ಒಟ್ಟು 3852 ಕಡೆಗಳಲ್ಲಿ , 124 ದಾಸರು , 2495 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ
ನಾರಾಯಣನೆ ಈತ - ನಾರಿ ಒಳ್ಳೆಯವರಿಗೆ ಮಾಡ್ದ ವಿಘಾತ ಪ ಪರಿಪರಿಯಲಿ ಪೊಗಳುವ ಗೀತ - ನಾನೆಂದವರ ಮುರಿದ ಪ್ರಖ್ಯಾತ ಅ ಕೈಕಾಲಿಲ್ಲದೆ ಆಡ್ದಾಮೈಮೇಲ್ಭಾರವ ಪೊತ್ತು ನೋಡ್ದಾಕೋರೆಯಲಿ ತಿವಿದು ಹತ ಮಾಡ್ದಾತಾಕೊ ಎಂದು ಒದರಿ ಬಗೆದು ಬೀರ್ದಾಅರ್ತಿಯಿಂದ ಪಾತಾಳಕೆ ದೂಡ್ದಾಮುನಿಯ ಮಗನಾಗಿ ಕ್ಷತ್ರಿಯರ ಕಾಡ್ದಾರಾವಣಗಾಗಿ ಅಂಬುತೆಗೆದು ಹೂಡ್ದಾಆ ಜಮುನೆ ಪೊಕ್ಕು ಮೋಜು ಮಾಡ್ದಾದಿಗಂಬರ ವೇಷವ ತಾಳ್ದಾದಿಗಿದಿಗಿ ಎಂದು ಅಶ್ವವೇರ್ದಾ 1 ಪಾದ ಭೂಮಿ ತಾನೊಲ್ಲಇವನ ಕೊಡಲಿಬಾಯಿಗಿದಿರಿಲ್ಲಕೋ ಎಂದ ಲಂಕೆಗೆ ಬೆಂಕಿ ಮಲ್ಲಕೊಂಕಲಿ ಕೊಳಲನೂದಿ ಗೊಲ್ಲಮೈಮೇಲ್ ಗೇಣರಿವೆಯಿಲ್ಲಇವ ಮೇಲಾದ ತೇಜಿಯನೇರಬಲ್ಲ 2 ವೈರಿ ವನಕ್ಕೆ ಕೇಡು ತಂದಹಾಲ್ಮೊಸರ ಮೀಸಲು ಮುರಿದು ತಿಂದಬತ್ತಲೆ ನಿಂದು ಹತ್ತುವೆ ಕುದುರೆ ಎಂದಭರದಿ ಕಾಗಿನೆಲೆಯಾದಿಕೇಶವನೆಂದ3
--------------
ಕನಕದಾಸ
ನಾರಾಯಣಯೆಂಬೊ ನಾಮವನು ನೆನೆದರೆ ಹಾರಿ ಹೋಹುದು ಜನ್ಮಜನ್ಮದ ಪಾಪಗಳು ಮುಕ್ತಿದೋರಿಸು ಮುರಾರಿ ಪ. ಸಕಲವೇದ ಪುರಾಣ ಶಾಸ್ತ್ರಗಳ ತಿಳಿದೋದಿ ಭಕ್ತಿಯಲಿ ತಾಯತಂದೆಯ ಚಿತ್ತವಿಡಿದವರ ಸುಕುಮಾರನೆನಿಸಿಕೊಂಡು ಪ್ರಕೃತಿಯಲಿ ಹೋಮಕ್ಕೋಸ್ಕರ ಸಮಿದೆ ತರಹೋಗಿ ದುಷ್ಕøತ್ಯದ ಫಲದಿಂದ ಅಂತ್ಯಜಳನು ಕಂಡು ಕಾ- ಅರಿತರಿಯದೆ 1 ನಿಲ್ಲು ನಿಲ್ಲೆಲೆ ಕಾಂತೆ ನಿನಗೊಲಿದೆ ನೀನಾರು ಸೊಲ್ಲಿಸೆನ್ನೊಡನೆ ಸತಿಯರ ಕುಲಕೆ ಕಟ್ಟಾಣಿ ಹುಲ್ಲೆನೋಟದ ಭಾವಕಿ ಸಲ್ಲಿಲಿತ ಗಾತ್ರೆ ಸೊಕ್ಕಾನೆ ಮೆಲ್ಲಡಿಯವಳೆ ಮಲ್ಲಿಗೆಗಂಧಿ ಮದನನ ಕೈಯ ಮಸೆದಲಗೆ ಸೆರಗ ಪಿಡಿದ 2 ವಿಪ್ರ ಕೇಳು ನಾವು ಕುಲಹೀನರೆಮ್ಮನೆಯ ಹೊಲಸಿನ ಮಾಂಸ ಗೋವಿನ ಚರ್ಮದ್ಹಾಸಿಕೆಯು ಹಿಂಡು ಬಲು ಘೋರ ಎನಿಸಿಪ್ಪುದು ಬಲೆಗೆ ಸಿಕ್ಕಿದ ಪಕ್ಷಿ ಬೇಂಟೆಯವಗಲ್ಲದೆ ಕುಲವ ಕೂಡುವದೆ ಕಾಮಿನಿ ಕೇಳು ನಿನ್ನೊಡನೆ ಛಲವೊಂದೆ ಎನಗೆ ಎಂದ3 ವ್ಯರ್ಥ ಎನ್ನೊಡನೆ ಮಾತ್ಯಾಕೆಲೊ ವಿಪ್ರ ಚಿತ್ತವೆನ್ನಲ್ಲಿ ಇದ್ದರೆ ಹೋಗಿ ನೀ ಎನ್ನ ನಿನಗೊಲಿವೆನೆಂ[ದಳು] ಅತ್ತ ಕಾಮಿನಿಯ ಒಡಗೂಡಿ ಆಕೆಯ ಪಿತನ ಹತ್ತಿರಕೆ ಹೋಗಿ ಕೇಳಿದರಾತನಿಂತೆಂದ ಇಂಥ ಮೊತ್ತಕೊಳಗಾಗದಿರೊ 4 ಆಗದಾಗದು ಎನ್ನ ಕುಲಬಂಧು ಬಳಗವÀನು ನೀಗಿ ನಿಮ್ಮೊಡನೆ ಕೂಡುವೆನೆಂಬ ಮತವೆನಗೆ ನಾಗಭೂಷಣನ ಪಣೆಗಣ್ಣಿಂದ [ಲುರಿದನ] ಬಾಣತಾಗಿತೆನ್ನೆದೆಯನೆಂದ ಕೂಗಿ ಹೇಳಿದೆ ನಿನ್ನ ಕುಲವಳಿಯದಿರೆಂದು ಹೋಗಿ ಕೂಡೊ ಹೆತ್ತ ತಾಯಿತಂದೆಗಳ ಅದು ಆಗದಿದ್ದರೆ ಆಚೆ ಮನೆಯೊಳಗೆ ನೀವಿಬ್ಬರಲ್ಲಿರಿ ಹೋಗ್ಯೆಂದನು 5 ಹಾಲಂತ ಕುಲವ ನೀರೊಳಗದ್ದಿಪೂರ್ವದ ಶೀಲವನಳಿದು ಸತಿಯೊಡಗೂಡಿ ತಾನು ಚಾಂ- ಡಾಲತಿಗೆ ಹತ್ತುಮಕ್ಕಳ ಪಡೆದು ತಾನವರ ಲೀಲೆಯನು ನೋಡಿ ಹಿಗ್ಗಿ ಆಲಂಬನದಲಿ ಅಜಾಮಿಳನು ಇರುತಿರಲಾಗ ಕಾಲ ಬಂದೊದಗಿ ಕರೆಯಿರೊ ಪಾತಕಿಯನೆಂದು ಯಮನಾಳುಗಳು ಇಳಿದರಾಗ 6 ಎಡೆಗೈಯ ಪಾಶಗಳು ಹಿಡಿದ ಚಮ್ಮಟಿಗಳು ಒಡನೊಡನೆ ಚವುರಿಗಳು ವಜ್ರದ ಮೋತಿಯ [ಕಾಗಡಿ] ಘುಡು‌ಘುಡಿಸುತಲಿ ನಿಂತರು ಕಡುಹಸುಳೆ ಕಂದನಿವನೆಷ್ಟು ಅಂಜುವನೆಂದು ಗಡಗಡನೆ ನಡುಗಿ ಕಂಗೆಟ್ಟು ಅಜಾಮಿಳ ತಾನು ಲಾಲಿಸಿದ ಸ್ವಾಮಿ 7 ಮರಣಕಾಲದಿ ಶ್ರೀಹರಿಯೆಂಬ ನಾಮವನು ಹರಿವುದಾಕ್ಷಣದಲ್ಲಿ ಕರುಣದಿಂದಜಮಿಳನ ಕರೆತನ್ನಿರಿಲ್ಲಿಗೆಂದ ಉರದೊಳೊಪ್ಪುವ ತುಳಸಿದಂಡೆ ಪೀತಾಂ- ಬರವು ಗದೆ ಶಂಖ ಚಕ್ರ ದ್ವಾದಶನಾಮವನು ಧರಿಸಿ ಕರವೆತ್ತಿ ಅಂಜ ಬ್ಯಾಡೆಲೊ ಎಂದು ಹರಿದಾಸರೈ ತಂದರು 8 ಪುಂಡರೀಕಾಕ್ಷನ ಭೃತ್ಯನ ಭಾಧಿಸುವ ಲಂಡರಿವರ್ಯಾರು ನೂಕಿ ನೂಕಿರೊ ಎಂದು ಯಮನ ದಂಡವನು ಮುರಿದು ಬಿಸಾಡಿ ನಿಮ್ಮಸುವ ಹಿಂಡುವೆವು ಎಂದರಾಗ ಕಂಡ ಹರಿದೂತರಿಗೆ ಯಮನಾಳುಗಳೆರಗಿ ಭೂ- ಮಂಡಲದೊಳಗೆ ಎಮ್ಮೊಡೆಯ ಯಮಧರ್ಮನ ಉದ್ದಂಡರಹುದೆಂದರಾಗ 9 ತಂದೆ ಕೇಳೆಮ್ಮ ಬಿನ್ನಪವ ಲಾಲಿಸಿ ನೀವು ಒಂದು ದಿನ ಹರಿಯೆಂಬ ಧ್ಯಾನವನರಿಯನು ನಾವು ಬಂದೆಳೆಯಲಾತ್ಮಜನ ನಾರಗಾ ಎನಲು ಕುಂದಿತೆ ಇವನ ಪಾಪ ಹಂದಿಕುರಿಗಳಿರ ನಿಮಗಿಷ್ಟು ಮಾತುಗಳ್ಯಾಕೆ ನಿಂದಿರದೆ ಹೋಗ್ಯೆಂದು ನೂಕಿ ಯಮನಾಳ್ಗಳನು ತಂದಪೆವು ದಿವ್ಯ ಪುಷ್ಪಕವನೆಂದೆನುತ ಬಂದರಾ ವೈಕುಂಠಕೆ 10 ಎದ್ದು ಅಜಾಮಿಳನು ಮೂರ್ಛೆಯ ತಿಳಿದು ಎಚ್ಚೆತ್ತು ಬಿದ್ದ ಕಾಯವನು ಭಾದಿಸಿದವರ್ಯಾರು ಉ- ಪದ್ರವನು ಬಿಡಿಸಿದ ದಿವ್ಯ ಸ್ವರೂಪ[ದ] ಸುಧಾತ್ಮರಾರು ಎಂದ ಮದ್ಯಪಾನವ ಮಾಳ್ಪ ಹೆಂಗಸಿನ ಒಡನಾಡಿ ಅದ್ದಿದೆ ನೂರೊಂದು ಕುಲವ ನರಕದೊಳೆಂದು ತಾನತಿ ಮರುಗುತ 11 ವಿಪ್ರ ಕುಲದಲ್ಲಿ ಪುಟ್ಟಿ ವೇದಶಾಸ್ತ್ರವನೋದಿ ಮುಪ್ಪಾದ ತಾಯಿ-ತಂದೆಯ ಬಿಟ್ಟು ಬುಧÀ ಜನರು ಮದನ ಬಾಧೆಗೆ ಸಿಲುಕಿ ದುಷ್ಟ ತಾಪವ ಪೊತ್ತೆ ಜನನಿಂದಕನಾದೆ ಅಪ್ರತಿಮ ಅನಂತಪಾತಕಿ ಭುವನದಲಿ ತಪ್ಪಲಿಲ್ಲವೆ ಪಣೆಯ ಬರದ ಬರಹಗಳು ಇನ್ನು ಭಾಪುರೆ ವಿಧಿ ಎಂದನು 12 ಇಷ್ಟು ದಿನ ಹರಿಯೆಂಬೊ ನಾಮವರಿಯೆನು ನಾನು ದುಷ್ಟಯವÀುದೂತರನು ಕಂಡು ಚಂಡಾಲತಿಗೆ ಪುಟ್ಟಿದ ಮಗನ ನಾರಗನೆಂದು ಕರೆದರೆ ಮುಟ್ಟಿದವೆ ನಿಮಗೆ ದೂರು ಇಷ್ಟು ಅವಗುಣಗಳನು ಎಣಿಸಲಿಲ್ಲವೆ ಸ್ವಾಮಿ ಎಷ್ಟು ಕರುಣಾಕರನೊ ಎಂದು ಸ್ನಾನವ ಮಾಡಿ ಬಿಟ್ಟು ತಾಪತ್ರಯವ ಭಯ ನಿವಾರಣ ಹರಿಯ ಗಟ್ಯಾಗಿ ಧ್ಯಾನಿಸಿದನು 13 ತನ್ನ ನಾಮವ ನೆನೆವ ಭಕ್ತರಾದವರೆಲ್ಲ ಧನ್ಯರಿವರಹುದೆಂದು ಜಗವರಿಯಬೇಕೆಂದು ಉನ್ನತವಾದ ಪುಷ್ಪಕವ ತಾ ಕಳುಹಿದ ಪನ್ನಗಾರಿವಾಹನ ಅನ್ಯಾಯ ಇವಗಿಲ್ಲ ಅವನಿಯೊಳಗುತ್ತಮನು ಎನ್ನಯ್ಯ ಏಳೆಂದು ಕೈಲಾಗವÀನು ಕೊಡಲು ಉನ್ನತವಾದ ಪುಷ್ಪಕವೇರಿ ಅಜಮಿಳನು ಹರಿಯ . ಸನ್ನಿಧಿಗೆ ನಡೆದ 14 ಜಲಜನಾಭನ ದಿವ್ಯನಾಮವನು ನೆನೆದರೆ ಕುಲಕೋಟಿ ದೋಷಗಳಿಲ್ಲ ಕುಂದುಗಿಂದುಗಳಿಲ್ಲ ಸಲುವರಲ್ಲೆಂದ ಯಮನು ನಲವಿಂದ ಹೆಳವನಕಟ್ಟೆ ಶ್ರೀ ವೆಂಕಟನ ನೆಲೆಯರಿತು ನೆನೆದವರ್ಗೆಮನ ಭಾದೆಗಳಿಲ್ಲ ಸಾಯುಜ್ಯ ಪದವೀವ ಬಲು ನಂಬಿ ಭಜಿಸಿ ಜನರು 15
--------------
ಹೆಳವನಕಟ್ಟೆ ಗಿರಿಯಮ್ಮ
ನಾರಾಯಣಾದ್ರಿ ಕೃತವಾಸ ಶರಣು ತೋರಯ್ಯ ತವರೂಪ ರವಿಕೋಟಿಭಾಸ ಪ ಆನತಜನಾಪ್ತ ನೀನೆಂಬೋ ನುಡಿಕೇಳಿ ಮಿಗೆ ಸಾನುರಾಗದಲಿ ನಡೆತಂದೆ ನಿನ್ನ ಬಳಿಗೆ ಮಿನಾಂಕಜನಕ ತವಪದಯುಗಾರ್ಚನೆ ಹೀಗೆ ಜ್ಞಾನ ಪೂರ್ವಕದಿಂದಲೆನಗೆ ದಯದಿ ಪಾನೀಯಜಾಂಬಕನೆ ಪೊರೆಯೆಂದೆ ನಿನಗೆ 1 ವಾಸುಕೀ ತಪಕೆ ಸಲೆಮೆಚ್ಚಿ ಗಿರಿಯಲಿ ನಿಂದೆ ಆ ಸಲಿಲದೊಳು ಮಿಂದು ಕರಿವರ ಕರೆಯೆ ಬಂದೆ ಸ್ವಾಮಿ ವಾಸವಾತ್ಮಜನು ಬಿನ್ನೈಸೆ ನಿನ್ನಯ ಮುಂದೆ ಆ ಸಮರದೊಳಗೊಲಿವನೆಂದೆ ನಿನಗೆ ಪಾಸಟಿ ಯಾರು ನೀರಜಭವನ ತಂದೆ 2 ಸುರರು ನಿನ್ನ ಮಹಿಮಾತಿಶಯ ಬಗೆಯನರಿಯಳು ಲಕುಮಿ ಬದರ ಸನ್ನಿಭಕಾಯ ಮಾನವ ತಿಳಿವನೆನೋ ತಿರುಮಲರಾಯ ಖಗÀರಾಜಗಮನ ಕಮನೀಯ ಪಾಹಿ ಜಗನ್ನಾಥವಿಠಲ ವಿಗತಾಘ ಕವಿಗೇಯ 3
--------------
ಜಗನ್ನಾಥದಾಸರು
ನಾರಿ ಗೌರಿ ಕೌಮಾರಿ ವಾರಿಜಾಕ್ಷನ ಚರಣ ವಾರಿಯನು ಧರಿಸುವ ನಾರಿ ಗೌರಿ ಕೌಮಾರಿಪ ಬಾಣ ಕುಂಭನೆಂಬೊ ದಾನವರೀರ್ವರು ಕ್ಷೋಣಿಯೊಳು ಬಂದಲ್ಲಿ ತಪವ ಮಾಡಿ ಕಮಲ ಗರ್ಭನವೊಲಿಸಿ ವೇಗದಲಿ ಏನು ವರ ಬೇಡೆನಲು ನಗುತಲವನು ಸುರಿದನು 1 ಸಂಬಂಧಿಗಳೆಮ್ಮ ಕೊಲ್ಲಲ್ಲಿ ಉಳಿದವರ ಬಗಿಯದಂತೆ ವರವನು ಪಾಲಿಸೆನಲು ನಗುತ ಲೋಕೇಶ ದುರುಳರಿಗೆ ಸಲೆ ಇತ್ತಾ 2 ಚತುರ್ದಶ ಲೋಕವನು ಗೆದ್ದು ತ್ರಿದಶರಾ ಮಿತಿಯಿಲ್ಲದೆ ಮಾನಭಂಗ ಮಾಡಿ ಪತಿತರು ಈ ತೆರದಲಿರುತಿರಲು ವಿಬುಧರು ಚತುರ ಮುಖಗೆ ಮೊರೆಯಿಡಲು ಹರಿಗೆ ಬಿನ್ನೈಸಿ3 ತಿಳಿದು ಕುಂಡಲನೊಲಿದು ದ್ವಾಪಾರಾಂತ್ಯದಲಿ ಖಳ ಕಂಸನೆಂಬುವನು ಪುಟ್ಟಿ ತನ್ನ ಬಲದಲಿ ತನ್ನ ಅನುಜೆಯರ ಶರೆಯುಯಿಟ್ಟು ಬಳಲಿಸುವವಳಿಗೊಲಿದು ಅವತಾರ ಮಾಳ್ಪ ಯುದಕುಲದಲಿ 4 ಎನ್ನ ಕೂಡಲೀ ದುರ್ಗಿ ಜನಿಸಿ ಬರಲು ಅವ ಳನ್ನ ಕೊಲ್ಲುವೆನೆಂದು ಕಂಸ ಮುನಿಯೆ ತನ್ನ ಶಕ್ತಿಯಿಂದಾ ಗಗನಕ್ಕೆ ಪಾರಿ ಬರಲು ಘನ್ನ ಘಾತುಕರನ್ನ ಮಡುಹಿ ಬಿಡುವಳೆನಲು 5 ಇಂತು ಪೇಳಲಿ ಅಜನು ಸಂತೋಷದಿರಲಿತ್ತ ದಂತಿ ಗಮನಳು ಉದುಭವಿಸಿ ಬಂದು ಪಿಂತೆ ಮಾಡಿದ ತಪಸು ಸಿದ್ಧಿಸಿತು ಎನಗೆನುತ ಅಂತಕರಾಗಿದ್ದ ಖೂಳರ ಸದೆ ಬಡಿದು 6 ಹರಿಕೃಪೆಯಿಂದ ದಕ್ಷಿಣ ಶರಧಿಯಲಿ ನಿಲ್ಲಲು ಪರಮ ಮುನಿ ಅಗಸ್ತ್ಯ ಪೂಜಿಸಿದನು ಶರರಾಜ ಬಂದು ಮದುವೆನೈದಲು ಪರಮೇಷ್ಠಿ ಹರನ ಸಹಿತಲಿ ನಡೆತಂದಾ 7 ಬರಲಾಕ್ಷಣದಲ್ಲಿ ಕಲಿಯುಗ ಪ್ರಾಪುತವಾಗೆ ಮರಳೆನಿಂದರು ವರ ಸುಧೇಂದ್ರವೆಂಬೊ ಪುರದಲ್ಲಿ ಪೂಜೆಗೊಳ್ಳುತಲ್ಲಿರಲು ಇತ್ತ ಸುಂ ದರ ಕನ್ಯಾಮಣಿಯಾಗಿ ದಶದಿಶಿಗೆ ಪೊಳೆಯುತಿರೆ8 ಅಂದಾರಭ್ಯನಾಗಿ ಕನ್ಯಾಕುಮಾರಿ ಎನಿಸಿ ಬಂದು ನವತೀರ್ಥದಲಿ ಯಾತ್ರೆ ಜನರು ಮಿಂದಾಗಲೆ ಮನದಂತೆ ಭಕುತಿಯನಿತ್ತು ಪೊಂದಿಸುವೆ ವಿಜಯವಿಠ್ಠಲನ ಪಾದದಲ್ಲಿ9
--------------
ವಿಜಯದಾಸ
ನಾರೇರೆಲ್ಲ ಮುತ್ತಿನಾರತಿ ಬೆಳಗಿರೆ ಶ್ರೀ ಕೃಷ್ಣಮೂರುತಿಗೆ ಪ ನಾರೀಮಣಿ ಶ್ರೀ ರುಕ್ಮಿಣೀದೇವಿಗೆ ಮತ್ತು ಭೂಮಾಮಣಿಗೆ ಅ.ಪ ಪನ್ನಗಪತಿ ಫಣಿಯನ್ನು ತುಳಿಯುತಲಿ ಚನ್ನಾಗಿ ಕುಣಿದವಗೆ ಸನ್ನುತ ನಿಜ ಜನರನ್ನು ಸಲಹುವ ಮನ್ಮಥ ಜನಕನಿಗೆ 1 ಪಾರ್ಥಗೆ ಸಖನಾಗಿ ಧಾರ್ತರಾಷ್ಟ್ರನ ಹಠ ವ್ಯರ್ಥ ಮಾಡಿದವಗೆ ಆರತಿ ಎತ್ತಿರೆ ಶುಭಕೀರ್ತನೆ ಮಾಡುತ ಪಾರ್ಥಸಖನ ಸತಿಗೆ 2 ಚಂಡಮುನಿಯು ಬೇಡಿಕೊಂಡ ವರವನಿತ್ತ ಪಾಂಡವರ ಕಾಯ್ದವಗೆ ಪುಂಡರೀಕದಳಲೋಚನಗೆ ಜಗದಂಡಪತಿಯ ಸತಿಗೆ3 ವಾಮಲೋಚನರೆಲ್ಲಾ ನಾಮಗಿರೀಶ ಶ್ರೀ ನರಸಿಂಹ ಮೂರುತಿಗೆ ಪ್ರೇಮ ಮಾಡುವನೆಂದು ಕಾಮಿನಿಯರೇ ಸತ್ಯ ಭಾಮಾಸಹಿತನಿಗೆ 4
--------------
ವಿದ್ಯಾರತ್ನಾಕರತೀರ್ಥರು
ನಾಲಗೆ ಬರದಯ್ಯಾ ಶ್ರೀ ಗುರುವರರಾಯಾಪಾಲಿಸೆನ್ನೊಳು ನಿನ್ನ ಪೂರ್ಣದಯ ಪ ನಾಲಿಗೆ ಮತಿಗಳು ತಡೆದು ನಿಂತಿಹವಯ್ಯಮೇಲು ನಿಮ್ಮಯ್ಯ ನಾಮಾ ನಾ ಪೇಳೆನೆಂದರೆ ಅ.ಪ. ಕಥೆಯ ಕಟ್ಟಿದೆ ನಾಟಕ ಪದ್ಯವ ರಚಿಸಿದೆನೆಂಬಿ ಹೆಮ್ಮೆಯೊಳಿದ್ದೆ ಯತಿರಾಯಾನಿನ್ನ ಸುಚರಿತೆಯ ಕಥಿಸಲುಗತಿಕಾಣದೆ ನಿಂತು ಬಾಯ್ಬಿಡುವೆ ಪೊರೆಯಯ್ಯಾ 1 ಪಾದ ತುತಿಸುವೆನೆಂದರೆ 2 ಸ್ಮರಿಸುವೆ ಮನದೊಳು ನಿರುತದಿ ಯತಿವರ್ಯಾಶ್ರೀ ರಾಘವೇಂದ್ರರಾಯಾಧರೆಯೊಳು ಪರಮ ದಾನಿಗಳ ಹಿರಿಯನೆಂದುಅರಿತು ನಾ ಬಂದೆನೊ ಮೂಕನಾಗಿರುವೆನೊ 3 ಮನದೊಳಗಿರುತಿರ್ದ ಭಕುತಿ ಭಾವಗಳುಏನಿತೆಂಬುದನು ನೀನೇ ನೋಡಿಮನಸಿನಭೀಷ್ಟವನಿತ್ತು ಕಾಯುವದಯ್ಯಾಮನದೊಳು ನೆನೆಯುವೆ ಹೊರಗಾಡಲಾರದೆ 4 ಕರುಣಾಳು ಗದುಗಿನ ವೀರನಾರಾಯಣಹರನೆ ಕಳುಹಿಸಿದನೆಂದು ನಾನಿಲ್ಲಿ ಬಂದೇವರ ನಿನ್ನ ಚರಣವೂ ದೊರೆಯೆ ನಾ ತುತಿಸಲುಸರಿಯಾದ ನುಡುಗಳ ಕರುಣಿಸು 5
--------------
ವೀರನಾರಾಯಣ
ನಾಸಿಕ | ಸಂಭವ ಕಾಯೊ ನಮಿಸುವೆ ನಿನಗೆ ನಾನು ಪ ಅಂದು ಧರಣಿ ಜಲ ವಂದಾಗಿ ಕರಗಿರೇ | ನಂದನ ಚಿಂತಿಸಿ ಬಂದ ವರಹಮೂರ್ತಿ 1 ಮಧು ಪಾನಾವವ ಸಾ | ದದು ಅವನ ಚರ್ಮ | ಹೊದಿಸಿ ಹೆಪ್ಪುಗೊಟ್ಟು ಮೇದಿನೆಂದಿಸಿದೆ 2 ಕನಕಲೋಚನ ಭೂಮಿಯನು ಕದ್ದು ಮೈಯಲು | ಅನಿಮಿಷರೊಲಿಸೆ ಅವನ ಕೊಂದುದ್ಧರಿಸಿದೆ3 ಕರುಣಾಕಟಾಕ್ಷದಿ ಹೊರವಲ್ಲಿ ನಾನೆಲ್ಲಿ | ಸರಿಗಾಣೆ ನಿನಗೆ ಅಂತರ ಬಹಿರದೊಳು 4 ರಜೋಭಿಮಾನಿಯ ವಡಿಯಾ ಸುಜನಪಾಲಾ | ಭುಜಗ ಗಿರಿಯ ವಾಸಾ ವಿಜಯವಿಠ್ಠಲಾಧೀಶಾ 5
--------------
ವಿಜಯದಾಸ
ನಿಖಿಳ ಜನರು ಬಂದು ಮನ್ನಿಸುವರೊ ಮಹರಾಯ ಪ ಎನ್ನ ಪುಣ್ಯಗಳಿಂದ ಈ ಪರಿಯುಂಟೇನೊ ನಿನ್ನದೆ ಸಕಲ ಸಂಪತ್ತು ಅ.ಪ ಒಬ್ಬ ಹೆಂಗಸಿನ ಹೊಟ್ಟೆಗೆ ಹಾಕುವುದಕಿನ್ನು ತಬ್ಬಿಬ್ಬುಗೊಂಡನೊ ಹಿಂದೆ ನಿಬ್ಬರದಿಂದಲಿ ಸರ್ವರ ಕೂಡುಂಬೊ ಹಬ್ಬವನುಣಿಸುವಿ ಹರಿಯೆ 1 ಸಂಜೆತನಕವಿದ್ದು ಸಣ್ಣ ಸೌಟಿನ ತುಂಬ ಗಂಜಿ ಕಾಣದೆ ಬಳಲಿದೆನೋ ವ್ಯಂಜನ ಮೊದಲಾದ ನಾನಾ ರಸಂಗಳು ಭುಂಜಿಸುವುದು ಮತ್ತೇನೊ2 ಜೀರ್ಣ ಮಲಿನ ವಸ್ತ್ರ ಕಾಣದ ನರನಿಗೆ ಊರ್ಣ ವಿಚಿತ್ರ ಸುವಸನ ವರ್ಣವರ್ಣದಿಂದ ಬಾಹೋದದೇನೊ ಸಂ ಪೂರ್ಣಗುಣಾರ್ಣವ ದೇವ 3 ನೀಚೋಚ್ಚ ತಿಳಿಯದೆ ಸರ್ವರ ಚರಣಕ್ಕೆ ಚಾಚಿದೆ ನೊಸಲ ಹಸ್ತಗಳ ಯೋಚಿಸಿ ನೋಡಲು ಸೋಜಿಗವಾಗಿದೆ ವಾಚಕ್ಕೆ ನಿಲುಕದು ಹರಿಯೆ 4 ಮಧ್ಯಾಹ್ನ ಕಾಲಕ್ಕೆ ಅತಿಥಿಗಳಿಗೆ ಅನ್ನ ಮೆದ್ದೆನೆಂದರೆ ಈಯಗಾಣೆ ಸತ್ಪಾತ್ರ ಕೂಡುಂಬೊ ಪದ್ಧತಿ ನೋಡೊ ಪುಣ್ಯಾತ್ಮ 5 ಮನೆ ಮನೆ ತಿರಿದರು ಕಾಸು ಪುಟ್ಟದೆ ಸು ಮ್ಮನೆ ಚಾಲ್ವರಿದು ಬಳಲಿದೆನೊ ಹಣ ಹೊನ್ನು ದ್ರವ್ಯಂಗಳಿದ್ದಲ್ಲಿಗೆ ತನಗೆ ತಾನೆ ಪ್ರಾಪ್ತಿ ನೋಡೊ ಜೀಯಾ 6 ವೈದಿಕ ಪದವಿಯನೀವಗೆ ಲೌಕಿಕ ಐದಿಸುವುದು ಬಹು ಖ್ಯಾತೆ ಮೈದುನಗೊಲಿದ ಶ್ರೀ ವಿಜಯವಿಠ್ಠಲನ ನಿನ್ನ ಪಾದಸಾಕ್ಷಿಯನುಭವವೊ 7
--------------
ವಿಜಯದಾಸ
ನಿಚ್ಚಳಾಗಲಿ ಬೇಕು ತಿಳಿದು ನಿಚ್ಚಳಾಗಲಿ ಬೇಕು ಪ ನಿಚ್ಚಮಾಡುವ ದೋಷರಾಶಿಗಳಳಿದು ನಿಚ್ಚಳಾಗಲಿ ಬೇಕು ಅ.ಪ ಪಾಪವೆಂಬುದು ಹೊರಗಿಹುದೆ ತನ್ನ ಅಪವರ್ಗಕೆ ಮಾರ್ಗವಹುದೆ ಬಲು ತಾಪಸಿಗಾದರು ಅದು ಸಾಧನವಹುದೆ 1 ಪುಣ್ಯವೆಂಬದು ಬೇರೆಯಿಲ್ಲಾ ನಾನಾ ರಣ್ಯ ಚರಿಸಿದರು ದೊರಕುವದಲ್ಲಾ ಮನ್ಯು ಬಿಡದೆ ಮತ್ತೊಂದಲ್ಲಾ ನಿರುತ ಅನ್ಯರಾಶಿ ಬದಲು ಗತಿಗವಸಲ್ಲಾ 2 ವೈಕುಂಠವೆಂಬೋದು ಅಲ್ಲೆ ಬರಿದೆ ಲೌಕೀಕ ತೊರದರೆ ಇಪ್ಪದು ಇಲ್ಲೆ ಈ ಕಲಿಯೊಳಗೆ ಈ ಸೊಲ್ಲೆವೊಲಿಸ ಬೇಕೆನೆ ಮಾರಿ ಓಡುವುದು ನಾ ಬಲ್ಲೆ 3 ಹರಿಸ್ಮರಣೆಗೆ ಪೋಪ ದೋಷ ಬಲು ಪರಿ ಧರ್ಮವ ಮಾಡಲು ಲೇಶ ಸರಿಯಾವು ತರುವಾಯ ಮೋಸದಿಂದ ತಿರುಗಿ ತಿರುಗಿ ಪುಟ್ಟಿ ಬಡವನು ಕ್ಲೇಶಾ4 ಒಬ್ಬರ ಸರಿಗಟ್ಟದಿರೊ ನಿನ ಕರ್ಮ ಸುಖವೆಂದು ಸಾರೊ ಉಬ್ಬಲ ದಾಡಿಪರಾರೊ ಎಲೆ ಲ್ಹಬ್ಬಿದ ವಿಜಯವಿಠ್ಠಲನೆಂದು ಸಾರೋ 5
--------------
ವಿಜಯದಾಸ
ನಿಜ ಭಕ್ತಿ ತೋರಿದನು ಜಗಕೆ ಕೃಷ್ಣ್ಣಾ ವಿಜಯನಾ ಸತಿಯರಿಬ್ಬರ ನೆವದಿ ಮುದದೀ ಪ. ಹಸ್ತಿವರದನು ತಂಗಿಯರ ನೋಡಬೇಕೆಂದು ಹಸ್ತಿನಾಪುರಕೆ ಬಂದ್ಹರುಷದಿಂದ ಚಿತ್ತ ನಿರ್ಮಲದಿ ಪಾಂಡವರು ಪೂಜೆಸೆ ನಲಿದು ಭಕ್ತಿ ಭಾವಕೆ ಮೆಚ್ಚಿ ದ್ರೌಪತಿಗೆ ವಲಿದೂ 1 ಅಣ್ಣನೆಂಬುವ ಭಾವದಲಿ ಸುಭದ್ರೆಯು ಇರಲು ಘನ್ನ ಮಹಿಮನು ಎಂದು ದ್ರೌಪತಿಯು ತಿಳಿದೂ ಸ್ವರ್ಣಗರ್ಭನ ಪಿತನು ಈರೇಳು ಜಗದೊಡೆಯ ಎನ್ನ ಭಾಗದ ದೈವ ಸಲಹೆಂದು ನುತಿಸೇ 2 ಅಂತರಂಗದ ಭಕ್ತಿ ಆನಂದಮಯ ತಿಳಿದು ಕಂತುಪಿತ ಕರಗಿದಾ ಮಮತೆ ಪ್ರೇಮದಲಿ ಶಾಂತಚಿತ್ತಳೆ ತಂಗಿ ದ್ರೌಪತಿಯೆ ಬಾರೆನುತ ಇಂತು ನುಡಿನುಡಿಗೆ ಆಡಲು ಕರುಣೆಯಿಂದ 3 ಕೇಳಿ ಇದನು ಸುಭದ್ರೆ ತಾಳಲಾರದೆ ಅಜ್ಞ ಬಾಲೆ ನಿಜ ತಂಗಿ ನಾನಿರಲು ಐವರಿಗೆ ಲೋಲೆಯಾದವಳೆ ಬಲು ಮೇಲಾದವಳೆ ಎಂದು ಬಾಲಚಂದ್ರನ ಪೋಲ್ವ ಮುಖ ಬಾಡಿಸಿರಿಲೂ 4 ಕಂಡು ಕಮಲಾಕಾಂತ ವಡಹುಟ್ಟಿದಳ ಬೆಂಡಾದ ತೆರವ ಪೇಳೆನಲು ಖತಿಯಿಂದಾ ಪುಂಡರೀಕಾಕ್ಷ ಎನ್ನುಳಿದು ನಿಜ ಭಾವದಲಿ ಕಂಡವರ ಸುತೆ ನಿನಗೆ ಮಿಗಿಲಾದಳೆನಲೂ 5 ಸಚ್ಚಿದಾನಂದ ವಿಗ್ರಹ ನಗುತ ನೆನೆದನೊಂ ದಚ್ಚರಿಯ ಕೌತುಕವ ತೋರ್ವೆನೆಂದೂ ಅಚ್ಛಿದ್ರ ಅಕ್ಲೇಶ ಆನಂದಮಯ ತಾನು ಕ್ಲೇಶ ಪಡುತ ವರಲಿದನೂ 6 ಬಾರಮ್ಮಾ ತಂಗಿ ಸುಭದ್ರೆ ಬೆರಳಲಿ ರಕ್ತ ಸೋರುತಿದೆ ಬೇಗೊಂದು ಚಿಂದಿ ತಾರೆ ತಾರೆನಲು ಗಡಬಡಿಸಿ ಮನೆಯಲ್ಲ ಹುಡುಕತಲಿ ಬಟ್ಟೆ ಕಂಗೆಡುತಾ 7 ಎತ್ತ ನೋಡಿದರತ್ತ ಪಟ್ಟೆ ಪೀತಾಂಬರವು ಕಂಚುಕ ಮಕುಟ ಮೆರೆಯೇ ಚಿತ್ರದಾ ವಸನ ಅರಮನೆಯಲ್ಲಿ ತುಂಬಿರಲು ಮತ್ತದರ ಮಮತೆ ಅಣ್ಣನಿಗೆ ಅಧಿಕವಾಗೆ 8 ಬರಲಿಲ್ಲ ಸುಭದ್ರೆ ಬಾರಮ್ಮ ದೌಪದಿಯೆ ವರ ತಂಗಿ ಬೇಗ ಕೊಡೆ ಹರಕು ಬಟ್ಟೆ ಸುರಿಯುತಿದೆ ರಕ್ತ ಬೆರಳಿಂದ ನೋಡೆಂದನಲು ಕಿರುನಗೆಯ ನಗುತ ಶರಗ್ಹರಿದು ಕಟ್ಟಿದಳೂ 9 ಬಂದಳಾ ವೇಳೆಯಲಿ ಸುಂದರಾಂಗಿ ಸುಭದ್ರೆ ನಿಂದು ನೋಡಿದಳೂ ದ್ರೌಪತಿಯ ಕೃತಿಯಾ ಮಂದಗಮನೆಯು ನಾಚಿ ಮೊಗವ ತಗ್ಗಿಸಿ ನಿಲಲು ಇಂದಿರೇಶನು ಇದರ ವಿವರ ತೋರಿದನು 10 ಬೆರಗಾದ ಪರಿತೋರಿ ಸಿರಿಕೃಷ್ಣ ಕೇಳಿದನು ಜರತಾರಿ ಸೆರಗ್ಹರಿದು ಕಿರುನಗೆಯ ನಕ್ಕಾ ಪರಿ ಏನೆ ಎಲೆ ತಂಗಿ ನರಳುವೋ ಎನ ನೋಡಿ ಪರಿಹಾಸ್ಯವಾಯಿತೆ ನಿನಗೆ ಎಂತೆಂದಾ 11 ಅಣ್ಣಯ್ಯ ನಿನಗೆ ಮಿಗಿಲಾಯಿತೇ ಈ ಶೆರಗು ಎನ್ನ ಅಭಿಮಾನ ಕಾಯುವ ದೈವ ನೀನೂ ಘನ್ನ ಮಹಿಮಾಂಗ ನಿನಗಿನ್ನು ಕ್ಲೇಶಗಳುಂಟೆ ನಿನ್ನ ಲೀಲೆಗೆ ಹರುಷ ಉಕ್ಕಿತೆಂದನಲೂ 12 ಹೇ ನಾರಿ ನಾನನಾಥರಿಗೆ ನಾಥನು ಮುಂದೆ ನೀನಿತ್ತ ವಸನ ಅಕ್ಷಯವಾಗಲೆಂದು ಶ್ರೀನಾಥ ದ್ರೌಪದಿ ಸುಭದ್ರೆಯ ಮನ್ನಿಸಿ ಮೆರೆದಜ್ಞಾನಿ ಜನಪ್ರಿಯನು ಗೋಪಾಲಕೃಷ್ಣವಿಠಲಾ13
--------------
ಅಂಬಾಬಾಯಿ
ನಿಜ ವಸ್ತುನೆ ಮುಂದುಗಾಣಿ ಥಳ ಥಳ ಗುಡುವುತ ಹೊಳೆವುತಲ್ಯದೆ ಬಲಿಯೊ ಸದ್ಗುರು ಸುಪ್ರಾರ್ಥನೆ ಧ್ರುವ ಜನ್ಮದ ಸಂದೇಹಗಳೀತೆ ಒಂದಾದರ ಮಾತಿಗಿಳಿಯಿತೆ ನಿಜಘನ ನೆಲೆಗೊಳ್ಳಿತೆ ಹೊಂದಿತೆ ಅರಿಯದಿಹುದು ಒಳಿತೆ1 ನಿನ್ನೊಳು ನೀ ನಿಜ ತಿಳಿಯದೆ ಖೂನ ಇನ್ನೊಬ್ಬರಿಗ್ಹೇಳುವುದೇನ ಕನ್ನಡಿಯೊಳು ಕಾಂಬುವ ಕಾಂಚನ ಸನ್ನಿದಾಗುವದೆ ಪೂರ್ಣ ಭಿನ್ನಭೇದವು ಹೋಗದೆ ಅನುಮಾನ ಚೆನ್ನಾಗ್ಯಾಗುವದೆ ಜ್ಞಾನ ಧನ್ಯಗೈಸುವ ಸದ್ಗುರು ಕರುಣ ಮನ್ನಿಸಿ ಪಡಕೊ ನಿಧಾನ 2 ಮುಗ್ದದಿ ಗುರುಪಾದ ಈಗ ಏನೆಂದು ತಾ ತಿಳಿಯುವದು ಆಗ ಸ್ವಾನುಭವದ ಸ್ವಸುಖಭೋಗ ಅಣುರೇಣುದೊಳಗ ತಾ ಬ್ಯಾಗ ದೀನ ಮಹಿಪತಿಗದೆ ಒಳಹೊರಗೆ ಫನ ಭಾಸುತಲ್ಯದೆ ಆವಾಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿಂತು ಬೇಡುವೆನ್ವರವ ಪ ನಿಂತು ಬೇಡುವೆ ಎನ್ನಲ್ಲಂತಃಕರಣ ಮಾಡ್ಯ- ಭ್ಯಂತರಿಲ್ಲದೆ ಲಕ್ಷ್ಮೀಕಾಂತ ನೀ ಸಲಹೆಂದು 1 ಶಂಖ ಚಕ್ರವು ಗದಾಪದ್ಮ ಧರಿಸಿದಕ- ಳಂಕ ಮಹಿಮ ನಿನ್ನ ಕಿಂಕರ ನಾನೆಂದು2 ಕಮಲನಾಭನೆ ಕಮಲಾಪತಿ ನಿನ್ನಂಘ್ರಿ ಕಮಲಕ್ಕ ್ವಂದಿಸುವೆನು ಕಮಲಾಕ್ಷದಿ ನೋಡೊ 3 ಆಶೀಲೆ ಬಂದೆನಾದಿಶೈಲವಾಸನೆ ದಾಸರಿಗ್ವೊಲಿವ ಭೀಮೇಶಕೃಷ್ಣನೆ ನಿನ್ನ 4
--------------
ಹರಪನಹಳ್ಳಿಭೀಮವ್ವ
ನಿಂತು ಸ್ತುತಿಸೆ ನೀ ಸಂತಸ ಪಡುತಿ ನಿನ್ನವರ ಕಂಡು ಹರಿ ಕಂತು ಜನರ ನೀನೆ ನಿಂತವರ ಪರಿಪಾಲಿಪೆ ಶ್ರೀ ಶ್ರೀನಿವಾಸಾನಂತ ಮಹಿಮ ನೀನೆಂದು ಸಂತಸದಿ ನೆನೆವ ಭಕ್ತರಿಗೆ ನೀ ಕಲ್ಪತರು ಕಾಮಧೇನು ವೆಂಕಟೇಶಾ ಶ್ರೀಶಾ
--------------
ಸರಸ್ವತಿ ಬಾಯಿ
ನಿತ್ಯ ತೃಪ್ತಾ ಅನ್ಯರಿಂದಲಿ ಎನಗೆ ಏನು ಪ್ರಯೋಜನವೊ ಪ ದರುಶನಕೆ ಬಂದವ ನಾನಲ್ಲವೆಂದು ನಾನಂದು ಹರಿ ನಿನಗೆ ನುಡಿದದ್ದು ಮನಸ್ಸಿನೊಳಗೆ ಇರುತಿಪ್ಪದೇನಯ್ಯಾ ಬಿನ್ನಪವೆ ಲಾಲಿಸು ಶರಣ ಜನರ ಅಭಿಪ್ರಾಯವೊಂದು ಬಗೆ ಇಪ್ಪದೊ1 ನಿರುತ ವ್ಯಾಪ್ತತ್ವ ಕರುಣತ್ವ ಅಣುಮಹತ್ತು ಸರುವ ಚೇತನ ಜಡ ಮತ್ತೆ ಮತ್ತೆ ಪರಿ ಪರಿಯಿಂದಲಿ ನಿನ್ನಲಿ ಉಂಟು ನಿನ್ನ ವರ ಮೂರ್ತಿಗಳ ಪೇಳದೆ ಇದಷ್ಟು ವಿನಯದಲಿ 2 ಧ್ಯಾನಕ್ಕೆ ನೀನು ಪ್ರಧಾನನೆಂದು ನುಡಿದೆ ಅಪ್ರಮೇಯ ಕ್ಷೋಣಿಜನಕಿಂತ ದ್ವಾರದವರು ವೆಗ್ಗಳವಾಗೆ ಏನೆಂಬೆ ತಿರುವೇಂಗಳೇಶ ನಿನ್ನಾಟಕ್ಕೆ 3 ಮಿಕ್ಕ ಮಂದಜನಕೆ ನಿನ್ನ ಭಕುತರ ಮೇಲೆ ಭಕುತಿ ಪುಟ್ಟುವುದಕ್ಕೆ ನಾ ಪೇಳಿದದ್ದು ಅಕಟಕಟ ನಿನ್ನ ದೊರೆತನಕೆ ಏನೆಂಬೆ ತಕ್ಕ ಮಾತುಗಳೇನೊ ಆಲೋಚಿಸಿ ನೋಡೆ 4 ಹೊನ್ನು ಹಣ ತೂಗಬೇಕಾದರೆ ಮೊದಲಿಗೆ ಚಿನ್ನ ಹಾಕುವರೇನೊ ಚಿನ್ಮಯರೂಪ ಮುನ್ನೆ ನಿನ್ನವರ ದರುಶನವಾದ ಮೇಲೆ ಪಾ ವನ್ನ ಶಾರೀರನೆ ನಿನ್ನ ಕಾಂಬುವದುಚಿತ 5 ಜರೆಮರಣರಹಿತ ಸುಜನರ ಪರಿಪಾಲಾ ನಿ ನಿತ್ಯ ವಜ್ರಪಂಜರಾ ಜರಗೆ ವರವಿತ್ತ ದನುಜರ ವಂಶನಾಶಾ ನಿ ರ್ಜರ ನದಿ ಜನಕಾಂಬುಜ ರವಿ ನಯನ ದೇವಾ 6 ಸ್ಥೂಲಮತಿಯಿಂದ ಪೇಳಿದೆನೆಂದು ಚನ್ನಾಗಿ ಲಾಲಿಸು ಲಲಿತಾಂಗಿ ಲಕುಮಿ ರಮಣಾ ನೀಲಗಿರಿ ನಿವಾಸ ವಿಜಯವಿಠ್ಠಲ ವೆಂಕಟವಾಲಗವ ಕೈಗೊಳ್ಳು ಎನ್ನ ಯೋಗ್ಗಿತವರಿತು7
--------------
ವಿಜಯದಾಸ