಾಣಿಶ್ರೀನಿಧಿ ಭೂಪತಿ'ಠ್ಠಲನ ಒಲಿಸಿದ ಹರಿದಾಸ ಸುಮಣಿ 3
--------------
ಭೂಪತಿ ವಿಠಲರು
ಮಕ್ಕಳಿಂದಲೆ ಗತಿಯು ಎಂಬುದೇನಿರಯ್ಯಮಕ್ಕಳಿಲ್ಲದವರಿಗೆ ಗತಿಯಿಲ್ಲವೇ ಪ ಸತ್ಯ ಶೌಚಾಚಾರ ಶಮೆದಮೆಗಳಳವಟ್ಟುನಿತ್ಯ ಕಾಲದಿ ಹರಿಯ ಮನದಿ ನೆನೆದುಅತ್ಯಂತ ಸಂತುಷ್ಟನಾದರಿಂದಲ್ಲದಲೆಹೆತ್ತವರಿಂದ ಗತಿಯು ಎಂಬುದು ನಗೆಯಲ್ಲವೇ 1 ಅಣುಮಹತ್ತಿಲಿ ಶುಚಿಯು ಅಶುಚಿಯಾಗಿಪ್ಪಂಥಎಣಿಕೆ ಎಲ್ಲವನು ತಾಯೆನಿಸಿ ತಿಳಿದುತ್ರಿಣಯನಾಗಿಹೆನೆಂದು ತಾನೆ ತಾನಾಗದಲೆಕ್ಷಣಿಕ ಸುತರಿಂ ಗತಿಯು ಎಂಬುದು ನಗೆಯಲ್ಲವೆ 2 ಸ್ನಾನ ಜಪತಪ ತಿಲೋದಕ ಶ್ರಾದ್ಧ ತರ್ಪಣದಕ್ಷೀಣ ಕರ್ಮಗಳಿಂದ ಮುಕುತಿಯಹುದೇಮಾನನಿಧಿ ಚಿದಾನಂದ ಗುರುಪಾದ ಪದ್ಮವನುನ್ಯೂನವಿಲ್ಲದೆ ನಂಬಿ ಸುಖಿಯಾದರಲ್ಲವೆ3
--------------
ಚಿದಾನಂದ ಅವಧೂತರು
ಮಂಗಲಂ ಗುರುರಾಜಗೆ ಮಂಗಲ ಪರಮಾನಂದಸ್ವರೂಪಗೆ ಪ ಜೀವÀಪರಮರೈಕ್ಯವ ತಿಳುಹಿಸುವಾ ದೇವನೆ ನೀನೆನ್ನುತ ಬೋಧಿಸುವಾ ಸಾವು ಸಂಕಟಗಳ ಮೂಲವ ಕಡಿಯುವಾ ಪಾವನಾತ್ಮ ಘನಜ್ಞಾನರೂಪಗೆ 1 ಶೋಧಿಸಿ ದೇಹತ್ರಯಗಳ ಕಳಹಿ ಬಾಧರಹಿತ ಪರಮಾತ್ಮನ ಅರಿವನು ಬೋಧಿಸಿ ಅನುಭವದಲಿ ನೆಲೆಸಿದಗೆ 2 ತೋರಿಕೆ ಅನಿಸಿಕೆ ಎನಿಸುವ ದ್ವೈತವ ಧೀರತನದಿ ಸುಳ್ಳೆಂದು ತಿಳಿಸುವಾ ನಾರಾಯಣಗುರುವರನ ಕೃಪಾಪ್ರಿಯ ಪೂರಣಬ್ರಹ್ಮಸ್ವರೂಪ ಶಂಕರಗೆ 3
--------------
ಶಂಕರಭಟ್ಟ ಅಗ್ನಿಹೋತ್ರಿ