ಒಟ್ಟು 8857 ಕಡೆಗಳಲ್ಲಿ , 132 ದಾಸರು , 5049 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೂಸಿನಲ್ಲಿ ಬಾಲಕೃಷ್ಣ ಕೇಶವಾರ್ಯ ಪುತ್ರನಲ್ಲಿವಾಸಮಾಡಿ ಸತತ ಮನವ ಪೋಷಿಸೂವನು 1 ತರುಣಿಯಲ್ಲಿ ಮಾಧವವಿರುವ ಶರಣರೊಳಗೆ ವಸುದೇವನರಿತು ತೋಷಿಸುವುದು ಸತತ ಹರುಷದಿಂದಲೀ 2 ವಾಸುದೇವ ಖಗವರೇಣ್ಯನು 3 ದಿವಿಜ ನಾರಾಯಣನು ವಸ್ತಿ ಮಾಡಿಹನು4 ಸುರಭಿಯಲ್ಲಿ ವಿಷ್ಣುರೂಪಿ ತುರಗದಲ್ಲಿ ವಾಮನಾತ್ಮಇರುವ ಸಂಕರ್ಷಣಾಖ್ಯ ಚರಮ ಜಾತಿಯಲೀ 5 ನಿತ್ಯ ವೈಶ್ಯ ಪ್ರದ್ಯುಮ್ನಭೃತ್ಯರಲ್ಲಿ ಮಹಿದ್ರಾಸ ಕೃತ್ಯ ನಡೆಸುವಾ 6 ಮಹಿಷಿಯಲ್ಲಿ ಉಪೇಂದ್ರ ಗಜದಲ್ಲಿ ಚಕ್ರಪಾಣಿಬೆಕ್ಕಿನಲ್ಲಿ ವಿಶ್ವರೂಪ ಸತತ ತಿಳಿವುದೂ 7 ಶುನಕ ಭೂತ ಭಾವನಸರ್ವರೊಳಗೆ ಅನಂತರೂಪ ಹರಿ ನಿವಾಸಿಪ 8 ನಿತ್ಯದಲ್ಲಿ ಹರಿಯು ಹೀಗೆ ಚಿತ್ತವಿಟ್ಟು ಲಕ್ಷಣೀಯುವರ್ತಿಸುತಲಿ ಯದುವರೇಣ್ಯನ ಪತ್ನಿಯಾದಳು 9 ಪರಮಪುರುಷನಮಲ ರೂಪ ಸ್ಮರಿಸುತಲೆ ಪೋಷ್ಯರಲ್ಲಿತೊರೆದು ಕರ್ಮಲೇಪ ಶಿರಿಯ ಹೋದುವಾ 10 ನಂದಸುತನ ತಿಳಿದು ಪೋಷ್ಯ ವೃಂದದಲ್ಲಿ ಭೋಗ ನೀಡಿಇಂದಿರೇಶ ನಮಗೆ ಮೋಕ್ಷಾನಂದ ಕೊಡುವನು 11
--------------
ಇಂದಿರೇಶರು
ಕೂಸು ಕಂಡಿರ್ಯಾ ಧ್ರುವ ವೇದವ ತಂದು ಉಳುಹಿತೀ ಕೂಸು ಮೇದಿನಿ ಭಾರವ ತಾಳಿತೀ ಕೂಸು ಸಾಧಿಸಿ ಧಾರುಣಿ ಗೆದ್ದಿತೀ ಕೂಸು ಉದಿಸಿ ಸ್ತಂಭದೊಳು ಮೂಡಿತೀ ಕೂಸು 1 ಭೂಮಿಯು ಮೂರಡಿ ಮಾಡಿತೀ ಕೂಸು ನೇಮದಿ ಪರಶುವ ಹಿಡಿಯಿತೀಕೂಸು ಸಮುದ್ರ ಸೇತುವೆ ಕಟ್ಟಿತೀ ಕೂಸು ಕಾಮ ಪೂರಿಸಿತೀ ಕೂಸು 2 ಬೆತ್ತಲೆ ತ್ರಿಪುರದಲಿ ಸುಳಿಯಿತೀಕೂಸು ವಸ್ತಿ ಕುದುರೆ ನಾಳಿತೀ ಕೂಸು ಸತ್ಯಸನಾತನಾಗಿಹ್ಯ ಕೂಸು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೃತಿ 5 ಇಂದು ಎನಗೆ ಗೋವಿಂದ ನಿನ್ನ ಪಾದಾರ ವಿಂದವ ತೋರೊ ಮುಕುಂದ ಪ ಸುಂದರ ವದನನೆ ನಂದಗೋಪನ ಕಂದ ಮಂದರೋದ್ಧರ ಆನಂದ ಇಂದಿರಾ ರಮಣ ಅ.ಪ ನೊಂದೆನಯ್ಯ ಭವಬಂಧನದೊಳು ಸಿಲುಕಿ ಮುಂದೆ ದಾರಿ ಕಾಣದೆ ಕುಂದಿದೆ ಜಗದೊಳು ಕಂದನು ಎಂದೆನ್ನ ಕುಂದುಗಳೆಣಿಸದೆ ಕಂದರ್ಪ ಜನಕನೆ 1 ಮೂಢತನದಿ ಬಹು ಹೇಡಿ ಜೀವ ನಾನಾಗಿ ದೃಢಭಕುತಿಯನು ಮಾಡಲಿಲ್ಲವೊ ಹರಿಯೆ ನೋಡಲಿಲ್ಲವೊ ನಿನ್ನ ಪಾಡಲಿಲ್ಲವೊ ಮಹಿಮೆ ಗಾಡಿಕಾರ ಕೃಷ್ಣ ಬೇಡಿಕೊಂಬೆನೊ ನಿನ್ನ 2 ಧಾರುಣಿಯೊಳು ಭೂಭಾರ ಜೀವ ನಾನಾಗಿ ದಾರಿತಪ್ಪಿ ನಡೆದೆ ಸೇರಿದೆ ಕುಜನರ ಆರೂ ಕಾಯುವರಿಲ್ಲ ಸೇರಿದೆ ನಿನಗಯ್ಯ ಧೀರ ವೇಣುಗೋಪಾಲ ಪಾರಗಾಣಿಸೊ ಹರಿಯೆ 3
--------------
ವಿಜಯೀಂದ್ರತೀರ್ಥರು
ಕೃತ್ತಿವಾಸ ಪೂಜ್ಯ ಚರಣೇ | ಮಹತತ್ವಮಾನಿ ಸತಿಯೆ ಸುಗುಣೆ ||ಅ|| ನಿತ್ಯ ನೀಡೆ ಹರಿಯ ಸ್ಮರಣೆ ಅ.ಪ. ವಿಧ್ಯುದ್ವಾಕ್ ದಿಙËಮಾನಿಯೆ | ಹೇದ್ಯುಪೃಥಿವಿ ಭಾರತೀಯೇಪ್ರದ್ಯುಮ್ನ ಕೃತಿಗೆ ಕುಮಾರಿಯೆ | ಬುಧ್ಯಾಭಿಮಾನಿಯೇ ಕಾಯೆವಿದ್ಯುತಿಸ್ಥಿತಿ | ಬುಧ್ಯಾಬ್ದಿಯೆ | ವಿಧ್ಯೇತರ | ಅವಿಧ್ಯೆಯ ಕಳೆಸದ್ಯೋಜನ | ಶ್ರದ್ದಾಂಬಾ | ಮದ್ದೇಹದಿ | ಸಿದ್ಧಿಸು ಹರಿ 1 ಮಂದ ಪತಿ | ಸುಂದರ ಪದ | ಸಂಧಿಸು ಮನ | ಮಂದಿರದಲಿ 2 ಭಿಕ್ಷೆ ನೀಡೆ ತಾಯೇ | ಯುಕುತಿ ಶಾಸ್ತ್ರ ಒಂದನರಿಯೇಸೌಖ್ಯ ತೀರ್ಥ ಮತವನ್ವೊರೆಯೇ ಮುಕುತಿ ಮಾರ್ಗ ತೋರಿ ಪೊರೆಯೇ ||ತೋಕನು ಎನೆ | ಸ್ವೀಕರಿಸುತ | ಲೋಕರುಗಳ | ವಾಕನು ದೂ-ರೀಕರಿಸು ಪ | ರಾಕೆನ್ನುವೆ | ಭೀಕರಭವ | ನೀ ಕರಗಿಸು 3 ಕಡಗ ಕಂಕಣ ದ್ವಾರ ಧಾರೆ | ಜಡಿತ ದುಂಗುರ ದೋಷ ದೂರೆಮುಡಿದ ಮಲ್ಲಿಗೆ ಕುಂಚುಕಧಾರೆ | ಉಡುಗೆ ಬಿಳುಪಿನಂಬರೆ ನೀರೇ || ಒಡ ನಡುವು | ನಿಡಿತೋಳೂ | ತೊಡೆಕದಳೀ | ಬಡುವು ಪರೀ |ಅಡಿಗೆರಗುವೆ | ಪೊಡ ವೀಶನ | ಧೃಡ ಭಕುತಿ | ತಡೆಯದೆ ಕೊಡು4 ಶರಣು ಮುಂದಣ ವಾಣಿ ಕರುಣ | ಗುರು ಗೋವಿಂದ ವಿಠಲ ಚರಣಾ |ಭರಣವೆನಿಪ ಸುಗುಣ ಗಣಾ | ಒರೆದು ಕಳೆಯೆ ಭವದ ಬಂಧನ |ಮಾರಯ್ಯನ | ಆರಾಧನೆ | ಚಾರೀಸದೆ | ಧಾರಾಣಿಗೆಭಾರಾದೆನು | ಕಾರುಣ್ಯವ | ತೋರೂವುದು ಭಾರತಿಯೇ 5
--------------
ಗುರುಗೋವಿಂದವಿಠಲರು
ಕೃತ್ತಿವಾಸನ ಪ್ರಿಯ ಪುತ್ರನೆ ಗುಹ ಸ- ರ್ವೋತ್ತಮ ಚಿದ್ರೂಪ ಪ ಚಿತ್ತಜ ಪ್ರತಿರೂಪಾ ಪ್ರತಾಪಾಅ.ಪ ದೀನತನದಿ ಕಡುಬೇನೆಯ ಪಡುತಲಿಹೀನಮನುಜನೆನ್ನಾ | ದಾನಿಯಾಗಿಹ ಕರುಣಾನಿಧಿ ಕೈಪಿಡಿ ಧ್ಯಾನಿಪೆ ನಾ ನಿನ್ನ ಪ್ರಸನ್ನ 1 ಸುತ್ತಮುತ್ತಿರುವ ವಿಪತ್ತುಗಳಾ ಭಯ ಮೆತ್ತಿಕೊಂಡಿದೆ ತಾನೇ ಸತ್ವಶಾಲಿಯೇ ನೀ ಕಿತ್ತೊಗೆಯದಿರೆ ಅ- ನ್ಯತ್ರ ಗತಿಯ ಕಾಣೆ ನಿನ್ನಾಣೆ 2 ಪಾಶ ಅಂಕುಶಧರ | ನಾ ಸಹೋದರ ಪಾವಂ- ಜೇಶ ಮಹಾನುಭಾವ | ದಾಸರಿಗೊದಗುವ ತ್ರಾಸವ ಕಳೆ ಸ- ರ್ವೇಶನೆ ಮಹದೇವಾ | ದೇವರ ದೇವಾ 3
--------------
ಬೆಳ್ಳೆ ದಾಸಪ್ಪಯ್ಯ
ಕೃತ್ಯವನು ತಿಳಿಸಯ್ಯ ಕೃತ್ತಿವಾಸನ ಪ್ರೀಯಾ ಪ ಭೃತ್ಯವತ್ಸಲ ಭಾಗ್ಯ ಸಂಪನ್ನ ಮೋಹನ್ನಾ ಅ.ಪ ಹಾಸರಲಿ ನಿಂತು ಕ್ಲೇಶಪಡಿಸುವ ವಾಕ್ಯ ಅಕ್ಲೇಶಪಡಿಸುವಾ 1 ಭಾವದಿಂದೊಮ್ಮೆ ಭಯನಿತ್ತಭಯ ಪಾಲಿಪ ಭಕ್ತ ಬಂಧೊ 2 ಕಾಲಕಾಲಕೆ ಕಾಲೋಚಿತದ ಮರ್ಮ ಸೂಚಿಸೆನಗೆ 3 ವಚನ ಸತ್ಯವ ಮಾಡು ವಾಚನಸ್ವತಿಯ ಸಖಚಾಚುವ್ಯನೋಕರ 4 ವಾಚಾಮಗೋಚರ ತಂದೆವರದಗೋಪಾಲವಿಠಲನ ಚರಣ ಭಜಕ ಸುಖೇಚರೇಂದ್ರಾಧಿಪ 5
--------------
ತಂದೆವರದಗೋಪಾಲವಿಠಲರು
ಕೃಪಣ ಶಿಷ್ಯನಿಗೇಅಪವರ್ಗಪ್ರದ ಹರಿಯೆ | ಅಪವಾದ ಕಳೆಯೋ ಅ.ಪ. ದಾಸನಾದವನು ನಿ | ರ್ದೋಷಿ ಎನುವುದು ನಿಜದಾಸನೆನೆ ಹನುಮಂಗೆ | ಲೇಸು ಸಲ್ಲುವುದೋ |ದಾಸರನುಯಾಯಿ ನರ | ದೂಷಣೆಗೆ ಒಳಗಾಗಿಕ್ಲೇಶ ಪಡುವುದು ಉಚಿತೆ | ಶ್ರೀಶ ಸರ್ವೇಶಾ 1 ಫಲವು ತುಸು ಕೆಟ್ಟಿರಲು | ಆ ಉಪಭಾಗವ ಬಿಸುಟುಮೆಲುವುದಿಲ್ಲವೆ ಫಲವ | ಹಲವು ಜನರೂಕಲಿಮಲಘ್ನನೆ ಹರಿಯೆ | ಕಲುಮಷವನೆ ಕಳೆಯುತ್ತಕಲುಷ ದೂರನ ಗೈಯ್ಯೋ | ಬಲು ದಯಾ ಪೂರ್ಣಾ 2 ಶಿರಿಮಾಧವಾ ಭಿನ್ನ | ಗುರು ಗೋವಿಂದ ವಿಠಲಕರುಣಾಪಯೋನಿಧಿಯೆ | ಸರ್ವಾಂತರಾತ್ಮತರಳಗೊದಗಿಹ ವಿಪದ | ಪರಿಹರವ ಗೈಯ್ಯುತ್ತಕರುಣಿಸೆನೆ ಮನಶಾಂತಿ | ಹರಿಯೆ ಭಿನ್ನವಿಪೇ 3
--------------
ಗುರುಗೋವಿಂದವಿಠಲರು
ಕೃಪೆ ಮಾಡೋ ಕೃಷ್ಣ ಕೃಪೆಮಾಡೋ ತಪ್ಪದೆ ಪ್ರಾತಃ ಸಂಜೆ ನಿನ್ನ ಸ್ತುತಿ ಮಾಡುವಂತೆ ಪ ಚಂದ್ರಹಾಸನಂತೆ ವ್ರತ ಮಾಡಲರಿಯೆ ಅಂದಿನ ಧ್ರುವನಂತೆ ತಪಗೈಯಲಾರೆ ಕಂದ ಪ್ರಹ್ಲಾದನಂತೆ ಬಿಡದೆ ನುತಿಸಲಾರೆ ಸಂದ ನಚಿಕೇತನಂತೆ ಮೃತ್ಯುಗೆಲ್ಲಲರಿಯೆ 1 ಕರಿರಾಜನಂತೆ ಕೂಗಲರಿಯೆನೋ ಗರುಡನಂತೆ ಸದಾ ಹೊತ್ತು ತಿರುಗಲಾರೆ ಮರುತಜನಂತೆ ಭಂಟನಾಗಲರಿಯೆ ಉರಗರಾಜನಂತೆ ಶಯನಕಾಗಲಾರೆ 2 ದ್ರೌಪದಿಯಂತೆ ಅತ್ತು ಮೊರೆಯಿಡಲಾರೆ ರೂಪೆ ಭಾಮೆಯಂತೆ ಬಲು ಮೋಹಿಸಲಾರೆ ಆಪಾಟಿ ಸಖನಾಗರಿಯೆನು ಮಕರಂದನೊಲು ವಿಪ್ರನಾರಾಯಣನಂತೆ ಭಕ್ತಿಯರಿಯೆನೊ ಹರಿಯೆ 3 ಜಾಜಿಪುರೀಶ ನಿನ್ನ ಚರಣ ಸೇವೆಯ ಕೊಡೊ ಸಾಜದಿ ಮಾಡುವೆ ತಿಳಿದಂತೆ ಪಾಮರನು 4
--------------
ನಾರಾಯಣಶರ್ಮರು
ಕೃಪೆಯ ತೋರಬಾರದೇನೋ | ಗೋಪಾಲರಾಯ ಪ ತಾಪತ್ರಯ ಬಲು ದೀಪನವಾಗಿದೆನೀ ಪರಿಹರಿಸದೆ ಮತ್ತೋರ್ವರನರಿಯೆ ಅ.ಪ. ಸೂನು ಶ್ರೀನಿವಾಸಾ |ಸಾರುತ ತವಪದ ಸೇವಿಸಿ ಭಕುತಿಲಿ |ದೂರೋಡಿಸಿದನು ಜವನವರಾ 1 ಗಿರಿಜಾತೆಯ ಪ್ರಿಯ ಕುವರಾ | ನೃಪವರದಶರಥ ಸುತ ಭರತಗೆ ಅವರಾ |ಮಾರುತಿ ಮತವನು ಅರುಹುತ ನೀ ಸಂಸಾರಕೆ | ತಾರಕ ನೆನಿಸಿದ ಧೀರಾ 2 ಭೋಗಿ ಶೀಲಾ | ನೀನಘದೂರ ಕಳೆಯೊ ಮೋಹಜಾಲಾ |ಭೋಗಿಶಯನ ಗುರು ಗೋವಿಂದ ವಿಠಲನಬಾಗಿ ಭಜಿಸುವಂಥ ಭಾಗ್ಯವ ನೀಯೋ 3
--------------
ಗುರುಗೋವಿಂದವಿಠಲರು
ಕೃಪೆಯಿಟ್ಟು ಸಲಹೆನ್ನ ಹರಿಯೆ ನರಹರಿಯೆ ದ್ವಿಪÀವರವರದನೇ ಬಾರಯ್ಯ ದೊರೆಯೆ ಪ ದುರಿತಹರÀ ವರ ಚರಣಕಮಲನೆ ಧರಣಿಧರವನು ಕರಸರೋಜದಿ ಧರಿಸಿ ಸುಜನರ ಪೊರೆದ ಮುರಳೀ- ಧರನೇ ಮೋದವಪಡಿಸಿದಂತೆ ಅ.ಪ ನಂದನಂದನ ನಿನ್ನ ಚರಣ ಒಂದೇ ಶರಣ ಎನಗೆಂದು ನಂಬಿರುವುದೇ ಒಳ್ಳೇ ಆಭರಣ ಇಂದಿರೇಶನೆ ಮಾಡೋ ಕರುಣ ಸಿಂಧುಶಯನ ಸುಂದರೀಮಣಿ ಸಹಿತದಲಿ ನೀ ಬಂದು ಎನ್ನಯ ಮಂದಿರದಲಿ ನಿಂದು ಎನ್ನವನೆಂದು ಭಾವಿಸಿ ನಂದಪಡಿಸೈ ನಂದಬಾಲನೆ 1 ದೀನಪಾಲನೆ ಭೂಮಿಭಾರ ಹಾನಿಕಾರ ಪಂಚ ಸೂನಶರನಪಿತ ವಿಗತವಿಕಾರ ಶ್ರೀನಾಥ ಸುಜನಮಂದಾರ ಮೀನಾಕಾರ ನಾನು ನಿನ್ನವನಯ್ಯ ಎನ್ನಯ ಮಾನ ಮತ್ತಪಮಾನ ನಿನ್ನದು ಹೀನಮತಿ ಇವನೆಂದು ತಿಳಿದುದಾ- ಸೀನಮಾಡದೆ ಸಾನುರಾಗದಿ 2 ಸೋಮ ಕುಲಾಂಬುಧಿಸೋಮರಾರಾಮ ಬಲರಾಮ ಸಹಜನೇ ಸುರರಿಪು ಭೀಮ ವಾಮಲೋಚನೇರಿಗೆ ಕಾಮ ಪ್ರೇಮಧಾಮ ಕಾಮಜನಕನೆ ಸಾಮಗಪ್ರಿಯ ನಾಮಗಿರಿ ಶ್ರೀ ರಾಮ ನರಹರೆ ಕಾಮಿತಾರ್ಥವನೀವ ಸುರತರುಕಾಮಧೇನು ಚಿಂತಾಮಣಿಯೆ ನೀ 3
--------------
ವಿದ್ಯಾರತ್ನಾಕರತೀರ್ಥರು
ಕೃಪೆಯಿರಲಿ ಸ್ವಾಮಿ ಕೃಪೆಯಿರಲಿ ಅಪರಿಗಣ್ಯ ಸುಗುಣಾಂಬುಧಿ ಹರಿ ನಿನ್ನ ಪ. ಬೇರಿಗೆ ದಿವ್ಯ ಕಾವೇರಿ ನದಿಯ ಜಲ ಧಾರೆಯಿರಲು ಕೊಂಬೆಗಳುಬ್ಬಿ ಸಾರಭರಿತ ಫಲದೋರುವ ತರುವಂತೆ ಧಾರುಣಿಪರು ಕೈ ಸೇರುವರು 1 ಶತ್ರುಗಳಂಜಿ ಬಗ್ಗುವರು ಕಾಳ ಕೂಟ ಪಥ್ಯವಾಗುವುದು ನಿನ್ನಣುಗರಿಗೆ ನಿತ್ಯ ಮಾಡುವಾ ದುಷ್ಕøತವೆಲ್ಲವು ಪರ- ಮೋತ್ತಮ ಧರ್ಮಕರ್ಮಗಳಾಹಲೂ 2 ಕನಸು ಮನಸಿನಲ್ಲಿ ನೆನೆಸುವ ಕಾರ್ಯಗ- ಳನುಕೂಲವಾಗುವದನುದಿನವು ಮನಸಿಜನಯ್ಯ ನೀನನುವಾಗಿರೆ ಸರ್ವ ಜನರೆಲ್ಲರು ಬಹು ಮನ್ನಿಸುವರು 3 ಋಗ್ಯಜುಸ್ಸಾಮಾಥರ್ವಣಗಳೆಂಬ ವೇದ ಸ- ಮಗ್ರ ನೀ ಕರುಣಿಸಿ ಒಲಿದಿರಲು ಸುಜ್ಞಾನ ಭಕ್ತಿ ವೈರಾಗ್ಯ ಸಹಿತವಾಗಿ ಭಾಗ್ಯದೇವತೆ ಕೈ ಸೇರುವಳು 4 ಈ ಕಾರಣದಿಂದನೇಕರ ಬಯಸದೆ ಶ್ರೀಕರ ನೀ ಕರುಣಿಸಿದರಿಂದು ಸಾಕೆಂದೊದರುವೆನೇಕಮನದಲಿ ದ- ಯಾಕರ ವೆಂಕಟರಮಣನಿಂದು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕೃಪೆಯಿಲ್ಲವೇನೊ ನಿನಗೆನ್ನ ಮ್ಯಾಲೇ ಪ ಭಾರ ಇನ್ಯಾರಿಗಿಹುದಯ್ಯ | ಮನ್ನಿಸೆಲೊ ದೇವಾ ಅ.ಪ ಭವ ಕೊಂಡು ಹುಟ್ಟಿಸುವ ಭ್ರಮೆಯಿಂದೆರಿ ನಿವಾರಿಸದೆ 1 ಆಧಾರವಾಗದೆ ನಿರಾಧಾರನಾಗುವರೆ 2 ಪರ ಬಿಟ್ಟು ಮೈ ದೋರೊ ದಯವಿಟ್ಟು ಸದಾನಂದ 3
--------------
ಸದಾನಂದರು
ಕೃಷ್ಣ ಕದ್ದು ಬಂದೆನಯ್ಯ ರಂಗ ಮದ್ದು ಕಾಣೆನಯ್ಯ ಕಣ್ಣು ಕೊಟ್ಟು ಇಟ್ಟೆ ಇಲ್ಲಿ ನಿನ್ನ ನೋಡಲೆಂದು ಪ ನಾನು ನನ್ನದೆಂದು ಭ್ರಾಂತಿ ತಂದುಕೊಂಡೆನಯ್ಯ ನಿನ್ನದೆನ್ನದೆಂದೆ ನಾನು ನನ್ನ ಬಿಟ್ಟು ನೀನು ನಿಂತೆ ಅ.ಪ ಎಲ್ಲಿ ಇಲ್ಲ ನೀನು ದೇವ ಕುಂದು ಕೊರತೆಯುಂಟೆ ನಿನಗೆ ಖುಲ್ಲಮೋಹವೆಂಬ ಮೋಡ ನಿನ್ನ ಬೆಳಕು ಮುಚ್ಚಿತಯ್ಯ ಕಾಲಕಳೆದು ಕಲಿತೆ ನಿನ್ನ ಕಾಲುಬಿಟ್ಟರಿಲ್ಲ ಕೂಲ ಸೇರಿಸಯ್ಯ ಬೇರೆ ದಾರಿಯಿಲ್ಲವಯ್ಯ 1 ಅರಿತು ಪೇಳ್ವೆನಯ್ಯ ಕೃಷ್ಣ ನೀನು ಹೇಳಿ ಕೊಟ್ಟೆ ಆಗ ಬರಿದೆ ಕೆಟ್ಟು ಹೋದೆ ದೇವ ಒಳಿತು ಮಾಡವಯ್ಯ ಈಗ ಮರೆತು ನಿಲ್ಲಲಾರೆ ನಿನ್ನ ಕಲೆತುಬಂದು ನಿಲ್ಲೊ ನೀನು [ವರ]ಶೆಲ್ವ ಭಾಗ್ಯವಯ್ಯ ನೀನು ಭೋಗಮೋಕ್ಷವಯ್ಯ ದೇವ2
--------------
ಸಂಪತ್ತಯ್ಯಂಗಾರ್
ಕೃಷ್ಣ ಕೃಷ್ಣ ಕೃಷ್ಣಯೆಂದು ಮೂರುಬಾರಿ ನೆನೆಯಿರೊ ಪ ಭಾರ ಹೊರುವನೋಅ.ಪ ಸಕಲ ವೇದ ಶಾಸ್ತ್ರ ಪಠಿಸಿ ಸಾರವನ್ನು ತಿಳಿದರೇನುಮಕರ ಕುಂಡಲಧರನ ನಾಮಕೆ ಸರಿಯಿಲ್ಲವೊ 1 ಕಮಲನಾಭನ ಚಿನ್ಹೆಯನ್ನು ಧರಿಸಿಕೊಂಡು ಮೆರೆಯಿರೊಯಮನ ಭಟರು ನೋಡಿ ಅಂಜಿ ಅಡವಿ ಹೊಗುವರೋ2 ಜನ್ಮವೆತ್ತಿ ಮಧ್ವಮತವ ಅನುಸರಿಸಿ ನಡೆಯಿರೊಸುಮ್ಮಾನದಿ ಸಿರಿಕೃಷ್ಣ ತನ್ನ ಲೋಕ ಕೊಡುವನೋ3
--------------
ವ್ಯಾಸರಾಯರು
ಕೃಷ್ಣ ಪಾಲಿಸು ಪರಮ ಕೃಪಾಲಯ ಪ. ಪಾಲಿಸು ನಿನ್ನಯ ಬಾಲನು ಬೇಡುವ ಬಯಕೆಯ ಲಕ್ಷ್ಮೀ- ಲೊಲ ನೀ ಕರದು ತಾರಾಕೆಯ ಅ.ಪ. ತುರುವು ಮೊಲೆಯನುಂಬ ಕರುವಿನ ಬೆನ್ನನು ತುರಿಸುತ ತಿರುಗುವ ತೆರದಲಿ ನೀ- ನಿರುವಿಯೆಂದರಿದೆನು ಮನದಲಿ ಚರಣ ಪಂಕಜಗಳ ಶರಣ ಹೊಕ್ಕೆನ್ನನು- ದ್ಧರಿಸು ಶ್ರೀಕಾಂತ ಗುಣದಲಿ ಸ್ವೀ- ಕರಿಸುತ ನನ್ನ ನಿನ್ನ ಕೆಲದಲ್ಲಿ 1 ಖಗರಾಜ ಭೂಧರವರ ನಾಗಭೂಷಣ ಶಕ್ರ ಪೂಜಿತ ನಿನ್ನಾ- ವಾಗ ಕಾಂಬೆನು ಗೃಹರಾಜಿತ ಮೂಗಭಾವದ ತಪ್ಪ ಮನಕೆ ತರುವರೆ ಮ- ಹಾ ಗಣಪತಿ ಶಬ್ದ ವಾಚ್ಯನೆ ಎನ್ನ ಬೇಗ ಕರೆಸು ಸರ್ವಾಧ್ಯಕ್ಷನೆ 2 ಎಲ್ಲವು ನಿನಗೊಪ್ಪಿಸುವೆ ಎಂಬುದ ನೀ ಬಲ್ಲಿ ಶ್ರೀಭೂರಮೆನಲ್ಲನೆ ಎನ- ಗಿಲ್ಲ ಭಾರವು ಜಗಮಲ್ಲನೆ ತಲ್ಲಣ ಬಿಡಿಸಿ ಪಾಲಿಸು ಶಿರದಲಿ ಪದ ಪಲ್ಲವನನು ವೆಂಕಟೇಶನೆ ಸರಿ- ಯಲ್ಲ ನಿನಗೆ ಶ್ರೀನಿವಾಸನೆ3
--------------
ತುಪಾಕಿ ವೆಂಕಟರಮಣಾಚಾರ್ಯ